Toxic Song: ‘ಮನಮೋಹಕ’ ಹಾಡಿನ ಮಾದಕತೆ ಏರಿಸಿದ ತಾರಾ ಸುತಾರಿಯಾ

Source link

‘ಟಾಕ್ಸಿಕ್’: ‘ಮನಮೋಹಕ’ ಹಾಡಿನಲ್ಲಿ ‘ಕಿರಾತಕ’ನ ಹುಡುಕಿದ ಅಭಿಮಾನಿಗಳು – Kannada News | Toxic movie Manamohaka song released: Fans remembered Kirathaka movie

ಯಶ್ (Yash) ನಟನೆಯ ‘ಟಾಕ್ಸಿಕ್’ ಸಿನಿಮಾದ ಮತ್ತೊಂದು ಹಾಡು ಇಂದು (ಜುಲೈ 21) ಬಿಡುಗಡೆ ಆಗಿದೆ. ಕೆಲ ದಿನಗಳ ಹಿಂದಷ್ಟೆ ‘ತಬಾಹಿ’ ಹಾಡು ಬಿಡುಗಡೆ ಆಗಿ ಸಖತ್ ಹವಾ ಸೃಷ್ಟಿಸಿತ್ತು. ಯಶ್ ಹಾಗೂ ಕಿಯಾರಾ ಅವರುಗಳ ಕೆಮಿಸ್ಟ್ರಿಗೆ ಪ್ರೇಕ್ಷಕರು ಫಿದಾ ಆಗಿದ್ದರು. ಇದೀಗ ‘ಟಾಕ್ಸಿಕ್’ ಸಿನಿಮಾದ ‘ಮನಮೋಹಕ’ ಎಂಬ ಹಾಡು ಬಿಡುಗಡೆ ಆಗಿದೆ. ಹಾಡಿನಲ್ಲಿ ಈ ಬಾರಿ ಯಶ್, ತಾರಾ ಸುತಾರಿಯಾ ಜೊತೆಗೆ ರೊಮ್ಯಾನ್ಸ್ ಮಾಡಿದ್ದಾರೆ. ಆದರೆ ಹಾಡು ನೋಡಿದ ಕೆಲವರು ‘ಕಿರಾತಕ’ ಸಿನಿಮಾ ಅನ್ನು ನೆನಪು ಮಾಡಿಕೊಂಡಿದ್ದಾರೆ.

‘ಟಾಕ್ಸಿಕ್’ ಸಿನಿಮಾದ ಹಾಡಿಗೆ ಹಲವಾರು ರೀತಿಯ ಕಮೆಂಟುಗಳು ಬಂದಿವೆ. ಹಾಡು ವೀಕ್ಷಿಸಿದ ಬಹುತೇಕರು ಹಾಡನ್ನು ಇಷ್ಟಪಟ್ಟಿದ್ದಾರೆ. ಯಶ್ ಅವರ ಲುಕ್​​ ಅನ್ನು ಕೊಂಡಾಡಿದ್ದಾರೆ. ಜೊತೆಗೆ ಮೇಕಿಂಗ್ ಅನ್ನು ಸಹ ಕೊಂಡಾಡಿದ್ದಾರೆ. ‘ತಬಾಹಿ’ ರೀತಿಯೇ ಈ ಹಾಡನ್ನು ಸಹ ಬಲು ರಿಚ್ ಆಗಿ ಚಿತ್ರೀಕರಿಸಲಾಗಿದೆ. ‘ತಬಾಹಿ’ ಯಂತೆ ಈ ಹಾಡಿನಲ್ಲೂ ರೊಮ್ಯಾಂಟಿಕ್ ದೃಶ್ಯಗಳಿವೆ. ಇದೇ ಕಾರಣಕ್ಕೆ ಕೆಲವರು ‘ತಬಾಹಿ’ ಅಷ್ಟು ನೋಡಲು ಮುದವಿಲ್ಲ’ ಎಂದು ತಮಾಷೆ ಮಾಡಿದ್ದಾರೆ.

ಹಲವಾರು ಯಶ್ ಅಭಿಮಾನಿಗಳು ಸಿನಿಮಾ ನೋಡಲು ಕಾತರರಾಗಿ ಕಾಯುತ್ತಿರುವುದಾಗಿ ಹೇಳಿದ್ದಾರೆ. ಕರ್ನಾಟಕ ಮಾತ್ರವೇ ಅಲ್ಲದೆ, ದೇಶದ ಹಲವು ರಾಜ್ಯಗಳ ಅಭಿಮಾನಿಗಳು ಯಶ್ ಅವರ ಹಾಡಿಗೆ ಧನಾತ್ಮಕವಾಗಿ ಕಮೆಂಟ್ ಮಾಡಿದ್ದಾರೆ. ಆದರೆ ಕೆಲವರು ಹಾಡು ನೋಡಿ ಯಶ್ ಅವರ ‘ಕಿರಾತಕ’ ಸಿನಿಮಾ ಅನ್ನು ನೆನಪು ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: Toxic Song: ‘ಟಾಕ್ಸಿಕ್’ ಚಿತ್ರದ ‘ಮನಮೋಹಕ..’ ಸಾಂಗ್; ಯಶ್-ತಾರಾ ಸುತಾರಿಯಾ ಕೆಮಿಸ್ಟ್ರಿಗೆ ಫ್ಯಾನ್ಸ್ ಫಿದಾ

‘ಮನಮೋಹಕ’ ಹಾಡಿನ ಅಂತ್ಯದಲ್ಲಿ ದೃಶ್ಯವೊಂದಿದೆ. ಯಶ್, ಕಾರಿನ ಮೇಲೆ ಕೂತಿರುತ್ತಾರೆ. ಅವರ ಗುಂಪಿನ ಸದಸ್ಯರು ಅವರ ಸುತ್ತ ನೆರೆದಿರುತ್ತಾರೆ. ಆಗ ನಟಿ ತಾರಾ ಸುತಾರಿಯಾ ಅಲ್ಲಿಗೆ ಬರುತ್ತಾರೆ. ಯಶ್, ಬಂದೂಕು ತೆಗೆದು ನೆಲಕ್ಕೆ ಶೂಟ್ ಮಾಡಿ ಸುತ್ತ ಇದ್ದವರನ್ನು ದೂರ ಅಟ್ಟುತ್ತಾರೆ. ಬಳಿಕ ನಾಯಕಿಯನ್ನು ಬರಸೆಳೆದು ತಬ್ಬಿಕೊಳ್ಳುತ್ತಾರೆ. ಈ ದೃಶ್ಯ ನೋಡಿ ಹಲವರು ‘ಕಿರಾತಕ’ ಸಿನಿಮಾ ನೆನಪು ಮಾಡಿಕೊಂಡಿದ್ದಾರೆ.

‘ಕಿರಾತಕ’ ಸಿನಿಮಾನಲ್ಲಿಯೂ ಇಂಥಹುದೇ ಒಂದು ದೃಶ್ಯವಿದೆ. ನಾಯಕಿಗಾಗಿ, ಯಶ್ ತನ್ನ ಗೆಳೆಯರನ್ನು ಓಡಿಸುತ್ತಾರೆ. ‘ಕಿರಾತಕ’ ಸಿನಿಮಾನಲ್ಲಿ ಯಶ್ ಪಾತ್ರ ನಾಯಕಿಯ ಊರಿಗೆ ಡ್ಯಾನ್ಸ್ ಪ್ರೋಗ್ರಾಂ ನೋಡಲು ಹೋದಾಗ ಈ ದೃಶ್ಯವಿದೆ. ಆ ದೃಶ್ಯದಲ್ಲಿ ಯಶ್, ನಾಯಕಿಯೊಟ್ಟಿಗೆ ಮಾತನಾಡಲು, ತನ್ನ ಗೆಳೆಯರನ್ನು ಅಲ್ಲಿಂದ ದೂರ ಕಳಿಸುತ್ತಾರೆ. ಈಗ ‘ಮನಮೋಹಕ’ ಹಾಡಿನ ದೃಶ್ಯ ನೋಡಿ ಅಭಿಮಾನಿಗಳು ‘ಕಿರಾತಕ’ ಸೀನ್ ನೆನಪು ಮಾಡಿಕೊಂಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On – 12:15 pm, Tue, 21 July 26

Source link

ಗಂಭೀರ ಅಪರಾಧಗಳ ತನಿಖೆಗಿಂತ ಸೋಷಿಯಲ್ ಮೀಡಿಯಾ ಪೋಸ್ಟ್‌ಗಳ ಮೇಲಿನ ಕ್ರಮಕ್ಕೆ ಏಕೆ ಹೆಚ್ಚಿನ ಆದ್ಯತೆ?: ಪೊಲೀಸರ ನಡೆಗೆ ಹೈಕೋರ್ಟ್​​ ಗರಂ – Kannada News | Why Priority to Social Media Posts Over Serious Crimes?: Karnataka HC Slams Police, Stays Investigation Against Law Student

ಕರ್ನಾಟಕ ಹೈಕೋರ್ಟ್​​Image Credit source: Getty Images

ಬೆಂಗಳೂರು, ಜುಲೈ 21: ಸಾಮಾಜಿಕ ಜಾಲತಾಣಗಳಲ್ಲಿನ ಪೋಸ್ಟ್‌ಗಳ ವಿಚಾರದಲ್ಲಿ ಪೊಲೀಸರು ತ್ವರಿತವಾಗಿ ಎಫ್‌ಐಆರ್ ದಾಖಲಿಸುತ್ತಿರುವುದನ್ನು ಪ್ರಶ್ನಿಸಿದ ಕರ್ನಾಟಕ ಹೈಕೋರ್ಟ್, ಗಂಭೀರ ಅಪರಾಧಗಳ ವಿರುದ್ಧ ಅದೇ ಮಟ್ಟದ ಕಠಿಣ ಕ್ರಮ ಕಾಣಿಸುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದೆ. ಇಂತಹ ನಡೆ ಕಾನೂನು ಜಾರಿ ವ್ಯವಸ್ಥೆಯಲ್ಲಿ ಅನಾರೋಗ್ಯಕರ ವಾತಾವರಣವನ್ನು ಸೃಷ್ಟಿಸಬಹುದು ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ಬಂಟ್ವಾಳ ಬಸ್ ನಿಲ್ದಾಣದಲ್ಲಿ ಯುವತಿಯೊಬ್ಬಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣ ಎಕ್ಸ್​​ನಲ್ಲಿ ಪೋಸ್ಟ್ ಮಾಡಿದ ಹಿನ್ನೆಲೆಯಲ್ಲಿ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಎಫ್‌ಐಆರ್ ರದ್ದುಗೊಳಿಸುವಂತೆ ಕೋರಿ ಕಾನೂನು ವಿದ್ಯಾರ್ಥಿ ಕಿರಣ್ ಆರಾಧ್ಯ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರು ಈ ಮೌಖಿಕ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ:  ವಯಸ್ಕ ಮಗಳ ಉನ್ನತ ಶಿಕ್ಷಣದ ವೆಚ್ಚ ಭರಿಸುವುದು ತಂದೆಯ ಕರ್ತವ್ಯ; ಹೈಕೋರ್ಟ್ ಮಹತ್ವದ ತೀರ್ಪು!

ಹೇಗಿತ್ತು ವಾದ-ಪ್ರತಿವಾದ?

ಅರ್ಜಿದಾರರ ಪರ ವಾದ ಮಂಡಿಸಿದ ವಕೀಲ ಮತ್ತು ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ, ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ ಯಾವುದೇ ಧರ್ಮ, ಜಾತಿ, ಸಮುದಾಯ ಅಥವಾ ನಿರ್ದಿಷ್ಟ ಗುಂಪಿನ ಉಲ್ಲೇಖವಿಲ್ಲ ಎಂದು ನ್ಯಾಯಾಲಯದ ಗಮನಲಕ್ಕೆ ತಂದರು. ಎಫ್‌ಐಆರ್ ಕೇವಲ ಊಹೆ ಮತ್ತು ವೈಯಕ್ತಿಕ ವ್ಯಾಖ್ಯಾನಗಳ ಆಧಾರದ ಮೇಲೆ ದಾಖಲಾಗಿದ್ದು, ಕಾನೂನು ಆಧಾರವಿಲ್ಲದೆ ಪೋಸ್ಟ್‌ಗೆ ಸಾಮುದಾಯಿಕ ಬಣ್ಣ ನೀಡುವ ಪ್ರಯತ್ನ ನಡೆದಿದೆ ಎಂದು ಅವರು ವಾದಿಸಿದ್ದರು. ಇದಕ್ಕೆ ವಿರೋಧ ವ್ಯಕ್ತಪಡಿಸಿದ ರಾಜ್ಯ ಸರ್ಕಾರದ ಪರ ವಕೀಲ ಬಿ.ಎನ್​​. ಜಗದೀಶ್​​, ಎಫ್‌ಐಆರ್ ದಾಖಲಾಗಿದ್ದು ಕೇವಲ ಎರಡು ದಿನಗಳಷ್ಟೇ ಆಗಿದ್ದು, ಅರ್ಜಿದಾರರಿಗೆ ಪೊಲೀಸರು ಯಾವುದೇ ನೋಟಿಸ್ ಸಹ ನೀಡಿಲ್ಲ. ಅರ್ಜಿದಾರರು ತನಿಖೆ ಆರಂಭವಾಗುವ ಮುನ್ನವೇ ಹೈಕೋರ್ಟ್‌ಗೆ ಬಂದಿದ್ದಾರೆ. ಈ ಹಂತದಲ್ಲಿ ತನಿಖೆಗೆ ಅಡ್ಡಿಯಾಗುವಂತಹ ಯಾವುದೇ ರಕ್ಷಣೆ ನೀಡಬಾರದು ಎಂದು ,ಮವಿ ಮಾಡಿದ್ದರು.

ಪೊಲೀಸರ ಕ್ರಮಕ್ಕೆ ನ್ಯಾಯಾಲಯ ಅಸಮಾಧಾನ

ಆದರೆ ಪೊಲೀಸರ ಕ್ರಮದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ನ್ಯಾಯಾಲಯ, ಗಂಭೀರ ಅಪರಾಧಗಳ ತನಿಖೆಗಿಂತ ಸಾಮಾಜಿಕ ಜಾಲತಾಣದ ಪೋಸ್ಟ್‌ಗಳ ಮೇಲಿನ ಕ್ರಮಕ್ಕೆ ಏಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ ಎಂದು ಪ್ರಶ್ನಿಸಿತು. ಜೊತೆಗೆ, ಪ್ರಕರಣದ ಸವಿಸ್ತಾರ ಪರಿಶೀಲನೆ ಪೂರ್ಣಗೊಳ್ಳುವವರೆಗೆ ಅರ್ಜಿದಾರರ ವಿರುದ್ಧದ ಮುಂದಿನ ತನಿಖೆಗೆ ತಾತ್ಕಾಲಿಕ ತಡೆ ನೀಡಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ವಯಸ್ಕ ಮಗಳ ಉನ್ನತ ಶಿಕ್ಷಣದ ವೆಚ್ಚ ಭರಿಸುವುದು ತಂದೆಯ ಕರ್ತವ್ಯ: ಹೈಕೋರ್ಟ್ ಮಹತ್ವದ ತೀರ್ಪು! – Kannada News | Father Bound to Fund Adult Daughter’s Education, Rules Karnataka High Court

ಬೆಂಗಳೂರು, ಜುಲೈ 21: ಮಗಳು ಪ್ರಾಪ್ತವಯಸ್ಕಳಾದ (Major) ನಂತರ ತಂದೆಯಿಂದ ದೂರವಾದ ತಕ್ಷಣಕ್ಕೆ, ಆಕೆಯ ಶಿಕ್ಷಣದ ವೆಚ್ಚವನ್ನು ಭರಿಸುವ ಹೊಣೆಗಾರಿಕೆಯಿಂದ ತಂದೆ ನುಣುಚಿಕೊಳ್ಳಲು ಸಾಧ್ಯವಿಲ್ಲ. ಮಗಳ ಉನ್ನತ ಶಿಕ್ಷಣದ ವೆಚ್ಚವನ್ನು ಭರಿಸುವುದು ತಂದೆಯ ಕರ್ತವ್ಯವಾಗಿದೆ ಎಂದು ಕರ್ನಾಟಕ ಹೈ ಕೋರ್ಟ್ (High Court) ಅತ್ಯಂತ ಮಹತ್ವದ ಆದೇಶ ನೀಡಿದೆ. ಮಂಗಳೂರಿನ ಯುತವತಿಯೊರ್ವಳ ಎಂಡಿ (MD) ಶಿಕ್ಷಣಕ್ಕಾಗಿ 16 ಲಕ್ಷ ರೂಪಾಯಿ ಶುಲ್ಕ ಪಾವತಿಸುವಂತೆ ಉದ್ಯಮಿಯೂ ಆದಂತ್ ಆಕೆಯ ತಂದೆಗೆ ಸೆಷನ್ಸ್ ನ್ಯಾಯಾಲಯ ನೀಡಿದ್ದ ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದಿದೆ.

ಪ್ರಕರಣವೇನು?

ಮಂಗಳೂರು ಮೂಲದ ದಂಪತಿಯಿಬ್ಬರ ಮಗಳಿಗೆ ಎಂ.ಬಿ.ಬಿ.ಎಸ್ (MBBS) ಕೋರ್ಸ್‌ಗೆ ಪ್ರವೇಶ ಕೊಡಿಸಲಾಗಿತ್ತು. ಇದಕ್ಕೆ ತಂದೆಯ ಸಮ್ಮತಿಯೂ ಇತ್ತು. ಆದರೆ, ಮಗಳು ಪದವಿ ವ್ಯಾಸಂಗ ಮಾಡುತ್ತಿದ್ದ ವೇಳೆಯಲ್ಲಿ ದಂಪತಿ ನಡುವೆ ವೈವಾಹಿಕ ಭಿನ್ನಾಭಿಪ್ರಾಯಗಳು ಮೂಡಿದ್ದರಿಂದ ಇಬ್ಬರೂ ದೂರವಾಗಿದ್ದರು.

ಮಗಳು ನೀಟ್ (NEET) ಪರೀಕ್ಷೆಯ ಮೂಲಕ ಮಂಗಳೂರಿನ ಕಾಲೇಜೊಂದರಲ್ಲಿ ಎಂಡಿ (ಡರ್ಮಟಾಲಜಿ) ಸ್ನಾತಕೋತ್ತರ ಪದವಿಗೆ ಸೀಟು ಪಡೆದುಕೊಂಡ ನಂತರ, ಕಾಲೇಜು ಶುಲ್ಕವಾದ 16 ಲಕ್ಷ ರೂಪಾಯಿಯನ್ನು ಪಾವತಿಸಲು ತಂದೆಗೆ ನಿರ್ದೇಶನ ನೀಡುವಂತೆ ಕೋರಿ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮೊರೆ ಹೋಗಿದ್ದಳು.

ನ್ಯಾಯಾಲಯದ ವಿಚಾರಣೆ ಮತ್ತು ತೀರ್ಪು

ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಗೃಹಬಂಧನದಿಂದ ಮಹಿಳೆಯರ ರಕ್ಷಣೆ ಕಾಯ್ದೆ, 2005ರ (Protection of Women from Domestic Violence Act) ಸೆಕ್ಷನ್ 20(d) ಅಡಿಯಲ್ಲಿ ತಂದೆಯ ಆರ್ಥಿಕ ಸಾಮರ್ಥ್ಯವನ್ನು ಪರಿಗಣಿಸಿ, 16 ಲಕ್ಷ ರೂ. ಪಾವತಿಸುವಂತೆ ಆದೇಶಿಸಿತ್ತು. ಇದನ್ನು ತಂದೆಯು ಸೆಷನ್ಸ್ ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದರೂ, ಅಲ್ಲಿಯೂ ಅರ್ಜಿಯನ್ನು ವಜಾಗೊಳಿಸಲಾಗಿತ್ತು. ಕೊನೆಗೆ ಹೈಕೋರ್ಟ್‌ಗೆ ರಿವಿಷನ್ ಅರ್ಜಿ ಸಲ್ಲಿಸಲಾಗಿತ್ತು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೆಚ್.ಪಿ. ಸಂದೇಶ್ ಅವರಿದ್ದ ಪೀಠವು ತಂದೆಯ ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದೆ.

ಅರ್ಜಿದಾರ ತಂದೆಯು ಕೋಟಿಗೂ ಅಧಿಕ ಮೊತ್ತದ ವ್ಯಾಪಾರ ವಹಿವಾಟು ನಡೆಸುತ್ತಿದ್ದಾರೆ. ಮಗಳ ವೈದ್ಯಕೀಯ ಶಿಕ್ಷಣದ ಆರಂಭದಿಂದಲೂ ತಂದೆಯ ಭಾಗವಹಿಸುವಿಕೆ ಇದೆ. ಹೀಗಿರುವಾಗ ಸ್ನಾತಕೋತ್ತರ ಶಿಕ್ಷಣದ ವೆಚ್ಚ ನೀಡಲು ಸಾಧ್ಯವಿಲ್ಲ ಎಂದು ಹೇಳಲಾಗುವುದಿಲ್ಲ. ಅಗತ್ಯಬಿದ್ದರೆ ಬ್ಯಾಂಕ್ ಸಾಲ ಪಡೆದಾದರೂ ಈ ಶುಲ್ಕವನ್ನು ಚುಕ್ತಾ ಮಾಡುವುದು ತಂದೆಯ ಜವಾಬ್ದಾರಿಯಾಗಿದೆ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.

ಇದನ್ನೂ ಓದಿ ಮೈಸೂರಿನಲ್ಲಿ ಪಶ್ಚಿಮ ಬಂಗಾಳ ಮೂಲದ ಯುವತಿಯ ಮೇಲೆ ಗ್ಯಾಂಗ್ ರೇಪ್: ಮೂವರು ಅರೆಸ್ಟ್

ಪ್ರಾಪ್ತವಯಸ್ಕಳಾದ ಮಗಳಿಗೆ ಕಾಯ್ದೆಯ ಸೆಕ್ಷನ್ 20ರ ಅಡಿಯಲ್ಲಿ ಆರ್ಥಿಕ ಪರಿಹಾರ ಪಡೆಯುವ ಹಕ್ಕಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಹೈಕೋರ್ಟ್, ಪದವಿ ಅಥವಾ ಸ್ನಾತಕೋತ್ತರ ಶಿಕ್ಷಣವಾಗಲಿ, ಮಗಳ ಶಿಕ್ಷಣದ ವೆಚ್ಚವನ್ನು ತಂದೆಯೇ ಭರಿಸಬೇಕು ಎಂಬುದು ಕಾನೂನಿನಲ್ಲಿ ಸ್ಪಷ್ಟವಾಗಿದೆ ಎಂದು ಸ್ಪಷ್ಟಪಡಿಸಿತು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ದಿ ಹಂಡ್ರೆಡ್ ಲೀಗ್​ನಲ್ಲಿ ಕಣಕ್ಕಿಳಿಯುವ 8 ತಂಡಗಳು ಹೀಗಿವೆ – Kannada News | The hundred league 2026 All Squads

ಟ್ರೆಂಟ್ ರಾಕೆಟ್ಸ್: ಸ್ಯಾಮ್ ಬಿಲ್ಲಿಂಗ್ಸ್ (ನಾಯಕ), ಟಿಮ್ ಡೇವಿಡ್, ಬೆನ್ ಡಕೆಟ್, ಮಿಚೆಲ್ ಸ್ಯಾಂಟ್ನರ್, ಟಾಮ್ ಬ್ಯಾಂಟನ್, ಫಿನ್ ಅಲೆನ್, ಲೂಯಿಸ್ ಗ್ರೆಗೊರಿ, ಕ್ರೇಗ್ ಓವರ್ಟನ್, ಡೇವಿಡ್ ಪೇನ್, ಡ್ಯಾನ್ ಮೌಸ್ಲಿ, ಮ್ಯಾಟ್ ಹೆನ್ರಿ,  ಅನ್ಯೂರಿನ್ ಡೊನಾಲ್ಡ್, ಬೆನ್ ಮೇಯ್ಸ್, ಡ್ಯಾನಿ ಬ್ರಿಗ್ಸ್, ಲೂಯಿಸ್ ಕಿಂಬರ್, ಬ್ರಾಡ್ ಕ್ಯೂರಿ. (PC: The Hundred)

Source link

ವಾಟ್ಸಾಪ್​ಗೆ ಎಪಿಕೆ ಫೈಲ್​ನಲ್ಲಿ ಬಂತು ಮದುವೆ ಆಮಂತ್ರಣ: ಕ್ಲಿಕ್ ಮಾಡಿದ ವ್ಯಕ್ತಿಯ ಬ್ಯಾಂಕ್ ಖಾತೆಯಿಂದ 9.96 ಲಕ್ಷ ರೂ. ಮಾಯ! – Kannada News | WhatsApp APK Wedding Invitation Scam: Bengaluru Forest Employee Loses Rs 9.96 Lakh After Opening Fake Invite

ಬೆಂಗಳೂರು, ಜುಲೈ 21: ವಾಟ್ಸಾಪ್‌ನಲ್ಲಿ ಎಪಿಕೆ ಫೈಲ್ (APK File)ರೂಪದಲ್ಲಿ ಬಂದಿದ್ದ ನಕಲಿ ಮದುವೆ ಆಮಂತ್ರಣವನ್ನು (Wedding Card) ಕ್ಲಿಕ್ ಮಾಡಿದ ಪರಿಣಾಮ ಅರಣ್ಯ ಇಲಾಖೆಯ ನೌಕರರೊಬ್ಬರು ಸುಮಾರು 9.96 ಲಕ್ಷ ರೂಪಾಯಿ ಕಳೆದುಕೊಂಡಿರುವ ಘಟನೆ ಬೆಂಗಳೂರಿನಲ್ಲಿ (Bengaluru) ವರದಿಯಾಗಿದೆ. ಈ ಸಂಬಂಧ ಉತ್ತರ ವಿಭಾಗದ ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪರಿಚಿತ ಸೈಬರ್ ವಂಚಕರ ಪತ್ತೆಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಇದರೊಂದಿಗೆ ಸೈಬರ್ ವಂಚಕರು ಹೊಸ ಹೊಸ ವಿಧಾನದ ಮೂಲಕ ಜನರನ್ನು ವಂಚಿಸುತ್ತಿರುವುದು ಬೆಳಕಿಗೆ ಬಂದಂತಾಗಿದೆ.

ಅಪರಿಚಿತ ಮೊಬೈಲ್​ ಸಂಖ್ಯೆಯಿಂದ ಬಂತು ಮದುವೆ ಆಮಂತ್ರಣ

ದೂರುದಾರ ರಮೇಶ್ ಅವರಿಗೆ ಅಪರಿಚಿತ ಮೊಬೈಲ್ ಸಂಖ್ಯೆಯಿಂದ ವಾಟ್ಸಾಪ್‌ನಲ್ಲಿ ಮದುವೆ ಆಮಂತ್ರಣದ ಹೆಸರಿನಲ್ಲಿ ಎಪಿಕೆ ಫೈಲ್ ಕಳುಹಿಸಲಾಗಿತ್ತು. ಅದು ಸಾಮಾನ್ಯ ಆಹ್ವಾನ ಪತ್ರಿಕೆ ಎಂದು ಭಾವಿಸಿ ಅವರು ಕ್ಲಿಕ್ ಮಾಡಿದ್ದರು. ತಕ್ಷಣವೇ ಎಪಿಕೆ ಫೈಲ್ ಡ್ಔನ್​ಲೋಡ್ ಆಗಿದ್ದು, ಅವರ ಬ್ಯಾಂಕ್ ಖಾತೆಯಿಂದ ಹಂತಹಂತವಾಗಿ ಹಣ ಡೆಬಿಟ್ ಆಗಿರುವ ಸಂದೇಶಗಳು ಬಂದಿವೆ.

ಲಕ್ಷಾಂತ ರೂ. ಕಳಕೊಂಡ ಬಳಿಕ ತಿಳಿದ ಸತ್ಯ

ಒಟ್ಟಾರೆ 9 ಲಕ್ಷ 96 ಸಾವಿರ ರೂಪಾಯಿ ಖಾತೆಯಿಂದ ವರ್ಗಾವಣೆಯಾದ ಬಳಿಕ ತಾವು ಸೈಬರ್ ವಂಚನೆಗೆ ಒಳಗಾಗಿರುವುದು ರಮೇಶ್ ಅವರಿಗೆ ಗೊತ್ತಾಗಿದೆ. ಬಳಿಕ ಅವರು ಬೆಂಗಳೂರಿನ ಉತ್ತರ ಸೈಬರ್ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ಎಫ್‌ಐಆರ್ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಅಪರಿಚಿತರಿಂದ ಬಂದ ಫೈಲ್​ಗಳನ್ನು ಕ್ಲಿಕ್ ಮಾಡಬೇಡಿ

ಅಪರಿಚಿತ ವ್ಯಕ್ತಿಗಳಿಂದ ಬರುವ APK ಫೈಲ್‌ಗಳು, ಲಿಂಕ್‌ಗಳು ಅಥವಾ ಮದುವೆ ಆಮಂತ್ರಣಗಳ ಹೆಸರಿನಲ್ಲಿರುವ ಅಪ್ಲಿಕೇಶನ್‌ಗಳನ್ನು ಯಾವುದೇ ಕಾರಣಕ್ಕೂ ಡೌನ್‌ಲೋಡ್ ಅಥವಾ ಓಪನ್ ಮಾಡಬಾರದು ಎಂದು ಸಾರ್ವಜನಿಕರಿಗೆ ಸೈಬರ್ ತಜ್ಞರು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ವಾಟ್ಸ್ಆ್ಯಪ್​ನಲ್ಲಿ ಹರಿದಾಡುತ್ತಿದೆ ಆರ್​ಟಿಒ ಚಲನ್ ಸ್ಕ್ಯಾಮ್: ಈರೀತಿ ಮೆಸೇಜ್ ಬಂದರೆ ಎಚ್ಚರ

ಈ ಹಿಂದೆ, ಬ್ಯಾಂಕ್​ಗಳ ಹೆಸರಿನಲ್ಲಿ ಎಪಿಕೆ ಫೈಲ್ ಕಳುಹಿಸಿ ವಂಚಿಸುತ್ತಿದ್ದ ಅನೇಕ ಪ್ರಕರಣಗಳು ವರದಿಯಾಗಿದ್ದವು. ಆ ನಂತರ, ಟ್ರಾಫಿಕ್ ಚಲನ್ ಹೆಸರಿನಲ್ಲಿ ಎಪಿಕೆ ಫೈಲ್​ಗಳನ್ನು ವಾಟ್ಸಾಪ್​ನಲ್ಲಿ ಕಳುಹಿಸಿ ವಂಚಿಸಿದ ಅನೇಕ ಪ್ರಕರಣಗಳು ವರದಿಯಾಗಿದ್ದವು. ಇದೀಗ ಮದುವೆ ಆಮಂತ್ರಣದ ಎಪಿಕೆ ಫೈಲ್ ಕಳುಹಿಸಿ ವಂಚಿಸಲಾಗುತ್ತಿದೆ. ಮದುವೆ ಆಮಂತ್ರಣ, ನೋಡೋಣ ಎಂದು ಕ್ಲಿಕ್ ಮಾಡಿದರೆ ಎಪಿಕೆ ಫೈಲ್ ಮೊಬೈಲ್​ನಲ್ಲಿ ಡೌನ್​ಲೋಡ್ ಆಗಿ ಮೊಬೈಲ್ ಹ್ಯಾಕ್ ಆಗುತ್ತದೆ. ಇದರಿಂದ ಮೊಬೈಲ್​​ನಲ್ಲಿರುವ ದತ್ತಾಂಶಗಳು ಸೈಬರ್ ವಂಚಕರ ಪಾಲಾಗಿ ಅವರು ನಿಮ್ಮ ಬ್ಯಾಂಕ್ ಖಾತೆಯಿಂದ ಹಣ ಕದಿಯಬಹುದು. ಹೀಗಾಗಿ ಎಚ್ಚರ ವಹಿಸಿ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಕಲುಷಿತ ಕಾವೇರಿ ನೀರಿನ ಪೂರೈಕೆ: ಬೆಂಗಳೂರಿನ ಕತ್ರಿಗುಪ್ಪೆ ನಿವಾಸಿಗಳ ಆಕ್ರೋಶ – Kannada News | Bengaluru Residents Suffer from Contaminated Cauvery Water Supply in Katriguppe

ಬೆಂಗಳೂರು, ಜುಲೈ 21: ನಗರದ ದಕ್ಷಿಣ ನಗರ ಪಾಲಿಕೆಯ ಕತ್ರಿಗುಪ್ಪೆ ವಾರ್ಡ್‌ನಲ್ಲಿ ಕಾವೇರಿ ನೀರು ಕಲುಷಿತಗೊಂಡು ಪೂರೈಕೆಯಾಗುತ್ತಿದ್ದು, ನೂರಕ್ಕೂ ಹೆಚ್ಚು ಮನೆಗಳ ನಿವಾಸಿಗಳು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ. ಕಳೆದ ನಾಲ್ಕೈದು ವರ್ಷಗಳಿಂದ ಪದೇ ಪದೇ ಪುನರಾವರ್ತಿತವಾಗುತ್ತಿರುವ ಈ ಸಮಸ್ಯೆಯಿಂದ ಕಾವೇರಿ ನೀರನ್ನು ನಂಬಿಕೊಂಡಿದ್ದ ಜನರಿಗೆ ದೊಡ್ಡ ಆಘಾತ ಉಂಟಾಗಿದೆ. ಕಲುಷಿತ ನೀರು ಮಣ್ಣು ಮಿಶ್ರಿತವಾಗಿದ್ದು, ಕೆಟ್ಟ ವಾಸನೆ ಹಾಗೂ ಕಪ್ಪು ಬಣ್ಣದಿಂದ ಕೂಡಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಕುಡಿಯಲು ಅಥವಾ ಇತರೆ ಗೃಹಬಳಕೆಗೆ ನೀರನ್ನು ಉಪಯೋಗಿಸಲು ಭಯವಾಗುತ್ತಿದೆ ಎಂದು ಜನ ಅಳಲು ತೋಡಿಕೊಂಡಿದ್ದಾರೆ. ಕೊಳಚೆ ನೀರು ಕಾವೇರಿ ನೀರಿನೊಂದಿಗೆ ಮಿಶ್ರಣವಾಗುತ್ತಿರುವುದು ಈ ಸಮಸ್ಯೆಗೆ ಮುಖ್ಯ ಕಾರಣ ಎನ್ನಲಾಗಿದೆ. ಹಿಂದೆ ಪೆಟ್ರೋಲ್, ಆಯಿಲ್ ಮಿಶ್ರಣವಾಗಿದ್ದರೆ, ಈಗ ಸ್ಯಾನಿಟರಿ ಲೈನ್‌ನ ನೀರು ಸೇರಿಕೊಳ್ಳುತ್ತಿದೆ ಎಂದು ನಿವಾಸಿಗಳು ತಿಳಿಸಿದ್ದಾರೆ. ಜಲಮಂಡಳಿ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಸಲ್ಲಿಸಿದ್ದರೂ, ಸರಿಯಾದ ಸ್ಪಂದನೆ ಸಿಕ್ಕಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಕ್ಕಳು ಹಾಗೂ ವೃದ್ಧರ ಆರೋಗ್ಯದ ಬಗ್ಗೆ ತೀವ್ರ ಚಿಂತೆಗೀಡಾಗಿದ್ದು, ಕೂಡಲೇ ಅಧಿಕಾರಿಗಳು ಶಾಶ್ವತ ಪರಿಹಾರ ಕಂಡುಕೊಳ್ಳುವಂತೆ ಒತ್ತಾಯಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

Toxic Song: ‘ಟಾಕ್ಸಿಕ್’ ಚಿತ್ರದ ‘ಮನಮೋಹಕ..’ ಸಾಂಗ್ ರಿವೀಲ್; ಯಶ್-ತಾರಾ ಸುತಾರಿಯಾ ಕೆಮಿಸ್ಟ್ರಿಗೆ ಫ್ಯಾನ್ಸ್ ಫಿದಾ – Kannada News | Toxic Second Single Out: Yash and Tara Sutaria’s Striking Chemistry Wins Hearts in Manamohaka

ರಾಕಿಂಗ್ ಸ್ಟಾರ್ ಯಶ್ ಅಭಿನಯದ, ಗೀತು ಮೋಹನ್​ದಾಸ್ ನಿರ್ದೇಶನದ ಬಹುನಿರೀಕ್ಷಿತ ‘ಟಾಕ್ಸಿಕ್’ ಚಿತ್ರದ ಕಡೆಯಿಂದ ಅಭಿಮಾನಿಗಳಿಗೆ ಭರ್ಜರಿ ಗಿಫ್ಟ್ ಸಿಕ್ಕಿದೆ. ಈಗಾಗಲೇ ಬಿಡುಗಡೆಯಾಗಿ ಕೋಟ್ಯಂತರ ವೀಕ್ಷಣೆಗಳೊಂದಿಗೆ ಸೋಷಿಯಲ್ ಮೀಡಿಯಾದಲ್ಲಿ ಧೂಳೆಬ್ಬಿಸಿದ್ದ ಬೋಲ್ಡ್ ಅಂಡ್ ರೊಮ್ಯಾಂಟಿಕ್ ‘ತಬಾಹಿ’ ಹಾಡಿನ ಬೆನ್ನಲ್ಲೇ, ಚಿತ್ರತಂಡ ಎರಡನೇ ಹಾಡನ್ನು ಬಿಡುಗಡೆ ಮಾಡಿದೆ. ಇಂದು (ಜುಲೈ 21) ಬೆಳಿಗ್ಗೆ 11.33ಕ್ಕೆ ರಿಲೀಸ್ ಆಗಿರುವ ‘ಮನಮೋಹಕ..’ ಸಾಂಗ್ ಇಂಟರ್ನೆಟ್‌ನಲ್ಲಿ ಸಖತ್ ಟ್ರೆಂಡ್ ಸೃಷ್ಟಿಸುತ್ತಿದೆ.

ಮೆಲೋಡಿ ಪ್ರಿಯರ ಮನಗೆದ್ದ ‘ಮನಮೋಹಕ’

ಮೊದಲ ಹಾಡು ‘ತಬಾಹಿ’ಯಲ್ಲಿ ಯಶ್ ಹಾಗೂ ಕಿಯಾರಾ ಅಡ್ವಾಣಿ ಸಖತ್ ರೊಮ್ಯಾಂಟಿಕ್ ಆಗಿ ಕಾಣಿಸಿಕೊಂಡು ಬೋಲ್ಡ್ ನೆಸ್ ಮೂಲಕ ಗಮನ ಸೆಳೆದಿದ್ದರು. ಇಂದು ಬಿಡುಗಡೆಯಾಗಿರುವ ‘ಮನಮೋಹಕ’ ಹಾಡು ಮಧುರವಾದ ಪ್ರಣಯಗೀತೆ. ಈ ಹಾಡಿನಲ್ಲಿ ಯಶ್ ಹಾಗೂ ತಾರಾ ಸುತಾರಿಯಾ ಜೋಡಿಯಾಗಿ ಕಾಣಿಸಿಕೊಂಡಿದ್ದು, ಇಬ್ಬರ ನಡುವಿನ ಸ್ಕ್ರೀನ್ ಕೆಮಿಸ್ಟ್ರಿ ಗಮನ ಸೆಳೆಯುತ್ತಿದೆ. ಈ ಹಾಡಿನಲ್ಲಿ ಕಿಯಾರಾ ಅಡ್ವಾಣಿ, ನಯನತಾರಾ ಕೂಡ ಕಾಣಿಸಿಕೊಳ್ಳುತ್ತಾರೆ.

ಪ್ರಮೋದ್ ಮರವಂತೆ ಸಾಹಿತ್ಯ

‘ಟಾಕ್ಸಿಕ್’ ಚಿತ್ರದ ಮೊದಲ ಹಾಡಿಗೆ ಸ್ಯಾಂಡಲ್‌ವುಡ್‌ನ ಸ್ಟಾರ್ ಲಿರಿಸಿಸ್ಟ್ ಯೋಗರಾಜ್ ಭಟ್ ಅವರು ಸಾಹಿತ್ಯ ಬರೆದಿದ್ದರು. ಈಗ ಮನಮೋಹಕ ಹಾಡಿಗೆ ಪ್ರಮೋದ್ ಮರವಂತೆ ಸಾಹಿತ್ಯ ಬರೆದಿದ್ದಾರೆ. ಈ ಹಾಡನ್ನು ಸಿದ್ದಾರ್ಥ್ ಬಸರೂರ್ ಅವರು ಹಾಡಿದ್ದಾರೆ.

‘ಟಾಕ್ಸಿಕ್’ ಚಿತ್ರದಲ್ಲಿ ಯಶ್ ದ್ವಿಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವುದು ಈಗಾಗಲೇ ಕುತೂಹಲ ಮೂಡಿಸಿದೆ. ಚಿತ್ರದಲ್ಲಿ ಕಿಯಾರಾ ಅಡ್ವಾಣಿ, ತಾರಾ ಸುತಾರಿಯಾ, ನಯನತಾರಾ ಮತ್ತು ರುಕ್ಮಿಣಿ ವಸಂತ್ ಸೇರಿದಂತೆ ದೊಡ್ಡ ತಾರಾಗಣವೇ ಇದೆ. ಯಶ್ ಅವರು ಯಾರ ಜೊತೆ ಫೈಟ್ ಮಾಡುತ್ತಾರೆ, ಯಾರ ಜೊತೆ ರೊಮ್ಯಾನ್ಸ್ ಮಾಡುತ್ತಾರೆ ಎಂಬ ಗೊಂದಲ ಅಭಿಮಾನಿಗಳಲ್ಲಿ ಇದ್ದ ಬೆನ್ನಲ್ಲೇ, ಈಗ ತಾರಾ ಸುತಾರಿಯಾ ಜೊತೆಗಿನ ಈ ಮಧುರ ಪ್ರಣಯಗೀತೆ ಚಿತ್ರದ ಮೇಲಿನ ನಿರೀಕ್ಷೆಯನ್ನು ಮತ್ತಷ್ಟು ದುಪ್ಪಟ್ಟು ಮಾಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On – 11:44 am, Tue, 21 July 26

Source link

Book Brahma Sahityotsava 2026: ಆ.14ರಿಂದ ಬೆಂಗಳೂರಿನಲ್ಲಿ ‘ಬುಕ್ ಬ್ರಹ್ಮ ಸಾಹಿತ್ಯೋತ್ಸವ; 10 ದಿನಗಳ ಕಾಲ ಸಾಹಿತ್ಯ-ಸಾಂಸ್ಕೃತಿಕ ಸಂಭ್ರಮ! – Kannada News | BBLF 2026: Bengaluru’s Grand Literary and Cultural Festival – 10 Days of Free Events

ಬೆಂಗಳೂರು: ಸಾಹಿತ್ಯಾಸಕ್ತರು ಕಾತುರದಿಂದ ಕಾಯುತ್ತಿದ್ದ ‘ಬುಕ್ ಬ್ರಹ್ಮ ಸಾಹಿತ್ಯೋತ್ಸವ – 2026’ (BBLF 2026) ರ ಮೂರನೇ ಆವೃತ್ತಿಗೆ ವೇದಿಕೆ ಸಜ್ಜಾಗಿದೆ. ಕೋರಮಂಗಲದ ಪ್ರಸಿದ್ಧ ಸೇಂಟ್ ಜಾನ್ಸ್ ಸಭಾಂಗಣದ ಆವರಣದಲ್ಲಿ ಆಗಸ್ಟ್ 14 ರಿಂದ 23 ರವರೆಗೆ ಒಟ್ಟು 10 ದಿನಗಳ ಕಾಲ ಈ ಬೃಹತ್ ಸಾಹಿತ್ಯ ಮತ್ತು ಸಾಂಸ್ಕೃತಿಕ ಉತ್ಸವ ನಡೆಯಲಿದೆ. ಈ ಬಾರಿ ಸಾಹಿತ್ಯ ಗೋಷ್ಠಿಗಳ ಜೊತೆಗೆ ಅದ್ಧೂರಿ ಸಾಂಸ್ಕೃತಿಕ ಕಾರ್ಯಕ್ರಮಗಳು, ಜಾನಪದ ಮಾರುಕಟ್ಟೆ ಹಾಗೂ ಪುಸ್ತಕ ಲೋಕ ಮುಂತಾದ ಹಲವು ಆಕರ್ಷಣೆಗಳನ್ನು ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮದ ವಿವರ ಹಾಗೂ ದಿನಾಂಕಗಳು:

ಸಾಂಸ್ಕೃತಿಕ ಉತ್ಸವ, ಪುಸ್ತಕಲೋಕ ಮತ್ತು ಫ್ಲೀ ಮಾರ್ಕೆಟ್ (ಆಗಸ್ಟ್ 14 – 20) ಮೊದಲ 7 ದಿನಗಳ ಕಾಲ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳು, ಬಿಬಿಎಲ್‌ಎಫ್-ಪುಸ್ತಕಲೋಕ ಮತ್ತು ಜಾನಪದ ಮಾರುಕಟ್ಟೆ ಸಾರ್ವಜನಿಕರಿಗೆ ಮುಕ್ತವಾಗಿರುತ್ತದೆ.

  • ಆಗಸ್ಟ್ 14 (ಸಂಜೆ): ಶಿಲ್ಪಾ ಮಡುಬಿ ಅವರಿಂದ ಸಂಗೀತ ಕಾರ್ಯಕ್ರಮ.
  • ಆಗಸ್ಟ್ 15 (ಸಂಜೆ): ರಾಮಚಂದ್ರ ಹಡಪದ ಮತ್ತು ತಂಡದವರಿಂದ ಗಾಯನ.
  • ಆಗಸ್ಟ್ 16 (ಸಂಜೆ): ‘ಗಿಗ್ ಮ್ಯಾನ್ ಲೈವ್’ ತಂಡದ ಸುನಿಧಿ ಗಣೇಶ್ ಅವರಿಂದ ಸಂಗೀತ ರಸಸಂಜೆ.

ಪ್ರಮುಖ ಸಾಹಿತ್ಯೋತ್ಸವ ಕಾರ್ಯಕ್ರಮಗಳು (ಆಗಸ್ಟ್ 21 – 23):

ಸಾಹಿತ್ಯೋತ್ಸವದ ಪ್ರಮುಖ 3 ದಿನಗಳಲ್ಲಿ 9 ಸಮಾನಾಂತರ ವೇದಿಕೆಗಳಲ್ಲಿ ಒಟ್ಟು 207 ಗೋಷ್ಠಿಗಳು, ಚರ್ಚೆಗಳು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ. ಕನ್ನಡ, ತೆಲುಗು, ತಮಿಳು, ಮಲಯಾಳಂ ಮತ್ತು ಇಂಗ್ಲಿಷ್ ಸಾಹಿತ್ಯ ಲೋಕದ 400ಕ್ಕೂ ಹೆಚ್ಚು ಲೇಖಕರು, ಚಿಂತಕರು, ಕಲಾವಿದರು, ಪ್ರಕಾಶಕರು ಮತ್ತು ಪುಸ್ತಕ ಮಾರಾಟಗಾರರು ಭಾಗವಹಿಸಲಿದ್ದಾರೆ.

ಆಗಸ್ಟ್ 21-23 ರ ಪ್ರಮುಖ ಸಾಂಸ್ಕೃತಿಕ ಆಕರ್ಷಣೆಗಳು:

  • ಆಗಸ್ಟ್ 21 (ಸಂಜೆ 6:30): ನಿರ್ದೇಶಕ ನಟೇಶ್ ಹೆಗಡೆ ಅವರಿಂದ ‘ವಾಘಾಚಿಪಾಣಿ’ ಚಲನಚಿತ್ರದ ಕುರಿತು ಮಾತುಕತೆ ಮತ್ತು ಪ್ರದರ್ಶನ.
  • ಆಗಸ್ಟ್ 22 (ಬೆಳಿಗ್ಗೆ 8:30): ರಫಿ ಖಾನ್ ಮತ್ತು ಶಫಿ ಖಾನ್ ಅವರಿಂದ ಸಿತಾರ್ ವಾದನ.
  • ಆಗಸ್ಟ್ 22 (ಸಂಜೆ 6:30): ವಿದುಷಿ ಟಿ.ಎಸ್. ಸತ್ಯವತಿ ಮತ್ತು ತಂಡದವರಿಂದ ಕರ್ನಾಟಕ ಸಂಗೀತ ಕಚೇರಿ.
  • ಆಗಸ್ಟ್ 23 (ಬೆಳಿಗ್ಗೆ 8:30): ಅನಿರುಧ್ ಐತಾಳ ಮತ್ತು ತಂಡದವರಿಂದ ಹಿಂದೂಸ್ತಾನಿ ಸಂಗೀತ.
  • ಆಗಸ್ಟ್ 23 (ಸಂಜೆ 6:30): ಪಟ್ಲ ಸತೀಶ್ ಶೆಟ್ಟಿ ನೇತೃತ್ವದ ‘ಪಾವಂಜೆ ಮೇಳ’ದವರಿಂದ ಆಕರ್ಷಕ ಯಕ್ಷಗಾನ ಪ್ರದರ್ಶನ.

#BBLF-2026 ರ ಮುಖ್ಯ ವೈಶಿಷ್ಟ್ಯಗಳು:

10 ದಿನಗಳ ಎಲ್ಲ ಕಾರ್ಯಕ್ರಮಗಳು, ಸಾಂಸ್ಕೃತಿಕ ಸಂಜೆ ಹಾಗೂ ಗೋಷ್ಠಿಗಳಿಗೆ ಪ್ರವೇಶ ಸಂಪೂರ್ಣ ಉಚಿತ. ಮಂಟಪ, ಅಂಗಳ (ಕನ್ನಡ ಗೋಷ್ಠಿಗಳಿಗೆ), ಅಕ್ಷರ, ಮಥನ, ಮುಖಾಮುಖಿ, ನ್ಯೂಜೆನ್, ಅನಾವರಣ, ಚಿಣ್ಣರಲೋಕ ಮತ್ತು ಪೋಯೆಟ್ರಿ (ಕಾವ್ಯ ಕಣಜ) ಹೀಗೆ ಒಂಬತ್ತು ಪ್ರತ್ಯೇಕ ವೇದಿಕೆಗಳು. ಉತ್ಸವದ ಸಮಯದಲ್ಲಿ ಕಾದಂಬರಿ ಸ್ಪರ್ಧೆ, ಸ್ವಾತಂತ್ರ್ಯ ಉತ್ಸವ ಕಥಾ ಸ್ಪರ್ಧೆ, ಇಂಗ್ಲಿಷ್ ಫಿಕ್ಷನ್ ಆಫ್ ದಿ ಇಯರ್ ಮತ್ತು ‘ಬುಕ್ ಬ್ರಹ್ಮ ಸಾಹಿತ್ಯ ಪುರಸ್ಕಾರ’ಗಳನ್ನು ಪ್ರದಾನ ಮಾಡಲಾಗುವುದು. ನವಕರ್ನಾಟಕ, ಡಿಸಿ ಬುಕ್ಸ್, ಕಾಲಚುವಾಡು, ಛಾಯಾ, ಸಾಹಿತ್ಯ ಅಕಾಡೆಮಿ ಸೇರಿದಂತೆ ಪ್ರಮುಖ ಪ್ರಕಾಶನಗಳ ಮಳಿಗೆಗಳು ಮತ್ತು ಫ್ಲೀ ಮಾರ್ಕೆಟ್, ಆಹಾರ ಮಳಿಗೆಗಳು 10 ದಿನಗಳ ಕಾಲ ಲಭ್ಯವಿರಲಿವೆ. ಇದಲ್ಲದೇ ಹೊರಊರಿನಿಂದ ಬರುವ ಆಸಕ್ತರಿಗಾಗಿ ಸೇಂಟ್ ಜಾನ್ಸ್ ಆವರಣದ ಸುತ್ತಮುತ್ತಲಿರುವ ಹೋಟೆಲ್‌ಗಳ ವಿವರ ಹಾಗೂ ಗೈಡ್ ಅನ್ನು ವೆಬ್‌ಸೈಟ್‌ನಲ್ಲಿ ನೀಡಲಾಗಿದೆ.

ನೋಂದಣಿ ಮಾಡಿಕೊಳ್ಳುವುದು ಹೇಗೆ?

ಉತ್ಸವಕ್ಕೆ ಆಗಮಿಸುವವರು ಮುಂಚಿತವಾಗಿಯೇ www.bookbrahmalitfest.com ವೆಬ್‌ಸೈಟ್‌ಗೆ ಭೇಟಿ ನೀಡಿ ಉಚಿತವಾಗಿ ನೋಂದಾಯಿಸಿಕೊಳ್ಳಬಹುದು. (ಸ್ಥಳದಲ್ಲೂ ನೋಂದಣಿ ಕೌಂಟರ್‌ಗಳ ಮೂಲಕ ಪಾಸ್ ಪಡೆಯಲು ಅವಕಾಶವಿದೆ).

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Video: ಬಿಳಿ ಬಣ್ಣದ ಕುರ್ತಾ ಧರಿಸಿ ವೈರಲ್ ಆದ ವ್ಯಕ್ತಿ, ಕಾರಣ ಇದೇ ನೋಡಿ – Kannada News | A man who had a kurta stitched from a railway bedsheet

ಸೋಶಿಯಲ್ ಮೀಡಿಯಾದಲ್ಲಿ (social media) ವೈರಲ್ ಆಗುವ ಕೆಲ ವಿಡಿಯೋಗಳು ನೆಟ್ಟಿಗರ ಹುಬ್ಬೇರಿಸುವಂತೆ ಮಾಡುತ್ತದೆ. ಇದೀಗ ಇಲ್ಲೊಬ್ಬ ವ್ಯಕ್ತಿಯು ಬಿಳಿ ಬಣ್ಣದ ಕುರ್ತಾ ಧರಿಸಿ ವೈರಲ್ ಆಗಿದ್ದಾನೆ. ಈ ಕುರ್ತಾ ಮೇಲೆ ನೀಲಿ ಪಟ್ಟಿ ಮೇಲೆ ವೆಸ್ಟೆರ್ನ್ ರೈಲ್ವೆ (western railway) ಎಂದು ಬರೆಯಲಾಗಿದೆ. ಹೌದು, ಈ ವ್ಯಕ್ತಿ ರೈಲ್ವೆಯಲ್ಲಿನ ಬೆಡ್ ಶೀಟ್ ನಿಂದಲೇ ಕುರ್ತಾ ಹೊಲಿಸಿಕೊಂಡಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ಮಿಶ್ರ ಪ್ರತಿಕ್ರಿಯೆ ನೀಡಿದ್ದಾರೆ.

ರಂಜಿತ್ ಸಿಂಗ್ (Ranjeeth Singh) ಹೆಸರಿನ ಇನ್ಸ್ಟಾಗ್ರಾಂನಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದೆ. ಈ ಕ್ಲಿಪಿಂಗ್ ನಲ್ಲಿ ವ್ಯಕ್ತಿಯೊಬ್ಬ ಬಿಳಿ ಬಣ್ಣದ ಕುರ್ತಾ ಧರಿಸಿ ಮಾರ್ಕೆಟ್ ನಲ್ಲಿ ತರಕಾರಿ ಖರೀದಿ ಮಾಡುತ್ತಿರುವುದನ್ನು ಕಾಣಬಹುದು. ಆತ ಧರಿಸಿರುವ ಕುರ್ತಾದ ಮೇಲೆ ನೀಲಿ ಪಟ್ಟಿ ಮೇಲೆ ವೆಸ್ಟೆರ್ನ್ ರೈಲ್ವೆ ಎಂದು ಬರೆದಿರುವುದನ್ನು ಕಾಣಬಹುದು.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ಮುಂಬೈ ನಿಲ್ದಾಣದಲ್ಲಿ ಹೈಡ್ರಾಮಾ: ಯುವತಿಯ ಕಾಲು ಹಿಡಿದು ಹಠ ಮಾಡುತ್ತಾ ಪ್ಲಾಟ್‌ಫಾರ್ಮ್ ಮೇಲೆ ಮಲಗಿದ ಯುವಕ

ಈ ಕ್ಲಿಪಿಂಗ್ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ಐದು ವರ್ಷ ಕಳೆದ್ರು ಈ ಬಟ್ಟೆ ಏನು ಹಾಳಾಗಲ್ಲ ಎಂದು ಹೇಳಿದ್ದಾರೆ. ಮತ್ತೊಬ್ಬರು, ಬ್ರಾಂಡೆಡ್ ಬಟ್ಟೆ ಎಂದಿದ್ದಾರೆ. ಇನ್ನೊಬ್ಬರು, ಬಟ್ಟೆ ಖರೀದಿಸಲು ಕಷ್ಟವಿರಬಹುದು ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Exit mobile version