ರಣ್ವೀರ್ ಸಿಂಗ್ ಕೈಕೊಟ್ಟ ಬಳಿಕ ‘ಡಾನ್ 3’ಗೆ ಮತ್ತೊಬ್ಬ ಸ್ಟಾರ್ – Kannada News

ಫರ್ಹಾನ್ ಅಖ್ತರ್ ನಿರ್ದೇಶನದ ಮೊದಲೆರಡು ‘ಡಾನ್’ (Don) ಸಿನಿಮಾಗಳಲ್ಲಿ ಶಾರುಖ್ ಖಾನ್ (Shah Rukh Khan) ನಾಯಕನಾಗಿ ನಟಿಸಿದ್ದರು. ‘ಡಾನ್ 3’ ಸಿನಿಮಾಕ್ಕೂ ಶಾರುಖ್ ಖಾನ್ ಅವರನ್ನೇ ಫರ್ಹಾನ್ ಅಖ್ತರ್ ಆಯ್ಕೆ ಮಾಡುತ್ತಾರೆ ಎಂದಾಗಿತ್ತು. ಆದರೆ ಫರ್ಹಾನ್ ಅಖ್ತರ್ ರಣ್ವೀರ್ ಸಿಂಗ್ ಅವರನ್ನು ನಾಯಕನನ್ನಾಗಿ ಘೊಷಿಸಿದರು. ಆದರೆ ‘ಧುರಂಧರ್’ ಸಿನಿಮಾ ಗೆದ್ದು, ರಣ್ವೀರ್ ಅವರು ಫರ್ಹಾನ್ ಅಖ್ತರ್ ಕೈಕೊಟ್ಟ ಬಳಿಕ, ಇದೀಗ ನಿರ್ದೇಶಕ ಶಾರುಖ್ ಖಾನ್ ಬಳಿ ಹೋಗಲಾದೆ ಬಾಲಿವುಡ್​​ನ ಮತ್ತೊಬ್ಬ ಸ್ಟಾರ್ ನಟನ ಮನೆ ಬಾಗಿಲಿಗೆ ಹೋಗಿದ್ದಾರೆ ಎನ್ನಲಾಗುತ್ತಿದೆ.

ಅಸಲಿಗೆ ರಣವೀರ್ ಸಿಂಗ್ ಅವರನ್ನು ಹೊಸ ಡಾನ್ ಆಗಿ ಘೋಷಿಸಿದಾಗಿನಿಂದಲೂ ಚಿತ್ರದ ಬಗ್ಗೆ ಪರ-ವಿರೋಧದ ಚರ್ಚೆಗಳು ನಡೆಯುತ್ತಲೇ ಇವೆ. ‘ಡಾನ್ 3’ಗೆ ತಮ್ಮನ್ನು ಪರಿಗಣಿಸದ ಕಾರಣ ಶಾರುಖ್ ಖಾನ್ ಸಹ ಫರ್ಹಾನ್ ಅಖ್ತರ್ ವಿರುದ್ಧ ಮುನಿಸಿಕೊಂಡಿದ್ದಾರಂತೆ. ಇದೇ ಕಾರಣಕ್ಕೆ ಫರ್ಹಾನ್ ಅಖ್ತರ್, ‘ಡಾನ್ 3’ ಕತೆ ತೆಗೆದುಕೊಂಡು ತಮ್ಮ ಹಳೆಯ ಗೆಳೆಯ ಹೃತಿಕ್ ರೋಷನ್ ಮನೆಗೆ ಹೋಗಿದ್ದಾರೆ. ಹೃತಿಕ್ ಅವರಿಗೂ ಸಹ ಕತೆ ಇಷ್ಟವಾಗಿದೆ ಎನ್ನಲಾಗುತ್ತಿದೆ. ಹೃತಿಕ್ ರೋಷನ್ ಅವರು ಫರಾನ್ ಅಖ್ತರ್ ಅವರ ಇನ್‌ಸ್ಟಾಗ್ರಾಮ್ ಪೋಸ್ಟ್‌ಗೆ ಮಾಡಿರುವ ಒಂದು ಕಾಮೆಂಟ್ ಇಂಟರ್ನೆಟ್‌ನಲ್ಲಿ ಹೊಸ ಸಂಚಲನ ಮೂಡಿಸಿದೆ. ಹೃತಿಕ್ ರೋಷನ್ ಅವರು ಈ ಆಕ್ಷನ್ ಫ್ರಾಂಚೈಸಿಯಲ್ಲಿ ರಣವೀರ್ ಸಿಂಗ್ ಅವರ ಸ್ಥಾನವನ್ನು ಪಡೆಯಲು ಸ್ವತಃ ತಾವೇ ಪಿಚ್ ಮಾಡುತ್ತಿದ್ದಾರೆಯೇ ಎಂದು ನೆಟ್ಟಿಗರು ಊಹಿಸಲು ಪ್ರಾರಂಭಿಸಿದ್ದಾರೆ.

ಇದನ್ನೂ ಓದಿ:‘ಡಾನ್ 3’ ಮಾತ್ರವಲ್ಲ, ನಿಂತು ಹೋದ ರಣ್ವೀರ್ ಸಿಂಗ್ ಸಿನಿಮಾಗಳಿವು

ನಿರ್ದೇಶಕ ಮತ್ತು ನಟ ಫರಾನ್ ಅಖ್ತರ್ ಇತ್ತೀಚೆಗೆ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ತಾವಿರುವ ಹೊಸದೊಂದು ಫೋಟೋವನ್ನು ಹಂಚಿಕೊಂಡಿದ್ದರು. ಇದಕ್ಕೆ ಹೃತಿಕ್ ರೋಷನ್, ‘ಫರ್ಹಾನ್, ಆ ಲುಕ್ ಅದ್ಭುತವಾಗಿದೆ. ನಾವು ಶೀಘ್ರದಲ್ಲೇ ಏನಾದರೂ ಮಾಡಬೇಕಾಗಿದೆ’ ಎಂದು ಕಾಮೆಂಟ್ ಮಾಡಿದ್ದಾರೆ. ಈ ಸಾಮಾನ್ಯ ಕಾಮೆಂಟ್ ತಕ್ಷಣವೇ ಅಭಿಮಾನಿಗಳ ಗಮನ ಸೆಳೆದಿದ್ದು, ಹೃತಿಕ್ ಅವರು ‘ಡಾನ್ 3’ ಚಿತ್ರದ ರೇಸ್‌ಗೆ ಪ್ರವೇಶಿಸುತ್ತಿದ್ದಾರೆಯೇ ಎಂಬ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಅಸಲಿಗೆ ಫರ್ಹಾನ್ ಅಖ್ತರ್ ಮೊದಲ ‘ಡಾನ್’ ಕತೆ ಬರೆಯುವ ಮುಂಚೆ ಹೃತಿಕ್ ಅವರೇ ಅದರಲ್ಲಿ ನಟಿಸಬೇಕಿತ್ತು. ಆದರೆ ಕತೆ ಬರೆಯುವಾಗ ಫರ್ಹಾನ್ ಖಾನ್​​ಗೆ ಈ ಕತೆಗೆ ಶಾರುಖ್ ಹೆಚ್ಚು ಸೂಕ್ತ ಎನಿಸಿದರಂತೆ. ಹೃತಿಕ್ ಅವರು ಸಹ ಫರ್ಹಾನ್ ಅವರ ಅಭಿಪ್ರಾಯಕ್ಕೆ ಗೌರವ ನೀಡಿದ್ದರಂತೆ ಮಾತ್ರವಲ್ಲದೆ, ‘ಡಾನ್ 2’ ಚಿತ್ರದಲ್ಲಿ ಹೃತಿಕ್ ರೋಷನ್ ಅವರು ವಿಶೇಷ ಅತಿಥಿ ಪಾತ್ರದಲ್ಲಿ ಸಹ ನಟಿಸಿದ್ದರು. ಆದರೆ ಈಗ ‘ಡಾನ್ 3’ ಮತ್ತೆ ಹೃತಿಕ್ ರೋಷನ್ ಅವರಿಗೇ ಒಲಿದು ಬಂದಿದೆ.

ಹೃತಿಕ್ ರೋಷನ್ ಪ್ರಸ್ತುತ ‘ಕ್ರಿಶ್’ ಸರಣಿಯ ಹೊಸ ಸಿನಿಮಾದ ಪ್ರೀ ಪ್ರೊಡಕ್ಷನ್​​ನಲ್ಲಿ ತೊಡಗಿಸಿಕೊಂಡಿದ್ದಾರೆ. ಈ ಸಿನಿಮಾವನ್ನು ಖುದ್ದು ಹೃತಿಕ್ ಅವರೇ ನಿರ್ದೇಶನ ಮಾಡಲಿದ್ದಾರೆ. ಇದರ ಜೊತೆಗೆ ‘ವಾರ್ 3’ ಹಾಗೂ ಸಿದ್ಧಾರ್ಥ್ ಆನಂದ್ ನಿರ್ದೇಶನದ ಹೊಸ ಸಿನಿಮಾನಲ್ಲಿ ನಟಿಸಲಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

Viral: ಬೆಂಗಳೂರಲ್ಲಿ 1.4 ಲಕ್ಷ ರೂ ಸಂಬಳ ಇದ್ರೂ , ಊರಲ್ಲಿ ಸಿಗುವ 40 ಸಾವಿರದಲ್ಲೇ ನಾನು ಶ್ರೀಮಂತ; ಯುವಕ ಹೀಗೆಂದಿದ್ದೇಕೆ? – Kannada News

ಒಂದೊಳ್ಳೆ ಜಾಬ್ ಸಿಗ್ಬೇಕು, ಲೈಫ್ ಸೆಟ್ಲ್ ಮಾಡ್ಕೊಳ್ಬೇಕು ಹೀಗೆ ಸಾಕಷ್ಟು ಆಸೆ ಹೊತ್ತು ಬೆಂಗಳೂರಿಗೆ (Bengaluru) ಬರ್ತಾರೆ. ಆದ್ರೆ ದಿನ ಕಳೆದಂತೆ ನಮ್ಮ ಊರು ನೆನಪಾಗುತ್ತದೆ, ಇಲ್ಲಿನ ಬದುಕಿಗಿಂತ ತಮ್ಮ ಊರೇ ಉತ್ತಮ ಎಂದೇನಿಸುತ್ತದೆ. ಇದೀಗ ಬೆಂಗಳೂರಿನಲ್ಲಿ 1.4 ಲಕ್ಷ ರೂಪಾಯಿ ದುಡಿಯುತ್ತಿದ್ದ ಈ ಯುವಕ ತನ್ನ ಊರಲ್ಲಿ 40 ಸಾವಿರ ರೂ ಸಂಪಾದನೆ ಮಾಡ್ತಾ ಇದ್ದಾನೆ. ಕಡಿಮೆ ಸಂಬಳ ಆದ್ರೂ ತನ್ನ ಹುಟ್ಟೂರಿನಲ್ಲಿ ನೆಮ್ಮದಿ ಖುಷಿಯಿದೆಯಂತೆ. ಯುವಕ ಮಾಡಿದ ರೆಡ್ಡಿಟ್ ಪೋಸ್ಟ್ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ನೆಟ್ಟಿಗರು ಮಿಶ್ರ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ.

r/ India Money ಹೆಸರಿನ ರೆಡ್ಡಿಟ್ ಖಾತೆಯಲ್ಲಿ ಹಂಚಿಕೊಳ್ಳಲಾದ ಪೋಸ್ಟ್ ಗೆ ಯುವಕನೊಬ್ಬ ನನ್ನ ಹುಟ್ಟೂರಿನಲ್ಲಿ ಪಟ್ಟಣದಲ್ಲಿ
40 ಸಾವಿರ ರೂ ಸಂಬಳ, ಬೆಂಗಳೂರಿನ 1.4L ಗಿಂತ ಹೆಚ್ಚು ಶ್ರೀಮಂತಿಕೆ ಎನಿಸಿದ್ದು ಯಾಕೆ ಎಂದು ಶೀರ್ಷಿಕೆಯಲ್ಲಿ ಬರೆದುಕೊಂಡಿದ್ದಾನೆ.

ರೆಡ್ಡಿಟ್ ಪೋಸ್ಟ್ ಇಲ್ಲಿದೆ

ಬೆಂಗಳೂರಿನಲ್ಲಿ ತಿಂಗಳಿಗೆ 1.4 ಲಕ್ಷ ರೂಪಾಯಿ ದುಡಿಯುತ್ತಿದ್ದೆ. ದೊಡ್ಡ ಸಿಟಿಯಲ್ಲಿ ಹೆಚ್ಚು ಸಂಬಳ ಬರೀ ಪೇಪರ್ ಮೇಲಿನ ಲೆಕ್ಕ. ನೋಡೋರಿಗೆ ಲಕ್ಷ ಲಕ್ಷ, ಆದರೆ ಈ ಬೆಂಗಳೂರಿನ ಲೈಫ್ ಸ್ಟೈಲ್ ಗೆ ಕೈಯಲ್ಲಿದ್ದ ದುಡ್ಡು ಖಾಲಿಯಾಗುತ್ತದೆ. ಬೆಂಗಳೂರು ಮತ್ತು ಹಾಗೂ ತನ್ನ ಹುಟ್ಟೂರಾದ ಉದಯಪುರದ ತಿಂಗಳ ಖರ್ಚು ವೆಚ್ಚಗಳ ಬಗ್ಗೆ ಎಂದು ವಿವರಿಸಿದ್ದಾನೆ.

2BHK ಫ್ಲ್ಯಾಟ್ ಬಾಡಿಗೆ 30,000 ರೂ, ದಿನಸಿ 6,000 ರೂ, ಮನೆಗೆಲಸದವರು ಹಾಗೂ ವೈಫೈಗೆ 3,000 ರೂ, ಆನ್‌ಲೈನ್‌ ಫುಡ್‌ ಡೆಲಿವರಿ ಆಯಪ್‌ಗಳಿಗೆ 7,000 ರೂ, ಕ್ಯಾಬ್ ಗೆ 5,000 ರೂ, ವೀಕೆಂಡ್ ಪಾರ್ಟಿ, ಟ್ರಾವೆಲಿಂಗ್ 8,000 ರೂ ಎತ್ತಿಡಬೇಕಿತ್ತು. ಅದಲ್ಲದೇ, ಅಮೆಜಾನ್ ಆರ್ಡರ್‌ಗಳು, ಕ್ವಿಕ್ ಕಾಮರ್ಸ್ ಆಯಪ್‌ಗಳು, ಇನ್ನಿತರ ಖರ್ಚುಗಳು ಸೇರಿ ಎಷ್ಟು ದುಡ್ಡಿದ್ರು ಸಾಲದಾಗಿತ್ತು. ತಿಂಗಳಿಗೆ 1.4 ಲಕ್ಷ ರೂಪಾಯಿ ಸಂಬಳ ಬಂದ್ರೂ, ಖರ್ಚು ಮಾತ್ರ ವಿಪರೀತ, ದುಡ್ಡು ಮಾತ್ರ ಉಳಿತ್ತಿರಲಿಲ್ಲ ಎಂದು ಹೇಳಿದ್ದಾನೆ.

ಲಕ್ಷ ಸಂಬಳ ಇದ್ರೂ ನಗರದ ಲೈಫ್ ಸ್ಟೈಲ್ ಹಾಗೂ ಖರ್ಚುಗಳಿಗೆ ಮಾನಸಿಕವಾಗಿ ಕುಗ್ಗಿ ಹೋಗಿದ್ದೆ. ಹೀಗಾಗಿ ನನ್ನ ಹುಟ್ಟೂರು ಉದಯಪುರಕ್ಕೆ ಮರಳಿದೆ. ಊರಲ್ಲಿ ಕೆಲಸಕ್ಕೆ ಸೇರಿಕೊಂಡಾಗ ಮೊದ ಮೊದಲು ಸಂಬಳ ಕಡಿಮೆಯಿತ್ತು. 40 ಸಾವಿರ ರೂ ಸಿಗ್ತಾ ಇತ್ತು. ನನಗೆ ಹೆಚ್ಚು ಶ್ರೀಮಂತನಾದ ಹಾಗೆ ಅನಿಸುತ್ತಿದೆ. ಅದಕ್ಕಿಂತ ಹೆಚ್ಚು ಖುಷಿ, ನೆಮ್ಮದಿ, ಹಣಕಾಸಿನ ಭದ್ರತೆ ನನ್ನ ಊರಲ್ಲಿ ಎಂದು ಹೇಳಿಕೊಂಡಿದ್ದಾನೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ 1BHK ಮನೆಗೆ 45,000 ರೂ ಬಾಡಿಗೆ; ಕಠಿಣ ನಿರ್ಧಾರ ಕೈಗೊಂಡ ಉದ್ಯೋಗಿ

ಈ ಪೋಸ್ಟ್ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ನಿಮ್ಮ ನಿರ್ಧಾರ ನಿಮಗೆ ಸರಿಯೆನಿಸಿದರೆ ಸಾಕು ಎಂದು ಹೇಳಿದ್ದಾರೆ. ಇನ್ನೊಬ್ಬರು, ದುಡ್ಡಿಕ್ಕಿಂತ ನೆಮ್ಮದಿ ಮುಖ್ಯ ಎಂದು ಕಾಮೆಂಟ್ ಮಾಡಿದ್ದಾರೆ. ಮತ್ತೊಬ್ಬರು, ಬೆಂಗಳೂರಿನ ಜೀವನ ಶೈಲಿ ದುಬಾರಿ, ನಿಮ್ಮ ಮಾತು ನಾನು ಒಪ್ಪುತ್ತೇನೆ ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಪಾಕ್ ಉಗ್ರನ ಜತೆ ಯುವಕರಿಬ್ಬರ ನಂಟು ಬೆಸಿದಿದ್ಹೇಗೆ? ಇಲ್ಲಿದೆ ಕರ್ನಾಟಕ-ಪಾಕ್ ಜಾಲದ ರಹಸ್ಯ – Kannada News

ತುಮಕೂರು, ಜೂನ್​​ 05: ದೇಶದ ಭದ್ರತೆಗೆ ಧಕ್ಕೆ ತರಲು ಸಂಚು ರೂಪಿಸಿದ್ದ ಪಾಕಿಸ್ತಾನ ಮೂಲದ ಮೋಸ್ಟ್ ವಾಂಟೆಡ್ ಉಗ್ರ ರಾಣಾ ಉನೇನ್ ಎಂಬಾತನ ವ್ಯವಸ್ಥಿತ ಜಾಲವನ್ನು ಕೇಂದ್ರ ಗುಪ್ತಚರ ಇಲಾಖೆ ಖಚಿತ ಮಾಹಿತಿ ಆಧರಿಸಿ ತುಮಕೂರು (tumakuru) ನಗರ ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದಾರೆ. ಈ ಪಾಕ್ ಉಗ್ರನೊಂದಿಗೆ ಕಳೆದ ಕೇವಲ 20 ದಿನಗಳಿಂದ ನಿರಂತರ ಸಂಪರ್ಕದಲ್ಲಿದ್ದು ಆಂತರಿಕ ಭದ್ರತೆಗೆ ಕುತ್ತು ತರಲು ಯತ್ನಿಸುತ್ತಿದ್ದ ಆಪಾದನೆ ಮೇಲೆ, ತುಮಕೂರಿನ ಅಲ್ಲಾಬಕ್ಷು ಹಾಗೂ ದಾವಣಗೆರೆಯಲ್ಲಿ ತಲೆಮರೆಸಿಕೊಂಡಿದ್ದ ಜಮೀರ್ ಖಾನ್ ಎಂಬ ಇಬ್ಬರು ಯುವಕರನ್ನು ಉಗ್ರ ನಿಗ್ರಹ ಕಾಯ್ದೆಯಡಿ ಪೊಲೀಸರು ಬಂಧಿಸಿದ್ದಾರೆ.

ಮುಖ್ಯಾಂಶಗಳು

  • ಪಾಕ್ ಉಗ್ರನ ಜಾಲಕ್ಕೆ ಬಿದ್ದ ರಾಜ್ಯದ ಯುವಕರು
  • ಇನ್‌ಸ್ಟಾಗ್ರಾಮ್ ಟು ವಾಟ್ಸ್ ಆ್ಯಪ್ ಗ್ರೂಪ್​​​ ಮೂಲಕ ಸಂಪರ್ಕ
  • ಇಬ್ಬರು ಯುವಕರನ್ನು ಬಂಧಿಸಿದ ಪೊಲೀಸರು

ವ್ಯವಸ್ಥಿತ ಸಂಚಿಗೆ ಭಾರತೀಯ ಯುವಕರು ಟಾರ್ಗೆಟ್?

ಪಾಕಿಸ್ತಾನದ ಅದೊಂದು ವ್ಯವಸ್ಥಿತ ಸಂಚಿಗೆ ಭಾರತೀಯ ಯುವಕರು ಟಾರ್ಗೆಟ್ ಆಗಿದ್ದಾರಾ ಅನ್ನೋ ಬಲವಾದ ಅನುಮಾನ ಈಗ ಶುರುವಾಗಿದೆ. ಏಕೆಂದರೆ ಗುಪ್ತಚರ ದಳ ನೀಡಿದ ಸ್ಪೋಟಕ ಮಾಹಿತಿ ಆಧರಿಸಿ ತುಮಕೂರು ಪೊಲೀಸರು ಇಬ್ಬರು ಯುವಕರನ್ನು ಹೆಡೆಮುರಿ ಕಟ್ಟಿದ್ದಾರೆ. ಬಂಧಿತರು ಕೇವಲ 20 ದಿನಗಳಲ್ಲಿ ನಡೆಸಿದ ಚರ್ಚೆಗಳು, ಈಗ ಹತ್ತಾರು ಆತಂಕಕಾರಿ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಸಮುದಾಯದ ಒಗ್ಗಟ್ಟು ಮುಖ್ಯ ಎಂದು ವಾಟ್ಸ್ ಆ್ಯಪ್ ಗ್ರೂಪ್‌ಗಳನ್ನು ಮಾಡಿಕೊಂಡು ಬ್ರೈನ್ ವಾಶ್ ಮಾಡುತ್ತಿದ್ದ ಪಾಕಿಸ್ತಾನಿ ಉಗ್ರನ ಭೀಕರ ತಂತ್ರ ಈಗ ಬಯಲಾಗಿದ್ದು, ಪೊಲೀಸರ ತನಿಖೆ ತೀವ್ರಗೊಂಡಿದೆ.

ಇದನ್ನೂ ಓದಿ: ವರ್ಷಗಳಿಂದ ಪರಪ್ಪನ ಅಗ್ರಹಾರ​ ಜೈಲಿನಲ್ಲಿದ್ದ ಶಂಕಿತ ಉಗ್ರ ಚಿಕಿತ್ಸೆ ಫಲಿಸದೆ ಸಾವು!

ರಾಣಾ ಉನೇನ್​ ಈತ ಸದ್ಯ ಭಾರತದ ರಾಷ್ಟ್ರೀಯ ತನಿಖಾ ಸಂಸ್ಥೆಗಳಿಗೆ ಬೇಕಾಗಿರುವ ಮೋಸ್ಟ್ ವಾಂಟೆಡ್ ಕ್ರಿಮಿನಲ್. ಪಾಕಿಸ್ತಾನ ಮೂಲದ ಈ ಉಗ್ರ ಭಾರತದ ಹಲವು ಮುಗ್ಧ ಯುವಕರನ್ನು ಸಾಮಾಜಿಕ ಜಾಲತಾಣಗಳ ಮೂಲಕ ಸಂಪರ್ಕಿಸಿ, ವಿಧ್ವಂಸಕ ಕೃತ್ಯಗಳಿಗೆ ಸಂಘಟನೆ ಕಟ್ಟುತ್ತಿದ್ದ ಅನ್ನೋ ಆಘಾತಕಾರಿ ಸತ್ಯ ಈಗ ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ಇನ್‌ಸ್ಟಾಗ್ರಾಮ್​​ ಮುಖಾಂತರ ಪರಿಚಯ

ಅಷ್ಟಕ್ಕೂ ಪೊಲೀಸರ ಬಲೆಗೆ ಬಿದ್ದಿರುವವರು ಸಣ್ಣಪುಟ್ಟ ಕೆಲಸ ಮಾಡಿಕೊಂಡಿದ್ದ ಸಾಮಾನ್ಯ ಯುವಕರು. ಇವರಿಗೆ ಕಳೆದ ಒಂದು ತಿಂಗಳ ಹಿಂದೆ ಪ್ರತ್ಯೇಕವಾಗಿ ಇನ್‌ಸ್ಟಾಗ್ರಾಮ್​​ ಮುಖಾಂತರ ರಾಣಾ ಜೊತೆ ಪರಿಚಯವಾಗಿದೆ. ನಂತರ ಎಕ್ಸ್​​ನಲ್ಲಿ ಹಲವು ಸಲ ಚಾಟ್ ಮಾಡಿದ್ದಾರೆ. ನಂತರ ವಾಟ್ಸ್ ಆ್ಯಪ್ ಗ್ರೂಪ್​​ ಒಂದಕ್ಕೆ ಸೇರಿಕೊಂಡಿದ್ದಾರೆ. ಆರಂಭದಲ್ಲಿ ಇಸ್ಲಾಂ ಧರ್ಮದ ಕುರಿತು ಸಂದೇಶ, ಪ್ರವಾದಿಗಳ ಮಾತುಗಳನ್ನು ಚರ್ಚೆ ಮಾಡಿದ್ದ ರಾಣಾ, ನಂತರ ನಾವೆಲ್ಲಾ ಒಟ್ಟಾಗಬೇಕು ಅಂತೆಲ್ಲಾ ಪ್ರಚೋದಿಸಿ, ಕ್ರಮೇಣ ದೇಶದ ವಿರುದ್ಧ ಪ್ರತೀಕಾರ ತೀರಿಸಿಕೊಳ್ಳುವ ಚರ್ಚೆ ಆರಂಭಿಸಿದ್ದ ಎನ್ನಲಾಗಿದೆ.

ಪುಣೆ ಮೌಲ್ವಿ ಹತ್ಯೆಗೆ ಪ್ರತೀಕಾರದ ಸ್ಕೆಚ್​​

ಇನ್ನು ಒಗ್ಗಟ್ಟಿನ ಸಂದೇಶ ನೀಡಿದ್ದ ರಾಣಾ ಪುಣೆಯಲ್ಲಿ ನಡೆದಿದ್ದ ಮೌಲ್ವಿ ಹತ್ಯೆಗೆ ಪ್ರತಿಕಾರದ ಮಾತುಗಳನ್ನಾಡಿದ್ದ ಎನ್ನಲಾಗಿದೆ. ಇದಕ್ಕೆ ಬೇಕಾದ ತಯಾರಿ ಬಗ್ಗೆ ಸಹ ಚರ್ಚೆ ನಡೆಸಿದ್ದ. ನಮ್ಮ ಸಮುದಾಯದವರೆಲ್ಲಾ ಒಗ್ಗಟ್ಟಾಗಿರಬೇಕು. ಯಾರನ್ನು ಯಾವ ಕಾರಣಕ್ಕೂ ಬಿಡಬಾರದು. ಪ್ರತಿಕಾರ ಇರಬೇಕೆಂದು ಹೇಳಿದ್ದನಂತೆ. ಇನ್ನು ದೇಶದ ಹಲವೆಡೆ ರಾಣಾ ಹಿಂಬಾಲಕರನ್ನು ಹೊಂದಿದ್ದು, ಅವರಲ್ಲಿ ಒಬ್ಬ ಅಲ್ಲಾಬಕ್ಷು ಹಾಗೂ ಜಮೀರ್ ಖಾನ್​ನನ್ನು ಪರಿಚಯ ಮಾಡಿದ್ದನಂತೆ.

ದಾವಣಗೆರೆ ಎಸ್​ಪಿ ಡಾ.ಎಚ್ ಟಿ ಶೇಖರ್ ಹೇಳಿದ್ದಿಷ್ಟು

ಇನ್ನು ಈ ಬಗ್ಗೆ ದಾವಣಗೆರೆ ಎಸ್​ಪಿ ಡಾ.ಎಚ್ ಟಿ ಶೇಖರ್​ ಮಾತನಾಡಿದ್ದು, ತುಮಕೂರು ಪೊಲೀಸರು ಬಂದಿದ್ದರು. ಸ್ಥಳೀಯ ಪೊಲೀಸರ ಸಹಕಾರದಿಂದ ಓರ್ವ ಯುವಕನನ್ನು ವಶಕ್ಕೆ ಪಡೆದಿರುವುದು ನಿಜ. ಆದರೆ ಇದರ ಬಗ್ಗೆ ಹೆಚ್ಚಿನ‌ ಮಾಹಿತಿ ತುಮಕೂರು ಪೊಲೀಸರಿಗೆ ಇದೆ ಎಂದು ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ: ದೇಶ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿದ ಆರೋಪ: ಕೋಲಾರದ ಬಾಲಕ ಅರೆಸ್ಟ್

ಸದ್ಯ ರಾಣಾ ಜೊತೆ ಈ ಇಬ್ಬರು ಯುವಕರ ಸಂಪರ್ಕದ ಮಾಹಿತಿ ತಿಳಿದ ಗುಪ್ತಚರ ಇಲಾಖೆ ತುಮಕೂರು ನಗರ ಪೊಲೀಸರಿಗೆ ಮಾಹಿತಿ ನೀಡಿತ್ತು. ಮಾಹಿತಿ ಆಧರಿಸಿ ತುಮಕೂರಿನಲ್ಲಿ ಅಲ್ಲಾಬಕ್ಷು ಹಾಗೂ ದಾವಣಗೆರೆಯಲ್ಲಿ ಜಮೀರ್ ಖಾನ್​​ನನ್ನು ಬಂಧಿಸಿದ್ದಾರೆ. ಸದ್ಯ ಪೊಲೀಸರು ರಾಣಾನ ಹಿನ್ನೆಲೆ ಹಾಗೂ ಯಾವ ಸಂಘಟನೆಯಲ್ಲಿ ಈತ ತೊಡಗಿದ್ದಾನೆಂಬ ಮತ್ತಷ್ಟು ಮಾಹಿತಿ ಕಲೆ ಹಾಕುತ್ತಿದ್ದು, ತನಿಖೆ ಚುರುಕುಗೊಂಡಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On – 7:22 pm, Fri, 5 June 26

Source link

‘ಜನ ನಾಯಗನ್’: ವಿತರಕರಿಗೆ ಹಣ ಮರಳಿಸುವಂತೆ ನಿರ್ಮಾಪಕರಿಗೆ ವಿಜಯ್ ಸೂಚನೆ – Kannada News

ವಿಜಯ್ (Vijay) ನಟನೆಯ ಕೊನೆಯ ಸಿನಿಮಾ ‘ಜನ ನಾಯಗನ್’ ಇನ್ನೂ ಬಿಡುಗಡೆ ಆಗಿಲ್ಲ. ಜನವರಿ ತಿಂಗಳಲ್ಲೇ ಬಿಡುಗಡೆ ಆಗಬೇಕಿದ್ದ ಈ ಸಿನಿಮಾ ರಾಜಕೀಯ ಕುತಂತ್ರಗಳಿಗೆ ಸಿಲುಕಿ ಇನ್ನೂ ಬಿಡುಗಡೆ ಆಗಿಲ್ಲ. ವಿತರಕರು, ಪ್ರದರ್ಶಕರು ನಿರ್ಮಾಪಕರಿಗೆ ಭಾರಿ ಮೊತ್ತದ ಹಣ ಕೊಟ್ಟು ಸಿನಿಮಾ ಬಿಡುಗಡೆ ಮಾಡಲು ಕಾಯುತ್ತಿರುವಾಗ, ಸಿನಿಮಾದ ಬಿಡುಗಡೆಯನ್ನು ಹಠಾತ್ತಾಗಿ ತಡೆ ಹಿಡಿಯಲಾಗಿತ್ತು. ಹಣ ಕೊಟ್ಟ ನಿರ್ಮಾಪಕರು ತಿಂಗಳಾನುಗಟ್ಟಲೆ ಕಾದರೂ ಸಹ ಸಿನಿಮಾ ಬಿಡುಗಡೆ ಆಗಿಲ್ಲ. ಇದೀಗ ವಿಜಯ್ ಸೂಚನೆ ಮೇರೆಗೆ ನಿರ್ಮಾಪಕರು ವಿತರಕರ ಹಣ ಮರಳಿಸಿದ್ದಾರೆ ಎನ್ನಲಾಗುತ್ತಿದೆ.

ಕೆವಿಎನ್ ನಿರ್ಮಾಣ ಸಂಸ್ಥೆಯು ‘ಜನ ನಾಯಗನ್’ ನಿರ್ಮಾಣ ಮಾಡಿದ್ದು, ವಿತರಕರಿಂದ ಹಣ ಪಡೆದು ಸಾಕಷ್ಟು ಮಂದಿಗೆ ಸಿನಿಮಾದ ಬಿಡುಗಡೆ ಹಕ್ಕು ನೀಡಿತ್ತು. ಆದರೆ ಸಿನಿಮಾ ಬಿಡುಗಡೆ ಮುಂದೂಡಿ ತಿಂಗಳುಗಳೇ ಕಳೆದರೂ ಸಹ ಸಿನಿಮಾ ಬಿಡುಗಡೆ ಬಗ್ಗೆ ಯಾವುದೇ ಖಾತ್ರಿ ಸಿಗುತ್ತಿಲ್ಲ. ಹೀಗಾಗಿ ವಿತರಕರಿಗೆ ಹಣ ಮರಳಿಸುವಂತೆ ವಿಜಯ್, ನಿರ್ಮಾಪಕರಿಗೆ ಹೇಳಿದ್ದು, ಅದರನ್ವಯ, ನಿರ್ಮಾಣ ಸಂಸ್ಥೆಯೂ ಸಹ ವಿತರಕರಿಗೆ ಹಣ ಮರಳಿಸಿದೆ ಎನ್ನಲಾಗಿದೆ.

ಇದನ್ನೂ ಓದಿ:ಸಿಎಂ ವಿಜಯ್ ಭೇಟಿ ಮಾಡಿದ ‘ಕರುಪ್ಪು’ ಸಿನಿಮಾದ ನಿರ್ದೇಶಕ ಆರ್.ಜೆ. ಬಾಲಾಜಿ

ಕೆವಿಎನ್ ನಿರ್ಮಾಣ ಸಂಸ್ಥೆಯ ಬ್ಯುಸಿನೆಸ್ ಹೆಡ್ ಆಗಿರುವ ಮೋಹಿತ್ ಅವರು ಮಾಧ್ಯಮಕ್ಕೆ ನೀಡಿರುವ ಪ್ರತಿಕ್ರಿಯೆಯಲ್ಲಿ ಈ ಬಗ್ಗೆ ಸ್ಪಷ್ಟನೆ ನೀಡಿದ್ದು, ತಾವು ಎಲ್ಲ ವಿತರಕರಿಗೆ ಹಣ ಮರಳಿಸಿರುವುದಾಗಿ ಹೇಳಿದ್ದಾರಂತೆ. ‘ಸಿನಿಮಾ ಬಿಡುಗಡೆ ಬಗ್ಗೆ ದಿನಾಂಕ ನಿಗದಿ ಆಗದೇ ಇರುವ ಕಾರಣಕ್ಕಾಗಿ, ಚಲನಚಿತ್ರ ವಿತರಕರಿಗೆ ಹಣವನ್ನು ಮರುಪಾವತಿಸಲು ನಿರ್ಧರಿಸಿದ್ದೇವೆ. ಅವರನ್ನು ಕಾಯುವಂತೆ ಮಾಡುವುದು ಅನ್ಯಾಯ ಎಂದು ನಾವು ಭಾವಿಸಿದ್ದೇವೆ, ಆದರೆ ನಾವು ಇನ್ನೂ ಸಂಭವನೀಯ ಬಿಡುಗಡೆ ದಿನಾಂಕಕ್ಕಾಗಿ ಕಾಯುತ್ತಿದ್ದೇವೆ’ ಎಂದಿದ್ದಾರೆ. ಕೆವಿಎನ್ ಅವರ ಈ ಉತ್ತಮ ನಿರ್ಧಾರದ ಹಿಂದೆ ವಿಜಯ್ ಇದ್ದಾರೆ ಎನ್ನಲಾಗುತ್ತಿದೆ.

ವಿಜಯ್ ಅವರು ರಾಜಕೀಯ ಪಕ್ಷ ಘೋಷಿಸಿದ ಬಳಿಕ ತಮಿಳುನಾಡು ವಿಧಾನಸಭೆ ಚುನಾವಣೆಗೆ ಮುಂಚೆ ‘ಜನ ನಾಯಗನ್’ ತಮ್ಮ ಕೊನೆಯ ಸಿನಿಮಾ ಎಂದಿದ್ದರು. ಕೆವಿಎನ್ ಅವರು ಸಿನಿಮಾಕ್ಕೆ ಬಂಡವಾಳ ಹೂಡಿ, ಎಚ್ ವಿನೋದ್ ನಿರ್ದೇಶನ ಮಾಡಿದ್ದ ‘ಜನ ನಾಯಗನ್’ ಅದ್ಧೂರಿಯಾಗಿ ನಿರ್ಮಾಣವಾಗಿತ್ತು. ಜನವರಿ ತಿಂಗಳಲ್ಲಿ ಸಂಕ್ರಾಂತಿ ಹಬ್ಬಕ್ಕೆ ಸಿನಿಮಾ ಬಿಡುಗಡೆ ಆಗಬೇಕಿತ್ತು. ಆದರೆ ಹಿಂದಿನ ದಿನ ಸಿಬಿಎಫ್​​ಸಿಯು ಪ್ರಮಾಣ ಪತ್ರ ನೀಡಲು ನಿರಾಕರಿಸಿತು. ಕೆವಿಎನ್ ನಿರ್ಮಾಣ ಸಂಸ್ಥೆ, ಸಿಬಿಎಫ್​​ಸಿ ವಿರುದ್ಧ ನ್ಯಾಯಾಲಯದ ಮೆಟ್ಟಿಲೇರಿತಾದರೂ ಅದು ಉಪಯೋಗವಾಗಲಿಲ್ಲ. ಈಗ ವಿಜಯ್ ಸಿಎಂ ಆಗಿದ್ದಾರೆ. ಆದರೂ ಸಹ ಈ ವರೆಗೆ ಸಿನಿಮಾ ಬಿಡುಗಡೆಗೆ ಅನುಮತಿ ದೊರೆತಿಲ್ಲ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

IND vs AFG: ಭಾರತ- ಅಫ್ಘನ್ ಟೆಸ್ಟ್ ಪಂದ್ಯ ಎಷ್ಟು ಗಂಟೆಗೆ ಆರಂಭ? ಯಾವ ಚಾನೆಲ್​ನಲ್ಲಿ ನೇರಪ್ರಸಾರ? – Kannada News

ಟೀಂ ಇಂಡಿಯಾ ಬರೋಬ್ಬರಿ 193 ದಿನಗಳ ನಂತರ ಟೆಸ್ಟ್ ಪಂದ್ಯವನ್ನು ಆಡಲು ಸಜ್ಜಾಗಿದೆ. ಭಾರತ ಮತ್ತು ಅಫ್ಘಾನಿಸ್ತಾನ (India vs Afghanistan) ನಡುವಿನ ಏಕೈಕ ಟೆಸ್ಟ್ ಪಂದ್ಯಕ್ಕೆ ಕ್ಷಣಗಣನೆ ಶುರುವಾಗಿದೆ. ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಭಾರತ ಮತ್ತು ಅಫ್ಘಾನಿಸ್ತಾನ ತಂಡಗಳು ಈ ಮಾದರಿಯಲ್ಲಿ ಪರಸ್ಪರ ಮುಖಾಮುಖಿಯಾಗುತ್ತಿರುವುದು ಇದು ಕೇವಲ ಎರಡನೇ ಬಾರಿ. 2018 ರಲ್ಲಿ ಬೆಂಗಳೂರಿನಲ್ಲಿ ಉಭಯ ತಂಡಗಳ ನಡುವಿನ ಏಕೈಕ ಟೆಸ್ಟ್ ಪಂದ್ಯ ನಡೆದಿತ್ತು, ಅಲ್ಲಿ ಭಾರತ ತಂಡ ಏಕಪಕ್ಷೀಯ ಪ್ರದರ್ಶನ ನೀಡಿ ಇನ್ನಿಂಗ್ಸ್ ಮತ್ತು 262 ರನ್‌ಗಳ ಅದ್ಭುತ ಜಯ ಸಾಧಿಸಿತು. ಈಗ, ಎಂಟು ವರ್ಷಗಳ ದೀರ್ಘ ಕಾಯುವಿಕೆಯ ನಂತರ, ಈ ಎರಡೂ ತಂಡಗಳು ಟೆಸ್ಟ್ ಕ್ರಿಕೆಟ್‌ನಲ್ಲಿ ಮತ್ತೆ ಮುಖಾಮುಖಿಯಾಗಲು ಸಜ್ಜಾಗಿವೆ.

ಮುಖಾಮುಖಿ ದಾಖಲೆ ಹೇಗಿದೆ?

ಭಾರತ ತಂಡವು ಕಳೆದ ವರ್ಷ ನವೆಂಬರ್‌ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ತನ್ನ ಕೊನೆಯ ಟೆಸ್ಟ್ ಪಂದ್ಯವನ್ನು ಆಡಿತು. ಅಂದಿನಿಂದ, ತಂಡವು ನಿರಂತರವಾಗಿ ಸೀಮಿತ ಓವರ್‌ಗಳ ಕ್ರಿಕೆಟ್‌ನಲ್ಲಿ ತೊಡಗಿಸಿಕೊಂಡಿದೆ. ಹೀಗಾಗಿ ಅಫ್ಘಾನಿಸ್ತಾನ ವಿರುದ್ಧದ ಟೆಸ್ಟ್ ಪಂದ್ಯವು ಆಟಗಾರರು ಮತ್ತು ಅಭಿಮಾನಿಗಳಿಗೆ 193 ದಿನಗಳ ಬರವನ್ನು ಕೊನೆಗೊಳಿಸಲಿದೆ. ಶುಭಮನ್ ಗಿಲ್ ನಾಯಕತ್ವದಲ್ಲಿ, ಯುವ ಮತ್ತು ಅನುಭವಿ ಆಟಗಾರರಿಂದ ತುಂಬಿರುವ ಭಾರತೀಯ ತಂಡವು ಈ ಪಂದ್ಯವನ್ನು ಆಡಲು ಸಜ್ಜಾಗಿದೆ. ಈ ಪಂದ್ಯವು ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್​ನ ಭಾಗವಾಗಿಲ್ಲದಿದ್ದರೂ, ಎರಡೂ ತಂಡಗಳು ತಮ್ಮ ರೆಡ್-ಬಾಲ್ ಸಿದ್ಧತೆಗಳನ್ನು ಪರೀಕ್ಷಿಸಲು ಇದು ಅತ್ಯುತ್ತಮ ವೇದಿಕೆಯಾಗಿದೆ.

IND vs AFG: ಟೀಂ ಇಂಡಿಯಾಗೆ ಆಘಾತ; ಟೆಸ್ಟ್ ಪಂದ್ಯಕ್ಕೆ ಸ್ಟಾರ್ ವೇಗಿ ಅಲಭ್ಯ

ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಟೆಸ್ಟ್ ಪಂದ್ಯ ಯಾವಾಗ ನಡೆಯಲಿದೆ?

ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಟೆಸ್ಟ್ ಪಂದ್ಯ ಜೂನ್ 6 ರಿಂದ ಆರಂಭವಾಗಲಿದೆ.

ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಟೆಸ್ಟ್ ಪಂದ್ಯ ಎಲ್ಲಿ ನಡೆಯಲಿದೆ?

ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಟೆಸ್ಟ್ ಪಂದ್ಯ ಚಂಡೀಗಢದ ಮುಲ್ಲನ್‌ಪುರದಲ್ಲಿರುವ ಮಹಾರಾಜ ಯಾದವೀಂದ್ರ ಸಿಂಗ್ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ.

ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಟೆಸ್ಟ್ ಪಂದ್ಯ ಎಷ್ಟು ಗಂಟೆಗೆ ಆರಂಭ?

ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಟೆಸ್ಟ್ ಪಂದ್ಯ ಭಾರತೀಯ ಕಾಲಮಾನ ಬೆಳಿಗ್ಗೆ 9:30 ಕ್ಕೆ ಆರಂಭವಾಗಲಿದೆ.

ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಟೆಸ್ಟ್ ಪಂದ್ಯವನ್ನು ಎಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ?

ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಟೆಸ್ಟ್ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ರಷ್ಯಾ-ಉಕ್ರೇನ್ ಯುದ್ಧಕ್ಕೆ ಬೀಳುತ್ತಾ ತೆರೆ? ಶಾಂತಿ ಮಾತುಕತೆಯ ಸುಳಿವು ನೀಡಿದ ಪುಟಿನ್ – Kannada News

ಮಾಸ್ಕೋ, ಜೂನ್ 5: ರಷ್ಯಾ ಮತ್ತು ಉಕ್ರೇನ್ (Ukraine) ನಡುವಿನ ದೀರ್ಘಾವಧಿಯ ಯುದ್ಧಕ್ಕೆ ಕೊನೆಗೂ ತೆರೆ ಬೀಳುವ ಲಕ್ಷಣಗಳು ಕಾಣಿಸುತ್ತಿವೆ. ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಅವರ ಪ್ರಸ್ತಾಪದ ಅಡಿಯಲ್ಲಿ ಯುದ್ಧವನ್ನು ಕೊನೆಗೊಳಿಸಿ, ಶಾಂತಿ ಮಾತುಕತೆಗೆ ತಾವು ಸಿದ್ಧರಿರುವುದಾಗಿ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಸುಳಿವು ನೀಡಿದ್ದಾರೆ. ಅಂತಾರಾಷ್ಟ್ರೀಯ ಸಮಾವೇಶವೊಂದರಲ್ಲಿ ಮಾತನಾಡಿದ ವ್ಲಾಡಿಮಿರ್ ಪುಟಿನ್, “ನಾವು ಮೊದಲಿನಿಂದಲೂ ಶಾಂತಿ ಮಾತುಕತೆಯ ಪರವಾಗಿಯೇ ಇದ್ದೇವೆ. ಡೊನಾಲ್ಡ್ ಟ್ರಂಪ್ ಯುದ್ಧವನ್ನು ಕೊನೆಗೊಳಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದು, ಅವರ ಪ್ರಸ್ತಾಪಗಳನ್ನು ನಾವು ಸ್ವಾಗತಿಸುತ್ತೇವೆ” ಎಂದು ಹೇಳಿದ್ದಾರೆ.

ಯುದ್ಧ ನಿಲ್ಲಿಸಲು ರಷ್ಯಾ ತನ್ನದೇ ಆದ ಕೆಲವು ಷರತ್ತುಗಳನ್ನು ವಿಧಿಸಿದೆ. ಪ್ರಸ್ತುತ ಯುದ್ಧಭೂಮಿಯಲ್ಲಿನ ವಾಸ್ತವ ಸ್ಥಿತಿ ಮತ್ತು ಈ ಹಿಂದೆ ಇಸ್ತಾನ್‌ಬುಲ್‌ನಲ್ಲಿ ನಡೆದ ಮಾತುಕತೆಯ ನಿಯಮಗಳನ್ನು ಆಧರಿಸಿ ಶಾಂತಿ ಒಪ್ಪಂದ ನಡೆಯಬೇಕು ಎಂದು ಪುಟಿನ್ ಸ್ಪಷ್ಟಪಡಿಸಿದ್ದಾರೆ. ಅಮೆರಿಕದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಾಗಿನಿಂದಲೂ ಡೊನಾಲ್ಡ್ ಟ್ರಂಪ್ ರಷ್ಯಾ-ಉಕ್ರೇನ್ ಯುದ್ಧವನ್ನು 24 ಗಂಟೆಗಳಲ್ಲಿ ನಿಲ್ಲಿಸುವುದಾಗಿ ಹೇಳುತ್ತಾ ಬಂದಿದ್ದಾರೆ.

ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರು ಈ ಹಿಂದೆ ತಮ್ಮ ಭೂಭಾಗವನ್ನು ರಷ್ಯಾಕ್ಕೆ ಬಿಟ್ಟುಕೊಡುವ ಒಪ್ಪಂದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಆದರೆ, ಅಮೆರಿಕದಿಂದ ಸಿಗುತ್ತಿರುವ ಮಿಲಿಟರಿ ಧನಸಹಾಯದ ಕೊರತೆ ಮತ್ತು ಜಾಗತಿಕ ಒತ್ತಡದಿಂದಾಗಿ ಉಕ್ರೇನ್ ಕೂಡ ಈಗ ಮಣಿಯುವ ಪರಿಸ್ಥಿತಿಗೆ ಬಂದು ತಲುಪಿದೆ ಎನ್ನಲಾಗಿದೆ.

ಇದನ್ನೂ ಓದಿ: Video: ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ, ವಿಡಿಯೋ ಇಲ್ಲಿದೆ

ಕಳೆದ ವರ್ಷ ಅಲಾಸ್ಕಾದ ಆಂಕರೇಜ್‌ನಲ್ಲಿ ಡೊನಾಲ್ಡ್ ಟ್ರಂಪ್ ಅವರೊಂದಿಗೆ ನಡೆದ ಭೇಟಿಯನ್ನು ನೆನಪಿಸಿಕೊಂಡ ಪುಟಿನ್, ಆ ಮಾತುಕತೆಯೇ ಯುದ್ಧದ ಅಂತ್ಯಕ್ಕೆ ದಾರಿಯಾಗಬಲ್ಲದು ಎಂದಿದ್ದಾರೆ. “ಆಂಕರೇಜ್ ಸಭೆಯಲ್ಲಿ ಚರ್ಚಿಸಲಾದ ರಾಜಿ ಸೂತ್ರಗಳಿಗೆ ರಷ್ಯಾ ಈಗಾಗಲೇ ಒಪ್ಪಿಗೆ ಸೂಚಿಸಿದೆ. ಈಗ ಉಕ್ರೇನ್ ಕೂಡ ಅದಕ್ಕೆ ಸಮ್ಮತಿಸಿದರೆ, ಈ ಸಂಘರ್ಷವು ಅತ್ಯಂತ ಸಹಜವಾಗಿ ಮತ್ತು ಶೀಘ್ರವಾಗಿ ಕೊನೆಗೊಳ್ಳುತ್ತದೆ” ಎಂದು ಪುಟಿನ್ ಹೇಳಿದ್ದಾರೆ. ಆದರೆ ಆ ರಾಜಿ ಸೂತ್ರಗಳು ಯಾವುವು ಎಂಬುದನ್ನು ಅವರು ಬಹಿರಂಗಪಡಿಸಿಲ್ಲ.

ಮತ್ತೊಂದೆಡೆ, ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರು ರಷ್ಯಾ ಅಧ್ಯಕ್ಷರಿಗೆ ಬಹಿರಂಗ ಪತ್ರ ಬರೆಯುವ ಮೂಲಕ ನೇರ ಮಾತುಕತೆಗೆ ಪ್ರಸ್ತಾಪ ಇಟ್ಟಿದ್ದಾರೆ. “ಈ ಯುದ್ಧವನ್ನು ಕೊನೆಗೊಳಿಸಲು ನಾವು ಮತ್ತು ನೀವು ಮುಖಾಮುಖಿ ಭೇಟಿಯಾಗುವುದು ಅಗತ್ಯ” ಎಂದು ಝೆಲೆನ್ಸ್ಕಿ ಕೋರಿದ್ದಾರೆ. ಅಲ್ಲದೆ, ಯಾವುದೇ ಪ್ರಮುಖ ಮಾತುಕತೆಗೂ ಮುನ್ನ ಸಂಪೂರ್ಣ ಕದನ ವಿರಾಮ ಘೋಷಿಸಬೇಕು ಎಂದು ಅವರು ಪ್ರತಿಪಾದಿಸಿದ್ದಾರೆ.

ಇದನ್ನೂ ಓದಿ: 

2022ರಲ್ಲಿ ರಷ್ಯಾದ ಆಕ್ರಮಣದೊಂದಿಗೆ ಆರಂಭವಾದ ಈ ಯುದ್ಧವನ್ನು ನಿಲ್ಲಿಸಲು ಈ ಹಿಂದೆ ಜಿನೀವಾ, ಅಬುಧಾಬಿ ಮತ್ತು ಇಸ್ತಾನ್‌ಬುಲ್‌ನಲ್ಲಿ ನಡೆದ ಮಾತುಕತೆಗಳು ವಿಫಲವಾಗಿದ್ದವು. ಸದ್ಯ ಪುಟಿನ್ ಮತ್ತು ಝೆಲೆನ್ಸ್ಕಿ ಇಬ್ಬರೂ ಮಾತುಕತೆಯ ಸೂಚನೆ ನೀಡಿದ್ದರೂ, ಭೂಪ್ರದೇಶದ ಹಕ್ಕು ಮತ್ತು ಭದ್ರತೆಯ ವಿಚಾರದಲ್ಲಿ ಇಬ್ಬರ ನಡುವೆ ಇರುವ ಭಿನ್ನಾಭಿಪ್ರಾಯಗಳ ಕಾರಣದಿಂದ ಈ ಮಾತುಕತೆ ಫಲಪ್ರದವಾಗಲಿದೆಯೇ ಎಂಬ ಅನುಮಾನ ಮಾತ್ರ ಹಾಗೆಯೇ ಉಳಿದಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 7:21 pm, Fri, 5 June 26

Source link

ಚುರುಕು ಮುಟ್ಟಿಸಿದ ಡಿಕೆಶಿ:ಸರ್ಕಾರಿ ನೌಕರರು ಬೆಳಿಗ್ಗೆ 10 ಗಂಟೆಯೊಳಗೆ ಕಚೇರಿಗೆ ಹಾಜರಾಗುವುದು ಕಡ್ಡಾಯ – Kannada News

ಬೆಂಗಳೂರು, (ಜೂನ್ 05) : ರಾಜ್ಯ ಸರ್ಕಾರದ ಪ್ರತಿಯೊಬ್ಬ ಅಧಿಕಾರಿ ಮತ್ತು ಸಿಬ್ಬಂದಿ (karnataka government employees) ಪ್ರತಿದಿನ ಬೆಳಿಗ್ಗೆ 10 ಗಂಟೆಯೊಳಗೆ ಕಚೇರಿಗೆ ಹಾಜರಾಗಬೇಕೆಂದು ಕಟ್ಟುನಿಟ್ಟಿನ ಆದೇಶ ಹೊರಡಿಸಲಾಗಿದೆ. ಸಿಎಂ ಡಿಕೆ ಶಿವಕುಮಾರ್  (DK Shivakumar) ಅವರ ಖಡಕ್ ಸೂಚನೆ ಬೆನ್ನಲ್ಲೇ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಇಂದು (ಜೂನ್ 05) ಅಧಿಕಾರಿಗಳಿಗೆ ಈ ಆದೇಶ ಹೊರಡಿಸಿದ್ದು, ಹಾಜರಾತಿಗೆ ‘ಕರ್ತವ್ಯ ಆ್ಯಪ್’ (Kartavya App) ಬಳಕೆ ಕುರಿತು ಕೆಳಗಿನ ನಿರ್ದೇಶನಗಳನ್ನು ಪಾಲಿಸಬೇಕು. ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿ ಚೆಕ್ ಇನ್, ಚೆಕ್ ಔಟ್ ಮಾಡಬೇಕು ಎಂದು ಆದೇಶದಲ್ಲಿ ಸೂಚಿಸಲಾಗಿದೆ.

ದಿನಾಂಕ 04-06-2026 ರಂದು ನಡೆದ ಸಭೆಯಲ್ಲಿ ಮುಖ್ಯಮಂತ್ರಿಗಳು, ರಾಜ್ಯ ಸರ್ಕಾರದ ಪ್ರತಿಯೊಬ್ಬ ಅಧಿಕಾರಿ ಮತ್ತು ಸಿಬ್ಬಂದಿ ಪ್ರತಿದಿನ ಬೆಳಿಗ್ಗೆ 10 ಗಂಟೆಯೊಳಗೆ ಕಚೇರಿಗೆ ಹಾಜರಾಗಬೇಕೆಂದು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ‘ಕರ್ತವ್ಯ ಆ್ಯಪ್’ (Kartavya App) ಬಳಕೆ ಕುರಿತು ಕೆಳಗಿನ ನಿರ್ದೇಶನಗಳನ್ನು ಪಾಲಿಸಲು ಸೂಚಿಸಿದ್ದಾರೆ. ಹೀಗಾಗಿ ರಾಜ್ಯ ಸರ್ಕಾರಿ ನೌಕರರು ಕಡ್ಡಾಯವಾಗಿ ಬೆಳಿಗ್ಗೆ 10 ಗಂಟೆಯೊಳಗೆ ಕಚೇರಿಗೆ ಹಾಜರಾಗಬೇಕೆಂಬ ಮುಖ್ಯಮಂತ್ರಿಗಳ ಕಟ್ಟುನಿಟ್ಟಿನ ಆದೇಶವನ್ನು ಜಾರಿಗೊಳಿಸಿದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ: ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಿದ ಸಿಎಂ ಡಿಕೆಶಿ, ಅಧಿಕಾರಿಗಳಿಗೆ ಕೊಟ್ಟ ಖಡಕ್ ಸೂಚನೆಗಳೇನು?

ಹಾಜರಾತಿ ದಾಖಲಾತಿ

ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿ ಬೆಳಿಗ್ಗೆ 10 ಗಂಟೆಗೆ ‘ಕರ್ತವ್ಯ ಆಯಪ್’ನಲ್ಲಿ ‘Check In’ ಮಾಡಬೇಕು ಮತ್ತು ಕಚೇರಿಯಿಂದ ನಿರ್ಗಮಿಸುವಾಗ ‘Check Out’ ಮಾಡಬೇಕು. ಆಯಪ್ ಬಳಸುವ ವಿಧಾನವನ್ನು ಯೂಟ್ಯೂಬ್ ಲಿಂಕ್ (https://youtu.be/ZNGtSt2mUPY?si=k3rfqZJIMENeF5q) ಮೂಲಕ ವೀಕ್ಷಿಸಬಹುದು. ಇ-ಆಡಳಿತ ಇಲಾಖೆಯು ಪ್ರತಿದಿನ ಬೆಳಿಗ್ಗೆ 10 ಗಂಟೆಗೆ ಹಾಜರಾತಿ ದಾಖಲಿಸಿದ ಅಧಿಕಾರಿ, ಸಿಬ್ಬಂದಿಯ ಜಿಲ್ಲಾವಾರು ಮತ್ತು ಕಚೇರಿವಾರು ಮಾಹಿತಿಯನ್ನು AI ತಂತ್ರಜ್ಞಾನದ ಮೂಲಕ ಆಯಾ ಇಲಾಖಾ ಮುಖ್ಯಸ್ಥರಿಗೆ ಸ್ವಯಂಚಾಲಿತವಾಗಿ ಕಳುಹಿಸುತ್ತದೆ.

ಇಲಾಖಾ ಮುಖ್ಯಸ್ಥರು ತಮ್ಮ ವೈಯಕ್ತಿಕ ಲಾಗಿನ್ ಮೂಲಕ ‘ಕರ್ತವ್ಯ ಡ್ಯಾಶ್‌ಬೋರ್ಡ್’ನಲ್ಲಿ ದೈನಂದಿನ ಹಾಜರಾತಿ ವರದಿಯನ್ನು ಪರಿಶೀಲಿಸಬೇಕು ಮತ್ತು ಹಾಜರಾತಿ ದಾಖಲಿಸದವರಿಗೆ ಸೂಕ್ತ ಸೂಚನೆ ನೀಡಬೇಕು. ಒಂದು ವೇಳೆ ಅಧಿಕಾರಿಗಳು ಅಥವಾ ಸಿಬ್ಬಂದಿ ಕಚೇರಿ ಕರ್ತವ್ಯದ ಮೇರೆಗೆ ಪ್ರವಾಸದಲ್ಲಿದ್ದರೆ, ಅವರು ‘OOD’ ಆಯ್ಕೆಯನ್ನು ಬಳಸಿಕೊಂಡು ಪ್ರವಾಸದ ಉದ್ದೇಶವನ್ನು ನಮೂದಿಸಿ ಹಾಜರಾತಿಯನ್ನು ದಾಖಲಿಸಬೇಕು ಮತ್ತು ಇದನ್ನು ಸಂಬಂಧಪಟ್ಟ ಮೇಲಾಧಿಕಾರಿಗಳು ದೃಢೀಕರಿಸಬೇಕು.

ಅಧಿಕಾರಿಗಳಿಗೆ ಆತ್ಮಸಾಕ್ಷಿ ಪಾಠ ಮಾಡಿದ್ದ ಡಿಕೆಶಿ

ಇನ್ನು ಸಿಎಂ ಆದ ಬಳಿಕೆ ಡಿಕೆ ಶಿವಕುಮಾರ್ ಅವರು ನಿನ್ನೆ (ಜೂನ್ 04) ಮೊದಲ ಬಾರಿಗೆ ಎಲ್ಲಾ ಇಲಾಖೆಗಳ ಕಾರ್ಯದರ್ಶಿಗಳ ಜತೆ ಸಭೆ ನಡೆಸಿದ್ದು, ಈ ಸಭೆಯಲ್ಲಿ ಅಧಿಕಾರಿಗಳಿಗೆ ಕೆಲ ಸಲಹೆ ಸೂಚನೆಗಳನ್ನು ನೀಡಿದ್ದಾರೆ. ಪ್ರಮುಖವಾಗಿ ಭ್ರಷ್ಟಾಚಾರ ಮುಕ್ತ, ಪಾದರ್ಶಕ ಕೆಲಸ ಹಾಗೂ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುವ ಬಗ್ಗೆ ಆತ್ಮಸಾಕ್ಷಿ ಪಾಠ ಮಾಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಗ್ಯಾಸ್ ಮತ್ತು ಹೊಟ್ಟೆ ಉಬ್ಬರ ಸಮಸ್ಯೆಗೆ ಆಹಾರ ಮಾತ್ರವಲ್ಲ, ನಿಮ್ಮ ಈ ಅಭ್ಯಾಸಗಳು ಕಾರಣವಾಗಿರಬಹುದು! – Kannada News

ಇತ್ತೀಚಿನ ದಿನಗಳಲ್ಲಿ ಹೆಚ್ಚಿನವರು ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಯಿಂದ ಬಳಲುತ್ತಾರೆ. ಹೆಚ್ಚಿನವರಿಗೆ ಗ್ಯಾಸ್ ಆಗುವುದು (Stomach Gas Problems), ಹೊಟ್ಟೆ ಉಬ್ಬರ ಮತ್ತು ಅಜೀರ್ಣದಂತಹ ಸಮಸ್ಯೆಗಳಿಂದ ಬಳಲುತ್ತಾರೆ. ಸಾಮಾನ್ಯವಾಗಿ ಜನ ಈ ರೀತಿಯಾಗುವುದಕ್ಕೆ ಕೇವಲ ಆಹಾರ ಕಾರಣ ಎಂದು ಭಾವಿಸುತ್ತಾರೆ. ಆದರೆ ತಜ್ಞರ ಪ್ರಕಾರ, ನಮ್ಮ ದೈನಂದಿನ ಕೆಲವು ಕೆಟ್ಟ ಅಭ್ಯಾಸಗಳೂ ಕೂಡ ಈ ಸಮಸ್ಯೆಗೆ ಪ್ರಮುಖ ಕಾರಣವಾಗಬಹುದು. ಜೀರ್ಣಾಂಗ ವ್ಯವಸ್ಥೆ ನಮ್ಮ ದೇಹದ ಪ್ರಮುಖ ಭಾಗವಾಗಿದ್ದು, ಆಹಾರವನ್ನು ಜೀರ್ಣಿಸಿ ಪೋಷಕಾಂಶಗಳನ್ನು ದೇಹಕ್ಕೆ ತಲುಪಿಸುವ ಕೆಲಸ ಮಾಡುತ್ತದೆ. ಜೀರ್ಣಕ್ರಿಯೆಯಲ್ಲಿ ವ್ಯತ್ಯಯ ಉಂಟಾದರೆ ಗ್ಯಾಸ್, ಹೊಟ್ಟೆ ಉಬ್ಬರ ಮತ್ತು ಅಜೀರ್ಣದಂತಹ ಸಮಸ್ಯೆಗಳು ಕಾಣಿಸಬಹುದು. ಹಲವರು ಈ ಲಕ್ಷಣಗಳನ್ನು ಸಾಮಾನ್ಯವೆಂದು ನಿರ್ಲಕ್ಷಿಸುತ್ತಾರೆ. ಆದರೆ ಈ ಸಮಸ್ಯೆ ಪದೇಪದೇ ಕಂಡುಬರುತ್ತಿದ್ದರೆ ಅದರ ಹಿಂದಿರುವ ಕಾರಣಗಳನ್ನು ಅರಿಯುವುದು ಅಗತ್ಯ. ಹಾಗಾದರೆ ಯಾವ ಅಭ್ಯಾಸಗಳು ಗ್ಯಾಸ್ಟ್ರಿಕ್ ಸಮಸ್ಯೆಗೆ ಕಾರಣವಾಗುತ್ತದೆ, ಗ್ಯಾಸ್ ಮತ್ತು ಹೊಟ್ಟೆ ಉಬ್ಬರ ಸಮಸ್ಯೆಯಿಂದ ದೂರವಿರಲು ಏನು ಮಾಡಬಹುದು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಯಾವ ಅಭ್ಯಾಸಗಳಿಂದ ಹೊಟ್ಟೆಯಲ್ಲಿ ಗ್ಯಾಸ್ ಸಮಸ್ಯೆ ಉಂಟಾಗಬಹುದು?

ನೋಯ್ಡಾದ ಫೋರ್ಟಿಸ್ ಆಸ್ಪತ್ರೆಯ ಗ್ಯಾಸ್ಟ್ರೋಎಂಟರಾಲಜಿ ವಿಭಾಗದ ನಿರ್ದೇಶಕ ಡಾ. ಮಹೇಶ್ ಗುಪ್ತ ಅವರು ಹೇಳುವ ಪ್ರಕಾರ, ಅಸಮರ್ಪಕ ಜೀವನಶೈಲಿ ಮತ್ತು ಆಹಾರ ಪದ್ಧತಿ ಸರಿಯಾಗಿ ಇಲ್ಲದಿರುವುದು ಹೊಟ್ಟೆಯಲ್ಲಿ ಗ್ಯಾಸ್ ಸಮಸ್ಯೆಯನ್ನು ಹೆಚ್ಚಿಸಬಹುದು. ಸಮಯಕ್ಕೆ ಸರಿಯಾಗಿ ಊಟ ಮಾಡದೇ ಇರುವುದು, ಎರಡು ಊಟಗಳ ನಡುವೆ ಹೆಚ್ಚು ಅಂತರ ಮತ್ತು ಬೇಗ ಬೇಗನೆ ಊಟ ಮಾಡುವ ಅಭ್ಯಾಸಗಳು ಜೀರ್ಣಕ್ರಿಯೆಗೆ ತೊಂದರೆ ಉಂಟುಮಾಡಬಹುದು. ಇದಲ್ಲದೆ ಫಾಸ್ಟ್ ಫುಡ್, ಮೈದಾ ಪದಾರ್ಥಗಳು, ಅತಿಯಾಗಿ ಮಸಾಲೆ ಹಾಗೂ ಎಣ್ಣೆಯಲ್ಲಿ ತಯಾರಿಸಿದ ಆಹಾರಗಳನ್ನು ಹೆಚ್ಚಾಗಿ ಸೇವಿಸುವುದರಿಂದ ಕೆಲವರಲ್ಲಿ ಗ್ಯಾಸ್ ಮತ್ತು ಹೊಟ್ಟೆ ಉಬ್ಬರ ಹೆಚ್ಚಾಗಬಹುದು. ಜೊತೆಗೆ ಹೊಟ್ಟೆಯಲ್ಲಿರುವ ಒಳ್ಳೆಯ ಮತ್ತು ಕೆಟ್ಟ ಬ್ಯಾಕ್ಟೀರಿಯಾದ ಸಮತೋಲನ ಹದಗೆಡುವ “ಇಂಟೆಸ್ಟೈನಲ್ ಡಿಸ್ಬಯೋಸಿಸ್” ಸಮಸ್ಯೆಯೂ ಇದಕ್ಕೆ ಕಾರಣವಾಗಬಹುದು. ಗಟ್ ಮೈಕ್ರೋಬಿಯೊಮ್ ಸಮತೋಲನ ತಪ್ಪಿದಾಗ ಜೀರ್ಣಕ್ರಿಯೆ ದುರ್ಬಲವಾಗುತ್ತದೆ ಮತ್ತು ಹೊಟ್ಟೆ ಸಂಬಂಧಿತ ಸಮಸ್ಯೆಗಳು ಹೆಚ್ಚಾಗಬಹುದು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಗ್ಯಾಸ್ಟ್ರಿಕ್, ಅಸಿಡಿಟಿಯಿಂದ ದಿನಪೂರ್ತಿ ಹಿಂಸೆ ಪಡುತ್ತಿದ್ದೀರಾ? ಹಾಗಿದ್ರೆ ತಪ್ಪದೆ ಈ ಅಭ್ಯಾಸಗಳನ್ನು ಮಾಡಿ

ಯಾವ ಲಕ್ಷಣಗಳು ಕಂಡುಬಂದರೆ ವೈದ್ಯರನ್ನು ಸಂಪರ್ಕಿಸಬೇಕು?

ಹೊಟ್ಟೆಯಲ್ಲಿ ಗ್ಯಾಸ್ ಸಮಸ್ಯೆ ಪದೇಪದೇ ಕಾಣಿಸಿಕೊಂಡು ಅದರ ಜೊತೆಗೆ ನಿರಂತರ ಹೊಟ್ಟೆನೋವು, ತೀವ್ರ ಹೊಟ್ಟೆ ಉಬ್ಬರ, ತೂಕ ಇಳಿಯುವುದು, ವಾಂತಿ ಅಥವಾ ಮಲವಿಸರ್ಜನೆ ಕ್ರಮದಲ್ಲಿ ಬದಲಾವಣೆ ಕಂಡುಬಂದರೆ ತಕ್ಷಣ ವೈದ್ಯರನ್ನು ಸಂಪರ್ಕಿಸುವುದು ಅಗತ್ಯ. ಸಮಸ್ಯೆ ದೀರ್ಘಕಾಲ ಮುಂದುವರಿದು ದೈನಂದಿನ ಜೀವನದ ಮೇಲೆ ಪರಿಣಾಮ ಬೀರುತ್ತಿದ್ದರೆ ಅದನ್ನು ನಿರ್ಲಕ್ಷಿಸಬಾರದು. ಸಮಯಕ್ಕೆ ಸರಿಯಾಗಿ ಪರೀಕ್ಷೆ ಮಾಡಿಸಿಕೊಳ್ಳುವುದರಿಂದ ಮೂಲ ಕಾರಣ ಪತ್ತೆಹಚ್ಚಲು ಸಹಾಯವಾಗುತ್ತದೆ.

ಗ್ಯಾಸ್ ಮತ್ತು ಹೊಟ್ಟೆ ಉಬ್ಬರ ಸಮಸ್ಯೆಯಿಂದ ಹೇಗೆ ದೂರವಿರಬಹುದು?

ಜೀರ್ಣಕ್ರಿಯೆ ಸುಧಾರಿಸಲು ಸಮಯಕ್ಕೆ ಸರಿಯಾಗಿ ಊಟ ಮಾಡುವುದು ಮತ್ತು ಆಹಾರವನ್ನು ಚೆನ್ನಾಗಿ ಜಗಿದು ತಿನ್ನುವುದು ಮುಖ್ಯ. ಸಾಕಷ್ಟು ನೀರು ಕುಡಿಯಬೇಕು ಮತ್ತು ಆಹಾರದಲ್ಲಿ ಹಣ್ಣು, ತರಕಾರಿ ಹಾಗೂ ಫೈಬರ್ ಸಮೃದ್ಧ ಆಹಾರಗಳ ಸೇವನೆ ಮಾಡಬೇಕು. ನಿಯಮಿತ ವ್ಯಾಯಾಮ ಮಾಡುವುದು, ಜಂಕ್ ಫುಡ್ ಮತ್ತು ಹೆಚ್ಚು ಮಸಾಲೆಯ ಆಹಾರವನ್ನು ಕಡಿಮೆ ಮಾಡುವುದು ಸಹ ಉಪಯುಕ್ತ. ಆರೋಗ್ಯಕರ ಜೀವನಶೈಲಿ ಮತ್ತು ಸಮತೋಲನ ಆಹಾರ ಪದ್ಧತಿ ಜೀರ್ಣಾಂಗ ವ್ಯವಸ್ಥೆಯನ್ನು ಉತ್ತಮವಾಗಿಡಲು ಸಹಾಯ ಮಾಡುತ್ತದೆ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಎಲ್ ನಿನೊ ಪರಿಣಾಮ; ಭಾರತದ ಆರ್ಥಿಕತೆಗೆ 1 ಬಿಲಿಯನ್ ಡಾಲರ್ ಗಂಡಾಂತರ? ಇದು ಹೇಗೆ ಸಾಧ್ಯ? – Kannada News

ನವದೆಹಲಿ, ಜೂನ್ 5: ಮುಂಬರುವ ಪ್ರಬಲ ‘ಎಲ್ ನಿನೊ’ (El Nino) ಹವಾಮಾನ ವೈಪರೀತ್ಯದಿಂದಾಗಿ ಭಾರತಕ್ಕೆ ಬರೋಬ್ಬರಿ 1 ಟ್ರಿಲಿಯನ್ ಡಾಲರ್ (ಸುಮಾರು 83 ಲಕ್ಷ ಕೋಟಿ ರೂಪಾಯಿ) ಭಾರಿ ಆರ್ಥಿಕ ನಷ್ಟ ಉಂಟಾಗಬಹುದು ಎಂದು ತಜ್ಞರು ಅಂದಾಜಿಸಿದ್ದಾರೆ. ನಿನ್ನೆ ವಿಶ್ವ ಪರಿಸರ ದಿನದ ಭಾಗವಾಗ ಎಕನಾಮಿಕ್ ಟೈಮ್ಸ್ ಆಯೋಜಿಸಿದ ಸಂವಾದ ಕಾರ್ಯಕ್ರಮದಲ್ಲಿ ಅಮೆರಿಕದ ಡಾರ್ಟ್​ಮೌತ್ ಕಾಲೇಜಿನ ಭೂಗೋಳ ವಿಭಾಗದ ಅಸೋಸಿಯೇಟ್ ಪ್ರೊಫೆಸರ್ ಜಸ್ಟಿನ್ ಎಸ್ ಮ್ಯಾನ್​ಕಿನ್ ಮಾತನಾಡುತ್ತಾ, ಜಾಗತಿಕವಾಗಿ ಎಲ್ ನಿನೋ ಮಾಡುವ ಪರಿಣಾಮಗಳನ್ನು ವಿಶ್ಲೇಷಿಸಿದರು.

ಏನಿದು ಎಲ್ ನಿನೊ?

ಎಲ್ ನಿನೊ ಎನ್ನುವುದು ಪೆಸಿಫಿಕ್ ಮಹಾಸಾಗರದ ಮೇಲ್ಮೈ ನೀರು ಅಸಹಜವಾಗಿ ಬಿಸಿಯಾಗುವ ಒಂದು ಹವಾಮಾನ ಪ್ರಕ್ರಿಯೆ. ದಕ್ಷಿಣ ಅಮೆರಿಕದ ಪೆರು ದೇಶದ ಸಮೀಪದ ಪೂರ್ವ ಉಷ್ಣವಲಯ ಪೆಸಿಫಿಕ್ ಸಾಗರದ ಮೇಲ್ಮೈ ನೀರಿನ ಉಷ್ಣಾಂಶವು ಸರಾಸರಿಗಿಂತ ಹೆಚ್ಚು ಬಿಸಿಯಾಗಿದ್ದರೆ ಅದನ್ನು ಎಲ್ ನಿನೊ ಎನ್ನುತ್ತಾರೆ. ಸ್ಪ್ಯಾನಿಷ್ ಭಾಷೆಯಲ್ಲಿ ‘ಎಲ್ ನಿನೊ’ ಎಂದರೆ “ಬಾಲ ಯೇಸು” (Little Boy / Christ Child) ಎಂದರ್ಥ. ಸಾಮಾನ್ಯವಾಗಿ ಕ್ರಿಸ್ಮಸ್ ಹಬ್ಬದ ಸಮಯದಲ್ಲಿ (ಡಿಸೆಂಬರ್) ದಕ್ಷಿಣ ಅಮೆರಿಕಾದ ಪೆರು ದೇಶದ ಕರಾವಳಿಯಲ್ಲಿ ಈ ಬದಲಾವಣೆ ಕಾಣಿಸಿಕೊಳ್ಳುವುದರಿಂದ ಇದಕ್ಕೆ ಈ ಹೆಸರು ಬಂದಿದೆ.

ಸಾಮಾನ್ಯ ದಿನಗಳಲ್ಲಿ, ಪೆಸಿಫಿಕ್ ಮಹಾಸಾಗರದ ಮೇಲೆ ಬೀಸುವ ಬಲವಾದ ಮಾರುತಗಳು (Trade Winds) ಸಮುದ್ರದ ಮೇಲ್ಮೈಯಲ್ಲಿರುವ ಬಿಸಿ ನೀರನ್ನು ಏಷ್ಯಾದ ಕಡೆಗೆ (ಪಶ್ಚಿಮಕ್ಕೆ) ತಳ್ಳುತ್ತವೆ. ಇದರಿಂದಾಗಿ ಇಂಡೋನೇಷ್ಯಾ ಮತ್ತು ಭಾರತದ ಸುತ್ತಮುತ್ತಲಿನ ಸಮುದ್ರದ ನೀರು ಬಿಸಿಯಾಗಿ ಇಲ್ಲಿ ಉತ್ತಮ ಮಳೆಯಾಗುತ್ತದೆ.

ಆದರೆ ಎಲ್ ನಿನೊ ವರ್ಷದಲ್ಲಿ, ಈ ಮಾರುತಗಳು ದುರ್ಬಲಗೊಳ್ಳುತ್ತವೆ. ಆಗ ಏಷ್ಯಾದ ಕಡೆಗೆ ಹೋಗಬೇಕಾದ ಬಿಸಿ ನೀರು ದಕ್ಷಿಣ ಅಮೆರಿಕಾದ (ಪೆರು ಮತ್ತು ಈಕ್ವೆಡಾರ್) ಕರಾವಳಿಯಲ್ಲೇ ಉಳಿದುಕೊಳ್ಳುತ್ತದೆ. ಸಮುದ್ರದ ಬಿಸಿನೀರು ಇರುವ ಜಾಗ ಬದಲಾಗುವುದರಿಂದ, ಜಾಗತಿಕವಾಗಿ ಮಳೆ ತರುವ ಮೋಡಗಳ ಚಲನೆ ಮತ್ತು ಹವಾಮಾನದ ಚಕ್ರವೇ ತಲೆಕೆಳಗಾಗುತ್ತದೆ.

ಇದನ್ನೂ ಓದಿ: ಸಿಮ್ ಸ್ವಾಪಿಂಗ್ ಹುಷಾರ್..! ದಿಢೀರನೇ ಸಿಮ್ ಡೀಆ್ಯಕ್ಟಿವೇಟ್ ಆಯ್ತು, ನೋಡನೋಡುತ್ತಿದ್ದಂತೆ ಬ್ಯಾಂಕ್ ಖಾತೆಯಿಂದ ಹಣ ಮಾಯ ಆಯ್ತು

ಎಲ್ ನಿನೊ ಈ ಬಾರಿ ಭಾರತದ ಮೇಲೆ ಕೆಟ್ಟ ಪರಿಣಾಮ ಬೀರಲಿದೆ. ಮುಂಗಾರು ಮಳೆ ಕ್ಷೀಣಿಸುತ್ತದೆ. ಉಷ್ಣಗಾಳಿ ತೀವ್ರವಾಗುತ್ತದೆ. ಈ ಹವಾಮಾನ ವೈಪರೀತ್ಯಗಳಿಂದ ಆರ್ಥಿಕ ಚಟುವಟಿಕೆಗಳಿಗೆ ಧಕ್ಕೆ ಆಗುತ್ತದೆ. ಅದು ಆರ್ಥಿಕ ಬೆಳವಣಿಗೆಗೆ ಹಿನ್ನಡೆ ತರುತ್ತದೆ. ಜಸ್ಟಿನ್​ ಮ್ಯಾನ್​ಕಿನ್ ಪ್ರಕಾರ ಭಾರತದ ಆರ್ಥಿಕತೆಗೆ ಇದು ಉಂಟು ಮಾಡುವ ನಷ್ಟ 1 ಟ್ರಿಲಿಯನ್ ಡಾಲರ್ ಇರಬಹುದು.

ಭಾರತದ ಮೇಲೆ ಆಗುವ ಪ್ರಮುಖ ಪರಿಣಾಮಗಳು

  • ಕೃಷಿ ವಲಯಕ್ಕೆ ಭಾರಿ ಹಾನಿ (Agricultural Distress): ಭಾರತದ ಕೃಷಿ ವಲಯವು ಇಂದಿಗೂ ಮುಂಗಾರು ಮಳೆಯನ್ನೇ ಹೆಚ್ಚಾಗಿ ಅವಲಂಬಿಸಿದೆ. ಮಳೆ ಕೈಕೊಟ್ಟರೆ ಆಹಾರ ಧಾನ್ಯಗಳು, ಬೇಳೆಕಾಳುಗಳು ಮತ್ತು ಎಣ್ಣೆಕಾಳುಗಳ ಉತ್ಪಾದನೆ ಕುಂಠಿತಗೊಳ್ಳುತ್ತದೆ. ಇದು ರೈತರ ಆದಾಯವನ್ನು ಕಸಿದುಕೊಳ್ಳುವುದಲ್ಲದೆ ಗ್ರಾಮೀಣ ಆರ್ಥಿಕತೆಯನ್ನು ನುಜ್ಜುಗುಜ್ಜು ಮಾಡುತ್ತದೆ.
  • ಆಹಾರ ಹಣದುಬ್ಬರ (Food Inflation): ಬೆಳೆಗಳ ಇಳುವರಿ ಕಡಿಮೆಯಾದಾಗ ಮಾರುಕಟ್ಟೆಯಲ್ಲಿ ಅಗತ್ಯ ವಸ್ತುಗಳ ಕೊರತೆ ಉಂಟಾಗಿ, ಆಹಾರ ಪದಾರ್ಥಗಳ ಬೆಲೆ ಗಗನಕ್ಕೇರುತ್ತದೆ. ಇದು ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕಲಿದ್ದು, ಹಣದುಬ್ಬರ ನಿಯಂತ್ರಿಸಲು ರಿಸರ್ವ್ ಬ್ಯಾಂಕ್ (RBI) ಬಡ್ಡಿ ದರಗಳನ್ನು ಹೆಚ್ಚಿಸಬೇಕಾದ ಅನಿವಾರ್ಯತೆ ಬರಬಹುದು.
  • ನೀರಿನ ಅಭಾವ ಮತ್ತು ವಿದ್ಯುತ್ ಕೊರತೆ: ಮಳೆ ಕೊರತೆಯಿಂದ ಜಲಾಶಯಗಳು ಮತ್ತು ಅಂತರ್ಜಲ ಮಟ್ಟ ಕುಸಿಯುತ್ತದೆ. ಇದರಿಂದ ಕುಡಿಯುವ ನೀರಿಗೆ ತತ್ವಾರ ಉಂಟಾಗುವುದರ ಜೊತೆಗೆ ಜಲವಿದ್ಯುತ್ (Hydroelectric power) ಉತ್ಪಾದನೆ ಕಡಿಮೆಯಾಗಿ ದೇಶದಲ್ಲಿ ವಿದ್ಯುತ್ ಕೊರತೆ ಎದುರಾಗಬಹುದು. ಅತಿಯಾದ ಸೆಕೆಯಿಂದಾಗಿ ಎಸಿ ಮತ್ತು ಫ್ಯಾನ್‌ಗಳ ಬಳಕೆ ಹೆಚ್ಚಿ ಪವರ್ ಗ್ರಿಡ್‌ಗಳ ಮೇಲೆ ಒತ್ತಡ ಬೀಳುತ್ತದೆ.
  • ಜಾಗತಿಕ ಸರಬರಾಜು ಜಾಲದ ಮೇಲೆ ಪ್ರಭಾವ: ಭಾರತವು ವಿಶ್ವದಲ್ಲೇ ಅಕ್ಕಿ, ಸಕ್ಕರೆ ಸೇರಿದಂತೆ ಹಲವು ಕೃಷಿ ಉತ್ಪನ್ನಗಳ ಪ್ರಮುಖ ರಫ್ತುದಾರ ದೇಶವಾಗಿದೆ. ಆಂತರಿಕ ಕೊರತೆಯಿಂದಾಗಿ ಭಾರತವು ರಫ್ತು ನಿಷೇಧಿಸಿದರೆ ಜಾಗತಿಕವಾಗಿ ಆಹಾರ ಧಾನ್ಯಗಳ ಬೆಲೆ ಏರಿಕೆಯಾಗಿ ಜಾಗತಿಕ ಮಾರುಕಟ್ಟೆಗೂ ನಷ್ಟವಾಗುತ್ತದೆ.

ಇದನ್ನೂ ಓದಿ: ಆರ್ಥಿಕತೆಯಲ್ಲಿ ಭರ್ಜರಿ ಕ್ಯಾಷ್ ಇದ್ದರೂ ಎಟಿಎಂಗಳಲ್ಲಿ ಇಲ್ಲ ಹೆಚ್ಚು ನೋಟು; ಕರ್ನಾಟಕದಲ್ಲೇ ಅತಿಹೆಚ್ಚು ಕೊರತೆ; ಯಾಕೆ ಈ ಕಥೆ?

ಈ ಭೀಕರ ಆರ್ಥಿಕ ರಿಸ್ಕ್ ಎದುರಿಸಲು ಭಾರತ ಸರ್ಕಾರ ಈಗಾಗಲೇ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಬೇಳೆಕಾಳುಗಳ ಬಫರ್ ಸ್ಟಾಕ್ (ದಾಸ್ತಾನು) ಅನ್ನು ದಾಖಲೆ ಮಟ್ಟದ 43 ಲಕ್ಷ ಟನ್‌ಗಳಿಗೆ ಹೆಚ್ಚಿಸಿದೆ. ಇದು ಎಲ್ ನಿನೊದ ಆರಂಭಿಕ ದಿನಗಳಲ್ಲಿ ಮಾರುಕಟ್ಟೆಯಲ್ಲಿ ಬೆಲೆ ಏರಿಕೆಯಾಗದಂತೆ ತಡೆಯಲು ಸಹಕಾರಿಯಾಗಲಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ENG vs NZ: 140 ರನ್​ಗೆ ಆಂಗ್ಲರನ್ನು ಕಟ್ಟಿಹಾಕಿ ಅದಕ್ಕಿಂತ ಕಡಿಮೆ ಮೊತ್ತಕ್ಕೆ ಆಲೌಟ್ ಆದ ಕಿವೀಸ್ – Kannada News

ಪ್ರಸ್ತುತ ಇಂಗ್ಲೆಂಡ್‌ ಹಾಗೂ ನ್ಯೂಜಿಲೆಂಡ್ (Eng vs NZ) ನಡುವೆ ಮೂರು ಪಂದ್ಯಗಳ ಟೆಸ್ಟ್ ಸರಣಿ ಇಂಗ್ಲೆಂಡ್​ನಲ್ಲಿ ನಡೆಯುತ್ತಿದೆ. ಸರಣಿಯ ಮೊದಲ ಪಂದ್ಯ ಐತಿಹಾಸಿಕ ಲಾರ್ಡ್ಸ್ ಮೈದಾನದಲ್ಲಿ (Lord’s Test) ನಡೆಯುತ್ತಿದ್ದು, ಈ ಪಂದ್ಯದಲ್ಲಿ ಇಲ್ಲಿಯವರೆಗೆ ಬೌಲರ್‌ಗಳೇ ಪಾರುಪತ್ಯ ಸಾಧಿಸಿದ್ದಾರೆ. ಪಂದ್ಯದ ಮೊದಲ ದಿನದಂದು ಎರಡೂ ತಂಡಗಳ ಬ್ಯಾಟ್ಸ್‌ಮನ್‌ಗಳಿಗೆ ನೆಲಕಚ್ಚಿ ಆಡಲು ಸಾಧ್ಯವಾಗಲಿಲ್ಲ. ಪರಿಣಾಮವಾಗಿ ದಿನದ ಆಟದ ಅಂತ್ಯದ ವೇಳೆಗೆ ಒಟ್ಟು 16 ವಿಕೆಟ್‌ಗಳು ಬಿದ್ದಿದ್ದವು. ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ ಕೇವಲ 140 ರನ್‌ಗಳಿಗೆ ಆಲೌಟ್ ಆಯಿತು. ಇತ್ತ ನ್ಯೂಜಿಲೆಂಡ್ ಕೂಡ ಎರಡನೇ ದಿನದಾಟದ ಮೊದಲ ಸೆಷನ್​ನಲ್ಲಿಯೇ 113 ರನ್​ಗಳಿಗೆ ತನ್ನ ಮೊದಲ ಇನ್ನಿಂಗ್ಸ್ ಮುಗಿಸಿತು.

7 ಆಟಗಾರರು ಒಂದಂಕಿಗೆ ಔಟ್

ಮೊದಲ ಇನ್ನಿಂಗ್ಸ್‌ನಲ್ಲಿ ಇಂಗ್ಲೆಂಡ್ ತಂಡವನ್ನು 140 ರನ್​ಗಳಿಗೆ ಆಲೌಟ್ ಮಾಡಿ ಮೊದಲ ಇನ್ನಿಂಗ್ಸ್ ಆರಂಭಿಸಿದ ಕಿವೀಸ್​ ತಂಡವನ್ನು ಇಂಗ್ಲೆಂಡ್ ವೇಗಿ ಆಲಿ ರಾಬಿನ್ಸನ್ ಇನ್ನಿಲ್ಲದಂತೆ ಕಾಡಿದರು. ಆಲಿ ರಾಬಿನ್ಸನ್ ಆರಂಭದಲ್ಲೇ ಡೆವೊನ್ ಕಾನ್ವೇ, ಕೇನ್ ವಿಲಿಯಮ್ಸನ್ ಮತ್ತು ರಚಿನ್ ರವೀಂದ್ರರನ್ನು ಕೇವಲ ನಾಲ್ಕು ಎಸೆತಗಳ ಅಂತರದಲ್ಲಿ ಔಟ್ ಮಾಡಿದರು. ಈ ವಿಕೆಟ್​ಗಳ ಪತನದ ನಂತರ ನ್ಯೂಜಿಲೆಂಡ್ ತಂಡದ ಇನ್ನಿಂಗ್ಸ್ ಸುಧಾರಿಸಲಿಲ್ಲ. ಕಿವೀಸ್ ಪರ ಕೈಲ್ ಜೇಮಿಸನ್ ಅತ್ಯಧಿಕ 38 ರನ್​ಗಳ ಇನ್ನಿಂಗ್ಸ್ ಆಡಿದರೆ, ಗ್ಲೆನ್ ಫಿಲಿಫ್ಸ್ 34 ರನ್​ಗಳ ಕಾಣಿಕೆ ನೀಡಿದರು. ಇವರಿಬ್ಬರನ್ನು ಹೊರತುಪಡಿಸಿ ಉಳಿದ ಆಟಗಾರರಿಗೆ ಹೆಚ್ಚು ಹೊತ್ತು ಮೈದಾನದಲ್ಲಿ ನಿಲ್ಲಲು ಸಾಧ್ಯವಾಗಲಿಲ್ಲ. ಅದರಲ್ಲೂ ತಂಡದ 7 ಆಟಗಾರರು ಕೇವಲ ಒಂದಂಕಿಗೆ ವಿಕೆಟ್ ಒಪ್ಪಿಸಿದರು.

ಇತ್ತ ಕಿವೀಸ್ ಬ್ಯಾಟಿಂಗ್‌ ಬೆನ್ನೇಲುಬು ಮುರಿದ ರಾಬಿನ್ಸನ್, ಈ ಇನ್ನಿಂಗ್ಸ್‌ನಲ್ಲಿ ಒಟ್ಟು 10.5 ಓವರ್‌ಗಳನ್ನು ಬೌಲ್ ಮಾಡಿ 39 ರನ್‌ಗಳಿಗೆ 5 ವಿಕೆಟ್‌ಗಳನ್ನು ಪಡೆದರು. ಪರಿಣಾಮವಾಗಿ, ನ್ಯೂಜಿಲೆಂಡ್ ಮೊದಲ ಇನ್ನಿಂಗ್ಸ್‌ನಲ್ಲಿ 113 ರನ್‌ಗಳಿಗೆ ಆಲೌಟ್ ಆಯಿತು. ಈ ಮೂಲಕ ಇಂಗ್ಲೆಂಡ್ ಮೊದಲ ಇನ್ನಿಂಗ್ಸ್​ನಲ್ಲಿ 27 ರನ್‌ಗಳ ಮುನ್ನಡೆ ಸಾಧಿಸಿತು. ಓಲಿ ರಾಬಿನ್ಸನ್ ಜೊತೆಗೆ, ಜೋಶ್ ಟಾಂಗ್ ಕೂಡ ಅದ್ಭುತ ಬೌಲಿಂಗ್ ಮಾಡಿ ಮೂರು ವಿಕೆಟ್‌ಗಳನ್ನು ಪಡೆದರು. ಗಸ್ ಅಟ್ಕಿನ್ಸನ್ ಕೂಡ ಎರಡು ವಿಕೆಟ್‌ಗಳನ್ನು ಪಡೆದರು.

ವಿಶ್ವ ಕ್ರಿಕೆಟ್​ನಲ್ಲಿ ಈಗ ವೈಭವ್​ದೇ ಮಾತು; ಟೆಸ್ಟ್​ಗೆ ಆಯ್ಕೆ ಮಾಡಿ ಎಂದ ದಿಗ್ಗಜ ಕ್ರಿಕೆಟಿಗರು

5 ವಿಕೆಟ್ ಪಡೆದ ಜೇಮಿಸನ್

ಇದಕ್ಕೂ ಮೊದಲು, ಇಂಗ್ಲೆಂಡ್ ತಂಡದ ಮೊದಲ ಇನ್ನಿಂಗ್ಸ್‌ನಲ್ಲಿ ಕೈಲ್ ಜೇಮಿಸನ್ ಮಿಂಚಿದರು. ಗಾಯದಿಂದ ಚೇತರಿಸಿಕೊಂಡು ತಂಡಕ್ಕೆ ಮರಳಿದ ಕಿವೀಸ್ ವೇಗಿ ಕೈಲ್ ಜೇಮಿಸನ್ ಇಂಗ್ಲಿಷ್ ಬ್ಯಾಟ್ಸ್‌ಮನ್‌ಗಳಿಗೆ ನೆಲೆ ನಿಲ್ಲಲು ಯಾವುದೇ ಅವಕಾಶ ನೀಡಲಿಲ್ಲ. ಜೇಮಿಸನ್ ಅದ್ಭುತ ಬೌಲಿಂಗ್ ಮಾಡಿ 62 ರನ್‌ಗಳಿಗೆ 5 ವಿಕೆಟ್‌ಗಳನ್ನು ಕಬಳಿಸಿದರು. ಆದಾಗ್ಯೂ ಹ್ಯಾರಿ ಬ್ರೂಕ್ ಅವರ 56 ರನ್​ಗಳ ಇನ್ನಿಂಗ್ಸ್​ನಿಂದಾಗಿ ಇಂಗ್ಲೆಂಡ್ 140 ರನ್ ಕಲೆಹಾಕಿತು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Exit mobile version