Headlines

ರಾಜೀನಾಮೆ ಸುದ್ದಿ ಬೆನ್ನಲ್ಲೇ ತಮ್ಮ ಮಹತ್ವಕಾಂಕ್ಷಿ ಯೋಜನೆ ನೆನೆದ ಸಿದ್ದರಾಮಯ್ಯ, ಇದು ವಿದಾಯದ ಸುಳಿವೇ?

ಬೆಂಗಳೂರು, (ಮೇ 27): ಕರ್ನಾಟಕ ಕಾಂಗ್ರೆಸ್​​ನಲ್ಲಿ (Karnataka Congress) ಮಹತ್ವದ ರಾಜಕೀಯ ಬೆಳೆವಣಿಗೆಗಳು ಗರಿಗೆದರಿದ್ದು, ನಾಯಕತ್ವ ಬದಲಾವಣೆ ಖಚಿತವಾಗಿದೆ. ನಿನ್ನೆ (ಮೇ 26) ದೆಹಲಿಯಲ್ಲಿ ಹೈಕಮಾಂಡ್ ನಾಯಕರ ಜತೆ ಸರಣಿ ಸಭೆ ಬಳಿಕ ಸಿದ್ದರಾಮಯ್ಯನವರು (Siddaramaiah) ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದ್ದು, ಇದಕ್ಕೆ ಪೂರಕವೆಂಬಂತೆ ಬೇರೆ ಬೇರೆ ವಿದ್ಯಮಾನಗಳು ನಡೆಯುತ್ತಿವೆ. ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಸುದ್ದಿಗಳ ನಡುವೆಯೇ ಸಿದ್ದರಾಮಯ್ಯ ತಮ್ಮ ಸರ್ಕಾರದ ಮೂರು ವರ್ಷಗಳ ಸಾಧನೆಗಳ ಬಗ್ಗೆ ಟ್ವೀಟ್ ಮಾಡಿದ್ದಾರೆ. 5…

Read More

ಜಿಬಿಎ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಬಿಜೆಪಿ ಮುಖಂಡನ ಕಾಲು ಮುರಿತ: 6 ಅಡಿ ಆಳದ ಚರಂಡಿಗೆ ಬಿದ್ದ ಮಾಜಿ ಅಧ್ಯಕ್ಷ ರಾಘವೇಂದ್ರ ಶೆಟ್ಟಿ – Kannada News | Sanjayanagar Safety Scandal: Open Drain Injures BJP Leader, Exposing GBA’s Public Peril

ಬೆಂಗಳೂರು, ಜು.18: ರಾಜಧಾನಿಯ ಸಂಜಯನಗರದಲ್ಲಿ ಮಹಾನಗರ ಜಂಟಿ ಆಡಳಿತ (ಜಿಬಿಎ) ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಮತ್ತೊಂದು ಸಾರ್ವಜನಿಕ ಅವಘಡ ಸಂಭವಿಸಿದೆ. ಚರಂಡಿಯ ಹೂಳು ಎತ್ತಿದ ಬಳಿಕ ಚೇಂಬರ್ ಅನ್ನು ಮುಚ್ಚದೇ ಹಾಗೇ ಬಿಟ್ಟಿದ್ದರಿಂದಾಗಿ, ಫುಟ್‌ಪಾತ್ ಮೇಲೆ ನಡೆದುಕೊಂಡು ಹೋಗುತ್ತಿದ್ದ ಕರ್ನಾಟಕ ರಾಜ್ಯ ಕರಕುಶಲ ಮಂಡಳಿಯ ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮುಖಂಡ ಬೇಳೂರು ರಾಘವೇಂದ್ರ ಶೆಟ್ಟಿ ಅವರು ಆರು ಅಡಿ ಆಳದ ಚರಂಡಿಗೆ ಬಿದ್ದು ಕಾಲು ಮುರಿದುಕೊಂಡಿದ್ದಾರೆ. ನಿನ್ನೆ ರಾತ್ರಿ ಸಂಜಯನಗರದ ಡಾಲರ್ಸ್ ಕಾಲೋನಿ ಬಳಿ ಈ ಆಘಾತಕಾರಿ…

Read More

ಕೋಗಿಲು ಬಡಾವಣೆಯಲ್ಲಿ ಮನೆಗಳ ತೆರವಿಗೆ ಕೇರಳ, ಪಾಕ್​​ ಖ್ಯಾತೆ: ಕೇಂದ್ರ ಸಚಿವ ಸೋಮಣ್ಣ ಕಿಡಿ – Kannada News | Union Minister V.Somanna Slams Pakistan over Interference in Kogilu Demolition

ಕೇಂದ್ರ ಸಚಿವ ವಿ. ಸೋಮಣ್ಣ ಕಿಡಿ ಬೆಂಗಳೂರು, ಡಿಸೆಂಬರ್​​ 30: ಯಲಹಂಕದ ಕೋಗಿಲು ಬಡಾವಣೆಯಲ್ಲಿ ಅಕ್ರಮವಾಗಿ ನಿರ್ಮಿಸಲಾಗಿದ್ದ ಮನೆಗಳನ್ನು ಕರ್ನಾಟಕ ಸರ್ಕಾರ ನೆಲಸಮಗೊಳಿಸಿದ ವಿಚಾರ ದೇಶಾದ್ಯಂತ ಚರ್ಚೆಯಲ್ಲಿದೆ. ನೆರೆ ರಾಜ್ಯ ಕೇರಳವಂತೂ ಈ ವಿಚಾರವಾಗಿ ಕರ್ನಾಟಕದ ವಿರುದ್ಧ ನಿಗಿ ನಿಗಿ ಕೆಂಡ ಕಾರಿದೆ. ಆದರೆ ಯಾವುದಕ್ಕೂ ಸಂಬಂಧವೇ ಇಲ್ಲದ ಪಾಪಿ ಪಾಕಿಸ್ತಾನವೂ ಈ ವಿಚಾರದಲ್ಲಿ ಮೂಗು ತೂರಿಸಿರೋದೀಗ ಭಾರಿ ಆಕ್ರೋಶಕ್ಕೆ ಕಾರಣವಾಗ್ತಿದೆ. ಈ ಬಗ್ಗೆ ಕೇಂದ್ರ ಸಚಿವ ವಿ. ಸೋಮಣ್ಣ ಕಿಡಿ ಕಾರಿದ್ದಾರೆ. ಸೋಮಣ್ಣ ಆಕ್ರೋಶ ವಿ….

Read More

Daily Devotional: ಶುಭ ಕಾರ್ಯಗಳಲ್ಲಿ ಮೊದಲಿಗೆ ದೀಪವನ್ನ ಬೆಳಗೋದು ಯಾಕೆ?

ಬೆಂಗಳೂರು, ಮಾ.11: ನಿತ್ಯ ಭಕ್ತಿ ಕಾರ್ಯಕ್ರಮಕ್ಕೆ ಸುಸ್ವಾಗತ. ಯಾವುದೇ ಶುಭ ಸಮಾರಂಭ, ಉದ್ಘಾಟನೆ ಅಥವಾ ಹೊಸ ಕೆಲಸ ಕಾರ್ಯಗಳನ್ನು ಪ್ರಾರಂಭಿಸುವ ಮೊದಲು ದೀಪ ಬೆಳಗುವುದು ನಮ್ಮ ಸನಾತನ ಸಂಪ್ರದಾಯದಲ್ಲಿ ಹಾಸುಹೊಕ್ಕಾಗಿದೆ. ಈ ಪದ್ಧತಿಯ ಹಿಂದಿನ ಮಹತ್ವವನ್ನು ನಾವು ಅರಿಯಬೇಕು. ದೀಪಂ ಜ್ಯೋತಿ ಪರಬ್ರಹ್ಮ ದೀಪಂ ಜ್ಯೋತಿ ಜನಾರ್ದನಃ ದೀಪೋ ಹರತು ಮೇ ಪಾಪಾನಿ ಸಂಧ್ಯಾ ದೀಪ ನಮೋಸ್ತುತೇ ಎಂಬ ಶ್ಲೋಕ ದೀಪದ ಆಧ್ಯಾತ್ಮಿಕ ಶಕ್ತಿಯನ್ನು ಸಾರುತ್ತದೆ. ದೀಪವನ್ನು ಭಗವಂತನ ಸ್ವರೂಪವೆಂದು ಪರಿಗಣಿಸಲಾಗುತ್ತದೆ. ದೀಪದ ಜ್ವಾಲೆಯು ಯಾವಾಗಲೂ ಊರ್ಧ್ವಮುಖವಾಗಿ…

Read More

Premanand Maharaj: ಆಪ್ತ ಸ್ನೇಹಿತನೇ ಶತ್ರುವಾದರೆ ಏನು ಮಾಡಬೇಕು? ಪ್ರೇಮಾನಂದ ಮಹಾರಾಜರ ಆಧ್ಯಾತ್ಮಿಕ ಸಲಹೆ! – Kannada News | What to Do When a Best Friend Turns into an Enemy? Premanand Maharaj Shares Spiritual Wisdom

ಜೀವನದ ಏರಿಳಿತಗಳಲ್ಲಿ ನಾವು ಅನೇಕ ಜನರ ಸಂಪರ್ಕಕ್ಕೆ ಬರುತ್ತೇವೆ. ಕೆಲವರು ನಮಗೆ ಆಪ್ತರಾಗುತ್ತಾರೆ, ಇನ್ನು ಕೆಲವರು ಆತ್ಮೀಯ ಸ್ನೇಹಿತರಾಗುತ್ತಾರೆ. ಆದರೆ, ಕರುಡರಂತೆ ನಂಬಿದ ಅದೇ ಆಪ್ತ ಸ್ನೇಹಿತ ಇದ್ದಕ್ಕಿದ್ದಂತೆ ಶತ್ರುವಾಗಿ ಬದಲಾಗಿ ಬೆನ್ನಿಗೆ ಚೂರಿ ಹಾಕಿದರೆ ಏನು ಮಾಡಬೇಕು? ಇಂತಹ ಕಠಿಣ ಪರಿಸ್ಥಿತಿಯಲ್ಲಿ ಮನಸ್ಸಿನ ಶಾಂತಿಯನ್ನು ಕಾಪಾಡಿಕೊಳ್ಳುತ್ತಾ ಸನ್ನಿವೇಶವನ್ನು ಹೇಗೆ ನಿಭಾಯಿಸಬೇಕು ಎಂಬುದಕ್ಕೆ ವೃಂದಾವನದ ಜನಪ್ರಿಯ ಸಂತ ಹಾಗೂ ಆಧ್ಯಾತ್ಮಿಕ ಗುರು ಶ್ರೀ ಪ್ರೇಮಾನಂದ ಮಹಾರಾಜ್ ಅವರು ಸರಳ ಮತ್ತು ಮಾರ್ಮಿಕ ಮಾರ್ಗವನ್ನು ತೋರಿಸಿದ್ದಾರೆ. ಪ್ರತಿಕಾರಕ್ಕಿಂತ ದೂರವಿರುವುದೇ…

Read More

ಸೊಳ್ಳೆಗಳ ಸಂತತಿ ಮುಗಿಸಲು ಗೂಗಲ್ ಮಾಸ್ಟರ್ ಪ್ಲಾನ್!: 3.2 ಕೋಟಿ ‘ವಿಶೇಷ’ ಸೊಳ್ಳೆಗಳನ್ನು ಸೃಷ್ಟಿಸಿದ ಆಲ್ಫಾಬೆಟ್ – Kannada News

ಅಮೆರಿಕ, ಜೂ.2: ಪ್ರಪಂಚದಾದ್ಯಂತ ಸೊಳ್ಳೆಗಳಿಂದ ಹರಡುವ ರೋಗಗಳನ್ನು ನಿಯಂತ್ರಿಸಲು ಗೂಗಲ್‌ನ ಮಾತೃಸಂಸ್ಥೆ ಆಲ್ಫಾಬೆಟ್ ಒಂದು ವಿನೂತನ ಯೋಜನೆಯನ್ನು ಕೈಗೊಂಡಿದೆ. ಡಿಬಗ್ ಎಂಬ ಈ ಯೋಜನೆಯ ಅಡಿಯಲ್ಲಿ, 3.2 ಕೋಟಿ ಗಂಡು ಸೊಳ್ಳೆಗಳನ್ನು ಪ್ರಯೋಗಾಲಯದಲ್ಲಿ ಸಿದ್ಧಪಡಿಸಿ ಪರಿಸರಕ್ಕೆ ಬಿಡುಗಡೆ ಮಾಡಲು ಸಿದ್ಧತೆ ನಡೆಸಲಾಗಿದೆ. ಈ ಸೊಳ್ಳೆಗಳು ಓಲ್ಬಾಚಿಯ ಪೈಪಿ ಎಂಬ ನೈಸರ್ಗಿಕ ಬ್ಯಾಕ್ಟೀರಿಯಾವನ್ನು ಹೊಂದಿದ್ದು, ಇವು ಹೆಣ್ಣು ಸೊಳ್ಳೆಗಳೊಂದಿಗೆ ಮಿಲನಗೊಂಡಾಗ ಇಡುವ ಮೊಟ್ಟೆಗಳು ಒಡೆಯುವುದಿಲ್ಲ. ಇದರಿಂದ ಹೊಸ ಸೊಳ್ಳೆಗಳ ಜನನವನ್ನು ತಡೆದು ಕ್ರಮೇಣ ಸೊಳ್ಳೆ ಸಂತತಿಯನ್ನೇ ನಿರ್ಮೂಲನೆ ಮಾಡುವುದು…

Read More

ಶಿವಮೊಗ್ಗ: ಶಾಲೆಯಲ್ಲಿ ಆಟವಾಡುತ್ತಿದ್ದಾಗ ಆರು ವರ್ಷದ ಬಾಲಕ ಸಾವು, ಹೃದಯಾಘಾತ ಶಂಕೆ – Kannada News | Shivamogga Tragedy: 6 Year Old Class 1 Student Collapses and Dies While Playing at Govt School in Sagara; Heart Attack Suspected

ಶಿವಮೊಗ್ಗ, ಜೂನ್ 15: ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಹಾಳಸಸಿ ಗ್ರಾಮದ ಹಾಳಸಸಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಆರು ವರ್ಷದ ಬಾಲಕ ತ್ರಿಲೋಕ್ ಜೈನ್ ಹಠಾತ್ ಸಾವನ್ನಪ್ಪಿರುವಂತಹ ಆಘಾತಕಾರಿ ಘಟನೆ ನಡೆದಿದೆ. ಒಂದನೇ ತರಗತಿಯ ವಿದ್ಯಾರ್ಥಿಯಾಗಿದ್ದ ತ್ರಿಲೋಕ್ ಜೈನ್, ಕೊಡನವಳ್ಳಿ ಗೌತಮ್ ಮತ್ತು ಶಿಲ್ಪಾ ದಂಪತಿಯ ಪುತ್ರನಾಗಿದ್ದಾನೆ. ಹೃದಯಾಘಾತದಿಂದ ಮೃತಪಟ್ಟಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಶಾಲಾ ಆವರಣದಲ್ಲಿ ಆಟವಾಡುತ್ತಿದ್ದ ಸಂದರ್ಭದಲ್ಲಿ ಈ ಪುಟ್ಟ ಬಾಲಕ ಏಕಾಏಕಿ ಕುಸಿದು ಬಿದ್ದಿದ್ದಾನೆ. ತಕ್ಷಣ ಆತನನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಮಾರ್ಗಮಧ್ಯದಲ್ಲೇ ತ್ರಿಲೋಕ್ ಕೊನೆಯುಸಿರೆಳೆದಿದ್ದಾನೆ…

Read More

ಮನೆಯಲ್ಲಿ ಪೂಜೆ ಮಾಡಿಸುವ ನೆಪದಲ್ಲಿ ಬಾಬಾ ಕಿಡ್ನಾಪ್: 4.25 ಲಕ್ಷ ಸುಲಿಗೆ ಮಾಡಿದ ಗ್ಯಾಂಗ್ ಪೊಲೀಸರ ವಶಕ್ಕೆ! – Kannada News | Muslim Baba Kidnapped and Extorted of Rs 4.25 Lakh in Bengaluru; Four Arrested

ಆರೋಪಿಗಳಾದ ಆರಿಫ್, ಆದಿಲ್, ಖಾದಿರ್, ಇಮ್ರಾನ್ ಬೆಂಗಳೂರು, ಜುಲೈ 10: ಮನೆಯಲ್ಲಿ ಪೂಜೆ ಮಾಡಿಸುವ ನೆಪದಲ್ಲಿ ಬಾಬಾ​ ಒಬ್ಬರನ್ನು ಅಪಹರಿಸಿ, ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಬರೋಬ್ಬರಿ 4.25 ಲಕ್ಷ ರೂಪಾಯಿ ದೋಚಿದ್ದ ನಾಲ್ವರು ಕಿಡ್ನಾಪರ್ಸ್‌ಗಳನ್ನು (Kidnap) ಬೆಂಗಳೂರಿನ ಸಂಪಿಗೆಹಳ್ಳಿ ಪೊಲೀಸರು ಬಂಧಿಸಿದ್ದಾರೆ.ತುಮಕೂರು ಮೂಲದ ಆರಿಫ್ ಮತ್ತು ಆದಿಲ್, ಚಿಕ್ಕಬಾಣಾವರದ ಇಮ್ರಾನ್ ಹಾಗೂ ಆರ್.ಟಿ. ನಗರದ ಕಾದೀರ್ ಬಂಧಿತ ಆರೋಪಿಗಳಾಗಿದ್ದಾರೆ. ನಗರದ ಯಲಹಂಕದಲ್ಲಿ ವಾಸವಾಗಿರುವ ಬಾಬಾ​ ಮೊಹಮ್ಮದ್ ತಾರಿಕ್ ಹುಸೇನ್ ಎಂಬುವರು ನೀಡಿದ ದೂರಿನ ಮೇರೆಗೆ ಪೊಲೀಸರು ಕಾರ್ಯಾಚರಣೆ…

Read More

ದಾವಣಗೆರೆ ಬೆನ್ನಲ್ಲೇ ಬಾಗಲಕೋಟೆ ಉಪಚುನಾವಣೆಯಲ್ಲೂ ಕಾಂಗ್ರೆಸ್​​ಗೆ​ ಒಳ ಏಟು – Kannada News | thress Congress Leaders anti party activities In Bagalkot By Election

ಬಾಗಲಕೋಟೆ, (ಏಪ್ರಿಲ್ 17): ದಾವಣಗೆರೆ ದಕ್ಷಿಣ ಉಪಚುನಾವಣೆಯಲ್ಲಿ (Davanagere south By Election)  ಕೆಲ ಮುಸ್ಲಿಂ ನಾಯಕರು ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ದಾರೆಂಬ ಆರೋಪಗಳು ಕೇಳಿಬಂದಿದ್ದು, ಈ ಸಂಬಂಧ ಅಬ್ದುಲ್ ಜಬ್ಬಾರ್ ಅವರನ್ನ ಕಾಂಗ್ರೆಸ್​​ನಿಂದ ಅಮಾನತು ಮಾಡಲಾಗಿದೆ. ಇನ್ನು ನಸೀರ್ ಅಹಮ್ಮದ್ ಅವರನ್ನ ಸಿಎಂ ರಾಜಕೀಯ ಕಾರ್ಯದರ್ಶಿಯಿಂದ ವಜಾ ಮಾಡಲಾಗಿದೆ. ಇದರ ಬೆನ್ನಲ್ಲೇ ಇದೀಗ ಬಾಗಲಕೋಟೆ ಬೈ ಎಲೆಕ್ಷನ್ ನಲ್ಲೂ (Bagalkot By Election) ಸಹ ಕಾಂಗ್ರೆಸ್ ಮುಖಂಡರು ಪಕ್ಷ ವಿರೋಧಿ ಚಟುವಟಿಕೆ ನಡೆಸಿರುವುದು ಕಂಡುಬಂದಿದ್ದು, ಈ…

Read More

ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ

ಬೆಂಗಳೂರು, ಮೇ 31: ಇಡೀ ಕರುನಾಡು ಆರ್‌ಸಿಬಿ ಗೆಲುವಿಗಾಗಿ ಪ್ರಾರ್ಥಿಸುತ್ತಿದೆ. ಗೆಲುವು ಸಂಭ್ರಮಾಚರಣೆಗೆ ಬೆಂಗಳೂರಿಗರು ಸಜ್ಜಾಗಿದ್ದಾರೆಯಾದರೂ ರೂಲ್ಸ್‌ಗಳು ಅಡ್ಡಿ ಆಗಿವೆ. ಈ ಮಹತ್ವದ ಪಂದ್ಯದ ಹಿನ್ನೆಲೆಯಲ್ಲಿ ಬೆಂಗಳೂರು ನಗರದಲ್ಲಿ ಸಂಭ್ರಮಾಚರಣೆಗಳಿಗೆ ಸಂಬಂಧಿಸಿದಂತೆ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ಆರ್ಸಿಬಿ ಅಭಿಮಾನಿಗಳ ಹೆಚ್ಚಿನ ಉತ್ಸಾಹವನ್ನು ಗಮನದಲ್ಲಿಟ್ಟುಕೊಂಡು, ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ತಡೆಯಲು ಮತ್ತು ನಿಯಮಬಾಹಿರ ಸಂಭ್ರಮಾಚರಣೆಗಳನ್ನು ನಿಯಂತ್ರಿಸಲು ವ್ಯಾಪಕ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ನಗರದಾದ್ಯಂತ ಪೊಲೀಸರಿಂದ ತೀವ್ರ ನಿಗಾ ವಹಿಸಲಾಗಿದ್ದು, ವಿಶೇಷವಾಗಿ ಎಂ.ಜಿ. ರೋಡ್, ಚರ್ಚ್‌ಸ್ಟ್ರೀಟ್ ಸೇರಿದಂತೆ ಹಲವಾರು…

Read More