‘ನೀನ್ಯಾರು? ಯಾವ ರಾಜ್ಯದವನು?’ ಪ್ರಕಾಶ್ ರೈಗೆ ತೆಲುಗು ನಿರ್ಮಾಪಕ ಪ್ರಶ್ನೆ – Kannada News

ಪ್ರಕಾಶ್ ರೈ (Prakash Raj) ಬಹುಭಾಷಾ ನಟ. ಕನ್ನಡ, ತೆಲುಗು, ತಮಿಳು, ಹಿಂದಿ ಭಾಷೆಗಳಲ್ಲಿ ವರ್ಷಗಳಿಂದಲೂ ನಟಿಸುತ್ತಾ ಬರುತ್ತಿದ್ದಾರೆ. ಮೂಲತಃ ಕರ್ನಾಟಕದವರಾದರೂ ಪ್ರಕಾಶ್ ರೈ ಹೆಚ್ಚಿಗೆ ನಟಿಸಿರುವುದು ತೆಲುಗು ಮತ್ತು ತಮಿಳು ಭಾಷೆಯ ಸಿನಿಮಾಗಳಲ್ಲೇ. ಸಿನಿಮಾಗಳಲ್ಲಿ ಮಾತ್ರವೇ ಅಲ್ಲದೆ ಅವರು ರಾಜಕೀಯದಲ್ಲಿ, ಸಾಮಾಜಿಕವಾಗಿಯೂ ಸಕ್ರಿಯವಾಗಿರುತ್ತಾರೆ. ಲೋಕಸಭೆ ಚುನಾವಣೆಗೂ ಸ್ಪರ್ಧಿಸಿದ್ದ ಪ್ರಕಾಶ್ ರೈ, ಕರ್ನಾಟಕದ ಮಾತ್ರವಲ್ಲ ಬೇರೆ ಬೇರೆ ರಾಜ್ಯಗಳ ರಾಜಕೀಯದ ಬಗ್ಗೆಯೂ ಆಸಕ್ತಿ ಉಳ್ಳವರಾಗಿದ್ದು, ಸಾಮಾಜಿಕ ಜಾಲತಾಣದ ಮೂಲಕ ರಾಜಕೀಯ ವಿದ್ಯಮಾನಗಳ ಟೀಕೆ, ವಿಮರ್ಶೆಗಳನ್ನು ಮಾಡುತ್ತಾರೆ. ಆದರೆ ಇದೇ ಕಾರಣಕ್ಕೆ ಖುದ್ದು ಸಾಕಷ್ಟು ಟೀಕೆ ಮತ್ತು ನಿಂದನೆಗೂ ಗುರಿ ಆಗುತ್ತಾರೆ.

ಪ್ರಕಾಶ್ ರೈ, ಬಿಜೆಪಿಯ ವಿರುದ್ಧ ಪದೇ ಪದೇ ಮಾತನಾಡುತ್ತಿರುತ್ತಾರೆ. ತೆಲುಗಿನ ಸ್ಟಾರ್ ನಟ ಪವನ್ ಕಲ್ಯಾಣ್ ಅವರು ಬಿಜೆಪಿ ಜೊತೆ ಕೈಜೋಡಿಸಿದ ಬಳಿಕ ಅವರನ್ನೂ ಸಹ ಆಗಾಗ್ಗೆ ಟೀಕೆ ಮಾಡುತ್ತಲೇ ಇರುತ್ತಾರೆ. ಇತ್ತೀಚೆಗಷ್ಟೆ ಪವನ್ ಕಲ್ಯಾಣ್ ಅವರು ತೆಲಂಗಾಣ ರಾಜ್ಯದಲ್ಲಿ ಬಹಿರಂಗ ಸಮಾವೇಶ ಮಾಡಲು ಕೋರಿದ್ದ ಅನುಮತಿಯನ್ನು ತೆಲಂಗಾಣ ಸರ್ಕಾರ ನಿರಾಕರಿಸಿತ್ತು. ಇದರ ವಿರುದ್ಧ ಮಾತನಾಡಿದ್ದ ಡಿಸಿಎಂ ಪವನ್ ಕಲ್ಯಾಣ್, ‘ತೆಲಂಗಾಣ ಯಾರ ಅಪ್ಪನ ಆಸ್ತಿ ಅಲ್ಲ’ ಎಂದು ಗುಡುಗಿದ್ದರು.

ಈ ಬಗ್ಗೆ ಟ್ವೀಟ್ ಮಾಡಿದ್ದ ಪ್ರಕಾಶ್ ರೈ, ‘ನೀವು ಬರುವುದಾದರೆ ಬನ್ನಿ, ಆದರೆ ಏಕೆ ಬರುತ್ತಿದ್ದೀರಿ ಎಂದು ಹೇಳಿ ಬನ್ನಿ, ಸುಮ್ಮನೆ ಬರುತ್ತಿದ್ದೀರಾ? ಏನಾದರೂ ಕೆಲಸ ಇದ್ದು ಬರುತ್ತಿದ್ದೀರಾ? ಒಬ್ಬರೇ ಬರುತ್ತಿದ್ದೀರಾ? ಜೊತೆಗಾರರನ್ನೂ ಕರೆದುಕೊಂಡು ಬರುತ್ತಿದ್ದೀರಾ?’ ಎಂದು ಕಾಲೆಳೆದಿದ್ದರು. ಇದೀಗ ತೆಲುಗು ಚಿತ್ರರಂಗದಲ್ಲಿ ಹಾಸ್ಯ ನಟನಾಗಿ ಹಾಗೂ ನಿರ್ಮಾಪಕನಾಗಿಯೂ ಗುರುತಿಸಿಕೊಂಡಿರುವ ಬಂಡ್ಲ ಗಣೇಶ್, ಪ್ರಕಾಶ್ ರೈ ಅವರನ್ನು ಏಕ ವಚನದಲ್ಲಿ ಟೀಕೆ ಮಾಡಿದ್ದಾರೆ.

ಇದನ್ನೂ ಓದಿ:‘ಫೈಲ್ಸು-ಪೈಲ್ಸು’ಗಳಿಗೆಲ್ಲ ಪ್ರಶಸ್ತಿ: ಪ್ರಕಾಶ್ ರೈ ವ್ಯಂಗ್ಯ

ಪ್ರಕಾಶ್ ರೈ ಅವರ ಟ್ವೀಟ್​​ಗೆ ಮರು ಟ್ವೀಟ್ ಮಾಡಿರುವ ಬಂಡ್ಲ ಗಣೇಶ್, ‘ಸುಮ್ಮನೆ ಯಾಕೆ ಎಲ್ಲದರಲ್ಲೂ ಮೂಗು ತೂರಿಸುವುದು? ನೀನ್ಯಾರು?, ನೀನು ತೆಲುಗಿನವನಾ? ತಮಿಳಿನವನಾ? ಅಥವಾ ಕನ್ನಡಿಗನಾ? ನಿನ್ನ ಊರು ಯಾವುದು? ನಿನ್ನ ಕತೆ ಏನು? ಪ್ರತಿ ವಿಷಯದಲ್ಲೂ ಜಡ್ಜ್​​ಮೆಂಟ್ ಕೊಡಲು ನೀನೇನು ಕಲೆಕ್ಟರ್ರಾ? ಅಥವಾ ದೇಶದ ಪ್ರಧಾನಿಯಾ? ಎಲ್ಲಿ ನೋಡಿದರೂ ನೀನೆ, ನಿನ್ನ ಜೀವನಕ್ಕೆ ಏನಾದರೂ ಕೆಲಸ ಹುಡುಕಿಕೊ, ಪ್ರತಿ ವಿಷಯದಲ್ಲೂ ಮಧ್ಯಕ್ಕೆ ತೂರಿ ಹೀರೋ ಅಂದುಕೊಳ್ಳಬೇಡ. ಮೊದಲು ನಿನ್ನ ಅಡ್ರೆಸ್ ನೀನು ಹುಡುಕಿಕೊ, ನಂತರ ಪ್ರಪಂಚವನ್ನು ಬದಲಾಯಿಸಲು ಯತ್ನಿಸು’ ಎಂದಿದ್ದಾರೆ ಬಂಡ್ಲ ಗಣೇಶ್.

ಬಂಡ್ಲ ಗಣೇಶ್ ಅವರ ಪ್ರತಿಕ್ರಿಯೆಗೆ ಪರ, ವಿರೋಧ ಅಭಿಪ್ರಾಯಗಳು ವ್ಯಕ್ತವಾಗಿವೆ. ಪ್ರಕಾಶ್ ರೈ ಅಂಥಹಾ ಹಿರಿಯ ನಟರನ್ನು ಏಕವಚನದಲ್ಲಿ ಟೀಕೆ ಮಾಡಿದ್ದಕ್ಕೆ ಕೆಲವರು ಆಕ್ಷೇಪಿಸಿದ್ದಾರೆ. ಬಂಡ್ಲ ಗಣೇಶ್ ಅವರು ಪವನ್ ಕಲ್ಯಾಣ್ ಅವರ ಆಪ್ತರಲ್ಲಿ ಒಬ್ಬರಾಗಿದ್ದಾರೆ. ಬಂಡ್ಲ ಗಣೇಶ್, ತಮ್ಮ ಆಕ್ರೋಶ ಭರಿತ ಭಾಷಣಗಳು, ಸಂದರ್ಶನಗಳಿಂದಲೇ ಜನಪ್ರಿಯರು. ಈಗ ಪ್ರಕಾಶ್ ರೈ ವಿರುದ್ಧ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ವಿಶ್ವ ಕ್ರಿಕೆಟ್​ನಲ್ಲಿ ಈಗ ವೈಭವ್​ದೇ ಮಾತು; ಟೆಸ್ಟ್​ಗೆ ಆಯ್ಕೆ ಮಾಡಿ ಎಂದ ದಿಗ್ಗಜ ಕ್ರಿಕೆಟಿಗರು – Kannada News

ಕೇವಲ 15ನೇ ವರ್ಷಕ್ಕೆ ತನ್ನ ಆಟದ ಮೂಲಕ ವಿಶ್ವ ಕ್ರಿಕೆಟ್​ನಲ್ಲಿ ಸದ್ದು ಮಾಡುತ್ತಿರುವ ವೈಭವ್ ಸೂರ್ಯವಂಶಿ (Vaibhav Suryavanshi), 2026 ರ ಐಪಿಎಲ್​ನಲ್ಲಿ 750 ಕ್ಕೂ ಹೆಚ್ಚು ರನ್ ಕಲೆಹಾಕಿ ಆರೆಂಜ್ ಕ್ಯಾಪ್ ಗೆದ್ದಿದ್ದಲ್ಲದೆ ಅತಿ ಕಡಿಮೆ ವಯಸ್ಸಿನಲ್ಲಿ ಈ ಸಾಧನೆ ಮಾಡಿದ ಆಟಗಾರ ಎಂಬ ದಾಖಲೆಯನ್ನು ನಿರ್ಮಿಸಿದರು. ಇದರ ಜೊತೆಗೆ ಈ ಸೀಸನ್​ನಲ್ಲಿ ಅತ್ಯಧಿಕ 5 ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡರು. ವೈಭವ್ ಅವರ ಆಟಕ್ಕೆ ಭಾರತದಲ್ಲಿ ಮಾತ್ರವಲ್ಲ ವಿದೇಶಗಳಲ್ಲೂ ಅಭಿಮಾನಿಗಳ ಬಳಗ ಹುಟ್ಟಿಕೊಂಡಿದೆ. ಮಾಜಿ ಕ್ರಿಕೆಟಿಗರು ಕೂಡ ವೈಭವ್ ಅವರ ಆಟಕ್ಕೆ ಫ್ಯಾನ್ ಆಗಿಬಿಟ್ಟಿದ್ದಾರೆ. ಪ್ರಸ್ತುತ ಭಾರತ ಎ ತಂಡದಲ್ಲಿ ಸ್ಥಾನ ಪಡೆದಿರುವ ವೈಭವ್, ತ್ರಿಕೋನ ಸರಣಿಗಾಗಿ ಶ್ರೀಲಂಕಾಕ್ಕೆ ಹಾರಿದ್ದಾರೆ. ಈ ಸರಣಿಯಲ್ಲಿ ವೈಭವ್ ಅವರ ಪ್ರದರ್ಶನ ಇದೇ ರೀತಿ ಮುಂದುವರೆದರೆ ಅವರಿಗೆ ಭಾರತ ಟಿ20 ತಂಡದಲ್ಲಿ ಖಾಯಂ ಸ್ಥಾನ ಖಚಿತ.

ವೈಭವ್​ಗೆ ಟೆಸ್ಟ್ ತಂಡದಲ್ಲಿ ಸ್ಥಾನ?

ಆದಾಗ್ಯೂ ವೈಭವ್ ಭಾರತ ಏಕದಿನ ಹಾಗೂ ಟೆಸ್ಟ್ ತಂಡದಲ್ಲಿ ಸ್ಥಾನ ಪಡೆಯಬೇಕೆಂದರೆ ಇನ್ನು ಕಾಯಬೇಕಾಗುತ್ತದೆ. ಆದಾಗ್ಯೂ ವೈಭವ್ ಅವರ ಆಟವನ್ನು ಮೆಚ್ಚಿರುವ ಮಾಜಿ ಕ್ರಿಕೆಟಿಗರಾದ ನಾಸರ್ ಹುಸೇನ್ ಮತ್ತು ಸೈಮನ್ ಡೌಲ್ ವೈಭವ್ ಸೂರ್ಯವಂಶಿಗೆ ಭಾರತ ಟೆಸ್ಟ್ ತಂಡದಲ್ಲಿ ಸ್ಥಾನ ನೀಡಬೇಕು ಎಂಬ ಅಭಿಪ್ರಾಯವನ್ನು ಹೊರಹಾಕಿದ್ದಾರೆ. ಪ್ರಸ್ತುತ ಇಂಗ್ಲೆಂಡ್‌ನ ಲಾರ್ಡ್ಸ್‌ನಲ್ಲಿ ನಡೆಯುತ್ತಿರುವ ಇಂಗ್ಲೆಂಡ್‌ ಹಾಗೂ ನ್ಯೂಜಿಲೆಂಡ್ ನಡುವಿನ ಟೆಸ್ಟ್ ಪಂದ್ಯದಲ್ಲಿ ವೀಕ್ಷಕ ವಿವರಣೆ ನೀಡುತ್ತಿದ್ದ ಇಯಾನ್ ವಾರ್ಡ್, ಭಾರತ ಟೆಸ್ಟ್ ತಂಡದಲ್ಲಿ ಸೂರ್ಯವಂಶಿ ಅವರನ್ನು ಆರಂಭಿಕನಾಗಿ ಆಡಿಸಬೇಕು ಎಂದರು.

ಸಚಿನ್ ತೆಂಡೂಲ್ಕರ್​ಗೆ ಹೋಲಿಕೆ

ಇದಕ್ಕೆ ಪ್ರತಿಕ್ರಿಯಿಸಿದ ನಾಸರ್ ಹುಸೇನ್, ಆ ದಿನ ದೂರವಿಲ್ಲ, ನಾನು ಕೂಡ ಅದನ್ನು ಎದುರು ನೋಡುತ್ತಿದ್ದೇನೆ. ಐಪಿಎಲ್‌ನಲ್ಲಿ ಅತಿ ಹೆಚ್ಚು ರನ್ ಬಾರಿಸಿದ ವೈಭವ್​ಗೆ ಬಿಸಿಸಿಐ, ಭಾರತ ಟೆಸ್ಟ್ ತಂಡದಲ್ಲಿ ಜಾಗ ಮಾಡಿಕೊಡಬೇಕು ಎಂದರು. ಇತ್ತ ಸೈಮನ್ ಡೌಲ್ ಈ ಮಾತನ್ನು ಕೇಳಿ ನಕ್ಕರಾದರೂ, ನಾನು ಕೂಡ ವೈಭವ್ ಅವರ ಆಟಕ್ಕೆ ಅಭಿಮಾನಿಯಾಗಿದ್ದೇನೆ. ಅವರ ಪ್ರಸ್ತುತ ಆಟ ನನಗೆ ಸಚಿನ್ ತೆಂಡೂಲ್ಕರ್ ಅವರ ಆರಂಭಿಕ ದಿನಗಳನ್ನು ನೆನಪಿಸುತ್ತದೆ ಎಂದರು. ಈ ಮೂವರ ಅಭಿಪ್ರಾಯ ಏನೇ ಇದ್ದರೂ ವೈಭವ್ ಟೆಸ್ಟ್ ತಂಡದಲ್ಲಿ ಸ್ಥಾನ ಪಡೆಯಲು ಇನ್ನು ಕಾಯಬೇಕಾಗಬಹುದು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 5:52 pm, Fri, 5 June 26

Source link

ಸಿಮ್ ಸ್ವಾಪಿಂಗ್ ಹುಷಾರ್..! ದಿಢೀರನೇ ಸಿಮ್ ಡೀಆ್ಯಕ್ಟಿವೇಟ್ ಆಯ್ತು, ನೋಡನೋಡುತ್ತಿದ್ದಂತೆ ಬ್ಯಾಂಕ್ ಖಾತೆಯಿಂದ ಹಣ ಮಾಯ ಆಯ್ತು – Kannada News

ಬೆಂಗಳೂರು, ಜೂನ್ 5: ಉದ್ಯಾನನಗರಿಯಲ್ಲಿ ಅತ್ಯಂತ ಶಾಕಿಂಗ್ ಆದ ‘ಸಿಮ್ ಸ್ವ್ಯಾಪ್’ (SIM Swap) ಅಥವಾ ಸಿಮ್ ಪೋರ್ಟಿಂಗ್ ಸೈಬರ್ ವಂಚನೆ ನಡೆದಿದೆ. ಸಂತ್ರಸ್ತ ವ್ಯಕ್ತಿಯ ಮೊಬೈಲ್ ಸಿಮ್ ಅನ್ನು ಆತನ ಅರಿವಿಲ್ಲದೆಯೇ ಬೇರೆ ನೆಟ್ವರ್ಕ್​ಗೆ ಪೋರ್ಟ್ ಮಾಡಲಾಗಿದೆ. ಅದಾಗಿ ಕೆಲವೇ ದಿನಗಳಲ್ಲಿ ಆತನ ಬ್ಯಾಂಕ್ ಅಕೌಂಟ್​ನಿಂದ 7.2 ಲಕ್ಷ ರೂ ಮಂಗಮಾಯವಾಗಿದೆ.

ಬೆಂಗಳೂರಿನ ಬಿಟಿಎಂ ಲೇಔಟ್ ನಿವಾಸಿಯಾದ ಬಿಹಾರ ಮೂಲದ ಕಮಲೇಶ್ ಕುಮಾರ್ ಎಂಬಾತ ಸಂತ್ರಸ್ತ ವ್ಯಕ್ತಿ. ಇವರು ನೀಡಿರುವ ದೂರಿನ ಪ್ರಕಾರ ಮೇ 25ರಂದು ಯಾವುದೇ ಮುನ್ಸೂಚನೆ ಇಲ್ಲದೆಯೇ ಅವರ ಏರ್​ಟೆಲ್ ಸಿಮ್ ಕಾರ್ಡ್ ಕೆಲಸ ಮಾಡುವುದನ್ನು ದಿಢೀರನೆ ನಿಲ್ಲಿಸಿತ್ತು. ಮರುದಿನ ಇವರು ಏರ್​ಟೆಲ್ ಔಟ್​ಲೆಟ್​ಗೆ ಹೋಗಿ ವಿಚಾರಿಸಿದಾಗ ಇವರ ಸಿಮ್ ಅನ್ನು ಜಿಯೋ ನೆಟ್ವರ್ಕ್​ಗೆ ಪೋರ್ಟ್ (SIM Ported) ಮಾಡಲಾಗಿತ್ತು. ಆದರೆ, ಇದ್ಯಾವುದೂ ಕೂಡ ಕಮಲೇಶ್​ಗೆ ಗೊತ್ತಾಗಿರಲಿಲ್ಲ.

ಜಿಯೋ ಸ್ಟೋರ್​ನಲ್ಲಿ ವಿಚಾರಿಸಿದಾಗ, ಸಿಮ್ ಕಾರ್ಡ್ ಅನ್ನು ಶಹಬಾಜ್ ಅನ್ಸಾರಿ ಎನ್ನುವ ಹೆಸರಿನಲ್ಲಿ ಪಡೆಯಲಾಗಿತ್ತು. ಆ ವ್ಯಕ್ತಿ ತನಗೆ ಗೊತ್ತೇ ಇಲ್ಲ ಎನ್ನುತ್ತಾರೆ ಕಮಲೇಶ್. ಮೇ 27ರಂದು ಅವರು ಮೈಕೋ ಲೇ ಔಟ್ ಪೊಲೀಸ್ ಠಾಣೆಯಲ್ಲಿ ದೂರು ಕೊಡುತ್ತಾರೆ.

ಬ್ಯಾಂಕ್ ಖಾತೆಗೆ ಕನ್ನ: ಒಮ್ಮೆ ಸಿಮ್ ವಂಚಕರ ಕೈ ಸೇರಿದಾಗ, ಸಂತ್ರಸ್ತ ವ್ಯಕ್ತಿಯ ಬ್ಯಾಂಕ್ ಖಾತೆಗೆ ಲಿಂಕ್ ಆಗಿದ್ದ ಫೋನ್ ಸಂಖ್ಯೆಗೆ ಬರುವ ಎಲ್ಲಾ ಒಟಿಪಿಗಳು (OTP – One Time Password) ವಂಚಕರ ಮೊಬೈಲ್‌ಗೆ ಹೋಗಲು ಶುರುವಾಗಿದೆ. ಇದನ್ನು ಬಳಸಿಕೊಂಡು ವಂಚಕರು ಮೇ 27ರಿಂದ 29ರವವರೆಗಿನ ಅವಧಿಯಲ್ಲಿ ಅವರ ಬ್ಯಾಂಕ್ ಖಾತೆಯಿಂದ ಬರೋಬ್ಬರಿ 7.2 ಲಕ್ಷ ರೂ ಅನ್ನು ಬೇರೆ ಖಾತೆಗಳಿಗೆ ವರ್ಗಾಯಿಸಿಕೊಂಡಿದ್ದಾರೆ.

ಇದನ್ನೂ ಓದಿ: ಆರ್ಥಿಕತೆಯಲ್ಲಿ ಭರ್ಜರಿ ಕ್ಯಾಷ್ ಇದ್ದರೂ ಎಟಿಎಂಗಳಲ್ಲಿ ಇಲ್ಲ ಹೆಚ್ಚು ನೋಟು; ಕರ್ನಾಟಕದಲ್ಲೇ ಅತಿಹೆಚ್ಚು ಕೊರತೆ; ಯಾಕೆ ಈ ಕಥೆ?

ತಮ್ಮ ಫೋನ್ ನೆಟ್‌ವರ್ಕ್ ಇಲ್ಲದಿರುವುದನ್ನು ಗಮನಿಸಿ, ಟೆಲಿಕಾಂ ಆಫೀಸ್‌ಗೆ ಹೋಗಿ ಹೊಸ ಸಿಮ್ ಪಡೆದು ಆಕ್ಟಿವೇಟ್ ಮಾಡಿದಾಗ ಸಂತ್ರಸ್ತರಿಗೆ ತಮ್ಮ ಬ್ಯಾಂಕ್ ಖಾತೆಯಿಂದ ಹಣ ಲೂಟಿಯಾಗಿರುವುದು ಗೊತ್ತಾಗಿದೆ. ತಕ್ಷಣ ಅವರು ಬೆಂಗಳೂರಿನ ಸೈಬರ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

‘ಸಿಮ್ ಸ್ವ್ಯಾಪ್’ ವಂಚನೆ ಹೇಗೆ ನಡೆಯುತ್ತದೆ?

ಸಿಮ್ ಸ್ವಾಪಿಂಗ್ ಎಂಬುದು ಇತ್ತೀಚಿನ ದಿನಗಳಲ್ಲಿ ಸೈಬರ್ ಅಪರಾಧಿಗಳು ಬಳಸುತ್ತಿರುವ ಅತ್ಯಂತ ಅಪಾಯಕಾರಿ ತಂತ್ರವಾಗಿದೆ. ಮೊದಲಿಗೆ ವಂಚಕರು ಫಿಶಿಂಗ್ ಇಮೇಲ್, ನಕಲಿ ಲಿಂಕ್‌ಗಳು ಅಥವಾ ಸೋಶಿಯಲ್ ಇಂಜಿನಿಯರಿಂಗ್ ಮೂಲಕ ನಿಮ್ಮ ಬ್ಯಾಂಕ್ ಖಾತೆ ವಿವರ, ಆಧಾರ್ ಕಾರ್ಡ್ ಅಥವಾ ಪ್ಯಾನ್ ಕಾರ್ಡ್ ಮಾಹಿತಿಯನ್ನು ಕದಿಯುತ್ತಾರೆ.

ಈ ದಾಖಲೆಗಳನ್ನು ಬಳಸಿ ನಿಮ್ಮ ಹೆಸರಿನಲ್ಲಿ ಟೆಲಿಕಾಂ ಆಪರೇಟರ್‌ಗೆ ಕರೆ ಮಾಡಿ “ನನ್ನ ಸಿಮ್ ಕಳೆದುಹೋಗಿದೆ” ಎಂದು ಹೊಸ ಸಿಮ್ ಕೇಳುತ್ತಾರೆ ಅಥವಾ ಬೇರೆ ನೆಟ್‌ವರ್ಕ್‌ಗೆ ಪೋರ್ಟ್ ಮಾಡಲು ವಿನಂತಿಸುತ್ತಾರೆ.

ಟೆಲಿಕಾಂ ಕಂಪನಿಯು ಹೊಸ ಸಿಮ್ ಆಕ್ಟಿವೇಟ್ ಮಾಡಿದ ತಕ್ಷಣ, ನಿಮ್ಮ ಫೋನ್‌ನಲ್ಲಿರುವ ಅಸಲಿ ಸಿಮ್ ಸಿಗ್ನಲ್ ಕಳೆದುಕೊಳ್ಳುತ್ತದೆ (No Service ಬರುತ್ತದೆ).

ಇದನ್ನೂ ಓದಿ: ಬಂಡವಾಳ ಆಕರ್ಷಿಸಲು ಬ್ಯಾಂಕುಗಳಿಗೆ ಹೆಡ್ಡಿಂಗ್ ಸಪೋರ್ಟ್​ನಿಂದ ಹಿಡಿದು ಎನ್​ಆರ್​ಐ ಹೂಡಿಕೆ ಮಿತಿ ಹೆಚ್ಚಳದವರೆಗೆ ಆರ್​ಬಿಐನಿಂದ 5 ಕ್ರಮಗಳು

ನಿಮ್ಮ ಫೋನ್ ಬಂದ್ ಆಗಿರುವ ಸಮಯದಲ್ಲಿ, ವಂಚಕರು ನಿಮ್ಮ ಬ್ಯಾಂಕ್ ಖಾತೆಯ ಇಂಟರ್ನೆಟ್ ಬ್ಯಾಂಕಿಂಗ್ ಪಾಸ್‌ವರ್ಡ್ ರಿಸೆಟ್ ಮಾಡಿ, ಅವರ ಬಳಿ ಇರುವ ಸಿಮ್‌ಗೆ ಬರುವ ಒಟಿಪಿ ಬಳಸಿ ಹಣ ಲೂಟಿ ಮಾಡುತ್ತಾರೆ.

ಸೈಬರ್ ಸುರಕ್ಷತಾ ಮುನ್ನೆಚ್ಚರಿಕೆ: ನಿಮ್ಮ ಮೊಬೈಲ್‌ನಲ್ಲಿ ಯಾವುದೇ ಕಾರಣವಿಲ್ಲದೆ ದಿಢೀರನೆ ಸಿಗ್ನಲ್ ಸಂಪೂರ್ಣವಾಗಿ ಕಟ್ ಆಗಿ “No Service” ಅಥವಾ “Invalid SIM” ಎಂದು ಬಂದರೆ ನಿರ್ಲಕ್ಷಿಸಬೇಡಿ. ತಕ್ಷಣವೇ ನಿಮ್ಮ ಟೆಲಿಕಾಂ ಕಂಪನಿಯನ್ನು ಸಂಪರ್ಕಿಸಿ ವಿಚಾರಿಸಿ ಮತ್ತು ನಿಮ್ಮ ಬ್ಯಾಂಕ್ ಖಾತೆಗಳನ್ನು ತಾತ್ಕಾಲಿಕವಾಗಿ ಬ್ಲಾಕ್ ಮಾಡಿ. ಇಂತಹ ವಂಚನೆಗೆ ಒಳಗಾದರೆ ತಕ್ಷಣ 1930 ಸೈಬರ್ ಹೆಲ್ಪ್‌ಲೈನ್‌ಗೆ ಕರೆ ಮಾಡಿ ದೂರು ನೀಡಿ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ರಾಮಲಿಂಗಾ ರೆಡ್ಡಿ ರಾಜೀನಾಮೆ ಸರ್ಕಾರಕ್ಕೆ ಎಚ್ಚರಿಕೆ ಗಂಟೆ: ಹೆಚ್​ಕೆ ಪಾಟೀಲ್ ಶಾಕಿಂಗ್ ಮಾತು – Kannada News

ಬೆಂಗಳೂರು, ಜೂನ್ 5: ಖಾತೆ ಹಂಚಿಕೆ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್ (Congress) ಪಕ್ಷದಲ್ಲಿ ಸ್ಫೋಟಗೊಂಡಿರುವ ಅಸಮಾಧಾನದ ಜ್ವಾಲೆ ಇದೀಗ ಮತ್ತಷ್ಟು ತೀವ್ರಗೊಂಡಿದೆ. ಹಿರಿಯ ನಾಯಕ ರಾಮಲಿಂಗಾ ರೆಡ್ಡಿ ದಿಢೀರ್ ರಾಜೀನಾಮೆ ನಿರ್ಧಾರವು ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದ್ದು, ಈ ಕುರಿತು ಕಾಂಗ್ರೆಸ್‌ನ ಮತ್ತೊಬ್ಬ ಹಿರಿಯ ನಾಯಕ ಹೆಚ್​​ಕೆ ಪಾಟೀಲ್ ಗಂಭೀರ ಕಳವಳ ವ್ಯಕ್ತಪಡಿಸಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಮಲಿಂಗಾ ರೆಡ್ಡಿ ರಾಜೀನಾಮೆ ನಡೆ ಸರ್ಕಾರ ಹಾಗೂ ಪಕ್ಷದ ನಾಯಕತ್ವಕ್ಕೆ ಒಂದು ದೊಡ್ಡ ಎಚ್ಚರಿಕೆ ಗಂಟೆ (Wake-up call) ಎಂದು ಅಭಿಪ್ರಾಯಪಟ್ಟಿದ್ದಾರೆ.

ಮುಖ್ಯಾಂಶಗಳು

  • ರಾಮಲಿಂಗಾ ರೆಡ್ಡಿ ರಾಜೀನಾಮೆ ಕೇವಲ ವೈಯಕ್ತಿಕ ನಿರ್ಧಾರವಲ್ಲ: ಹೆಚ್​ಕೆ ಪಾಟೀಲ್.
  • ಇದು ಹೈಕಮಾಂಡ್‌ಗೆ ಒಂದು ಗಂಭೀರ ಎಚ್ಚರಿಕೆ ಗಂಟೆ ಎಂದ ಹಿರಿಯ ನಾಯಕ.
  • ನಿರ್ಧಾರ ಪುನರ್ಪರಿಶೀಲಿಸುವಂತೆ ರಾಮಲಿಂಗಾ ರೆಡ್ಡಿಗೆ ಮನವಿ.

ಸ್ನೇಹಿತನಿಗೆ ಕರೆ ಮಾಡಿ ಮನವೊಲಿಸಲು ಯತ್ನ

ಎಐಸಿಸಿ ರಾಷ್ಟ್ರೀಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ರಾಜ್ಯಸಭೆಗೆ ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಲೋಕಸಭೆ ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ, ನೂತನ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಸೇರಿದಂತೆ ಹಲವು ಶಾಸಕರು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಹೆಚ್​ಕೆ ಪಾಟೀಲ್, ರಾಮಲಿಂಗಾ ರೆಡ್ಡಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ವಿಷಯವನ್ನು ನಾನು ಮಾಧ್ಯಮಗಳಲ್ಲಿ ನೋಡಿದೆ. ತಕ್ಷಣವೇ ನನ್ನ ಆಪ್ತ ಸ್ನೇಹಿತರಾದ ಅವರಿಗೆ ಫೋನ್ ಮಾಡಿ ಮಾತನಾಡಿದ್ದೇನೆ. ಅವರು ತಮ್ಮ ಆಂತರಿಕ ಅಭಿಪ್ರಾಯ ಹಾಗೂ ಬೇಸರವನ್ನು ನನ್ನ ಬಳಿ ಹಂಚಿಕೊಂಡಿದ್ದಾರೆ. ಅವರು ತಮ್ಮ ನಿರ್ಧಾರವನ್ನು ಮತ್ತೊಮ್ಮೆ ಪರಿಶೀಲಿಸಬೇಕು ಎಂದು ನಾನು ವಿನಂತಿಸುತ್ತೇನೆ ಎಂದರು.

ಹೆಚ್​ಕೆ ಪಾಟೀಲ್ ಮಾತಿನ ವಿಡಿಯೋ


ತಕ್ಷಣ ಮಧ್ಯಪ್ರವೇಶಿಸುವಂತೆ ಹೈಕಮಾಂಡ್‌ಗೆ ಒತ್ತಾಯ

ಪಕ್ಷದಲ್ಲಿ ಉದ್ಭವಿಸಿರುವ ಈ ಬಿಕ್ಕಟ್ಟಿನ ಕುರಿತು ಉನ್ನತ ನಾಯಕತ್ವ ತಕ್ಷಣ ಎಚ್ಚೆತ್ತುಕೊಳ್ಳಬೇಕು ಎಂದು ಒತ್ತಾಯಿಸಿದ ಅವರು, ‘ಸಂಬಂಧಪಟ್ಟ ನಾಯಕರು ಇಂತಹ ಸಂದರ್ಭದಲ್ಲಿ ತಕ್ಷಣವೇ ಗಂಭೀರವಾಗಿ ಗಮನಹರಿಸಬೇಕು. ಇದೊಂದು ರೀತಿಯ ದೊಡ್ಡ ಎಚ್ಚರಿಕೆ ಗಂಟೆ. ದಯಮಾಡಿ ಹಿರಿಯ ನಾಯಕರು ಈ ವಿಚಾರವನ್ನು ಲಘುವಾಗಿ ಪರಿಗಣಿಸದೆ, ತಕ್ಷಣವೇ ಸರಿಪಡಿಸುವ ಕೆಲಸಕ್ಕೆ ಮುಂದಾಗಬೇಕು’ ಎಂದು ಹೈಕಮಾಂಡ್‌ಗೆ ವಿನಂತಿಸಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ವಿರೋಧ, 1 ಪೀಠಕ್ಕೆ ಮೂರು ಜಿಲ್ಲೆ ನಡುವೆ ಹಗ್ಗ ಜಗ್ಗಾಟ – Kannada News

ಕಾರವಾರ, (ಜೂನ್ 04): ಸದ್ಯ ಕರ್ನಾಟಕದಲ್ಲಿ (Karnataka) ಕಲಬುರಗಿ ಹಾಗೂ ಧಾರವಾಡ ಹೈಕೋರ್ಟ್​​​ ಪೀಠ (High Court Bench) ಇದ್ದು, ಇದೀಗ ಕರಾವಳಿ (Karavali) ಹಾಗೂ ಮಲೆನಾಡು (malenadu) ಭಾಗದ ಜನರಿಗೆ ಅನುಕೂಲವಾಗಲಿದೆ ಎಂಬ ಕಾರಣಕ್ಕೆ ಮಂಗಳೂರಿನಲ್ಲಿ ಮತ್ತೊಂದು ಹೈಕೋರ್ಟ್ ಪೀಠ ಸ್ಥಾಪನೆ ಮಾಡಲು ತೀರ್ಮಾನಿಸಲಾಗಿದೆ. ಆದ್ರೆ, ಮಂಗಳೂರಿನಲ್ಲಿ ಸ್ಥಾಪನೆ ಮಾಡುವುದಕ್ಕೆ ವ್ಯಾಪಕ ವಿರೋಧಗಳು ವ್ಯಕ್ತವಾಗಿವೆ. ಉತ್ತರ ಕನ್ನಡ ಹಾಗೂ ಶಿವಮೊಗ್ಗ ಜಿಲ್ಲೆಯ ಜನರು ತಮ್ಮ ತಮ್ಮ ಜಿಲ್ಲೆಗಳಲ್ಲಿ ಆಗಬೇಕೆಂದು ಆಗ್ರಹಿಸಿದ್ದಾರೆ. ಹೀಗಾಗಿ ಒಂದು ಪೀಠಕ್ಕೆ ಮೂರು ಜಿಲ್ಲೆಗಳ ನಡುವೆ ಹಗ್ಗ ಜಗ್ಗಾಟ ನಡೆದಿದೆ.

ಧಾರವಾಡವೇ ಹತ್ತಿರ, ಮಂಗಳೂರು ಭೌಗೋಳಿಕವಾಗಿ ದೂರ

ರಾಜ್ಯದಲ್ಲೇ ಭೌಗೋಳಿಕವಾಗಿ ದೊಡ್ಡದಾಗಿರುವ ಉತ್ತರ ಕನ್ನಡ ಜಿಲ್ಲೆ. ಜಿಲ್ಲೆಯಲ್ಲಿ ಒಂದು ತಾಲೂಕಿನಿಂದ ಇನ್ನೊಂದು ತಾಲೂಕಿಗೆ ಹೋಗುವುದೇ ಭಾರಿ ಕಷ್ಟ. ಹೀಗಿರುವಾಗ ಆರೋಗ್ಯ , ಶಿಕ್ಷಣ ಹಾಗೂ ಉದ್ಯೋಗಕ್ಕಾಗಿ ಇಲ್ಲಿನ ಜನ ಬೇರೆ ಜಿಲ್ಲೆಯನ್ನೆ ಅವಲಂಬಿಸಿದ್ದಾರೆ. ಪ್ರಮುಖವಾಗಿ ಐದು ಜಿಲ್ಲೆಗಳಿಗೆ ಹೊಂದಿಕೊಂಡಿರುವುದರಿಂದ ಆಯಾ ತಾಲೂಕಿನವರು ಸಮಿಪದ ಜಿಲ್ಲೆಗಳನ್ನೆ ಹೆಚ್ಚಾಗಿ ಅವಲಂಬಿಸಿದ್ದಾರೆ. ಹೀಗಾಗಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಪೀಠ ಆಗಬೇಕೆಂದು ಕಾರವಾರ ವಕೀಲರ ಸಂಘ ಆಗ್ರಹಿಸಿದೆ.

ಇದನ್ನೂ ಓದಿ: ಇಂದಿನಿಂದ ಜೂನ್ 11 ರವರೆಗೆ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ವರುಣನ ಅಬ್ಬರ: ಮೀನುಗಾರರಿಗೆ, ಪ್ರವಾಸಿಗರಿಗೆ ಬಿಗ್​​​ ಅಲರ್ಟ್

ಉತ್ತರ ಕನ್ನಡ ಜಿಲ್ಲೆಯಲ್ಲಿ 11 ಬಾರ್ ಅಸೋಷಿಯೇಷನ್ ಇದ್ದು ,ಉಡುಪಿ 4 , ಮಂಗಳೂರಿನಲ್ಲಿ 6 ಬಾರ್ ಅಸೋಷಿಯನ್ ಇದೆ. ಇನ್ನೂ ಹೈಕೋರ್ಟ್ ನಲ್ಲಿರುವ ಕೇಸ್ ಗಳ ಪ್ರಮಾಣದಲ್ಲೂ ಉತ್ತರ ಕನ್ನಡ ಜಿಲ್ಲೆಯ ಪ್ರಕರಣಗಳು ಹೆಚ್ಚಿಗೆ ಇವೆ. ಹೀಗಾಗಿ ಮಂಗಳೂರಿನಲ್ಲಿ ಸ್ಥಾಫನೆ ಮಾಡುವುದರ ಬದಲು ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ಸ್ಥಾಫನೆ ಮಾಡಿದ್ರೆ ಶಿವಮೊಗ್ಗ ಸೇರಿದಂತೆ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಜನರಿಗೂ ಅನಕೂಲ ಆಗುತ್ತದೆ. ಒಂದು ವೇಳೆ ಮಾಡುವುದಕ್ಕೆ ಆಗದೆ ಇದ್ರೆ ಈ ಹಿಂದಿನಂತೆ ಉತ್ತರ ಕನ್ನಡ ಜಿಲ್ಲೆ ಧಾರವಾಡ ಪಿಠದಲ್ಲಿಯೇ ಮುಂದುವರೆಯಲಿ ಎಂದಿದ್ದಾರೆ.

ಮಂಗಳೂರಿನಲ್ಲೇ ಪೀಠ ಸ್ಥಾಪನೆ ಮಾಡಲು ಹೊರಟಿದ್ಯಾಕೆ?

ಕರಾವಳಿಯ ಮಂಗಳೂರು ಮತ್ತು ಉಡುಪಿ ಜಿಲ್ಲೆ ಬೆಂಗಳೂರಿನ ಹೈಕೋರ್ಟ್​​ ಪಿಠದಡಿಯಲ್ಲಿ ಇದ್ದರೇ, ಉತ್ತರ ಕನ್ನಡ ಜಿಲ್ಲೆ ಮಾತ್ರ ಧಾರವಾಡ ಹೈಕೋರ್ಟ್​ ಪೀಠದಡಿ ಬರುತ್ತದೆ. ಹೀಗಾಗಿ ಕರಾವಳಿ ಜಿಲ್ಲೆಗೆ ಪ್ರತ್ಯೇಕ ಹೈಕೋರ್ಟ ಪೀಠ ಬೇಕೆಂದು ಮಂಗಳೂರಿನಲ್ಲಿ ಹೋರಾಟ ಪ್ರಾರಂಭವಾಯಿತು. ಇದರ ಪ್ರತಿಫಲವಾಗಿ ಇದೀಗ ರಾಜ್ಯ ಸರ್ಕಾರ ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಒಲವು ತೋರಿದ್ದು, ಮಂಗಳೂರಿನಲ್ಲಿ ಹೈ ಕೋರ್ಟ್ ಪಿಠಕ್ಕೆ ಸಕಲ ವ್ಯವಸ್ಥೆ ಕಲ್ಪಿಸುವುದಾಗಿ ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಅವರಿಗೆ ಪತ್ರ ಬರೆದಿತ್ತು. ಇದರ ಬೆನ್ನಲ್ಲೇ ಮಂಗಳೂರಿಗೆ ತೆರಳಿ ಸ್ಥಳ ಪರಿಶೀಲನೆ ಹಾಗೂ ಮೂಲಭೂತ ಸೌಕರ್ಯದ ಕುರಿತು ಪರಿಶೀಲನೆ ನಡೆಸಲಾಗಿದೆ. ಆದ್ರೆ ಇದೀಗ ವಿರೋಧ ವ್ಯಕ್ತವಾಗಿದೆ. ಹೈಕೋರ್ಟ್ ಪೀಠ ಸ್ಥಾಪನೆ ಮಾಡುವುದಾದರೇ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ಮಾಡಲಿ,ಇದರಿಂದ ಉಡುಪಿ,ಮಂಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಿಗೂ ಲಾಭವಾಗಲಿದೆ ಎಂಬುವುದು ಉತ್ತರ ಕನ್ನಡ ಜಿಲ್ಲೆಯ ವಕೀಲರ ವಾದ.

ಶಿವಮೊಗ್ಗದಲ್ಲೆ ಪೀಠ ಸ್ಥಾಪನೆಗೆ ಆಗ್ರಹ

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಉತ್ತರ ಕನಡ ಜಿಲ್ಲೆ ಮಾತ್ರವಲ್ಲ ಶಿವಮೊಗ್ಗದವರು ಸಹ ವಿರೋಧ ವ್ಯಕ್ತಪಡಿಸಿದ್ದು, ಶಿವಮೊಗ್ಗದಲ್ಲೇ ಹೈಕೋರ್ಟ್​ ಪೀಠ ಸ್ಥಾಪನೆ ಮಾಡಬೇಕೆಂದು ಜಿಲ್ಲಾ ವಕೀಲರ ಸಂಘ ಆಗ್ರಹಿಸಿದೆ. ಹೀಗಾಗಿ ಒಂದು ಹೈಕೋರ್ಟ್ ಪೀಠಕ್ಕೆ ಮೂರು ಜಿಲ್ಲೆಗಳ ನಡುವೆ ಹಗ್ಗ ಜಗ್ಗಾಟ ನಡೆದಿದೆ.

ಒಟ್ಟಿನಲ್ಲಿ ಮಂಗಳೂರಿನಲ್ಲಿ ಹೈಕೋರ್ಟ್​ ಪೀಠ ಸ್ಥಾಪನೆಗೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ವಿರೋಧ ವ್ಯಕ್ತವಾಗುತಿದ್ದು ,ಉತ್ತರ ಕನ್ನಡ ಜಿಲ್ಲೆಯನ್ನು ಮಂಗಳೂರಿನೊಂದಿಗೆ ಸೇರಿಸಿದರೆ ಉಗ್ರ ಹೋರಾಟ ಮಾಡುವ ಎಚ್ಚರಿಕೆಯನ್ನ ಜಿಲ್ಲಾ ವಕೀಲರ ಸಂಘ ನೀಡಿದೆ. ಇನ್ನೊಂದೆಡೆ ಶಿವಮೊಗ್ಗದಲ್ಲಿ ಪೀಠ ಆಗಬೇಕೆಂದು ಆಗ್ರಹಗಳು ವ್ಯಕ್ತವಾಗುತ್ತಿದ್ದು, ಸರ್ಕಾರ ಯಾವ ತಿರ್ಮಾನ ಕೈಗೊಳ್ಳುತ್ತೆ ಎನ್ನುವುದನ್ನು ಕಾದುನೋಡಬೇಕಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 4:13 pm, Fri, 5 June 26

Source link

ಕೊನೆಯ ಕ್ವಾರ್ಟರ್​ನಲ್ಲಿ ಜಿಡಿಪಿ ಶೇ. 7.8 ಏರಿಕೆ; ಇಡೀ ವರ್ಷದಲ್ಲಾದ ಆರ್ಥಿಕ ಬೆಳವಣಿಗೆ ಶೇ. 7.7 – Kannada News

ನವದೆಹಲಿ, ಜೂನ್ 5: ಕಳೆದ ಬಾರಿಯ ಹಣಕಾಸು ವರ್ಷದಲ್ಲಿ (2025-26) ಭಾರತದ ಆರ್ಥಿಕತೆ ಶೇ. 7.7ರಷ್ಟು ಹೆಚ್ಚಳ ಕಂಡಿದೆ. ಇದು ಸರ್ಕಾರ ಶುಕ್ರವಾರ (ಜೂನ್ 5) ಬಿಡುಗಡೆ ಮಾಡಿದ ಅಧಿಕೃತ ದತ್ತಾಂಶದಿಂದ ತಿಳಿದುಬಂದಿದೆ. 2024-25ರ ಹಣಕಾಸು ವರ್ಷದಲ್ಲಿ ಭಾರತದ ಜಿಡಿಪಿ (India GDP) ಶೇ. 7.1ರಷ್ಟು ಹಿಗ್ಗಿತ್ತು. 2025-26ರಲ್ಲಿ ಅದನ್ನೂ ಮೀರಿಸಿದ ಬೆಳವಣಿಗೆ ಸಾಧಿಸಿದೆ.

2025-26ರ ಹಣಕಾಸು ವರ್ಷದ ಕೊನೆಯ ಕ್ವಾರ್ಟರ್​ನಲ್ಲಿ ಜಿಡಿಪಿ ಶೇ. 7.8ರ ವಾರ್ಷಿಕ ದರದಲ್ಲಿ ಬೆಳವಣಿಗೆ ಹೊಂದಿದೆ ಎಂದು ದತ್ತಾಂಶದಲ್ಲಿ ತಿಳಿಸಲಾಗಿದೆ. ಮೊದಲ ಮೂರು ಕ್ವಾರ್ಟರ್​ಗಳಲ್ಲಿ ಕ್ರಮವಾಗಿ ಶೇ. 7.8, ಶೇ. 8.2 ಮತ್ತು ಶೇ. 7.8ರಷ್ಟು ಬೆಳವಣಿಗೆ ದಾಖಲಾಗಿತ್ತು.

ಇದನ್ನೂ ಓದಿ: ಬಂಡವಾಳ ಆಕರ್ಷಿಸಲು ಬ್ಯಾಂಕುಗಳಿಗೆ ಹೆಡ್ಡಿಂಗ್ ಸಪೋರ್ಟ್​ನಿಂದ ಹಿಡಿದು ಎನ್​ಆರ್​ಐ ಹೂಡಿಕೆ ಮಿತಿ ಹೆಚ್ಚಳದವರೆಗೆ ಆರ್​ಬಿಐನಿಂದ 5 ಕ್ರಮಗಳು

ಹಣದುಬ್ಬರದ ಅಂಶವನ್ನೂ ಪರಿಗಣಿಸಿ ಲೆಕ್ಕ ಮಾಡಲಾದ ನೈಜ ಜಿಡಿಪಿ ಅಥವಾ ರಿಯಲ್ ಜಿಡಿಪಿ ಮೊತ್ತ 2025-26ರಲ್ಲಿ 323.12 ಲಕ್ಷ ಕೋಟಿ ರೂ ಇದೆ. ಹಿಂದಿನ ಹಣಕಾಸು ವರ್ಷದಲ್ಲಿ (2024-25) ರಿಯಲ್ ಜಿಡಿಪಿ ಮೊತ್ತ 299.89 ಲಕ್ಷ ಕೋಟಿ ರೂ ಇತ್ತೆನ್ನಲಾಗಿದೆ.

ಇನ್ನು, ಹಣದುಬ್ಬರದ ಪರಿಣಾಮವನ್ನು ಒಳಗೊಂಡ ಲೆಕ್ಕಾಚಾರದ ನಾಮಿನಲ್ ಜಿಡಿಪಿ ಮೊತ್ತ 2025-26ರಲ್ಲಿ 346.36 ಲಕ್ಷ ಕೋಟಿ ರೂ ಇದೆ. ಇದು ಹಿಂದಿನ ವರ್ಷದಕ್ಕೆ ಹೋಲಿಸಿದರೆ ಶೇ. 8.9ರಷ್ಟು ಹೆಚ್ಚಳ ಕಂಡಿದೆ.

ಜನವರಿಯಿಂದ ಮಾರ್ಚ್​ವರೆಗಿನ ಕ್ವಾರ್ಟರ್​ನಲ್ಲಿ ಯಾವ್ಯಾವ ಸೆಕ್ಟರ್​ಗಳ ಸಾಧನೆ ಹೇಗಿದೆ?

ಕೊನೆಯ ಕ್ವಾರ್ಟರ್​ನಲ್ಲಿ ಜಿಡಿಪಿ ಶೇ 7.8ರಷ್ಟು ಹೆಚ್ಚಿದೆ. ಇದರಲ್ಲಿ ಸರ್ವಿಸ್ ಸೆಕ್ಟರ್​ನ ಕೊಡುಗೆ ಗಣನೀಯವಾಗಿದೆ. ಇದು ಶೇ. 9.9ರ ವಾರ್ಷಿಕ ದರದಲ್ಲಿ ಹಿಗ್ಗಿದೆ. ಮ್ಯಾನುಫ್ಯಾಕ್ಚರಿಂಗ್, ಕನ್ಸ್​ಟ್ರಕ್ಷನ್, ಯುಟಿಲಿಟಿ ಇತ್ಯಾದಿ ಇರುವ ಸೆಕೆಂಡರಿ ಸೆಕ್ಟರ್ ಉತ್ತಮವಾದ ಶೇ. 7.4ರಷ್ಟು ಹಿಗ್ಗಿದೆ.

ಇದನ್ನೂ ಓದಿ: ಭಾರತೀಯ ಷೇರು ಮಾರುಕಟ್ಟೆಯಲ್ಲಿ ಸೆಬಿ ನೊಂದಣಿ ಇಲ್ಲದೇ ಎನ್​ಆರ್​ಐಗಳಿಗೆ ಹೂಡಿಕೆ ಮಿತಿ ಹೆಚ್ಚಳ

ವೈಯಕ್ತಿಕ ಸೆಕ್ಟರ್​ಗಳ ಪೈಕಿ ಟ್ರೇಡ್, ಹೋಟೆಲ್, ಟ್ರಾನ್ಸ್​ಪೋರ್ಟ್, ಕಮ್ಯೂನಿಕೇಶನ್, ಬ್ರಾಡ್ಕ್ಯಾಸ್ಟಿಂಗ್ ಸಂಬಂಧಿತ ಸೇವೆಗಳು ಕೊನೆಯ ಕ್ವಾರ್ಟರ್​ನಲ್ಲಿ ಅದ್ವಿತೀಯವೆನಿಸುವ ಶೇ. 12.5ರಷ್ಟು ಬೆಳವಣಿಗೆ ಕಂಡಿವೆ. ರಿಯಲ್ ಎಸ್ಟೇಟ್, ಐಟಿ ಸರ್ವಿಸ್, ವೃತ್ತಿಪರ ಸೇವೆ, ಹಣಕಾಸು ಸೇವೆಗಳು ಶೇ. 10.4ರಷ್ಟು ಹೆಚ್ಚಿವೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಪೂಜೆಯ ಬಳಿಕ ಆರತಿ ತಟ್ಟೆಗೆ ಕಡ್ಡಾಯವಾಗಿ ಹಣ ಹಾಕಬೇಕು ಯಾಕೆ? ಇದರ ಹಿಂದೆ ಇದೆ ಸೈನ್ಸ್ – Kannada News

ಸನಾತನ ಹಿಂದೂ ಧರ್ಮದಲ್ಲಿ ದೇವಸ್ಥಾನಗಳಿಗಾಗಲಿ ಅಥವಾ ಮನೆಯಲ್ಲಾಗಲಿ ಪೂಜೆ ಮುಗಿದ ನಂತರ ದೇವರಿಗೆ ಮಹಾಮಂಗಳಾರತಿ ಮಾಡುವುದು ಕಡ್ಡಾಯ. ಆದರೆ, ಆರತಿ ತಟ್ಟೆಯನ್ನು ಭಕ್ತರ ಮುಂದೆ ತಂದಾಗ ಅದಕ್ಕೆ ಕಡ್ಡಾಯವಾಗಿ ಹಣ ಅಥವಾ ನಾಣ್ಯಗಳನ್ನು ಹಾಕುವ ಸಂಪ್ರದಾಯ ಇಂದಿಗೂ ನಡೆದುಕೊಂಡು ಬಂದಿದೆ. ಇದು ಕೇವಲ ಮೂಢನಂಬಿಕೆಯಲ್ಲ ಅಥವಾ ಬಲವಂತದ ಆಚರಣೆಯಲ್ಲ. ಇದರ ಹಿಂದೆ ಆಳವಾದ ಧಾರ್ಮಿಕ, ಐತಿಹಾಸಿಕ ಮತ್ತು ವೈಜ್ಞಾನಿಕ ಕಾರಣಗಳಿವೆ ಎಂದು ಶಾಸ್ತ್ರ ಹೇಳಿದೆ.

ಅಹಂಕಾರದ ತ್ಯಾಗ ಮತ್ತು ಋಣ ಮುಕ್ತಿ

ಶಾಸ್ತ್ರಗಳ ಪ್ರಕಾರ, ಭಗವಂತನು ನಮಗೆ ನೀಡಿರುವ ಐಶ್ವರ್ಯ, ಆರೋಗ್ಯ ಮತ್ತು ಪ್ರಕೃತಿಯ ಕೊಡುಗೆಗಳಿಗೆ ಪ್ರತಿಯಾಗಿ ನಾವು ಕೃತಜ್ಞತೆ ಸಲ್ಲಿಸಬೇಕು. ಆರತಿ ತಟ್ಟೆಗೆ ನಾಣ್ಯವನ್ನು ಹಾಕುವುದು ಎಂದರೆ ನಮ್ಮಲ್ಲಿರುವ ‘ಮಮಕಾರ’ ಮತ್ತು ‘ಅಹಂಕಾರ’ವನ್ನು ದೇವರ ಪಾದಕ್ಕೆ ಅರ್ಪಿಸುವುದು ಎಂದರ್ಥ. ದೇವಸ್ಥಾನಕ್ಕೆ ಹೋದಾಗ ಬರಿಗೈಯಲ್ಲಿ ಹೋಗಬಾರದು ಮತ್ತು ಬರಿಗೈಯಲ್ಲಿ ವಾಪಸ್ ಬರಬಾರದು ಎಂಬ ನಿಯಮವಿದೆ. ಭಕ್ತಿಪೂರ್ವಕವಾಗಿ ನೀಡುವ ಈ ಕಾಣಿಕೆ ಮನುಷ್ಯನಲ್ಲಿ ಕಂಜೂಸ್ ಗುಣವನ್ನು ದೂರ ಮಾಡಿ, ತ್ಯಾಗ ಮನೋಭಾವನೆಯನ್ನು ಬೆಳೆಸುತ್ತದೆ.

ಸಮಾಜ ಕಲ್ಯಾಣ

ಪ್ರಾಚೀನ ಇತಿಹಾಸವನ್ನು ಗಮನಿಸಿದರೆ, ದೇವಸ್ಥಾನಗಳು ಕೇವಲ ಪೂಜಾ ಸ್ಥಳಗಳಾಗಿರಲಿಲ್ಲ. ಅವು ಇಡೀ ಸಮಾಜದ ಆರ್ಥಿಕ ಮತ್ತು ಸಾಂಸ್ಕೃತಿಕ ಕೇಂದ್ರಗಳಾಗಿದ್ದವು. ರಾಜರು ಮತ್ತು ಶ್ರೀಮಂತರು ದೇವಸ್ಥಾನಗಳಿಗೆ ಭಾರಿ ದಾನ ನೀಡುತ್ತಿದ್ದರು. ಆದರೆ ಸಾಮಾನ್ಯ ಜನರಿಗೂ ಈ ಪುಣ್ಯ ಕಾರ್ಯದಲ್ಲಿ ಭಾಗಿಯಾಗಲು ಅವಕಾಶ ಸಿಗಲೆಂದು ಆರತಿ ತಟ್ಟೆಗೆ ಸಣ್ಣ ಕಾಣಿಕೆ ಹಾಕುವ ಪದ್ಧತಿ ಜಾರಿಗೆ ಬಂತು. ಈ ರೀತಿ ಸಂಗ್ರಹವಾದ ಹಣವನ್ನು ದೇವಸ್ಥಾನದ ದೀಪದ ಎಣ್ಣೆ, ಪೂಜಾ ಸಾಮಗ್ರಿಗಳು, ಅರ್ಚಕರ ಜೀವನೋಪಾಯ ಹಾಗೂ ಅಲ್ಲಿಗೆ ಬರುವ ಬಡ ಭಕ್ತರ ಅನ್ನದಾನಕ್ಕೆ ಬಳಸಲಾಗುತ್ತಿತ್ತು.

ತಾಮ್ರದ ತಟ್ಟೆ ಮತ್ತು ನಾಣ್ಯಗಳ ಹಿಂದಿರುವ ಸೈನ್ಸ್ ಏನು?

ಹಳೆಯ ಕಾಲದಲ್ಲಿ ಚಲಾವಣೆಯಲ್ಲಿದ್ದ ನಾಣ್ಯಗಳು ಸಂಪೂರ್ಣವಾಗಿ ಚಿನ್ನ, ಬೆಳ್ಳಿ ಅಥವಾ ತಾಮ್ರದ ಲೋಹದಿಂದ ಮಾಡಲ್ಪಟ್ಟಿದ್ದವು. ಆರತಿಯನ್ನು ಸಾಮಾನ್ಯವಾಗಿ ತಾಮ್ರ ಅಥವಾ ಹಿತ್ತಾಳೆ ತಟ್ಟೆಯಲ್ಲೇ ಬೆಳಗಲಾಗುತ್ತದೆ. ಲೋಹದ ನಾಣ್ಯಗಳು ತಟ್ಟೆಗೆ ಸ್ಪರ್ಶಿಸಿದಾಗ ಮತ್ತು ಕರ್ಪೂರದ ಶಾಖ ತಗುಲಿದಾಗ, ಅಲ್ಲಿ ಒಂದು ಧನಾತ್ಮಕ ಶಕ್ತಿ ಹಾಗೂ ಕಂಪನ ಉತ್ಪತ್ತಿಯಾಗುತ್ತದೆ. ಭಕ್ತರು ಆರತಿ ತೆಗೆದುಕೊಳ್ಳುವಾಗ ಕೈಗಳನ್ನು ತಟ್ಟೆಯ ಹತ್ತಿರ ತಂದಾಗ ಆ ದಿವ್ಯ ಲೋಹದ ಶಕ್ತಿ ಅವರ ದೇಹವನ್ನು ಪ್ರವೇಶಿಸುತ್ತದೆ ಎಂಬ ವೈಜ್ಞಾನಿಕ ನಂಬಿಕೆಯೂ ಇದೆ.

ಇದನ್ನೂ ಓದಿ: ಅನುಷ್ಕಾ ಶರ್ಮಾ ಕತ್ತಿನಲ್ಲಿರುವ ತುಳಸಿ ಮಾಲೆ ಗಮನಿಸಿದ್ದೀರಾ? ಧರಿಸುವುದರ ಹಿಂದಿನ ಅಸಲಿ ಕಾರಣ ಇಲ್ಲಿದೆ

“ದಾನಂ ಪ್ರಧಾನಂ” – ಶ್ರದ್ಧೆಯೇ ಮುಖ್ಯ, ಮೌಲ್ಯವಲ್ಲ

ಶಾಸ್ತ್ರಗಳ ಪ್ರಕಾರ, ಆರತಿ ತಟ್ಟೆಗೆ ಇಷ್ಟೇ ಹಣ ಹಾಕಬೇಕು ಎಂಬ ಯಾವುದೇ ಕಟ್ಟುಪಾಡುಗಳಿಲ್ಲ. ನಿಮ್ಮ ಶಕ್ತಿ ಮತ್ತು ಭಕ್ತಿಗೆ ಅನುಗುಣವಾಗಿ ಶ್ರದ್ಧೆಯಿಂದ ಒಂದು ರೂಪಾಯಿ ಹಾಕಿದರೂ ಅದು ಕೋಟಿ ಪುಣ್ಯವನ್ನು ತರುತ್ತದೆ. ಇಲ್ಲಿ ಭಕ್ತಿ ಪ್ರಧಾನವೇ ಹೊರತು ಹಣದ ಮೌಲ್ಯವಲ್ಲ ಎಂದು ಧರ್ಮಶಾಸ್ತ್ರಗಳು ಸಾರುತ್ತವೆ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಅಸ್ಸಾಂನಲ್ಲಿ ಕ್ಯಾಬಿನೆಟ್ ವಿಸ್ತರಣೆ; ಹಿಮಂತ ಬಿಸ್ವ ಶರ್ಮಾ ಸಂಪುಟಕ್ಕೆ 12 ನೂತನ ಸಚಿವರ ಸೇರ್ಪಡೆ – Kannada News

ಗುವಾಹಟಿ, ಜೂನ್ 5: ಅಸ್ಸಾಂನಲ್ಲಿ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ (Himanta Biswa Sarma) ನೇತೃತ್ವದ ಎನ್‌ಡಿಎ (NDA) ಸರ್ಕಾರದ ಸಂಪುಟ ವಿಸ್ತರಣೆಯಾಗಿದ್ದು, ಒಟ್ಟು 12 ಶಾಸಕರು ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಈ ಬಾರಿಯ ಸಂಪುಟ ವಿಸ್ತರಣೆಯಲ್ಲಿ ಬಿಜೆಪಿಯ ಅಶ್ವಿನಿ ರಾಯ್ ಸರ್ಕಾರ್, ನಿಲಿಮಾ ದೇವಿ ಮತ್ತು ಸುಶಾಂತ ಬೊರ್ಗೊಹೈನ್ ಅವರಂತಹ ಹೊಸ ಮುಖಗಳಿಗೆ ಮೊದಲ ಬಾರಿಗೆ ಸಚಿವ ಸ್ಥಾನ ನೀಡಲಾಗಿದೆ. ಅಸ್ಸಾಂ ವಿಧಾನಸಭೆಯ ಮಾಜಿ ಸ್ಪೀಕರ್ ಬಿಸ್ವಜಿತ್ ದೈಮರಿ ಅವರು ಕೂಡ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಬಿಜೆಪಿಯ ಪ್ರಬಲ ಮೈತ್ರಿ ಪಕ್ಷವಾದ ಅಸೋಂ ಗಣ ಪರಿಷತ್ (AGP) ನಾಯಕ ಕೇಶಬ್ ಮಹಾಂತ ಅವರು ಮರಳಿ ಸಂಪುಟ ಸೇರಿದ್ದಾರೆ. 126 ಸದಸ್ಯರ ಬಲ ಹೊಂದಿರುವ ಅಸ್ಸಾಂ ವಿಧಾನಸಭೆಯಲ್ಲಿ ನಿಯಮಾವಳಿಗಳ ಪ್ರಕಾರ ಗರಿಷ್ಠ 19 ಸಚಿವರನ್ನು ಹೊಂದಲು ಅವಕಾಶವಿದೆ. ಮೇ 12ರಂದು ಮುಖ್ಯಮಂತ್ರಿಯಾಗಿ ಹಿಮಂತ ಬಿಸ್ವ ಶರ್ಮಾ ಮತ್ತು ಇತರ ನಾಲ್ವರು ಸಚಿವರಾದ ಅತುಲ್ ಬೋರಾ, ಚರಣ್ ಬೋರೋ, ಅಜಂತಾ ನಿಯೋಗ್ ಮತ್ತು ರಾಮೇಶ್ವರ್ ತೇಲಿ ಪ್ರಮಾಣ ವಚನ ಸ್ವೀಕರಿಸಿದ್ದರು. ಇಂದಿನ 12 ಸಚಿವರ ಸೇರ್ಪಡೆಯೊಂದಿಗೆ ಸಂಪುಟದ ಒಟ್ಟು ಬಲ 17ಕ್ಕೆ ತಲುಪಿದ್ದು, ಇನ್ನೂ 2 ಸ್ಥಾನಗಳು ಬಾಕಿ ಉಳಿದಿವೆ.

ಇದನ್ನೂ ಓದಿ: ಅಸ್ಸಾಂ ಮುಖ್ಯಮಂತ್ರಿಯಾಗಿ ಹಿಮಂತ್​​ ಪ್ರಮಾಣ: ಸತತ ಎರಡು ಅವಧಿಗೆ ಕಾಂಗ್ರೆಸೇತರ ಮೊದಲ ಸಿಎಂ ಎಂಬ ಹೆಗ್ಗಳಿಕೆ

ಇತ್ತೀಚೆಗೆ ನಡೆದ ಅಸ್ಸಾಂ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಒಕ್ಕೂಟವು 102 ಸ್ಥಾನಗಳನ್ನು (ಬಿಜೆಪಿ 82, ಎಜಿಪಿ 10, ಬಿಪಿಎಫ್ 10) ಗೆಲ್ಲುವ ಮೂಲಕ ಸತತ ಮೂರನೇ ಬಾರಿಗೆ ಅಸ್ಸಾಂನಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ರಾಹುಲ್ ಗಾಂಧಿ ಮಹತ್ವದ ಭರವಸೆ: ಐ ಆ್ಯಮ್​ ಹ್ಯಾಪಿ ಎಂದ ಸಚಿವ ಕೆ.ಹೆಚ್​.ಮುನಿಯಪ್ಪ – Kannada News

ಬೆಂಗಳೂರು, (ಜೂನ್ 05): ಡಿಕೆ ಶಿವಕುಮಾರ್ (DK Shivakumar) ಸರ್ಕಾರದಲ್ಲಿ ಖಾತೆ (Ministers portfolio )ಕ್ಯಾತೆ ಶುರುವಾಗಿದೆ. ಬೆಂಗಳೂರು ನಗರಾಭಿವೃದ್ಧಿ ಇಲಾಖೆ ಕೈತಪ್ಪಿದ್ದಕ್ಕೆ ಹಿರಿಯ ಸಚಿವ ರಾಮಲಿಂಗಾರೆಡ್ಡಿ (Ramalinga Reddy) ಅವರ ಹಠಾತ್ ರಾಜೀನಾಮೆ ನೀಡಿದ್ದಾರೆ. ಇದರ ಬೆನ್ನಲ್ಲೇ ಈ ಹಿಂದೆ ನಿಭಾಯಿಸಿದ್ದ ಆಹಾರ ಇಲಾಖೆ ಜವಾಬ್ದಾರಿ ನೀಡಿದ್ದಕ್ಕೆ ಮತ್ತೊಬ್ಬ ಹಿರಿಯ ಸಚಿವ ಕೆ.ಎಚ್. ಮುನಿಯಪ್ಪ (KH Muniyappa) ಅವರು ಬಹಿರಂಗವಾಗಿಯೇ ಅಸಮಾಧಾನ ಹೊರಹಾಕಿದ್ದಾರೆ. ಖುದ್ದು ರಾಹುಲ್ ಗಾಂಧಿ ಬಳಿಯೇ ತಮ್ಮ ಅಸಮಾಧಾನ ತೋಡಿಕೊಂಡಿದ್ದು, ಈ ವೇಳೆ ರಾಹುಲ್ ಮಹತ್ವದ ಭರವಸೆ ನೀಡಿದ್ದಾರೆ. ಇದರಿಂದ ಸಮಾಧಾನಗೊಂಡಿರುವ ಮುನಿಯಪ್ಪ, ಐ ಆ್ಯಮ್​ ಹ್ಯಾಪಿ ಎಂದಿದ್ದಾರೆ.

ಮುಖ್ಯಾಂಶಗಳು

  • ಆಹಾರ ಖಾತೆ ನೀಡಿದ್ದಕ್ಕೆ ಮುನಿಯಪ್ಪ ಅಸಮಾಧಾನ ವಿಚಾರ
  • ರಾಹುಲ್ ಗಾಂಧಿ ಗೊಂದಲ ಸರಿಪಡಿಸುವುದಾಗಿ ಹೇಳಿದ್ದಾರೆ
  • ಐ ಆ್ಯಮ್​ ಹ್ಯಾಪಿ ಎಂದ ಸಚಿವ ಕೆ.ಹೆಚ್​.ಮುನಿಯಪ್ಪ
  • ರಾಹುಲ್​, ವೇಣುಗೋಪಾಲ್, ಸುರ್ಜೇವಾಲ ಭೇಟಿಯಾಗಿದ್ದೇವೆ
  • ಕಾಂಗ್ರೆಸ್ ನಾಯಕರು ಗೊಂದಲ ಬಗೆಹರಿಸುವುದಾಗಿ ಹೇಳಿದ್ದಾರೆ
  • ಬೆಂಗಳೂರಿನಲ್ಲಿ ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ ಹೇಳಿಕೆ

ಮಲ್ಲಿಕಾರ್ಜು ಖರ್ಗೆ ಅವರ ನಾಮಪತ್ರ ಸಲ್ಲಿಕೆಗೆಂದು ಬೆಂಗಳೂರಿಗೆ ಬಂದಿದ್ದ ರಾಹುಲ್ ಗಾಂಧಿ ಜೊತೆ ಸಿಎಂ ಡಿಕೆ ಶಿವಕುಮಾರ್ ಸಚಿವರ ಖಾತೆ ಕ್ಯಾತೆ ವಿಚಾರವನ್ನು ಪ್ರಸ್ತಾಪಿಸಿದರು. ರಾಮಲಿಂಗಾರೆಡ್ಡಿ ರಾಜೀನಾಮೆ ನೀಡಿರುವ ಬಗ್ಗೆ ರಾಹುಲ್ ಗಮನಕ್ಕೆ ತಂದಿದ್ದಾರೆ. ಅಲ್ಲದೇ ಇದೇ ವೇಳೆ ಕೆ ಹೆಚ್ ಮುನಿಯಪ್ಪ ಅವರ ಅಸಮಾಧಾನವೂ ಸಹ ಚರ್ಚೆಯಾಗಿದೆ. ಬಳಿಕ ಮುನಿಯಪ್ಪ ಸಹ ಖುದ್ದು ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ಅಳಲು ತೋಡಿಸಿಕೊಂಡಿದ್ದು, ಈ ವೇಳೆ ಗೊಂದಲ ಸರಿಪಡಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ತಿಳಿದುಬಂದಿದೆ. ಹೀಗಾಗಿ ಸಚಿವ ಮುನಿಯಪ್ಪ ಸಹ ಸಮಾಧಾನಗೊಂಡಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್‌ನಲ್ಲಿ ಆರದ ಖಾತೆ ಕಿಚ್ಚು: ರಾಮಲಿಂಗಾ ರೆಡ್ಡಿ ರಾಜೀನಾಮೆ ಬೆನ್ನಲ್ಲೇ ಸಚಿವ ಕೆಎಚ್ ಮುನಿಯಪ್ಪ ಬಹಿರಂಗ ಅಸಮಾಧಾನ

ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಮುನಿತಪ್ಪ, ರಾಹುಲ್ ಗಾಂಧಿ​, ಕೆಸಿ ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೇವಾಲ ಅವರನ್ನು ಭೇಟಿಯಾಗಿದ್ದು, ರಾಹುಲ್ ಗಾಂಧಿ ಗೊಂದಲ ಸರಿಪಡಿಸುವುದಾಗಿ ಹೇಳಿದ್ದಾರೆ. ಹೀಗಾಗಿ ಐ ಆ್ಯಮ್​ ಹ್ಯಾಪಿ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.  ಇದರೊಂದಿಗೆ ರಾಜೀನಾಮೆಯಿಂದ ಹಿಂದೆ ಸರಿದಿದ್ದಾರೆ.

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ

ಕಳೆದ ಸಿದ್ದರಾಮಯ್ಯನವರ ಸರ್ಕಾರದ ಅವಧಿಯಲ್ಲಿ ಆಹಾರ ಇಲಾಖೆ ಖಾತೆಯನ್ನು ಮುನಿಯಪ್ಪನವರಿಗೆ ನೀಡಲಾಗಿತ್ತು. ಇದೀಗ ಡಿಕೆ ಶಿವಕುಮಾರ್ ಸಂಪುಟದಲ್ಲೂ ಸಹ ಅದೇ ಖಾತೆ ನೀಡಲಾಗಿದೆ. ಇದರಿಂದ ಅಸಮಾಧಾನಗೊಂಡಿದ್ದ ಮುನಿಯಪ್ಪ, ಬೆಳಗ್ಗೆ ಮಾಧ್ಯಮಗಳ ಮುಂದೆಯೇ ಬಹಿರಂಗವಾಗಿ ಬೇಸರ ಹೊರಹಾಕಿದ್ದರು. ಆಹಾರ ಇಲಾಖೆ ಬೇಡ ಸಮಾಜ ಕಲ್ಯಾಣ ಇಲಾಖೆ ಬೇಕೆಂದು ಪಟ್ಟು ಹಿಡಿದಿದ್ದಾರೆ.

ಇನ್ನು ಈ ಬಗ್ಗೆ ಇಂದು (ಜೂನ್ 05) ಬೆಳಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದ ಮುನಿಯಪ್ಪ, . “ನಾನು ರಾಜಕೀಯದಲ್ಲಿ 8 ಬಾರಿ ಗೆದ್ದಿರುವ ಅತ್ಯಂತ ಹಿರಿಯ ನಾಯಕ. ಸಂಪುಟದಲ್ಲಿ ಪ್ರೊಟೊಕಾಲ್ ಪ್ರಕಾರ ಸೀನಿಯಾರಿಟಿ ನೋಡಿ ಖಾತೆ ಹಂಚಬೇಕಿತ್ತು. ಸಮಾಜ ಕಲ್ಯಾಣ ಅಥವಾ ಕೃಷಿ ಇಲಾಖೆಯಂತಹ ಜನಸೇವೆಗೆ ನೇರ ಅವಕಾಶವಿರುವ ದೊಡ್ಡ ಖಾತೆ ನೀಡುವಂತೆ ನಾನು ಮೊದಲೇ ಕೇಳಿದ್ದೆ. ಆದರೆ ಹಂಚಿಕೆಯಲ್ಲಿ ಯಾವುದೇ ಸಮಾತೋಲನ ಕಾಯ್ದುಕೊಂಡಿಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದರು. ಆದ್ರೆ, ಇದೀಗ ರಾಹುಲ್ ಗಾಂಧಿ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಶೂಟಿಂಗ್​​ನಲ್ಲಿ ಕುದುರೆ ಮೇಯಿಸಿದ ಅಕ್ಷಯ್, ಬಕರಾ ಆದ ಹಾಸ್ಯನಟ ರಾಜ್​ಪಾಲ್ – Kannada News

ಅಕ್ಷಯ್ ಕುಮಾರ್​ (Akshay Kumar) ವರ್ಷಕ್ಕೆ ಅತಿ ಹೆಚ್ಚು ಸಿನಿಮಾ ಮಾಡುವ ಭಾರತದ ಸ್ಟಾರ್ ನಟ. ಇತರೆ ಸ್ಟಾರ್ ನಟರುಗಳು ಒಂದು ಸಿನಿಮಾ ಮಾಡಲು ಎರಡು-ಮೂರು ವರ್ಷ ತೆಗೆದುಕೊಂಡರೆ, ಅಕ್ಷಯ್ ಕುಮಾರ್ ಒಂದೇ ವರ್ಷದಲ್ಲಿ ಮೂರು ನಾಲ್ಕು ಸಿನಿಮಾ ಮುಗಿಸಿ ಇನ್ನೆರಡರ ಶೂಟಿಂಗ್ ಪ್ರಾರಂಭಿಸಿರುತ್ತಾರೆ. ಶೂಟಿಂಗ್ ವಿಷಯದಲ್ಲಿ ಬಲು ಶಿಸ್ತಿನ ವ್ಯಕ್ತಿ ಆಗಿರುವ ಅಕ್ಷಯ್ ಕುಮಾರ್, ಬೆಳಿಗ್ಗೆ 6 ಗಂಟೆಗೆ ಶೂಟಿಂಗ್ ಆರಂಭಿಸಿದರೆ ಸಂಜೆ 4 ಅಥವಾ 5 ಕ್ಕೆ ಮುಗಿಸಿ ಬಿಡುತ್ತಾರೆ. ಶೂಟಿಂಗ್ ಸಮಯದಲ್ಲಿಯೂ ಸಹ ಬಲು ಸಕ್ರಿಯರಾಗಿರುವ ಅಕ್ಷಯ್, ಸಹ ನಟರನ್ನು ಬಕರಾ ಮಾಡುತ್ತಾ ತಮಾಷೆ ಮಾಡುತ್ತಿರುತ್ತಾರೆ.

ಇದೀಗ ಅಕ್ಷಯ್ ಕುಮಾರ್ ಅವರು ಹಾಸ್ಯ ಪ್ರಧಾನ ಆಕ್ಷನ್ ಸಿನಿಮಾ ‘ವೆಲ್​​ಕಮ್ ಟು ಜಂಗಲ್’ ಸಿನಿಮಾನಲ್ಲಿ ನಟಿಸುತ್ತಿದ್ದಾರೆ. ಭಾರಿ ತಾರಾಗಣ ಇರುವ ಹಾಸ್ಯ ಪ್ರಧಾನ ಸಿನಿಮಾ ಇದಾಗಿದ್ದು, ಅಕ್ಷಯ್ ಜೊತೆಗೆ ಇನ್ನೂ ಕೆಲವು ಸ್ಟಾರ್ ನಟರುಗಳು ಇದ್ದು, ಇವರ ಜೊತೆಗೆ ಹಲವು ಹಾಸ್ಯ ನಟರು ಸಹ ನಟಿಸುತ್ತಿದ್ದಾರೆ. ಇದೀಗ ನಟ ಅಕ್ಷಯ್ ಕುಮಾರ್, ಸಿನಿಮಾ ಶೂಟಿಂಗ್ ವೇಳೆ ತಾವು ಹಿರಿಯ ಹಾಸ್ಯ ನಟನ ಮೇಲೆ ಮಾಡಿದ ಪ್ರ್ಯಾಂಕ್​​ನ ವಿಡಿಯೋ ಒಂದನ್ನು ಹಂಚಿಕೊಂಡಿದ್ದಾರೆ.

ಶೂಟಿಂಗ್ ವೇಳೆ ಅಕ್ಷಯ್ ಕುಮಾರ್, ಕುದುರೆ ಮೇಯಿಸಿದ್ದಾರೆ. ಆದರೆ ಕುದುರೆಗೆ ಹುಲ್ಲು ತಿನ್ನಿಸಿಲ್ಲ ಬದಲಿಗೆ ಸಹ ನಟನ ಕೂದಲನ್ನೇ ತಿನ್ನಿಸಿದ್ದಾರೆ. ಹಿರಿಯ ಹಾಸ್ಯ ನಟ ರಾಜ್​ಪಾಲ್ ಯಾದವ್ ಶೂಟಿಂಗ್ ವೇಳೆ ಯಾರೊಟ್ಟಿಗೋ ಮಾತನಾಡುತ್ತಾ ನಿಂತಿದ್ದಾಗ, ಅಲ್ಲಿಗೆ ಕುದುರೆ ಹಿಡಿದು ಬರುವ ಅಕ್ಷಯ್ ಕುಮಾರ್, ರಾಜ್​​ಪಾಲ್ ಧರಿಸಿದ್ದ ನಕಲಿ ಕೂದಲಿನ ವಿಗ್ ಅನ್ನು ತಿನ್ನುವಂತೆ ಕುದುರೆಗೆ ಹೇಳಿದ್ದಾರೆ, ಕೂಡಲೇ ಆ ಕುದುರೆ ರಾಪ್​​ಪಾಲ್​ ಯಾದವ್ ಅವರ ವಿಗ್​​ಗೆ ಬಾಯಿ ಹಾಕಿದೆ. ತಲೆಗೆ ಏನೋ ತಾಗಿದಂತಾಗಿ ಹಿಂದೆ ತಿರುಗಿ ನೋಡಿದ ರಾಜ್​​ಪಾಲ್ ಯಾದವ್ ಕುದುರೆಯನ್ನು ನೋಡಿ ಹೌಹಾರಿದ್ದಾರೆ. ಇದನ್ನು ನೋಡಿ ಅಕ್ಷಯ್ ಕುಮಾರ್​​​ಗೆ ನಗುವೋ ನಗು.

ವಿಶೇಷವೆಂದರೆ ವಿಡಿಯೋನಲ್ಲಿ ರಾಜ್​​ಪಾಲ್ ಪಕ್ಕದಲ್ಲೇ ಪರೇಶ್ ರಾವಲ್ ಸಹ ಇದ್ದಾರೆ. ಇತ್ತೀಚೆಗೆ ಅಕ್ಷಯ್ ಕುಮಾರ್ ಮತ್ತು ಪರೇಶ್ ರಾವಲ್ ನಡುವೆ ಎಲ್ಲವೂ ಸರಿ ಇಲ್ಲ. ಅಕ್ಷಯ್ ನಿರ್ಮಾಣ ಮಾಡುತ್ತಿದ್ದ ‘ಹೇರಾ ಪೇರಿ 3’ ಸಿನಿಮಾನಲ್ಲಿ ತಾವು ನಟಿಸುವುದಿಲ್ಲ ಎಂದು ಪರೇಶ್ ಹೇಳಿದ್ದರು. ಸಂಧಾನದ ಬಳಿಕ ಒಪ್ಪಿಗೆ ಸೂಚಿಸಿದ್ದರಾದರೂ ಈಗ ಮತ್ತೆ ಸಿನಿಮಾದಿಂದ ಹೊರಗೆ ಹೋಗಿದ್ದು, ಪಡೆದಿದ್ದ ಅಡ್ವಾನ್ಸ್ ಮೊತ್ತವನ್ನು ಬಡ್ಡಿ ಸಮೇತ ಹಿಂತಿರುಗಿಸಿದ್ದಾರೆ. ಅಲ್ಲದೆ, ಸಂದರ್ಶನವೊಂದರಲ್ಲಿ ಅಕ್ಷಯ್ ನನ್ನ ಗೆಳೆಯ ಅಲ್ಲ ಸಹ ನಟ ಅಷ್ಟೆ ಎಂದು ಹೇಳಿಕೆ ಸಹ ನೀಡಿದ್ದರು.

ಈಗ ಅಕ್ಷಯ್ ಕುಮಾರ್ ಹಂಚಿಕೊಂಡಿರುವ ವಿಡಿಯೋನಲ್ಲಿ ಅಕ್ಷಯ್ ಕುಮಾರ್ ಮಾಡಿರುವ ಪ್ರ್ಯಾಂಕ್ ನೋಡಿ ಪರೇಶ್ ರಾವಲ್ ಸಹ ಮನಸಾರೆ ನಕ್ಕಿದ್ದಾರೆ. ವಿಡಿಯೋ ನೋಡಿದರೆ ಅಕ್ಷಯ್ ಮತ್ತು ಪರೇಶ್ ರಾವಲ್ ತಮ್ಮ ನಡುವೆ ಇದ್ದ ಮನಸ್ಥಾಪವನ್ನು ಮರೆತಂತೆ ಇದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

Exit mobile version