Headlines

ನೀವು ಕೆಲಸ ಮಾಡುವಾಗ ಕುಳಿತುಕೊಳ್ಳುವಂತಹ ಭಂಗಿಯಿಂದಲೂ ಬರಬಹುದು ಬೆನ್ನು ನೋವು ಎಚ್ಚರಿಕೆ ನೀಡಿದ ಡಾ ಅಜಯ್‌ ಹೆಗ್ಡೆ – Kannada News | Back Pain Relief for Office Workers

Dr. Ajay Hegde On Back Pain From Sitting ಇತ್ತೀಚಿನ ವರ್ಷಗಳಲ್ಲಿ ಡೆಸ್ಕ್‌ನಲ್ಲೇ ಕುಳಿತು ಕೆಲಸ ಮಾಡುವ ವೃತ್ತಿಪರರ ಸಂಖ್ಯೆ ಗಣನೀಯವಾಗಿ ಹೆಚ್ಚುತ್ತಿದೆ. ದಿನಕ್ಕೆ ಎಂಟು ಗಂಟೆಗಳಿಗೂ ಹೆಚ್ಚು ಕಾಲ ಕಂಪ್ಯೂಟರ್ ಮುಂದೆ ಕುಳಿತುಕೊಳ್ಳುವ ಉದ್ಯೋಗಿಗಳು ಸರಿಯಾದ ಭಂಗಿಯ ಬದಲು ಮನಸ್ಸಿಗೆ ಬಂದಂತೆ ಕುಳಿತುಕೊಂಡಿರುತ್ತಾರೆ. ಇದರ ಜೊತೆಗೆ, ಕೆಲಸ ಮಾಡುವ ಸ್ಥಳ ಅಥವಾ ಆಫೀಸ್ ತಲುಪುವುದಕ್ಕಾಗಿ ಕೆಟ್ಟ ಕೆಟ್ಟ ರಸ್ತೆಗಳಲ್ಲಿ ಎರಡು ಮೂರು ಗಂಟೆಗಳ ಕಾಲ ಸಂಚರಿಸುತ್ತಾರೆ. ಹೀಗೆ ನಮ್ಮ ಮಧ್ಯೆ ಇರುವ ಅತ್ಯಧಿಕ ಜನ…

Read More

CSK vs RR: ಸಿಎಸ್​ಕೆ ಪರ ಮೊದಲ ಪಂದ್ಯದಲ್ಲೇ ಎಡವಿದ ಸಂಜು ಸ್ಯಾಮ್ಸನ್

ಸಾಕಷ್ಟು ನಿರೀಕ್ಷೆಗಳನ್ನು ಹೊತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಎಂಟ್ರಿಕೊಟ್ಟಿದ್ದ ಸಂಜು ಸ್ಯಾಮ್ಸನ್, ತಂಡದ ಪರ ಆಡಿದ ಮೊದಲ ಪಂದ್ಯದಲ್ಲಿ ಪ್ರಭಾವ ಬೀರುವಲ್ಲಿ ವಿಫಲರಾಗಿದ್ದಾರೆ. ರಾಜಸ್ಥಾನ್ ರಾಯಲ್ಸ್ ವಿರುದ್ಧ ನಡೆದ ಐಪಿಎಲ್ 2026 ರ ಮೂರನೇ ಪಂದ್ಯದಲ್ಲಿ ಸಿಎಸ್​ಕೆ ಪರ ಆರಂಭಿಕನಾಗಿ ಕಣಕ್ಕಿಳಿದಿದ್ದ ಸಂಜು ಸ್ಯಾಮ್ಸನ್ ಕೇವಲ ಒಂದಂಕಿಗೆ ವಿಕೆಟ್ ಒಪ್ಪಿಸಿದ್ದಾರೆ. ಸಂಜು ಸ್ಯಾಮ್ಸನ್ ಆಗಮನದಿಂದ ಸಿಎಸ್​ಕೆಯ ಓಪನಿಂಗ್ ಜೋಡಿಯಲ್ಲಿ ಬದಲಾವಣೆಗಳಾಗಿತ್ತು. ಕಳೆದ ಆವೃತ್ತಿಯಲ್ಲಿ ರುತುರಾಜ್ ಜೊತೆ ಆಯುಷ್ ಮ್ಹಾತ್ರೆ ಆರಂಭಿಕರಾಗಿದ್ದರು. ಆದರೆ ಈ ಆವೃತ್ತಿಯಲ್ಲಿ ರುತುರಾಜ್…

Read More

Optical Illusion: ಈ ಚಿತ್ರದಲ್ಲಿರುವ ಮೀನನ್ನು ಹುಡುಕಿದ್ರೆ ನಿಮ್ಮ ಕಣ್ಣು ಚುರುಕಾಗಿದೆ ಎಂದರ್ಥ – Kannada News | Optical Illusion: Spot a fish hiding in this picture within 25 seconds

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: Social Media ಇತ್ತೀಚೆಗಿನ ದಿನಗಳಲ್ಲಿ ಆಪ್ಟಿಕಲ್‌ ಇಲ್ಯೂಷನ್‌ (Optical Illusion) ಒಗಟಿನ ಚಿತ್ರಗಳು ಸಖತ್‌ ಟ್ರೆಂಡ್ ಆಗುತ್ತಿದೆ. ಆದರೆ ಈ ಒಗಟಿನ ಚಿತ್ರಗಳನ್ನು ಹತ್ತು ಜನರಲ್ಲಿ ಒಬ್ಬರಿಗೆ ಮಾತ್ರ ಬಿಡಿಸಲು ಸಾಧ್ಯ. ಈ ಚಿತ್ರಗಳು ಮೆದುಳಿಗೆ ವ್ಯಾಯಾಮ ನೀಡುವುದರ ಜೊತೆಗೆ ನಿಮ್ಮ ಬುದ್ಧಿವಂತಿಕೆಗೆ ಸವಾಲೆಸಗುತ್ತದೆ. ಅಂತಹದ್ದೊದು ಇಲ್ಯೂಷನ್‌ ಚಿತ್ರ ಇದೀಗ ವೈರಲ್‌ ಆಗಿದೆ. ಈ ಚಿತ್ರದಲ್ಲಿ ಮೀನೊಂದು ಇದ್ದು, ನೀವು ಆ ಜಲಚರ ಜೀವಿಯನ್ನು ಹುಡುಕಿ ಜಾಣರು ಎನಿಸಿಕೊಳ್ಳಿ. ಈ…

Read More

ಲೈವ್ ಬಂದು ಸಾಯಲು ಯತ್ನಿಸಿದ ಬಿಗ್ ಬಾಸ್ ಸ್ಪರ್ಧಿ; ಪರಿಸ್ಥಿತಿ ಚಿಂತಾಜನಕ

ಜನಪ್ರಿಯ ಯೂಟ್ಯೂಬರ್ ಅನುರಾಗ್ ದೊಭಾಲ್ (Anurag Dobhal) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ‘ಹಿಂದಿ ಬಿಗ್ ಬಾಸ್ ಸೀಸನ್ 17’ (Bigg Boss 17) ಶೋನಲ್ಲಿ ಸ್ಪರ್ಧಿಸಿದ್ದ ಅವರು ಮಾನಸಿಕವಾಗಿ ಬಹಳ ನೊಂದಿದ್ದರು. ಖಿನ್ನತೆಯಿಂದ ಬಳಲುತ್ತಿದ್ದ ಅವರು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದಾರೆ. ಶನಿವಾರ (ಮಾರ್ಚ್ 7) ರಾತ್ರಿ 10 ಗಂಟೆ ಸುಮಾರಿಗೆ ಕಾರು ಓಡಿಸುತ್ತಾ ಲೈವ್ (UK07 Rider livestream) ಬಂದಿದ್ದ ಅನುರಾಗ್ ದೊಭಾಲ್ ಅವರು ‘ಇದು ಕೊನೆಯೇ ವಿದಾಯ’ ಎಂದು ಹೇಳಿ ಡಿವೈಡರ್​ಗೆ ಡಿಕ್ಕಿ ಹೊಡೆದರು. ಗಂಭೀರವಾಗಿ…

Read More

ನ್ಯೂ ಇಯರ್​​​ ಸಂಭ್ರಮ ಮಧ್ಯೆ ಕಿರಿಕ್: ಗೆಳೆಯನಿಗೆ ಹೊಡೆದ ಯುವತಿ, ನಡುರೋಡಲ್ಲೇ ಜೋಡಿ ಹೈಡ್ರಾಮಾ, ಲಾಠಿ ಚಾರ್ಜ್ – Kannada News | Bengaluru New Year 2026: Grand Celebrations Marked by Midnight Chaos

ಬೆಂಗಳೂರು, ಜನವರಿ 01: 2025ಕ್ಕೆ ಗುಡ್ ಬೈ ಹೇಳಿ ಹೊಸ ವರ್ಷ 2026ನ್ನು (New Year) ಎಲ್ಲರೂ ವೆಲ್​ಕಂ ಮಾಡಿದರು. ರಾಜ್ಯದ ಜನರು ಹೊಸ ವರ್ಷವನ್ನು ಸಂಭ್ರಮ ಸಡಗರದಿಂದ ಬರಮಾಡಿಕೊಂಡಿದ್ದಾರೆ. ಬೆಂಗಳೂರಿನ (bangaluru) ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆ, ಇಂದಿರಾನಗರ, ಚರ್ಚ್ ಸ್ಟ್ರೀಟ್, ಕೋರಮಂಗಲ ಸೇರಿದಂತೆ ಹಲವೆಡೆ ಸೆಲೆಬ್ರೇಷನ್ ಜೋರಾಗಿತ್ತು. ಕಿಕ್ಕೇರಿಸಿಕೊಂಡು ಎಲ್ಲರೂ ಕುಣಿದು ಕುಪ್ಪಳಿಸಿದ್ದು, ಹೊಸ ವರ್ಷವನ್ನ ಮಸ್ತ್ ಎಂಜಾಯ್ ಮಾಡಿದರು. ಸಂಭ್ರಮಾಚರಣೆ ನಡುವೆಯೇ ಕೆಲ ಕಿರಿಕ್​ ಕೂಡ ನಡೆದಿದ್ದು, ಪೊಲೀಸರು ಲಾಠಿ ರುಚಿ ತೋರಿಸುತ್ತಿದ್ದಂತೆ ಮನೆ…

Read More

ಹೊಸ ವರ್ಷ ಸಂಭ್ರಮದ ವೇಳೆ ಹುಡುಗಿಯರದ ಸುದ್ದಿಗೆ ಹೋದ್ರೆ ಜೋಕೆ: ಖಾಕಿ ಖಡಕ್​​ ಎಚ್ಚರಿಕೆ – Kannada News | New Years Eve in Belagavi: Police Commissioner Borase Outlines Security and Safety Directives.

ಬೆಳಗಾವಿ, ಡಿಸೆಂಬರ್​​ 31: ಹೊಸ ವರ್ಷವನ್ನು ಸಂಭ್ರಮದಿಂದ ಸ್ವಾಗತಿಸಲು ಬೆಳಗಾವಿ ನಗರ ಸಜ್ಜಾಗಿದೆ. ಈ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಬೆಳಗಾವಿ ಪೊಲೀಸರು ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೊಳಿಸಿದ್ದಾರೆ. ನಗರ ಪೊಲೀಸ್ ಆಯುಕ್ತ ಭೂಷಣ್ ಬೊರಸೆ ಅವರು ಹೊಸ ವರ್ಷಾಚರಣೆಯ ಸುರಕ್ಷತಾ ಕ್ರಮಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ಡಿಸೆಂಬರ್ 26ರಂದೇ ಹೋಟೆಲ್, ಬಾರ್ ಹಾಗೂ ರೆಸಾರ್ಟ್ ಮಾಲೀಕರೊಂದಿಗೆ ಸಭೆ ನಡೆಸಿ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಸೂಚನೆ ನೀಡಲಾಗಿದೆ. ಅಪ್ರಾಪ್ತರಿಗೆ ಮದ್ಯ ಹಾಗೂ ಕೊಠಡಿಗಳನ್ನು ನೀಡದಂತೆ ಸೂಚಿಸಿದ್ದೇವೆ. ಅಗ್ನಿ…

Read More

Daily Devotional: ವಿದ್ಯಾರ್ಥಿಗಳು ತಾಂಬೂಲ ಸೇವನೆ ಮಾಡಬಾರದು ಯಾಕೆ?

ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿವಿದ್ಯಾರ್ಥಿಗಳು ತಾಂಬೂಲ ಸೇವನೆ ಮಾಡಬಾರದು ಯಾಕೆ ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ಯಾವುದೇ ಶುಭ ಸಮಾರಂಭದಲ್ಲಿ ಒಳ್ಳೆಯ ಆಹಾರ ಸೇವನೆಯ ನಂತರ ತಾಂಬೂಲ ಸೇವಿಸುವುದು ವಾಡಿಕೆ. ಇದು ಜೀರ್ಣಕ್ರಿಯೆಗೆ ಸಹಕಾರಿ ಹಾಗೂ ಮಹಾಲಕ್ಷ್ಮಿ, ಐಶ್ವರ್ಯ ಮತ್ತು ಸಂತೋಷದ ಸಂಕೇತವಾಗಿದೆ. ಆದರೆ ವಿದ್ಯಾರ್ಥಿಗಳು ತಾಂಬೂಲ ಸೇವನೆಯಿಂದ ದೂರವಿರಬೇಕು ಎಂದು ಶಾಸ್ತ್ರಗಳು ಹೇಳುತ್ತವೆ. ಬ್ರಹ್ಮಚಾರಿಗಳು ಕೂಡ ಇದನ್ನು ಸೇವಿಸಬಾರದು. ತಾಂಬೂಲದಲ್ಲಿ ವೀಳ್ಯದೆಲೆ, ಅಡಿಕೆ, ಸುಣ್ಣ, ಏಲಕ್ಕಿ, ಕಸ್ತೂರಿ, ಜಾಜಿ, ಜಾಪತ್ರೆ ಇರುತ್ತವೆ. ಇದನ್ನು ಸೇವಿಸುವುದರಿಂದ ವಿದ್ಯಾರ್ಥಿಗಳ…

Read More

Ugadi Horoscope 2026: ಯುಗಾದಿ ವರ್ಷ ಭವಿಷ್ಯ; ಈ ರಾಶಿಗೆ ವಿವಾಹ ಯೋಗ ಹಾಗೂ ಹೊಸ ಉದ್ಯೋಗಾವಕಾಶ

2026ರ ಪರಾಭವನಾಮ ಸಂವತ್ಸರದ ಯುಗಾದಿಯು ಕುಂಭ ರಾಶಿಯವರಿಗೆ ಉತ್ಸಾಹ ಮತ್ತು ಪ್ರಗತಿಯ ವರ್ಷ ಎಂದು ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಭವಿಷ್ಯ ನುಡಿದಿದ್ದಾರೆ. ಧನಿಷ್ಠ, ಶತಭಿಷಾ, ಪೂರ್ವಾಭಾದ್ರ ನಕ್ಷತ್ರಗಳನ್ನೊಳಗೊಂಡ ಈ ರಾಶಿಗೆ ಗುರುವು ಐದರಿಂದ ಆರನೇ ಮನೆಗೆ, ಶನಿ ಎರಡನೇ ಮನೆಯಲ್ಲಿ, ರಾಹು ವ್ಯಯ ಸ್ಥಾನಕ್ಕೆ ಹಾಗೂ ಕೇತು ಆರನೇ ಮನೆಗೆ ಸಾಗಲಿದೆ. ಸಾಡೆ ಸಾತಿಯ ಕಟ್ಟ ಕಡೆಯ ಭಾಗದಲ್ಲಿದ್ದರೂ, ಈ ವರ್ಷ ಆದಾಯ 6, ವ್ಯಯ 4; ಆರೋಗ್ಯ 8, ಅನಾರೋಗ್ಯ 3; ಸುಖ…

Read More

ರಾಜ್ಯದಲ್ಲಿ ವಿದ್ಯುತ್ ಬಳಕೆ ಭಾರೀ ಪ್ರಮಾಣದಲ್ಲಿ ಏರಿಕೆ: ಕಾರಣ ಇಲ್ಲಿದೆ – Kannada News | Karnataka Power Consumption Soars 20 percent in April: Heatwave and Gas Crisis Drive Surge

ಬೆಂಗಳೂರು, ಏಪ್ರಿಲ್​​ 30: ಪ್ರಸಕ್ತ ತಿಂಗಳಲ್ಲಿ ರಾಜ್ಯದಲ್ಲಿ ವಿದ್ಯುತ್ ಬಳಕೆ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದ್ದು, ಏಪ್ರಿಲ್ 1ರಿಂದ 26ರವರೆಗೆ 9,101 ಮಿಲಿಯನ್ ಯೂನಿಟ್ (MU) ವಿದ್ಯುತ್ ಬಳಕೆಯಾಗಿದೆ. ಕಳೆದ ಐದು ವರ್ಷಗಳಲ್ಲಿ ಇದುವರೆಗೆ ಕಂಡುಬಂದ ಅತ್ಯಧಿಕ ಬಳಕೆ ಇದಾಗಿದೆ ಎನ್ನಲಾಗಿದ್ದು, 2025ರ ಇದೇ ಅವಧಿಗೆ ಹೋಲಿಸಿದರೆ ಶೇ.20ಕ್ಕಿಂತ ಹೆಚ್ಚಿನ ಏರಿಕೆ ಕಂಡುಬಂದಿದೆ. ಹಿಂದಿನ ಕೆಲವು ವರ್ಷಗಳಲ್ಲಿ ಇದೇ ಅವಧಿಯಲ್ಲಿನ ವಿದ್ಯುತ್​​ ಬಳಕೆ ಬಳಕೆ 7,500ರಿಂದ 8,000 ಮಿಲಿಯನ್ ಯೂನಿಟ್ಗಳ ನಡುವೆಯೇ ಇತ್ತು. ಆದರೆ ಈ ಬಾರಿ ನಾನಾ…

Read More

ಇಸ್ರೇಲ್ ಮತ್ತು ಇರಾನ್ ಯುದ್ಧದಿಂದ ಭಾರತಕ್ಕೆ ಶಾಕ್​​: ಕಚ್ಚಾ ತೈಲ ದರ ಏರಿಕೆ ಸಾಧ್ಯತೆ? – Kannada News | Crude Oil Price Hike: How Israel Iran Tensions Impact India’s Economy and Fuel Strategy

ದೆಹಲಿ, ಫೆ.28: ಪಶ್ಚಿಮ ಏಷ್ಯಾದಲ್ಲಿ ಇಸ್ರೇಲ್ ಮತ್ತು ಇರಾನ್ ನಡುವೆ ಉಲ್ಬಣಿಸಿರುವ ಸಂಘರ್ಷವು ಜಾಗತಿಕ ಮಾರುಕಟ್ಟೆಯಲ್ಲಿ ತಲ್ಲಣ ಸೃಷ್ಟಿಸಿದೆ. ಈ ಯುದ್ಧದ ಪರಿಣಾಮವಾಗಿ ಭಾರತದಲ್ಲಿ ಇಂಧನ ಬೆಲೆಗಳು (Petrol-Diesel Prices) ಏರಿಕೆಯಾಗಲಿವೆಯೇ ಎಂಬ ಆತಂಕ ಸಾರ್ವಜನಿಕರಲ್ಲಿ ಮನೆಮಾಡಿದೆ. ಇರಾನ್ ವಿಶ್ವದ ಪ್ರಮುಖ ತೈಲ ಉತ್ಪಾದಕ ರಾಷ್ಟ್ರಗಳಲ್ಲಿ ಒಂದಾಗಿದೆ. ಯುದ್ಧದ ಕಾರಣದಿಂದಾಗಿ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುವ ಭೀತಿಯಿಂದ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ (Crude Oil) ಬೆಲೆ ಪ್ರತಿ ಬ್ಯಾರೆಲ್‌ಗೆ ಏರಿಕೆಯಾಗುತ್ತಿದೆ. ಭಾರತವು ತನ್ನ ತೈಲದ ಅಗತ್ಯದ ಶೇ….

Read More