Headlines

ಕೊನೆಯ ಕ್ವಾರ್ಟರ್​ನಲ್ಲಿ ಜಿಡಿಪಿ ಶೇ. 7.8 ಏರಿಕೆ; ಇಡೀ ವರ್ಷದಲ್ಲಾದ ಆರ್ಥಿಕ ಬೆಳವಣಿಗೆ ಶೇ. 7.7 – Kannada News

ನವದೆಹಲಿ, ಜೂನ್ 5: ಕಳೆದ ಬಾರಿಯ ಹಣಕಾಸು ವರ್ಷದಲ್ಲಿ (2025-26) ಭಾರತದ ಆರ್ಥಿಕತೆ ಶೇ. 7.7ರಷ್ಟು ಹೆಚ್ಚಳ ಕಂಡಿದೆ. ಇದು ಸರ್ಕಾರ ಶುಕ್ರವಾರ (ಜೂನ್ 5) ಬಿಡುಗಡೆ ಮಾಡಿದ ಅಧಿಕೃತ ದತ್ತಾಂಶದಿಂದ ತಿಳಿದುಬಂದಿದೆ. 2024-25ರ ಹಣಕಾಸು ವರ್ಷದಲ್ಲಿ ಭಾರತದ ಜಿಡಿಪಿ (India GDP) ಶೇ. 7.1ರಷ್ಟು ಹಿಗ್ಗಿತ್ತು. 2025-26ರಲ್ಲಿ ಅದನ್ನೂ ಮೀರಿಸಿದ ಬೆಳವಣಿಗೆ ಸಾಧಿಸಿದೆ. 2025-26ರ ಹಣಕಾಸು ವರ್ಷದ ಕೊನೆಯ ಕ್ವಾರ್ಟರ್​ನಲ್ಲಿ ಜಿಡಿಪಿ ಶೇ. 7.8ರ ವಾರ್ಷಿಕ ದರದಲ್ಲಿ ಬೆಳವಣಿಗೆ ಹೊಂದಿದೆ ಎಂದು ದತ್ತಾಂಶದಲ್ಲಿ ತಿಳಿಸಲಾಗಿದೆ. ಮೊದಲ…

Read More

ಪೂಜೆಯ ಬಳಿಕ ಆರತಿ ತಟ್ಟೆಗೆ ಕಡ್ಡಾಯವಾಗಿ ಹಣ ಹಾಕಬೇಕು ಯಾಕೆ? ಇದರ ಹಿಂದೆ ಇದೆ ಸೈನ್ಸ್ – Kannada News

ಸನಾತನ ಹಿಂದೂ ಧರ್ಮದಲ್ಲಿ ದೇವಸ್ಥಾನಗಳಿಗಾಗಲಿ ಅಥವಾ ಮನೆಯಲ್ಲಾಗಲಿ ಪೂಜೆ ಮುಗಿದ ನಂತರ ದೇವರಿಗೆ ಮಹಾಮಂಗಳಾರತಿ ಮಾಡುವುದು ಕಡ್ಡಾಯ. ಆದರೆ, ಆರತಿ ತಟ್ಟೆಯನ್ನು ಭಕ್ತರ ಮುಂದೆ ತಂದಾಗ ಅದಕ್ಕೆ ಕಡ್ಡಾಯವಾಗಿ ಹಣ ಅಥವಾ ನಾಣ್ಯಗಳನ್ನು ಹಾಕುವ ಸಂಪ್ರದಾಯ ಇಂದಿಗೂ ನಡೆದುಕೊಂಡು ಬಂದಿದೆ. ಇದು ಕೇವಲ ಮೂಢನಂಬಿಕೆಯಲ್ಲ ಅಥವಾ ಬಲವಂತದ ಆಚರಣೆಯಲ್ಲ. ಇದರ ಹಿಂದೆ ಆಳವಾದ ಧಾರ್ಮಿಕ, ಐತಿಹಾಸಿಕ ಮತ್ತು ವೈಜ್ಞಾನಿಕ ಕಾರಣಗಳಿವೆ ಎಂದು ಶಾಸ್ತ್ರ ಹೇಳಿದೆ. ಅಹಂಕಾರದ ತ್ಯಾಗ ಮತ್ತು ಋಣ ಮುಕ್ತಿ ಶಾಸ್ತ್ರಗಳ ಪ್ರಕಾರ, ಭಗವಂತನು ನಮಗೆ…

Read More

ಅಸ್ಸಾಂನಲ್ಲಿ ಕ್ಯಾಬಿನೆಟ್ ವಿಸ್ತರಣೆ; ಹಿಮಂತ ಬಿಸ್ವ ಶರ್ಮಾ ಸಂಪುಟಕ್ಕೆ 12 ನೂತನ ಸಚಿವರ ಸೇರ್ಪಡೆ – Kannada News

ಗುವಾಹಟಿ, ಜೂನ್ 5: ಅಸ್ಸಾಂನಲ್ಲಿ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ (Himanta Biswa Sarma) ನೇತೃತ್ವದ ಎನ್‌ಡಿಎ (NDA) ಸರ್ಕಾರದ ಸಂಪುಟ ವಿಸ್ತರಣೆಯಾಗಿದ್ದು, ಒಟ್ಟು 12 ಶಾಸಕರು ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಈ ಬಾರಿಯ ಸಂಪುಟ ವಿಸ್ತರಣೆಯಲ್ಲಿ ಬಿಜೆಪಿಯ ಅಶ್ವಿನಿ ರಾಯ್ ಸರ್ಕಾರ್, ನಿಲಿಮಾ ದೇವಿ ಮತ್ತು ಸುಶಾಂತ ಬೊರ್ಗೊಹೈನ್ ಅವರಂತಹ ಹೊಸ ಮುಖಗಳಿಗೆ ಮೊದಲ ಬಾರಿಗೆ ಸಚಿವ ಸ್ಥಾನ ನೀಡಲಾಗಿದೆ. ಅಸ್ಸಾಂ ವಿಧಾನಸಭೆಯ ಮಾಜಿ ಸ್ಪೀಕರ್ ಬಿಸ್ವಜಿತ್ ದೈಮರಿ ಅವರು ಕೂಡ ನೂತನ…

Read More

ರಾಹುಲ್ ಗಾಂಧಿ ಮಹತ್ವದ ಭರವಸೆ: ಐ ಆ್ಯಮ್​ ಹ್ಯಾಪಿ ಎಂದ ಸಚಿವ ಕೆ.ಹೆಚ್​.ಮುನಿಯಪ್ಪ – Kannada News

ಬೆಂಗಳೂರು, (ಜೂನ್ 05): ಡಿಕೆ ಶಿವಕುಮಾರ್ (DK Shivakumar) ಸರ್ಕಾರದಲ್ಲಿ ಖಾತೆ (Ministers portfolio )ಕ್ಯಾತೆ ಶುರುವಾಗಿದೆ. ಬೆಂಗಳೂರು ನಗರಾಭಿವೃದ್ಧಿ ಇಲಾಖೆ ಕೈತಪ್ಪಿದ್ದಕ್ಕೆ ಹಿರಿಯ ಸಚಿವ ರಾಮಲಿಂಗಾರೆಡ್ಡಿ (Ramalinga Reddy) ಅವರ ಹಠಾತ್ ರಾಜೀನಾಮೆ ನೀಡಿದ್ದಾರೆ. ಇದರ ಬೆನ್ನಲ್ಲೇ ಈ ಹಿಂದೆ ನಿಭಾಯಿಸಿದ್ದ ಆಹಾರ ಇಲಾಖೆ ಜವಾಬ್ದಾರಿ ನೀಡಿದ್ದಕ್ಕೆ ಮತ್ತೊಬ್ಬ ಹಿರಿಯ ಸಚಿವ ಕೆ.ಎಚ್. ಮುನಿಯಪ್ಪ (KH Muniyappa) ಅವರು ಬಹಿರಂಗವಾಗಿಯೇ ಅಸಮಾಧಾನ ಹೊರಹಾಕಿದ್ದಾರೆ. ಖುದ್ದು ರಾಹುಲ್ ಗಾಂಧಿ ಬಳಿಯೇ ತಮ್ಮ ಅಸಮಾಧಾನ ತೋಡಿಕೊಂಡಿದ್ದು, ಈ ವೇಳೆ…

Read More

ಶೂಟಿಂಗ್​​ನಲ್ಲಿ ಕುದುರೆ ಮೇಯಿಸಿದ ಅಕ್ಷಯ್, ಬಕರಾ ಆದ ಹಾಸ್ಯನಟ ರಾಜ್​ಪಾಲ್ – Kannada News

ಅಕ್ಷಯ್ ಕುಮಾರ್​ (Akshay Kumar) ವರ್ಷಕ್ಕೆ ಅತಿ ಹೆಚ್ಚು ಸಿನಿಮಾ ಮಾಡುವ ಭಾರತದ ಸ್ಟಾರ್ ನಟ. ಇತರೆ ಸ್ಟಾರ್ ನಟರುಗಳು ಒಂದು ಸಿನಿಮಾ ಮಾಡಲು ಎರಡು-ಮೂರು ವರ್ಷ ತೆಗೆದುಕೊಂಡರೆ, ಅಕ್ಷಯ್ ಕುಮಾರ್ ಒಂದೇ ವರ್ಷದಲ್ಲಿ ಮೂರು ನಾಲ್ಕು ಸಿನಿಮಾ ಮುಗಿಸಿ ಇನ್ನೆರಡರ ಶೂಟಿಂಗ್ ಪ್ರಾರಂಭಿಸಿರುತ್ತಾರೆ. ಶೂಟಿಂಗ್ ವಿಷಯದಲ್ಲಿ ಬಲು ಶಿಸ್ತಿನ ವ್ಯಕ್ತಿ ಆಗಿರುವ ಅಕ್ಷಯ್ ಕುಮಾರ್, ಬೆಳಿಗ್ಗೆ 6 ಗಂಟೆಗೆ ಶೂಟಿಂಗ್ ಆರಂಭಿಸಿದರೆ ಸಂಜೆ 4 ಅಥವಾ 5 ಕ್ಕೆ ಮುಗಿಸಿ ಬಿಡುತ್ತಾರೆ. ಶೂಟಿಂಗ್ ಸಮಯದಲ್ಲಿಯೂ ಸಹ…

Read More

SSC Recruitment 2026: ಹುದ್ದೆಗಳ ಸಂಖ್ಯೆ 731ರಿಂದ 1170ಕ್ಕೆ ಏರಿಕೆ; ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಅವಕಾಶ! – Kannada News

ಕೇಂದ್ರ ಸರ್ಕಾರಿ ಉದ್ಯೋಗImage Credit source: Pinterest ಕೇಂದ್ರ ಸರ್ಕಾರಿ ಉದ್ಯೋಗಕ್ಕಾಗಿ ತಯಾರಿ ನಡೆಸುತ್ತಿರುವ ಅಭ್ಯರ್ಥಿಗಳಿಗೆ ಸಿಬ್ಬಂದಿ ಆಯ್ಕೆ ಆಯೋಗ (SSC) ಸಿಹಿಸುದ್ದಿ ನೀಡಿದೆ. ದೇಶಾದ್ಯಂತದ ವಿವಿಧ ಕೇಂದ್ರ ಸರ್ಕಾರಿ ಸಚಿವಾಲಯಗಳು, ಇಲಾಖೆಗಳು ಮತ್ತು ಕಚೇರಿಗಳಲ್ಲಿ ಖಾಲಿ ಇರುವ ಸ್ಟೆನೋಗ್ರಾಫರ್ ಗ್ರೇಡ್ ‘ಸಿ’ ಮತ್ತು ಗ್ರೇಡ್ ‘ಡಿ’ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಪ್ರಕಟಿಸಿದ್ದ ಅಧಿಸೂಚನೆಯಲ್ಲಿ ಹುದ್ದೆಗಳ ಸಂಖ್ಯೆಯನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ಹಿಂದೆ ಏಪ್ರಿಲ್ ನಲ್ಲಿ ಬಿಡುಗಡೆ ಮಾಡಲಾಗಿದ್ದ ಅಧಿಸೂಚನೆಯಲ್ಲಿ ಒಟ್ಟು 731 ಹುದ್ದೆಗಳ ನೇಮಕಾತಿ ಘೋಷಿಸಲಾಗಿತ್ತು….

Read More

ಜವಾಹರಲಾಲ್ ನೆಹರು- ನರೇಂದ್ರ ಮೋದಿ ಅವಧಿಯ ವ್ಯತ್ಯಾಸಗಳೇನು? ಇಬ್ಬರ ನಾಯಕತ್ವದ ಅವಲೋಕನ ಇಲ್ಲಿದೆ – Kannada News

ನವದೆಹಲಿ, ಜೂನ್ 5: ಬರುವ ಜೂನ್ 10ರಂದು ಭಾರತದ ರಾಜಕಾರಣದಲ್ಲಿ ಹಳೇ ದಾಖಲೆಯೊಂದು ಇತಿಹಾಸ ಪುಟ ಸೇರಲಿದೆ. ಪ್ರಧಾನಿ ನರೇಂದ್ರ ಮೋದಿ (PM Modi) ಅವರು ಸತತವಾಗಿ ಅತಿ ಹೆಚ್ಚು ದಿನಗಳ ಕಾಲ ಪ್ರಜಾಸತ್ತಾತ್ಮಕವಾಗಿ ಆಡಳಿತ ನಡೆಸಿದ ಭಾರತದ ಮೊದಲ ಪ್ರಧಾನಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ. ಈ ಮೂಲಕ ಅವರು ದೇಶದ ಪ್ರಥಮ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರು ಅವರ (4,398 ದಿನಗಳು) ದಾಖಲೆಯನ್ನು ದಾಟಲಿದ್ದಾರೆ. ಈ ಐತಿಹಾಸಿಕ ಸಂದರ್ಭದಲ್ಲಿ, ನೆಹರು ಮತ್ತು ಮೋದಿ ಯುಗದ ಆಡಳಿತ…

Read More

Video: ಕೊಕ್ಕು ಮುರಿದುಕೊಂಡು ಆಹಾರ ತಿನ್ನಲು ಕಷ್ಟಪಡುತ್ತಿದ್ದ ಹಕ್ಕಿಯ ನೆರವಿಗೆ ಬಂದ ಮತ್ತೊಂದು ಪಕ್ಷಿ – Kannada News

ಈಗಿನ ಕಾಲದಲ್ಲಿ ಜನರು ಇತರರಿಗೆ ಸಹಾಯ ಮಾಡುವುದು ಬಿಡಿ, ಕಷ್ಟ ಎನ್ನುವರತ್ತ ತಿರುಗಿಯೂ ನೋಡಲ್ಲ. ಹೀಗಿರುವಾಗ ಈ ಪಕ್ಷಿಗಳು ತನ್ನ ಬಳಗದಲ್ಲಿ ತೊಂದರೆಗೆ ಸಿಲುಕಿರುವ ಜೀವಕ್ಕೆ ರಕ್ಷಣೆಗೆ ನಿಲ್ಲುತ್ತದೆ, ಆಸರೆಯಾಗುತ್ತದೆ. ಇದಕ್ಕೆ ಸಾಕ್ಷಿಯೆನ್ನುವಂತಿದೆ ಈ ವಿಡಿಯೋ. ಕೊಕ್ಕು ಮುರಿದುಕೊಂಡು ಆಹಾರ ತಿನ್ನಲಾಗದೇ ಒದ್ದಾಡುತ್ತಿದ್ದ ಪಕ್ಷಿಗೆ ಇನ್ನೊಂದು ಹಕ್ಕಿ ತನ್ನ ಕೊಕ್ಕಿನಿಂದ ಆಹಾರ (food) ನೀಡಿದ ವಿಡಿಯೋ ವೈರಲ್ ಆಗಿದೆ. ಈ ದೃಶ್ಯ ನೋಡಿದ ನೆಟ್ಟಿಗರು ಪಕ್ಷಿಯ ಸಹಾಯ ಮಾಡುವ ಗುಣವನ್ನು ಮೆಚ್ಚಿಕೊಂಡಿದ್ದಾರೆ. @Ravitiwariii_ ಹೆಸರಿನ ಎಕ್ಸ್ ಖಾತೆಯಲ್ಲಿ…

Read More

ಐಪಿಎಲ್ ಮುಗಿದ ಬೆನ್ನಲ್ಲೇ ಹೊಸ ಟಿ20 ತಂಡ ಸೇರಿಕೊಂಡ ದೇವದತ್ ಪಡಿಕ್ಕಲ್ – Kannada News

ಐದನೇ ಆವೃತ್ತಿಯ ಮಹಾರಾಜ ಟಿ20 ಟ್ರೋಫಿ ಇದೇ ಜೂನ್ 20 ರಿಂದ ಆರಂಭವಾಗಲಿದ್ದು, ಜುಲೈ 12 ರವರೆಗೆ ನಡೆಯಲಿದೆ. ಈ ಟೂರ್ನಿಗೆ ಇಂದು ಹರಾಜು ಕೂಡ ನಡೆದಿದೆ. ಹರಾಜಿನಲ್ಲಿ ಕರ್ನಾಟಕದ ಸ್ಟಾರ್ ಆಟಗಾರರು ದೊಡ್ಡ ಮೊತ್ತಕ್ಕೆ ಹೊಸ ತಂಡಗಳನ್ನು ಸೇರಿಕೊಂಡಿದ್ದಾರೆ. ಹರಾಜಿನಲ್ಲಿ 150ಕ್ಕೂ ಹೆಚ್ಚು ಆಟಗಾರರು ಅದೃಷ್ಟ ಪರೀಕ್ಷೆಗೆ ಇಳಿದಿದ್ದು, ಎಲ್ಲಾ 6 ತಂಡಗಳು ತಲಾ 60 ಲಕ್ಷ ರೂ. ಹಣದೊಂದಿಗೆ ಆಟಗಾರರ ಖರೀದಿಗಿಳಿದಿವೆ. ಅದರಂತೆ ಐಪಿಎಲ್‌ನಲ್ಲಿ ಆರ್​ಸಿಬಿ ತಂಡವನ್ನು ಚಾಂಪಿಯನ್ ಮಾಡುವಲ್ಲಿ ಪ್ರಮುಖ ಪಾತ್ರವಹಿಸಿದ್ದ ದೇವದತ್…

Read More

ಗದಗ: 33 ದಿನ ಅನ್ನ, ನೀರಿಲ್ಲದೇ ಸ್ವಾಮೀಜಿಯಿಂದ ಶಿವಯೋಗ ಸಮಾಧಿ; ಇಟ್ಟಿಗೆಯಿಂದ ಗರ್ಭಗುಡಿ ಬಂದ್​​ – Kannada News

ಶ್ರೀ ಜಗದ್ಗುರು ಬೂದೀಶ್ವರ ಸಂಸ್ಥಾನ ಮಠImage Credit source: tv9 kannada ರಾಮನಗರ, ಜೂನ್​​ 05: ಲೋಕ ಕಲ್ಯಾಣ, ವಿಶ್ವಶಾಂತಿ ಹಾಗೂ ಸಕಾಲದಲ್ಲಿ ಮಳೆ-ಬೆಳೆ ಉತ್ತಮವಾಗಿ ಬರಲಿ ಎಂಬ ಸಂಕಲ್ಪದೊಂದಿಗೆ ಗದಗ (gadag) ತಾಲೂಕಿನ ಅಂತೂರು ಬೆಂತೂರು ಗ್ರಾಮದ ಶ್ರೀ ಜಗದ್ಗುರು ಬೂದೀಶ್ವರ ಸಂಸ್ಥಾನ ಮಠದ ಪೀಠಾಧಿಪತಿ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು ‘ಶಿವಯೋಗ ಸಮಾಧಿ’ (Shiva Yoga Samadhi) ತಪಸ್ಸನ್ನು ಆರಂಭಿಸಿದ್ದಾರೆ. ವಿಜ್ಞಾನ ಮತ್ತು ತಂತ್ರಜ್ಞಾನ ಯುಗದಲ್ಲೂ ಅಧ್ಯಾತ್ಮದ ಶಕ್ತಿ ಎಷ್ಟರ ಮಟ್ಟಿಗೆ ಪ್ರಭಾವ ಬೀರಬಲ್ಲದು…

Read More