Headlines

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬ್ಯಾಡ್ ನ್ಯೂಸ್: ಮೇ ತಿಂಗಳಿನಲ್ಲಿ ಓಪನ್ ಆಗಲ್ಲ ಪಿಂಕ್ ಲೈನ್! ವಿಳಂಬಕ್ಕೆ ಅಸಲಿ ಕಾರಣವೇನು?

ಬೆಂಗಳೂರು, ಏಪ್ರಿಲ್ 8: ರಾಜಧಾನಿ ಬೆಂಗಳೂರಿನ ಸಂಚಾರ ದಟ್ಟಣೆಗೆ ಮುಕ್ತಿ ನೀಡಬಲ್ಲ ಬಹುನಿರೀಕ್ಷಿತ ನಮ್ಮ ಮೆಟ್ರೋದ (Namma Metro) ಪಿಂಕ್ ಲೈನ್ (Pink Line) ಲೋಕಾರ್ಪಣೆ ಮತ್ತೆ ಮುಂದಕ್ಕೆ ಹೋಗುವ ಲಕ್ಷಣಗಳು ಕಾಣಿಸುತ್ತಿವೆ. ಕಾಳೇನ ಅಗ್ರಹಾರದಿಂದ ನಾಗವಾರದವರೆಗಿನ ಈ ಮಾರ್ಗದ ಪೈಕಿ, ಮೊದಲ ಹಂತದಲ್ಲಿ 6 ನಿಲ್ದಾಣಗಳನ್ನು ಮೇ ತಿಂಗಳಿನಲ್ಲಿ ಸಾರ್ವಜನಿಕ ಸಂಚಾರಕ್ಕೆ ಮುಕ್ತಗೊಳಿಸಲು ಬಿಎಂಆರ್‌ಸಿಎಲ್ ಮತ್ತು ರಾಜ್ಯ ಸರ್ಕಾರ ಯೋಜಿಸಿದ್ದವು. ಆದರೆ, ತಾಂತ್ರಿಕ ಪರೀಕ್ಷೆಗಳು (Testing) ಬಾಕಿ ಇರುವುದರಿಂದ ಜೂನ್ ಅಥವಾ ಜುಲೈನಲ್ಲಿ ಉದ್ಘಾಟನೆಯಾಗುವ ಸಾಧ್ಯತೆಯಿದೆ….

Read More

Iran-US Ceasefire: ಯುದ್ಧ ಅಂತ್ಯವಾಗಿಲ್ಲ, ಕದನ ವಿರಾಮವಷ್ಟೇ: ಮೊಜ್ತಬಾ ಖಮೇನಿ

ಟೆಹ್ರಾನ್, ಏಪ್ರಿಲ್ 08: ಅಮೆರಿಕದೊಂದಿಗೆ ಎರಡು ವಾರಗಳ ಕದನ ವಿರಾಮಕ್ಕೆ ಒಪ್ಪಿಕೊಂಡ ನಂತರ ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ(Mojtaba Khamenei) ತನ್ನ ಎಲ್ಲಾ ಮಿಲಿಟರಿ ಘಟಕಗಳಿಗೆ ದಾಳಿ ನಿಲ್ಲಿಸುವಂತೆ ಸೂಚನೆ ನೀಡಿದ್ದಾರೆ. ಅಷ್ಟೇ ಅಲ್ಲದೆ ಯುದ್ಧ ಅಂತ್ಯವಾಗಿಲ್ಲ, ಕದನ ವಿರಾಮವಷ್ಟೇ ಎಂದಿದ್ದಾರೆ. ಕದನ ವಿರಾಮವು ಯುದ್ಧದ ಅಂತ್ಯವನ್ನು ಸೂಚಿಸುವುದಿಲ್ಲ ಮತ್ತು ಶತ್ರುಗಳಾದ ಅಮೆರಿಕ ಅಥವಾ ಇಸ್ರೇಲ್ ಯಾವುದೇ ರೀತಿಯಲ್ಲಿ ತಪ್ಪಾಗಿ ವರ್ತಿಸಿದರೆ ನಾವು ಸುಮ್ಮನಿರುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ. ಫೆಬ್ರವರಿ 28 ರಂದು ಅಮೆರಿಕ ಮತ್ತು…

Read More

ನಮ್ಮ ಸೋಲಿಗೆ ನೀವೇ ಕಾರಣ: ಹಾರ್ದಿಕ್ ಪಾಂಡ್ಯ ಆಕ್ರೋಶ

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 13ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಸೋಲನುಭವಿಸಿದೆ. ಗುವಾಹಟಿಯ ಬರ್ಸಪರಾ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ್ ರಾಯಲ್ಸ್ ತಂಡವು ನಿಗದಿತ 11 ಓವರ್​ಗಳಲ್ಲಿ ಕಲೆಹಾಕಿದ್ದು ಬರೋಬ್ಬರಿ 150 ರನ್​ಗಳು. ಈ ಗುರಿಯನ್ನು ಬೆನ್ನತ್ತಿದ ಮುಂಬೈ ಇಂಡಿಯನ್ಸ್ ತಂಡವು 11 ಓವರ್​ಗಳಲ್ಲಿ 123 ರನ್​ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಮುಂಬೈ ಪಡೆ 27 ರನ್​ಗಳಿಂದ ಸೋಲೊಪ್ಪಿಕೊಂಡಿತು. ಈ ಸೋಲಿನ ಬಳಿಕ ಮಾತನಾಡಿದ ಮುಂಬೈ ಇಂಡಿಯನ್ಸ್ ತಂಡದ…

Read More

ತುಂಬಾನೇ ಶ್ರೀಮಂತ ಅಲ್ಲು ಅರ್ಜುನ್; ಅವರ ಬಳಿ ಇರೋ ದುಬಾರಿ ವಸ್ತುಗಳಿವು

ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ (Allu Arjun) ಅವಗೆ ಇಂದು (ಏಪ್ರಿಲ್ 08) ಜನ್ಮದಿನ. ಭಾರತದ ಶ್ರೀಮಂತ ಹೀರೋಗಳಲ್ಲಿ ಅವರೂ ಒಬ್ಬರು., ಅಲ್ಲು ಅರ್ಜುನ್ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಮಾಸ್ ಛಾಯೆಯುಳ್ಳ ಭಿನ್ನ ಪಾತ್ರಗಳನ್ನು ಪ್ರಯತ್ನಿಸುತ್ತಾರೆ, ಅವರ ಬಳಿ ಸಾಕಷ್ಟು ಹಣ ಇದೆ. ಅವರ ಆಸ್ತಿ ಬಗ್ಗೆ ಇಲ್ಲಿದೆ ವಿವರ. ಅಲ್ಲು ಅರ್ಜುನ್ ಆಸ್ತಿ 600 ಕೋಟಿ ರೂಪಾಯಿ ಅಷ್ಟಿದೆ ಎನ್ನಲಾಗಿದೆ. ಹೈದರಾಬಾದ್​ನ ಜೂಬ್ಲಿ ಹಿಲ್ಸ್​ನ ಐಶಾರಾಮಿ ಬಂಗಲೆಯನ್ನು ಅಲ್ಲು ಅರ್ಜುನ್ ಹೊಂದಿದ್ದಾರೆ. ಈ…

Read More

ಕರ್ನಾಟಕ ಹವಾಮಾನ ವರದಿ: ಅಂತೂ ತಣ್ಣಗಾದ ಮಳೆರಾಯ; ರಾಜ್ಯದ ಹಲವೆಡೆ ಇಂದು ಶುಷ್ಕ ವಾತಾವರಣ

ಬೆಂಗಳೂರು, ಏಪ್ರಿಲ್ 08: ಕಳೆದ ಹಲವು ದಿನಗಳಿಂದ ರಾಜ್ಯದ ವಿವಿಧ ಭಾಗಗಳಲ್ಲಿ ಮಳೆರಾಯನ (Weather Forecast) ಆರ್ಭಟ ಕಾಣಿಸಿತ್ತು. ಆದರೆ ಇಂದು ಕೇವಲ ಬೆರಳೆಣಿಕೆಯಷ್ಟು ಪ್ರದೇಶಗಳಲ್ಲಿ ಮಳೆಯಾಗಲಿದ್ದು, ಚಿಕ್ಕಬಳ್ಳಾಪುರ, ಕೋಲಾರ, ಚಾಮರಾಜನಗರ ಮೂರು ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಸೂಚಿಸಲಾಗಿದೆ. ಉಳಿದೆಡೆ ಒಣ ಹವೆಯ ವಾತಾವರಣವಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಎಲ್ಲೆಲ್ಲಿ ಒಣ ಹವೆ? ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ರಾಮನಗರ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಮೈಸೂರು, ತುಮಕೂರು…

Read More

ಯಶ್ ರಾವಣನ ಪಾತ್ರ ಒಪ್ಪಿಕೊಳ್ಳಲು ಕಾರಣ ಆಗಿದ್ದು ಆ ಒಂದು ವಿಷಯ

ರಾಕಿಂಗ್ ಸ್ಟಾರ್ ಯಶ್ (Yash) ನಟನೆಯ ಬಹುನಿರೀಕ್ಷಿತ ಸಿನಿಮಾ ‘ಟಾಕ್ಸಿಕ್’ ಕೆಲಸಗಳು ಭರದಿಂದ ಸಾಗುತ್ತಿವೆ. ಈ ಚಿತ್ರ ಜೂನ್​ 4ರಂದು ತೆರೆಗೆ ಬರಲಿದೆ. ಇತ್ತೀಚೆಗೆ ಸಿನಿಮಾದ ಟೀಸರ್ ಹಾಗೂ ಸಾಂಗ್ ರಿಲೀಸ್​ ಆಗಿ ಸದ್ದು ಮಾಡಿತ್ತು. ಈ ಚಿತ್ರದ ಜೊತೆ ಅವರು ‘ರಾಮಾಯಣ’ ಸಿನಿಮಾದಲ್ಲೂ ನಟಿಸಿದ್ದಾರೆ. ಈ ಚಿತ್ರದಲ್ಲಿ ರಾವಣನ ಪಾತ್ರ ಮಾಡಿದ್ದಾರೆ. ಈ ಚಿತ್ರ ಒಪ್ಪಿಕೊಳ್ಳಲು ಕಾರಣವಾದ ವಿಷಯವೇನು ಎಂಬ ವಿಷಯ ಈಗ ರಿವೀಲ್ ಆಗಿದೆ. ಇತ್ತೀಚೆಗೆ ರಿಲೀಸ್ ಆದ ‘ರಾಮಾಯಣ’ ಟೀಸರ್​​ನಲ್ಲಿ ಯಶ್ ಅವರು…

Read More

ವೈಭವ್, ಯಶಸ್ವಿ ಸಿಡಿಲಬ್ಬರದ ನಡುವೆ RCB ದಾಖಲೆ ಸೇಫ್

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 13ನೇ ಪಂದ್ಯದಲ್ಲಿ ವೈಭವ್ ಸೂರ್ಯವಂಶಿ (Vaibhav Suryavanshi) ಹಾಗೂ ಯಶಸ್ವಿ ಜೈಸ್ವಾಲ್ (Yashasvi Jaiswal) ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಗುವಾಹಟಿಯ ಬರ್ಸಪರಾ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಮಳೆಯ ಕಾರಣ 11 ಓವರ್​ಗಳಿಗೆ ಸೀಮಿತವಾಗಿದ್ದ ಈ ಪಂದ್ಯದಲ್ಲಿ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ್ ರಾಯಲ್ಸ್…

Read More

Hormuz Strait: ಇರಾನ್​ನಿಂದ ತೈಲ ಸಾಗಾಟ ಸುಗಮ, ಹಾರ್ಮುಜ್ ಜಲಸಂಧಿ ತೆರೆಯಲು ಇರಾನ್ ಒಪ್ಪಿಗೆ

ಟೆಹ್ರಾನ್, ಏಪ್ರಿಲ್ 08: ಎರಡು ವಾರಗಳ ಕದನ ವಿರಾಮಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್(Donald Trump) ಒಪ್ಪಿಗೆ ಕೊಡುತ್ತಿದ್ದಂತೆ ಇತ್ತ ಇರಾನ್ ಹಾರ್ಮುಜ್ ಜಲಸಂಧಿಯನ್ನು ತೆರೆಯಲು ಅನುಮತಿ ನೀಡಿದ್ದು, ಇರಾನ್​ನಿಂದ ತೈಲ ಸಾಗಾಟ ಸುಗಮವಾಗಲಿದೆ. ಭಾರತ ಸೇರಿ ಅನೇಕ ದೇಶಗಳಿಗೆ ಇದರಿಂದ ಅನುಕೂಲವಾಗಲಿದೆ.  ಇರಾನ್ ಮೇಲಿನ ದಾಳಿಯನ್ನು ಎರಡು ವಾರಗಳ ಕಾಲ ಮುಂದೂಡಲು ಅಮೆರಿಕ ಅಧ್ಯಕ್ಷ ಟ್ರಂಪ್ ನಿರ್ಧರಿಸಿದ್ದು, ಜಾಗತಿಕ ಮಾರುಕಟ್ಟೆ ನೆಮ್ಮದಿಯ ನಿಟ್ಟುಸಿರು ಬಿಟ್ಟಿದೆ. ಘೋಷಣೆಯ ನಂತರ, ಕಚ್ಚಾ ತೈಲ ಬೆಲೆಗಳು ತೀವ್ರವಾಗಿ ಕುಸಿದಿವೆ ಮತ್ತು…

Read More

Daily Devotional: ತಿಥಿ ಊಟ ಮಾಡಿದರೆ ಅದೃಷ್ಟ ನಷ್ಟವಾಗುತ್ತಾ?

ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ತಿಥಿ ಊಟ ಮಾಡಿದರೆ ಅದೃಷ್ಟ ನಷ್ಟವಾಗುತ್ತಾ ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ಆಧ್ಯಾತ್ಮಿಕವಾಗಿ, ತಿಥಿ ಊಟವು ದಿವಂಗತ ಆತ್ಮದ ನೆನಪಿನಲ್ಲಿ ಆಚರಿಸುವ ಒಂದು ಪದ್ಧತಿಯಾಗಿದೆ. ಬದುಕಿದ್ದಾಗ ಆ ವ್ಯಕ್ತಿಯೊಂದಿಗೆ ಇದ್ದ ಬಾಂಧವ್ಯದಂತೆ, ಅವರ ನೆನಪಿನಲ್ಲಿ ನೀಡುವ ಆಹಾರವು ಆತ್ಮಕ್ಕೆ ತೃಪ್ತಿ ನೀಡಿ, ಸಕಾರಾತ್ಮಕ ಆಶೀರ್ವಾದಗಳನ್ನು ನೀಡುತ್ತದೆ. ಗರುಡ ಪುರಾಣದ ಪ್ರಕಾರ, ಈ ಸಂದರ್ಭದಲ್ಲಿ ನೀಡುವ ತೀರ್ಥ ಅಥವಾ ಪ್ರಸಾದದಿಂದ ಯಾವುದೇ ದುಷ್ಪರಿಣಾಮಗಳಾಗುವುದಿಲ್ಲ ಹಿರಿಯರು ಮತ್ತು ಬುದ್ಧಿಜೀವಿಗಳು ಕೂಡ ತಿಥಿ ಊಟಕ್ಕೆ ಹೋಗಿ…

Read More

Horoscope Today: ಇಂದು ಈ ರಾಶಿಯ ಗಂಡ-ಹೆಂಡತಿ ಮಧ್ಯೆ ಭಿನ್ನಾಭಿಪ್ರಾಯ!

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಏಪ್ರಿಲ್ 8, ಬುಧವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ಪರಾಭವ ನಾಮ ಸಂವತ್ಸರ, ಉತ್ತರಾಯಣ, ಚೈತ್ರ ಮಾಸ, ವಸಂತ ಋತು, ಕೃಷ್ಣ ಪಕ್ಷ, ಸಪ್ತಮಿ ತಿಥಿಯಾಗಿದೆ. ಇಂದು ಡಾ. ಬಸವರಾಜ ಗುರೂಜಿಯವರು ಪ್ರತಿ ರಾಶಿಯವರಿಗೂ ಆರೋಗ್ಯ, ಆರ್ಥಿಕ ಸ್ಥಿತಿ, ಉದ್ಯೋಗ, ವ್ಯಾಪಾರ, ಕುಟುಂಬ ಮತ್ತು ವೈಯಕ್ತಿಕ ಸಂಬಂಧಗಳ ಕುರಿತು ವಿವರವಾದ ಸಲಹೆಗಳನ್ನು ನೀಡಿದ್ದಾರೆ.      …

Read More