Headlines

SSC Recruitment 2026: ಹುದ್ದೆಗಳ ಸಂಖ್ಯೆ 731ರಿಂದ 1170ಕ್ಕೆ ಏರಿಕೆ; ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಅವಕಾಶ! – Kannada News

ಕೇಂದ್ರ ಸರ್ಕಾರಿ ಉದ್ಯೋಗImage Credit source: Pinterest ಕೇಂದ್ರ ಸರ್ಕಾರಿ ಉದ್ಯೋಗಕ್ಕಾಗಿ ತಯಾರಿ ನಡೆಸುತ್ತಿರುವ ಅಭ್ಯರ್ಥಿಗಳಿಗೆ ಸಿಬ್ಬಂದಿ ಆಯ್ಕೆ ಆಯೋಗ (SSC) ಸಿಹಿಸುದ್ದಿ ನೀಡಿದೆ. ದೇಶಾದ್ಯಂತದ ವಿವಿಧ ಕೇಂದ್ರ ಸರ್ಕಾರಿ ಸಚಿವಾಲಯಗಳು, ಇಲಾಖೆಗಳು ಮತ್ತು ಕಚೇರಿಗಳಲ್ಲಿ ಖಾಲಿ ಇರುವ ಸ್ಟೆನೋಗ್ರಾಫರ್ ಗ್ರೇಡ್ ‘ಸಿ’ ಮತ್ತು ಗ್ರೇಡ್ ‘ಡಿ’ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಪ್ರಕಟಿಸಿದ್ದ ಅಧಿಸೂಚನೆಯಲ್ಲಿ ಹುದ್ದೆಗಳ ಸಂಖ್ಯೆಯನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ಹಿಂದೆ ಏಪ್ರಿಲ್ ನಲ್ಲಿ ಬಿಡುಗಡೆ ಮಾಡಲಾಗಿದ್ದ ಅಧಿಸೂಚನೆಯಲ್ಲಿ ಒಟ್ಟು 731 ಹುದ್ದೆಗಳ ನೇಮಕಾತಿ ಘೋಷಿಸಲಾಗಿತ್ತು….

Read More

ಜವಾಹರಲಾಲ್ ನೆಹರು- ನರೇಂದ್ರ ಮೋದಿ ಅವಧಿಯ ವ್ಯತ್ಯಾಸಗಳೇನು? ಇಬ್ಬರ ನಾಯಕತ್ವದ ಅವಲೋಕನ ಇಲ್ಲಿದೆ – Kannada News

ನವದೆಹಲಿ, ಜೂನ್ 5: ಬರುವ ಜೂನ್ 10ರಂದು ಭಾರತದ ರಾಜಕಾರಣದಲ್ಲಿ ಹಳೇ ದಾಖಲೆಯೊಂದು ಇತಿಹಾಸ ಪುಟ ಸೇರಲಿದೆ. ಪ್ರಧಾನಿ ನರೇಂದ್ರ ಮೋದಿ (PM Modi) ಅವರು ಸತತವಾಗಿ ಅತಿ ಹೆಚ್ಚು ದಿನಗಳ ಕಾಲ ಪ್ರಜಾಸತ್ತಾತ್ಮಕವಾಗಿ ಆಡಳಿತ ನಡೆಸಿದ ಭಾರತದ ಮೊದಲ ಪ್ರಧಾನಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ. ಈ ಮೂಲಕ ಅವರು ದೇಶದ ಪ್ರಥಮ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರು ಅವರ (4,398 ದಿನಗಳು) ದಾಖಲೆಯನ್ನು ದಾಟಲಿದ್ದಾರೆ. ಈ ಐತಿಹಾಸಿಕ ಸಂದರ್ಭದಲ್ಲಿ, ನೆಹರು ಮತ್ತು ಮೋದಿ ಯುಗದ ಆಡಳಿತ…

Read More

Video: ಕೊಕ್ಕು ಮುರಿದುಕೊಂಡು ಆಹಾರ ತಿನ್ನಲು ಕಷ್ಟಪಡುತ್ತಿದ್ದ ಹಕ್ಕಿಯ ನೆರವಿಗೆ ಬಂದ ಮತ್ತೊಂದು ಪಕ್ಷಿ – Kannada News

ಈಗಿನ ಕಾಲದಲ್ಲಿ ಜನರು ಇತರರಿಗೆ ಸಹಾಯ ಮಾಡುವುದು ಬಿಡಿ, ಕಷ್ಟ ಎನ್ನುವರತ್ತ ತಿರುಗಿಯೂ ನೋಡಲ್ಲ. ಹೀಗಿರುವಾಗ ಈ ಪಕ್ಷಿಗಳು ತನ್ನ ಬಳಗದಲ್ಲಿ ತೊಂದರೆಗೆ ಸಿಲುಕಿರುವ ಜೀವಕ್ಕೆ ರಕ್ಷಣೆಗೆ ನಿಲ್ಲುತ್ತದೆ, ಆಸರೆಯಾಗುತ್ತದೆ. ಇದಕ್ಕೆ ಸಾಕ್ಷಿಯೆನ್ನುವಂತಿದೆ ಈ ವಿಡಿಯೋ. ಕೊಕ್ಕು ಮುರಿದುಕೊಂಡು ಆಹಾರ ತಿನ್ನಲಾಗದೇ ಒದ್ದಾಡುತ್ತಿದ್ದ ಪಕ್ಷಿಗೆ ಇನ್ನೊಂದು ಹಕ್ಕಿ ತನ್ನ ಕೊಕ್ಕಿನಿಂದ ಆಹಾರ (food) ನೀಡಿದ ವಿಡಿಯೋ ವೈರಲ್ ಆಗಿದೆ. ಈ ದೃಶ್ಯ ನೋಡಿದ ನೆಟ್ಟಿಗರು ಪಕ್ಷಿಯ ಸಹಾಯ ಮಾಡುವ ಗುಣವನ್ನು ಮೆಚ್ಚಿಕೊಂಡಿದ್ದಾರೆ. @Ravitiwariii_ ಹೆಸರಿನ ಎಕ್ಸ್ ಖಾತೆಯಲ್ಲಿ…

Read More

ಐಪಿಎಲ್ ಮುಗಿದ ಬೆನ್ನಲ್ಲೇ ಹೊಸ ಟಿ20 ತಂಡ ಸೇರಿಕೊಂಡ ದೇವದತ್ ಪಡಿಕ್ಕಲ್ – Kannada News

ಐದನೇ ಆವೃತ್ತಿಯ ಮಹಾರಾಜ ಟಿ20 ಟ್ರೋಫಿ ಇದೇ ಜೂನ್ 20 ರಿಂದ ಆರಂಭವಾಗಲಿದ್ದು, ಜುಲೈ 12 ರವರೆಗೆ ನಡೆಯಲಿದೆ. ಈ ಟೂರ್ನಿಗೆ ಇಂದು ಹರಾಜು ಕೂಡ ನಡೆದಿದೆ. ಹರಾಜಿನಲ್ಲಿ ಕರ್ನಾಟಕದ ಸ್ಟಾರ್ ಆಟಗಾರರು ದೊಡ್ಡ ಮೊತ್ತಕ್ಕೆ ಹೊಸ ತಂಡಗಳನ್ನು ಸೇರಿಕೊಂಡಿದ್ದಾರೆ. ಹರಾಜಿನಲ್ಲಿ 150ಕ್ಕೂ ಹೆಚ್ಚು ಆಟಗಾರರು ಅದೃಷ್ಟ ಪರೀಕ್ಷೆಗೆ ಇಳಿದಿದ್ದು, ಎಲ್ಲಾ 6 ತಂಡಗಳು ತಲಾ 60 ಲಕ್ಷ ರೂ. ಹಣದೊಂದಿಗೆ ಆಟಗಾರರ ಖರೀದಿಗಿಳಿದಿವೆ. ಅದರಂತೆ ಐಪಿಎಲ್‌ನಲ್ಲಿ ಆರ್​ಸಿಬಿ ತಂಡವನ್ನು ಚಾಂಪಿಯನ್ ಮಾಡುವಲ್ಲಿ ಪ್ರಮುಖ ಪಾತ್ರವಹಿಸಿದ್ದ ದೇವದತ್…

Read More

ಗದಗ: 33 ದಿನ ಅನ್ನ, ನೀರಿಲ್ಲದೇ ಸ್ವಾಮೀಜಿಯಿಂದ ಶಿವಯೋಗ ಸಮಾಧಿ; ಇಟ್ಟಿಗೆಯಿಂದ ಗರ್ಭಗುಡಿ ಬಂದ್​​ – Kannada News

ಶ್ರೀ ಜಗದ್ಗುರು ಬೂದೀಶ್ವರ ಸಂಸ್ಥಾನ ಮಠImage Credit source: tv9 kannada ರಾಮನಗರ, ಜೂನ್​​ 05: ಲೋಕ ಕಲ್ಯಾಣ, ವಿಶ್ವಶಾಂತಿ ಹಾಗೂ ಸಕಾಲದಲ್ಲಿ ಮಳೆ-ಬೆಳೆ ಉತ್ತಮವಾಗಿ ಬರಲಿ ಎಂಬ ಸಂಕಲ್ಪದೊಂದಿಗೆ ಗದಗ (gadag) ತಾಲೂಕಿನ ಅಂತೂರು ಬೆಂತೂರು ಗ್ರಾಮದ ಶ್ರೀ ಜಗದ್ಗುರು ಬೂದೀಶ್ವರ ಸಂಸ್ಥಾನ ಮಠದ ಪೀಠಾಧಿಪತಿ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು ‘ಶಿವಯೋಗ ಸಮಾಧಿ’ (Shiva Yoga Samadhi) ತಪಸ್ಸನ್ನು ಆರಂಭಿಸಿದ್ದಾರೆ. ವಿಜ್ಞಾನ ಮತ್ತು ತಂತ್ರಜ್ಞಾನ ಯುಗದಲ್ಲೂ ಅಧ್ಯಾತ್ಮದ ಶಕ್ತಿ ಎಷ್ಟರ ಮಟ್ಟಿಗೆ ಪ್ರಭಾವ ಬೀರಬಲ್ಲದು…

Read More

ಸತೀಶ್ ಜಾರಕಿಹೊಳಿ ಹೊಸ ಬಾಂಬ್: ‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ – Kannada News

ಸತೀಶ್ ಜಾರಕಿಹೊಳಿ, ರಾಮಲಿಂಗಾರೆಡ್ಡಿImage Credit source: Tv9 kannada ಬೆಂಗಳೂರು, ಜೂ.5: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಸಂಪುಟ ರಚನೆಯ ಬೆನ್ನಲ್ಲೇ ಉಂಟಾಗಿರುವ ಭಿನ್ನಾಭಿಪ್ರಾಯ ಹಾಗೂ ರಾಜೀನಾಮೆ ಗದ್ದಲದ ನಡುವೆ, ಸಚಿವ ಸತೀಶ್ ಜಾರಕಿಹೊಳಿ (Satish Jarakiholi) ಅವರು ಅತ್ಯಂತ ಸಮಚಿತ್ತದ ಹಾಗೂ ವಾಸ್ತವಿಕ ನಿಲುವನ್ನು ವ್ಯಕ್ತಪಡಿಸಿದ್ದಾರೆ. ಹಿರಿಯ ನಾಯಕರ ಅಸಮಾಧಾನದ ಬೆಂಕಿಯನ್ನು ನಂದಿಸುವ ಸಂಪೂರ್ಣ ಸಾಮರ್ಥ್ಯ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇದೆ ಎಂದು ಅವರು ಬಲವಾಗಿ ಪ್ರತಿಪಾದಿಸಿದ್ದಾರೆ. ಹಿರಿಯ ನಾಯಕ ರಾಮಲಿಂಗಾರೆಡ್ಡಿ ಅವರ ಸಚಿವ…

Read More

Mango Pachcha Review: ಆ ಕಾಲದ ಮೈಸೂರಿನ ಮಾಫಿಯಾ ತೋರಿಸುವ ‘ಮ್ಯಾಂಗೋ ಪಚ್ಚ’ – Kannada News

ಮ್ಯಾಂಗೋ ಪಚ್ಚ A Time – 95 Minutes Released – June 05, 2026 Language – Kannada Genre – Crime, Drama Cast – ಸಂಚಿತ್ ಸಂಜೀವ್, ಕಾಜಲ್ ಕುಂದರ್, ಪ್ರಶಾಂತ್ ಹಿರೇಮಠ್, ಮಯೂರ್ ಪಟೇಲ್, ಹರಿಣಿ ಶ್ರೀಕಾಂತ್, ಉಗ್ರಂ ಮಂಜು ಮುಂತಾದವರು. Director – ವಿವೇಕ ಕನ್ನಡ ಚಿತ್ರರಂಗಕ್ಕೆ ಹೊಸ ಹೀರೋ ಸಂಚಿತ್ ಸಂಜೀವ್ (Sanchith Sanjeev) ಎಂಟ್ರಿ ಆಗಿದೆ. ಕಿಚ್ಚ ಸುದೀಪ್ ಅವರ ಕುಟುಂಬದ ಹುಡುಗ ಎಂಬ ಕಾರಣಕ್ಕೆ ಪ್ರೇಕ್ಷಕರಿಗೆ…

Read More

ರಾಮಲಿಂಗಾರೆಡ್ಡಿ ರಾಜೀನಾಮೆ: ಬೆಂಗಳೂರು ನಗರಾಭಿವೃದ್ಧಿ ಖಾತೆಗೆ ಯಾಕಿಷ್ಟು ಡಿಮ್ಯಾಂಡ್?

ಬೆಂಗಳೂರು, (ಜೂನ್ 05): ಕರ್ನಾಟಕ ಸಚಿವ ಸಂಪುಟ (Karnataka Cabinet)  ರಚನೆಯಾಗುವಾಗ ಅಥವಾ ಖಾತೆ ಹಂಚಿಕೆಯಾಗುವಾಗ ಸದಾ ಮುಂಚೂಣಿಯಲ್ಲಿ ಕೇಳಿಬರುವ ಹೆಸರೇ “ಬೆಂಗಳೂರು ನಗರಾಭಿವೃದ್ಧಿ ಇಲಾಖೆ” (Bengaluru Development portfolio). ಪ್ರಸ್ತುತ ಡಿಕೆ ಶಿವಕುಮಾರ್ ಸಂಪುಟದಲ್ಲೂ ಬೆಂಗಳೂರು ನಗರಾಭಿವೃದ್ಧಿ ಖಾತೆಗಾಗಿ ತೀವ್ರ ಪೈಪೋಟಿ ಏರ್ಪಟ್ಟಿದ್ದು, ಇದೀಗ ಹಿರಿಯ ಶಾಸಕ ರಾಜೀನಾಮೆ ಹಂತಕ್ಕೆ ಹೋಗಿದೆ. ಹೌದು..ಕರ್ನಾಟಕದಲ್ಲಿ ಡಿಕೆ ಶಿವಕುಮಾರ್ ನೇತೃತ್ವದ ಸರ್ಕಾರ ಆಡಳಿತಕ್ಕೆ ಬಂದು ಕೇವಲ ಮೂರು ದಿನ ಆಗಿದೆ ಅಷ್ಟೇ. ಆಗಲೇ ಸಚಿವರ ಖಾತೆಗಳ ಕ್ಯಾತೆ ಶುರುವಾಗಿದ್ದು,…

Read More

ಆರ್ಥಿಕತೆಯಲ್ಲಿ ಭರ್ಜರಿ ಕ್ಯಾಷ್ ಇದ್ದರೂ ಎಟಿಎಂಗಳಲ್ಲಿ ಇಲ್ಲ ಹೆಚ್ಚು ನೋಟು; ಕರ್ನಾಟಕದಲ್ಲೇ ಅತಿಹೆಚ್ಚು ಕೊರತೆ; ಯಾಕೆ ಈ ಕಥೆ? – Kannada News

ನವದೆಹಲಿ, ಜೂನ್ 5: ಭಾರತದಲ್ಲಿರುವ ಎಟಿಎಂಗಳಲ್ಲಿ ಅಗತ್ಯ ಕ್ಯಾಷ್ ಪೂರೈಕೆ (Cash supply) ಆಗುತ್ತಿಲ್ಲ ಎನ್ನುವಂತಹ ವರದಿಯೊಂದು ಬಂದಿದೆ. ಎಟಿಎಂ ಯಂತ್ರಗಳಲ್ಲಿ ಕ್ಯಾಷ್ ಕೊರತೆ ಎದುರಾಗಿದೆ. ಈ ವಿಚಾರದ ಬಗ್ಗೆ ಎಟಿಎಂ ಉದ್ಯಮದ ಮಹಾಒಕ್ಕೂಟವಾದ ಸಿಎಟಿಎಂಐ (CATMi) ಭಾರತೀಯ ಬ್ಯಾಂಕುಗಳ ಸಂಸ್ಥೆಯ (ಐಬಿಎ) ಗಮನಕ್ಕೆ ತಂದಿದೆ ಎಂದು ಬ್ಯುಸಿನೆಸ್ ಸ್ಟ್ಯಾಂಡರ್ಡ್ ಪತ್ರಿಕೆ ವರದಿ ಮಾಡಿದೆ. ಭಾರತದ ಆರ್ಥಿಕತೆಯೊಳಗೆ ಅತಿಹೆಚ್ಚು ಕ್ಯಾಷ್ ಹರಿವು ಇರುವ ಸಂದರ್ಭದಲ್ಲೇ ಎಟಿಎಂಗಳಲ್ಲಿ ಕ್ಯಾಷ್ ಕ್ರಂಚ್ ಪರಿಸ್ಥಿತಿ ಉದ್ಭವವಾಗಿರುವುದು ಅಚ್ಚರಿಯ ಸಂಗತಿ. ಈ ವರದಿ…

Read More

Abhijit Patil: ಕೋಚಿಂಗ್ ಇಲ್ಲದೆ, ಮೊದಲ ಪ್ರಯತ್ನದಲ್ಲೇ IPS ಅಧಿಕಾರಿಯಾದ 22 ವರ್ಷದ ಯುವಕ; ಅಭಿಜೀತ್ ಪಾಟೀಲ್ ಯಶೋಗಾಥೆ – Kannada News

ಅಭಿಜೀತ್ ಪಾಟೀಲ್Image Credit source: Instagram/Abhijeet Patil ಭಾರತದ ಅತ್ಯಂತ ಕಠಿಣ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಒಂದಾದ UPSC (ನಾಗರಿಕ ಸೇವೆಗಳ ಪರೀಕ್ಷೆ) ಉತ್ತೀರ್ಣರಾಗುವುದು ಲಕ್ಷಾಂತರರ ಜನರ ಕನಸು. ಈ ಪರೀಕ್ಷೆಯಲ್ಲಿ ಗೆಲ್ಲಲು ದುಬಾರಿ ತರಬೇತಿ ಸಂಸ್ಥೆಗಳು ಹಾಗೂ ಲಕ್ಷಾಂತರ ರೂಪಾಯಿ ಹಣ ಬೇಕೇಬೇಕು ಎಂಬ ಬಲವಾದ ನಂಬಿಕೆ ಸಮಾಜದಲ್ಲಿದೆ. ಆದರೆ, ಸರಿಯಾದ ಯೋಜನೆ, ಕಟ್ಟುನಿಟ್ಟಾದ ಶಿಸ್ತು ಮತ್ತು ಸಮರ್ಪಣಾ ಮನೋಭಾವವಿದ್ದರೆ ಯಾವುದೇ ಕೋಚಿಂಗ್ ಇಲ್ಲದೆಯೂ ಇತಿಹಾಸ ಸೃಷ್ಟಿಸಬಹುದು ಎಂದು ಮಹಾರಾಷ್ಟ್ರದ ಯುವ ಅಧಿಕಾರಿ ಅಭಿಜೀತ್ ಪಾಟೀಲ್ ಸಾಬೀತುಪಡಿಸಿದ್ದಾರೆ….

Read More