Headlines

PAK vs AUS: ಆಸ್ಟ್ರೇಲಿಯಾ ವಿರುದ್ಧ ಸರಣಿ ಗೆದ್ದು ದಾಖಲೆ ಬರೆದ ಪಾಕಿಸ್ತಾನ – Kannada News

ಮೂರು ಪಂದ್ಯಗಳ ಏಕದಿನ ಸರಣಿಗಾಗಿ ಪಾಕಿಸ್ತಾನದ ಪ್ರವಾಸ ಮಾಡಿದ್ದ ಆಸ್ಟ್ರೇಲಿಯಾ (Pakistan vs Australia) ತಂಡ 2-1 ಅಂತರದಿಂದ ಸರಣಿ ಕಳೆದುಕೊಂಡು ಬರಿ ಕೈಯಲ್ಲಿ ತನ್ನ ತವರಿಗೆ ವಾಪಸ್ ಮರಳಿದೆ. ಆತಿಥೇಯ ಪಾಕಿಸ್ತಾನ ತಂಡ ಜೂನ್ 4 ರಂದು ಲಾಹೋರ್‌ನಲ್ಲಿ ನಡೆದ ಮೂರನೇ ಮತ್ತು ಅಂತಿಮ ಏಕದಿನ ಪಂದ್ಯವನ್ನು ನಾಲ್ಕು ವಿಕೆಟ್‌ಗಳಿಂದ ಗೆಲ್ಲುವ ಮೂಲಕ ಸರಣಿಯನ್ನು 2-1 ಅಂತರದಲ್ಲಿ ಗೆದ್ದುಕೊಂಡಿತು. ಈ ಸರಣಿ ಗೆಲುವಿನೊಂದಿಗೆ ಪಾಕಿಸ್ತಾನ ವಿಶೇಷ ದಾಖಲೆಯನ್ನು ನಿರ್ಮಿಸಿತು. ಆಸ್ಟ್ರೇಲಿಯಾ ವಿರುದ್ಧ ಸತತ ಮೂರು ಏಕದಿನ…

Read More

ಇಂದಿನಿಂದ ಜೂನ್ 11 ರವರೆಗೆ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ವರುಣನ ಅಬ್ಬರ: ಮೀನುಗಾರರಿಗೆ, ಪ್ರವಾಸಿಗರಿಗೆ ಬಿಗ್​​​ ಅಲರ್ಟ್ – Kannada News

ಬೆಂಗಳೂರು, ಜೂ5: ರಾಜ್ಯದಲ್ಲಿ ಮುಂಗಾರು ಮಳೆಯ ಅಬ್ಬರ ಆರಂಭವಾಗಿದ್ದು, ಮುಂದಿನ ಒಂದು ವಾರದ ಕಾಲ ವಿವಿಧ ಜಿಲ್ಲೆಗಳಲ್ಲಿ ವರುಣನ ಆರ್ಭಟ ಜೋರಾಗಿರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಜೂನ್ 5 ರಿಂದ ಅಂದರೆ ಇಂದಿನಿಂದಲ್ಲೇ ಜೂನ್ 11 ರವರೆಗೆ ಕರ್ನಾಟಕದ ಒಳನಾಡು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ. ಹವಾಮಾನ ಇಲಾಖೆಯ ವರದಿಯ ಪ್ರಕಾರ, ಒಳನಾಡಿನ ಜಿಲ್ಲೆಗಳ ಕೆಲವು ನಿರ್ದಿಷ್ಟ ಸ್ಥಳಗಳಲ್ಲಿ ಕನಿಷ್ಠ 64.5 ಮಿಲಿಮೀಟರ್‌ನಿಂದ…

Read More

ಜಪಾನಿನಲ್ಲಿ ಬಿಡುಗಡೆಗೆ ಸಜ್ಜಾದ ‘ಧುರಂಧರ್’, ಮುರಿಯುತ್ತಾ ‘ದಂಗಲ್’ ದಾಖಲೆ – Kannada News

‘ಧುರಂಧರ್’ (Dhurandhar) ಮತ್ತು ‘ಧುರಂಧರ್ 2’ ಸಿನಿಮಾ ಭಾರತದ ಬಾಕ್ಸ್ ಆಫೀಸ್​​ನಲ್ಲಿ ದಾಖಲೆಗಳ ಮೇಲೆ ದಾಖಲೆ ಬರೆದಿದೆ. ಮಾತ್ರವಲ್ಲದೆ, ಅಮೆರಿಕ ಸೇರಿದಂತೆ ಇತರೆ ಕೆಲವು ದೇಶಗಳಲ್ಲಿಯೂ ಸಹ ದೊಡ್ಡ ಮೊತ್ತದ ಗಳಿಕೆ ಮಾಡಿದ್ದು, ವಿದೇಶದಲ್ಲಿ ಹೆಚ್ಚು ಹಣ ಬಾಚಿದ ಭಾರತದ ಸಿನಿಮಾಗಳಲ್ಲಿ ಒಂದೆನಿಸಿಕೊಂಡಿದೆ. ಇದೀಗ ‘ಧುರಂಧರ್ 2’ ಸಿನಿಮಾ ಒಟಿಟಿಗೆ ಸಹ ಬಂದಿದ್ದಾಗಿದೆ. ಆದರೆ ಇದೀಗ 2025 ರಲ್ಲಿ ಬಿಡುಗಡೆ ಆಗಿದ್ದ ‘ಧುರಂಧರ್’ ಸಿನಿಮಾ, ಜಪಾನಿನಲ್ಲಿ ಬಿಡುಗಡೆ ಆಗಲು ಮುಂದಾಗಿದೆ. ಜಪಾನಿನಲ್ಲಿ ಭಾರತೀಯ ಸಿನಿಮಾಗಳಿಗೆ ದೊಡ್ಡ ಮಾರುಕಟ್ಟೆ…

Read More

ಪ್ರತ್ಯೇಕ ಘಟನೆ: ಕೊಡಗಿನಲ್ಲಿ ಕಾಡಾನೆ ದಾಳಿಗೆ ನಿವೃತ್ತ ಐಜಿಪಿ ಪತ್ನಿ ಬಲಿ; ಹಾಸನದಲ್ಲಿ ನಾಲ್ವರ ಮೇಲೆ‌ ಚಿರತೆ ದಾಳಿ – Kannada News

ಕೊಡಗು, ಜೂನ್​​ 05: ಕಾಡಾನೆ (Elephant) ದಾಳಿಗೆ ನಿವೃತ್ತ ಐಜಿಪಿ ಪತ್ನಿ ಸಾವನ್ನಪ್ಪಿರುವಂತಹ (death) ಘಟನೆ ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಕೋಣನಕಟ್ಟೆಯಲ್ಲಿ ನಡೆದಿದೆ. ಆ ಮೂಲಕ ಕಾಡಾನೆ ದಾಳಿಗೆ ಮತ್ತೊಂದು ಬಲಿ ಆಗಿದೆ. ನಿವೃತ್ತ ಐಜಿಪಿ ಅಣ್ಣಳಮಾಡ ಸುನೀಲ್ ಅಚ್ಚಯ್ಯ ಪತ್ನಿ ಸಂಧ್ಯಾ(60) ಮೃತ ದುರ್ದೈವಿ. ನಿನ್ನೆಯಷ್ಟೇ ಸಂಧ್ಯಾ ಕುಟುಂಬ ದೆಹಲಿಯಿಂದ‌ ಸ್ವಗ್ರಾಮಕ್ಕೆ ಬಂದಿದ್ದರು. ನಡೆದಿದ್ದೇನು? ಬೆಳಗ್ಗೆ 9 ಗಂಟೆಗೆ ತಮ್ಮ ಸ್ವಂತ ಎಸ್ಟೇಟ್​ಗೆ ತೆರಳಿದ್ದ ವೇಳೆ ಕಾಡಾನೆ ಏಕಾಏಕಿ ದಾಳಿ ಮಾಡಿದೆ. ಗಾಯಗೊಂಡ ಸಂಧ್ಯಾರನ್ನು ಆಸ್ಪತ್ರೆಗೆ…

Read More

ರಾಜ್ಯಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಮಲ್ಲಿಕಾರ್ಜುನ್ ಖರ್ಗೆ – Kannada News

ರಾಜ್ಯಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಮಲ್ಲಿಕಾರ್ಜುನ್ ಖರ್ಗೆ ಬೆಂಗಳೂರು, ಜೂನ್ 05: ರಾಜ್ಯಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಚುರುಕುಗೊಂಡಿದೆ. ಜೂನ್ 18 ರಂದು ಕರ್ನಾಟಕದ 4 ಸ್ಥಾನಗಳು ಸೇರಿದಂತೆ ಒಟ್ಟು 24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಕಾಂಗ್ರೆಸ್​ನ ಹಿರಿಯ ನಾಯಕ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಇಂದು  ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಮುಖ್ಯಾಂಶಗಳು ಜೂನ್ 18ರ ರಾಜ್ಯಸಭೆ ಚುನಾವಣೆಗೆ ಮಲ್ಲಿಕಾರ್ಜುನ ಖರ್ಗೆ ಅವರಿಂದ ನಾಮಪತ್ರ ಸಲ್ಲಿಕೆ. ಚುನಾವಣಾಧಿಕಾರಿ ವಿಶಾಲಾಕ್ಷಿ…

Read More

ಭಾರತೀಯ ವಾಯುಪಡೆಯ ನೂತನ ಉಪ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಶುತೋಷ್ ದೀಕ್ಷಿತ್ ನೇಮಕ – Kannada News

ನವದೆಹಲಿ, ಜೂನ್ 5: ಭಾರತೀಯ ವಾಯುಪಡೆಯ (IAF) ನೂತನ ಉಪ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಶುತೋಷ್ ದೀಕ್ಷಿತ್ ನೇಮಕಗೊಂಡಿದ್ದಾರೆ. ಜುಲೈ 1ರಿಂದ ಅವರು ಈ ನೂತನ ಜವಾಬ್ದಾರಿಯನ್ನು ವಹಿಸಿಕೊಳ್ಳಲಿದ್ದಾರೆ. ಪ್ರಸ್ತುತ ಅವರು ಇಂಟಿಗ್ರೇಟೆಡ್ ಡಿಫೆನ್ಸ್ ಸ್ಟಾಫ್‌ನ ಪ್ರಧಾನ ಕಚೇರಿಯಲ್ಲಿ ಚೀಫ್ ಆಫ್ ಇಂಟಿಗ್ರೇಟೆಡ್ ಡಿಫೆನ್ಸ್ ಸ್ಟಾಫ್ (CISC) ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ಏರ್ ಹೆಡ್‌ಕ್ವಾರ್ಟರ್ಸ್‌ನಲ್ಲಿ ತಮ್ಮ ವಿವಿಧ ಅಧಿಕಾರಾವಧಿಯಲ್ಲಿ ವಾಯುಪಡೆಯ ಆಧುನೀಕರಣ ಮತ್ತು ವಾಯುಪಡೆಯಲ್ಲಿ ದೇಶೀಯ ಫೈಟರ್ ಜೆಟ್ ಯೋಜನೆಗಳನ್ನು ಉತ್ತೇಜಿಸುವಲ್ಲಿ ಏರ್ ಮಾರ್ಷಲ್ ಅಶುತೋಷ್ ದೀಕ್ಷಿತ್…

Read More

Video: ಪ್ರತಿಷ್ಠಿತ ಅರ್ಥ್ ಪ್ರಶಸ್ತಿ ಗೆದ್ದ ಭಾರತೀಯ ಮೂವರು ವಿದ್ಯಾರ್ಥಿಗಳು; ಇವರ ಸಾಧನೆ ಏನು ಗೊತ್ತಾ?

ಮೈಕ್ರೋಪ್ಲಾಸ್ಟಿಕ್ ಸಮಸ್ಯೆಗೆ ಹುಣಸೆ ಬೀಜದಿಂದ ಪರಿಹಾರ ಕಂಡುಕೊಂಡ ಮೂವರು ಭಾರತೀಯ ವಿದ್ಯಾರ್ಥಿಗಳಾದ ವಿವಾನ್, ಅರಿಯಾನ್ ಅಗರ್‌ವಾಲ್ ಮತ್ತು ಅವ್ಯಾನ ಮೆಹ್ತಾ 2026ರ ಪ್ರತಿಷ್ಠಿತ ಅರ್ಥ್ ಪ್ರಶಸ್ತಿಯನ್ನು ಗೆದ್ದಿದ್ದಾರೆ. ರಾಜಸ್ಥಾನದ ಜೈಪುರದ ಜಯಶ್ರೀ ಪೆರಿವಾಲ್ ಇಂಟರ್ನ್ಯಾಷನಲ್ ಸ್ಕೂಲ್‌ನ ಈ 16 ವರ್ಷದ ವಿದ್ಯಾರ್ಥಿಗಳು ತಮ್ಮ ಪ್ಲಾಸ್-ಸ್ಟಿಕ್ ಆವಿಷ್ಕಾರಕ್ಕಾಗಿ ಈ ಗೌರವಕ್ಕೆ ಪಾತ್ರರಾಗಿದ್ದಾರೆ. ಹುಣಸೆ ಬೀಜದಲ್ಲಿರುವ ನೈಸರ್ಗಿಕ ಅಂಟಿನ ಗುಣವು ನೀರಿನಲ್ಲಿರುವ ಸೂಕ್ಷ್ಮ ಪ್ಲಾಸ್ಟಿಕ್ ಕಣಗಳನ್ನು ಆಕರ್ಷಿಸಿ ಹೆಪ್ಪುಗಟ್ಟುವಂತೆ ಮಾಡುತ್ತದೆ. ನಂತರ ಅವುಗಳನ್ನು ಸುಲಭವಾಗಿ ಬೇರ್ಪಡಿಸಬಹುದು. ಈ ರಾಸಾಯನಿಕ ಮುಕ್ತ…

Read More

ಸತತ 2ನೇ ಪಂದ್ಯದಲ್ಲೂ ಸೂರ್ಯ ಫೇಲ್; ತಂಡಕ್ಕೆ ಗೆಲುವು ತಂದ ಶ್ರೇಯಸ್ ಅಯ್ಯರ್ – Kannada News

ಕಳೆದ ಮೂರು ವರ್ಷಗಳಿಂದ ಕಳಪೆ ಫಾರ್ಮ್​ನಿಂದ ಬಳಲುತ್ತಿರುವ ಭಾರತ ಟಿ20 ತಂಡದ ನಾಯಕ ಸೂರ್ಯಕುಮಾರ್ ಯಾದವ್ (Suryakumar Yadav)​ ಭಾರತ ತಂಡದಲ್ಲಿ ಸ್ಥಾನ ಕಳೆದುಕೊಳ್ಳುವ ಆತಂಕದಲ್ಲಿದ್ದಾರೆ. ಈ ನಡುವೆ ತಮ್ಮ ಹಳೆಯ ಫಾರ್ಮ್​ಗೆ ಮರಳಲು ಮುಂಬೈನ ಟಿ20 ಲೀಗ್‌ನಲ್ಲಿ ಆಡುತ್ತಿರುವ ಸೂರ್ಯಕುಮಾರ್ ಯಾದವ್​ಗೆ ಈ ಲೀಗ್​ನಲ್ಲೂ ಯಶಸ್ಸು ಸಿಕ್ಕಿಲ್ಲ. ಐಪಿಎಲ್‌ನಲ್ಲಿ ರನ್ ಬರ ಎದುರಿಸಿದ್ದ ಸೂರ್ಯ ಇದೀಗ ಮುಂಬೈ ಟಿ20 ಲೀಗ್​ನಲ್ಲೂ ಅದನ್ನೇ ಮುಂದುವರೆಸಿದ್ದಾರೆ. ಸೂರ್ಯ ರನ್ ಬರ ಎದುರಿಸುವುದರ ಜೊತೆಗೆ ತಮ್ಮ ನಾಯಕತ್ವದಲ್ಲಿ ತಂಡವನ್ನು ಸೋಲಿನ…

Read More

Video: ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಹುಟ್ಟುಹಬ್ಬ, 54 ಕೆಜಿ ಲಡ್ಡು ಕೇಕ್ ಕತ್ತರಿಸಿ ಅಭಿಮಾನಿಗಳ ಸಂಭ್ರಮ

ವಾರಾಣಸಿ, ಜೂನ್ 05: ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ 54ನೇ ಜನ್ಮದಿನದ ಅಂಗವಾಗಿ ಶುಕ್ರವಾರ ವಾರಾಣಸಿಯಲ್ಲಿ ಅವರ ಬೆಂಬಲಿಗರು ಮತ್ತು ಅಭಿಮಾನಿಗಳು ವಿಭಿನ್ನವಾಗಿ ಸಂಭ್ರಮಿಸಿದ್ದಾರೆ. ಮುಖ್ಯಮಂತ್ರಿಗಳ ವಯಸ್ಸನ್ನು ಸಂಕೇತಿಸುವಂತೆ ಭರ್ಜರಿ 54 ಕೆಜಿಯ ವಿಶೇಷ ಲಡ್ಡು ಕೇಕ್ ಅನ್ನು ಸಿದ್ಧಪಡಿಸಿ ಕತ್ತರಿಸುವ ಮೂಲಕ ಹುಟ್ಟುಹಬ್ಬವನ್ನು ಆಚರಿಸಲಾಯಿತು. ಇದೇ ಸಂದರ್ಭದಲ್ಲಿ ಪರಿಸರ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಸಂಘಟಕರು ಹಾಗೂ ಬೆಂಬಲಿಗರು ಜಂಟಿಯಾಗಿ 54 ಸಸ್ಯಗಳನ್ನು ನೆಟ್ಟು ಪರಿಸರ ಪ್ರೇಮ ಮೆರೆದಿದ್ದಾರೆ. ಯೋಗಿ ಆದಿತ್ಯನಾಥ್ ಅವರ ದೀರ್ಘಾಯುಷ್ಯ ಮತ್ತು ಯಶಸ್ಸಿಗಾಗಿ…

Read More

ಹೊಸ ವೈದ್ಯರಿಗೆ ಗುಡ್ ನ್ಯೂಸ್ ಕೊಟ್ಟ ಸಚಿವ ಖಾದರ್: ಇನ್ಮುಂದೆ ಡೈರೆಕ್ಟ್ ವಾಕ್-ಇನ್ ಇಂಟರ್ವ್ಯೂ – Kannada News

ಬೆಂಗಳೂರು, ಜೂ.5: ಕರ್ನಾಟಕದ ಆರೋಗ್ಯ ಸಚಿವ ಯು.ಟಿ. ಖಾದರ್ (U.T. Khader) ಅವರು ರಾಜ್ಯದ ಆರೋಗ್ಯ ಕ್ಷೇತ್ರವನ್ನು ಬಲಪಡಿಸಲು ಮತ್ತು ಜನರಿಗೆ ಇನ್ನಷ್ಟು ಹತ್ತಿರವಾಗಿಸಲು ಹಲವು ಮಹತ್ವದ ಯೋಜನೆಗಳನ್ನು ಪ್ರಕಟಿಸಿದ್ದಾರೆ. ಆರೋಗ್ಯ ಇಲಾಖೆಯು ದೊಡ್ಡ ಖಾತೆಯಾಗಿದ್ದು, ಡಾಕ್ಟರ್‌ಗಳ ನೇಮಕಾತಿಯಿಂದ ಹಿಡಿದು ನೀತಿ ರೂಪಿಸುವಿಕೆ ಮತ್ತು ಯೋಜನೆಗಳನ್ನು ಪರಿಣಾಮಕಾರಿಯಾಗಿ ಜನರಿಗೆ ತಲುಪಿಸುವಲ್ಲಿ ಆದ್ಯತೆ ನೀಡುವುದಾಗಿ ಅವರು ತಿಳಿಸಿದ್ದಾರೆ. ಹಿಂದಿನ ಸಚಿವರಾದ ದಿನೇಶ್ ಗುಂಡು ರಾವ್ ಅವರು ಮಾಡಿದ ಉತ್ತಮ ಕೆಲಸಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಮುಂದುವರಿಸಿಕೊಂಡು ಹೋಗಲು ಪ್ರಾಮಾಣಿಕ ಪ್ರಯತ್ನ…

Read More