IPL 2026: ನಂಬಲಸಾಧ್ಯ..! ಬುಮ್ರಾ ಸೇರಿದಂತೆ ಈ ಆರು ಬೌಲರ್​ಗಳಿಗೆ ಇನ್ನೂ ವಿಕೆಟ್ ಸಿಕ್ಕಿಲ್ಲ

Source link

ಲೇ ಆಫ್ ಅಂದ್ರೆ ಭಯವಿಲ್ಲ, ಇದು ಹೊಸ ಆರಂಭ!: ಕೆಲಸ ಕಳೆದುಕೊಂಡರೂ ಸಂಭ್ರಮಿಸಿದ ಬೆಂಗಳೂರಿನ ಸಾಫ್ಟ್‌ವೇರ್ ಎಂಜಿನಿಯರ್

ಬೆಂಗಳೂರು, ಏ.8: ಬೆಂಗಳೂರಿನಲ್ಲಿ ದಿನಕ್ಕೊಂದು ಲೇ ಆಫ್ ಸುದ್ದಿಗಳು ಬರುತ್ತಿದೆ. ಎಐ ಪರಿಣಾಮದಿಂದ, ಇನ್ನು ಅನೇಕರ ಕಾರಣದಿಂದ ಕೆಲಸ ಕಳೆದುಕೊಳ್ಳುತ್ತಿದ್ದಾರೆ ಎಂಬ ಮಾತುಗಳು ಇದೆ. ಲೇ ಆಫ್ ಆದ್ರೆ ಎಲ್ಲರಿಗೂ ಆತಂಕ ಆಗುತ್ತಿದೆ. ಮುಂದಿನ ಜೀವನ ಹೇಗೆ? ಇಎಂಐಗಳನ್ನು ಕಟ್ಟುವುದು ಎಂಬ ಯೋಚನೆಗಳು ಇರುತ್ತದೆ. ಆದರೆ ಇಲ್ಲೊಬ್ಬರು ಐಟಿ ಉದ್ಯೋಗಿ ಅಷ್ಟು ದೊಡ್ಡ ಕೆಲಸವನ್ನು ಕಳೆದುಕೊಂಡು ಬಿಂದಾಸ್​​ ಆಗಿದ್ದಾರೆ. ಬೆಂಗಳೂರು ಮೂಲದ ಟೆಕ್ಕಿಯೊಬ್ಬರು ಕೆಲಸ ಕಳೆದುಕೊಂಡ ನಂತರ ಪೋಸ್ಟ್​​ವೊಂದನ್ನು ಹಂಚಿಕೊಂಡಿದ್ದಾರೆ. ಇದೀಗ ಈ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ.

ಈ ಟೆಕ್ಕಿಯು ತಾನು ಕೆಲಸ ಕಳೆದುಕೊಂಡಿರುವುದನ್ನು ಸಕಾರಾತ್ಮಕವಾಗಿ ಸ್ವೀಕರಿಸಿದ್ದಾರೆ. “ಕಳೆದ ಕೆಲವು ವರ್ಷಗಳಿಂದ ನಿರಂತರ ಕೆಲಸದ ಒತ್ತಡದಲ್ಲಿದ್ದೆ. ಈಗ ಸಿಕ್ಕಿರುವ ಈ ಬಿಡುವು ನನ್ನ ವೈಯಕ್ತಿಕ ಬೆಳವಣಿಗೆಗೆ ಮತ್ತು ಕುಟುಂಬದೊಂದಿಗೆ ಸಮಯ ಕಳೆಯಲು ಸಿಕ್ಕ ಅವಕಾಶ,” ಎಂದು ಅವರು ಬರೆದುಕೊಂಡಿದ್ದಾರೆ. ಅಲ್ಲದೆ, ಹಣಕಾಸಿನ ಸ್ವಾತಂತ್ರ್ಯ (Financial Freedom) ಮತ್ತು ಉಳಿತಾಯದ ಮಹತ್ವದ ಬಗ್ಗೆಯೂ ಅವರು ಬೆಳಕು ಚೆಲ್ಲಿದ್ದಾರೆ. “ನನ್ನನ್ನು ಕೆಲಸದಿಂದ ವಜಾ ಮಾಡಲಾಗಿದೆ, ಆದರೂ ನನಗೆ ಸಂತೋಷವಾಗುತ್ತಿದೆ…. ಮತ್ತು ಇಲ್ಲ, ನನ್ನ ಕೈಯಲ್ಲಿ ಯಾವುದೇ ಆಫರ್ ಇಲ್ಲ… ನನಗೆ ಅದ್ಭುತವೆನಿಸಲು ಒಂದೇ ಕಾರಣವೆಂದರೆ ನನಗೆ EMI ನಲ್ಲಿ ಮನೆ ಇಲ್ಲದಿರುವುದು” ಎಂದು ಪೋಸ್ಟ್‌ನಲ್ಲಿ ಹೇಳಲಾಗಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಬೇಸಿಗೆಯ ಬಿಸಿ ತಪ್ಪಿಸಲು ಬಾಗಿಲು ತೆರೆದಿಟ್ಟು ಮಲಗಿದ್ದ ಮಹಿಳೆಗೆ ಕಾದಿತ್ತು ಶಾಕ್!

ಈ ಪೋಸ್ಟ್ ಬೆನ್ನಲ್ಲೇ ನೆಟ್ಟಿಗರು ಎರಡು ಗುಂಪುಗಳಾಗಿ ವಿಂಗಡಣೆಯಾಗಿದ್ದಾರೆ. ಒಂದು ವರ್ಗದ ಜನರು ಅವರ ಸಕಾರಾತ್ಮಕ ಮನೋಭಾವವನ್ನು ಶ್ಲಾಘಿಸಿದರೆ, ಇನ್ನೊಂದು ವರ್ಗವು “ಇದು ಎಲ್ಲರಿಗೂ ಸಾಧ್ಯವಿಲ್ಲ, ಸಾಲ ಮತ್ತು ಆರ್ಥಿಕ ಸಂಕಷ್ಟದಲ್ಲಿರುವವರಿಗೆ ಲೇ ಆಫ್ ಒಂದು ಶಾಪ,” ಎಂದು ಅಭಿಪ್ರಾಯಪಟ್ಟಿದ್ದಾರೆ. ಬೆಂಗಳೂರಿನಲ್ಲಿ ಜೀವನ ವೆಚ್ಚ ಮತ್ತು ಮನೆ ಬಾಡಿಗೆ ಹೆಚ್ಚುತ್ತಿರುವ ಈ ಸಮಯದಲ್ಲಿ ಕೆಲಸ ಕಳೆದುಕೊಳ್ಳುವುದು ಸವಾಲಿನ ಕೆಲಸ ಎಂಬ ಚರ್ಚೆಯೂ ತೀವ್ರಗೊಂಡಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Source link

ಭಾರತದ ಅತಿದೊಡ್ಡ ಟ್ರೇಡಿಂಗ್ ಪಾರ್ಟ್ನರ್: ಅಮೆರಿಕವನ್ನು ಹಿಂದಿಕ್ಕಿದ ಚೀನಾ

ನವದೆಹಲಿ, ಏಪ್ರಿಲ್ 8: ಚೀನಾ (China) 2025-26ರ ಹಣಕಾಸು ವರ್ಷದಲ್ಲಿ ಭಾರತದ ಅತಿದೊಡ್ಡ ಟ್ರೇಡಿಂಗ್ ಪಾರ್ಟ್ನರ್ ಎನಿಸಿದೆ. ಈ ವಿಚಾರದಲ್ಲಿ ಅಮೆರಿಕವನ್ನು ಚೀನಾ ಹಿಂದಿಕ್ಕಿದೆ ಎಂದು ಭಾರತದಲ್ಲಿರುವ ಚೀನಾ ರಾಯಭಾರ ಕಚೇರಿಯ ವಕ್ತಾರ ಶು ಫೇಹೋಂಗ್ ತಿಳಿಸಿದ್ದಾರೆ. ಕಳೆದ ಹಣಕಾಸು ವರ್ಷದ ಮೊದಲ 11 ತಿಂಗಳ ದತ್ತಾಂಶವನ್ನು ಆಧಾರವಾಗಿಟ್ಟುಕೊಂಡು ಅವರು ಈ ಟ್ವೀಟ್ ಮಾಡಿದ್ದಾರೆ.

2025ರ ಏಪ್ರಿಲ್​ನಿಂದ 2026ರ ಫೆಬ್ರುವರಿವರೆಗಿನ 11 ತಿಂಗಳಲ್ಲಿ ಭಾರತ ಮತ್ತು ಅಮೆರಿಕ ನಡುವಿನ ವ್ಯಾಪಾರ 127.8 ಬಿಲಿಯನ್ ಡಾಲರ್​ನಷ್ಟು ಇತ್ತು. ಅದೇ ಅವಧಿಯಲ್ಲಿ ಭಾರತ ಮತ್ತು ಚೀನಾ ನಡುವೆ 137 ಬಿಲಿಯನ್ ಡಾಲರ್ ವ್ಯಾಪಾರ ನಡೆದಿದೆ. ಸತತ 11 ತಿಂಗಳು ಭಾರತಕ್ಕೆ ಚೀನಾವೇ ಅತಿದೊಡ್ಡ ಟ್ರೇಡಿಂಗ್ ಪಾರ್ಟ್ನರ್ ಆಗಿರುವುದು ಸಂತೋಷದ ಸಂಗತಿ ಎಂದು ಚೀನಾ ರಾಯಭಾರ ವಕ್ತಾರರು ಎಕ್ಸ್​ನಲ್ಲಿ ಪೋಸ್ಟ್ ಮಾಡಿದ್ದಾರೆ.

ಇದನ್ನೂ ಓದಿ: ಹಾರ್ಮುಜ್ ಜಲಸಂಧಿಯಲ್ಲಿ ಹಡಗುಳಿಂದ ಟೋಲ್ ವಸೂಲಿಗೆ ಇರಾನ್ ಯೋಜನೆ; ಅಂತಾರಾಷ್ಟ್ರೀಯ ನಿಯಮಗಳು ಏನು ಹೇಳುತ್ತವೆ?

ಎರಡು ತಿಂಗಳ ಹಿಂದೆ, ಇರಾನ್ ಯುದ್ಧಕ್ಕೆ ಮೊದಲು ಮುಂಬೈನಲ್ಲಿರುವ ಚೀನಾದ ಕಾನ್ಸುಲ್ ಜನರಲ್ ಆದ ಖಿನ್ ಜೀ ಅವರು ಭಾರತ ಹಾಗೂ ಚೀನಾ ದೇಶಗಳ ಆರ್ಥಿಕ ಬೆಳವಣಿಗೆ ಕುರಿತ ಮಾತನಾಡಿದ್ದರು. ಈ ಎರಡು ದೇಶಗಳು ದೊಡ್ಡ ಆರ್ಥಿಕತೆ ಹೊಂದಿವೆ. ಬಹುಪಕ್ಷೀಯ ವ್ಯಾಪಾರ ವಹಿವಾಟುಗಳನ್ನು ಬೆಂಬಲಿಸುತ್ತವೆ. ಹೀಗಾಗಿ, ಬಾಹ್ಯ ಪರಿಣಾಮಗಳಿಂದ ಭಾರತ ಮತ್ತು ಚೀನಾ ವ್ಯಾಪಾರ ಕುಂಠಿತಗೊಳ್ಳುವುದಿಲ್ಲ ಎಂದು ಹೇಳಿದ್ದರು.

ಚೀನಾ ಭಾರತದ ಅತಿದೊಡ್ಡ ಟ್ರೇಡಿಂಗ್ ಪಾರ್ಟ್ನರ್ ಎನಿಸಿದರೂ, ಎರಡು ದೇಶಗಳ ನಡುವಿನ ವ್ಯಾಪಾರ ಅಂತರ ಬಹಳ ಅಗಾಧವಾಗಿದೆ. ಚೀನಾ ಎದುರು ಭಾರತ ವಿಪರೀತ ಟ್ರೇಡ್ ಡೆಫಿಸಿಟ್ ಹೊಂದಿದೆ. ಆದರೆ, ಅಮೆರಿಕ ಎದುರು ಭಾರತ ಟ್ರೇಡ್ ಸರ್​ಪ್ಲಸ್ ಸ್ಥಿತಿ ಹೊಂದಿದೆ.

ಇದನ್ನೂ ಓದಿ: ಯುಎಇಗೆ ಸಾಲ ವಾಪಸ್ ಕೊಟ್ಟರೆ ಪಾಕಿಸ್ತಾನದ ಆರ್ಥಿಕ ಪರಿಸ್ಥಿತಿ ಏನಾಗಬಹುದು? ಇಲ್ಲಿದೆ ಇಂಟರೆಸ್ಟಿಂಗ್ ಲೆಕ್ಕಾಚಾರ

2025-26ರ ಹಣಕಾಸು ವರ್ಷದಲ್ಲಿ ಏಪ್ರಿಲ್​ನಿಂದ ಜನವರಿವರೆಗೆ ಚೀನಾಗೆ ಭಾರತ ರಫ್ತು ಮಾಡಿದ್ದು 15.88 ಬಿಲಿಯನ್ ಡಾಲರ್. ಆದರೆ, ಆಮದು ಮಾಡಿಕೊಂಡಿದ್ದು 108.18 ಬಿಲಿಯನ್ ಡಾಲರ್. ಈ ಅವಧಿಯಲ್ಲಿ ಅಮೆರಿಕಕ್ಕೆ ಭಾರತ 73.7 ಬಿಲಿಯನ್ ಡಾಲರ್ ರಫ್ತು ಮಾಡಿದರೆ, 44.1 ಬಿಲಿಯನ್ ಡಾಲರ್ ಮಾತ್ರವೇ ಆಮದು ಮಾಡಿಕೊಂಡಿರುವುದು. ಹೀಗಾಗಿ, ಭಾರತಕ್ಕೆ ಅಮೆರಿಕ ಮುಖ್ಯವಾದ ಟ್ರೇಡಿಂಗ್ ಪಾರ್ಟ್ನರ್ ಮಾತ್ರವಲ್ಲ, ಅತಿದೊಡ್ಡ ರಫ್ತು ಮಾರುಕಟ್ಟೆಯೂ ಆಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

Cold Water Vs Warm Water: ಬಿಸಿ ನೀರು ಅಥವಾ ತಣ್ಣೀರು; ಬೇಸಿಗೆಯಲ್ಲಿ ಕುಡಿಯಲು ಯಾವುದು ಬೆಸ್ಟ್?

ಬೇಸಿಗೆಯ ಧಗೆಗೆ ಪದೇ ಪದೇ ಬಾಯಾರಿಕೆಯಾಗುವುದು ಸಹಜ. ಉಷ್ಣತೆ ಹೆಚ್ಚಾಗುತ್ತಿರುವ ಈ ಸಮಯದಲ್ಲಿ, ಹೈಡ್ರೇಟ್ ಆಗಿರುವುದು ಬಹಳ ಮುಖ್ಯ. ಆದರೆ ಬೇಸಿಗೆಯಲ್ಲಿ ಬಿಸಿ ನೀರಿನ ಸೇವನೆ ಮಾಡಲು ಯಾರೂ ಇಷ್ಟಪಡುವುದಿಲ್ಲ. ಹೆಚ್ಚಿನವರು ತಣ್ಣೀರನ್ನೇ ಕುಡಿಯಲು ಇಷ್ಟಪಡುತ್ತಾರೆ. ಬಿಸಿ ನೀರು ಅಥವಾ ಸಾಮಾನ್ಯ ತಾಪಮಾನದಲ್ಲಿರುವ ನೀರು ಅಂದರೆ ಉಗುರು ಬೆಚ್ಚಗಿನ ನೀರು (Lukewarm Water) ಆರೋಗ್ಯಕ್ಕೆ ಹೆಚ್ಚು ಒಳ್ಳೆಯದಾದರೂ ಕೂಡ ಬಿಸಿ ನೀರು ಕುಡಿಯಲು ಮನಸ್ಸು ಬರುವುದಿಲ್ಲ. ಹಾಗಾಗಿ ಫ್ರಿಡ್ಜ್ ನಲ್ಲಿಟ್ಟ ಐಸ್ ಆಗಿರುವ ನೀರು, ತಂಪಾದ ನೀರು, ಈ ರೀತಿ ಅರೆಕ್ಷಣಕ್ಕೆ ಖುಷಿ ಕೊಡುವುದನ್ನೇ ಕುಡಿಯುತ್ತಾರೆ. ಹಾಗಾದರೆ ಆರೋಗ್ಯ ತಜ್ಞರ ಪ್ರಕಾರ ಈ ಸಮಯದಲ್ಲಿ ಯಾವ ರೀತಿಯ ನೀರು ಆರೋಗ್ಯಕ್ಕೆ ಒಳ್ಳೆಯದು, ಬಿಸಿ ನೀರು ಕುಡಿಯುವುದರಿಂದ ಸಿಗುವ ಪ್ರಯೋಜನವೇನು ತಿಳಿದುಕೊಳ್ಳಿ.

ತಣ್ಣೀರು ಕುಡಿಯುವುದರಿಂದಾಗುವ ಪರಿಣಾಮ;

ಬೇಸಿಗೆಯಲ್ಲಿ ತಣ್ಣೀರು ತಕ್ಷಣ ತಂಪು ನೀಡಿದರೂ, ಅದನ್ನು ಹೆಚ್ಚಿನ ಪ್ರಮಾಣದಲ್ಲಿ ಕುಡಿಯುವುದರಿಂದ ಜೀರ್ಣಕ್ರಿಯೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ತಣ್ಣೀರು ದೇಹದ ಒಳಗಿನ ತಾಪಮಾನವನ್ನು ತಕ್ಷಣ ಕಡಿಮೆ ಮಾಡುವುದರಿಂದ ಜೀರ್ಣಕ್ರಿಯೆ ನಿಧಾನಗೊಳ್ಳಬಹುದು. ವಿಶೇಷವಾಗಿ ಊಟದ ನಂತರ ತಣ್ಣೀರು ಕುಡಿಯುವುದರಿಂದ ಆಹಾರ ಸರಿಯಾಗಿ ಜೀರ್ಣವಾಗದೇ ಅಜೀರ್ಣ ಸಮಸ್ಯೆಗಳು ಉಂಟಾಗಬಹುದು.

ಬಿಸಿನೀರು ಕುಡಿಯುವುದರಿಂದಾಗುವ ಲಾಭಗಳು;

ಸಾಮಾನ್ಯವಾಗಿ ಬಿಸಿ ಅಥವಾ ತುಸು ಬೆಚ್ಚಗಿನ ನೀರು ದೇಹದ ಜೀರ್ಣಕ್ರಿಯೆಯನ್ನು ಸುಧಾರಿಸಲು ಸಹಾಯಕವಾಗಿದೆ. ಇದು ದೇಹದ ಒಳಗಿನ ರಕ್ತಸಂಚಾರವನ್ನು ಸುಧಾರಿಸುತ್ತದೆ ಮತ್ತು ವಿಷಕಾರಿ ಅಂಶಗಳನ್ನು ಹೊರಹಾಕಲು ಸಹಕಾರಿಯಾಗುತ್ತದೆ. ಬೇಸಿಗೆಯಲ್ಲೂ ಸಹ ಬೆಳಿಗ್ಗೆ ಬೆಚ್ಚಗಿನ ನೀರು ಕುಡಿಯುವುದು ದೇಹದ ಮೆಟಾಬಾಲಿಸಂ ಹೆಚ್ಚಿಸಲು ಸಹಾಯ ಮಾಡುತ್ತದೆ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ.

ಇದನ್ನೂ ಓದಿ: ತಂಪಾದ ನೀರು ನಿಜವಾಗಿಯೂ ಆರೋಗ್ಯಕ್ಕೆ ಒಳ್ಳೆಯದಲ್ಲವೇ? ನಿಜಾಂಶವನ್ನು ತಜ್ಞರಿಂದಲೇ ತಿಳಿದುಕೊಳ್ಳಿ

ಸಾಮಾನ್ಯ ತಾಪಮಾನದಲ್ಲಿರುವ ನೀರೇ ಉತ್ತಮ ಆಯ್ಕೆ:

ತಜ್ಞರ ಪ್ರಕಾರ, ಬೇಸಿಗೆಯಲ್ಲಿ ತಣ್ಣೀರು ಅಥವಾ ತುಂಬಾ ಬಿಸಿ ನೀರಿಗಿಂತ ಸಾಮಾನ್ಯ ತಾಪಮಾನದಲ್ಲಿರುವ ನೀರು ಅಂದರೆ ಉಗುರು ಬೆಚ್ಚಗಿನ ನೀರು ಕುಡಿಯುವುದು ಬಹಳ ಉತ್ತಮ. ಇದು ದೇಹವನ್ನು ಸಮತೋಲನದಲ್ಲಿ ಇಡುತ್ತದೆ ಮತ್ತು ಜೀರ್ಣಕ್ರಿಯೆಯ ಮೇಲೂ ಕೆಟ್ಟ ಪರಿಣಾಮ ಬೀರುವುದಿಲ್ಲ. ವಿಶೇಷವಾಗಿ ಹೊರಗೆ ಹೋಗಿ ಬಂದ ತಕ್ಷಣ ತಣ್ಣೀರು ಕುಡಿಯುವುದನ್ನು ತಪ್ಪಿಸಬೇಕು.

ದಿನಕ್ಕೆ ಎಷ್ಟು ಪ್ರಮಾಣದಲ್ಲಿ ನೀರು ಕುಡಿಯಬೇಕು?

ದೇಹದಲ್ಲಿ ನೀರಿನ ಕೊರತೆ ಆಗದಂತೆ ತಡೆಯಲು ದಿನಕ್ಕೆ ಕನಿಷ್ಠ 2.5 ರಿಂದ 3 ಲೀಟರ್ ನೀರು ಕುಡಿಯುವುದು ಉತ್ತಮ. ಹೆಚ್ಚು ಬೆವರು ಬರುವವರು ಇನ್ನಷ್ಟು ನೀರು ಕುಡಿಯಬೇಕು. ಜೊತೆಗೆ ಹಣ್ಣಿನ ರಸ, ಜ್ಯೂಸ್, ಎಳನೀರು ಮುಂತಾದವುಗಳನ್ನು ಸಹ ಸೇವಿಸಬಹುದು.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ತಮಿಳುನಾಡಿನ 9 ಪೊಲೀಸರಿಗೆ ಗಲ್ಲು ಶಿಕ್ಷೆಯಾಗಲು ಈ ಮಹಿಳಾ ಕಾನ್​ಸ್ಟೆಬಲ್ ಕೂಡ ಕಾರಣ!

ಚೆನ್ನೈ, ಏಪ್ರಿಲ್ 8: ತಮಿಳುನಾಡಿನ 9 ಪೊಲೀಸ್ ಸಿಬ್ಬಂದಿಯನ್ನು ಅಪರಾಧಿಗಳು ಎಂದು ಪರಿಗಣಿಸಿ ಶಿಕ್ಷೆ ವಿಧಿಸಲಾಗಿದೆ. ತಂದೆ ಮತ್ತು ಮಗ ಕಸ್ಟಡಿಯಲ್ಲಿ ಸಾವನ್ನಪ್ಪಿದ 5 ವರ್ಷಗಳ ನಂತರ ಆ 9 ಪೊಲೀಸರಿಗೆ ಮರಣದಂಡನೆ (Death Sentence) ವಿಧಿಸಲಾಗಿದೆ. ಈ ಪ್ರಕರಣದಲ್ಲಿ ಪೊಲೀಸ್ ಹೆಡ್ ಕಾನ್‌ಸ್ಟೆಬಲ್ ರೇವತಿ ಬಹಳ ಮುಖ್ಯ ಪಾತ್ರ ವಹಿಸಿದ್ದಾರೆ ಎಂಬುದು ಬಹಳಷ್ಟು ಜನರಿಗೆ ಗೊತ್ತಿಲ್ಲ. ಅವರು ಧೈರ್ಯ ವಹಿಸಿ ಮುಂದೆ ಬಂದು ಆ ದಿನ ನಡೆದ ಘಟನೆಯನ್ನು ಹೇಳದಿದ್ದರೆ ಈ ಪ್ರಕರಣ ಖಂಡಿತ ಈ ಹಂತವನ್ನು ತಲುಪಲು ಸಾಧ್ಯವಾಗುತ್ತಿರಲಿಲ್ಲ.

ಕೊವಿಡ್-19 ಮಾನದಂಡಗಳನ್ನು ಉಲ್ಲಂಘಿಸಿ ತಮ್ಮ ಮೊಬೈಲ್ ಅಂಗಡಿಯನ್ನು ತೆರೆದಿದ್ದಕ್ಕಾಗಿ 2020ರಲ್ಲಿ ಬಂಧಿಸಲ್ಪಟ್ಟಿದ್ದ ಪಿ. ಜಯರಾಜ್ ಮತ್ತು ಅವರ ಮಗ ಜೆ. ಬೆನ್ನಿಕ್ಸ್ ಮೇಲೆ ಅಧಿಕಾರಿಗಳು ಕ್ರೂರವಾಗಿ ಹಲ್ಲೆ ನಡೆಸಿದಾಗ ರೇವತಿ ತೂತುಕುಡಿಯ ಸಾಥನ್‌ಕುಲಂ ಪೊಲೀಸ್ ಠಾಣೆಯಲ್ಲಿ ಕರ್ತವ್ಯದಲ್ಲಿದ್ದರು. ಈ ಪ್ರಕರಣದಲ್ಲಿ ಅಪ್ರೂವರ್ ಆಗಿ ತನ್ನ ಸುರಕ್ಷತೆ, ತನ್ನ ಕುಟುಂಬ ಅಥವಾ ತನ್ನ ಕೆಲಸದ ಬಗ್ಗೆ ಯೋಚನೆ ಮಾಡದೆ ಅವರು ಮ್ಯಾಜಿಸ್ಟ್ರೇಟ್‌ಗೆ ಆ ಘಟನೆ ನಡೆದ ದಿನ ಪೊಲೀಸ್ ಠಾಣೆಯಲ್ಲಿ ನಡೆದ ಘಟನೆಗಳನ್ನು ವಿವರಿಸಿದರು. ಈ ಪ್ರಕರಣದಲ್ಲಿ ಗಲ್ಲು ಶಿಕ್ಷೆಗೊಳಗಾಗಿರುವ ಅಧಿಕಾರಿಗಳು ಸೀನಿಯರ್ಸ್ ಮತ್ತು ಪ್ರಭಾವಶಾಲಿಗಳಾಗಿದ್ದರೆ ರೇವತಿ ಜೂನಿಯರ್ ಕಾನ್‌ಸ್ಟೆಬಲ್ ಆಗಿದ್ದರು. ಆದರೂ ಆಕೆ ದೃಢನಿಶ್ಚಯದಿಂದ ನ್ಯಾಯದ ಪರ ನಿಲ್ಲಲು ನಿರ್ಧರಿಸಿದ್ದರು.

ಆ ದಿನ ಜಯರಾಜ್ ಮತ್ತು ಬೆನ್ನಿಕ್ಸ್​ ಮೇಲೆ ತನ್ನದೇ ಪೊಲೀಸ್ ಠಾಣೆಯ ಸಿಬ್ಬಂದಿ ಹಲ್ಲೆ ನಡೆಸುವಾಗ ರೇವತಿ ಅಲ್ಲಿಯೇ ಇದ್ದರು. ಆ ದಿನ ಅವರು ನೈಟ್​ಡ್ಯೂಟಿಯಲ್ಲಿದ್ದರು. ಆಕೆ ರಕ್ತಸಿಕ್ತವಾದ ಅವರಿಬ್ಬರ ಬಟ್ಟೆಗಳನ್ನು ನೋಡಿದ್ದರು, ರಕ್ತ ಅಂಟಿದ ಲಾಠಿಯನ್ನು ನೋಡಿದ್ದರು, ರಕ್ತ ಅಂಟಿದ್ದ ಟೇಬಲ್ ಅನ್ನು ನೋಡಿ ಹೆದರಿದ್ದರು. ನೋವು ತಡೆಯಲಾರದೆ ಜಯರಾಜ್ ನೀರು ಕೇಳಿದಾಗ ರೇವತಿ ನೀರು ಕೊಟ್ಟಿದ್ದರು. ಆ ರಾತ್ರಿ ತನ್ನ ಗಂಡನಿಗೆ ಫೋನ್ ಮಾಡಿ ಠಾಣೆಯಲ್ಲಿ ನಡೆದ ಘಟನೆಯನ್ನು ವಿವರಿಸಿದ್ದರು.

ಇದನ್ನೂ ಓದಿ: ತಂದೆ-ಮಗನ ಲಾಕಪ್ ಡೆತ್ ಪ್ರಕರಣ; ತಮಿಳುನಾಡಿನ 9 ಪೊಲೀಸರಿಗೆ ಮರಣದಂಡನೆ

ಈ ಘಟನೆಯ ವಿಚಾರಣೆಗಾಗಿ ಮ್ಯಾಜಿಸ್ಟ್ರೇಟ್​ ಆಕೆಯನ್ನು ಕರೆಸಿದಾಗ ಆಕೆಯ ಮೇಲೆ ಹಿರಿಯ ಅಧಿಕಾರಿಗಳಿಂದ ಬಹಳ ಒತ್ತಡವಿತ್ತು. ಆದರೂ ತನ್ನನ್ನು ಕೆಲಸದಿಂದ ವಜಾಗೊಳಿಸಿದರೂ ಪರವಾಗಿಲ್ಲ ಎಂದು ಆಕೆ ನಡೆದ ಘಟನೆಯನ್ನು ಧೈರ್ಯವಾಗಿ ವಿವರಿಸಿದ್ದರು. 2020ರಲ್ಲಿ ರೇವತಿ ಧೈರ್ಯವಾಗಿ ಪ್ರತ್ಯಕ್ಷದರ್ಶಿಯಾಗಿ ಹೇಳಿಕೆ ದಾಖಲಿಸದಿದ್ದರೆ ಆ 9 ಅಪರಾಧಿಗಳಿಗೆ ಶಿಕ್ಷೆಯಾಗುತ್ತಿರಲಿಲ್ಲ. ಹೀಗಾಗಿ, ತಂದೆ-ಮಗನ ಲಾಕಪ್ ಡೆತ್ ಪ್ರಕರಣದ ಪ್ರತ್ಯಕ್ಷದರ್ಶಿಯಾದ ರೇವತಿ ಈ ಪ್ರಕರಣದಲ್ಲಿ ಬಹಳ ಮುಖ್ಯ ಪಾತ್ರ ವಹಿಸಿದ್ದಾರೆ.

ಏನಿದು ಪ್ರಕರಣ?:

2020ರಲ್ಲಿ ದೇಶಾದ್ಯಂತ ಸಂಚಲನ ಮೂಡಿಸಿದ್ದ ತಮಿಳುನಾಡಿನ ಸಾಥನ್‌ಕುಲಂ ಲಾಕಪ್ ಡೆತ್ ಪ್ರಕರಣದಲ್ಲಿ ಸೋಮವಾರ ಮಧುರೈ ನ್ಯಾಯಾಲಯವು ಐತಿಹಾಸಿಕ ತೀರ್ಪು ಪ್ರಕಟಿಸಿತ್ತು. ಈ ಘಟನೆಯ ಅಪರಾಧಿಗಳಾದ 9 ಪೊಲೀಸ್ ಸಿಬ್ಬಂದಿಗೆ ಮರಣದಂಡನೆ ವಿಧಿಸಿತ್ತು. ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾಥನ್‌ಕುಲಂನಲ್ಲಿ ಕೊವಿಡ್-19 ಮಾನದಂಡಗಳನ್ನು ಉಲ್ಲಂಘಿಸಿ ರಾತ್ರಿ ವೇಳೆಯಲ್ಲೂ ತಮ್ಮ ಮೊಬೈಲ್ ಅಂಗಡಿಯನ್ನು ತೆರೆದಿದ್ದಕ್ಕಾಗಿ ಶಿಕ್ಷೆಗೊಳಗಾಗಿದ್ದ ಅಪ್ಪ-ಮಗನ ಮೇಲೆ ಪೊಲೀಸರು ಹಲ್ಲೆ ನಡೆಸಿದ್ದರು. ಈ ಘಟನೆಯಲ್ಲಿ ತಂದೆ-ಮಗನಾದ ಪಿ. ಜಯರಾಜ್ ಮತ್ತು ಜೆ. ಬೆನ್ನಿಕ್ಸ್ ಸಾವನ್ನಪ್ಪಿದ್ದರು. ಈ ಸಾವಿಗೆ ತಮಿಳುನಾಡಿನಾದ್ಯಂತ ಭಾರೀ ಆಕ್ರೋಶ ವ್ಯಕ್ತವಾಗಿತ್ತು.

2020ರ ಜೂನ್ 19ರಂದು ನಡೆದಿದ್ದ ಈ ಘಟನೆಯಲ್ಲಿ ಸಾಥನ್​ಕುಲಂ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿಗಳು ಪಿ. ಜಯರಾಜ್ ಅವರನ್ನು ಬಂಧಿಸಿದ್ದರು. ತನ್ನ ತಂದೆ ಏನೂ ತಪ್ಪು ಮಾಡದಿದ್ದರೂ ಅವರನ್ನೇಕೆ ಬಂಧಿಸಿದ್ದೀರಿ? ಎಂದು ವಿಚಾರಿಸಲು ಪೊಲೀಸ್ ಠಾಣೆಗೆ ಹೋದ ಅವರ ಮಗ ಬೆನ್ನಿಕ್ಸ್ ಅವರ ಜೊತೆಯೂ ವಾಗ್ವಾದ ನಡೆಸಿದ ಪೊಲೀಸರು ಅವರನ್ನೂ ಬಂಧಿಸಿದ್ದರು ಎಂದು ಈ ಪ್ರಕರಣದ ತನಿಖೆ ನಡೆಸಿದ ಸಿಬಿಐ ತಿಳಿಸಿದೆ.

ಇದನ್ನೂ ಓದಿ: ಉಚಿತ ಫ್ರಿಡ್ಜ್, ಪುರುಷರಿಗೂ ಫ್ರೀ ಬಸ್, ಮಹಿಳೆಯರಿಗೆ 2,000 ರೂ.; ತಮಿಳುನಾಡಿಗೆ ಎಐಎಡಿಎಂಕೆ ಬಂಪರ್ ಆಫರ್

ಜೂನ್ 19 ಮತ್ತು 20ರ ಮಧ್ಯರಾತ್ರಿ ಪೊಲೀಸ್ ಅಧಿಕಾರಿಗಳು ಆ ತಂದೆ ಮತ್ತು ಮಗನನ್ನು ಥಳಿಸಿ, ಕ್ರೂರವಾಗಿ ಚಿತ್ರಹಿಂಸೆ ನೀಡಿದರು. ತೀವ್ರವಾದ ಗಾಯಗಳಿಂದ ಬೆನ್ನಿಕ್ಸ್ ಜೂನ್ 22ರಂದು ಮತ್ತು ಜೈರಾಜ್ ಜೂನ್ 23ರಂದು ಸಾವನ್ನಪ್ಪಿದರು. ತಮಿಳುನಾಡು ಸರ್ಕಾರವು ನ್ಯಾಯಯುತ ತನಿಖೆಗಾಗಿ ಈ ಪ್ರಕರಣವನ್ನು ಸಿಬಿಐಗೆ ವರ್ಗಾಯಿಸಿತು. ಸಂಪೂರ್ಣ ತನಿಖೆಯ ನಂತರ ಸಿಬಿಐ 90 ದಿನಗಳಲ್ಲಿ 9 ಆರೋಪಿಗಳ ವಿರುದ್ಧ ಆರೋಪಪಟ್ಟಿ ಸಲ್ಲಿಸಿತು.

ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠವು 5 ವರ್ಷಗಳಲ್ಲಿ ಒಟ್ಟು 105 ಸಾಕ್ಷಿಗಳನ್ನು ವಿಚಾರಣೆ ನಡೆಸಿತು. ಈ ಪ್ರಕರಣದ 10 ಆರೋಪಿಗಳಲ್ಲಿ ಒಬ್ಬರಾದ ವಿಶೇಷ ಸಬ್-ಇನ್ಸ್‌ಪೆಕ್ಟರ್ ಪೌಲ್‌ದುರೈ ಆರೋಗ್ಯ ಸಮಸ್ಯೆಗಳಿಂದಾಗಿ ವಿಚಾರಣೆಯ ಸಮಯದಲ್ಲಿ ನಿಧನರಾದರು. ಉಳಿದ 9 ಪೊಲೀಸರಿಗೆ ಗಲ್ಲು ಶಿಕ್ಷೆ ವಿಧಿಸಲಾಗಿದೆ. ಮರಣದಂಡನೆಯ ಜೊತೆಗೆ ನ್ಯಾಯಾಲಯವು ಅಪರಾಧಿಗಳಿಗೆ ಒಟ್ಟು 1.40 ಕೋಟಿ ರೂ. ದಂಡವನ್ನು ವಿಧಿಸಿ, ಸಂತ್ರಸ್ತರ ಕುಟುಂಬಕ್ಕೆ ಪರಿಹಾರವಾಗಿ ನೀಡಿದೆ.

ಗಲ್ಲು ಶಿಕ್ಷೆಗೆ ಒಳಗಾಗಿರುವ 9 ಅಪರಾಧಿಗಳು ಕ್ಷಮಾದಾನವನ್ನು ಕೋರಬಹುದು. ಅವರು ತಮಿಳುನಾಡು ರಾಜ್ಯಪಾಲರು (ಲೇಖನ 161) ಮತ್ತು ಭಾರತದ ರಾಷ್ಟ್ರಪತಿಗಳು (ಲೇಖನ 72) ಅವರ ಮುಂದೆ ಕ್ಷಮಾದಾನ ಅರ್ಜಿಗಳನ್ನು ಸಲ್ಲಿಸಬಹುದು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಪತಿಯ ಸಿನಿಮಾ ಪ್ರಚಾರ ಮಾಡಲು ಲಕ್ಷಾಂತರ ಹಣ ಕೇಳಿದ ನಯನತಾರಾ

ಸಿನಿಮಾ (Cinema) ರಂಗದಲ್ಲಿ ಎಲ್ಲವನ್ನೂ ಹಣದ ಮೇಲೆಯೇ ಅಳೆಯಲಾಗುತ್ತದೆ. ಇಲ್ಲಿ ಒಬ್ಬರಿಗೆ ಇನ್ನೊಬ್ಬರು ಹುಟ್ಟುಹಬ್ಬದ ಶುಭಾಶಯ ಕೋರಲು ಸಹ ಹಣದ ಲೆಕ್ಕಾಚಾರ ಇರುತ್ತದೆ. ಇಲ್ಲಿ ಸೆಲೆಬ್ರಿಟಿಗಳು ಹಾಕುವ ಪ್ರತಿ ಪೋಸ್ಟ್ ಹಿಂದೆಯೂ ಏಜೆನ್ಸಿಯೊಂದು ಕೆಲಸ ಮಾಡಿರುತ್ತದೆ. ಸಿನಿಮಾ ಪ್ರಚಾರದ ವಿಷಯದಲ್ಲಂತೂ ಯಾವುದೂ ಉಚಿತವಾಗಿ ಆಗುವುದಿಲ್ಲ. ಯಾವ ಮಟ್ಟಿಗೆಂದರೆ ಇದೀಗ ನಟಿ ನಯನತಾರಾ, ತಮ್ಮ ಪತಿಯ ಹೊಸ ಸಿನಿಮಾದ ಪ್ರಚಾರ ಮಾಡಲು ಲಕ್ಷಾಂತರ ರೂಪಾಯಿ ಹಣ ಕೇಳಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಈ ವಿಷಯವನ್ನು ಸ್ವತಃ ಅವರ ಪತಿಯೇ ಹೇಳಿದ್ದಾರೆ.

ನಟಿ ನಯನತಾರಾ ಹಾಗೂ ನಿರ್ದೇಶಕ ವಿಘ್ನೇಶ್ ಕೆಲ ವರ್ಷಗಳ ಹಿಂದಷ್ಟೆ ವಿವಾಹವಾಗಿದ್ದು, ಸೆರೊಗಸಿ ಮೂಲಕ ಅವಳಿ ಮಕ್ಕಳ ಪೋಷಕರು ಸಹ ಆಗಿದ್ದಾರೆ. ಎಲ್ಲಿಗೂ ಗೊತ್ತಿರುವಂತೆ ನಯನತಾರಾ ಸ್ಟಾರ್ ನಟಿ ಆಗಿದ್ದು, ಈಗಲೂ ಸಹ ಹಲವಾರು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ವಿಘ್ನೇಶ್ ಸಿನಿಮಾ ನಿರ್ದೇಶಕರಾಗಿದ್ದು, ಈ ವರೆಗೆ ನಾಲ್ಕು ಸಿನಿಮಾಗಳನ್ನು ನಿರ್ದೇಶನ ಮಾಡಿದ್ದಾರೆ. ಇದೀಗ ಐದನೇ ಸಿನಿಮಾ ನಿರ್ದೇಶಿಸಿದ್ದು ಇದೇ ಶುಕ್ರವಾರ ಸಿನಿಮಾ ತೆರೆಗೆ ಬರಲಿದೆ.

ವಿಘ್ನೇಶ್ ಶಿವನ್ ‘ಎಲ್​​ಐಕೆ’ (ಲವ್ ಇನ್ಶುರೆನ್ಸ್ ಕಂಪೆನಿ) ಹೆಸರಿನ ಸಿನಿಮಾ ನಿರ್ದೇಶಿಸಿದ್ದು, ಸಿನಿಮಾದ ನಾಯಕ ಪ್ರದೀಪ್ ರಂಗನಾಥನ್. ಸಿನಿಮಾದ ಪ್ರಚಾರ ಚಾಲ್ತಿಯಲ್ಲಿದ್ದು, ಇತ್ತೀಚೆಗಷ್ಟೆ ಸಿನಿಮಾದ ಪ್ರೀ ರಿಲೀಸ್ ಕಾರ್ಯಕ್ರಮ ನಡೆಯಿತು. ಆದರೆ ಈ ಕಾರ್ಯಕ್ರಮಕ್ಕೆ ನಯನತಾರಾ ಹಾಜರಾಗಿರಲಿಲ್ಲ. ಈ ಬಗ್ಗೆ ಮಾತನಾಡಿದ ಪತಿ ವಿಘ್ನೇಶ್, ‘ನನ್ನ ಪತ್ನಿ (ನಯನತಾರಾ) ಅನ್ನು ಅತಿಥಿಯಾಗಿ ಕರೆಯುವಷ್ಟು ಹಣ ನಮ್ಮಲ್ಲಿ ಇಲ್ಲ’ ಎಂದರು. ವಿಘ್ನೇಶ್ ಅವರ ಈ ಮಾತು ಇದೀಗ ವಿವಾದಕ್ಕೆ ಕಾರಣವಾಗಿದೆ.

ಇದನ್ನೂ ಓದಿ:ಮತ್ತೆ ಬಾಲಿವುಡ್​​ಗೆ ನಯನತಾರಾ, ಈ ಬಾರಿ ಮತ್ತೊಬ್ಬ ಖಾನ್​​ಗೆ ಜೋಡಿ

ನಟಿ ನಯನತಾರಾ ಪತಿಯ ಸಿನಿಮಾಕ್ಕೆ ಬೆಂಬಲ ನೀಡುತ್ತಿಲ್ಲ. ಪತಿಯ ಸಿನಿಮಾ ಪ್ರಚಾರ ಮಾಡಲು ಲಕ್ಷಾಂತರ ರೂಪಾಯಿ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ಇದು ಸರಿಯಲ್ಲ ಎಂಬ ಅಭಿಪ್ರಾಯಗಳು ಸಾಮಾಜಿಕ ಜಾಲತಾಣದಲ್ಲಿ ವ್ಯಕ್ತವಾಗಿದೆ. ಆದರೆ ಸಿನಿಮಾ ಎಂಬುದೇ ಉದ್ಯಮ, ‘ಡೋಂಟ್ ಡು ಬ್ಯುಸಿನೆಸ್ ವಿತ್ ಪ್ರೆಶರ್’ ಎಂಬ ಆಂಗ್ಲ ಗಾದೆಯಂತೆ, ಈ ಉದ್ಯಮದಲ್ಲಿ ಯಾವುದನ್ನೂ ಸಹ ಉಚಿತವಾಗಿ ಮಾಡುವಂತಿಲ್ಲ. ಎಲ್ಲದಕ್ಕೂ ಒಂದು ಬೆಲೆ ಇದೆ. ಅದನ್ನು ನಯನತಾರಾ ಚೆನ್ನಾಗಿ ಅರಿತಿದ್ದಾರೆ.

ನಯನತಾರಾ ಪ್ರಸ್ತುತ ಹಲವು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ತಮಿಳಿನಲ್ಲಿ ‘ಮೂಕುತ್ತಿ ಅಮ್ಮನ್ 2’ ಸಿನಿಮಾನಲ್ಲಿ ನಟಿಸುತ್ತಿದ್ದಾರೆ. ಇದೇ ಸಿನಿಮಾನಲ್ಲಿ ಕನ್ನಡದ ದುನಿಯಾ ವಿಜಿ ಸಹ ನಟಿಸುತ್ತಿದ್ದಾರೆ. ಹಿಂದಿಯಲ್ಲಿ ಸಲ್ಮಾನ್ ಖಾನ್ ಜೊತೆಗೆ ಹೊಸ ಸಿನಿಮಾನಲ್ಲಿ ನಟಿಸಲಿದ್ದಾರೆ. ಕನ್ನಡದ ‘ಟಾಕ್ಸಿಕ್’ ಸಿನಿಮಾನಲ್ಲಿ ನಟಿಸಿದ್ದು ಆ ಸಿನಿಮಾ ಜೂನ್ 4ಕ್ಕೆ ತೆರೆಗೆ ಬರಲಿದೆ. ಮಲಯಾಳಂನಲ್ಲಿ ಮೋಹನ್​​ಲಾಲ್, ಮಮ್ಮುಟಿ, ಫಹಾದ್ ಫಾಸಿಲ್ ಒಟ್ಟಿಗೆ ನಟಿಸಿರುವ ‘ಪೇಟ್ರಿಯಾಟ್’ ಸಿನಿಮಾನಲ್ಲಿ ನಾಯಕಿಯಾಗಿ ನಟಿಸಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಸಹದ್ಯೋಗಿಗಳೊಂದಿಗೆ ಈ ಒಂದಷ್ಟು ವಿಚಾರಗಳ ಬಗ್ಗೆ ಮಾತನಾಡದಿದ್ದರೆಯೇ ಒಳ್ಳೆಯದು

ನಮ್ಮ ಏಳಿಗೆಯಲ್ಲಿ ನೋಡಿ ವಿಷಕಾರುವಂತಹ ಸಂಬಂಧಿಕರು ಇರುವಂತೆ, ಆಫೀಸ್‌ನಲ್ಲಿಯೂ ನಮ್ಮ ಕೆಲಸ ಕಾರ್ಯಗಳನ್ನು ನೋಡಿ, ಸಹಿಸಿಕೊಳ್ಳದ ಒಂದಷ್ಟು ಸಹದ್ಯೋಗಿಗಳಿರುತ್ತಾರೆ. ಆದ್ದರಿಂದ ಆಫೀಸ್‌ನಲ್ಲಿ (office) ಎಷ್ಟು ಜಾಗರೂಕರಾಗಿದ್ದರೂ ಕಡಿಮೆಯೇ. ಅದರಲ್ಲೂ ಮಾತನಾಡುವಾಗ ಮೈಯೆಲ್ಲಾ ಕಣ್ಣಾಗಿರಬೇಕು. ಏಕೆಂದರೆ ಒಂದು ತಪ್ಪು ಮಾತು ಕೂಡ ನಮ್ಮ ಕೆಲಸ, ಹೆಸರು ಹಾಗೂ ಭವಿಷ್ಯಕ್ಕೆ ಕುತ್ತು ತರುವ ಸಾಧ್ಯತೆ ಇರುತ್ತದೆ. ಹಾಗಾಗಿ ಆಫೀಸ್‌ನಲ್ಲಿ ಮಾತುಕತೆ ನಡೆಸುವಾಗ ಸ್ವಲ್ಪ ಜಾಗರೂಕರಾಗಿರಬೇಕು. ಅದರಲ್ಲೂ ಈ ಒಂದಷ್ಟು ವಿಚಾರಗಳನ್ನು ಅಪ್ಪಿತಪ್ಪಿಯೂ ಸಹದ್ಯೋಗಿಗಳೊಂದಿಗೆ ಶೇರ್‌ ಮಾಡಬಾರದು. ಸಹದ್ಯೋಗಿಗಳೊಂದಿಗೆ ಶೇರ್‌ ಮಾಡಿಕೊಳ್ಳಲೇಬಾರದ ಆ ವಿಚಾರಗಳು ಯಾವುವು ಎಂಬುದನ್ನು ನೋಡೋಣ ಬನ್ನಿ.

ಸಹದ್ಯೋಗಿಗಳ ಬಳಿ ಈ ವಿಚಾರಗಳ ಬಗ್ಗೆ ಮಾತನಾಡದಿದ್ದರೆಯೇ ಒಳ್ಳೆಯದು:

ಸಂಬಳದ ಬಗ್ಗೆ ಯಾರಿಗೂ ಹೇಳಬೇಡಿ: ನಿಮ್ಮ ಸಂಬಳ ಮತ್ತು ಆದಾಯದ ಮೂಲಗಳ ಬಗ್ಗೆ ನಿಮ್ಮ ಸಹದ್ಯೋಗಿಗಳೊಂದಿಗೆ ಮಾತನಾಡುವುದು ಒಳ್ಳೆಯದಲ್ಲ. ಏಕೆಂದರೆ ಇದರಿಂದ ಕೆಲವರು ಅಸೂಯೆ ಪಡುವ ಸಾಧ್ಯತೆ ಇರುತ್ತದೆ. ಇದರಿಂದ ಹಲವು ಸಮಸ್ಯೆಗಳೂ ಎದುರಾಗಬಹುದು.

ವೈಯಕ್ತಿಕ ಸಮಸ್ಯೆಗಳ ಬಗ್ಗೆ ಹಂಚಿಕೊಳ್ಳಬೇಡಿ: ಕಚೇರಿಯಲ್ಲಿ ನಿಮ್ಮ ಸಹದ್ಯೋಗಿಗಳೊಂದಿಗೆ ನಿಮ್ಮ ವೈಯಕ್ತಿಕ ಸಮಸ್ಯೆಗಳನ್ನು ಹಂಚಿಕೊಳ್ಳಬೇಡಿ. ವೈಯಕ್ತಿಕ ಸಮಸ್ಯೆಗಳ ಬಗ್ಗೆ ಮಾತನಾಡುವುದರಿಂದ ಭವಿಷ್ಯದಲ್ಲಿ ನಿಮಗೆ ಸಮಸ್ಯೆಗಳು ಉಂಟಾಗಬಹುದು. ಕೆಲವರು ನಿಮ್ಮ ಈ ಸಮಸ್ಯೆಗಳನ್ನು ತಮ್ಮ ವೈಯಕ್ತಿಕ ಲಾಭಕ್ಕಾಗಿ ಬಳಸಿಕೊಳ್ಳುವ ಸಾಧ್ಯತೆ ಇರುತ್ತದೆ.

ಕಚೇರಿಯಲ್ಲಿ ಗಾಸಿಪ್ ಮಾಡಬೇಡಿ:‌ ಕಚೇರಿಯ ಗಾಸಿಪ್‌ಗಳ ಬಗ್ಗೆ ಸಹದ್ಯೋಗಿಗಳೊಂದಿಗೆ ಹಂಚಿಕೊಳ್ಳುವುದು ಸರಿಯಲ್ಲ. ಈ ಗಾಸಿಪ್‌ ಬೇರೊಬ್ಬರ ಕಿವಿಗೆ ಬಿದ್ದು, ಸಮಸ್ಯೆಗಳು ಎದುರಾಗುವ ಸಾಧ್ಯತೆ ಇರುತ್ತದೆ, ಇದರಿಂದ ನಿಮ್ಮ ಕೆಲಸಕ್ಕೂ ಕುತ್ತು ಬರಬಹುದು.  ಆದ್ದರಿಂದ ಮೂರನೇ ವ್ಯಕ್ತಿಗಳ ಬಗ್ಗೆ ಮಾತನಾಡಬೇಡಿ,  ಗಾಸಿಪ್‌ನಿಂದ ದೂರವಿರಿ.

ರಾಜಕೀಯ ವಿಷಯಗಳ ಬಗ್ಗೆ ಮಾತನಾಡುವುದು ಸರಿಯಲ್ಲ: ಕಚೇರಿಯಲ್ಲಿ ನಿಮ್ಮ ನೆಚ್ಚಿನ ರಾಜಕಾರಣಿ ಅಥವಾ ರಾಜಕೀಯ ವಿಷಯಗಳ ಬಗ್ಗೆ ಮಾತನಾಡಬೇಡಿ. ಈ ವಿಷಯಗಳ ಬಗ್ಗೆ ಮಾತನಾಡುವುದು ರಾಜಕೀಯ ಚರ್ಚೆಗಳು, ವಾದಗಳು ಮತ್ತ ಭಿನ್ನಾಭಿಪ್ರಾಯಗಳಿಗೆ ಕಾರಣವಾಗಬಹುದು. ಇದು ಆಫೀಸ್‌ ವಾತಾವರಣವನ್ನೇ ಹಾಳು ಮಾಡಬಹುದು.

ಕೌಟುಂಬಿಕ ಸಮಸ್ಯೆಗಳ ಬಗ್ಗೆ ಯಾರಿಗೂ ಹೇಳಬೇಡಿ: ಕಚೇರಿಯಲ್ಲಿ ಕೌಟುಂಬಿಕ ಸಮಸ್ಯೆಗಳ ಬಗ್ಗೆ ಎಂದಿಗೂ ಮಾತನಾಡಬೇಡಿ, ಕಚೇರಿಯಲ್ಲಿ ಕೌಟುಂಬಿಕ ಸಮಸ್ಯೆಗಳ ಬಗ್ಗೆ ಮಾತನಾಡುವುದರಿಂದ ಭವಿಷ್ಯದಲ್ಲಿ ಸಮಸ್ಯೆಗಳು ಉಂಟಾಗುತ್ತದೆ.

ಬಾಸ್‌ ಬಗ್ಗೆ ತಪ್ಪಿಯೂ ಮಾತನಾಡಬೇಡಿ: ನಿಮ್ಮ ಬಾಸ್‌ ಬಗ್ಗೆ ನಿಮ್ಮ ಸಹದ್ಯೋಗಿಗಳ ಬಳಿ ನಕಾರಾತ್ಮಕವಾಗಿ ಮಾತನಾಡುವುದರಿಂದ ಬಹಳಷ್ಟು ಸಮಸ್ಯೆಗಳು ಉಂಟಾಗಬಹುದು, ಇದು ನಿಮ್ಮ ಕೆಲಸಕ್ಕೂ ಕುತ್ತು ತರಹಬಹುದು. ಆದ್ದರಿಂದ ಎಂದಿಗೂ ಬಾಸ್‌ ಬಗ್ಗೆ ಯಾರೊಂದಿಗೂ ಮಾತನಾಡಬೇಡಿ.

ಇದನ್ನೂ ಓದಿ: ವೃತ್ತಿ ಜೀವನದಲ್ಲಿ ಯಶಸ್ಸನ್ನು ಸಾಧಿಸಲು ಚಾಣಕ್ಯರ ಮಾತುಗಳನ್ನು ಪಾಲಿಸಿ

ಹಣಕಾಸಿನ ಸಮಸ್ಯೆಗಳ ಬಗ್ಗೆ ಮಾತನಾಡಬೇಡಿ:  ನಿಮ್ಮ ಹಣಕಾಸಿನ ಸಮಸ್ಯೆಗಳ ಬಗ್ಗೆ ಇತರರೊಂದಿಗೆ ಮಾತನಾಡುವುದು ಒಳ್ಳೆಯದಲ್ಲ. ಹಣಕಾಸಿನ ಸಮಸ್ಯೆಗಳ ಬಗ್ಗೆ ಮಾತನಾಡುವುದರಿಂದ ಹಲವು ಸಮಸ್ಯೆಗಳು ಉಂಟಾಗಬಹುದು.

ಸಂಬಂಧಗಳ ಬಗ್ಗೆ ಮಾತನಾಡಬೇಡಿ: ವೈಯಕ್ತಿಕ ಸಂಬಂಧಗಳನ್ನು ಖಾಸಗಿಯಾಗಿ ಇಟ್ಟುಕೊಂಡಷ್ಟು ಒಳ್ಳೆಯದು. ತಿಯೊಬ್ಬರಿಗೂ ಜೀವನದಲ್ಲಿ ಏರಿಳಿತಗಳು ಇರುತ್ತವೆ, ಆದರೆ ಕಚೇರಿ ಅವುಗಳನ್ನು ಹಂಚಿಕೊಳ್ಳಲು ಸೂಕ್ತ ಸ್ಥಳವಲ್ಲ. ಸಹದ್ಯೋಗಿಗಳೊಂದಿಗೆ ನಿಮ್ಮ ಸಂಬಂಧಗಳ ಬಗ್ಗೆ ಮಾತನಾಡುವುದರಿಂದ ಅನೇಕ ಸಮಸ್ಯೆಗಳನ್ನು ಉಂಟುಮಾಡಬಹುದು.

ಭವಿಷ್ಯದ ವೃತ್ತಿಪರ ಯೋಜನೆಗಳು: ನೀವು ಬೇರೆಡೆ ಸಂದರ್ಶನಕ್ಕೆ ಹೋಗುತ್ತಿದ್ದರೆ ಅಥವಾ ಉದ್ಯೋಗ ಬದಲಾವಣೆಗೆ ಯೋಜಿಸುತ್ತಿದ್ದರೆ, ಅವುಗಳನ್ನು ಹಂಚಿಕೊಳ್ಳಬೇಡಿ. ಇದು ಕೂಡ ಸಮಸ್ಯೆಗಳನ್ನು ಉಂಟು ಮಾಡುವ ಸಾಧ್ಯತೆ ಇರುತ್ತದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಎಲ್​ಪಿಜಿ ಕೊರತೆ: ರಾಜ್ಯ ಸರ್ಕಾರದಿಂದ ಆಟೋ ಚಾಲಕರಿಗೆ ಮಹತ್ವದ ಪ್ರಕಟಣೆ

ಬೆಂಗಳೂರು, ಏಪ್ರಿಲ್ 08: ಕರ್ನಾಟಕದಲ್ಲಿ ಗ್ಯಾಸ್​ ಸಿಗದೆ ಆಟೋ ಚಾಲಕರಿಗೆ ಸಂಕಷ್ಟ ಎದುರಾಗಿದೆ. ದಿನವಿಡಿ ದುಡಿಮೆ ಬಿಟ್ಟು ಬಂಕ್​ಗಳ ಬಳಿ ಗಂಟೆಗಟ್ಟಲೇ ಕಾಯುವಂತ ಸ್ಥಿತಿ ನಿರ್ಮಾಣವಾಗಿದೆ. ಇದರಿಂದ ಆಟೋ ಚಾಲಕರು ಹೈರಾಣಾಗಿ ಹೋಗಿದ್ದಾರೆ. ಈ ಮಧ್ಯೆ ಆಟೋ ಗ್ಯಾಸ್ (Auto LPG)​​ ಕೊರತೆ ಬಗ್ಗೆ ವಂದತಿಗಳು ಕೂಡ ಹರಿದಾಡಿದ್ದವು. ಸದ್ಯ ಆಟೋ ಎಲ್​ಪಿಜಿ ಸರಬರಾಜು ಕುರಿತು ಸ್ಪಷ್ಟನೆ ನೀಡಿರುವ ರಾಜ್ಯ ಸರ್ಕಾರ,  ಸರಬರಾಜಿನಲ್ಲಿ ವ್ಯತ್ಯಾಸ ಕಂಡುಬಂದಿದ್ದರೂ ಯಾವುದೇ ತೊಂದರೆ ಇಲ್ಲ ಎಂದು ಹೇಳಿದೆ.

ಪ್ರತಿದಿನ 83ರಿಂದ 94 ಮೆಟ್ರಿಕ್ ಟನ್​ವರೆಗೂ ಪೂರೈಕೆ

ಆಟೋ ಎಲ್​ಪಿಜಿ ಸರಬರಾಜು ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ರಾಜ್ಯ ಸರ್ಕಾರ, ಸರಬರಾಜಿನಲ್ಲಿ ವ್ಯತ್ಯಾಸ ಕಂಡುಬಂದಿದ್ದರೂ ಯಾವುದೇ ತೊಂದರೆ ಇಲ್ಲ. IOCL, BPC, HPC ಕಂಪನಿಗಳಿಂದ ಗ್ಯಾಸ್​ ಪೂರೈಕೆ ನಡೆಯುತ್ತಿದೆ. ಏಪ್ರಿಲ್ 2ರಿಂದ ಏಪ್ರಿಲ್‌ 6ರವರೆಗೆ ದಿನನಿತ್ಯ ಸರಬರಾಜು ಆಗುತ್ತಿದೆ. ಪ್ರತಿದಿನ 83ರಿಂದ 94 ಮೆಟ್ರಿಕ್ ಟನ್​ವರೆಗೂ ಪೂರೈಕೆ ಮಾಡಲಾಗಿದೆ. ಏಪ್ರಿಲ್ 5ರಂದು ಅತಿ ಹೆಚ್ಚು 94.11 MT ಸರಬರಾಜು ಮಾಡಲಾಗಿದೆ. ಆಟೋ ಚಾಲಕರು ಆತಂಕಪಡಬೇಕಾಗಿಲ್ಲ ಎಂದು ಸರ್ಕಾರ ಹೇಳಿದೆ.

ಇದನ್ನೂ ಓದಿ: ರಾಜ್ಯದಲ್ಲಿ ಆಟೋ ಎಲ್​ಪಿಜಿ ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯ್ಲ್! ಡ್ಯುಯಲ್ ಫ್ಯೂಯಲ್ ಬಳಕೆಗೆ ಸಲಹೆ

ಇನ್ನು ಎಲ್​ಪಿಜಿ ಪೂರೈಕೆ ವ್ಯವಸ್ಥೆಯನ್ನು ಸರ್ಕಾರ ಸಮೀಕ್ಷೆ ಮಾಡುತ್ತಿದೆ. ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ. ಏಪ್ರಿಲ್ 5ರಂದು ಗರಿಷ್ಠ 94.11 MT ಪೂರೈಕೆಯಾಗಿದೆ. ಆಟೋ ಚಾಲಕರಿಗೆ ಆತಂಕ ಬೇಡ, ಪೂರೈಕೆ ಮೇಲೆ ಸರ್ಕಾರದ ನಿಗಾ ಇದೆ.

  • ದಿನಾಂಕ                            ಆಟೋ ಎಲ್​ಪಿಜಿ ಸರಬರಾಜು (ಮೆಟ್ರಿಕ್ ಟನ್​​ನಲ್ಲಿ)
  • ಏಪ್ರಿಲ್​ 2ರಂದು                             87.78
  • ಏಪ್ರಿಲ್​ 3ರಂದು                             86.05
  • ಏಪ್ರಿಲ್​ 4ರಂದು                             84.80
  • ಏಪ್ರಿಲ್​​ 5ರಂದು                             94.11
  • ಏಪ್ರಿಲ್​ 6ರಂದು                             83.58

ಇನ್ನೂ ಓದಿ: ಸಚಿವ ಕೆ. ಹೆಚ್ ಮುನಿಯಪ್ಪ ನಿವಾಸಕ್ಕೆ ಮುತ್ತಿಗೆ ಹಾಕಿದ ಆಟೋ ಚಾಲಕರು ! ಸಚಿವ ಹೇಳಿದ್ದೇನು?

ಸದ್ಯ ರಾಜ್ಯದಲ್ಲಿನ ಆಟೋ ಮಾಲೀಕರು ಮತ್ತು ಚಾಲಕರುಗಳು ಆತಂಕ ಪಡದೇ ಮತ್ತು ಯಾವುದೇ ವದಂತಿಗಳಿಗೆ ಕಿವಿ ಕೊಡದೇ ಸಹಕರಿಸುವಂತೆ ರಾಜ್ಯ ಸರ್ಕಾರ ಮನವಿ ಮಾಡಿದೆ.

ಕೈಗಾರಿಕಾ ವಲಯಕ್ಕೆ ಎಲ್​ಪಿಜಿ ಹಂಚಿಕೆಗೆ ಮಾರ್ಗಸೂಚಿ 

ಇನ್ನು ಕೈಗಾರಿಕಾ ವಲಯಕ್ಕೆ ಎಲ್​ಪಿಜಿ ಹಂಚಿಕೆ ಕುರಿತು ಕೇಂದ್ರದಿಂದ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ಈ ಬಗ್ಗೆ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ಕಾರ್ಯದರ್ಶಿ ಡಾ.ನೀರಜ್ ಮಿತ್ತಲ್​ರಿಂದ ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಕಾರ್ಯದರ್ಶಿಗಳಿಗೆ ಅಧಿಕೃತ ಪತ್ರ ರವಾನಿಸಲಾಗಿದೆ.

  • ವಿವಿಧ ಕೈಗಾರಿಕಾ ವಲಯಗಳಿಗೆ ಶೇ.70ರಷ್ಟು LPG ಹಂಚಿಕೆಗೆ ನಿರ್ಧಾರ.
  • ಪಿಎನ್‌ಜಿ ಸುಧಾರಣೆ ತಂದ ರಾಜ್ಯಗಳಿಗೆ ಹೆಚ್ಚುವರಿ ಶೇ.10ರಷ್ಟು ಎಲ್‌ಪಿಜಿ
  • ಫಾರ್ಮಾ, ಫುಡ್, ಅಗ್ರಿಕಲ್ಚರ್ ಸೇರಿ ಪ್ರಮುಖ ವಲಯಗಳಿಗೆ ಅನಿಲ ಪೂರೈಕೆ
  • ಬೃಹತ್ LPG ಬಳಕೆಗೆ ದಿನಕ್ಕೆ 0.2 ಟಿಎಂಟಿ ಮಿತಿ ನಿಗದಿ
  • ನೈಸರ್ಗಿಕ ಅನಿಲ ಬಳಸಲು ಸಾಧ್ಯವಿಲ್ಲದ ಘಟಕಗಳಿಗೆ ಮೊದಲ ಆದ್ಯತೆ
  • ಸಿಜಿಡಿ ಘಟಕಗಳಿಗೆ ಪಿಎನ್‌ಜಿ ನೋಂದಣಿ ಕಡ್ಡಾಯ
  • ಪ್ಯಾಕೇಜಿಂಗ್, ಪೇಂಟ್, ಸ್ಟೀಲ್ ಮತ್ತು ಸೆರಾಮಿಕ್ ಘಟಕಗಳಿಗೆ ಸಿಗಲಿದೆ ನೆರವು
  • ಮಾರುಕಟ್ಟೆಯ ಬೇಡಿಕೆಗೆ ತಕ್ಕಂತೆ ಅನಿಲಪೂರೈಕೆ ವ್ಯವಸ್ಥೆ
  • ಮಾರ್ಚ್​​ 2026ರ ಬಳಕೆ ಆಧರಿಸಿ ಕೈಗಾರಿಕೆಗಳಿಗೆ ಇಂಧನ ಕೋಟಾ ನಿಗದಿ

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

‘ಗುಜರಾತ್ ಜನ ಅನಕ್ಷರಸ್ಥರು’ ಎಂದಿದ್ದ ಖರ್ಗೆ: ವಿವಾದ ಭುಗಿಲೇಳುತ್ತಿದ್ದಂತೆ ಕ್ಷಮೆಯಾಚಿಸಿದ ಕಾಂಗ್ರೆಸ್ ಅಧ್ಯಕ್ಷ

ನವದೆಹಲಿ, ಏಪ್ರಿಲ್ 08: ಕೇರಳ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಗುಜರಾತ್ ಜನರ ಬಗ್ಗೆ ನೀಡಿದ್ದ ವಿವಾದಾತ್ಮಕ ಹೇಳಿಕೆಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ(Mallikarjun Kharge) ಕ್ಷಮೆಯಾಚಿಸಿದ್ದಾರೆ. ತಮ್ಮ ಹೇಳಿಕೆಗಳನ್ನು ಉದ್ದೇಶಪೂರ್ವಕವಾಗಿಯೇ ತಿರುಚಲಾಗಿದೆ, ನಾನು ಕ್ಷಮೆಯಾಚಿಸುತ್ತೇನೆ ಎಂದು ಅವರು ಹೇಳಿದ್ದಾರೆ. ಗುಜರಾತ್ ಜನ ಅನಕ್ಷರಸ್ಥರು ಎಂದು ಖರ್ಗೆ ನೀಡಿದ್ದ ಹೇಳಿಕೆ ವಿವಾದದ ಸ್ವರೂಪ ಪಡೆಯುತ್ತಿದ್ದಂತೆ ಕ್ಷಮೆಯಾಚಿಸಿದ್ದಾರೆ. ಕೇರಳದಲ್ಲಿ ಮಾಡಿದ ಚುನಾವಣಾ ಭಾಷಣದ ಬಗ್ಗೆ ಖರ್ಗೆ ಸ್ಪಷ್ಟೀಕರಣ ನೀಡಿದ್ದು, ತಮ್ಮ ಹೇಳಿಕೆಗಳನ್ನು ಉದ್ದೇಶಪೂರ್ವಕವಾಗಿ ತಪ್ಪಾಗಿ  ಅರ್ಥೈಸಲಾಗುತ್ತಿದೆ ಎಂದು ಹೇಳಿದ್ದಾರೆ.

ಗುಜರಾತ್ ಜನರ ಭಾವನೆಗಳನ್ನು ನೋಯಿಸುವ ಉದ್ದೇಶವನ್ನು ನಾವು ಎಂದೂ ಹೊಂದಿಲ್ಲ. ಗುಜರಾತ್ ಜನರ ಬಗ್ಗೆ ತಮಗೆ ಯಾವಾಗಲೂ ಗೌರವವಿದೆ ಮತ್ತು ಮುಂದೆಯೂ ಇರುವುದಾಗಿ ಅವರು ಹೇಳಿದರು. ಕೇರಳದ ಇಡುಕ್ಕಿ ಜಿಲ್ಲೆಯಲ್ಲಿ ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಖರ್ಗೆ, ಕೇರಳದ ಜನರ ಶಿಕ್ಷಣ ಮತ್ತು ಬುದ್ಧಿವಂತಿಕೆಯನ್ನು ಶ್ಲಾಘಿಸಿದರು.

ಗುಜರಾತ್ ಮತ್ತು ಇತರ ಸ್ಥಳಗಳಲ್ಲಿರುವಂತೆ, ಕಡಿಮೆ ಶಿಕ್ಷಣ ಹೊಂದಿರುವವರನ್ನು ಮೂರ್ಖರನ್ನಾಗಿಸಬಹುದು ಎಂದು ಪ್ರಧಾನಿ ಮೋದಿ ಅವರನ್ನು ಗುರಿಯಾಗಿಸಿಕೊಂಡು ಅವರು ಟೀಕಿಸಿದ್ದರು. ಕೇರಳದ ಮತದಾರರನ್ನು ದಾರಿ ತಪ್ಪಿಸುವುದು ಅಸಾಧ್ಯ ಎಂದು ಅವರು ಹೇಳಿದ್ದರು.

ಮತ್ತಷ್ಟು ಓದಿ: RSS ಬಗ್ಗೆ ಅವಹೇಳನಕಾರಿ ಮಾತು: ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಸಿಡಿದೆದ್ದ ಬಿಜೆಪಿ, ದೂರು ದಾಖಲು

ಈ ಹೇಳಿಕೆಯ ನಂತರ, ಭಾರತೀಯ ಜನತಾ ಪಕ್ಷವು ಕಾಂಗ್ರೆಸ್ ವಿರುದ್ಧ ಹೋರಾಟ ಆರಂಭಿಸಿತು. ಇದು ಕಾಂಗ್ರೆಸ್‌ನ ಒಡೆದು ಆಳುವ ಮನಸ್ಥಿತಿಯನ್ನು ಪ್ರತಿಬಿಂಬಿಸುತ್ತದೆ ಎಂದು ಬಿಜೆಪಿ ವಕ್ತಾರ ಶಹಜಾದ್ ಪೂನಾವಾಲಾ ಹೇಳಿದ್ದರು. ಹಿರಿಯ ನಾಯಕ ರವಿಶಂಕರ್ ಪ್ರಸಾದ್ ಈ ಹೇಳಿಕೆಯನ್ನು ನಾಚಿಕೆಗೇಡಿನ ಸಂಗತಿ ಎಂದು ಕರೆದರು.

ಮಲ್ಲಿಕಾರ್ಜುನ ಖರ್ಗೆ ಪೋಸ್ಟ್​

ಮಹಾತ್ಮ ಗಾಂಧಿ, ಸರ್ದಾರ್ ಪಟೇಲ್ ಮತ್ತು ಮೊರಾರ್ಜಿ ದೇಸಾಯಿ ಅವರಂತಹ ಮಹಾನ್ ವ್ಯಕ್ತಿಗಳು ಸಹ ಅನಕ್ಷರಸ್ಥರೇ ಎಂದು ಅವರು ಪ್ರಶ್ನಿಸಿದರು. ಖರ್ಗೆ ಅವರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಬಿಜೆಪಿ ಒತ್ತಾಯಿಸಿತು ಮತ್ತು ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಈ ವಿಷಯದ ಬಗ್ಗೆ ತಮ್ಮ ನಿಲುವನ್ನು ಸ್ಪಷ್ಟಪಡಿಸುವಂತೆ ಕೇಳಿದ್ದಾರೆ.

ಮೋದಿ ಜೀ ನೀವು ಗುಜರಾತ್​​ನ ಅನಕ್ಷರಸ್ಥ ಜನರನ್ನು ಮರುಳು ಮಾಡಬಹುದು, ಆದರೆ ನೀವು ಕೇರಳದ ಜನರನ್ನು ಮರುಳು ಮಾಡುವುದು ಅಸಾಧ್ಯ ಎಂದು ಖರ್ಗೆ ಹೇಳಿದ್ದರು. ಖರ್ಗೆ ಹೇಳಿಕೆಯನ್ನು ಖಂಡಿಸಿದ ಬಿಜೆಪಿ ನಾಯಕರು ವಿರೋಧ ಪಕ್ಷದ ಡಿಎನ್​ಎಯಲ್ಲಿ ಗುಜರಾತ್ ವಿರೋಧಿ ವಿಷವಿದೆ ಎಂದು ಆರೋಪಿಸಿದ್ದಾರೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

Source link

Vasthu Tips: ಸೌಂದರ್ಯಕ್ಕೆ ಮಾತ್ರವಲ್ಲ, ಸಮೃದ್ಧಿಗೂ ಅಲೋವೆರಾ; ಈ ದಿಕ್ಕಿನಲ್ಲಿ ಗಿಡವಿದ್ದರೆ ಬದಲಾಗುತ್ತೆ ನಿಮ್ಮ ಲಕ್!

ಅಲೋವೆರಾ ಎಂದರೆ ತಕ್ಷಣ ನೆನಪಾಗುವುದು ಚರ್ಮ ಮತ್ತು ಕೂದಲಿನ ಸೌಂದರ್ಯ. ಆದರೆ, ಭಾರತೀಯ ಪರಂಪರೆ ಮತ್ತು ವಾಸ್ತು ಶಾಸ್ತ್ರದಲ್ಲಿ ಅಲೋವೆರಾಗೆ ಅತ್ಯಂತ ಪವಿತ್ರವಾದ ಸ್ಥಾನವಿದೆ. ಇದನ್ನು ಲಕ್ಷ್ಮಿ ದೇವಿಯ ಸಾಕಾರ ರೂಪವೆಂದು ಪರಿಗಣಿಸಲಾಗಿದ್ದು, ಮನೆಯಲ್ಲಿ ಸರಿಯಾದ ದಿಕ್ಕಿನಲ್ಲಿ ಇರಿಸುವುದರಿಂದ ಆರ್ಥಿಕ ಸಂಕಷ್ಟಗಳು ದೂರವಾಗಿ ಸುಖ-ಸಮೃದ್ಧಿ ನೆಲೆಸುತ್ತದೆ ಎಂಬ ನಂಬಿಕೆಯಿದೆ.

ಪುರಾಣಗಳಲ್ಲಿ ಮರ-ಗಿಡಗಳ ಮಹತ್ವ:

ದ್ವಾಪರ ಯುಗದಲ್ಲಿ ಶ್ರೀಕೃಷ್ಣನು ಬಲರಾಮನಿಗೆ ಗಿಡಮರಗಳ ಶ್ರೇಷ್ಠತೆಯನ್ನು ವಿವರಿಸುತ್ತಾ, “ಪ್ರತಿಯೊಂದು ಸಸ್ಯವೂ ಮನುಷ್ಯನಿಗೆ ಉಪಯುಕ್ತವಾಗಿದ್ದು, ಅವು ದೇವರಿಗೆ ಸಮಾನ” ಎಂದು ಹೇಳಿದ್ದಾನೆ. ಮರಗಳು ಕೆಟ್ಟ ಗಾಳಿಯನ್ನು ಹೀರಿಕೊಂಡು ನಮಗೆ ಜೀವವಾಯುವನ್ನು ನೀಡುವ ಮೂಲಕ ನಮ್ಮನ್ನು ರಕ್ಷಿಸುತ್ತವೆ. ಮರಗಳನ್ನು ಪ್ರೀತಿಸುವವನು ಭೂಮಿಯ ಮೇಲೆ ಸುಖವಾಗಿ ಬಾಳುತ್ತಾನೆ ಎಂಬುದು ಶ್ರೀಕೃಷ್ಣನ ನುಡಿ.

ಅಲೋವೆರಾದಲ್ಲಿ ಮುಕ್ಕೋಟಿ ದೇವತೆಗಳ ವಾಸ:

ಶಾಸ್ತ್ರಗಳ ಪ್ರಕಾರ ಅಲೋವೆರಾ ಗಿಡದ ಪ್ರತಿಯೊಂದು ಮುಳ್ಳು ಒಬ್ಬೊಬ್ಬ ದೇವತೆಯ ಶಿರಸ್ಸಿಗೆ ಸಮಾನ. ಈ ಸಸ್ಯದಲ್ಲಿ ತ್ರಿಮೂರ್ತಿಗಳು ಸೇರಿದಂತೆ ಮುಕ್ಕೋಟಿ ದೇವತೆಗಳು ನೆಲೆಸಿದ್ದಾರೆ ಎಂದು ನಂಬಲಾಗಿದೆ. ಮನೆಯಲ್ಲಿ ಈ ಗಿಡವಿದ್ದರೆ ಸಂಪತ್ತಿನ ಕೊರತೆಯಾಗುವುದಿಲ್ಲ ಮತ್ತು ಎಂಟು ಬಗೆಯ ಆಶೀರ್ವಾದಗಳು ಲಭಿಸುತ್ತವೆ. ಇದಲ್ಲದೇ ಅಲೋವೆರಾ ತಿರುಳನ್ನು ಆಯುರ್ವೇದದಲ್ಲಿ ಸಂಜೀವಿನಿ ಎನ್ನಲಾಗುತ್ತದೆ. ಇದನ್ನು ಹಸುವಿನ ಹಾಲಿನೊಂದಿಗೆ ಸೇವಿಸುವುದರಿಂದ ತೂಕ ಇಳಿಕೆಯಾಗುತ್ತದೆ ಮತ್ತು ಅನೇಕ ರೋಗಗಳು ನಿಯಂತ್ರಣಕ್ಕೆ ಬರುತ್ತವೆ.

ದುಷ್ಟ ಶಕ್ತಿಗಳ ನಿವಾರಣೆಗೆ ಅಲೋವೆರಾ ತಂತ್ರ:

ಮನೆಗೆ ತಗುಲುವ ದೃಷ್ಟಿ ಅಥವಾ ನಕಾರಾತ್ಮಕ ಶಕ್ತಿಗಳನ್ನು ತಡೆಯಲು ಅಲೋವೆರಾ ಅತ್ಯಂತ ಪರಿಣಾಮಕಾರಿ. ಅಮಾವಾಸ್ಯೆಯ ದಿನ ಒಂದು ಅಲೋವೆರಾ ಗಿಡವನ್ನು ಬೇರುಸಹಿತ ತಂದು, ಸ್ವಚ್ಛಗೊಳಿಸಿ, ಅರಿಶಿನ-ಕುಂಕುಮ ಮತ್ತು ಶ್ರೀಗಂಧದಿಂದ ಅಲಂಕರಿಸಿ ದೇವರಿಗೆ ಅರ್ಪಿಸಬೇಕು. ಮರುದಿನ (ಪಾಡ್ಯಮಿ) ಈ ಗಿಡವನ್ನು ದಾರದ ಸಹಾಯದಿಂದ ಮನೆಯ ಹೊಸ್ತಿಲಿನ ಬಲಭಾಗಕ್ಕೆ ಕಟ್ಟಬೇಕು. ಇದು ಮನೆಗೆ ಬರುವ ದುಷ್ಟ ಕಣ್ಣು ಮತ್ತು ಕೆಟ್ಟ ಆಲೋಚನೆಗಳನ್ನು ಹೀರಿಕೊಳ್ಳುತ್ತದೆ. ಪ್ರತಿ ತಿಂಗಳು ಅಮಾವಾಸ್ಯೆಯಂದು ಈ ಸಸ್ಯವನ್ನು ಬದಲಾಯಿಸುವುದು ಉತ್ತಮ.

ಇದನ್ನೂ ಓದಿ: ಮುಯ್ಯಿ ರೂಪದಲ್ಲಿ ಕೊಡುವ ಹಣಕ್ಕೆ 1ರೂ. ಸೇರಿಸಿ ಕೊಡಬೇಕು ಯಾಕೆ ಗೊತ್ತಾ?

ವಾಸ್ತು ಪ್ರಕಾರ ಯಾವ ದಿಕ್ಕಿನಲ್ಲಿರಬೇಕು?

ಅಲೋವೆರಾ ಸಸ್ಯವು ಮನೆಯಲ್ಲಿ ಸಕಾರಾತ್ಮಕ ಶಕ್ತಿಯನ್ನು ಹೆಚ್ಚಿಸಲು ಅದನ್ನು ಸರಿಯಾದ ದಿಕ್ಕಿನಲ್ಲಿಡುವುದು ಮುಖ್ಯ. ವಾಸ್ತು ತಜ್ಞರ ಪ್ರಕಾರ, ಅಲೋವೆರಾವನ್ನು ಮನೆಯ ಈಶಾನ್ಯ (North-East) ಭಾಗದಲ್ಲಿ ಇರಿಸುವುದು ಶ್ರೇಷ್ಠ. ಈ ಸಸ್ಯವನ್ನು ನೇತುಹಾಕುವಾಗ ಬೇರುಗಳು ಮೇಲ್ಮುಖವಾಗಿ ಮತ್ತು ಎಲೆಗಳು ಕೆಳಮುಖವಾಗಿ ಇರುವಂತೆ ಜೋಡಿಸುವುದು ವಾಸ್ತು ದೋಷಗಳನ್ನು ನಿವಾರಿಸಲು ಸಹಾಯ ಮಾಡುತ್ತದೆ. ಹೀಗೆ ಮಾಡುವುದರಿಂದ ವೈವಾಹಿಕ ಸಮಸ್ಯೆಗಳು, ಆರ್ಥಿಕ ಮುಗ್ಗಟ್ಟು ಮತ್ತು ಗ್ರಹಗತಿಗಳ ಕೆಟ್ಟ ಪ್ರಭಾವಗಳಿಂದ ಮುಕ್ತಿ ಸಿಗುತ್ತದೆ ಎಂದು ನಂಬಲಾಗಿದೆ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Exit mobile version