Headlines

ಗಲಭೆ, ಗೊಂದಲ, ಭ್ರಷ್ಟಾಚಾರ: ತೆಲುಗು ಸಿನಿಮಾ ಡ್ಯಾನ್ಸರ್​​ಗಳ ಪ್ರತಿಭಟನೆ – Kannada News | Tollywood dance association members protest against Jani Master

ತೆಲುಗು ಸಿನಿಮಾಗಳಲ್ಲಿ (Tollywood) ಡ್ಯಾನ್ಸ್​​ಗೆ ಬಹಳ ಪ್ರಧಾನ್ಯತೆ, ಇತರೆ ಸಿನಿಮಾ ರಂಗಗಳಿಗೆ ಹೋಲಿಸಿದರೆ ತೆಲುಗು ಸಿನಿಮಾಗಳಲ್ಲಿ ಡ್ಯಾನ್ಸ್ ಹೆಚ್ಚು ಗುಣಮಟ್ಟದಿಂದಲೂ ಕೂಡಿರುತ್ತದೆ. ‘ಆರ್​​ಆರ್​​ಆರ್’ ಸಿನಿಮಾದ ಡ್ಯಾನ್ಸು ಆಸ್ಕರ್ ವೇದಿಕೆಯಲ್ಲೂ ಮಿಂಚಿದ್ದು ನೆನಪಿರಬಹುದು. ಆದರೆ ಇದೀಗ ತೆಲುಗು ಚಿತ್ರರಂಗದ ಡ್ಯಾನ್ಸರ್​​ಗಳು ಸಮಸ್ಯೆಗೆ ಸಿಲುಕಿದ್ದಾರೆ. ಇದಾಗಲೇ ಡ್ಯಾನ್ಸ್ ಅಸೋಷಿಯೇಷನ್ ಒಡೆದು ಎರಡು ಭಾಗವಾಗಿದ್ದು, ಇತ್ತೀಚೆಗಷ್ಟೆ ತೆಲುಗು ಸಿನಿಮಾ ಮತ್ತು ಟಿವಿ ಡ್ಯಾನ್ಸರ್ ಅಸೋಸಿಯೇಷನ್ ಸದಸ್ಯರು ಜಾನಿ ಮಾಸ್ಟರ್ ಮತ್ತು ಅವರ ಪತ್ನಿ ಹಾಗೂ ಅಸೋಷಿಯೇಷನ್ ಅಧ್ಯಕ್ಷೆ ಸುಮಲತಾ ವಿರುದ್ಧ ಪ್ರತಿಭಟನೆ…

Read More

ಬೆಂಗಳೂರಿನಲ್ಲಿ 26.6 ಕೋಟಿ ಡ್ರಗ್ಸ್, ನಕಲಿ ನೋಟು ಪ್ರಿಂಟಿಂಗ್ ಜಾಲ ಭೇದಿಸಿದ ಪೊಲೀಸರು – Kannada News | CCB Cracks Down on Bengaluru Drug Mafia: 27 Cr MDMA, Cocaine, Heroin and Fake Notes

ಬೆಂಗಳೂರು, ಜು.21: ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ಚಟುವಟಿಕೆಗಳು ಹಾಗೂ ಮಾದಕ ವಸ್ತು ಜಾಲದ ವಿರುದ್ಧ ಪೊಲೀಸರು ಸಮರ ಸಾರಿದ್ದು, ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳ, ಕೋರಮಂಗಲ ಹಾಗೂ ಕುಂಬಳಗೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿ ಕೋಟ್ಯಂತರ ರೂಪಾಯಿ ಮೌಲ್ಯದ ಡ್ರಗ್ಸ್ ಹಾಗೂ ನಕಲಿ ನೋಟುಗಳನ್ನು ವಶಪಡಿಸಿಕೊಂಡಿದ್ದಾರೆ. ದೆಹಲಿಯಿಂದ ಬೆಂಗಳೂರಿಗೆ ಚೂಡಿದಾರ್‌ಗಳ ಒಳಗೆ ಹಾಕಿಕೊಂಡು ಅತ್ಯಂತ ಚಾಣಾಕ್ಷತನದಿಂದ ಎಂಡಿಎಂಎ ಮಾದಕ ವಸ್ತುವನ್ನು ಸಾಗಿಸುತ್ತಿದ್ದ ಬೃಹತ್ ಜಾಲವನ್ನು ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳ ಭೇದಿಸಿದೆ….

Read More

Dengue Vaccine Approved in India: ಸೊಳ್ಳೆ ಕಾಟಕ್ಕೆ ಬ್ರೇಕ್, ಡೆಂಘೀಗೆ ಬಂತು ವ್ಯಾಕ್ಸಿನ್!

ಬೆಂಗಳೂರು, ಜುಲೈ 21: ಭಾರತದಲ್ಲಿ ಮಾರಕ ಡೆಂಗೀ ಜ್ವರಕ್ಕೆ ಮೊದಲ ಅಧಿಕೃತ ನಿರ್ದಿಷ್ಟ ಲಸಿಕೆ ಕ್ಯುಡೆಂಗಾ ಮಾರಾಟಕ್ಕೆ ಅನುಮೋದನೆ ದೊರೆತಿದೆ. ಜಪಾನ್‌ನ ಟಕೇಡಾ ಬಯೋ ಫಾರ್ಮಾಟಿಕಲ್ಸ್ ಅಭಿವೃದ್ಧಿಪಡಿಸಿರುವ ಈ ಲಸಿಕೆಗೆ ಡಿಸಿಜಿಐ (ಸೆಂಟ್ರಲ್ ಡ್ರಗ್ಸ್ ಸ್ಟ್ಯಾಂಡರ್ಡ್ ಕಂಟ್ರೋಲ್ ಆರ್ಗನೈಸೇಶನ್) ಸಮ್ಮತಿ ಸೂಚಿಸಿದೆ. 4 ರಿಂದ 60 ವರ್ಷ ವಯೋಮಾನದವರಿಗೆ ಈ ಲಸಿಕೆ ನೀಡಬಹುದಾಗಿದೆ. ಕ್ಯುಡೆಂಗಾ ಲಸಿಕೆಯು ಡೆಂಗಿಯ ನಾಲ್ಕೂ ವಿಧದ ವೈರಸ್‌ಗಳ ವಿರುದ್ಧ ಪರಿಣಾಮಕಾರಿಯಾಗಿ ಹೋರಾಡುತ್ತದೆ. ಎರಡು ಡೋಸ್‌ಗಳಲ್ಲಿ ಈ ಲಸಿಕೆಯನ್ನು ನೀಡಲಾಗುತ್ತದೆ. ಮೊದಲ ಡೋಸ್ ಪಡೆದ…

Read More

Video: ಅವಳ ನಗುವೇ ತಂದೆಯ ಶಕ್ತಿ; ಮಗಳನ್ನು ಹೆಗಲ ಮೇಲೆ ಕೂರಿಸಿಕೊಂಡು ಸೈಕಲ್ ತುಳಿಯುತ್ತಾ ಸ್ಕೂಲ್‌ನತ್ತ ತಂದೆ – Kannada News | A father set off towards the school, cycling with his daughter seated on his shoulders.

ಸೋಶಿಯಲ್ ಮೀಡಿಯಾದಲ್ಲಿ ಪ್ರತಿನಿತ್ಯ ನೂರಾರು ವಿಡಿಯೋಗಳು ವೈರಲ್ ಆಗುತ್ತಿರುತ್ತವೆ. ಅಪ್ಪ ಮಗಳ (father – daughter) ಬಾಂಧವ್ಯ ಸಾರುವ ದೃಶ್ಯಗಳು ನೆಟ್ಟಿಗರ ಗಮನ ಸೆಳೆಯುತ್ತದೆ. ಇದೀಗ ಇಂತಹದ್ದೇ ದೃಶ್ಯ ವೈರಲ್ ಆಗಿದ್ದು, ಅಪ್ಪನೊಬ್ಬ ಮಗಳನ್ನು ತನ್ನ ಹೆಗಲ ಮೇಲೆ ಕೂರಿಸಿಕೊಂಡಿದ್ದಾನೆ. ತಾನು ಸೈಕಲ್ ತುಳಿಯುತ್ತಾ ಶಾಲೆಗೆ ಕಳುಹಿಸಲು ಹೋಗುತ್ತಿದ್ದಾನೆ. ಈ ವಿಡಿಯೋ ನೆಟ್ಟಿಗರ ಗಮನ ಸೆಳೆಯುತ್ತಿದ್ದು, ತಮ್ಮ ಬಾಲ್ಯದ ದಿನಗಳನ್ನು ನೆನಪಿಸಿಕೊಂಡಿದ್ದಾರೆ. ಮೀನಾಕ್ಷಿ (Meenakshi) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ತಂದೆ ಮಗಳ ಬಾಂಧವ್ಯದ ವಿಡಿಯೋ ಹಂಚಿಕೊಂಡಿದ್ದಾರೆ. ಈ…

Read More

UPI without Internet: ಟ್ಯಾಪ್ ಟು ಪೇ, ಹೊಸ ಯುಪಿಐ ಫೀಚರ್; ಇಂಟರ್ನೆಟ್ ಇಲ್ಲದ ಫ್ಲೈಟ್, ಅಂಡರ್​ಗ್ರೌಂಡ್ ಮೆಟ್ರೋಗೂ ಹಣ ಪಾವತಿಸಿ – Kannada News | Tap to pay for flights, underground trains without internet connection, NPCI new UPI feature

ನವದೆಹಲಿ, ಜುಲೈ 21: ಇಂಟರ್ನೆಟ್ ಸಂಪರ್ಕವಿಲ್ಲದೆಯೂ ಯುಪಿಐ (UPI) ಮೂಲಕ ಹಣ ಪಾವತಿಸಲು ನ್ಯಾಷನಲ್ ಪೇಮೆಂಟ್ಸ್ ಕಾರ್ಪೊರೇಶನ್ ಆಫ್ ಇಂಡಿಯಾ (NPCI) ಹೊಸ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸುತ್ತಿದೆ ಎಂದು ಬ್ಯುಸಿನೆಸ್ ಸ್ಟ್ಯಾಂಡರ್ಡ್ ಪತ್ರಿಕೆಯಲ್ಲಿ ವರದಿಯಾಗಿದೆ. ವಿಮಾನ ಪ್ರಯಾಣದ ವೇಳೆ (In-flight), ಅಂಡರ್​ಗ್ರೌಂಡ್ ಮೆಟ್ರೋ ರೈಲುಗಳಲ್ಲಿ ಮತ್ತು ಇಂಟರ್ನೆಟ್ ಸಿಗ್ನಲ್ ಇಲ್ಲದ ಪ್ರದೇಶಗಳಲ್ಲಿಯೂ ಸುಲಭವಾಗಿ ಪಾವತಿ ಮಾಡಲು ಈ ಸೌಲಭ್ಯ ನೆರವಾಗಲಿದೆ. ಟ್ಯಾಪ್ ಟು ಪೇ: ಇಂಟರ್ನೆಟ್ ಇಲ್ಲದೆ ₹2,000 ವರೆಗಿನ ವಹಿವಾಟುಗಳನ್ನು ನಡೆಸಲು ಅವಕಾಶ ನೀಡುವಂತೆ ಯೋಜಿಸಲಾಗಿದೆ. ಎನ್​ಎಫ್​ಸಿ…

Read More

ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ವಿರುದ್ಧ ಅನ್ನದಾತರ ಆಕ್ರೋಶ: ಬೃಹತ್​​ ಪ್ರತಿಭಟನೆ – Kannada News | Koppala Farmers Intensify Protest Against Baldota Factory Amidst Environmental Concerns

ಕೊಪ್ಪಳ, ಜುಲೈ 21: ಬಲ್ಡೋಟಾ ಕಾರ್ಖಾನೆಯ ವಿರುದ್ಧ ರೈತರು, ಪರಿಸರ ಹೋರಾಟಗಾರರು ಮತ್ತು ವಿವಿಧ ರಾಜಕೀಯ ಹಾಗೂ ಸಾಮಾಜಿಕ ಸಂಘಟನೆಗಳು ಒಗ್ಗೂಡಿ ಬೃಹತ್ ಪ್ರತಿಭಟನೆ ನಡೆಸಿವೆ. ಬಲ್ಡೋಟಾ ಕಾರ್ಖಾನೆ ಎದುರು ಪ್ರತಿಭಟನಾ ಸಮಾವೇಶ ನಡೆಸಲಾಗಿದ್ದು, ರಾಷ್ಟ್ರೀಯ ಹೆದ್ದಾರಿ 63ರಲ್ಲಿಯೇ ರೈತರು ಕುರ್ಚಿಗಳನ್ನು ಹಾಕಿದ ಪರಿಣಾಮ, ವಾಹನಗಳ ಸಂಚಾರಕ್ಕೆ ಸಮಸ್ಯೆಯಾಗಿದೆ. ಹೆದ್ದಾರಿಯಲ್ಲಿ ಚೇರ್​​ಗಳನ್ನು ಹಾಕದಂತೆ ಪ್ರತಿಭಟನಾಕಾರರಿಗೆ ಪೊಲೀಸರು ಮನವಿ ಮಾಡಿದರೂ ಹೋರಾಟಗಾರರು ಮಾತ್ರ ಡೋಂಟ್​​ಕೇರ್​​ ಎಂದಿದ್ದಾರೆ. ಹೀಗಾಗಿ ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟಿದ್ದಾರೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ…

Read More

ರೈತರ ‘ಕಿಸಾನ್ ಘಾಟ್’ ಚಲೋ: ಶಂಭು, ಸಿಂಘು ಗಡಿಗಳು ಬಂದ್, ನೂರಾರು ರೈತರು ಪೊಲೀಸ್ ವಶಕ್ಕೆ – Kannada News | Farmers Delhi March: India US Trade Deal Protest Shuts Shambhu, Singhu Borders

ಚಂಡೀಗಢ, ಜುಲೈ 21: ಭಾರತ ಮತ್ತು ಅಮೆರಿಕ ನಡುವಿನ ವ್ಯಾಪಾರ ಒಪ್ಪಂದವನ್ನು ವಿರೋಧಿಸಿ ಪಂಜಾಬ್, ಹರಿಯಾಣ ಮತ್ತು ಇತರ ರಾಜ್ಯಗಳ ರೈತರು(Farmers) ದೆಹಲಿಯ ಕಿಸಾನ್ ಘಾಟ್‌ನತ್ತ ಬೃಹತ್ ಮೆರವಣಿಗೆ ಆರಂಭಿಸಿದ್ದಾರೆ. ರೈತರ ಸಂಚಾರವನ್ನು ತಡೆಯಲು ಹರಿಯಾಣ ಮತ್ತು ದೆಹಲಿ ಪೊಲೀಸರು ಗಡಿ ಪ್ರದೇಶಗಳಲ್ಲಿ ಭಾರಿ ಬ್ಯಾರಿಕೇಡ್‌ಗಳನ್ನು ಹಾಕಿ ಕಟ್ಟೆಚ್ಚರ ವಹಿಸಿದ್ದಾರೆ. ರೈತರು ಬೆಳಗಿನ ಜಾವವೇ ದೆಹಲಿಯತ್ತ ಹೊರಟ ಹಿನ್ನೆಲೆಯಲ್ಲಿ, ಅಂಬಾಲಾದ ಶಂಭು ಗಡಿ ಹಾಗೂ ಸೋನಿಪತ್‌ನ ಸಿಂಘು ಗಡಿಗಳನ್ನು ಪೊಲೀಸರು ಸಂಪೂರ್ಣವಾಗಿ ಮುಚ್ಚಿದ್ದಾರೆ. ಶಂಭು ಗಡಿಯಲ್ಲಿ ರಾತ್ರೋರಾತ್ರಿ…

Read More

ಮತ್ತೆ ಹಾಡಲಿರುವ ಅರಿಜಿತ್ ಸಿಂಗ್, ನಿವೃತ್ತಿ ನಿರ್ಧಾರ ಮುರಿದಿದ್ದೇಕೆ? – Kannada News | Arijit Singh breaks his retirement for Awarapan 2 movie song

ಅರಿಜಿತ್ ಸಿಂಗ್ (Arijit Singh) ಭಾರತದ ಸೂಪರ್ ಸ್ಟಾರ್ ಗಾಯಕ. ಅವರಷ್ಟು ದೊಡ್ಡ ಸಂಖ್ಯೆಯ ಅಭಿಮಾನಿಗಳನ್ನು ಹೊಂದಿರುವ ಗಾಯಕ ಪ್ರಸ್ತುತ ಭಾರತದಲ್ಲಿಲ್ಲ. ಹಲವಾರು ಅದ್ಭುತ ಹಾಡುಗಳಿಗೆ ಧ್ವನಿ ನೀಡಿರುವ ಅರಿಜಿತ್, ಸಾವಿರಾರು ಹಿಟ್​​ ಹಾಡುಗಳನ್ನು ಹಾಡಿದ್ದಾರೆ. ಆದರೆ ಕೆಲ ತಿಂಗಳ ಹಿಂದೆ ಅರಿಜಿತ್ ಸಿಂಗ್ ಅವರು ಅಚಾನಕ್ಕಾಗಿ ಗಾಯನಕ್ಕೆ ನಿವೃತ್ತಿ ಘೋಷಣೆ ಮಾಡಿದರು. ತಾವು ಇನ್ನು ಮುಂದೆ ಸಿನಿಮಾಗಳಲ್ಲಿ ಹಾಡುವುದಿಲ್ಲ ಎಂದಿದ್ದರು. ಸ್ಟಾರ್ ನಟ ಆಮಿರ್ ಖಾನ್ ಸೇರಿ ಇನ್ನೂ ಹಲವರು ಅವರ ಮನವೊಲಿಸಲು ಯತ್ನಿಸಿದರಾದರೂ ಸಫಲರಾಗಿರಲಿಲ್ಲ….

Read More

ಸಿಎಂ ಡಿ.ಕೆ.ಶಿವಕುಮಾರ್‌ ಬೆಳಗಾವಿ ಪ್ರವಾಸದ ವೇಳೆ ಕರ್ತವ್ಯಲೋಪ: ಡಿಹೆಚ್‌ಒಗೆ ಶೋಕಾಸ್​​ ನೋಟಿಸ್​​ – Kannada News | Belagavi DHO Issued Show Cause Notice for Failing to Arrange Advanced Life Support Ambulance During CM’s Visit

ಬೆಳಗಾವಿ ಡಿಹೆಚ್‌ಒಗೆ ಶೋಕಾಸ್​​ ನೋಟಿಸ್​​Image Credit source: Tv9 Kannada ಬೆಂಗಳೂರು, ಜುಲೈ 21: ಸಿಎಂ ಡಿ.ಕೆ. ಶಿವಕುಮಾರ್‌ ಬೆಳಗಾವಿ ಪ್ರವಾಸದ ವೇಳೆ ಡಿಹೆಚ್‌ಒ ಯಡವಟ್ಟು ಮಾಡಿದ್ದು, ಅಡ್ವಾನ್ಸ್ ಲೈಫ್‌ ಸಪೋರ್ಟ್ ಆ್ಯಂಬುಲೆನ್ಸ್ ಮತ್ತು ತಜ್ಞ ವೈದ್ಯರ ನೇಮಿಸದೇ ಬೇಜವಾಬ್ದಾರಿ ತೋರಿರುವ ಆರೋಪ ಕೇಳಿಬಂದಿದೆ. ಸರ್ಕಾರ ನಿರ್ದೇಶನವಿದ್ದರೂ ಲೈಫ್‌ ಸಪೋರ್ಟ್ ಆ್ಯಂಬುಲೆನ್ಸ್ ನೀಡದೆ ಸಾಮಾನ್ಯ ಆ್ಯಂಬುಲೆನ್ಸ್ ನಿಯೋಜಿಸದ ಜೊತೆಗೆ ವೈದ್ಯಕೀಯ ತಂಡದೊಂದಿಗೆ ನಿರಂತರ ಸಂಪರ್ಕ ಸಾಧಿಸದೇ ನಿರ್ಲಕ್ಷ್ಯ ತೋರಿದ್ದಾರೆ. ಅಲ್ಲದೆ, ಸಿಎಂ ವಾಸ್ತವ್ಯ ಸ್ಥಳದಲ್ಲಿ ತಜ್ಞ ವೈದ್ಯರ…

Read More

ಶಿವಾಜಿನಗರದಲ್ಲಿ ಫುಟ್​ಪಾತ್ ತೆರವು ಕಾರ್ಯಾಚರಣೆ ವೇಳೆ ಜಿಬಿಎ ಸಿಬ್ಬಂದಿ ಮೇಲೆ ಪೆಪ್ಪರ್ ಸ್ಪ್ರೇ, ಹಲ್ಲೆ ಆರೋಪ – Kannada News | Shivajinagar Footpath Clearance Turns Tense: BBMP Staff Allege Pepper Spray Attack During Anti Encroachment Drive

ಬೆಂಗಳೂರು, ಜುಲೈ 21: ಬೆಂಗಳೂರಿನ ಶಿವಾಜಿನಗರದಲ್ಲಿ ಜಿಬಿಎ ವತಿಯಿಂದ ನಡೆದ ಫುಟ್​ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ವೇಳೆ ಮಂಗಳವಾರ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಯಿತು. ಸ್ಥಳೀಯ ಸಂಘಟನೆಗಳ ಸದಸ್ಯರು ಪಾಲಿಕೆ ಸಿಬ್ಬಂದಿ ಮತ್ತು ಪೊಲೀಸರೊಂದಿಗೆ ಮಾತಿನ ಚಕಮಕಿ ನಡೆಸಿದರು. ಜೆಸಿಬಿ ಬಳಸಿ ಫುಟ್​ಪಾತ್ ಅತಿಕ್ರಮಣಗಳನ್ನು ತೆರವುಗೊಳಿಸುವ ಕಾರ್ಯಕ್ಕೆ ಸಿಬ್ಬಂದಿ ಮುಂದಾದಾಗ, ಸ್ಥಳೀಯ ಸಂಘಟನೆಗಳ ಕಾರ್ಯಕರ್ತರು ಅಡ್ಡಿಪಡಿಸಿದರು. ಈ ವೇಳೆ, ಪಾಲಿಕೆಯ ಇಂಜಿನಿಯರ್‌ಗಳು ಮತ್ತು ಜೆಸಿಬಿ ಚಾಲಕನ ಮೇಲೆ ಹಲ್ಲೆಗೆ ಯತ್ನಿಸಿದ ಆರೋಪಗಳು ಕೇಳಿಬಂದಿವೆ. ಒಬ್ಬ ಪಾಲಿಕೆ ಸಿಬ್ಬಂದಿಯ ಮೇಲೆ…

Read More