Headlines

ಕದನ ವಿರಾಮ ಘೋಷಿಸಿ ಅಮೆರಿಕ, ಇರಾನ್ ಹೇಳಿದ್ದೇನು? ಇಲ್ಲಿದೆ ಪೂರ್ಣ ವಿವರ

ವಾಷಿಂಗ್ಟನ್/ಟೆಹ್ರಾನ್, ಏಪ್ರಿಲ್ 8: ವಿಶ್ವವೇ ಕುತೂಹಲದಿಂದ ಕಾಯುತ್ತಿದ್ದ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ರಣಭೀಕರ ದಾಳಿಯ ಡೆಡ್​​ಲೈನ್ ಮುಗಿದಿದೆ. ಅಷ್ಟರಲ್ಲಿ ಅಮೆರಿಕ, ಇರಾನ್ 2 ವಾರಗಳ ಕದನ ವಿರಾಮ ಘೋಷಣೆ (US Iran Ceasefire) ಒಪ್ಪಂದಕ್ಕೆ ಬಂದಿವೆ. ಇನ್ನೇನು ಕೆಲವೇ ಕ್ಷಣಗಳಲ್ಲಿ ಇರಾನ್ ಮೇಲೆ ಅಮೆರಿಕದ ಫೈಟರ್ ಜೆಟ್‌ಗಳು ದಾಳಿ ಮಾಡಬೇಕಿತ್ತು, ಅಷ್ಟರಲ್ಲಿ ತ್ಕಾಲಿಕ ಕದನ ವಿರಾಮ ಘೋಷಣೆಯಾಗಿದೆ. ಪಾಕಿಸ್ತಾನದ ಪ್ರಧಾನಿ ಮತ್ತು ಸೇನಾ ಮುಖ್ಯಸ್ಥರ ಮನವಿಯ ಮೇರೆಗೆ ಟ್ರಂಪ್ ಈ ನಿರ್ಧಾರ ತೆಗೆದುಕೊಂಡಿದ್ದಾರೆ. ದಾಳಿ ಎರಡು…

Read More

IPL 2026: ಹೀಗಾದ್ರೆ ಮಾತ್ರ RCB vs CSK ಮತ್ತೆ ಮುಖಾಮುಖಿ

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 11ನೇ ಪಂದ್ಯದಲ್ಲಿ ಬದ್ಧ ವೈರಿಗಳಾಗಿ ಗುರುತಿಸಿಕೊಂಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್ ಕಿಂಗ್ಸ್  ತಂಡಗಳು ಮುಖಾಮುಖಿಯಾಗಿವೆ. ಇದಾಗ್ಯೂ ಉಭಯ ತಂಡಗಳು ಲೀಗ್​ ಹಂತದಲ್ಲಿ ಮತ್ತೆ ಎದುರು ಬದರಾಗುವುದಿಲ್ಲ. ಇದಕ್ಕೆ ಮುಖ್ಯ ಕಾರಣ ಈ ಬಾರಿಯ ಐಪಿಎಲ್​ನಲ್ಲಿ ಆರ್​ಸಿಬಿ ಮತ್ತು ಸಿಎಸ್​ಕೆ ತಂಡಗಳು ಒಂದೇ ಗ್ರೂಪ್​ನಲ್ಲಿರುವುದು.ಈ ಬಾರಿಯ ಫಾರ್ಮ್ಯಾಟ್ ಪ್ರಕಾರ, ಒಂದು ತಂಡವು ತನ್ನದೇ ಗುಂಪಿನಲ್ಲಿರುವ ಉಳಿದ 4 ತಂಡಗಳ ವಿರುದ್ಧ ತಲಾ ಒಂದೇ ಒಂದು ಪಂದ್ಯವನ್ನು ಆಡಲಿದೆ….

Read More

ಇರಾನ್ ಮೇಲೆ ಭೀಕರ ದಾಳಿ ನಿರ್ಧಾರದಿಂದ ಹಿಂದೆ ಸರಿದ ಟ್ರಂಪ್: ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ 2 ವಾರಗಳ ಕದನ ವಿರಾಮ ಘೋಷಣೆ!

ವಾಷಿಂಗ್ಟನ್/ಟೆಹ್ರಾನ್, ಏಪ್ರಿಲ್ 8: ಇರಾನ್ (Iran) ಮೇಲೆ ವಿನಾಶಕಾರಿ ದಾಳಿ ನಡೆಸಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ನೀಡಿದ್ದ ಗಡುವು ಮುಗಿಯಲು ಕೇವಲ ಎರಡು ಗಂಟೆಗಳಿರುವಾಗ ಬಹು ದೊಡ್ಡ ರಾಜತಾಂತ್ರಿಕ ಬೆಳವಣಿಗೆ ನಡೆದಿದೆ. ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಮತ್ತು ಸೇನಾ ಮುಖ್ಯಸ್ಥರ ಮನವಿಯ ಮೇರೆಗೆ ಟ್ರಂಪ್ ತಮ್ಮ ಬಾಂಬ್ ದಾಳಿಯ ನಿರ್ಧಾರವನ್ನು ಸ್ಥಗಿತಗೊಳಿಸಿದ್ದು, ಎರಡು ವಾರಗಳ ಕದನ ವಿರಾಮಕ್ಕೆ (US Iran Ceasefire) ಸಮ್ಮತಿಸಿದ್ದಾರೆ. ಹಾರ್ಮುಜ್ ಜಲಸಂಧಿ ತೆರೆಯಲು ಇರಾನ್ ಸಮ್ಮತಿ ಕಳೆದ…

Read More

ದಿನ ಭವಿಷ್ಯ: ಇಂದು ಈ ರಾಶಿಯವರ ಖಾಸಗಿತನಕ್ಕೆ ಅಪರಿಚಿತರಿಂದ ಧಕ್ಕೆ..

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ವಸಂತ, ಚಾಂದ್ರಮಾಸ : ಚೈತ್ರ, ಸೌರ ಮಾಸ : ಮೀನ, ಮಹಾನಕ್ಷತ್ರ : ರೇವತೀ, ವಾರ : ಬುಧ, ಪಕ್ಷ : ಕೃಷ್ಣ, ತಿಥಿ : ಸಪ್ತಮೀ, ನಿತ್ಯನಕ್ಷತ್ರ : ಮೂಲಾ, ಯೋಗ : ವ್ಯತಿಪಾತ್, ಕರಣ : ಬಾಲ, ಸೂರ್ಯೋದಯ – 06 – 16 am, ಸೂರ್ಯಾಸ್ತ – 06 – 35 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ…

Read More

RR vs MI: ಯುವ ದಾಂಡಿಗರ ಆರ್ಭಟಕ್ಕೆ ತತ್ತರಿಸಿದ ಮುಂಬೈ ಇಂಡಿಯನ್ಸ್

IPL 2026: ಗುವಾಹಟಿಯ ಬರ್ಸಪರಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್​ನ 13ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಜಯಭೇರಿ ಬಾರಿಸಿದೆ. ಮಳೆಯ ಕಾರಣ 11 ಓವರ್​ಗಳಿಗೆ ನಿಗದಿತವಾಗಿದ್ದ ಈ ಪಂದ್ಯದಲ್ಲಿ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಯುವ ದಾಂಡಿಗರಾದ ವೈಭವ್ ಸೂರ್ಯವಂಶಿ ಹಾಗೂ ಯಶಸ್ವಿ ಜೈಸ್ವಾಲ್ ಸಿಡಿಲಬ್ಬರದ ಆರಂಭ ಒದಗಿಸಿದ್ದರು. ದೀಪಕ್ ಚಹರ್ ಎಸೆದ ಮೊದಲ…

Read More

ಶಬರಿಮಲೆ ಪ್ರವೇಶ ಪ್ರಕರಣ; ಮಹಿಳೆಯನ್ನು 3 ದಿನದವರೆಗೆ ಅಸ್ಪೃಶ್ಯಳೆಂದು ಪರಿಗಣಿಸುವಂತಿಲ್ಲ ಎಂದ ಸುಪ್ರೀಂ ಕೋರ್ಟ್

ನವದೆಹಲಿ, ಏಪ್ರಿಲ್ 7: ಮಹಿಳೆಯನ್ನು ಒಂದು ತಿಂಗಳಲ್ಲಿ 3 ದಿನಗಳವರೆಗೆ ‘ಅಸ್ಪೃಶ್ಯಳು’ ಎಂದು ಪರಿಗಣಿಸುವಂತಿಲ್ಲ. ಒಂದುವೇಳೆ ಆಕೆಯನ್ನು ಹಾಗೆ ಪರಿಗಣಿಸುವುದಾದರೆ ನಾಲ್ಕನೇ ದಿನದಿಂದ ಹೇಗೆ ಆಕೆಯನ್ನು ಅಸ್ಪೃಶ್ಯಳು ಎಂದು ಪರಿಗಣಿಸುವುದಿಲ್ಲ ಎಂದು ಸುಪ್ರೀಂ ಕೋರ್ಟ್ (Supreme Court) ನ್ಯಾಯಮೂರ್ತಿ ಬಿ.ವಿ. ನಾಗರತ್ನ ಪ್ರಶ್ನಿಸಿದ್ದಾರೆ. ಕೇರಳದ ಶಬರಿಮಲೆ ದೇವಸ್ಥಾನ ಸೇರಿದಂತೆ ಧಾರ್ಮಿಕ ಸ್ಥಳಗಳಲ್ಲಿ ಮಹಿಳೆಯರ ವಿರುದ್ಧದ ತಾರತಮ್ಯ ಮತ್ತು ಬಹು ನಂಬಿಕೆಗಳನ್ನು ಆಚರಿಸುವ ಧಾರ್ಮಿಕ ಸ್ವಾತಂತ್ರ್ಯದ ವ್ಯಾಪ್ತಿಯ ಕುರಿತು 9 ನ್ಯಾಯಾಧೀಶರ ಪೀಠವು ಇಂದಿನಿಂದ ವಿಚಾರಣೆ ನಡೆಸುತ್ತಿದೆ. ನ್ಯಾಯಮೂರ್ತಿ…

Read More

ರಾಜ್ ಬಿ. ಶೆಟ್ಟಿಗೆ ಕೇಳಿ ರಿಷಬ್ ಶೆಟ್ಟಿ ಫೋನ್ ನಂಬರ್ ತಗೊಂಡೆ: ಟೊವಿನೋ ಥಾಮಸ್

ಮಲಯಾಳಂ ಚಿತ್ರರಂಗದ ಸ್ಟಾರ್ ನಟ ಟೊವಿನೋ ಥಾಮಸ್ (Tovino Thomas) ಅವರು ಬೆಂಗಳೂರಿಗೆ ಬಂದಿದ್ದಾರೆ. ತಮ್ಮ ಮುಂದಿನ ಸಿನಿಮಾದ ಪ್ರಚಾರದ ಸಲುವಾಗಿ ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ವೇಳೆ ಟಿವಿ9 ಜೊತೆ ಮಾತನಾಡಿದ್ದಾರೆ. ಕನ್ನಡ ಚಿತ್ರರಂಗದ ಜೊತೆ ತಮಗೆ ಇರುವ ನಂಟಿನ ಬಗ್ಗೆ ಅವರು ಮಾತನಾಡಿದ್ದಾರೆ. ರಾಜ್ ಬಿ. ಶೆಟ್ಟಿ (Raj B Shetty) ಜೊತೆ ಟೊವಿನೋ ಥಾಮಸ್ ಅವರು ಸ್ನೇಹ ಹೊಂದಿದ್ದಾರೆ. ‘ಕಾಂತಾರ’ ಸಿನಿಮಾ ನೋಡಿದ ಬಳಿಕ ಅವರಿಂದ ರಿಷಬ್ ಶೆಟ್ಟಿ ಫೋನ್ ನಂಬರ್ ಪಡೆದು ಕಾಲ್…

Read More

ಏ.9ರಿಂದ 11 ರವರೆಗೆ ಕರಾವಳಿಗೆ ಬಿಸಿಲಿನ ಪೆಟ್ಟು, ಈ ಜಿಲ್ಲೆಗಳಿಗೆ ಮಾತ್ರ ವರುಣನ ತಂಪು: 3 ದಿನಗಳ ಕಾಲ ‘ಯೆಲ್ಲೋ ಅಲರ್ಟ್’

ಮಂಗಳೂರು, ಏ. 07: ರಾಜ್ಯದ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡದಲ್ಲಿ ಮುಂದಿನ ಮೂರು ದಿನಗಳ ಕಾಲ ಹವಾಮಾನದಲ್ಲಿ ಭಾರಿ ಏರುಪೇರಾಗಲಿದ್ದು, ತೀವ್ರವಾದ ಬಿಸಿ ಗಾಳಿ ಮತ್ತು ಆರ್ದ್ರತೆ (Humidity) ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ. ಈ ಹಿನ್ನೆಲೆಯಲ್ಲಿ ಕರಾವಳಿ ಭಾಗಕ್ಕೆ ‘ಯೆಲ್ಲೋ ಅಲರ್ಟ್’ (Yellow Alert) ಘೋಷಿಸಲಾಗಿದೆ. ಏಪ್ರಿಲ್ 9 ರಿಂದ ಏಪ್ರಿಲ್ 11 ರವರೆಗೆ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಸಾಮಾನ್ಯಕ್ಕಿಂತ ಹೆಚ್ಚಿನ…

Read More

Chanakya Niti: ಮಹಿಳೆಯ ಈ ಗುಣಗಳು ಕುಟುಂಬದ ಬಹುದೊಡ್ಡ ಶಕ್ತಿ ಎಂದಿದ್ದಾರೆ ಚಾಣಕ್ಯ

ಹೆಣ್ಣು ಸಂಸಾರದ ಕಣ್ಣು, ಮನೆಯ ಏಳುಬೀಳು, ಕುಟುಂಬ ಸದಸ್ಯರ ಉನ್ನತಿ-ಅವನತಿ ಇವೆಲ್ಲವೂ ಆ ಮನೆಯ ಮಹಿಳೆಯ ಕೈಯಲ್ಲಿ ಇರುತ್ತದೆ. ಆದ್ದರಿಂದ ಮಹಿಳೆಯಾದವಳು ಸರಿಯಾದ ರೀತಿಯಲ್ಲಿ ಸಂಸಾರವನ್ನು ಸಾಗಿಸಿದರೆ, ಆ ಸಂಸಾರದಲ್ಲಿ ಸುಖ, ಶಾಂತಿ, ಸಮೃದ್ಧಿ ಎನ್ನುವಂತಹದ್ದು ನೆಲೆಸುತ್ತದೆ ಎಂದು ಆಚಾರ್ಯ ಚಾಣಕ್ಯ (Acharya Chanakya). ಅದರಲ್ಲೂ ಮಹಿಳೆಯಲ್ಲಿ ಈ ಕೆಲವು ಗುಣಗಳಿದ್ದರೆ ಆಕೆ ಮತ್ತು ಆಕೆಯ ಕುಟುಂಬದ ಭವಿಷ್ಯ ಉತ್ತಮ ರೀತಿಯಲ್ಲಿ ಇರುತ್ತದೆ. ಕುಟುಂಬದಲ್ಲಿ ಸುಖ, ಸಮೃದ್ಧಿ ನೆಲೆಸುತ್ತದೆ ಎಂದು ಆಚಾರ್ಯ ಚಾಣಕ್ಯರು ಹೇಳಿದ್ದಾರೆ. ಹಾಗಿದ್ರೆ ಮಹಿಳೆಯಾದವಳು…

Read More

11 ಓವರ್​ಗಳ ಪಂದ್ಯ: ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್ ಹೀಗಿದೆ

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19ರ ಹದಿಮೂರನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಿವೆ. ಗುವಾಹಟಿಯ ಬರ್ಸಪರಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್​ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಬೌಲಿಂಗ್ ಆಯ್ದುಕೊಂಡಿದ್ದಾರೆ. ಅದರಂತೆ ರಾಜಸ್ಥಾನ್ ರಾಯಲ್ಸ್ ತಂಡ ಮೊದಲು ಬ್ಯಾಟ್ ಮಾಡಲಿದೆ. ಮಳೆಯ ಕಾರಣ ತಡವಾಗಿ ಆರಂಭವಾಗಿರುವ ಈ ಪಂದ್ಯದಿಂದ ಒಟ್ಟು 18 ಓವರ್​ಗಳನ್ನು ಓವರ್ ಕಡಿತ ಮಾಡಲಾಗಿದೆ. ಅದರಂತೆ ಪ್ರತಿ ಇನಿಂಗ್ಸ್​ನಲ್ಲಿ 11…

Read More