ಉಕ್ರೇನ್​ನಲ್ಲಿ ಬಸ್ ಮೇಲೆ ಇಸ್ರೇಲ್ ಡ್ರೋನ್ ದಾಳಿ, 15 ಮಂದಿ ಸಾವು, 7 ಜನರಿಗೆ ಗಾಯ – Kannada News | Fifteen Workers Killed in Russian Strike as Ukraine Sets Peace Talks Timeline

ಕೈವ್, ಫೆಬ್ರವರಿ 02: ರಷ್ಯಾ ಉಕ್ರೇನ್​(Ukraine) ಮೇಲೆ ಡ್ರೋನ್ ದಾಳಿ ನಡೆಸಿದ್ದು, ಘಟನೆಯಲ್ಲಿ 15 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಗಣಿ ಕಾರ್ಮಿಕರನ್ನು ಸಾಗಿಸುತ್ತಿದ್ದ ಖಾಸಗಿ ಕಂಪನಿಯ ಬಸ್ ಅನ್ನು ಗುರಿಯಾಗಿಸಿಕೊಂಡು ನಡೆಸಿದ ದಾಳಿಯಲ್ಲಿ ಕನಿಷ್ಠ 15 ಜನರು ಸಾವನ್ನಪ್ಪಿದ್ದಾರೆ ಮತ್ತು ಏಳು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಉಕ್ರೇನ್‌ನ ರಾಜ್ಯ ತುರ್ತು ಸೇವೆ ತಿಳಿಸಿದೆ.

ಡ್ರೋನ್ ದಾಳಿಯ ನಂತರ ಬಸ್ ಬೆಂಕಿಗೆ ಹೊತ್ತಿಕೊಂಡಿತ್ತು, ಅಗ್ನಿಶಾಮಕ ದಳದ ಸಿಬ್ಬಂದಿ ಸಕಾಲದಲ್ಲಿ ಬೆಂಕಿ ನಂದಿಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಆರಂಭದಲ್ಲಿ ಸಾವಿನ ಸಂಖ್ಯೆ 12 ಎಂದು ವರದಿಯಾಗಿತ್ತು, ಆದರೆ ನಂತರ ಅಧಿಕಾರಿಗಳು ಸಾವಿನ ಸಂಖ್ಯೆ 15 ಕ್ಕೆ ಏರಿದೆ ಎಂದು ದೃಢಪಡಿಸಿದರು. ಎಲ್ಲಾ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಪಾವ್ಲೋಹ್ರಾದ್ ಜಿಲ್ಲೆಯ ಡಿಟಿಇಕೆ ಕಲ್ಲಿದ್ದಲು ಸ್ಥಾವರದ ಬಳಿ ಈ ದಾಳಿ ನಡೆದಿದೆ. ಬಸ್ ಗಣಿಗಾರರನ್ನು ತಮ್ಮ ಕರ್ತವ್ಯಕ್ಕೆ ಕರೆದೊಯ್ಯುತ್ತಿತ್ತು.ಆಗ ದಾಳಿ ನಡೆದಿದೆ. ಉಕ್ರೇನಿಯನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಕೂಡ ದಾಳಿಯ ಬಗ್ಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಡ್ನಿಪ್ರೊ ಪ್ರದೇಶದ ಟೆರ್ನಿವ್ಕಾ ಪ್ರದೇಶದಲ್ಲಿ ನಾಗರಿಕರನ್ನು ಸಾಗಿಸುತ್ತಿದ್ದ ಬಸ್ ಮೇಲೆ ರಷ್ಯಾದ ಡ್ರೋನ್ ಡಿಕ್ಕಿ ಹೊಡೆದು ಅನೇಕ ಅಮಾಯಕರು ಸಾವನ್ನಪ್ಪಿದ್ದಾರೆ ಎಂದು ಅವರು ಹೇಳಿದ್ದಾರೆ.

ಈ ದುರಂತ ಘಟನೆಯ ಮಧ್ಯೆ, ಅಧ್ಯಕ್ಷ ಝೆಲೆನ್ಸ್ಕಿ ರಷ್ಯಾ-ಉಕ್ರೇನ್ ಯುದ್ಧವನ್ನು ಕೊನೆಗೊಳಿಸಲು ನಡೆಯುತ್ತಿರುವ ರಾಜತಾಂತ್ರಿಕ ಪ್ರಯತ್ನಗಳ ಕುರಿತು ಮಾಹಿತಿ ನೀಡಿದ್ದಾರೆ. ಉಕ್ರೇನ್, ರಷ್ಯಾ ಮತ್ತು ಯುನೈಟೆಡ್ ಸ್ಟೇಟ್ಸ್ ನಡುವಿನ ಮುಂದಿನ ತ್ರಿಪಕ್ಷೀಯ ಸಭೆ ಫೆಬ್ರವರಿ 4 ಮತ್ತು 5 ರಂದು ಅಬುಧಾಬಿಯಲ್ಲಿ ನಡೆಯಲಿದೆ ಎಂದು ಅವರು ಘೋಷಿಸಿದರು.

ಮತ್ತಷ್ಟು ಓದಿ: ಉಕ್ರೇನ್​​ ಮೇಲಿನ ಯುದ್ಧಕ್ಕೆ ಭಾರತ-ಚೀನಾ ಮುಖ್ಯ ಹೂಡಿಕೆದಾರರು; ವಿಶ್ವಸಂಸ್ಥೆಯಲ್ಲಿ ಮತ್ತೆ ಹಳೇ ರಾಗ ಹಾಡಿದ ಟ್ರಂಪ್

ಉಕ್ರೇನ್ ಅರ್ಥಪೂರ್ಣ ಮಾತುಕತೆಗಳಿಗೆ ಸಂಪೂರ್ಣವಾಗಿ ಸಿದ್ಧವಾಗಿದೆ , ಈ ದಾಳಿಯು ಮತ್ತೊಮ್ಮೆ ಈ ಯುದ್ಧದಲ್ಲಿ ನಾಗರಿಕರ ಸುರಕ್ಷತೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕುತ್ತದೆ ಮತ್ತು ಶಾಂತಿ ಪ್ರಯತ್ನಗಳ ಅಗತ್ಯವು ಎಂದಿಗಿಂತಲೂ ಹೆಚ್ಚಾಗಿದೆ ಎಂದು ಅಂತಾರಾಷ್ಟ್ರೀಯ ಸಮುದಾಯಕ್ಕೆ ನೆನಪಿಸುತ್ತದೆ.

ರಷ್ಯಾ ತನ್ನ ನೆರೆಯವರ ಮೇಲೆ ನಡೆಸಿದ ಸಂಪೂರ್ಣ ಆಕ್ರಮಣವನ್ನು ಕೊನೆಗೊಳಿಸುವ ಗುರಿಯನ್ನು ಹೊಂದಿರುವ ಮಾತುಕತೆಗಳನ್ನು ಮುಂದುವರಿಸಲು ರಷ್ಯಾ, ಉಕ್ರೇನ್ ಮತ್ತು ಅಮೆರಿಕದ ರಾಯಭಾರಿಗಳು ಅಬುಧಾಬಿಯಲ್ಲಿ ಭೇಟಿಯಾಗುವ ನಿರೀಕ್ಷೆಯಿತ್ತು. ಝೆಲೆನ್ಸ್ಕಿ ಮುಂದಿನ ವಾರ ಅವು ನಡೆಯುವುದಾಗಿ ಘೋಷಿಸಿದರು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

Horoscope Today 02 February​: ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ

ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು 02 ಫೆಬ್ರುವರಿ​ 2026 ರ ದ್ವಾದಶ ರಾಶಿಗಳ ಫಲಾಫಲವನ್ನು ಪ್ರಸ್ತುತಪಡಿಸಿದ್ದಾರೆ. ಈ ದಿನ ಸೋಮವಾರವಾಗಿದ್ದು, ವಿಶ್ವಾಸು ನಾಮ ಸಂವತ್ಸರ, ಆಶ್ಲೇಷ ನಕ್ಷತ್ರ ಮತ್ತು ಆಯುಷ್ಮಾನ್ ಯೋಗವಿರುತ್ತದೆ. ರವಿ ಮಕರ ರಾಶಿಯಲ್ಲೂ, ಚಂದ್ರ ಕಟಕ ರಾಶಿಯ ಆಶ್ಲೇಷ ನಕ್ಷತ್ರದಲ್ಲೂ ಸಂಚಾರ ಮಾಡಲಿದ್ದಾರೆ. ರಾಹುಕಾಲ ಬೆಳಿಗ್ಗೆ 8:11 ರಿಂದ 9:38 ರವರೆಗೆ ಇರುತ್ತದೆ. ಸರ್ವಸಿದ್ಧಿ, ಸಂಕಲ್ಪ ಹಾಗೂ ಶುಭಕಾಲ ಬೆಳಿಗ್ಗೆ 9:39 ರಿಂದ 11:06 ರವರೆಗೆ ಇರುತ್ತದೆ.

ಮೇಷ ರಾಶಿಯವರಿಗೆ ಆರು ಗ್ರಹಗಳ ಶುಭಫಲವಿದ್ದು, ಆರ್ಥಿಕವಾಗಿ ಹಾಗೂ ಕೆಲಸ ಕಾರ್ಯಗಳಲ್ಲಿ ಉತ್ತಮ ಪ್ರಗತಿ ಕಾಣುವರು. ವೃಷಭ ರಾಶಿಯವರಿಗೆ ಐದು ಗ್ರಹಗಳ ಶುಭಫಲದಿಂದ ಪ್ರಯತ್ನಕ್ಕೆ ತಕ್ಕ ಫಲ ಸಿಗಲಿದೆ. ಮಿಥುನ ರಾಶಿಯವರಿಗೆ ನಾಲ್ಕು ಗ್ರಹಗಳ ಶುಭಫಲವಿದ್ದು, ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆ ಅಗತ್ಯ. ಕಟಕ ರಾಶಿಯವರಿಗೆ ಚಂದ್ರನ ಸಂಚಾರದಿಂದ ಐದು ಗ್ರಹಗಳ ಶುಭಫಲವಿದ್ದು, ರಾಜಕೀಯವಾಗಿ ಮತ್ತು ವೃತ್ತಿಪರ ಕ್ಷೇತ್ರದಲ್ಲಿ ಪ್ರಗತಿ ಇದೆ ಎಂದು ಬಸವರಾಜ ಗುರೂಜಿ ಹೇಳಿದ್ದಾರೆ.

 

Source link

IND vs PAK: ಪಾಕಿಸ್ತಾನದ ಬಹಿಷ್ಕಾರದಿಂದ ಭಾರತಕ್ಕೆ ಸಿಗುವ ಅಂಕ ಎಷ್ಟು? – Kannada News | Pakistan Boycott: How many points will India get?

ಟಿ20 ವಿಶ್ವಕಪ್​ನಲ್ಲಿನ ಭಾರತದ ವಿರುದ್ಧದ ಪಂದ್ಯವನ್ನು ಬಹಿಷ್ಕರಿಸಲು ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ನಿರ್ಧರಿಸಿದೆ. ಅದರಂತೆ ಫೆಬ್ರವರಿ 15 ರಂದು ನಡೆಯಬೇಕಿರುವ ಭಾರತ ಮತ್ತು ಪಾಕಿಸ್ತಾನ್ ಪಂದ್ಯವು ಜರುಗುವುದು ಅನುಮಾನ. ಒಂದು ವೇಳೆ ಪಂದ್ಯ ನಡೆಯದೇ ಇದ್ದರೆ ಭಾರತಕ್ಕೆ ಸಿಗುವ ಅಂಕ ಎಷ್ಟು ಎಂಬ ಪ್ರಶ್ನೆ ಮೂಡುವುದು ಸಹಜ.

ಸಾಮಾನ್ಯವಾಗಿ ಪಂದ್ಯ ರದ್ದಾದರೆ ಉಭಯ ತಂಡಗಳು ತಲಾ 2 ಅಂಕಗಳನ್ನು ಹಂಚಿಕೊಳ್ಳುತ್ತವೆ. ಇದೀಗ ಪಾಕಿಸ್ತಾನ್ ಪಂದ್ಯವನ್ನು ಬಹಿಷ್ಕರಿಸುವುದರಿಂದ ಅಂಕಗಳನ್ನು ಹಂಚಿಕೊಳ್ಳಲಾಗುತ್ತದೆಯೇ ಎಂಬುದೇ ಪ್ರಶ್ನೆ.

ಈ ಪ್ರಶ್ನೆಗೆ ಉತ್ತರ ಇಲ್ಲ. ಪಾಕಿಸ್ತಾನ್ ತಂಡವು ಪಂದ್ಯವನ್ನು ಬಾಯ್ಕಾಟ್ ಮಾಡುತ್ತಿರುವುದರಿಂದ ಅವರಿಗೆ ಯಾವುದೇ ಅಂಕ ಸಿಗುವುದಿಲ್ಲ. ಇತ್ತ ಟೀಮ್ ಇಂಡಿಯಾ ಪಂದ್ಯವಾಡಲು ಸಿದ್ಧವಾಗಿರುವುದರಿಂದ ಸಂಪೂರ್ಣ ಅಂಕಗಳನ್ನು ಪಡೆಯಲಿದೆ.

ಅಂದರೆ ಗೆಲುವಿಗೆ ನೀಡಲಾಗುವ ಸಂಪೂರ್ಣ ಅಂಕವನ್ನು ಟೀಮ್ ಇಂಡಿಯಾ ಪಡೆಯಲಿದೆ. ಟಿ20 ವಿಶ್ವಕಪ್​ನಲ್ಲಿ ಒಂದು ಗೆಲುವಿಗೆ 2 ಅಂಕಗಳನ್ನು ನೀಡಲಾಗುತ್ತದೆ. ಅಂದರಂತೆ ಪಾಕಿಸ್ತಾನ್ ತಂಡವು ಪಂದ್ಯವನ್ನು ಬಹಿಷ್ಕರಿಸಿದರೆ ಟೀಮ್ ಇಂಡಿಯಾ 2 ಅಂಕಗಳನ್ನು ಪಡೆಯಲಿದೆ.

ಅತ್ತ ಪಂದ್ಯದಿಂದ ಹಿಂದೆ ಸರಿಯುವ ಕಾರಣ ಪಾಕಿಸ್ತಾನ್ ತಂಡಕ್ಕೆ ಯಾವುದೇ ಅಂಕ ಸಿಗುವುದಿಲ್ಲ. ಇದರಿಂದ ಪಾಕಿಸ್ತಾನ್ ತಂಡದ ನೆಟ್ ರನ್ ರೇಟ್ ಮೇಲೆ ನೇರ ಪರಿಣಾಮ ಬೀರಲಿದೆ.

ಪಾಕಿಸ್ತಾನ್ ಪಂದ್ಯವನ್ನು ಬಹಿಷ್ಕರಿಸುತ್ತಿರುವುದೇಕೆ?

ಟಿ20 ವಿಶ್ವಕಪ್​ನಿಂದ ಬಾಂಗ್ಲಾದೇಶ್ ತಂಡವನ್ನು ಕೈ ಬಿಟ್ಟಿರುವುದನ್ನು ಖಂಡಿಸಲು ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ಭಾರತದ ವಿರುದ್ಧದ ಪಂದ್ಯವನ್ನು ಬಹಿಷ್ಕರಿಸಲು ನಿರ್ಧರಿಸಿದೆ. ಆಟಗಾರರ ಸುರಕ್ಷತೆಯ ದೃಷ್ಟಿಯಿಂದ ಬಾಂಗ್ಲಾದೇಶ್ ತಂಡದ ಪಂದ್ಯಗಳನ್ನು ಭಾರತದಿಂದ ಶ್ರೀಂಕಾಗೆ ಸ್ಥಳಾಂತರ ಮಾಡಬೇಕೆಂದು ಬಾಂಗ್ಲಾದೇಶ್ ಕ್ರಿಕೆಟ್ ಬೋರ್ಡ್ ಆಗ್ರಹಿಸಿತ್ತು.

ಆದರೆ ಬಾಂಗ್ಲಾದೇಶ್ ಕ್ರಿಕೆಟ್ ಬೋರ್ಡ್​ನ ಈ ಮನವಿಯನ್ನು ಐಸಿಸಿ ತಿರಸ್ಕರಿಸಿತ್ತು. ಅಲ್ಲದೆ ಬಾಂಗ್ಲಾ ತಂಡವು ಭಾರತದಲ್ಲೇ ಆಡಬೇಕೆಂದು ಸೂಚಿಸಿದ್ದರು. ಐಸಿಸಿಯ ಈ ಸೂಚನೆಯನ್ನು ತಿರಸ್ಕರಿಸಿದ್ದರಿಂದ ಬಾಂಗ್ಲಾದೇಶ್ ತಂಡವನ್ನು ಟಿ20 ವಿಶ್ವಕಪ್​ನಿಂದ ಕೈ ಬಿಡಲಾಯಿತು.

ಇತ್ತ ಬಾಂಗ್ಲಾದೇಶ್ ತಂಡವನ್ನು ಕೈ ಬಿಟ್ಟಿರುವ ಐಸಿಸಿ ಹಾಗೂ ಬಿಸಿಸಿಐ ಕ್ರಮವನ್ನು ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ಖಂಡಿಸಿದೆ. ಇದೇ ಕಾರಣಕ್ಕೆ ಭಾರತದ ವಿರುದ್ಧದ ಪಂದ್ಯವನ್ನು ಬಹಿಷ್ಕರಿಸಲು ನಿರ್ಧರಿಸಿದೆ.

ಇದನ್ನೂ ಓದಿ: ಫೈನಲ್​ನಲ್ಲಿ RCB ತಂಡದ ಎದುರಾಳಿ ಯಾರು?

ಹೀಗಾಗಿ ಫೆಬ್ರವರಿ 15 ಕ್ಕೆ ನಿಗದಿಯಾಗಿರುವ ಭಾರತ ಮತ್ತು ಪಾಕಿಸ್ತಾನ್ ನಡುವಣ ಪಂದ್ಯ ನಡೆಯುವುದು ಅನುಮಾನ. ಇದಾಗ್ಯೂ ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್​ನ ಮನವೊಲಿಸಲು ಐಸಿಸಿ ಯಶಸ್ವಿಯಾಗಲಿದೆಯಾ ಕಾದು ನೋಡಬೇಕಿದೆ.

Source link

Jammu and Kashmir Earthquake: ಜಮ್ಮು ಮತ್ತು ಕಾಶ್ಮೀರದಲ್ಲಿ 4.8 ತೀವ್ರತೆಯ ಭೂಕಂಪ – Kannada News | Moderate Earthquake 4.8 Shakes Jammu and Kashmir, Epicentre in Budgam

ಶ್ರೀನಗರ, ಫೆಬ್ರವರಿ 02: ಕಳೆದ ಕೆಲವು ದಿನಗಳಿಂದ ದೇಶದ ವಿವಿಧ ಭಾಗಗಳಲ್ಲಿ ಭೂಕಂಪ(Earthquake)ದ ಅನುಭವವಾಗುತ್ತಿದ್ದು, ಭೂಕಂಪದ ಭೀತಿ ಹೆಚ್ಚಾಗಿದೆ. ಸೋಮವಾರ ಬೆಳಗ್ಗೆ ಭೂಕಂಪನದ ಅನುಭವವಾಗಿದೆ, ಕಣಿವೆ ಪ್ರದೇಶದಲ್ಲಿ 4.8 ತೀವ್ರತೆಯ ಭೂಕಂಪ ಸಂಭವಿಸಿದೆ. ಇಂದು ಮುಂಜಾನೆ ಕಾಶ್ಮೀರ ಕಣಿವೆಯಲ್ಲಿ ಭೂಮಿ ಕಂಪಿಸಿದ ಅನುಭವವಾದ ಕಾರಣ ಬಾರಾಮುಲ್ಲಾದ ಜನರು ತಮ್ಮ ಮನೆಗಳಿಂದ ಹೊರಗೆ ಓಡಿಬಂದಿದ್ದರು. ಇಲ್ಲಿಯವರೆಗೆ ಯಾವುದೇ ಹಾನಿ ಸಂಭವಿಸಿದ ವರದಿಗಳು ಲಭ್ಯವಾಗಿಲ್ಲ.

ಸೋಮವಾರ ಬೆಳಗಿನ ಜಾವ ಜಮ್ಮು ಮತ್ತು ಕಾಶ್ಮೀರದಲ್ಲಿ ಸಂಭವಿಸಿದ ಭೂಕಂಪದ ತೀವ್ರತೆ ರಿಕ್ಟರ್ ಮಾಪಕದಲ್ಲಿ 4.8 ರಷ್ಟಿತ್ತು. ಫೆಬ್ರವರಿ 2, 2026 ರಂದು ಬೆಳಗ್ಗೆ 5.35 ಕ್ಕೆ ಭೂಕಂಪ ಸಂಭವಿಸಿದೆ. ರಾಜ್ಯದ ಹಂಜಿವೇರಾ ಪ್ರದೇಶದಲ್ಲಿ 10 ಕಿಲೋಮೀಟರ್ ಆಳದಲ್ಲಿ ಭೂಕಂಪದ ಕೇಂದ್ರಬಿಂದು ಇತ್ತು. ಇಲ್ಲಿಯವರೆಗೆ ಯಾವುದೇ ಸಾವುನೋವು ಅಥವಾ ಆಸ್ತಿ ಹಾನಿ ವರದಿಯಾಗಿಲ್ಲ.

ಜಮ್ಮು ಮತ್ತು ಕಾಶ್ಮೀರದಲ್ಲಿ ತೀವ್ರ ಚಳಿ ಇದೆ. ಇದರ ಜೊತೆಗೆ, ಅನೇಕ ಪ್ರದೇಶಗಳಲ್ಲಿ ಭಾರೀ ಹಿಮಪಾತವಾಗುತ್ತಿದೆ. ಈ ಭೂಕಂಪವು ನಿವಾಸಿಗಳಲ್ಲಿ ತೊಂದರೆಯನ್ನುಂಟುಮಾಡಿದೆ, ಜನರು ಬೆಳಗ್ಗೆ ಚಳಿಯಲ್ಲಿ ತಮ್ಮ ಮನೆಗಳನ್ನು ಬಿಡಬೇಕಾಯಿತು.

ಸೋಮವಾರ ಮುಂಜಾನೆ ನೆರೆಯ ಬಾಂಗ್ಲಾದೇಶದಲ್ಲಿ ಕಂಪನದ ಅನುಭವವಾಗಿತ್ತು. ಭಾನುವಾರ ಬೆಳಗಿನ ಜಾವ 4 ಗಂಟೆ ಸುಮಾರಿಗೆ ಭೂಕಂಪನವು ಭೂಮಿಯನ್ನು ನಡುಗಿಸಿತು. ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (NCS) ಪ್ರಕಾರ, ಭೂಕಂಪವು 20 ಕಿಲೋಮೀಟರ್ ಆಳದಲ್ಲಿ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 3.0 ತೀವ್ರತೆ ದಾಖಲಾಗಿದೆ. ಫಿಲಿಪೈನ್ಸ್‌ನ ಮಿಂಡಾನಾವೊ ದ್ವೀಪದಲ್ಲಿ ಬುಧವಾರ ಪ್ರಬಲ ಭೂಕಂಪದ ವರದಿಯಾಗಿದ್ದು, ರಿಕ್ಟರ್ ಮಾಪಕದಲ್ಲಿ 6.0 ತೀವ್ರತೆ ದಾಖಲಾಗಿದೆ.

ಮತ್ತಷ್ಟು ಓದಿ: Assam Earthquake: ಅಸ್ಸಾಂನಲ್ಲಿ 5.1 ತೀವ್ರತೆಯ ಪ್ರಬಲ ಭೂಕಂಪ

ಭೂಮಿಯ ಹೊರಪದರವನ್ನು ರೂಪಿಸುವ ಏಳು ಪ್ರಮುಖ ಟೆಕ್ಟೋನಿಕ್ ಪ್ಲೇಟ್‌ಗಳ ಚಲನೆಯಿಂದಾಗಿ ಭೂಕಂಪಗಳು ಸಂಭವಿಸುತ್ತವೆ. ಈ ಪ್ಲೇಟ್‌ಗಳು ಆಯಾ ವಲಯಗಳಲ್ಲಿ ತೇಲುತ್ತಲೇ ಇರುತ್ತವೆ.
ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರದ ಪ್ರಕಾರ, ಸೋಮವಾರ ಬೆಳಗ್ಗೆ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಮತ್ತೊಂದು ಭೂಕಂಪ ಸಂಭವಿಸಿದೆ. ಬೆಳಗಿನ ಜಾವ 3.31 ಕ್ಕೆ ಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 4.6 ತೀವ್ರತೆ ದಾಖಲಾಗಿದೆ. ಭೂಕಂಪದ ಕೇಂದ್ರಬಿಂದು ನಿಕೋಬಾರ್ ಪ್ರದೇಶದಲ್ಲಿ 10 ಕಿಲೋಮೀಟರ್ ಆಳದಲ್ಲಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On – 7:37 am, Mon, 2 February 26

Source link

ಬೆಂಗಳೂರಿನಲ್ಲಿ 18 ಕೋಟಿ ರೂ. ಮೌಲ್ಯದ ಚಿನ್ನಾಭರಣ ದೋಚಿದ ನೇಪಾಳಿ ದಂಪತಿ! – Kannada News | Bengaluru’s Rs 18 Crore Gold Heist: Nepali Couple Used Fake IDs as Domestic Help

ಬೆಂಗಳೂರಿನಲ್ಲಿ 18 ಕೋಟಿ ರೂ. ಮೌಲ್ಯದ ಚಿನ್ನಾಭರಣ ದೋಚಿದ ನೇಪಾಳಿ ದಂಪತಿ!

ಬೆಂಗಳೂರು, ಫೆಬ್ರುವರಿ 02: ಬೆಂಗಳೂರಿನಲ್ಲಿ (Bengaluru) ಇತ್ತೀಚಿಗೆ ಬರೋಬ್ಬರಿ 18 ಕೋಟಿ ರೂ. ಮೌಲ್ಯದ ಚಿನ್ನಾಭರಣ ಕಳ್ಳತನದ ಪ್ರಕರಣದಲ್ಲಿ ಮಾರತ್ ಹಳ್ಳಿ ಪೊಲೀಸರು ಚುರುಕಿನ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಮನೆಕೆಲಸದ ಹೆಸರಿನಲ್ಲಿ ವಿಶ್ವಾಸ ಗಳಿಸಿ ಸುಮಾರು ಬಂಗಾರ ದೋಚುತ್ತಿದ್ದ ಆರೋಪಿಗಳು ನೇಪಾಳಿ ದಂಪತಿ ಎಂಬುದು ತನಿಖೆಯಿಂದ ದೃಢಪಟ್ಟಿದ್ದು, ಕದೀಮರನ್ನು ಹಿಡಿಯಲು ಬಲೆ ಬೀಸಿದ್ದಾರೆ.

ಆರೋಪಿಗಳು ದಿನೇಶ್ ಹಾಗೂ ಕಮಲ ಅಥವಾ ಸಲೀನಾ ಎಂಬ ನಕಲಿ ಹೆಸರುಗಳನ್ನು ಬಳಸಿಕೊಂಡು ಮನೆಕೆಲಸಕ್ಕೆ ಸೇರಿ ಕಳ್ಳತನ ನಡೆಸುತ್ತಿದ್ದರೆಂದು ಪೊಲೀಸರು ತಿಳಿಸಿದ್ದಾರೆ. ಈ ದಂಪತಿ ದೇಶದ ಅನೇಕ ಭಾಗಗಳಲ್ಲಿ ಇದೇ ರೀತಿಯ ಕೃತ್ಯಗಳನ್ನು ನಡೆಸಿರುವ ಶಂಕೆ ವ್ಯಕ್ತವಾಗಿದೆ. 2025ರ ಅಕ್ಟೋಬರ್‌ನಲ್ಲಿ ಮಹಾರಾಷ್ಟ್ರದಲ್ಲಿ ನಿವೃತ್ತ ಸರ್ಕಾರಿ ಅಧಿಕಾರಿಯ ಮನೆಯಲ್ಲಿ 16 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿದ್ದರೆಂದು ಕಾರ್ಯಾಚರಣೆ ವೇಳೆ ತಿಳಿದುಬಂದಿದೆ.

ಈ ಹಿಂದೆಯೂ ವಿವಿಧೆಡೆ ಕಳ್ಳತನ ಮಾಡಿದ್ದ ಜೋಡಿ

ಪುಣೆಯ ಭಾವ್ಧಾನ್ ಪ್ರದೇಶದ ವಿಂಡ್ಮಿಲ್ ಸೊಸೈಟಿಯ ರತ್ನಾದೀಪ್ ರಂಗನಾಥ್ ರಾವ್ ಅವರ ಮನೆಯಲ್ಲಿ ಕೆಲಸಕ್ಕೆ ಸೇರಿ ಸುಮಾರು ಆರು ತಿಂಗಳ ಬಳಿಕ, ಮನೆಯಲ್ಲಿ ಯಾರೂ ಇಲ್ಲದ ವೇಳೆ ಲಾಕರ್ ಒಡೆದು ಕಳ್ಳತನ ಮಾಡಿ ಆರೋಪಿಗಳು ಪರಾರಿಯಾಗಿದ್ದರು. ನಂತರ ದಿನೇಶ್ ಹಾಗೂ ಸಲೀನಾ ಎಂಬ ಹೆಸರಿನಲ್ಲಿ ಮನೆ ಕೆಲಸಕ್ಕೆ ಸೇರಿ ಬೆಂಗಳೂರಿನಲ್ಲಿ 18 ಕೋಟಿ ರೂ. ಮೌಲ್ಯದ ಚಿನ್ನಾಭರಣ ದೋಚಿದ್ದಾರೆಂದು ತಿಳಿದು ಬಂದಿದೆ.

ಈ ಪ್ರಕರಣದ ಬೆನ್ನತ್ತಿರುವ ಮಾರತ್ ಹಳ್ಳಿ ಪೊಲೀಸರು ಸುಮಾರು ಏಳು ವಿಶೇಷ ತಂಡಗಳನ್ನು ರಚಿಸಿ ಮುಂಬೈ, ಕೊಲ್ಕತ್ತಾ ಹಾಗೂ ನೇಪಾಳ ಸೇರಿ ಹಲವು ಕಡೆಗಳಲ್ಲಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ಆರೋಪಿಗಳು ನೇಪಾಳಕ್ಕೆ ಪರಾರಿಯಾಗಿದ್ದರೆ ಅವರನ್ನು ಪತ್ತೆಹಚ್ಚುವುದು ಕಷ್ಟವಾಗಲಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಜೊತೆಗೆ ಸ್ಥಳೀಯವಾಗಿ ಯಾರಾದರೂ ಆರೋಪಿಗಳಿಗೆ ಸಹಾಯ ಮಾಡಿದ್ದಾರೆಯೇ ಎಂಬುದರ ಕುರಿತಾದ ತನಿಖೆಯೂ ಮುಂದುವರಿದಿದೆ ಎಂದು ತಿಳಿಸಲಾಗಿದೆ.

ವರದಿ: ಪ್ರದೀಪ್ ಚಿಕ್ಕಾಟಿ, ಟಿವಿ9 ಬೆಂಗಳೂರು

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಸೋತು ಸುಣ್ಣವಾಗಿರೋ ನಿರ್ದೇಶಕನ ಜೊತೆ ಕೈ ಜೋಡಿಸಿದ ರಣವೀರ್ ಸಿಂಗ್? – Kannada News | Ranveer Singh Joins Shankar’s Velpari: Bollywood Star in Pan India Historical Epic with Vikram

ರಣವೀರ್ ಸಿಂಗ್ ನಟನೆಯ ‘ಧುರಂಧರ್’ (Dhurandhar) ಬಾಲಿವುಡ್ ಬಾಕ್ಸ್ ಆಫೀಸ್‌ನಲ್ಲಿ ದಾಖಲೆಗಳನ್ನು ಮುರಿಯುತ್ತಲೇ ಇದೆ. ಸಾವಿರ ಕೋಟಿಗೂ ಹೆಚ್ಚು ಕಲೆಕ್ಷನ್ ಮಾಡಿರುವ ಈ ಚಿತ್ರ ಪ್ರೇಕ್ಷಕರನ್ನು ಮೋಡಿ ಮಾಡಿದೆ. ಚಿತ್ರಮಂದಿರಗಳಲ್ಲಿ ಸಂಚಲನ ಮೂಡಿಸಿರುವ ಈ ಚಿತ್ರ ಶುಕ್ರವಾರದಿಂದ ನೆಟ್‌ಫ್ಲಿಕ್ಸ್ ಒಟಿಟಿಯಲ್ಲಿ ಸ್ಟ್ರೀಮಿಂಗ್ ಆಗುತ್ತಿದೆ. ಅಲ್ಲಿಯೂ ಸಿನಿಮಾ ಮೆಚ್ಚುಗೆ ಪಡೆದಿದೆ. ಈಗ ರಣವೀರ್ ಸಿಂಗ್ ಅವರು ದಕ್ಷಿಣದ ನಿರ್ದೇಶಕನ ಜೊತೆ ಕೈ ಜೋಡಿಸುತ್ತಿದ್ದಾರೆ ಎಂದು ವರದಿ ಆಗಿದೆ. ಅದು ಕೂಡ ಸತತ ಸೋಲು ಕಂಡ ನಿರ್ದೇಶಕ.

ಐದು ವರ್ಷಗಳ ಹಿಂದೆಯೇ ರಣವೀರ್ ಸಿಂಗ್ ಹಾಗೂ ಶಂಕರ್ ಸಿನಿಮಾ ಮಾಡಬೇಕಿತ್ತು. ಆದರೆ ಕೆಲವು ಕಾರಣಗಳಿಂದಾಗಿ ಅದು ಮುಂದೂಡಲ್ಪಡುತ್ತಲೇ ಇತ್ತು. ಆದರೆ ಈಗ ಶಂಕರ್ ಅವರು ರಣವೀರ್ ಸಿಂಗ್ ಜೊತೆ ಕನಸಿನ ಯೋಜನೆಯನ್ನು ಕೈಗೆತ್ತಿಕೊಳ್ಳಲು ಸಿದ್ಧರಾಗಿದ್ದಾರೆ ಎನ್ನಲಾಗಿದೆ. ಕಾಲಿವುಡ್‌ನಿಂದ ಕೇಳಿಬರುತ್ತಿರುವ ಮಾಹಿತಿಯ ಪ್ರಕಾರ, ದಕ್ಷಿಣ ಭಾರತದ ಬಹುಮುಖ ನಟ ವಿಕ್ರಮ್ ಕೂಡ ಈ ಚಿತ್ರದಲ್ಲಿ ಪ್ರಮುಖ ಪಾತ್ರ ವಹಿಸಲಿದ್ದಾರೆ. ಈ ಚಿತ್ರದೊಂದಿಗೆ ಶಂಕರ್ ತಮ್ಮ ಹಳೆಯ ಫಾರ್ಮ್ ಅನ್ನು ಮರಳಿ ಪಡೆಯುತ್ತಾರೆಯೇ ಎಂಬುದು ಸದ್ಯದ ಪ್ರಶ್ನೆ?

‘ವೀರ ಯುಗ ನಾಯಗನ್ ವೇಲ್ಪರಿ’ ಎಂಬ ಐತಿಹಾಸಿಕ ಕಾದಂಬರಿಯನ್ನು ಬೆಳ್ಳಿತೆರೆಗೆ ತರುವ ಪ್ರಯತ್ನದಲ್ಲಿ ನಿರ್ದೇಶಕ ಶಂಕರ್ ಬಹಳ ಸಮಯದಿಂದ ಇದ್ದಾರೆ. ಇದು ಅವರ ಕನಸಿನ ಯೋಜನೆ. ತಮಿಳುನಾಡಿನ ಇತಿಹಾಸದಲ್ಲಿ ತಮ್ಮ ಮಹಾನ್ ಔದಾರ್ಯ ಮತ್ತು ಅಪ್ರತಿಮ ಧೈರ್ಯಕ್ಕೆ ಹೆಸರುವಾಸಿಯಾದ ವೇಲ್ಪರಿ ರಾಜು ಅವರ ಕಥೆ ಇದು. ಶಂಕರ್ ಈ ಕಥೆಯನ್ನು ಇಬ್ಬರು ನಾಯಕರನ್ನು ಹೊಂದಿರುವ ಬಹುತಾರಾಗಣ ಚಿತ್ರವನ್ನಾಗಿ ಪರಿವರ್ತಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಕಾಲಿವುಡ್ ಮಾಹಿತಿಯ ಪ್ರಕಾರ, ರಣವೀರ್ ಸಿಂಗ್ ಮತ್ತು ಚಿಯಾನ್ ವಿಕ್ರಮ್ ಈ ಚಿತ್ರದಲ್ಲಿ ನಾಯಕನಾಗಿ ನಟಿಸಲಿದ್ದಾರಂತೆ. ಪೆನ್ ಮೀಡಿಯಾ ಈ ಬೃಹತ್ ಚಿತ್ರವನ್ನು ನಿರ್ಮಿಸಲು ಮುಂದೆ ಬಂದಿದೆ.

ಐದು ವರ್ಷಗಳ ಹಿಂದೆ, ಶಂಕರ್ ‘ಅಪರಿಚಿತುಡು’ ಚಿತ್ರವನ್ನು ಹಿಂದಿಯಲ್ಲಿ ರಣವೀರ್ ಸಿಂಗ್ ಅವರ ಜೊತೆ ರಿಮೇಕ್ ಮಾಡುವುದಾಗಿ ಘೋಷಿಸಿದರು. ಆದರೆ ಕೆಲವು ಕಾರಣಗಳಿಂದಾಗಿ, ಯೋಜನೆ ಮುಂದುವರಿಯಲಿಲ್ಲ. ಇದಕ್ಕೂ ಮೊದಲು, ಶಂಕರ್ ಅವರ ‘ಇಂಡಿಯನ್ 2’ ಮತ್ತು ‘ಗೇಮ್ ಚೇಂಜರ್’ ಬಾಕ್ಸ್ ಆಫೀಸ್‌ನಲ್ಲಿ ನಿರೀಕ್ಷಿತ ಫಲಿತಾಂಶಗಳನ್ನು ನೀಡಲಿಲ್ಲ. ಇದರೊಂದಿಗೆ, ಶಂಕರ್ ತಮ್ಮ ಹಿಂದಿನ ವೈಭವವನ್ನು ತೋರಿಸಲು ಈ ‘ವೆಲ್ಪಾರಿ’ ಕಥೆಯನ್ನು ನಂಬಿದ್ದರು. ರಣವೀರ್ ಸಿಂಗ್ ಅವರ ಪ್ಯಾನ್ ಇಂಡಿಯಾ ಇಮೇಜ್ ಈ ಚಿತ್ರಕ್ಕೆ ದೊಡ್ಡ ಪ್ಲಸ್ ಪಾಯಿಂಟ್ ಆಗಲಿದೆ ಎಂದು ಅವರು ಭಾವಿಸುತ್ತಾರೆ.

ಇದನ್ನೂ ಓದಿ: ‘ಧುರಂಧರ್’ ಗೆಲುವಿನ ಖುಷಿಯಲ್ಲಿರೋ ರಣವೀರ್​​​ಗೆ ಶಾಕ್ ಕೊಟ್ಟ ಬೆಂಗಳೂರು ಪೊಲೀಸರು

ತಮಿಳು ಸಂಸ್ಕೃತಿ ಮತ್ತು ಪದ್ಧತಿಗಳಿಗೆ ಬಹಳ ಹತ್ತಿರವಿರುವ ವೇಲ್ಪಾರಿಯ ಕಥೆಯನ್ನು ಬಾಲಿವುಡ್ ನಾಯಕನೊಂದಿಗೆ ಮಾಡುವ ಬಗ್ಗೆಯೂ ಕೆಲವು ಅನುಮಾನಗಳಿವೆ. ಮಣಿರತ್ನಂ ಅವರ ಹಿಂದಿನ ಚಿತ್ರ ‘ಪೊನ್ನಿಯಿನ್ ಸೆಲ್ವನ್’ ತಮಿಳಿನಲ್ಲಿ ಭಾರಿ ಯಶಸ್ಸನ್ನು ಕಂಡಿತು. ಆದರೆ ನೇಟಿವಿಟಿ ಸಮಸ್ಯೆಯಿಂದಾಗಿ ತೆಲುಗು ಮತ್ತು ಇತರ ಭಾಷೆಗಳಲ್ಲಿ ನಿರೀಕ್ಷೆಯಷ್ಟು ಪ್ರದರ್ಶನ ನೀಡಲಿಲ್ಲ. ಈಗ ಶಂಕರ್ ಕೂಡ ಅಂತಹ ಐತಿಹಾಸಿಕ ಕಥೆಯನ್ನು ಆಯ್ಕೆ ಮಾಡಿಕೊಂಡಿರುವುದರಿಂದ, ಅದು ಎಲ್ಲರಿಗೂ ಇಷ್ಟ ಆಗುತ್ತದೆಯೇ ಎಂಬುದು ಸದ್ಯದ ಪ್ರಶ್ನೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಆಡಿಯೋ ವೈರಲ್ ಪ್ರಕರಣ: ಮಾಜಿ ಸಂಸದ ಎಲ್ಆರ್ ಶಿವರಾಮೇಗೌಡಗೆ ಕಾಂಗ್ರೆಸ್‌ನಿಂದಲೂ ಗೇಟ್​ಪಾಸ್ ಸಾಧ್ಯತೆ – Kannada News | Viral Audio Row: Mandya Congress Seeks Action Against Former MP LR Shivaramegowda

ಎಲ್ಆರ್ ಶಿವರಾಮೇಗೌಡ ಹಾಗೂ ಮಂಡ್ಯ ಕಾಂಗ್ರೆಸ್​ ಘಟಕದಿಂದ ಕೆಪಿಸಿಸಿಗೆ ಬರೆದ ಪತ್ರದ ಪ್ರತಿImage Credit source: tv9

ಮಂಡ್ಯ, ಫೆಬ್ರವರಿ 2: ಮಾಜಿ ಸಂಸದ, ಕಾಂಗ್ರೆಸ್ ನಾಯಕ, ಕೆಪಿಸಿಸಿ ವಕ್ತಾರರೂ ಆಗಿರುವ ಎಲ್ಆರ್ ಶಿವರಾಮೇಗೌಡಗೆ (LR Shivaramegowda ಆಡಿಯೋ ವೈರಲ್ ಪ್ರಕರಣ ತೀವ್ರ ಸಂಕಷ್ಟ ತಂದಿದೆ. ಇತ್ತೀಚೆಗೆ ವೈರಲ್ ಆಗಿರುವ ಆಡಿಯೋ ಒಂದರಿಂದ ಕಾಂಗ್ರೆಸ್ ಪಕ್ಷಕ್ಕೆ ಮುಜುಗರ ಉಂಟಾಗಿದೆ. ಶಿವರಾಮೇಗೌಡ ವಿರುದ್ಧ ಕ್ರಮ ಕೈಗೊಳ್ಳುವಂತೆ ಮಂಡ್ಯ ಜಿಲ್ಲಾ ಕಾಂಗ್ರೆಸ್ ನಾಯಕರೇ ಒತ್ತಾಯಿಸಿದ್ದಾರೆ. ಕಾರ್ಯಕರ್ತನೊಬ್ಬನೊಂದಿಗೆ ಪೋನ್ ಕರೆ ವೇಳೆ ನಡೆದಿದ್ದ ಮಾತುಕತೆ ಎನ್ನಲಾದ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಅದರಲ್ಲಿ ನಟ ದಿ. ಅಂಬರೀಶ್, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ಮಾಜಿ ಸಂಸದ ಮಾದೇಗೌಡ ಸೇರಿದಂತೆ ಹಲವು ನಾಯಕರ ವಿರುದ್ಧ ಅವಾಚ್ಯ ಶಬ್ದಗಳನ್ನು ಬಳಸಿ ಶಿವರಾಮೇಗೌಡ ನಿಂದಿಸಿದ್ದಾರೆ ಎನ್ನಲಾಗಿದೆ. ಅಲ್ಲದೆ ಕೃಷಿ ಸಚಿವ ಚಲುವರಾಯಸ್ವಾಮಿ ವಿರುದ್ಧವೂ ನಾಲಿಗೆ ಹರಿಬಿಟ್ಟಿರುವುದು ಕಾಂಗ್ರೆಸ್ ವಲಯದಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ.

ಈ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ. ಗಂಗಾಧರ್ ಅವರು ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ. ಚಂದ್ರಶೇಖರ್ ಅವರಿಗೆ ಪತ್ರ ಬರೆದು, ಶಿವರಾಮೇಗೌಡ ವಿರುದ್ಧ ತಕ್ಷಣ ಶಿಸ್ತು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ. ಪಕ್ಷದ ನಾಯಕರ ವಿರುದ್ಧ ಅವಾಚ್ಯ ಪದ ಬಳಕೆ ಕಾಂಗ್ರೆಸ್ ಪಕ್ಷದ ಗೌರವಕ್ಕೆ ಧಕ್ಕೆಯಾಗಿದ್ದು, ಇಂತಹ ವರ್ತನೆಯನ್ನು ಸಹಿಸಲು ಸಾಧ್ಯವಿಲ್ಲ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಏತನ್ಮಧ್ಯೆ, ಆಡಿಯೋವನ್ನು ಎಐ ತಂತ್ರಜ್ಞಾನ ಬಳಸಿ ಸೃಷ್ಟಿಸಲಾಗಿದೆ. ಇದು ತನ್ನ ವಿರುದ್ಧ ಮಾಡಿರುವ ಷಡ್ಯಂತ್ರ ಎಂದು ಎಲ್.ಆರ್. ಶಿವರಾಮೇಗೌಡ ಸ್ಪಷ್ಟನೆ ನೀಡಿದ್ದಾರೆ. ಆದರೆ ಇದನ್ನು ಒಪ್ಪಲು ಮಂಡ್ಯದ ಕಾಂಗ್ರೆಸ್ ನಾಯಕರು ಸಿದ್ಧರಿಲ್ಲ. ಶಿವರಾಮೇಗೌಡ ಈ ಹಿಂದೆ ಜೆಡಿಎಸ್‌ನಲ್ಲಿದ್ದಾಗಲೂ ಇದೇ ರೀತಿಯ ಆಡಿಯೋ ವಿವಾದದ ಉಂಟಾಗಿತ್ತು. ಕೊನೆಗೆ ಎಕುಮಾರಸ್ವಾಮಿ ಅವರು ಶಿವರಾಮೇಗೌಡರನ್ನು ಪಕ್ಷದಿಂದ ಉಚ್ಚಾಟಿಸಿದ್ದರು ಎಂಬುದು ಗಮನಾರ್ಹ.

ಇದನ್ನೂ ಓದಿ: ಮಾಜಿ ಸಂಸದರೊಬ್ಬರದ್ದು ಎನ್ನಲಾದ ಆಡಿಯೋ ವೈರಲ್​​: ರಾಜಕೀಯ ರಹಸ್ಯಗಳು ಬಯಲು

ಇದೀಗ ಜೆಡಿಎಸ್ ನಂತರ ಕಾಂಗ್ರೆಸ್‌ನಲ್ಲೂ ಇದೇ ವಿವಾದ ಮರುಕಳಿಸಿರುವುದರಿಂದ, ಶಿವರಾಮೇಗೌಡರಿಗೆ ಕಾಂಗ್ರೆಸ್‌ನಿಂದಲೂ ಗೇಟ್ ಪಾಸ್ ಸಿಗುವ ಸಾಧ್ಯತೆ ಹೆಚ್ಚಾಗಿದೆ ಎನ್ನಲಾಗುತ್ತಿದೆ. ಪಕ್ಷದ ನಾಯಕರ ವಿರುದ್ಧ ಅವಾಚ್ಯ ಪದ ಬಳಕೆ ಮಾಡಿದ ಪ್ರಕರಣದಲ್ಲಿ ಕಾಂಗ್ರೆಸ್ ಯಾವ ರೀತಿಯ ಕ್ರಮ ಕೈಗೊಳ್ಳಲಿದೆ ಎಂಬುದು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬಾಲಿವುಡ್​ಗೆ ಮತ್ತೆ ಭೀತಿ ಹುಟ್ಟಿಸಿದ ಬಿಷ್ಣೋಯ್ ಗ್ಯಾಂಗ್​​ನ ಶುಭಂ ಲೋಂಕರ್ ಯಾರು? – Kannada News | Rohit Shetty Firing: Bollywood Under Bishnoi Gang Threat, Who is Shubham Lonkar

ರೋಹಿತ್ ಹಾಗೂ ಲಾರೆನ್ಸ್ Image Credit source: Indian Express

ಬಾಲಿವುಡ್ (Bollywood) ಮತ್ತೊಮ್ಮೆ ಭೂಗತ ಲೋಕ ಮತ್ತು ದರೋಡೆಕೋರರ ಭಯದಿಂದ ನಲುಗಿದೆ. ಸಲ್ಮಾನ್ ಖಾನ್ ಅವರ ಆಪ್ತ ಬಾಬಾ ಸಿದ್ದಿಕಿ ಅವರ ಹತ್ಯೆಯ ಬಳಿಕ ಜುಹುವಿನಲ್ಲಿರುವ ಪ್ರಸಿದ್ಧ ನಿರ್ದೇಶಕ ರೋಹಿತ್ ಶೆಟ್ಟಿ ನಿವಾಸದಲ್ಲಿ ನಡೆದ ಗುಂಡಿನ ದಾಳಿ ಘಟನೆ ಕೋಲಾಹಲ ಸೃಷ್ಟಿಸಿದೆ. ಈ ದಾಳಿಯ ಕೆಲವೇ ಗಂಟೆಗಳಲ್ಲಿ, ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನೊಂದಿಗೆ ಸಂಬಂಧ ಹೊಂದಿರುವ ಕುಖ್ಯಾತ ದರೋಡೆಕೋರ ಶುಭಂ ಲೋಂಕರ್ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಂಚಿಕೊಳ್ಳುವ ಮೂಲಕ ದಾಳಿಯ ಹೊಣೆಯನ್ನು ಹೊತ್ತುಕೊಂಡಿದ್ದಾರೆ.

ಈ ಪೋಸ್ಟ್ ರೋಹಿತ್ ಶೆಟ್ಟಿಗೆ ಮಾತ್ರವಲ್ಲದೆ ಇಡೀ ಬಾಲಿವುಡ್‌ಗೆ ಬೆದರಿಕೆ ಹಾಕುತ್ತದೆ. ‘ಮುಂದಿನ ಬುಲೆಟ್ ಅವರ ಮನೆಯ ಮೇಲೆಲಲ್ಲ, ಅವರ ಎದೆಗೆ ಚುಚ್ಚುತ್ತದೆ’ಎಂದು ಎಚ್ಚರಿಸಲಾಗಿದೆ. ಇದು ಸಾಕಷ್ಟು ಚರ್ಚೆಗೆ ಕಾರಣ ಆಗಿದೆ. ರೋಹಿತ್ ಶೆಟ್ಟಿ ಮನೆಯ ಹೊರಗೆ ಗುಂಡಿನ ದಾಳಿ ನಡೆದ ಸುದ್ದಿ ಬೆಳಕಿಗೆ ಬಂದಾಗ, ಆರಂಭದಲ್ಲಿ ಇದು ಕೇವಲ ಬೆದರಿಕೆ ಹಾಕುವ ಪ್ರಯತ್ನ ಎಂದು ನಂಬಲಾಗಿತ್ತು. ಆದಾಗ್ಯೂ, ಶುಭಂ ಲೋಂಕರ್ ಹೆಸರಿನಲ್ಲಿ ವೈರಲ್ ಆದ ಪೋಸ್ಟ್‌ನಲ್ಲಿ ವಿಷಯವು ತುಂಬಾ ಗಂಭೀರವಾಗಿದೆ ಎಂದು ಸ್ಪಷ್ಟಪಡಿಸಲಾಗಿದೆ.

‘ಇಂದು ರೋಹಿತ್ ಶೆಟ್ಟಿ ಮನೆಯಲ್ಲಿ ನಡೆದ ಗುಂಡಿನ ದಾಳಿಯ ಜವಾಬ್ದಾರಿಯನ್ನು ನಾವು ತೆಗೆದುಕೊಳ್ಳುತ್ತೇವೆ. ನಾವು ಹಲವು ಬಾರಿ ಎಚ್ಚರಿಸಿದ್ದೆವು ಆದರೆ ಅದನ್ನು ನಿರ್ಲಕ್ಷಿಸಲಾಗಿದೆ. ಇದು ಕೇವಲ ಒಂದು ಸಣ್ಣ ಟ್ರೇಲರ್. ನೀವು ಈಗ ಕೇಳದಿದ್ದರೆ, ಮುಂದಿನ ಗುಂಡು ಮಲಗುವ ಕೋಣೆಯಲ್ಲಿ ನಿಮ್ಮ ಎದೆಗೆ ನೇರವಾಗಿ ಹೊಡೆಯುತ್ತದೆ’ ಎಂದು ಬರೆಯಲಾಗಿದೆ. ‘ಬಾಲಿವುಡ್ ಜನರು ಸಕಾಲದಲ್ಲಿ ಸುಧಾರಿಸದಿದ್ದರೆ, ಅವರು ಬಾಬಾ ಸಿದ್ದಿಕಿಗಿಂತ ಕೆಟ್ಟ ಪರಿಸ್ಥಿತಿಯಲ್ಲಿರುತ್ತಾರೆ’ ಎಂಬ ನೇರ ಎಚ್ಚರಿಕೆಯನ್ನು ಸಹ ನೀಡಲಾಗಿದೆ.

ಶುಭಂ ಲೋಂಕರ್ ಯಾರು?

ಶುಭಂ ಲೋಂಕರ್ ಪ್ರಸ್ತುತ ಮುಂಬೈ ಪೊಲೀಸರ ಮೋಸ್ಟ್ ವಾಂಟೆಡ್ ಪಟ್ಟಿಯಲ್ಲಿದ್ದಾನೆ. ಈತ ಮೂಲತಃ ಮಹಾರಾಷ್ಟ್ರದ ಅಕೋಲಾ ಜಿಲ್ಲೆಯವನಾಗಿದ್ದು, ಕಳೆದ ಕೆಲವು ವರ್ಷಗಳಿಂದ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನಲ್ಲಿ ಪ್ರಮುಖ ವ್ಯಕ್ತಿಯಾಗಿ ಹೊರಹೊಮ್ಮಿದ್ದಾನೆ. ಬಾಬಾ ಸಿದ್ದಿಕಿ ಕೊಲೆ ಪ್ರಕರಣದಲ್ಲಿ ಶುಭಂ ಲೋಂಕರ್ ಹೆಸರು ಪ್ರಮುಖ ಸಂಚುಕೋರ ಎಂದು ಕೇಳಿಬಂದಿತ್ತು. ಶುಭಂ ಶೂಟರ್‌ಗಳಿಗೆ ಶಸ್ತ್ರಾಸ್ತ್ರಗಳನ್ನು ಪೂರೈಸುತ್ತಿದ್ದ ಮತ್ತು ಅವರನ್ನು ಲಾರೆನ್ಸ್ ಬಿಷ್ಣೋಯ್ ಸಹೋದರ ಅನ್ಮೋಲ್ ಬಿಷ್ಣೋಯ್ ಅವರೊಂದಿಗೆ ಸಂಪರ್ಕಿಸುತ್ತಿದ್ದ ಎಂದು ತನಿಖೆಯಿಂದ ತಿಳಿದುಬಂದಿದೆ.

ಇದನ್ನೂ ಓದಿ: ಮತ್ತೆ ಬಾಲಿವುಡ್​​ನತ್ತ ಗನ್ನು ಗುರಿ ಇಟ್ಟ ಭೂಗತ ಜಗತ್ತು: ಎಲ್ಲೆಲ್ಲಿ ದಾಳಿ?

ಶುಭಂ ಲೋಂಕರ್ ಕೇವಲ ಸಾಮಾನ್ಯ ಅಪರಾಧಿಯಲ್ಲ. ಬಿಷ್ಣೋಯ್ ಗ್ಯಾಂಗ್‌ನ ತಾಂತ್ರಿಕ ಮತ್ತು ಸಾಮಾಜಿಕ ಜಾಲಯಾಣ ನಿರ್ವಾಹಕ ಎಂದೂ ಹೇಳಲಾಗುತ್ತದೆ. ಅವರು ಅಕೋಲಾದಲ್ಲಿ ಡೈರಿ ವ್ಯವಹಾರವನ್ನು ನಡೆಸುತ್ತಿದ್ದ. ಆದಾಗ್ಯೂ, ಕ್ರಮೇಣ ಲಾರೆನ್ಸ್ ಬಿಷ್ಣೋಯ್ ಅವರ ಸಿದ್ಧಾಂತದ ಪ್ರಭಾವಕ್ಕೆ ಒಳಗಾದ ಆತ ಅಪರಾಧ ಜಗತ್ತಿನಲ್ಲಿ ಎಷ್ಟು ಆಳವಾಗಿ ಸಿಲುಕಿಕೊಂಡರು ಎಂದರೆ ಇಂದು ಆತ ಬಾಲಿವುಡ್ ಸೆಲೆಬ್ರಿಟಿಗಳಿಗೆ ಬಹಿರಂಗವಾಗಿ ಬೆದರಿಕೆ ಹಾಕಲು ಪ್ರಾರಂಭಿಸಿದ್ದಾನೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ಮಾಡಿ.

Source link

ಫೈನಲ್​ನಲ್ಲಿ RCB ತಂಡದ ಎದುರಾಳಿ ಯಾರು?

Source link

Bengaluru Air Quality: ಬೆಂಗಳೂರು ಸೇರಿ ಶಿವಮೊಗ್ಗ, ಬಳ್ಳಾರಿಯಲ್ಲೂ ಅತೀ ಕಳಪೆ ವಾಯು ಗುಣಮಟ್ಟ – Kannada News | Bangalore Air Pollution Crisis: Bengaluru, Ballary and Shivamogga Air quality is getting poor

ಬೆಂಗಳೂರು ಸೇರಿ ಶಿವಮೊಗ್ಗ, ಬಳ್ಳಾರಿಯಲ್ಲೂ ಅತೀ ಕಳಪೆ ವಾಯು ಗುಣಮಟ್ಟ

ಬೆಂಗಳೂರು, ಫೆಬ್ರುವರಿ 02: ಬೆಂಗಳೂರಿನ ವಾಯು ಗುಣಮಟ್ಟ (Bengaluru Air Quality) ದಿನಕ್ಕೊಂದು ರೀತಿ ಬದಲಾಗುತ್ತಿದೆ. ಅದರೊಂದಿಗೆ ಶಿವಮೊಗ್ಗ ಮತ್ತು ಬಳ್ಳಾರಿಯ ಏರ್ ಕ್ವಾಲಿಟಿ ಸಹ 200ಕ್ಕೆ ಹತ್ತಿರವಾಗುತ್ತಿರುವುದು ಸಾಕಷ್ಟು ಆತಂಕ ಸೃಷ್ಟಿಯಾಗಿದ್ದು, ಮುನ್ನೆಚ್ಚರಿಕೆ ವಹಿಸುವಂತೆ ತಜ್ಞರು ಸಲಹೆ ನೀಡಿದ್ದಾರೆ.

ಶಿವಮೊಗ್ಗ, ಬಳ್ಳಾರಿಯಲ್ಲಿ ಕಲುಷಿತ ಗಾಳಿ

ಕೆಲ ದಿನಗಳಿಂದಲೂ ಏರಿಕೆ ಕಾಣುತ್ತಿದ್ದ ಬಳ್ಳಾರಿಯ ಏರ್ ಕ್ವಾಲಿಟಿ, ಇಂದು 196ಕ್ಕೆ ಹೋಗಿ ತಲುಪಿದೆ. ಶಿವಮೊಗ್ಗದ AQI 184 ಆಗಿದೆ. ಈ ಹದಗೆಟ್ಟ ವಾತಾವರಣ ಹೀಗೆ ಮುಂದುವರೆದರೆ ದೆಹಲಿಯಂತೆಯೇ ಆಗಬಹುದೆಂದು ತಜ್ಞರು ಎಚ್ಚರಿಸಿದ್ದಾರೆ. ಈ ಕಲುಷಿತ ಗಾಳಿಯಿಂದ ಶ್ವಾಸಕೋಶದ ಕ್ಯಾನ್ಸರ್, ಅಸ್ತಮಾ ಮತ್ತು ಹೃದಯ ಸಂಬಂಧಿ ಕಾಯಿಲೆಗಳ ಅಪಾಯ ಹೆಚ್ಚಿದೆ. ಬೆಂಗಳೂರಿನಲ್ಲೂ ಕಡಿಮೆ ಆಗದ AQI, ಇಂದು 173ಕ್ಕೆ ತಲುಪಿದೆ.ಕಳೆದ ಕೆಲ ದಿನಗಳಿಗೆ ಹೋಲಿಸಿದರೆ ಅಂಕೆಗಳಲ್ಲಿ ಸಣ್ಣ ಏರುಪೇರು ಕಂಡರೂ, WHO ಮಾನದಂಡಗಳ ಪ್ರಕಾರ ಈ ಮಟ್ಟದ ಗಾಳಿಯ ಗುಣಮಟ್ಟ ಆರೋಗ್ಯಕ್ಕೆ ಹಾನಿಕರವಾಗಿಯೇ ಉಳಿದಿದೆ.

ಸೂಕ್ಷ್ಮಾಣುಗಳಿಂದಲೂ ಜೀವಕ್ಕೆ ಹಾನಿ

PM2.5 ಮಾನವನ ಕೂದಲಿನ ಶೇ. 3ರಷ್ಟು ಮಾತ್ರ ದಪ್ಪವಿರುವ ಅತಿ ಸೂಕ್ಷ್ಮ ಕಣಗಳು. ಈ ಕಣಗಳು ಉಸಿರಾಟದ ಮೂಲಕ ನೇರವಾಗಿ ಶ್ವಾಸಕೋಶದ ಒಳಗೆ ಹೋಗಿ ರಕ್ತವನ್ನು ಸೇರುತ್ತವೆ. ಇಂದಿನ ಅಂಕಿಅಂಶಗಳ ಪ್ರಕಾರ PM2.5 ಪ್ರಮಾಣ 84 ಆಗಿದ್ದು, PM10 109ಕ್ಕೆ ಏರಿಕೆಯಾಗಿದೆ. ಈ ಕಣಗಳು ನೇರವಾಗಿ ಉಸಿರಾಟ ವ್ಯವಸ್ಥೆಗೆ ಹೊಡೆತ ನೀಡುತ್ತವೆ.

PM10 ಎನ್ನುವುದು ನಮಗಿಂತ 7 ಪಟ್ಟು ತೆಳುವಾದ ಧೂಳಿನ ಕಣಗಳಾದರೆ, PM2.5 ಮಾನವನ ಕೂದಲಿನ ಶೇ. 3ರಷ್ಟು ಮಾತ್ರ ದಪ್ಪವಿರುವ ಅತಿ ಸೂಕ್ಷ್ಮ ಕಣಗಳು. ಈ ಕಣಗಳು ಉಸಿರಾಟದ ಮೂಲಕ ನೇರವಾಗಿ ಶ್ವಾಸಕೋಶದ ಒಳಗೆ ಹೋಗಿ ರಕ್ತವನ್ನು ಸೇರುತ್ತವೆ. ಇದರಿಂದ ಶ್ವಾಸಕೋಶದ ಕ್ಯಾನ್ಸರ್, ಅಸ್ತಮಾ ಮತ್ತು ಹೃದಯ ಸಂಬಂಧಿ ಕಾಯಿಲೆಗಳ ಅಪಾಯ ಹೆಚ್ಚಿದೆ. ಆರೋಗ್ಯ ತಜ್ಞರು ಮಕ್ಕಳು, ವೃದ್ಧರು ಹಾಗೂ ಶ್ವಾಸಕೋಶ ಸಮಸ್ಯೆ ಇರುವವರು ಹೊರಗೆ ಹೋಗುವಾಗ ಎಚ್ಚರಿಕೆ ವಹಿಸಲು ಸಲಹೆ ನೀಡಿದ್ದಾರೆ. ಮಾಸ್ಕ್ ಬಳಕೆ, ವಾಹನ ಬಳಕೆಯನ್ನು ಕಡಿಮೆ ಮಾಡುವುದು ಮತ್ತು ಹಸಿರು ಪ್ರದೇಶಗಳನ್ನು ಹೆಚ್ಚಿಸುವುದು ಈಗ ನಗರಕ್ಕೆ ಅನಿವಾರ್ಯವಾಗಿದೆ.

ರಾಜ್ಯದ ಇತರ ನಗರದಲ್ಲಿ ಇಂದಿನ ಗಾಳಿಯ ಗುಣಮಟ್ಟ (Air Quality Index)

  • ಬೆಂಗಳೂರು –173
  • ಮಂಗಳೂರು-170
  • ಮೈಸೂರು –168
  • ಬೆಳಗಾವಿ – 144
  • ಕಲಬುರ್ಗಿ-134
  • ಶಿವಮೊಗ್ಗ – 184
  • ಬಳ್ಳಾರಿ – 196
  • ಹುಬ್ಬಳ್ಳಿ- 156
  • ಉಡುಪಿ –168
  • ವಿಜಯಪುರ –160

ಗಾಳಿ ಗುಣಮಟ್ಟ ತಿಳಿಯುವುದು ಹೇಗೆ?

  • ಉತ್ತಮ- 0-50
  • ಮಧ್ಯಮ – 50-100
  • ಕಳಪೆ – 100-150
  • ಅನಾರೋಗ್ಯಕರ – 150-200
  • ಗಂಭೀರ – 200 – 300
  • ಅಪಾಯಕಾರಿ – 300 -500+

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

Exit mobile version