ತುಂಬಾನೇ ಶ್ರೀಮಂತ ಅಲ್ಲು ಅರ್ಜುನ್; ಅವರ ಬಳಿ ಇರೋ ದುಬಾರಿ ವಸ್ತುಗಳಿವು

ತುಂಬಾನೇ ಶ್ರೀಮಂತ ಅಲ್ಲು ಅರ್ಜುನ್; ಅವರ ಬಳಿ ಇರೋ ದುಬಾರಿ ವಸ್ತುಗಳಿವು

ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ (Allu Arjun) ಅವಗೆ ಇಂದು (ಏಪ್ರಿಲ್ 08) ಜನ್ಮದಿನ. ಭಾರತದ ಶ್ರೀಮಂತ ಹೀರೋಗಳಲ್ಲಿ ಅವರೂ ಒಬ್ಬರು., ಅಲ್ಲು ಅರ್ಜುನ್ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಮಾಸ್ ಛಾಯೆಯುಳ್ಳ ಭಿನ್ನ ಪಾತ್ರಗಳನ್ನು ಪ್ರಯತ್ನಿಸುತ್ತಾರೆ, ಅವರ ಬಳಿ ಸಾಕಷ್ಟು ಹಣ ಇದೆ. ಅವರ ಆಸ್ತಿ ಬಗ್ಗೆ ಇಲ್ಲಿದೆ ವಿವರ.

ಅಲ್ಲು ಅರ್ಜುನ್ ಆಸ್ತಿ 600 ಕೋಟಿ ರೂಪಾಯಿ ಅಷ್ಟಿದೆ ಎನ್ನಲಾಗಿದೆ. ಹೈದರಾಬಾದ್​ನ ಜೂಬ್ಲಿ ಹಿಲ್ಸ್​ನ ಐಶಾರಾಮಿ ಬಂಗಲೆಯನ್ನು ಅಲ್ಲು ಅರ್ಜುನ್ ಹೊಂದಿದ್ದಾರೆ. ಈ ಮನೆಯಲ್ಲಿ ಅಲ್ಲು ಅರ್ಜುನ್, ಪತ್ನಿ ಸ್ನೇಹಾ ರೆಡ್ಡಿ, ಮಕ್ಕಳಾದ ಅಯಾನ್ ಹಾಗೂ ಅರ್ಹಾ ಜೊತೆಗೆ ವಾಸಿಸುತ್ತಾರೆ. ಈ ಬಂಗಲೆ ತುಂಬಾ ದೊಡ್ಡದಿದೆ. ಈ ಮನೆಯ ಮೌಲ್ಯ ಸುಮಾರು 100 ಕೋಟಿ ಎನ್ನಲಾಗುತ್ತದೆ.

ಅಲ್ಲು ಅರ್ಜುನ್ ಅವರು ಸಾಕಷ್ಟು ಕಾರನ್ನು ಹೊಂದಿದ್ದಾರೆ. ಅವರ ಬಳಿ ಇರುವ ಅತ್ಯಂತ ದುಬಾರಿ ಕಾರು ರೇಂಜ್ ರೋವರ್ ವೋಗ್. ಈ ಕಾರಿನ ಬೆಲೆ ಎರಡು ಕೋಟಿಗೂ ಹೆಚ್ಚು. ಇದನ್ನು 2019ರಲ್ಲಿ ಅಲ್ಲು ಅರ್ಜುನ್ ಖರೀದಿಸಿದ್ದರು. ಇದಕ್ಕೆ ಬೀಸ್ಟ್ ಎಂದು ಹೆಸರಿಟ್ಟಿದ್ದಾರೆ. ವೋಲ್ವೊ ಎಕ್ಸ್​ಸಿ 90 ಟಿ8 ಎಕ್ಸಲೆಂಟ್ ಇದ್ದು, ಇದರ ಬೆಲೆ 1.30 ಕೋಟಿ ರುಪಾಯಿ. ಈ ಕಾರನ್ನು ಅಲ್ಲು ಅರ್ಜುನ್ ಹೆಚ್ಚು ಬಳಸುತ್ತಾರೆ. ಇದು ಅವರ ಮೆಚ್ಚಿನ ಕಾರು.

ಅಲ್ಲು ಅರ್ಜುನ್ ಬಳಿ ಶ್ವೇತ ವರ್ಣದ ಜಾಗ್ವಾರ್ ಎಕ್ಸ್​ಜೆ ಎಲ್ ಇದೆ. ಇನ್ನು ಅಲ್ಲು ಅರ್ಜುನ್ ಬಳಿ ಇರುವ ಅತ್ಯಂತ ಹೆಚ್ಚು ಬೆಲೆಯ ವಾಹನವೆಂದರೆ ಅವರ 7 ಕೋಟಿ ಮೌಲ್ಯದ ಕ್ಯಾರಾವ್ಯಾನ್. ಇದನ್ನು ವಿಶೇಷವಾಗಿ ಆರ್ಡರ್ ನೀಡಿ ಅಲ್ಲು ಅರ್ಜುನ್ ನಿರ್ಮಿಸಿಕೊಂಡಿದ್ದಾರೆ.

ಇದನ್ನೂ ಓದಿ: ಅಲ್ಲು ಅರ್ಜುನ್ ಹುಟ್ಟುಹಬ್ಬಕ್ಕೆ ಸಿಗಲಿದೆ ಸರ್ಪ್ರೈಸ್; ಹೊಸ ಸಿನಿಮಾ ಟೈಟಲ್ ಮೇಲೆ ಕಣ್ಣು

ಅಲ್ಲು ಅರ್ಜುನ್ ಉದ್ಯಮಿಯೂ ಹೌದು. ಅನ್ನಪೂರ್ಣ ಸ್ಟುಡಿಯೋಸ್ ನಲ್ಲಿ ಪಾಲುದಾರಿಕೆ ಹೊಂದಿದ್ದಾರೆ. ಆಹಾ ಒಟಿಟಿಯಲ್ಲಿಯೂ ಪಾಲುದಾರರು. ಅವರು ಮಲ್ಟಿಪ್ಲೆಕ್ಸ್ ಆರಂಭಿಸಿದ್ದಾರೆ. ಫಾರ್ಮ್​​ಹೌಸ್​​ಗಳೂ ಅವರ ಬಳಿ ಇವೆ. ಅಲ್ಲು ಅರ್ಜುನ್ ಅವರ ಹೊಸ ಸಿನಿಮಾಗೆ ಇಂದು ಟೈಟಲ್ ಘೋಷಣೆ ಆಗಲಿದೆ. ಇದಕ್ಕೆ ಅಲ್ಲು ಅರ್ಜುನ್ ದೊಡ್ಡ ಮೊತ್ತದ ಸಂಭಾವನೆ ಪಡೆಯಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಕರ್ನಾಟಕ ಹವಾಮಾನ ವರದಿ: ಅಂತೂ ತಣ್ಣಗಾದ ಮಳೆರಾಯ; ರಾಜ್ಯದ ಹಲವೆಡೆ ಇಂದು ಶುಷ್ಕ ವಾತಾವರಣ

ಬೆಂಗಳೂರು, ಏಪ್ರಿಲ್ 08: ಕಳೆದ ಹಲವು ದಿನಗಳಿಂದ ರಾಜ್ಯದ ವಿವಿಧ ಭಾಗಗಳಲ್ಲಿ ಮಳೆರಾಯನ (Weather Forecast) ಆರ್ಭಟ ಕಾಣಿಸಿತ್ತು. ಆದರೆ ಇಂದು ಕೇವಲ ಬೆರಳೆಣಿಕೆಯಷ್ಟು ಪ್ರದೇಶಗಳಲ್ಲಿ ಮಳೆಯಾಗಲಿದ್ದು, ಚಿಕ್ಕಬಳ್ಳಾಪುರ, ಕೋಲಾರ, ಚಾಮರಾಜನಗರ ಮೂರು ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಸೂಚಿಸಲಾಗಿದೆ. ಉಳಿದೆಡೆ ಒಣ ಹವೆಯ ವಾತಾವರಣವಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಎಲ್ಲೆಲ್ಲಿ ಒಣ ಹವೆ?

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ರಾಮನಗರ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಮೈಸೂರು, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಒಣ ಹವೆಯ ವಾತಾವರಣ ಇರಲಿದೆ.

ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಇಲಾಖೆ ತಿಳಿಸಿದೆ. ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿಯೂ ಶುಷ್ಕ ವಾತಾವರಣವಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಯಶ್ ರಾವಣನ ಪಾತ್ರ ಒಪ್ಪಿಕೊಳ್ಳಲು ಕಾರಣ ಆಗಿದ್ದು ಆ ಒಂದು ವಿಷಯ

ರಾಕಿಂಗ್ ಸ್ಟಾರ್ ಯಶ್ (Yash) ನಟನೆಯ ಬಹುನಿರೀಕ್ಷಿತ ಸಿನಿಮಾ ‘ಟಾಕ್ಸಿಕ್’ ಕೆಲಸಗಳು ಭರದಿಂದ ಸಾಗುತ್ತಿವೆ. ಈ ಚಿತ್ರ ಜೂನ್​ 4ರಂದು ತೆರೆಗೆ ಬರಲಿದೆ. ಇತ್ತೀಚೆಗೆ ಸಿನಿಮಾದ ಟೀಸರ್ ಹಾಗೂ ಸಾಂಗ್ ರಿಲೀಸ್​ ಆಗಿ ಸದ್ದು ಮಾಡಿತ್ತು. ಈ ಚಿತ್ರದ ಜೊತೆ ಅವರು ‘ರಾಮಾಯಣ’ ಸಿನಿಮಾದಲ್ಲೂ ನಟಿಸಿದ್ದಾರೆ. ಈ ಚಿತ್ರದಲ್ಲಿ ರಾವಣನ ಪಾತ್ರ ಮಾಡಿದ್ದಾರೆ. ಈ ಚಿತ್ರ ಒಪ್ಪಿಕೊಳ್ಳಲು ಕಾರಣವಾದ ವಿಷಯವೇನು ಎಂಬ ವಿಷಯ ಈಗ ರಿವೀಲ್ ಆಗಿದೆ.

ಇತ್ತೀಚೆಗೆ ರಿಲೀಸ್ ಆದ ‘ರಾಮಾಯಣ’ ಟೀಸರ್​​ನಲ್ಲಿ ಯಶ್ ಅವರು ರಾವಣನ ಪಾತ್ರ ಹೇಗಿರಬಹುದು ಎಂಬುದರ ಸಣ್ಣ ಝಲಕ್ ತೋರಿಸಲಾಗಿದೆ. ಈ ಟೀಸರ್​​ನಲ್ಲಿ ರಾವಣನ ಪಾತ್ರವನ್ನು ಹಿಂಭಾಗದಿಂದ ಮಾತ್ರ ತೋರಿಸಲಾಗಿದೆ. ಈ ಮೂಲಕ ನಿರೀಕ್ಷೆ ಮುಂದುವರಿಯುವಂತೆ ಮಾಡಲಾಗಿದೆ.ಈ ಪಾತ್ರದ ಬಗ್ಗೆ ನಿರ್ದೇಶಕ ನಿತೇಶ್ ತಿವಾರಿ ಇತ್ತೀಚೆಗೆ ಮಾತನಾಡಿದ್ದರು.

‘ರಾವಣ ಎಂದಾಕ್ಷಣ ನೆನಪಿಗೆ ಬರೋದು ಆತನ ಕೆಟ್ಟ ಗುಣಗಳು. ಆದರೆ, ರಾವಣ ಕೇವಲ ಕೆಟ್ಟವನು ಮಾತ್ರ ಆಗಿರಲಿಲ್ಲ. ಆತ, ಶಿವನ ದೊಡ್ಡ ಭಕ್ತನಾಗಿದ್ದ. ಆತನಿಗೆ ಸಾಕಷ್ಟು ಜ್ಞಾನ ಇತ್ತು. ರಾವಣನ ಹಲವು ಶೇಡ್​​ಗಳನ್ನು ತೋರಿಸುವ ಪ್ರಯತ್ನ ಸಿನಿಮಾದಲ್ಲಿ ಆಗಲಿದೆ’ ಎಂದು ನಿತೇಶ್ ಹೇಳಿದ್ದಾರೆ.

‘ಒಬ್ಬ ಮನುಷ್ಯ ಅಹಂಕಾರ ಮತ್ತು ಪ್ರತೀಕಾರವನ್ನು ಬೆಳೆಸಿಕೊಂಡರೆ ಅವನ ಯಾವುದೇ ಉತ್ತಮ ಗುಣಗಳು ಕೆಲಸಕ್ಕೆ ಬರೋದಿಲ್ಲ ಮತ್ತು ಅವನು ರಾವಣನಂತೆ ಕೊನೆಗೊಳ್ಳುತ್ತಾನೆ’ ಎಂಬ ಸಂದೇಶ ಸಿನಿಮಾದಲ್ಲಿ ಇರಲಿದೆಯಂತೆ. ಈ ಚಿತ್ರದಲ್ಲಿ ರಾವಣನ ವ್ಯಾಖ್ಯಾನವು ನಾವು ಈ ಮೊದಲು ನೋಡಿದ ಇತರ ರಾಮಾಯಣ ಚಿತ್ರಗಳಲ್ಲಿ ನೋಡಿದ್ದಕ್ಕಿಂತ ಬಹಳ ಭಿನ್ನವಾಗಿರುತ್ತದೆ ಎಂದು ರಣಬೀರ್ ಕಪೂರ್ ಹೇಳಿದ್ದಾರೆ. ಯಶ್ ಅವರು ಈ ಪಾತ್ರವನ್ನು ನೋಡುವ ರೀತಿ ಕೂಡ ಭಿನ್ನವಾಗಿದೆ ಎಂದು ರಣಬೀರ್ ವಿವರಿಸಿದ್ದರು.

ಇದನ್ನೂ ಓದಿ: ರಾವಣನ ಪಾತ್ರ ಮಾಡಲು ಒಪ್ಪಿದ್ದೇಕೆ ಯಶ್, ನಿರ್ದೇಶಕರು ಕೊಟ್ಟರು ಉತ್ತರ

ಈ ಎಲ್ಲಾ ಕಾರಣದಿಂದ ಯಶ್ ಅವರು ರಾವಣನ ಪಾತ್ರ ಮಾಡಲು ಒಪ್ಪಿರಬಹುದು ಎನ್ನಲಾಗುತ್ತಿದೆ. ಈ ಮೊದಲು ನೀಡಿದ ಸಂದರ್ಶನದಲ್ಲಿ ಮಾತನಾಡಿದ್ದ ಯಶ್, ರಾವಣನ ಪಾತ್ರ ಮಾಡಲು ತುಂಬಾನೇ ಇಷ್ಟ ಎಂದಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

Source link

ವೈಭವ್, ಯಶಸ್ವಿ ಸಿಡಿಲಬ್ಬರದ ನಡುವೆ RCB ದಾಖಲೆ ಸೇಫ್

Source link

Hormuz Strait: ಇರಾನ್​ನಿಂದ ತೈಲ ಸಾಗಾಟ ಸುಗಮ, ಹಾರ್ಮುಜ್ ಜಲಸಂಧಿ ತೆರೆಯಲು ಇರಾನ್ ಒಪ್ಪಿಗೆ

ಟೆಹ್ರಾನ್, ಏಪ್ರಿಲ್ 08: ಎರಡು ವಾರಗಳ ಕದನ ವಿರಾಮಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್(Donald Trump) ಒಪ್ಪಿಗೆ ಕೊಡುತ್ತಿದ್ದಂತೆ ಇತ್ತ ಇರಾನ್ ಹಾರ್ಮುಜ್ ಜಲಸಂಧಿಯನ್ನು ತೆರೆಯಲು ಅನುಮತಿ ನೀಡಿದ್ದು, ಇರಾನ್​ನಿಂದ ತೈಲ ಸಾಗಾಟ ಸುಗಮವಾಗಲಿದೆ. ಭಾರತ ಸೇರಿ ಅನೇಕ ದೇಶಗಳಿಗೆ ಇದರಿಂದ ಅನುಕೂಲವಾಗಲಿದೆ.  ಇರಾನ್ ಮೇಲಿನ ದಾಳಿಯನ್ನು ಎರಡು ವಾರಗಳ ಕಾಲ ಮುಂದೂಡಲು ಅಮೆರಿಕ ಅಧ್ಯಕ್ಷ ಟ್ರಂಪ್ ನಿರ್ಧರಿಸಿದ್ದು, ಜಾಗತಿಕ ಮಾರುಕಟ್ಟೆ ನೆಮ್ಮದಿಯ ನಿಟ್ಟುಸಿರು ಬಿಟ್ಟಿದೆ. ಘೋಷಣೆಯ ನಂತರ, ಕಚ್ಚಾ ತೈಲ ಬೆಲೆಗಳು ತೀವ್ರವಾಗಿ ಕುಸಿದಿವೆ ಮತ್ತು ಅಮೆರಿಕದ ಷೇರುಗಳು ಏರಿಕೆಯಾಗಿವೆ.

ಇರಾನ್ ಹಾರ್ಮುಜ್ ಜಲಸಂಧಿಯ ಮೂಲಕ ಹಡಗುಗಳನ್ನು ಸುರಕ್ಷಿತವಾಗಿ ಹಾದುಹೋಗಲು ಅನುಮತಿಸಿದರೆ ಮಿಲಿಟರಿ ಕ್ರಮವನ್ನು ನಿಲ್ಲಿಸಬಹುದು ಎಂದು ಡೊನಾಲ್ಡ್​ ಟ್ರಂಪ್ ಹೇಳಿದ್ದರು. ಇದೀಗ ಇರಾನ್ ಅದಕ್ಕೆ ಒಪ್ಪಿಕೊಂಡಿದೆ. ಹಾರ್ಮುಜ್ ಜಲಸಂಧಿಯನ್ನು ಎರಡು ವಾರಗಳ ಅವಧಿಗೆ ತೆರೆಯಲಾಗುವುದು ಎಂದು ಅರಾಘ್ಚಿ ಘೋಷಿಸಿದ್ದಾರೆ.

ಯುಎಸ್ ಕಚ್ಚಾ ತೈಲ ಬೆಲೆಗಳು ಸುಮಾರು ಶೇ. 18 ರಷ್ಟು ಇಳಿದು ಪ್ರತಿ ಬ್ಯಾರೆಲ್‌ಗೆ 92.60 ಡಾಲರ್​ಗೆ ಕ್ಕೆ ತಲುಪಿದರೆ, ಬ್ರೆಂಟ್ ಕಚ್ಚಾ ತೈಲ ಬೆಲೆಗಳು ಸುಮಾರು ಶೇ.6 ರಷ್ಟು ಇಳಿದು ಪ್ರತಿ ಬ್ಯಾರೆಲ್‌ಗೆ 103.40 ಡಾಲರ್​ಗೆ ತಲುಪಿವೆ. ಅಮೆರಿಕದ ಷೇರು ಮಾರುಕಟ್ಟೆಗಳು ಏರಿಕೆಯಾಗಿದ್ದು, ಹೂಡಿಕೆದಾರರ ವಿಶ್ವಾಸವನ್ನು ಹೆಚ್ಚಿಸಿವೆ.

ಮತ್ತಷ್ಟು ಓದಿ: ಇರಾನ್ ಮುಗಿಸಲು ಒಂದೇ ಒಂದು ರಾತ್ರಿ ಸಾಕು, ಗಡುವು ಮುಗಿಯುವ ಮುನ್ನವೇ ಇರಾನ್​ಗೆ ಟ್ರಂಪ್ ಬೆದರಿಕೆ

ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪ್ರಮುಖ ಘೋಷಣೆ ಮಾಡಿದ್ದು, ಇರಾನ್ ಮೇಲಿನ ಸಂಭಾವ್ಯ ದಾಳಿಗಳು ಮತ್ತು ಬಾಂಬ್ ದಾಳಿಗಳನ್ನು ಎರಡು ವಾರಗಳ ಕಾಲ ನಿಲ್ಲಿಸಲಾಗಿದೆ ಎಂದು ಹೇಳಿದ್ದಾರೆ. ಇದು ದ್ವಿಪಕ್ಷೀಯ ಕದನ ವಿರಾಮ ಎಂದು ಟ್ರಂಪ್ ಹೇಳಿದ್ದಾರೆ.

ಅಂದರೆ ಈ ಅವಧಿಯಲ್ಲಿ ಅಮೆರಿಕ ಅಥವಾ ಇರಾನ್ ಯಾವುದೇ ಆಕ್ರಮಣಕಾರಿ ಕ್ರಮವನ್ನು ತೆಗೆದುಕೊಳ್ಳುವುದಿಲ್ಲ.ಈ ಒಪ್ಪಂದಕ್ಕೆ ಒಂದು ಮಹತ್ವದ ಷರತ್ತು ವಿಧಿಸಲಾಗಿದೆ: ಇರಾನ್ ತಕ್ಷಣವೇ, ಸಂಪೂರ್ಣವಾಗಿ ಮತ್ತು ಸುರಕ್ಷಿತವಾಗಿ ಹಾರ್ಮುಜ್ ಜಲಸಂಧಿಯನ್ನು ತೆರೆಯಬೇಕು. ಕದನ ವಿರಾಮಕ್ಕೆ ಪಾಕಿಸ್ತಾನದ ಪ್ರಯತ್ನಗಳಿಗೆ ಅಬ್ಬಾಸ್ ಅರಘ್ಚಿ ಕೃತಜ್ಞತೆ ಸಲ್ಲಿಸಿದರು ಮತ್ತು ಪಾಕಿಸ್ತಾನದ ಪ್ರಧಾನಿ ಶಹಬಾಜ್ ಷರೀಫ್ ಅವರನ್ನು ಶ್ಲಾಘಿಸಿದರು.

ಇರಾನ್‌ಗೆ ನೀಡಿದ್ದ 48 ಗಂಟೆಗಳ ಡೆಡ್‌ಲೈನ್‌ ಅಮೆರಿಕ ಕಾಲಮಾನ ರಾತ್ರಿ 8 ಗಂಟೆಗೆ ಅಂತ್ಯವಾಗುವ ಒಂದು ಗಂಟೆಯ ಮೊದಲು ಟ್ರಂಪ್‌ ತಮ್ಮ ಟ್ರೂಥ್‌ ಸಾಮಾಜಿಕ ಜಾಲತಾಣದಲ್ಲಿ ಈ ವಿಚಾರವನ್ನು ಬಹಿರಂಗಪಡಿಸಿದ್ದಾರೆ.

ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಮತ್ತು ಫೀಲ್ಡ್ ಮಾರ್ಷಲ್ ಅಸಿಮ್ ಮುನೀರ್ ಅವರು ಇಂದು ರಾತ್ರಿ ಇರಾನ್‌ಗೆ ಕಳುಹಿಸಲಾಗುತ್ತಿರುವ ವಿನಾಶಕಾರಿ ಪಡೆಗಳನ್ನು ತಡೆಹಿಡಿಯುವಂತೆ ಮನವಿ ಮಾಡಿದರು. ಹಾರ್ಮುಜ್ ಜಲಸಂಧಿಯನ್ನು ಸಂಪೂರ್ಣವಾಗಿ ಈ ಕೂಡಲೇ ತೆರೆಯಲು ಒಪ್ಪಿಕೊಂಡರೆ ಇರಾನ್‌ ಮೇಲೆ ಮಾಡಲು ಉದ್ದೇಶಿಸಿರುವ ಬಾಂಬ್‌ ದಾಳಿಯನ್ನು ಎರಡು ವಾರಗಳ ಕಾಲ ತಡೆ ಹಿಡಿಯಲು ಒಪ್ಪಿಗೆ ನೀಡುತ್ತೇನೆ. ಇದು ದ್ವಿಪಕ್ಷೀಯ ಕದನ ವಿರಾಮ ಆಗಲಿದೆ ಎಂದಿದ್ದಾರೆ.

 

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

Daily Devotional: ತಿಥಿ ಊಟ ಮಾಡಿದರೆ ಅದೃಷ್ಟ ನಷ್ಟವಾಗುತ್ತಾ?

ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ತಿಥಿ ಊಟ ಮಾಡಿದರೆ ಅದೃಷ್ಟ ನಷ್ಟವಾಗುತ್ತಾ ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ಆಧ್ಯಾತ್ಮಿಕವಾಗಿ, ತಿಥಿ ಊಟವು ದಿವಂಗತ ಆತ್ಮದ ನೆನಪಿನಲ್ಲಿ ಆಚರಿಸುವ ಒಂದು ಪದ್ಧತಿಯಾಗಿದೆ. ಬದುಕಿದ್ದಾಗ ಆ ವ್ಯಕ್ತಿಯೊಂದಿಗೆ ಇದ್ದ ಬಾಂಧವ್ಯದಂತೆ, ಅವರ ನೆನಪಿನಲ್ಲಿ ನೀಡುವ ಆಹಾರವು ಆತ್ಮಕ್ಕೆ ತೃಪ್ತಿ ನೀಡಿ, ಸಕಾರಾತ್ಮಕ ಆಶೀರ್ವಾದಗಳನ್ನು ನೀಡುತ್ತದೆ. ಗರುಡ ಪುರಾಣದ ಪ್ರಕಾರ, ಈ ಸಂದರ್ಭದಲ್ಲಿ ನೀಡುವ ತೀರ್ಥ ಅಥವಾ ಪ್ರಸಾದದಿಂದ ಯಾವುದೇ ದುಷ್ಪರಿಣಾಮಗಳಾಗುವುದಿಲ್ಲ ಹಿರಿಯರು ಮತ್ತು ಬುದ್ಧಿಜೀವಿಗಳು ಕೂಡ ತಿಥಿ ಊಟಕ್ಕೆ ಹೋಗಿ ಬರುವುದರಿಂದ ಅನೇಕ ದೋಷಗಳು ನಿವಾರಣೆಯಾಗುತ್ತವೆ ಎಂದು ಹೇಳುವುದನ್ನು ಕೇಳುತ್ತೇವೆ. ಆದ್ದರಿಂದ, ತಿಥಿ ಊಟವು ಹಾನಿಕರವಲ್ಲ, ಬದಲಿಗೆ ದಿವಂಗತರಿಗೆ ಸಲ್ಲಿಸುವ ಗೌರವ ಮತ್ತು ಆತ್ಮಕ್ಕೆ ಸಕಾರಾತ್ಮಕ ಶಕ್ತಿಯನ್ನು ನೀಡುವ ನಂಬಿಕೆಯಾಗಿದೆ.ಎಂದು ಗುರೂಜಿ ಹೇಳಿದ್ದಾರೆ.

 

 

 

Source link

Horoscope Today: ಇಂದು ಈ ರಾಶಿಯ ಗಂಡ-ಹೆಂಡತಿ ಮಧ್ಯೆ ಭಿನ್ನಾಭಿಪ್ರಾಯ!

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಏಪ್ರಿಲ್ 8, ಬುಧವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ಪರಾಭವ ನಾಮ ಸಂವತ್ಸರ, ಉತ್ತರಾಯಣ, ಚೈತ್ರ ಮಾಸ, ವಸಂತ ಋತು, ಕೃಷ್ಣ ಪಕ್ಷ, ಸಪ್ತಮಿ ತಿಥಿಯಾಗಿದೆ. ಇಂದು ಡಾ. ಬಸವರಾಜ ಗುರೂಜಿಯವರು ಪ್ರತಿ ರಾಶಿಯವರಿಗೂ ಆರೋಗ್ಯ, ಆರ್ಥಿಕ ಸ್ಥಿತಿ, ಉದ್ಯೋಗ, ವ್ಯಾಪಾರ, ಕುಟುಂಬ ಮತ್ತು ವೈಯಕ್ತಿಕ ಸಂಬಂಧಗಳ ಕುರಿತು ವಿವರವಾದ ಸಲಹೆಗಳನ್ನು ನೀಡಿದ್ದಾರೆ.

 

 

 

 

Source link

ಕದನ ವಿರಾಮ ಘೋಷಿಸಿ ಅಮೆರಿಕ, ಇರಾನ್ ಹೇಳಿದ್ದೇನು? ಇಲ್ಲಿದೆ ಪೂರ್ಣ ವಿವರ

ವಾಷಿಂಗ್ಟನ್/ಟೆಹ್ರಾನ್, ಏಪ್ರಿಲ್ 8: ವಿಶ್ವವೇ ಕುತೂಹಲದಿಂದ ಕಾಯುತ್ತಿದ್ದ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ರಣಭೀಕರ ದಾಳಿಯ ಡೆಡ್​​ಲೈನ್ ಮುಗಿದಿದೆ. ಅಷ್ಟರಲ್ಲಿ ಅಮೆರಿಕ, ಇರಾನ್ 2 ವಾರಗಳ ಕದನ ವಿರಾಮ ಘೋಷಣೆ (US Iran Ceasefire) ಒಪ್ಪಂದಕ್ಕೆ ಬಂದಿವೆ. ಇನ್ನೇನು ಕೆಲವೇ ಕ್ಷಣಗಳಲ್ಲಿ ಇರಾನ್ ಮೇಲೆ ಅಮೆರಿಕದ ಫೈಟರ್ ಜೆಟ್‌ಗಳು ದಾಳಿ ಮಾಡಬೇಕಿತ್ತು, ಅಷ್ಟರಲ್ಲಿ ತ್ಕಾಲಿಕ ಕದನ ವಿರಾಮ ಘೋಷಣೆಯಾಗಿದೆ. ಪಾಕಿಸ್ತಾನದ ಪ್ರಧಾನಿ ಮತ್ತು ಸೇನಾ ಮುಖ್ಯಸ್ಥರ ಮನವಿಯ ಮೇರೆಗೆ ಟ್ರಂಪ್ ಈ ನಿರ್ಧಾರ ತೆಗೆದುಕೊಂಡಿದ್ದಾರೆ.

ದಾಳಿ ಎರಡು ವಾರಗಳ ಅವಧಿಗೆ ಸ್ಥಗಿತ: ಡೊನಾಲ್ಡ್ ಟ್ರಂಪ್

ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಹಾಗೂ ಫೀಲ್ಡ್ ಮಾರ್ಷಲ್ ಅಸಿಮ್ ಮುನೀರ್ ಅವರೊಂದಿಗಿನ ಮಾತುಕತೆಗಳ ಆಧಾರದ ಮೇಲೆ 2 ವಾರಗಳ ಕದನ ವಿರಾಮ ಒಪ್ಪಂದಕ್ಕೆ ಬರಲಾಗಿದೆ. ಅವರು (ಪಾಕ್ ಪ್ರಧಾನಿ, ಫೀಲ್ಡ್ ಮಾರ್ಷಲ್) ಇರಾನ್‌ ಮೇಲಿನ ವಿನಾಶಕಾರಿ ದಾಳಿಯನ್ನು ತಡೆಹಿಡಿಯುವಂತೆ ವಿನಂತಿಸಿದರು. ಇರಾನ್ ಹೊರ್ಮುಜ್ ಜಲಸಂಧಿಯನ್ನು ಸಂಪೂರ್ಣವಾಗಿ ಮತ್ತು ಸುರಕ್ಷಿತವಾಗಿ ತೆರೆಯಲು ಒಪ್ಪುತ್ತಿದೆ. ಹೀಗಾಗಿ ಇರಾನ್ ಮೇಲಿನ ದಾಳಿಯನ್ನು ಎರಡು ವಾರಗಳ ಅವಧಿಗೆ ಸ್ಥಗಿತಗೊಳಿಸಲು ನಾನು ಕೂಡ ಒಪ್ಪುತ್ತೇನೆ. ಇದು ಎರಡು ಕಡೆಯಿಂದಲೂ ಕದನ ವಿರಾಮವಾಗಿರುತ್ತದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.

ಹಾಗೆ ಮಾಡಲು ಕಾರಣವೇನೆಂದರೆ, ನಾವು ಈಗಾಗಲೇ ಎಲ್ಲಾ ಮಿಲಿಟರಿ ಉದ್ದೇಶಗಳನ್ನು ಮೀರಿದ್ದೇವೆ. ಇರಾನ್‌ನೊಂದಿಗೆ ದೀರ್ಘಾವಧಿಯ ಶಾಂತಿಗೆ ಸಂಬಂಧಿಸಿದ ನಿರ್ಣಾಯಕ ಒಪ್ಪಂದದೊಂದಿಗೆ ನಾವು ಬಹಳ ಹತ್ತಿರದಲ್ಲಿದ್ದೇವೆ. ನಾವು ಇರಾನ್‌ನಿಂದ 10 ಅಂಶಗಳ ಪ್ರಸ್ತಾವನೆಯನ್ನು ಸ್ವೀಕರಿಸಿದ್ದೇವೆ, ಅದು ಮಾತುಕತೆಗೆ ಆಧಾರವಾಗಿದೆ ಎಂದು ನಂಬುತ್ತೇವೆ. ಆದರೆ ಎರಡು ವಾರಗಳ ಕಾಲಾವಧಿಯು ಒಪ್ಪಂದವನ್ನು ಅಂತಿಮಗೊಳಿಸಲು ಅನುವು ಮಾಡಿಕೊಡುತ್ತದೆ. ಅಧ್ಯಕ್ಷನಾಗಿ ಈ ದೀರ್ಘಕಾಲೀನ ಸಮಸ್ಯೆ ಪರಿಹಾರದ ಹಂತಕ್ಕೆ ತಲುಪಿರುವುದು ಗೌರವದ ಸಂಗತಿ ಎಂದು ಟ್ರಂಪ್ ಹೇಳಿದ್ದಾರೆ.

ಇರಾನ್ ವಿದೇಶಾಂಗ ಸಚಿವ ಸೈಯದ್ ಅಬ್ಬಾಸ್ ಅರಾಘ್ಚಿ ಸಂದೇಶ

ಇರಾನ್ ಪರವಾಗಿ, ಈ ಪ್ರದೇಶದಲ್ಲಿ ಯುದ್ಧವನ್ನು ಕೊನೆಗೊಳಿಸಲು ಅವಿಶ್ರಾಂತ ಪ್ರಯತ್ನ ಮಾಡಿದ್ದಕ್ಕಾಗಿ ಪಾಕಿಸ್ತಾನದ ಪ್ರಧಾನಿ ಷರೀಫ್ ಹಾಗೂ ಫೀಲ್ಡ್ ಮಾರ್ಷಲ್ ಮುನೀರ್ ಅವರಿಗೆ ನಾನು ಕೃತಜ್ಞತೆ ಸಲ್ಲಿಸುತ್ತೇನೆ. 15 ಅಂಶಗಳ ಪ್ರಸ್ತಾವನೆಯ ಆಧಾರದ ಮೇಲೆ ಮಾತುಕತೆಗಾಗಿ ಅಮೆರಿಕದ ವಿನಂತಿಯನ್ನು ಮತ್ತು ಇರಾನ್‌ನ 10 ಅಂಶಗಳ ಪ್ರಸ್ತಾವನೆಯನ್ನು ಸ್ವೀಕರಿಸುವ ಬಗ್ಗೆ ಅಮೆರಿಕ ಅಧ್ಯಕ್ಷರು ಮಾಡಿದ ಘೋಷಣೆಯನ್ನು ಪರಿಗಣಿಸಿ, ಇರಾನ್‌ನ ಸುಪ್ರೀಂ ರಾಷ್ಟ್ರೀಯ ಭದ್ರತಾ ಮಂಡಳಿಯ ಪರವಾಗಿ ನಾನು ಈ ಮೂಲಕ ಘೋಷಣೆ ಮಾಡುತ್ತಿದ್ದೇನೆ ಎಂದು ಇರಾನ್ ವಿದೇಶಾಂಗ ಸಚಿವ ಸೈಯದ್ ಅಬ್ಬಾಸ್ ಅರಾಘ್ಚಿ ಅವರು ಸಂದೇಶ ಬಿಡುಗಡೆ ಮಾಡಿದ್ದಾರೆ.

ಇರಾನ್ ವಿರುದ್ಧದ ದಾಳಿಗಳನ್ನು ಅಮೆರಿಕ ನಿಲ್ಲಿಸಿದರೆ, ನಮ್ಮ ಪ್ರಬಲ ಸಶಸ್ತ್ರ ಪಡೆಗಳು ತಮ್ಮ ರಕ್ಷಣಾತ್ಮಕ ಕಾರ್ಯಾಚರಣೆಗಳನ್ನು ನಿಲ್ಲಿಸುತ್ತವೆ. ಎರಡು ವಾರಗಳ ಅವಧಿಗೆ ಇರಾನ್‌ನ ಸಶಸ್ತ್ರ ಪಡೆಗಳೊಂದಿಗೆ ಸಮನ್ವಯದ ಮೂಲಕ, ತಾಂತ್ರಿಕ ಮಿತಿಗಳನ್ನು ಪರಿಗಣಿಸಿ ಹೊರ್ಮುಜ್ ಜಲಸಂಧಿ ಮೂಲಕ ಸುರಕ್ಷಿತ ಸಂಚಾರ ಸಾಧ್ಯವಾಗುತ್ತದೆ ಎಂದು ಸೈಯದ್ ಅಬ್ಬಾಸ್ ಅರಾಘ್ಚಿ ತಿಳಿಸಿದ್ದಾರೆ.

ಇದನ್ನೂ ಓದಿ:  ಇರಾನ್ ಮೇಲೆ ಭೀಕರ ದಾಳಿ ನಿರ್ಧಾರದಿಂದ ಹಿಂದೆ ಸರಿದ ಟ್ರಂಪ್: ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ 2 ವಾರಗಳ ಕದನ ವಿರಾಮ ಘೋಷಣೆ!

ಈ ಬೆಳವಣಿಗೆಯಿಂದಾಗಿ ಯುದ್ಧದ ಕಿಚ್ಚು ಸದ್ಯಕ್ಕೆ ತಣ್ಣಗಾಗಿದ್ದು, ಮಧ್ಯಪ್ರಾಚ್ಯ ದೇಶಗಳು ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link

IPL 2026: ಹೀಗಾದ್ರೆ ಮಾತ್ರ RCB vs CSK ಮತ್ತೆ ಮುಖಾಮುಖಿ

Source link

ಇರಾನ್ ಮೇಲೆ ಭೀಕರ ದಾಳಿ ನಿರ್ಧಾರದಿಂದ ಹಿಂದೆ ಸರಿದ ಟ್ರಂಪ್: ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ 2 ವಾರಗಳ ಕದನ ವಿರಾಮ ಘೋಷಣೆ!

ವಾಷಿಂಗ್ಟನ್/ಟೆಹ್ರಾನ್, ಏಪ್ರಿಲ್ 8: ಇರಾನ್ (Iran) ಮೇಲೆ ವಿನಾಶಕಾರಿ ದಾಳಿ ನಡೆಸಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ನೀಡಿದ್ದ ಗಡುವು ಮುಗಿಯಲು ಕೇವಲ ಎರಡು ಗಂಟೆಗಳಿರುವಾಗ ಬಹು ದೊಡ್ಡ ರಾಜತಾಂತ್ರಿಕ ಬೆಳವಣಿಗೆ ನಡೆದಿದೆ. ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಮತ್ತು ಸೇನಾ ಮುಖ್ಯಸ್ಥರ ಮನವಿಯ ಮೇರೆಗೆ ಟ್ರಂಪ್ ತಮ್ಮ ಬಾಂಬ್ ದಾಳಿಯ ನಿರ್ಧಾರವನ್ನು ಸ್ಥಗಿತಗೊಳಿಸಿದ್ದು, ಎರಡು ವಾರಗಳ ಕದನ ವಿರಾಮಕ್ಕೆ (US Iran Ceasefire) ಸಮ್ಮತಿಸಿದ್ದಾರೆ.

ಹಾರ್ಮುಜ್ ಜಲಸಂಧಿ ತೆರೆಯಲು ಇರಾನ್ ಸಮ್ಮತಿ

ಕಳೆದ ಐದು ವಾರಗಳಿಂದ ನಡೆಯುತ್ತಿದ್ದ ಯುದ್ಧವು ಜಗತ್ತಿನ ತೈಲ ಪೂರೈಕೆಯ ನಾಡಿಮಿಡಿತವಾದ ‘ಹಾರ್ಮುಜ್ ಜಲಸಂಧಿ’ಯನ್ನು ಬಂದ್ ಮಾಡಿತ್ತು. ಈಗ ಇರಾನ್ ಈ ಜಲಸಂಧಿಯನ್ನು ತಕ್ಷಣವೇ ಮತ್ತು ಸುರಕ್ಷಿತವಾಗಿ ತೆರೆಯಲು ಒಪ್ಪಿಕೊಂಡಿದೆ. ಟ್ರಂಪ್ ಈ ಹಿಂದೆ ಇರಾನ್‌ನ ನಾಗರಿಕ ಮೂಲಸೌಕರ್ಯಗಳ ಮೇಲೆ ದಾಳಿ ಮಾಡುವುದಾಗಿ ಎಚ್ಚರಿಸಿದ್ದರು, ಇದು ಯುದ್ಧಾಪರಾಧವಾಗಬಹುದು ಎಂದು ವಿಶ್ವಸಂಸ್ಥೆ ಮತ್ತು ಪೋಪ್ ಕೂಡ ಆತಂಕ ವ್ಯಕ್ತಪಡಿಸಿದ್ದರು. ಆದರೆ ಈಗ ಇರಾನ್ ನೀಡಿರುವ 10 ಅಂಶಗಳ ಪ್ರಸ್ತಾವನೆಯ ಆಧಾರದ ಮೇಲೆ ಶಾಂತಿ ಮಾತುಕತೆ ನಡೆಸಲು ಅಮೆರಿಕ ಮುಂದಾಗಿದೆ. ಇಸ್ರೇಲ್ ಕೂಡ ಈ ಕದನ ವಿರಾಮಕ್ಕೆ ಬೆಂಬಲ ಸೂಚಿಸಿದೆ ಎಂದು ವರದಿಯಾಗಿದೆ.

ಇರಾನ್​​ನ 10 ಅಂಶಗಳ ಪ್ರಸ್ತಾವನೆ ಏನು?

  1. ಆಕ್ರಮಣಶೀಲತೆ ಮಾಡದಿರುವಿಕೆಗೆ ಬದ್ಧತೆ
  2. ಹೊರ್ಮುಝ್​ ಮೇಲೆ ಇರಾನ್​​ ನಿಯಂತ್ರಣ ಮುಂದುವರಿಕೆ
  3. ಯುರೇನಿಯಂ ಪುಷ್ಟೀಕರಣದ ಸ್ವೀಕಾರ
  4. ಎಲ್ಲಾ ಪ್ರಾಥಮಿಕ & ದ್ವಿತೀಯ ನಿರ್ಬಂಧ ತೆರವು
  5. UN ಭದ್ರತಾ ಮಂಡಳಿ & IEAE ಆಡಳಿತ ಮಂಡಳಿಯ ನಿರ್ಣಯ ರದ್ದು
  6. ಜಲಸಂಧಿ ಆದಾಯ ಮೂಲಸೌಕರ್ಯಕ್ಕೆ ಪುನರ್​ನಿರ್ಮಾಣಕ್ಕೆ ಬಳಕೆ
  7. ಇರಾನ್‌ಗೆ ಪರಿಹಾರ ಪಾವತಿಗಳು
  8. ಅಮೆರಿಕ ಯುದ್ಧ ಪಡೆಗಳನ್ನ ಹಿಂತೆಗೆದುಕೊಳ್ಳುವುದು
  9. ಎಲ್ಲಾ ರಂಗಗಳಲ್ಲಿ ಯುದ್ಧವನ್ನ ನಿಲ್ಲಿಸುವುದು
  10. ಲೆಬನಾನ್​ ಮೇಲೆ ಇಸ್ರೇಲ್​ ದಾಳಿ ನಿಲ್ಲಿಸಬೇಕು

ಡೊನಾಲ್ಡ್ ಟ್ರಂಪ್ ಅವರ ಅಧಿಕೃತ ಹೇಳಿಕೆ ಇಲ್ಲಿದೆ

‘ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಮತ್ತು ಫೀಲ್ಡ್ ಮಾರ್ಷಲ್ ಅಸಿಮ್ ಮುನೀರ್ ಅವರೊಂದಿಗೆ ನಡೆಸಿದ ಮಾತುಕತೆಯ ಆಧಾರದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ. ಇಂದು ರಾತ್ರಿ ಇರಾನ್ ಮೇಲೆ ನಡೆಸಬೇಕಿದ್ದ ವಿನಾಶಕಾರಿ ದಾಳಿಯನ್ನು ತಡೆಹಿಡಿಯುವಂತೆ ಅವರು ವಿನಂತಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯೆಯಾಗಿ ಮತ್ತು ಇಸ್ಲಾಮಿಕ್ ರಿಪಬ್ಲಿಕ್ ಆಫ್ ಇರಾನ್ ಹಾರ್ಮುಜ್ ಜಲಸಂಧಿಯನ್ನು ಸಂಪೂರ್ಣವಾಗಿ, ತಕ್ಷಣವೇ ಮತ್ತು ಸುರಕ್ಷಿತವಾಗಿ ತೆರೆಯಲು ಒಪ್ಪಿಕೊಂಡಿರುವುದಕ್ಕೆ ಪ್ರತಿಯಾಗಿ, ನಾನು ಇರಾನ್ ಮೇಲಿನ ಬಾಂಬ್ ದಾಳಿ ಮತ್ತು ದಾಳಿಯನ್ನು ಎರಡು ವಾರಗಳ ಅವಧಿಗೆ ಅಮಾನತುಗೊಳಿಸಲು ಒಪ್ಪುತ್ತೇನೆ’ ಎಂದು ಟ್ರಂಪ್ ತಿಳಿಸಿದ್ದಾರೆ.

ಇದನ್ನೂ ಓದಿ: ಇಂದು ರಾತ್ರಿ ಇಡೀ ದೇಶವೇ ನಾಶವಾಗುತ್ತದೆ; ಗಡುವು ಸಮೀಪಿಸುತ್ತಿದ್ದಂತೆ ಇರಾನ್​ಗೆ ಟ್ರಂಪ್ ಬೆದರಿಕೆ

ಇದು ಉಭಯಪಕ್ಷೀಯ ಕದನ ವಿರಾಮವಾಗಿರುತ್ತದೆ! ನಾವು ಈಗಾಗಲೇ ಎಲ್ಲಾ ಮಿಲಿಟರಿ ಉದ್ದೇಶಗಳನ್ನು ಪೂರೈಸಿದ್ದೇವೆ ಮತ್ತು ಇರಾನ್‌ನೊಂದಿಗೆ ದೀರ್ಘಕಾಲೀನ ಶಾಂತಿ ಹಾಗೂ ಮಧ್ಯಪ್ರಾಚ್ಯದಲ್ಲಿ ಶಾಂತಿ ಸ್ಥಾಪಿಸುವ ನಿಟ್ಟಿನಲ್ಲಿ ನಿರ್ಣಾಯಕ ಒಪ್ಪಂದಕ್ಕೆ ಬಹಳ ಹತ್ತಿರದಲ್ಲಿದ್ದೇವೆ. ನಾವು ಇರಾನ್‌ನಿಂದ 10 ಅಂಶಗಳ ಪ್ರಸ್ತಾವನೆಯನ್ನು ಸ್ವೀಕರಿಸಿದ್ದೇವೆ ಮತ್ತು ಇದು ಮಾತುಕತೆಗೆ ಪೂರಕ ಆಧಾರವಾಗಿದೆ ಎಂದು ನಂಬುತ್ತೇವೆ. ಎರಡು ವಾರಗಳ ಕಾಲಾವಧಿಯು ಒಪ್ಪಂದವನ್ನು ಅಂತಿಮಗೊಳಿಸಲು ಮತ್ತು ಪೂರ್ಣಗೊಳಿಸಲು ಅನುವು ಮಾಡಿಕೊಡುತ್ತದೆ. ಅಮೆರಿಕದ ಪರವಾಗಿ ಅಧ್ಯಕ್ಷನಾಗಿ ಮತ್ತು ಮಧ್ಯಪ್ರಾಚ್ಯದ ದೇಶಗಳನ್ನು ಪ್ರತಿನಿಧಿಸುತ್ತಾ, ಈ ದೀರ್ಘಕಾಲದ ಸಮಸ್ಯೆಯು ಪರಿಹಾರದ ಹತ್ತಿರಕ್ಕೆ ಬಂದಿರುವುದು ಗೌರವದ ವಿಷಯವಾಗಿದೆ. ಧನ್ಯವಾದಗಳು ಎಂದು ಟ್ರಂಪ್ ಹೇಳಿದ್ದಾರೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link

Exit mobile version