Headlines

Chanakya Niti: ಮಹಿಳೆಯ ಈ ಗುಣಗಳು ಕುಟುಂಬದ ಬಹುದೊಡ್ಡ ಶಕ್ತಿ ಎಂದಿದ್ದಾರೆ ಚಾಣಕ್ಯ

ಹೆಣ್ಣು ಸಂಸಾರದ ಕಣ್ಣು, ಮನೆಯ ಏಳುಬೀಳು, ಕುಟುಂಬ ಸದಸ್ಯರ ಉನ್ನತಿ-ಅವನತಿ ಇವೆಲ್ಲವೂ ಆ ಮನೆಯ ಮಹಿಳೆಯ ಕೈಯಲ್ಲಿ ಇರುತ್ತದೆ. ಆದ್ದರಿಂದ ಮಹಿಳೆಯಾದವಳು ಸರಿಯಾದ ರೀತಿಯಲ್ಲಿ ಸಂಸಾರವನ್ನು ಸಾಗಿಸಿದರೆ, ಆ ಸಂಸಾರದಲ್ಲಿ ಸುಖ, ಶಾಂತಿ, ಸಮೃದ್ಧಿ ಎನ್ನುವಂತಹದ್ದು ನೆಲೆಸುತ್ತದೆ ಎಂದು ಆಚಾರ್ಯ ಚಾಣಕ್ಯ (Acharya Chanakya). ಅದರಲ್ಲೂ ಮಹಿಳೆಯಲ್ಲಿ ಈ ಕೆಲವು ಗುಣಗಳಿದ್ದರೆ ಆಕೆ ಮತ್ತು ಆಕೆಯ ಕುಟುಂಬದ ಭವಿಷ್ಯ ಉತ್ತಮ ರೀತಿಯಲ್ಲಿ ಇರುತ್ತದೆ. ಕುಟುಂಬದಲ್ಲಿ ಸುಖ, ಸಮೃದ್ಧಿ ನೆಲೆಸುತ್ತದೆ ಎಂದು ಆಚಾರ್ಯ ಚಾಣಕ್ಯರು ಹೇಳಿದ್ದಾರೆ. ಹಾಗಿದ್ರೆ ಮಹಿಳೆಯಾದವಳು…

Read More

11 ಓವರ್​ಗಳ ಪಂದ್ಯ: ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್ ಹೀಗಿದೆ

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19ರ ಹದಿಮೂರನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಿವೆ. ಗುವಾಹಟಿಯ ಬರ್ಸಪರಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್​ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಬೌಲಿಂಗ್ ಆಯ್ದುಕೊಂಡಿದ್ದಾರೆ. ಅದರಂತೆ ರಾಜಸ್ಥಾನ್ ರಾಯಲ್ಸ್ ತಂಡ ಮೊದಲು ಬ್ಯಾಟ್ ಮಾಡಲಿದೆ. ಮಳೆಯ ಕಾರಣ ತಡವಾಗಿ ಆರಂಭವಾಗಿರುವ ಈ ಪಂದ್ಯದಿಂದ ಒಟ್ಟು 18 ಓವರ್​ಗಳನ್ನು ಓವರ್ ಕಡಿತ ಮಾಡಲಾಗಿದೆ. ಅದರಂತೆ ಪ್ರತಿ ಇನಿಂಗ್ಸ್​ನಲ್ಲಿ 11…

Read More

ಅಶ್ಲೀಲ ಹಾಡಿನ ವಿವಾದ: ಕ್ಷಮೆ ಕೇಳಿ, 50 ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಸಹಾಯ ಮಾಡಲು ಮುಂದಾದ ಬಾದ್​ಶಾ

ವಿಭಿನ್ನ ರ‍್ಯಾಪ್ ಹಾಡುಗಳ ಮೂಲಕ ಜನಪ್ರಿಯರಾದ ಗಾಯಕ ಬಾದ್‌ಶಾ ಅವರು ಇತ್ತೀಚೆಗೆ ‘ಟಟೀರಿ’ (Tateeree) ಹಾಡಿನಿಂದ ದೊಡ್ಡ ವಿವಾದ ಮಾಡಿಕೊಂಡಿದ್ದರು. ಆ ಹಾಡಿನಲ್ಲಿ ಅಶ್ಲೀಲತೆ ಇದೆ ಎಂಬ ಕಾರಣಕ್ಕೆ ಭಾರಿ ವಿರೋಧ ವ್ಯಕ್ತವಾಗಿತ್ತು. ಅಲ್ಲದೇ, ಆ ಹಾಡನ್ನು ಡಿಲೀಟ್ ಮಾಡಿಸಲಾಗಿತ್ತು. ಈ ವಿವಾದಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಹಿಳಾ ಆಯೋಗದ (NCW) ಮುಂದೆ ಹಾಜರಾದ ಬಾದ್​ಶಾ (Badshah) ಅವರು ಕ್ಷಮೆಯಾಚಿಸಿದ್ದಾರೆ. ಹಾಡಿನಲ್ಲಿರುವ ಅಶ್ಲೀಲತೆ ಮತ್ತು ಅಸಭ್ಯ ಸಾಹಿತ್ಯದ ಕುರಿತು ಆಯೋಗವು ನೀಡಿದ್ದ ಸಮನ್ಸ್‌ಗೆ ಪ್ರತಿಕ್ರಿಯೆಯಾಗಿ ಅವರು ಈ ಕ್ರಮ…

Read More

ಇರಾನ್ ಮೇಲೆ ಪರಮಾಣು ದಾಳಿ ನಡೆಸುತ್ತಾ ಅಮೆರಿಕ? ಶ್ವೇತಭವನ ಹೇಳಿದ್ದೇನು?

ವಾಷಿಂಗ್ಟನ್, ಏಪ್ರಿಲ್ 7: ಇರಾನ್ ಒಪ್ಪಂದ ಮಾಡಿಕೊಳ್ಳದಿದ್ದರೆ ಇಡೀ ನಾಗರಿಕತೆಯು ಇಂದು ರಾತ್ರಿ ಕೊನೆಗೊಳ್ಳುತ್ತದೆ ಎಂದು ಡೊನಾಲ್ಡ್ ಟ್ರಂಪ್ (Donald Trump) ಇಂದು ಸಂಜೆ ಬೆದರಿಕೆ ಹಾಕಿದ್ದರು. ಡೊನಾಲ್ಡ್ ಟ್ರಂಪ್ ಅವರ ಈ ಹೇಳಿಕೆ ಇರಾನ್ ಮೇಲಿನ ಪರಮಾಣು ದಾಳಿಯ ಭಯವನ್ನು ಮತ್ತೆ ಮುನ್ನೆಲೆಗೆ ತಂದಿತ್ತು. ಇದರ ನಡುವೆ ಒಪ್ಪಂದ ಮಾಡಿಕೊಳ್ಳಲು ಟ್ರಂಪ್ ನೀಡಿದ ಗಡುವು ಕೊನೆಗೊಳ್ಳುವ ಮೊದಲೇ ಯುಎಸ್ ಮಿಲಿಟರಿ ಇರಾನ್‌ನ ಪ್ರಮುಖ ತೈಲ ಕೇಂದ್ರವಾದ ಖಾರ್ಗ್ ದ್ವೀಪದ ಮೇಲೆ ದಾಳಿ ಮಾಡಿತ್ತು. ಕದನವಿರಾಮಕ್ಕೆ ಒಪ್ಪದಿದ್ದರೆ…

Read More

ಇಲ್ಲಿ ನಮ್ಮ ಮಾತಿಗೆ ಗೌರವವೇ ನೀಡುತ್ತಿಲ್ಲ ಅಧಿಕಾರಿಗಳು: ಸಂಸದ ಯದುವೀರ್ ಒಡೆಯರ್

ಮೈಸೂರು, ಏ.7: ನಗರದ ಅಭಿವೃದ್ಧಿ ಯೋಜನೆಗಳು ಮತ್ತು ಆಡಳಿತದ ಕುರಿತು ಯದುವೀರ್‌ ಅವರು ಮಾತನಾಡಿದ್ದಾರೆ. ಕುಕ್ಕರಹಳ್ಳಿ ಕೆರೆ ಬಳಿ ರೈಲ್ವೆ ಕ್ರಾಸಿಂಗ್‌ನಲ್ಲಿ ಅಂಡರ್‌ಪಾಸ್ ನಿರ್ಮಾಣಕ್ಕೆ ಸಂಬಂಧಿಸಿದಂತೆ ವಿಳಂಬವಾಗಿದ್ದ ಕಾರ್ಯಗಳಿಗೆ ಇಲಾಖೆಗಳ ಅನುಮತಿ ದೊರೆತಿದ್ದು, 15 ದಿನಗಳಲ್ಲಿ ಕೆಲಸ ಆರಂಭವಾಗಲಿದೆ ಎಂದು ತಿಳಿಸಿದರು. ಈ 63 ಕೋಟಿ ರೂಪಾಯಿ ಯೋಜನೆಯಲ್ಲಿ ಪರಿಸರ ಸಂರಕ್ಷಣೆಗೆ ಒತ್ತು ನೀಡಲಾಗಿದ್ದು, ಮರಗಳನ್ನು ಸ್ಥಳಾಂತರ ಮಾಡಲು ಕೇರಳದ ಎನ್‌ಜಿಒ ಸಹಯೋಗದೊಂದಿಗೆ ಕ್ರಮ ಕೈಗೊಳ್ಳಲಾಗುತ್ತಿದೆ. ಹೆಬ್ಬಾಳ ಕೆರೆಯ ಯುಜಿಡಿ ನೀರಿನ ಮಿಶ್ರಣದ ಬಗ್ಗೆ ಗಂಭೀರ ಕಳವಳ…

Read More

ಕೊಡವ ಭಾಷೆಯಲ್ಲಿ ವಿಜಯ್ ದೇವರಕೊಂಡ ಬಗ್ಗೆ ಮಾತಾಡಿದ ರಶ್ಮಿಕಾ ಮಂದಣ್ಣ

ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರು ಪತಿ ವಿಜಯ್ ದೇವರಕೊಂಡ ಜೊತೆ ಇತ್ತೀಚೆಗೆ ತವರಿಗೆ ಬಂದಿದ್ದಾರೆ. ಮದುವೆ ಬಳಿಕ ಮೊದಲ ಬಾರಿ ಕೊಡಗಿಗೆ ಬಂದ ಅವರು ಕುಟುಂಬದವರಿಗೆ ಮತ್ತು ಸ್ನೇಹಿತರಿಗೆ ಔಟಣ ಕೂಟ ಏರ್ಪಡಿಸಿದ್ದರು. ಈ ವೇಳೆ ತಮ್ಮೂರಿನ ಜನರಿಗೆ ಗಂಡನನ್ನು ಪರಿಚಯಿಸಿದರು. ಕೊಡವ (Kodava) ಭಾಷೆಯಲ್ಲೇ ಅವರು ಗಂಡನ ಪರಿಚಯ ಮಾಡಿಸಿದರು. ವಿಜಯ್ ದೇವರಕೊಂಡ (Vijay Deverakonda) ಅವರು ಎಲ್ಲರ ಜೊತೆ ಬೆರೆತರು. ರಶ್ಮಿಕಾ ಮಂದಣ್ಣ ಅವರಿಗೆ ಹುಟ್ಟುಹಬ್ಬದ ಉಡುಗೊರೆ ರೂಪದಲ್ಲಿ ತಂದೆ ಮದನ್…

Read More

ಉಪ ಚುನಾವಣೆ ನಡೆಯುತ್ತಿರುವ ಜಿಲ್ಲೆಗಳ ಗ್ಯಾರಂಟಿ ಯೋಜನೆಗಳ ಅನುದಾನದ ವಿವರ ಕೇಳಿದ ಆಯೋಗ

ಬೆಂಗಳೂರು, (ಏಪ್ರಿಲ್ 07): ಕಳೆದ ಮೂರ್ನಾಲ್ಕು ತಿಂಗಳ ಗ್ಯಾರಂಟಿ ಯೋಜನೆಗಳ (guarantee schemes) ನಗದು ಹಣ ಬಿಡುಗಡೆ ಮಾಡದೇ ತಡೆ ಹಿಡಿಯಲಾಗಿದ್ದು, ಇದೀಗ ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ (Davanagere South And Bagalkot By Election) ಗಮನದಲ್ಲಿಟ್ಟುಕೊಂಡು ರಾಜ್ಯ ಸರ್ಕಾರ, ಏಕಕಾಲಕ್ಕೆ ಗ್ಯಾರಂಟಿ ಯೋಜನೆ ಹಣವನ್ನು ಬಿಡುಗಡೆ ಮಾಡುವ ಮೂಲಕ ಮತದಾರರನ್ನು ಸೆಳೆಯುವ ಪ್ರಯತ್ನ ಮಾಡಿದೆ ಎಂಬ ಆರೋಪ ಕೇಳಿಬಂದಿದೆ. ಈ ಸಂಬಂಧ ದಾವಣಗೆರೆ ದಕ್ಷಿಣ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೋರ್ಟ್…

Read More

ಸ್ವಾಮೀಜಿಯನ್ನು ಹನಿಟ್ರಾಪ್ ಮಾಡಲು ನಡೆದಿತ್ತಾ ಸಂಚು?: ಇದರ ಹಿಂದೆ ಶಾಸಕ ಕಾಶಪ್ಪನವರ್ ಕೈವಾಡ ಇದ್ಯಾ? ದೂರಿನಲ್ಲಿ ಬಿಚ್ಚಿಟ್ಟ ಸತ್ಯ!

ವಿಜಯಪುರ, ಏ. 07: ಪಂಚಮಸಾಲಿ 2ಎ ಮೀಸಲಾತಿ ಹೋರಾಟದ ಮುಂಚೂಣಿಯಲ್ಲಿರುವ ಕೂಡಲಸಂಗಮ ಪೀಠದ ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿಗಳ ಸುತ್ತ ಈಗ ವಿವಾದವೊಂದು ಸುತ್ತಿಕೊಂಡಿದೆ. ಸ್ವಾಮೀಜಿಗಳ ಮೇಲೆ ಹಲ್ಲೆ ನಡೆಸಿ, ನಂತರ ಹಣಕ್ಕಾಗಿ ಬ್ಲ್ಯಾಕ್‌ಮೇಲ್ ಮಾಡಲಾಗುತ್ತಿದೆ ಎಂದು ಅವರ ಶಿಷ್ಯ ಸಂತೋಷ ಮಂಜಣ್ಣಿ ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರಿನ ಪ್ರಕಾರ, ಕಳೆದ ಫೆಬ್ರವರಿ 11 ರಂದು ವಿಜಯಪುರ ತಾಲೂಕಿನ ಕಗ್ಗೋಡ ಬಳಿ ಸ್ವಾಮೀಜಿಗಳು ಕಾರಿನಲ್ಲಿ ತೆರಳುತ್ತಿದ್ದಾಗ ತ್ರಿವೇಣಿ ಎಂಬ ಮಹಿಳೆ ಮತ್ತು ಇತರರು…

Read More

ಇನ್ನೆರಡು ದಿನ ಹೊರಗೆ ಬರಬೇಡಿ; ಇರಾನ್​ನಲ್ಲಿರುವ ಭಾರತೀಯರಿಗೆ ತುರ್ತು ಸೂಚನೆ ನೀಡಿದ ಭಾರತ

ನವದೆಹಲಿ, ಏಪ್ರಿಲ್ 7: ಕದನವಿರಾಮ ಅಥವಾ ಶಾಂತಿ ಮಾತುಕತೆಗೆ ಇರಾನ್‌ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ನೀಡಿದ್ದ 10 ದಿನಗಳ ಗಡುವು ನಾಳೆ ಬೆಳಗ್ಗೆ ಅಂತ್ಯಗೊಳ್ಳಲಿದೆ. ಹೀಗಾಗಿ, ಟೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಇಂದು ಸಂಜೆ ತುರ್ತು ಸಲಹೆಯನ್ನು ನೀಡಿದ್ದು, ಸಂಭಾವ್ಯ ಉದ್ವಿಗ್ನ ಪರಿಸ್ಥಿತಿಯ ನಡುವೆ ಇರಾನ್ ದೇಶದಲ್ಲಿರುವ ಭಾರತೀಯ ಪ್ರಜೆಗಳು ಸುರಕ್ಷತೆಗೆ ಆದ್ಯತೆ ನೀಡುವಂತೆ ಒತ್ತಾಯಿಸಿದೆ. ಭಾರತೀಯ ಪ್ರಜೆಗಳು ಕನಿಷ್ಠ 48 ಗಂಟೆಗಳ ಕಾಲ ತಾವು ಎಲ್ಲಿದ್ದಾರೋ ಅದೇ ಸ್ಥಳಗಳಲ್ಲಿಯೇ ಇರಬೇಕೆಂದು ಸೂಚಿಸಲಾಗಿದೆ….

Read More

ಸಿದ್ದರಾಮಯ್ಯ ವಿರುದ್ಧದ ಆರೋಪ ಸಾಬೀತಿಗೆ ಮತ್ತೊಂದು ಅವಕಾಶ ಸಿಕ್ತು ಎಂದ ಸ್ನೇಹಮಯಿ ಕೃಷ್ಣ! ಅಂಥದ್ದೇನಾಯ್ತು?

ಮೈಸೂರು, ಏಪ್ರಿಲ್ 7: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (MUDA)ದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುಟುಂಬ ಅಕ್ರಮವಾಗಿ ನಿವೇಶನ ಪಡೆದಿದೆ ಎಂಬ ಆರೋಪದ ಪ್ರಕರಣದಲ್ಲಿ, ಲೋಕಾಯುಕ್ತ ಸಲ್ಲಿಸಿದ್ದ ಬಿ ರಿಪೋರ್ಟ್ ಅನ್ನು ಪ್ರಶ್ನಿಸಿ ಜಾರಿ ನಿರ್ದೇಶನಾಲಯ (ED) ಇದೀಗ ಮೇಲ್ಮನವಿ ಸಲ್ಲಿಸಿದೆ. ಈ ಬೆಳವಣಿಗೆಯ ಕುರಿತು ದೂರುದಾರ ಹಾಗೂ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ‘ಟಿವಿ9’ಗೆ ಪ್ರತಿಕ್ರಿಯೆ ನೀಡಿದ್ದಾರೆ. ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಲೋಕಾಯುಕ್ತದ ಬಿ ರಿಪೋರ್ಟ್​ ಅಂಗೀಕರಿಸಿದ ಆದೇಶವನ್ನು ಪ್ರಶ್ನಿಸಿ ಸ್ನೇಹಮಯಿ ಕೃಷ್ಣ ಈಗಾಗಲೇ…

Read More