Headlines

Video: ಮರಳಿ ಬಾಲ್ಯವನ್ನು ನೆನಪಿಸುವಂತಿದೆ ಈ ದೃಶ್ಯ; ಪಾಠದ ನಡುವೆ ತಿಂಡಿ ತಿಂದ ಪುಟಾಣಿ – Kannada News | A little boy who stole and ate a snack between lessons

ಪುಟ್ಟ ಮಕ್ಕಳು (little kids) ಕ್ಲಾಸ್ ರೂಮ್ ನಲ್ಲಿ ಶಿಕ್ಷಕರಿಗೆ ತಿಳಿಯದಂತೆ ಚಾಕಲೇಟ್ ತಿನ್ನೋದು, ಟಿಫನ್ ಬಾಕ್ಸ್ ತೆರೆದು ತಿಂಡಿ ತಿನ್ನೋದು ಹೀಗೆ ಇನ್ನಿತ್ತರ ಚಟುವಟಿಕೆಯಲ್ಲಿ ತೊಡಗಿ ಸಿಕ್ಕಿ ಬೀಳುತ್ತಾರೆ. ನೀವು ಕೂಡ ಶಿಕ್ಷಕರಿಗೆ ಚಳ್ಳೆ ಹಣ್ಣು ತಿನ್ನಿಸಿರಬಹುದು. ಕೆಲವೊಮ್ಮೆ ಟೀಚರ್ ಕೈಯಲ್ಲಿ ಸಿಕ್ಕಿ ಬಿದ್ದು ನೆಪಗಳನ್ನು ಹೇಳಿದ್ದೀರಬಹುದು. ಈ ಪುಟಾಣಿಯದ್ದು ಅದೇ ಕಥೆ. ಪುಟಾಣಿಯು ಶಿಕ್ಷಕರನ್ನು ಯಾಮಾರಿಸುವ ವಿಡಿಯೋ ವೈರಲ್ ಆಗಿದೆ. ಟೀಚರ್ ಹೋಮ್ ವರ್ಕ್ ಮಾಡೋದಕ್ಕೆ ಹೇಳಿದ್ರೆ ಈ ಪುಟ್ಟ ಹುಡುಗ ಟಿಫನ್ ಬಾಕ್ಸ್…

Read More

ವಿದ್ಯುತ್ ಚಾಲಿತ ವಾಹನಗಳಿಗೂ ಇನ್ನು ತೆರಿಗೆ​​: ರಾಜ್ಯ ಸರ್ಕಾರದ ನಿರ್ಧಾರಕ್ಕೆ ಕೇಂದ್ರ ಸಚಿವ ಪ್ರಹ್ಲಾದ್​​ ಜೋಶಿ ಕಿಡಿ

ಬೆಂಗಳೂರು, ಏಪ್ರಿಲ್​​ 03: ವಿದ್ಯುತ್ ಚಾಲಿತ ವಾಹನಗಳಿಗೆ ಇಲ್ಲಿಯವರೆಗೆ ನೀಡಲಾಗಿದ್ದ ತೆರಿಗೆ (Tax) ವಿನಾಯಿತಿಯನ್ನು ಹಿಂಪಡೆದ ಕರ್ನಾಟಕ ಸರ್ಕಾರದ ನಿರ್ಧಾರಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದು ದೇಶ ಮತ್ತು ಜಗತ್ತಿನಲ್ಲಿ ವಿದ್ಯುತ್ ವಾಹನಗಳತ್ತ ಸಾಗುವ ಪ್ರಯತ್ನಕ್ಕೆ ದೊಡ್ಡ ಹಿನ್ನಡೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಈ ಕ್ರಮವು ಜನರನ್ನು ಮತ್ತೆ ಡೀಸೆಲ್ ಮತ್ತು ಪೆಟ್ರೋಲ್ ವಾಹನಗಳತ್ತ ಸೆಳೆಯಲು ಪ್ರೋತ್ಸಾಹ ನೀಡಿದಂತಾಗುತ್ತದೆ. ಇದರಿಂದ ಮಾಲಿನ್ಯ ಹೆಚ್ಚಾಗುವುದಲ್ಲದೆ, ಕಚ್ಚಾ ತೈಲ ಆಮದಿನ ಮೇಲೆ ದೇಶದ ಅವಲಂಬನೆ…

Read More

ಮಳೆಯಿಂದ ಅಪಾಯದ ಮಟ್ಟ ತಲುಪಿದ ಅಲಕಾನಂದ ನದಿ; ರುದ್ರಪ್ರಯಾಗದಲ್ಲಿ ಹೈ ಅಲರ್ಟ್ – Kannada News | Alaknanda river swell after heavy rains in Rudraprayag Orange alert issued

ರುದ್ರಪ್ರಯಾಗ, ಜುಲೈ 2: ಉತ್ತರಾಖಂಡದ ರುದ್ರಪ್ರಯಾಗ ಜಿಲ್ಲೆಯಲ್ಲಿ ಮುಂದುವರಿದಿರುವ ಭಾರಿ ಮಳೆಯು (Rain Updates) ನದಿಗಳ ನೀರಿನ ಮಟ್ಟದ ಮೇಲೆ ತೀವ್ರ ಪರಿಣಾಮ ಬೀರಲು ಪ್ರಾರಂಭಿಸಿದೆ. ಈ ಜಿಲ್ಲೆಯ ಪ್ರಮುಖ ನದಿಗಳಾದ ಅಲಕನಂದಾ ಮತ್ತು ಮಂದಾಕಿನಿ ಎರಡರಲ್ಲೂ ನೀರಿನ ಮಟ್ಟ ಗಣನೀಯವಾಗಿ ಏರಿಕೆಯಾಗಿದ್ದು, ಜಿಲ್ಲಾಡಳಿತವು ಕಣ್ಗಾವಲನ್ನು ತೀವ್ರಗೊಳಿಸಿದೆ. ಮುಂದಿನ ಕೆಲವು ದಿನಗಳ ಕಾಲ ಮಳೆ ಹೀಗೆಯೇ ಮುಂದುವರಿದರೆ, ಎರಡೂ ನದಿಗಳಲ್ಲಿ ನೀರಿನ ಮಟ್ಟ ಮತ್ತಷ್ಟು ಹೆಚ್ಚಾಗಲಿದ್ದು, ಅಪಾಯದ ಮಟ್ಟವನ್ನು ತಲುಪಬಹುದು ಎಂದು ಅಧಿಕಾರಿಗಳು ಎಚ್ಚರಿಸಿದ್ದಾರೆ. ನದಿತೀರದಲ್ಲಿ ವಾಸಿಸುವ…

Read More

ಉಡುಪಿ: ಸಿಟಿ ಬಸ್ ನಿಲ್ದಾಣದ ಮುಂದೆಯೇ ಹೊತ್ತಿ ಉರಿದ ಕಟ್ಟಡ; ಮೊಬೈಲ್, ಹಾರ್ಡ್‌ವೇರ್ ಮಳಿಗೆಗಳು ಸುಟ್ಟು ಭಸ್ಮ! – Kannada News | Major Fire at Udupi’s Khadar Commercial Complex: Shops Gutted, Short Circuit Suspected

ಉಡುಪಿ, ಏ.26: ನಗರದ ಪ್ರಮುಖ ವಾಣಿಜ್ಯ ಪ್ರದೇಶವಾದ ಸಿಟಿ ಬಸ್ ನಿಲ್ದಾಣದ ಸಮೀಪವಿರುವ ‘ಖಾದರ್ ಕಮರ್ಷಿಯಲ್’ ಸಂಕೀರ್ಣದಲ್ಲಿ ಇಂದು ಭಾರಿ ಅಗ್ನಿ ಅವಘಡ ಸಂಭವಿಸಿದೆ. ಆಕಸ್ಮಿಕವಾಗಿ ಕಾಣಿಸಿಕೊಂಡ ಬೆಂಕಿ ಕ್ಷಣಾರ್ಧದಲ್ಲಿ ಇಡೀ ಕಟ್ಟಡಕ್ಕೆ ವ್ಯಾಪಿಸಿದ್ದು, ವ್ಯಾಪಾರಿಗಳು ಮತ್ತು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಖಾದರ್ ಕಮರ್ಷಿಯಲ್ ಕಟ್ಟಡದಲ್ಲಿರುವ ಮೊಬೈಲ್ ಅಂಗಡಿ ಮತ್ತು ಹಾರ್ಡ್‌ವೇರ್ ಮಳಿಗೆಯಲ್ಲಿ ಮೊದಲು ಬೆಂಕಿ ಕಾಣಿಸಿಕೊಂಡಿದೆ. ಹಾರ್ಡ್‌ವೇರ್ ಅಂಗಡಿಯಲ್ಲಿದ್ದ ಸುಡುವ ಪದಾರ್ಥಗಳಿಂದಾಗಿ ಬೆಂಕಿ ತೀವ್ರವಾಗಿ ಹರಡಿದ್ದು, ದಟ್ಟವಾದ ಹೊಗೆ ಇಡೀ ಪ್ರದೇಶವನ್ನು ಆವರಿಸಿಕೊಂಡಿತ್ತು. ಪರಿಣಾಮವಾಗಿ ಮೊಬೈಲ್…

Read More

ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ಛಲವಾದಿ ನಾರಾಯಣಸ್ವಾಮಿ

ಕಲಬುರಗಿ, ಮೇ 29: ಒಂದು ತಿಂಗಳೊಳಗೆ ನಾಲ್ವರು ಹಿಂದೂ ವಿರೋಧಿಗಳು ಅಧಿಕಾರ ಕಳೆದುಕೊಂಡಿದ್ದಾರೆ ಎಂಬ ಪೋಸ್ಟರ್​​ವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ತಮಿಳುನಾಡಿನ ಎಂ.ಕೆ ಸ್ಟಾಲಿನ್, ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ, ಕೇರಳದ ಪಿಣರಾಯಿ ವಿಜಯನ್​ ಮತ್ತು ಕರ್ನಾಟಕದ ಸಿದ್ದರಾಮಯ್ಯರ ಪೋಸ್ಟರ್ ವೈರಲ್​ ಆಗಿದೆ. ಈ ಸಂಬಂಧ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಪ್ರತಿಕ್ರಿಯಿಸಿದ್ದು, ಹಿಂದುತ್ವದ ವಿರುದ್ಧ ನಿಲುವು ತಳೆದಿದ್ದ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ನಾಲ್ಕು ಮಂದಿ ಮುಖ್ಯಮಂತ್ರಿಗಳು ಕಳೆದ ಒಂದು ತಿಂಗಳಲ್ಲೇ ತಮ್ಮ ಸ್ಥಾನ…

Read More

ವೇದಿಕೆಯಲ್ಲಿ ಡಿ.ಕೆ. ಶಿವಕುಮಾರ್ ಭುಜ ತಟ್ಟಿ ಕೈಹಿಡಿದ ಮೋದಿ: ಪ್ರಧಾನಿ ಕಿವಿಯಲ್ಲಿ ಸಿಎಂ ಹೇಳಿದ್ದೇನು? – Kannada News | Narendra Modis Mysuru Visit: Viveka Smaraka Inauguration and CM DK Shivakumar Meet

ಮೈಸೂರು, ಆ.1: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇತ್ತೀಚೆಗೆ ಮೈಸೂರಿಗೆ ಭೇಟಿ ನೀಡಿ, ನಗರದಲ್ಲಿ ನಿರ್ಮಿಸಲಾಗಿರುವ ವಿವೇಕ ಸ್ಮಾರಕವನ್ನು ಉದ್ಘಾಟಿಸಿದರು. ಮೈಸೂರಿನ ರಾಮಕೃಷ್ಣ ಆಶ್ರಮದ ಆವರಣದಲ್ಲಿ, ದೇವರಾಜ ಮೊಹಲ್ಲಾದ ನಾರಾಯಣಶಾಸ್ತ್ರಿ ರಸ್ತೆಯಲ್ಲಿರುವ ಈ ಸ್ಮಾರಕವು ನಗರದ ಒಂದು ಮಹತ್ವದ ಹೆಗ್ಗುರುತಾಗಿದೆ. ಈ ಉದ್ಘಾಟನಾ ಸಮಾರಂಭವು ರಾಜ್ಯದ ಜನತೆಗೆ ಹೊಸ ಆಶಯಗಳನ್ನು ಮೂಡಿಸಿದೆ. ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಪ್ರಧಾನಮಂತ್ರಿ ಮೋದಿ ಅವರು, ಉದ್ಘಾಟನೆಯ ನಂತರ ಮಾಡಿದ ಭಾಷಣದಲ್ಲಿ ವಿವೇಕ ಸ್ಮಾರಕದ ಮಹತ್ವವನ್ನು ವಿವರಿಸಿದರು. ಭಾಷಣ ಮುಗಿದ ನಂತರ, ರಾಜ್ಯದ ಮುಖ್ಯಮಂತ್ರಿ…

Read More

NeGD Summer Internship 2026: ಕೇಂದ್ರ ಸರ್ಕಾರದ ಐಟಿ ಇಲಾಖೆಯಲ್ಲಿ ಇಂಟರ್ನ್‌ಶಿಪ್ ಮಾಡಲು ಇಲ್ಲಿದೆ ಸುವರ್ಣಾವಕಾಶ! – Kannada News | NeGD Summer Internship 2026: Non Technical Roles for Students in Digital India

ಕೇಂದ್ರ ಸರ್ಕಾರದ ಐಟಿ ಇಲಾಖೆಯಲ್ಲಿ ಇಂಟರ್ನ್‌ಶಿಪ್ ಭಾರತ ಸರ್ಕಾರದ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ (MeitY) ಅಡಿಯಲ್ಲಿ ಕಾರ್ಯನಿರ್ವಹಿಸುವ ಡಿಜಿಟಲ್ ಇಂಡಿಯಾ ಕಾರ್ಪೊರೇಷನ್‌ನ ರಾಷ್ಟ್ರೀಯ ಇ-ಆಡಳಿತ ವಿಭಾಗವು (NeGD), 2026 ರ ಸಾಲಿನ ತಾಂತ್ರಿಕೇತರ ಬೇಸಿಗೆ ಇಂಟರ್ನ್‌ಶಿಪ್ ಕಾರ್ಯಕ್ರಮಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಭಾರತೀಯ ವಿಶ್ವವಿದ್ಯಾಲಯಗಳಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ದೇಶದ ಡಿಜಿಟಲ್ ರೂಪಾಂತರದ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಭಾಗವಹಿಸಲು ಇದೊಂದು ಅಪರೂಪದ ಅವಕಾಶವಾಗಿದೆ. ಲಭ್ಯವಿರುವ ಹುದ್ದೆಗಳು ಮತ್ತು ಇಲಾಖೆಗಳ ವಿವರ: ಈ ಇಂಟರ್ನ್‌ಶಿಪ್ ಕಾರ್ಯಕ್ರಮದ…

Read More

IND vs WI: ಅತಿ ಹೆಚ್ಚು ಸಿಕ್ಸರ್; ವಿಶ್ವದಾಖಲೆ ಬರೆದ ಶಿಮ್ರಾನ್ ಹೆಟ್ಮೈಯರ್

2026 ರ ಟಿ20 ವಿಶ್ವಕಪ್​ನ ಸೂಪರ್ 8 ಸುತ್ತಿನ ಕೊನೆಯ ಪಂದ್ಯ ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ನಡೆಯಿತು. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ವೆಸ್ಟ್ ಇಂಡೀಸ್ ತಂಡದ ಪರ ಶಿಮ್ರಾನ್ ಹೆಟ್ಮೈಯರ್ ದೊಡ್ಡ ಇನ್ನಿಂಗ್ಸ್ ಆಡಲಿಲ್ಲವಾದರೂ ಅತಿ ಹೆಚ್ಚು ಸಿಕ್ಸರ್‌ಗಳ ವಿಚಾರದಲ್ಲಿ ವಿಶ್ವದಾಖಲೆಯನ್ನು ನಿರ್ಮಿಸಿದರು. ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ಮೊದಲು ಬ್ಯಾಟಿಂಗ್ ಮಾಡಿತು. ರೋಸ್ಟನ್ ಚೇಸ್ ಮತ್ತು ನಾಯಕ ಶೈ ಹೋಪ್…

Read More