Headlines

ಪ್ರೀತಿ ವಿಚಾರ ಹುಡುಗಿ ಮನೆಗೆ ಗೊತ್ತಾಯ್ತು, ಅವ್ರು ಒಪ್ಪದಿದ್ರೆ ಮಗ ಏನಾದ್ರೂ ಮಾಡಿಕೊಂಡಾನು ಎಂದು ತಂದೆ ಜತೆನೇ ಇದ್ರೂ ಉಳಿಸಲಾಗಲಿಲ್ಲ

ಇಂದೋರ್, ಏಪ್ರಿಲ್ 5: ಮನೆಯವರಿಗೆ ವಿಡಿಯೋ ಕಾಲ್ ಮಾಡಿ ಬಳಿಕ ವಿದ್ಯಾರ್ಥಿಯೊಬ್ಬ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ(Suicide) ಮಾಡಿಕೊಂಡಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ನಡೆದಿದೆ. ಶನಿವಾರ ಸಂಜೆ ಎಂಐಜಿ ಪೊಲೀಸ್ ಠಾಣೆ ಪ್ರದೇಶದಲ್ಲಿ ಬಿ.ಫಾರ್ಮಾ ವಿದ್ಯಾರ್ಥಿಯೊಬ್ಬ ತನ್ನ ತಂದೆಯ ಪರವಾನಗಿ ಪಡೆದ ಬಂದೂಕಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ . ಸಂಜೆ 6.30 ರ ಸುಮಾರಿಗೆ ವಿದ್ಯಾರ್ಥಿಯ ತಂದೆ ತರಕಾರಿ ಖರೀದಿಸಲು ಹೊರಗೆ ಹೋಗಿದ್ದರು, ಮನೆಯಲ್ಲಿ ಪಿಸ್ತೂಲ್ ಇತ್ತು. ಮನೆಯವರಿಗೆ ವೀಡಿಯೊ ಕರೆ ಮಾಡಿದ ಸ್ವಲ್ಪ ಸಮಯದ…

Read More

Weekly Horoscope: ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ – Kannada News | Dr. Basavaraj Guruji Weekly Horoscope: Zodiac Predictions July 13 19, 2026

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ ಗುರೂಜಿಯವರು ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯವನ್ನು ನೀಡಿದ್ದಾರೆ. ಈ ವಾರವು ಪರಾಭವ ನಾಮ ಸಂವತ್ಸರ, ಉತ್ತರಾಯಣ, ಜ್ಯೇಷ್ಠ ಮಾಸವನ್ನು ಒಳಗೊಂಡಿದ್ದು, ಇದೇ ವಾರದಲ್ಲಿ ದಕ್ಷಿಣಾಯನ ಮತ್ತು ಆಷಾಢ ಮಾಸವೂ ಪ್ರಾರಂಭವಾಗಲಿದೆ. ಮಣ್ಣೆತ್ತಿನ ಅಮಾವಾಸ್ಯೆ, ಅಮೃತ ಲಕ್ಷ್ಮೀ ವ್ರತ, ಕಟಕ ಸಂಕ್ರಮಣದಂತಹ ಹಲವು ವಿಶೇಷತೆಗಳಿಂದ ಈ ವಾರ ಕೂಡಿರುತ್ತದೆ. ಗ್ರಹಗಳ ಸ್ಥಾನಗಳ ಕುರಿತು ವಿವರಿಸಿರುವ ಗುರೂಜಿ, ಶನಿ ಮೀನ ರಾಶಿಯಲ್ಲಿ, ರಾಹು…

Read More

ಕೋಲಾರ: ಬೈಕ್​​ಗಾಗಿ ಸೆಕ್ಯೂರಿಟಿ ಗಾರ್ಡ್​ನ ಬರ್ಬರವಾಗಿ ಕೊಂದ 19 ವರ್ಷದ ಯುವಕ! – Kannada News | Youth Kills Security Guard for Bike Obsession in Kolar

ಆರೋಪಿ ಯುವಕ ಮತ್ತು ಮೃತ ಸೆಕ್ಯೂರಿಟಿ ಗಾರ್ಡ್​​. ಕೋಲಾರ, ಜನವರಿ 08: ಬೈಕ್​​ ಮೇಲಿನ ಹುಚ್ಚು ಪ್ರೀತಿಗೆ 19 ವರ್ಷದ ಯುವಕನೋರ್ವ ಸೆಕ್ಯೂರಿಟಿ ಗಾರ್ಡ್​​ನ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಕೋಲಾರ ತಾಲೂಕಿನ ಉದ್ದಪ್ಪನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮುನಿರಾಜು (45) ಕೊಲೆಯಾದ ವ್ಯಕ್ತಿಯಾಗಿದ್ದು, ಆತನ ಸ್ನೇಹಿತ ಗಂಗರಾಜುವೇ ಆರೋಪಿ ಎಂಬುದು ಗೊತ್ತಾಗಿದೆ. ನಾಪತ್ತೆಯಾಗಿದ್ದ ಮುನಿರಾಜು ಶವ ಕೆರೆಯೊಂದರಲ್ಲಿ ಪತ್ತೆಯಾಗಿದ್ದು, ಪ್ರಕರಣದ ತನಿಖೆಗಿಳಿದ ಪೊಲೀಸರೇ ಕೊಲೆಯ ಕಾರಣ ಕಂಡು ಪೊಲೀಸರೇ ದಂಗಾಗಿದ್ದಾರೆ. ಉದ್ದಪ್ಪನಹಳ್ಳಿ ಗ್ರಾಮದ ನಿವಾಸಿ ಮುನಿರಾಜು ತಮ್ಮದೇ…

Read More

ಜಮ್ಮು ಮತ್ತು ಕಾಶ್ಮೀರ: ಉಗ್ರ ವಿರೋಧಿ ಕಾರ್ಯಾಚರಣೆ ವೇಳೆ ಕಂದಕಕ್ಕೆ ಬಿದ್ದು ಯೋಧ ಹುತಾತ್ಮ – Kannada News

ಲೆಫ್ಟಿನೆಂಟ್ ಬೀರೇಶ್ವರ್ ಗೋಸ್ವಾಮಿ ರಾಜೌರಿ, ಜೂನ್ 07: ಜಮ್ಮು ಮತ್ತು ಕಾಶ್ಮೀರ(Jammu and Kashmir)ದ ರಾಜೌರಿಯಲ್ಲಿ ಉಗ್ರ ವಿರೋಧಿ ಕಾರ್ಯಾಚರಣೆ ವೇಳೆ ಕಂದಕಕ್ಕೆ ಬಿದ್ದು ಸೈನಿಕರೊಬ್ಬರು ಹುತಾತ್ಮರಾಗಿರುವ ಘಟನೆ ನಡೆದಿದೆ. ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯ ಕಠಿಣ ಪರ್ವತ ಪ್ರದೇಶಗಳಲ್ಲಿ ದೇಶದ ಭದ್ರತೆಗಾಗಿ ಹಾಗೂ ಗಡಿಗಳನ್ನು ಭಯೋತ್ಪಾದಕರಿಂದ ಮುಕ್ತಗೊಳಿಸಲು ಅಪ್ರತಿಮ ಧೈರ್ಯದಿಂದ ಹೋರಾಡುತ್ತಿದ್ದ ಭಾರತೀಯ ಸೇನೆಯ ವೀರ ಅಧಿಕಾರಿ, ಲೆಫ್ಟಿನೆಂಟ್ ಬೀರೇಶ್ವರ್ ಗೋಸ್ವಾಮಿ ಅವರು ಶನಿವಾರ ಸಂಜೆ ಕರ್ತವ್ಯದ ಅವಧಿಯಲ್ಲಿ ಹುತಾತ್ಮರಾಗಿದ್ದಾರೆ. ರಾಜೌರಿಯ ದುರ್ಗಮ ಕಾಡುಗಳಲ್ಲಿ…

Read More

ಮಧ್ಯಪ್ರದೇಶದ ಬಾರ್ಗಿ ಡ್ಯಾಂನಲ್ಲಿ ಬಿರುಗಾಳಿಯಿಂದ ಹಡಗು ಮುಳುಗಿ 4 ಜನ ಸಾವು – Kannada News | 4 people dead after cruise boat with 30 onboard capsizes in Madhya Pradesh Bargi dam

ಜಬಲ್ಪುರ, ಏಪ್ರಿಲ್ 30: ಮಧ್ಯಪ್ರದೇಶದ (Madhya Pradesh) ಜಬಲ್ಪುರದ ಖಮರಿಯಾ ದ್ವೀಪದ ಬಳಿಯ ಬಾರ್ಗಿ ಡ್ಯಾಂನಲ್ಲಿ ಬಿರುಗಾಳಿಯಿಂದ ಇಂದು ಸಂಜೆ ಕ್ರೂಸ್ ಹಡಗು ಮುಳುಗಿದ್ದು, 4 ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವಾರು ಜನರು ಕಾಣೆಯಾಗಿದ್ದಾರೆ. ರಾಜ್ಯ ವಿಪತ್ತು ಪ್ರತಿಕ್ರಿಯೆ ನಿಧಿ (SDRF) ಇದುವರೆಗೆ 18 ಜನರನ್ನು ರಕ್ಷಿಸಿದೆ. ತೀವ್ರ ಬಿರುಗಾಳಿಯ ನಡುವೆ ಹಡಗು ಸಮತೋಲನ ಕಳೆದುಕೊಂಡು ಮಗುಚಿ ಬಿದ್ದು ಮುಳುಗಿತು. ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ ಕಾರಣದಿಂದ ತಕ್ಷಣ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು. ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು…

Read More

ಮದುವೆಗೆ ಕೆಲವೇ ದಿನ ಬಾಕಿ ಇರುವಾಗಲೂ ಶೂಟಿಂಗ್ ನಿಲ್ಲಿಸಿಲ್ಲ ರಶ್ಮಿಕಾ ಮಂದಣ್ಣ – Kannada News | Rashmika Mandanna shooting for Allu Arjun new movie AA22XA6 in Mumbai ahead of marriage

ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರು ಶೀಘ್ರದಲ್ಲೇ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ವಿಜಯ್ ದೇವರಕೊಂಡ ಜೊತೆ ಅವರು ಹಸೆಮಣೆ ಏರಲಿದ್ದಾರೆ. ಮದುವೆಗೆ ಕೆಲವೇ ದಿನಗಳು ಬಾಕಿ ಇವೆ. ಹಾಗಿದ್ದರೂ ಕೂಡ ರಶ್ಮಿಕಾ ಮಂದಣ್ಣ ಅವರು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಅಲ್ಲು ಅರ್ಜುನ್ (Allu Arjun) ಜೊತೆಗಿನ ಹೊಸ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ ನಟಿಸುತ್ತಿದ್​ದಾರೆ. ಮುಂಬೈನಲ್ಲಿ ಈ ಚಿತ್ರಕ್ಕೆ ಶೂಟಿಂಗ್ ನಡೆಯುತ್ತಿದೆ. ಅದರಲ್ಲಿ ರಶ್ಮಿಕಾ ಮಂದಣ್ಣ ಅವರು ಭಾಗಿಯಾಗಿದ್ದಾರೆ. ಈ ಸಿನಿಮಾಗೆ ಅಟ್ಲಿ ಅವರು ನಿರ್ದೇಶನ…

Read More

ಮೊಬೈಲ್ ಇದ್ರೆ ಸಾಕು ರೇಷನ್ ಕಾರ್ಡ್‌ ಇ-ಕೆವೈಸಿ ಸ್ಥಿತಿ ಪರಿಶೀಲಿಸ್ಬಹುದು – Kannada News | Ration Card: Check your ration card status on your mobile from the comfort of your home.

ರೇಷನ್ ಕಾರ್ಡ್ ಇ-ಕೆವೈಸಿಯೂ (Ration Card E-KYC) ಪಡಿತರ ಚೀಟಿದಾರರ ಗುರುತನ್ನು ಆಧಾರ್  ಕಾರ್ಡ್‌ ಮೂಲಕ ದೃಢೀಕರಿಸುವ ಪ್ರಕ್ರಿಯೆಯಾಗಿದೆ. ಸರ್ಕಾರದ ಸೌಲಭ್ಯಗಳನ್ನು ಪಡೆಯಲು, ನಕಲಿ ಕಾರ್ಡ್‌ಗಳನ್ನು ತಪ್ಪಿಸಲು ಹಾಗೂ ಅರ್ಹರಿಗೆ ನೇರವಾಗಿ ಸಬ್ಸಿಡಿ ತಲುಪಿಸಲು ರೇಷನ್ ಕಾರ್ಡ್ ಇ-ಕೆವೈಸಿ ಮಾಡುವುದು ಕಡ್ಡಾಯವಾಗಿದೆ. ಆದರೆ ನಿಮ್ಮ ರೇಷನ್ ಕಾರ್ಡ್ ಇ-ಕೆವೈಸಿ ಆಗಿದೆಯೇ ಎಂದು ನೀವು ಮೊಬೈಲ್‌ನಲ್ಲಿ ಪರಿಶೀಲಿಸಬಹುದು. ಆನ್ಲೈನ್‌ನಲ್ಲಿ ಪರಿಶೀಲಿಸುವುದು ಹೇಗೆ? ಹಂತ 1: ನೀವು ಅಧಿಕೃತ ಆಹಾರ ಕರ್ನಾಟಕ ವೆಬ್‌ಸೈಟ್ ಗೆ ಭೇಟಿ ನೀಡಿ. ಹಂತ 2:…

Read More

ಹುಡುಗಿ ಸಿಕ್ಕರೆ ಮದುವೆ ಆಗ್ತೀನಿ: 67ನೇ ವಯಸ್ಸಿನಲ್ಲಿ ಆಸೆ ತಿಳಿಸಿದ ‘ಶಕ್ತಿಮಾನ್’ ನಟ ಮುಕೇಶ್ ಖನ್ನಾ – Kannada News | Shaktimaan Mukesh Khanna open to marriage at 67 talks about destiny and relationships

ಭಾರತೀಯ ಕಿರುತೆರೆಯ ಐಕಾನಿಕ್ ಸೂಪರ್ ಹೀರೋ ‘ಶಕ್ತಿಮಾನ್’ (Shaktimaan) ಖ್ಯಾತಿಯ ಹಿರಿಯ ನಟ ಮುಖೇಶ್ ಖನ್ನಾ ಅವರಿಗೆ ಈಗ 67 ವರ್ಷ. ಈ ವಯಸ್ಸಿನಲ್ಲೂ ಅವರು ಅವಿವಾಹಿತರಾಗಿಯೇ ಉಳಿದಿದ್ದಾರೆ. ಆದರೆ, ಇತ್ತೀಚಿನ ಸಂದರ್ಶನವೊಂದರಲ್ಲಿ ತಮ್ಮ ಮದುವೆ, ಸಂಬಂಧಗಳು ಮತ್ತು ಜೀವನದ ಬಗ್ಗೆ ಮುಖೇಶ್ ಖನ್ನಾ (Mukesh Khanna) ಅವರು ಅತ್ಯಂತ ಕುತೂಹಲಕಾರಿ ವಿಷಯಗಳನ್ನು ಹಂಚಿಕೊಂಡಿದ್ದಾರೆ. ಹಣೆಯಲ್ಲಿ ಬರೆದಿರುವ ಹುಡುಗಿ ಸಿಕ್ಕಿರೆ ಮದುವೆ (Marriage) ಆಗುವುದಾಗಿ ಮುಖೇಶ್ ಖನ್ನಾ ಅವರು ಹೇಳಿದ್ದಾರೆ. ‘ದಿ ಫಿಲ್ಮಿ ಚರ್ಚಾ’ ಪಾಡ್‌ಕಾಸ್ಟ್‌ನಲ್ಲಿ ಮಾತನಾಡಿದ…

Read More

ಮುಜಾಫರ್‌ಪುರ ಅಗ್ನಿ ದುರಂತ; ಸಾವಿನ ಸಂಖ್ಯೆ 7ಕ್ಕೆ ಏರಿಕೆ, ಆಸ್ಪತ್ರೆ ನೋಂದಣಿ ರದ್ದು, ಮೂವರ ಬಂಧನ – Kannada News

ಮುಜಾಫರ್‌ಪುರ, ಜೂನ್ 6: ಬಿಹಾರದ ಮುಜಾಫರ್‌ಪುರದ ಖಾಸಗಿ ಆಸ್ಪತ್ರೆಯೊಂದರಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ (Fire Accident) ಚಿಕಿತ್ಸೆ ಫಲಕಾರಿಯಾಗದೆ ಇಂದು ಮತ್ತೊಬ್ಬ ರೋಗಿ ಮೃತಪಟ್ಟಿದ್ದಾರೆ. ಇದರೊಂದಿಗೆ ದುರಂತದಲ್ಲಿ ಸಾವನ್ನಪ್ಪಿದವರ ಒಟ್ಟು ಸಂಖ್ಯೆ 7ಕ್ಕೆ ಏರಿಕೆಯಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಅಧಿಕಾರಿಗಳು ಆಸ್ಪತ್ರೆಯ ನೋಂದಣಿಯನ್ನು ತಕ್ಷಣದಿಂದಲೇ ರದ್ದುಗೊಳಿಸಿದ್ದು, ಸುರಕ್ಷತಾ ಲೋಪಗಳ ಆರೋಪದ ಮೇಲೆ ಮೂವರು ಸಿಬ್ಬಂದಿಯನ್ನು ಬಂಧಿಸಿ ತನಿಖೆ ಚುರುಕುಗೊಳಿಸಿದ್ದಾರೆ. ಇಂದು ಮೃತಪಟ್ಟ ಸಂತ್ರಸ್ತರನ್ನು ಮುಜಾಫರ್‌ಪುರ ಜಿಲ್ಲೆಯ ಪಾರ್ರಿ ಗ್ರಾಮದ ನಿವಾಸಿ ಅಂಜನಿ ಕುಮಾರ್ ಸಿಂಗ್ ಎಂದು…

Read More

ಆದಷ್ಟು ಬೇಗ ದೇಶ ಬಿಟ್ಟು ಹೊರಡಿ; ಇರಾನ್​​ನ ಭಾರತೀಯ ಪ್ರಜೆಗಳಿಗೆ ಸೂಚನೆ, ಸಹಾಯವಾಣಿ ಸಂಖ್ಯೆ ಬಿಡುಗಡೆ – Kannada News | Indian embassy in Iran issues fresh advisory for nationals amid unrest issues helpline numbers

ನವದೆಹಲಿ, ಜನವರಿ 14: ಇರಾನ್‌ನಲ್ಲಿ ಪ್ರತಿಭಟನೆಗಳು (Iran Protests) ಉಲ್ಬಣಗೊಳ್ಳುತ್ತಿದ್ದಂತೆ ಟೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಭಾರತೀಯ ಪ್ರಜೆಗಳಿಗೆ ಹೊಸ ಸೂಚನೆಯನ್ನು ನೀಡಿದೆ. ಪ್ರಸ್ತುತ ಇರಾನ್‌ನಲ್ಲಿರುವ ಭಾರತೀಯ ಪ್ರಜೆಗಳು, ವಿದ್ಯಾರ್ಥಿಗಳು, ಯಾತ್ರಿಕರು, ವ್ಯಾಪಾರಸ್ಥರು ಮತ್ತು ಪ್ರವಾಸಿಗರು ವಾಣಿಜ್ಯ ವಿಮಾನಗಳು ಸೇರಿದಂತೆ ತಮಗೆ ಲಭ್ಯವಿರುವ ಸಾರಿಗೆ ವಿಧಾನಗಳ ಮೂಲಕ ಕೂಡಲೇ ಇರಾನ್ ಬಿಟ್ಟು ಹೊರಡುವಂತೆ ಭಾರತೀಯ ರಾಯಭಾರ ಕಚೇರಿಯು ಸೂಚನೆ ನೀಡಿದೆ. ಇರಾನ್​ನ ಉದ್ವಿಗ್ನ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ರಾಯಭಾರ ಕಚೇರಿ ಈ ಸೂಚನೆ ನೀಡಿದೆ. ಇರಾನ್‌ನಲ್ಲಿರುವ ಎಲ್ಲಾ ಭಾರತೀಯ…

Read More