ಇಲ್ಲಿ ನಮ್ಮ ಮಾತಿಗೆ ಗೌರವವೇ ನೀಡುತ್ತಿಲ್ಲ ಅಧಿಕಾರಿಗಳು: ಸಂಸದ ಯದುವೀರ್ ಒಡೆಯರ್
ಮೈಸೂರು, ಏ.7: ನಗರದ ಅಭಿವೃದ್ಧಿ ಯೋಜನೆಗಳು ಮತ್ತು ಆಡಳಿತದ ಕುರಿತು ಯದುವೀರ್ ಅವರು ಮಾತನಾಡಿದ್ದಾರೆ. ಕುಕ್ಕರಹಳ್ಳಿ ಕೆರೆ ಬಳಿ ರೈಲ್ವೆ ಕ್ರಾಸಿಂಗ್ನಲ್ಲಿ ಅಂಡರ್ಪಾಸ್ ನಿರ್ಮಾಣಕ್ಕೆ ಸಂಬಂಧಿಸಿದಂತೆ ವಿಳಂಬವಾಗಿದ್ದ ಕಾರ್ಯಗಳಿಗೆ ಇಲಾಖೆಗಳ ಅನುಮತಿ ದೊರೆತಿದ್ದು, 15 ದಿನಗಳಲ್ಲಿ ಕೆಲಸ ಆರಂಭವಾಗಲಿದೆ ಎಂದು ತಿಳಿಸಿದರು. ಈ 63 ಕೋಟಿ ರೂಪಾಯಿ ಯೋಜನೆಯಲ್ಲಿ ಪರಿಸರ ಸಂರಕ್ಷಣೆಗೆ ಒತ್ತು ನೀಡಲಾಗಿದ್ದು, ಮರಗಳನ್ನು ಸ್ಥಳಾಂತರ ಮಾಡಲು ಕೇರಳದ ಎನ್ಜಿಒ ಸಹಯೋಗದೊಂದಿಗೆ ಕ್ರಮ ಕೈಗೊಳ್ಳಲಾಗುತ್ತಿದೆ. ಹೆಬ್ಬಾಳ ಕೆರೆಯ ಯುಜಿಡಿ ನೀರಿನ ಮಿಶ್ರಣದ ಬಗ್ಗೆ ಗಂಭೀರ ಕಳವಳ…