ಲಕ್ನೋ ಶಾಲೆಯಲ್ಲಿ ಸಹಪಾಠಿಗಳಿಂದ ಹಲ್ಲೆ, ದೃಷ್ಟಿ ಕಳೆದುಕೊಂಡ ವಿದ್ಯಾರ್ಥಿ – Kannada News | Lucknow School Incident Leaves Minor Student With Severe Eye Injury

ಲಕ್ನೋ, ಫೆಬ್ರವರಿ 02: ಐದನೇ ತರಗತಿ ವಿದ್ಯಾರ್ಥಿ(Student)ಯೊಬ್ಬನ ಮೇಲೆ ಸಹಪಾಠಿಗಳು ಹಲ್ಲೆ ನಡೆಸಿರುವ ಪರಿಣಾಮ ಆತ ದೃಷ್ಟಿಯನ್ನೇ ಕಳೆದುಕೊಂಡಿರುವ ಘಟನೆ ಲಕ್ನೋದ ಶಾಲೆಯೊಂದರಲ್ಲಿ ನಡೆದಿದೆ. ಲಕ್ನೋದ ಆರ್ಮಿ ಪಬ್ಲಿಕ್ ಶಾಲೆಯ 5 ನೇ ತರಗತಿಯ ವಿದ್ಯಾರ್ಥಿಯ ಮೇಲೆ ಶಾಲಾ ಆವರಣದಲ್ಲಿ ಇಬ್ಬರು ಸಹ ವಿದ್ಯಾರ್ಥಿಗಳು ಹಲ್ಲೆ ನಡೆಸಿದ್ದು, ಕಣ್ಣಿಗೆ ಗಾಯಗಳಾಗಿವೆ.

ಜನವರಿ 21ರಂದು ಮಧ್ಯಾಹ್ನ 12.30ರ ಸುಮಾರಿಗೆ ಶಾಲಾ ಮೈದಾನದಲ್ಲಿ ಈ ಘಟನೆ ನಡೆದಿದ್ದು, ಬಾಲಕನ ತಾಯಿ ಕ್ಯಾಂಟ್ ಪೊಲೀಸ್ ಠಾಣೆಯಲ್ಲಿ ನೀಡಿದ ದೂರಿನ ಪ್ರಕಾರ, ತನ್ನ ಮಗನ ಮೇಲೆ ಬೇರೆ ವಿಭಾಗದ ಐದನೇ ಹಾಗೂ ಮೂರನೇ ತರಗತಿ ವಿದ್ಯಾರ್ಥಿಗಳು ಹಲ್ಲೆ ನಡೆಸಿರುವುದಾಗಿ ತಿಳಿದುಬಂದಿದೆ.
ಮಕ್ಕಳು ವಿದ್ಯಾರ್ಥಿಯನ್ನು ನೆಲಕ್ಕೆ ಕೆಡವಿ , ಶೂನ ಹಿಮ್ಮಡಿಯಿಂದ ಕಣ್ಣು ಮತ್ತು ಮುಖದ ಮೇಲೆ ಉಜ್ಜಿದ್ದಾರೆ. ಇದರಿಂದ ಬಾಲಕನಿಗೆ ತೀವ್ರ ಹಾನಿಯುಂಟಾಗಿದೆ. ನಂತರ ಆತ ದೃಷ್ಟಿ ಕಳೆದುಕೊಂಡಿದ್ದಾನೆ.

ಈಗ ಕಮಾಂಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.
ಘಟನೆಯ ಬಗ್ಗೆ ಶಾಲಾ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರೂ ಅವರು ಅದನ್ನು ಗಮನಿಸಿಲ್ಲ ಎಂದು ಆರೋಪಿಸಲಾಗಿದೆ. ಘಟನೆಯಲ್ಲಿ ಭಾಗಿಯಾಗಿರುವ ವಿದ್ಯಾರ್ಥಿಗಳು ಮತ್ತ ಶಾಲಾ ಸಿಬ್ಬಂದಿಯ ನಿರ್ಲಕ್ಷ್ಯದ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

ದೂರು ಸ್ವೀಕರಿಸಲಾಗಿದ್ದು, ಜನವರಿ 30 ರಂದು ಈ ವಿಷಯಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅವರು ಹೇಳಿದ್ದಾರೆ.

ಮತ್ತಷ್ಟು ಓದಿ: ಶಿವಮೊಗ್ಗ: ಶಾಲೆಯಲ್ಲಿ ನೀಡಿದ ಮಾತ್ರೆ ನುಂಗಿ 59 ವಿದ್ಯಾರ್ಥಿಗಳು ಅಸ್ವಸ್ಥ; ಆಸ್ಪತ್ರೆಗೆ ಶಿಫ್ಟ್

ಬಾಲಕನ ತಾಯಿ ಆರೋಪಿ ವಿದ್ಯಾರ್ಥಿಗಳು ಮತ್ತು ಶಾಲಾ ಸಿಬ್ಬಂದಿ ವಿರುದ್ಧ ದೂರು ದಾಖಲಿಸಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ನಿರ್ಭಯ್ ವಿಹಾರ್ ನಿವಾಸಿಯೊಬ್ಬರು ನೀಡಿದ ದೂರಿನ ಪ್ರಕಾರ, ಅವರ ಮಗ 5 ನೇ ತರಗತಿಯಲ್ಲಿ ಓದುತ್ತಿದ್ದಾನೆ. ಶಾಲೆಯ ಆಟದ ಮೈದಾನದಲ್ಲಿ ಬೇರೆ ವಿಭಾಗದ ವಿದ್ಯಾರ್ಥಿಗಳು ತನ್ನ ಮಗನ ಮೇಲೆ ಹಲ್ಲೆ ನಡೆಸಿ ನಿರ್ದಯವಾಗಿ ಹಲ್ಲೆ ನಡೆಸಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ.

ಆರಂಭದಲ್ಲಿ ಶಾಲಾ ಆಡಳಿತ ಮಂಡಳಿಯನ್ನು ಸಂಪರ್ಕಿಸಿ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರೂ ಯಾವುದೇ ಕ್ರಮ ಕೈಗೊಳ್ಳಲಿಲ್ಲ ಎಂದು ತಾಯಿ ಆರೋಪಿಸಿದ್ದಾರೆ. ನಂತರ ಅವರು ಕಂಟೋನ್ಮೆಂಟ್ ಪೊಲೀಸ್ ಠಾಣೆಯನ್ನು ಸಂಪರ್ಕಿಸಿ, ಘಟನೆಯಲ್ಲಿ ಭಾಗಿಯಾದ ವಿದ್ಯಾರ್ಥಿಗಳು ಮತ್ತು ಕೆಲವು ಶಾಲಾ ಸಿಬ್ಬಂದಿಗಳ ವಿರುದ್ಧ ನಿರ್ಲಕ್ಷ್ಯದ ಆರೋಪದ ಮೇಲೆ ಔಪಚಾರಿಕ ದೂರು ದಾಖಲಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಗಿಲ್ಲಿ ವಿರುದ್ಧ ಗಂಭೀರ ಆರೋಪ ಮಾಡಿದ ಹಚ್ಚೆ ಹಾಕಿಸಿಕೊಂಡ ಅಭಿಮಾನಿ – Kannada News | Gilli vs Tattoo Fan: BBK12 Winner Faces Serious Allegations of Disrespect

‘ಬಿಗ್ ಬಾಸ್ ಕನ್ನಡ ಸೀಸನ್ 12’ರ ವಿನ್ನರ್ ಗಿಲ್ಲಿ ನಟ (Gilli Nata) ಅವರ ಅಭಿಮಾನಿ ಬಳಗ ತುಂಬಾನೇ ದೊಡ್ಡದಾಗಿ ಬೆಳೆದಿದೆ. ಅವರ ಫೋಟೋನ ಕೈ ಮೇಲೆ ಹಚ್ಚೆ ಹಾಕಿಸಿಕೊಂಡವರೂ ಇದ್ದಾರೆ. ಈಗ ಅದೇ ವ್ಯಕ್ತಿ ಗಿಲ್ಲಿ ನಟನ ಮೇಲೆ ಗಂಭೀರ ಆರೋಪ ಮಾಡಿದ್ದಾರೆ. ಇದು ಚರ್ಚೆಗೆ ಕಾರಣ ಆಗಿದೆ. ಹಲವು ಮಾಧ್ಯಮಗಳಿಗೆ ಅವರು ಸಂದರ್ಶನ ನೀಡುತ್ತಿದ್ದು, ವಾಗ್ದಾಳಿ ಮುಂದುವರಿಸಿದ್ದಾರೆ.

ಬಿಗ್ ಬಾಸ್ ಮನೆಯಲ್ಲಿರೋವಾಗ ಗಿಲ್ಲಿ ಸಾಕಷ್ಟು ಹಾಸ್ಯ ಮಾಡಿದರು. ಅಗತ್ಯ ಇದ್ದಾಗ ತಿರುಗೇಟು ನೀಡಿದರು. ಇದರಿಂದ ಅವರಿಗೆ ದೊಡ್ಡ ಮಟ್ಟದಲ್ಲಿ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ಪ್ರತಿ ಬಾರಿ ಬಿಗ್ ಬಾಸ್ ಶುರುವಾದಾಗಲೂ ಓರ್ವ ಸ್ಪರ್ಧಿಗೆ ಸಾಕಷ್ಟು ಫ್ಯಾನ್ಸ್ ಸಿಗೋದು ಸಾಮಾನ್ಯ. ಆದರೆ, ಗಿಲ್ಲಿಗೆ ಸಿಕ್ಕಷ್ಟು ದೊಡ್ಡ ಅಭಿಮಾನಿ ಬಳಗ ಇನ್ಯಾರಿಗೂ ಸಿಕ್ಕಿರಲಿಲ್ಲ. ಆದರೆ, ಅಭಿಮಾನಿಗಳನ್ನು ಗಿಲ್ಲಿ ಗೌರವಿಸುತ್ತಿಲ್ಲ ಎಂಬುದು ಅಭಿಮಾನಿಗಳ ಆರೋಪ.

ಬಾಸ್​ ಟಿವಿ ಯೂಟ್ಯೂಬ್ ಚಾನೆಲ್​​ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿರೋ ಟ್ಯಾಟೂ ಅಭಿಮಾನಿ, ‘ಅವರಲ್ಲಿ ಟ್ಯಾಲೆಂಟ್ ಇತ್ತು. ಅದನ್ನು ನಾವು ಹೊರಗೆ ತಂದಿದ್ದೀವಿ. ಅವರು ಅಭಿಮಾನಿಗಳನ್ನು ಭೇಟಿ ಮಾಡಬೇಕಿತ್ತು, ಮಾಡುತ್ತಿಲ್ಲ. ಬಿಗ್ ಬಾಸ್ ಮನೆಯಲ್ಲಿದ್ದಾಗ ನನ್ನನ್ನು ಹೊರ ಹೋದ ತಕ್ಷಣ ಭೇಟಿ ಮಾಡ್ತೀನಿ ಎಂದಿದ್ರು, ಆದರೆ ಭೇಟಿ ಮಾಡಿಲ್ಲ’ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಅನುಶ್ರೀ ಕಾಲಿಗೆ ಬಿದ್ದ ಗಿಲ್ಲಿ ನಟ; ಶಾಕ್ ಆದ ಆ್ಯಂಕರ್

ಗಿಲ್ಲಿ ನಟ ಅವರು ಇನ್​​ಸ್ಟಾಗ್ರಾಮ್​​ನಲ್ಲಿ 20 ಲಕ್ಷ ಹಿಂಬಾಲಕರನ್ನು ಹೊಂದಿದ್ದಾರೆ. ಬಿಗ್ ಬಾಸ್ ಸ್ಪರ್ಧಿಗೆ ಇಷ್ಟ ದೊಡ್ಡ ಮಟ್ಟದಲ್ಲಿ ಅಭಿಮಾನಿ ವರ್ಗ ಸಿಕ್ಕಿದ್ದು ಇದೇ ಮೊದಲು. ಆದರೆ, ಈಗ ಅವರಿಗೆ ಅಭಿಮಾನವೇ ಮುಳವಾಯಿತೇ ಎನ್ನುವ ಪ್ರಶ್ನೆ ಮೂಡಿದೆ. ಕೆಲ ನಿಜವಾದ ಫ್ಯಾನ್ಸ್, ‘ನಿನ್ನನ್ನು ಗಿಲ್ಲಿ ಭೇಟಿ ಮಾಡಲೇಬಾರದು’ ಎಂದಿದ್ದಾರೆ.  ಗಿಲ್ಲಿ ಅವರು ಸದ್ಯ ನಿರ್ದೇಶನ ಮಾಡುವ ಆಲೋಚನೆ ಹೊಂದಿದ್ದಾರೆ ಎನ್ನಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಬೆಂಗಳೂರಿನಲ್ಲಿ ಮತ್ತೆ ಶುರುವಾಗಲಿದೆ ಟೋಯಿಂಗ್: ಎಲ್ಲೆಂದರಲ್ಲಿ ವಾಹನ ಪಾರ್ಕ್ ಮಾಡೋ ಮುನ್ನ ಎಚ್ಚರ – Kannada News | Parking Alert: Towing Drive to Resume in Bengaluru to Ease Traffic Chaos

ಬೆಂಗಳೂರು, ಫೆಬ್ರವರಿ 2: ಬೆಂಗಳೂರಿನಲ್ಲಿ (Bangalore) ಜನಸಂಖ್ಯೆಗಿಂತಲೂ ವಾಹನ ಸಂಖ್ಯೆ ಅತಿಯಾಗಿದ್ದು, ಟ್ರಾಫಿಕ್ ಜಾಮ್ (Traffic Jam) ತಲ್ಲಣ ಹುಟ್ಟಿಸುತ್ತಿದೆ. ಇನ್ನು ನಗರದಲ್ಲಿ ಅನೇಕ ಜಾಗಗಳಲ್ಲಿ ಬೇಕಾಬಿಟ್ಟಿ ಅನಧಿಕೃತ ಪಾರ್ಕಿಂಗ್ ಕೂಡ ಹೆಚ್ಚಾಗಿದ್ದು, ಸುಗಮ ಸಂಚಾರಕ್ಕೆ ಹೊಡೆತ ಬಿದ್ದಿದೆ. ಹೀಗಾಗಿ ನಗರದಲ್ಲಿ ಮತ್ತೆ ಟೋಯಿಂಗ್ ವ್ಯವಸ್ಥೆ ಜಾರಿ ಮಾಡಲು ಜಿಬಿಎ ಹಾಗೂ ಸಂಚಾರ ಪೊಲೀಸ್ ನಿರ್ಧರಿಸಿದೆ.

ಬೆಂಗಳೂರಿನ ಅನಧಿಕೃತ ಪಾರ್ಕಿಂಗ್ ಜಾಲದ ಬಗ್ಗೆ ‘ಟಿವಿ9’ ಕನ್ನಡ ರಿಯಾಲಿಟಿ ಚೆಕ್ ನಡೆಸಿದೆ. ನಗರದ ರಾಜಾಜಿನಗರ ವೆಸ್ಟ್ ಆಫ್ ಕಾರ್ಡ್ ರಸ್ತೆಯ ಶಿವನಗರದಲ್ಲಿ ರಸ್ತೆಗಳು ಪಾರ್ಕಿಂಗ್​​ಗೆ ಮಾತ್ರ ಸೀಮಿತವಾಗಿವೆ. ಪಾರ್ಕ್ ಮಾಡಿ ವರ್ಷಾನುಗಟ್ಟಲೆ ಆದರೂ ವಾಹನಗಳ ಮಾಲೀಕರು ಇತ್ತ ತಿರುಗಿ ನೋಡುತ್ತಿಲ್ಲ. ವಾಹನಗಳು ಧೂಳು ಹಿಡಿದು, ತುಕ್ಕು ಹಿಡಿದರೂ ಇಲ್ಲೇ ಬಿದ್ದಿವೆ.

ಇನ್ನು ಮಲ್ಲೇಶ್ವರಂ 8ನೇ ಮುಖ್ಯರಸ್ತೆ ಜನವಸತಿ ಪ್ರದೇಶಗಳೂ ಅನಾಮಿಕರ ವಾಹನಗಳ ಪಾರ್ಕಿಂಗ್ ಸ್ಪಾಟ್ ಆಗಿವೆ. 2019ರಲ್ಲಿ ನಿಲ್ಲಿಸಿಹೋಗಿದ್ದ ವಾಹನವೊಂದು ಇನ್ನೂ ಕದಲಲೇ ಇಲ್ಲ. ಸ್ಕ್ರಾಪ್ ಆದ ವಾಹನಕ್ಕೂ ಕೂಡ ಇದೇ ಆಶ್ರಯತಾಣ. ಪೊಲೀಸರು ಹಾಗೂ ಪಾಲಿಕೆ ಅಧಿಕಾರಿಗಳಿಗೆ ಸ್ಥಳೀಯರು ವಿಚಾರ ಮುಟ್ಟಿಸಿದರೂ ಏನೂ ಪ್ರಯೋಜನವಾಗಿಲ್ಲ.

ನಗರದ ಹಲವು ಕಡೆಗಳಲ್ಲಿ ಬೇಕಾಬಿಟ್ಟಿ ಪಾರ್ಕಿಂಗ್ ಮಾಡುವ ಕೆಟ್ಟ ಪ್ರವೃತ್ತಿ ಹೆಚ್ಚಾಗಿದೆ. ಹೀಗಾಗಿಯೇ ಟೋಯಿಂಗ್ ವ್ಯವಸ್ಥೆ ಮತ್ತೆ ಜಾರಿ ಮಾಡುತ್ತಿರುವುದು ಒಳ್ಳೆಯದೇ ಎಂದು ಸಾರ್ವಜನಿಕರು ಸಹಮತ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ವಿಶ್ವದಲ್ಲೇ ಹೆಚ್ಚು ಟ್ರಾಫಿಕ್ ಇರುವ ನಗರ: ಬೆಂಗಳೂರಿಗೆ 2ನೇ ಸ್ಥಾನ!

ಇತ್ತೀಚೆಗಷ್ಟೇ, ಸಂಚಾರ ದಟ್ಟಣೆಯ ಕಾರಣಕ್ಕಾಗಿ ವಿಶ್ವಮಟ್ಟದಲ್ಲಿ ಬೆಂಗಳೂರು ಸುದ್ದಿಯಾಗಿತ್ತು. ನೆದರ್ಲೆಂಡ್ಸ್ ಮೂಲದ ‘ಟಾಮ್‌ಟಾಮ್’ ಸಂಸ್ಥೆ ಬಿಡುಗಡೆ ಮಾಡಿರುವ 2025ರ ಸಂಚಾರ ಸೂಚ್ಯಂಕ ವರದಿಯಲ್ಲಿ, ಟ್ರಾಫಿಕ್ ಸಮಸ್ಯೆಯಲ್ಲಿ ಬೆಂಗಳೂರು ವಿಶ್ವದಲ್ಲೇ ಟಾಪ್ 2 ನಗರವಾಗಿ ಹೊರಹೊಮ್ಮಿತ್ತು. 2025ರಲ್ಲಿ ಬೆಂಗಳೂರಿನ ಸರಾಸರಿ ಸಂಚಾರ ದಟ್ಟಣೆ ಶೇ 74.4ಕ್ಕೆ ತಲುಪಿದೆ. 2024ರಲ್ಲಿ ಇದು ಶೇ 72.7 ಆಗಿದ್ದು, ಒಂದೇ ವರ್ಷದಲ್ಲಿ ಶೇ 1.7ರಷ್ಟು ದಟ್ಟಣೆ ಹೆಚ್ಚಾಗಿದೆ ಎಂದು ವರದಿ ತಿಳಿಸಿತ್ತು.

ವರದಿ: ಲಕ್ಷ್ಮಿ ನರಸಿಂಹ, ಟಿವಿ9 ಬೆಂಗಳೂರು

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Horoscope Today February: ಇಂದು ಈ ರಾಶಿಯವರಿಂದ ಸ್ವಯಂಕೃತ ಅಪರಾಧ, ಪಶ್ಚಾತ್ತಾಪ

ಮೇಷ ರಾಶಿ:

ಮಕ್ಕಳ ವಿವಾಹದ ಬಗ್ಗೆ ಒಂದೊಂದೇ ಚಿಂತೆ ಆರಂಭವಾಗುವುದು. ಇಂದಿನ ನಿಮ್ಮ ಅಜಾಗರೂಕತೆಯಿಂದ ಹಣವನ್ನು ಕಳೆದುಕೊಳ್ಳುವಿರಿ. ಅನಿವಾರ್ಯ ಕಾರಣದಿಂದ ನೀವು ಅಧಿಕಾರವನ್ನು ವಹಿಸಿಕೊಳ್ಳಬೇಕಾಗಬಹುದು. ದುಃಸ್ವಪ್ನದಿಂದ ಭಯಗೊಳ್ಳುವಿರಿ. ಆಪತ್ತಿನಲ್ಲಿ ಇರುವ ನಿಮಗೆ ಸ್ನೇಹಿತರ ಸಣ್ಣ ಸಹಾಯವೂ ನಿಮಗೆ ಧೈರ್ಯ ತಂದುಕೊಡುವುದು. ಪ್ರೀತಿಯಲ್ಲಿ ನಿಮಗೆ ಸೋಲಾಗಬಹುದು. ಮನೋರಂಜನೆಯಿಂದ ಒತ್ತಡ ಕಡಿಮೆಯಗುವುದು.

ವೃಷಭ ರಾಶಿ:

ಬಹಳ ಶ್ರಮದಿಂದ ನಿಮ್ಮ ಭೂಮಿಯ ಮಾರಟವನ್ನು ಮಾಡುವಿರಿ. ವೃತ್ತಿಯಿಂದ ನೀವು ವಿದೇಶ ಪ್ರಯಾಣವನ್ನು ಮಾಡಬೇಕಾಗಬಹುದು. ಬಂಧುಗಳು ನಿಮ್ಮ ಬಳಿ ಬಂದು ನೋವನ್ನು ಹೇಳಿಕೊಳ್ಳುವರು. ಸ್ನೇಹಿತರ ಜೊತೆ ಪ್ರವಾಸಕ್ಕೆ ಹೋಗಲು ಮನೆಯಿಂದ ಒಪ್ಪಿಗೆಯನ್ನು ನಿರಾಕರಿಸಬಹುದು. ಇಂದು ನೀವು ಕೋಪವನ್ನು ಮಾಡಿಕೊಳ್ಳಲು ಕಾರಣವೇ ಬೇಕಾಗದು. ಇಂದು ನೀವು ಮಕ್ಕಳಲ್ಲಿ ಸ್ಪರ್ಧೆಯ ಮನೋಭಾವವನ್ನು ಹೆಚ್ಚಿಸುವಿರಿ.

ಮಿಥುನ ರಾಶಿ:

ಉದ್ಯೋಗದ‌ ಸ್ಥಳದಲ್ಲಿ ಉಂಟಾದ ಪಕ್ಷಪಾತದಿಂದ ದ್ವೇಷಭಾವವು ಉಂಟಾಗಬಹುದು. ಕಲಾವಿದರು ಅವಕಾಶವನ್ನು ಹುಡುಕಿಕೊಂಡು ಹೋಗಬೇಕಾಗಬಹುದು. ಸಾಲದ ವಿಚಾರವಾಗಿ ಕುಟುಂಬದ ಜೊತೆ ಬಿಸಿ ಚರ್ಚೆಯಾಗಬಹುದು. ಆಸ್ತಿಯ ಹಂಚಿಕೆಯಲ್ಲಿ ನಿಮಗೆ ಸಮಾಧಾನ ಇರದು. ಸ್ವಯಂ ಕೃತ ಅಪರಾಧವೇ ನಿಮಗೆ ಮುಳುವಾಗಬಹುದು. ಆಕಸ್ಮಿಕವಾಗಿ ಬರುವ ಲಾಭದ ನಿರೀಕ್ಷೆಯಲ್ಲಿ ನೀವು ಇರುವಿರಿ.

ಕರ್ಕಾಟಕ ರಾಶಿ:

ಹೂಡಿಕೆಯಿಂದ ಸ್ವಲ್ಪ ನಷ್ಟವಾದಂತೆ ಕಾಣಬಹುದು. ಕಛೇರಿಯಲ್ಲಿ ಯಾರದೋ ತಪ್ಪಿಗೆ ನೀವು ತಲೆ ತಗ್ಗಿಸಬೇಕಾಗಬಹುದು. ಪ್ರಾಣಿಗಳ ಮೇಲೆ ಪ್ರೀತಿ ತೋರಿಸುವಿರಿ. ನಿಮ್ಮ ಕಾರ್ಯದಲ್ಲಿ ನಿಮಗೆ ತಪ್ಪು ಕಾಣಿಸುವುದು. ಹೊಗಳಿಕೆಯಿಂದ ನಿಮಗೆ ಸಂಕೋಚ ಉಂಟಾಗಬಹುದು. ನಿಮ್ಮ ಮಾತು ಇನ್ನೊಬ್ಬರಿಗೆ ನೋವನ್ನು ಕೊಡಬಹುದು. ಕೋಪವನ್ನು ಬಲವಂತವಾಗಿ ತಡೆಯುವಿರಿ. ನಿಮ್ಮ ಒಳ ಮನಸ್ಸು ಹೇಳುವುದನ್ನು ಕೇಳಿಸಿಕೊಂಡರೆ ಒಳ್ಳೆಯದು.

ಸಿಂಹ ರಾಶಿ:

ಸಾಮಾಜಿಕ‌ ಗೌರವವನ್ನು ಪಡೆಯಲು ಆಸೆ ಇರುವುದು. ತಾಯಿಯ ಪ್ರೀತಿಯಿಂದ ವಂಚಿತರಾಗಬಹುದು. ವಾಹನದಿಂದ ನಿಮಗೆ ಆದಾಯ ಸಿಗುವುದು. ಉದ್ಯೋಗದ ಕಾರಣಕ್ಕೆ ದೂರದ ಊರಿಗೆ ಹೋಗಬೇಕಾಗಬಹುದು. ಪ್ರಯಾಣದ ಮುಂಜಾಗ್ರತೆಯ ಕ್ರಮವಿರಲಿ‌. ಗೊತ್ತಿಲ್ಲದ ಪ್ರದೇಶಕ್ಕೆ ಒಂಟಿಯಾಗಿ ಹೋಗಬೇಕಾಗಬಹುದು. ಮಕ್ಕಳಿಲ್ಲದೇ ಬೇಸರವಾಗಲಿದೆ. ಏಕಾಂಗಿಯಾಗಿ ಇರುವುದು ಕಷ್ಟವಾಗುವುದು. ಅಚಾನಕ್ ತಿರುಗಾಟ ಮಾಡಬೇಕಾಗುವುದು.

ಕನ್ಯಾ ರಾಶಿ:

ನಿಮ್ಮನ್ನು ಎಲ್ಲರೆದುರಿಗೆ ಎದುರಿಗೆ ಮಾತ್ರ ಹೊಗಳುವರು. ಅಜಾಗರೂಕತೆಯಿಂದ‌ ಬಿದ್ದು ಗಾಯ ಮಾಡಿಕೊಳ್ಳಬಹುದು. ಕೈಗೊಂಡ ಕಾರ್ಯಗಳಲ್ಲಿ ಪೂರ್ಣ ಜಯವು ಪ್ರಾಪ್ತವಾಗುವುದು. ಪ್ರಾಮಾಣಿಕತೆಗೆ ಸಿಕ್ಕ ಪ್ರಶಂಸೆಯಿಂದ ಇನ್ನಷ್ಟು ಉತ್ಸಾಹ ಇರುವುದು. ನಿಮ್ಮ ಮಾತುಗಳು ಹಾಸ್ಯದಿಂದ ಕೂಡಿರಲಿದೆ. ಹಠದ ಸ್ವಭಾವದಿಂದ ಸುಲಭವಾಗಿ ಸಿಗುವುದನ್ನು ಕಳೆದುಕೊಳ್ಳುವಿರಿ. ವ್ಯಾಪಾರದ ನಷ್ಟವನ್ನು ಹೇಗಾದರೂ ತೂಗಿಸಿಕೊಳ್ಳುವಿರಿ. ಹಣಕಾಸಿನ ವಿಚಾರಕ್ಕೆ ಅಪವಾದ ಬರಬಹುದು.

ತುಲಾ ರಾಶಿ:

ಮಕ್ಕಳ ವಿಷಯದಲ್ಲಿ ನಿರ್ಲಕ್ಷ್ಯ ಬೇಡ. ತಾಯಿ ಆರೋಗ್ಯದಲ್ಲಿ ವ್ಯತ್ಯಾಸವು ಕಾಣಿಸಿಕೊಳ್ಳಬಹುದು. ನಿಮಗೆ ಇಷ್ಟವಾಗದ ಕಾರ್ಯವನ್ನು ಮಾಡಬೇಕಾಗಬಹುದು. ಉದ್ಯೋಗವನ್ನು ನಿರೀಕ್ಷಿತ ಹಂತಕ್ಕೆ ಕೊಂಡೊಯ್ಯಲು ಅಧಿಕ ಶ್ರಮಿಸುವಿರಿ. ವಾತ‌ದೋಷದಿಂದ ನಿಮಗೆ ಕಷ್ಟವಾಗುವುದು. ನಿಮ್ಮನ್ನು ಚುಚ್ಚುವ ಹಾಗೆ ನಿಮ್ಮವರು ಮಾತನಾಡುವರು. ಸಂಗಾತಿಯ ಜೊತೆ ನಿಮಗಾದ ಸುಖ ಹಾಗೂ ದುಃಖವನ್ನು ಹಂಚಿಕೊಳ್ಳುವಿರಿ. ಅಮೂಲ್ಯ ವಸ್ತುಗಳ ಸಂಪಾದನೆ ನಿಮ್ಮ ಕನಸಾಗಲಿದೆ.

ವೃಶ್ಚಿಕ ರಾಶಿ:

ನಿಮ್ಮದಲ್ಲದ ವಸ್ತುವನ್ನು ಬಳಸಿಕೊಂಡು ಹಾಳು ಮಾಡುವಿರಿ.‌ ಹಳೆಯ ಪ್ರೇಮವು ಬೆಳಕಿಗೆ ಬಂದು ಮುಜುಗರ ಉಂಟಾದೀತು. ಉದ್ಯೋಗದಲ್ಲಿ ಒತ್ತಡ ಸ್ವೀಕರಿಸುವುದು ಅಭ್ಯಾಸವಾಗಿ ಹೋಗುವುದು. ಯಾವುದೇ ಪ್ರಭಾವಕ್ಕೆ ಸಿಕ್ಕಿ ನಿಮ್ಮನ್ನು ಬದಲಿಸಿಕೊಳ್ಳಬೇಕಾಗಬಹುದು. ಮನೆಯಿಂದ ದೂರವಿದ್ದವರು ಹತ್ತಿರವಾಗಬೇಕು ಎನಿಸಬಹುದು. ಅಧಿಕಾರಿಗಳು ನಿಮಗೆ ತೊಂದರೆ ಕೊಡಬಹುದು. ಯಾರನ್ನೋ ಹಿಮ್ಮೆಟ್ಟಿಸುವ ಆಸ್ತೆಯಿಂದ ಕೆಲಸ ಮಾಡುವಿರಿ.

ಧನು ರಾಶಿ:

ಮನಸ್ಸು ಕೆಡಿಸಿಕೊಂಡು ಏನೂ ಮಾಡಲಾಗದು.‌ ಶಾಂತವಾಗಿ, ಸಮಾಧಾನ ಚಿತ್ತದಿಂದ ಮುಂದುವರಿಯಿರಿ. ವಸ್ತುಗಳನ್ನು ಕಳೆದುಹೋಗಿದ್ದು ವಿಳಂಬವಾಗಿ ಬೆಳಕಿಗೆ ಬಂದೀತು. ಹಿರಿಯ ಮಾತನ್ನು ಅಸಡ್ಡೆ ಮಾಡುವಿರಿ. ನಿಮ್ಮ ನಿರ್ಧಾರವು ಸರಿಯಾಗಿದೆಯೇ ಎಂದು ಅವಲೋಕನ‌ ಮಾಡಿಕೊಳ್ಳಿ. ಅಪರಿಚಿತರ ಜೊತೆ ಅವಶ್ಯಕತೆಯಷ್ಟೇ ವ್ಯವಹರಿಸಿ. ಭವಿಷ್ಯದ ಅನೇಕ‌ ದ್ವಂದ್ವಗಳು ಇರಬಹುದು. ಸಂಗಾತಿಯ ಜೊತೆ ಮುನಿಸು ಕಡಿಮೆ ಮಾಡಿಕೊಳ್ಳಿ.

ಮಕರ ರಾಶಿ:

ಕೊಟ್ಟ ಮಾತನ್ನು ಉಳಿಸಿಕೊಳ್ಳಲು ಕಷ್ಟವಾದೀತು. ಆದರೂ ಮಾತಿಗೆ ತಪ್ಪಲಾರಿರಿ.‌ ಹಣದಲ್ಲಿ ಮೋಸವಾಗಬಹುದು. ಉನ್ನತ ಹುದ್ದೆಗೆ ಹೋಗಲು ಅವಕಾಶವಿದ್ದರೂ ನಿಮಗೆ ನಾನಾ ಕಾರಣಗಳಿಂದ ಬೇಡವೆನಿಸುವುದು. ಸರಿ ಹಾಗೂ ತಪ್ಪುಗಳ ತುಲನೆಯು ಕಷ್ಟವಾಗುವುದು. ಪ್ರಾಮಾಣಿಕತೆಯಿಂದ‌ ನಿಮಗೇ ಕಷ್ಟವಾಗುವುದು. ಶತ್ರುಗಳನ್ನು ಸೋಲಿಸುವುದಕ್ಕಿಂತ ಶತ್ರುಗಳೇ ಇಲ್ಲದಂತೆ ಮಾಡಿಕೊಳ್ಳುವಿರಿ.

ಕುಂಭ ರಾಶಿ:

ಮೃದುವಾದ ಮಾತನ್ನು ನೀವು ಅಭ್ಯಾಸ ಮಾಡಿಕೊಳ್ಳಬೇಕಾದೀತು. ನಿಮ್ಮ‌ ಕಾರ್ಯದಲ್ಲಿ ಮಗ್ನರಾಗಿ ಎಲ್ಲರನ್ನೂ ಮರೆಯುವಿರಿ. ಬಂಧುಗಳ ಜೊತೆ ದೂರ ಪ್ರಯಾಣವನ್ನು ಮಾಡಲಿದ್ದೀರಿ. ಅಸ್ಥಿರತೆಯು ನಮಗೆ ಗೊಂದಲವನ್ನು ಸೃಷ್ಟಿಸುವುದು. ಕೆಲವು ಸಂಬಂಧಗಳು‌ ಮತ್ತಷ್ಟು ಹತ್ತಿರವಾಗಬಹುದು. ಕುಲಕ್ಕೆ ಯೋಗ್ಯವಾದ ಕಾರ್ಯವನ್ನು ಮಾಡಿದ್ದಕ್ಕೆ ಪ್ರಶಂಸೆಯು ಸಿಗುವುದು. ವಿದ್ಯಾಭ್ಯಾಸಕ್ಕೆ ಪ್ರೇರಣೆ ಸಿಗಬಹುದು.

ಮೀನ ರಾಶಿ:

ಹೊಸ ಉದ್ಯೋಗಕ್ಕೆ ವಿವರಗಳನ್ನು ಕೇಳಿ ಪಡೆಯುವಿರಿ. ನಿಮ್ಮ ಮಕ್ಕಳಿಗೆ ಬೇಕಾದ ವಸ್ತುಗಳನ್ನು ಕೊಡಿಸಿ ಸಂತೋಷಿಸುವಿರಿ. ಸ್ನೇಹಿತರ ಸಹವಾಸದಿಂದ ದುರಭ್ಯಾಸವನ್ನು ರೂಢಿಸಿಕೊಳ್ಳುವ ಸಾಧ್ಯತೆ ಇದೆ. ಕೆಲವರ ನಂಬಿಕಗೆ ಘಾಸಿಯನ್ನು ಉಂಟುಮಾಡುವಿರಿ. ಗೃಹ ಬಳಕೆಯ ವಸ್ತುಗಳು ಹೆಚ್ಚು ಮಾರಾಟವಾಗುವುವು. ಭವಿಷ್ಯದ ನಾಳೆಯ ಕುರಿತು ಅತಿಯಾದ ಯೋಚನೆ ಬೇಕಾಗಿಲ್ಲ.‌ ಖುಷಿಯಿಂದ ಸ್ವೀಕರಿಸಿ ಎಲ್ಲವನ್ನೂ.

ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು : ಶಿಶಿರ, ಚಾಂದ್ರಮಾಸ : ಮಾಘ, ಸೌರ ಮಾಸ : ಮಕರ, ಮಹಾನಕ್ಷತ್ರ : ಶ್ರವಣಾ, ವಾರ : ಸೋಮ, ಪಕ್ಷ : ಶುಕ್ಲ, ತಿಥಿ : ಪೂರ್ಣಿಮಾ/ಪ್ರತಿಪತ್, ನಿತ್ಯನಕ್ಷತ್ರ : ಆಶ್ಲೇಷಾ/ಮಘಾ, ಯೋಗ : ಪ್ರೀತಿ, ಕರಣ : ಭದ್ರ, ಸೂರ್ಯೋದಯ – 06 – 53 am, ಸೂರ್ಯಾಸ್ತ – 06 – 23 pm, ಇಂದಿನ ಶುಭಾಶುಭ ಕಾಲ : ರಾಹು 08:19 – 09:46, ಯಮಗಂಡ ಕಾಲ 11:12 – 12:38, ಗುಳಿಕ ಕಾಲ 14:04 – 15:53

-ಲೋಹಿತ ಹೆಬ್ಬಾರ್ – 8762924271 (what’s app only)

Source link

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 2ರ ದಿನಭವಿಷ್ಯ

ಈ ದಿನ ಮನೆಯಿಂದ ಹೊರಡುವ ಮುನ್ನ ಶಿವಾಷ್ಟಕವನ್ನು ಕೇಳಿಸಿಕೊಳ್ಳಿ. ಅದಕ್ಕೆ ಮುಂಚೆ ಈಶ್ವರನ ಪಟದ ಮುಂದೆ ದೀಪವನ್ನು ಹಚ್ಚಿಟ್ಟು, ಇದನ್ನು ಕೇಳಿಸಿಕೊಳ್ಳಿ. ಇನ್ನು ಮನೆಯಿಂದ ಹೊರಡುವ ವೇಳೆಗೆ ಹಸಿ ಹಾಲಿಗೆ (ಬಿಸಿ ಮಾಡಿರಬಾರದು) ಸ್ವಲ್ಪ ಸಕ್ಕರೆ ಮತ್ತು ಅರಿಶಿನ ಹಾಕಿಕೊಂಡು, ಕುಡಿದು ಆ ನಂತರ ಹೊರಡಿ.

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4):

ಹಲವು ಶುಭ ಫಲಗಳು ಅನುಭವ ಬರಲಿವೆ. ದೈವಿಕವಾದ ಅನುಗ್ರಹ ನಿಮ್ಮ ಮೇಲಿದೆ ಎಂಬ ಭಾವನೆ ಗಟ್ಟಿಯಾಗಲಿದೆ. ಪ್ರೇಮಿಗಳಿಗೆ, ನವ ವಿವಾಹಿತರಿಗೆ ಸಂತೋಷದ ಕ್ಷಣಗಳನ್ನು ಕಳೆಯುವ ಅವಕಾಶ ದೊರೆಯಲಿದೆ. ನಿಮ್ಮಲ್ಲಿ ಯಾರು ಬಾಡಿಗೆ ಆದಾಯದಂಥದ್ದನ್ನು ಮಾಡಿಕೊಳ್ಳುವುದಕ್ಕೆ ಪ್ರಯತ್ನ ಮಾಡುತ್ತಿದ್ದೀರಿ ಅಂಥವರಿಗೆ ನಿರೀಕ್ಷೆಯಂತೆ ಇರುವ ಆಸ್ತಿಗಳು ಖರೀದಿಗೆ ದೊರೆಯಲಿವೆ.

ಜನ್ಮಸಂಖ್ಯೆ 5 (ಯಾವುದೇ ತಿಂಗಳಿನ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5):

ನಿಮ್ಮ ಖರ್ಚಿನ ರೀತಿಯಲ್ಲಿ ಬಹಳ ದೊಡ್ಡ ಬದಲಾವಣೆ ಅಳವಡಿಸಿಕೊಳ್ಳಲು ಈ ದಿನ ತೀರ್ಮಾನ ಮಾಡಲಿದ್ದೀರಿ. ಸೈಟು ಖರೀದಿಯೋ ಅಥವಾ ಮನೆ ನಿರ್ಮಾಣವೋ ಅಥವಾ ಈಗಾಗಲೇ ಇರುವ ಮನೆ ರೆನೊವೇಷನ್ ಮಾಡಿಸಬೇಕೋ ಇಂಥ ವಿಚಾರದ ಬಗ್ಗೆ ತಂದೆಯ ಜೊತೆ ಅಥವಾ ಪಿತೃ ಸಮಾನರಾದವರ ಜೊತೆಗೆ ಚರ್ಚೆ ನಡೆಸಲಿದ್ದೀರಿ.

ಜನ್ಮಸಂಖ್ಯೆ 6 (ಯಾವುದೇ ತಿಂಗಳಿನ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6):

ಉದ್ಯೋಗಸ್ಥರಾಗಿದ್ದಲ್ಲಿ ನೀವು ಉದ್ಯೋಗ ಮಾಡುತ್ತಿರುವ ಸಂಸ್ಥೆಯಲ್ಲಿ ದೊಡ್ಡ ಸಂಖ್ಯೆಯಲ್ಲಿ ಜನರನ್ನು ಕೆಲಸದಿಂದ ತೆಗೆಯಲಿದ್ದಾರೆ ಅಂತಲೋ ನೀವು ಹೂಡಿಕೆ ಮಾಡಿದ್ದ ರಿಯಲ್ ಎಸ್ಟೇಟ್ ಅಥವಾ ಷೇರು ಮಾರ್ಕೆಟ್ ಹಣ ಭಾರೀ ಪ್ರಮಾಣದಲ್ಲಿ ಇಳಿಕೆ ಆಗಬಹುದು ಅಂತಲೋ ಹೀಗೆ- ಇಂಥವೇ ಮಾತುಗಳು ಕಿವಿ ಮೇಲೆ ಬೀಳುವುದರಿಂದ ಒತ್ತಡಕ್ಕೆ ಸಿಲುಕಿಕೊಳ್ಳುತ್ತೀರಿ.

ಲೇಖನ- ಸ್ವಾತಿ ಎನ್.ಕೆ.

Source link

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಫೆಬ್ರವರಿ 2ರ ದಿನಭವಿಷ್ಯ

ಲಕ್ಷ್ಮಿದೇವಿಯ ಪಟದ ಮುಂದೆ ಸಕ್ಕರೆ, ಒಣದ್ರಾಕ್ಷಿ ಹಾಗೂ ಖರ್ಜೂರವನ್ನು ಎರಡೆರಡು ಇಟ್ಟು ನೈವೇದ್ಯ ಮಾಡಿ. ಇದನ್ನು ಬೆಳಗ್ಗೆ ಅಥವಾ ಸಂಜೆ ಮಾಡಬಹುದು. ದೀರ್ಘಾವಧಿಗೆ ಮಾಡಿದ್ದ ಹೂಡಿಕೆ ಹಿಂತೆಗೆದುಕೊಳ್ಳಬೇಕಾ ಬೇಡವಾ ಎಂಬ ಗೊಂದಲ ಇದ್ದಲ್ಲಿ ಅದು ನಿವಾರಣೆ ಆಗಲಿದೆ.

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7):

ನಿಮಗೆ ಗೊತ್ತಿರುವ ಕೌಶಲ, ವಿದ್ಯೆ ಹಾಗೂ ನಿಮಗೆ ಇರುವಂಥ ಈಗಿನ ಅನುಭವಕ್ಕೆ ಬೇಡಿಕೆ ಹೆಚ್ಚಲಿದೆ. ನಿಮ್ಮಲ್ಲಿ ಕೆಲವರಿಗೆ ಏಕಕಾಲಕ್ಕೆ ನಾಲ್ಕಾರು ಕಡೆಯಿಂದ ಉದ್ಯೋಗದ ಆಫರ್ ಗಳು ಬರಬಹುದು. ಸಂಬಳದ ಜೊತೆಗೆ ಲಾಭದಲ್ಲಿ ಸಹ ಇಂತಿಷ್ಟು ಪರ್ಸೆಂಟ್ ಎಂದು ಕೊಡುವುದಾಗಿ ಪ್ರತಿಷ್ಠಿತ ಸಂಸ್ಥೆಗಳಿಂದ ನಿಮಗೆ ಪ್ರಸ್ತಾವ ಬರುವಂಥ ಯೋಗ ಇದೆ.

ಜನ್ಮಸಂಖ್ಯೆ 8 (ಯಾವುದೇ ತಿಂಗಳಿನ 8, 17, 26ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 8):

ಬೇಡ ಅಂದುಕೊಂಡಿದ್ದನ್ನೇ ಮಾಡಬೇಕಾದ ಸನ್ನಿವೇಶಗಳು ಸೃಷ್ಟಿ ಆಗಲಿವೆ. ಯಾವ ವ್ಯಕ್ತಿ ಜೊತೆಗೆ ಇನ್ನು ವ್ಯವಹಾರ ಮಾಡಬಾರದು, ಹಣಕಾಸಿನ ವಿಷಯ ಮಾತನಾಡಬಾರದು, ಸಾಲ ಕೇಳಬಾರದು, ಜೊತೆಯಾಗಿ ಕೆಲಸ ಮಾಡಬಾರದು ಹೀಗೆ ಅಂದುಕೊಂಡಿರುತ್ತೀರೋ ಅವುಗಳನ್ನು ಮಾಡಲೇಬೇಕಾದ ಸನ್ನಿವೇಶ ಸೃಷ್ಟಿ ಆಗುತ್ತದೆ. ನಿಮಗೆ ಸಂಪೂರ್ಣವಾಗಿ ಮಾಹಿತಿ ಇರುವ ವಿಷಯಗಳನ್ನು ಮಾತ್ರ ಮಾತನಾಡಿ.

ಜನ್ಮಸಂಖ್ಯೆ 9 (ಯಾವುದೇ ತಿಂಗಳಿನ 9, 18, 27ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 9):

ಸಂತಾನಕ್ಕೆ ಪ್ರಯತ್ನ ಮಾಡುತ್ತಿರುವವರಿಗೆ ಶುಭ ಸುದ್ದಿ ಕೇಳುವಂಥ ಯೋಗ ಇದೆ. ಇನ್ನು ಯಾರು ವೈದ್ಯರ ಮಾರ್ಗದರ್ಶನದಲ್ಲಿ ಪ್ರಯತ್ನ ಮಾಡುತ್ತಾ ಇದ್ದೀರಿ ಅಂಥವರಿಗೆ ಆರೋಗ್ಯ ಸಮಸ್ಯೆಗಳು ಅಡೆತಡೆಯಾಗಿ ಇಲ್ಲಿಯವರೆಗೆ ಕಾಡುತ್ತಾ ಇದ್ದಲ್ಲಿ ಅದಕ್ಕೆ ಪರಿಹಾರ ದೊರೆಯಲಿದೆ. ಪರ್ ಫ್ಯೂಮ್, ದುಬಾರಿ ಬ್ರ್ಯಾಂಡ್ ಗಳ ಬಟ್ಟೆ, ಶೂ ಇಂಥವುಗಳ ಮಾರಾಟ ಮಾಡುತ್ತಾ ಇರುವವರಿಗೆ ಆದಾಯದಲ್ಲಿ ಭಾರೀ ಪ್ರಮಾಣದ ಏರಿಕೆ ಆಗಲಿದೆ.

ಲೇಖನ- ಸ್ವಾತಿ ಎನ್.ಕೆ.

Source link

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಫೆಬ್ರವರಿ 2ರ ದಿನಭವಿಷ್ಯ

ಪೈರೈಟ್ ನಿಂದ ಸಿದ್ಧಪಡಿಸಿದ ಫ್ರೇಮ್ ಒಳಗೆ ಏಳು ಕುದುರೆಗಳು ಓಡುತ್ತಿರುವಂತೆ ಇರುವ ಚಿತ್ರವನ್ನು ಹಾಕಿರಲಾಗುತ್ತದೆ. ಅಂಥದ್ದನ್ನು ನಿಮ್ಮ ಮನೆಯ ಈಶಾನ್ಯದ ಗೋಡೆಯಲ್ಲಿ ಹಾಕಿ. ಅದರಲ್ಲೂ ಆರು ಅಡಿಗಿಂತ ಎತ್ತರದ ಜಾಗದಲ್ಲಿ ಅದು ಇರಬೇಕು. ಹೀಗೆ ಮಾಡುವುದರಿಂದ ಹಲವು ರೀತಿಯ ಪಾಸಿಟಿವ್ ಬೆಳವಣಿಗೆ ನಿರೀಕ್ಷೆ ಮಾಡಬಹುದು.

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1):

ನಿಮ್ಮಲ್ಲಿ ಕೆಲವರು ಹೊಸ ಭಾಷೆ ಕಲಿಯುವುದಕ್ಕೆ ಕೋರ್ಸ್ ಗೆ ಸೇರಿಕೊಳ್ಳುವುದರ ಬಗ್ಗೆ ಆಲೋಚನೆ ಮಾಡುತ್ತೀರಿ. ವಿದ್ಯಾರ್ಥಿಗಳಿಗೆ ಇಂಟರ್ನ್ ಷಿಪ್ ಗೆ ಪ್ರತಿಷ್ಠಿತ ಸಂಸ್ಥೆಗಳಿಂದ ಅವಕಾಶ ಸಿಗಲಿದೆ. ಹಣಕಾಸು ವಿಚಾರದಲ್ಲಿ ನೀವು ಮಾಡಿಕೊಂಡಂಥ ಪ್ಲಾನಿಂಗ್ ಕೈ ಹಿಡಿಯಲಿದೆ. ಸಣ್ಣ ಮಟ್ಟದ ಹೂಡಿಕೆ ಮಾಡಿ ಆರಂಭಿಸಿದ್ದ ವ್ಯವಹಾರ- ವ್ಯಾಪಾರಗಳಲ್ಲಿ ನೀವು ನಿರೀಕ್ಷೆ ಕೂಡ ಮಾಡಿರದಂಥ ಯಶಸ್ಸು ದೊರೆಯಲಿದೆ.

ಜನ್ಮಸಂಖ್ಯೆ 2 (ಯಾವುದೇ ತಿಂಗಳಿನ 2, 11, 20, 29ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 2):

ಕೋರ್ಟ್- ಕಚೇರಿಗಳಲ್ಲಿ ವ್ಯಾಜ್ಯಗಳು ನಡೆಯುತ್ತಾ ಇದ್ದಲ್ಲಿ ಅವು ಒತ್ತಡವಾಗಿ ಪರಿಣಮಿಸಲಿವೆ. ನಿಮ್ಮಲ್ಲಿ ಕೆಲವರಿಗೆ ಆಸ್ತಿ ಕೈ ಬಿಟ್ಟುಹೋಗುವ ಸುಳಿವು ದೊರೆಯಲಿದೆ. ಇನ್ನು ಚಿನ್ನ- ಬೆಳ್ಳಿ ಇಂಥವುಗಳ ಅಡಮಾನ ಮಾಡಿ, ಸಾಲವನ್ನು ಪಡೆದುಕೊಂಡಿದ್ದಲ್ಲಿ ಅದು ಹರಾಜಿಗೆ ಬರುವ ಸಾಧ್ಯತೆ ಇದೆ. ನಿಗದಿತ ದಿನಾಂಕಕ್ಕೆ ಹಣ ಮರುಪಾವತಿ ಮಾಡುವ ಕಡೆಗೆ ನಿಮ್ಮ ಲಕ್ಷ್ಯ ಇರಲಿ.

ಜನ್ಮಸಂಖ್ಯೆ 3 (ಯಾವುದೇ ತಿಂಗಳಿನ 3, 12, 21, 30ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 3):

ಒಂದು ಬಗೆಯ ಸಮಾಧಾನ- ಸಂತೃಪ್ತಿ ಹಾಗೂ ಸಾರ್ಥಕ್ಯದ ಭಾವ ನಿಮ್ಮಲ್ಲಿ ಇರಲಿದೆ. ಕೊಟ್ಟ ಮಾತಿನಂತೆಯೇ ಹಾಗೂ ಅಂದುಕೊಂಡ ರೀತಿಯಲ್ಲಿ ಕೆಲಸ- ಕಾರ್ಯಗಳನ್ನು ಮಾಡಿಕೊಡಲಿದ್ದೀರಿ. ಹಣಕಾಸಿನ ಒತ್ತಡಗಳಿಂದ ಹೊರಬರುವುದಕ್ಕೆ ಮಾರ್ಗೋಪಾಯಗಳು ಗೋಚರಿಸಲಿವೆ.

ಲೇಖನ- ಸ್ವಾತಿ ಎನ್.ಕೆ.

Source link

ಕೊಪ್ಪಳದಲ್ಲಿ ಕಾರ್ಖಾನೆಗಳ ವಿರುದ್ಧ ಧರಣಿ: ದಾಖಲೆ ಬರೆದ ಗವಿ ಸಿದ್ದೇಶ್ವರ ಶ್ರೀ ಭಾಗಿಯಾಗಿದ್ದ ಹೋರಾಟ – Kannada News | Koppal: Protest against factories; Gavi Siddeshwara Sri participated Protest make Record

ಬಲ್ಡೋಟಾ, ಪ್ರತಿಭಟನೆImage Credit source: tv9 kannada

ಕೊಪ್ಪಳ, ಫೆಬ್ರವರಿ 01: ಅದು ಸುಮಾರು 54 ಸಾವಿರ ಕೋಟಿ ರೂ ವೆಚ್ಚದಲ್ಲಿ ವಿಸ್ತರಣೆಯಾಗುತ್ತಿರುವ ಕಾರ್ಖಾನೆ (Baldota Factory). ಆ ಕಾರ್ಖಾನೆ ವಿರೋಧಿಸಿ ಅಲ್ಲಿ ದೊಡ್ಡ ಹೋರಾಟ ನಡೆದಿತ್ತು. ಖುದ್ದು ಗವಿ ಸಿದ್ದೇಶ್ವರ ಶ್ರೀಗಳು ಹೋರಾಟದಲ್ಲಿ (Protest) ಭಾಗಿಯಾಗಿದ್ದರು. ಕಾರ್ಖಾನೆ ವಿಸ್ತರಿಸಿದ ಹಿನ್ನೆಲೆ ಕೊಪ್ಪಳ ಬಂದ್ ಕರೆ ನೀಡಲಾಗಿತ್ತು. ಗವಿ ಶ್ರೀಗಳು ಹೋರಾಟಕ್ಕೆ ಧುಮುಕಿದಾಗ ಸರ್ಕಾರ ತಾತ್ಕಾಲಿಕವಾಗಿ ಆ ಕಾರ್ಖಾನೆ ಕೆಲಸ ನಿಲ್ಲಿಸಿತ್ತು. ಆದರೆ ಇದೀಗ ಆ ಕಾರ್ಖಾನೆ ಮತ್ತೆ ಎಂದಿನಂತೆ ಕೆಲಸ ಆರಂಭಿಸಿದೆ. ಇದು ಸಹಜವಾಗಿ ಕೊಪ್ಪಳ ಜಿಲ್ಲೆಯ ಜನರ ಆಕ್ರೋಶಕ್ಕೆ ಕಾರಣವಾಗಿದೆ. ಇದೀಗ ಕಾರ್ಖಾನೆ ವಿರೋಧಿಸಿ ಕೊಪ್ಪಳದಲ್ಲಿ ಕಳೆದ 94 ದಿನಗಳಿಂದ ಹೋರಾಟ ನಡೆಯುತ್ತಿದ್ದು, ಇದೀಗ ಈ ಹೋರಾಟ ದಾಖಲೆ ಬರೆದಿದೆ. ಜಿಲ್ಲೆಯಲ್ಲಿ ನಿರಂತರವಾಗಿ ಇಷ್ಟೊಂದು ದಿನ ಹೋರಾಟ ನಡೆದ ಇತಿಹಾಸವೇ ಇಲ್ಲ.

ದಾಖಲೆ ಬರೆದ 94 ದಿನಗಳ ಧರಣಿ 

ಬಲ್ಡೋಟಾ ಸ್ಟೀಲ್ ಆ್ಯಂಡ್ ಪವರ್ ಲಿಮಿಟಿಡ್, ಕೊಪ್ಪಳ ತಾಲೂಕಿನ ಬಸಾಪೂರ ಬಳಿ ಸುಮಾರು 54 ಸಾವಿರ ಕೋಟಿ ರೂ ವೆಚ್ಚದಲ್ಲಿ ವಿಸ್ತರಣೆಯಾಗುತ್ತಿರುವ ಕಾರ್ಖಾನೆ. ಆದರೆ ಈ ಕಾರ್ಖಾನೆ ವಿರೋಧಿಸಿ ಕೊಪ್ಪಳದಲ್ಲಿ ಕಳೆದ 94 ದಿನಗಳಿಂದ ಹೋರಾಟ ನಡೆಯುತ್ತಿದೆ. ಇದೀಗ ಈ ಹೋರಾಟ ದಾಖಲೆ ಬರೆದಿದೆ. ಕೊಪ್ಪಳ ಜಿಲ್ಲೆಯಲ್ಲಿ ನಿರಂತರವಾಗಿ ಇಷ್ಟೊಂದು ದಿನ ಹೋರಾಟ ನಡೆದ ಇತಿಹಾಸವೇ ಇಲ್ಲ. ಕೊಪ್ಪಳ ಜಿಲ್ಲಾ ಬಚಾವೋ ಆಂದಲೋನ ಸಮಿತಿಯಿಂದ ನಿರಂತರ 94 ದಿನಗಳ ಧರಣಿ ಇದೀಗ ದಾಖಲೆ ಬರೆದಿದೆ.

ಇದನ್ನೂ ಓದಿ: ಕಾರ್ಖಾನೆಗಳ ಹೊಗೆಗೆ ರೋಸಿ ಹೋದ ಅನ್ನದಾತ: ಹೋರಾಟಕ್ಕೆ ಗವಿಸಿದ್ದೇಶ್ವರ ಸ್ವಾಮೀಜಿಯನ್ನ ಕರೀತಿವಿ ಎಂದ ರೈತರು

1991ರಲ್ಲಿ ರಾಯಚೂರು ಜಿಲ್ಲೆಯಿಂದ ಕೊಪ್ಪಳ ಜಿಲ್ಲೆಯನ್ನ ಪ್ರತ್ಯೇಕಗೊಳಿಸಲು ಹೋರಾಟ ನಡೆದಿತ್ತು. ಅದು 80 ದಿನಗಳ ಕಾಲ ನಿರಂತರ ನಡೆದಿತ್ತು. ಆ ಸಮಯದಲ್ಲಿ ರಾಜೀವ್ ಗಾಂಧಿ ಹತ್ಯೆಯಾದ ಹಿನ್ನಲೆ ಹೋರಾಟ ವಾಪಸ್ ಪಡೆಯಲಾಗಿತ್ತು. ಇದೀಗ ಆ ದಾಖಲೆಯನ್ನ ಮುರಿದು ಕಾರ್ಖಾನೆಗಳ ವಿರುದ್ದ ನಿರಂತರ 94 ದಿನಗಳಿಂದ ಹೋರಾಟ ನಡೆಯುತ್ತಿದೆ. ಕೊಪ್ಪಳದ ನಗರಸಭೆ ಮುಂಭಾಗ ಪರಿಸರವಾದಿಗಳು ಹೋರಾಟ ಆರಂಭಿಸಿದ್ದಾರೆ. ಈಗಾಗಲೇ ನಾಡಿನ ಅನೇಕ ಗಣ್ಯರು ಈ ಹೋರಾಟಕ್ಕೆ ಸಾಥ್ ನೀಡಿದ್ದಾರೆ. ಚಿಂತಕ ಭಗವಾನ್, ನಟ ಅಹಿಂಸಾ ಚೇತನ್ ಸೇರಿ ಅನೇಕ ಗಣ್ಯರು ಹೋರಾಟದಲ್ಲಿ ಭಾಗಿಯಾಗಿದ್ದಾರೆ, ಆದರೆ ಇದುವರೆಗೂ ಸರ್ಕಾರ ಮಾತ್ರ ಸ್ಪಂದಿಸಿಲ್ಲ ಎಂದು ಹೋರಾಟಗಾರ ಅಲ್ಲಮಪ್ರಭು ಬೆಟದೂರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನು ಬಲ್ಡೋಟಾ ಸೇರಿ ಅನೇಕ ಕಾರ್ಖಾನೆಗಳ ವಿರುದ್ದ ಕಳೆದ 94 ದಿನಗಳಿಂದ ನಿರಂತರ ಧರಣಿ ನಡೆಯುತ್ತಿದೆ. ಕಾರ್ಖಾನೆಗಳು ಹೊರಸುಸುವ ಹೊಗೆಯಿಂದ ಈಗಾಗಲೇ ಕೊಪ್ಪಳ ತಾಲೂಕಿನ ಅನೇಕ ಹಳ್ಳಿಗಳಿಗೆ ಸಮಸ್ಯೆ ಉಂಟಾಗಿದೆ. ಅಲ್ಲಾನಗರ, ಬಸಾಪೂರ, ಹಾಲವರ್ತಿ, ಕುಣಿಕೇರಿ, ಹಿರೇಬಗನಾಳ ಸೇರಿ ಹತ್ತಕ್ಕೂ ಹೆಚ್ಚು ಹಳ್ಳಿಗಳಿಗೆ ಸಮಸ್ಯೆ ಎದುರಾಗಿದೆ. ಈ ಕಾರಣಕ್ಕೆ ಬಲ್ಡೋಟಾ ವಿಸ್ತರಣೆ ಬೇಡ ಎಂದು ಹೋರಾಟ ನಡೆದಿದೆ.

ಮತ್ತೊಮ್ಮೆ ಬಂದ್? 

ಕಳೆದ ವರ್ಷ ಫೆಬ್ರುವರಿ 24 ರಂದು ಕೊಪ್ಪಳ ಜಿಲ್ಲೆಯ ಬಂದ್ ಮಾಡಿ ಹೊರಾಟ ಮಾಡಲಾಗಿತ್ತು. ಹೋರಾಟದಲ್ಲಿ ಗವಿಮಠದ ಅಭಿನವ ಗವಿ ಸಿದ್ದೇಶ್ವರ ಶ್ರೀಗಳು ಭಾಗಿಯಾಗಿದ್ದರು. ಇದಾದ ಬಳಿಕ ಶ್ರೀಗಳು ಮೌನಕ್ಕೆ ಜಾರಿದ್ದಾರೆ. ಮತ್ತೊಂದು ಕಡೆ ಜಿಲ್ಲೆಯ ಜನ ಪ್ರತಿನಿಧಿಗಳು ಹೋರಾಟಗಾರರ ಮನವಿಗೆ ಸ್ಪಂದಿಸುತ್ತಿಲ್ಲ. ಕಳೆದ ತಿಂಗಳು ಕಾಟಾಚಾರಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು ಹೋರಾಟಗಾರರನ್ನು ಭೇಟಿ ಮಾಡಿ ಹೋಗಿದ್ದಾರೆ. ಆದರೆ ಇದುವರೆಗೂ ಕಾರ್ಖಾನೆ ವಿಚಾರದಲ್ಲಿ ಸರ್ಕಾರ ಸ್ಪಷ್ಟ ನಿಲುವು ತಿಳಿಸಿಲ್ಲ. ಇದೀಗ 94 ದಿನಗಳಾಗಿದ್ದು, ಫೆಬ್ರವರಿ 24 ರಂದು ಕೊಪ್ಪಳ ಬಂದ್​ಗೆ ಒಂದು ವರ್ಷವಾಗುವ ಹಿನ್ನಲೆ ಹೋರಾಟಗಾರರು ದೊಡ್ಡ ಮಟ್ಟದ ಹೋರಾಟಕ್ಕೆ ಸಿದ್ಧಗೊಂಡಿದ್ದಾರೆ. ಸುಮಾರು 2000ಕ್ಕೂ ಅಧಿಕ ಜನ ಸೇರಿ ಮತ್ತೊಮ್ಮೆ ಹೋರಾಟದ ಕಹಳೆ ಮೊಳಗಿಸಲು ಸಜ್ಜಾಗಿದ್ದಾರೆ.

ಇದನ್ನೂ ಓದಿ: ಮತ್ತೆ‌ ಮುನ್ನಲೆಗೆ ಬಂದ ಬಲ್ಡೋಟಾ ಕಾರ್ಖಾನೆ ವಿವಾದ: ಹೋರಾಟಕ್ಕಿಳಿದ ರೈತರು

ಒಟ್ಟಾರೆ ಬಲ್ಡೋಟಾ ಕಾರ್ಖಾನೆ ವಿರುದ್ಧದ ನಿರಂತರ ಧರಣಿ ಕೊಪ್ಪಳ ಜಿಲ್ಲೆಯ ಇತಿಹಾಸದಲ್ಲಿ ದಾಖಲೆಯಾಗಿದೆ. ಇಷ್ಟೊಂದು ನಿರಂತರ ಧರಣಿ ನಡೆದ ಉದಾಹರಣೆ ಕೊಪ್ಪಳದಲ್ಲಿ ಇಲ್ಲವೇ ಇಲ್ಲ. ಅನೇಕ ಹೋರಾಟಗಳು ನಡೆದರೂ ನಿರಂತರ 94 ದಿನಗಳವರೆಗೂ ಯಾವ ಹೋರಾಟವೂ ನಡೆದಿರಲಿಲ್ಲ. 371 ತಿದ್ದುಪಡಿಗಾಗಿ ನಡೆದ ದೊಡ್ಡ ಹೋರಾಟವೂ ಇಷ್ಟು ದಿನ ನಡೆದಿರಲಿಲ್ಲ. ಆದರೂ ಸರ್ಕಾರ ಮಾತ್ರ ಹೋರಾಟಗಾರರಿಗೆ ಕ್ಯಾರೇ ಅನ್ನುತ್ತಿಲ್ಲ. ಮುಂದೆ ಆಗುವ ಅನಾಹುತಕ್ಕೆ ಸರ್ಕಾರವೇ ನೇರಹೊಣೆ ಎಂದು ಈಗಾಗಲೇ ಹೋರಾಟಗಾರರು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

16ನೇ ಹಣಕಾಸು ಆಯೋಗದ ಸೂತ್ರದಡಿ ಕರ್ನಾಟಕಕ್ಕೆ ಅತಿ ಹೆಚ್ಚು ಲಾಭ; ರಾಜ್ಯಕ್ಕೆ 63,050 ಕೋಟಿ ರೂ. ತೆರಿಗೆ ಪಾಲು – Kannada News | Karnataka is biggest gaine in tax devolution share under 16th Finance Commission formula

ನವದೆಹಲಿ, ಫೆಬ್ರವರಿ 1: ಕೇಂದ್ರ ಸರ್ಕಾರ 16ನೇ ಹಣಕಾಸು ಆಯೋಗದ ಸೂತ್ರದಡಿ ಕರ್ನಾಟಕ (Karnataka) ರಾಜ್ಯಕ್ಕೆ 63,050 ಕೋಟಿ ರೂ. ತೆರಿಗೆ ಪಾಲು ಘೋಷಿಸಿದೆ. ಈ ಮೂಲಕ ತೆರಿಗೆ ಪಾಲಿನಲ್ಲಿ ಈ ವರ್ಷ ಅತಿದೊಡ್ಡ ಫಲಾನುಭವಿಯಾಗಿ ಕರ್ನಾಟಕ ಹೊರಹೊಮ್ಮಿದೆ. ಮಧ್ಯಪ್ರದೇಶವು ಅತಿ ಕಡಿಮೆ ತೆರಿಗೆ ಪಾಲನ್ನು ಹೊಂದುವ ಸಾಧ್ಯತೆಯಿದೆ. ಏಕೆಂದರೆ, ಈ ಸಮಿತಿಯು ಈಕ್ವಿಟಿ ಜೊತೆಗೆ ಆರ್ಥಿಕ ದಕ್ಷತೆಯ ಮೇಲೆ ತನ್ನ ಗಮನವನ್ನು ನೆಟ್ಟಿದೆ.

ಹೊಸದಾಗಿ ಹಂಚಿಕೆ ಆಗಿರುವುದರ ಮೂಲಕ ರಾಜ್ಯಕ್ಕೆ 2026-27ನೇ ಸಾಲಿನಲ್ಲಿ 63,050 ಕೋಟಿ ರೂ. ತೆರಿಗೆ ಪಾಲು ದೊರೆಯಲಿದೆ.

ಹೊಸ ಸೂತ್ರದಡಿ ಕೇಂದ್ರ ಸರ್ಕಾರದ ತೆರಿಗೆ ವಿಕೇಂದ್ರೀಕರಣದಲ್ಲಿ ಕರ್ನಾಟಕದ ಪಾಲನ್ನು 2026ರಲ್ಲಿ ಶೇ. 4.13ಕ್ಕೆ ಹೆಚ್ಚಿಸಲಾಗಿದೆ. ಇದು 15ನೇ ಹಣಕಾಸು ಆಯೋಗದ ಅಡಿಯಲ್ಲಿ ಶೇ. 3.65 ರಷ್ಟಿತ್ತು. ಕಳೆದ ಬಾರಿಗಿಂತ ಈ ಬಾರಿ 7,387 ಕೋಟಿ ರೂ. ಹೆಚ್ಚುವರಿಯಾಗಿ ಸಿಕ್ಕಿದೆ. ಈ ಮೂಲಕ ಕರ್ನಾಟಕದ ತೆರಿಗೆ ಹಂಚಿಕೆಯನ್ನು 63,050 ಕೋಟಿ ರೂ.ಗೆ ಏರಿದೆ.

ಇದನ್ನೂ ಓದಿ: ರಾಜ್ಯಗಳಿಗೆ ಶೇ. 41 ತೆರಿಗೆ ಹಂಚಿಕೆ ಸೂತ್ರ; 16ನೇ ಹಣಕಾಸು ಆಯೋಗದ ಶಿಫಾರಸು ಒಪ್ಪಿದ ಕೇಂದ್ರ

ಕರ್ನಾಟಕದ ಬಳಿಕ ತೆರಿಗೆ ಹಂಚಿಕೆಯಲ್ಲಿ ಕೇರಳ ಎರಡನೇ ಅತಿ ಹೆಚ್ಚು ಲಾಭ ಗಳಿಸುತ್ತಿರುವ ರಾಜ್ಯವಾಗಿದೆ. ಇದರ ಹಂಚಿಕೆ 6,975 ಕೋಟಿ ರೂ.ಗಳಷ್ಟು ಹೆಚ್ಚಾಗಿದೆ. ಗುಜರಾತ್ (4,228 ಕೋಟಿ ರೂ.ಗಳು) ಮತ್ತು ಹರಿಯಾಣ (4,090 ಕೋಟಿ ರೂ.ಗಳು) ಸಹ ಲಾಭವನ್ನು ಕಂಡಿವೆ. ಇದು ಅವರ ಹೆಚ್ಚಿನ ತಲಾ ಆದಾಯ ಮತ್ತು GDP ಗೆ ಬಲವಾದ ಕೊಡುಗೆಯನ್ನು ಪ್ರತಿಬಿಂಬಿಸುತ್ತದೆ. ಭಾರತದ ಅತಿದೊಡ್ಡ ರಾಜ್ಯ ಆರ್ಥಿಕತೆಯಾದ ಮಹಾರಾಷ್ಟ್ರವು ಹೆಚ್ಚುವರಿಯಾಗಿ 1,893 ಕೋಟಿ ರೂ. ಗಳಿಸುತ್ತಿದೆ.

ಆದರೆ, ಮಧ್ಯಪ್ರದೇಶವು ಅತಿದೊಡ್ಡ ನಷ್ಟವನ್ನು ಅನುಭವಿಸುತ್ತಿದೆ. ಇದರ ಹಂಚಿಕೆ 7,677 ಕೋಟಿ ರೂ.ಗಳಷ್ಟು ಕುಸಿದು 1.12 ಲಕ್ಷ ಕೋಟಿ ರೂ.ಗಳಿಗೆ ತಲುಪಿದೆ. ಉತ್ತರ ಪ್ರದೇಶವು 4,884 ಕೋಟಿ ರೂ.ಗಳನ್ನು ಕಳೆದುಕೊಂಡರೆ, ಪಶ್ಚಿಮ ಬಂಗಾಳವು 4,701 ಕೋಟಿ ರೂ.ಗಳನ್ನು ಕಡಿತಗೊಳಿಸಿದೆ.

ಇದನ್ನೂ ಓದಿ: Budget 2026 Announcements LIVE: ಆದಾಯ ತೆರಿಗೆಯಲ್ಲಿ ಬದಲಾವಣೆ ಇಲ್ಲ, ತೆರಿಗೆ ವಿಳಂಬಕ್ಕೆ ದಂಡ ಮಾತ್ರ, ಶಿಕ್ಷೆ ಇಲ್ಲ

ಇದರ ಜೊತೆಗೆ ಈ ಬಾರಿಯ ಬಜೆಟ್​​ನಲ್ಲಿ ಕರ್ನಾಟಕಕ್ಕೆ ಹಲವು ಯೋಜನೆಗಳನ್ನು ಘೋಷಿಸಲಾಗಿದೆ. ಸ್ಮಾರ್ಟ್ ನಗರಗಳು, ತಂತ್ರಜ್ಞಾನ ನೇತೃತ್ವದ ಬೆಳವಣಿಗೆ ಮತ್ತು ಸುಸ್ಥಿರ ಕರಾವಳಿ ಅಭಿವೃದ್ಧಿಯ ಮೂಲಕ ಕರ್ನಾಟಕ ರಾಜ್ಯವನ್ನು ಭಾರತದ ಭವಿಷ್ಯಕ್ಕೆ ಸಂಪರ್ಕಿಸಿದೆ. ಬಜೆಟ್‌ನಲ್ಲಿ ಘೋಷಿಸಲಾದ 3 ಹೈಸ್ಪೀಡ್ ರೈಲು ಕಾರಿಡಾರ್‌ಗಳು ಕರ್ನಾಟಕದ ಮೇಲೆ ನೇರವಾಗಿ ಪರಿಣಾಮ ಬೀರುತ್ತವೆ. ಅದರಲ್ಲಿ ಬೆಂಗಳೂರು-ಚೆನ್ನೈ, ಬೆಂಗಳೂರು-ಹೈದರಾಬಾದ್ ಮತ್ತು ಕಲಬುರಗಿ ಮೂಲಕ ಹೈದರಾಬಾದ್-ಪುಣೆಗೆ ರೈಲು ಪ್ರಯಾಣಿಸುತ್ತದೆ. ಅವು ಬೆಂಗಳೂರನ್ನು ಭಾರತದ ಅತಿದೊಡ್ಡ ತಂತ್ರಜ್ಞಾನ, ಉತ್ಪಾದನೆ ಮತ್ತು ಲಾಜಿಸ್ಟಿಕ್ಸ್ ಕೇಂದ್ರಗಳಿಗೆ ಸಂಪರ್ಕಿಸುತ್ತವೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

12 ವರ್ಷಗಳ ಬಳಿಕ ಮತ್ತೆ ಚಾಂಪಿಯನ್ ಆದ ಕರ್ನಾಟಕ ಬುಲ್ಡೋಜರ್ಸ್ – Kannada News | Karnataka Bulldozers won the CCL 2026 cup under Sudeep captaincy

ವಿವಿಧ ಚಿತ್ರರಂಗದವರು ಒಟ್ಟಿಗೆ ಸೇರಿ ಕ್ರಿಕೆಟ್ ಆಡುವ ಸಿಸಿಎಲ್ (ಸೆಲೆಬ್ರಿಟಿ ಕ್ರಿಕೆಟ್ ಲೀಗ್) 2026 ಫೈನಲ್ ಇಂದು (ಫೆಬ್ರವರಿ 1) ನಡೆದಿದ್ದು, ಸುದೀಪ್ ನಾಯಕತ್ವದ ಕರ್ನಾಟಕ ಬುಲ್ಡೋಜರ್ಸ್ ತಂಡ ಚಾಂಪಿಯನ್ ಆಗಿ ಹೊರ ಹೊಮ್ಮಿದೆ. ಇಂದು ಕೊಯಮತ್ತೂರಿನಲ್ಲಿ ನಡೆದ ಫೈನಲ್​​ನಲ್ಲಿ ಬಂಗಾಳ ತಂಡವನ್ನು ಎದುರಿಸಿದ ಕರ್ನಾಟಕ ಬುಲ್ಡೋಜರ್ಸ್ ತಂಡ ಆಲ್​​ರೌಂಡ್ ಪ್ರದರ್ಶನ ತೋರಿ ಫೈನಲ್ ಪಂದ್ಯದಲ್ಲಿ ಗೆಲುವು ತನ್ನದಾಗಿಸಿಕೊಂಡಿದೆ. ಅದೂ ಬರೋಬ್ಬರಿ 12 ವರ್ಷಗಳ ಬಳಿಕ ಕರ್ನಾಟಕ ಬುಲ್ಡೋಜರ್ಸ್ ತಂಡ ಚಾಂಪಿಯನ್ ಎನಿಸಿಕೊಂಡಿದೆ.

ಕರ್ನಾಟಕ ಬುಲ್ಡೋಜರ್ಸ್ ಈಗಾಗಲೆ ಎರಡು ಬಾರಿ ಚಾಂಪಿಯನ್ ಆಗಿತ್ತು. ಇದೀಗ 12 ವರ್ಷಗಳ ಬಳಿಕ ಮತ್ತೆ ಗೆದ್ದು ಮೂರನೇ ಬಾರಿ ಚಾಂಪಿಯನ್ ಎನಿಸಿಕೊಂಡಿದ್ದಾರೆ. ಇದಕ್ಕೂ ಮುಂಚೆ ಬರೋಬ್ಬರಿ ಆರು ಬಾರಿ ಫೈನಲ್ ವರೆಗೂ ತಲುಪಿ ರನ್ನರ್ ಅಪ್ ಎನಿಸಿಕೊಂಡಿದ್ದರು. ಆದರೆ ಈ ಸೀಸನ್​​ನಲ್ಲಿ ಆರಂಭದ ಮ್ಯಾಚಿನಿಂದಲೇ ಅದ್ಭುತವಾಗಿ, ಸಂಘಟಿತ ಆಟವಾಡುತ್ತಾ ಬಂದ ಕರ್ನಾಟಕ ತಂಡ ಇದೀಗ ಫೈನಲ್ ಗೆದ್ದಿದೆ.

ಇಂದಿನ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಬೆಂಗಾಲ್ ಟೈಗರ್ಸ್ ತಂಡ, ಕರ್ನಾಟಕದ ಉತ್ತಮ ಬೌಲಿಂಗ್ ದಾಳಿಯ ಮುಂದೆ ದೊಡ್ಡ ಮೊತ್ತ ಕಲೆ ಹಾಕಲು ವಿಫಲವಾದವು. ಬೆಂಗಾಲ್ ಟೈಗರ್ಸ್ ತಂಡ 20 ಓವರ್​​​ಗಳಲ್ಲಿ ಗಳಿಸಿದ್ದು ಕೇವಲ 129 ರನ್ನುಗಳನ್ನಷ್ಟೆ. ಕರ್ನಾಟಕದ ಪರ ಉತ್ತಮ ಬೌಲಿಂಗ್ ಮಾಡಿದ ಪ್ರತಾಪ್ ಮೂರು ವಿಕೆಟ್ ಪಡೆದರೆ, ಸುನೀಲ್ ಎರಡು ವಿಕೆಟ್ ಗಳಿಸಿದರು.

ಬಳಿಕ ಬ್ಯಾಟಿಂಗ್​​ಗೆ ಇಳಿದ ಕರ್ನಾಟಕಕ್ಕೆ ಬಹಳ ಉತ್ತಮ ಆರಂಭ ಒದಗಿತು. ಕರ್ನಾಟಕ ಬುಲ್ಡೋಜರ್ಸ್ ತಂಡದ ಪ್ರಮುಖ ದಾಂಡಿಗ ರಾಜೀವ್ ಪ್ರತಿ ಬಾರಿಯಂತೆ ಈ ಬಾರಿಯೂ ಅದ್ಭುತ ಆರಂಭ ಒದಗಿಸಿದರು. ಕೇವಲ 37 ಬಾಲಿಗೆ 69 ರನ್ ಭಾರಿಸಿದರು. ಆದರೆ ರಾಜೀವ್ ಔಟಾದ ಬಳಿಕ ಆಟ ತುಸು ನಿಧಾನವಾಯ್ತು. ಬೆಂಗಾಲ್ ಪರ ರತನ್​​ದೀಪ್ ಅವರು ಅದ್ಭುತ ಬೌಲಿಂಗ್ ಪ್ರದರ್ಶನ ನೀಡಿ ಗಮನ ಸೆಳೆದರು. ಆದರೆ ಕರ್ನಾಟಕ ತಂಡದ ಆಟಗಾರರು ಎಚ್ಚರಿಕೆಯ ಆಟವಾಡಿ ಗೆಲುವು ತಮ್ಮದಾಗಿಸಿಕೊಂಡರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On – 10:45 pm, Sun, 1 February 26

Source link

Exit mobile version