ರೈಲಿನಲ್ಲಿ ಹಣಕ್ಕಾಗಿ ಪಟ್ಟು: ಪ್ರಯಾಣಿಕರೆದುರೇ ಬಟ್ಟೆ ಬಿಚ್ಚಿ ಅಸಭ್ಯವಾಗಿ ವರ್ತಿಸಿದ ಟ್ರಾನ್ಸ್‌ಜೆಂಡರ್

ರೈಲಿನಲ್ಲಿ ಹಣಕ್ಕಾಗಿ ಪಟ್ಟು: ಪ್ರಯಾಣಿಕರೆದುರೇ ಬಟ್ಟೆ ಬಿಚ್ಚಿ ಅಸಭ್ಯವಾಗಿ ವರ್ತಿಸಿದ ಟ್ರಾನ್ಸ್‌ಜೆಂಡರ್

ರೈಲಿನಲ್ಲಿ ಪ್ರಯಾಣಿಸುವಾಗ ಅದರಲ್ಲೂ ಉತ್ತರ ಭಾರತದ ರೈಲುಗಳಲ್ಲಿ ಮಂಗಳಮುಖಿಯರ ಸಂಖ್ಯೆ ಹೆಚ್ಚಿರುತ್ತದೆ. ಹಣ ಕೇಳುತ್ತಾರೆ, ಕೊಟ್ಟರೆ ಆಶೀರ್ವಾದ ಮಾಡುತ್ತಾರೆ, ಕೊಡದಿದ್ದರೆ ಏನೋ ಬೈದು ಶಾಪ ಹಾಕುತ್ತಾ ಹೋಗುತ್ತಾರೆ. ಆದರೆ ಇತ್ತೀಚಿನ ದಿನಗಳಲ್ಲಿ ಇವರ ವರ್ತನೆ ಮಿತಿ ಮೀರಿದೆ, ಹಣ ಕೊಡದಿದ್ದರೆ ಹೊಡೆಯುವುದು, ಅನುಚಿತವಾಗಿ ವರ್ತಿಸುವ ಹಲವು ವಿಡಿಯೋಗಳು ವೈರಲ್ ಆಗಿವೆ. ಅಂಥದ್ದೇ ವಿಡಿಯೋವೊಂದರಲ್ಲಿ ಮಂಗಳಮುಖಿಯೊಬ್ಬರು ಹಣ ಕೇಳಿದಾಗ ಪ್ರಯಾಣಿಕ ಹಣ ಕೊಡದಿದ್ದಕ್ಕೆ ಪ್ರಯಾಣಿಕರೆದುರೇ ಬಟ್ಟೆ ಬಿಚ್ಚಿ ಕೆಟ್ಟದಾಗಿ ವರ್ತಿಸಿದ್ದು, ಎಲ್ಲರಿಗೂ ಮುಜುಗರ ತಂದಿತ್ತು.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಯುಎಇಗೆ ಸಾಲ ವಾಪಸ್ ಕೊಟ್ಟರೆ ಪಾಕಿಸ್ತಾನದ ಆರ್ಥಿಕ ಪರಿಸ್ಥಿತಿ ಏನಾಗಬಹುದು? ಇಲ್ಲಿದೆ ಇಂಟರೆಸ್ಟಿಂಗ್ ಲೆಕ್ಕಾಚಾರ

ನವದೆಹಲಿ, ಏಪ್ರಿಲ್ 8: ತಾನು ನೀಡಿರುವ ಸಾಲವನ್ನು ವಾಪಸ್ ಮಾಡುವಂತೆ ಪಾಕಿಸ್ತಾನಕ್ಕೆ ಯುಎಇ ಕೇಳಿದೆ. ಸಾಲಗಳನ್ನು ಪಡೆದು ವಾಪಸ್ ಮಾಡದೇ ಹಾಗೇ ಉಳಿಸಿಕೊಂಡು ಹೋಗಿ ಅಭ್ಯಾಸಗೊಂಡಿರುವ ಪಾಕಿಸ್ತಾನಕ್ಕೆ (Pakistan) ಈಗ ಒತ್ತಡ ಶುರುವಾಗತೊಡಗಿದೆ. ಯುಎಇ ದೇಶಕ್ಕೆ ಭಿಕ್ಷೆ ಹಾಕುತ್ತಿದ್ದೇವೆ ಎಂಬಂತೆ ಪಾಕಿಸ್ತಾನದ ಕೆಲ ರಾಜಕಾರಣಿಗಳು ಕಿಚಾಯಿಸತೊಡಗಿದ್ದಾರೆ. ಸಾಲದ ಒತ್ತಡವು ಪಾಕಿಸ್ತಾನೀಯರ ಈ ವರ್ತನೆಗೆ ಕಾರಣವಾಗಿರಬಹುದು.

ಪಾಕಿಸ್ತಾನಕ್ಕೆ ಯುಎಇ ನೀಡಿದ ಸಾಲದಲ್ಲಿ ಒಂದು ಭಾಗವನ್ನು ವಾಪಸ್ ಮಾಡುವಂತೆ ಕೇಳಲಾಗಿದೆ. ಮೂರು ಕಂತುಗಳಲ್ಲಿ ಪಾಕಿಸ್ತಾನ ಕಟ್ಟಬೇಕು. ಏಪ್ರಿಲ್ 11ರಂದು 450 ಮಿಲಿಯನ್ ಡಾಲರ್, ಏಪ್ರಿಲ್ 17ರಂದು 2 ಬಿಲಿಯನ್ ಡಾಲರ್, ಹಾಗು ಎಪ್ರಿಲ್ 23ರಂದು 1 ಬಿಲಿಯನ್ ಡಾಲರ್ ಹಣವನ್ನು ಯುಎಇಗೆ ಪಾಕಿಸ್ತಾನ ನೀಡಬೇಕಾಗಿದೆ.

ಇದನ್ನೂ ಓದಿ: ಕದನವಿರಾಮ ಬೆನ್ನಲ್ಲೇ ತೈಲ ಬೆಲೆ ಐತಿಹಾಸಿಕ ಕುಸಿತ; ಪೆಟ್ರೋಲ್, ಡೀಸಲ್ ಬೆಲೆಯೂ ಇಳಿಯುತ್ತಾ?

ಇದಷ್ಟೇ ಅಲ್ಲ, ಸೌದಿ ಅರೇಬಿಯಾ ಹಾಗು ಚೀನಾ ದೇಶಗಳು ಕೂಡ ತಮ್ಮ ಕೆಲ ಸಾಲಗಳನ್ನು ಮರಳಿಸಬೇಕೆಂದು ಪಾಕಿಸ್ತಾನಕ್ಕೆ ತಿಳಿಸುವ ಸಾಧ್ಯತೆ ಇದೆ ಎಂಬುದು ಕುತೂಹಲದ ಸಂಗತಿ. ಸಾಮಾನ್ಯವಾಗಿ ಸಾಲ ಪಡೆದಾಗ ಅದರ ನಿರ್ದಿಷ್ಟ ಅವಧಿಗಳಲ್ಲಿ ಕಂತುಗಳ ರೂಪದಲ್ಲಿ ಮರುಪಾತಿಸುವ ಅವಕಾಶ ಇರುತ್ತದೆ. ಪಾಕಿಸ್ತಾನವು ಬಡ್ಡಿ ಮಾತ್ರವೇ ಕಟ್ಟುತ್ತಾ, ಅಸಲು ಹಣದ ಪಾವತಿಯನ್ನು ಮುಂದಕ್ಕೆ ಹಾಕುತ್ತಾ ಬಂದಿತ್ತು. ಈಗ ಕೆಲ ದೇಶಗಳು ಸಾಲದ ಹಣ ವಾಪಸ್ ಕೇಳಲು ತೊಡಗಿವೆ. ಪಾಕಿಸ್ತಾನದ ಸಾಲದಲ್ಲಿ ಅತಿಹೆಚ್ಚು ಬಂದಿರುವುದು ಚೀನಾದಿಂದ. ಒಂದು ವೇಳೆ ಚೀನಾದವರು ಖಡಕ್ ಆಗಿ ಸಾಲ ಮರಳಿಸುವಂತೆ ಕೇಳಿದರೆ ಪಾಕಿಸ್ತಾನ ಅತೀವ ಒತ್ತಡಕ್ಕೆ ಒಳಗಾಗಬಹುದು.

ಪಾಕಿಸ್ತಾನದ ಬಜೆಟ್ ಪರಿಪಾಟಲು

  • ಪಾಕಿಸ್ತಾನದ ಕೇಂದ್ರ ಸರ್ಕಾರದ ಒಟ್ಟಾರೆ ಆದಾಯ 11,072 ಕೋಟಿ ಪಿಕೆಆರ್ ಇದೆ (ಪಾಕಿಸ್ತಾನೀ ರುಪಾಯಿ).
  • ಬಜೆಟ್​ನಲ್ಲಿ ವೆಚ್ಚ ಮಾಡಲು ನಿಗದಿಯಾಗಿರುವ ಹಣ: 16,286 ಕೋಟಿ ಪಿಕೆಆರ್
  • ಸಾಲ ಮರುಪಾವತಿಸಬೇಕಿರುವುದು: 8,200 ಕೋಟಿ ಪಿಕೆಆರ್
  • ಡಿಫೆನ್ಸ್ ಬಜೆಟ್: 2,558 ಕೋಟಿ ಪಿಕೆಆರ್
  • ಅಭಿವೃದ್ಧಿ ವೆಚ್ಚ: 1,775 ಕೋಟಿ ಪಿಕೆಆರ್

ಇಲ್ಲಿ ಪಾಕಿಸ್ತಾನದ ಅರ್ಧದಷ್ಟು ಬಜೆಟ್ ಹಣವು ಬಡ್ಡಿ ಮರುಪಾವತಿಸಲೇ ವ್ಯಯವಾಗಿ ಹೋಗುತ್ತದೆ. ಈಗ ಯುಎಇಯ ಸಾಲ ವಾಪಸ್ ಮಾಡಿದರೆ ಅಭಿವೃದ್ಧಿ ವೆಚ್ಚಕ್ಕೆಂದು ಮೀಸಲಿರುವ ಹಣಕ್ಕೆ ಕತ್ತರಿ ಹಾಕಬೇಕಾಗುತ್ತದೆ.

ಇದನ್ನೂ ಓದಿ: ಯುದ್ಧ ಅಂತ್ಯವಾಗಿಲ್ಲ, ಕದನ ವಿರಾಮವಷ್ಟೇ: ಮೊಜ್ತಬಾ ಖಮೇನಿ

ಪಾಕಿಸ್ತಾನದ ಹಣದುಬ್ಬರ ಹೆಚ್ಚುತ್ತದೆ

ಪಾಕಿಸ್ತಾನವು ಯುಎಇ ಹಣವನ್ನು ಮರಳಿಸಿದರೆ ಈ ಕೆಳಗಿನ ಸಂಭಾವ್ಯ ಪರಿಣಾಮಗಳಾಗಬಹುದು:

  • ಪಾಕಿಸ್ತಾನದ ಸೆಂಟ್ರಲ್ ಬ್ಯಾಂಕ್​ನ ರಿಸರ್ವ್ಸ್ ಕುಸಿಯಬಹುದು
  • ಪಾಕಿಸ್ತಾನದ ರುಪಾಯಿ ಮತ್ತಷ್ಟು ಕುಸಿಯಬಹುದು
  • ತೈಲ, ಅನಿಲ, ರಸಗೊಬ್ಬರ ಆಮದು ವೆಚ್ಚ ಹೆಚ್ಚಬಹುದು
  • ಸರ್ಕಾರ ಪೆಟ್ರೋಲ್, ವಿದ್ಯುತ್ ಬೆಲೆ ಏರಿಸಬಹುದು, ಟ್ಯಾಕ್ಸ್ ಹೆಚ್ಚಿಸಬಹುದು
  • ಸಾರಿಗೆ, ಆಹಾರ ಹಾಗೂ ದಿನಸಿ ವಸ್ತುಗಳ ಬೆಲೆ ಹೆಚ್ಚಬಹುದು.
  • ಹಣದುಬ್ಬರ ಏರಿಕೆ ಆಗಬಹುದು.

ಪಾಕಿಸ್ತಾನ ಸರ್ಕಾರ ಯುಎಐ ಹಣವನ್ನು ಸರಿದೂಗಿಸಲು ಏನೇ ಕ್ರಮ ತೆಗೆದುಕೊಂಡರೂ ಅದರ ಪರಿಣಾಮ ಆರ್ಥಿಕತೆಯ ಮೇಲೆ ಉಂಟಾಗಬಲ್ಲುದು. ಅಭಿವೃದ್ಧಿ ಕಾರ್ಯಗಳಿಗೆ ಕತ್ತರಿ ಹಾಕಿದರೆ ಉದ್ಯೋಗಸೃಷ್ಟಿ ಕಡಿಮೆಗೊಳ್ಳಬಹುದು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ದಾವಣಗೆರೆ: ಮತದಾನಕ್ಕೆ ಸಿದ್ಧತೆ ಜೋರು, ಮತಗಟ್ಟೆಗೆ ಬಂದ ಚುನಾವಣಾ ಸಿಬ್ಬಂದಿಗೆ ಸ್ಥಳದಲ್ಲೇ ಹೆಲ್ತ್ ಚೆಕಪ್

ದಾವಣಗೆರೆ, ಏಪ್ರಿಲ್ 8: ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಅಂತಿಮ ಸಿದ್ಧತೆಗಳು ಭರದಿಂದ ಸಾಗಿವೆ. ಈ ಚುನಾವಣೆಯಲ್ಲಿ ಭಾಗವಹಿಸುವ 1430 ಮಂದಿ ಚುನಾವಣಾ ಸಿಬ್ಬಂದಿಗಳ ಆರೋಗ್ಯ ಸುರಕ್ಷತೆಗೆ ಜಿಲ್ಲಾಡಳಿತ ವಿಶೇಷ ಗಮನ ಹರಿಸಿದೆ. ಹೃದಯಾಘಾತ, ರಕ್ತದೊತ್ತಡದಂತಹ ಸಮಸ್ಯೆಗಳಿಂದ ಬಳಲುತ್ತಿರುವ ಸಿಬ್ಬಂದಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲು ಮತಗಟ್ಟೆಗಳಲ್ಲೇ ವೈದ್ಯಾಧಿಕಾರಿಗಳನ್ನು ನಿಯೋಜಿಸಲಾಗಿದೆ. ಅವರಿಗೆ ಪ್ರಾಥಮಿಕ ಚಿಕಿತ್ಸೆ ಮತ್ತು ಆರೋಗ್ಯ ತಪಾಸಣೆಯ ವ್ಯವಸ್ಥೆ ಮಾಡಲಾಗಿದೆ. ಅಲ್ಲದೆ, ಮತದಾನವನ್ನು ಹೆಚ್ಚಿಸುವ ಉದ್ದೇಶದಿಂದ ಹಿರಿಯ ನಾಗರಿಕರು, ಅಂಗವಿಕಲರು ಮತ್ತು ಆರೋಗ್ಯ ಸಮಸ್ಯೆಗಳಿಂದ ಮತಗಟ್ಟೆಗೆ ಬರಲು ಕಷ್ಟಪಡುವ ಮತದಾರರಿಗಾಗಿ ಜಿಲ್ಲಾಡಳಿತವು ಉಚಿತ ವಾಹನ ಸೌಲಭ್ಯವನ್ನು ಒದಗಿಸಿದೆ. ಬೆಳಿಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮತದಾನ ನಡೆಯಲಿದ್ದು, ಎಲ್ಲರೂ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Maa Bagdahi Temple: ಬಡ ಕುರುಬನ ಭಕ್ತಿಗೆ ಒಲಿದ ದೇವಿ; ಕಲ್ಲುಗಳನ್ನೇ ಕಾಣಿಕೆಯಾಗಿ ಪಡೆಯುವ ವಿಶಿಷ್ಟ ಶಕ್ತಿ ಪೀಠ

ಭಾರತದಾದ್ಯಂತ ಇರುವ ಶಕ್ತಿ ಪೀಠಗಳಲ್ಲಿ ದೇವಿಗೆ ರೇಷ್ಮೆ ಸೀರೆ, ಬಂಗಾರ, ಹಣ್ಣು-ಹಂಪಲು ಅಥವಾ ವೈಭವದ ನೈವೇದ್ಯಗಳನ್ನು ಅರ್ಪಿಸುವುದು ಸಾಮಾನ್ಯ. ಆದರೆ ಛತ್ತೀಸ್‌ಗಢದ ಬಿಲಾಸ್‌ಪುರ ಜಿಲ್ಲೆಯ ಅರಣ್ಯದ ನಡುವೆ ನೆಲೆಸಿರುವ ‘ಮಾ ಬಾಗದಾಯಿ’ ದೇವಾಲಯವು ಈ ಎಲ್ಲಾ ಸಂಪ್ರದಾಯಗಳಿಗಿಂತ ಭಿನ್ನವಾಗಿದೆ. ಇಲ್ಲಿ ಭಕ್ತರು ದೇವಿಗೆ ಅರ್ಪಿಸುವುದು ಕೇವಲ ಐದು ಕಲ್ಲುಗಳು ಮತ್ತು ಒಂದು ಹೂವು!

ಕಲ್ಲುಗಳ ಅರ್ಪಣೆಯ ಹಿಂದಿರುವ ‘ಕುರುಬ ಭಕ್ತಿ’ಯ ಕಥೆ:

ಶತಮಾನಗಳಷ್ಟು ಹಳೆಯದಾದ ಈ ವಿಶಿಷ್ಟ ಆಚರಣೆಯ ಹಿಂದೆ ಹೃದಯಸ್ಪರ್ಶಿ ಕಥೆಯೊಂದಿದೆ. ಜನಪದರ ನಂಬಿಕೆಯಂತೆ, ಸುಮಾರು ನೂರು ವರ್ಷಗಳ ಹಿಂದೆ ಒಬ್ಬ ಬಡ ಕುರುಬನು ಕಾಡಿನಲ್ಲಿ ದೇವಿಯ ಜೀವಂತ ಪ್ರತಿಮೆಯನ್ನು ಕಂಡುಕೊಂಡನು. ಅಂದೇ ದೇವಿಯು ಅವನ ಕನಸಿನಲ್ಲಿ ಬಂದು ತನ್ನನ್ನು ಅಲ್ಲಿಯೇ ಪ್ರತಿಷ್ಠಾಪಿಸುವಂತೆ ಸೂಚಿಸಿದಳು.

ದೇವಿಯ ಆಜ್ಞೆಯಂತೆ ಕುರುಬನು ಸಣ್ಣ ಗುಡಿಯನ್ನೇನೋ ನಿರ್ಮಿಸಿದ, ಆದರೆ ದೇವಿಗೆ ಅರ್ಪಿಸಲು ಅವನ ಬಳಿ ತೆಂಗಿನಕಾಯಿ ಅಥವಾ ಬೆಲೆಬಾಳುವ ಯಾವುದೇ ವಸ್ತುಗಳಿರಲಿಲ್ಲ. ತನ್ನ ಬಡತನಕ್ಕೆ ನೊಂದು ಕಣ್ಣೀರಿಟ್ಟ ಭಕ್ತನಿಗೆ ದೇವಿಯು ಮತ್ತೆ ದರ್ಶನ ನೀಡಿ ಹೀಗೆಂದಳಂತೆ: “ಮಗನೇ, ನನಗೆ ನಿನ್ನ ಆಡಂಬರ ಬೇಕಾಗಿಲ್ಲ, ನಿನ್ನ ನಿಷ್ಕಲ್ಮಶ ಪ್ರೀತಿ ಸಾಕು. ಇಲ್ಲಿ ಬಿದ್ದಿರುವ ಐದು ಕಲ್ಲುಗಳನ್ನೇ ನನಗೆ ಪ್ರೀತಿಯಿಂದ ಅರ್ಪಿಸು.” ಅಂದಿನಿಂದ ಇಂದಿನವರೆಗೆ, ಈ ದೇವಾಲಯದಲ್ಲಿ ಕಲ್ಲುಗಳೇ ಮಹಾಪ್ರಸಾದ.

ಇದನ್ನೂ ಓದಿ: ಮುಯ್ಯಿ ರೂಪದಲ್ಲಿ ಕೊಡುವ ಹಣಕ್ಕೆ 1ರೂ. ಸೇರಿಸಿ ಕೊಡಬೇಕು ಯಾಕೆ ಗೊತ್ತಾ?

ಹರಕೆ ತೀರಿಸುವ ವಿಶಿಷ್ಟ ಪದ್ಧತಿ:

ಈ ದೇವಾಲಯಕ್ಕೆ ಬರುವ ಭಕ್ತರು ತಮ್ಮ ಮನದ ಇಚ್ಛೆಯನ್ನು ದೇವಿಯ ಮುಂದೆ ತೋಡಿಕೊಳ್ಳುವಾಗ ಐದು ಕಲ್ಲುಗಳು ಮತ್ತು ಒಂದು ಹೂವನ್ನು ಪೂರ್ಣ ಹೃದಯದಿಂದ ಅರ್ಪಿಸುತ್ತಾರೆ. ಭಕ್ತರ ಆಸೆ ಈಡೇರಿದಾಗ, ಅವರು ಮತ್ತೆ ದೇವಾಲಯಕ್ಕೆ ಬಂದು ಕೃತಜ್ಞತೆಯ ಸಂಕೇತವಾಗಿ ಪುನಃ ಐದು ಕಲ್ಲುಗಳನ್ನು ದೇವಿಯ ಪಾದಕ್ಕೆ ಅರ್ಪಿಸುತ್ತಾರೆ. ಹೀಗೆ ಮಾಡುವುದರಿಂದ ದುಷ್ಟ ಶಕ್ತಿಗಳ ಪ್ರಭಾವ ಕಡಿಮೆಯಾಗಿ, ಜೀವನದಲ್ಲಿ ಸುಖ-ಶಾಂತಿ ನೆಲೆಸುತ್ತದೆ ಎಂಬುದು ಭಕ್ತರ ಗಾಢ ನಂಬಿಕೆ.

ಪ್ರಕೃತಿ ಮತ್ತು ಆಧ್ಯಾತ್ಮದ ಸಮಾಗಮ, ನವರಾತ್ರಿ ಜಾತ್ರೆ:

ಪ್ರತಿ ವರ್ಷ ಚೈತ್ರ ಮತ್ತು ಶರದೃತ ನವರಾತ್ರಿಯ ಸಮಯದಲ್ಲಿ ಮಾ ಬಾಗದಾಯಿ ದೇವಾಲಯವು ಭಕ್ತ ಸಾಗರದಿಂದ ತುಂಬಿರುತ್ತದೆ. ಒಂಬತ್ತು ದಿನಗಳ ಕಾಲ ದೇವಿಯನ್ನು ಅತ್ಯಂತ ಸುಂದರವಾಗಿ ಅಲಂಕರಿಸಲಾಗುತ್ತದೆ. ದಟ್ಟವಾದ ಕಾಡಿನ ಮಧ್ಯೆ ನಡೆಯುವ ಈ ಜಾತ್ರೆಯು ಪ್ರಕೃತಿಯ ಸೌಂದರ್ಯದೊಂದಿಗೆ ಆಧ್ಯಾತ್ಮಿಕತೆಯ ಅದ್ಭುತ ಅನುಭವವನ್ನು ನೀಡುತ್ತದೆ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಸರ್​​​ ಶೂ ತೆಗೆಯಿರಿ, ನಾನು ಇದೇ ಕಾರಣಕ್ಕೆ ಬರುವುದಿಲ್ಲ: ಪೂಜೆ ವೇಳೆ ಪಾದರಕ್ಷೆ ಬಿಡಲು ವೈಷ್ಣೋದೇವಿ ಮಂಡಳಿ ಹೆಚ್ಚುವರಿ ಸಿಇಒ ನಿರಾಕರಣೆ!

ಜಮ್ಮು, ಏ.8 : ಶ್ರೀ ಮಾತಾ ವೈಷ್ಣೋದೇವಿ ಶ್ರೈನ್ ಬೋರ್ಡ್‌ನ (SMVDSB) ಹೆಚ್ಚುವರಿ ಸಿಇಒ (ACEO) ಅವರು ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ನಡೆದುಕೊಂಡ ರೀತಿ ಈಗ ಭಾರಿ ವಿವಾದಕ್ಕೆ ಈಡಾಗಿದೆ. ಮಂಡಳಿಯ ಹೊಸ ಸ್ಮರಣಿಕೆ ಮಳಿಗೆಯ (Souvenir Shop) ಉದ್ಘಾಟನಾ ಸಮಾರಂಭದ ಪೂಜಾ ವಿಧಿವಿಧಾನಗಳ ವೇಳೆ ಪಾದರಕ್ಷೆಗಳನ್ನು ತೆಗೆಯಲು ಅಧಿಕಾರಿ ನಿರಾಕರಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಮಳಿಗೆಯ ಉದ್ಘಾಟನೆಗಾಗಿ ಅರ್ಚಕರು ಪೂಜೆ ನೆರವೇರಿಸುತ್ತಿದ್ದರು. ಈ ಸಂದರ್ಭದಲ್ಲಿ ಅಧಿಕಾರಿ ಶೂ ಧರಿಸಿಯೇ ಪೂಜೆಯಲ್ಲಿ ಭಾಗವಹಿಸಲು ಮುಂದಾಗಿದ್ದರು. ಇದನ್ನು ಗಮನಿಸಿದ ಪಂಡಿತರು (ಅರ್ಚಕರು), ಧಾರ್ಮಿಕ ನಿಯಮದಂತೆ ಪಾದರಕ್ಷೆಗಳನ್ನು ಹೊರಗೆ ಬಿಟ್ಟು ಬರುವಂತೆ ವಿನಂತಿಸಿದರು. ಆದರೆ, ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಅಧಿಕಾರಿ, ತಾವು ಪಾದರಕ್ಷೆ ಬಿಡುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ ಎನ್ನಲಾಗಿದೆ. ಅಷ್ಟೇ ಅಲ್ಲದೆ, “ಇದೇ ಕಾರಣಕ್ಕೆ ನಾನು ಇಂತಹ ಧಾರ್ಮಿಕ ವಿಧಿವಿಧಾನಗಳಲ್ಲಿ ಭಾಗವಹಿಸಲು ಬರುವುದಿಲ್ಲ” ಎಂದು ಬಹಿರಂಗವಾಗಿಯೇ ಹೇಳಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಲಕ್ಷಾಂತರ ಭಕ್ತರ ಆರಾಧ್ಯ ದೈವವಾಗಿರುವ ವೈಷ್ಣೋದೇವಿ ಮಂಡಳಿಯಲ್ಲೇ ಉನ್ನತ ಹುದ್ದೆಯಲ್ಲಿರುವ ಅಧಿಕಾರಿಯೊಬ್ಬರು ಧಾರ್ಮಿಕ ನಂಬಿಕೆಗಳಿಗೆ ಗೌರವ ನೀಡದಿರುವುದು ಶೋಚನೀಯ ಎಂದು ನೆಟ್ಟಿಗರು ಟೀಕಿಸುತ್ತಿದ್ದಾರೆ. “ಭಕ್ತಿ ಇಲ್ಲದಿದ್ದರೆ ಪರವಾಗಿಲ್ಲ, ಆದರೆ ಕನಿಷ್ಠ ಶಿಷ್ಟಾಚಾರ ಪಾಲಿಸಬೇಕಲ್ಲವೇ?” ಎಂದು ಅನೇಕರು ಪ್ರಶ್ನಿಸಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಕಾಲುಂಗರ ಹಾಕಿಕೊಳ್ತಾರೆ ನಟಿ ರಜಿನಿ ಪತಿ ಅರುಣ್ 

ಅರುಣ್ ಗೌಡ ಹಾಗೂ ಅಮೃತವರ್ಷಿಣಿ ರಜಿನಿ ವಿವಾಹ ಆಗಿದ್ದಾರೆ. ಅರುಣ್ ಫಿಟ್ನೆಸ್ ಟ್ರೇನರ್. ರಜಿನಿ ಹಾಗೂ ಅರುಣ್​​ಗೆ ಪರಿಚಯ ಆಗಿದ್ದು ಜಿಮ್ ಅಲ್ಲಿಯೇ. ಈಗ ಇಬ್ಬರೂ ‘ಜೋಡಿ ನಂಬರ್ 1’ ಶೋಗೆ ಬಂದಿದ್ದಾರೆ. ಅರುಣ್ ಅವರು ಶೋನಲ್ಲಿ ಒಂದು ಅಚ್ಚರಿಯ ವಿಷಯ ರಿವೀಲ್ ಮಾಡಿದ್ದಾರೆ. ಅವರು ಕಾಲುಂಗರ ಧರಿಸುತ್ತಾರಂತೆ. ‘ಮಮ್ಮಿಗೆ (ರಜಿನಿ) ಕಮಿಟ್ ಆಗಿದ್ದೇನೆ ಎಂಬುದರ ಅರ್ಥ ಇದು’ ಎಂದು ಅರುಣ್ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Viral: ವ್ಯವಹಾರ ಶುದ್ಧವಾಗಿರಲಿ; ಸಾಲ ಕೇಳುವವರಿಗೆ ಅಂಗಡಿ ಮುಂಭಾಗ ಬೋರ್ಡ್ ಹಾಕಿ ಎಚ್ಚರಿಕೆ ಕೊಟ್ಟ ಮಾಲೀಕ

ಹಣ ಅಂದ್ರೆ ಹೆಣ ಕೂಡ ಬಾಯಿ ಬಿಡುತ್ತೆ ಅನ್ನೋ ಮಾತಿದೆ. ಹಣದ ವಿಚಾರ ಬಂದ್ರೆ ಅತ್ಯಾಪ್ತರು ಸಹ ದೂರವಾಗಿ ಬಿಡ್ತಾರೆ. ಹೀಗಾಗಿ ವ್ಯಾಪಾರಸ್ಥರು ಹಾಗೂ ಅಂಗಡಿ ಮಾಲೀಕರು (shop owner) ವ್ಯವಹಾರ ವಿಷ್ಯದಲ್ಲಿ ಕಟ್ಟುನಿಟ್ಟಾಗಿ ಇರೋದನ್ನು ನೀವು ನೋಡಿರುತ್ತೀರಿ. ಅಷ್ಟೇ ಅಲ್ಲ, ಸಾಲ ಕೇಳಿ ಸ್ನೇಹ (Friendship) ಕಳೆದುಕೊಳ್ಳಬೇಡಿ ಅನ್ನೋದನ್ನು ದೊಡ್ಡ ಅಕ್ಷರದಲ್ಲಿ ಅಂಗಡಿಗಳಲ್ಲಿ ಬರೆದಿರುತ್ತಾರೆ. ಇದೀಗ ಇಂತಹದ್ದೇ ಅಂಗಡಿ ಮುಂಭಾಗದಲ್ಲಿನ  ಬೋರ್ಡ್‌ ಪೋಟೋ ವೈರಲ್‌ ಆಗಿದೆ. ಈ ಬೋರ್ಡ್‌ನಲ್ಲಿ ಸಾಲ ಕೇಳುವವರಿಗೆ  ಅಂಗಡಿ ಮಾಲೀಕ ಖಡಕ್ ವಾರ್ನಿಂಗ್‌ ನೀಡಿದ್ದಾರೆ. ಈ ಫೋಟೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು ನೆಟ್ಟಿಗರ ಹುಬ್ಬೇರಿಸುವಂತೆ ಮಾಡಿದೆ.

ನಿಕ್ಷೇಪ್ ಗೌಡ (Nikshep gowda) ಹೆಸರಿನ ಖಾತೆಯಲ್ಲಿ ಅಂಗಡಿ ಮುಂಭಾಗದಲ್ಲಿ ಹಾಕಲಾದ ದೊಡ್ಡ ಬೋರ್ಡ್‌ನ ಫೋಟೋವನ್ನು ಹಂಚಿಕೊಳ್ಳಲಾಗಿದೆ. ಈ ಬೋರ್ಡ್‌ನಲ್ಲಿ ವ್ಯವಹಾರ ಶುದ್ಧವಾಗಿರಲಿ, ನಾಳೆ ಕೊಡ್ತೀನಿ, ಆಮೇಲೆ ಕೊಡ್ತೀನಿ, ಸ್ವಲ್ಪ ಹೊತ್ತಿನಲ್ಲಿ ಕೊಡ್ತೀನಿ, ಬಂದು ಕೊಡ್ತೀನಿ, ನಾ ಓಡಿ ಹೋಗ್ತಿನಾ?, ನನ್ನ ಮೇಲೆ ನಂಬಿಕೆ ಇಲ್ವಾ?, ನಾವೇನ್ ಮೋಸ ಮಾಡ್ತೀವಾ?, ದಿನಾ ನಾನು ಇಲ್ಲೇ ಬರ್ತಿನಿ? ಹಾಗೂ ನಾನು ಇದೇ ಊರಿನವನು, ಇನ್ನು ಮುಂತಾದ ವಾಕ್ಯಗಳನ್ನು ನಮ್ಮಲ್ಲಿ ದಯವಿಟ್ಟು ಬಳಸಬೇಡಿ. ಸ್ನೇಹ ಬೇರೆ ವ್ಯವಹಾರ ಬೇರೆ ನಮ್ಮಲ್ಲಿ ಸಾಲ ದೊರೆಯುವುದಿಲ್ಲ ಸಹಕರಿಸಿ ಎಂದು ಬರೆಯಲಾಗಿದೆ.

ವೈರಲ್ ಪೋಸ್ಟ್ ಇಲ್ಲಿದೆ

ಇದನ್ನೂ ಓದಿ: ಬೀದಿ ಬದಿ ಕಸ ಹಾಕುವವರಿಗೆ ವಿಶಿಷ್ಟ ಬ್ಯಾನರ್ ಹಾಕಿ ವಾರ್ನಿಂಗ್ ಕೊಟ್ಟ ವ್ಯಕ್ತಿ

ಈ ಪೋಸ್ಟ್ ಮೂವತ್ತೇರಡು ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ಪಾಪ ತುಂಬಾ ಮೋಸ ಹೋಗಿದ್ದಾನೆ ಅನಿಸ್ತದೆ, ಅದಕ್ಕೆ ಹೀಗೆ ಬರೆದು ಹಾಕಿದ್ದಾನೆ ಅನಿಸ್ತದೆ ಎಂದು ಹೇಳಿದ್ದಾರೆ. ಇನ್ನೊಬ್ಬರು, ಈ ರೀತಿ ಇರುವವರಿಗೆ ಬೇಗನೆ ನಾಮ ಬೀಳೋದು ಎಂದು ಕಾಮೆಂಟ್ ಮಾಡಿದ್ದಾರೆ. ಮತ್ತೊಬ್ಬರು, ನೊಂದು ಬೆಂದಿರುವ ಜೀವ ಎಂದು ತಮಾಷೆ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Source link

ಮಲಯಾಳಂನ ‘ಪಳ್ಳಿ ಚಟ್ಟಂಬಿ’ ಚಿತ್ರದಲ್ಲಿ ಬಳಕೆ ಆಯ್ತು ಯಕ್ಷಗಾನ; ಇದೆ ಕನ್ನಡದ ಡೈಲಾಗ್

ಮಲಯಾಳಂ ಸಿನಿಮಾಗಳು ಮೊದಲಿನಿಂದಲೂ ಬೆಂಗಳೂರು ನಂಟನ್ನು ಹೊಂದಿವೆ. ಅವರ ಅನೇಕ ಸಿನಿಮಾಗಳು ಬೆಂಗಳೂರಿನಲ್ಲಿ ಶೂಟ್ ಆದ ಉದಾಹರಣೆ ಇದೆ. ‘ಬೆಂಗಳೂರು ಡೇಸ್’, ‘ಡಿಯರ್ ಫ್ರೆಂಡ್’, ‘ಲೋಕಃ: ಚಾಪ್ಟರ್ 1’ ಹೀಗೆಯೇ ಅನೇಕ ಚಿತ್ರಗಳು ಬೆಂಗಳೂರು ಕನೆಕ್ಷನ್ ಹೊಂದಿವೆ. ಈಗ ಮುಂಬರುವ ಮಲಯಾಳಂನ ‘ಪಳ್ಳಿ ಚಟ್ಟಂಬಿ’ ಚಿತ್ರಕ್ಕೂ ಕರ್ನಾಟಕದ ಲಿಂಕ್ ಇದೆ ಎಂಬ ವಿಷಯ ರಿವೀಲ್ ಆಗಿದೆ.

‘ಪಳ್ಳಿ ಚಟ್ಟಂಬಿ’ ಸಿನಿಮಾದಲ್ಲಿ ಟುವಿನೋ ಥಾಮಸ್ ನಟಿಸಿದ್ದಾರೆ. ಈ ಚಿತ್ರಕ್ಕೆ ಕಯಾದು ಲೋಹರ್ ನಾಯಕಿ. ಈ ಮೊದಲು ಕಯಾದು ಅವರು ‘ಮುಗಿಲ್​​ ಪೇಟೆ’ ಹೆಸರಿನ ಕನ್ನಡ ಸಿನಿಮಾದಲ್ಲಿ ನಟಿಸಿದ್ದರು. ಈ ಚಿತ್ರಕ್ಕೆ ಡಿಜೋ ಜೊಸೆ ಆಂಟೋನಿ ನಿರ್ದೇಶನ ಇದೆ. ಈ ಮೊದಲು ‘ಜನ ಗಣ ಮನ’ ಹೆಸರಿನ ಸಿನಿಮಾ ಮಾಡಿದ್ದರು. ಈ ಚಿತ್ರದ ಕಥೆ ನಡೆದಿದ್ದು ಕೂಡ ಕರ್ನಾಟಕದ ರಾಮನಗರದಲ್ಲಾಗಿತ್ತು. ಈಗ ಅವರ ನಿರ್ದೇಶನದ ‘ಪಳ್ಳಿ ಚಟ್ಟಂಬಿ’ ಚಿತ್ರದಲ್ಲಿ ಕನ್ನಡದ ಕಲೆಯ ಕನೆಕ್ಷನ್ ಇರುವ ವಿಷಯ ರಿವೀಲ್ ಆಗಿದೆ.

ಬೆಂಗಳೂರಿನಲ್ಲಿ ‘ಪಳ್ಳಿ ಚಟ್ಟಂಬಿ’ ಸಿನಿಮಾ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಟುವಿನೋ, ‘ಈ ಸಿನಿಮಾದಲ್ಲಿ ಯಕ್ಷಗಾನದ ಬಳಕೆ ಆಗಿದೆ. ಅಲ್ಲಿ, ಕನ್ನಡದ ಡೈಲಾಗ್ ಬರುತ್ತದೆ’ ಎಂದು ಟುವಿನೋ ಮಾಹಿತಿ ನೀಡಿದರು. ಇದು ಕುತೂಹಲ ಹೆಚ್ಚಿಸಿದೆ. ಕನ್ನಡ ಪ್ರೇಕ್ಷಕರನ್ನು ಸೆಳೆಯುವ ಉದ್ದೇಶದಿಂದಲೇ ಕನ್ನಡವನ್ನು ಮಲಯಾಳಂನಲ್ಲಿ ಸೇರಿಸಲಾಗುತ್ತದೆಯೇ ಎನ್ನುವ ಪ್ರಶ್ನೆ ಮೂಡಿತು. ಇದಕ್ಕೆ ಉತ್ತರಿಸಿದ ಅವರು, ‘ಕಥೆ ಡಿಮ್ಯಾಂಡ್​ ಮಾಡಿದರೆ ಮಾತ್ರ ಅದನ್ನು ಸೇರಿಸೋದಾಗಿ’ ಹೇಳಿದ್ದಾರೆ ಟುವಿನೋ.

‘ಪಳ್ಳಿ ಚಟ್ಟಂಬಿ’ ಸಿನಿಮಾದ ಕಥೆ ಸಾಗೋದು ಹಳ್ಳಿಯಲ್ಲಿ. ಈ ಸಿನಿಮಾದ ಟ್ರೇಲರ್ ಗಮನ ಸೆಳೆದಿದೆ. ಮಲಯಾಳಂ ಜೊತೆ ಕನ್ನಡದಲ್ಲೂ ಸಿನಿಮಾ ರಿಲೀಸ್ ಆಗುತ್ತಿದೆ. ಈ ಚಿತ್ರವನ್ನು ಕರ್ನಾಟಕದಲ್ಲಿ ಹೊಂಬಾಳೆ ಫಿಲ್ಮ್ಸ್ ಹಂಚಿಕೆ ಮಾಡುತ್ತಿದೆ. ಏಪ್ರಿಲ್ 15ರಂದು ಸಿನಿಮಾ ತೆರೆಗೆ ಬರಲಿದೆ.

ಇದನ್ನೂ ಓದಿ: ‘ಟಾಕ್ಸಿಕ್’ ಚಿತ್ರದಲ್ಲಿ ಯಾವ ಪಾತ್ರ? ಕೊನೆಗೂ ಮೌನ ಮುರಿದ ಟೊವಿನೋ ಥಾಮಸ್

‘ಪಳ್ಳಿ ಚಟ್ಟಂಬಿ’ ಚಿತ್ರವನ್ನು ವರ್ಲ್ಡ್ ವೈಡ್ ಫಿಲಂಸ್, ಸಿ ಕ್ಯೂಬ್ ಬ್ರೋಸ್ ಎಂಟರ್ಟೇನ್ಮೆಂಟ್ ಬ್ಯಾನರ್ ಅಡಿಯಲ್ಲಿ ನೌಫಲ, ಬ್ರಿಜೇಶ್, ಚಾಣುಕ್ಯ ಚೈತನ್ಯ, ಚರಣ್ ನಿರ್ಮಾಣ ಮಾಡಿದ್ದಾರೆ. ಈ ಸಿನಿಮಾಗೆ ಎಸ್ ಸುರೇಶ್ ಬಾಬು ಕಥೆ ಬರೆದಿದ್ದಾರೆ. ಟಿಜೋ ಟಾಮಿ ಛಾಯಾಗ್ರಹಣ, ಶ್ರೀಜಿತ್ ಸಾರಂಗ್ ಸಂಕಲನ, ಜೇಕ್ಸ್ ಬಿಜೋಯ್ ಸಂಗೀತ ಸಂಯೋಜನೆ ಚಿತ್ರಕ್ಕೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಸಿನಿಮಾ ಬಿಡುಗಡೆಗೆ ಎಂಟು ತಿಂಗಳು, ಈಗಲೇ 90,000ಕ್ಕೆ ಟಿಕೆಟ್ ಸೋಲ್ಡ್ ಔಟ್

ಸಿನಿಮಾದ (Cinema) ಬಿಡುಗಡೆ ಆಗುವ ಕೆಲ ದಿನಗಳ ಮುಂಚೆ ಕೆಲವೊಮ್ಮೆ ಕೆಲವು ಗಂಟೆಗಳ ಮುಂಚೆ ಮಾತ್ರ ಸಿನಿಮಾದ ಅಡ್ವಾನ್ಸ್ ಬುಕಿಂಗ್​​ಗಳು ಶುರು ಆಗುತ್ತವೆ. ಆದರೆ ಇಲ್ಲೊಂದು ಸಿನಿಮಾ ಬಿಡುಗಡೆಗೆ ಎಂಟು ತಿಂಗಳ ಮುಂಚೆಯೇ ಟಿಕೆಟ್​​ಗಳು ಮಾರಾಟ ಆಗಿವೆ, ಅದೂ 90 ಸಾವಿರ ರೂಪಾಯಿಗೆ ಮಾರಾಟ ಆಗಿವೆ. ವಿಶ್ವ ಸಿನೆಮಾ ರಂಗದಲ್ಲಿ ಅತ್ಯಂತ ಯಶಸ್ವಿ ಸೈನ್ಸ್ ಫಿಕ್ಷನ್ ಫ್ರಾಂಚೈಸಿಗಳಲ್ಲಿ ಒಂದಾದ ‘ಡ್ಯೂನ್’ ಸರಣಿಯ ಮೂರನೇ ಭಾಗವು ಈ ವರ್ಷದ ಡಿಸೆಂಬರ್ 18ರಂದು ಬಿಡುಗಡೆಯಾಗಲಿದೆ. ಈ ಚಿತ್ರವು ತಾಂತ್ರಿಕವಾಗಿ ಅತ್ಯಂತ ಶ್ರೀಮಂತವಾಗಿದ್ದು, ಜಗತ್ತಿನಾದ್ಯಂತ ದೊಡ್ಡ ಮಟ್ಟದ ಅಭಿಮಾನಿ ಬಳಗವನ್ನು ಹೊಂದಿದೆ.

ಚಿತ್ರದ ಬಿಡುಗಡೆಗೆ ಸುಮಾರು 8 ತಿಂಗಳು ಇರುವಾಗಲೇ, ವಿತರಕರು ವಿಶ್ವದ ಕೆಲವು ಆಯ್ದ ಐಮ್ಯಾಕ್ಸ್ ಚಿತ್ರಮಂದಿರಗಳಲ್ಲಿ ಮುಂಗಡ ಬುಕಿಂಗ್ ಅನ್ನು ಪ್ರಾರಂಭಿಸಿದ್ದರು. ಅಚ್ಚರಿಯೆಂದರೆ, ಬುಕಿಂಗ್ ಆರಂಭವಾದ ಕೆಲವೇ ನಿಮಿಷಗಳಲ್ಲಿ ಎಲ್ಲಾ ಟಿಕೆಟ್‌ಗಳು ಮಾರಾಟವಾಗಿವೆ. ಡಿಮ್ಯಾಂಡ್ ಹೆಚ್ಚಾದಂತೆ, ಟಿಕೆಟ್ ಖರೀದಿಸಿದವರು ಅವುಗಳನ್ನು ‘ಇ-ಬೇ’ ನಂತಹ ಖಾಸಗಿ ಹರಾಜು ವೆಬ್‌ಸೈಟ್‌ಗಳಲ್ಲಿ ಮರುಮಾರಾಟಕ್ಕೆ ಇಟ್ಟಿದ್ದಾರೆ. ವರದಿಗಳ ಪ್ರಕಾರ, ಕೇವಲ ಒಂದು ಟಿಕೆಟ್ ಬರೋಬ್ಬರಿ 999 ಡಾಲರ್‌ಗೆ (ಭಾರತೀಯ ರೂಪಾಯಿಗಳಲ್ಲಿ ಸುಮಾರು ₹83,000 ರಿಂದ ₹90,000) ಮಾರಾಟವಾಗಿದೆ. ಇದು ಸಿನೆಮಾ ಪ್ರೇಮಿಗಳಲ್ಲಿ ಈ ಚಿತ್ರದ ಬಗ್ಗೆ ಇರುವ ವಿಪರೀತ ಕ್ರೇಜ್ ಅನ್ನು ತೋರಿಸುತ್ತದೆ.

ಇದನ್ನೂ ಓದಿ:‘ಟಾಕ್ಸಿಕ್’ ಎದುರು ಬರಲು ರೆಡಿ ಆಯ್ತು ಬಾಲಿವುಡ್​​ನ ಸ್ಟಾರ್ ನಟನ ಸಿನಿಮಾ

ಭಾರತೀಯ ಮಾರುಕಟ್ಟೆಯಲ್ಲೂ ‘ಡ್ಯೂನ್’ ಸರಣಿಗೆ ಭರ್ಜರಿ ಬೇಡಿಕೆಯಿದೆ. ಈ ಹಿಂದೆ ತೆಲುಗಿನ ‘ಕಲ್ಕಿ 2898 AD‘ ಚಿತ್ರದ ಪೋಸ್ಟರ್‌ಗಳು ಮತ್ತು ಮರುಭೂಮಿಯ ದೃಶ್ಯಗಳು ‘ಡ್ಯೂನ್’ ಚಿತ್ರಕ್ಕೆ ಹೋಲಿಕೆಯಾಗುತ್ತವೆ ಎಂಬ ಚರ್ಚೆಗಳು ನಡೆದಿದ್ದವು. ಇದು ಭಾರತೀಯ ಪ್ರೇಕ್ಷಕರಿಗೂ ಈ ಹಾಲಿವುಡ್ ಸರಣಿಯ ಪರಿಚಯವನ್ನು ಹೆಚ್ಚಿಸಿದೆ. ಕೇವಲ ಸಿನೆಮಾ ಮಾತ್ರವಲ್ಲದೆ, ಈ ಸರಣಿಯ ‘ಡ್ಯೂನ್: ಪ್ರೊಫೆಸಿ’ ಕೂಡ ಬಿಡುಗಡೆ ಆಗಿದೆ. ವೆಬ್ ಸರಣಿಯಲ್ಲಿ ಭಾರತೀಯ ನಟಿ ಟಬು ಸಹ ನಟಿಸಿದ್ದಾರೆ.

‘ಡ್ಯೂನ್’ ಸಿನಿಮಾದ ಮೂರನೇ ಸರಣಿ ಇದೀಗ ಬಿಡುಗಡೆ ಆಗಲಿದ್ದು, ಸಿನಿಮಾನಲ್ಲಿ ಟೀಮಟಿ ಶಾಲೊಮೇಟ್, ಜೆಂಡೆಯಾ, ಜಾಸನ್ ಮವೋಮಾ ಇನ್ನೂ ಹಲವು ಸ್ಟಾರ್ ನಟರು ನಟಿಸಿದ್ದಾರೆ. ಸಿನಿಮಾವನ್ನು ಡೆನ್ನಿಸ್ ವೆಲ್ಲಿನ್ಯುವಿ ನಿರ್ದೇಶನ ಮಾಡಿದ್ದಾರೆ. ಸಿನಿಮಾ ಇದೇ ವರ್ಷ ಡಿಸೆಂಬರ್ 18ಕ್ಕೆ ಬಿಡುಗಡೆ ಆಗಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಕಾಫಿಗೂ ತಟ್ಟಿದ ಯುದ್ಧದ ಬಿಸಿ! ರಫ್ತು ಸ್ಥಗಿತಗೊಂಡು ಕಂಗಾಲಾದ ಬೆಳೆಗಾರ; ಶೇ 20ರಷ್ಟು ಕುಸಿದ ದರ

ಹಾಸನ, ಏಪ್ರಿಲ್ 8: ಇಡೀ ಜಗತ್ತನ್ನೇ ತಲ್ಲಣಗೊಳಿಸಿರುವ ಮಧ್ಯಪ್ರಾಚ್ಯ ಯುದ್ಧದ ಪರಿಣಾಮಗಳು ಈಗ ಕರ್ನಾಟಕದ (Karnataka) ಕಾಫಿ ತೋಟಗಳಿಗೂ ತಟ್ಟಿವೆ. ಅಡುಗೆ ಅನಿಲ ಮತ್ತು ಆಟೋ ಗ್ಯಾಸ್ ಕೊರತೆಯ ನಡುವೆ, ದೇಶಕ್ಕೆ ಅತಿ ಹೆಚ್ಚು ವಿದೇಶಿ ವಿನಿಮಯ ತಂದುಕೊಡುತ್ತಿದ್ದ ಕಾಫಿ ಉದ್ಯಮ ಈಗ ಸಂಕಷ್ಟದ ಸುಳಿಗೆ ಸಿಲುಕಿದೆ. ಇಸ್ರೇಲ್ ಮತ್ತು ಇರಾನ್ ನಡುವಿನ ಭೀಕರ ಕದನದಿಂದಾಗಿ ಕಾಫಿ ರಫ್ತು (Coffee Export) ಸಂಪೂರ್ಣವಾಗಿ ಸ್ಥಗಿತಗೊಂಡಿದ್ದು, ಮಾರುಕಟ್ಟೆಯಲ್ಲಿ ಕಾಫಿ ಬೆಲೆ ತೀವ್ರವಾಗಿ ಕುಸಿಯುತ್ತಿದೆ.

ದಶಕದ ಬಳಿಕ ಏರಿದ್ದ ಬೆಲೆ ಈಗ ದಿಢೀರ್ ಕುಸಿತ

ಕಳೆದ ಹಲವು ದಶಕಗಳ ನಂತರ ಕಾಫಿಗೆ ಬಂಪರ್ ಬೆಲೆ ಬಂದಿತ್ತು. ಇದರಿಂದ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದ ಬೆಳೆಗಾರರು, ಬೆಲೆ ಮತ್ತಷ್ಟು ಏರಬಹುದು ಎಂಬ ನಿರೀಕ್ಷೆಯಲ್ಲಿ ಕಾಫಿಯನ್ನು ಮಾರಾಟ ಮಾಡದೆ ಸಂಗ್ರಹಿಸಿಟ್ಟುಕೊಂಡಿದ್ದರು. ಆದರೆ, ಯುದ್ಧ ಶುರುವಾದ ಕೇವಲ ಒಂದು ತಿಂಗಳ ಅವಧಿಯಲ್ಲಿ ಬೆಲೆ ಬರೋಬ್ಬರಿ ಶೇಕಡಾ 20 ರಷ್ಟು ಕುಸಿದಿದೆ.

ಕಾಫಿ ದರ ವಿವರ

  • ಅರೇಬಿಕಾ ಕಾಫಿ: ಕಳೆದ ವರ್ಷ 50 ಕೆಜಿ ಚೀಲಕ್ಕೆ 29 ಸಾವಿರ ರೂ. ಇದ್ದ ಬೆಲೆ ಈಗ 23 ಸಾವಿರಕ್ಕೆ ಕುಸಿದಿದೆ.
    ರೊಬಸ್ಟಾ ಕಾಫಿ: 12 ಸಾವಿರ ರೂ. ಇದ್ದ ಬೆಲೆ ಈಗ ಕೇವಲ 8 ಸಾವಿರಕ್ಕೆ ಇಳಿಕೆಯಾಗಿದೆ.
  • ಗಾಯದ ಮೇಲೆ ಬರೆ ಎಳೆದ ವಿದೇಶಿ ಫಸಲು

ಒಂದೆಡೆ ಯುದ್ಧದಿಂದ ರಫ್ತು ನಿಂತಿದ್ದರೆ, ಮತ್ತೊಂದೆಡೆ ಜಗತ್ತಿನ ಅತಿ ದೊಡ್ಡ ಕಾಫಿ ಬೆಳೆಗಾರ ರಾಷ್ಟ್ರಗಳಾದ ಬ್ರೆಜಿಲ್ ಮತ್ತು ವಿಯೆಟ್ನಾಂನಲ್ಲಿ ಈ ಬಾರಿ ಉತ್ತಮ ಫಸಲು ಬಂದಿದೆ. ಕಳೆದ ವರ್ಷ ಅಲ್ಲಿ ಫಸಲು ಕೈಕೊಟ್ಟಿದ್ದರಿಂದ ಭಾರತದ ಕಾಫಿಗೆ ಭಾರಿ ಬೇಡಿಕೆ ಇತ್ತು. ಆದರೆ ಈಗ ಆ ದೇಶಗಳಲ್ಲೂ ಫಸಲು ಚೆನ್ನಾಗಿರುವುದು ಮತ್ತು ಯುದ್ಧದ ಪರಿಣಾಮ ರಫ್ತು ರದ್ದಾಗಿರುವುದು ಬೆಳೆಗಾರರ ಗಾಯದ ಮೇಲೆ ಬರೆ ಎಳೆದಂತಾಗಿದೆ.

ಕಾಫಿ ಬೆಳೆಗಾರರ ಆಗ್ರಹವೇನು?

ದೇಶದ ಒಟ್ಟು ಕಾಫಿ ಉತ್ಪಾದನೆಯಲ್ಲಿ ಕರ್ನಾಟಕದ ಪಾಲು ಶೇ 70 ರಷ್ಟಿದೆ. ಕೊಡಗು, ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಯ ಲಕ್ಷಾಂತರ ಕುಟುಂಬಗಳು ಈ ಉದ್ಯಮವನ್ನೇ ನಂಬಿವೆ. ‘ರಫ್ತುದಾರರಿಗೆ ಕೇಂದ್ರ ಸರ್ಕಾರ ಹೇಗೆ ನೆರವಿನ ಹಸ್ತ ನೀಡುತ್ತದೆಯೋ, ಅದೇ ಮಾದರಿಯಲ್ಲಿ ಕಾಫಿ ಬೆಳೆಗಾರರಿಗೂ ವಿಶೇಷ ಪರಿಹಾರ ಘೋಷಿಸಬೇಕು’ ಎಂದು ಅಂತರಾಷ್ಟ್ರೀಯ ಕಾಫಿ ಸಂಘಟನೆ ಸಲಹಾ ಸಮಿತಿ ಸದಸ್ಯರಾದ ಡಾ. ಎಚ್ ಡಿ ಮೋಹನ್ ಕುಮಾರ್ ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಇರಾನ್ ಮೇಲೆ ಭೀಕರ ದಾಳಿ ನಿರ್ಧಾರದಿಂದ ಹಿಂದೆ ಸರಿದ ಟ್ರಂಪ್: ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ 2 ವಾರಗಳ ಕದನ ವಿರಾಮ ಘೋಷಣೆ!

ಸದಗಯ ಇರಾನ್-ಅಮೆರಿಕ ಯುದ್ಧಕ್ಕೆ 2 ವಾರಗಳ ಕದನ ವಿರಾಮ ಘೋಷಿಸಲಾಗಿದ್ದು, ಇದು ಮುಂದೆ ಯಾವ ರೀತಿ ಪರಿಣಾಮ ಬೀರಲಿದೆ ಎಂಬುದನ್ನು ಕಾದುನೋಡಬೇಕಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Exit mobile version