ಈ ವಾರ ಒಟಿಟಿಗೆ ಬಂದಿವೆ ನೋಡಲೇಬೇಕಾದ ಸಿನಿಮಾಗಳು: ಪಟ್ಟಿ ಇಲ್ಲಿದೆ

Source link

ಹಳೆಯ ಮಹಿಳಾ ಮೀಸಲಾತಿ ಮಸೂದೆ ಮಂಡಿಸಿ; ಪ್ರಧಾನಿ ಮೋದಿಗೆ ಪ್ರಿಯಾಂಕಾ ಗಾಂಧಿ ಸವಾಲು – Kannada News | Bring Old Bill We will support you Priyanka Gandhi Challenges PM Modi over Women’s Quota Bill

ನವದೆಹಲಿ, ಏಪ್ರಿಲ್ 18: ಮಹಿಳಾ ಮೀಸಲಾತಿ ಮಸೂದೆಯು (Women’s Reservation Bill) ಲೋಕಸಭೆಯಲ್ಲಿ ಅಂಗೀಕಾರವಾಗಲು ವಿಫಲವಾದ ನಂತರ ಎನ್​ಡಿಎ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ, ಈ ಸಾಂವಿಧಾನಿಕ ತಿದ್ದುಪಡಿ ಮಸೂದೆಯು ಕೇಂದ್ರವು ಶಾಶ್ವತವಾಗಿ ಆಳಲು ಮತ್ತು ದೇಶದಲ್ಲಿ ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸಲು ನಡೆಸಿದ ಪಿತೂರಿಯಾಗಿತ್ತು ಎಂದು ಆರೋಪಿಸಿದ್ದಾರೆ.

ಸಂವಿಧಾನ (131ನೇ ತಿದ್ದುಪಡಿ) ಮಸೂದೆ, 2026ರ ಲೋಕಸಭೆಯಲ್ಲಿ ಅಂಗೀಕಾರಗೊಳ್ಳಲು ವಿಫಲವಾದ ಒಂದು ದಿನದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಕೇಂದ್ರ ಸರ್ಕಾರಕ್ಕೆ ಈ ಹಿಂದೆ ರಾಜಕೀಯ ಬೆಂಬಲವನ್ನು ಪಡೆದಿದ್ದ ಮೂಲ ಮಹಿಳಾ ಮೀಸಲಾತಿ ಮಸೂದೆಯನ್ನು ಮತ್ತೆ ಮಂಡಿಸುವಂತೆ ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಮಹಿಳಾ ಮೀಸಲಾತಿಗೆ ವಿರೋಧಿಸಿದ್ದಕ್ಕೆ ವಿಪಕ್ಷ ಬೆಲೆ ತೆರಬೇಕಾಗುತ್ತದೆ; ಪಿಎಂ ಮೋದಿ ವಾಗ್ದಾಳಿ

“ಕೇಂದ್ರ ಸರ್ಕಾರ ಎಲ್ಲಾ ಪಕ್ಷಗಳಿಂದ ಅಂಗೀಕರಿಸಲ್ಪಟ್ಟ ಹಳೆಯ ಮಹಿಳಾ ಮಸೂದೆಯನ್ನು ತಕ್ಷಣ ಜಾರಿಗೆ ತರಬೇಕು. ಸೋಮವಾರ ಸಂಸತ್ತನ್ನು ಆಯೋಜಿಸಿ,ಆ ಮಸೂದೆಯನ್ನು ಮಂಡಿಸಿ. ಆಗ ಯಾರು ಮಹಿಳಾ ವಿರೋಧಿ ಎಂಬುದು ಗೊತ್ತಾಗುತ್ತದೆ. ಮೂಲ ಮಸೂದೆಯನ್ನು ಮಂಡಿಸಿದರೆ ಖಂಡಿತ ನಾವು ಬೆಂಬಲಿಸುತ್ತೇವೆ” ಎಂದು ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ.

ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳಾ ಮೀಸಲಾತಿ ಕುರಿತು ಆಡಳಿತಾರೂಢ ಎನ್‌ಡಿಎ ಮತ್ತು ವಿರೋಧ ಪಕ್ಷ ಭಾರತ ಬಣಗಳ ನಡುವೆ ಹೆಚ್ಚಿದ ಉದ್ವಿಗ್ನತೆಯ ಮಧ್ಯೆ ಪ್ರಿಯಾಂಕಾ ಗಾಂಧಿ ಅವರ ಈ ಹೇಳಿಕೆಗಳು ಬಂದಿವೆ. ನಾವು ಮಹಿಳಾ ಮೀಸಲಾತಿಯ ವಿರೋಧಿಯಲ್ಲ, ಆದರೆ, ಕೇಂದ್ರ ಸರ್ಕಾರ ಅದನ್ನು ಜಾರಿಗೆ ತರಲು ಉದ್ದೇಶಿಸಿದ್ದ ವಿಧಾನಕ್ಕೆ ನಮ್ಮ ವಿರೋಧವಿದೆ ಎಂದಿದ್ದಾರೆ.

ಇದನ್ನೂ ಓದಿ: ಎನ್​ಡಿಎಗೆ ದೊಡ್ಡ ಸೋಲು; ಮಹಿಳಾ ಮೀಸಲಾತಿ ಮಸೂದೆಗೆ ಸಿಗದ ಬಹುಮತ

ಬಿಜೆಪಿ ನೇತೃತ್ವದ ಕೇಂದ್ರವು ಶುಕ್ರವಾರ ಲೋಕಸಭಾ ಸ್ಥಾನಗಳನ್ನು 543ರಿಂದ 850ಕ್ಕೆ ಹೆಚ್ಚಿಸುವ ಪ್ರಸ್ತಾಪವನ್ನು ಹೊಂದಿರುವ ಮಸೂದೆಗೆ ಬಹುಮತ ಪಡೆಯಲು ವಿಫಲವಾಯಿತು. 21 ಗಂಟೆಗಳ ಚರ್ಚೆಯ ನಂತರ 528 ಸಂಸದರು ಮತ ಚಲಾಯಿಸಿದರು. 298 ಸಂಸದರು ಪರವಾಗಿ ಮತ್ತು 230 ಸಂಸದರು ವಿರುದ್ಧವಾಗಿ ಮತ ಚಲಾಯಿಸಿದರು. ಆದರೆ, ಈ ಮಸೂದೆಯು ಅಗತ್ಯವಿರುವ ಮೂರನೇ ಎರಡರಷ್ಟು ಬಹುಮತವನ್ನು (352 ಮತಗಳು) ತಲುಪುವಲ್ಲಿ ವಿಫಲವಾದ ನಂತರ 54 ಮತಗಳಿಂದ ಸೋಲನ್ನು ಅನುಭವಿಸಿತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಮೂರು ವಿಧೇಯಕ ಮಿಕ್ಸ್ ಮಾಡಿದ್ದರಿಂದ ಬಿದ್ದೋಗಿದೆ: ಮಹಿಳಾ ಮೀಸಲಾತಿಗೆ ನಮ್ಮ ವಿರೋಧ ಇಲ್ಲ; ಸಿಎಂ ಸಿದ್ದರಾಮಯ್ಯ – Kannada News | We have no objection to Women Reservation Bill: says CM Siddaramaiah

ಬೆಂಗಳೂರು, ಏಪ್ರಿಲ್​ 18: ಶುಕ್ರವಾರ ಲೋಕಸಭೆಯಲ್ಲಿ ಕೇಂದ್ರ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ (Women’s Reservation Bill) ಸೋಲಾಗಿದೆ. ಸದ್ಯ ಇದೇ ವಿಚಾರ ರಾಜ್ಯದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರ ಮಧ್ಯೆ ಕಿತ್ತಾಟಕ್ಕೂ ಕಾರಣವಾಗಿದೆ. ಇದೀಗ ಈ ಬಗ್ಗೆ ಸಿಎಂ ಸಿದ್ದರಾಮಯ್ಯ(Siddaramaiah) ಮಾತನಾಡಿದ್ದು, ಮಹಿಳಾ ಮೀಸಲಾತಿಗೆ ನಮ್ಮ ವಿರೋಧ ಇಲ್ಲ. 2023ರಲ್ಲೇ ಸಂಸತ್​ನಲ್ಲಿ ಮಹಿಳಾ ಮೀಸಲಾತಿ ಬಿಲ್ ಪಾಸ್ ಆಗಿತ್ತು, ಆದರೆ ಕೇಂದ್ರ ಸರ್ಕಾರ ಇದುವರೆಗೆ ಏಕೆ ಅನುಷ್ಠಾನಕ್ಕೆ ತಂದಿಲ್ಲ ಎಂದು ಪ್ರಶ್ನಿಸಿದರು.

3 ವಿಧೇಯಕ ಮಿಕ್ಸ್ ಮಾಡಿದ್ದರಿಂದ ಲೋಕಸಭೆಯಲ್ಲಿ ಬಿದ್ದೋಗಿದೆ: ಸಿಎಂ ಸಿದ್ದರಾಮಯ್ಯ

ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ವಿಧೇಯಕಕ್ಕೆ ಸೋಲು ವಿಚಾರವಾಗಿ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮಹಿಳಾ ಮೀಸಲಾತಿ ವಿಧೇಯಕವನ್ನು ನಾವು ವಿರೋಧ ಮಾಡಿಲ್ಲ. ಈಗ ಮಹಿಳಾ ಮೀಸಲಾತಿ ವಿಧೇಯಕ, ಕ್ಷೇತ್ರ ಮರುವಿಂಗಡಣೆ ಬಿಲ್, ಕೇಂದ್ರಾಡಳಿತ ಪ್ರದೇಶಗಳ ಕಾನೂನು ತಿದ್ದುಪಡಿ ಬಿಲ್ ಮಿಕ್ಸ್ ಮಾಡಿದ್ದರು. ಮಹಿಳಾ ಮೀಸಲಾತಿ ವಿಧೇಯಕ ಒಂದೇ ಆಗಿದ್ದರೆ ಅಂಗೀಕಾರವಾಗುತ್ತಿತ್ತು ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ಮಹಿಳಾ ವಿರೋಧಿ ಎಂದ ಬಿಜೆಪಿ: ದೇಶದ ಮಹಿಳೆಯರ ಗೆಲುವು ಎಂದ ಕೈ; ನಾಯಕರ ಕೆಸರೆರಚಾಟ

3 ವಿಧೇಯಕ ಮಿಕ್ಸ್ ಮಾಡಿದ್ದರಿಂದ ಲೋಕಸಭೆಯಲ್ಲಿ ಬಿದ್ದೋಗಿದೆ. ಬಿಜೆಪಿಯವರು ರಾಜಕೀಯ ಆಟ ಆಡಿದ್ದಾರೆ. ರಾಜಕೀಯ ಮಾಡುವುದಕ್ಕಾಗಿ 3 ವಿಧೇಯಕ ಮಿಕ್ಸ್ ಮಾಡಿದ್ದರು. ನಾವು ಕ್ಷೇತ್ರ ಮರುವಿಂಗಡಣಾ ವಿಧೇಯಕಕ್ಕೆ ಮಾತ್ರ ವಿರೋಧಿಸಿದ್ದೇವೆ. ಮಹಿಳಾ ಮೀಸಲಾತಿ ವಿಧೇಯಕವನ್ನು ನಾವು ವಿರೋಧ ಮಾಡಿಲ್ಲ ಎಂದಿದ್ದಾರೆ ಸಿಎಂ ಸಿದ್ಧರಾಮಯ್ಯ.

ಕಾಂಗ್ರೆಸ್​ನವರು ಮಹಿಳಾ ಮೀಸಲಾತಿ ವಿರೋಧಿಗಳಲ್ಲ: ಬಿ.ಕೆ.ಹರಿಪ್ರಸಾದ್

ಇನ್ನು ಈ ಬಗ್ಗೆ ದೆಹಲಿಯಲ್ಲಿ ಪರಿಷತ್​ನ ಕಾಂಗ್ರೆಸ್ ಸದಸ್ಯ ಬಿ.ಕೆ.ಹರಿಪ್ರಸಾದ್ ಪ್ರತಿಕ್ರಿಯಿಸಿದ್ದು,  ವಿಧೇಯಕಕ್ಕೆ ಸೋಲಾಗಿಲ್ಲ, ಬಿಜೆಪಿಯ ಕುಟಿಲ ನೀತಿಗೆ ಸೋಲಾಗಿದೆ. ಲಕ್ಷಾಂತರ ಜನ ಕಷ್ಟಪಟ್ಟು ಸ್ವಾತಂತ್ರ್ಯ ಕೊಡಿಸಿದ ದೇಶದಲ್ಲಿ ಕುಟೀಲ ನೀತಿ ಮಾಡಿ ಅಧಿಕಾರಕ್ಕೆ ಬರಲು ಸಂಚು ರೂಪಿಸಲಾಗಿತ್ತು ಎಂದು ವಾಗ್ದಾಳಿ ಮಾಡಿದ್ದಾರೆ.

ಇದನ್ನೂ ಓದಿ: ಸಿದ್ದರಾಮಯ್ಯ ಇಲಿಗಳನ್ನು ಹೊಡೆದರೆ ಡಿಕೆಶಿ ಹುಲಿಗಳನ್ನೇ ಹುಡುಕಿ ಹುಡುಕಿ ಹೊಡೆಯುತ್ತಿದ್ದಾರೆ: ಅಶೋಕ್ ಹೀಗಂದಿದ್ಯಾಕೆ ನೋಡಿ!

ಬಿಲ್ ಬೆಂಬಲ ಸಿಗದಿರುವುದು ಪ್ರಜಾಪ್ರಭುತ್ವ, ಸಂವಿಧಾನಕ್ಕೆ ಸಿಕ್ಕ ಜಯ. ಆರ್​ಎಸ್ಎಸ್, ಬಿಜೆಪಿ ತಂತ್ರಗಳನ್ನು ಸೋಲಿಸಿದ್ದಕ್ಕೆ ಲೋಕಸಭೆ ವಿಪಕ್ಷ ನಾಯಕ ರಾಹುಲ್, ವಿಪಕ್ಷಗಳಿಗೆ ಧನ್ಯವಾದ ಹೇಳಬೇಕು. 2023ರಲ್ಲಿ ಪಾಸ್ ಆಗಿದ್ದ ವಿಧೇಯಕ ಯಾಕೆ ಅನುಷ್ಠಾನಕ್ಕೆ ತರಲಿಲ್ಲ. ಬಿಜೆಪಿಯವರು ಕೇವಲ ಮೊಸಳೆ ಕಣ್ಣೀರು ಹಾಕುವ ಕೆಲಸ ಮಾಡುತ್ತಿದ್ದಾರೆ. ಬಿಜೆಪಿಯಲ್ಲಿ ಎಷ್ಟು ಮಹಿಳೆಯರಿಗೆ ಅವಕಾಶ ಸಿಕ್ಕಿದೆ. 543 ಕ್ಷೇತ್ರಗಳಲ್ಲಿ ಮೀಸಲಾತಿ ತರಬಹುದು, ಮಾಡಲಿ ಬೆಂಬಲಿಸುತ್ತೇವೆ. ಕಾಂಗ್ರೆಸ್​ನವರು ಮಹಿಳಾ ಮೀಸಲಾತಿ ವಿರೋಧಿಗಳಲ್ಲ ಎಂದು ಹೇಳಿದ್ದಾರೆ.

ವರದಿ: ಈರಣ್ಣ ಬಸವ

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

CUK Recruitment 2026: ಕರ್ನಾಟಕ ಕೇಂದ್ರೀಯ ವಿವಿಯಲ್ಲಿ ಉದ್ಯೋಗಾವಕಾಶ; ತಿಂಗಳಿಗೆ 42,000ರೂ. ಸಂಬಳ! – Kannada News | CUK JRF Recruitment 2026: Apply for Junior Research Fellow Jobs in Kalaburagi by April 29

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯವು (CUK) ಖಾಲಿ ಇರುವ ಜೂನಿಯರ್ ರಿಸರ್ಚ್ ಫೆಲೋ (JRF) ಹುದ್ದೆಯನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕಲಬುರಗಿಯಲ್ಲಿ ಸಂಶೋಧನಾ ಕ್ಷೇತ್ರದಲ್ಲಿ ವೃತ್ತಿಜೀವನವನ್ನು ಆರಂಭಿಸಲು ಬಯಸುವ ಉದ್ಯೋಗಾಕಾಂಕ್ಷಿಗಳಿಗೆ ಇದೊಂದು ಉತ್ತಮ ಅವಕಾಶವಾಗಿದ್ದು, ಅಧಿಕೃತ ಅಧಿಸೂಚನೆಯ ಮೂಲಕ ಈ ನೇಮಕಾತಿ ಪ್ರಕ್ರಿಯೆಯನ್ನು ಕೈಗೊಳ್ಳಲಾಗಿದೆ. ಈ ಹುದ್ದೆಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ 37,000 ರೂ. ನಿಂದ 42,000 ರೂ. ವರೆಗೆ ಆಕರ್ಷಕ ವೇತನ ಶ್ರೇಣಿಯನ್ನು ನೀಡಲಾಗುತ್ತದೆ.

ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆ ಮತ್ತು ವಯೋಮಿತಿಯ ಸಡಿಲಿಕೆಯು ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಅಧಿಕೃತ ನಿಯಮಾವಳಿಗಳು ಮತ್ತು ಅಧಿಸೂಚನೆಯ ಪ್ರಕಾರ ಇರಲಿದೆ. ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಲು ಆಸಕ್ತಿ ಇರುವವರು ತಮ್ಮ ಶೈಕ್ಷಣಿಕ ದಾಖಲೆಗಳು ವಿಶ್ವವಿದ್ಯಾಲಯದ ಮಾನದಂಡಗಳಿಗೆ ಅನುಗುಣವಾಗಿರುವುದನ್ನು ಖಚಿತಪಡಿಸಿಕೊಳ್ಳಬೇಕು. ಸರ್ಕಾರಿ ಸಂಸ್ಥೆಯಲ್ಲಿ ಸಂಶೋಧನಾ ಜವಾಬ್ದಾರಿಯನ್ನು ನಿರ್ವಹಿಸಲು ಇಚ್ಛಿಸುವವರಿಗೆ ಇದು ಸೂಕ್ತ ವೇದಿಕೆಯಾಗಿದೆ.

ಇದನ್ನೂ ಓದಿ: ಕೆಲಸಕ್ಕೆ ಸೇರಿದ ಮೊದಲ ದಿನವೇ ವೈದ್ಯೆ ರಾಜೀನಾಮೆ; ವೈದ್ಯಕೀಯ ಲೋಕದ ಕರಾಳ ಮುಖ ಅನಾವರಣ!

ಈ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವವರು ಆನ್‌ಲೈನ್ ವಿಧಾನವನ್ನು ಅನುಸರಿಸಬೇಕು. ಅಭ್ಯರ್ಥಿಗಳು ತಮ್ಮ ಸಂಪೂರ್ಣ ವಿವರಗಳನ್ನೊಳಗೊಂಡ ಅರ್ಜಿಯನ್ನು ಅಗತ್ಯವಿರುವ ಎಲ್ಲಾ ಪೂರಕ ದಾಖಲೆಗಳೊಂದಿಗೆ duraippandi@cuk.ac.in ಎಂಬ ಇ-ಮೇಲ್ ವಿಳಾಸಕ್ಕೆ ಕಳುಹಿಸಿಕೊಡಬೇಕು. ಅರ್ಜಿ ಸಲ್ಲಿಸಲು ಏಪ್ರಿಲ್ 29 ಕೊನೆಯ ದಿನಾಂಕವಾಗಿದ್ದು, ನಿಗದಿತ ಸಮಯದ ನಂತರ ಬರುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಹೆಚ್ಚಿನ ವಿವರಗಳಿಗಾಗಿ ವಿಶ್ವವಿದ್ಯಾಲಯದ ಅಧಿಕೃತ ವೆಬ್‌ಸೈಟ್ ಸಂಪರ್ಕಿಸಬಹುದು.

ಉದ್ಯೋಗಕ್ಕೆ ಸಂಬಂಧಿಸಿದ ಮತ್ತಷ್ಟು  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 3:04 pm, Sat, 18 April 26

Source link

ಬೇಸಿಗೆಯ ಉರಿ ಬಿಸಿಲಿನಲ್ಲೂ ದೇಹವನ್ನು ತಂಪಾಗಿರಿಸಲು ಈ ಸುಲಭ ಸಲಹೆಗಳನ್ನು ಪ್ರಯತ್ನಿಸಿ – Kannada News | How to keep your body cool in this hot weather? Here’s a tip

ಬೇಸಿಗೆಯ (summer) ಉರಿ ಬಿಸಿಲು ಮತ್ತು ವಿಪರೀತ ಸೆಕೆ ದಿನದಿಂದ ದಿನಕ್ಕೆ ಜಾಸ್ತಿ ಆಗುತ್ತಾ ಹೋಗುತ್ತಿದ್ದು, ಬಿಸಿಲು ಹಾಗೂ ಸೆಕೆಯ ಹೊಡೆತಕ್ಕೆ ಜನ ಹೈರಾಣಾಗಿದ್ದಾರೆ. ಬೇಸಿಗೆಯಲ್ಲಿನ ಈ ತೀವ್ರವಾದ ಶಾಖ ಮತ್ತು ಬಿಸಿಲು ದೇಹದ ಮೇಲೆ ಗಂಭೀರ ಪರಿಣಾಮಗಳನ್ನು ಬೀರುವ ಕಾರಣ ನಿರ್ಜಲೀಕರಣ, ಶಾಖದ ಹೊಡೆತದಂತಹ ಸಮಸ್ಯೆಗಳನ್ನು ತಪ್ಪಿಸಲು ಸರಿಯಾದ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವುದು ಬಹಳ ಮುಖ್ಯ. ದೇಹವನ್ನು ಸರಿಯಾಗಿ ತಂಪಾಗಿಸುವುದರಿಂದ ನಿರ್ಜಲೀಕರಣ, ಶಾಖದ ಹೊಡೆತದಂತಹ ಪರಿಣಾಮಗಳನ್ನು ಗಮನಾರ್ಹವಾಗಿ ಕಡಿಮೆ ಮಾಡಬಹುದು. ಸರಿಯಾದ ಆಹಾರ, ಜಲಸಂಚಯನ ಮತ್ತು ಜೀವನಶೈಲಿಯ ಬದಲಾವಣೆಗಳು ನಿಮ್ಮನ್ನು ಶಾಖದ ಹೊಡೆತದಿಂದ ರಕ್ಷಿಸಲು ಹಾಗೂ ದೇಹವನ್ನು ತಂಪಾಗಿರಿಸಲು ಸಹಾಯ ಮಾಡುತ್ತದೆ. ಹಾಗಿದ್ದರೆ ದೇಹವನ್ನು ತಂಪಾಗಿರಿಸಲು ಏನೆಲ್ಲಾ ಕ್ರಮಗಳನ್ನು ಪಾಲಿಸಬೇಕು ಎಂಬುದನ್ನು ನೋಡೋಣ ಬನ್ನಿ.

ಸುಡುವ ಬಿಸಿಲಿನಲ್ಲಿ ದೇಹವನ್ನು ತಂಪಾಗಿರಿಸುವುದ ಹೇಗೆ?

ಜಲಸಂಚಯನ ಅತ್ಯಗತ್ಯ:  ದೇಹವನ್ನು ತಂಪಾಗಿರಿಲಸು ನೀವು ಪಾಲಿಸಬೇಕಾದ ಅತ್ಯಂತ ಮುಖ್ಯವಾದ ವಿಷಯವೆಂದರೆ ಸಾಕಷ್ಟು ನೀರು ಕುಡಿಯುವುದು. ದಿನವಿಡೀ ಸಾಕಷ್ಟು ನೀರು, ನಿಂಬೆ ನೀರು, ಮಜ್ಜಿಗೆ, ಎಳನೀರು ಅಥವಾ ORS ಕುಡಿಯಿರಿ. ನಿರ್ಜಲೀಕರಣವನ್ನು ತಪ್ಪಿಸಿ, ಏಕೆಂದರೆ ನಿರ್ಜಲೀಕರಣವು ಶಾಖದ ಹೊಡೆತಕ್ಕೆ ಪ್ರಮುಖ ಕಾರಣವಾಗುತ್ತದೆ. ಆದ್ದರಿಂದ ಸಾಕಷ್ಟು ಪ್ರಮಾಣದಲ್ಲಿ ನೀರನ್ನು ಕುಡಿಯಿರಿ.

ಹಗುರವಾದ ಬಟ್ಟೆಗಳನ್ನು ಧರಿಸಿ: ಬೇಸಿಗೆಯಲ್ಲಿ ನಿಮ್ಮ ಬಟ್ಟೆಗಳ ಬಗ್ಗೆ ಜಾಗರೂಕರಾಗಿರಿ. ದೇಹವನ್ನು ತಂಪಾಗಿಡುವ ತಿಳಿ ಬಣ್ಣದ, ಹತ್ತಿ ಮತ್ತು ಉಸಿರಾಡುವ ಬಟ್ಟೆಗಳನ್ನು ಧರಿಸಿ. ಗಾಢವಾದ ಅಥವಾ ಬಿಗಿಯಾದ ಬಟ್ಟೆಗಳು ಶಾಖವನ್ನು ಹೆಚ್ಚು ಹೀರಿಕೊಳ್ಳುತ್ತವೆ, ಆದ್ದರಿಂದ ಅವುಗಳನ್ನು ತಪ್ಪಿಸಿ. ಹತ್ತಿ, ಮಸ್ಲಿನ್, ಲಿನಿನ್ ಮುಂತಾದ ಉಸಿರಾಡುವ ಬಟ್ಟೆಗಳನ್ನು ಧರಿಸಿ. ಸಡಿಲವಾದ ಬಟ್ಟೆಗಳನ್ನು ಧರಿಸುವುದು ಗಾಳಿಯ ಹರಿವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ. ಅಲ್ಲದೆ ಹಗುರವಾದ ಬಟ್ಟೆಗಳನ್ನು ಧರಿಸುವುದರಿಂದ ಯಾವುದೇ ಕಿರಿಕಿರಿಯಿಲ್ಲದೆ ನೀವು ಆರಾಮದಾಯಕವಾಗಿರಬಹುದು.

ಕಾಲೋಚಿತ ಹಣ್ಣುಗಳ ಸೇವನೆ: ನಿಮ್ಮ ದೇಹವನ್ನು ತಂಪಾಗಿಟ್ಟುಕೊಳ್ಳಲು ಬಯಸಿದರೆ, ನೀವು ಋತುಮಾನದ ಹಣ್ಣುಗಳನ್ನು ಸಹ ತಿನ್ನಬಹುದು. ಅವು ಶಾಖವನ್ನು ನಿವಾರಿಸಲು ನಿಮಗೆ ಸಹಾಯ ಮಾಡುತ್ತವೆ. ಅಲ್ಲದೆ ಈ ಹಣ್ಣುಗಳು ದೇಹವನ್ನು ತಂಪಾಗಿರಿಸಲು ಸಹ ಸಹಾಯ ಮಾಡುತ್ತದೆ.

ತಣ್ಣೀರಿನ ಸ್ನಾನ ಮಾಡುವುದು: ನಿಮ್ಮ ದೇಹವನ್ನು ತಂಪಾಗಿಟ್ಟುಕೊಳ್ಳಲು ಬಯಸಿದರೆ, ನೀವು ತಣ್ಣೀರಿನ ಸ್ನಾನ ಮಾಡಬಹುದು. ಇದು ನಿಮ್ಮ ದೇಹದ ಉಷ್ಣತೆಯನ್ನು ಕಡಿಮೆ ಮಾಡುತ್ತದೆ ಮತ್ತು ನಿಮ್ಮನ್ನು ರಿಫ್ರೆಶ್ ಮಾಡುತ್ತದೆ. ನೀವು ಬೆಳಿಗ್ಗೆ ಮತ್ತು ಸಂಜೆ ಸ್ನಾನ ಮಾಡಬಹುದು.

ಮಣ್ಣಿನ ಮಡಕೆ  ನೀರು ಕುಡಿಯಿರಿ: ಸುಡು ಬೇಸಿಗೆಯಲ್ಲಿ ದೇಹವನ್ನು ತಂಪಾಗಿರಿಸಲು, ಆರೋಗ್ಯವಾಗಿರಲು ಬಯಸಿದರೆ ಮಣ್ಣಿನ ಮಡಕೆ ನೀರನ್ನು ಕುಡಿಯಿರಿ.  ಇದು ಅನೇಕ ರೋಗಗಳನ್ನು ತಡೆಯಲು ಸಹಾಯ ಮಾಡುತ್ತದೆ ಮತ್ತು ನಿಮ್ಮ ದೇಹವನ್ನು ತಾಜಾ ಮತ್ತು ತಂಪಾಗಿಡುತ್ತದೆ.

ಇದನ್ನೂ ಓದಿ: ಬಿಸಿಲ ಶಾಖದಿಂದ ನಿಮ್ಮನ್ನು ನೀವು ರಕ್ಷಿಸಿಕೊಳ್ಳಲು ಅಗತ್ಯ ಸಲಹೆಗಳನ್ನು ಪಾಲಿಸಿ

ಆಹಾರ ಪದ್ಧತಿ ಮತ್ತು ಜೀವನಶೈಲಿಯ ಬದಲಾವಣೆಗಳು: ಬೇಸಿಗೆಯಲ್ಲಿ ಮಸಾಲೆಯುಕ್ತ ಹುರಿದ ಆಹಾರಗಳು, ಆಲ್ಕೋಹಾಲ್, ಕೆಫೀನ್ ಮತ್ತು ಹುಳಿ ಆಹಾರಗಳಂತಹ ಆಹಾರಗಳ ಸೇವನೆಯನ್ನು ಮಿತಿಗೊಳಿಸಿ. ಹೆಚ್ಚುವರಿಯಾಗಿ, ಸಂಜೆ 20-30 ನಿಮಿಷಗಳ ಲಘು ವಾಕಿಂಗ್ ಮಾಡಿ. ಇದು ರಕ್ತ ಪರಿಚಲನೆ ಸುಧಾರಿಸುತ್ತದೆ, ಒತ್ತಡವನ್ನು ಕಡಿಮೆ ಮಾಡುತ್ತದೆ ಮತ್ತು ದೇಹದ ಉಷ್ಣತೆಯನ್ನು ಸಮತೋಲನದಲ್ಲಿಡಲು  ಸಹಾಯ ಮಾಡುತ್ತದೆ.

ಸಣ್ಣ ದೈನಂದಿನ ಕ್ರಮಗಳು: ಬೇಸಿಗೆಯ ಶಾಖದಲ್ಲಿ ದೇಹವನ್ನು ತಂಪಾಗಿಡಲು ಮತ್ತು ಒತ್ತಡ ಮುಕ್ತವಾಗಿರಲು  ಸ್ವಲ್ಪ ಧ್ಯಾನ ಮಾಡಿ ಆರೋಗ್ಯಕರ ಆಹಾರ ಪದ್ಧತಿ ಅನುಸರಿಸಿ.  ಪ್ರತಿದಿನ 5-10 ನಿಮಿಷಗಳ ಪ್ರಾಣಾಯಾಮವು ಸುಡು ಬೇಸಿಗೆಯಲ್ಲೂ ಸಹ ನೀವು ಉಲ್ಲಾಸದಿಂದಿರಲು ಸಹಾಯ ಮಾಡುತ್ತದೆ. ಹೀಗೆ ಈ ಸರಳ ಸಲಹೆಗಳನ್ನು ಅನುಸರಿಸುವ ಮೂಲಕ, ನೀವು ಈ ಸುಡು ಬೇಸಿಗೆಯ ಸಮಯದಲ್ಲಿಯೂ ದೇಹವನ್ನು ತಂಪಾಗಿರಿಸಿಕೊಳ್ಳಬಹುದು.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಅಮೆರಿಕದಿಂದಾಗಿ ಮತ್ತೆ ಹಾರ್ಮುಜ್ ಜಲಸಂಧಿ ಮುಚ್ಚಿದ ಇರಾನ್ – Kannada News | Iran shuts Strait of Hormuz again accuses US of violating ceasefire

ಟೆಹ್ರಾನ್, ಏಪ್ರಿಲ್ 18: ಇರಾನ್ ಹಾರ್ಮುಜ್ ಜಲಸಂಧಿಯ (Strait of Hormuz) ಮೇಲೆ ಮತ್ತೆ ನಿರ್ಬಂಧಗಳನ್ನು ಹೇರಿದೆ. ನಿರ್ಣಾಯಕ ಜಲಮಾರ್ಗವನ್ನು ಮತ್ತೆ ತೆರೆಯುವ ತನ್ನ ನಿರ್ಧಾರವನ್ನು ಇರಾನ್ ಹಿಂತೆಗೆದುಕೊಂಡಿದೆ. ಅಮೆರಿಕ ಕದನ ವಿರಾಮವನ್ನು ಉಲ್ಲಂಘಿಸಿರುವ ಕಾರಣದಿಂದ ಹಾರ್ಮುಜ್ ಜಲಸಂಧಿಯನ್ನು ಮತ್ತೆ ಮುಚ್ಚಲಾಗುತ್ತಿದೆ ಎಂದು ಇರಾನ್ ಆರೋಪಿಸಿದೆ.

ಇರಾನ್ ಸಂಬಂಧಿತ ಹಡಗು ಸಾಗಣೆಯ ಮೇಲಿನ ದಿಗ್ಬಂಧನವನ್ನು ಕೊನೆಗೊಳಿಸುವುದಿಲ್ಲ ಎಂದು ಅಮೆರಿಕ ಹೇಳಿದ ನಂತರ ಇರಾನ್ ಮತ್ತೆ ಹಾರ್ಮುಜ್ ಜಲಸಂಧಿಯ ಮೇಲೆ ನಿರ್ಬಂಧ ಹೇರಿದೆ. ಇರಾನ್ ಬಂದರುಗಳ ಮೇಲಿನ ಅಮೆರಿಕದ ದಿಗ್ಬಂಧನ ಜಾರಿಯಲ್ಲಿರುವವರೆಗೆ ಹಾರ್ಮುಜ್ ಜಲಸಂಧಿಯ ಮೂಲಕ ಹಡಗುಗಳ ಸಾಗಾಟವನ್ನು ನಿರ್ಬಂಧಿಸುವುದಾಗಿ ಇರಾನ್ ಎಚ್ಚರಿಸಿದೆ.

ಇದನ್ನೂ ಓದಿ: ಎಲ್ಲ ದೇಶಗಳ ಕಮರ್ಷಿಯಲ್ ಹಡಗಿಗೂ ಹಾರ್ಮುಜ್ ಜಲಸಂಧಿ ತೆರೆದಿದೆ; ಇರಾನ್ ಮಹತ್ವದ ಘೋಷಣೆ

ಇಸ್ರೇಲ್ ಮತ್ತು ಇರಾನ್ ಬೆಂಬಲಿತ ಹೆಜ್ಬೊಲ್ಲಾ ಉಗ್ರಗಾಮಿ ಗುಂಪಿನ ನಡುವೆ ಲೆಬನಾನ್‌ನಲ್ಲಿ 10 ದಿನಗಳ ಕದನ ವಿರಾಮದ ನಂತರ ಹಾರ್ಮುಜ್ ಜಲಸಂಧಿಯನ್ನು ವಾಣಿಜ್ಯ ಹಡಗುಗಳಿಗೆ ಸಂಪೂರ್ಣವಾಗಿ ತೆರೆಯಲಾಗಿದೆ ಎಂದು ಇರಾನ್ ನಿನ್ನೆ ಹೇಳಿತ್ತು. ಆದರೂ ಇರಾನ್​ನ ಹಡಗುಗಳ ಮೇಲಿನ ದಿಗ್ಬಂಧನ ಮುಂದುವರಿಯುತ್ತದೆ ಎಂದು ಟ್ರಂಪ್ ಪುನರುಚ್ಚರಿಸಿದ ನಂತರ ಇರಾನ್ ಅಧಿಕಾರಿಗಳು ಈ ಕ್ರಮವು ಕಳೆದ ವಾರದ ಕದನ ವಿರಾಮ ಒಪ್ಪಂದವನ್ನು ಉಲ್ಲಂಘಿಸಿದೆ ಎಂದು ಆರೋಪಿಸಿದ್ದಾರೆ. ಹೀಗಾಗಿ ಹಾರ್ಮುಜ್ ಜಲಸಂಧಿಯನ್ನು ತೆರೆಯುವುದಿಲ್ಲ ಎಂದು ಎಚ್ಚರಿಸಿದ್ದಾರೆ.

ಇದನ್ನೂ ಓದಿ: ಪ್ರಧಾನಿ ಮೋದಿಗೆ ಫ್ರಾನ್ಸ್ ಅಧ್ಯಕ್ಷ ಮ್ಯಾಕ್ರನ್ ಫೋನ್; ಮಧ್ಯ ಏಷ್ಯಾ, ಹಾರ್ಮುಜ್ ಜಲಸಂಧಿ ಬಗ್ಗೆ ಚರ್ಚೆ

ಹಾರ್ಮುಜ್ ಜಲಸಂಧಿಯು ವಿಶ್ವದ ಪ್ರಮುಖ ವ್ಯಾಪಾರ ಮಾರ್ಗಗಳಲ್ಲಿ ಒಂದಾಗಿದೆ. ವಿಶೇಷವಾಗಿ ತೈಲ ಸಾಗಣೆಗೆ ಈ ಜಲಮಾರ್ಗ ಅತ್ಯಂತ ಮುಖ್ಯವಾಗಿದೆ. ಇಲ್ಲಿನ ನಿರ್ಬಂಧ ಜಾಗತಿಕ ಮಾರುಕಟ್ಟೆಗಳು ಮತ್ತು ಇಂಧನ ಬೆಲೆಗಳ ಮೇಲೆ ಮತ್ತೆ ಪರಿಣಾಮ ಬೀರಬಹುದು.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On – 3:54 pm, Sat, 18 April 26

Source link

ಮಹಿಳಾ ಮೀಸಲಾತಿಗೆ ವಿರೋಧಿಸಿದ್ದಕ್ಕೆ ವಿಪಕ್ಷ ಬೆಲೆ ತೆರಬೇಕಾಗುತ್ತದೆ; ಪಿಎಂ ಮೋದಿ ವಾಗ್ದಾಳಿ – Kannada News | They Will face consequences; PM Modi Slams Opposition For Not Supporting womens reservation bill

ನವದೆಹಲಿ, ಏಪ್ರಿಲ್ 18: ಮಹಿಳಾ ಮೀಸಲಾತಿಗೆ (Women’s Reservation Bill) ಸಂಬಂಧಿಸಿದ ಸಂವಿಧಾನ (131ನೇ ತಿದ್ದುಪಡಿ) ಮಸೂದೆ ಲೋಕಸಭೆಯಲ್ಲಿ ಅಂಗೀಕಾರಗೊಳ್ಳಲು ವಿಫಲವಾದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರೋಧ ಪಕ್ಷದವರನ್ನು ಟೀಕಿಸಿದ್ದಾರೆ. ಇಂದು ನಡೆದ ಸಂಪುಟ ಸಭೆಯಲ್ಲಿ ಪ್ರಧಾನಿ ವಿರೋಧ ಪಕ್ಷದ ನಿಲುವಿನ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದು, ಈ ತಪ್ಪಿಗೆ ವಿಪಕ್ಷಗಳು ಸರಿಯಾದ ಬೆಲೆ ತೆರಬೇಕಾಗುತ್ತದೆ ಎಂದಿದ್ದಾರೆ.

ವಿರೋಧ ಪಕ್ಷದ ಉದ್ದೇಶವನ್ನು ಬಹಿರಂಗಪಡಿಸಲು ಎನ್​ಡಿಎ ಸರ್ಕಾರವು ಪ್ರತಿಯೊಂದು ಹಳ್ಳಿ ಮತ್ತು ಪ್ರತಿಯೊಬ್ಬ ನಾಗರಿಕರಿಗೂ ಈ ವಿಷಯವನ್ನು ತಲುಪಿಸಲಿದೆ. ವಿಪಕ್ಷಗಳು ತಮ್ಮ ನಿಲುವನ್ನು ಸಮರ್ಥಿಸಿಕೊಳ್ಳಲು ಪ್ರಯತ್ನಿಸುತ್ತಿವೆ. ಅವರು ಈ ಮೂಲಕ ಎನ್​ಡಿಎ ಸರ್ಕಾರವನ್ನು ಸೋಲಿಸಿಲ್ಲ, ದೇಶದ ಮಹಿಳೆಯರನ್ನು ಸೋಲಿಸಿದ್ದಾರೆ ಎಂದು ಮೋದಿ ಟೀಕಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಎನ್​ಡಿಎಗೆ ದೊಡ್ಡ ಸೋಲು; ಮಹಿಳಾ ಮೀಸಲಾತಿ ಮಸೂದೆಗೆ ಸಿಗದ ಬಹುಮತ

“ವಿರೋಧ ಪಕ್ಷಗಳು ದೇಶದ ಮಹಿಳೆಯರನ್ನು ನಿರಾಸೆಗೊಳಿಸಿದ್ದಾರೆ. ಈ ಸಂದೇಶವನ್ನು ಪ್ರತಿಯೊಬ್ಬ ವ್ಯಕ್ತಿಗೂ, ಪ್ರತಿಯೊಂದು ಹಳ್ಳಿಗೂ ತಲುಪಿಸಬೇಕು. 2029 ರಿಂದ ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಮೀಸಲಾತಿ ನೀಡುವ ಮಸೂದೆಯನ್ನು ವಿರೋಧಿಸುವ ಮೂಲಕ ವಿರೋಧ ಪಕ್ಷವು ದೊಡ್ಡ ತಪ್ಪು ಮಾಡಿದೆ. ದೇಶದ ಮಹಿಳೆಯರು ಅವರನ್ನು ಕ್ಷಮಿಸುವುದಿಲ್ಲ. ಇದರ ಪರಿಣಾಮಗಳನ್ನು ವಿಪಕ್ಷಗಳು ಎದುರಿಸಬೇಕಾಗುತ್ತದೆ” ಎಂದು ಮೋದಿ ಹೇಳಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಮಹಿಳಾ ಮೀಸಲಾತಿ ಮಸೂದೆಗೆ ಬಹುಮತ ಸಿಗದಿದ್ದಕ್ಕೆ ಸಂಸತ್ ಆವರಣದಲ್ಲಿ ಎನ್​ಡಿಎ ನಾಯಕರ ಪ್ರತಿಭಟನೆ

ಮಹಿಳಾ ಮೀಸಲಾತಿ ಮಸೂದೆಯನ್ನು 54 ಮತಗಳ ಅಂತರದಿಂದ ಸೋಲಿಸಲಾಯಿತು. ಮಸೂದೆಗೆ ಅಗತ್ಯವಿರುವ ಮೂರನೇ ಎರಡರಷ್ಟು ಬಹುಮತವನ್ನು ಪಡೆಯಲು ಸರ್ಕಾರ ವಿಫಲವಾದ ಒಂದು ದಿನದ ನಂತರ ಪ್ರಧಾನಿಯವರ ಹೇಳಿಕೆಗಳು ಬಂದಿವೆ. ಲೋಕಸಭೆಯಲ್ಲಿ 21 ಗಂಟೆಗಳ ಚರ್ಚೆಯ ನಂತರ 528 ಸಂಸದರು ಮತ ಚಲಾಯಿಸಿದರು. ಈ ಮಸೂದೆಯ ಪರವಾಗಿ 298 ಮತ್ತು ವಿರುದ್ಧ 230 ಮತಗಳನ್ನು ಚಲಾಯಿಸಲಾಯಿತು. ಆದರೆ, ಬಹುಮತಕ್ಕೆ ಅಗತ್ಯವಿರುವ 352 ಮತಗಳಿಗಿಂತ ಕಡಿಮೆ ಮತಗಳು ಚಲಾವಣೆಯಾದ್ದರಿಂದ ಮಸೂದೆ ಸಂಸತ್​​ನಲ್ಲಿ ಅಂಗೀಕಾರವಾಗಲಿಲ್ಲ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 3:06 pm, Sat, 18 April 26

Source link

ಹಾವೇರಿ: ಎಲ್​ಪಿಜಿ ಸಿಗದೆ ಆಟೋಗೆ ಹಗ್ಗ ಕಟ್ಟಿ 10 ಕಿ.ಮೀ ಕಾರು ಎಳೆತಂದ ಮಾಲೀಕ – Kannada News | Haveri: Owner ties rope to auto and drags car 10 km after not getting LPG

ಹಾವೇರಿ, ಏಪ್ರಿಲ್​ 18: ಇರಾನ್-ಇಸ್ರೇಲ್ ಯುದ್ಧದ ಪರಿಣಾಮ ಹಾವೇರಿಯ ಜನಸಾಮಾನ್ಯರ ಬದುಕಿನ ಮೇಲೆ ಗಂಭೀರ ಪರಿಣಾಮ ಬೀರಿದೆ. ಎಲ್‌ಪಿಜಿ ಸಿಲಿಂಡರ್ ಸಿಗದೆ ಹೈರಾಣಾದ ವ್ಯಾಪಾರಿಯೊಬ್ಬರು ಅನಿಲ ತುಂಬಿಸಲು ಸುಮಾರು 10 ಕಿಲೋ ಮೀಟರ್ ದೂರದವರೆಗೆ ಆಟೋಗೆ ಹಗ್ಗ ಕಟ್ಟಿ ಓಮಿನಿ ಕಾರನ್ನು ಎಳೆದುಕೊಂಡು ಬಂದ ಘಟನೆ ಹಾವೇರಿ-ಹಾನಗಲ್ ರಸ್ತೆಯಲ್ಲಿ ಕಂಡುಬಂದಿದೆ. ಗುಡಿ ಕೈಗಾರಿಕೆಯಲ್ಲಿ ಹೋಟೆಲ್ ಮತ್ತು ರೆಸ್ಟೋರೆಂಟ್‌ಗಳಿಗೆ ರೊಟ್ಟಿ ಪೂರೈಕೆ ಮಾಡುವ ವ್ಯಾಪಾರಿಯೊಬ್ಬರು ತಮ್ಮ ಜೀವನೋಪಾಯಕ್ಕಾಗಿ ಎಲ್‌ಪಿಜಿ ಅವಲಂಬಿಸಿದ್ದಾರೆ. ಆದರೆ, ಕಳೆದ ಕೆಲವು ದಿನಗಳಿಂದ ಗ್ಯಾಸ್ ಕೊರತೆ ಎದುರಾಗಿದ್ದು, ಬಂಕ್‌ಗಳು ಬಂದ್ ಆಗಿವೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

ಹನುಮನ ಭಕ್ತನ ಅದ್ಭುತ ಸಾಹಸ: 105 ಕೆಜಿ ಹೊತ್ತು ದೀಡ್ ನಮಸ್ಕಾರ ಹಾಕಿದ 19ರ ಯುವಕ! – Kannada News | 19 Yr Old Balraj Kuri’s Incredible Feat: 105kg Jowar Sack Deed Namaskara in Bagalkote

ಬಾಗಲಕೋಟೆ, ಏ.18: ಭಕ್ತಿ ಮತ್ತು ಸಂಕಲ್ಪ ಸೇರಿದರೆ ಅಸಾಧ್ಯವಾದುದು ಯಾವುದೂ ಇಲ್ಲ ಎಂಬುದನ್ನು ಬಾಗಲಕೋಟೆಯ 19 ವರ್ಷದ ಯುವಕನೊಬ್ಬ ಸಾಬೀತುಪಡಿಸಿದ್ದಾನೆ. ಗ್ರಾಮದ ಒಳಿತಿಗಾಗಿ ತನಗಿಂತ ಎರಡೂವರೆ ಪಟ್ಟು ಹೆಚ್ಚು ತೂಕದ ಜೋಳದ ಚೀಲವನ್ನು ಬೆನ್ನ ಮೇಲೆ ಹೊತ್ತು ‘ದೀಡ್ ನಮಸ್ಕಾರ’ ಹಾಕುವ ಮೂಲಕ ಯುವಕ ಅಚ್ಚರಿ ಮೂಡಿಸಿದ್ದಾನೆ. ಇಳಕಲ್ ತಾಲೂಕಿನ ಗೋನಾಳ ಎಸ್‌ಟಿ ಗ್ರಾಮದ ನಿವಾಸಿ ಬಾಲರಾಜ ಹನಮಂತ ಕುರಿ (19) ಈ ಸಾಹಸಗೈದ ಯುವಕ. ಈ ಯುವಕನ ತೂಕ ಕೇವಲ 47 ಕೆಜಿ. ಆದರೆ ಈತ ಬೆನ್ನ ಮೇಲೆ ಹೊತ್ತುಕೊಂಡಿದ್ದ ಜೋಳದ ಚೀಲದ ತೂಕ ಬರೋಬ್ಬರಿ 105 ಕೆಜಿ! ಗ್ರಾಮದ ಶ್ರೀ ಮಾರುತೇಶ್ವರ ಹಾಗೂ ಬಸವೇಶ್ವರ ದೇವರ ಜಾತ್ರಾ ಮಹೋತ್ಸವದ ಅಂಗವಾಗಿ ಈ ಸಾಹಸ ಪ್ರದರ್ಶನ ನಡೆಯಿತು. ಹನುಮಂತನ ಪರಮ ಭಕ್ತನಾಗಿರುವ ಬಾಲರಾಜ, ನಾಡಿನ ಒಳಿತಿಗಾಗಿ ಈ ಕಠಿಣ ಸಂಕಲ್ಪ ಹೊತ್ತಿದ್ದನು. ಬಾಲರಾಜನ ಈ ಅಪ್ರತಿಮ ಭಕ್ತಿ ಮತ್ತು ಶಕ್ತಿಯ ಪ್ರದರ್ಶನ ಕಂಡು ಜಾತ್ರೆಯಲ್ಲಿ ನೆರೆದಿದ್ದ ಸಾವಿರಾರು ಭಕ್ತರು ಸಿಳ್ಳೆ, ಚಪ್ಪಾಳೆ ತಟ್ಟುವ ಮೂಲಕ ಪ್ರೋತ್ಸಾಹಿಸಿದರು. ಸಾಹಸ ಪೂರ್ಣಗೊಳ್ಳುತ್ತಿದ್ದಂತೆ ಗ್ರಾಮಸ್ಥರು ಆತನಿಗೆ ಆರತಿ ಬೆಳಗಿ, ಹಾರ ಹಾಕಿ ಗೌರವಿಸಿದರು. ಅಷ್ಟೇ ಅಲ್ಲದೆ, ಬಾಲರಾಜನನ್ನು ಹೆಗಲ ಮೇಲೆ ಹೊತ್ತು ಊರ ತುಂಬ ಮೆರವಣಿಗೆ ಮಾಡಿ ಸಂಭ್ರಮಿಸಿದರು.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬೇಸಿಗೆಯಲ್ಲಿ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳು ಹೆಚ್ಚಾಗುವುದಕ್ಕೆ ಕಾರಣವೇನು? ಹೇಗೆ ತಡೆಗಟ್ಟುವುದು? – Kannada News | Summer Stomach Issues: Causes and Prevention Tips

ಬೇಸಿಗೆ (Summer) ಕಾಲ ಬಂದಾಗ ಹಲವರಿಗೆ ಹೊಟ್ಟೆಗೆ ಸಂಬಂಧಿತ ಸಮಸ್ಯೆಗಳು (Stomach Issues) ಹೆಚ್ಚಾಗುತ್ತವೆ. ಹೊಟ್ಟೆನೋವು, ಗ್ಯಾಸು, ಉಬ್ಬರ, ಅತಿಸಾರ (ಡೈರಿಯಾ), ವಾಂತಿ ಮತ್ತು ಅಜೀರ್ಣದಂತಹ ಲಕ್ಷಣಗಳು ಕಂಡುಬರುವುದು ಬಹಳ ಸಾಮಾನ್ಯವಾಗಿದೆ. ಅದರಲ್ಲಿಯೂ ಮಕ್ಕಳು, ವೃದ್ಧರು ಮತ್ತು ಈಗಾಗಲೇ ಜೀರ್ಣಕಾರಿ ಸಮಸ್ಯೆಗಳನ್ನು ಹೊಂದಿರುವವರು ಹೆಚ್ಚು ಬಾಧಿತರಾಗುತ್ತಾರೆ. ಅಷ್ಟು ಮಾತ್ರವಲ್ಲ, ಹೊರಗಡೆ ಊಟ ಮಾಡುವವರು ಮತ್ತು ನೀರು ಕಡಿಮೆ ಕುಡಿಯುವವರಲ್ಲಿ ಈ ಸಮಸ್ಯೆಗಳು ಹೆಚ್ಚಾಗಿ ಕಂಡುಬರುತ್ತದೆ. ಹಾಗಾದರೆ ಬೇಸಿಗೆಯ ಸಮಯದಲ್ಲಿ ಈ ರೀತಿಯ ಸಮಸ್ಯೆಗಳು ಕಂಡುಬರುವುದಕ್ಕೆ ಕಾರಣವೇನು, ಇದನ್ನು ತಡೆಗಟ್ಟಲು ಏನು ಮಾಡಬಹುದು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಮುಖ್ಯ ಕಾರಣಗಳು ಯಾವುವು?

ಬೇಸಿಗೆಯಲ್ಲಿ ತಾಪಮಾನ ಹೆಚ್ಚಿರುವುದರಿಂದ ದೇಹದಲ್ಲಿ ಬೇಗನೆ ನೀರಿನ ಅಂಶ ಕಡಿಮೆಯಾಗುತ್ತದೆ. ಇದರಿಂದ ಜೀರ್ಣಕ್ರಿಯೆ ಮೇಲೆ ದುಷ್ಪರಿಣಾಮ ಬೀರುತ್ತದೆ. ಆಹಾರ ಪದಾರ್ಥಗಳಲ್ಲಿ ಬ್ಯಾಕ್ಟೀರಿಯಾಗಳು ವೇಗವಾಗಿ ವೃದ್ಧಿಯಾಗುವುದರಿಂದ ಫುಡ್ ಪೊಯ್ಸನಿಂಗ್ ಮತ್ತು ಇನ್ಫೆಕ್ಷನ್ ಅಪಾಯ ಹೆಚ್ಚುತ್ತದೆ. ಹಳೆಯ ಅಥವಾ ಬಿಸಿ ಹವಾಮಾನದಲ್ಲಿ ಸರಿಯಾಗಿ ಸಂರಕ್ಷಿಸದ ಆಹಾರ ಸೇವನೆ ಹೊಟ್ಟೆ ಸಮಸ್ಯೆಗಳಿಗೆ ಕಾರಣವಾಗುತ್ತದೆ. ಇದರ ಜೊತೆಗೆ, ಹೆಚ್ಚು ಬೆವರುವವರ ದೇಹದಲ್ಲಿ ಎಲೆಕ್ಟ್ರೋಲೈಟ್ ಅಸಮತೋಲನ ಉಂಟಾಗುತ್ತದೆ. ಇದು ಅಜೀರ್ಣ, ಆಸಿಡಿಟಿ ಮತ್ತು ಅತಿಸಾರ ಸಮಸ್ಯೆಗಳನ್ನು ಹೆಚ್ಚಿಸುತ್ತದೆ. ರೋಗನಿರೋಧಕ ಶಕ್ತಿ ಕಡಿಮೆಯಾದಾಗ ಈ ಸಮಸ್ಯೆಗಳು ಇನ್ನಷ್ಟು ಗಂಭೀರವಾಗಬಹುದು.

ಇದನ್ನೂ ಓದಿ: ಬದಲಾಗುತ್ತಿರುವ ಹವಾಮಾನದಲ್ಲಿ ಆರೋಗ್ಯ ಕಾಪಾಡಿಕೊಳ್ಳುವುದು ಹೇಗೆ? ಇಲ್ಲಿದೆ ಆಯುರ್ವೇದ ತಜ್ಞರು ನೀಡಿದ ಸಲಹೆ

ಹೇಗೆ ತಡೆಗಟ್ಟಬೇಕು?

ಈ ಸಮಸ್ಯೆಗಳಿಂದ ದೂರವಿರಲು ಸಾಕಷ್ಟು ಪ್ರಮಾಣದಲ್ಲಿ ನೀರನ್ನು ಕುಡಿಯಬೇಕು. ತಾಜಾ ಮತ್ತು ಹಗುರವಾದ ಆಹಾರ ಸೇವಿಸಬೇಕು. ಹಣ್ಣು, ತರಕಾರಿಗಳು ಮತ್ತು ಸುಲಭವಾಗಿ ಜೀರ್ಣವಾಗುವ ಆಹಾರವನ್ನು ಆಯ್ಕೆ ಮಾಡುವುದು ಉತ್ತಮ. ಹೊರಗಿನ ಆಹಾರವನ್ನು ಮತ್ತು ಅತಿಯಾಗಿ ಎಣ್ಣೆ ಮತ್ತು ಮಸಾಲೆ ಇರುವ ಆಹಾರ ಸೇವನೆ ಮಾಡುವುದನ್ನು ತಪ್ಪಿಸಬೇಕು. ಇದೆಲ್ಲದರ ಜೊತೆಗೆ ಕೈಗಳ ಸ್ವಚ್ಛತೆ ಕಾಪಾಡುವುದು ಕೂಡ ಬಹಳ ಮುಖ್ಯ. ಪ್ಯಾಕೇಜ್ಡ್ ಪಾನೀಯಗಳು ಮತ್ತು ಕಲುಷಿತ ನೀರಿನಿಂದ ದೂರವಿರಬೇಕು. ಇವುಗಳನ್ನು ಪಾಲಿಸಿದರೆ ಬೇಸಿಗೆಯಲ್ಲಿ ಹೊಟ್ಟೆಯ ಸಮಸ್ಯೆಗಳನ್ನು ಕಡಿಮೆ ಮಾಡಬಹುದು.

ಯಾವಾಗ ವೈದ್ಯರನ್ನು ಸಂಪರ್ಕಿಸಬೇಕು?

ಹೊಟ್ಟೆನೋವು, ನಿರಂತರ ಅತಿಸಾರ ಅಥವಾ ವಾಂತಿ ಸಮಸ್ಯೆಗಳು ಮುಂದುವರಿದರೆ ತಕ್ಷಣ ವೈದ್ಯರನ್ನು ಸಂಪರ್ಕಿಸಬೇಕು. ಡಿಹೈಡ್ರೇಶನ್ ಲಕ್ಷಣಗಳನ್ನು ನಿರ್ಲಕ್ಷಿಸಬಾರದು. ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಪಡೆಯುವುದರಿಂದ ಗಂಭೀರ ಸಮಸ್ಯೆಗಳನ್ನು ತಪ್ಪಿಸಬಹುದು. ಒಟ್ಟಿನಲ್ಲಿ, ಸರಿಯಾದ ಆಹಾರ ಪದ್ಧತಿ ಮತ್ತು ಸ್ವಚ್ಛತೆ ಪಾಲಿಸುವುದರಿಂದ ಬೇಸಿಗೆಯಲ್ಲಿ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳಿಂದ ದೂರವಿದ್ದು ಆರೋಗ್ಯವನ್ನು ಕಾಪಾಡಿಕೊಳ್ಳಬಹುದು.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Exit mobile version