ಛೇ, ಇದೆಂಥಾ ಕ್ರೌರ್ಯ! ಜಗಳ ಬಿಡಿಸಲು ಹೋದ ಗರ್ಭಿಣಿಯ ಹೊಟ್ಟೆಗೆ ಒದ್ದ ಕಿರಾತಕರು, ಗರ್ಭದಲ್ಲಿದ್ದ ಅವಳಿ ಶಿಶುಗಳು ದಾರುಣ ಸಾವು
ಹಾವೇರಿ, ಏಪ್ರಿಲ್ 10: ಸಾಲದ ಹಣ ವಾಪಸ್ ಕೇಳುವ ಭರದಲ್ಲಿ ಗುಂಪೊಂದು ಗರ್ಭಿಣಿ ಮಹಿಳೆಯ ಮೇಲೆ ಹಲ್ಲೆ ನಡೆಸಿದ ಪರಿಣಾಮ, ಹೊಟ್ಟೆಯಲ್ಲಿದ್ದ ಆರು ತಿಂಗಳ ಅವಳಿ-ಜವಳಿ ಶಿಶುಗಳು ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಹಾವೇರಿ (Haveri) ಜಿಲ್ಲೆ ಸವಣೂರು ತಾಲೂಕಿನ ಅಲ್ಲಿಪುರ ಗ್ರಾಮದಲ್ಲಿ ನಡೆದಿದೆ. ಅಲ್ಲಿಪುರ ಗ್ರಾಮದ ಹಾಲವ್ವ ಎಂಬುವವರು ಮಗಳ ಸೀಮಂತ ಕಾರ್ಯಕ್ರಮಕ್ಕಾಗಿ ಊರಿಗೆ ಬಂದಿದ್ದರು. ಹಾಲವ್ವ ಅವರು ಗ್ರಾಮದ ಸುರೇಶ ಲಮಾಣಿ ಎಂಬುವವರಿಂದ 30 ಸಾವಿರ ರೂಪಾಯಿ ಸಾಲ ಪಡೆದಿದ್ದರು. ಮಾರ್ಚ್ 28ರಂದು ಹಣ ವಾಪಸ್…