ವಾಟ್ಸಾಪ್​ಗೆ ಎಪಿಕೆ ಫೈಲ್​ನಲ್ಲಿ ಬಂತು ಮದುವೆ ಆಮಂತ್ರಣ: ಕ್ಲಿಕ್ ಮಾಡಿದ ವ್ಯಕ್ತಿಯ ಬ್ಯಾಂಕ್ ಖಾತೆಯಿಂದ 9.96 ಲಕ್ಷ ರೂ. ಮಾಯ! – Kannada News | WhatsApp APK Wedding Invitation Scam: Bengaluru Forest Employee Loses Rs 9.96 Lakh After Opening Fake Invite

ಬೆಂಗಳೂರು, ಜುಲೈ 21: ವಾಟ್ಸಾಪ್‌ನಲ್ಲಿ ಎಪಿಕೆ ಫೈಲ್ (APK File)ರೂಪದಲ್ಲಿ ಬಂದಿದ್ದ ನಕಲಿ ಮದುವೆ ಆಮಂತ್ರಣವನ್ನು (Wedding Card) ಕ್ಲಿಕ್ ಮಾಡಿದ ಪರಿಣಾಮ ಅರಣ್ಯ ಇಲಾಖೆಯ ನೌಕರರೊಬ್ಬರು ಸುಮಾರು 9.96 ಲಕ್ಷ ರೂಪಾಯಿ ಕಳೆದುಕೊಂಡಿರುವ ಘಟನೆ ಬೆಂಗಳೂರಿನಲ್ಲಿ (Bengaluru) ವರದಿಯಾಗಿದೆ. ಈ ಸಂಬಂಧ ಉತ್ತರ ವಿಭಾಗದ ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪರಿಚಿತ ಸೈಬರ್ ವಂಚಕರ ಪತ್ತೆಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಇದರೊಂದಿಗೆ ಸೈಬರ್ ವಂಚಕರು ಹೊಸ ಹೊಸ ವಿಧಾನದ ಮೂಲಕ ಜನರನ್ನು ವಂಚಿಸುತ್ತಿರುವುದು ಬೆಳಕಿಗೆ ಬಂದಂತಾಗಿದೆ.

ಅಪರಿಚಿತ ಮೊಬೈಲ್​ ಸಂಖ್ಯೆಯಿಂದ ಬಂತು ಮದುವೆ ಆಮಂತ್ರಣ

ದೂರುದಾರ ರಮೇಶ್ ಅವರಿಗೆ ಅಪರಿಚಿತ ಮೊಬೈಲ್ ಸಂಖ್ಯೆಯಿಂದ ವಾಟ್ಸಾಪ್‌ನಲ್ಲಿ ಮದುವೆ ಆಮಂತ್ರಣದ ಹೆಸರಿನಲ್ಲಿ ಎಪಿಕೆ ಫೈಲ್ ಕಳುಹಿಸಲಾಗಿತ್ತು. ಅದು ಸಾಮಾನ್ಯ ಆಹ್ವಾನ ಪತ್ರಿಕೆ ಎಂದು ಭಾವಿಸಿ ಅವರು ಕ್ಲಿಕ್ ಮಾಡಿದ್ದರು. ತಕ್ಷಣವೇ ಎಪಿಕೆ ಫೈಲ್ ಡ್ಔನ್​ಲೋಡ್ ಆಗಿದ್ದು, ಅವರ ಬ್ಯಾಂಕ್ ಖಾತೆಯಿಂದ ಹಂತಹಂತವಾಗಿ ಹಣ ಡೆಬಿಟ್ ಆಗಿರುವ ಸಂದೇಶಗಳು ಬಂದಿವೆ.

ಲಕ್ಷಾಂತ ರೂ. ಕಳಕೊಂಡ ಬಳಿಕ ತಿಳಿದ ಸತ್ಯ

ಒಟ್ಟಾರೆ 9 ಲಕ್ಷ 96 ಸಾವಿರ ರೂಪಾಯಿ ಖಾತೆಯಿಂದ ವರ್ಗಾವಣೆಯಾದ ಬಳಿಕ ತಾವು ಸೈಬರ್ ವಂಚನೆಗೆ ಒಳಗಾಗಿರುವುದು ರಮೇಶ್ ಅವರಿಗೆ ಗೊತ್ತಾಗಿದೆ. ಬಳಿಕ ಅವರು ಬೆಂಗಳೂರಿನ ಉತ್ತರ ಸೈಬರ್ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ಎಫ್‌ಐಆರ್ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಅಪರಿಚಿತರಿಂದ ಬಂದ ಫೈಲ್​ಗಳನ್ನು ಕ್ಲಿಕ್ ಮಾಡಬೇಡಿ

ಅಪರಿಚಿತ ವ್ಯಕ್ತಿಗಳಿಂದ ಬರುವ APK ಫೈಲ್‌ಗಳು, ಲಿಂಕ್‌ಗಳು ಅಥವಾ ಮದುವೆ ಆಮಂತ್ರಣಗಳ ಹೆಸರಿನಲ್ಲಿರುವ ಅಪ್ಲಿಕೇಶನ್‌ಗಳನ್ನು ಯಾವುದೇ ಕಾರಣಕ್ಕೂ ಡೌನ್‌ಲೋಡ್ ಅಥವಾ ಓಪನ್ ಮಾಡಬಾರದು ಎಂದು ಸಾರ್ವಜನಿಕರಿಗೆ ಸೈಬರ್ ತಜ್ಞರು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ವಾಟ್ಸ್ಆ್ಯಪ್​ನಲ್ಲಿ ಹರಿದಾಡುತ್ತಿದೆ ಆರ್​ಟಿಒ ಚಲನ್ ಸ್ಕ್ಯಾಮ್: ಈರೀತಿ ಮೆಸೇಜ್ ಬಂದರೆ ಎಚ್ಚರ

ಈ ಹಿಂದೆ, ಬ್ಯಾಂಕ್​ಗಳ ಹೆಸರಿನಲ್ಲಿ ಎಪಿಕೆ ಫೈಲ್ ಕಳುಹಿಸಿ ವಂಚಿಸುತ್ತಿದ್ದ ಅನೇಕ ಪ್ರಕರಣಗಳು ವರದಿಯಾಗಿದ್ದವು. ಆ ನಂತರ, ಟ್ರಾಫಿಕ್ ಚಲನ್ ಹೆಸರಿನಲ್ಲಿ ಎಪಿಕೆ ಫೈಲ್​ಗಳನ್ನು ವಾಟ್ಸಾಪ್​ನಲ್ಲಿ ಕಳುಹಿಸಿ ವಂಚಿಸಿದ ಅನೇಕ ಪ್ರಕರಣಗಳು ವರದಿಯಾಗಿದ್ದವು. ಇದೀಗ ಮದುವೆ ಆಮಂತ್ರಣದ ಎಪಿಕೆ ಫೈಲ್ ಕಳುಹಿಸಿ ವಂಚಿಸಲಾಗುತ್ತಿದೆ. ಮದುವೆ ಆಮಂತ್ರಣ, ನೋಡೋಣ ಎಂದು ಕ್ಲಿಕ್ ಮಾಡಿದರೆ ಎಪಿಕೆ ಫೈಲ್ ಮೊಬೈಲ್​ನಲ್ಲಿ ಡೌನ್​ಲೋಡ್ ಆಗಿ ಮೊಬೈಲ್ ಹ್ಯಾಕ್ ಆಗುತ್ತದೆ. ಇದರಿಂದ ಮೊಬೈಲ್​​ನಲ್ಲಿರುವ ದತ್ತಾಂಶಗಳು ಸೈಬರ್ ವಂಚಕರ ಪಾಲಾಗಿ ಅವರು ನಿಮ್ಮ ಬ್ಯಾಂಕ್ ಖಾತೆಯಿಂದ ಹಣ ಕದಿಯಬಹುದು. ಹೀಗಾಗಿ ಎಚ್ಚರ ವಹಿಸಿ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಕಲುಷಿತ ಕಾವೇರಿ ನೀರಿನ ಪೂರೈಕೆ: ಬೆಂಗಳೂರಿನ ಕತ್ರಿಗುಪ್ಪೆ ನಿವಾಸಿಗಳ ಆಕ್ರೋಶ – Kannada News | Bengaluru Residents Suffer from Contaminated Cauvery Water Supply in Katriguppe

ಬೆಂಗಳೂರು, ಜುಲೈ 21: ನಗರದ ದಕ್ಷಿಣ ನಗರ ಪಾಲಿಕೆಯ ಕತ್ರಿಗುಪ್ಪೆ ವಾರ್ಡ್‌ನಲ್ಲಿ ಕಾವೇರಿ ನೀರು ಕಲುಷಿತಗೊಂಡು ಪೂರೈಕೆಯಾಗುತ್ತಿದ್ದು, ನೂರಕ್ಕೂ ಹೆಚ್ಚು ಮನೆಗಳ ನಿವಾಸಿಗಳು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ. ಕಳೆದ ನಾಲ್ಕೈದು ವರ್ಷಗಳಿಂದ ಪದೇ ಪದೇ ಪುನರಾವರ್ತಿತವಾಗುತ್ತಿರುವ ಈ ಸಮಸ್ಯೆಯಿಂದ ಕಾವೇರಿ ನೀರನ್ನು ನಂಬಿಕೊಂಡಿದ್ದ ಜನರಿಗೆ ದೊಡ್ಡ ಆಘಾತ ಉಂಟಾಗಿದೆ. ಕಲುಷಿತ ನೀರು ಮಣ್ಣು ಮಿಶ್ರಿತವಾಗಿದ್ದು, ಕೆಟ್ಟ ವಾಸನೆ ಹಾಗೂ ಕಪ್ಪು ಬಣ್ಣದಿಂದ ಕೂಡಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಕುಡಿಯಲು ಅಥವಾ ಇತರೆ ಗೃಹಬಳಕೆಗೆ ನೀರನ್ನು ಉಪಯೋಗಿಸಲು ಭಯವಾಗುತ್ತಿದೆ ಎಂದು ಜನ ಅಳಲು ತೋಡಿಕೊಂಡಿದ್ದಾರೆ. ಕೊಳಚೆ ನೀರು ಕಾವೇರಿ ನೀರಿನೊಂದಿಗೆ ಮಿಶ್ರಣವಾಗುತ್ತಿರುವುದು ಈ ಸಮಸ್ಯೆಗೆ ಮುಖ್ಯ ಕಾರಣ ಎನ್ನಲಾಗಿದೆ. ಹಿಂದೆ ಪೆಟ್ರೋಲ್, ಆಯಿಲ್ ಮಿಶ್ರಣವಾಗಿದ್ದರೆ, ಈಗ ಸ್ಯಾನಿಟರಿ ಲೈನ್‌ನ ನೀರು ಸೇರಿಕೊಳ್ಳುತ್ತಿದೆ ಎಂದು ನಿವಾಸಿಗಳು ತಿಳಿಸಿದ್ದಾರೆ. ಜಲಮಂಡಳಿ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಸಲ್ಲಿಸಿದ್ದರೂ, ಸರಿಯಾದ ಸ್ಪಂದನೆ ಸಿಕ್ಕಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಕ್ಕಳು ಹಾಗೂ ವೃದ್ಧರ ಆರೋಗ್ಯದ ಬಗ್ಗೆ ತೀವ್ರ ಚಿಂತೆಗೀಡಾಗಿದ್ದು, ಕೂಡಲೇ ಅಧಿಕಾರಿಗಳು ಶಾಶ್ವತ ಪರಿಹಾರ ಕಂಡುಕೊಳ್ಳುವಂತೆ ಒತ್ತಾಯಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

Toxic Song: ‘ಟಾಕ್ಸಿಕ್’ ಚಿತ್ರದ ‘ಮನಮೋಹಕ..’ ಸಾಂಗ್ ರಿವೀಲ್; ಯಶ್-ತಾರಾ ಸುತಾರಿಯಾ ಕೆಮಿಸ್ಟ್ರಿಗೆ ಫ್ಯಾನ್ಸ್ ಫಿದಾ – Kannada News | Toxic Second Single Out: Yash and Tara Sutaria’s Striking Chemistry Wins Hearts in Manamohaka

ರಾಕಿಂಗ್ ಸ್ಟಾರ್ ಯಶ್ ಅಭಿನಯದ, ಗೀತು ಮೋಹನ್​ದಾಸ್ ನಿರ್ದೇಶನದ ಬಹುನಿರೀಕ್ಷಿತ ‘ಟಾಕ್ಸಿಕ್’ ಚಿತ್ರದ ಕಡೆಯಿಂದ ಅಭಿಮಾನಿಗಳಿಗೆ ಭರ್ಜರಿ ಗಿಫ್ಟ್ ಸಿಕ್ಕಿದೆ. ಈಗಾಗಲೇ ಬಿಡುಗಡೆಯಾಗಿ ಕೋಟ್ಯಂತರ ವೀಕ್ಷಣೆಗಳೊಂದಿಗೆ ಸೋಷಿಯಲ್ ಮೀಡಿಯಾದಲ್ಲಿ ಧೂಳೆಬ್ಬಿಸಿದ್ದ ಬೋಲ್ಡ್ ಅಂಡ್ ರೊಮ್ಯಾಂಟಿಕ್ ‘ತಬಾಹಿ’ ಹಾಡಿನ ಬೆನ್ನಲ್ಲೇ, ಚಿತ್ರತಂಡ ಎರಡನೇ ಹಾಡನ್ನು ಬಿಡುಗಡೆ ಮಾಡಿದೆ. ಇಂದು (ಜುಲೈ 21) ಬೆಳಿಗ್ಗೆ 11.33ಕ್ಕೆ ರಿಲೀಸ್ ಆಗಿರುವ ‘ಮನಮೋಹಕ..’ ಸಾಂಗ್ ಇಂಟರ್ನೆಟ್‌ನಲ್ಲಿ ಸಖತ್ ಟ್ರೆಂಡ್ ಸೃಷ್ಟಿಸುತ್ತಿದೆ.

ಮೆಲೋಡಿ ಪ್ರಿಯರ ಮನಗೆದ್ದ ‘ಮನಮೋಹಕ’

ಮೊದಲ ಹಾಡು ‘ತಬಾಹಿ’ಯಲ್ಲಿ ಯಶ್ ಹಾಗೂ ಕಿಯಾರಾ ಅಡ್ವಾಣಿ ಸಖತ್ ರೊಮ್ಯಾಂಟಿಕ್ ಆಗಿ ಕಾಣಿಸಿಕೊಂಡು ಬೋಲ್ಡ್ ನೆಸ್ ಮೂಲಕ ಗಮನ ಸೆಳೆದಿದ್ದರು. ಇಂದು ಬಿಡುಗಡೆಯಾಗಿರುವ ‘ಮನಮೋಹಕ’ ಹಾಡು ಮಧುರವಾದ ಪ್ರಣಯಗೀತೆ. ಈ ಹಾಡಿನಲ್ಲಿ ಯಶ್ ಹಾಗೂ ತಾರಾ ಸುತಾರಿಯಾ ಜೋಡಿಯಾಗಿ ಕಾಣಿಸಿಕೊಂಡಿದ್ದು, ಇಬ್ಬರ ನಡುವಿನ ಸ್ಕ್ರೀನ್ ಕೆಮಿಸ್ಟ್ರಿ ಗಮನ ಸೆಳೆಯುತ್ತಿದೆ. ಈ ಹಾಡಿನಲ್ಲಿ ಕಿಯಾರಾ ಅಡ್ವಾಣಿ, ನಯನತಾರಾ ಕೂಡ ಕಾಣಿಸಿಕೊಳ್ಳುತ್ತಾರೆ.

ಪ್ರಮೋದ್ ಮರವಂತೆ ಸಾಹಿತ್ಯ

‘ಟಾಕ್ಸಿಕ್’ ಚಿತ್ರದ ಮೊದಲ ಹಾಡಿಗೆ ಸ್ಯಾಂಡಲ್‌ವುಡ್‌ನ ಸ್ಟಾರ್ ಲಿರಿಸಿಸ್ಟ್ ಯೋಗರಾಜ್ ಭಟ್ ಅವರು ಸಾಹಿತ್ಯ ಬರೆದಿದ್ದರು. ಈಗ ಮನಮೋಹಕ ಹಾಡಿಗೆ ಪ್ರಮೋದ್ ಮರವಂತೆ ಸಾಹಿತ್ಯ ಬರೆದಿದ್ದಾರೆ. ಈ ಹಾಡನ್ನು ಸಿದ್ದಾರ್ಥ್ ಬಸರೂರ್ ಅವರು ಹಾಡಿದ್ದಾರೆ.

‘ಟಾಕ್ಸಿಕ್’ ಚಿತ್ರದಲ್ಲಿ ಯಶ್ ದ್ವಿಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವುದು ಈಗಾಗಲೇ ಕುತೂಹಲ ಮೂಡಿಸಿದೆ. ಚಿತ್ರದಲ್ಲಿ ಕಿಯಾರಾ ಅಡ್ವಾಣಿ, ತಾರಾ ಸುತಾರಿಯಾ, ನಯನತಾರಾ ಮತ್ತು ರುಕ್ಮಿಣಿ ವಸಂತ್ ಸೇರಿದಂತೆ ದೊಡ್ಡ ತಾರಾಗಣವೇ ಇದೆ. ಯಶ್ ಅವರು ಯಾರ ಜೊತೆ ಫೈಟ್ ಮಾಡುತ್ತಾರೆ, ಯಾರ ಜೊತೆ ರೊಮ್ಯಾನ್ಸ್ ಮಾಡುತ್ತಾರೆ ಎಂಬ ಗೊಂದಲ ಅಭಿಮಾನಿಗಳಲ್ಲಿ ಇದ್ದ ಬೆನ್ನಲ್ಲೇ, ಈಗ ತಾರಾ ಸುತಾರಿಯಾ ಜೊತೆಗಿನ ಈ ಮಧುರ ಪ್ರಣಯಗೀತೆ ಚಿತ್ರದ ಮೇಲಿನ ನಿರೀಕ್ಷೆಯನ್ನು ಮತ್ತಷ್ಟು ದುಪ್ಪಟ್ಟು ಮಾಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On – 11:44 am, Tue, 21 July 26

Source link

Book Brahma Sahityotsava 2026: ಆ.14ರಿಂದ ಬೆಂಗಳೂರಿನಲ್ಲಿ ‘ಬುಕ್ ಬ್ರಹ್ಮ ಸಾಹಿತ್ಯೋತ್ಸವ; 10 ದಿನಗಳ ಕಾಲ ಸಾಹಿತ್ಯ-ಸಾಂಸ್ಕೃತಿಕ ಸಂಭ್ರಮ! – Kannada News | BBLF 2026: Bengaluru’s Grand Literary and Cultural Festival – 10 Days of Free Events

ಬೆಂಗಳೂರು: ಸಾಹಿತ್ಯಾಸಕ್ತರು ಕಾತುರದಿಂದ ಕಾಯುತ್ತಿದ್ದ ‘ಬುಕ್ ಬ್ರಹ್ಮ ಸಾಹಿತ್ಯೋತ್ಸವ – 2026’ (BBLF 2026) ರ ಮೂರನೇ ಆವೃತ್ತಿಗೆ ವೇದಿಕೆ ಸಜ್ಜಾಗಿದೆ. ಕೋರಮಂಗಲದ ಪ್ರಸಿದ್ಧ ಸೇಂಟ್ ಜಾನ್ಸ್ ಸಭಾಂಗಣದ ಆವರಣದಲ್ಲಿ ಆಗಸ್ಟ್ 14 ರಿಂದ 23 ರವರೆಗೆ ಒಟ್ಟು 10 ದಿನಗಳ ಕಾಲ ಈ ಬೃಹತ್ ಸಾಹಿತ್ಯ ಮತ್ತು ಸಾಂಸ್ಕೃತಿಕ ಉತ್ಸವ ನಡೆಯಲಿದೆ. ಈ ಬಾರಿ ಸಾಹಿತ್ಯ ಗೋಷ್ಠಿಗಳ ಜೊತೆಗೆ ಅದ್ಧೂರಿ ಸಾಂಸ್ಕೃತಿಕ ಕಾರ್ಯಕ್ರಮಗಳು, ಜಾನಪದ ಮಾರುಕಟ್ಟೆ ಹಾಗೂ ಪುಸ್ತಕ ಲೋಕ ಮುಂತಾದ ಹಲವು ಆಕರ್ಷಣೆಗಳನ್ನು ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮದ ವಿವರ ಹಾಗೂ ದಿನಾಂಕಗಳು:

ಸಾಂಸ್ಕೃತಿಕ ಉತ್ಸವ, ಪುಸ್ತಕಲೋಕ ಮತ್ತು ಫ್ಲೀ ಮಾರ್ಕೆಟ್ (ಆಗಸ್ಟ್ 14 – 20) ಮೊದಲ 7 ದಿನಗಳ ಕಾಲ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳು, ಬಿಬಿಎಲ್‌ಎಫ್-ಪುಸ್ತಕಲೋಕ ಮತ್ತು ಜಾನಪದ ಮಾರುಕಟ್ಟೆ ಸಾರ್ವಜನಿಕರಿಗೆ ಮುಕ್ತವಾಗಿರುತ್ತದೆ.

  • ಆಗಸ್ಟ್ 14 (ಸಂಜೆ): ಶಿಲ್ಪಾ ಮಡುಬಿ ಅವರಿಂದ ಸಂಗೀತ ಕಾರ್ಯಕ್ರಮ.
  • ಆಗಸ್ಟ್ 15 (ಸಂಜೆ): ರಾಮಚಂದ್ರ ಹಡಪದ ಮತ್ತು ತಂಡದವರಿಂದ ಗಾಯನ.
  • ಆಗಸ್ಟ್ 16 (ಸಂಜೆ): ‘ಗಿಗ್ ಮ್ಯಾನ್ ಲೈವ್’ ತಂಡದ ಸುನಿಧಿ ಗಣೇಶ್ ಅವರಿಂದ ಸಂಗೀತ ರಸಸಂಜೆ.

ಪ್ರಮುಖ ಸಾಹಿತ್ಯೋತ್ಸವ ಕಾರ್ಯಕ್ರಮಗಳು (ಆಗಸ್ಟ್ 21 – 23):

ಸಾಹಿತ್ಯೋತ್ಸವದ ಪ್ರಮುಖ 3 ದಿನಗಳಲ್ಲಿ 9 ಸಮಾನಾಂತರ ವೇದಿಕೆಗಳಲ್ಲಿ ಒಟ್ಟು 207 ಗೋಷ್ಠಿಗಳು, ಚರ್ಚೆಗಳು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ. ಕನ್ನಡ, ತೆಲುಗು, ತಮಿಳು, ಮಲಯಾಳಂ ಮತ್ತು ಇಂಗ್ಲಿಷ್ ಸಾಹಿತ್ಯ ಲೋಕದ 400ಕ್ಕೂ ಹೆಚ್ಚು ಲೇಖಕರು, ಚಿಂತಕರು, ಕಲಾವಿದರು, ಪ್ರಕಾಶಕರು ಮತ್ತು ಪುಸ್ತಕ ಮಾರಾಟಗಾರರು ಭಾಗವಹಿಸಲಿದ್ದಾರೆ.

ಆಗಸ್ಟ್ 21-23 ರ ಪ್ರಮುಖ ಸಾಂಸ್ಕೃತಿಕ ಆಕರ್ಷಣೆಗಳು:

  • ಆಗಸ್ಟ್ 21 (ಸಂಜೆ 6:30): ನಿರ್ದೇಶಕ ನಟೇಶ್ ಹೆಗಡೆ ಅವರಿಂದ ‘ವಾಘಾಚಿಪಾಣಿ’ ಚಲನಚಿತ್ರದ ಕುರಿತು ಮಾತುಕತೆ ಮತ್ತು ಪ್ರದರ್ಶನ.
  • ಆಗಸ್ಟ್ 22 (ಬೆಳಿಗ್ಗೆ 8:30): ರಫಿ ಖಾನ್ ಮತ್ತು ಶಫಿ ಖಾನ್ ಅವರಿಂದ ಸಿತಾರ್ ವಾದನ.
  • ಆಗಸ್ಟ್ 22 (ಸಂಜೆ 6:30): ವಿದುಷಿ ಟಿ.ಎಸ್. ಸತ್ಯವತಿ ಮತ್ತು ತಂಡದವರಿಂದ ಕರ್ನಾಟಕ ಸಂಗೀತ ಕಚೇರಿ.
  • ಆಗಸ್ಟ್ 23 (ಬೆಳಿಗ್ಗೆ 8:30): ಅನಿರುಧ್ ಐತಾಳ ಮತ್ತು ತಂಡದವರಿಂದ ಹಿಂದೂಸ್ತಾನಿ ಸಂಗೀತ.
  • ಆಗಸ್ಟ್ 23 (ಸಂಜೆ 6:30): ಪಟ್ಲ ಸತೀಶ್ ಶೆಟ್ಟಿ ನೇತೃತ್ವದ ‘ಪಾವಂಜೆ ಮೇಳ’ದವರಿಂದ ಆಕರ್ಷಕ ಯಕ್ಷಗಾನ ಪ್ರದರ್ಶನ.

#BBLF-2026 ರ ಮುಖ್ಯ ವೈಶಿಷ್ಟ್ಯಗಳು:

10 ದಿನಗಳ ಎಲ್ಲ ಕಾರ್ಯಕ್ರಮಗಳು, ಸಾಂಸ್ಕೃತಿಕ ಸಂಜೆ ಹಾಗೂ ಗೋಷ್ಠಿಗಳಿಗೆ ಪ್ರವೇಶ ಸಂಪೂರ್ಣ ಉಚಿತ. ಮಂಟಪ, ಅಂಗಳ (ಕನ್ನಡ ಗೋಷ್ಠಿಗಳಿಗೆ), ಅಕ್ಷರ, ಮಥನ, ಮುಖಾಮುಖಿ, ನ್ಯೂಜೆನ್, ಅನಾವರಣ, ಚಿಣ್ಣರಲೋಕ ಮತ್ತು ಪೋಯೆಟ್ರಿ (ಕಾವ್ಯ ಕಣಜ) ಹೀಗೆ ಒಂಬತ್ತು ಪ್ರತ್ಯೇಕ ವೇದಿಕೆಗಳು. ಉತ್ಸವದ ಸಮಯದಲ್ಲಿ ಕಾದಂಬರಿ ಸ್ಪರ್ಧೆ, ಸ್ವಾತಂತ್ರ್ಯ ಉತ್ಸವ ಕಥಾ ಸ್ಪರ್ಧೆ, ಇಂಗ್ಲಿಷ್ ಫಿಕ್ಷನ್ ಆಫ್ ದಿ ಇಯರ್ ಮತ್ತು ‘ಬುಕ್ ಬ್ರಹ್ಮ ಸಾಹಿತ್ಯ ಪುರಸ್ಕಾರ’ಗಳನ್ನು ಪ್ರದಾನ ಮಾಡಲಾಗುವುದು. ನವಕರ್ನಾಟಕ, ಡಿಸಿ ಬುಕ್ಸ್, ಕಾಲಚುವಾಡು, ಛಾಯಾ, ಸಾಹಿತ್ಯ ಅಕಾಡೆಮಿ ಸೇರಿದಂತೆ ಪ್ರಮುಖ ಪ್ರಕಾಶನಗಳ ಮಳಿಗೆಗಳು ಮತ್ತು ಫ್ಲೀ ಮಾರ್ಕೆಟ್, ಆಹಾರ ಮಳಿಗೆಗಳು 10 ದಿನಗಳ ಕಾಲ ಲಭ್ಯವಿರಲಿವೆ. ಇದಲ್ಲದೇ ಹೊರಊರಿನಿಂದ ಬರುವ ಆಸಕ್ತರಿಗಾಗಿ ಸೇಂಟ್ ಜಾನ್ಸ್ ಆವರಣದ ಸುತ್ತಮುತ್ತಲಿರುವ ಹೋಟೆಲ್‌ಗಳ ವಿವರ ಹಾಗೂ ಗೈಡ್ ಅನ್ನು ವೆಬ್‌ಸೈಟ್‌ನಲ್ಲಿ ನೀಡಲಾಗಿದೆ.

ನೋಂದಣಿ ಮಾಡಿಕೊಳ್ಳುವುದು ಹೇಗೆ?

ಉತ್ಸವಕ್ಕೆ ಆಗಮಿಸುವವರು ಮುಂಚಿತವಾಗಿಯೇ www.bookbrahmalitfest.com ವೆಬ್‌ಸೈಟ್‌ಗೆ ಭೇಟಿ ನೀಡಿ ಉಚಿತವಾಗಿ ನೋಂದಾಯಿಸಿಕೊಳ್ಳಬಹುದು. (ಸ್ಥಳದಲ್ಲೂ ನೋಂದಣಿ ಕೌಂಟರ್‌ಗಳ ಮೂಲಕ ಪಾಸ್ ಪಡೆಯಲು ಅವಕಾಶವಿದೆ).

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Video: ಬಿಳಿ ಬಣ್ಣದ ಕುರ್ತಾ ಧರಿಸಿ ವೈರಲ್ ಆದ ವ್ಯಕ್ತಿ, ಕಾರಣ ಇದೇ ನೋಡಿ – Kannada News | A man who had a kurta stitched from a railway bedsheet

ಸೋಶಿಯಲ್ ಮೀಡಿಯಾದಲ್ಲಿ (social media) ವೈರಲ್ ಆಗುವ ಕೆಲ ವಿಡಿಯೋಗಳು ನೆಟ್ಟಿಗರ ಹುಬ್ಬೇರಿಸುವಂತೆ ಮಾಡುತ್ತದೆ. ಇದೀಗ ಇಲ್ಲೊಬ್ಬ ವ್ಯಕ್ತಿಯು ಬಿಳಿ ಬಣ್ಣದ ಕುರ್ತಾ ಧರಿಸಿ ವೈರಲ್ ಆಗಿದ್ದಾನೆ. ಈ ಕುರ್ತಾ ಮೇಲೆ ನೀಲಿ ಪಟ್ಟಿ ಮೇಲೆ ವೆಸ್ಟೆರ್ನ್ ರೈಲ್ವೆ (western railway) ಎಂದು ಬರೆಯಲಾಗಿದೆ. ಹೌದು, ಈ ವ್ಯಕ್ತಿ ರೈಲ್ವೆಯಲ್ಲಿನ ಬೆಡ್ ಶೀಟ್ ನಿಂದಲೇ ಕುರ್ತಾ ಹೊಲಿಸಿಕೊಂಡಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ಮಿಶ್ರ ಪ್ರತಿಕ್ರಿಯೆ ನೀಡಿದ್ದಾರೆ.

ರಂಜಿತ್ ಸಿಂಗ್ (Ranjeeth Singh) ಹೆಸರಿನ ಇನ್ಸ್ಟಾಗ್ರಾಂನಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದೆ. ಈ ಕ್ಲಿಪಿಂಗ್ ನಲ್ಲಿ ವ್ಯಕ್ತಿಯೊಬ್ಬ ಬಿಳಿ ಬಣ್ಣದ ಕುರ್ತಾ ಧರಿಸಿ ಮಾರ್ಕೆಟ್ ನಲ್ಲಿ ತರಕಾರಿ ಖರೀದಿ ಮಾಡುತ್ತಿರುವುದನ್ನು ಕಾಣಬಹುದು. ಆತ ಧರಿಸಿರುವ ಕುರ್ತಾದ ಮೇಲೆ ನೀಲಿ ಪಟ್ಟಿ ಮೇಲೆ ವೆಸ್ಟೆರ್ನ್ ರೈಲ್ವೆ ಎಂದು ಬರೆದಿರುವುದನ್ನು ಕಾಣಬಹುದು.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ಮುಂಬೈ ನಿಲ್ದಾಣದಲ್ಲಿ ಹೈಡ್ರಾಮಾ: ಯುವತಿಯ ಕಾಲು ಹಿಡಿದು ಹಠ ಮಾಡುತ್ತಾ ಪ್ಲಾಟ್‌ಫಾರ್ಮ್ ಮೇಲೆ ಮಲಗಿದ ಯುವಕ

ಈ ಕ್ಲಿಪಿಂಗ್ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ಐದು ವರ್ಷ ಕಳೆದ್ರು ಈ ಬಟ್ಟೆ ಏನು ಹಾಳಾಗಲ್ಲ ಎಂದು ಹೇಳಿದ್ದಾರೆ. ಮತ್ತೊಬ್ಬರು, ಬ್ರಾಂಡೆಡ್ ಬಟ್ಟೆ ಎಂದಿದ್ದಾರೆ. ಇನ್ನೊಬ್ಬರು, ಬಟ್ಟೆ ಖರೀದಿಸಲು ಕಷ್ಟವಿರಬಹುದು ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ರಾತ್ರಿ ವೇಳೆಯಲ್ಲಿ ಬಟ್ಟೆ ಒಗೆಯಬಾರದು ಏಕೆ? ಜ್ಯೋತಿಷ್ಯ ಮತ್ತು ಧಾರ್ಮಿಕ ಕಾರಣ ಇಲ್ಲಿದೆ – Kannada News | Why You Shouldn’t Wash and Dry Clothes at Night: Jyotish and Health Reasons

ರಾತ್ರಿ ವೇಳೆಯಲ್ಲಿ ಬಟ್ಟೆ ಒಗೆಯಬಾರದು ಏಕೆ?Image Credit source: Getty Images

ಜ್ಯೋತಿಷ್ಯ ಶಾಸ್ತ್ರವು ದೈನಂದಿನ ಜೀವನದ ಪ್ರತಿಯೊಂದು ಸಣ್ಣಪುಟ್ಟ ಕೆಲಸಗಳಿಗೂ ಕೆಲವು ನಿಯಮಗಳನ್ನು ಸೂಚಿಸುತ್ತದೆ. ತಪ್ಪು ಸಮಯದಲ್ಲಿ ಮಾಡುವ ಕೆಲಸಗಳು ಮನೆಯಲ್ಲಿ ನಕಾರಾತ್ಮಕ ಶಕ್ತಿಯನ್ನು (Negative Energy) ಸೃಷ್ಟಿಸುತ್ತವೆ ಮತ್ತು ಜೀವನದಲ್ಲಿ ಹಲವು ಸಮಸ್ಯೆಗಳಿಗೆ ಕಾರಣವಾಗುತ್ತವೆ ಎಂಬ ನಂಬಿಕೆಯಿದೆ. ಅಂತಹ ನಿಯಮಗಳಲ್ಲಿ ಒಂದಾದ “ರಾತ್ರಿ ವೇಳೆ ಬಟ್ಟೆಗಳನ್ನು ಒಗೆಯಬಾರದು ಮತ್ತು ಒಣಗಿಸಬಾರದು” ಎಂಬುದರ ಹಿಂದಿರುವ ಧಾರ್ಮಿಕ, ಜ್ಯೋತಿಷ್ಯ ಮತ್ತು ವೈಜ್ಞಾನಿಕ ಕಾರಣಗಳ ಬಗ್ಗೆ ಖ್ಯಾತ ಜ್ಯೋತಿಷಿ ಚಂದ್ರೇಶ್ ಶರ್ಮಾ ಅವರು ನೀಡಿರುವ ಮಾಹಿತಿ ಇಲ್ಲಿದೆ.

ಜ್ಯೋತಿಷ್ಯ ಮತ್ತು ಧಾರ್ಮಿಕ ಕಾರಣಗಳು:

ಜ್ಯೋತಿಷ್ಯದ ಪ್ರಕಾರ, ಸೂರ್ಯನ ಬೆಳಕು ಸಕಾರಾತ್ಮಕತೆ ಮತ್ತು ಶುದ್ಧತೆಯ ಸಂಕೇತವಾದರೆ, ರಾತ್ರಿಯ ಕತ್ತಲೆಯು ನಕಾರಾತ್ಮಕತೆಯ ಸಂಕೇತವಾಗಿದೆ. ಪ್ರಾಚೀನ ನಂಬಿಕೆಗಳ ಪ್ರಕಾರ, ರಾತ್ರಿ ವೇಳೆ ಬಟ್ಟೆ ಒಗೆದು ಒಣಗಾಕುವುದರಿಂದ ಮನೆಯಲ್ಲಿರುವ ಸಂತೋಷ, ಶಾಂತಿ ಮತ್ತು ಲಕ್ಷ್ಮಿ ದೇವಿಯ ಕೃಪೆ ಕಡಿಮೆಯಾಗುತ್ತದೆ. ರಾತ್ರಿಯ ಕತ್ತಲೆಯಲ್ಲಿ ವಾತಾವರಣದಲ್ಲಿ ನಕಾರಾತ್ಮಕ ಶಕ್ತಿಗಳ ಚಲನವಲನ ಹೆಚ್ಚಿರುತ್ತದೆ. ಒದ್ದೆಯಾದ ಬಟ್ಟೆಗಳು ಈ ಶಕ್ತಿಯನ್ನು ಸುಲಭವಾಗಿ ಹೀರಿಕೊಳ್ಳುತ್ತವೆ, ಇದು ಮನೆಯ ಸದಸ್ಯರ ಆರೋಗ್ಯ ಮತ್ತು ಮನಸ್ಸಿನ ಮೇಲೆ ಕೆಟ್ಟ ಪ್ರಭಾವ ಬೀರಬಹುದು.

ಇದನ್ನೂ ಓದಿ: ಚಿಕ್ಕ ಮಕ್ಕಳಿಗೆ ಕನ್ನಡಿ ತೋರಿಸಬಾರದು ಏಕೆ? ಆಧ್ಯಾತ್ಮಿಕ ಮತ್ತು ವೈಜ್ಞಾನಿಕ ಕಾರಣ ಇಲ್ಲಿದೆ

ವೈಜ್ಞಾನಿಕ ಹಾಗೂ ಆರೋಗ್ಯದ ಕಾರಣಗಳು:

ಕೇವಲ ಧಾರ್ಮಿಕ ನಂಬಿಕೆ ಮಾತ್ರವಲ್ಲದೆ, ಇದರ ಹಿಂದೆ ಪ್ರಮುಖ ಆರೋಗ್ಯಕರ ಮತ್ತು ವೈಜ್ಞಾನಿಕ ಕಾರಣಗಳೂ ಇವೆ:

ಬ್ಯಾಕ್ಟೀರಿಯಾ ಮತ್ತು ಶಿಲೀಂಧ್ರಗಳ ಅಪಾಯ:

ಸೂರ್ಯನ ಬೆಳಕಿನಲ್ಲಿ ನೈಸರ್ಗಿಕವಾಗಿ ಸೂಕ್ಷ್ಮಜೀವಿಗಳನ್ನು ಕೊಲ್ಲುವ ಶಕ್ತಿಯಿದೆ (UV-rays). ರಾತ್ರಿ ಸೂರ್ಯನ ಬೆಳಕು ಇಲ್ಲದಿರುವುದರಿಂದ ಬಟ್ಟೆಯಲ್ಲಿನ ತೇವಾಂಶವು ಬ್ಯಾಕ್ಟೀರಿಯಾ, ಶಿಲೀಂಧ್ರ (Fungus) ಮತ್ತು ಕೀಟಗಳ ಬೆಳವಣಿಗೆಗೆ ಕಾರಣವಾಗುತ್ತದೆ. ಇದು ಚರ್ಮದ ಅಲರ್ಜಿ ಅಥವಾ ಸೋಂಕಿಗೆ (Skin Infections) ದಾರಿಯಾಗಬಹುದು. ಇದಲ್ಲದೇ ರಾತ್ರಿ ಗಾಳಿ ಮತ್ತು ಬೆಳಕಿನ ಕೊರತೆಯಿಂದ ಬಟ್ಟೆಗಳು ಸರಿಯಾಗಿ ಒಣಗದೆ ತೇವಾಂಶದಿಂದ ಕೂಡಿದ್ದು, ಕೆಟ್ಟ ವಾಸನೆ ಬರಲು ಪ್ರಾರಂಭಿಸುತ್ತವೆ.

ಹಳೆಯ ಕಾಲದ ಪ್ರಾಯೋಗಿಕ ವ್ಯವಸ್ಥೆ:

ಹಳೆಯ ದಿನಗಳಲ್ಲಿ ಮನೆಗಳಲ್ಲಿ ವಿದ್ಯುತ್ (Electricity) ಸೌಲಭ್ಯ ಇರಲಿಲ್ಲ. ಕತ್ತಲೆಯಲ್ಲಿ ಬಟ್ಟೆ ಒಗೆಯುವಾಗ ಬಟ್ಟೆಯ ಮೇಲಿನ ಕೊಳಕು ಸರಿಯಾಗಿ ಕಾಣಿಸುತ್ತಿರಲಿಲ್ಲ. ಅಲ್ಲದೆ, ಕತ್ತಲೆಯಲ್ಲಿ ವಿಷಪೂರಿತ ಕೀಟಗಳು ಬಟ್ಟೆಯ ಮೇಲೆ ಕುಳಿತುಕೊಳ್ಳುವ ಅಪಾಯವೂ ಇತ್ತು. ಈ ಎಲ್ಲಾ ಕಾರಣಗಳಿಂದ ಹಿರಿಯರು ಹಗಲಿನಲ್ಲಿ ಮಾತ್ರ ಬಟ್ಟೆ ಒಗೆಯುವ ಪದ್ಧತಿಯನ್ನು ಜಾರಿಗೆ ತಂದರು.

ಹಗಲಿನ ಬೆಳಕು ಬಟ್ಟೆಗಳನ್ನು ಮತ್ತು ಮನೆಯ ವಾತಾವರಣವನ್ನು ನೈಸರ್ಗಿಕವಾಗಿ ಶುದ್ಧೀಕರಿಸುತ್ತದೆ. ಹೀಗಾಗಿ, ಮನೆಯಲ್ಲಿ ಶಾಂತಿ, ಆರೋಗ್ಯ ಮತ್ತು ಸಕಾರಾತ್ಮಕ ಶಕ್ತಿ ನೆಲೆಸಬೇಕೆಂದರೆ ಬಟ್ಟೆಗಳನ್ನು ಹಗಲಿನ ವೇಳೆಯಲ್ಲೇ ಒಗೆದು ಸೂರ್ಯನ ಬೆಳಕಿನಲ್ಲಿ ಒಣಗಿಸುವುದು ಶ್ರೇಷ್ಠ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Gold Rate: ಚಿನ್ನದ ಬೆಲೆ ಗ್ರಾಮ್​ಗೆ 70 ರೂ ಹೆಚ್ಚಳ; ಬೆಳ್ಳಿ ಬೆಲೆ ಬದಲಾವಣೆ ಇಲ್ಲ – Kannada News | Gold Price Today on 21st July 2026, Gold And Silver Rates In Bengaluru, Delhi, Mumbai | Latest News in Kannada

ನವದೆಹಲಿ, ಜುಲೈ 21: ಚಿನ್ನದ ಬೆಲೆಯ ಸತತ ಏರಿಕೆ ಮುಂದುವರಿದಿದೆ. ನಿನ್ನೆ ಗ್ರಾಮ್​ಗೆ 15 ರೂ ಹೆಚ್ಚಿದ್ದ ಚಿನ್ನದ ಬೆಲೆ (Gold Price) ಇವತ್ತು 70 ರೂ ಜಂಪ್ ಪಡೆದಿದೆ. ಕಳೆದ ಮೂರ್ನಾಲ್ಕು ದಿನದಲ್ಲಿ ಬಂಗಾರದ ದರ ಒಂದು ಗ್ರಾಮ್​ಗೆ 155 ರೂನಷ್ಟು ಹೆಚ್ಚಳಗೊಂಡಿದೆ. ನಿನ್ನೆ 5 ರೂ ಹೆಚ್ಚಿದ್ದ ಬೆಳ್ಳಿ ಬೆಲೆಯಲ್ಲಿ ಇವತ್ತು ಬದಲಾವಣೆ ಆಗಿಲ್ಲ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,32,200 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,44,220 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 23,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,32,200 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 23,500 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 24,000 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಜುಲೈ 21ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,422 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,220 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 10,816 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 235 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,422 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,220 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 235 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 13,220 ರೂ
  • ಚೆನ್ನೈ: 13,220 ರೂ
  • ಮುಂಬೈ: 13,220 ರೂ
  • ದೆಹಲಿ: 13,235 ರೂ
  • ಕೋಲ್ಕತಾ: 13,220 ರೂ
  • ಕೇರಳ: 13,220 ರೂ
  • ಅಹ್ಮದಾಬಾದ್: 13,225 ರೂ
  • ಜೈಪುರ್: 13,235 ರೂ
  • ಲಕ್ನೋ: 13,235 ರೂ
  • ಭುವನೇಶ್ವರ್: 13,220 ರೂ

ಇದನ್ನೂ ಓದಿ: ಎಥನಾಲ್ ಮಿಶ್ರಿತ ಪೆಟ್ರೋಲ್ ಯೋಜನೆಯನ್ನು ವೈಜ್ಞಾನಿಕವಾಗಿ, ಹಂತ ಹಂತವಾಗಿ ಜಾರಿಗೊಳಿಸಲಾಗಿದೆ: ಸಚಿವ ಸುರೇಶ್ ಗೋಪಿ

ವಿದೇಶಗಳಲ್ಲಿ 24 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 540 ರಿಂಗಿಟ್ (12,722 ರುಪಾಯಿ)
  • ದುಬೈ: 483 ಡಿರಾಮ್ (12,665 ರುಪಾಯಿ)
  • ಅಮೆರಿಕ: 132.50 ಡಾಲರ್ (12,763 ರುಪಾಯಿ)
  • ಸಿಂಗಾಪುರ: 177.70 ಸಿಂಗಾಪುರ್ ಡಾಲರ್ (13,267 ರುಪಾಯಿ)
  • ಕತಾರ್: 484.50 ಕತಾರಿ ರಿಯಾಲ್ (12,803 ರೂ)
  • ಸೌದಿ ಅರೇಬಿಯಾ: 499 ಸೌದಿ ರಿಯಾಲ್ (12,799 ರುಪಾಯಿ)
  • ಓಮನ್: 51.35 ಒಮಾನಿ ರಿಯಾಲ್ (12,846 ರುಪಾಯಿ)
  • ಕುವೇತ್: 40.42 ಕುವೇತಿ ದಿನಾರ್ (12,657 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 235 ರೂ
  • ಚೆನ್ನೈ: 240 ರೂ
  • ಮುಂಬೈ: 235 ರೂ
  • ದೆಹಲಿ: 235 ರೂ
  • ಕೋಲ್ಕತಾ: 235 ರೂ
  • ಕೇರಳ: 240 ರೂ
  • ಅಹ್ಮದಾಬಾದ್: 235 ರೂ
  • ಜೈಪುರ್: 235 ರೂ
  • ಲಕ್ನೋ: 235 ರೂ
  • ಭುವನೇಶ್ವರ್: 240 ರೂ
  • ಪುಣೆ: 235

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಪ್ರಶ್ನೆಪತ್ರಿಕೆ ಸೋರಿಕೆ ತಡೆಯುವುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ರಾಷ್ಟ್ರೀಯ ಜವಾಬ್ದಾರಿ: ಎನ್​ಡಿಎ ಸಭೆಯಲ್ಲಿ ಮೋದಿ – Kannada News | NEET Paper Leak: PM Modi Demands Harsh Punishments and Flawless Exam System

ನವದೆಹಲಿ, ಜುಲೈ 21: ಆಡಳಿತಾರೂಢ ಎನ್‌ಡಿಎ (NDA) ಸಂಸದೀಯ ಪಕ್ಷದ ‘ಮಂಗಲ್ ಮಿಲನ್’ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ನೀಟ್ (NEET) ಮತ್ತು ಇತರ ಪರೀಕ್ಷೆಗಳ ಪ್ರಶ್ನೆಪತ್ರಿಕೆ ಸೋರಿಕೆ ವಿವಾದದ ಕುರಿತು ಅತ್ಯಂತ ಗಂಭೀರವಾಗಿ ಮಾತನಾಡಿದ್ದಾರೆ. “ದೇಶದಲ್ಲಿ ಪ್ರಶ್ನೆಪತ್ರಿಕೆ ಸೋರಿಕೆಯನ್ನು ತಡೆಗಟ್ಟುವುದು ಸರ್ಕಾರದ ಕೇವಲ ಕರ್ತವ್ಯವಲ್ಲ, ಅದೊಂದು ‘ರಾಷ್ಟ್ರೀಯ ಜವಾಬ್ದಾರಿ’ ಎಂದು ಪ್ರಧಾನಿ ಮೋದಿ ಪ್ರತಿಪಾದಿಸಿದ್ದಾರೆ. ಸಭೆಯ ನಂತರ ಕೇಂದ್ರ ಸಚಿವ ಕಿರಣ್ ರಿಜಿಜು ಅವರು ಪ್ರಧಾನಿಯವರ ಮಾತುಗಳನ್ನು ಮಾಧ್ಯಮಗಳಿಗೆ ವಿವರಿಸಿದರು.

ಆರೋಪಿಗಳಿಗೆ ಅತ್ಯಂತ ಕಠಿಣ ಶಿಕ್ಷೆಯಾಗಲಿ
ಪರೀಕ್ಷಾ ಅಕ್ರಮದಲ್ಲಿ ಭಾಗಿಯಾಗಿರುವ ಅಪರಾಧಿಗಳಿಗೆ ಯಾವುದೇ ಕಾರಣಕ್ಕೂ ವಿನಾಯಿತಿ ನೀಡಬಾರದು ಎಂದಿರುವ ಪ್ರಧಾನಿ. ಪರೀಕ್ಷಾ ಪ್ರಕ್ರಿಯೆಯನ್ನು ಕಲುಷಿತಗೊಳಿಸಿ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡುವ ಕಿಡಿಗೇಡಿಗಳಿಗೆ ಕಾನೂನಿನಡಿಯಲ್ಲಿ ಸಿಗಬಹುದಾದ ಅತ್ಯಂತ ಕಠಿಣ ಶಿಕ್ಷೆಯನ್ನು ವಿಧಿಸಬೇಕು ಎಂದು ಪ್ರಧಾನಿ ಮೋದಿ ಖಡಕ್ ಆಗಿ ಸೂಚಿಸಿದ್ದಾರೆ.

ಭವಿಷ್ಯದಲ್ಲಿ ಯಾವುದೇ ರೀತಿಯ ಸೋರಿಕೆ ನಡೆಯದಂತೆ ಅತ್ಯಂತ ಪಾರದರ್ಶಕ ಹಾಗೂ ದೋಷರಹಿತ ಪರೀಕ್ಷಾ ವ್ಯವಸ್ಥೆಯನ್ನು ರೂಪಿಸಲು ಸರ್ಕಾರಿ ಮತ್ತು ಸಾಂಸ್ಥಿಕ ಮಟ್ಟದಲ್ಲಿ ಸಾಮೂಹಿಕ ಪ್ರಯತ್ನಗಳು ನಡೆಯಬೇಕೆಂದು ಕರೆ ನೀಡಿದ್ದಾರೆ. ಸಂಸತ್ತಿನ ಕಲಾಪಗಳು ಸುಗಮವಾಗಿ ನಡೆಯುವಂತೆ ಮಾಡಲು ಪ್ರಧಾನಿ ನಾಯಕರೊಂದಿಗೆ ಚರ್ಚಿಸಿದರು.

ಮತ್ತಷ್ಟು ಓದಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ದೆಹಲಿಯಲ್ಲಿ ತೀವ್ರ ಪ್ರತಿಭಟನೆ; ಅಮಿತ್ ಶಾ- ಧರ್ಮೇಂದ್ರ ಪ್ರಧಾನ್ ತುರ್ತು ಸಭೆ

ರಾಜಕೀಯ ಭಿನ್ನಾಭಿಪ್ರಾಯಗಳು ಏನೇ ಇರಲಿ, ದೇಶದ ಭವಿಷ್ಯ ಮತ್ತು ಯುವಜನತೆಯ ಕಲ್ಯಾಣಕ್ಕಾಗಿ ಕೆಲಸ ಮಾಡುವ ಜವಾಬ್ದಾರಿ ಪ್ರತಿಯೊಬ್ಬ ಸಂಸದರ ಮೇಲಿದೆ. ಶಾಸಕಾಂಗ ವ್ಯವಹಾರಗಳನ್ನು ಬೆಂಬಲಿಸಲು ಎನ್‌ಡಿಎ ಮೈತ್ರಿಕೂಟದ ಎಲ್ಲಾ ನಾಯಕರು ಒಗ್ಗಟ್ಟಿನಿಂದ ಇರಬೇಕು. ಹಾಗೆಯೇ ಸಂಸತ್ತಿನಲ್ಲಿ ವಿರೋಧ ಪಕ್ಷಗಳು ಸಹ ಗದ್ದಲ ಎಬ್ಬಿಸದೆ ರಚನಾತ್ಮಕವಾಗಿ ದೇಶದ ಹಿತದೃಷ್ಟಿಯಿಂದ ಭಾಗವಹಿಸಬೇಕು” ಎಂದು ಪ್ರಧಾನಿ ಮೋದಿ ಆಶಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

‘ಸಲ್ಮಾನ್ ಫಾರ್ಮ್‌ಹೌಸ್‌ಗೆ ಹೋಗೋದು ಸುಲಭ, ಆದ್ರೆ ವಾಪಸ್ ಬರೋದು ಭಾಯ್ ಇಷ್ಟ’ – Kannada News | Salman Khan Panvel Farmhouse Secrets: Aayush Sharma Reveals Entry Rules and Bhai Exit

ಬಾಲಿವುಡ್ ಸುಲ್ತಾನ್ ಸಲ್ಮಾನ್ ಖಾನ್ ಪನ್ವೇಲ್ ಫಾರ್ಮ್‌ಹೌಸ್ ಸದಾ ಸುದ್ದಿಯಲ್ಲಿರುತ್ತದೆ. ಸಿನಿಮಾ ತಾರೆಯರು ಹಾಗೂ ಆಪ್ತರಿಂದ ತುಂಬಿ ತುಳುಕುವ ಈ ಐಷಾರಾಮಿ ಫಾರ್ಮ್‌ಹೌಸ್ ಪ್ರವೇಶದ ಬಗ್ಗೆ ನಟನ ಸೋದರ ಭಾವ ಆಯುಷ್ ಶರ್ಮಾ ಇತ್ತೀಚಿನ ಸಂದರ್ಶನವೊಂದರಲ್ಲಿ ಅತ್ಯಂತ ಆಸಕ್ತಿದಾಯಕ ಸಂಗತಿಗಳನ್ನು ಹಂಚಿಕೊಂಡಿದ್ದಾರೆ.

ಪ್ರವೇಶಕ್ಕೂ ಮುನ್ನ ಸಲ್ಮಾನ್ ಪರ್ಮಿಷನ್ ಕಡ್ಡಾಯ

‘ದಿ ಲಲ್ಲನ್‌ಟಾಪ್’ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಆಯುಷ್, ‘ಸಲ್ಮಾನ್ ಖಾನ್ ಅವರ ಫಾರ್ಮ್‌ಹೌಸ್‌ಗೆ ಯಾರೂ ಅಷ್ಟು ಸುಲಭವಾಗಿ ಹೋಗಲು ಸಾಧ್ಯವಿಲ್ಲ. ಸ್ವತಃ ಸಲ್ಮಾನ್ ಅವರೇ ಆಹ್ವಾನ ನೀಡಿದವರಿಗೆ ಮಾತ್ರ ಅಲ್ಲಿಗೆ ಎಂಟ್ರಿ ಇರುತ್ತದೆ. ಭಾಯ್ ಅನುಮತಿಯಿಲ್ಲದೆ ಯಾರೂ ಆ ಜಾಗಕ್ಕೆ ಕಾಲಿಡಲು ಸಾಧ್ಯವಿಲ್ಲ’ ಎಂದಿದ್ದಾರೆ.

ಹೋಗೋದು ನಿಮ್ಮಿಷ್ಟ, ವಾಪಸ್ ಬರೋದು ಸಲ್ಮಾನ್ ಇಷ್ಟ

ಫಾರ್ಮ್‌ಹೌಸ್ ಒಳಗಿನ ಮತ್ತೊಂದು ಮಜಾದ ವಿಚಾರವನ್ನು ಹಂಚಿಕೊಂಡ ಆಯುಷ್, ‘ಅಲ್ಲಿಗೆ ಹೋದ ಮೇಲೆ ಇನ್ನೊಂದು ಕುತೂಹಲಕಾರಿ ಘಟನೆ ನಡೆಯುತ್ತದೆ. ಅತಿಥಿಗಳು ತಮ್ಮ ಇಷ್ಟದಂತೆ ಅಲ್ಲಿಗೆ ಹೋಗಬಹುದು. ಆದರೆ, ಅಲ್ಲಿಂದ ಯಾವಾಗ ಹೊರಡಬೇಕು ಎಂಬುದನ್ನು ಸಲ್ಮಾನ್ ಖಾನ್ ಅವರೇ ನಿರ್ಧರಿಸುತ್ತಾರೆ! ಅವರು ಗ್ರೀನ್ ಸಿಗ್ನಲ್ ಕೊಡುವವರೆಗೂ ಅತಿಥಿಗಳು ಅಲ್ಲೇ ಕಾಯಬೇಕಾಗುತ್ತದೆ’ ಎಂದು ನಗುತ್ತಾ ರಹಸ್ಯ ಬಿಚ್ಚಿಟ್ಟಿದ್ದಾರೆ.

ಇದನ್ನೂ ಓದಿ: ಸಲ್ಮಾನ್ ಖಾನ್ ವಿಡಿಯೋ ನೋಡಿ ಅಭಿಮಾನಿಗಳಲ್ಲಿ ಆತಂಕ: ಸಲ್ಲುಗೆ ಕಾಡುತ್ತಿದೆಯೇ ಅನಾರೋಗ್ಯ?

ಮೊದಲ ಭೇಟಿಯಲ್ಲೇ ಕಿವಿಮಾತು ಹೇಳಿದ್ದ ಭಾಯ್‌ಜಾನ್

ಇದೇ ಸಂದರ್ಶನದಲ್ಲಿ ಆಯುಷ್, ತಾವು ನಟನಾಗಲು ಹೆಣಗಾಡುತ್ತಿದ್ದ ದಿನಗಳಲ್ಲಿ ಸಲ್ಮಾನ್ ಖಾನ್ ಅವರನ್ನು ಮೊದಲ ಬಾರಿಗೆ ಭೇಟಿಯಾದ ಕ್ಷಣವನ್ನು ನೆನಪಿಸಿಕೊಂಡಿದ್ದಾರೆ. ‘ಆಗ ಸಲ್ಮಾನ್ ನನ್ನನ್ನು ನೋಡಿ, ನಿನ್ನಲ್ಲಿ ಉತ್ತಮ ನಟನಾಗುವ ಸಾಮರ್ಥ್ಯವಿದೆ. ಆದರೆ ನೀನಿನ್ನೂ ಸಂಪೂರ್ಣವಾಗಿ ಸಿದ್ಧವಾಗಿಲ್ಲ ಎಂದು ನೇರವಾಗಿಯೇ ಹೇಳಿದರು. ಅಲ್ಲದೆ, ನಟನೆಯ ಜೊತೆಗೆ ಇತರ ವಿಷಯಗಳ ಮೇಲೂ ಗಮನಹರಿಸಿ ಶ್ರಮಪಡುವಂತೆ ಸಲಹೆ ನೀಡಿದ್ದರು’ ಎಂದು ಹಳೇ ನೆನಪನ್ನು ಹಂಚಿಕೊಂಡಿದ್ದಾರೆ.

ಖಾಸಗಿ ಬದುಕಿನ ಝಲಕ್

ಸಲ್ಮಾನ್ ಖಾನ್ ಅವರ ಸಹೋದರಿ ಅರ್ಪಿತಾ ಖಾನ್ ಮತ್ತು ಆಯುಷ್ ಶರ್ಮಾ ಅವರ ವಿವಾಹವು ನವೆಂಬರ್ 18, 2014ರಂದು ಹೈದರಾಬಾದ್‌ನ ಐತಿಹಾಸಿಕ ಫಲಕ್ನುಮಾ ಅರಮನೆಯಲ್ಲಿ ನಡೆದಿತ್ತು. ಪ್ರಸ್ತುತ ಈ ದಂಪತಿಗೆ ಅಹಿಲ್ ಮತ್ತು ಆಯತ್ ಎಂಬ ಇಬ್ಬರು ಮಕ್ಕಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ರೋಹಿತ್-ಕೊಹ್ಲಿಯನ್ನು ಕೈಬಿಡುವ ಧೈರ್ಯ ಮಾಡಬೇಡಿ: ಅಶ್ವಿನ್ ಎಚ್ಚರಿಕೆ – Kannada News | Rohit Sharma, Virat Kohli Are Untouchable: R Ashwin Blasts Critics

ಟೀಮ್ ಇಂಡಿಯಾದ ಅನುಭವಿ ಆಟಗಾರರಾದ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಅವರ ಫಾರ್ಮ್ ಹಾಗೂ ತಂಡದಲ್ಲಿನ ಸ್ಥಾನದ ಬಗ್ಗೆ ಕೇಳಿಬರುತ್ತಿರುವ ಟೀಕೆಗಳಿಗೆ ಮಾಜಿ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ತಮ್ಮದೇ ಶೈಲಿಯಲ್ಲಿ ಖಡಕ್ ಉತ್ತರ ನೀಡಿದ್ದಾರೆ. ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ಮಾತನಾಡಿದ ಅಶ್ವಿನ್, ರೋಹಿತ್ ಮತ್ತು ಕೊಹ್ಲಿ ಅವರ ಸ್ಥಾನವನ್ನು ಮುಟ್ಟಲು ಯಾರಿಂದಲೂ ಸಾಧ್ಯವಿಲ್ಲ. ಹೀಗಾಗಿ ಅವರನ್ನು ತಂಡದಿಂದ ಕೈ ಬಿಡುವ ಧೈರ್ಯ ಮಾಡಬೇಡಿ ಎಂದು ಎಚ್ಚರಿಸಿದ್ದಾರೆ.

ಅಶ್ವಿನ್ ಪ್ರಕಾರ, ಈ ಇಬ್ಬರು ದಿಗ್ಗಜರನ್ನು ಪ್ರಸ್ತುತ ಸನ್ನಿವೇಶದಲ್ಲಿ ತಂಡದಿಂದ ಕೈಬಿಡಲು ಸಾಧ್ಯವೇ ಇಲ್ಲ. ಇದಕ್ಕೆ ಮುಖ್ಯ ಕಾರಣಗಳು ಈ ಕೆಳಗಿನಂತಿವೆ…

ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಬೆಟ್ಟದಷ್ಟು ರನ್ ಗಳಿಸಿ ದಶಕಗಳಿಂದ ಭಾರತ ತಂಡವನ್ನು ಮುನ್ನಡೆಸಿದ್ದಾರೆ. ಇದೀಗ ರೋಹಿತ್ ಶರ್ಮಾ ಅವರನ್ನು ಕೈ ಬಿಡುವ ಮಾತುಗಳು ಕೇಳಿ ಬರುತ್ತಿದೆ. ಆದರೆ ಇಲ್ಲಿ ಗಮನಿಸಬೇಕಾದ ಮುಖ್ಯ ಅಂಶ ಎಂದರೆ, ರೋಹಿತ್ ಒಬ್ಬರೇ ಏಕದಿನ ಕ್ರಿಕೆಟ್‌ನಲ್ಲಿ ಸುಮಾರು 12,000 ರನ್‌ಗಳಿಸಿದ್ದಾರೆ.

ಇಂತಹ ದಿಗ್ಗಜ ಆಟಗಾರರನ್ನು ಕೇವಲ ಕೆಲವು ಪಂದ್ಯಗಳ ಕಳಪೆ ಫಾರ್ಮ್ ಆಧರಿಸಿ ದಿಢೀರನೆ ತಂಡದಿಂದ ಹೊರಹಾಕುವ ಧೈರ್ಯ ಯಾವುದೇ ಆಯ್ಕೆಗಾರರಿಗೆ ಇರುವುದಿಲ್ಲ. ಅಂತಹ ಧೈರ್ಯವನ್ನು ಸಹ ಮಾಡಬೇಡಿ ಎಂದು ಅಶ್ವಿನ್ ಕಿವಿಮಾತು ಹೇಳಿದ್ದಾರೆ.

ಭಾರಿ ಆಕ್ರೋಶದ ಎಚ್ಚರಿಕೆ:

ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಅವರಿಗೆ ಭಾರತ ಸೇರಿದಂತೆ ವಿಶ್ವದಾದ್ಯಂತ ಕೋಟ್ಯಂತರ ನಿಷ್ಠಾವಂತ ಅಭಿಮಾನಿಗಳ ದೊಡ್ಡ ಪಡೆಯೇ ಇದೆ.

ಒಂದು ವೇಳೆ ಆಯ್ಕೆ ಸಮಿತಿಯು ಇವರಿಬ್ಬರನ್ನು ತಂಡದಿಂದ ಕೈಬಿಡುವ ತೀರ್ಮಾನಕ್ಕೆ ಬಂದರೆ, ದೇಶಾದ್ಯಂತ ಅಭಿಮಾನಿಗಳಿಂದ ತಡೆಯಲು ಸಾಧ್ಯವಾಗದಂತಹ ಭಾರಿ ಆಕ್ರೋಶ ವ್ಯಕ್ತವಾಗುತ್ತದೆ.

ಇವರಿಬ್ಬರ ಅಭಿಮಾನಿಗಳ ಸಾರ್ವಜನಿಕ ಆಕ್ರೋಶವು ಭಾರತೀಯ ಕ್ರಿಕೆಟ್ ಮಂಡಳಿಯ ಮೇಲ್ಛಾವಣಿಯನ್ನೇ ಉರುಳಿಸುವಷ್ಟು ತೀವ್ರವಾಗಿರುತ್ತದೆ. ಹೀಗಾಗಿ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿಯನ್ನು ತಂಡದಿಂದ ಕೈ ಬಿಡುವಂತಹ ನಿರ್ಧಾರಕ್ಕೆ ಕೈ ಹಾಕಬೇಡಿ  ಅಶ್ವಿನ್ ಎಚ್ಚರಿಸಿದ್ದಾರೆ.

ಅಶ್ವಿನ್ ಪ್ರಕಾರ, ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಮುಂಬರುವ ಏಕದಿನ ವಿಶ್ವಕಪ್ ಬಳಿಕ ನಿವೃತ್ತಿ ಘೋಷಿಸಲಿದ್ದಾರೆ. ಅಲ್ಲಿಯವರೆಗೆ ಅವರು ಭಾರತ ತಂಡದ ಅವಿಭಾಜ್ಯ ಅಂಗವಾಗಿ ಮುಂದುವರೆಯಲಿ. ಕೆಲ ಪಂದ್ಯಗಳಲ್ಲಿನ ಕಳಪೆ ಫಾರ್ಮ್ ಅನ್ನೇ ಮುಂದಿಟ್ಟುಕೊಂಡು ಇಬ್ಬರು ದಿಗ್ಗಜರನ್ನು ಟಾರ್ಗೆಟ್ ಮಾಡುವುದು ಸರಿಯಾದ ನಡೆಯಲ್ಲ. ಹೀಗಾಗಿ ಇಬ್ಬರ ವಿಷಯದಲ್ಲಿ ಆಯ್ಕೆ ಸಮಿತಿ ಎಚ್ಚರಿಕೆಯಿಂದ ಇರಬೇಕೆಂದು ಅಶ್ವಿನ್ ಮಾರ್ಮಿಕವಾಗಿ ತಿಳಿಸಿದ್ದಾರೆ.

ಇದನ್ನೂ ಓದಿ: ‘ಸೂಪರ್ ಜೈಂಟ್ಸ್’ ಪರ ಕಣಕ್ಕಿಳಿಯಲಿದ್ದಾರೆ ಸ್ಮೃತಿ ಮಂಧಾನ!

ಒಟ್ಟಾರೆಯಾಗಿ ಹೇಳುವುದಾದರೆ, ಟೀಮ್ ಇಂಡಿಯಾದಲ್ಲಿ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಅವರ ಸ್ಥಾನ ಕೇವಲ ಫಾರ್ಮ್ ಮೇಲೆ ನಿರ್ಧಾರವಾಗುವುದಿಲ್ಲ, ಬದಲಿಗೆ ಅವರು ಭಾರತೀಯ ಕ್ರಿಕೆಟ್‌ಗೆ ನೀಡಿರುವ ಕೊಡುಗೆ ಮತ್ತು ಅವರ ಹಿಂದಿರುವ ಕೋಟ್ಯಂತರ ಅಭಿಮಾನಿಗಳ ಶಕ್ತಿಯೇ ಅವರನ್ನು ರಕ್ಷಿಸುತ್ತದೆ. ಹೀಗಾಗಿ ಆಯ್ಕೆಗಾರರು ಎಚ್ಚರವಹಿಸುವುದು ಉತ್ತಮ ಎಂದು ಅಶ್ವಿನ್ ಬಹಿರಂಗ ಹೇಳಿಕೆಯ ಸ್ಪಷ್ಟ ಸಂದೇಶ ರವಾನಿಸಿದ್ದಾರೆ.

Source link

Exit mobile version