Headlines

K Annamalai: ಹೊಸ ರಾಜಕೀಯ ಆಂದೋಲನ ಆರಂಭಿಸುವುದಾಗಿ ಘೋಷಿಸಿದ ಕೆ ಅಣ್ಣಾಮಲೈ – Kannada News

ಚೆನ್ನೈ, ಜೂನ್ 05: ಬಿಜೆಪಿಗೆ ರಾಜೀನಾಮೆ ಸಲ್ಲಿಸಿರುವ ಕೆ ಅಣ್ಣಾಮಲೈ(K Annamalai) ಹೊಸ ರಾಜಕೀಯ ಆಂದೋಲನ ಆರಂಭಿಸುವುದಾಗಿ  ಘೋಷಿಸಿದ್ದಾರೆ. ತಮ್ಮ ರಾಜಕೀಯ ಪ್ರಯಾಣದಲ್ಲಿ ಹೊಸ ಅಧ್ಯಾಯ ಆರಂಭಿಸಲಿದ್ದಾರೆ. ನಾನು ನನ್ನ ರಾಜೀನಾಮೆಯನ್ನು ಸಲ್ಲಿಸಿದ್ದೇನೆ. ಇಂದಿನಿಂದ ಹೊಸ ಪ್ರಯಾಣ ಪ್ರಾರಂಭವಾಗುತ್ತದೆ. ನಾನು ಹೊಸ ರಾಜಕೀಯ ಆಂದೋಲನ ಪ್ರಾರಂಭಿಸುತ್ತಿದ್ದೇನೆ ಮತ್ತು ಈ ಪ್ರಯತ್ನದಲ್ಲಿ ನಿಮ್ಮೆಲ್ಲರ ಬೆಂಬಲವನ್ನು ನಾನು ಬಯಸುತ್ತೇನೆ ಎಂದು ಅಣ್ಣಾಮಲೈ ಹೇಳಿದರು. ತಮಿಳುನಾಡು ರಾಜಕೀಯ ವಲಯದಲ್ಲಿ ಕಳೆದ ಕೆಲವು ದಿನಗಳಿಂದ ಹರಿದಾಡುತ್ತಿದ್ದ ತೀವ್ರ ಊಹಾಪೋಹಗಳಿಗೆ ಕೊನೆಗೂ ತೆರೆ ಬಿದ್ದಿದೆ….

Read More

Gold Rate: ಚಿನ್ನದ ಬೆಲೆ 2 ದಿನದಲ್ಲಿ 45 ರು ಇಳಿಕೆ; ಬೆಳ್ಳಿ ಬೆಲೆ 5-10 ರೂ ಕಡಿಮೆ – Kannada News

ನವದೆಹಲಿ, ಜೂನ್ 5: ಭಾರತದಲ್ಲಿ ಚಿನ್ನದ ಬೆಲೆಯ (Gold Rates) ಸತತ ಇಳಿಕೆ ಆಗುತ್ತಿದೆ. ನಿನ್ನೆ ಗುರುವಾರ ಗ್ರಾಮ್​ಗೆ 10 ರೂ ಇಳಿದಿದ್ದ ಆಭರಣ ಚಿನ್ನದ ಬೆಲೆ ಇವತ್ತು ಶುಕ್ರವಾರ 35 ರೂ ಕಡಿಮೆಗೊಂಡಿದೆ. ಎರಡು ದಿನದಲ್ಲಿ 45 ರುಗಳಷ್ಟು ಬೆಲೆ ತಗ್ಗಿದೆ. ಆದರೆ, ವಿದೇಶಗಳಲ್ಲಿ ಹಲವೆಡೆ ಇದರ ಬೆಲೆಯಲ್ಲಿ ಅಲ್ಪ ಏರಿಕೆ ಆಗಿದೆ. ಇನ್ನು, ಬೆಳ್ಳಿ ಬೆಲೆ ಹಲವು ದಿನಗಳ ಬಳಿಕ ಕಡಿಮೆ ಆಗಿದೆ. ಈ ಬಿಳಿ ಲೋಹ ಗ್ರಾಮ್​ಗೆ 5ರಿಂದ 10 ರೂಗಳಷ್ಟು ತಗ್ಗಿದೆ….

Read More

Tulsi Mala: ಅನುಷ್ಕಾ ಶರ್ಮಾ ಕತ್ತಿನಲ್ಲಿರುವ ತುಳಸಿ ಮಾಲೆ ಗಮನಿಸಿದ್ದೀರಾ? ಧರಿಸುವುದರ ಹಿಂದಿನ ಅಸಲಿ ಕಾರಣ ಇಲ್ಲಿದೆ – Kannada News

ಅನುಷ್ಕಾ ಶರ್ಮಾ ತುಳಸಿ ಮಾಲೆ Image Credit source: Pinterest ಬಾಲಿವುಡ್ ನಟಿ ಅನುಷ್ಕಾ ಶರ್ಮಾ ತಮ್ಮ ನಟನೆ, ವಿಭಿನ್ನ ಫ್ಯಾಷನ್ ಸೆನ್ಸ್ ಹಾಗೂ ಸ್ಟೈಲ್ ಸ್ಟೇಟ್‌ಮೆಂಟ್‌ನಿಂದಲೇ ಸದಾ ಸುದ್ದಿಯಲ್ಲಿರುವವರು. ಆದರೆ, ಇತ್ತೀಚಿನ ದಿನಗಳಲ್ಲಿ ಅವರ ಸಾರ್ವಜನಿಕ ಉಡುಗೆ-ತೊಡುಗೆ ಹಾಗೂ ಶೈಲಿಯಲ್ಲಿ ಭಾರಿ ಬದಲಾವಣೆ ಕಾಣಿಸುತ್ತಿದೆ. ಇತ್ತೀಚೆಗೆ ನಡೆದ ಐಪಿಎಲ್ 2026ರ ಫೈನಲ್ ಪಂದ್ಯದಲ್ಲಿ ಪತಿ ವಿರಾಟ್ ಕೊಹ್ಲಿ ಅವರನ್ನು ಹುರಿದುಂಬಿಸಲು ಬಂದಿದ್ದ ಅನುಷ್ಕಾ ಅವರ ಕತ್ತಿನಲ್ಲಿ ‘ತುಳಸಿ ಮಾಲೆ‘ (Tulsi Mala) ಪ್ರಮುಖವಾಗಿ ಗಮನ ಸೆಳೆದಿತ್ತು….

Read More

ರಾಮಲಿಂಗಾರೆಡ್ಡಿ ನನಗೆ ತುಂಬಾ ಆತ್ಮೀಯರು, ಸಮಸ್ಯೆ ಬಗೆಹರಿಸುತ್ತೇನೆ: ಸಿಎಂ ಡಿಕೆಶಿ – Kannada News

ಬೆಂಗಳೂರು, ಜೂ.5: ಖಾತೆ ಹಂಚಿಕೆಯ ಬೆನ್ನಲ್ಲೇ ಹಿರಿಯ ನಾಯಕ ರಾಮಲಿಂಗಾ ರೆಡ್ಡಿ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವುದು ಕಾಂಗ್ರೆಸ್ ವಲಯದಲ್ಲಿ ತಲ್ಲಣ ಮೂಡಿಸಿದೆ. ಇದರ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಕ್ಷಣವೇ ಅಖಾಡಕ್ಕಿಳಿದಿದ್ದು, ಬಂಡಾಯ ಶಮನಗೊಳಿಸಲು ‘ಡ್ಯಾಮೇಜ್ ಕಂಟ್ರೋಲ್’ ಕಸರತ್ತು ಆರಂಭಿಸಿದ್ದಾರೆ. ರಾಮಲಿಂಗಾ ರೆಡ್ಡಿ ಅವರ ರಾಜೀನಾಮೆ ನಿರ್ಧಾರದ ಕುರಿತು ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಸಿಎಂ ಡಿ.ಕೆ. ಶಿವಕುಮಾರ್, “ರಾಮಲಿಂಗಾರೆಡ್ಡಿ ಅವರು ನನಗೆ ತುಂಬಾ ಆತ್ಮೀಯರು. ಪಕ್ಷ ಮತ್ತು ಸರ್ಕಾರದ ಬೆಳವಣಿಗೆಯಲ್ಲಿ…

Read More

ಬೆಂಗಳೂರು ಟ್ರಾಫಿಕ್ ಪೋಲೀಸರು ಇನ್ಮುಂದೆ ಕೂಲ್ ಕೂಲ್! ಬಿಸಿಲ ಬೇಗೆಯ ನಿಯಂತ್ರಣಕ್ಕೆ 20 AC ಹೆಲ್ಮೆಟ್ ವಿತರಣೆ – Kannada News

ಬಿಸಿಲ ಬೇಗೆಯ ನಿಯಂತ್ರಣಕ್ಕೆ 20 AC ಹೆಲ್ಮೆಟ್ ವಿತರಣೆ Image Credit source: The New Indian Express ಬೆಂಗಳೂರು, ಜೂನ್ 05: ಹೆಚ್ಚುತ್ತಿರುವ ತಾಪಮಾನ ಮತ್ತು ಬಿಸಿಲಿನ ಬೇಗೆಯಿಂದ ರಸ್ತೆಗಿಳಿದು ಕರ್ತವ್ಯ ನಿರ್ವಹಿಸುವ ಸಂಚಾರಿ ಪೊಲೀಸರನ್ನು ರಕ್ಷಿಸಲು ಬೆಂಗಳೂರು ಉತ್ತರ ಮಹಾನಗರ ಪಾಲಿಕೆ (BNCC) ಮಹತ್ವದ ಹೆಜ್ಜೆಯನ್ನಿಟ್ಟಿದೆ. ಪೈಲಟ್ ಯೋಜನೆಯಡಿಯಲ್ಲಿ ನಗರದ ಸಂಚಾರಿ ಪೊಲೀಸ್ ಸಿಬ್ಬಂದಿಗೆ AC ಹೆಲ್ಮೆಟ್‌ಗಳನ್ನು ವಿತರಿಸಲಾಗಿದೆ. ಮುಖ್ಯಾಂಶಗಳು ಬೆಂಗಳೂರು ಸಂಚಾರಿ ಪೊಲೀಸ್ ಸಿಬ್ಬಂದಿಗೆ ಬಿಎನ್‌ಸಿಸಿಯಿಂದ ಹೈಟೆಕ್ ಎಸಿ ಹೆಲ್ಮೆಟ್‌ಗಳ ವಿತರಣೆ. ಮೊದಲ…

Read More

ಕಾಂಗ್ರೆಸ್‌ನಲ್ಲಿ ಆರದ ಖಾತೆ ಕಿಚ್ಚು: ರಾಮಲಿಂಗಾ ರೆಡ್ಡಿ ರಾಜೀನಾಮೆ ಬೆನ್ನಲ್ಲೇ ಸಚಿವ ಕೆಎಚ್ ಮುನಿಯಪ್ಪ ಬಹಿರಂಗ ಅಸಮಾಧಾನ – Kannada News

ಬೆಂಗಳೂರು, ಜೂನ್ 5: ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ನೇತೃತ್ವದ ಸಂಪುಟದಲ್ಲಿ ಖಾತೆ ಹಂಚಿಕೆ ಬೆನ್ನಲ್ಲೇ ಸೃಷ್ಟಿಯಾಗಿರುವ ಭಿನ್ನಮತ ಈಗ ಮತ್ತಷ್ಟು ತೀವ್ರ ಸ್ವರೂಪ ಪಡೆದುಕೊಳ್ಳುವ ಸುಳಿವು ಕಾಣಿಸಿದೆ. ಹಿರಿಯ ನಾಯಕ ರಾಮಲಿಂಗಾ ರೆಡ್ಡಿ ಅವರು ಸಚಿವ ಸ್ಥಾನದ ರಾಜೀನಾಮೆ ನೀಡಿದ ಬೆನ್ನಲ್ಲೇ, ಮತ್ತೊಬ್ಬ ಹಿರಿಯ ಮುಖಂಡ ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಕೆಎಚ್ ಮುನಿಯಪ್ಪ (KH Muniyappa) ತಮಗೆ ನೀಡಿರುವ ಖಾತೆ ಬಗ್ಗೆ ಬಹಿರಂಗವಾಗಿ ತೀವ್ರ ಅಸಮಾಧಾನ ಹೊರಹಾಕಿದ್ದಾರೆ. ಖಾತೆ…

Read More

ಭಾರತೀಯ ಷೇರು ಮಾರುಕಟ್ಟೆಯಲ್ಲಿ ಸೆಬಿ ನೊಂದಣಿ ಇಲ್ಲದೇ ಎನ್​ಆರ್​ಐಗಳಿಗೆ ಹೂಡಿಕೆ ಮಿತಿ ಹೆಚ್ಚಳ – Kannada News

ನವದೆಹಲಿ, ಜೂನ್ 5: ಎನ್‌ಆರ್‌ಐಗಳು (ಅನಿವಾಸಿ ಭಾರತೀಯರು) ಮತ್ತು ಒಸಿಐಗಳು (OCI – ಸಾಗರೋತ್ತರ ಭಾರತೀಯ ನಾಗರಿಕರು) ಸೆಬಿ (SEBI) ಬಳಿ ಪ್ರತ್ಯೇಕವಾಗಿ ನೋಂದಾಯಿಸಿಕೊಳ್ಳುವ ಅಗತ್ಯವಿಲ್ಲದೇ, ಭಾರತೀಯ ಷೇರು ಮಾರುಕಟ್ಟೆಯಲ್ಲಿ (stock market) ನೇರವಾಗಿ ಹೂಡಿಕೆ ಮಾಡಲು ಇರುವ ಹಣದ ಮಿತಿಯನ್ನು ಸರ್ಕಾರ ಹೆಚ್ಚಿಸುತ್ತಿದೆ. ಆರ್​ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ ಅವರು ಎಂಪಿಸಿ ಸಭೆ ನಂತರದ ಸುದ್ದಿಗೋಷ್ಠಿಯಲ್ಲಿ ಈ ವಿಚಾರವನ್ನು ಹೊರಗೆಡವಿದ್ದಾರೆ. ಈವರೆಗೆ ಇಂತಹ ಹೂಡಿಕೆಗೆ ಕಟ್ಟುನಿಟ್ಟಾದ ಮಿತಿಗಳಿದ್ದವು. ಆ ಮಿತಿಗಳನ್ನು ಸಡಿಲಗೊಳಿಸುವುದರಿಂದ, ಅನಿವಾಸಿ ಭಾರತೀಯರಿಗೆ ಭಾರತದ…

Read More

ಎಐ ಮ್ಯಾಜಿಕ್: ಮೇಘನಾ ರಾಜ್ ಕೈ ಹಿಡಿದು ಪ್ರೀತಿಯಿಂದ ನೋಡಿದ ಚಿರು

ಕನ್ನಡ ಚಿತ್ರರಂಗದ ಖ್ಯಾತ ನಟಿ ಮೇಘನಾ ರಾಜ್ ಅವರ ಜೀವನದಲ್ಲಿ ಎಐ ತಂತ್ರಜ್ಞಾನವು ಹೊಸದೊಂದು ಭಾವನಾತ್ಮಕ ಮ್ಯಾಜಿಕ್ ಸೃಷ್ಟಿಸಿದೆ. ಅಗಲಿದ ಪತಿ ಚಿರಂಜೀವಿ ಸರ್ಜಾ ಅವರನ್ನು ಡಿಜಿಟಲ್ ರೂಪದಲ್ಲಿ ಮತ್ತೆ ತಂದುಕೊಟ್ಟಿದೆ. (AI Image) ಈ ಅಪರೂಪದ ಚಿತ್ರದಲ್ಲಿ ಚಿರು ಮತ್ತು ಮೇಘನಾ ಪರಸ್ಪರ ಪ್ರೀತಿಯಿಂದ ಕಣ್ಣಿಟ್ಟು ನೋಡುತ್ತಿರುವುದನ್ನು ಕಾಣಬಹುದು. ಇಬ್ಬರ ಮುಖದಲ್ಲಿನ ನಗು ಪ್ರತಿಯೊಬ್ಬರ ಹೃದಯ ಸ್ಪರ್ಶಿಸುವಂತಿದೆ. (AI Image) ಚಿರು ಅಗಲಿಕೆಯ ನಂತರ ಮೇಘನಾ ಒಂಟಿಯಾಗಿದ್ದರು. ಆದರೆ ಇತ್ತೀಚಿನ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ತಂತ್ರಜ್ಞಾನವು ಈ…

Read More

Optical Illusion: ನಿಮ್ಮದು ಹದ್ದಿನ ಕಣ್ಣಾಗಿದ್ರೆ ಈ ಚಿತ್ರದಲ್ಲಿರುವ ಮುಖಗಳನ್ನು ಗುರುತಿಸಿ – Kannada News

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: elle.hu ಸಾಮಾಜಿಕ ಜಾಲತಾಣದಲ್ಲಿ ಕಣ್ಣು ಮತ್ತು ಮೆದುಳಿಗೆ ಸವಾಲೊಡ್ಡುವ ಕುತೂಹಲಕಾರಿ ಆಪ್ಟಿಕಲ್‌ ಇಲ್ಯೂಷನ್‌ (Optical Illusion) ಚಿತ್ರಗಳು ಆಗಾಗ ಹರಿದಾಡುವುದಿದೆ. ಕೆಲವು ಚಿತ್ರಗಳು ನಿಮ್ಮ ಯೋಚನಾ ಸಾಮರ್ಥ್ಯವನ್ನು ಪರೀಕ್ಷಿಸುವಂತಿರುತ್ತವೆ. ನಿಮ್ಮ ಕಣ್ಣಿಗೆ ನಿಜವೆಂದು ಕಾಣುವ ಚಿತ್ರದಲ್ಲಿ ಏನೋ ಒಂದು ಅಡಗಿರುತ್ತವೆ. ಹೀಗಾಗಿ ಈ ಟ್ರಿಕ್ಕಿ ಒಗಟನ್ನು ಬಿಡಿಸಲು ಕೆಲವರು ತುಂಬಾ ಸಮಯ ತೆಗೆದುಕೊಳ್ಳುತ್ತಾರೆ. ಇದೀಗ ವೈರಲ್ ಆಗಿರುವ ಚಿತ್ರದಲ್ಲಿ ಹೂದಾನಿಯ ಮುಂಭಾಗದಲ್ಲಿ ಮಹಿಳೆಯೊಬ್ಬಳು ನಿಂತು ಕೊಂಡಿದ್ದಾಳೆ. ಇಲ್ಲಿ ಎಷ್ಟು ಮುಖಗಳಿವೆ…

Read More

ಬೆಂಗಳೂರಿನಲ್ಲಿ ರಾಮಲಿಂಗಾ ರೆಡ್ಡಿ ಬೆಂಬಲಿಗರಿಂದ ಭಾರಿ ಪ್ರತಿಭಟನೆ – Kannada News

ಬೆಂಗಳೂರು, ಜೂನ್ 5: ರಾಮಲಿಂಗಾ ರೆಡ್ಡಿ ರಾಜೀನಾಮೆಯಿಂದ ಕೆರಳಿದ ಬೆಂಬಲಿಗರು, ಬೆಂಗಳೂರಿನ ಕೋರಮಂಗಲದಲ್ಲಿರುವ ಅವರ ಕಚೇರಿ ಮುಂಭಾಗದಲ್ಲಿ ಭಾರಿ ಪ್ರತಿಭಟನೆ ನಡೆಸಿದರು. ರಾಮಲಿಂಗಾ ರೆಡ್ಡಿ ಅವರಿಗೆ ಅನ್ಯಾಯವಾಗಿದೆ ಎಂದು ಘೋಷಣೆಗಳನ್ನು ಕೂಗಿದ ಬೆಂಬಲಿಗರು, ಅವರ ನಿರ್ಧಾರಕ್ಕೆ ಬೆಂಬಲ ವ್ಯಕ್ತಪಡಿಸಿದರು. ಜಲಸಂಪನ್ಮೂಲ ಖಾತೆ ನೀಡಲಾಗಿದ್ದರೂ, ನಗರಾಭಿವೃದ್ಧಿ ಖಾತೆ ಬಯಸಿದ್ದ ರೆಡ್ಡಿ ಅವರಿಗೆ ಖಾತೆ ಬದಲಾವಣೆಯಿಂದ ನೋವಾಗಿದ್ದು, ಆತ್ಮಸಾಕ್ಷಿಗೆ ವಿರುದ್ಧವಾಗಿ ಕೆಲಸ ಮಾಡಲಾರೆ ಎಂದು ರಾಜೀನಾಮೆ ನೀಡಿದ್ದಾರೆ. ಪ್ರತಿಭಟನೆಯ ಸಂದರ್ಭದಲ್ಲಿ ಬೆಂಬಲಿಗರು ರಾಮಲಿಂಗಾ ರೆಡ್ಡಿ ಕಾರಿಗೆ ಅಡ್ಡಬಿದ್ದು, ನ್ಯಾಯಕ್ಕಾಗಿ ಆಗ್ರಹಿಸಿದರು….

Read More