K Annamalai: ಹೊಸ ರಾಜಕೀಯ ಆಂದೋಲನ ಆರಂಭಿಸುವುದಾಗಿ ಘೋಷಿಸಿದ ಕೆ ಅಣ್ಣಾಮಲೈ – Kannada News
ಚೆನ್ನೈ, ಜೂನ್ 05: ಬಿಜೆಪಿಗೆ ರಾಜೀನಾಮೆ ಸಲ್ಲಿಸಿರುವ ಕೆ ಅಣ್ಣಾಮಲೈ(K Annamalai) ಹೊಸ ರಾಜಕೀಯ ಆಂದೋಲನ ಆರಂಭಿಸುವುದಾಗಿ ಘೋಷಿಸಿದ್ದಾರೆ. ತಮ್ಮ ರಾಜಕೀಯ ಪ್ರಯಾಣದಲ್ಲಿ ಹೊಸ ಅಧ್ಯಾಯ ಆರಂಭಿಸಲಿದ್ದಾರೆ. ನಾನು ನನ್ನ ರಾಜೀನಾಮೆಯನ್ನು ಸಲ್ಲಿಸಿದ್ದೇನೆ. ಇಂದಿನಿಂದ ಹೊಸ ಪ್ರಯಾಣ ಪ್ರಾರಂಭವಾಗುತ್ತದೆ. ನಾನು ಹೊಸ ರಾಜಕೀಯ ಆಂದೋಲನ ಪ್ರಾರಂಭಿಸುತ್ತಿದ್ದೇನೆ ಮತ್ತು ಈ ಪ್ರಯತ್ನದಲ್ಲಿ ನಿಮ್ಮೆಲ್ಲರ ಬೆಂಬಲವನ್ನು ನಾನು ಬಯಸುತ್ತೇನೆ ಎಂದು ಅಣ್ಣಾಮಲೈ ಹೇಳಿದರು. ತಮಿಳುನಾಡು ರಾಜಕೀಯ ವಲಯದಲ್ಲಿ ಕಳೆದ ಕೆಲವು ದಿನಗಳಿಂದ ಹರಿದಾಡುತ್ತಿದ್ದ ತೀವ್ರ ಊಹಾಪೋಹಗಳಿಗೆ ಕೊನೆಗೂ ತೆರೆ ಬಿದ್ದಿದೆ….