ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರು ಪತಿ ವಿಜಯ್ ದೇವರಕೊಂಡ ಜೊತೆ ಇತ್ತೀಚೆಗೆ ತವರಿಗೆ ಬಂದಿದ್ದಾರೆ. ಮದುವೆ ಬಳಿಕ ಮೊದಲ ಬಾರಿ ಕೊಡಗಿಗೆ ಬಂದ ಅವರು ಕುಟುಂಬದವರಿಗೆ ಮತ್ತು ಸ್ನೇಹಿತರಿಗೆ ಔಟಣ ಕೂಟ ಏರ್ಪಡಿಸಿದ್ದರು. ಈ ವೇಳೆ ತಮ್ಮೂರಿನ ಜನರಿಗೆ ಗಂಡನನ್ನು ಪರಿಚಯಿಸಿದರು. ಕೊಡವ (Kodava) ಭಾಷೆಯಲ್ಲೇ ಅವರು ಗಂಡನ ಪರಿಚಯ ಮಾಡಿಸಿದರು. ವಿಜಯ್ ದೇವರಕೊಂಡ (Vijay Deverakonda) ಅವರು ಎಲ್ಲರ ಜೊತೆ ಬೆರೆತರು. ರಶ್ಮಿಕಾ ಮಂದಣ್ಣ ಅವರಿಗೆ ಹುಟ್ಟುಹಬ್ಬದ ಉಡುಗೊರೆ ರೂಪದಲ್ಲಿ ತಂದೆ ಮದನ್ ಮಂದಣ್ಣ ಅವರು ಬಂಗಲೆಯನ್ನು ನೀಡಿದ್ದಾರೆ.
ಬೆಂಗಳೂರು, (ಏಪ್ರಿಲ್ 07): ಕಳೆದ ಮೂರ್ನಾಲ್ಕು ತಿಂಗಳ ಗ್ಯಾರಂಟಿ ಯೋಜನೆಗಳ (guarantee schemes) ನಗದು ಹಣ ಬಿಡುಗಡೆ ಮಾಡದೇ ತಡೆ ಹಿಡಿಯಲಾಗಿದ್ದು, ಇದೀಗ ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ (Davanagere South And Bagalkot By Election) ಗಮನದಲ್ಲಿಟ್ಟುಕೊಂಡು ರಾಜ್ಯ ಸರ್ಕಾರ, ಏಕಕಾಲಕ್ಕೆ ಗ್ಯಾರಂಟಿ ಯೋಜನೆ ಹಣವನ್ನು ಬಿಡುಗಡೆ ಮಾಡುವ ಮೂಲಕ ಮತದಾರರನ್ನು ಸೆಳೆಯುವ ಪ್ರಯತ್ನ ಮಾಡಿದೆ ಎಂಬ ಆರೋಪ ಕೇಳಿಬಂದಿದೆ. ಈ ಸಂಬಂಧ ದಾವಣಗೆರೆ ದಕ್ಷಿಣ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೋರ್ಟ್ ಮೆಟ್ಟಿಲೇರಿದ್ದಾರೆ. ಆದ್ರೆ, ಇದಕ್ಕೆ ರಾಜ್ಯ ಸರ್ಕಾರ ಅಲ್ಲಗಳೆದಿದೆ. ಈ ಎಲ್ಲಾ ಬೆಳವಣಿಗೆಗಳ ನಡುವೆ ಇನ್ನೇನು ಚುನಾವಣಾ ಆಯೋಗ (Election Commission) ಮಧ್ಯೆ ಪ್ರವೇಶಿಸಿದ್ದು, ಉಪ ಚುನಾವಣೆ ನಡೆಯುತ್ತಿರುವ ಜಿಲ್ಲೆಗಳಲ್ಲಿ ಗ್ಯಾರಂಟಿ ಯೋಜನೆಗಳ ಅನುದಾನದ ವಿವರ ನೀಡುವಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದೆ.
ಮುಖ್ಯಕಾರ್ಯದರ್ಶಿಗೆ ಆಯೋಗ ಪತ್ರ
ದಾವಣಗೆರೆ ಹಾಗೂ ಬಾಗಲಕೋಟೆ ಬೈ ಎಲೆಕ್ಷನ್ ಸಂದರ್ಭದಲ್ಲಿ ಗ್ಯಾರಂಟಿ ಯೋಜನೆಗಳ ಹಣ ಬಿಡುಗಡೆ ಆರೋಪ ಸಂಬಂಧ ಚುನಾವಣಾ ಆಯೋಗವು ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿಗೆ ಪತ್ರ ಬರೆದಿದೆ. ಮಾದರಿ ನೀತಿ ಸಂಹಿತೆ ಜಾರಿಯಾದ ಬಳಿಕ ಉಪ ಚುನಾವಣೆ ನಡೆಯುತ್ತಿರುವ ಕ್ಷೇತ್ರಗಳಲ್ಲಿ (ಬಾಗಲಕೋಟೆ, ದಾವಣಗೆರೆ ದಕ್ಷಿಣ) ಎಷ್ಟು ಹಣ ಬಿಡುಗಡೆಗೊಳಿಸಲಾಗಿದೆ? ಗೃಹ ಲಕ್ಷ್ಮೀ, ಗೃಹ ಜ್ಯೋತಿ ಸೇರಿದಂತೆ ಗ್ಯಾರಂಟಿ ಯೋಜನೆಗೆ ಎಷ್ಟು ಹಣ ಬಿಡುಗಡೆ ಮಾಡಲಾಗಿದೆ? ಎನ್ನುವ ಬಗ್ಗೆ ವಿವರ ನೀಡುವಂತೆ ಪತ್ರದ ಮೂಲಕ ಸೂಚಿಸಿದೆ.
ಒಂದು ವೇಳೆ ಹಣ ಬಿಡುಗಡೆ ಮಾಡಿದ್ದರೆ ಎಸಿ ಮಟ್ಟದ ಅಧಿಕಾರಿ ಅಥವಾ ಸಂಬಂಧ ಪಟ್ಟ ಅಧಿಕಾರಿಯ ವಿವರ ಸಮೇತ ಮಾಹಿತಿ ನೀಡಿ. ಬಿಡುಗಡೆ ಮಾಡಿಲ್ಲ ಅಂದರೆ ಮುಂದಿನ ದಿನಗಳಲ್ಲಿ ಚುನಾವಣಾ ಆಯೋಗದ ಅನುಮತಿ ಪಡೆಯದೇ ಹಣ ಬಿಡುಗಡೆ ಮಾಡಬೇಡಿ ಎಂದು ಚುನಾವಣಾ ಆಯೋಗ ತಿಳಿಸಿದೆ.
ಕೋರ್ಟ್ ಮೆಟ್ಟಿಲೇರಿರುವ ಪಕ್ಷೇತರ ಅಭ್ಯರ್ಥಿ
ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಗೌತಮ್ ಕುಮಾರ್ ಜೈನ್ ಅವರು ಗ್ಯಾರಂಟಿ ಹಣ ಬಿಡುಗಡೆ ಸಂಬಂಧ ರಾಜ್ಯ ಸರ್ಕಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವಾಗ ಎರಡೂ ಕ್ಷೇತ್ರಗಳಲ್ಲಿ ಫಲಾನುಭವಿಗಳಿಗೆ ಹಣ ಬಿಡುಗಡೆ ಮಾಡುವುದಕ್ಕೆ ಪೂರ್ವಭಾವಿಯಾಗಿ ಸರ್ಕಾರವು ಚುನಾವಣಾ ಆಯೋಗದಿಂದ ಅನುಮತಿ ಪಡೆದಿಲ್ಲ. ಹಾಗಾಗಿ ಚುನಾವಣೆ ಮುಗಿಯುವವರೆಗೆ ಗ್ಯಾರಂಟಿ ಹಣ ಮಾಡಬಾರದು ಎಂದು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರ್ಟ್ಗೆ ಮನವಿ ಮಾಡಿದ್ದಾರೆ.
ಮಾರ್ಚ್ 23ರಂದು ಗೃಹಲಕ್ಷ್ಮೀ ಹಣ ಬಿಡುಗಡೆಯಾಗಿದೆ ಎಂದು ಹೇಳಲಾಗುತ್ತಿದೆ. ನೀತಿ ಸಂಹಿತೆ ಜಾರಿಯಾದ ಮೇಲೆ ಹಣ ಬಿಡುಗಡೆ ಮಾಡಿ, ಫಲಾನುಭವಿಗಳ ಸಂಖ್ಯೆಯನ್ನು ಸರ್ಕಾರ ಹೆಚ್ಚಿಸಿದೆ. ಹಾಗಾಗಿ ಉಪಚುನಾವಣೆ ನಡೆಯುತ್ತಿರುವ ಜಿಲ್ಲೆಗಳಲ್ಲಿ ಅನುಮತಿ ಪಡೆದು ಹಣ ಬಿಡುಗಡೆ ಮಾಡಲಿ ಎಂದಿದ್ದಾರೆ. ಆದ್ರೆ, ಇದನ್ನು ಬಲವಾಗಿ ಅಲ್ಲಗಳೆದ ರಾಜ್ಯ ಸರ್ಕಾರ ಪರ ಹಾಜರಾಗಿದ್ದ ಅಡ್ವೋಕೇಟ್ ಜನರಲ್ ಶಶಿಕಿರಣ ಶೆಟ್ಟಿ, ಆರು ತಿಂಗಳಿನಿಂದ ಗ್ಯಾರಂಟಿ ಯೋಜನೆ ಹಣ ನೀಡಲಾಗಿಲ್ಲ ಎಂಬುವುದಕ್ಕೆ ಅರ್ಜಿದಾರರು ದಾಖಲೆ ಸಲ್ಲಿಸಬೇಕು. ಗ್ಯಾರಂಟಿ ಯೋಜನೆಯ ಭಾಗವಾಗಿ ಫೆಬ್ರವರಿವರೆಗೆ ಏನೆಲ್ಲಾ ವಿತರಣೆ ಮಾಡಲಾಗಿದೆ ಎಂಬುವುದಕ್ಕೆ ದಾಖಲೆ ಸಲ್ಲಿಸಲಾಗುವುದು. ಒಂದು ವೇಳೆ ಅರ್ಜಿದಾರರು ಆಕ್ಷೇಪಿಸಿರುವಂತೆ ನಡೆದುಕೊಂಡೆ ಚುನಾವಣಾ ಆಯೋಗ ಕ್ರಮ ಕೈಗೊಳ್ಳಲಿದೆ. ಅದೇನೂ ಹಲ್ಲಿಲ್ಲದ ಹಾವಲ್ಲವಲ್ಲಾ ಎಂದು ಹೇಳಿದ್ದಾರೆ.
ಇನ್ನು ಕೇಂದ್ರ ಚುನಾವಣಾ ಆಯೋಗದ ಪರ ಎಸ್ಆರ್ ದೊಡ್ಡವಾಡ ಅವರು ವಾದ ಮಂಡಿಸಿದ್ದು, ಮಾದರಿ ನೀತಿ ಸಂಹಿತೆಗೆ ಅನುಗುಣವಾಗಿ ಎರಡೂ ಕ್ಷೇತ್ರಗಳ ಮೇಲೆ ನಿಗಾ ವಹಿಸಲು ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿಗೆ ಪತ್ರ ಬರೆಯಲಾಗಿದೆ ಎಂಬ ಅಂಶವನ್ನು ಕೋರ್ಟ್ ಗಮನಕ್ಕೆ ತಂದಿದ್ದಾರೆ. ಈ ವಾದ ಪ್ರತಿವಾದ ಆಲಿಸಿದ ಕೋರ್ಟ್, ವಿಚಾರಣೆಯನ್ನು ಏಪ್ರಿಲ್ 15ಕ್ಕೆ ಮುಂದೂಡಿದೆ.
ವಿಜಯಪುರ, ಏ. 07: ಪಂಚಮಸಾಲಿ 2ಎ ಮೀಸಲಾತಿ ಹೋರಾಟದ ಮುಂಚೂಣಿಯಲ್ಲಿರುವ ಕೂಡಲಸಂಗಮ ಪೀಠದ ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿಗಳ ಸುತ್ತ ಈಗ ವಿವಾದವೊಂದು ಸುತ್ತಿಕೊಂಡಿದೆ. ಸ್ವಾಮೀಜಿಗಳ ಮೇಲೆ ಹಲ್ಲೆ ನಡೆಸಿ, ನಂತರ ಹಣಕ್ಕಾಗಿ ಬ್ಲ್ಯಾಕ್ಮೇಲ್ ಮಾಡಲಾಗುತ್ತಿದೆ ಎಂದು ಅವರ ಶಿಷ್ಯ ಸಂತೋಷ ಮಂಜಣ್ಣಿ ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ದೂರಿನ ಪ್ರಕಾರ, ಕಳೆದ ಫೆಬ್ರವರಿ 11 ರಂದು ವಿಜಯಪುರ ತಾಲೂಕಿನ ಕಗ್ಗೋಡ ಬಳಿ ಸ್ವಾಮೀಜಿಗಳು ಕಾರಿನಲ್ಲಿ ತೆರಳುತ್ತಿದ್ದಾಗ ತ್ರಿವೇಣಿ ಎಂಬ ಮಹಿಳೆ ಮತ್ತು ಇತರರು ಕಾರು ತಡೆದು ಹಲ್ಲೆ ನಡೆಸಿದ್ದರು ಎನ್ನಲಾಗಿದೆ. ಆಗ ಭಕ್ತರು ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದ್ದರು. ಆದರೆ, ಈ ಘಟನೆಯ ನಂತರ ಮಹಿಳೆಯು ಸಾಮಾಜಿಕ ಜಾಲತಾಣಗಳಲ್ಲಿ ಸ್ವಾಮೀಜಿಗಳ ವಿರುದ್ಧ ಅಪಪ್ರಚಾರ ಆರಂಭಿಸಿ, ರಾಜಕುಮಾರ್ ಎಂಬುವವರ ಮೂಲಕ 3 ಕೋಟಿ ರೂಪಾಯಿ ಹಣಕ್ಕೆ ಬೇಡಿಕೆಯಿಟ್ಟಿದ್ದಾರೆ ಎಂದು ಆರೋಪಿಸಲಾಗಿದೆ.
ಟಿವಿ9 ಜೊತೆಗೆ ಮಾತನಾಡಿರುವ ಸಂತೋಷ ಮಂಜಣ್ಣಿ, ಈ ಇಡೀ ಪ್ರಕರಣದ ಹಿಂದೆ ರಾಜಕೀಯ ವ್ಯಕ್ತಿಗಳ ಕೈವಾಡವಿದೆ ಎಂದು ಗಂಭೀರವಾಗಿ ಹೇಳಿದ್ದಾರೆ. “ಶಾಸಕ ವಿಜಯಾನಂದ ಕಾಶಪ್ಪನವರ್ ಅವರು ಸ್ವಾಮೀಜಿಗಳಿಂದ ಎಲ್ಲ ಕೆಲಸ ಮಾಡಿಸಿಕೊಂಡು ಈಗ ಪೀಠದಿಂದ ಉಚ್ಛಾಟನೆ ಮಾಡಲು ಸಂಚು ರೂಪಿಸುತ್ತಿದ್ದಾರೆ. ಇದು 2ಎ ಮೀಸಲಾತಿ ಹೋರಾಟವನ್ನು ಹತ್ತಿಕ್ಕುವ ಹುನ್ನಾರ” ಎಂದು ಅವರು ಕಿಡಿಕಾರಿದ್ದಾರೆ.
ಇದೇ ವೇಳೆ, ಮಹಿಳೆಯು ಸ್ವಾಮೀಜಿಗಳ ವಿರುದ್ಧ ಲೈಂಗಿಕ ಕಿರುಕುಳ ಮತ್ತು ಅತ್ಯಾಚಾರದ ಆರೋಪ ಮಾಡಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಸಂತೋಷ, “ಇಷ್ಟು ದಿನ ಸುಮ್ಮನಿದ್ದ ಮಹಿಳೆ, ಸ್ವಾಮೀಜಿಗಳು ದೂರು ನೀಡಿದ ಬಳಿಕವಷ್ಟೇ ಯಾಕೆ ದೂರು ನೀಡಿದ್ದಾರೆ? ಇದು ಕೇವಲ ಹಣಕ್ಕಾಗಿ ಮಾಡುತ್ತಿರುವ ಬೆದರಿಕೆ” ಎಂದು ಪ್ರಶ್ನಿಸಿದ್ದಾರೆ.
ನವದೆಹಲಿ, ಏಪ್ರಿಲ್ 7: ಕದನವಿರಾಮ ಅಥವಾ ಶಾಂತಿ ಮಾತುಕತೆಗೆ ಇರಾನ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ನೀಡಿದ್ದ 10 ದಿನಗಳ ಗಡುವು ನಾಳೆ ಬೆಳಗ್ಗೆ ಅಂತ್ಯಗೊಳ್ಳಲಿದೆ. ಹೀಗಾಗಿ, ಟೆಹ್ರಾನ್ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಇಂದು ಸಂಜೆ ತುರ್ತು ಸಲಹೆಯನ್ನು ನೀಡಿದ್ದು, ಸಂಭಾವ್ಯ ಉದ್ವಿಗ್ನ ಪರಿಸ್ಥಿತಿಯ ನಡುವೆ ಇರಾನ್ ದೇಶದಲ್ಲಿರುವ ಭಾರತೀಯ ಪ್ರಜೆಗಳು ಸುರಕ್ಷತೆಗೆ ಆದ್ಯತೆ ನೀಡುವಂತೆ ಒತ್ತಾಯಿಸಿದೆ. ಭಾರತೀಯ ಪ್ರಜೆಗಳು ಕನಿಷ್ಠ 48 ಗಂಟೆಗಳ ಕಾಲ ತಾವು ಎಲ್ಲಿದ್ದಾರೋ ಅದೇ ಸ್ಥಳಗಳಲ್ಲಿಯೇ ಇರಬೇಕೆಂದು ಸೂಚಿಸಲಾಗಿದೆ. ಹಾಗೇ ಅನಗತ್ಯ ಓಡಾಟ ಮಾಡದೆ ಮನೆಯೊಳಗೆ ಇರಬೇಕೆಂದು ಸೂಚಿಸಿದೆ.
ನಾಳೆ ಸಂಭವಿಸಬಹುದಾದ ದಾಳಿಯ ವಿರುದ್ಧ ಮುನ್ನೆಚ್ಚರಿಕೆಯಾಗಿ ಬಹುಮಹಡಿ ಕಟ್ಟಡಗಳ ಮೇಲಿನ ಮಹಡಿಗಳಲ್ಲಿ ಇರದಂತೆ ಭಾರತೀಯರಿಗೆ ಸೂಚಿಸಲಾಗಿದೆ. ಹಾಗೇ, ಭಾರತೀಯ ರಾಯಭಾರ ಕಚೇರಿಯೊಂದಿಗೆ ನಿಕಟ ಸಮನ್ವಯವನ್ನು ಕಾಪಾಡಿಕೊಳ್ಳಲು ಸೂಚಿಸಲಾಗಿದೆ. ರಾಯಭಾರ ಕಚೇರಿಯಿಂದ ವ್ಯವಸ್ಥೆ ಮಾಡಲಾದ ಹೋಟೆಲ್ಗಳಲ್ಲಿ ವಸತಿ ಹೊಂದಿರುವವರು ಒಳಗೆಯೇ ಇರಲು ಮತ್ತು ಸ್ಥಳದಲ್ಲೇ ಇರುವ ರಾಯಭಾರ ಕಚೇರಿಯ ಸಿಬ್ಬಂದಿಯೊಂದಿಗೆ ನಿಯಮಿತವಾಗಿ ಸಂಪರ್ಕದಲ್ಲಿರಲು ನಿರ್ದೇಶಿಸಲಾಗಿದೆ.
“ರಾಯಭಾರ ಕಚೇರಿಯಿಂದ ವ್ಯವಸ್ಥೆ ಮಾಡಲಾದ ಹೋಟೆಲ್ಗಳಲ್ಲಿರುವವರು ಮನೆಯೊಳಗೆ ಇರಬೇಕು ಮತ್ತು ಸ್ಥಳದಲ್ಲೇ ಇರುವ ರಾಯಭಾರ ಕಚೇರಿಯ ತಂಡಗಳೊಂದಿಗೆ ನಿಯಮಿತವಾಗಿ ಸಂಪರ್ಕದಲ್ಲಿರಬೇಕು. ಅಧಿಕೃತ ನವೀಕರಣಗಳನ್ನು ಸೂಕ್ಷ್ಮವಾಗಿ ಗಮನಿಸಲು ಸೂಚಿಸಲಾಗಿದೆ. ರಾಯಭಾರ ಕಚೇರಿಯ ತುರ್ತು ಸಂಖ್ಯೆಗಳು (989128109115, 989128109102, 989128109109, 989932179359) ಕಾರ್ಯನಿರ್ವಹಿಸುತ್ತಲೇ ಇರುತ್ತವೆ” ಎಂದು ಭಾರತದ ರಾಯಭಾರ ಕಚೇರಿ ಹೇಳಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಮೈಸೂರು, ಏಪ್ರಿಲ್ 7: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (MUDA)ದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುಟುಂಬ ಅಕ್ರಮವಾಗಿ ನಿವೇಶನ ಪಡೆದಿದೆ ಎಂಬ ಆರೋಪದ ಪ್ರಕರಣದಲ್ಲಿ, ಲೋಕಾಯುಕ್ತ ಸಲ್ಲಿಸಿದ್ದ ಬಿ ರಿಪೋರ್ಟ್ ಅನ್ನು ಪ್ರಶ್ನಿಸಿ ಜಾರಿ ನಿರ್ದೇಶನಾಲಯ (ED) ಇದೀಗ ಮೇಲ್ಮನವಿ ಸಲ್ಲಿಸಿದೆ. ಈ ಬೆಳವಣಿಗೆಯ ಕುರಿತು ದೂರುದಾರ ಹಾಗೂ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ‘ಟಿವಿ9’ಗೆ ಪ್ರತಿಕ್ರಿಯೆ ನೀಡಿದ್ದಾರೆ. ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಲೋಕಾಯುಕ್ತದ ಬಿ ರಿಪೋರ್ಟ್ ಅಂಗೀಕರಿಸಿದ ಆದೇಶವನ್ನು ಪ್ರಶ್ನಿಸಿ ಸ್ನೇಹಮಯಿ ಕೃಷ್ಣ ಈಗಾಗಲೇ ಉಚ್ಚ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಿದ್ದಾರೆ. ಇದೀಗ ಇಡಿ ಕೂಡ ಮೇಲ್ಮನವಿ ಸಲ್ಲಿಸಿರುವುದು ತಮ್ಮ ಹೋರಾಟಕ್ಕೆ ಪರೋಕ್ಷ ಬೆಂಬಲ ನೀಡಿದಂತಾಗಿದೆ ಎಂದು ಕೃಷ್ಣ ತಿಳಿಸಿದ್ದಾರೆ. ಒಂದು ತನಿಖಾ ಸಂಸ್ಥೆ ಸಾಕ್ಷಿಗಳಿಲ್ಲ ಎಂದು ಬಿ ರಿಪೋರ್ಟ್ ಸಲ್ಲಿಸಿದರೆ, ಮತ್ತೊಂದು ತನಿಖಾ ಸಂಸ್ಥೆ ಸಾಕ್ಷಿಗಳಿವೆ ಎಂದು ಹೇಳಿದಾಗ ನ್ಯಾಯಾಲಯವು ಅರ್ಜಿಯನ್ನು ಗಂಭೀರವಾಗಿ ಪರಿಗಣಿಸುತ್ತದೆ ಎಂದು ಅವರು ಹೇಳಿದ್ದಾರೆ.
ಇಡಿ ಮತ್ತು ಸ್ನೇಹಮಯಿ ಕೃಷ್ಣ ಸಲ್ಲಿಸಿರುವ ಎರಡೂ ಮೇಲ್ಮನವಿಗಳನ್ನು ಮಾನ್ಯ ಉಚ್ಚ ನ್ಯಾಯಾಲಯ ಒಟ್ಟಿಗೆ ವಿಚಾರಣೆ ನಡೆಸಿ, ಜನಪದ ವಿಶೇಷ ನ್ಯಾಯಾಲಯದ ಆದೇಶವನ್ನು ರದ್ದುಪಡಿಸಿ, ಸಿದ್ದರಾಮಯ್ಯ ಅವರ ವಿರುದ್ಧದ ಆರೋಪಗಳನ್ನು ಸಾಬೀತುಪಡಿಸಲು ಅವಕಾಶ ನೀಡುವ ವಿಶ್ವಾಸವಿದೆ ಎಂದು ಸ್ನೇಹಮಯಿ ಕೃಷ್ಣ ಹೇಳಿದ್ದಾರೆ. ಮೇಲ್ಮನವಿ ಸಲ್ಲಿಸಿದ ನಂತರ, ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಿ, ವಿಚಾರಣೆ ದಿನಾಂಕ ನಿಗದಿಪಡಿಸಲಾಗುತ್ತದೆ. ನಂತರ ಸಾಕ್ಷಾಧಾರಗಳೊಂದಿಗೆ ವಾದ ವಿವಾದಗಳು ನಡೆಯಲಿವೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿಕ್ಲಿಕ್ ಮಾಡಿ
ಇಂಡಿಯನ್ ಪ್ರೀಮಿಯರ್ ಲೀಗ್ನ ಹೈವೋಲ್ಟೇಜ್ ಮ್ಯಾಚ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಜಯಭೇರಿ ಬಾರಿಸಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್ಸಿಬಿ 20 ಓವರ್ಗಳಲ್ಲಿ ಕಲೆಹಾಕಿದ್ದು ಬರೋಬ್ಬರಿ 250 ರನ್ಗಳು. ಈ ಗುರಿಯನ್ನು ಬೆನ್ನತ್ತಿದ ಸಿಎಸ್ಕೆ ಕೇವಲ 207 ರನ್ಗಳಿಸಿ 43 ರನ್ಗಳಿಂದ ಸೋಲೊಪ್ಪಿಕೊಂಡಿತು.
ಈ ಗೆಲುವಿನ ಬಳಿಕ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಡ್ರೆಸ್ಸಿಂಗ್ ರೂಮ್ನಲ್ಲಿ ನಡೆದ ಆಟಗಾರರ ನಡುವಣ ಪ್ರಶಂಸೀಯ ಮಾತುಗಳ ನಡುವೆ ರೊಮಾರಿಯೊ ಶೆಫರ್ಡ್ ಟಿಮ್ ಡೇವಿಡ್ ಅವರ ಇನಿಂಗ್ಸ್ ಅನ್ನು ವಿವರಿಸಿರುವುದು ಇದೀಗ ಭಾರೀ ವೈರಲ್ ಆಗಿದೆ.
ಈ ಪಂದ್ಯದಲ್ಲಿ ಟಿಮ್ ಡೇವಿಡ್ ಅವರು ಎದುರಿಸಿದ ಕೇವಲ 25 ಎಸೆತಗಳಲ್ಲಿ ಅಜೇಯ 70 ರನ್ ಚಚ್ಚಿ ಸಿಎಸ್ಕೆ ಬೌಲರ್ಗಳನ್ನು ಕಂಗೆಡಿಸಿದ್ದರು. ಈ ಸ್ಫೋಟಕ ಬ್ಯಾಟಿಂಗ್ ಅನ್ನು ಪಂದ್ಯದ ನಂತರ ಡ್ರೆಸ್ಸಿಂಗ್ ರೂಮ್ನಲ್ಲಿ ವಿಶ್ಲೇಷಿಸಿದ ಸಹ ಆಟಗಾರ ರೊಮಾರಿಯೋ ಶೆಫರ್ಡ್ ಎಲ್ಲರನ್ನೂ ನಗೆಗಡಲಲ್ಲಿ ತೇಲಿಸಿದರು.
ಟಿಮ್ ಡೇವಿಡ್ ಅವರ ಬ್ಯಾಟಿಂಗ್ ಶೈಲಿಯನ್ನು ಅಣಕಿಸಿದ ಶೆಫರ್ಡ್, “ಟಿಮ್, ನೀನು ಮೊದಲು ಐದು ಎಸೆತಗಳನ್ನು ತುಂಬಾ ಶಾಂತವಾಗಿ ಎದುರಿಸಿದ್ದೀಯಾ. ನಂತರ ಏನಾಗುತ್ತೆ ಅಂದ್ರೆ…” ಎಂದು ಹೇಳುತ್ತಾ, ಕೈ ಸನ್ನೆ ಮಾಡಿದ್ದಾರೆ.
ಇತ್ತ ರೊಮಾರಿಯೋ ಶೆಫರ್ಡ್ ಅವರ ಕೈ ಸನ್ನೆಯ ವಿಶ್ಲೇಷಣೆ ಕಂಡು ವಿರಾಟ್ ಕೊಹ್ಲಿ ಸೇರಿದಂತೆ ಇಡೀ ತಂಡವೇ ಜೋರಾಗಿ ನಗಲಾರಂಭಿಸಿದರು. ಇದೀಗ ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಶೆಫರ್ಡ್ ಅವರ ಕೈ ಸನ್ನೆಯೇ ಪ್ರಮುಖ ಚರ್ಚೆಯ ವಿಷಯವಾಗಿ ಮಾರ್ಪಟ್ಟಿದೆ.
ಟೆಲ್ ಅವಿವ್, ಏಪ್ರಿಲ್ 07: ಇರಾನ್(Iran) ಜನರು ರೈಲಿನಲ್ಲಿ ಪ್ರಯಾಣಿಸದಂತೆ ಇಸ್ರೇಲ್ ಎಚ್ಚರಿಕೆ ನೀಡಿದ್ದು, ಹೊಸ ಅಪಾಯದ ಮುನ್ನೆಚ್ಚರಿಕೆ ನೀಡಿದೆ. ಕಳೆದ ಐದು ವಾರಗಳಿಂದ ಮಧ್ಯಪ್ರಾಚ್ಯದಲ್ಲಿ ಯುದ್ಧ ನಡೆಯುತ್ತಿದೆ. ಫಾರ್ಸಿ ಭಾಷೆಯಲ್ಲಿ ಸಂದೇಶವೊಂದನ್ನು ಬಿಡುಗಡೆ ಮಾಡಿದ ಇಸ್ರೇಲ್ ಸೇನೆ ರೈಲಿನಲ್ಲಿ ಪ್ರಯಾಣಿದರೆ ಜೀವಕ್ಕೆ ಅಪಾಯವಿದೆ ಎಂದು ಹೇಳಿದೆ. ನಿಮ್ಮ ಸುರಕ್ಷತೆಗಾಗಿ ಇಂದು ರಾತ್ರಿ 9 ಗಂಟೆಯವರೆಗೆ ದೇಶಾದ್ಯಂತ ರೈಲುಗಳಲ್ಲಿ ಪ್ರಯಾಣಿಸುವುದನ್ನು ತಪ್ಪಿಸಿ ಎಂದು ಸೇನೆ ಹೇಳಿದೆ. ಟೆಹ್ರಾನ್ ವಾರಗಟ್ಟಲೆ ಇರಾನ್ನಾದ್ಯಂತ ಇಂಟರ್ನೆಟ್ ಅನ್ನು ನಿರ್ಬಂಧಿಸಿದೆ.
ಇದರಿಂದಾಗಿ ಸಾಮಾನ್ಯ ಜನರಿಗೆ ಈ ಎಚ್ಚರಿಕೆ ತಲುಪಿಸುವುದು ಕಷ್ಟಕರವಾಗಿದೆ. ಅಮೆರಿಕದ 45 ದಿನಗಳ ಕದನ ವಿರಾಮ ಪ್ರಸ್ತಾಪವನ್ನು ಇರಾನ್ ತಿರಸ್ಕರಿಸಿ ಯುದ್ಧಕ್ಕೆ ಶಾಶ್ವತ ಅಂತ್ಯ ಬಯಸುವುದಾಗಿ ಹೇಳಿದ ಕೆಲವೇ ಗಂಟೆಗಳ ನಂತರ ಈ ಎಚ್ಚರಿಕೆ ಬಂದಿದೆ.ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಒಪ್ಪಂದ ಮಾಡಿಕೊಳ್ಳುವ ಅಂತಿಮ ಸೂಚನೆಯೊಂದಿಗೆ ಇಸ್ಲಾಮಿಕ್ ಗಣರಾಜ್ಯದ ವಿರುದ್ಧ ಎಲ್ಲಾ ವಿದ್ಯುತ್ ಸ್ಥಾವರಗಳು ಮತ್ತು ಸೇತುವೆಗಳನ್ನು ಸೇರಿಸಲು ದಾಳಿ ನಡೆಸುವ ಬೆದರಿಕೆಯನ್ನೂ ಹಾಕಿದ್ದಾರೆ.ಇರಾನ್ನ ಎಲ್ಲಾ ವಿದ್ಯುತ್ ಸ್ಥಾವರಗಳು ಮತ್ತು ಸೇತುವೆಗಳ ಮೇಲೆ ಬಾಂಬ್ ದಾಳಿ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ.
ಹಾರ್ಮುಜ್ ಜಲಸಂಧಿಯ ಮೂಲಕ ಹಡಗು ಸಂಚಾರವನ್ನು ಸಂಪೂರ್ಣವಾಗಿ ಪುನರಾರಂಭಿಸಲು ಇದು ಅವಕಾಶ ನೀಡುತ್ತದೆ. ಶಾಂತಿಕಾಲದಲ್ಲಿ ವಿಶ್ವದ ತೈಲ ಸಾಗಣೆಯ ಐದನೇ ಒಂದು ಭಾಗವು ಹಾರ್ಮುಜ್ ಜಲಸಂಧಿಯ ಮೂಲಕ ಹಾದುಹೋಗಿದ್ದವು. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್ಗೆ ಕಠಿಣ ಎಚ್ಚರಿಕೆ ನೀಡಿದ್ದಾರೆ. ಹಾರ್ಮುಜ್ ಜಲಸಂಧಿಯನ್ನು ತೆರೆಯದಿದ್ದರೆ ಇರಾನ್ ರಾತ್ರೋರಾತ್ರಿ ನಾಶವಾಗಬಹುದು ಎಂದು ಟ್ರಂಪ್ ಬೆದರಿಸಿದ್ದಾರೆ.
ಶ್ವೇತಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿರುವ ಟ್ರಂಪ್, ಇಡೀ ದೇಶ ರಾತ್ರೋ ರಾತ್ರಿ ನಾಶವಾಗಬಹುದು ಮತ್ತು ಆ ರಾತ್ರಿ ಮಂಗಳವಾರವೇ ಆಗಿರಬಹುದು ಎಂದಿದ್ದಾರೆ. ಹಾರ್ಮುಜ್ ಜಲಸಂಧಿಯನ್ನು ಮತ್ತೆ ತೆರೆಯುವ ಬಗ್ಗೆ ಹೆಚ್ಚುತ್ತಿರುವ ಉದ್ವಿಗ್ನತೆ ಮಧ್ಯೆ ಈ ಹೇಳಿಕೆ ಬಂದಿದೆ. ಟ್ರಂಪ್ ಮಂಗಳವಾರ(ಏಪ್ರಿಲ್ 7) ರಾತ್ರಿ 8 ಗಂಟೆಯವರೆಗೆ ಇರಾನ್ಗೆ ಸಮಯ ನೀಡಿದ್ದಾರೆ.
ಮಾರ್ಚ್ ಅಂತ್ಯದಲ್ಲಿ ಇರಾನ್ಗೆ ಒಪ್ಪಂದಕ್ಕೆ ಬರಲು ಅಥವಾ ಹಾರ್ಮುಜ್ ಜಲಸಂಧಿಯನ್ನು ತೆರೆಯಲು 10 ದಿನಗಳ ಅಲ್ಟಿಮೇಟಂ ನೀಡಿದ್ದರು. ನಂತರ ಇರಾನ್ ಕೋರಿಕೆಯ ಮೇಲೆ ಈ ಅವಧಿಯನ್ನು ಇನ್ನೂ 10 ದಿನಗಳವರೆಗೆ ವಿಸ್ತರಿಸಿದ್ದರು.ರಾನ್ನಲ್ಲಿ ಅಪಘಾತಕ್ಕೀಡಾದ ತಮ್ಮ ಫೈಟರ್ ಜೆಟ್ ಎಫ್ -15 ರ ಪೈಲಟ್ನನ್ನು ರಕ್ಷಿಸಲು ಆರಂಭಿಸಲಾದ ಕಾರ್ಯಾಚರಣೆಯನ್ನು ಟ್ರಂಪ್ ಐತಿಹಾಸಿಕ ಎಂದು ಬಣ್ಣಿಸಿದರು.
ಕಳೆದ 37 ದಿನಗಳಲ್ಲಿ, ಅಮೆರಿಕದ ಸಶಸ್ತ್ರ ಪಡೆಗಳು ಇರಾನ್ ಮೇಲೆ 10,000 ಕ್ಕೂ ಹೆಚ್ಚು ಯುದ್ಧ ವಿಮಾನಗಳನ್ನು ಹಾರಿಸಿವೆ. ಇದು ಅಭೂತಪೂರ್ವವಾಗಿದೆ” ಎಂದು ಹೇಳಿದರು. ಕಳೆದ ವಾರ ಇರಾನ್ನಲ್ಲಿ ಹೊಡೆದುರುಳಿಸಿದ ಅಮೆರಿಕದ ಎಫ್ -15, ಈ ಸಂಪೂರ್ಣ ಕಾರ್ಯಾಚರಣೆಯ ಸಮಯದಲ್ಲಿ ಶತ್ರುಗಳಿಂದ ಹೊಡೆದುರುಳಿಸಿದ ಮೊದಲ ಮಾನವಸಹಿತ ವಿಮಾನವಾಗಿದೆ ಎಂದು ಅವರು ಹೇಳಿದ್ದಾರೆ.
ಕೆಲವೇ ವರ್ಷಗಳಿಗೆ ಹಣವನ್ನು ಇರಿಸಬೇಕೆನ್ನುವವರಿಗೆ ಫಿಕ್ಸೆಡ್ ಡೆಪಾಸಿಟ್ ಸ್ಕೀಮ್ಗಳು (Fixed Deposit) ಉತ್ತಮ ಎನಿಸುತ್ತವೆ. ಆರ್ಬಿಐನ ರಿಪೋ ದರ ಬದಲಾವಣೆಗೆ ಅನುಗುಣವಾಗಿ ಎಫ್ಡಿ ದರಗಳೂ ಬದಲಾಗಬಹುದು. ಸಾಮಾನ್ಯವಾಗಿ 1 ವರ್ಷ ಮೇಲ್ಪಟ್ಟ ಅವಧಿಗಳ ಠೇವಣಿಗಳಿಗೆ ಶೇ. 6ಕ್ಕಿಂತಲೂ ಹೆಚ್ಚು ಬಡ್ಡಿ ಸಿಗುತ್ತದೆ. ಕೆಲ ಬ್ಯಾಂಕುಗಳು ಕೆಲ ಅವಧಿಗಳ ಠೇವಣಿಗಳಿಗೆ ಗರಿಷ್ಠ ಬಡ್ಡಿ ಆಫರ್ ಮಾಡುತ್ತವೆ. ಕಮರ್ಷಿಯಲ್ ಬ್ಯಾಂಕುಗಳು ಇಂದು ಶೇ. 7.75ರವರೆಗೆ ಎಫ್ಡಿ ದರಗಳನ್ನು ಹೊಂದಿವೆ. ಕೆಲ ಪ್ರಮುಖ ಬ್ಯಾಂಕುಗಳಲ್ಲಿನ ಡೆಪಾಸಿಟ್ ರೇಟ್ಗಳ ವಿವರ ಈ ಕೆಳಕಂಡಂತಿದೆ:
ಎಸ್ಬಿಐನಲ್ಲಿ ಎಫ್ಡಿ ದರಗಳು
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಸಾಮಾನ್ಯ ಗ್ರಾಹಕರ 2-3 ವರ್ಷದ ಠೇವಣಿಗಳಿಗೆ ಶೇ. 6.45 ಬಡ್ಡಿ ಸಿಗುತ್ತದೆ. ಹಿರಿಯ ನಾಗರಿಕರಿಗೆ ಶೇ. 6.95 ಬಡ್ಡಿ ಇರುತ್ತದೆ. 1 ವರ್ಷದ ಮೇಲ್ಪಟ್ಟ ಎಲ್ಲಾ ಅವಧಿ ಠೇವಣಿಗಳಿಗೂ ಶೇ. 6ಕ್ಕಿಂತಲೂ ಹೆಚ್ಚು ಬಡ್ಡಿಯನ್ನು ಎಸ್ಬಿಐ ನೀಡುತ್ತದೆ. ಹಿರಿಯ ನಾಗರಿಕರಿಗೆ 5ರಿಂದ 10 ವರ್ಷದ ಠೇವಣಿಗೆ ಶೇ. 7.05ರಷ್ಟು ಬಡ್ಡಿ ಸಿಗುತ್ತದೆ. ಇದು ವೃದ್ಧರಿಗೆ ಎಸ್ಬಿಐ ನೀಡುತ್ತಿರುವ ದೊಡ್ಡ ಗಿಫ್ಟ್.
ಕೋಟಕ್ ಮಹೀಂದ್ರ ಬ್ಯಾಂಕ್ನಲ್ಲಿ ಎಫ್ಡಿಗಳು 7 ದಿನದಿಂದ ಹಿಡಿದು 10 ವರ್ಷದವರೆಗೆ ಇವೆ. ಸಾಮಾನ್ಯ ಗ್ರಾಹಕರಿಗೆ 15 ತಿಂಗಳಿಂದ 3 ವರ್ಷದವರೆಗಿನ ಠೇವಣಿಗಳಿಗೆ ಶೇ 6.70 ಬಡ್ಡಿ ಸಿಗುತ್ತದೆ. ಇದು ಇವರಿಗೆ ಈ ಬ್ಯಾಂಕ್ ನೀಡುವ ಬೆಸ್ಟ್ ಪ್ರೈಸ್. ಹಿರಿಯ ನಾಗರಿಕರಿಗೆ ಶೇ. 7.20ರವರೆಗೂ ಬಡ್ಡಿ ಇದೆ.
ಎಚ್ಡಿಎಫ್ಸಿ ಬ್ಯಾಂಕ್ ಎಫ್ಡಿ ದರಗಳು
ಎಚ್ಡಿಎಫ್ಸಿ ಬ್ಯಾಂಕ್ನಲ್ಲಿ ಎಫ್ಡಿ ದರಗಳು ಸಾಮಾನ್ಯ ಗ್ರಾಹಕರಿಗೆ ಶೇ. 2.75ರಿಂದ ಶೇ. 6.50ರವರೆಗೆ ಇವೆ. 1 ವರ್ಷ ಮೇಲ್ಪಟ್ಟ ಠೇವಣಿಗಳೆಲ್ಲವಕ್ಕೂ ಬಡ್ಡಿದರ ಶೇ. 6 ಹಾಗೂ ಹೆಚ್ಚು ಇದೆ. 3 ವರ್ಷದಿಂದ 4 ವರ್ಷ 7 ತಿಂಗಳವರೆಗಿನ ಠೇವಣಿಗೆ ಗರಿಷ್ಠ ಶೇ. 6.50 ಬಡ್ಡಿ ಸಿಗುತ್ತದೆ. ಹಿರಿಯ ನಾಗರಿಕರ ಎಲ್ಲಾ ಠೇವಣಿಗಳಿಗೆ ರೆಗ್ಯುಲರ್ ಕಸ್ಟಮರ್ಗಳಿಗಿಂತ ಶೇ. 0.5ರಷ್ಟು ಹೆಚ್ಚು ಬಡ್ಡಿ ಸಿಗುತ್ತದೆ.
ಯೆಸ್ ಬ್ಯಾಂಕ್ನಲ್ಲಿ ಎಫ್ಡಿ ದರಗಳು
ಕಮರ್ಷಿಯಲ್ ಬ್ಯಾಂಕುಗಳ ಪೈಕಿ ಯೆಸ್ ಬ್ಯಾಂಕ್ ಅತಿಹೆಚ್ಚು ಎಫ್ಡಿ ದರಗಳನ್ನು ಆಫರ್ ಮಾಡುತ್ತಿದೆ. ಸಾಮಾನ್ಯ ಗ್ರಾಹಕರಿಗೆ ಶೇ. 7ರವರೆಗೆ ಬಡ್ಡಿ ಇದ್ದರೆ, ಹಿರಿಯ ನಾಗರಿಕರಿಗೆ ಬರೋಬ್ಬರಿ ಶೇ. 7.75 ಬಡ್ಡಿ ಆಫರ್ ಮಾಡಲಾಗಿದೆ. 36 ತಿಂಗಳಿಂದ 60 ತಿಂಗಳ (3-5 ವರ್ಷ) ಠೇವಣಿಗಳಿಗೆ ಹಿರಿಯ ನಾಗರಿಕರು ಶೇ. 7.75 ಬಡ್ಡಿ ಪಡೆಯುತ್ತಾರೆ. 12 ತಿಂಗಳ ಮೇಲ್ಪಟ್ಟ ಎಲ್ಲಾ ಠೇವಣಿಗಳಿಗೆ ಸಾಮಾನ್ಯ ಗ್ರಾಹಕರೂ ಕೂಡ ಶೇ. 6.75ಕ್ಕಿಂತ ಹೆಚ್ಚು ಬಡ್ಡಿ ಪಡೆಯಲು ಅವಕಾಶ ಇದೆ.
ಎರಡನೇ ಅತಿದೊಡ್ಡ ಖಾಸಗಿ ಬ್ಯಾಂಕ್ ಎನಿಸಿದ ಐಸಿಐಸಿಐ ಬ್ಯಾಂಕ್ನಲ್ಲಿ ಸಾಮಾನ್ಯ ಗ್ರಾಹಕರು ಎಫ್ಡಿಗಳಲ್ಲಿ ಶೇ. 6.50ರವರೆಗೆ ಬಡ್ಡಿ ಪಡೆಯಬಹುದು. 3 ವರ್ಷ ಮೇಲ್ಪಟ್ಟ ಠೇವಣಿಗಳಿಗೆ ಗರಿಷ್ಠ ಬಡ್ಡಿ ಕೊಡಲಾಗುತ್ತದೆ. ಹಿರಿಯ ನಾಗರಿಕರಿಗೆ 3-5 ವರ್ಷದ ಠೇವಣಿಗೆ ಶೇ. 7.10ರಷ್ಟು ಬಡ್ಡಿ ಪಡೆಯಬಹುದು.
ಇನ್ನಷ್ಟು ಪರ್ಸನಲ್ ಫೈನಾನ್ಸ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ
ಟೆಹ್ರಾನ್, ಏಪ್ರಿಲ್ 7: ಇಂದು ರಾತ್ರಿ ಇರಾನ್ನ ನಾಗರಿಕತೆ ಸಂಪೂರ್ಣವಾಗಿ ನಾಶವಾಗುತ್ತದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಎಚ್ಚರಿಕೆ ನೀಡಿದ ಸ್ವಲ್ಪ ಸಮಯದ ನಂತರ ಅದಕ್ಕೆ ಇರಾನ್ ಪ್ರತ್ಯುತ್ತರ ನೀಡಿದೆ. ನಾವು ನಿಮ್ಮ ಬೆದರಿಕೆಗೆ ಹೆದರುವುದಿಲ್ಲ, ನಮ್ಮ ದಾಳಿಗಳನ್ನು ದ್ವಿಗುಣಗೊಳಿಸುತ್ತೇವೆ, ನಾವೆಂದೂ ಹಿಂಜರಿಯುವುದಿಲ್ಲ ಎಂದು ಹೇಳಿದೆ. ಟ್ರಂಪ್ ಅವರ ಇತ್ತೀಚಿನ ಬೆದರಿಕೆಗಳ ನಂತರ ಎಲ್ಲಾ ರಾಜತಾಂತ್ರಿಕ ಮಾರ್ಗಗಳು ಮತ್ತು ಪರೋಕ್ಷ ಮಾತುಕತೆಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ಇರಾನ್ ಸ್ಪಷ್ಟಪಡಿಸಿದೆ
“ಅಮೆರಿಕದ ವಿರುದ್ಧ ಫತಾಹ್ ಮತ್ತು ಖೈಬರ್ ಶೇಕನ್ ಕ್ಷಿಪಣಿಗಳಿಗಾಗಿ ಹೊಸ ಉಡಾವಣಾ ವೇದಿಕೆಗಳೊಂದಿಗೆ ನಾವು ನಮ್ಮ ದಾಳಿಗಳನ್ನು ದ್ವಿಗುಣಗೊಳಿಸುತ್ತೇವೆ” ಎಂದು ಐಆರ್ಜಿಸಿ ಏರೋಸ್ಪೇಸ್ ಫೋರ್ಸ್ ಕಮಾಂಡರ್ ತಿಳಿಸಿದ್ದಾರೆ.
ದಕ್ಷಿಣ ಆಫ್ರಿಕಾದಲ್ಲಿರುವ ಇರಾನಿನ ರಾಯಭಾರ ಕಚೇರಿಯು ಎಕ್ಸ್ನಲ್ಲಿ ಟ್ರಂಪ್ ಹೇಳಿಕೆಗೆ ಪ್ರತಿಕ್ರಿಯಿಸಿದ್ದು, “ನೀವು ಮತ್ತು ನಿಮ್ಮ ಮಿತ್ರರಾಷ್ಟ್ರಗಳು ಇರಾನ್ನ ಪ್ರಾಚೀನ ನಾಗರಿಕತೆಯಿಂದ ಮರೆಯಲಾಗದ ಹೊಡೆತವನ್ನು ಅನುಭವಿಸುವಿರಿ” ಎಂದು ಹೇಳಿದೆ. ಫೆಬ್ರವರಿಯಲ್ಲಿ ಯುಎಸ್-ಇಸ್ರೇಲಿ ದಾಳಿಯ ಸಮಯದಲ್ಲಿ ಮಿನಾಬ್ನಲ್ಲಿ ಕೊಲ್ಲಲ್ಪಟ್ಟ ಮಗುವಿನ ದುಃಖಿತ ತಾಯಿಯ ಚಿತ್ರವನ್ನು ಸಹ ರಾಯಭಾರ ಕಚೇರಿ ಹಂಚಿಕೊಂಡಿದೆ. ಇದು ಅಯತೊಲ್ಲಾ ಅಲಿ ಖಮೇನಿಯವರ ಹತ್ಯೆಯ ನಂತರ ಮತ್ತು ಪ್ರಾಥಮಿಕ ಶಾಲೆಯ ಮೇಲೆ ಕ್ಷಿಪಣಿ ದಾಳಿಗಳನ್ನು ಗುರಿಯಾಗಿಸಿಕೊಂಡ ದಾಳಿಯಾಗಿತ್ತು. ಈ ದಾಳಿಯಲ್ಲಿ ಸುಮಾರು 170 ಶಾಲಾ ಹುಡುಗಿಯರು ಸಾವನ್ನಪ್ಪಿದ್ದರು. “ಈ ದುಃಖ, ಈ ಕೋಪ, ಈ ಮುಖವನ್ನು ನೆನಪಿಟ್ಟುಕೊಳ್ಳಿ. ನಾವು ನಿಮ್ಮನ್ನು ಸುಮ್ಮನೆ ಬಿಡುವುದಿಲ್ಲ” ಎಂದು ರಾಯಭಾರ ಕಚೇರಿಯು ಎಕ್ಸ್ನಲ್ಲಿ ಪೋಸ್ಟ್ ಮಾಡಿದೆ.
“ಅಮೆರಿಕನ್ ಭಯೋತ್ಪಾದಕ ಸೇನೆಯು ಕೆಂಪು ರೇಖೆಗಳನ್ನು ದಾಟಿದರೆ ನಮ್ಮ ಪ್ರತಿಕ್ರಿಯೆಯು ಬೇರೆಯದೇ ರೀತಿ ಇರುತ್ತದೆ. ನಾವು ನಾಗರಿಕ ಸೌಲಭ್ಯಗಳ ಮೇಲಿನ ಹೇಯ ಆಕ್ರಮಣಗಳ ವಿರುದ್ಧ ಪ್ರತೀಕಾರ ತೀರಿಸಿಕೊಳ್ಳಲು ಹಿಂಜರಿಯುವುದಿಲ್ಲ” ಎಂದು IRGC ತಿಳಿಸಿದೆ.
ಇಸ್ಲಾಮಿಕ್ ಗಣರಾಜ್ಯವು ನಿರ್ಣಾಯಕ ಹಾರ್ಮುಜ್ ಜಲಸಂಧಿಯನ್ನು ಮತ್ತೆ ತೆರೆಯುವುದನ್ನು ಒಳಗೊಂಡ ಒಪ್ಪಂದಕ್ಕೆ ಇರಾನ್ ಒಪ್ಪಿಕೊಳ್ಳಲು ನೀಡಿದ ಇತ್ತೀಚಿನ ಗಡುವನ್ನು ಇರಾನ್ ಪೂರೈಸದಿದ್ದರೆ “ಇಡೀ ನಾಗರಿಕತೆ ಇಂದು ರಾತ್ರಿ ನಾಶವಾಗುತ್ತದೆ” ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಚ್ಚರಿಸಿದ ನಂತರ ಈ ಬೆಳವಣಿಗೆ ಸಂಭವಿಸಿದೆ.
ಇರಾನ್ನಲ್ಲಿ ಎರಡು ಸೇತುವೆಗಳು ಮತ್ತು ರೈಲು ನಿಲ್ದಾಣದ ಮೇಲೆ ಅಮೆರಿಕದ ವಾಯುದಾಳಿಗಳು ನಡೆದಿವೆ.
ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಬಾಲಿವುಡ್ ನಟ ಅಕ್ಷಯ್ ಕುಮಾರ್ (Akshay Kumar) ಅವರು ಯಾವಾಗಲೂ ತಮ್ಮ ಶಿಸ್ತು ಮತ್ತು ಸ್ಟೈಲಿಶ್ ಉಡುಗೆಯಿಂದಲೇ ಗುರುತಿಸಿಕೊಳ್ಳುವವರು. ಆದರೆ, ಇದೇ ಮೊದಲ ಬಾರಿಗೆ ಅವರ ಫ್ಯಾಷನ್ ಆಯ್ಕೆ ತಪ್ಪಾಗಿದೆ. ಚಪ್ರಿ ರೀತಿ ಬಟ್ಟೆ ಹಾಕಿಕೊಂಡು ಬಂದ ಅವರನ್ನು ಜನರು ಹಿಗ್ಗಾಮುಗ್ಗಾ ಟ್ರೋಲ್ ಮಾಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಟ್ರೋಲ್ಗೆ ಒಳಗಾಗಿದ್ದಾರೆ. ಏಪ್ರಿಲ್ 6ರಂದು ‘ಭೂತ್ ಬಂಗ್ಲ’ (Bhoot Bangla) ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ಅಕ್ಷಯ್ ಕುಮಾರ್ ಅವರನ್ನು ಈ ರೀತಿ ನೋಡಿ ಅಭಿಮಾನಿಗಳು ದಂಗಾಗಿದ್ದಾರೆ.
ಅಕ್ಷಯ್ ಕುಮಾರ್ ಅವರು ಸಂಪೂರ್ಣವಾಗಿ ಹರಿದ ನೀಲಿ ಶರ್ಟ್ ಧರಿಸಿದ್ದರು. ಅದರ ಮೇಲೆ ಹರಿದ ಬ್ಲೇಜರ್ ಮತ್ತು ಕುತ್ತಿಗೆಗೆ ಎರಡು ಟೈಗಳನ್ನು ಧರಿಸಿ ವೇದಿಕೆ ಏರಿದ್ದರು. ಅವರ ಈ ಲುಕ್ ನೋಡಿ ಅಲ್ಲಿದ್ದ ಎಲ್ಲರಿಗೂ ಅಚ್ಚರಿ ಆಗಿದೆ. ಸೋಶಿಯಲ್ ಮೀಡಿಯಾದಲ್ಲಿ ಅಕ್ಷಯ್ ಕುಮಾರ್ ಅವರ ಈ ಅವತಾರದ ವಿಡಿಯೋ ಮತ್ತು ಫೋಟೋಗಳು ಸಿಕ್ಕಾಪಟ್ಟೆ ವೈರಲ್ ಆಗಿವೆ.
ತಮ್ಮ ಈ ವಿಚಿತ್ರ ಅವತಾರದ ಬಗ್ಗೆ ಸ್ವತಃ ಅಕ್ಷಯ್ ಕುಮಾರ್ ಅವರೇ ಆ ವೇದಿಕೆಯ ಮೇಲೆ ಸ್ಪಷ್ಟನೆ ನೀಡಿದ್ದಾರೆ. ಚಿತ್ರದ ಹಾರರ್-ಕಾಮಿಡಿ ಥೀಮ್ಗೆ ತಕ್ಕಂತೆ ಈ ಲುಕ್ ಮಾಡಲಾಗಿದ್ದು, ‘ಈ ಬಟ್ಟೆಯನ್ನು ದೆವ್ವಗಳು ಈ ರೀತಿ ಹರಿದಿವೆ’ ಎಂದು ಹಾಸ್ಯ ಚಟಾಕಿ ಹಾರಿಸಿದರು. ಆದರೆ, ನೆಟ್ಟಿಗರು ಮಾತ್ರ ಇವರನ್ನು ಸುಮ್ಮನೆ ಬಿಟ್ಟಿಲ್ಲ. ಮನಸ್ಸಿಗೆ ಬಂದಂತೆ ಟ್ರೋಲ್ ಮಾಡಿದ್ದಾರೆ.
ಅಕ್ಷಯ್ ಕುಮಾರ್ ಅವರ ಈ ಹೊಸ ಫ್ಯಾಷನ್ ಪ್ರಯೋಗ ನೋಡಿದ ನೆಟ್ಟಿಗರು ತರಹೇವಾರಿ ಕಮೆಂಟ್ ಮಾಡುತ್ತಿದ್ದಾರೆ. ‘ಅತಿಯಾದ ಹಣ ಮನುಷ್ಯನನ್ನು ಹುಚ್ಚನನ್ನಾಗಿ ಮಾಡುತ್ತದೆ’ ಎಂದು ಒಬ್ಬರು ಟೀಕಿಸಿದ್ದಾರೆ. ‘ಇವರು ಒಬ್ಬ ಜೋಕರ್ ರೀತಿ ಕಾಣುತ್ತಿದ್ದಾರೆ’ ಎಂಬ ಕಮೆಂಟ್ ಕೂಡ ಬಂದಿದೆ. ‘ಬಡವರು ಹೀಗೆ ಮಾಡಿದರೆ ಚಪ್ರಿ ಅಂತಾರೆ. ಅದೇ ಶ್ರೀಮಂತರು ಹಾಕಿದರೆ ಅದು ಫ್ಯಾಷನ್’ ಎಂಬ ಟೀಕೆಗಳೂ ವ್ಯಕ್ತವಾಗಿವೆ.
‘ಸಾಮಾನ್ಯವಾಗಿ ಅಕ್ಷಯ್ ಕುಮಾರ್ ಅವರ ಬಟ್ಟೆಯನ್ನು ಪತ್ನಿ ಟ್ವಿಂಕಲ್ ಖನ್ನಾ ಆಯ್ಕೆ ಮಾಡುತ್ತಾರೆ. ಬಹುಶಃ ಹಿಂದಿನ ರಾತ್ರಿ ಇಬ್ಬರ ನಡುವೆ ಜಗಳವಾಗಿರಬೇಕು. ಅದಕ್ಕೆ ಟ್ವಿಂಕಲ್ ಹೀಗೆ ಸೇಡು ತೀರಿಸಿಕೊಂಡಿದ್ದಾರೆ ಅನ್ನಿಸುತ್ತದೆ’ ಎಂದು ನೆಟ್ಟಿಗರೊಬ್ಬರು ಕಾಲೆಳೆದಿದ್ದಾರೆ. ಒಟ್ಟಿನಲ್ಲಿ, ‘ಭೂತ್ ಬಂಗ್ಲ’ ಸಿನಿಮಾದ ಪ್ರಚಾರವನ್ನು ಡಿಫರೆಂಟ್ ಆಗಿ ಮಾಡಲು ಪ್ರಯತ್ನಿಸಿದ ಅಕ್ಷಯ್ ಕುಮಾರ್ ಅವರು ಈ ರೀತಿ ಟ್ರೋಲ್ ಆಗಿದ್ದಾರೆ.