Gold Rate: ಚಿನ್ನದ ಬೆಲೆ 2 ದಿನದಲ್ಲಿ 45 ರು ಇಳಿಕೆ; ಬೆಳ್ಳಿ ಬೆಲೆ 5-10 ರೂ ಕಡಿಮೆ – Kannada News

ನವದೆಹಲಿ, ಜೂನ್ 5: ಭಾರತದಲ್ಲಿ ಚಿನ್ನದ ಬೆಲೆಯ (Gold Rates) ಸತತ ಇಳಿಕೆ ಆಗುತ್ತಿದೆ. ನಿನ್ನೆ ಗುರುವಾರ ಗ್ರಾಮ್​ಗೆ 10 ರೂ ಇಳಿದಿದ್ದ ಆಭರಣ ಚಿನ್ನದ ಬೆಲೆ ಇವತ್ತು ಶುಕ್ರವಾರ 35 ರೂ ಕಡಿಮೆಗೊಂಡಿದೆ. ಎರಡು ದಿನದಲ್ಲಿ 45 ರುಗಳಷ್ಟು ಬೆಲೆ ತಗ್ಗಿದೆ. ಆದರೆ, ವಿದೇಶಗಳಲ್ಲಿ ಹಲವೆಡೆ ಇದರ ಬೆಲೆಯಲ್ಲಿ ಅಲ್ಪ ಏರಿಕೆ ಆಗಿದೆ. ಇನ್ನು, ಬೆಳ್ಳಿ ಬೆಲೆ ಹಲವು ದಿನಗಳ ಬಳಿಕ ಕಡಿಮೆ ಆಗಿದೆ. ಈ ಬಿಳಿ ಲೋಹ ಗ್ರಾಮ್​ಗೆ 5ರಿಂದ 10 ರೂಗಳಷ್ಟು ತಗ್ಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,42,750 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,55,730 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 27,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,42,750 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 27,500 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 28,000 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಜೂನ್ 5ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,573 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,275 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,680 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 275 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,573 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,275 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 275 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 14,275 ರೂ
  • ಚೆನ್ನೈ: 14,430 ರೂ
  • ಮುಂಬೈ: 14,275 ರೂ
  • ದೆಹಲಿ: 14,290 ರೂ
  • ಕೋಲ್ಕತಾ: 14,275 ರೂ
  • ಕೇರಳ: 14,275 ರೂ
  • ಅಹ್ಮದಾಬಾದ್: 14,280 ರೂ
  • ಜೈಪುರ್: 14,290 ರೂ
  • ಲಕ್ನೋ: 14,290 ರೂ
  • ಭುವನೇಶ್ವರ್: 14,275 ರೂ

ಇದನ್ನೂ ಓದಿ: ರೆಪೋ ದರ ಶೇ. 5.25, ಜಿಡಿಪಿ ದರ ಶೇ. 6.6, ಹಣದುಬ್ಬರ ಶೇ. 5.1 ಸಾಧ್ಯತೆ; ಆರ್​ಬಿಐ ಎಂಪಿಸಿ ಪ್ರಕಟಣೆ

ವಿದೇಶಗಳಲ್ಲಿ 24 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 591 ರಿಂಗಿಟ್ (14,006 ರುಪಾಯಿ)
  • ದುಬೈ: 538.50 ಡಿರಾಮ್ (13,998 ರುಪಾಯಿ)
  • ಅಮೆರಿಕ: 147.50 ಡಾಲರ್ (14,056 ರುಪಾಯಿ)
  • ಸಿಂಗಾಪುರ: 195.60 ಸಿಂಗಾಪುರ್ ಡಾಲರ್ (14,506 ರುಪಾಯಿ)
  • ಕತಾರ್: 538.50 ಕತಾರಿ ರಿಯಾಲ್ (14,077 ರೂ)
  • ಸೌದಿ ಅರೇಬಿಯಾ: 554 ಸೌದಿ ರಿಯಾಲ್ (14,061 ರುಪಾಯಿ)
  • ಓಮನ್: 57 ಒಮಾನಿ ರಿಯಾಲ್ (14,110 ರುಪಾಯಿ)
  • ಕುವೇತ್: 45.19 ಕುವೇತಿ ದಿನಾರ್ (14,035 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 275 ರೂ
  • ಚೆನ್ನೈ: 280 ರೂ
  • ಮುಂಬೈ: 275 ರೂ
  • ದೆಹಲಿ: 275 ರೂ
  • ಕೋಲ್ಕತಾ: 275 ರೂ
  • ಕೇರಳ: 280 ರೂ
  • ಅಹ್ಮದಾಬಾದ್: 275 ರೂ
  • ಜೈಪುರ್: 275 ರೂ
  • ಲಕ್ನೋ: 275 ರೂ
  • ಭುವನೇಶ್ವರ್: 280 ರೂ
  • ಪುಣೆ: 275

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

Tulsi Mala: ಅನುಷ್ಕಾ ಶರ್ಮಾ ಕತ್ತಿನಲ್ಲಿರುವ ತುಳಸಿ ಮಾಲೆ ಗಮನಿಸಿದ್ದೀರಾ? ಧರಿಸುವುದರ ಹಿಂದಿನ ಅಸಲಿ ಕಾರಣ ಇಲ್ಲಿದೆ – Kannada News

ಅನುಷ್ಕಾ ಶರ್ಮಾ ತುಳಸಿ ಮಾಲೆ
Image Credit source: Pinterest

ಬಾಲಿವುಡ್ ನಟಿ ಅನುಷ್ಕಾ ಶರ್ಮಾ ತಮ್ಮ ನಟನೆ, ವಿಭಿನ್ನ ಫ್ಯಾಷನ್ ಸೆನ್ಸ್ ಹಾಗೂ ಸ್ಟೈಲ್ ಸ್ಟೇಟ್‌ಮೆಂಟ್‌ನಿಂದಲೇ ಸದಾ ಸುದ್ದಿಯಲ್ಲಿರುವವರು. ಆದರೆ, ಇತ್ತೀಚಿನ ದಿನಗಳಲ್ಲಿ ಅವರ ಸಾರ್ವಜನಿಕ ಉಡುಗೆ-ತೊಡುಗೆ ಹಾಗೂ ಶೈಲಿಯಲ್ಲಿ ಭಾರಿ ಬದಲಾವಣೆ ಕಾಣಿಸುತ್ತಿದೆ. ಇತ್ತೀಚೆಗೆ ನಡೆದ ಐಪಿಎಲ್ 2026ರ ಫೈನಲ್ ಪಂದ್ಯದಲ್ಲಿ ಪತಿ ವಿರಾಟ್ ಕೊಹ್ಲಿ ಅವರನ್ನು ಹುರಿದುಂಬಿಸಲು ಬಂದಿದ್ದ ಅನುಷ್ಕಾ ಅವರ ಕತ್ತಿನಲ್ಲಿ ‘ತುಳಸಿ ಮಾಲೆ‘ (Tulsi Mala) ಪ್ರಮುಖವಾಗಿ ಗಮನ ಸೆಳೆದಿತ್ತು. ಇದು ಕೇವಲ ಯಾವುದೋ ತಾತ್ಕಾಲಿಕ ಫ್ಯಾಷನ್ ಟ್ರೆಂಡ್ ಅಲ್ಲ. ಬದಲಿಗೆ, ಅನುಷ್ಕಾ ಶರ್ಮಾ ಮತ್ತು ವಿರಾಟ್ ಕೊಹ್ಲಿ ಜೋಡಿಯ ವೈಯಕ್ತಿಕ ಜೀವನದಲ್ಲಿ ನಡೆದಿರುವ ಆಧ್ಯಾತ್ಮಿಕ ಜೀವನಶೈಲಿಯ ಸಂಕೇತವಾಗಿದೆ.

ವೃಂದಾವನದ ‘ಹರಿವಂಶ ಸಂಪ್ರದಾಯ’ ದೀಕ್ಷೆ

ಅನುಷ್ಕಾ ಶರ್ಮಾ ಕತ್ತಿನಲ್ಲಿ ತುಳಸಿ ಮಾಲೆ ರಾರಾಜಿಸುತ್ತಿರುವುದರ ಮುಖ್ಯ ಕಾರಣ, ಅವರು ವೃಂದಾವನದ ಪ್ರಸಿದ್ಧ ವೈಷ್ಣವ ಪಂಥವಾದ ‘ಹರಿವಂಶ ಸಂಪ್ರದಾಯ’ಕ್ಕೆ ಸೇರ್ಪಡೆಯಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಸಂಪ್ರದಾಯವು ಸಂಪೂರ್ಣವಾಗಿ ರಾಧಾ-ಕೃಷ್ಣರ ಭಕ್ತಿಯನ್ನು ಆಧರಿಸಿದೆ. ಕಳೆದ ಕೆಲವು ವರ್ಷಗಳಿಂದ ಅನುಷ್ಕಾ ಮತ್ತು ವಿರಾಟ್ ಜೋಡಿಯು ವೃಂದಾವನದ ಪರಮ ಪೂಜ್ಯ ಸಂತ ಶ್ರೀ ಪ್ರೇಮಾನಂದ ಜಿ ಮಹರಾಜ್​ ಅವರ ಆಶ್ರಮಕ್ಕೆ ನಿಯಮಿತವಾಗಿ ಭೇಟಿ ನೀಡುತ್ತಿದ್ದಾರೆ. ಅವರ ಆಧ್ಯಾತ್ಮಿಕ ಪ್ರವಚನಗಳಿಂದ ಪ್ರೇರಿತರಾದ ಈ ದಂಪತಿ, ಶ್ರೀಗಳಿಂದ ಆಧ್ಯಾತ್ಮಿಕ ದೀಕ್ಷೆ (Diksha) ಪಡೆದಿದ್ದಾರೆ ಎಂದು ಹೇಳಲಾಗುತ್ತಿದೆ. ವೈಷ್ಣವ ಸಂಪ್ರದಾಯದಲ್ಲಿ, ಕತ್ತಿನಲ್ಲಿ ‘ಕಂಠಿ’ (ತುಳಸಿ ಮಾಲೆ) ಧರಿಸುವುದು ಮತ್ತು ಹಣೆಯ ಮೇಲೆ ಸಾಂಪ್ರದಾಯಿಕ ತಿಲಕ ಇಡುವುದು ಎಂದರೆ, ಆ ವ್ಯಕ್ತಿಯು ಗುರುವಿಗೆ ಶರಣಾಗಿದ್ದಾನೆ ಮತ್ತು ತನ್ನ ಎಲ್ಲಾ ಕರ್ಮಗಳನ್ನು ಭಗವಂತನಿಗೆ ಅರ್ಪಿಸಿದ್ದಾನೆ ಎಂದರ್ಥ.

ಕಟ್ಟುನಿಟ್ಟಾದ ಸಾತ್ವಿಕ್ ಜೀವನಶೈಲಿ ನಿಯಮಗಳು:

ತುಳಸಿ ಮಾಲೆಯನ್ನು ಧರಿಸುವುದು ಅಷ್ಟು ಸುಲಭವಲ್ಲ. ಇದನ್ನು ಧರಿಸಿದ ತಕ್ಷಣ ನಮ್ಮ ದಿನನಿತ್ಯದ ಜೀವನಶೈಲಿಯಲ್ಲಿ ಕಟ್ಟುನಿಟ್ಟಾದ ‘ಸಾತ್ವಿಕ್’ (Sattvic) ನಿಯಮಗಳನ್ನು ಪಾಲಿಸಬೇಕಾಗುತ್ತದೆ. ಅನುಷ್ಕಾ ಶರ್ಮಾ ಸದ್ಯ ಈ ಎಲ್ಲಾ ನಿಯಮಗಳನ್ನು ಚಾಚೂ ತಪ್ಪದೆ ಪಾಲಿಸುತ್ತಿದ್ದಾರೆ. ತುಳಸಿ ಮಾಲೆ ಧರಿಸುವವರು ಮಾಂಸ, ಮೀನು ಅಥವಾ ಮೊಟ್ಟೆಯನ್ನು ಸಂಪೂರ್ಣವಾಗಿ ತ್ಯಜಿಸಬೇಕು. ಅನುಷ್ಕಾ ಈಗಾಗಲೇ ಹಲವು ವರ್ಷಗಳಿಂದ ಸಸ್ಯಾಹಾರಿಯಾಗಿದ್ದು, ಅವರ ಪ್ರೇರಣೆಯಿಂದಲೇ ವಿರಾಟ್ ಕೊಹ್ಲಿ ಕೂಡ ಮಾಂಸಾಹಾರ ಬಿಟ್ಟಿರುವುದು ಎಲ್ಲರಿಗೂ ತಿಳಿದಿರುವ ವಿಷಯ. ಇದರೊಂದಿಗೆ ಈರುಳ್ಳಿ ಮತ್ತು ಬೆಳ್ಳುಳ್ಳಿಯಂತಹ ಆಹಾರಗಳನ್ನು ತ್ಯಜಿಸಿ, ಭಗವಂತನಿಗೆ ಪ್ರಸಾದ ರೂಪದಲ್ಲಿ ಅರ್ಪಿಸಿದ ಆಹಾರವನ್ನು ಮಾತ್ರ ಸೇವಿಸಲಾಗುತ್ತದೆ. ಕೇವಲ ಆಹಾರವಷ್ಟೇ ಅಲ್ಲದೆ ಯಾರ ಬಗ್ಗೆಯೂ ಕೆಟ್ಟದಾಗಿ ಮಾತನಾಡಬಾರದು ಮತ್ತು ಮಾತಿನಲ್ಲಿ ಸದಾ ಶಾಂತತೆಯನ್ನು ಕಾಪಾಡಿಕೊಳ್ಳಬೇಕು ಎಂಬುದು ಇದರ ಮುಖ್ಯ ನಿಯಮವಾಗಿದೆ.

ಇದನ್ನೂ ಓದಿ: ಬೃಂದಾವನದಲ್ಲಿ ವಿರಾಟ್-ಅನುಷ್ಕಾ; ಪ್ರೇಮಾನಂದ್ ಗುರೂಜಿ ಬಳಿ ಈ ಜೋಡಿ ಪದೇ ಪದೇ ಹೋಗುವುದೇಕೆ ಗೊತ್ತಾ?

ತುಳಸಿ ಮಾಲೆಯಿಂದ ಸಿಗುವ ಅದ್ಭುತ ಮಾನಸಿಕ ಲಾಭಗಳು:

ಸನಾತನ ಗ್ರಂಥಗಳು ಮತ್ತು ಆಧ್ಯಾತ್ಮಿಕ ಚಿಂತಕರ ಪ್ರಕಾರ, ತುಳಸಿ ಮಾಲೆಯನ್ನು ಧರಿಸುವುದರಿಂದ ವ್ಯಕ್ತಿಯ ಮಾನಸಿಕ ಸ್ಥಿತಿಯಲ್ಲಿ ಅದ್ಭುತ ಬದಲಾವಣೆಗಳು ಆಗುತ್ತವೆ. ತುಳಸಿ ಒಂದು ಅತ್ಯುತ್ತಮ ಒತ್ತಡ ನಿವಾರಕವಾಗಿದ್ದು (Adaptogen), ಇದು ನರಮಂಡಲವನ್ನು ಶಾಂತಗೊಳಿಸುತ್ತದೆ. ಆಧ್ಯಾತ್ಮಿಕವಾಗಿ, ತುಳಸಿ ಮಣಿಗಳು ಸುತ್ತಲಿನ ನಕಾರಾತ್ಮಕ ಶಕ್ತಿಗಳಿಂದ ಮತ್ತು ಸಾರ್ವಜನಿಕ ವಲಯದಲ್ಲಿ ಎದುರಾಗುವ ದೃಷ್ಟಿದೋಷಗಳಿಂದ ರಕ್ಷಣೆ ನೀಡುತ್ತವೆ ಎಂಬ ನಂಬಿಕೆಯಿದೆ. ಕತ್ತಿನ ಚರ್ಮಕ್ಕೆ ಸದಾ ತುಳಸಿ ಮಣಿಗಳು ಸ್ಪರ್ಶಿಸುವುದರಿಂದ, ನಾವು ಸದಾ ಜಾಗೃತರಾಗಿರಬೇಕು ಮತ್ತು ಭಗವಂತನ ನಾಮಸ್ಮರಣೆಯಲ್ಲಿ ತೊಡಗಿರಬೇಕು ಎಂಬ ಪ್ರಜ್ಞೆ ಜಾಗೃತವಾಗಿರುತ್ತದೆ.

ವಿರಾಟ್-ಅನುಷ್ಕಾ ಜೋಡಿಯ ಆಧ್ಯಾತ್ಮಿಕ ಪಯಣ:

ಅನುಷ್ಕಾ ಅವರ ಈ ಆಧ್ಯಾತ್ಮಿಕ ಬದಲಾವಣೆಯ ವಿಶೇಷತೆಯೆಂದರೆ, ಇದರಲ್ಲಿ ಪತಿ ವಿರಾಟ್ ಕೊಹ್ಲಿ ಅವರೂ ಸಮಾನವಾಗಿ ಭಾಗಿಯಾಗಿದ್ದಾರೆ. ವಿರಾಟ್ ಕೊಹ್ಲಿ ತಮ್ಮ ಇತ್ತೀಚಿನ ಸಂದರ್ಶನಗಳಲ್ಲಿ, “ಅನುಷ್ಕಾ ನನ್ನ ಜೀವನಕ್ಕೆ ಬಂದ ನಂತರವೇ ನನ್ನಲ್ಲಿ ತಾಳ್ಮೆ, ಪ್ರಬುದ್ಧತೆ ಮತ್ತು ಶಾಂತತೆ ಬಂದಿದೆ” ಎಂದು ಬಹಿರಂಗವಾಗಿ ಒಪ್ಪಿಕೊಂಡಿದ್ದಾರೆ. ಜಾಗತಿಕ ಮಟ್ಟದ ಖ್ಯಾತಿ, ಕೋಟ್ಯಂತರ ರೂಪಾಯಿ ಹಣ ಹಾಗೂ ಸ್ಟಾರ್‌ಡಮ್ ಇದ್ದಾಗಲೂ, ಈ ಜೋಡಿ ಭಾರತೀಯ ಪ್ರಾಚೀನ ಸಂಪ್ರದಾಯ ಮತ್ತು ಆಧ್ಯಾತ್ಮಕ್ಕೆ ಶರಣಾಗಿರುವುದು ಕೋಟ್ಯಂತರ ಅಭಿಮಾನಿಗಳಿಗೆ ಮಾದರಿಯಾಗಿದೆ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 12:08 pm, Fri, 5 June 26

Source link

ರಾಮಲಿಂಗಾರೆಡ್ಡಿ ನನಗೆ ತುಂಬಾ ಆತ್ಮೀಯರು, ಸಮಸ್ಯೆ ಬಗೆಹರಿಸುತ್ತೇನೆ: ಸಿಎಂ ಡಿಕೆಶಿ – Kannada News

ಬೆಂಗಳೂರು, ಜೂ.5: ಖಾತೆ ಹಂಚಿಕೆಯ ಬೆನ್ನಲ್ಲೇ ಹಿರಿಯ ನಾಯಕ ರಾಮಲಿಂಗಾ ರೆಡ್ಡಿ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವುದು ಕಾಂಗ್ರೆಸ್ ವಲಯದಲ್ಲಿ ತಲ್ಲಣ ಮೂಡಿಸಿದೆ. ಇದರ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಕ್ಷಣವೇ ಅಖಾಡಕ್ಕಿಳಿದಿದ್ದು, ಬಂಡಾಯ ಶಮನಗೊಳಿಸಲು ‘ಡ್ಯಾಮೇಜ್ ಕಂಟ್ರೋಲ್’ ಕಸರತ್ತು ಆರಂಭಿಸಿದ್ದಾರೆ. ರಾಮಲಿಂಗಾ ರೆಡ್ಡಿ ಅವರ ರಾಜೀನಾಮೆ ನಿರ್ಧಾರದ ಕುರಿತು ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಸಿಎಂ ಡಿ.ಕೆ. ಶಿವಕುಮಾರ್, “ರಾಮಲಿಂಗಾರೆಡ್ಡಿ ಅವರು ನನಗೆ ತುಂಬಾ ಆತ್ಮೀಯರು. ಪಕ್ಷ ಮತ್ತು ಸರ್ಕಾರದ ಬೆಳವಣಿಗೆಯಲ್ಲಿ ಅವರ ಪಾತ್ರ ದೊಡ್ಡದಿದೆ. ಉಂಟಾಗಿರುವ ಅಸಮಾಧಾನದ ಕುರಿತು ನಾನು ಖುದ್ದಾಗಿ ಅವರ ಜೊತೆ ಕುಳಿತು ಚರ್ಚಿಸಿ, ಎಲ್ಲಾ ಸಮಸ್ಯೆಗಳನ್ನು ಶೀಘ್ರದಲ್ಲೇ ಬಗೆಹರಿಸುತ್ತೇನೆ” ಎಂದು ಹೇಳಿದ್ದಾರೆ. ಬೆಂಗಳೂರು ಅಭಿವೃದ್ಧಿ ಖಾತೆ ಸಿಗಲಿಲ್ಲ ಎಂಬ ಕಾರಣಕ್ಕೆ ರೆಡ್ಡಿ ಅವರು ತೀವ್ರ ಬೇಸರಗೊಂಡಿದ್ದಾರೆ ಎನ್ನಲಾಗಿದ್ದು, ಮುಖ್ಯಮಂತ್ರಿಗಳು ಅವರ ಮನವೊಲಿಸುವಲ್ಲಿ ಎಷ್ಟರಮಟ್ಟಿಗೆ ಯಶಸ್ವಿಯಾಗಲಿದ್ದಾರೆ ಎಂಬುದನ್ನು ನೋಡಬೇಕಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬೆಂಗಳೂರು ಟ್ರಾಫಿಕ್ ಪೋಲೀಸರು ಇನ್ಮುಂದೆ ಕೂಲ್ ಕೂಲ್! ಬಿಸಿಲ ಬೇಗೆಯ ನಿಯಂತ್ರಣಕ್ಕೆ 20 AC ಹೆಲ್ಮೆಟ್ ವಿತರಣೆ – Kannada News

ಬಿಸಿಲ ಬೇಗೆಯ ನಿಯಂತ್ರಣಕ್ಕೆ 20 AC ಹೆಲ್ಮೆಟ್ ವಿತರಣೆ
Image Credit source: The New Indian Express

ಬೆಂಗಳೂರು, ಜೂನ್ 05: ಹೆಚ್ಚುತ್ತಿರುವ ತಾಪಮಾನ ಮತ್ತು ಬಿಸಿಲಿನ ಬೇಗೆಯಿಂದ ರಸ್ತೆಗಿಳಿದು ಕರ್ತವ್ಯ ನಿರ್ವಹಿಸುವ ಸಂಚಾರಿ ಪೊಲೀಸರನ್ನು ರಕ್ಷಿಸಲು ಬೆಂಗಳೂರು ಉತ್ತರ ಮಹಾನಗರ ಪಾಲಿಕೆ (BNCC) ಮಹತ್ವದ ಹೆಜ್ಜೆಯನ್ನಿಟ್ಟಿದೆ. ಪೈಲಟ್ ಯೋಜನೆಯಡಿಯಲ್ಲಿ ನಗರದ ಸಂಚಾರಿ ಪೊಲೀಸ್ ಸಿಬ್ಬಂದಿಗೆ AC ಹೆಲ್ಮೆಟ್‌ಗಳನ್ನು ವಿತರಿಸಲಾಗಿದೆ.

ಮುಖ್ಯಾಂಶಗಳು

  • ಬೆಂಗಳೂರು ಸಂಚಾರಿ ಪೊಲೀಸ್ ಸಿಬ್ಬಂದಿಗೆ ಬಿಎನ್‌ಸಿಸಿಯಿಂದ ಹೈಟೆಕ್ ಎಸಿ ಹೆಲ್ಮೆಟ್‌ಗಳ ವಿತರಣೆ.
  • ಮೊದಲ ಹಂತದಲ್ಲಿ ಪ್ರಾಯೋಗಿಕವಾಗಿ 20 ಎಸಿ ಹೆಲ್ಮೆಟ್‌ಗಳನ್ನು ನೀಡಿದ ಮಹಾನಗರ ಪಾಲಿಕೆ.
  • ಮುಂಬರುವ ದಿನಗಳಲ್ಲಿ ಇಂದಿರಾ ಕ್ಯಾಂಟೀನ್ ಸಿಬ್ಬಂದಿಗೂ ಈ ಯೋಜನೆ ವಿಸ್ತರಿಸಲು ಪ್ರಸ್ತಾವನೆ.

ಬಿಸಿಲಿನ ತಾಪದಿಂದ ರಕ್ಷಣೆ ನೀಡಲಿವೆ 20 ಎಸಿ ಹೆಲ್ಮೆಟ್‌ಗಳು

ಹವಾಮಾನ ವೈಪರೀತ್ಯ ಮತ್ತು ಹೆಚ್ಚುತ್ತಿರುವ ತಾಪಮಾನದ ಹಿನ್ನೆಲೆಯಲ್ಲಿ ಹೊರಾಂಗಣದಲ್ಲಿ ಮತ್ತು ಸಿಗ್ನಲ್‌ಗಳಲ್ಲಿ ಗಂಟೆಗಟ್ಟಲೆ ನಿಂತು ಕೆಲಸ ಮಾಡುವ ಸಿಬ್ಬಂದಿಯ ಆರೋಗ್ಯ ರಕ್ಷಣೆ ಅತ್ಯಂತ ಪ್ರಮುಖವಾಗಿದೆ. ಹೀಗಾಗಿ ಮೊದಲ ಹಂತದಲ್ಲಿ ಪ್ರಾಯೋಗಿಕವಾಗಿ 20 ಅತ್ಯಾಧುನಿಕ ಎಸಿ ಹೆಲ್ಮೆಟ್‌ಗಳನ್ನು ಸಂಚಾರಿ ಪೊಲೀಸರಿಗೆ ವಿತರಿಸಲಾಗಿದೆ. ‘ಹೀಟ್-ಹೆಲ್ತ್ ಪ್ರೊಟೊಕಾಲ್’ (Heat-Health Protocol) ಅಡಿಯಲ್ಲಿ ಬೆಂಗಳೂರು ಉತ್ತರ ಮಹಾನಗರ ಪಾಲಿಕೆಯು C40 ಸಿಟೀಸ್, ಸೆನ್ಸಿಂಗ್ ಲೋಕಲ್ ಮತ್ತು ಹಸಿರು ದಳ ಸಂಸ್ಥೆಗಳ ಸಹಯೋಗದೊಂದಿಗೆ ಈ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಿತ್ತು.

ಇಂದಿರಾ ಕ್ಯಾಂಟೀನ್, ಸರ್ಕಾರಿ ಕಚೇರಿಗಳಿಗೂ ವಿಸ್ತರಣೆ ಸಾಧ್ಯತೆ

ಈ ಕುರಿತು ಮಾಹಿತಿ ನೀಡಿರುವ ಬಿಎನ್‌ಸಿಸಿ ಕಮಿಷನರ್ ಪೊಮ್ಮಲ ಸುನಿಲ್ ಕುಮಾರ್, ಬಿಸಿಲಿನ ತಾಪದಿಂದ ಉಂಟಾಗುವ ಆರೋಗ್ಯ ಸಮಸ್ಯೆಗಳನ್ನು ತಡೆಗಟ್ಟಲು ಈ ಹಿಂದೆಯೇ ಬಿಎನ್‌ಸಿಸಿ ಪೌರಕಾರ್ಮಿಕರು, ಆಶಾ (ASHA) ಕಾರ್ಯಕರ್ತೆಯರು ಮತ್ತು ಒಣ ಕಸ ಸಂಗ್ರಹಣಾ ಕೇಂದ್ರದ ಕಾರ್ಮಿಕರಿಗೆ ಇಂತಹ ಕೂಲಿಂಗ್ ಕಿಟ್‌ಗಳನ್ನು ವಿತರಿಸಲಾಗಿತ್ತು. ಈಗ ಇದನ್ನು ಸಂಚಾರಿ ಪೊಲೀಸರಿಗೂ ವಿಸ್ತರಿಸಲಾಗಿದೆ ಎಂದಿದ್ದಾರೆ. ಮುಂಬರುವ ದಿನಗಳಲ್ಲಿ ಈ ಯೋಜನೆಯನ್ನು ಇಂದಿರಾ ಕ್ಯಾಂಟೀನ್‌ ಸಿಬ್ಬಂದಿ ಹಾಗೂ ಇತರೆ ಸರ್ಕಾರಿ ಕಚೇರಿಗಳಿಗೂ ವಿಸ್ತರಿಸುವ ಪ್ರಸ್ತಾವನೆ ಇದೆ ಎಂದು ಅವರು ತಿಳಿಸಿದ್ದಾರೆ.

ಈ ವಿಶೇಷ ಕಾರ್ಯಕ್ರಮದಲ್ಲಿ ತಾಪಮಾನ ಹೆಚ್ಚಳದಿಂದ ಉಂಟಾಗುವ ಆರೋಗ್ಯ ಸಮಸ್ಯೆಗಳು, ‘ಹೀಟ್ ಸ್ಟ್ರೆಸ್’ (Heat Stress) ಲಕ್ಷಣಗಳು, ತುರ್ತು ಪರಿಸ್ಥಿತಿಯಲ್ಲಿ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳು ಮತ್ತು ಸುರಕ್ಷತಾ ನಿಯಮಗಳ ಕುರಿತು ಸಂಚಾರಿ ಪೊಲೀಸರಿಗೆ ಜಾಗೃತಿ ಮೂಡಿಸಲಾಯಿತು. ಕಾರ್ಯಕ್ರಮದಲ್ಲಿ ಸಂಚಾರಿ ಪೊಲೀಸ್ ಅಧಿಕಾರಿಗಳು ಹಾಗೂ ವಿವಿಧ ಸ್ವಯಂಸೇವಾ ಸಂಸ್ಥೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಕಾಂಗ್ರೆಸ್‌ನಲ್ಲಿ ಆರದ ಖಾತೆ ಕಿಚ್ಚು: ರಾಮಲಿಂಗಾ ರೆಡ್ಡಿ ರಾಜೀನಾಮೆ ಬೆನ್ನಲ್ಲೇ ಸಚಿವ ಕೆಎಚ್ ಮುನಿಯಪ್ಪ ಬಹಿರಂಗ ಅಸಮಾಧಾನ – Kannada News

ಬೆಂಗಳೂರು, ಜೂನ್ 5: ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ನೇತೃತ್ವದ ಸಂಪುಟದಲ್ಲಿ ಖಾತೆ ಹಂಚಿಕೆ ಬೆನ್ನಲ್ಲೇ ಸೃಷ್ಟಿಯಾಗಿರುವ ಭಿನ್ನಮತ ಈಗ ಮತ್ತಷ್ಟು ತೀವ್ರ ಸ್ವರೂಪ ಪಡೆದುಕೊಳ್ಳುವ ಸುಳಿವು ಕಾಣಿಸಿದೆ. ಹಿರಿಯ ನಾಯಕ ರಾಮಲಿಂಗಾ ರೆಡ್ಡಿ ಅವರು ಸಚಿವ ಸ್ಥಾನದ ರಾಜೀನಾಮೆ ನೀಡಿದ ಬೆನ್ನಲ್ಲೇ, ಮತ್ತೊಬ್ಬ ಹಿರಿಯ ಮುಖಂಡ ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಕೆಎಚ್ ಮುನಿಯಪ್ಪ (KH Muniyappa) ತಮಗೆ ನೀಡಿರುವ ಖಾತೆ ಬಗ್ಗೆ ಬಹಿರಂಗವಾಗಿ ತೀವ್ರ ಅಸಮಾಧಾನ ಹೊರಹಾಕಿದ್ದಾರೆ. ಖಾತೆ ಹಂಚಿಕೆಯಲ್ಲಿ ಹಿರಿತನವನ್ನು ಪರಿಗಣಿಸುತ್ತಿಲ್ಲ ಎಂದು ಹೈಕಮಾಂಡ್ ವಿರುದ್ಧವೇ ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ಮುಖ್ಯಾಂಶಗಳು

  • ಖಾತೆ ಹಂಚಿಕೆಯಲ್ಲಿ ಹಿರಿತನಕ್ಕೆ ಬೆಲೆ ಸಿಕ್ಕಿಲ್ಲ: ಮುನಿಯಪ್ಪ.
  • ಹೀಗೆಯೇ ಮುಂದುವರಿದರೆ 2028ರ ಚುನಾವಣೆಗೆ ಭಾರಿ ಕಷ್ಟ: ಮುನಿಯಪ್ಪ.
  • ಸಮಾಜ ಕಲ್ಯಾಣ ಅಥವಾ ಕೃಷಿ ಖಾತೆಗೆ ಪಟ್ಟು.

ಹಿರಿತನಕ್ಕೆ ಸಿಗದ ಮಾನ್ಯತೆ: ಮುನಿಯಪ್ಪ ಆಕ್ರೋಶ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಕೆಎಚ್ ಮುನಿಯಪ್ಪ, ‘ನಾನು ಈಗಾಗಲೇ 8 ಬಾರಿ ಗೆದ್ದಿರುವ ಹಿರಿಯ ರಾಜಕಾರಣಿ. ಆದರೆ ಖಾತೆ ಹಂಚಿಕೆಯಲ್ಲಿ ನಮ್ಮ ಸೀನಿಯಾರಿಟಿಯನ್ನು ಗಣನೆಗೆ ತೆಗೆದುಕೊಳ್ಳುತ್ತಿಲ್ಲ. ಪಕ್ಷದಲ್ಲಿ ಎಲ್ಲರನ್ನೂ ಸಮತೋಲನವಾಗಿ ನೋಡಬೇಕಿತ್ತು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್ಲ ನಾಯಕರನ್ನೂ ಒಂದೇ ಕಣ್ಣಿನಿಂದ ನೋಡಬೇಕು’ ಎಂದು ನೇರವಾಗಿ ಅಸಮಾಧಾನ ಹೊರಹಾಕಿದ್ದಾರೆ. ಈ ರೀತಿಯ ಗೊಂದಲಗಳು ಪಕ್ಷಕ್ಕೆ ಒಳ್ಳೆಯದಲ್ಲ, ಇಲಾಖೆಗಳ ಹಂಚಿಕೆ ಸರಿಯಾಗಿಲ್ಲದಿದ್ದರೆ ಮುಂದಿನ 2028ರ ವಿಧಾನಸಭಾ ಚುನಾವಣೆಯಲ್ಲಿ ಪಕ್ಷಕ್ಕೆ ಹಿನ್ನಡೆಯಾಗುವ ಆತಂಕವಿದೆ ಎಂದು ಅವರು ಎಚ್ಚರಿಸಿದ್ದಾರೆ.

ಖಾತೆ ಬದಲಾವಣೆಗಾಗಿ ಹೈಕಮಾಂಡ್‌ಗೆ ಮನವಿ

ತಾವು ಈಗಾಗಲೇ ಮೂರು ವರ್ಷಗಳ ಕಾಲ ಆಹಾರ ಇಲಾಖೆಯನ್ನು ನಿಭಾಯಿಸಿರುವ ಅನುಭವ ಹೊಂದಿದ್ದು, ಈ ಬಾರಿ ತಮಗೆ ಜನರ ನೇರ ಸೇವೆಗೆ ಮುಕ್ತ ಅವಕಾಶವಿರುವ ಕೃಷಿ ಅಥವಾ ಸಮಾಜ ಕಲ್ಯಾಣ ಇಲಾಖೆಯನ್ನು ನೀಡುವಂತೆ ಬೇಡಿಕೆ ಇಟ್ಟಿದ್ದಾಗಿ ಮುನಿಯಪ್ಪ ತಿಳಿಸಿದ್ದಾರೆ.

ಇದನ್ನೂ ಓದಿ: ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ, ಡಿಕೆಶಿ ಸಂಪುಟದ ಮೊದಲ ವಿಕೆಟ್ ಪತನ

‘ನಾನು ಇತ್ತೀಚೆಗಷ್ಟೇ ದೆಹಲಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ಈ ಬಗ್ಗೆ ಸುದೀರ್ಘವಾಗಿ ಚರ್ಚಿಸಿದ್ದೇನೆ. ಎಲ್ಲರನ್ನೂ ಒಂದೇ ರೀತಿಯಲ್ಲಿ ನಡೆಸಿಕೊಳ್ಳಬೇಕು ಎಂದು ಕೇಳಿಕೊಂಡಿದ್ದೇನೆ. ನನ್ನ ಖಾತೆಯನ್ನು ಶೀಘ್ರದಲ್ಲೇ ಬದಲಾವಣೆ ಮಾಡಿಕೊಡಲಿದ್ದಾರೆ ಎಂಬ ನಂಬಿಕೆ ನನಗಿದೆ’ ಎಂದು ಮುನಿಯಪ್ಪ ಹೇಳಿದ್ದಾರೆ. ರಾಮಲಿಂಗಾ ರೆಡ್ಡಿ ಅವರ ರಾಜೀನಾಮೆಯಿಂದ ಕಂಗೆಟ್ಟಿರುವ ಕಾಂಗ್ರೆಸ್ ಸರ್ಕಾರಕ್ಕೆ, ಮುನಿಯಪ್ಪ ಅವರ ಈ ಬಹಿರಂಗ ಬಂಡಾಯ ಮತ್ತೊಂದು ತಲೆನೋವಾಗಿ ಪರಿಣಮಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಭಾರತೀಯ ಷೇರು ಮಾರುಕಟ್ಟೆಯಲ್ಲಿ ಸೆಬಿ ನೊಂದಣಿ ಇಲ್ಲದೇ ಎನ್​ಆರ್​ಐಗಳಿಗೆ ಹೂಡಿಕೆ ಮಿತಿ ಹೆಚ್ಚಳ – Kannada News

ನವದೆಹಲಿ, ಜೂನ್ 5: ಎನ್‌ಆರ್‌ಐಗಳು (ಅನಿವಾಸಿ ಭಾರತೀಯರು) ಮತ್ತು ಒಸಿಐಗಳು (OCI – ಸಾಗರೋತ್ತರ ಭಾರತೀಯ ನಾಗರಿಕರು) ಸೆಬಿ (SEBI) ಬಳಿ ಪ್ರತ್ಯೇಕವಾಗಿ ನೋಂದಾಯಿಸಿಕೊಳ್ಳುವ ಅಗತ್ಯವಿಲ್ಲದೇ, ಭಾರತೀಯ ಷೇರು ಮಾರುಕಟ್ಟೆಯಲ್ಲಿ (stock market) ನೇರವಾಗಿ ಹೂಡಿಕೆ ಮಾಡಲು ಇರುವ ಹಣದ ಮಿತಿಯನ್ನು ಸರ್ಕಾರ ಹೆಚ್ಚಿಸುತ್ತಿದೆ. ಆರ್​ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ ಅವರು ಎಂಪಿಸಿ ಸಭೆ ನಂತರದ ಸುದ್ದಿಗೋಷ್ಠಿಯಲ್ಲಿ ಈ ವಿಚಾರವನ್ನು ಹೊರಗೆಡವಿದ್ದಾರೆ.

ಈವರೆಗೆ ಇಂತಹ ಹೂಡಿಕೆಗೆ ಕಟ್ಟುನಿಟ್ಟಾದ ಮಿತಿಗಳಿದ್ದವು. ಆ ಮಿತಿಗಳನ್ನು ಸಡಿಲಗೊಳಿಸುವುದರಿಂದ, ಅನಿವಾಸಿ ಭಾರತೀಯರಿಗೆ ಭಾರತದ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡುವುದು ಈಗ ಹಿಂದೆಂದಿಗಿಂತಲೂ ಹೆಚ್ಚು ಸುಲಭವಾಗಲಿದೆ.

ಈ ಕ್ರಮದಿಂದ ಆಗುವ ಲಾಭಗಳೇನು?

  • ಎನ್‌ಆರ್‌ಐ ಮತ್ತು ಒಸಿಐ ಸಮುದಾಯದಿಂದ ಭಾರತದ ಬಂಡವಾಳ ಮಾರುಕಟ್ಟೆಗೆ ಹೆಚ್ಚಿನ ಹಣ ಹರಿಯಲು ಇದು ದಾರಿ ಮಾಡಿಕೊಡುತ್ತದೆ.
  • ಸೆಬಿ ನೋಂದಣಿಯ ಜಟಿಲ ಪ್ರಕ್ರಿಯೆಗಳನ್ನು ತಪ್ಪಿಸುವುದರಿಂದ, ಸಣ್ಣ ಪ್ರಮಾಣದ ಹೂಡಿಕೆದಾರರು ಕೂಡ ಸುಲಭವಾಗಿ ಭಾರತೀಯ ಷೇರುಗಳಲ್ಲಿ ಭಾಗವಹಿಸಲು ಸಾಧ್ಯವಾಗುತ್ತದೆ.
  • ಅನಿವಾಸಿ ಭಾರತೀಯರ ಹಣವು ದೇಶೀಯ ಮಾರುಕಟ್ಟೆಗೆ ಬಂದಾಗ, ಅದು ಷೇರು ಮಾರುಕಟ್ಟೆಯ ಚಟುವಟಿಕೆಯನ್ನು ಹೆಚ್ಚಿಸುತ್ತದೆ ಮತ್ತು ಆರ್ಥಿಕತೆಗೆ ಪೂರಕವಾಗುತ್ತದೆ.
  • ತಮ್ಮ ತಾಯ್ನಾಡಿನ ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಲು ಬಯಸುವ ಲಕ್ಷಾಂತರ ಅನಿವಾಸಿ ಭಾರತೀಯರಿಗೆ ಇದು ಉತ್ತಮ ಅವಕಾಶವಾಗಿದೆ.

ಇದನ್ನೂ ಓದಿ: ಬಾಂಡ್ ಮಾರುಕಟ್ಟೆಯಲ್ಲಿ ವಿದೇಶೀ ಹೂಡಿಕೆದಾರರಿಗೆ ಕ್ಯಾಪಿಟಲ್ ಗೇನ್ಸ್ ಟ್ಯಾಕ್ಸ್ ಹೊರೆ ಇಲ್ಲ

ಆರ್‌ಬಿಐ ಗವರ್ನರ್‌ಗಳ ಈ ಕ್ರಮವು, ಹೂಡಿಕೆ ಪ್ರಕ್ರಿಯೆಯನ್ನು ಸರಳಗೊಳಿಸುವ ಮತ್ತು ಜಾಗತಿಕವಾಗಿರುವ ಭಾರತೀಯರ ಬಂಡವಾಳವನ್ನು ಭಾರತದ ಅಭಿವೃದ್ಧಿಗೆ ಬಳಸಿಕೊಳ್ಳುವ ಸರ್ಕಾರದ ಬದ್ಧತೆಯನ್ನು ತೋರಿಸುತ್ತದೆ. ಇದು ಭಾರತೀಯ ಷೇರು ಮಾರುಕಟ್ಟೆಯ ವಿಸ್ತರಣೆಗೆ ಸಹಕಾರಿಯಾಗುವ ನಿರೀಕ್ಷೆ ಇದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಎಐ ಮ್ಯಾಜಿಕ್: ಮೇಘನಾ ರಾಜ್ ಕೈ ಹಿಡಿದು ಪ್ರೀತಿಯಿಂದ ನೋಡಿದ ಚಿರು

Source link

Optical Illusion: ನಿಮ್ಮದು ಹದ್ದಿನ ಕಣ್ಣಾಗಿದ್ರೆ ಈ ಚಿತ್ರದಲ್ಲಿರುವ ಮುಖಗಳನ್ನು ಗುರುತಿಸಿ – Kannada News

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: elle.hu

ಸಾಮಾಜಿಕ ಜಾಲತಾಣದಲ್ಲಿ ಕಣ್ಣು ಮತ್ತು ಮೆದುಳಿಗೆ ಸವಾಲೊಡ್ಡುವ ಕುತೂಹಲಕಾರಿ ಆಪ್ಟಿಕಲ್‌ ಇಲ್ಯೂಷನ್‌ (Optical Illusion) ಚಿತ್ರಗಳು ಆಗಾಗ ಹರಿದಾಡುವುದಿದೆ. ಕೆಲವು ಚಿತ್ರಗಳು ನಿಮ್ಮ ಯೋಚನಾ ಸಾಮರ್ಥ್ಯವನ್ನು ಪರೀಕ್ಷಿಸುವಂತಿರುತ್ತವೆ. ನಿಮ್ಮ ಕಣ್ಣಿಗೆ ನಿಜವೆಂದು ಕಾಣುವ ಚಿತ್ರದಲ್ಲಿ ಏನೋ ಒಂದು ಅಡಗಿರುತ್ತವೆ. ಹೀಗಾಗಿ ಈ ಟ್ರಿಕ್ಕಿ ಒಗಟನ್ನು ಬಿಡಿಸಲು ಕೆಲವರು ತುಂಬಾ ಸಮಯ ತೆಗೆದುಕೊಳ್ಳುತ್ತಾರೆ. ಇದೀಗ ವೈರಲ್ ಆಗಿರುವ ಚಿತ್ರದಲ್ಲಿ ಹೂದಾನಿಯ ಮುಂಭಾಗದಲ್ಲಿ ಮಹಿಳೆಯೊಬ್ಬಳು ನಿಂತು ಕೊಂಡಿದ್ದಾಳೆ. ಇಲ್ಲಿ ಎಷ್ಟು ಮುಖಗಳಿವೆ ಎಂದು ಪತ್ತೆ ಹಚ್ಚುವುದೇ ನಿಮ್ಮ ಮುಂದಿರುವ ಸವಾಲು. 30 ಸೆಕೆಂಡುಗಳಲ್ಲಿ ಸರಿಯಾದ ಉತ್ತರ ಹೇಳಬೇಕು. ಈ ಒಗಟು ಬಿಡಿಸಲು ನೀವು ರೆಡಿ ಇದ್ದೀರಾ.

ಈ ಚಿತ್ರ ನೋಡಿದಾಗ ನಿಮಗೆ ಏನು ಕಾಣಿಸಿತು?

ಈ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರವನ್ನು ಮೊದಲು ನೋಡಿದಾಗ ನಿಮಗೆ ಮೊದಲು ಕಾಣಿಸುವುದೇ ಮಹಿಳೆ. ಇಲ್ಲಿ ಒಬ್ಬ ಮಹಿಳೆ ಹೂದಾನಿಗೆ ಹೂವುಗಳನ್ನು ಹಾಕುತ್ತಿದ್ದಾಳೆ. ಇಲ್ಲಿ ಇನ್ನಷ್ಟು ಮುಖಗಳಿವೆ. ನೀವು ಬುದ್ಧಿವಂತಾಗಿದ್ದರೆ ಮಾತ್ರ ಮರೆಮಾಡಲಾಗಿರುವ ಮುಖಗಳನ್ನು ಕಂಡು ಹಿಡಿಯಲು ಸಾಧ್ಯ. 30 ಸೆಕೆಂಡುಗಳೊಳಗೆ ಈ ಒಗಟು ಬಿಡಿಸಲು ಪ್ರಯತ್ನಿಸಿ. ನೀವು ಈ ಟ್ರಿಕ್ಕಿ ಸವಾಲನ್ನು ಸ್ವೀಕರಿಸಲು ರೆಡಿ ಇದ್ದೀರಾ ಎಂದು ಭಾವಿಸುತ್ತೇವೆ.

ಇದನ್ನೂ ಓದಿ: ಹಚ್ಚ ಹಸಿರಿನ ಗಿಡಗಳ ನಡುವೆ ಅಡಗಿರುವ ಹಸಿರು ಹಾವನ್ನು ಗುರುತಿಸಬಲ್ಲಿರಾ?

ಈ ಟ್ರಿಕ್ಕಿ ಒಗಟಿಗೆ ಉತ್ತರ ಸಿಕ್ಕಿತೇ?

ಎಷ್ಟೇ ಪ್ರಯತ್ನಿಸಿದರೂ ಈ ಚಿತ್ರದಲ್ಲಿ ಮರೆ ಮಾಡಲಾಗಿರುವ ಮುಖಗಳನ್ನು ಪತ್ತೆ ಹಚ್ಚಲು ಸಾಧ್ಯವಾಗುತ್ತಿಲ್ಲವೇ. ಈ ಚಿತ್ರವನ್ನು ಸರಿಯಾಗಿ ಗಮನಿಸಿದರೆ ನಿಮಗೆ ಉತ್ತರ ಸಿಗುತ್ತದೆ. ಆದರೆ ಈ ಒಗಟನ್ನು ನಾವೇ ಬಿಡಿಸಿ ಉತ್ತರ ಹೇಳುತ್ತೇವೆ.ಈ ಚಿತ್ರದಲ್ಲಿ ಒಟ್ಟು ಮೂರು ಮುಖಗಳಿವೆ. ಒಂದು ಮಹಿಳೆಯ ಮುಖ. ಈ ಹೂದಾನಿಯ ಎರಡೂ ಬದಿಗಳಲ್ಲಿ ಎರಡು ಮುಖಗಳಿವೆ. ಈ ಚಿತ್ರವನ್ನು ತಿರುಗಿಸಿದರೆ ಆ ಎರಡು ಮುಖಗಳು ನಿಮ್ಮ ಕಣ್ಣಿಗೆ ಕಾಣಿಸುತ್ತದೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬೆಂಗಳೂರಿನಲ್ಲಿ ರಾಮಲಿಂಗಾ ರೆಡ್ಡಿ ಬೆಂಬಲಿಗರಿಂದ ಭಾರಿ ಪ್ರತಿಭಟನೆ – Kannada News

ಬೆಂಗಳೂರು, ಜೂನ್ 5: ರಾಮಲಿಂಗಾ ರೆಡ್ಡಿ ರಾಜೀನಾಮೆಯಿಂದ ಕೆರಳಿದ ಬೆಂಬಲಿಗರು, ಬೆಂಗಳೂರಿನ ಕೋರಮಂಗಲದಲ್ಲಿರುವ ಅವರ ಕಚೇರಿ ಮುಂಭಾಗದಲ್ಲಿ ಭಾರಿ ಪ್ರತಿಭಟನೆ ನಡೆಸಿದರು. ರಾಮಲಿಂಗಾ ರೆಡ್ಡಿ ಅವರಿಗೆ ಅನ್ಯಾಯವಾಗಿದೆ ಎಂದು ಘೋಷಣೆಗಳನ್ನು ಕೂಗಿದ ಬೆಂಬಲಿಗರು, ಅವರ ನಿರ್ಧಾರಕ್ಕೆ ಬೆಂಬಲ ವ್ಯಕ್ತಪಡಿಸಿದರು. ಜಲಸಂಪನ್ಮೂಲ ಖಾತೆ ನೀಡಲಾಗಿದ್ದರೂ, ನಗರಾಭಿವೃದ್ಧಿ ಖಾತೆ ಬಯಸಿದ್ದ ರೆಡ್ಡಿ ಅವರಿಗೆ ಖಾತೆ ಬದಲಾವಣೆಯಿಂದ ನೋವಾಗಿದ್ದು, ಆತ್ಮಸಾಕ್ಷಿಗೆ ವಿರುದ್ಧವಾಗಿ ಕೆಲಸ ಮಾಡಲಾರೆ ಎಂದು ರಾಜೀನಾಮೆ ನೀಡಿದ್ದಾರೆ.

ಪ್ರತಿಭಟನೆಯ ಸಂದರ್ಭದಲ್ಲಿ ಬೆಂಬಲಿಗರು ರಾಮಲಿಂಗಾ ರೆಡ್ಡಿ ಕಾರಿಗೆ ಅಡ್ಡಬಿದ್ದು, ನ್ಯಾಯಕ್ಕಾಗಿ ಆಗ್ರಹಿಸಿದರು. ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ತಳ್ಳಾಟ ನೂಕಾಟ ಸಂಭವಿಸಿದ್ದು, ಪರಿಸ್ಥಿತಿ ಬಿಗಡಾಯಿಸಿತ್ತು. ಹೈಕಮಾಂಡ್ ಮತ್ತು ರಾಜ್ಯ ನಾಯಕರು ಕೂಡಲೇ ಮಧ್ಯಪ್ರವೇಶಿಸಿ ರಾಮಲಿಂಗಾ ರೆಡ್ಡಿ ಅವರಿಗೆ ಸೂಕ್ತ ಸ್ಥಾನಮಾನ ನೀಡಬೇಕು ಎಂದು ಬೆಂಬಲಿಗರು ಒತ್ತಾಯಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Video: ಬೈಕ್ ಇಲ್ಲ, ಸೈಕಲ್ ಇಲ್ಲ, ಶಾಲೆಗೆ ಮೇಕೆ ಮೇಲೇರಿ ಹೊರಟ ಬಾಲಕ – Kannada News

ಮೇಘಾಲಯ, ಜೂನ್ 05: ಎಲ್ಲಾ ಮಕ್ಕಳು ಶಾಲೆಗೆ ಬೈಕ್ ಅಥವಾ ಸೈಕಲ್​ ಮೇಲೆ ಹೋದರೆ ಈ ಬಾಲಕ ಮೇಕೆ(Goat) ಮೇಲೆ ಕುಳಿತು ಹೋಗಿ ಎಲ್ಲೆಡೆ ವೈರಲ್ ಆಗಿದ್ದಾನೆ. ಈ ವಿಡಿಯೋ ಮೇಘಾಲಯದ್ದಾಗಿದೆ. ವೀಡಿಯೊದಲ್ಲಿ, ಬಾಲಕ ಆಡಿನ ಬೆನ್ನಿನ ಮೇಲೆ ಆತ್ಮವಿಶ್ವಾಸದಿಂದ ಕುಳಿತಿರುವುದನ್ನು ಕಾಣಬಹುದು. ಅವನು ಒಂದು ಸಣ್ಣ ಕೋಲನ್ನು ಸಹ ಹಿಡಿದಿದ್ದಾನೆ, ಅದು ಅವನ ವಿಶಿಷ್ಟ ವಾಹನವನ್ನು ನಿಯಂತ್ರಿಸುತ್ತಿರುವಂತೆ ಕಾಣುತ್ತದೆ. ಅತ್ಯಂತ ಆಸಕ್ತಿದಾಯಕ ವಿಷಯವೆಂದರೆ ಮಗು ಸಂಪೂರ್ಣವಾಗಿ ನಿರಾಳವಾಗಿ ಕಾಣುತ್ತದೆ ಮತ್ತು ತನ್ನ ದಾರಿಯಲ್ಲಿ ಆರಾಮವಾಗಿ ಚಲಿಸುತ್ತಿದೆ.

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿರುವ ಈ ವಿಡಿಯೋ ಜನರ ಮುಖದಲ್ಲಿ ನಗು ತರಿಸಿದೆ. ವಿಡಿಯೋದಲ್ಲಿರುವ ಸರಳತೆ ಮತ್ತು ಮುಗ್ಧತೆ ವೀಕ್ಷಕರನ್ನು ಆಕರ್ಷಿಸುತ್ತಿದೆ. ಇಂದಿನ ಯುಗದಲ್ಲಿ, ಮಕ್ಕಳು ಹೆಚ್ಚಾಗಿ ಆಧುನಿಕ ವಿಧಾನಗಳನ್ನು ಬಳಸಿಕೊಂಡು ಶಾಲೆ ತಲುಪುತ್ತಾರೆ, ಈ ಮಗುವಿನ ವಿಶಿಷ್ಟ ಸವಾರಿ ಜನರಿಗೆ ವಿಭಿನ್ನವಾದದ್ದನ್ನು ನೋಡುವ ಅವಕಾಶವನ್ನು ನೀಡುತ್ತಿದೆ.

ಅಂತರ್ಜಾಲದಲ್ಲಿ ವೈರಲ್ ಆದ ನಂತರ, ಈ ವೀಡಿಯೊ ವ್ಯಾಪಕ ಪ್ರತಿಕ್ರಿಯೆಗಳನ್ನು ಗಳಿಸುತ್ತಿದೆ. ಅನೇಕ ಬಳಕೆದಾರರು ಹಾಸ್ಯಮಯ ಕಾಮೆಂಟ್‌ಗಳನ್ನು ನೀಡುತ್ತಿದ್ದರೆ, ಇತರರು ಇದನ್ನು ನಿಜವಾಗಿಯೂ ಮುದ್ದಾದ ಮತ್ತು ಸ್ಮರಣೀಯ ದೃಶ್ಯ ಎಂದು ಕರೆಯುತ್ತಿದ್ದಾರೆ. ಅಂತಹ ಕ್ಲಿಪ್‌ಗಳು ಸಾಮಾಜಿಕ ಮಾಧ್ಯಮಕ್ಕೆ ಆಸಕ್ತಿಯನ್ನು ಹೆಚ್ಚಿಸುತ್ತವೆ ಮತ್ತು ದೈನಂದಿನ ಜೀವನದ ವಿಶಿಷ್ಟ ಕ್ಷಣಗಳನ್ನು ಸಾರ್ವಜನಿಕರಿಗೆ ತರುತ್ತವೆ ಎಂದು ವೀಕ್ಷಕರು ಹೇಳುತ್ತಾರೆ. ವೀಡಿಯೊವನ್ನು @VishalMalvi_ ಹೆಸರಿನ ಖಾತೆಯಿಂದ ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್​ನಲ್ಲಿ ಹಂಚಿಕೊಳ್ಳಲಾಗಿದೆ.

ವಿಡಿಯೋ:

ಮೇಘಾಲಯದ ಗಾರೋ ಘಟ್ಟದಲ್ಲಿ ಈ ಬಾಲಕ ಶಾಲೆಗೆ ತುಂಬಾ ದೂರ ನಡೆದುಕೊಂಡು ಹೋಗಬೇಕು. ಸಾಮಾನ್ಯವಾಗಿ ಮಕ್ಕಳು ಬಸ್, ಆಟೋ, ಬೈಕ್​ನಲ್ಲಿ ಶಾಲೆಗೆ ಹೋದರೆ ಈ ಬಾಲಕ ಮೇಕೆ ಮೇಲೆ ಕುಳಿತು ಹೋಗಿದ್ದಾನೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

Exit mobile version