ಚೆನ್ನಮ್ಮನ ಮೇಲೆ ಆಸಿಡ್‌ ದಾಳಿ: ಪ್ರಕರಣದ ಬಗ್ಗೆ ಎಳೆ ಎಳೆಯಾಗಿ ಬಿಚ್ಚಿಟ್ಟ ವಕೀಲ – Kannada News | Lawyer chandramouli Recalls about acid Attack On HD Chennamma

ಬೆಂಗಳೂರು, (ಜುಲೈ 18): ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡರ ಪತ್ನಿ ಚೆನ್ನಮ್ಮ ಇಂದು (ಜುಲೈ 18) ವಿಧಿವಶರಾಗಿದ್ದಾರೆ. ಇನ್ನು 2001ರಲ್ಲಿ ಚೆನ್ನಮ್ಮ ಅವರ ಮೇಲೆ ಆ್ಯಸಿಡ್ ದಾಳಿಯಾಗಿತ್ತು. ಹರದನಹಳ್ಳಿಯಲ್ಲಿ ದೇವಾಲಯದಲ್ಲಿ ಪೂಜೆ ಮುಗಿಸಿ ವಾಪಸ್ ಬರುತ್ತಿದ್ದ ವೇಳೆ ಅವರ ಮೇಲೆ ಆ್ಯಸಿಡ್ ದಾಳಿಯಾಗಿತ್ತು. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅವರು ಚಿಕಿತ್ಸೆ ಬಳಿಕ ಚೇತರಿಸಿಕೊಂಡಿದ್ದರು.

ಆಸ್ತಿ ವಿವಾದ ಹಾಗೂ ಕುಟುಂಬದ ವೈಷಮ್ಯವೇ ಈ ದಾಳಿಗೆ ಕಾರಣವಾಗಿತ್ತು. ದೇವೇಗೌಡರ ಸಂಬಂಧಿ ಲೋಕೇಶ್ (ಬಸವೇಗೌಡರ ಮಗ) ಎಂಬಾತನೇ ಈ ಕೃತ್ಯದ ಪ್ರಮುಖ ಆರೋಪಿಯಾಗಿದ್ದ. ಹೊಳೆನರಸೀಪುರ ತಾಲೂಕಿನ ಹರದನಹಳ್ಳಿಯಲ್ಲಿ ನಡೆದಿದ್ದ ಈ ಘಟನೆ ದೇಶಾದ್ಯಂತ ಭಾರೀ ಸಂಚಲನ ಸೃಷ್ಟಿಸಿತ್ತು. ಇನ್ನು ಚೆನ್ನಮ್ಮನವರಿಗೆ ಆಸಿಡ್ ಅಟ್ಯಾಕ್ ಆದಾಗ ಅವರ ಪರವಾಗಿ ವಾದಿಸಿದ ಹಿರಿಯ ವಕೀಲ ಚಂದ್ರಮೌಳಿಯವರು ಪ್ರಕರಣದ ಬಗ್ಗೆ ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದಾರೆ.

Source link

ಆ್ಯಸಿಡ್‌ ದಾಳಿಗೂ ಮುನ್ನ ಮಾಜಿ ಪ್ರಧಾನಿ ಪತ್ನಿ ಚೆನ್ನಮ್ಮ ಹೇಗಿದ್ರು ಗೊತ್ತಾ? ಇಲ್ಲಿವೆ ಅಪರೂಪದ ಚಿತ್ರಗಳು – Kannada News | Chennamma Passes Away: Rare Photos Show H.D. Deve Gowda’s Wife Before the Acid Attack

ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನ ಮುತ್ತಿಗೆ ಹಿರೇಹಳ್ಳಿಯಲ್ಲಿ 1941 ರಲ್ಲಿ ಜನಿಸಿದ್ದ ಚೆನ್ನಮ್ಮ, 1954 ರಲ್ಲಿ ದೇವೇಗೌಡರ ಜತೆ ವಿವಾಹವಾಗಿದ್ದರು. ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ, ಮಾಜಿ ಸಚಿವ ಹೆಚ್‌ಡಿ ರೇವಣ್ಣ ಸೇರಿದಂತೆ ಚೆನ್ನಮ್ಮ ಅವರಿಗೆ ನಾಲ್ವರು ಗಂಡು ಮಕ್ಕಳು, ಇಬ್ಬರು ಪುತ್ರಿಯವರು. (ಚಿತ್ರ ಕೃಪೆ: Dinesh Hirisave Basavaiah)

Source link

IND vs ENG: ಲಾರ್ಡ್ಸ್ ಏಕದಿನ ಪಂದ್ಯಕ್ಕೂ ಮುನ್ನ ಭಾರತ ತಂಡದಲ್ಲಿ ಬದಲಾವಣೆ – Kannada News | Washington Sundar OUT! Harsha Dubey Replaces for Final India vs England ODI

ಭಾರತ ಹಾಗೂ ಇಂಗ್ಲೆಂಡ್‌ (India vs England) ನಡುವಿನ ಏಕದಿನ ಸರಣಿಯ ಕೊನೆಯ ಪಂದ್ಯಕ್ಕೂ ಮೊದಲು, ಟೀಂ ಇಂಡಿಯಾದಲ್ಲಿ ಪ್ರಮುಖ ಬದಲಾವಣೆಯಾಗಿದೆ. ಗಾಯದಿಂದ ಬಳಲುತ್ತಿರುವ ತಂಡದ ಸ್ಟಾರ್ ಆಲ್‌ರೌಂಡರ್ ವಾಷಿಂಗ್ಟನ್ ಸುಂದರ್ (Washington Sundar) ಕೊನೆಯ ಏಕದಿನ ಪಂದ್ಯದಿಂದ ಹೊರಬಿದ್ದಿದ್ದಾರೆ. ಹೀಗಾಗಿ ಅವರ ಬದಲಿಗೆ ಯುವ ಸ್ಪಿನ್ ಆಲ್‌ರೌಂಡರ್ ಹರ್ಷ್ ದುಬೆ (Harsha Dubey) ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. ಉಭಯ ತಂಡಗಳ ನಡುವೆ ನಡೆದಿದ್ದ ಮೂರನೇ ಏಕದಿನ ಪಂದ್ಯದ ವೇಳೆ ಸುಂದರ್ ಗಾಯಕ್ಕೆ ತುತ್ತಾಗಿದ್ದರು. ಇದರಿಂದಾಗಿ ಅವರು ಫಿಲ್ಡಿಂಗ್ ಕೂಡ ಮಾಡಿರಲಿಲ್ಲ ಇದೀಗ ಅವರನ್ನು ತಂಡದಿಂದ ಕೈಬಿಟ್ಟಿದ್ದು, ಹರ್ಷ್ ದುಬೆಯನ್ನು ಆಯ್ಕೆ ಮಾಡಲಾಗಿದೆ.

ಸುಂದರ್ ಔಟ್, ದುಬೆಗೆ ಮತ್ತೊಂದು ಅವಕಾಶ

ಜುಲೈ 16, ಗುರುವಾರ ಕಾರ್ಡಿಫ್‌ನಲ್ಲಿ ನಡೆದ ಭಾರತ-ಇಂಗ್ಲೆಂಡ್ ಏಕದಿನ ಸರಣಿಯ ಎರಡನೇ ಪಂದ್ಯದಲ್ಲಿ ಸುಂದರ್ ಬ್ಯಾಟಿಂಗ್ ಮಾಡುವಾಗ ಗಾಯಗೊಂಡರು. ವಿರಾಟ್ ಕೊಹ್ಲಿ ಔಟಾದ ನಂತರ ಬ್ಯಾಟಿಂಗ್‌ ಮಾಡಲು ಬಂದ ಸುಂದರ್ ಓಡುವಾಗ ಕಾಲಿನ ನೋವಿಗೆ ತುತ್ತಾದರು. ಕೂಡಲೇ ಮೈದಾನಕ್ಕೆ ಬಂದ ಫಿಸಿಯೋ ಸುಂದರ್‌ ಅವರ ಕಾಲಿಗೆ ಬ್ಯಾಂಡೇಜ್ ಮಾಡಿದರು.

ಆದರೆ ಚಿಕಿತ್ಸೆಯ ಬಳಿಕವೂ ಸುಂದರ್ ಅವರ ನೋವು ಕಡಿಮೆ ಆಗಲಿಲ್ಲ. ಇದು ಸುಂದರ್ ಅವರ ಬ್ಯಾಟಿಂಗ್‌ ಮೇಲೆ ಪರಿಣಾಮ ಬೀರಿತು. ಹೀಗಾಗಿ ಅವರು ಮುಂದಿನ ಎಸೆತದಲ್ಲಿ ಪುಲ್ ಶಾಟ್ ಮಾಡಲು ಪ್ರಯತ್ನಿಸಿ ವಿಕೆಟ್ ಕೀಪರ್‌ಗೆ ಸುಲಭವಾದ ಕ್ಯಾಚ್ ನೀಡಿದರು. ಹೀಗಾಗಿ, ಸುಂದರ್ ಕೇವಲ ಐದು ಎಸೆತಗಳನ್ನು ಆಡಿ ಪೆವಿಲಿಯನ್‌ಗೆ ಮರಳಿದರು. ಇದರಿಂದಾಗಿ ಸುಂದರ್ ಫಿಲ್ಡಿಂಗ್ ಸಮಯದಲ್ಲೂ ಮೈದಾನಕ್ಕಿಳಿಯಲಿಲ್ಲ.

ಇಂತಹ ಪರಿಸ್ಥಿತಿಯಲ್ಲಿ, ಆಯ್ಕೆ ಸಮಿತಿಯು ಅಂತಿಮ ಏಕದಿನ ಪಂದ್ಯಕ್ಕಾಗಿ ಎಡಗೈ ಸ್ಪಿನ್ ಆಲ್‌ರೌಂಡರ್ ಹರ್ಷ್ ದುಬೆ ಅವರನ್ನು ತಂಡದಲ್ಲಿ ಸೇರಿಸಿಕೊಂಡಿದೆ. ಹರ್ಷ್ ದುಬೆ ಕಳೆದ ತಿಂಗಳು ಅಫ್ಘಾನಿಸ್ತಾನ ವಿರುದ್ಧದ ಏಕದಿನ ಸರಣಿಯಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದರು. ಈ ಸರಣಿಯಲ್ಲಿ ದುಬೆ ಎರಡು ಪಂದ್ಯಗಳನ್ನು ಆಡಿ ನಾಲ್ಕು ವಿಕೆಟ್‌ಗಳನ್ನು ಕಬಳಿಸಿದ್ದರು. ಅದಕ್ಕೂ ಮೊದಲು, ಅವರು ಅಫ್ಘಾನಿಸ್ತಾನ ವಿರುದ್ಧದ ಟೆಸ್ಟ್ ತಂಡದ ಭಾಗವಾಗಿದ್ದರಾದರೂ ತಂಡದಲ್ಲಿ ಆಡುವ ಅವಕಾಶ ಸಿಕ್ಕಿರಲಿಲ್ಲ. ಮುಂಬರುವ ಜಿಂಬಾಬ್ವೆ ಪ್ರವಾಸಕ್ಕಾಗಿ ಅವರನ್ನು ಟಿ20 ತಂಡಕ್ಕೂ ಆಯ್ಕೆ ಮಾಡಲಾಗಿದೆ.

IND vs ENG: ಲಾರ್ಡ್ಸ್‌ನಲ್ಲಿ ಶತಕಗಳ ಬರ! ಟೀಂ ಇಂಡಿಯಾಕ್ಕೆ ಗೆಲುವೊಂದೇ ಗುರಿಯಲ್ಲ

ಹರ್ಷ್ ದುಬೆಗೆ ಆಡುವ ಅವಕಾಶ ಸಿಗುತ್ತಾ?

ಇದೀಗ ತಂಡವನ್ನು ಕೂಡಿಕೊಂಡಿರುವ ಹರ್ಷ್ ದುಬೆಗೆ ಲಾರ್ಡ್ಸ್​ನಲ್ಲಿ ಆಡುವ ಅವಕಾಶ ಸಿಗುತ್ತಾ ಎಂಬುದು ಪ್ರಶ್ನೆಯಾಗಿದೆ. ಏಕೆಂದರೆ ಕಳೆದ ಎರಡು ಪಂದ್ಯಗಳಲ್ಲಿ ಟೀಂ ಇಂಡಿಯಾದ ಬ್ಯಾಟಿಂಗ್ ಪ್ರದರ್ಶನವೇ ಕಾರಣ. ಈ ಪ್ರವಾಸದ ಉದ್ದಕ್ಕೂ ಭಾರತದ ಬ್ಯಾಟಿಂಗ್ ಉತ್ತಮವಾಗಿರಲಿಲ್ಲ, ಅದರಲ್ಲೂ ಕಾರ್ಡಿಫ್‌ನಲ್ಲಿ ತಂಡದ ಪ್ರದರ್ಶನ ತೀರ ಕಳಪೆಯಾಗಿತ್ತು. ಮಧ್ಯಮ ಮತ್ತು ಕೆಳ ಮಧ್ಯಮ ಕ್ರಮಾಂಕದಿಂದ ನಿರೀಕ್ಷಿತ ಪ್ರದರ್ಶನ ಮೂಡಿಬರಲಿಲ್ಲ. ಅಂತಹ ಪರಿಸ್ಥಿತಿಯಲ್ಲಿ, ಟೀಂ ಇಂಡಿಯಾ ಹೆಚ್ಚುವರಿ ಬ್ಯಾಟ್ಸ್‌ಮನ್‌ರನ್ನು ಆಡಿಸುವ ಸಾಧ್ಯತೆಗಳಿವೆ. ಅದರಂತೆ ಕನ್ನಡಿಗ ಕೆಎಲ್ ರಾಹುಲ್ ಮತ್ತೆ ತಂಡವನ್ನು ಸೇರಿಕೊಳ್ಳಲಿದ್ದಾರೆ.

ಒಂದು ವೇಳೆ ಸುಂದರ್ ಅವರ ಬದಲಿಯಾಗಿ ಬೌಲರ್ ಅನ್ನು ಕಣಕ್ಕಿಳಿಸಲು ನಿರ್ಧರಿಸಿದರೆ, ಕಳೆದ ಎರಡು ಪಂದ್ಯಗಳಲ್ಲಿ ಬೆಂಚ್‌ನಲ್ಲಿದ್ದ ಸ್ಪಿನ್ನರ್ ಕುಲ್ದೀಪ್ ಯಾದವ್ ಅವರಿಗೆ ಆದ್ಯತೆ ನೀಡುವ ಸಾಧ್ಯತೆ ಹೆಚ್ಚು. ಅಂತಹ ಪರಿಸ್ಥಿತಿಯಲ್ಲಿ, ಹರ್ಷ್ ದುಬೆ ಅವರಿಗೆ ಲಾರ್ಡ್ಸ್‌ನಲ್ಲಿ ಆಡಲು ಅವಕಾಶ ಸಿಗುವ ಸಾಧ್ಯತೆ ಕಡಿಮೆ.

ಭಾರತ ತಂಡ: ಶುಭ್​ಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್ (ಉಪನಾಯಕ), ಕೆಎಲ್ ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಹರ್ಷ್ ದುಬೆ, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಪ್ರಸಿದ್ಧ್ ಕೃಷ್ಣ, ಪ್ರಿನ್ಸ್ ಯಾದವ್, ಅರ್ಶ್ದೀಪ್ ಸಿಂಗ್, ಗುರ್ನೂರ್ ಬ್ರಾರ್, ಶಿವಂ ದುಬೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಆ್ಯಸಿಡ್‌ ದಾಳಿಗೂ ಮುನ್ನ ಮಾಜಿ ಪ್ರಧಾನಿ ಪತ್ನಿ ಚೆನ್ನಮ್ಮ ಹೇಗಿದ್ರು ಗೊತ್ತಾ? ಇಲ್ಲಿವೆ ಅಪರೂಪದ ಚಿತ್ರಗಳು – Kannada News | Chennamma passes away rare photos show h d deve gowdas wife before the acid attack

ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನ ಮುತ್ತಿಗೆ ಹಿರೇಹಳ್ಳಿಯಲ್ಲಿ 1941 ರಲ್ಲಿ ಜನಿಸಿದ್ದ ಚೆನ್ನಮ್ಮ, 1954 ರಲ್ಲಿ ದೇವೇಗೌಡರ ಜತೆ ವಿವಾಹವಾಗಿದ್ದರು. ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ, ಮಾಜಿ ಸಚಿವ ಹೆಚ್‌ಡಿ ರೇವಣ್ಣ ಸೇರಿದಂತೆ ಚೆನ್ನಮ್ಮ ಅವರಿಗೆ ನಾಲ್ವರು ಗಂಡು ಮಕ್ಕಳು, ಇಬ್ಬರು ಪುತ್ರಿಯವರು. (ಚಿತ್ರ ಕೃಪೆ: Dinesh Hirisave Basavaiah)

Source link

ಮೂರು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಬಾಚಿಕೊಂಡ ‘ಆರ್ಟಿಕಲ್ 370’ – Kannada News | National Film Awards: Yami Gautam Article 370 Wins Big With 3 Major Awards

72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಇಂದು (ಜುಲೈ 18) ಘೋಷಣೆ ಆಗಿದೆ. ಇದರಲ್ಲಿ ಯಾಮಿ ಗೌತಮ್ ಅಭಿನಯದ ‘ಆರ್ಟಿಕಲ್ 370’ ಸಿನಿಮಾ ಭರ್ಜರಿ ಯಶಸ್ಸು ದಾಖಲಿಸಿದೆ. ಇಂದು ಪ್ರಕಟವಾದ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಈ ಚಿತ್ರ ಬರೋಬ್ಬರಿ ಮೂರು ಪ್ರಮುಖ ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದೆ. ಇದು ಯಾಮಿ ಗೌತಮ್ ಹಾಗೂ ನಿರ್ಮಾಪಕ ಆದಿತ್ಯ ಧಾರ್ ಅವವರಿಗೆ ಸಿಕ್ಕ ದೊಡ್ಡ ಯಶಸ್ಸಾಗಿದೆ.

ಚಿತ್ರದ ಈ ಅದ್ಭುತ ಸಾಧನೆಗೆ ಆಪ್ತರು ಹಾಗೂ ಸಿನಿಮಾ ತಂತ್ರಜ್ಞರು ಸಾಮಾಜಿಕ ಜಾಲತಾಣಗಳಲ್ಲಿ ಸಂತಸ ಹಂಚಿಕೊಳ್ಳುತ್ತಿದ್ದಾರೆ. ಆದಿತ್ಯ ರಾಜ್ ಕೌಲ್ ಎಂಬುವವರು ಟ್ವೀಟ್ ಮಾಡಿ, ‘ನನ್ನ ಸ್ನೇಹಿತರಾದ ಯಾಮಿ ಗೌತಮ್ ಮತ್ತು ಆದಿತ್ಯ ಧರ್ ಅವರಿಗೆ ಅಭಿನಂದನೆಗಳು. ನಮ್ಮ ‘ಆರ್ಟಿಕಲ್ 370’ ಚಿತ್ರಕ್ಕೆ ಇಂದು ಮೂರು ಪ್ರಮುಖ ರಾಷ್ಟ್ರೀಯ ಪ್ರಶಸ್ತಿಗಳು ಘೋಷಣೆಯಾಗಿರುವುದು ಖುಷಿ ಮೂಡಿಸಿದೆ. ಇದು ಕೇವಲ ಆರಂಭವಷ್ಟೇ’ ಎಂದು ಬರೆದುಕೊಂಡಿದ್ದಾರೆ.

ಯಾವೆಲ್ಲಾ ಪ್ರಶಸ್ತಿಗಳು ಸಿಕ್ಕಿವೆ?

ಅತ್ಯುತ್ತಮ ನಟಿ: ಯಾಮಿ ಗೌತಮ್ (ಆರ್ಟಿಕಲ್ 370)

ಅತ್ಯುತ್ತಮ ಪ್ರಶಸ್ತಿ ಚಿತ್ರ : ಆರ್ಟಿಕಲ್ 370

ಅತ್ಯುತ್ತಮ ಸಂಗೀತ ನಿರ್ದೇಶಕ: ಶಾಶ್ವತ್ ಸಚದೇವ್ (ಆರ್ಟಿಕಲ್ 370)

‘ಆರ್ಟಿಕಲ್ 370’ ಸಿನಿಮಾ ಬಗ್ಗೆ:

‘ಆರ್ಟಿಕಲ್ 370’ ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದ ಭಾರತ ಸರ್ಕಾರದ ಐತಿಹಾಸಿಕ ತೀರ್ಮಾನದ ಹಿನ್ನೆಲೆಯನ್ನು ಹೊಂದಿರುವ ರಾಜಕೀಯ ಆಕ್ಷನ್ ಥ್ರಿಲ್ಲರ್ ಸಿನಿಮಾವಾಗಿದೆ. ಯಾಮಿ ಗೌತಮ್ ಇದರಲ್ಲಿ ಇಂಟೆಲಿಜೆನ್ಸ್ ಅಧಿಕಾರಿಯ ಪಾತ್ರದಲ್ಲಿ ಅದ್ಭುತವಾಗಿ ನಟಿಸಿದ್ದು, ಪ್ರೇಕ್ಷಕರಿಂದ ಹಾಗೂ ವಿಮರ್ಶಕರಿಂದ ಭಾರಿ ಮೆಚ್ಚುಗೆ ಗಳಿಸಿತ್ತು. ಕಾಶ್ಮೀರದ ಸೂಕ್ಷ್ಮ ಪರಿಸ್ಥಿತಿ, ರಾಜಕೀಯ ತಂತ್ರಗಾರಿಕೆ ಮತ್ತು ಭಯೋತ್ಪಾದನೆ ನಿಗ್ರಹದ ಸುತ್ತ ಸಾಗುವ ಈ ಸಿನಿಮಾ ಗಲ್ಲಾಪೆಟ್ಟಿಗೆಯಲ್ಲೂ ಭಾರಿ ಸದ್ದು ಮಾಡಿತ್ತು.

ಇದನ್ನೂ ಓದಿ:

ಯಶಸ್ಸಿನ ಅಲೆ

ಆದಿತ್ಯ ಧಾರ್ ಅವರು ‘ಧುರಂಧರ್’ ಹಾಗೂ ‘ಧುರಂಧರ್ 2’ ಚಿತ್ರದ ಯಶಸ್ಸಿನ ಅಲೆಯಲ್ಲಿ ತೇಲುತ್ತಿದ್ದಾರೆ. ಈ ಚಿತ್ರ ದೊಡ್ಡ ಮಟ್ಟದಲ್ಲಿ ಗೆದ್ದಿದೆ. ಈ ಸಿನಿಮಾಗೆ ಸಾಕಷ್ಟು ಅವಾರ್ಡ್​ ಸಿಗೋ ಸೂಚನೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On – 7:58 pm, Sat, 18 July 26

Source link

ಮಾಜಿ ಪ್ರಧಾನಿ ಹೆಚ್​.ಡಿ.ದೇವೇಗೌಡರ ಪತ್ನಿ ಚೆನ್ನಮ್ಮ ಅಂತ್ಯಕ್ರಿಯೆ ಯಾವಾಗ-ಎಲ್ಲಿ? ಇಲ್ಲಿದೆ ವಿವರ – Kannada News | former PM HD Deve Gowda’s Wife Chennamma funeral to be held On July 20 In Haradanahalli at Hassan

ಬೆಂಗಳೂರು, (ಜುಲೈ 18): ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡರ ಪತ್ನಿ ಚೆನ್ನಮ್ಮ (HD Deve Gowda’s Wife Chennamma) ಇಂದು (ಜುಲೈ 18) ವಿಧಿವಶರಾಗಿದ್ದಾರೆ. ಉಸಿರಾಟದ ಸಮಸ್ಯೆಯಿಂದಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದ ಚೆನ್ನಮ್ಮ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಇನ್ನು ಇಂದು ರಾತ್ರಿ ಪದ್ಮನಾಭನಗರದ ನಿವಾಸದಲಿ ಮೃತದೇಹ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ನಾಳೆ (ಜುಲೈ 19) ಬೆಳಿಗ್ಗೆ ಸಾರ್ವಜನಿಕರಿಗೆ ಪದ್ಭನಾಭನಗರದ ಮೈದಾನದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಇರಲಿದೆ. ಬಳಿಕ ಮಧ್ಯಾಹ್ನದ ನಂತರ ಸ್ವಗ್ರಾಮ ಹಾಸನದ ಹರದನಳ್ಳಿಗೆ ಮೃತ ದೇಹ ಕೊಂಡೊಯ್ದು ಅಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಿಕೊಡಲಾಗುತ್ತದೆ. ತದನಂತರ ಸೋಮವಾರ ಹರದನಹಳ್ಳಿ ಬಳಿಯ ಮಾವಿನಕೆರೆಯ ಜಮೀನಿನಲ್ಲಿ ಒಕ್ಕಲಿಗ ಸಂಪ್ರದಾಯದಂತೆ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬದ ಮೂಲಗಳಿಂದ ತಿಳಿದುಬಂದಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

IND vs ENG: ಲಾರ್ಡ್ಸ್‌ನಲ್ಲಿ ಶತಕಗಳ ಬರ! ಟೀಂ ಇಂಡಿಯಾಕ್ಕೆ ಗೆಲುವೊಂದೇ ಗುರಿಯಲ್ಲ – Kannada News | Lord’s Decider: India Aims to End Century Drought and Win England ODI Series

ಭಾರತ ಮತ್ತು ಇಂಗ್ಲೆಂಡ್ (India vs England) ನಡುವಿನ ಏಕದಿನ ಸರಣಿಯ ಮೂರನೇ ಮತ್ತು ಕೊನೆಯ ಪಂದ್ಯ ಜುಲೈ 19 ರ ಭಾನುವಾರದಂದು ನಡೆಯಲಿದೆ. ಈ ಪಂದ್ಯದ ಫಲಿತಾಂಶವು ಏಕದಿನ ಸರಣಿ ಟ್ರೋಫಿಯನ್ನು ಯಾರು ಗೆಲ್ಲುತ್ತಾರೆ ಎಂಬುದನ್ನು ನಿರ್ಧರಿಸುತ್ತದೆ. ಲಾರ್ಡ್ಸ್‌ನ (Lord’s cricket ground) ಇತಿಹಾಸವನ್ನು ನೋಡಿದರೆ, ಆತಿಥೇಯ ಇಂಗ್ಲೆಂಡ್ ಮೇಲುಗೈ ಸಾಧಿಸಿದೆ. ಟೀಂ ಇಂಡಿಯಾ ಕಳೆದ 22 ವರ್ಷಗಳಿಂದ ಅಂದರೆ 2004 ರಿಂದ ಈ ಮೈದಾನದಲ್ಲಿ ಒಂದೇ ಒಂದು ಪಂದ್ಯವನ್ನು ಗೆದ್ದಿಲ್ಲ. ಆದ್ದರಿಂದ ಈ ಬಾರಿ ಟೀಂ ಇಂಡಿಯಾ ಇತಿಹಾಸವನ್ನು ಬದಲಿಸುವ ಇರಾದೆಯಲ್ಲಿದೆ. ಆದರೆ ಗೆಲುವು ಮಾತ್ರವಲ್ಲದೆ, ಈ ಮೈದಾನದಲ್ಲಿ ಭಾರತ ಪುರುಷ ತಂಡದ ಪರ ಯಾರು ಮೊದಲ ಶತಕ ಬಾರಿಸುತ್ತಾರೆ ಎಂಬುದನ್ನು ನೋಡಲು ಅಭಿಮಾನಿಗಳು ಸಹ ಕಾದು ಕುಳಿತಿದ್ದಾರೆ.

ಹೌದು, ಭಾರತ ತಂಡವು ಐತಿಹಾಸಿಕ ಲಾರ್ಡ್ಸ್ ಕ್ರಿಕೆಟ್ ಮೈದಾನದಲ್ಲಿ ಟೆಸ್ಟ್, ಏಕದಿನ ಮತ್ತು ಟಿ20 ಸ್ವರೂಪಗಳಲ್ಲಿ ಹಲವಾರು ಪಂದ್ಯಗಳನ್ನು ಆಡಿದೆ. ಈ ಮೈದಾನವು ಮೂರು ಸ್ವರೂಪಗಳಲ್ಲಿ ಯಾವುದರಲ್ಲೂ ಭಾರತೀಯ ತಂಡಕ್ಕೆ ಹೆಚ್ಚಿನ ಯಶಸ್ಸನ್ನು ತಂದುಕೊಟ್ಟಿಲ್ಲ. 1983 ರಲ್ಲಿ ಭಾರತ ಇಲ್ಲಿ ತನ್ನ ಮೊದಲ ವಿಶ್ವಕಪ್ ಗೆದ್ದಿದ್ದರೂ ಮತ್ತು ಕೆಲವು ಸ್ಮರಣೀಯ ಟೆಸ್ಟ್ ವಿಜಯಗಳನ್ನು ಸಾಧಿಸಿದ್ದರೂ, ಈ ಮೈದಾನವು ವಿಶೇಷವಾಗಿ ಉತ್ತಮವಾಗಿಲ್ಲ.

47 ವರ್ಷಗಳ ಪ್ರಯಾಣ

ಆದರೆ ಫಲಿತಾಂಶಗಳನ್ನು ಹೊರತುಪಡಿಸಿ, ಟೀಂ ಇಂಡಿಯಾದ ಬ್ಯಾಟ್ಸ್‌ಮನ್‌ಗಳ ಬಗ್ಗೆ ಮಾತನಾಡಿದರೆ, ಅವರು ಟೆಸ್ಟ್ ಪಂದ್ಯಗಳಲ್ಲಿ ಹಲವಾರು ಶತಕಗಳನ್ನು ಸಿಡಿಸಿದ್ದರೂ, ಇಲ್ಲಿಯವರೆಗೆ ಯಾವುದೇ ಭಾರತೀಯ ಬ್ಯಾಟ್ಸ್‌ಮನ್ ಈ ಮೈದಾನದಲ್ಲಿ ಏಕದಿನ ಪಂದ್ಯಗಳಲ್ಲಿ ಶತಕದ ಇನ್ನಿಂಗ್ಸ್ ಆಡಿಲ್ಲ. ಭಾರತ ತಂಡವು 1975 ರಲ್ಲಿ ಇಲ್ಲಿ ತನ್ನ ಮೊದಲ ಏಕದಿನ ಪಂದ್ಯವನ್ನು ಆಡಿತ್ತು. ಅದರ ನಂತರ, 2022 ರವರೆಗಿನ 47 ವರ್ಷಗಳಲ್ಲಿ, ಟೀಂ ಇಂಡಿಯಾ ಈ ಮೈದಾನದಲ್ಲಿ ಕೇವಲ ಒಂಬತ್ತು ಏಕದಿನ ಪಂದ್ಯಗಳನ್ನು ಆಡಿದ್ದು, ಯಾವುದೇ ಬ್ಯಾಟ್ಸ್‌ಮನ್ ಶತಕ ಬಾರಿಸುವಲ್ಲಿ ಯಶಸ್ವಿಯಾಗಿಲ್ಲ.

IND vs ENG: ಲಾರ್ಡ್ಸ್‌ನಲ್ಲಿ ತಮ್ಮ ವೃತ್ತಿಜೀವನದ ಮಹದಾಸೆಯನ್ನು ಈಡೇರಿಸಿಕೊಳ್ತಾರಾ ಕೊಹ್ಲಿ

ಅತ್ಯಧಿಕ ಏಕದಿನ ಸ್ಕೋರ್ 90

ಸುನಿಲ್ ಗವಾಸ್ಕರ್, ಸಚಿನ್ ತೆಂಡೂಲ್ಕರ್, ಸೌರವ್ ಗಂಗೂಲಿ, ಯುವರಾಜ್ ಸಿಂಗ್, ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಅವರಂತಹ ದಂತಕಥೆಯ ಬ್ಯಾಟ್ಸ್‌ಮನ್‌ಗಳು ಲಾರ್ಡ್ಸ್‌ನಲ್ಲಿ ಹಲವಾರು ಏಕದಿನ ಪಂದ್ಯಗಳನ್ನು ಆಡಿದ್ದಾರೆ, ಆದರೆ ಅವರಲ್ಲಿ ಯಾರೂ ಶತಕ ಬಾರಿಸಿಲ್ಲ. ಮಾಜಿ ನಾಯಕ ಸೌರವ್ ಗಂಗೂಲಿ 2004 ರಲ್ಲಿ ಇಂಗ್ಲೆಂಡ್ ವಿರುದ್ಧ 90 ರನ್ ಗಳಿಸುವ ಮೂಲಕ ಲಾರ್ಡ್ಸ್‌ನಲ್ಲಿ ಭಾರತೀಯನೊಬ್ಬ ಗಳಿಸಿದ ಅತ್ಯಧಿಕ ಏಕದಿನ ಸ್ಕೋರ್ ದಾಖಲೆಯನ್ನು ಹೊಂದಿದ್ದಾರೆ. ಕಾಕತಾಳೀಯವಾಗಿ, ಲಾರ್ಡ್ಸ್‌ನಲ್ಲಿ ಭಾರತದ ಕೊನೆಯ ಏಕದಿನ ಗೆಲುವು ಅದೇ ಪಂದ್ಯದಲ್ಲಿ ಬಂದಿತ್ತು. ಗಂಗೂಲಿ, ರಾಹುಲ್ ದ್ರಾವಿಡ್, ಯುವರಾಜ್ ಸಿಂಗ್ ಮತ್ತು ಎಂಎಸ್ ಧೋನಿ ಇಲ್ಲಿ ಭಾರತದ ಪರ ತಲಾ ಎರಡು ಅರ್ಧಶತಕಗಳನ್ನು ಸಿಡಿಸಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

‘ಅವರು ನಮಗೆ ದೇವರು’: ಚೆನ್ನಮ್ಮ ಬಗ್ಗೆ ಸಹೋದರ ಭಾವುಕ ಮಾತು – Kannada News | H.D. Deve Gowda’s Wife Chennamma Passes Away: Brother Recalls Her Humble Life and Support

ಹಾಸನ, ಜುಲೈ 18: ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಕುಟುಂಬದ ಸದಸ್ಯರಿಗೆ ಆಘಾತ ಉಂಟಾಗಿದೆ. ಚೆನ್ನಮ್ಮ ಅವರ ಸಹೋದರ ವಿಶ್ವನಾಥ್, ಅಕ್ಕನ ನಿಧನಕ್ಕೆ ಅತೀವ ದುಃಖ ವ್ಯಕ್ತಪಡಿಸಿದ್ದು, ‘‘ಅವರು ನಮ್ಮ ಕುಟುಂಬಕ್ಕೆ ದೇವರಾಗಿದ್ದರು. ನಮ್ಮನ್ನು ಸಾಕಿ, ಬೆಳೆಸಿದ್ದು ಅವರೇ. ಕುಟುಂಬದ ಎಲ್ಲಾ ಜವಾಬ್ದಾರಿಗಳನ್ನು ಚೆನ್ನಮ್ಮ ವಹಿಸಿಕೊಂಡಿದ್ದರು. ನಾವು ಅವರ ಹಾಕಿದ ಗೆರೆ ದಾಟುತ್ತಿರಲಿಲ್ಲ. ಅವರು ನಮಗೆ ದೇವರು. ಅವರ ನೆರವಿನಿಂದಲೇ ನಾವು ಉತ್ತಮ ಉದ್ಯೋಗ ಪಡೆದು ಗೌರವಯುತ ಜೀವನ ನಡೆಸಲು ಸಾಧ್ಯವಾಯಿತು. ಪತಿ ಪ್ರಧಾನಿ, ಪುತ್ರ ಮುಖ್ಯಮಂತ್ರಿ ಮತ್ತು ಸಚಿವರಾದರು, ಅಳಿಯ ದೊಡ್ಡ ವೈದ್ಯರಾದರೂ ಚೆನ್ನಮ್ಮ ಅವರು ಎಂದಿಗೂ ಸರಳತೆ ಕಾಯ್ದುಕೊಂಡಿದ್ದರು. ಯಾವುದೇ ಅಹಂ ಇಲ್ಲದೆ ಜೀವನ ಸಾಗಿಸಿದರು’’ ಎಂದು ಹೇಳಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

ದೇವೇಗೌಡರ ಪತ್ನಿ ಚೆನ್ನಮ್ಮ ಅಗಲಿಕೆಗೆ ಕಂಬನಿ ಮಿಡಿದ ರಾಜಕೀಯ ನಾಯಕರು: ಯಾರು ಏನೇನು ಹೇಳಿದ್ದಾರೆ ನೋಡಿ – Kannada News | Deve Gowda’s Wife Chennamma Passes Away; Political Leaders Offer Condolences

ಬೆಂಗಳೂರು, ಜುಲೈ 18: ಉಸಿರಾಟದ ತೊಂದರೆ ಅಂತಾ ನಾಲ್ಕು ದಿನಗಳ ಹಿಂದೆ ಆಸ್ಪತ್ರೆ ಸೇರಿದ್ದ ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡರ (HD Deve Gowda) ಪತ್ನಿ ಚೆನ್ನಮ್ಮ ಶನಿವಾರ ವಿಧಿವಶರಾಗಿದ್ದಾರೆ. ಬದುಕಿನುದ್ದಕ್ಕೂ ಹಲವು ಸಂಕಷ್ಟ ಎದುರಿಸಿ ಗೆದ್ದಿದ್ದ ಚೆನ್ನಮ್ಮ (Chennamma), ಈ ಬಾರಿ ಅನಾರೋಗ್ಯದಿಂದಾಗಿ ಕೊನೆಯುಸಿರೆಳೆದಿದ್ದಾರೆ. ಅವರ ಅಗಲಿಕೆಗೆ ರಾಜಕೀಯ ನಾಯಕರು ಮತ್ತು ಗಣ್ಯರು ಸಂತಾಪ ಸೂಚಿಸಿದ್ದಾರೆ.

ಮಾಜಿ ಸಿಎಂ ಸಿದ್ದರಾಮಯ್ಯ ಸಂತಾಪ

”ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಪತ್ನಿ ಚೆನ್ನಮ್ಮನವರ ನಿಧನದಿಂದ ದುಃಖಿತನಾಗಿದ್ದೇನೆ. ಜನತಾ ಪರಿವಾರದಲ್ಲಿದ್ದ ನಾನು ದೇವೇಗೌಡರ ಕುಟುಂಬದೊಂದಿಗೆ ನಿಕಟವಾದ ಒಡನಾಟ ಇಟ್ಟುಕೊಂಡವನಾಗಿ ಚೆನ್ನಮ್ಮನವರನ್ನು‌ ಸಮೀಪದಿಂದ ಬಲ್ಲವನು. ಚೆನ್ನಮ್ಮನವರು ತಮ್ಮ ಜೀವನದಲ್ಲಿ ಎದುರಾದ ಕಷ್ಟ – ನೋವುಗಳಿಂದ ಕುಗ್ಗದೆ, ಎಲ್ಲವನ್ನೂ ಧೈರ್ಯದಿಂದ ಎದುರಿಸಿದ್ದ ಗಟ್ಟಿಗಿತ್ತಿ. ದೇವೇಗೌಡರ ರಾಜಕೀಯ ಜೀವನದ ಏಳುಬೀಳಿನ ನಡುವೆ ದೊಡ್ಡ ಕುಟುಂಬವನ್ನು ಪೊರೆಯುತ್ತಾ ಬಂದ ಅವರು ಒಬ್ಬ ಆದರ್ಶ ಗೃಹಿಣಿಯಾಗಿದ್ದರು”.

ಇದನ್ನೂ ಓದಿ: ದೇವೇಗೌಡರ ಬೆನ್ನಿಗೆ ನಿಂತಿದ್ದ ಧೀಶಕ್ತಿ: ಅತಿಥಿಗಳ ಪಾಲಿನ ಅನ್ನಪೂರ್ಣೆ; ಕುಟುಂಬ ಮುನ್ನಡೆಸಿದ ಮಹಾತಾಯಿ ‘ಚೆನ್ನಮ್ಮ’

”ಮಾಜಿ ಪ್ರಧಾನಿಗಳ ಮಡದಿಯಾಗಿದ್ದರೂ ಯಾವ ಹಮ್ಮು ಬಿಮ್ಮು ಇಲ್ಲದೆ ಎಲ್ಲರನ್ನೂ ಅಕ್ಕರೆಯಿಂದ ಕಾಣುತ್ತಿದ್ದ ಚೆನ್ನಮ್ಮನವರು, ಮಾದರಿ ಸತಿಯಾಗಿ ತುಂಬು ಜೀವನ ಸಾಗಿಸಿದವರು. ದೀರ್ಘಕಾಲದ ಸಂಗಾತಿಯನ್ನು ಈ ಇಳಿವಯಸ್ಸಿನಲ್ಲಿ ಕಳೆದುಕೊಂಡ ದೇವೇಗೌಡರಿಗೆ ದು:ಖವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಭಗವಂತ ನೀಡಲಿ. ಗೌಡರ ಕುಟುಂಬ ಸದಸ್ಯರಿಗೆ ನನ್ನ ಸಂತಾಪಗಳು. ಅವರ ನೋವಿನಲ್ಲಿ ನಾನೂ ಭಾಗಿಯಾಗಿದ್ದೇನೆ. ಮೃತರ ಆತ್ಮಕ್ಕೆ ಚಿರಶಾಂತಿ ಲಭಿಸಲಿ” ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.

ಸಚಿವ ಪ್ರಲ್ಹಾದ​​ ಜೋಶಿ ಸಂತಾಪ

‘‘ಮಾಜಿ ಪ್ರಧಾನಿ ಹೆಚ್. ಡಿ. ದೇವೇಗೌಡ ಅವರ ಧರ್ಮಪತ್ನಿ ಶ್ರೀಮತಿ ಚೆನ್ನಮ್ಮ ದೇವೇಗೌಡ ಅವರು ನಿಧನರಾದ ಸುದ್ದಿ ತಿಳಿದು ತೀವ್ರ ದುಃಖವಾಗಿದೆ. ಸರಳತೆ ಹಾಗೂ ತಾಳ್ಮೆಯ ಸಾಕಾರಮೂರ್ತಿಯಾಗಿದ್ದ ಅವರು, ಶ್ರೀ ದೇವೇಗೌಡರ ಸುದೀರ್ಘ ಸಾರ್ವಜನಿಕ ಜೀವನಕ್ಕೆ ಭದ್ರ ಬುನಾದಿಯಾಗಿ, ಇಡೀ ಕುಟುಂಬವನ್ನು ಮಮತೆಯಿಂದ ಮುನ್ನಡೆಸಿದ ಆದರ್ಶ ಮಾತೃಶಕ್ತಿಯಾಗಿದ್ದರು. ಅವರ ಅಗಲಿಕೆ ಗೌಡರ ಕುಟುಂಬಕ್ಕೆ ಹಾಗೂ ಅವರ ಅಭಿಮಾನಿ ಬಳಗಕ್ಕೆ ತುಂಬಲಾರದ ನಷ್ಟವಾಗಿದೆ. ಭಗವಂತನು ಮೃತರ ಆತ್ಮಕ್ಕೆ ಚಿರಶಾಂತಿಯನ್ನು ಕರುಣಿಸಲಿ, ಈ ಅಪಾರ ದುಃಖವನ್ನು ಭರಿಸುವ ಶಕ್ತಿಯನ್ನು ಕುಟುಂಬಕ್ಕೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ’’ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸಂತಾಪ ಸೂಚಿಸಿದ್ದಾರೆ.

ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸಂತಾಪ

‘‘ಮಾಜಿ ಪ್ರಧಾನ ಮಂತ್ರಿಗಳಾದ ಶ್ರೀ ಹೆಚ್.ಡಿ. ದೇವೇಗೌಡರ ಧರ್ಮಪತ್ನಿ ಶ್ರೀಮತಿ ಚೆನ್ನಮ್ಮ ಅವರ ನಿಧನದ ಸುದ್ದಿ ತಿಳಿದು ಮನಸ್ಸಿಗೆ ನೋವಾಯಿತು. ಅವರ ಸರಳತೆ, ಸಹನೆ ಹಾಗೂ ತಮ್ಮ ಕುಟುಂಬಕ್ಕೆ ನೀಡಿದ ಅಚಲ ಬೆಂಬಲ ಸದಾ ಸ್ಮರಣೀಯವಾದದ್ದು. ಭಗವಂತ ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ ಹಾಗೂ ದೇವೇಗೌಡರಿಗೆ ಹಾಗೂ ಅವರ ಕುಟುಂಬದ ಸದಸ್ಯರಿಗೆ ಈ ಅಗಲಿಕೆಯ ನೋವು ಸಹಿಸುವ ಶಕ್ತಿಯನ್ನು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ’’ ಎಂದು ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸಂತಾಪ ಸೂಚಿಸಿದ್ದಾರೆ.

ಆರ್. ಅಶೋಕ್ ಸಂತಾಪ

ಇನ್ನು ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್​​ ಕೂಡ ಸಂತಾಪ ಸೂಚಿಸಿದ್ದಾರೆ. ‘‘ಮಾಜಿ ಪ್ರಧಾನಮಂತ್ರಿಗಳಾದ ಸನ್ಮಾನ್ಯ ಶ್ರೀ ಎಚ್.ಡಿ. ದೇವೇಗೌಡ ಅವರ ಧರ್ಮಪತ್ನಿ ಶ್ರೀಮತಿ ಚೆನ್ನಮ್ಮ ದೇವೇಗೌಡ ಅವರ ನಿಧನದ ಸುದ್ದಿ ಅತ್ಯಂತ ದುಃಖವನ್ನುಂಟು ಮಾಡಿದೆ. ಒಬ್ಬ ಕುಟುಂಬದ ಮಾತೃಮೂರ್ತಿಯ ಅಗಲಿಕೆ ಆ ಕುಟುಂಬಕ್ಕೆ ಎಂದಿಗೂ ತುಂಬಲಾರದ ನಷ್ಟ. ಈ ಕಠಿಣ ಮತ್ತು ನೋವಿನ ಕ್ಷಣದಲ್ಲಿ ಪೂಜ್ಯ ಶ್ರೀ ಎಚ್.ಡಿ. ದೇವೇಗೌಡ ಅವರಿಗೂ, ಕೇಂದ್ರ ಸಚಿವರಾದ ಶ್ರೀ ಎಚ್.ಡಿ. ಕುಮಾರಸ್ವಾಮಿ ಅವರಿಗೂ ಹಾಗೂ ಶ್ರೀ ದೇವೇಗೌಡರ ಕುಟುಂಬದ ಎಲ್ಲ ಸದಸ್ಯರಿಗೂ ನನ್ನ ಸಂತಾಪಗಳನ್ನು ಸಲ್ಲಿಸುತ್ತೇನೆ. ಭಗವಂತನು ದಿವಂಗತ ಶ್ರೀಮತಿ ಚೆನ್ನಮ್ಮ ದೇವೇಗೌಡ ಅವರ ಆತ್ಮಕ್ಕೆ ಚಿರಶಾಂತಿಯನ್ನು ಕರುಣಿಸಲಿ. ಅವರ ಕುಟುಂಬಕ್ಕೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ’’ ಎಂದಿದ್ದಾರೆ.

ಇದನ್ನೂ ಓದಿ: ಕುಟುಂಬದ ಹೊರೆ ಬೀಳದಂತೆ ಸಂಸಾರ ನಿಭಾಯಿಸಿದ್ದ ಹೆಂಡ್ತಿಯನ್ನು ಕಳೆದುಕೊಂಡು ದೇವೇಗೌಡ್ರು ಕಣ್ಣೀರು

ಎಂಎಲ್​ಸಿ ಸಿ.ಟಿ.ರವಿ ಸಂತಾಪ ಸೂಚಿಸಿದ್ದು, ‘‘ದೇವೇಗೌಡರ ರಾಜಕೀಯ ಏಳುಬೀಳುಗಳಲ್ಲಿ ಜತೆಯಾಗಿದ್ದರು. ಮನೆಗೆ ಯಾರೇ ಬಂದರೂ ಪ್ರೀತಿಯಿಂದ ಕಾಣುತ್ತಿದ್ದರು. ಯಜಮಾನರ ಸಾರ್ವಜನಿಕ ಕಾರ್ಯಕ್ಕೆ ಶಕ್ತಿಯಾಗಿದ್ದರು. ಮಾತೃಶ್ರೀಯಾಗಿಯೇ ಇದ್ದಂತಹ ಚೆನ್ನಮ್ಮ ಅಗಲಿದ್ದಾರೆ. ಕುಟುಂಬದವರಿಗೆ ದೇವರು ದುಃಖ ಭರಿಸುವ ಶಕ್ತಿ ನೀಡಲಿ’’ ಎಂದಿದ್ದಾರೆ.


ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On – 7:17 pm, Sat, 18 July 26

Source link

ಆಲೂಗಡ್ಡೆ ಹಸಿರು ಬಣ್ಣಕ್ಕೆ ತಿರುಗಿದರೆ ಅದನ್ನು ತಿನ್ನುವುದು ಸುರಕ್ಷಿತವೇ ಅಥವಾ ವಿಷಕಾರಿಯೇ ತಿಳಿದುಕೊಳ್ಳಿ – Kannada News | Green Potatoes: Are They Toxic? Everything You Need to Know

ಆಲೂಗಡ್ಡೆ ಅಡುಗೆ ಮನೆಯಲ್ಲಿ ಹೆಚ್ಚು ಬಳಸುವ ತರಕಾರಿಗಳಲ್ಲಿ ಒಂದಾಗಿದೆ. ಪಲ್ಯ, ಸಾಂಬಾರ್, ಪರೋಟಾ, ಸ್ನ್ಯಾಕ್ಸ್‌ ಸೇರಿದಂತೆ ಅನೇಕ ಖಾದ್ಯಗಳಲ್ಲಿ ಆಲೂಗಡ್ಡೆ ಪ್ರಮುಖ ಸ್ಥಾನ ಪಡೆದಿದೆ. ಆದರೆ ಕೆಲವೊಮ್ಮೆ ಮನೆಯಲ್ಲೇ ಕೆಲವು ದಿನ ಇಟ್ಟಿರುವ ಆಲೂಗಡ್ಡೆಗಳು ಹಸಿರು ಬಣ್ಣಕ್ಕೆ ತಿರುಗಿರುವುದನ್ನು ಗಮನಿಸಬಹುದು. ಇದನ್ನು ಹಲವರು ಸಾಮಾನ್ಯ ಬಣ್ಣ ಬದಲಾವಣೆ ಎಂದು ಭಾವಿಸಿ ಬಳಸಿಬಿಡುತ್ತಾರೆ. ಆದರೆ ಆರೋಗ್ಯ ತಜ್ಞರ ಪ್ರಕಾರ, ಹಸಿರು ಬಣ್ಣಕ್ಕೆ ತಿರುಗಿದ ಆಲೂಗಡ್ಡೆಯನ್ನು ನಿರ್ಲಕ್ಷಿಸುವುದು ಅಪಾಯಕಾರಿಯಾಗಬಹುದು. ಇದು ಕೇವಲ ಬಣ್ಣ ಬದಲಾವಣೆ ಮಾತ್ರವಲ್ಲ, ಅದರೊಳಗೆ ವಿಷಕಾರಿ ರಾಸಾಯನಿಕ ಪ್ರಮಾಣ ಹೆಚ್ಚಾಗುತ್ತಿರುವ ಸೂಚನೆಯೂ ಆಗಿರಬಹುದು. ಹಾಗಾದರೆ ಈ ರೀತಿ ಆಗುವುದಕ್ಕೆ ಕಾರಣವೇನು, ಅದನ್ನು ತಿಂದರೆ ಏನಾಗಬಹುದು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಆಲೂಗಡ್ಡೆ ಹಸಿರು ಬಣ್ಣಕ್ಕೆ ತಿರುಗುವುದಕ್ಕೆ ಕಾರಣವೇನು?

ಸಾಮಾನ್ಯವಾಗಿ ಆಲೂಗಡ್ಡೆ ಹೆಚ್ಚು ಸಮಯ ಸೂರ್ಯನ ಬೆಳಕು ಅಥವಾ ಕೃತಕ ಬೆಳಕಿಗೆ ಒಡ್ಡಿಕೊಂಡಾಗ ಅದರ ಮೇಲ್ಮೈಯಲ್ಲಿ ಕ್ಲೋರೋಫಿಲ್ (Chlorophyll) ಉತ್ಪತ್ತಿಯಾಗುತ್ತದೆ. ಇದೇ ಕಾರಣಕ್ಕೆ ಅದು ಹಸಿರು ಬಣ್ಣದಲ್ಲಿ ಕಾಣಿಸುತ್ತದೆ. ಇದು ಆರೋಗ್ಯಕ್ಕೆ ಹಾನಿಕಾರಕವಲ್ಲ. ಆದರೆ ಇದರ ಜೊತೆಗೆ ಸೋಲನೈನ್ (Solanine) ಎಂಬ ನೈಸರ್ಗಿಕ ವಿಷಕಾರಿ ಸಂಯುಕ್ತದ ಪ್ರಮಾಣವೂ ಹೆಚ್ಚಾಗುವ ಸಾಧ್ಯತೆ ಇರುತ್ತದೆ. ಈ ಸೋಲನೈನ್ ಅಧಿಕ ಪ್ರಮಾಣದಲ್ಲಿ ದೇಹಕ್ಕೆ ಸೇರಿದರೆ ಆರೋಗ್ಯ ಸಮಸ್ಯೆಗಳನ್ನು ಉಂಟುಮಾಡಬಹುದು.

ಹಸಿರು ಆಲೂಗಡ್ಡೆ ತಿಂದರೆ ಏನಾಗಬಹುದು?

ಸೋಲನೈನ್ ಅಧಿಕವಾಗಿರುವ ಆಲೂಗಡ್ಡೆ ಸೇವಿಸಿದರೆ ಕೆಲವರಲ್ಲಿ ಈ ಲಕ್ಷಣಗಳು ಕಾಣಿಸಬಹುದು.

  • ವಾಕರಿಕೆ ಮತ್ತು ವಾಂತಿ
  • ಹೊಟ್ಟೆನೋವು
  • ಅತಿಸಾರ
  • ತಲೆಸುತ್ತು
  • ತೀವ್ರ ತಲೆನೋವು
  • ದೌರ್ಬಲ್ಯ
  • ಅಪರೂಪದ ಸಂದರ್ಭಗಳಲ್ಲಿ ನರಮಂಡಲದ ಮೇಲೆ ಪರಿಣಾಮ
  • ಮಕ್ಕಳು, ವಯೋವೃದ್ಧರು ಹಾಗೂ ಕಡಿಮೆ ರೋಗನಿರೋಧಕ ಶಕ್ತಿ ಇರುವವರಲ್ಲಿ ಇದರ ಪರಿಣಾಮ ಹೆಚ್ಚಾಗಿ ಕಾಣಿಸಬಹುದು.

ಹಸಿರು ಭಾಗ ಕತ್ತರಿಸಿ ತಿನ್ನಬಹುದೇ?

ಆಲೂಗಡ್ಡೆಯ ಒಂದು ಸಣ್ಣ ಭಾಗ ಮಾತ್ರ ಹಸಿರಾಗಿದ್ದರೆ, ಆ ಭಾಗವನ್ನು ಹಾಗೂ ದಪ್ಪ ಸಿಪ್ಪೆಯನ್ನು ಸಂಪೂರ್ಣವಾಗಿ ತೆಗೆದುಹಾಕಬಹುದು. ಉಳಿದ ಭಾಗವನ್ನು ಬಳಸಬಹುದು. ಆದರೆ ಹೆಚ್ಚಿನ ಭಾಗ ಹಸಿರಾಗಿದ್ದರೆ, ಮೊಳಕೆಗಳು ಹೆಚ್ಚಾಗಿ ಬಂದಿದ್ದರೆ, ಕಹಿ ರುಚಿ ಕಂಡುಬಂದರೆ ಅಥವಾ ವಾಸನೆ ಇದ್ದರೆ ಮೃದುವಾಗಿ ಕೊಳೆತಿದ್ದರೆ ಅದನ್ನು ಬಳಸುವುದು ಒಳ್ಳೆಯದಲ್ಲ.

ಮೊಳಕೆ ಬಂದ ಆಲೂಗಡ್ಡೆಯೂ ಸುರಕ್ಷಿತವೇ?

ಸಾಮಾನ್ಯವಾಗಿ ಮೊಳಕೆ ಬಂದ ಆಲೂಗಡ್ಡೆಯಲ್ಲೂ ಸೋಲನೈನ್ ಪ್ರಮಾಣ ಹೆಚ್ಚಾಗಿರಬಹುದು. ಸಣ್ಣ ಮೊಳಕೆ ಇದ್ದರೆ ಅದನ್ನು ಹಾಗೂ ಸುತ್ತಲಿನ ಭಾಗವನ್ನು ತೆಗೆದು ಬಳಸಬಹುದು. ಆದರೆ ಹೆಚ್ಚು ಮೊಳಕೆ ಬಂದಿದ್ದರೆ ಅಥವಾ ಸಂಪೂರ್ಣ ಆಲೂಗಡ್ಡೆ ಸುಕ್ಕುಗಟ್ಟಿದ್ದರೆ ಬಳಸದೇ ಇರುವುದು ಉತ್ತಮ.

ಇದನ್ನೂ ಓದಿ: ಪ್ರತಿದಿನ ಒಂದು ಸಣ್ಣ ತುಂಡು ಶುಂಠಿ ತಿನ್ನುವುದರಿಂದ ಸಿಗುವ ಪ್ರಯೋಜನಗಳು!

ಆಲೂಗಡ್ಡೆಯನ್ನು ಸರಿಯಾಗಿ ಸಂಗ್ರಹಿಸಿಡುವುದು ಹೇಗೆ?

  • ತಂಪಾದ, ಒಣ ಹಾಗೂ ಕತ್ತಲೆ ಇರುವ ಜಾಗದಲ್ಲಿ ಇಡಿ.
  • ಗಾಳಿಯಾಡುವ ಬುಟ್ಟಿ ಅಥವಾ ಕಾಗದದ ಚೀಲದಲ್ಲಿ ಸಂಗ್ರಹಿಸಿ.
  • ನೇರ ಸೂರ್ಯನ ಬೆಳಕು ಬೀಳದಂತೆ ನೋಡಿಕೊಳ್ಳಿ.
  • ಪ್ಲಾಸ್ಟಿಕ್ ಕವರ್‌ನಲ್ಲಿ ಹೆಚ್ಚು ದಿನ ಇಡಬೇಡಿ.
  • ಈರುಳ್ಳಿ ಜೊತೆಗೆ ಒಂದೇ ಜಾಗದಲ್ಲಿ ಸಂಗ್ರಹಿಸಬೇಡಿ. ಎರಡರಿಂದ ಹೊರಬರುವ ಅನಿಲಗಳು ಆಲೂಗಡ್ಡೆ ಬೇಗ ಹಾಳಾಗಲು ಕಾರಣವಾಗಬಹುದು.
  • ಫ್ರಿಜ್‌ನಲ್ಲಿ ಇಡುವುದನ್ನು ಸಾಧ್ಯವಾದಷ್ಟು ತಪ್ಪಿಸಿ. ಕಡಿಮೆ ತಾಪಮಾನದಲ್ಲಿ ಪಿಷ್ಟ (ಸ್ಟಾರ್ಚ್) ಸಕ್ಕರೆಯಾಗಿ ಬದಲಾಗುವುದರಿಂದ ರುಚಿ ಮತ್ತು ಗುಣಮಟ್ಟ ಬದಲಾಗಬಹುದು.

ಆಲೂಗಡ್ಡೆ ಖರೀದಿಸುವಾಗ ಗಮನಿಸಬೇಕಾದ ಅಂಶಗಳು:

  • ಹಸಿರು ಬಣ್ಣದ ಕಲೆಗಳಿಲ್ಲದ ಆಲೂಗಡ್ಡೆ ಆಯ್ಕೆ ಮಾಡಿ.
  • ಗಟ್ಟಿಯಾಗಿರುವ ಮತ್ತು ಮೃದುವಾಗದ ಆಲೂಗಡ್ಡೆ ಖರೀದಿಸಿ.
  • ಹೆಚ್ಚು ಮೊಳಕೆ ಬಂದಿರುವ ಅಥವಾ ಸುಕ್ಕುಗಟ್ಟಿರುವ ಆಲೂಗಡ್ಡೆ ಖರೀದಿಸಬೇಡಿ.

ಗಮನಿಸಿ: ಈ ಲೇಖನವು ಆರೋಗ್ಯ ಜಾಗೃತಿಗಾಗಿ ಮಾತ್ರ. ಆಹಾರ ವಿಷಬಾಧೆ, ತೀವ್ರ ಹೊಟ್ಟೆನೋವು, ವಾಂತಿ ಅಥವಾ ಅಸಹಜ ಲಕ್ಷಣಗಳು ಕಂಡುಬಂದರೆ ತಕ್ಷಣ ವೈದ್ಯರನ್ನು ಸಂಪರ್ಕಿಸಿ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Exit mobile version