ನಿಶ್ಚಿತಾರ್ಥ ಮುಗಿದು ವಾರವಷ್ಟೇ ಕಳೆದಿತ್ತು, ರಷ್ಯಾದ ಕ್ಷಿಪಣಿ ದಾಳಿಗೆ ಉಕ್ರೇನ್ ಕರಾವಳಿಯಲ್ಲಿ ಕೇರಳದ ನಾವಿಕ ಬಲಿ – Kannada News | Kerala Sailor Killed by Russian Missile in Ukraine: Akhil Joyan’s Tragic End After Engagement
ಟೆಹ್ರಾನ್, ಜುಲೈ 21: ನಿಶ್ಚಿತಾರ್ಥ ಮುಗಿದು ಕೇವಲ ಒಂದು ವಾರವಷ್ಟೇ ಆಗಿತ್ತು, ಕೆಲವೇ ತಿಂಗಳುಗಳಲ್ಲಿ ಮದುವೆಯಾಗುವುದು ಕೂಡ ನಿಶ್ಚಯವಾಗಿತ್ತು. ಹೊಸ ಕನಸುಗಳು, ಹೊಸ ಕನಸುಗಳು, ಹೊಸ ಮನೆ ಮತ್ತು ಕುಟುಂಬಕ್ಕೆ ಉತ್ತಮ ಭವಿಷ್ಯ ಕಟ್ಟಿಕೊಡುವ ಹಂಬಲ. ಆದರೆ ವಿಧಿ ಆಟವೇ ಬೇರೆಯಾಗಿತ್ತು. ಸಾವಿರಾರು ಮೈಲಿಗಳ ದೂರದಲ್ಲಿ ನಡೆಯುತ್ತಿರುವ ರಷ್ಯಾ-ಉಕ್ರೇನ್(Ukraine) ಯುದ್ಧದ ಜ್ವಾಲೆಗೆ ಕೇರಳದ 26 ವರ್ಷದ ಅಮಾಯಕರೊಬ್ಬರು ಬಲಿಯಾಗಿದ್ದಾರೆ. ಕೇರಳದ ಕಾಸರಗೋಡು ಜಿಲ್ಲೆಯ ವೆಲ್ಲರಿಕ್ಕುಂಡು ನಿವಾಸಿ, ನಾವಿಕ ಅಖಿಲ್ ಜೋಯನ್ ಉಕ್ರೇನ್ನ ಒಡೆಸಾ ಬಂದರು ಕರಾವಳಿಯಲ್ಲಿ ರಷ್ಯಾದ…