ರಾಮಲಿಂಗಾರೆಡ್ಡಿ ನನಗೆ ತುಂಬಾ ಆತ್ಮೀಯರು, ಸಮಸ್ಯೆ ಬಗೆಹರಿಸುತ್ತೇನೆ: ಸಿಎಂ ಡಿಕೆಶಿ – Kannada News

ಬೆಂಗಳೂರು, ಜೂ.5: ಖಾತೆ ಹಂಚಿಕೆಯ ಬೆನ್ನಲ್ಲೇ ಹಿರಿಯ ನಾಯಕ ರಾಮಲಿಂಗಾ ರೆಡ್ಡಿ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವುದು ಕಾಂಗ್ರೆಸ್ ವಲಯದಲ್ಲಿ ತಲ್ಲಣ ಮೂಡಿಸಿದೆ. ಇದರ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಕ್ಷಣವೇ ಅಖಾಡಕ್ಕಿಳಿದಿದ್ದು, ಬಂಡಾಯ ಶಮನಗೊಳಿಸಲು ‘ಡ್ಯಾಮೇಜ್ ಕಂಟ್ರೋಲ್’ ಕಸರತ್ತು ಆರಂಭಿಸಿದ್ದಾರೆ. ರಾಮಲಿಂಗಾ ರೆಡ್ಡಿ ಅವರ ರಾಜೀನಾಮೆ ನಿರ್ಧಾರದ ಕುರಿತು ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಸಿಎಂ ಡಿ.ಕೆ. ಶಿವಕುಮಾರ್, “ರಾಮಲಿಂಗಾರೆಡ್ಡಿ ಅವರು ನನಗೆ ತುಂಬಾ ಆತ್ಮೀಯರು. ಪಕ್ಷ ಮತ್ತು ಸರ್ಕಾರದ ಬೆಳವಣಿಗೆಯಲ್ಲಿ ಅವರ ಪಾತ್ರ ದೊಡ್ಡದಿದೆ. ಉಂಟಾಗಿರುವ ಅಸಮಾಧಾನದ ಕುರಿತು ನಾನು ಖುದ್ದಾಗಿ ಅವರ ಜೊತೆ ಕುಳಿತು ಚರ್ಚಿಸಿ, ಎಲ್ಲಾ ಸಮಸ್ಯೆಗಳನ್ನು ಶೀಘ್ರದಲ್ಲೇ ಬಗೆಹರಿಸುತ್ತೇನೆ” ಎಂದು ಹೇಳಿದ್ದಾರೆ. ಬೆಂಗಳೂರು ಅಭಿವೃದ್ಧಿ ಖಾತೆ ಸಿಗಲಿಲ್ಲ ಎಂಬ ಕಾರಣಕ್ಕೆ ರೆಡ್ಡಿ ಅವರು ತೀವ್ರ ಬೇಸರಗೊಂಡಿದ್ದಾರೆ ಎನ್ನಲಾಗಿದ್ದು, ಮುಖ್ಯಮಂತ್ರಿಗಳು ಅವರ ಮನವೊಲಿಸುವಲ್ಲಿ ಎಷ್ಟರಮಟ್ಟಿಗೆ ಯಶಸ್ವಿಯಾಗಲಿದ್ದಾರೆ ಎಂಬುದನ್ನು ನೋಡಬೇಕಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬೆಂಗಳೂರು ಟ್ರಾಫಿಕ್ ಪೋಲೀಸರು ಇನ್ಮುಂದೆ ಕೂಲ್ ಕೂಲ್! ಬಿಸಿಲ ಬೇಗೆಯ ನಿಯಂತ್ರಣಕ್ಕೆ 20 AC ಹೆಲ್ಮೆಟ್ ವಿತರಣೆ – Kannada News

ಬಿಸಿಲ ಬೇಗೆಯ ನಿಯಂತ್ರಣಕ್ಕೆ 20 AC ಹೆಲ್ಮೆಟ್ ವಿತರಣೆ
Image Credit source: The New Indian Express

ಬೆಂಗಳೂರು, ಜೂನ್ 05: ಹೆಚ್ಚುತ್ತಿರುವ ತಾಪಮಾನ ಮತ್ತು ಬಿಸಿಲಿನ ಬೇಗೆಯಿಂದ ರಸ್ತೆಗಿಳಿದು ಕರ್ತವ್ಯ ನಿರ್ವಹಿಸುವ ಸಂಚಾರಿ ಪೊಲೀಸರನ್ನು ರಕ್ಷಿಸಲು ಬೆಂಗಳೂರು ಉತ್ತರ ಮಹಾನಗರ ಪಾಲಿಕೆ (BNCC) ಮಹತ್ವದ ಹೆಜ್ಜೆಯನ್ನಿಟ್ಟಿದೆ. ಪೈಲಟ್ ಯೋಜನೆಯಡಿಯಲ್ಲಿ ನಗರದ ಸಂಚಾರಿ ಪೊಲೀಸ್ ಸಿಬ್ಬಂದಿಗೆ AC ಹೆಲ್ಮೆಟ್‌ಗಳನ್ನು ವಿತರಿಸಲಾಗಿದೆ.

ಮುಖ್ಯಾಂಶಗಳು

  • ಬೆಂಗಳೂರು ಸಂಚಾರಿ ಪೊಲೀಸ್ ಸಿಬ್ಬಂದಿಗೆ ಬಿಎನ್‌ಸಿಸಿಯಿಂದ ಹೈಟೆಕ್ ಎಸಿ ಹೆಲ್ಮೆಟ್‌ಗಳ ವಿತರಣೆ.
  • ಮೊದಲ ಹಂತದಲ್ಲಿ ಪ್ರಾಯೋಗಿಕವಾಗಿ 20 ಎಸಿ ಹೆಲ್ಮೆಟ್‌ಗಳನ್ನು ನೀಡಿದ ಮಹಾನಗರ ಪಾಲಿಕೆ.
  • ಮುಂಬರುವ ದಿನಗಳಲ್ಲಿ ಇಂದಿರಾ ಕ್ಯಾಂಟೀನ್ ಸಿಬ್ಬಂದಿಗೂ ಈ ಯೋಜನೆ ವಿಸ್ತರಿಸಲು ಪ್ರಸ್ತಾವನೆ.

ಬಿಸಿಲಿನ ತಾಪದಿಂದ ರಕ್ಷಣೆ ನೀಡಲಿವೆ 20 ಎಸಿ ಹೆಲ್ಮೆಟ್‌ಗಳು

ಹವಾಮಾನ ವೈಪರೀತ್ಯ ಮತ್ತು ಹೆಚ್ಚುತ್ತಿರುವ ತಾಪಮಾನದ ಹಿನ್ನೆಲೆಯಲ್ಲಿ ಹೊರಾಂಗಣದಲ್ಲಿ ಮತ್ತು ಸಿಗ್ನಲ್‌ಗಳಲ್ಲಿ ಗಂಟೆಗಟ್ಟಲೆ ನಿಂತು ಕೆಲಸ ಮಾಡುವ ಸಿಬ್ಬಂದಿಯ ಆರೋಗ್ಯ ರಕ್ಷಣೆ ಅತ್ಯಂತ ಪ್ರಮುಖವಾಗಿದೆ. ಹೀಗಾಗಿ ಮೊದಲ ಹಂತದಲ್ಲಿ ಪ್ರಾಯೋಗಿಕವಾಗಿ 20 ಅತ್ಯಾಧುನಿಕ ಎಸಿ ಹೆಲ್ಮೆಟ್‌ಗಳನ್ನು ಸಂಚಾರಿ ಪೊಲೀಸರಿಗೆ ವಿತರಿಸಲಾಗಿದೆ. ‘ಹೀಟ್-ಹೆಲ್ತ್ ಪ್ರೊಟೊಕಾಲ್’ (Heat-Health Protocol) ಅಡಿಯಲ್ಲಿ ಬೆಂಗಳೂರು ಉತ್ತರ ಮಹಾನಗರ ಪಾಲಿಕೆಯು C40 ಸಿಟೀಸ್, ಸೆನ್ಸಿಂಗ್ ಲೋಕಲ್ ಮತ್ತು ಹಸಿರು ದಳ ಸಂಸ್ಥೆಗಳ ಸಹಯೋಗದೊಂದಿಗೆ ಈ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಿತ್ತು.

ಇಂದಿರಾ ಕ್ಯಾಂಟೀನ್, ಸರ್ಕಾರಿ ಕಚೇರಿಗಳಿಗೂ ವಿಸ್ತರಣೆ ಸಾಧ್ಯತೆ

ಈ ಕುರಿತು ಮಾಹಿತಿ ನೀಡಿರುವ ಬಿಎನ್‌ಸಿಸಿ ಕಮಿಷನರ್ ಪೊಮ್ಮಲ ಸುನಿಲ್ ಕುಮಾರ್, ಬಿಸಿಲಿನ ತಾಪದಿಂದ ಉಂಟಾಗುವ ಆರೋಗ್ಯ ಸಮಸ್ಯೆಗಳನ್ನು ತಡೆಗಟ್ಟಲು ಈ ಹಿಂದೆಯೇ ಬಿಎನ್‌ಸಿಸಿ ಪೌರಕಾರ್ಮಿಕರು, ಆಶಾ (ASHA) ಕಾರ್ಯಕರ್ತೆಯರು ಮತ್ತು ಒಣ ಕಸ ಸಂಗ್ರಹಣಾ ಕೇಂದ್ರದ ಕಾರ್ಮಿಕರಿಗೆ ಇಂತಹ ಕೂಲಿಂಗ್ ಕಿಟ್‌ಗಳನ್ನು ವಿತರಿಸಲಾಗಿತ್ತು. ಈಗ ಇದನ್ನು ಸಂಚಾರಿ ಪೊಲೀಸರಿಗೂ ವಿಸ್ತರಿಸಲಾಗಿದೆ ಎಂದಿದ್ದಾರೆ. ಮುಂಬರುವ ದಿನಗಳಲ್ಲಿ ಈ ಯೋಜನೆಯನ್ನು ಇಂದಿರಾ ಕ್ಯಾಂಟೀನ್‌ ಸಿಬ್ಬಂದಿ ಹಾಗೂ ಇತರೆ ಸರ್ಕಾರಿ ಕಚೇರಿಗಳಿಗೂ ವಿಸ್ತರಿಸುವ ಪ್ರಸ್ತಾವನೆ ಇದೆ ಎಂದು ಅವರು ತಿಳಿಸಿದ್ದಾರೆ.

ಈ ವಿಶೇಷ ಕಾರ್ಯಕ್ರಮದಲ್ಲಿ ತಾಪಮಾನ ಹೆಚ್ಚಳದಿಂದ ಉಂಟಾಗುವ ಆರೋಗ್ಯ ಸಮಸ್ಯೆಗಳು, ‘ಹೀಟ್ ಸ್ಟ್ರೆಸ್’ (Heat Stress) ಲಕ್ಷಣಗಳು, ತುರ್ತು ಪರಿಸ್ಥಿತಿಯಲ್ಲಿ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳು ಮತ್ತು ಸುರಕ್ಷತಾ ನಿಯಮಗಳ ಕುರಿತು ಸಂಚಾರಿ ಪೊಲೀಸರಿಗೆ ಜಾಗೃತಿ ಮೂಡಿಸಲಾಯಿತು. ಕಾರ್ಯಕ್ರಮದಲ್ಲಿ ಸಂಚಾರಿ ಪೊಲೀಸ್ ಅಧಿಕಾರಿಗಳು ಹಾಗೂ ವಿವಿಧ ಸ್ವಯಂಸೇವಾ ಸಂಸ್ಥೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಕಾಂಗ್ರೆಸ್‌ನಲ್ಲಿ ಆರದ ಖಾತೆ ಕಿಚ್ಚು: ರಾಮಲಿಂಗಾ ರೆಡ್ಡಿ ರಾಜೀನಾಮೆ ಬೆನ್ನಲ್ಲೇ ಸಚಿವ ಕೆಎಚ್ ಮುನಿಯಪ್ಪ ಬಹಿರಂಗ ಅಸಮಾಧಾನ – Kannada News

ಬೆಂಗಳೂರು, ಜೂನ್ 5: ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ನೇತೃತ್ವದ ಸಂಪುಟದಲ್ಲಿ ಖಾತೆ ಹಂಚಿಕೆ ಬೆನ್ನಲ್ಲೇ ಸೃಷ್ಟಿಯಾಗಿರುವ ಭಿನ್ನಮತ ಈಗ ಮತ್ತಷ್ಟು ತೀವ್ರ ಸ್ವರೂಪ ಪಡೆದುಕೊಳ್ಳುವ ಸುಳಿವು ಕಾಣಿಸಿದೆ. ಹಿರಿಯ ನಾಯಕ ರಾಮಲಿಂಗಾ ರೆಡ್ಡಿ ಅವರು ಸಚಿವ ಸ್ಥಾನದ ರಾಜೀನಾಮೆ ನೀಡಿದ ಬೆನ್ನಲ್ಲೇ, ಮತ್ತೊಬ್ಬ ಹಿರಿಯ ಮುಖಂಡ ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಕೆಎಚ್ ಮುನಿಯಪ್ಪ (KH Muniyappa) ತಮಗೆ ನೀಡಿರುವ ಖಾತೆ ಬಗ್ಗೆ ಬಹಿರಂಗವಾಗಿ ತೀವ್ರ ಅಸಮಾಧಾನ ಹೊರಹಾಕಿದ್ದಾರೆ. ಖಾತೆ ಹಂಚಿಕೆಯಲ್ಲಿ ಹಿರಿತನವನ್ನು ಪರಿಗಣಿಸುತ್ತಿಲ್ಲ ಎಂದು ಹೈಕಮಾಂಡ್ ವಿರುದ್ಧವೇ ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ಮುಖ್ಯಾಂಶಗಳು

  • ಖಾತೆ ಹಂಚಿಕೆಯಲ್ಲಿ ಹಿರಿತನಕ್ಕೆ ಬೆಲೆ ಸಿಕ್ಕಿಲ್ಲ: ಮುನಿಯಪ್ಪ.
  • ಹೀಗೆಯೇ ಮುಂದುವರಿದರೆ 2028ರ ಚುನಾವಣೆಗೆ ಭಾರಿ ಕಷ್ಟ: ಮುನಿಯಪ್ಪ.
  • ಸಮಾಜ ಕಲ್ಯಾಣ ಅಥವಾ ಕೃಷಿ ಖಾತೆಗೆ ಪಟ್ಟು.

ಹಿರಿತನಕ್ಕೆ ಸಿಗದ ಮಾನ್ಯತೆ: ಮುನಿಯಪ್ಪ ಆಕ್ರೋಶ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಕೆಎಚ್ ಮುನಿಯಪ್ಪ, ‘ನಾನು ಈಗಾಗಲೇ 8 ಬಾರಿ ಗೆದ್ದಿರುವ ಹಿರಿಯ ರಾಜಕಾರಣಿ. ಆದರೆ ಖಾತೆ ಹಂಚಿಕೆಯಲ್ಲಿ ನಮ್ಮ ಸೀನಿಯಾರಿಟಿಯನ್ನು ಗಣನೆಗೆ ತೆಗೆದುಕೊಳ್ಳುತ್ತಿಲ್ಲ. ಪಕ್ಷದಲ್ಲಿ ಎಲ್ಲರನ್ನೂ ಸಮತೋಲನವಾಗಿ ನೋಡಬೇಕಿತ್ತು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್ಲ ನಾಯಕರನ್ನೂ ಒಂದೇ ಕಣ್ಣಿನಿಂದ ನೋಡಬೇಕು’ ಎಂದು ನೇರವಾಗಿ ಅಸಮಾಧಾನ ಹೊರಹಾಕಿದ್ದಾರೆ. ಈ ರೀತಿಯ ಗೊಂದಲಗಳು ಪಕ್ಷಕ್ಕೆ ಒಳ್ಳೆಯದಲ್ಲ, ಇಲಾಖೆಗಳ ಹಂಚಿಕೆ ಸರಿಯಾಗಿಲ್ಲದಿದ್ದರೆ ಮುಂದಿನ 2028ರ ವಿಧಾನಸಭಾ ಚುನಾವಣೆಯಲ್ಲಿ ಪಕ್ಷಕ್ಕೆ ಹಿನ್ನಡೆಯಾಗುವ ಆತಂಕವಿದೆ ಎಂದು ಅವರು ಎಚ್ಚರಿಸಿದ್ದಾರೆ.

ಖಾತೆ ಬದಲಾವಣೆಗಾಗಿ ಹೈಕಮಾಂಡ್‌ಗೆ ಮನವಿ

ತಾವು ಈಗಾಗಲೇ ಮೂರು ವರ್ಷಗಳ ಕಾಲ ಆಹಾರ ಇಲಾಖೆಯನ್ನು ನಿಭಾಯಿಸಿರುವ ಅನುಭವ ಹೊಂದಿದ್ದು, ಈ ಬಾರಿ ತಮಗೆ ಜನರ ನೇರ ಸೇವೆಗೆ ಮುಕ್ತ ಅವಕಾಶವಿರುವ ಕೃಷಿ ಅಥವಾ ಸಮಾಜ ಕಲ್ಯಾಣ ಇಲಾಖೆಯನ್ನು ನೀಡುವಂತೆ ಬೇಡಿಕೆ ಇಟ್ಟಿದ್ದಾಗಿ ಮುನಿಯಪ್ಪ ತಿಳಿಸಿದ್ದಾರೆ.

ಇದನ್ನೂ ಓದಿ: ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ, ಡಿಕೆಶಿ ಸಂಪುಟದ ಮೊದಲ ವಿಕೆಟ್ ಪತನ

‘ನಾನು ಇತ್ತೀಚೆಗಷ್ಟೇ ದೆಹಲಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ಈ ಬಗ್ಗೆ ಸುದೀರ್ಘವಾಗಿ ಚರ್ಚಿಸಿದ್ದೇನೆ. ಎಲ್ಲರನ್ನೂ ಒಂದೇ ರೀತಿಯಲ್ಲಿ ನಡೆಸಿಕೊಳ್ಳಬೇಕು ಎಂದು ಕೇಳಿಕೊಂಡಿದ್ದೇನೆ. ನನ್ನ ಖಾತೆಯನ್ನು ಶೀಘ್ರದಲ್ಲೇ ಬದಲಾವಣೆ ಮಾಡಿಕೊಡಲಿದ್ದಾರೆ ಎಂಬ ನಂಬಿಕೆ ನನಗಿದೆ’ ಎಂದು ಮುನಿಯಪ್ಪ ಹೇಳಿದ್ದಾರೆ. ರಾಮಲಿಂಗಾ ರೆಡ್ಡಿ ಅವರ ರಾಜೀನಾಮೆಯಿಂದ ಕಂಗೆಟ್ಟಿರುವ ಕಾಂಗ್ರೆಸ್ ಸರ್ಕಾರಕ್ಕೆ, ಮುನಿಯಪ್ಪ ಅವರ ಈ ಬಹಿರಂಗ ಬಂಡಾಯ ಮತ್ತೊಂದು ತಲೆನೋವಾಗಿ ಪರಿಣಮಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಭಾರತೀಯ ಷೇರು ಮಾರುಕಟ್ಟೆಯಲ್ಲಿ ಸೆಬಿ ನೊಂದಣಿ ಇಲ್ಲದೇ ಎನ್​ಆರ್​ಐಗಳಿಗೆ ಹೂಡಿಕೆ ಮಿತಿ ಹೆಚ್ಚಳ – Kannada News

ನವದೆಹಲಿ, ಜೂನ್ 5: ಎನ್‌ಆರ್‌ಐಗಳು (ಅನಿವಾಸಿ ಭಾರತೀಯರು) ಮತ್ತು ಒಸಿಐಗಳು (OCI – ಸಾಗರೋತ್ತರ ಭಾರತೀಯ ನಾಗರಿಕರು) ಸೆಬಿ (SEBI) ಬಳಿ ಪ್ರತ್ಯೇಕವಾಗಿ ನೋಂದಾಯಿಸಿಕೊಳ್ಳುವ ಅಗತ್ಯವಿಲ್ಲದೇ, ಭಾರತೀಯ ಷೇರು ಮಾರುಕಟ್ಟೆಯಲ್ಲಿ (stock market) ನೇರವಾಗಿ ಹೂಡಿಕೆ ಮಾಡಲು ಇರುವ ಹಣದ ಮಿತಿಯನ್ನು ಸರ್ಕಾರ ಹೆಚ್ಚಿಸುತ್ತಿದೆ. ಆರ್​ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ ಅವರು ಎಂಪಿಸಿ ಸಭೆ ನಂತರದ ಸುದ್ದಿಗೋಷ್ಠಿಯಲ್ಲಿ ಈ ವಿಚಾರವನ್ನು ಹೊರಗೆಡವಿದ್ದಾರೆ.

ಈವರೆಗೆ ಇಂತಹ ಹೂಡಿಕೆಗೆ ಕಟ್ಟುನಿಟ್ಟಾದ ಮಿತಿಗಳಿದ್ದವು. ಆ ಮಿತಿಗಳನ್ನು ಸಡಿಲಗೊಳಿಸುವುದರಿಂದ, ಅನಿವಾಸಿ ಭಾರತೀಯರಿಗೆ ಭಾರತದ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡುವುದು ಈಗ ಹಿಂದೆಂದಿಗಿಂತಲೂ ಹೆಚ್ಚು ಸುಲಭವಾಗಲಿದೆ.

ಈ ಕ್ರಮದಿಂದ ಆಗುವ ಲಾಭಗಳೇನು?

  • ಎನ್‌ಆರ್‌ಐ ಮತ್ತು ಒಸಿಐ ಸಮುದಾಯದಿಂದ ಭಾರತದ ಬಂಡವಾಳ ಮಾರುಕಟ್ಟೆಗೆ ಹೆಚ್ಚಿನ ಹಣ ಹರಿಯಲು ಇದು ದಾರಿ ಮಾಡಿಕೊಡುತ್ತದೆ.
  • ಸೆಬಿ ನೋಂದಣಿಯ ಜಟಿಲ ಪ್ರಕ್ರಿಯೆಗಳನ್ನು ತಪ್ಪಿಸುವುದರಿಂದ, ಸಣ್ಣ ಪ್ರಮಾಣದ ಹೂಡಿಕೆದಾರರು ಕೂಡ ಸುಲಭವಾಗಿ ಭಾರತೀಯ ಷೇರುಗಳಲ್ಲಿ ಭಾಗವಹಿಸಲು ಸಾಧ್ಯವಾಗುತ್ತದೆ.
  • ಅನಿವಾಸಿ ಭಾರತೀಯರ ಹಣವು ದೇಶೀಯ ಮಾರುಕಟ್ಟೆಗೆ ಬಂದಾಗ, ಅದು ಷೇರು ಮಾರುಕಟ್ಟೆಯ ಚಟುವಟಿಕೆಯನ್ನು ಹೆಚ್ಚಿಸುತ್ತದೆ ಮತ್ತು ಆರ್ಥಿಕತೆಗೆ ಪೂರಕವಾಗುತ್ತದೆ.
  • ತಮ್ಮ ತಾಯ್ನಾಡಿನ ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಲು ಬಯಸುವ ಲಕ್ಷಾಂತರ ಅನಿವಾಸಿ ಭಾರತೀಯರಿಗೆ ಇದು ಉತ್ತಮ ಅವಕಾಶವಾಗಿದೆ.

ಇದನ್ನೂ ಓದಿ: ಬಾಂಡ್ ಮಾರುಕಟ್ಟೆಯಲ್ಲಿ ವಿದೇಶೀ ಹೂಡಿಕೆದಾರರಿಗೆ ಕ್ಯಾಪಿಟಲ್ ಗೇನ್ಸ್ ಟ್ಯಾಕ್ಸ್ ಹೊರೆ ಇಲ್ಲ

ಆರ್‌ಬಿಐ ಗವರ್ನರ್‌ಗಳ ಈ ಕ್ರಮವು, ಹೂಡಿಕೆ ಪ್ರಕ್ರಿಯೆಯನ್ನು ಸರಳಗೊಳಿಸುವ ಮತ್ತು ಜಾಗತಿಕವಾಗಿರುವ ಭಾರತೀಯರ ಬಂಡವಾಳವನ್ನು ಭಾರತದ ಅಭಿವೃದ್ಧಿಗೆ ಬಳಸಿಕೊಳ್ಳುವ ಸರ್ಕಾರದ ಬದ್ಧತೆಯನ್ನು ತೋರಿಸುತ್ತದೆ. ಇದು ಭಾರತೀಯ ಷೇರು ಮಾರುಕಟ್ಟೆಯ ವಿಸ್ತರಣೆಗೆ ಸಹಕಾರಿಯಾಗುವ ನಿರೀಕ್ಷೆ ಇದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಎಐ ಮ್ಯಾಜಿಕ್: ಮೇಘನಾ ರಾಜ್ ಕೈ ಹಿಡಿದು ಪ್ರೀತಿಯಿಂದ ನೋಡಿದ ಚಿರು

Source link

Optical Illusion: ನಿಮ್ಮದು ಹದ್ದಿನ ಕಣ್ಣಾಗಿದ್ರೆ ಈ ಚಿತ್ರದಲ್ಲಿರುವ ಮುಖಗಳನ್ನು ಗುರುತಿಸಿ – Kannada News

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: elle.hu

ಸಾಮಾಜಿಕ ಜಾಲತಾಣದಲ್ಲಿ ಕಣ್ಣು ಮತ್ತು ಮೆದುಳಿಗೆ ಸವಾಲೊಡ್ಡುವ ಕುತೂಹಲಕಾರಿ ಆಪ್ಟಿಕಲ್‌ ಇಲ್ಯೂಷನ್‌ (Optical Illusion) ಚಿತ್ರಗಳು ಆಗಾಗ ಹರಿದಾಡುವುದಿದೆ. ಕೆಲವು ಚಿತ್ರಗಳು ನಿಮ್ಮ ಯೋಚನಾ ಸಾಮರ್ಥ್ಯವನ್ನು ಪರೀಕ್ಷಿಸುವಂತಿರುತ್ತವೆ. ನಿಮ್ಮ ಕಣ್ಣಿಗೆ ನಿಜವೆಂದು ಕಾಣುವ ಚಿತ್ರದಲ್ಲಿ ಏನೋ ಒಂದು ಅಡಗಿರುತ್ತವೆ. ಹೀಗಾಗಿ ಈ ಟ್ರಿಕ್ಕಿ ಒಗಟನ್ನು ಬಿಡಿಸಲು ಕೆಲವರು ತುಂಬಾ ಸಮಯ ತೆಗೆದುಕೊಳ್ಳುತ್ತಾರೆ. ಇದೀಗ ವೈರಲ್ ಆಗಿರುವ ಚಿತ್ರದಲ್ಲಿ ಹೂದಾನಿಯ ಮುಂಭಾಗದಲ್ಲಿ ಮಹಿಳೆಯೊಬ್ಬಳು ನಿಂತು ಕೊಂಡಿದ್ದಾಳೆ. ಇಲ್ಲಿ ಎಷ್ಟು ಮುಖಗಳಿವೆ ಎಂದು ಪತ್ತೆ ಹಚ್ಚುವುದೇ ನಿಮ್ಮ ಮುಂದಿರುವ ಸವಾಲು. 30 ಸೆಕೆಂಡುಗಳಲ್ಲಿ ಸರಿಯಾದ ಉತ್ತರ ಹೇಳಬೇಕು. ಈ ಒಗಟು ಬಿಡಿಸಲು ನೀವು ರೆಡಿ ಇದ್ದೀರಾ.

ಈ ಚಿತ್ರ ನೋಡಿದಾಗ ನಿಮಗೆ ಏನು ಕಾಣಿಸಿತು?

ಈ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರವನ್ನು ಮೊದಲು ನೋಡಿದಾಗ ನಿಮಗೆ ಮೊದಲು ಕಾಣಿಸುವುದೇ ಮಹಿಳೆ. ಇಲ್ಲಿ ಒಬ್ಬ ಮಹಿಳೆ ಹೂದಾನಿಗೆ ಹೂವುಗಳನ್ನು ಹಾಕುತ್ತಿದ್ದಾಳೆ. ಇಲ್ಲಿ ಇನ್ನಷ್ಟು ಮುಖಗಳಿವೆ. ನೀವು ಬುದ್ಧಿವಂತಾಗಿದ್ದರೆ ಮಾತ್ರ ಮರೆಮಾಡಲಾಗಿರುವ ಮುಖಗಳನ್ನು ಕಂಡು ಹಿಡಿಯಲು ಸಾಧ್ಯ. 30 ಸೆಕೆಂಡುಗಳೊಳಗೆ ಈ ಒಗಟು ಬಿಡಿಸಲು ಪ್ರಯತ್ನಿಸಿ. ನೀವು ಈ ಟ್ರಿಕ್ಕಿ ಸವಾಲನ್ನು ಸ್ವೀಕರಿಸಲು ರೆಡಿ ಇದ್ದೀರಾ ಎಂದು ಭಾವಿಸುತ್ತೇವೆ.

ಇದನ್ನೂ ಓದಿ: ಹಚ್ಚ ಹಸಿರಿನ ಗಿಡಗಳ ನಡುವೆ ಅಡಗಿರುವ ಹಸಿರು ಹಾವನ್ನು ಗುರುತಿಸಬಲ್ಲಿರಾ?

ಈ ಟ್ರಿಕ್ಕಿ ಒಗಟಿಗೆ ಉತ್ತರ ಸಿಕ್ಕಿತೇ?

ಎಷ್ಟೇ ಪ್ರಯತ್ನಿಸಿದರೂ ಈ ಚಿತ್ರದಲ್ಲಿ ಮರೆ ಮಾಡಲಾಗಿರುವ ಮುಖಗಳನ್ನು ಪತ್ತೆ ಹಚ್ಚಲು ಸಾಧ್ಯವಾಗುತ್ತಿಲ್ಲವೇ. ಈ ಚಿತ್ರವನ್ನು ಸರಿಯಾಗಿ ಗಮನಿಸಿದರೆ ನಿಮಗೆ ಉತ್ತರ ಸಿಗುತ್ತದೆ. ಆದರೆ ಈ ಒಗಟನ್ನು ನಾವೇ ಬಿಡಿಸಿ ಉತ್ತರ ಹೇಳುತ್ತೇವೆ.ಈ ಚಿತ್ರದಲ್ಲಿ ಒಟ್ಟು ಮೂರು ಮುಖಗಳಿವೆ. ಒಂದು ಮಹಿಳೆಯ ಮುಖ. ಈ ಹೂದಾನಿಯ ಎರಡೂ ಬದಿಗಳಲ್ಲಿ ಎರಡು ಮುಖಗಳಿವೆ. ಈ ಚಿತ್ರವನ್ನು ತಿರುಗಿಸಿದರೆ ಆ ಎರಡು ಮುಖಗಳು ನಿಮ್ಮ ಕಣ್ಣಿಗೆ ಕಾಣಿಸುತ್ತದೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬೆಂಗಳೂರಿನಲ್ಲಿ ರಾಮಲಿಂಗಾ ರೆಡ್ಡಿ ಬೆಂಬಲಿಗರಿಂದ ಭಾರಿ ಪ್ರತಿಭಟನೆ – Kannada News

ಬೆಂಗಳೂರು, ಜೂನ್ 5: ರಾಮಲಿಂಗಾ ರೆಡ್ಡಿ ರಾಜೀನಾಮೆಯಿಂದ ಕೆರಳಿದ ಬೆಂಬಲಿಗರು, ಬೆಂಗಳೂರಿನ ಕೋರಮಂಗಲದಲ್ಲಿರುವ ಅವರ ಕಚೇರಿ ಮುಂಭಾಗದಲ್ಲಿ ಭಾರಿ ಪ್ರತಿಭಟನೆ ನಡೆಸಿದರು. ರಾಮಲಿಂಗಾ ರೆಡ್ಡಿ ಅವರಿಗೆ ಅನ್ಯಾಯವಾಗಿದೆ ಎಂದು ಘೋಷಣೆಗಳನ್ನು ಕೂಗಿದ ಬೆಂಬಲಿಗರು, ಅವರ ನಿರ್ಧಾರಕ್ಕೆ ಬೆಂಬಲ ವ್ಯಕ್ತಪಡಿಸಿದರು. ಜಲಸಂಪನ್ಮೂಲ ಖಾತೆ ನೀಡಲಾಗಿದ್ದರೂ, ನಗರಾಭಿವೃದ್ಧಿ ಖಾತೆ ಬಯಸಿದ್ದ ರೆಡ್ಡಿ ಅವರಿಗೆ ಖಾತೆ ಬದಲಾವಣೆಯಿಂದ ನೋವಾಗಿದ್ದು, ಆತ್ಮಸಾಕ್ಷಿಗೆ ವಿರುದ್ಧವಾಗಿ ಕೆಲಸ ಮಾಡಲಾರೆ ಎಂದು ರಾಜೀನಾಮೆ ನೀಡಿದ್ದಾರೆ.

ಪ್ರತಿಭಟನೆಯ ಸಂದರ್ಭದಲ್ಲಿ ಬೆಂಬಲಿಗರು ರಾಮಲಿಂಗಾ ರೆಡ್ಡಿ ಕಾರಿಗೆ ಅಡ್ಡಬಿದ್ದು, ನ್ಯಾಯಕ್ಕಾಗಿ ಆಗ್ರಹಿಸಿದರು. ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ತಳ್ಳಾಟ ನೂಕಾಟ ಸಂಭವಿಸಿದ್ದು, ಪರಿಸ್ಥಿತಿ ಬಿಗಡಾಯಿಸಿತ್ತು. ಹೈಕಮಾಂಡ್ ಮತ್ತು ರಾಜ್ಯ ನಾಯಕರು ಕೂಡಲೇ ಮಧ್ಯಪ್ರವೇಶಿಸಿ ರಾಮಲಿಂಗಾ ರೆಡ್ಡಿ ಅವರಿಗೆ ಸೂಕ್ತ ಸ್ಥಾನಮಾನ ನೀಡಬೇಕು ಎಂದು ಬೆಂಬಲಿಗರು ಒತ್ತಾಯಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Video: ಬೈಕ್ ಇಲ್ಲ, ಸೈಕಲ್ ಇಲ್ಲ, ಶಾಲೆಗೆ ಮೇಕೆ ಮೇಲೇರಿ ಹೊರಟ ಬಾಲಕ – Kannada News

ಮೇಘಾಲಯ, ಜೂನ್ 05: ಎಲ್ಲಾ ಮಕ್ಕಳು ಶಾಲೆಗೆ ಬೈಕ್ ಅಥವಾ ಸೈಕಲ್​ ಮೇಲೆ ಹೋದರೆ ಈ ಬಾಲಕ ಮೇಕೆ(Goat) ಮೇಲೆ ಕುಳಿತು ಹೋಗಿ ಎಲ್ಲೆಡೆ ವೈರಲ್ ಆಗಿದ್ದಾನೆ. ಈ ವಿಡಿಯೋ ಮೇಘಾಲಯದ್ದಾಗಿದೆ. ವೀಡಿಯೊದಲ್ಲಿ, ಬಾಲಕ ಆಡಿನ ಬೆನ್ನಿನ ಮೇಲೆ ಆತ್ಮವಿಶ್ವಾಸದಿಂದ ಕುಳಿತಿರುವುದನ್ನು ಕಾಣಬಹುದು. ಅವನು ಒಂದು ಸಣ್ಣ ಕೋಲನ್ನು ಸಹ ಹಿಡಿದಿದ್ದಾನೆ, ಅದು ಅವನ ವಿಶಿಷ್ಟ ವಾಹನವನ್ನು ನಿಯಂತ್ರಿಸುತ್ತಿರುವಂತೆ ಕಾಣುತ್ತದೆ. ಅತ್ಯಂತ ಆಸಕ್ತಿದಾಯಕ ವಿಷಯವೆಂದರೆ ಮಗು ಸಂಪೂರ್ಣವಾಗಿ ನಿರಾಳವಾಗಿ ಕಾಣುತ್ತದೆ ಮತ್ತು ತನ್ನ ದಾರಿಯಲ್ಲಿ ಆರಾಮವಾಗಿ ಚಲಿಸುತ್ತಿದೆ.

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿರುವ ಈ ವಿಡಿಯೋ ಜನರ ಮುಖದಲ್ಲಿ ನಗು ತರಿಸಿದೆ. ವಿಡಿಯೋದಲ್ಲಿರುವ ಸರಳತೆ ಮತ್ತು ಮುಗ್ಧತೆ ವೀಕ್ಷಕರನ್ನು ಆಕರ್ಷಿಸುತ್ತಿದೆ. ಇಂದಿನ ಯುಗದಲ್ಲಿ, ಮಕ್ಕಳು ಹೆಚ್ಚಾಗಿ ಆಧುನಿಕ ವಿಧಾನಗಳನ್ನು ಬಳಸಿಕೊಂಡು ಶಾಲೆ ತಲುಪುತ್ತಾರೆ, ಈ ಮಗುವಿನ ವಿಶಿಷ್ಟ ಸವಾರಿ ಜನರಿಗೆ ವಿಭಿನ್ನವಾದದ್ದನ್ನು ನೋಡುವ ಅವಕಾಶವನ್ನು ನೀಡುತ್ತಿದೆ.

ಅಂತರ್ಜಾಲದಲ್ಲಿ ವೈರಲ್ ಆದ ನಂತರ, ಈ ವೀಡಿಯೊ ವ್ಯಾಪಕ ಪ್ರತಿಕ್ರಿಯೆಗಳನ್ನು ಗಳಿಸುತ್ತಿದೆ. ಅನೇಕ ಬಳಕೆದಾರರು ಹಾಸ್ಯಮಯ ಕಾಮೆಂಟ್‌ಗಳನ್ನು ನೀಡುತ್ತಿದ್ದರೆ, ಇತರರು ಇದನ್ನು ನಿಜವಾಗಿಯೂ ಮುದ್ದಾದ ಮತ್ತು ಸ್ಮರಣೀಯ ದೃಶ್ಯ ಎಂದು ಕರೆಯುತ್ತಿದ್ದಾರೆ. ಅಂತಹ ಕ್ಲಿಪ್‌ಗಳು ಸಾಮಾಜಿಕ ಮಾಧ್ಯಮಕ್ಕೆ ಆಸಕ್ತಿಯನ್ನು ಹೆಚ್ಚಿಸುತ್ತವೆ ಮತ್ತು ದೈನಂದಿನ ಜೀವನದ ವಿಶಿಷ್ಟ ಕ್ಷಣಗಳನ್ನು ಸಾರ್ವಜನಿಕರಿಗೆ ತರುತ್ತವೆ ಎಂದು ವೀಕ್ಷಕರು ಹೇಳುತ್ತಾರೆ. ವೀಡಿಯೊವನ್ನು @VishalMalvi_ ಹೆಸರಿನ ಖಾತೆಯಿಂದ ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್​ನಲ್ಲಿ ಹಂಚಿಕೊಳ್ಳಲಾಗಿದೆ.

ವಿಡಿಯೋ:

ಮೇಘಾಲಯದ ಗಾರೋ ಘಟ್ಟದಲ್ಲಿ ಈ ಬಾಲಕ ಶಾಲೆಗೆ ತುಂಬಾ ದೂರ ನಡೆದುಕೊಂಡು ಹೋಗಬೇಕು. ಸಾಮಾನ್ಯವಾಗಿ ಮಕ್ಕಳು ಬಸ್, ಆಟೋ, ಬೈಕ್​ನಲ್ಲಿ ಶಾಲೆಗೆ ಹೋದರೆ ಈ ಬಾಲಕ ಮೇಕೆ ಮೇಲೆ ಕುಳಿತು ಹೋಗಿದ್ದಾನೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

K Annamalai: ಕೆ ಅಣ್ಣಾಮಲೈ ರಾಜೀನಾಮೆ ಅಂಗೀಕರಿಸಿದ ಬಿಜೆಪಿ ಅಧ್ಯಕ್ಷ ನಿತಿನ್ ನಬಿನ್ – Kannada News

ನವದೆಹಲಿ, ಜೂನ್ 05: ಬಿಜೆಪಿಗೆ ಕೆ ಅಣ್ಣಾಮಲೈ(K Annamalai) ನೀಡಿದ್ದ ರಾಜೀನಾಮೆಯನ್ನು ರಾಷ್ಟ್ರಾಧ್ಯಕ್ಷ ನಿತಿನ್ ನಬಿನ್ ಅಂಗೀಕರಿಸಿದ್ದಾರೆ. ಕೆ. ಅಣ್ಣಾಮಲೈ ಅವರ ಭಾರತೀಯ ಜನತಾ ಪಕ್ಷ (ಬಿಜೆಪಿ) ಜೊತೆಗಿನ ಸಂಬಂಧ ಶುಕ್ರವಾರ ಕೊನೆಗೊಂಡಿದೆ. ಬಿಜೆಪಿಯ ತಮಿಳುನಾಡು ಘಟಕದ ಮುಖ್ಯಸ್ಥ ಅಣ್ಣಾಮಲೈ ಅವರು ಮಧ್ಯಾಹ್ನ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ತಮ್ಮ ಭವಿಷ್ಯದ ಯೋಜನೆಗಳನ್ನು ಪ್ರಕಟಿಸಲಿದ್ದಾರೆ.
ತಮಿಳುನಾಡು ರಾಜಕಾರಣದಲ್ಲಿ ಹಲವು ದಿನಗಳಿಂದ ಹರಿದಾಡುತ್ತಿದ್ದ ತೀವ್ರ ಊಹಾಪೋಹಗಳಿಗೆ ಕೊನೆಗೂ ತೆರೆ ಬಿದ್ದಿದ್ದು, ಹಿರಿಯ ನಾಯಕ ಹಾಗೂ ತಮಿಳುನಾಡು ತಮಿಳುನಾಡು ಬಿಜೆಪಿ ಘಟಕದ ಮುಖ್ಯಸ್ಥ ಕೆ. ಅಣ್ಣಾಮಲೈ ಅವರು ಭಾರತೀಯ ಜನತಾ ಪಕ್ಷದ (BJP) ಪ್ರಾಥಮಿಕ ಸದಸ್ಯತ್ವಕ್ಕೆ ಅಧಿಕೃತವಾಗಿ ರಾಜೀನಾಮೆ ನೀಡಿದ್ದಾರೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರು ಅಣ್ಣಾಮಲೈ ಅವರ ರಾಜೀನಾಮೆಯನ್ನು ತಕ್ಷಣವೇ ಅಂಗೀಕರಿಸಿದ್ದಾರೆ ಎಂದು ಪಕ್ಷದ ಪ್ರಕಟಣೆ ತಿಳಿಸಿದೆ. ಮಾಜಿ ಐಪಿಎಸ್ ಅಧಿಕಾರಿಯಾಗಿರುವ ಅಣ್ಣಾಮಲೈ ಅವರ ಈ ದಿಢೀರ್ ನಿರ್ಧಾರವು ದಕ್ಷಿಣ ಭಾರತದ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ.

ತಮ್ಮ ಮುಂದಿನ ನಡೆ ಹಾಗೂ ಭವಿಷ್ಯದ ರಾಜಕೀಯ ಯೋಜನೆಗಳ ಕುರಿತು ಸಾರ್ವಜನಿಕವಾಗಿ ಪ್ರಕಟಿಸಲು ಅಣ್ಣಾಮಲೈ ಅವರು ಇಂದು ಮಧ್ಯಾಹ್ನ ಕೋಯಮತ್ತೂರಿನಲ್ಲಿ ಪ್ರಮುಖ ಪತ್ರಿಕಾಗೋಷ್ಠಿಯನ್ನು ಹಮ್ಮಿಕೊಂಡಿದ್ದಾರೆ. ಯುವ ಜನತೆಯಲ್ಲಿ ಭಾರಿ ಕ್ರೇಜ್ ಹೊಂದಿರುವ ಅಣ್ಣಾಮಲೈ ಅವರ ಹೊಸ ರಾಜಕೀಯ ಪಯಣವು ತಮಿಳುನಾಡಿನ ಭವಿಷ್ಯದ ಸಮೀಕರಣಗಳನ್ನು ಮರುರೂಪಿಸಲಿದೆ ಎಂದು ವಿಶ್ಲೇಷಕರು ಆಶಾವಾದ ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ಓದಿ: K Annamalai Birthday: ಕೆ ಅಣ್ಣಾಮಲೈ ಹುಟ್ಟುಹಬ್ಬ: ಕರ್ನಾಟಕದಲ್ಲಿ ವೃತ್ತಿಜೀವನ, ರಾಜೀನಾಮೆ ಮತ್ತು ಬಿಜೆಪಿ ಪಯಣದ ಸಮಗ್ರ ನೋಟ

ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರು ಅಣ್ಣಾಮಲೈ ಅವರ ಈ ಸ್ವತಂತ್ರ ನಿರ್ಧಾರವನ್ನು ಗೌರವಿಸಿ, ರಾಜೀನಾಮೆಯನ್ನು ಅಧಿಕೃತವಾಗಿ ಅಂಗೀಕರಿಸಿದ್ದಾರೆ. ತಮ್ಮ ಈ ಐತಿಹಾಸಿಕ ನಿರ್ಧಾರವನ್ನು ಪ್ರಕಟಿಸುವ ಮುನ್ನ ಅಣ್ಣಾಮಲೈ ಅವರು ನವದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರನ್ನು ಭೇಟಿಯಾಗಿ ಸುದೀರ್ಘ ಸಮಾಲೋಚನೆ ನಡೆಸಿದ್ದರು.

ಜನಪ್ರಿಯ ನಾಯಕನಾಗಿ ಹೊರಹೊಮ್ಮಿರುವ ಅಣ್ಣಾಮಲೈ ಅವರ ಕಾರ್ಯಕ್ಷಮತೆಯನ್ನು ಮೆಚ್ಚಿದ್ದ ಉನ್ನತ ನಾಯಕರು, ಅವರ ನಿರ್ಧಾರವನ್ನು ಮರುಪರಿಶೀಲಿಸುವಂತೆ ಅತ್ಯಂತ ಪ್ರೀತಿಯಿಂದ ವಿನಂತಿಸಿಕೊಂಡಿದ್ದರು ಎನ್ನಲಾಗಿದೆ. ಆದರೆ, ತಮಿಳುನಾಡಿನ ಜನರ ಸೇವೆಗಾಗಿ ವಿಶಾಲವಾದ ಮತ್ತು ಮುಕ್ತ ರಾಜಕೀಯ ವೇದಿಕೆಯೊಂದನ್ನು ನಿರ್ಮಿಸುವ ಅಣ್ಣಾಮಲೈ ಅವರ ಮಹತ್ವಾಕಾಂಕ್ಷೆಯ ದೃಷ್ಟಿಕೋನಕ್ಕೆ ಬಿಜೆಪಿ ಹೈಕಮಾಂಡ್ ಅಂತಿಮವಾಗಿ ಮುಕ್ತವಾಗಿ ಹಾರೈಸಿದೆ.

‘ಸಿಂಗಮ್’ ಅಣ್ಣಾಮಲೈ ಅವರ ಯಶಸ್ವಿ ರಾಜಕೀಯ ಪಯಣ
2020 ರಲ್ಲಿ ತಮ್ಮ ಪ್ರತಿಷ್ಠಿತ ಐಪಿಎಸ್ ಹುದ್ದೆಯನ್ನು ತ್ಯಜಿಸಿ ಸಾರ್ವಜನಿಕ ಜೀವನಕ್ಕೆ ಪ್ರವೇಶಿಸಿದ್ದ ಅಣ್ಣಾಮಲೈ ಅವರನ್ನು ಬೆಂಬಲಿಗರು ಪ್ರೀತಿಯಿಂದ ‘ಸಿಂಗಮ್’ ಎಂದೇ ಕರೆಯುತ್ತಾರೆ.

ಬಿಜೆಪಿಯಲ್ಲಿ ಉನ್ನತ ಸ್ಥಾನ: ಕೇವಲ ಒಂದು ವರ್ಷದಲ್ಲೇ (2021 ರಲ್ಲಿ) ಅವರ ಅತ್ಯುತ್ತಮ ಆಡಳಿತ ಮತ್ತು ಸಂಘಟನಾ ಚತುರತೆಯನ್ನು ಗುರುತಿಸಿ ತಮಿಳುನಾಡು ಬಿಜೆಪಿ ಘಟಕದ ಸಾರಥ್ಯವನ್ನು ನೀಡಲಾಯಿತು.

ಸ್ವತಂತ್ರ ರಾಜಕೀಯ ಚಿಂತನೆ: ಅವರ ದೃಢ ನಾಯಕತ್ವದ ಅವಧಿಯಲ್ಲಿ, ತಮಿಳುನಾಡಿನಲ್ಲಿ ಪಕ್ಷವನ್ನು ತಳಮಟ್ಟದಿಂದ ಅತ್ಯಂತ ಯಶಸ್ವಿಯಾಗಿ ಸಂಘಟಿಸಲಾಯಿತು. ಪ್ರಮುಖ ದ್ರಾವಿಡ ಪಕ್ಷಗಳಾದ ಎಐಎಡಿಎಂಕೆ (AIADMK) ಜೊತೆಗಿನ ಮೈತ್ರಿ ಸಮೀಕರಣಗಳನ್ನು ಪಕ್ಷದ ಹಿತದೃಷ್ಟಿಯಿಂದ ಅತ್ಯಂತ ಚಾಣಾಕ್ಷತನದಿಂದ ನಿರ್ವಹಿಸಿ, ಯುವ ಸಮೂಹವನ್ನು ರಾಜಕೀಯದ ಮುಖ್ಯವಾಹಿನಿಗೆ ತರುವಲ್ಲಿ ಅವರು ಯಶಸ್ವಿಯಾಗಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On – 11:02 am, Fri, 5 June 26

Source link

ಬಾಂಡ್ ಮಾರುಕಟ್ಟೆಯಲ್ಲಿ ವಿದೇಶೀ ಹೂಡಿಕೆದಾರರಿಗೆ ಕ್ಯಾಪಿಟಲ್ ಗೇನ್ಸ್ ಟ್ಯಾಕ್ಸ್ ಹೊರೆ ಇಲ್ಲ – Kannada News

ನವದೆಹಲಿ, ಜೂನ್ 5: ವಿದೇಶಿ ಸಾಂಸ್ಥಿಕ ಹೂಡಿಕೆದಾರರು (FII) ಭಾರತ ಸರ್ಕಾರದ ಬಾಂಡ್‌ಗಳಲ್ಲಿ ಹೂಡಿಕೆ ಮಾಡಿ ಗಳಿಸುವ ಲಾಭದ ಮೇಲಿನ ‘ಬಂಡವಾಳ ಗಳಿಕೆ ತೆರಿಗೆ’ಯನ್ನು (Capital Gains Tax) ಕೇಂದ್ರ ಸರ್ಕಾರ ಸಂಪೂರ್ಣವಾಗಿ ತೆಗೆದುಹಾಕಿದೆ. ಜಾಗತಿಕ ಬಾಂಡ್ ಸೂಚ್ಯಂಕಗಳಲ್ಲಿ (Global Bond Indices – ಉದಾಹರಣೆಗೆ ಜೆ.ಪಿ. ಮಾರ್ಗನ್ ಎಮರ್ಜಿಂಗ್ ಮಾರ್ಕೆಟ್ ಬಾಂಡ್ ಇಂಡೆಕ್ಸ್) ಭಾರತೀಯ ಸರ್ಕಾರಿ ಬಾಂಡ್‌ಗಳನ್ನು ಸೇರ್ಪಡೆಗೊಳಿಸಿದ ನಂತರ ವಿದೇಶಿ ಹೂಡಿಕೆಯನ್ನು ಇನ್ನಷ್ಟು ದೊಡ್ಡ ಮಟ್ಟದಲ್ಲಿ ಆಕರ್ಷಿಸುವುದು ಈ ನಿರ್ಧಾರದ ಪ್ರಮುಖ ಗುರಿಯಾಗಿದೆ.

ಈ ಹಿಂದೆ ವಿದೇಶಿ ಹೂಡಿಕೆದಾರರು ಭಾರತದ ಬಾಂಡ್‌ಗಳನ್ನು ಮಾರಾಟ ಮಾಡಿ ಲಾಭ ಗಳಿಸಿದಾಗ ತೆರಿಗೆ ಪಾವತಿಸಬೇಕಾಗಿತ್ತು. ಇದು ಅವರಿಗೆ ಭಾರತೀಯ ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಲು ಇದ್ದ ಒಂದು ದೊಡ್ಡ ಆತಂಕ ಅಥವಾ ಅಡೆತಡೆಯಾಗಿತ್ತು. ಈಗ ತೆರಿಗೆ ಮುಕ್ತಗೊಳಿಸಿರುವುದರಿಂದ ವಿದೇಶಿ ನಿಧಿಗಳು ಭಾರತದ ಕಡೆಗೆ ಹರಿಯಲು ಸುಲಭವಾಗುತ್ತದೆ.

ಇದನ್ನೂ ಓದಿ: ಅಮೆರಿಕಕ್ಕೆ ಹೋಗಿ ದೊಡ್ಡ ಉದ್ಯಮಗಳನ್ನು ಕಟ್ಟಿದ ವಲಸಿಗರಲ್ಲಿ ಭಾರತೀಯರೇ ಅತಿಹೆಚ್ಚು

ಭಾರತದ ಆರ್ಥಿಕತೆಗೆ ಆಗುವ ಅನುಕೂಲಗಳೇನು?

  • ಹೆಚ್ಚಿನ ವಿದೇಶಿ ಹಣದ ಒಳಹರಿವು (Foreign Capital Inflow): ಜಾಗತಿಕ ಹೂಡಿಕೆದಾರರು ಮತ್ತು ದೊಡ್ಡ ಸಂಸ್ಥೆಗಳು (ಪೆನ್ಷನ್ ಫಂಡ್‌ಗಳು, ಹೆಡ್ಜ್ ಫಂಡ್‌ಗಳು) ಯಾವುದೇ ತೆರಿಗೆ ಜಂಜಾಟವಿಲ್ಲದೆ ಭಾರತ ಸರ್ಕಾರದ ಸಾಲಪತ್ರಗಳಲ್ಲಿ (Bonds) ಶತಕೋಟಿ ಡಾಲರ್ ಹೂಡಿಕೆ ಮಾಡಲು ಇದು ಪ್ರೇರೇಪಿಸುತ್ತದೆ.
  • ರೂಪಾಯಿ ಮೌಲ್ಯಕ್ಕೆ ಬಲ: ಭಾರತಕ್ಕೆ ವಿದೇಶಿ ಡಾಲರ್ ಹರಿವು ಹೆಚ್ಚಾದಂತೆ, ಜಾಗತಿಕ ಮಾರುಕಟ್ಟೆಯಲ್ಲಿ ಭಾರತೀಯ ರೂಪಾಯಿಯ ಮೌಲ್ಯವು ಸ್ಥಿರಗೊಳ್ಳಲು ಮತ್ತು ಬಲಗೊಳ್ಳಲು ಸಹಾಯವಾಗುತ್ತದೆ.
  • ಸರ್ಕಾರದ ಸಾಲದ ವೆಚ್ಚ ಇಳಿಕೆ: ಸರ್ಕಾರಕ್ಕೆ ಹೆಚ್ಚಿನ ಹೂಡಿಕೆದಾರರು ಸಿಗುವುದರಿಂದ ಬಾಂಡ್‌ಗಳ ಮೇಲಿನ ಬಡ್ಡಿ ದರ (Yields) ಕಡಿಮೆಯಾಗಬಹುದು. ಇದು ಸರ್ಕಾರ ಕಡಿಮೆ ವೆಚ್ಚದಲ್ಲಿ ಸಾಲವನ್ನು ಪಡೆಯಲು ನೆರವಾಗುತ್ತದೆ.
  • ಜಾಗತಿಕ ಮಾರುಕಟ್ಟೆಯಲ್ಲಿ ಭಾರತದ ಸ್ಥಾನ: ಈ ಕ್ರಮವು ಜಾಗತಿಕ ಹಣಕಾಸು ಮಾರುಕಟ್ಟೆಯಲ್ಲಿ ಭಾರತವು ಹೂಡಿಕೆಗೆ ಅತ್ಯಂತ ಸೂಕ್ತ ಹಾಗೂ ಆಕರ್ಷಕ ದೇಶ ಎಂಬ ಸಂದೇಶವನ್ನು ರವಾನಿಸುತ್ತದೆ.

ಇದನ್ನೂ ಓದಿ: RBI MPC: ರೆಪೋ ದರ ಶೇ. 5.25, ಜಿಡಿಪಿ ದರ ಶೇ. 6.6, ಹಣದುಬ್ಬರ ಶೇ. 5.1 ಸಾಧ್ಯತೆ; ಆರ್​ಬಿಐ ಎಂಪಿಸಿ ಪ್ರಕಟಣೆ

ಆರ್ಥಿಕ ತಜ್ಞರ ಪ್ರಕಾರ, ಭಾರತೀಯ ಬಾಂಡ್‌ಗಳು ಜಾಗತಿಕ ಸೂಚ್ಯಂಕಗಳಿಗೆ ಸೇರಿದ ಬೆನ್ನಲ್ಲೇ ತೆರಿಗೆ ನಿಯಮಗಳನ್ನು ಸರಳಗೊಳಿಸಿರುವ ಈ ಐತಿಹಾಸಿಕ ನಿರ್ಧಾರವು ದೇಶದ ಸಾಲದ ಮಾರುಕಟ್ಟೆಯನ್ನು (Debt Market) ಜಾಗತಿಕ ಮಟ್ಟಕ್ಕೆ ಕೊಂಡೊಯ್ಯುವಲ್ಲಿ ಪ್ರಮುಖ ಪಾತ್ರ ವಹಿಸಲಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On – 11:11 am, Fri, 5 June 26

Source link

Exit mobile version