Headlines

ಹೆಚ್‌ಎಂಟಿ ಜಮೀನು ತೆರವುಗೊಳಿಸದಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ತಡೆ: ಮರ ಕತ್ತರಿಸದಂತೆ ಹೆಚ್‌ಎಂಟಿಗೂ ಸೂಚನೆ – Kannada News | Bengaluru HMT Land: High Court Bars Govt Acquisition, HMT Not to Cut Trees

ಬೆಂಗಳೂರು, ಜು.30: ರಾಜಧಾನಿ ಬೆಂಗಳೂರಿನ ಜಾಲಹಳ್ಳಿಯಲ್ಲಿರುವ ಹೆಚ್‌ಎಂಟಿ ಲಿಮಿಟೆಡ್‌ಗೆ (HMT Limited) ಸೇರಿದ ಜಮೀನನ್ನು ಸ್ವಾಧೀನಪಡಿಸಿಕೊಳ್ಳದಂತೆ ರಾಜ್ಯ ಸರ್ಕಾರ ಹಾಗೂ ಅರಣ್ಯ ಇಲಾಖೆಗೆ ಕರ್ನಾಟಕ ಹೈಕೋರ್ಟ್ ಬುಧವಾರ ಮಧ್ಯಂತರ ತಡೆ ನೀಡಿದೆ. ಅದೇ ಸಮಯದಲ್ಲಿ, ಈ ಜಮೀನಿನಲ್ಲಿ ಈಗಾಗಲೇ ಮೂರನೇ ವ್ಯಕ್ತಿಗಳಿಗೆ ಮಾರಾಟವಾದ ಜಾಗವನ್ನು ಹೊರತುಪಡಿಸಿ, ಉಳಿದ ಜಾಗದಲ್ಲಿ ಯಾವುದೇ ಮರಗಳನ್ನು ಕತ್ತರಿಸಬಾರದು ಎಂದು ಹೆಚ್‌ಎಂಟಿ ಸಂಸ್ಥೆಗೂ ನ್ಯಾಯಾಲಯ ನಿರ್ದೇಶಿಸಿದೆ. ಬೆಂಗಳೂರು ನಗರದ ಅರಣ್ಯ ಉಪ ಸಂರಕ್ಷಣಾಧಿಕಾರಿ (DCF) ಅವರು ಜೂನ್ 16 ರಂದು ಹೊರಡಿಸಿದ್ದ ಆದೇಶವನ್ನು…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಜನವರಿ 15ರ ದಿನಭವಿಷ್ಯ

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ಇಂದು ಮನೆಗೆ ಬರುವ ಸಂಬಂಧಿಗಳು ಹರ್ಷ ತುಂಬಿದ ವಾತಾವರಣಕ್ಕೆ ಕಾರಣ ಆಗುತ್ತಾರೆ. ವಿದ್ಯಾರ್ಥಿಗಳು ಗಮನ ಕೇಂದ್ರೀಕರಿಸುವುದರಿಂದ ಪರೀಕ್ಷಾ ಸಿದ್ಧತೆ ಸರಿಯಾದ ದಾರಿಗೆ ಬರುತ್ತದೆ. ಉದ್ಯೋಗದಲ್ಲಿ ಇರುವವರಿಗೆ ಕಾರ್ಯವಿಧಾನ ಬದಲಾವಣೆ ಹೊಸ ಅವಕಾಶ ತರುತ್ತದೆ, ಮೇಲಧಿಕಾರಿಗಳ ನಿರೀಕ್ಷೆ ಪೂರೈಸಲು ಸ್ಪಷ್ಟ ಸಂವಹನ ಅಗತ್ಯ. ವ್ಯವಹಾರ ನಡೆಸುವವರಿಗೆ ಗ್ರಾಹಕರಿಂದ ಬಂದ ಪ್ರತಿಕ್ರಿಯೆ ಮುಂದಿನ ಯೋಜನೆಗೆ ಮಾರ್ಗದರ್ಶಿ ಆಗುತ್ತದೆ. ಫ್ರೀಲಾನ್ಸರ್‌ಗಳಿಗೆ ಹೊಸ ಪ್ರಾಜೆಕ್ಟ್‌ಗಳ ವಿಚಾರಣೆ…

Read More

RCB vs MI: W,W,W.. ಆರಂಭದಲ್ಲೇ ಮುಂಬೈಗೆ ಮರ್ಮಾಘಾತ ನೀಡಿದ ಭುವಿ – Kannada News | RCB vs MI IPL 2026: Bhuvneshwar Kumar Dismisses Rohit, Surya in Early Blitz

ಐಪಿಎಲ್ 2026 ರ 54ನೇ ಪಂದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ನಡುವೆ ನಡೆಯಿತು. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಮುಂಬೈಗೆ, ಆರ್​ಸಿಬಿ ಅನುಭವಿ ವೇಗಿ ಭುವನೇಶ್ವರ್ ಕುಮಾರ್ ಮೊದಲ ಮೂರು ಓವರ್​ಗಳಲ್ಲೇ ಆಘಾತ ನೀಡಿದರು. ಆರ್​ಸಿಬಿ ಪರ ಬೌಲಿಂಗ್ ಆರಂಭಿಸಿದ ಭುವಿ, ಓವರ್​ನ ಕೊನೆಯ ಎಸೆತದಲ್ಲಿ ಮುಂಬೈ ಆರಂಭಿಕ ರಿಯಾನ್ ರಿಕಲ್ಟನ್ ಅವರ ವಿಕೆಟ್ ಉರುಳಿಸಿದರು. ರಿಕಲ್ಟನ್ ಕೇವಲ 2 ರನ್ ಬಾರಿಸಿ ಔಟಾದರು. ಆ ನಂತರ ಇನ್ನಿಂಗ್ಸ್​ನ…

Read More

IPL 2026: ಐಪಿಎಲ್ RAPP ಲಿಸ್ಟ್ ಪ್ರಕಟ: 1,307 ಆಟಗಾರರಿಗೆ ಸ್ಥಾನ – Kannada News | BCCI Announced The RAPP sheet For IPL 2026

ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ (IPL 2026)​ ಮಿನಿ ಹರಾಜಿಗಾಗಿ ಬರೋಬ್ಬರಿ 1390 ಆಟಗಾರರು ಹೆಸರು ನೊಂದಾಯಿಸಿಕೊಂಡಿದ್ದರು. ಈ 1390 ಆಟಗಾರರಲ್ಲಿ ಹರಾಜಿಗೆ ಆಯ್ಕೆಯಾಗಿದ್ದು ಕೇವಲ 359 ಆಟಗಾರರು ಮಾತ್ರ. ಇವರಲ್ಲಿ 77 ಆಟಗಾರರನ್ನು ಮಾತ್ರ ಖರೀದಿಸಲಾಗಿತ್ತು. ಅಂದರೆ ಬರೋಬ್ಬರಿ 1313 ಆಟಗಾರರು ಅವಕಾಶ ವಂಚಿತರಾಗಿದ್ದರು. ಇದೀಗ ಅವಕಾಶ ವಂಚಿತರಾದ ಆಟಗಾರರ ಪಟ್ಟಿಯನ್ನು ಬಿಸಿಸಿಐ ಪ್ರಕಟಿಸಿದೆ. ಅದು ಕೂಡ RAPP ಲಿಸ್ಟ್​ನಲ್ಲಿ ಎಂಬುದು ವಿಶೇಷ. ಏನಿದು RAPP ಲಿಸ್ಟ್​? RAPP ಲಿಸ್ಟ್ ಎಂದರೆ ರಿಜಿಸ್ಟರ್ ಅವೇಲೇಬಲ್…

Read More

ಹೊಸ ಚರ್ಚೆ ಹುಟ್ಟುಹಾಕಿದ KPS ಮ್ಯಾಗ್ನೆಟ್ ಶಾಲೆ ಯೋಜನೆ: ಆರಂಭಕ್ಕೂ ಮುನ್ನವೇ ಅಪಸ್ವರ ಏಕೆ?

ತುಮಕೂರು, ಮಾರ್ಚ್​ 30: ಅದೊಂದು ಕಾಲವಿತ್ತು. ಶಾಲೆ ಎಂದರೇ ಸಾಕು ಮಕ್ಕಳು ಕಿ.ಮೀಗಳಷ್ಟು ದೂರ ಹೆಜ್ಜೆ ಹಾಕಬೇಕಿತ್ತು. ಊರಿಂದೂರಿಗೆ ಬಂದು ಪಾಠ ಕೇಳಬೇಕಿತ್ತು. ನಂತರದಲ್ಲಿ ನಮ್ಮೂರ ಶಾಲೆ ಎಂಬಂತೆ ಹಳ್ಳಿಹಳ್ಳಿಯಲ್ಲೂ ಸರ್ಕಾರಿ ಶಾಲೆ ತೆರೆಯಲಾಗಿತ್ತು. ಮಕ್ಕಳು ಖುಷಿಯಾಗಿ ಪಾಠ ಕೇಳುತಿದ್ದರು. ಆದ್ರೀಗ ಸರ್ಕಾರದ ಕೆಪಿಎಸ್ ಮ್ಯಾಗ್ನೆಟ್ ಶಾಲೆಯ (KPS Magnet Schools) ನೀತಿ ಆರಂಭಕ್ಕೂ ಮುನ್ನವೇ ಒಂದಷ್ಟು ಅಪಸ್ವರದ ಚರ್ಚೆ ಸೃಷ್ಟಿಸಿದೆ. ವಿವಿಧೋದ್ದೇಶಿತ ಶಾಲಾ ನೀತಿಗೆ ವಿರೋಧ  ಕೆಪಿಎಸ್ ಶಾಲೆ, ಕರ್ನಾಟಕ ಸಾರ್ವಜನಿಕ ಶಾಲೆಗಳ ಮ್ಯಾಗ್ನೆಟ್ ಯೋಜನೆ….

Read More

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ದೆಹಲಿಯಲ್ಲಿ ತೀವ್ರ ಪ್ರತಿಭಟನೆ; ಅಮಿತ್ ಶಾ- ಧರ್ಮೇಂದ್ರ ಪ್ರಧಾನ್ ತುರ್ತು ಸಭೆ – Kannada News | Education Minister Dharmendra Pradhan meets Amit Shah as CJPs Chalo Sansad protest reaches parliament

ನವದೆಹಲಿ, ಜುಲೈ 20: ನೀಟ್ (NEET UG 2026) ಪರೀಕ್ಷೆಯ ಅಕ್ರಮದ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಹಮ್ಮಿಕೊಂಡಿರುವ ಬೃಹತ್ ‘ಚಲೋ ಸಂಸದ್’ ಪ್ರತಿಭಟನಾ ಮೆರವಣಿಗೆಯಿಂದಾಗಿ ದೆಹಲಿಯಲ್ಲಿ ಭಾರಿ ಉದ್ವಿಗ್ನತೆ ಸೃಷ್ಟಿಯಾಗಿದೆ. ಪ್ರತಿಭಟನಾಕಾರರು ಸಂಸತ್​ ಭವನದ ಬಳಿ ತಲುಪಿದ್ದಾರೆ. ಸಂಸತ್ತಿನ ಮುಂಗಾರು ಅಧಿವೇಶನದ ಮೊದಲ ದಿನವಾದ ಇಂದೇ ನಡೆಯುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ.  ಇದರ ನಡುವೆ ಧರ್ಮೇಂದ್ರ ಪ್ರಧಾನ್ ಅವರು ಕೇಂದ್ರ…

Read More

‘ಕಿಂಗ್’ ಸಿನಿಮಾ ಬಿಡುಗಡೆಗೂ ಮುನ್ನವೇ ಹಾಡು ಸೋರಿಕೆ? – Kannada News | Shah Rukh Khan And Deepika Padukone King Movie AI Video Goes viral

‘ಕಿಂಗ್’ ಚಿತ್ರದಲ್ಲಿ ಶಾರುಖ್ ಖಾನ್ ಮತ್ತು ದೀಪಿಕಾ ಪಡುಕೋಣೆ ಒಟ್ಟಿಗೆ ಕಾಣಿಸಿಕೊಳ್ಳಲಿದ್ದಾರೆ. ‘ಓಂ ಶಾಂತಿ ಓಂ’, ‘ಚೆನ್ನೈ ಎಕ್ಸ್‌ಪ್ರೆಸ್’, ‘ಪಠಾಣ್’ ಮತ್ತು‘ ಹ್ಯಾಪಿ ನ್ಯೂ ಇಯರ್’ ಚಿತ್ರಗಳಲ್ಲಿ ಇವರು ಒಟ್ಟಿಗೆ ನಟಿಸಿದ್ದಾರೆ.‘ಜವಾನ್’ ಸಿನಿಮಾದಲ್ಲೂ ಶಾರುಖ್-ದೀಪಿಕಾ ಕಾಂಬಿನೇಷನ್ ಇದೆ. ಈ ಜೋಡಿ ‘ಕಿಂಗ್’ ಚಿತ್ರಕ್ಕಾಗಿ ಮತ್ತೆ ಒಂದಾಗಿದ್ದಾರೆ. ಈ ಚಿತ್ರದ ಹಾಡಿನ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ಈ ವೀಡಿಯೊ ಕಿಂಗ್ ಚಿತ್ರದ ಸೋರಿಕೆಯಾದ ಹಾಡು ಎಂದು ಹೇಳಲಾಗುತ್ತಿದೆ. ಆದರೆ, ಇದರ ಅಸಲಿಯತ್ತ ಬೇರೆಯೇ ಇದೆ. ಶಾರುಖ್…

Read More

ಬಟ್ಟೆ ಬಿಚ್ಚೊವರೆಗೂ ಬಿಡಲ್ಲ: ಪತಿ ಮತ್ತು ಮಾವನಿಂದ ಚಿತ್ರಹಿಂಸೆ

ಚಿಕ್ಕಮಗಳೂರು, ಜ.2: ಜಿಲ್ಲೆಯ ತರೀಕೆರೆ ತಾಲೂಕಿನ ನಂದಿಹೊಸಹಳ್ಳಿಯಲ್ಲಿ ಪತಿ ತನ್ನ ಪತ್ನಿಗೆ ಗಂಡು ಮಗು ಬೇಕೆಂದು ನಿರಂತರವಾಗಿ ಕಿರುಕುಳ ನೀಡುತ್ತಿದ್ದಾನೆ. ಈ ಪ್ರಕರಣದಲ್ಲಿ ಪತಿ ತಿಮ್ಮಪ್ಪ ಮತ್ತು ಮಾವ ಗುಂಡಪ್ಪ ಅವರನ್ನು ಬಂಧಿಸಲಾಗಿದೆ. ತಾರಾ ಎಂಬ ಮಹಿಳೆ ಡಿ.29ರಂದು ಲಿಂಗದಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ತಾರಾ ಅವರು ತಮ್ಮ ಮೇಲೆ ನಡೆದ ದೌರ್ಜನ್ಯದ ಬಗ್ಗೆ ಟಿವಿ9 ಜತೆಗೆ ಹಂಚಿಕೊಂಡಿದ್ದಾರೆ, ಊಟ ಮಾಡುತ್ತಿದ್ದಾಗ ತನ್ನ ತಟ್ಟೆಯನ್ನು ಕಿತ್ತು ನೆಲಕ್ಕೆಸೆದು, ನಂತರ ಬಟ್ಟೆ ಬಿಚ್ಚಿಸಿ ತೀವ್ರವಾಗಿ ಹಲ್ಲೆ ನಡೆಸಿದ್ದಾಗಿ…

Read More

World Milk Day 2026: ವಿಶ್ವ ಹಾಲು ದಿನವನ್ನು ಯಾವ ಉದ್ದೇಶಕ್ಕಾಗಿ ಆಚರಿಸಲಾಗುತ್ತದೆ?

ಕ್ಯಾಲ್ಸಿಯಂ, ಮೆಗ್ನೀಸಿಯಮ್, ಕಬ್ಬಿಣ, ಸತು, ವಿಟಮಿನ್ ಬಿ 12, ವಿಟಮಿನ್ ಡಿ ಮತ್ತು ಹೇರಳವಾದ ಪ್ರೋಟೀನ್‌ಗಳಂತಹ ಖನಿಜಗಳಿಂದ ತುಂಬಿದ ಹಾಲು (Milk) ಒಂದು ಸಂಪೂರ್ಣ ಆಹಾರವಾಗಿದೆ. ಪ್ರತಿದಿನ ಒಂದು ಲೋಟ ಹಾಲು ಕುಡಿಯುವುದರಿಂದ ನಮ್ಮ ದೇಹಕ್ಕೆ ಪ್ರಯೋಜನಕಾರಿಯಾದ ಅನೇಕ ಪೋಷಕಾಂಶಗಳನ್ನು ದೊರೆಯುತ್ತದೆ. ಹೀಗೆ ಹಾಲಿನ ಆರೋಗ್ಯ ಪ್ರಯೋಜನಗಳು,  ಹೈನುಗಾರಿಕೆ ಉದ್ಯಮಕ್ಕೆ ಸಂಬಂಧಿಸಿದ ಚಟುವಟಿಕೆಗಳ ಅರಿವು ಮೂಡಿಸಲು ಮತ್ತು ಬೆಂಬಲವನ್ನು ಉತ್ತೇಜಿಸಲು ಪ್ರತಿವರ್ಷ ಜೂನ್‌ 1 ರಂದು ವಿಶ್ವ ಹಾಲು ದಿನವನ್ನು ಆಚರಿಸಲಾಗುತ್ತದೆ. ಈ ದಿನದ ಇತಿಹಾಸ ಮತ್ತು…

Read More

ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್​​ನಿಂದ ಅರೆಬೆತ್ತಲೆ ಪ್ರತಿಭಟನೆ; ಬಂಧಿತ 4 ಆರೋಪಿಗಳು 5 ದಿನ ಪೊಲೀಸ್ ವಶಕ್ಕೆ – Kannada News | AI Summit protest Patiala House Court sends 4 Indian Youth Congress workers to police custody for 5 days

ನವದೆಹಲಿ, ಫೆಬ್ರವರಿ 21: ದೆಹಲಿಯಲ್ಲಿ ನಡೆದ ಎಐ ಇಂಪ್ಯಾಕ್ಟ್ ಶೃಂಗಸಭೆಯ (AI Impact Summit) ಸಭಾಂಗಣದೊಳಗೆ ಶರ್ಟ್ ಬಿಚ್ಚಿ, ಮೋದಿ-ಟ್ರಂಪ್ ಫೋಟೋ ಇದ್ದ ಟಿ-ಶರ್ಟ್ ಹಿಡಿದುಕೊಂಡು, ಅಮೆರಿಕದ ಜೊತೆಗಿನ ವ್ಯಾಪಾರ ಒಪ್ಪಂದದ ವಿರುದ್ಧ ಘೋಷಣೆ ಕೂಗುತ್ತಾ ಮೆರವಣಿಗೆ ನಡೆಸಿದ ಯುವ ಕಾಂಗ್ರೆಸ್ ಕಾರ್ಯರ್ತರನ್ನು ಬಂಧಿಸಲಾಗಿತ್ತು. ಬಂಧಿತರಲ್ಲಿ ನಾಲ್ವರನ್ನು ಇಂದು ಪಟಿಯಾಲ ಹೌಸ್ ನ್ಯಾಯಾಲಯದೆದುರು ಹಾಜರುಪಡಿಸಲಾಗಿತ್ತು. ಆ ನಾಲ್ವರನ್ನೂ 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ. ಆರೋಪಿಗಳ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ. ನೇಪಾಳದ…

Read More