Headlines

ನಮ್ಮ ಮೆಟ್ರೋ ಹಸಿರು ಮಾರ್ಗದಲ್ಲಿ ವಿದ್ಯುತ್ ತಾಂತ್ರಿಕ ದೋಷ: ಯಶವಂತಪುರ – ಮಾದಾವರ ನಡುವೆ ರೈಲು ಸಂಚಾರ ವ್ಯತ್ಯಯ! – Kannada News | Namma Metro Green Line Disrupted: Trains Suspended Between Yeshwanthpur and Madavara

ಬೆಂಗಳೂರು, ಜುಲೈ 21: ಬೆಂಗಳೂರಿನ ನಮ್ಮ ಮೆಟ್ರೋ ಹಸಿರು ಮಾರ್ಗದಲ್ಲಿ (Green Line) ಇಂದು ಬೆಳಿಗ್ಗೆ ವಿದ್ಯುತ್ ಪೂರೈಕೆಯಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮೆಟ್ರೋ ರೈಲು ಸಂಚಾರದಲ್ಲಿ ಭಾರಿ ವ್ಯತ್ಯಯ ಉಂಟಾಗಿದೆ. ಬೆಳಿಗ್ಗೆ 8 ಗಂಟೆಯ ಸುಮಾರಿಗೆ ಎದುರಾದ ಈ ವಿದ್ಯುತ್ ಸಮಸ್ಯೆಯಿಂದಾಗಿ ಪ್ರಯಾಣಿಕರು ತೀವ್ರ ಪರದಾಟ ನಡೆಸುವಂತಾಗಿತ್ತು. ಇದೀಗ 8.45ಕ್ಕೆ ಸಂಚಾರ ಆರಂಭವಾಗಿದೆ. ಶಾರ್ಟ್-ಲೂಪ್‌ನಲ್ಲಿ ಮಾತ್ರವೇ ರೈಲು ಸಂಚಾರ ವಿದ್ಯುತ್‌ ಸಮಸ್ಯೆಯ ಕಾರಣದಿಂದಾಗಿ ಹಸಿರು ಮಾರ್ಗದ ಸಿಲ್ಕ್ ಇನ್‌ಸ್ಟಿಟ್ಯೂಟ್‌ನಿಂದ ಯಶವಂತಪುರ ನಿಲ್ದಾಣಗಳ ನಡುವೆ ಮಾತ್ರ…

Read More

ಉತ್ತರ ಪ್ರದೇಶ: ರಾಹುಲ್, ಪ್ರಿಯಾಂಕಾ, ಅಖಿಲೇಶ್ ಸಭೆ, ಮುಂಬರುವ ಅಸೆಂಬ್ಲಿ ಚುನಾವಣೆಯ ಸೀಟು ಹಂಚಿಕೆ ಲೆಕ್ಕಾಚಾರ ಶುರು – Kannada News | UP Assembly Elections: Rahul Akhilesh Meet for Alliance Seat Sharing Strategy

ನವದೆಹಲಿ, ಜುಲೈ 21: ಸಂಸತ್ ಮುಂಗಾರು ಅಧಿವೇಶನದ ಮೊದಲ ದಿನವೇ ಪ್ರತಿಪಕ್ಷಗಳ ಅಂಗಳದಲ್ಲಿ ಭಾರಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಲೋಕಸಭೆ(Lok Sabha)ಯ ವಿರೋಧ ಪಕ್ಷದ ನಾಯಕಿಯ ಕಚೇರಿಯಲ್ಲಿ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಮತ್ತು ಸಮಾಜವಾದಿ ಪಕ್ಷದ (SP) ಅಧ್ಯಕ್ಷ ಅಖಿಲೇಶ್ ಯಾದವ್ ಸುಮಾರು ಒಂದು ಗಂಟೆಗಳ ಕಾಲ ಸುದೀರ್ಘ ಚರ್ಚೆ ನಡೆಸಿದ್ದು, ಉತ್ತರ ಪ್ರದೇಶದ (UP) ಮುಂಬರುವ ವಿಧಾನಸಭಾ ಚುನಾವಣೆಯ ಸೀಟು ಹಂಚಿಕೆಯ ಝಲಕ್ ಕಾಣಿಸಿಕೊಂಡಿದೆ. ಅಧಿವೇಶನದಲ್ಲಿ ‘ನೀಟ್ ಪೇಪರ್ ಸೋರಿಕೆ’ ಮತ್ತು…

Read More

‘ಸಂಜಿತ್ ಹೆಗಡೆಗಾಗಿ ಕಾಯ್ತಾ ಇದ್ದೆ’; ಕೊನೆಗೂ ಈಡೇರಿತು ವಿನಯ್ ರಾಜ್​​ಕುಮಾರ್ ಆಸೆ

‘ಸಿಟಿ ಲೈಟ್ಸ್’ ಚಿತ್ರದ ‘ಕಂದಮ್ಮ ಕಂದಮ್ಮ..’ ಹಾಡು ರಿಲೀಸ್ ಆಗಿದೆ. ಈ ಹಾಡು ಗಮನ ಸೆಳೆಯುತ್ತಿದೆ. ಸಂಜಿತ್ ಹೆಗಡೆ ಧ್ವನಿ ಹಾಡಿನ ಹೈಲೈಟ್. ಈಗ ವಿನಯ್ ರಾಜ್​​ಕುಮಾರ್ ಅವರು ಹಾಡಿನ ಬಗ್ಗೆ ಮಾತನಾಡಿದ್ದಾರೆ. ‘ನನ್ನ ಸಿನಿಮಾಗೆ ಸಂಜಿತ್ ಹೆಗಡೆ ಯಾವಾಗ ಹಾಡ್ತಾರೆ ಅಂತ ಕಾಯ್ತಾ ಇದ್ದೆ. ಕೊನೆಗೂ ಅವರು ನನ್ನ ಸಿನಿಮಾಗೆ ಹಾಡಿದ್ದಾರೆ’ ಎಂದು ಖುಷಿ ಹೊರಹಾಕಿದ್ದಾರೆ. ‘ಸಿಟಿ ಲೈಟ್ಸ್’ ಚಿತ್ರಕ್ಕೆ ದುನಿಯಾ ವಿಜಯ್ ಅವರ ನಿರ್ದೇಶನ ಇದೆ. ಈ ಸಿನಿಮಾದಲ್ಲಿ ಅವರ ಮಗಳು ಮೋನಿಷಾ ನಟಿಸಿದ್ದಾರೆ…

Read More

ದಳಪತಿ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ದೊಡ್ಡ ಸೀಕ್ರೆಟ್ ರಿವೀಲ್ – Kannada News | Thalapathy Vijay Jan Nayagan Remake: H. Vinoth Reveals 50 Percent New Story

ದಳಪತಿ ವಿಜಯ್ ನಟನೆಯ ‘‘ಜನ ನಾಯಗನ್’ ಸಿನಿಮಾ (Jana Nayagan) ಈ ವಾರವೇ ಥಿಯೇಟರ್‌ಗೆ ಬರ್ತಿದೆ. ಈ ಸಿನಿಮಾ ತೆಲುಗಿನ ಸೂಪರ್ ಹಿಟ್ ‘ಭಗವಂತ್ ಕೇಸರಿ’ ಚಿತ್ರದ ತಮಿಳು ರಿಮೇಕ್ ಆಗಿದೆ. ಈ ಬಿಗ್ ಬಜೆಟ್ ಸಿನಿಮಾವನ್ನು ಹೆಚ್. ವಿನೋದ್ ನಿರ್ದೇಶನ ಮಾಡಿದ್ದಾರೆ. ಇತ್ತೀಚಿನ ಇಂಟರ್ವ್ಯೂ ಒಂದರಲ್ಲಿ ಅವರು ಒರಿಜಿನಲ್ ಸಿನಿಮಾದಿಂದ ಎಷ್ಟು ಭಾಗವನ್ನು ಕಾಪಿ ಮಾಡಲಾಗಿದೆ ಅಂತ ಬಿಚ್ಚಿಟ್ಟಿದ್ದಾರೆ. ‘ಜನ ನಾಯಕನ್’ ಸಿನಿಮಾದಲ್ಲಿ ಒರಿಜಿನಲ್ ಕಥೆಯ ಶೇಕಡಾ 50 ರಷ್ಟು ಭಾಗ ಮಾತ್ರ ಇರಲಿದೆ ಎಂದು…

Read More

ಓವರ್ ಇಲ್ಲ, ಸೂಪರ್ ಫೈವ್, 2 ಬೋನಸ್ ರನ್: ದಿ ಹಂಡ್ರೆಡ್ ಲೀಗ್ ಹೊಸ ನಿಯಮ – Kannada News | The Hundred Men’s Competition 2026: Competition Rules

ಇಂಗ್ಲೆಂಡ್‌ನ ಅತ್ಯಂತ ಜನಪ್ರಿಯ ಕ್ರಿಕೆಟ್ ಟೂರ್ನಮೆಂಟ್ ‘ದಿ ಹಂಡ್ರೆಡ್‘ ಇಂದಿನಿಂದ (ಜುಲೈ 21) ಶುರುವಾಗಲಿದೆ. 8 ತಂಡಗಳ ನಡುವಣ ಈ ಟೂರ್ನಿಯಲ್ಲಿ ಇದೇ ಮೊದಲ ಬಾರಿಗೆ ಐಪಿಎಲ್ (IPL) ಫ್ರಾಂಚೈಸಿಗಳು ಹೂಡಿಕೆ ಮಾಡಿದ್ದು, ಇದರಿಂದ ತಂಡಗಳ ಹೆಸರು ಮತ್ತು ಜೆರ್ಸಿಗಳು ಸಂಪೂರ್ಣ ಬದಲಾಗಿವೆ. ಇನ್ನು ‘ದಿ ಹಂಡ್ರೆಡ್’ ಕ್ರಿಕೆಟ್ ಲೀಗ್ ಸಾಂಪ್ರದಾಯಿಕ ಟಿ20 ಕ್ರಿಕೆಟ್‌ಗಿಂತ ಸಂಪೂರ್ಣ ಭಿನ್ನವಾಗಿದ್ದು, ಪಂದ್ಯವನ್ನು ಕೇವಲ 2.5 ಗಂಟೆಗಳಲ್ಲಿ ಮುಗಿಸುವಂತೆ ವಿನ್ಯಾಸಗೊಳಿಸಲಾಗಿದೆ. ಈ ಲೀಗ್‌ನ ಪ್ರಮುಖ ನಿಯಮಗಳು ಇಲ್ಲಿವೆ. ಓವರ್‌ಗಳ ಬದಲು ಎಸೆತಗಳ ಲೆಕ್ಕಾಚಾರ:…

Read More

ಸಿಕ್ಕಿಂ: ಜಲವಿದ್ಯುತ್ ಯೋಜನೆ ಸುರಂಗದಲ್ಲಿ ಭೂಕುಸಿತ, ಅನಿಲ ಸೋರಿಕೆ, 7 ಶವಗಳು ಪತ್ತೆ, ಹಲವರು ಸಿಲುಕಿರುವ ಶಂಕೆ – Kannada News | Sikkim Tunnel Collapse: Methane Gas Leak Kills 7 Workers, Rescue Efforts Underway

ನಾಮ್ಚಿ, ಜುಲೈ 21: ದಕ್ಷಿಣ ಸಿಕ್ಕಿಂನ ಸಮರ್ದುಂಗ್ ಬಳಿ ಇರುವ ಜಲವಿದ್ಯುತ್ ಯೋಜನೆಯ ಸುರಂಗ ಮಾರ್ಗದಲ್ಲಿ ಭೀಕರ ಭೂಕುಸಿತ(Landslide) ಸಂಭವಿಸಿದೆ. ಇದರ ಬೆನ್ನಲ್ಲೇ ಸುರಂಗದೊಳಗೆ ಅಪಾಯಕಾರಿ ವಿಷಕಾರಿ ಅನಿಲ ಸೋರಿಕೆಯಾಗಿದ್ದು, ಕನಿಷ್ಠ 7 ಮಂದಿ ಕಾರ್ಮಿಕರು ಪ್ರಾಣ ಕಳೆದುಕೊಂಡಿದ್ದಾರೆ. ದಕ್ಷಿಣ ಸಿಕ್ಕಿಂನ ಸಮರ್ದುಂಗ್‌ನಲ್ಲಿ ಸೋಮವಾರ ಮಧ್ಯಾಹ್ನ 3.09 ರ ಸುಮಾರಿಗೆ ‘ತೀಸ್ತಾ ಹಂತ VI ಜಲವಿದ್ಯುತ್ ಯೋಜನೆ’ಯ ಸುರಂಗ ಕಾಮಗಾರಿ ನಡೆಯುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಪಟೇಲ್ ಎಂಜಿನಿಯರಿಂಗ್ ಸಂಸ್ಥೆಯು ಈ ಯೋಜನೆಯ ನಿರ್ಮಾಣ ಹೊಣೆ ಹೊತ್ತುಕೊಂಡಿದೆ….

Read More

ರಾಯಚೂರು, ಚಿತ್ರದುರ್ಗದಲ್ಲಿ ಮತ್ತೆ ಬೀದಿನಾಯಿಗಳ ದಾಳಿ: 4 ವರ್ಷದ ಬಾಲಕನ ಸ್ಥಿತಿ ಗಂಭೀರ, ನಾಲ್ವರು ಮಕ್ಕಳಿಗೆ ಗಾಯ – Kannada News | Stray Dog Attacks Spark Panic in Karnataka: 4 Year Old Critical in Raichur, Four Children Injured in Chitradurga

ಬೀದಿ ನಾಯಿಗಳು ಹಾಗೂ ಬಲಚಿತ್ರದಲ್ಲಿ ಗಾಯಾಳು ಬಾಲಕ ಗೋಪಾಲ್Image Credit source: tv9 ರಾಯಚೂರು, ಚಿತ್ರದುರ್ಗ, ಜುಲೈ 21: ರಾಯಚೂರು (Raichur) ಜಿಲ್ಲೆಯಲ್ಲಿ ಬೀದಿನಾಯಿಗಳ ಹಾವಳಿ ಮತ್ತೆ ಆತಂಕ ಮೂಡಿಸಿದೆ. ಕೆಲ ದಿನ ಹಿಂದಷ್ಟೇ ಬೀದಿನಾಯಿಗಳ ದಾಳಿಯಿಂದ ಒಂದೂವರೆ ವರ್ಷದ ಬಾಲಕಿ ಮೃತಪಟ್ಟಿದ್ದ ಬೆನ್ನಲ್ಲೇ, ಇದೀಗ ನಾಲ್ಕು ವರ್ಷದ ಬಾಲಕನ ಮೇಲೆ ಬೀದಿ ನಾಯಿ ದಾಳಿ ನಡೆದಿದೆ. ರಾಯಚೂರು ಹೊರವಲಯದ ಮಲಿಯಾಬಾರ್ ಪ್ರದೇಶದಲ್ಲಿ ಸೋಮವಾರ ಮನೆ ಸಮೀಪ ಆಟವಾಡುತ್ತಿದ್ದ ಗೋಪಾಲ್ ಎಂಬ ಬಾಲಕನ ಮೇಲೆ ಬೀದಿನಾಯಿಗಳು ಏಕಾಏಕಿ…

Read More

Namma Metro: ಬನ್ನೇರು​‌ಘಟ್ಟ ಪಿಂಕ್ ಲೈನ್ ಸಂಚಾರ ಆಸ್ಟ್ 15ಕ್ಕೂ ಅನುಮಾನ! – Kannada News | Namma Metro Pink Line: Bannerghatta Route Opening Delayed Past August 15

ಬನ್ನೇರು​‌ಘಟ್ಟ ಪಿಂಕ್ ಲೈನ್ ಸಂಚಾರ ಆಸ್ಟ್ 15ಕ್ಕೂ ಅನುಮಾನ! Image Credit source: gettyimages.com ಬೆಂಗಳೂರು, ಜುಲೈ 21: ಬೆಂಗಳೂರಿನ ಸಾರಿಗೆ ವ್ಯವಸ್ಥೆಗೆ ಬಿಡುಗಡೆ ನೀಡಬೇಕಿದ್ದ ‘ನಮ್ಮ ಮೆಟ್ರೋ’ ಯೋಜನೆಯ ಕಾಮಗಾರಿಗಳು ನಿಗದಿತ ಸಮಯಕ್ಕೆ ಪೂರ್ಣಗೊಳ್ಳದೆ ಪದೆ ಪದೆ ವಿಳಂಬವಾಗುತ್ತಿರುವುದು ರಾಜಧಾನಿಯ ಜನರಿಗೆ ಮತ್ತಷ್ಟು ನಿರಾಸೆ ಮೂಡಿಸಿದೆ. ಪ್ರಮುಖವಾಗಿ ಬನ್ನೇರುಘಟ್ಟ ರಸ್ತೆಯನ್ನು ಸಂಪರ್ಕಿಸುವ ಮೆಟ್ರೋ ‘ಪಿಂಕ್ ಲೈನ್’ (Pink Line Metro) ಯೋಜನೆಯ ಮೊದಲ ಹಂತದ ಸಂಚಾರವನ್ನು ಆಗಸ್ಟ್ 15ರ ವೇಳೆಗೆ ಆರಂಭಿಸಲು ಬಿಎಂಆರ್‌ಸಿಎಲ್ (BMRCL) ಯೋಜನೆ…

Read More

ಮುಂಬೈನಲ್ಲಿ ಜಾನ್ ಅಬ್ರಹಾಂ ಹೊಸ ಬಂಗಲೆ; 84 ಕೋಟಿ ರೂ. ಆಸ್ತಿ ಖರೀದಿಸಿದ ಬಾಲಿವುಡ್ ನಟ – Kannada News | John Abraham Buys Rs 84 Cr Bandra Bungalow: Mumbai Luxury Real Estate Booms

ಬಾಲಿವುಡ್ ನಟ ಜಾನ್ ಅಬ್ರಹಾಂ (John Abraham) ಮುಂಬೈನಲ್ಲಿ ಭರ್ಜರಿ ಆಸ್ತಿ ಖರೀದಿಸಿದ್ದಾರೆ. ಬಾಂದ್ರಾ ವೆಸ್ಟ್‌ನಲ್ಲಿ ಒಂದು ಐಷಾರಾಮಿ ಬಂಗಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಇದರ ಬೆಲೆ ಬರೋಬ್ಬರಿ 84 ಕೋಟಿ ರೂಪಾಯಿ. ಇತ್ತೀಚೆಗಷ್ಟೇ ಅಂದರೆ ಜುಲೈ 14, 2026 ರಂದು ಈ ಬಂಗಲೆ ರಿಜಿಸ್ಟರ್ ಆಗಿದೆ. ಈ ಒಂದು ಡೀಲ್‌ಗಾಗಿ ಜಾನ್ ಅಬ್ರಹಾಂ 5.04 ಕೋಟಿ ರೂಪಾಯಿ ಸ್ಟಾಂಪ್ ಡ್ಯೂಟಿ ಕಟ್ಟಿದ್ದಾರೆ. ಇನ್ನು ಈ ಪ್ರಾಪರ್ಟಿ ಒಟ್ಟು 1,017.60 ಚದರ ಮೀಟರ್ ವಿಸ್ತೀರ್ಣದಲ್ಲಿದೆ. ಇದರಲ್ಲಿ ದೊಡ್ಡ ಬಂಗಲೆ ಜೊತೆಗೆ…

Read More

ಮೂವರು ಹೊಸಬರ ಎಂಟ್ರಿ: ಹೀಗಿದೆ ಟೀಮ್ ಇಂಡಿಯಾ – Kannada News | IND vs ZIM: India T20 Squad For Zimbabwe 2026

ಭಾರತ ಮತ್ತು ಝಿಂಬಾಬ್ವೆ ನಡುವಣ ಮೂರು ಮ್ಯಾಚ್​ಗಳ ಟಿ20 ಸರಣಿಯು ಜುಲೈ 23 ರಿಂದ ಶುರುವಾಗಲಿದೆ. ಈ ಸರಣಿಗಾಗಿ 15 ಸದಸ್ಯರ ಬಲಿಷ್ಠ ಟೀಮ್ ಇಂಡಿಯಾವನ್ನು ಪ್ರಕಟಿಸಲಾಗಿದೆ. ಈ ತಂಡವನ್ನು ಶ್ರೇಯಸ್ ಅಯ್ಯರ್ ಮುನ್ನಡೆಸಲಿದ್ದು, ತಿಲಕ್ ವರ್ಮಾ ಅವರಿಗೆ ಉಪನಾಯಕನಾಗಿ ಕಾಣಿಸಿಕೊಳ್ಳಲಿದ್ದಾರೆ. ಇನ್ನು ಈ ತಂಡದಿಂದ ಹಿರಿಯ ವಿಕೆಟ್ ಕೀಪರ್ ಬ್ಯಾಟರ್ ಸಂಜು ಸ್ಯಾಮ್ಸನ್ ಅವರನ್ನು ತಂಡದಿಂದ ಕೈಬಿಡಲಾಗಿದೆ. ಅವರ ಬದಲಿಗೆ ವಿಕೆಟ್ ಕೀಪರ್ ಬ್ಯಾಟರ್​ ಪ್ರಭ್​ಸಿಮ್ರಾನ್​ ಸಿಂಗ್​ ಅವರನ್ನು ಆಯ್ಕೆ ಮಾಡಲಾಗಿದೆ. ಮೂವರಿಗೆ ಚೊಚ್ಚಲ ಅವಕಾಶ! ಅಂತಾರಾಷ್ಟ್ರೀಯ…

Read More