ಮಹಾ ಎಡವಟ್ಟು… ಅವೇಶ್ ಖಾನ್​ಗೆ ಬ್ಯಾನ್ ಭೀತಿ..!

ಮಹಾ ಎಡವಟ್ಟು… ಅವೇಶ್ ಖಾನ್​ಗೆ ಬ್ಯಾನ್ ಭೀತಿ..!

IPL 2026: ಲಕ್ನೋ ಸೂಪರ್ ಜೈಂಟ್ಸ್ (LSG) ವೇಗಿ ಅವೇಶ್ ಖಾನ್ ಮತ್ತೊಮ್ಮೆ ತಮ್ಮ ವಿಲಕ್ಷಣ ಸಂಭ್ರಮಾಚರಣೆಯ ಮೂಲಕ ವಿವಾದಕ್ಕೆ ಸಿಲುಕಿದ್ದಾರೆ. ಸನ್ ರೈಸರ್ಸ್ ಹೈದರಾಬಾದ್ (SRH) ವಿರುದ್ಧದ ರೋಚಕ ಪಂದ್ಯದಲ್ಲಿ ರಿಷಭ್ ಪಂತ್ ಬಾರಿಸಿದ ವಿನ್ನಿಂಗ್ ಶಾಟ್ ಬೌಂಡರಿ ಗೆರೆ ದಾಟುವ ಮೊದಲೇ, ಹೊರಗಡೆ ನಿಂತಿದ್ದ ಅವೇಶ್ ಖಾನ್ ಬ್ಯಾಟ್‌ನಿಂದ ಚೆಂಡನ್ನು ತಡೆದು ಸಂಭ್ರಮಿಸಿದ್ದು ಈಗ ದೊಡ್ಡ ಚರ್ಚೆಗೆ ಕಾರಣವಾಗಿದೆ.

ಏನಿದು ಘಟನೆ?

ಹೈದರಾಬಾದ್​ನಲ್ಲಿ ನಡೆದ ಐಪಿಎಲ್​ನ 10ನೇ ಪಂದ್ಯದ ಕೊನೆಯ ಎರಡು ಎಸೆತಗಳಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡಕ್ಕೆ ಗೆಲ್ಲಲು 1 ರನ್ ಬೇಕಿದ್ದಾಗ, ಪಂತ್ ಅವರು ಲಾಂಗ್-ಆನ್ ಕಡೆಗೆ ಚೆಂಡನ್ನು ಬಾರಿಸಿದರು. ಮುಂದಿನ ಬ್ಯಾಟರ್ ಆಗಿ ಕ್ರೀಸ್‌ಗೆ ಬರಲು ಪ್ಯಾಡ್ ಧರಿಸಿ ಸಜ್ಜಾಗಿದ್ದ ಅವೇಶ್ ಖಾನ್, ಬೌಂಡರಿ ಗೆರೆಯ ಹೊರಭಾಗದಲ್ಲಿ ನಿಂತಿದ್ದರು.

ಇತ್ತ ರಿಷಭ್ ಪಂತ್ ಬಾರಿಸಿದ ಚೆಂಡು ಬೌಂಡರಿ ಗೆರೆ ದಾಟುವ ಮೊದಲೇ ಉತ್ಸಾಹದಲ್ಲಿ ಓಡಿ ಬಂದ ಅವೇಶ್ ಖಾನ್, ತಮ್ಮ ಬ್ಯಾಟ್‌ನಿಂದ ಚೆಂಡನ್ನು ಮತ್ತೆ ಮೈದಾನದ ಒಳಕ್ಕೆ ಹೊಡೆದು ಸಂಭ್ರಮಿಸಿದರು.

ನಿಯಮ ಏನು ಹೇಳುತ್ತದೆ?

ಕ್ರಿಕೆಟ್‌ನ ನಿಯಮ 41 (ಅನ್ ಫೇರ್ ಪ್ಲೇ) ಮತ್ತು ನಿಯಮ 20.1 (ಡೆಡ್ ಬಾಲ್) ಪ್ರಕಾರ, ಮೈದಾನದ ಹೊರಗಿರುವ ಆಟಗಾರ ಪಂದ್ಯದ ಅವಧಿಯಲ್ಲಿ ಚೆಂಡನ್ನು ಉದ್ದೇಶಪೂರ್ವಕವಾಗಿ ಸ್ಪರ್ಶಿಸಿದರೆ ಅದನ್ನು ‘ಡೆಡ್ ಬಾಲ್’ ಎಂದು ಘೋಷಿಸಬಹುದು. ಅಲ್ಲದೆ, ಎದುರಾಳಿ ತಂಡಕ್ಕೆ 5 ಪೆನಾಲ್ಟಿ ರನ್‌ಗಳನ್ನು ನೀಡುವ ಅವಕಾಶವೂ ಇರುತ್ತದೆ.

ಸನ್ ರೈಸರ್ಸ್ ಹೈದರಾಬಾದ್ ತಂಡವು ಈ ಘಟನೆ ಸೇರಿದಂತೆ ಅಂಪೈರಿಂಗ್ ಕುರಿತಾದ ಇತರ ದೂರುಗಳ ಬಗ್ಗೆ ಬಿಸಿಸಿಐಗೆ ಅಧಿಕೃತವಾಗಿ ಪತ್ರ ಬರೆಯಲು ನಿರ್ಧರಿಸಿದೆ ಎಂದು ವರದಿಯಾಗಿದೆ.

ಒಂದು ವೇಳೆ ಈ ಘಟನೆಯನ್ನು ಮ್ಯಾಚ್ ರೆಫರಿ ಗಂಭೀರವಾಗಿ ಪರಿಗಣಿಸಿದರೆ, ಐಸಿಸಿ ನಿಯಮಗಳನ್ನು ಉಲ್ಲಂಘಿಸಿರುವ ಹಿನ್ನೆಲೆಯಲ್ಲಿ ಅವರಿಗೆ ಒಂದು ಪಂದ್ಯದ ನಿಷೇಧ ಹೇರಬಹುದು ಎಂದು ಕೆಲವು ವರದಿಗಳು ಸೂಚಿಸಿವೆ.

ಬಿಸಿಸಿಐ ಇದನ್ನು “ನಡವಳಿಕೆ ಸಂಹಿತೆ” (Code of Conduct) ಉಲ್ಲಂಘನೆ ಎಂದು ಪರಿಗಣಿಸಿದರೆ ಮಾತ್ರ ಈ ಕ್ರಮ ಕೈಗೊಳ್ಳಬಹುದು. ಹೀಗಾಗಿ ಇಲ್ಲಿ ಮ್ಯಾಚ್ ರೆಫರಿಯ ಪರಿಗಣನೆಯೊಂದಿಗೆ, ಬಿಸಿಸಿಐ ತೆಗೆದುಕೊಳ್ಳುವ ಕ್ರಮ ಕೂಡ ಮುಖ್ಯವಾಗುತ್ತದೆ.

ಆದರೆ ಈ ಬಗ್ಗೆ ಸನ್​ರೈಸರ್ಸ್ ಹೈದರಾಬಾದ್ ಆಟಗಾರರು ಯಾವುದೇ ಅಪೀಲ್ ಮಾಡಿರಲಿಲ್ಲ. ಇದಾಗ್ಯೂ ಇದೀಗ ಅವೇಶ್ ಖಾನ್ ಅವರ ಮಹಾ ಎಡವಟ್ಟಿನ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಇದರ ಬೆನ್ನಲ್ಲೇ ಲಕ್ನೋ ಸೂಪರ್ ಜೈಂಟ್ಸ್ ಆಟಗಾರನ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಅನೇಕರು ಆಗ್ರಹಿಸಿದ್ದಾರೆ.

ಹಳೆಯ ನೆನಪು:

ಈ ಹಿಂದೆ 2023ರಲ್ಲಿ ಆರ್ ಸಿಬಿ ವಿರುದ್ಧ ಗೆದ್ದಾಗ ಅವೇಶ್ ಖಾನ್ ತಮ್ಮ ಹೆಲ್ಮೆಟ್ ಅನ್ನು ನೆಲಕ್ಕೆ ಅಪ್ಪಳಿಸಿ ಸಂಭ್ರಮಿಸಿದ್ದರು. ಆಗ ಅವರಿಗೆ ಪಂದ್ಯದ ಶುಲ್ಕದಲ್ಲಿ ದಂಡ ವಿಧಿಸಲಾಗಿತ್ತು. ಈಗ ಮತ್ತೆ ಇಂತಹದ್ದೇ ಒಂದು ‘ಅನಗತ್ಯ’ ವಿವಾದ ಮೈಮೇಲೆ ಎಳೆದುಕೊಂಡಿದ್ದಾರೆ.

ಇದನ್ನೂ ಓದಿ: PSL 2026: ಡೇವಿಡ್ ವಾರ್ನರ್​ ಬಂಧನ

ಒಟ್ಟಾರೆಯಾಗಿ, ಈ ಘಟನೆಯನ್ನು “ಅನ್ ಫೇರ್ ಪ್ಲೇ” (Unfair Play) ಎಂದು ಪರಿಗಣಿಸಿ ಬಿಸಿಸಿಐ ಕ್ರಮ ಕೈಗೊಳ್ಳುತ್ತದೆಯೇ ಎಂದು ಕಾದು ನೋಡಬೇಕಿದೆ. ಒಂದು ವೇಳೆ ನಿಷೇಧ ಹೇರಲ್ಪಟ್ಟರೆ, ಅವೇಶ್ ಖಾನ್ ಲಕ್ನೋ ಸೂಪರ್ ಜೈಂಟ್ಸ್ ತಂಡದ ಮುಂದಿನ ಪಂದ್ಯದಿಂದ ಹೊರಗುಳಿಯಬೇಕಾಗುತ್ತದೆ.

 

 

Source link

ಅಮೆರಿಕ, ಜಪಾನ್, ಜರ್ಮನಿಗೂ ಸಾಧ್ಯವಾಗದ ಅಡ್ವಾನ್ಸ್ಡ್ ರಿಯಾಕ್ಟರ್ ಸಾಧಿಸಿದ ಭಾರತ; ದೇಶದ ಇಂಧನ ಭವಿಷ್ಯ ಸುರಕ್ಷಿತ?

ನವದೆಹಲಿ, ಏಪ್ರಿಲ್ 7: ಪರಮಾಣು ವಿದ್ಯುತ್ ಶಕ್ತಿ ಉತ್ಪಾದನೆಯಲ್ಲಿ ಭಾರತ ಪ್ರಮುಖ ತಂತ್ರಜ್ಞಾನವೊಂದನ್ನು ಅಭಿವೃದ್ಧಿಪಡಿಸುವ ಹಾದಿಯಲ್ಲಿ ಪ್ರಮುಖ ಮೈಲಿಗಲ್ಲು ಮುಟ್ಟಿದೆ. ಏಪ್ರಿಲ್ 6, ಸೋಮವಾರ ಭಾರತಕ್ಕೆ ಅವಿಸ್ಮರಣೀಯ ದಿನಗಳಲ್ಲಿ ಒಂದೆನಿಸಬಹುದು. ತಮಿಳುನಾಡಿನ ಕಲ್ಪಕ್ಕಮ್​ನಲ್ಲಿ ಪ್ರೋಟೋಟೈಪ್ ಫಾಸ್ಟ್ ಬ್ರೀಡರ್ ರಿಯಾಕ್ಟರ್ (PFBR) ಪ್ರಮುಖವಾದ ಸ್ವಾವಲಂಬನೆ (Criticality stage) ಹಂತ ಸಾಧಿಸಿದೆ. ಇನ್ನೊಂದು ಹಂತ ದಾಟಿಬಿಟ್ಟರೆ ಭಾರತಕ್ಕೆ ಮುಂದಿನ ನೂರಾರು ವರ್ಷ ಕಾಲ ವಿದ್ಯುತ್ ಸಮಸ್ಯೆ ಇಲ್ಲದಂತಾಗಬಹುದು.

ಭಾರತದಲ್ಲಿ ಯುರೇನಿಯಂ ಕೊರತೆ, ಆದರೆ, ಥೋರಿಯಂ ಸಮೃದ್ಧ…

ಸಾಂಪ್ರದಾಯಿಕ ಪರಮಾಣು ವಿದ್ಯುತ್ ಉತ್ಪಾದನೆಗೆ ಯುರೇನಿಯಂ ಅಗತ್ಯ. ಭಾರತದಲ್ಲಿ ಯುರೇನಿಯಂ ಕೊರತೆ ಇದೆ. ವಿಶ್ವದ ಶೇ. 1-2ರಷ್ಟು ಯುರೇನಿಯಂ ಮಾತ್ರವೇ ಭಾರತದಲ್ಲಿ ಇರುವುದು. ಇಷ್ಟರಿಂದ ಪರಮಾಣು ವಿದ್ಯುತ್ ಉತ್ಪಾದನೆ ದೀರ್ಘಕಾಲ ಸಾಧ್ಯವಿಲ್ಲ. ಬೇರೆ ದೇಶಗಳ ಯುರೇನಿಯಂ ಮೇಲೆ ಅವಲಂಬಿತವಾಗಬೇಕಾಗುತ್ತದೆ.

ಆದರೆ, ಭಾರತದಲ್ಲಿ ಥೋರಿಯಂ ಯಥೇಚ್ಛವಾಗಿದೆ. ವಿಶ್ವದ ಶೇ. 25ರಷ್ಟು ಥೋರಿಯಂ ಸಂಗ್ರಹ ಭಾರತದಲ್ಲಿ ಇದೆ. ಭಾರತಕ್ಕೆ 700 ವರ್ಷಗಳಿಗೆ ಆಗುವಷ್ಟು ವಿದ್ಯುತ್ ಅನ್ನು ಉತ್ಪಾದಿಸಲು ಈ ಥೋರಿಯಂ ಸಾಕಾಗುತ್ತದೆ. ಆದರೆ, ಥೋರಿಯಂ ಮಾತ್ರದಿಂದಲೇ ಪರಮಾಣು ವಿದ್ಯುತ್ ಉತ್ಪಾದನೆ ಸಾಧ್ಯವಿಲ್ಲ. ಅದಕ್ಕೆ ಯುರೇನಿಯಂ ಬೇಕೇಬೇಕು. ಇದಕ್ಕೆ ಏನು ಪರಿಹಾರ? ಭಾರತೀಯ ವಿಜ್ಞಾನಿಗಳ ಕ್ಷಮತೆ, ಆವಿಷ್ಕಾರ, ತಂತ್ರಜ್ಞಾನ ಸಾಧನೆ ಕೆಲಸ ಮಾಡಿ ತೋರಿಸಿದೆ. ಅದುವೇ ಈಗ ಸುದ್ದಿಯಲ್ಲಿರುವ ಪ್ರೋಟೋಟೈಪ್ ಫಾಸ್ಟ್ ಬ್ರೀಡರ್ ರಿಯಾಕ್ಟರ್. ಇದು ಒಂದು ರೀತಿಯಲ್ಲಿ ಇಂಧನ ಬಳಸಿ, ಅದರಿಂದ ಹೆಚ್ಚು ಇಂಧನ ಉತ್ಪಾದಿಸುತ್ತದೆ. ಈ ಹಂತವನ್ನೇ ಕ್ರಿಟಿಕಾಲಿಟಿ ಸ್ಟೇಜ್ ಎಂದು ವಿಜ್ಞಾನಿಗಳು ಬಣ್ಣಿಸಿದ್ದಾರೆ.

ಇದನ್ನೂ ಓದಿ: ಐದು ಕಿಲೋ ಎಲ್​ಪಿಜಿ ಸಿಲಿಂಡರ್ ಹಂಚಿಕೆ ಎರಡು ಪಟ್ಟು ಹೆಚ್ಚಳ; ವಲಸೆ ಕಾರ್ಮಿಕರಿಗೆ ನಿರಾಳ

ಅಮೆರಿಕ, ಜಪಾನ್, ಜರ್ಮನಿ ಮೊದಲಾದ ದೇಶಗಳಿಂದ ಸಾಧ್ಯವಾಗದ ಯೋಜನೆ

ಭಾರತ ಸಾಧಿಸಿರುವ ರೀತಿಯ ಫಾಸ್ಟ್ ಬ್ರೀಡರ್ ರಿಯಾಕ್ಟರ್ ಅನ್ನು ನಿರ್ಮಿಸಲು ಹೋಗಿ ಕೈಸುಟ್ಟುಕೊಂಡ ದೇಶಗಳು ಅನೇಕ. ಅಮೆರಿಕ, ಜಪಾನ್, ಫ್ರಾನ್ಸ್, ಜರ್ಮನಿ, ಬ್ರಿಟನ್ ಮೊದಲಾದ ದೇಶಗಳು ತಮ್ಮ ಪ್ರಯತ್ನ ನಿಲ್ಲಿಸಿವೆ. ಆದರೆ, ಭಾರತ ಹಲವು ದಶಕಗಳಿಂದ ಮಾಡಿದ ಪ್ರಯತ್ನದ ಫಲ ಇವತ್ತು ಸಿಕ್ಕಿದೆ. ಭಾರತ ಈ ಪ್ರೋಟೋಟೈಪ್ ರಿಯಾಕ್ಟರ್​ಗಾಗಿ ಮಾಡಿದ 8,370 ಕೋಟಿ ರೂ ವೆಚ್ಚ ನೀರಲ್ಲಿ ಹೋಮ ಮಾಡಿದಂತಾಗಲಿಲ್ಲ.

ಭಾರತದ ಈ ಪರಮಾಣ ವಿದ್ಯುತ್ ತಂತ್ರಜ್ಞಾನ ಹೇಗೆ ಕೆಲಸ ಮಾಡುತ್ತೆ?

ಅಲ್ಪ ಯುರೇನಿಯಂ ಮತ್ತು ಸಮೃದ್ಧ ಥೋರಿಯಂ ಬಳಸಿ ಪರಮಾಣು ವಿದ್ಯುತ್ ತಯಾರಿಸಲು ಭಾರತ ಹಾಕಿರುವ ಯೋಜನೆಯಲ್ಲಿ ಮೂರು ಹಂತಗಳಿವೆ. ಮೊದಲ ಹಂತದಲ್ಲಿ ಸಾಂಪ್ರದಾಯಿಕ ಪಿಎಚ್​ಡಬ್ಲ್ಯುಆರ್ ಅಥವಾ ಪ್ರೆಷರೈಸ್ಡ್ ಹೆವಿ ವಾಟರ್ ರಿಯಾಕ್ಟರ್​ಗಳು ಯುರೇನಿಯಂನಿಂದ ಪ್ಲುಟೋನಿಯಂ ಅನ್ನು ತಯಾರಿಸುತ್ತವೆ. ನ್ಯೂಟ್ರಾನ್​ಗಳು ಇಲ್ಲಿ ಕರಾಮತ್ತು ಮಾಡುತ್ತವೆ. ಈ ಹಂತದಲ್ಲಿ ವಿದ್ಯುತ್ ಉತ್ಪಾದನೆ ಆಗುವುದರ ಜೊತೆಗೆ ಪ್ಲುಟೋನಿಯಂ ಕೂಡ ಸಂಗ್ರಹ ಆಗುತ್ತಾ ಹೋಗುತ್ತದೆ. ಈ ಹಂತದಲ್ಲಿ ಯುರೇನಿಯಂ ಅವಶ್ಯಕತೆ ಇರುತ್ತದೆ.

ಎರಡನೇ ಹಂತದಲ್ಲಿ ಪ್ರೋಟೋಟೈಪ್ ಫಾಸ್ಟ್ ಬ್ರೀಡರ್ ರಿಯಾಕ್ಟರ್ ಬರುತ್ತದೆ. ಇಲ್ಲಿ ಪ್ಲುಟೋನಿಯಂ ಮತ್ತು ಥೋರಿಯಂ ಬಳಸಿ ಯುರೇನಿಯಂ-233 ಅನ್ನು ಉತ್ಪಾದಿಸಲಾಗುತ್ತದೆ. ಇದೇ ಈ ಹಂತದ ವೈಶಿಷ್ಟ್ಯತೆ. ಇಲ್ಲಿ ಇಂಧನ ಬಳಸಿ, ಅದಕ್ಕಿಂತ ಹೆಚ್ಚಿನ ಇಂಧನವನ್ನು ತಯಾರಿಸುತ್ತದೆ. ಬಹಳ ಪ್ರಮುಖವಾದ ಮೂರನೇ ಹಂತಕ್ಕೆ ಇದು ಬುನಾದಿ.

ಇದನ್ನೂ ಓದಿ: ಗೋಲ್ಡ್ ಒಡಿ, ಇದು ಒಡವೆ ಸಾಲಕ್ಕಿಂತ ಎಷ್ಟು ಭಿನ್ನ, ಎಷ್ಟು ಉಪಯುಕ್ತ? ಇಲ್ಲಿದೆ ಮಾಹಿತಿ

ಮೂರನೇ ಹಂತದಲ್ಲಿ ಅಡ್ವಾನ್ಸ್ಡ್ ಹೆವಿ ವಾಟರ್ ರಿಯಾಕ್ಟರ್ಸ್ ಬರುತ್ತವೆ. ಇಲ್ಲಿ ಥೋರಿಯಂ-232 ಮತ್ತು ಯುರೇನಿಯಂ-233 ಮಿಶ್ರಣವನ್ನು ಇಂಧನವನ್ನಾಗಿ ಬಳಸುತ್ತದೆ. ಥೋರಿಯಂ ಮತ್ತು ನ್ಯೂಟ್ರಾನ್​ಗಳು ಸೇರಿ ಹೆಚ್ಚೆಚ್ಚು ಯುರೇನಿಯಂ-233 ಅನ್ನು ತಯಾರಿಸುತ್ತಾ ಹೋಗಲಾಗುತ್ತದೆ. ಹೀಗೆ, ಯುರೇನಿಯಂ ಅನ್​ಲಿಮಿಟೆಡ್ ಆಗಿ ಲಭ್ಯ ಇರುತ್ತದೆ. ಒಂದು ರೀತಿಯ ಇಂಧನ ಅಕ್ಷಯಪಾತ್ರೆ ಅದು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಕರಿಬೇವಿನ ಎಲೆ ಇಲ್ಲದೆಯೇ ಅಡುಗೆ ಆಗಲ್ವಾ? ಆದ್ರೆ ಈ ಸಮಸ್ಯೆ ಇದ್ದಲ್ಲಿ ಇದನ್ನು ಬಳಸದಿರುವುದೇ ಒಳ್ಳೆಯದು

ನಾವು ಮಾಡುವ ಬಹುತೇಕ ಪ್ರತಿಯೊಂದು ಅಡುಗೆಯಲ್ಲೂ ಕರಿಬೇವಿನ ಎಲೆ (Curry Leaves) ಅಥವಾ ಒಗ್ಗರಣೆ ಸೊಪ್ಪು ಹಾಕಿಯೇ ಹಾಕುತ್ತೇವೆ. ಅದಿಲ್ಲದಿದ್ದರೆ ಅಡುಗೆ ಆಗುವುದೇ ಇಲ್ಲ. ಇದನ್ನು ಕೇವಲ ರುಚಿಗಾಗಿ ಮಾತ್ರವಲ್ಲದೆ, ಅದರಲ್ಲಿರುವ ಔಷಧೀಯ ಗುಣಗಳ ಕಾರಣದಿಂದಲೂ ಆಯುರ್ವೇದದಲ್ಲಿ ವ್ಯಾಪಕವಾಗಿ ಬಳಸಲಾಗುತ್ತದೆ. ಇಷ್ಟೆಲ್ಲಾ ಆರೋಗ್ಯಕರ ಗುಣಗಳಿದ್ದರೂ ಕೂಡ ಎಲೆ ಎಲ್ಲರಿಗೂ ಸೂಕ್ತವಲ್ಲ ಎಂಬುದು ನಿಮಗೆ ತಿಳಿದಿದೆಯೇ… ಹೌದು, ಕೆಲವು ಆರೋಗ್ಯ ಸಮಸ್ಯೆಗಳಿರುವವರು ಇದನ್ನು ಸೇವಿಸುವಾಗ ಜಾಗ್ರತೆ ವಹಿಸಬೇಕು ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಹಾಗಾದರೆ ಈ ಕರಿಬೇವಿನ ಎಲೆ ಯಾರಿಗೆ ಒಳ್ಳೆಯದಲ್ಲ, ಯಾಕೆ ಸೇವನೆ ಮಾಡಬಾರದು, ಇದರಿಂದ ಯಾವ ರೀತಿಯ ಸಮಸ್ಯೆಗಳಾಗುತ್ತದೆ ಎಂಬುದನ್ನು ತಿಳಿದುಕೊಳ್ಳಿ. ಈ ಕುರಿತ ಮತ್ತಷ್ಟು ಮಾಹಿತಿ ಸ್ಟೋರಿಯಲ್ಲಿದೆ.

ಕಡಿಮೆ ಶುಗರ್ ಸಮಸ್ಯೆಯಿರುವವರಿಗೆ ಒಳ್ಳೆಯದಲ್ಲ:

ಕರಿಬೇವಿನ ಸೊಪ್ಪು ಸ್ವಾಭಾವಿಕವಾಗಿ ರಕ್ತದಲ್ಲಿನ ಗ್ಲೂಕೋಸ್ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದು ಮಧುಮೇಹಿಗಳಿಗೆ ಲಾಭಕರವಾದರೂ, ಈಗಾಗಲೇ ಶುಗರ್ ಮಟ್ಟ ಕಡಿಮೆ ಇರುವವರು ಹೆಚ್ಚು ಪ್ರಮಾಣದಲ್ಲಿ ಸೇವಿಸಿದರೆ ಹೈಪೋಗ್ಲೈಸೀಮಿಯಾ ಅಪಾಯ ಹೆಚ್ಚುತ್ತದೆ. ಇದರಿಂದ ತಲೆ ಸುತ್ತುವುದು, ದೌರ್ಬಲ್ಯ ಕಾಣಿಸಿಕೊಳ್ಳಬಹುದು.

ಅಲರ್ಜಿ ಇರುವವರು ಕಡಿಮೆ ಪ್ರಮಾಣದಲ್ಲಿ ಸೇವಿಸಬೇಕು:

ಕೆಲವರಿಗೆ ಕೆಲವು ರೀತಿಯ ಸೊಪ್ಪು ಅಥವಾ ಮಸಾಲೆ ಸೇವನೆ ಮಾಡಿದಾಗ ಅಲರ್ಜಿ ಉಂಟಾಗುತ್ತದೆ. ಹಾಗೆಯೇ ಕರಿಬೇವಿನ ಎಲೆ ಕೆಲವರಿಗೆ ಆಗಿಬರುವುದಿಲ್ಲ. ಇದನ್ನು ತಿಂದ ನಂತರ ಚರ್ಮದಲ್ಲಿ ಉರಿ, ಊತ ಅಥವಾ ಉಸಿರಾಟ ಸಂಬಂಧಿ ತೊಂದರೆ ಕಂಡುಬರಬಹುದು. ಹಾಗಾದರೆ ಬಳಸುವುದನ್ನು ನಿಲ್ಲಿಸುವುದು ಒಳ್ಳೆಯದು.

ಇದನ್ನೂ ಓದಿ: ಪ್ರತಿನಿತ್ಯ ಈ ಎಲೆ ತಿನ್ನಿ ಹೃದಯದ ಆರೋಗ್ಯವೂ ಚೆನ್ನಾಗಿರುತ್ತೆ, ನಿಮ್ಮ ತ್ವಚೆಯೂ ಕಾಂತಿಯುತವಾಗುತ್ತೆ

ಗರ್ಭಿಣಿಯರು ಮತ್ತು ಹಾಲುಣಿಸುವ ತಾಯಂದಿರಿಗೆ:

ಗರ್ಭಧಾರಣೆಯ ಸಮಯದಲ್ಲಿ ಹಾರ್ಮೋನ್ ಬದಲಾವಣೆಗಳಿಂದ ದೇಹ ಹೆಚ್ಚು ಸಂವೇದನಾಶೀಲವಾಗಿರುತ್ತದೆ. ಕರಿಬೇವಿನ ಎಲೆಯ ರಸ ಅಥವಾ ಹೆಚ್ಚು ಪ್ರಮಾಣದಲ್ಲಿ ಕರಿಬೇವಿನ ಸೊಪ್ಪಿನ ಪುಡಿಯನ್ನು ಸೇವಿಸುವುದರಿಂದ ಕೆಲವರಿಗೆ ವಾಂತಿ ಅಥವಾ ಜೀರ್ಣಕಾರಿ ಸಮಸ್ಯೆಗಳು ಉಂಟಾಗಬಹುದು. ಆದ್ದರಿಂದ ಮಿತವಾಗಿ ಸೇವಿಸುವುದು ಉತ್ತಮ.

ಜೀರ್ಣಕ್ರಿಯೆ ಸಮಸ್ಯೆಯಿರುವವರು:

ಕರಿಬೇವಿನ ಸೊಪ್ಪು ಸಾಮಾನ್ಯವಾಗಿ ಜೀರ್ಣಕ್ರಿಯೆಗೆ ಸಹಾಯಕವಾದರೂ, ಅಲ್ಸರ್ ಅಥವಾ ಗ್ಯಾಸ್ಟ್ರಿಕ್ ಸಮಸ್ಯೆಗಳಿರುವವರು ಹಸಿ ಎಲೆಯನ್ನು ನೇರವಾಗಿ ಜಗಿದು ತಿನ್ನುವುದರಿಂದ ಹೊಟ್ಟೆಯಲ್ಲಿ ಸಮಸ್ಯೆ ಉಂಟಾಗಬಹುದು.

ಕಿಡ್ನಿ ಸಮಸ್ಯೆಯಿರುವವರು

ಕೆಲವು ಅಧ್ಯಯನಗಳ ಪ್ರಕಾರ, ಕಿಡ್ನಿ ಸೋಂಕು ಅಥವಾ ಡಯಾಲಿಸಿಸ್‌ನಲ್ಲಿರುವವರು ಯಾವುದೇ ಔಷಧೀಯ ಸಸ್ಯಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಸೇವಿಸುವ ಮೊದಲು ವೈದ್ಯರ ಸಲಹೆ ಪಡೆಯುವುದು ಅಗತ್ಯ. ಕರಿಬೇವಿನ ಎಲೆಯಲ್ಲಿರುವ ಕೆಲವು ಅಂಶಗಳು ಚಿಕಿತ್ಸೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಇಬ್ಬರು ಮಕ್ಕಳು ಸೇರಿ ಐವರಿಗೆ ಕಚ್ಚಿದ ಬೀದಿನಾಯಿ; ಬಾಲಕಿಯ ಮುಖಕ್ಕೇ ಐದಾರು ಬಾರಿ ಕಚ್ಚಿದ ಶ್ವಾನ

ಬೀದರ್, ಏ.7: ರಾಜ್ಯದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದೆ. ಹೆಚ್ಚಾಗಿ ಮಕ್ಕಳ ಮೇಲೆ ಈ ದಾಳಿಗಳು ನಡೆಯುತ್ತಿದೆ. ಈ ಬಗ್ಗೆ ಅಧಿಕಾರಿಗಳು ಯಾವುದೇ ಕ್ರಮ ತೆಗೆದುಕೊಳ್ಳುತ್ತಿಲ್ಲ ಎಂಬ ಆರೋಪಗಳು ಕೂಡ ಕೇಳಿ ಬಂದಿದೆ. ಇದೀಗ ಬೀದರ್ ಜಿಲ್ಲೆಯ ಲಾಲವಾಡಿ ಬಡಾವಣೆಯಲ್ಲಿ ಕಳೆದ 48 ಗಂಟೆಗಳಿಂದ ಬೀದಿನಾಯಿಗಳ ಹಾವಳಿ ಮಿತಿಮೀರಿದೆ. ರಸ್ತೆಯಲ್ಲಿ ಸಂಚರಿಸುವವರ ಮೇಲೆ ಮನಸೋಇಚ್ಛೆ ದಾಳಿ ನಡೆಸುತ್ತಿರುವ ನಾಯಿಗಳು, ಇಬ್ಬರು ಮಕ್ಕಳು ಸೇರಿದಂತೆ ಐವರನ್ನು ಗಾಯಗೊಳಿಸಿವೆ. ಈ ಘಟನೆಯಿಂದಾಗಿ ಬಡಾವಣೆಯ ನಿವಾಸಿಗಳು ಮನೆಯಿಂದ ಹೊರಬರಲು ಹೆದರುವಂತಾಗಿದೆ.

ಬೀದಿ ನಾಯಿಗಳ ನಿಯಂತ್ರಣದ ಬಗ್ಗೆ ನಗರಸಭೆ ಅಥವಾ ಮಹಾನಗರ ಪಾಲಿಕೆಯ ಅಧಿಕಾರಿಗಳಿಗೆ ಹಲವು ಬಾರಿ ದೂರು ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ. “ನಾಯಿಗಳ ಸಂತಾನಶಕ್ತಿ ಹರಣ ಚಿಕಿತ್ಸೆ (ABC) ಸರಿಯಾಗಿ ನಡೆಯುತ್ತಿಲ್ಲ, ಬೀದಿನಾಯಿಗಳ ಸಂಖ್ಯೆ ಹೆಚ್ಚಾಗುತ್ತಿದ್ದರೂ ಅಧಿಕಾರಿಗಳು ಕಣ್ಣು ಮುಚ್ಚಿ ಕುಳಿತಿದ್ದಾರೆ” ಎಂದು ನಿವಾಸಿಗಳು ಕಿಡಿಕಾರಿದ್ದಾರೆ.

ಇದನ್ನೂ ಓದಿ: ಬಾಕಿ ವೇತನ ಕೇಳಿದ್ದಕ್ಕೆ ‘ಸಿದ್ಧಗಂಗಾ ಟೂರ್ಸ್’ ಮಾಲೀಕರಿಂದ ಚಾಲಕನಿಗೆ ಹಲ್ಲೆ: ಪೊಲೀಸರಿಂದಲೇ ಸಾಕ್ಷ್ಯ ನಾಶದ ಪ್ರಯತ್ನ?

ನಾಯಿ ಕಚ್ಚಿದ ನಂತರ ಬಡಾವಣೆಯ ಜನರು ಕೈಯಲ್ಲಿ ಕೋಲು ಹಿಡಿದುಕೊಂಡೇ ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಕೂಡಲೇ ಪಾಲಿಕೆ ಅಧಿಕಾರಿಗಳು ಸ್ಥಳಕ್ಕೆ ಬಂದು ನಾಯಿಗಳನ್ನು ಸೆರೆಹಿಡಿಯಬೇಕು ಮತ್ತು ಮಕ್ಕಳ ಮೇಲೆ ದಾಳಿಯಾಗುವುದನ್ನು ತಪ್ಪಿಸಬೇಕು ಎಂದು ಲಾಲವಾಡಿ ಬಡಾವಣೆಯ ಜನರು ಒತ್ತಾಯಿಸಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ನರ್ಸ್​​​​ ಆಗುತ್ತಿದ್ದಂತೆಯೇ ಬದಲಾಯ್ತು ಲೈಫ್ ಸ್ಟೈಲ್: ವಿಚ್ಛೇದನ ಬಯಸಿದ ಪತ್ನಿಗೆ ಮಚ್ಚಿನೇಟು, ಪತಿ ದುರಂತ ಸಾವು

ತುಮಕೂರು, (ಏಪ್ರಿಲ್ 07): ವಿಚ್ಛೇದನ (divorce) ಬಯಸಿದ ಪತ್ನಿಗೆ (Wife) ಪತಿ (Husband) ಮಚ್ಚಿನೇಟು ಕೊಟ್ಟು ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತುಮಕೂರು (Tumakuru) ಜಿಲ್ಲೆ ಕೊರಟಗೆರೆ ತಾಲ್ಲೂಕಿನ ಕೋಟೆಯಲ್ಲಿ ನಡೆದಿದೆ. ದಂಪತಿ ನಡುವೆ ನಿನ್ನೆ (ಏಪ್ರಿಲ್ 06) ಗಲಾಟೆಯಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಪತಿಯ ಮಚ್ಚಿನೇಟಿನಿಂದ ಗಾಯಗೊಂಡಿರುವ ಪತ್ನಿ ನಾಗಮಣಿ ಸಾವು ಬದುಕಿನ ಮಧ್ಯೆ ಆಸ್ಪತ್ರೆಯಲ್ಲಿ ಹೋರಾಟ ನಡೆಸುತ್ತಿದ್ದರೆ, ಮತ್ತೊಂದೆಡೆ ಪತಿ ಮಾರುತಿ, ಇಂದು (ಏಪ್ರಿಲ್ 07) ಬೆಳಗ್ಗೆ ಕೊರಟಗೆರೆ ತಾಲ್ಲೂಕಿನ ದೊಡ್ಡನಹಳ್ಳಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೈಸೂರಿನ ಸರ್ಕಾರಿ ಆಸ್ಪತ್ರೆಯ ನರ್ಸ್ ಆಗಿರುವ ನಾಗಮಣಿ ಹಾಗೂ ಮಾರುತಿ ಕಳೆದ 15 ವರ್ಷದ ಹಿಂದೆ ಪ್ರೀತಿಸಿ ಮದುವೆಯಾಗಿದ್ದು, ಈ ದಂಪತಿಗೆ ಎರಡು ಮಕ್ಕಳು ಸಹ ಇವೆ. ಮಾರುತಿ ವೃತ್ತಿಯಲ್ಲಿ ಗಾರೆ ಕೆಲಸ ಮಾಡಿಕೊಂಡಿದ್ದರೆ, ನಾಗಮಣಿಗೆ ಮದುವೆ ನಂತರ ಸರ್ಕಾರಿ ನರ್ಸ್ ಕೆಲಸ ಸಿಕ್ಕಿತ್ತು. ಆದ್ರೆ, ಯಾವಾಗ ನಾಗಮಣಿಗೆ ಸರ್ಕಾರಿ ನರ್ಸ್ ಕೆಲಸ ಒಲಿದುಬಂತೋ ಅಂದಿನಿಂದ ಆಕೆಯ ಜೀವನ ಶೈಲಿಯೇ ಬದಲಾಗಿದ್ದು, ಗಾರೆ ಕೆಲಸ ಮಾಡಿಕೊಂಡಿದ್ದ ಪತಿ ಮಾರುತಿಯಿಂದ ನಾಗಮಣಿ ವಿವಾಹ ವಿಚ್ಛೇದನ ಪಡೆದುಕೊಳ್ಳಲು ಚಿಂತನೆ ನಡೆಸಿದ್ದಳು.

ಇದನ್ನೂ ಓದಿ: ಮದುವೆ ನಿಶ್ಚಯವಾಗಿದ್ದ ಯುವಕನ ಬರ್ಬರವಾಗಿ ಕೊಂದ ಸಹೋದರ; ಅತ್ತಿಗೆ ಜೊತೆಗೆ ಅಕ್ರಮ ಸಂಬಂಧ ಆರೋಪಕ್ಕೆ ಹರಿದಿದ್ದು ನೆತ್ತರು

ಇನ್ನೊಂದೆಡೆ ನಾಗಮಣಿಗೆ ಮತ್ತೊಬ್ಬನ ಜೊತೆ ಸಂಬಂಧ ಇರುವ ಬಗ್ಗೆ ಮಾರುತಿಗೆ ಅನುಮಾನ ಬಂದಿದ್ದು, ಇದೇ ವಿಚಾರವಾಗಿ ಗಲಾಟೆ ಮಾಡಿದ್ದ. ಅಲ್ಲದೇ ಈ ಗಂಡ ಹೆಂಡತಿ ಜಗಳ ಮೈಸೂರಿನ ಸ್ಥಳೀಯ ಠಾಣೆ ಮೆಟ್ಟಿಲೇರಿತ್ತು. ಇದಾದ ಬಳಿಕ ಮೊನ್ನೆ ಗಂಡನ ಜೊತೆ ಕೋಟೆಯಲ್ಲಿ ವಾಸವಾಗಿದ್ದ ಮಕ್ಕಳ ನೋಡಲು ನಾಗಮಣಿ ಬಂದಿದ್ದಳು. ಈ ವೇಳೆ ದಂಪತಿ ನಡುವೆ ಮತ್ತೆ ಗಲಾಟೆಯಾಗಿದ್ದು, ಈ ಸಂದರ್ಭದಲ್ಲಿ ಮಾರುತಿ, ಮಚ್ಚಿನಿಂದ ನಾಗಮಣಿ ಮೇಲೆ ಹಲ್ಲೆ ಮಾಡಿ ಪರಾರಿಯಾಗಿದ್ದಾನೆ. ಬಳಿಕ ಸ್ಥಳೀಯರು ಗಾಯಾಳು ನಾಗಮಣಿಯನ್ನು ಆಸ್ಪತ್ರೆಗೆ ದಾಖಲಿಸಿದ್ದು,  ಸದ್ಯ ನಾಗಮಣಿ ಸಾವು ಬದುಕಿನ ನಡುವೆ ಹೋರಾಟ ನಡೆಸಿದ್ದಾಳೆ.

ಇನ್ನೊಂದೆಡೆ ಪತಿ ಮಾರುತಿ ಇಂದು (ಏಪ್ರಿಲ್ 07) ಕೊರಟಗೆರೆ ತಾಲ್ಲೂಕಿನ ದೊಡ್ಡನಹಳ್ಳಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಘಟನೆ ಸಂಬಂಧ ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

IPL 2026: ಮೂರು ಪಂದ್ಯಗಳಿಗೆ ಆಸ್ಟ್ರೆಲಿಯನ್ ವೇಗಿ ಅಲಭ್ಯ

Source link

ಅಪ್ಪ-ಮಗಳಿಗೆ ಯಮನಾಗಿ ಬಂದ ಸಿಮೆಂಟ್ ಮಿಕ್ಸರ್ ಟ್ಯಾಂಕರ್: ಕಲಬುರಗಿ ರಿಂಗ್ ರಸ್ತೆಯಲ್ಲಿ ಭೀಕರ ಅಪಘಾತ

ಕಲಬುರಗಿ, ಏ.7: ಕಲಬುರಗಿ ನಗರದ ರಿಂಗ್ ರಸ್ತೆಯ ಸೈಯದ್ ಚಿಂಚೋಳಿ ಕ್ರಾಸ್ (Sayyid Chincholi Cross) ಬಳಿ ಇಂದು ಮಧ್ಯಾಹ್ನ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಬೈಕ್‌ನಲ್ಲಿ ಮನೆಗೆ ತೆರಳುತ್ತಿದ್ದ ತಂದೆ ಮತ್ತು ಮಗಳಿಗೆ ವೇಗವಾಗಿ ಬಂದ ಸಿಮೆಂಟ್ ಮಿಕ್ಸರ್ ಟ್ಯಾಂಕರ್ (Cement Mixer Tanker) ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಇಬ್ಬರೂ ಟ್ಯಾಂಕರ್‌ನ ಚಕ್ರಗಳ ಅಡಿ ಸಿಲುಕಿ ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ.

ಅಪಘಾತದಲ್ಲಿ ಮೃತಪಟ್ಟವರನ್ನು ಕಲಬುರಗಿಯ ರಾಣೇಶಪೀರ್ ದರ್ಗಾ ಪ್ರದೇಶದ ನಿವಾಸಿಗಳಾದ ರಾಜುಕುಮಾರ್ (45) ಮತ್ತು ಅವರ 14 ವರ್ಷದ ಮಗಳು ಸುಮಾ ಎಂದು ಗುರುತಿಸಲಾಗಿದೆ. ರಾಜುಕುಮಾರ್ ಅವರು ಮಗಳನ್ನು ಬೈಕ್‌ನಲ್ಲಿ ಕರೆದುಕೊಂಡು ಮನೆಗೆ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಒಂದೇ ಕುಟುಂಬದ ಇಬ್ಬರು ಸದಸ್ಯರು ಏಕಾಏಕಿ ಸಾವನ್ನಪ್ಪಿರುವುದು ದರ್ಗಾ ಪ್ರದೇಶದಲ್ಲಿ ಶೋಕದ ಛಾಯೆ ಮೂಡಿಸಿದೆ.

ಇದನ್ನೂ ಓದಿ: ಆಸ್ಪತ್ರೆಯಲ್ಲಿ ತ್ರಿಕೋನ ಪ್ರೇಮಕ್ಕೆ ನರ್ಸ್ ಬಲಿ: ಹೈಕೋರ್ಟ್ ತೀರ್ಪಿನಿಂದ ಅನಸ್ತೇಶಿಯಾ ವೈದ್ಯೆಗೆ ಬಿಗ್ ರಿಲೀಫ್!

ಅಪಘಾತದ ಮಾಹಿತಿ ದೊರೆತ ತಕ್ಷಣ ಕಲಬುರಗಿ ಸಂಚಾರಿ ಪೊಲೀಸ್ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಅಪಘಾತಕ್ಕೆ ಕಾರಣವಾದ ಸಿಮೆಂಟ್ ಮಿಕ್ಸರ್ ಚಾಲಕನನ್ನು ವಶಕ್ಕೆ ಪಡೆದು ತನಿಖೆ ಮುಂದುವರಿಸಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Optical Illusion: ಜಸ್ಟ್ 35 ಸೆಕೆಂಡುಗಳಲ್ಲಿ ಈ ಎರಡು ಚಿತ್ರಗಳಲ್ಲಿನ ಮೂರು ವ್ಯತ್ಯಾಸಗಳನ್ನು ಗುರುತಿಸಬಲ್ಲಿರಾ

ಆಪ್ಟಿಕಲ್‌ ಇಲ್ಯೂಷನ್‌ನಂತಹ (Optical Illusion) ಒಗಟಿನ ಆಟಗಳು ದೃಷ್ಟಿ ಮತ್ತು ಮೆದುಳಿಗೆ ಕೆಲಸ ನೀಡುತ್ತವೆ. ನಿಮ್ಮ ಕಣ್ಣಿನ ತೀಕ್ಷ್ಣತೆಗೆ ಸವಾಲೊಡ್ಡುವ ಆಟಗಳನ್ನು ನೀವು ಹಿಂದೆ ಆಡಿರಬಹುದು. ನೀವು ಒಗಟು ಬಿಡಿಸಿರುವುದರಲ್ಲಿ ಸೋತಿರಬಹುದು. ಇದೀಗ ನಿಮಗೆ ಸವಾಲೊಡ್ದುವ ಒಗಟಿನ ಚಿತ್ರವೊಂದು ವೈರಲ್ ಆಗಿದೆ. ಈ ಎರಡು ಚಿತ್ರಗಳಲ್ಲಿರುವ ಮೂರು ವ್ಯತ್ಯಾಸಗಳನ್ನು ಗುರುತಿಸುವ ಸವಾಲು ಇಲ್ಲಿದೆ. ಈ ವ್ಯತ್ಯಾಸಗಳನ್ನು ಗುರುತಿಸಿ ಜಾಣರು ಎನಿಸಿಕೊಳ್ಳಲು ಇದೊಂದು ಒಳ್ಳೆಯ ಸಮಯ. 35 ಸೆಕೆಂಡುಗಳೊಳಗೆ ಈ ಒಗಟು ಬಿಡಿಸಲು ಸಾಧ್ಯವೇ ಎಂದು ಒಮ್ಮೆ ನೋಡಿ.

ಈ ಚಿತ್ರದಲ್ಲಿ ನಿಮ್ಮ ಕಣ್ಣಿಗೆ ಕಾಣಿಸಿದ್ದೇನು?

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರಗಳು ತಲೆ ಕೆರೆದುಕೊಳ್ಳುವಂತೆ ಮಾಡುತ್ತವೆ. ಈ ಚಿತ್ರ ನೋಡಿದ ಮೇಲೂ ನಿಮ್ಮ ತಲೆಗೆ ಹುಳ ಬಿಟ್ಟಂತೆ ಆಗಿದ್ದೀರಬಹುದು. ಈ ಚಿತ್ರದಲ್ಲಿ ಮೇಜಿನ ಮೇಲಿನ ತಟ್ಟೆಯಲ್ಲಿ ಹಣ್ಣುಗಳಿವೆ. ಸೇಬು ಹಣ್ಣು, ಮಗ್, ಟೀ ಕಪ್ ಹಾಗೂ ಬೌಲ್ ಇದೆ. ಈ ಎರಡು ಚಿತ್ರಗಳು ನೋಡಲು ಒಂದೇ ರೀತಿ ಇದೆ. ಆದರೆ, ಈ ಎರಡು ಫೋಟೋಗಳ ನಡುವೆ ಮೂರು ಸಣ್ಣ ವ್ಯತ್ಯಾಸಗಳಿವೆ. ನೀವು ಎಚ್ಚರಿಕೆಯಿಂದ ನೋಡಿದರೆ ಮಾತ್ರ, ಆ ವ್ಯತ್ಯಾಸಗಳನ್ನು ಗುರುತಿಸಲು ಸಾಧ್ಯ. ನೀವು 35 ಸೆಕೆಂಡುಗಳೊಳಗೆ ಆ ವ್ಯತ್ಯಾಸಗಳನ್ನು ಕಂಡುಹಿಡಿಯಲು ಸಾಧ್ಯವಾದರೇ ನೀವು ಬುದ್ಧಿವಂತರು ಎನ್ನುವುದು ಖಚಿತವಾಗುತ್ತದೆ.

ಇದನ್ನೂ ಓದಿ: ಈ ಚಿತ್ರದಲ್ಲಿ ಅಡಗಿ ಕುಳಿತಿರುವ ಕಳ್ಳ ಬೆಕ್ಕನ್ನು ಕಂಡು ಹಿಡಿಯಬಲ್ಲಿರಾ

ಮೂರು ವ್ಯತ್ಯಾಸಗಳನ್ನು ಗುರುತಿಸಲು ಸಾಧ್ಯವಾಯಿತೇ?

ಈ ಚಿತ್ರದತ್ತ ಕಣ್ಣುಹಾಯಿಸಿದರೂ ಈ ಟೇಬಲ್ ಮೇಲೆ ಇಟ್ಟಿರುವ ಹಣ್ಣುಗಳ ನಡುವಿನ ಮೂರು ವ್ಯತ್ಯಾಸಗಳನ್ನು ಗುರುತಿಸಲು ಸಾಧ್ಯವಾಗಲಿಲ್ಲವೇ. ನೂರರಲ್ಲಿ ಹತ್ತು ಜನರಿಗೆ ಮಾತ್ರ ಇಂತಹ ಈ ಟ್ರಿಕ್ಕಿ ಒಗಟು ಬಿಡಿಸಲು ಸಾಧ್ಯ. ಈ ಕೆಳಗಿನ ಚಿತ್ರಗಳಲ್ಲಿ ಆ ಮೂರು ವ್ಯತ್ಯಾಸಗಳನ್ನು ಕೆಂಪು ಬಣ್ಣದಲ್ಲಿ ಗುರುತಿಸಿದ್ದೇವೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Source link

ಚುನಾವಣೆ ಗೆದ್ದರೆ ಮಾಂಸ ಮಾರಾಟ ಬ್ಯಾನ್ ಮಾಡ್ತಾರಾ ಖುಷ್ಬೂ ಪತಿ ಸುಂದರ್? ಸಿಕ್ತು ಸ್ಪಷ್ಟನೆ

ತಮಿಳುನಾಡು ವಿಧಾನಸಭಾ ಚುನಾವಣೆ (Tamil Nadu Elections) ಹತ್ತಿರ ಬರುತ್ತಿದ್ದಂತೆ ರಾಜಕೀಯ ಅಖಾಡದಲ್ಲಿ ಆರೋಪ-ಪ್ರತ್ಯಾರೋಪಗಳು ತೀವ್ರಗೊಂಡಿವೆ. ಖ್ಯಾತ ನಟ ಮತ್ತು ನಿರ್ದೇಶಕ ಸುಂದರ್ ಸಿ. (Sundar C) ಅವರು ಈ ಬಾರಿ ಮಧುರೈ ಸೆಂಟ್ರಲ್ ಕ್ಷೇತ್ರದಿಂದ ಚುನಾವಣಾ ಕಣಕ್ಕಿಳಿದಿದ್ದು, ಅವರ ಹೆಸರಿನಲ್ಲಿ ಹಬ್ಬಿರುವ ಒಂದು ಸುಳ್ಳು ಸುದ್ದಿ ಈಗ ಭಾರಿ ಚರ್ಚೆಗೆ ಕಾರಣವಾಗಿದೆ. ಅದಕ್ಕೆ ಸುಂದರ್ ಪತ್ನಿ, ನಟಿ ಖುಷ್ಬೂ (Khushboo) ಅವರು ತಿರುಗೇಟು ನೀಡಿದ್ದಾರೆ.

ಸುಂದರ್ ಸಿ. ಅವರು ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೆ ಬಂದರೆ, ಮಧುರೈ ಮೀನಾಕ್ಷಿ ಅಮ್ಮನವರ ದೇವಾಲಯದ ಪವಿತ್ರತೆಯನ್ನು ಕಾಪಾಡುವ ದೃಷ್ಟಿಯಿಂದ ಮಧುರೈ ಸೆಂಟ್ರಲ್ ಕ್ಷೇತ್ರದಲ್ಲಿರುವ ಎಲ್ಲಾ ಮಾಂಸದ ಅಂಗಡಿಗಳನ್ನು ನಿಷೇಧಿಸುವುದಾಗಿ ಹೇಳಿದ್ದಾರೆ ಎಂಬ ಪೋಸ್ಟ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು. ಇದು ಜನರ ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಪ್ರಯತ್ನ ಎಂಬ ಟೀಕೆಗಳು ವ್ಯಕ್ತವಾಗಿದ್ದವು.

ತಮ್ಮ ಹೆಸರಿನಲ್ಲಿ ಹರಿದಾಡುತ್ತಿರುವ ಈ ಸುದ್ದಿಯನ್ನು ಸುಂದರ್ ಅವರು ತೀವ್ರವಾಗಿ ಖಂಡಿಸಿದ್ದಾರೆ. ಈ ಬಗ್ಗೆ ತಮಿಳಿನಲ್ಲಿ ಸುದೀರ್ಘ ಪೋಸ್ಟ್ ಹಾಕಿರುವ ಅವರು, ‘ನಾನು ಗೆದ್ದರೆ ಮಾಂಸದ ಅಂಗಡಿಗಳನ್ನು ಮುಚ್ಚಿಸುತ್ತೇನೆ ಎಂಬ ಸುದ್ದಿ ಸಂಪೂರ್ಣವಾಗಿ ಸುಳ್ಳು. ನಾನು ಜನರ ಹಕ್ಕುಗಳನ್ನು ಮತ್ತು ಭಾವನೆಗಳನ್ನು ಗೌರವಿಸುವ ವ್ಯಕ್ತಿ. ನನ್ನನ್ನು ನೇರವಾಗಿ ಎದುರಿಸಲು ಧೈರ್ಯವಿಲ್ಲದವರು ಇಂತಹ ಕೆಳಮಟ್ಟದ ಹಾದಿ ಹಿಡಿದಿದ್ದಾರೆ. ನಮ್ಮ ಏಕತೆ ಮತ್ತು ಗೆಲುವಿನ ಮೂಲಕ ಇಂತಹ ಸುಳ್ಳುಗಾರರಿಗೆ ತಕ್ಕ ಉತ್ತರ ನೀಡುತ್ತೇವೆ’ ಎಂದು ಖಡಕ್ ಆಗಿ ಪ್ರತಿಕ್ರಿಯಿಸಿದ್ದಾರೆ.

ಸುಂದರ್ ಅವರ ಪತ್ನಿ ಮತ್ತು ಬಿಜೆಪಿ ನಾಯಕಿ ಖುಷ್ಬೂ ಅವರು ಪತಿಯ ಬೆಂಬಲಕ್ಕೆ ನಿಂತಿದ್ದಾರೆ. ಈ ಸುಳ್ಳು ಸುದ್ದಿಯ ಹಿಂದೆ ಆಡಳಿತಾರೂಢ ಡಿಎಂಕೆ ಪಕ್ಷದ ಕೈವಾಡವಿದೆ ಎಂದು ಅವರು ಆರೋಪಿಸಿದ್ದಾರೆ. ‘ಪ್ರಾಮಾಣಿಕ ವ್ಯಕ್ತಿಯನ್ನು ಎದುರಿಸಲು ಸಾಧ್ಯವಾಗದಿದ್ದಾಗ ಇಂತಹ ಸುಳ್ಳು ಕಥೆಗಳನ್ನು ಸೃಷ್ಟಿಸಲಾಗುತ್ತದೆ. ಡಿಎಂಕೆ ಸೋಲಿನ ಭೀತಿಯಲ್ಲಿದೆ ಎಂಬುದು ಇದರಿಂದ ಸ್ಪಷ್ಟವಾಗುತ್ತದೆ. ಮಧುರೈ ಜನರು ಬುದ್ಧಿವಂತರಾಗಿದ್ದು, ಅವರು ಸುಂದರ್ ಜೊತೆಗಿದ್ದಾರೆ’ ಎಂದು ಖುಷ್ಬೂ ಹೇಳಿದ್ದಾರೆ.

ಇದನ್ನೂ ಓದಿ: 54ನೇ ವಯಸ್ಸಿನಲ್ಲಿ 20 ಕೆಜಿ ತೂಕ ಇಳಿಸಿಕೊಂಡ ಖುಷ್ಬೂ; ಸಾಧ್ಯವಾಗಿದ್ದು ಹೇಗೆ?

ಸುಂದರ್ ಸಿ. ಅವರು ಪಿಎನ್​ಕೆ ಅಭ್ಯರ್ಥಿಯಾಗಿ ಎಐಎಡಿಎಂಕೆ ಮೈತ್ರಿಯೊಂದಿಗೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ. ಕಳೆದ ಕೆಲವು ದಿನಗಳಿಂದ ಅವರು ಕ್ಷೇತ್ರದಲ್ಲಿ ಬಿರುಸಿನ ಪ್ರಚಾರ ನಡೆಸುತ್ತಿದ್ದು, ಈಗ ಈ ವಿವಾದ ಸೃಷ್ಟಿಯಾಗಿರುವುದು ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ. ತಮಿಳು ನಟ ದಳಪತಿ ವಿಜಯ್ ಕೂಡ ತಮ್ಮದೇ ಪಕ್ಷದ ಮೂಲಕ ಚುನಾವಣೆಯ ಕಣಕ್ಕೆ ಇಳಿದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಈ ವರ್ಷ ಬರಲಿದೆ ಇಪಿಎಫ್​ಒ 3.0; ಹಣ ಹಿಂಪಡೆಯುವ ಪ್ರಕ್ರಿಯೆ ಮತ್ತಷ್ಟು ಸುಗಮ

ನವದೆಹಲಿ, ಏಪ್ರಿಲ್ 7: ಭಾರತದಲ್ಲಿ ಹೆಚ್ಚಿನ ಉದ್ಯೋಗಿಗಳಿಗೆ ರಿಟೈರ್ಮೆಂಟ್ ಸ್ಕೀಮ್ ಆಗಿ ಇಪಿಎಫ್ (EPF) ಇದೆ. ಕಳೆದ ಒಂದು ದಶಕದಲ್ಲಿ ಇಪಿಎಫ್ ಸಿಸ್ಟಂನಲ್ಲಿ ಗಮನಾರ್ಹ ಮಾರ್ಪಾಡುಗಳಾಗಿವೆ. ಆನ್​ಲೈನ್​ನಲ್ಲೇ ಹೆಚ್ಚಿನ ಕಾರ್ಯಗಳು ನಡೆಯುತ್ತಿವೆ. ಇಡೀ ಸಿಸ್ಟಂ ಅನ್ನು ತಕ್ಕಮಟ್ಟಿಗೆ ಸ್ಟ್ರೀಮ್​ಲೈನ್ ಮಾಡಲಾಗಿದೆ. ಮೂಲ ಇಪಿಎಫ್​ಒನಲ್ಲಿದ್ದ ಸಿಸ್ಟಂಗೂ ಇಪಿಎಫ್​ಒ 2.0ಗೂ ಅಜಗಜಾಂತರ ವ್ಯತ್ಯಾಸ ಗುರುತಿಸಬಹುದು. ಹಣ ವಿತ್​ಡ್ರಾ ಮಾಡುವುದು, ಯುಎಎನ್ ಅಡಿಯಲ್ಲಿ ಅಕೌಂಟ್​ಗಳನ್ನು ಸೇರಿಸುವುದು, ವಿಲೀನಗೊಳಿಸುವುದು ಇವೆಲ್ಲಾ ಪ್ರಕ್ರಿಯೆಗಳು ಸರಳಗೊಂಡಿವೆ. ಇದೇ ಹೊತ್ತಲ್ಲಿ ಸರ್ಕಾರ ಇಪಿಎಫ್​ಒ 3.0 ಅನ್ನು ಜಾರಿಗೆ ತರಲು ಹೊರಟಿದೆ.

ಇದು ಪ್ರಾವಿಡೆಂಟ್ ಫಂಡ್ ಸಿಸ್ಟಂಗಳನ್ನು ಮತ್ತಷ್ಟು ಸರಳಗೊಳಿಸುವ ಉದ್ದೇಶ ಹೊಂದಿದೆ. ಇಪಿಎಫ್​ಒ 3.0ದ ಅನೇಕ ಫೀಚರ್​ಗಳನ್ನು ಹಂತ ಹಂತವಾಗಿ ಜಾರಿಗೊಳಿಸುತ್ತಾ ಬರಲಾಗುತ್ತಿದೆ. ಈಗಾಗಲೇ ಕೆಲವು ಅಳವಡಿಕೆ ಆಗಿವೆ. ಮುಂಬರುವ ತಿಂಗಳುಗಳಲ್ಲಿ ಇಪಿಎಫ್​ಒ 3.0 ಅನ್ನು ಪೂರ್ಣವಾಗಿ ಜಾರಿಗೆ ತರಲಾಗುತ್ತದೆ.

ಇದನ್ನೂ ಓದಿ: ಪಶ್ಚಿಮ ಏಷ್ಯಾ ಬಿಕ್ಕಟ್ಟಿಗೆ ಸಿಲುಕಿರುವ ಸಣ್ಣ ಉದ್ದಿಮೆಗಳಿಗೆ ಸರ್ಕಾರದಿಂದ 2.5 ಲಕ್ಷ ಕೋಟಿ ರೂ ಸಾಲ ಖಾತ್ರಿ ಯೋಜನೆ ನೆರವು

ಇಪಿಎಫ್ ಹಣ ಬೇಗ ಕ್ಲೇಮ್ ಮಾಡಲು ಸಾಧ್ಯ

ಇಪಿಎಫ್​ಒ 2.0 ಮುಂಚಿನ ವ್ಯವಸ್ಥೆಯಲ್ಲಿ ಪಿಎಫ್ ಹಣ ಹಿಂಪಡೆಯಲು ಅನೇಕ ಕಟ್ಟುಪಾಡುಗಳಿದ್ದವು. ಪಿಎಫ್ ಕಚೇರಿಗೆ ಸಾಕಷ್ಟು ಬಾರಿ ಅಲೆದಾಡಬೇಕಿತ್ತು. ಆದರೆ, ವಿವಿಧ ಸುಧಾರಣಾ ಕ್ರಮಗಳನ್ನು ತಂದು, ಪಿಎಫ್ ಹಣ ವಿತ್​ಡ್ರಾ ಮಾಡುವ ಪ್ರಕ್ರಿಯೆಗಳನ್ನು ಸರಳಗೊಳಿಸಲಾಯಿತು. ಆನ್​ಲೈನ್​ನಲ್ಲಿ ಕ್ಲೇಮ್​ಗೆ ಅರ್ಜಿ ಸಲ್ಲಿಸುವ ಅವಕಾಶ ನೀಡಲಾಯಿತು. ಕೆಲ ವಾರಗಳಲ್ಲಿ ಹಣ ಬ್ಯಾಂಕ್ ಅಕೌಂಟ್​ಗೆ ಜಮೆ ಆಗುತ್ತದೆ.

ಈಗ ಇಪಿಎಫ್​ಒ 3.0 ವ್ಯವಸ್ಥೆಯಲ್ಲಿ ಪಿಎಫ್ ಹಣಕ್ಕೆ ಕ್ಲೇಮ್ ಮಾಡುವ ಮಿತಿಯನ್ನು 5 ಲಕ್ಷ ರೂಗೆ ಏರಿಸಲಾಗಿದೆ. ಇಷ್ಟು ಮೊತ್ತದ ಹಣಕ್ಕೆ ಸಲ್ಲಿಸುವ ಮನವಿಯನ್ನು ಆಟೊಮ್ಯಾಟಿಕ್ ಆಗಿ ಪ್ರೋಸಸ್ ಮಾಡಲಾಗುತ್ತದೆ. ಮ್ಯಾನುಯಲ್ ಆಗಿ ಅಧಿಕಾರಿಗಳು ಅನುಮೋದನೆ ಮಾಡುವ ಅಗತ್ಯ ಇರುವುದಿಲ್ಲ.

ಪಿಎಫ್ ಅಕೌಂಟ್​ಗಳನ್ನು ಒಂದು ಕಂಪನಿಯಿಂದ ಇನ್ನೊಂದು ಕಂಪನಿಗೆ ರವಾನೆ ಮಾಡಲು ಕಂಪನಿಯ ವೆರಿಫಿಕೇಶನ್ ಬೇಕಿತ್ತು. ಆದರೆ, ಹೊಸ ಸಿಸ್ಟಂನಲ್ಲಿ ಅದು ಆಟೊಮ್ಯಾಟಿಕ್ ಆಗಿ ಆಗುತ್ತದೆ.

ಇದನ್ನೂ ಓದಿ: ಅಮೆರಿಕ, ಜಪಾನ್, ಜರ್ಮನಿಗೂ ಸಾಧ್ಯವಾಗದ ಅಡ್ವಾನ್ಸ್ಡ್ ರಿಯಾಕ್ಟರ್ ಸಾಧಿಸಿದ ಭಾರತ; ದೇಶದ ಇಂಧನ ಭವಿಷ್ಯ ಸುರಕ್ಷಿತ?

ಯುಪಿಐ ಮೂಲಕ ಹಣ ವಿತ್​ಡ್ರಾ ಮಾಡಬಹುದು

ಇಪಿಎಫ್​ಒ 3.0ನಲ್ಲಿ ಎಲ್ಲರೂ ಎದುರು ನೋಡುತ್ತಿರುವ ಹೊಸ ಫೀಚರ್ ಎಂದರೆ ಅದು ಯುಪಿಐ ವಿತ್​ಡ್ರಾಯಲ್. ಇಪಿಎಫ್ ಖಾತೆದಾರರು ತಮ್ಮ ಪಿಎಫ್ ಅಕೌಂಟ್​ನಲ್ಲಿರುವ ನಿರ್ದಿಷ್ಟ ಹಣವನ್ನು ಯುಪಿಐ ಮೂಲಕ ವಿತ್​ಡ್ರಾ ಮಾಡುವ ಅವಕಾಶ ಸಿಗುತ್ತದೆ. ಇಪಿಎಫ್ ಅಕೌಂಟ್​ನಲ್ಲಿರುವ ಹಣವನ್ನು ಸದಸ್ಯರು ತಮ್ಮ ಬ್ಯಾಂಕ್ ಅಕೌಂಟ್​ಗೆ ಟ್ರಾನ್ಸ್​ಫರ್ ಮಾಡಬಹುದು. ಈ ಫೀಚರ್ ಅನ್ನು ಸದ್ಯ ಅಭಿವೃದ್ಧಿಪಡಿಸಲಾಗುತ್ತಿದ್ದು, ಈ ವರ್ಷದಲ್ಲೇ ಅದು ಜಾರಿಯಾಗುವ ನಿರೀಕ್ಷೆ ಇದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

Exit mobile version