Headlines

ದಿನ ಭವಿಷ್ಯ: ಇಂದು ಈ ರಾಶಿಯವರು ತಮ್ಮ ಗುಟ್ಟನ್ನು ಬಿಟ್ಟುಕೊಡುವರು – Kannada News | Horoscope 28 Satursday 2026; Dina Rashi Bhavishya Today, Checkout the details here

ಮೇಷ ರಾಶಿ: ನಿಮಗೆ ಹತ್ತಿರವಿರುವ ಯಾರೊಬ್ಬರಿಂದ ಅಚ್ಚರಿಯ ಉಡುಗೊರೆ ಸಿಗಲಿದೆ. ಮನೆಯಲ್ಲಿ ಸಂತೋಷ ಹೆಚ್ಚಾಗಬಹುದು. ಪ್ರಯಾಣದಲ್ಲಿ ಆರೋಗ್ಯ ಸಮಸ್ಯೆ ಕಾಣಿಸಿಕೊಳ್ಳುವುದು. ನಿಮ್ಮನ್ನು ಅಳೆಯುವ ಜನರ ಸಂಖ್ಯೆ ಅಧಿಕವಾದೀತು. ಆರ್ಥಿಕತೆಯ ದೃಷ್ಟಿಯಿಂದ ಕಳೆದ ಕೆಲವು ದಿನಗಳಿಗಿಂತ ಇಂದು ಉತ್ತಮವಾಗಿದೆ.‌ ಕಾರ್ಯಕ್ಷೇತ್ರದಿಂದ ಹೆಚ್ಚುವರಿ ಆದಾಯ ಬರುವುದು. ನಿಮ್ಮ ಬದ್ಧತೆಯನ್ನು ಉಳಿಸಿಕೊಳ್ಳಿ. ಸ್ಥಗಿತಗೊಂಡ ಕೆಲಸವನ್ನು ಪೂರ್ಣಗೊಳಿಸುವುದರಿಂದ ಸಂಪತ್ತಿನ ಮೂಲವು ಹೆಚ್ಚಾಗುತ್ತವೆ. ವೃಷಭ ರಾಶಿ: ಬಿಮ್ಮ ಕುಟುಂಬದಿಂದ ನಿಮಗೆ ಬೆಂಬಲ ಸಿಗುತ್ತದೆ. ಸಂಪತ್ತಿನಲ್ಲಿ ಹೆಚ್ಚಳವಾಗಬಹುದು. ಉದ್ಯೋಗದಲ್ಲಿನ ಒತ್ತಡಗಳು ಮನೆಯವರ ಮೇಲೆ ಸಿಟ್ಟಾಗುವಂತೆ ಮಾಡಬಹುದು….

Read More

LPG ಸಿಲಿಂಡರ್​​ಗಳ ಕೊರತೆ: ಪ್ರಧಾನಿ ನರೇಂದ್ರ ಮೋದಿಗೆ ಬೆಂಗಳೂರು ಹೋಟೆಲ್​​ ಅಸೋಸಿಯೇಷನ್​​ ಪತ್ರ

ಬೆಂಗಳೂರು, ಮಾರ್ಚ್​​ 19: ರಾಜ್ಯದಲ್ಲಿ ಕಮರ್ಷಿಯಲ್​​ ಸಿಲಿಂಡರ್​​ಗಳ ಅಭಾವದಿಂದಾಗಿ ಹೋಟೆಲ್​​ ಉದ್ಯಮ ಸಂಕಷ್ಟಕ್ಕೆ ಸಿಲುಕಿದ್ದು, ಹಲವು ರೆಸ್ಟೋರೆಂಟ್​​ಗಳು ಈಗಾಗಲೇ ಬಂದ್​​ ಆಗಿವೆ. ಪರಿಣಾಮ ಅದನ್ನೇ ನಂಬಿಕೊಂಡಿದ್ದ ಲಕ್ಷಾಂತರ ಕಾರ್ಮಿಕರು ಮತ್ತು ಕುಟುಂಬ ಬೀದಿಗೆ ಬಿದ್ದಿದೆ. ಹೀಗಾಗಿ ಸಿಲಿಂಡರ್​​ಗಳ ಪೂರೈಕೆಗೆ ನಿರ್ದೇಶನ ನೀಡುವಂತೆ ಆಗ್ರಹಿಸಿ ಬೆಂಗಳೂರು ಹೋಟೆಲ್ ಅಸೋಸಿಯೇಷನ್ ಅದಾಗಲೇ ಹೈಕೋರ್ಟ್​​ಗೆ ರಿಟ್​​ ಅರ್ಜಿ ಸಲ್ಲಿಸಿದೆ. ಈ ನಡುವೆ ಪ್ರಧಾನಿ ನರೇಂದ್ರ ಮೋದಿಯವರಿಗೂ ಅಸೋಸಿಯೇಷನ್ ಪತ್ರ ಬರೆದಿದ್ದು, ವಾಣಿಜ್ಯ ಬಳಕೆ ಸಿಲಿಂಡರ್ ಪೂರೈಕೆ ಸ್ಥಗಿತದಿಂದ ಉದ್ಭವಿಸಿರುವ ಸಮಸ್ಯೆ ಬಗ್ಗೆ…

Read More

BMC Election Exit Polls: ಮುಂಬೈನಲ್ಲಿ ಉದ್ಧವ್ ಠಾಕ್ರೆಯ 25 ವರ್ಷಗಳ ಅಧಿಕಾರ ಅಂತ್ಯ, ಬಿಜೆಪಿಗೆ ಬಹುಮತ; ಮತಗಟ್ಟೆ ಸಮೀಕ್ಷೆ ಭವಿಷ್ಯ – Kannada News | BMC Elections Exit Polls Predict BJP Allies big win and Flop Show By Uddhav Raj Thackeray Alliance

ಮುಂಬೈ, ಜನವರಿ 15: ಮಹಾರಾಷ್ಟ್ರದ ಬಿಎಂಸಿ (BMC Election) ಸೇರಿದಂತೆ 29 ಪುರಸಭೆ ಚುನಾವಣೆಗಳಿಗೆ ಮತದಾನ ಮುಕ್ತಾಯಗೊಂಡಿದೆ. ಎಲ್ಲಾ ಮತಗಟ್ಟೆಗಳಲ್ಲಿ ಶಾಂತಿಯುತವಾಗಿ ಮತದಾನ ನಡೆಯಿತು. ನಾಳೆ (ಶುಕ್ರವಾರ) ಚುನಾವಣಾ ಫಲಿತಾಂಶಗಳನ್ನು ಪ್ರಕಟಿಸಲಾಗುವುದು. ಇಂದು ಮತದಾನ ಮುಕ್ತಾಯವಾಗುತ್ತಿದ್ದಂತೆ ಹಲವು ಏಜೆನ್ಸಿಗಳು ಚುನಾವಣೋತ್ತರ ಸಮೀಕ್ಷೆ (BMC Exit Polls) ಬಿಡುಗಡೆ ಮಾಡಿವೆ. ಅವುಗಳಲ್ಲಿ ಬಹುತೇಕ ಸಮೀಕ್ಷೆಗಳಲ್ಲಿ ಬಿಜೆಪಿ ಮೈತ್ರಿಕೂಟಕ್ಕೆ ಬಹುಮತ ಸಿಗಲಿದೆ ಎಂದು ಭವಿಷ್ಯ ನುಡಿದಿವೆ. ಈ ಮೂಲಕ ಕಳೆದ 25 ವರ್ಷಗಳಿಂದ ಬಿಎಂಸಿಯ ಮೇಲೆ ಹಿಡಿತ ಹೊಂದಿರುವ ಉದ್ಧವ್…

Read More

ಬೆಂಗಳೂರು: ಪ್ರತಿಷ್ಠಿತ ಕಂಪೆನಿ ಉದ್ಯೋಗಿ ಪೂಜಾ ದತ್ತ ಅನುಮಾನಾಸ್ಪದ ಸಾವು; ಆಡುಗೋಡಿ ಮನೆಯಲ್ಲಿ ಅರೆಕೊಳೆತ ಬೆತ್ತಲೆ ದೇಹ ಪತ್ತೆ! – Kannada News | Bengaluru: 34 year old Woman Found Dead in Adugodi Home; Murder Suspected

ಬೆಂಗಳೂರು, ಏ.27: ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ಭೀಕರ ಘಟನೆ ಬೆಳಕಿಗೆ ಬಂದಿದೆ. ಪ್ರತಿಷ್ಠಿತ ಖಾಸಗಿ ಕಂಪೆನಿಯೊಂದರಲ್ಲಿ ಉದ್ಯೋಗಿಯಾಗಿದ್ದ 34 ವರ್ಷದ ಯುವತಿಯೊಬ್ಬಳ ಮೃತದೇಹ, ಆಕೆಯ ಆಡುಗೋಡಿ (Adugodi) ವ್ಯಾಪ್ತಿಯ ಬಾಡಿಗೆ ಮನೆಯಲ್ಲಿ ಅತ್ಯಂತ ಕರುಣಾಜನಕ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತ ಯುವತಿಯನ್ನು ಪೂಜಾ ದತ್ತ (34) ಎಂದು ಗುರುತಿಸಲಾಗಿದೆ. ಪೂಜಾ ದತ್ತ ಅವರು ಮೂಲತಃ ಜಾರ್ಖಂಡ್‌ನ ಧನಬಾದ್ ಸಮೀಪದ ಹಿರಾಪುರ ನಿವಾಸಿಯಾಗಿದ್ದರು. ಆಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಪೂಜಾ ಅವರ ಬಾಡಿಗೆ ಮನೆಯಲ್ಲಿ ಘಟನೆ ನಡೆದಿದೆ. ಮನೆಯಿಂದ ಭಾರಿ…

Read More

ಬೆಳಗಾವಿ: ಅಪ್ರಾಪ್ತ ಬಾಲಕಿಯ ಕಾಮಿಸಿ ಕಾಟಕೊಡುತ್ತಿದ್ದ ಪೂಜಾರಿ, ಸಂತ್ರಸ್ತೆಯ ತಮ್ಮನಿಂದಲೇ ಭೀಕರ ಕೊಲೆ – Kannada News | Belagavi Horror: Priest Harassing Minor Girl Brutally Killed by Victim’s Brother

ಬೆಳಗಾವಿ, ಜನವರಿ 20: ಬೆಳಗಾವಿ (Belagavi) ಜಿಲ್ಲೆಯ ಮೂಡಲಗಿ ತಾಲೂಕಿನ ರಾಜಾಪುರ ಗ್ರಾಮದಲ್ಲಿ ಪೂಜಾರಿಯೊಬ್ಬರನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ. ಆತ ಬಾಲಕಿಯೊಬ್ಬಳನ್ನು ಕಾಮಿಸಿ ನಿರಂತರವಾಗಿ ಕಾಡುತ್ತಿದ್ದ. ಇದರಿಂದ ಬಾಲಕಿಯ ಅಪ್ರಾಪ್ತ ವಯಸ್ಸಿನ ತಮ್ಮ ರೊಚ್ಚಿಗೆದ್ದು, ಆತನನ್ನು ಹಾರೆಯಿಂದ ಹೊಡೆದು ಹಲ್ಲೆ ಮಾಡಿದ್ದಾನೆ. ಕೊಲೆಯಾದ ವ್ಯಕ್ತಿಯನ್ನು ರಾಜಾಪುರ ಗ್ರಾಮದ ನಿವಾಸಿ ಮಂಜುನಾಥ ಸುಭಾಷ್ ಎಣ್ಣಿ (23) ಎಂದು ಗುರುತಿಸಲಾಗಿದೆ. ಮಂಜುನಾಥ ಕಳೆದ ಹಲವು ವರ್ಷಗಳಿಂದ ಅಪ್ರಾಪ್ತ ಯುವತಿಯನ್ನು ಹಿಂಬಾಲಿಸುತ್ತಿದ್ದು, ಈ ವಿಚಾರಕ್ಕೆ ಸಂಬಂಧಿಸಿ ಯುವತಿಯ 17 ವರ್ಷದ ತಮ್ಮ…

Read More

ದ್ವಿಚಕ್ರ ವಾಹನಕ್ಕೆ ಗುದ್ದಿ ಎಳೆದೊಯ್ದ ಕಾರು: ಚಾಲಕ ನಾಪತ್ತೆ; ಮಹಿಳೆ ಸ್ಥಿತಿ ಗಂಭೀರ

ಬೆಂಗಳೂರು, ಮಾರ್ಚ್​​ 08: ಜಯಮಹಲ್‌ ಬಳಿ  ಹಿಟ್ ಆ್ಯಂಡ್​ ರನ್ ಪ್ರಕರಣವೊಂದು ನಡೆದಿದೆ. ಇನ್ನೋವಾ ಕಾರು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು, ಸುಮಾರು ನಾಲ್ಕರಿಂದ ಐದು ಮೀಟರ್‌ಗಳಷ್ಟು ದೂರ ಎಳೆದುಕೊಂಡು ಹೋಗಿದೆ. ಈ ಭೀಕರ ಅಪಘಾತದ ಪರಿಣಾಮವಾಗಿ ಬೈಕ್‌ನಲ್ಲಿ ಪೆಟ್ರೋಲ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡಿದ್ದು, ದೃಶ್ಯಾವಳಿಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ. ಬೈಕ್​​ನಲ್ಲಿ ಸಂಚರಿಸುತ್ತಿದ್ದ ಮಹಿಳೆಗೆ ಗಂಭೀರ ಗಾಯಗಳಾಗಿದ್ದು, ತಕ್ಷಣ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತ ಸಂಭವಿಸಿದ ಕೂಡಲೇ ಇನ್ನೋವಾ ಚಾಲಕ ಮತ್ತು ಕಾರಿನಲ್ಲಿದ್ದ…

Read More

Video: ಪುಟ್ಟ ಹುಡುಗನ ಮಡಿಲಲ್ಲಿ ಹಾಯಾಗಿ ಮಲಗಿದ ನಾಯಿ ಮರಿ – Kannada News | Little boy cradles dog in lap like a baby

ಪುಟಾಣಿಗಳೇ (Little kids) ಹಾಗೆ, ಮನೆಯಲ್ಲಿ ಶ್ವಾನಗಳಿದ್ದರೆ ಅವುಗಳ ಜತೆಗೆ ಹೆಚ್ಚು ಸಮಯ ಕಳೆಯುತ್ತವೆ. ಈ ಮನೆಯ ಮುದ್ದಿನ ಶ್ವಾನಗಳು (dogs) ಪುಟ್ಟ ಮಕ್ಕಳಿಗೆ ಕಾವಲಾಗಿರುವುದನ್ನು ನೀವು ನೋಡಿರುತ್ತೀರಿ. ಆದರೆ ಪುಟ್ಟ ಹುಡುಗನೊಬ್ಬ ನಾಯಿಮರಿಯನ್ನು ಮಡಿಲಿನಲ್ಲಿ ಮಗುವಿನಂತೆ ಮಲಗಿಸಿ  ಮುದ್ದಿಸಿರುವ ದೃಶ್ಯ ನೆಟ್ಟಿಗರ ಕಣ್ಮನ ಸೆಳೆದಿದೆ. ಈ ಮುದ್ದಾದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ. ಮಂಜುನಾಥ್ ಲೋಕಪುರ್ (manjunath_lokapur) ಹೆಸರಿನ ಖಾತೆಯಲ್ಲಿ ಹಂಚಿಕೊಳ್ಳಲಾದ ವಿಡಿಯೋದಲ್ಲಿ ಪುಟ್ಟ ಹುಡುಗನ ಮಡಿಲಿನಲ್ಲಿ ಶ್ವಾನದ ಮರಿಯೊಂದು ಮಲಗಿರುವುದನ್ನು ಕಾಣಬಹುದು….

Read More

ಮೈಸೂರಿನ ಹೋಟೆಲ್​ನಲ್ಲಿ ಸರ್ಕಾರಿ ಅಧಿಕಾರಿ ಶವ ಪತ್ತೆ: RFO ಸಾವಿನ ಸುತ್ತ ಅನುಮಾನದ ಹುತ್ತ – Kannada News | Mysuru: T Narasipura RFO Kantaraj Chauhan Dies in Mysuru Hotel; Police Probe Underway

ಮೈಸೂರು, ಜನವರಿ 19: ನಗದರ ಖಾಸಗಿ ಹೋಟೆಲ್​​ವೊಂದರಲ್ಲಿ ಆರ್​ಎಫ್​ಒ (RFO) ಶವವಾಗಿ ಪತ್ತೆ ಆಗಿರುವಂತಹ ಘಟನೆ ಮೈಸೂರು (Mysuru) ಕೇಂದ್ರ ಬಸ್​ ನಿಲ್ದಾಣದ ಬಳಿಯಿರುವ ಹೋಟೆಲ್​​ನಲ್ಲಿ ನಡೆದಿದೆ. ಟಿ ನರಸೀಪುರ ಆರ್​ಎಫ್​ಒ ಕಾಂತರಾಜ್ ಚೌಹಾಣ್​​ ಶವವಾಗಿ ಪತ್ತೆಯಾಗಿದ್ದಾರೆ. ಸದ್ಯ ಅವರ ಸಾವಿನ ಬಗ್ಗೆ ಸಾಕಷ್ಟು ಅನುಮಾನಗಳು ಹುಟ್ಟಿಕೊಂಡಿದ್ದು, ಘಟನಾ ಸ್ಥಳಕ್ಕೆ ಲಷ್ಕರ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ನಡೆದದ್ದೇನು? RFO ಕಾಂತರಾಜ್ ಚೌಹಾಣ್​​​ ಅವರು 15 ದಿನದ ಹಿಂದೆಯಷ್ಟೇ ನರಸೀಪುರಕ್ಕೆ ವರ್ಗವಾಗಿದ್ದರು. ಕೊಪ್ಪಳ ಜಿಲ್ಲೆಯ…

Read More

ದಳಪತಿ ವಿಜಯ್ ನಟನೆಯ ‘ಜನ ನಾಯಗನ್’ ಚಿತ್ರಕ್ಕೆ ಎದುರಾಯ್ತು ಮತ್ತೊಂದು ಸಂಕಷ್ಟ – Kannada News | Amid Jana Nayagan Release delay Amazon prime video to Take Legal Action Against Thalapathy Vijay Movie

ಜನ ನಾಯಗನ್ (Jana Nayagan) ಸಿನಿಮಾ ಸಂಕಷ್ಟದಲ್ಲಿದೆ. ಈ ಚಿತ್ರ ಜನವರಿ 9ರಂದೇ ರಿಲೀಸ್ ಆಗಬೇಕಿತ್ತು. ಆದರೆ, ಸೆನ್ಸಾರ್ ಮಂಡಳಿಯಿಂದ ಆದ ಸಮಸ್ಯೆಯಿಂದ ತೊಂದರೆ ಎದುರಾಗುತ್ತಿದೆ.ಸಿನಿಮಾ ರಿಲೀಸ್ ಆದರೆ ಸಾಕು ಎಂಬ ಪರಿಸ್ಥಿತಿಯಲ್ಲಿ ಫ್ಯಾನ್ಸ್ ಇದ್ದಾರೆ. ಈಗ ಚಿತ್ರ ಒಟಿಟಿ ಪ್ಲಾಟ್​​ಫಾರ್ಮ್ ಕಡೆಯಿಂದ ಸಂಕಷ್ಟ ಎದುರಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಾ ಇದೆ. ಇದು ಚಿತ್ರತಂಡದ ಚಿಂತೆ ಹೆಚ್ಚಿಸಿದೆ. ‘ಜನ ನಾಯಗನ್’ ಸಿನಿಮಾ ದಳಪತಿ ವಿಜಯ್ ವೃತ್ತಿ ಜೀವನದ ಕೊನೆಯ ಸಿನಿಮಾ. ಇದಾದ ಬಳಿಕ ಅವರು ರಾಜಕೀಯದ…

Read More

ದೇಶದಲ್ಲೇ ಪ್ರಥಮ ಬಾರಿಗೆ ಹಳ್ಳಗಳಿಗೆ ಬಾಂದಾರ ನಿರ್ಮಿಸುವ ಯೋಜನೆಗೆ ಸಾಕ್ಷಿಯಾದ ವಿಜಯಪುರ – Kannada News | MB Patil Launches India’s First Stream Bandar Project in Vijayapura for Groundwater Recharge

ಬಾಂದಾರಗಳ ನಿರ್ಮಾಣ ಯೋಜನೆಗೆ ಚಾಲನೆ ನೀಡಿದ ಸಚಿವ ಎಂಬಿ ಪಾಟೀಲ್​​Image Credit source: tv9 kannada ವಿಜಯಪುರ, ಏಪ್ರಿಲ್​ 19: ದೇಶದಲ್ಲೇ ಪ್ರಪ್ರಥಮ ಬಾರಿಗೆ ಹಳ್ಳಗಳಿಗೆ ಬಾಂದಾರ ನಿರ್ಮಿಸುವ ಯೋಜನೆಗೆ (Bandar Project) ಕೈಗಾರಿಕಾ ಸಚಿವ ಎಂಬಿ ಪಾಟೀಲ್ (MB Patil) ಇಂದು ಚಾಲನೆ ನೀಡಿದ್ದಾರೆ. ಹಳ್ಳ, ಕೊಳ್ಳಗಳಿಗೆ ನೀರು ಹರಿಸುವುದರಿಂದ ಅಂತರ್​ ಜಲ ಹೆಚ್ಚಾಗುತ್ತದೆ ಹಾಗೂ ಪ್ರಾಣಿ ಪಕ್ಷಿಗಳಿಗೆ ನೀರು ಸಿಗುತ್ತದೆ. ಇದೊಂದು ವಿಶಿಷ್ಟ ಯೋಜನೆಯಾಗಿದ್ದು, ಇದಕ್ಕೆ ಜಿಲ್ಲೆಯ ಜನರು ಮೆಚ್ಚುಗೆ ವ್ಯಕ್ತಪಡಿದ್ದಾರೆ. ವಿಜಯಪುರ ಜಿಲ್ಲೆಯಲ್ಲಿನ…

Read More