ಕರ್ನಾಟಕದಲ್ಲೊಂದು ಅಪರೂಪದ ಘಟನೆ: ಸಿಬ್ಬಂದಿಗೆ ಬಂದೂಕು ಹೊತ್ತು ರಣಬಿಸಿಲಲ್ಲಿ ನಿಲ್ಲುವ ಶಿಕ್ಷೆ
ಶಾಲಾ ಮಕ್ಕಳಂತೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಚಿಕ್ಕಜಾಜೂರು ಠಾಣೆ ಪೊಲೀಸ್ ಸಿಬ್ಬಂದಿಗೆ ರಣಬಿಸಿಲಲ್ಲಿ ನಿಲ್ಲುವ ಶಿಕ್ಷೆ ವಿಧಿಸಿದ ಘಟನೆ ಬೆಳಕಿಗೆ ಬಂದಿದೆ. ಕರ್ತವ್ಯ ನಿರ್ಲಕ್ಷ್ಯ ಕಾರಣಕ್ಕೆ ಈ ಅಪರೂಪದ ಶಿಕ್ಷೆ ವಿಧಿಸಲಾಗಿದೆ. ಅಚ್ಚರಿ ಅನ್ನಿಸಿದರೂ ಸತ್ಯ. PSI ನೇತ್ರಾವತಿ ಅವರು ತಮ್ಮ ಚಿಕ್ಕಜಾಜೂರು ಠಾಣೆ ಪೊಲೀಸ್ ಸಿಬ್ಬಂದಿಗೆ ನಿನ್ನೆ (ಏಪ್ರಿಲ್ 06) ಮಧ್ಯಾಹ್ನ 2ರಿಂದ 5ರವರೆಗೆ ರಣಬಿಸಿನಲ್ಲಿ ಬಂದೂಕು ಹೊತ್ತು ನಿಲ್ಲುವ ಶಿಕ್ಷೆ ವಿಧಿಸಿದ್ದಾರೆ. ಅರ್ಧದಿನ ರಣಬಿಸಿಲಿನಲ್ಲಿ ನಿಲ್ಲಿಸಿದ್ದಕ್ಕೆ ಕೆಲ ಪೊಲೀಸ್ ಸಿಬ್ಬಂದಿ ಆರೋಗ್ಯದಲ್ಲಿ ಏರುಪೇರಾಗಿರುವುದು…