Headlines

ಸದಾಶಿವನಗರ ನಿವಾಸದಲ್ಲಿ ಸಿಎಂ ಡಿಕೆಶಿ ಧ್ವಜಾರೋಹಣ: ರಾಗ-ದ್ವೇಷವಿಲ್ಲದೆ ಜನರ ಸೇವೆಗೆ ಬದ್ಧ ಎಂದು ಮುಖ್ಯಮಂತ್ರಿ – Kannada News | Karnataka CM DK Shivakumars 77th I Day Celebration: Tributes and Flag Hoisting

ಬೆಂಗಳೂರು, ಆ.15: ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು 77ನೇ ಸ್ವಾತಂತ್ರ್ಯ ದಿನಾಚರಣೆಯನ್ನು ತಮ್ಮ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಅದ್ದೂರಿಯಾಗಿ ಮತ್ತು ಭಕ್ತಿಪೂರ್ವಕವಾಗಿ ಆಚರಿಸಿದರು. ದೇಶದೆಲ್ಲೆಡೆ ಸ್ವಾತಂತ್ರ್ಯ ಸಂಭ್ರಮ ಮನೆ ಮಾಡಿದ್ದ ಈ ದಿನದಂದು, ಡಿಸಿಎಂ ಅವರು ತಮ್ಮ ನಿವಾಸದಲ್ಲಿ ರಾಷ್ಟ್ರಧ್ವಜವನ್ನು ಹಾರಿಸುವ ಮೂಲಕ ದೇಶಕ್ಕೆ ಗೌರವ ಸಲ್ಲಿಸಿದರು. ಈ ಮಹತ್ವದ ಸಂದರ್ಭದಲ್ಲಿ, ಅವರ ಪತ್ನಿ ಶ್ರೀಮತಿ ಉಷಾ ಶಿವಕುಮಾರ್ ಅವರು ಅವರ ಜೊತೆಯಲ್ಲಿದ್ದು, ಕಾರ್ಯಕ್ರಮಕ್ಕೆ ಸಾಕ್ಷಿಯಾದರು. ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ನಡೆದ ಈ ಸಮಾರಂಭದಲ್ಲಿ, ಸಿಎಂ…

Read More

‘ಧುರಂಧರ್ 2’ ಸಿನಿಮಾ ತಿರಸ್ಕರಿಸಿದ ಆ ಸ್ಟಾರ್ ನಟನಿಗೆ ಈಗ ಬೇಸರ

ಧುರಂಧರ್ 2 ಚಿತ್ರದ ಬಗ್ಗೆ ಎಲ್ಲೆಡೆ ಚರ್ಚೆಯಾಗುತ್ತಿದೆ. ಮೊದಲ ಎರಡು ದಿನಗಳಲ್ಲಿ, ಈ ಚಿತ್ರವು ವಿಶ್ವಾದ್ಯಂತ 240 ಕೋಟಿ ಗಳಿಸಿದೆ. ಭಾರತದಲ್ಲಿ, ಈ ಚಿತ್ರವು 100 ಕೋಟಿ ಗಡಿ ದಾಟಿದೆ. ಮುಂದಿನ ಕೆಲವು ದಿನಗಳಲ್ಲಿ, ಧುರಂಧರ್ 2 ಭಾರತೀಯ ಚಿತ್ರರಂಗದಲ್ಲಿ ಹೊಸ ಗಳಿಕೆಯ ಇತಿಹಾಸವನ್ನು ಸೃಷ್ಟಿಸುವ ಸಾಧ್ಯತೆಯನ್ನು ತಳ್ಳಿಹಾಕಲು ಸಾಧ್ಯವಿಲ್ಲ. ಈ ಚಿತ್ರವನ್ನು ನೋಡಿದ ನಂತರ ಚಿತ್ರಮಂದಿರದಿಂದ ಹೊರಬರುವ ಪ್ರತಿಯೊಬ್ಬರೂ ಈ ಚಿತ್ರವನ್ನು ಹೊಗಳುತ್ತಿದ್ದಾರೆ. ಏಕೆಂದರೆ ಧುರಂಧರ್‌ನ ಮೊದಲ ಭಾಗವು ಕೊನೆಗೊಂಡ ತಿರುವು ಅನೇಕ ಪ್ರಶ್ನೆಗಳಿಗೆ ಉತ್ತರಿಸದೆ…

Read More

ರಾತ್ರಿ ಊಟ ಮಾಡದೆ ಖಾಲಿ ಹೊಟ್ಟೆಯಲ್ಲಿ ಮಲಗುವ ಅಭ್ಯಾಸ ಎಷ್ಟು ಡೇಂಜರಸ್‌ ಗೊತ್ತಾ? – Kannada News | What happens if you sleep on an empty stomach at night?

ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಪೌಷ್ಟಿದಾಯಕ ಆಹಾರವನ್ನು ಸೇವಿಸುವಂತೆ ರಾತ್ರಿ ಹಗುರವಾದ ಆಹಾರವನ್ನು ಸೇವನೆ ಮಾಡಬೇಕು ಎಂದು ಹೇಳುತ್ತಾರೆ. ಆದರೆ ಕೆಲಸದ ಒತ್ತಡ, ಆಯಾಸ ಮತ್ತು ಕೆಲವೊಮ್ಮೆ ಕೋಪದಿಂದಾಗಿ ಅನೇಕ ಜನರು ರಾತ್ರಿ (night) ಊಟ ಮಾಡದೆ ಖಾಲಿ ಹೊಟ್ಟೆಯಲ್ಲಿ ಮಲಗುತ್ತಾರೆ. ಇನ್ನೂ ಕೆಲವರು ತೂಕ ಇಳಿಸಿಕೊಳ್ಳುವ ಸಲುವಾಗಿ ರಾತ್ರಿ ಊಟವನ್ನು ಸ್ಕಿಪ್‌ ಮಾಡುತ್ತಾರೆ. ರಾತ್ರಿ ಊಟ ಮಾಡದೆ  ಖಾಲಿ ಹೊಟ್ಟೆಯಲ್ಲಿ ಮಲಗುವ ಈ ಅಭ್ಯಾಸವು ದೇಹಕ್ಕೆ ತುಂಬಾ ಹಾನಿಕಾರಕವಂತೆ. ಹಾಗಿದ್ದರೆ ಊಟ ಮಾಡದೆ ಮಲಗುವುದರಿಂದ ಏನೆಲ್ಲಾ ತೊಂದರೆಗಳು…

Read More

ರಣವೀರ್​​ ತಲೆಗೇರಿತೇ ‘ಧುರಂಧರ್ 2’ ಯಶಸ್ಸು? ನಡೆದುಕೊಂಡ ರೀತಿಗೆ ಶುರುವಾಗಿದೆ ಚರ್ಚೆ

ರಣವೀರ್ ಸಿಂಗ್ ಅವರು ಚಿತ್ರರಂಗದ ಹಿನ್ನೆಲೆ ಹೊಂದಿದ್ದರೂ ಅವರು ಸಾಕಷ್ಟು ಏರಿಳಿತ ಅನುಭವಿಸಬೇಕಾಯಿತು. ಅವರನ್ನು ಅನೇಕರು ನಿರ್ಲಕ್ಷಿಸಿದ್ದರು. ಈಗ ‘ಧುರಂಧರ್’ ಹಾಗೂ ‘ಧುರಂಧರ್ 2’ ಮೂಲಕ ಎಲ್ಲರಿಗೂ ಅವರು ಉತ್ತರ ನೀಡಿದ್ದಾರೆ. ಈ ಸಂದರ್ಭದಲ್ಲಿ ಒಂದು ವಿಡಿಯೋ ವೈರಲ್ ಆಗಿದೆ. ಬಾಲಿವುಡ್​ ಸೂಪರ್​ ಸ್ಟಾರ್ ಶಾರುಖ್ ಖಾನ್ (Shahr Rukh Khan) ಅವರನ್ನು ರಣವೀರ್ ಸಿಂಗ್ ಸಂಪೂರ್ಣವಾಗಿ ನಿರ್ಲಕ್ಷಿಸಿದರೇ ಎನ್ನುವ ಪ್ರಶ್ನೆ ಮೂಡಿದೆ. ರಣವೀರ್​​ಗೆ ಯಶಸ್ಸು ತಲೆಗೇರಿದೆ ಎಂದು ಅನೇಕರು ಮಾತನಾಡಿಕೊಂಡಿದ್ದಾರೆ. ಅನಂತ್ ಅಂಬಾನಿ ಗುಜರಾತ್​​ನ ಜಾಮ್​​ನಗರದಲ್ಲಿ…

Read More

ಲೈಂಗಿಕ ಕಿರುಕುಳದಿಂದ ಬೇಸತ್ತ ನಟಿ; ಪ್ಯಾನಿಕ್ ಅಟ್ಯಾಕ್​​ನಿಂದ ಕಂಗಾಲು – Kannada News | Gayathri Gupta’s Mental Health Battle: Actress Reveals Panic Attacks

ನಿರ್ದೇಶಕ ಶೇಖರ್ ಕಮ್ಮುಲ ಅವರ ‘ಫಿದಾ’ ಚಿತ್ರದಲ್ಲಿ ಸಾಯಿ ಪಲ್ಲವಿ (Sai Palavi) ಸ್ನೇಹಿತೆಯಾಗಿ ನಟಿಸುವ ಮೂಲಕ ಗಾಯತ್ರಿ ಗುಪ್ತಾ ಗುರುತಿಸಿಕೊಂಡರು. ಇದರೊಂದಿಗೆ ‘ಕೊಬ್ಬರ್ ಮಟ್ಟಾ’, ‘ಐಸ್ ಕ್ರೀಮ್’, ‘ಅಮರ್ ಅಕ್ಬರ್ ಆಂಟನಿ’, ‘ಬುರ್ರಕಥಾ’ ಮತ್ತು ‘ಸೀತಾ ಆನ್ ದಿ ರೋಡ್’ ಸೇರಿದಂತೆ ಹಲವು ಸಿನಿಮಾಗಳಲ್ಲಿ ಅವರು ಅಭಿನಯಿಸಿದ್ದಾರೆ. ಸಿನಿಮಾಗಳಲ್ಲದೆ ತಮ್ಮ ದಿಟ್ಟ ಹೇಳಿಕೆ ಮತ್ತು ನಿರ್ಮಾಪಕರಿಂದ ಎದುರಿಸಿದ ಲೈಂಗಿಕ ಕಿರುಕುಳದ ಕುರಿತಾದ ಸಂವೇದನಾಶೀಲ ಹೇಳಿಕೆಗಳಿಂದಲೂ ಅವರು ಸದಾ ಸುದ್ದಿಯಲ್ಲಿದ್ದಾರೆ. ಈಗ ಅವರು ಸಂಕಷ್ಟದಲ್ಲಿದ್ದಾರೆ. ಇತ್ತೀಚೆಗೆ ಸಾಮಾಜಿಕ…

Read More

Tech Tips: ಬ್ಲೂಟೂತ್, ವೈ-ಫೈ ಆನ್ ಇದ್ದರೆ ಫೋನಿನ ಬ್ಯಾಟರಿ ಬೇಗನೆ ಖಾಲಿಯಾಗುತ್ತಾ?: ನೀವು ಅಂದುಕೊಂಡಿದ್ದು ಸುಳ್ಳು

ಬೆಂಗಳೂರು (ಏ. 06): ನೀವು ಸ್ಮಾರ್ಟ್‌ಫೋನ್ (Smartphone) ಬಳಸುತ್ತಿದ್ದರೆ, ನಿಮ್ಮ ಫೋನ್‌ನ ಬ್ಲೂಟೂತ್ ಮತ್ತು ವೈ-ಫೈ ಅನ್ನು ಆಫ್ ಮಾಡಬೇಕು ಎಂದು ನೀವು ಬಹುಶಃ ಕೇಳಿರಬಹುದು. ಇದರ ಹಿಂದಿನ ತಾರ್ಕಿಕತೆಯೆಂದರೆ ಇದು ನಿಮ್ಮ ಫೋನ್‌ನ ಬ್ಯಾಟರಿಯನ್ನು ಹೆಚ್ಚು ಕಾಲ ಬಾಳಿಕೆ ಬರುವಂತೆ ಮಾಡುತ್ತದೆ ಮತ್ತು ಆಗಾಗ್ಗೆ ಚಾರ್ಜ್ ಮಾಡುವ ಅಗತ್ಯ ಇರುವುದಿಲ್ಲ. ಆದಾಗ್ಯೂ, ಇದು ಕಾಲಾನಂತರದಲ್ಲಿ ಬದಲಾಗಿದೆ. ಈಗ ತಂತ್ರಜ್ಞಾನದಲ್ಲಿನ ಪ್ರಗತಿಯಿಂದ, ಇವು ಆಧುನಿಕ ಸ್ಮಾರ್ಟ್‌ಫೋನ್‌ಗಳಲ್ಲಿನ ಬ್ಯಾಟರಿಯ ಮೇಲೆ ಹೆಚ್ಚಿನ ಪರಿಣಾಮ ಬೀರುವುದಿಲ್ಲ ಎಂದು ನಿಮಗೆ ತಿಳಿದಿದೆಯೇ?….

Read More

ಮುಂಬೈನಲ್ಲಿ ಭೀಕರ ದುರಂತ; ಶಾಲಾ ಬಸ್ ಮೇಲೆ ದೊಡ್ಡ ಮರ ಬಿದ್ದು 11 ವರ್ಷದ ವಿದ್ಯಾರ್ಥಿ ಸಾವು – Kannada News | Mumbai 11 Year Old Student Dies after tree falls on school bus 4 Injured

ಮುಂಬೈ, ಜೂನ್ 30: ಮುಂಬೈನ ಚೆಂಬೂರ್ ಉಪನಗರದಲ್ಲಿ ಇಂದು (ಜೂನ್ 30) ಭೀಕರ ಅಪಘಾತವೊಂದು (Mumbai Accident) ಸಂಭವಿಸಿದೆ. ಚಲಿಸುತ್ತಿದ್ದ ಶಾಲಾ ಬಸ್ಸಿನ ಮೇಲೆ ಬೃಹತ್ ಮರವೊಂದು ಉರುಳಿ ಬಿದ್ದ ಪರಿಣಾಮದಿಂದ 11 ವರ್ಷದ ಶಾಲಾ ವಿದ್ಯಾರ್ಥಿಯೊಬ್ಬ ಸ್ಥಳದಲ್ಲೇ ಸಾವನ್ನಪ್ಪಿದ್ದು, ನಾಲ್ವರು ತೀವ್ರವಾಗಿ ಗಾಯಗೊಂಡಿದ್ದಾರೆ. ಈ ಬಸ್​​ನಲ್ಲಿ ಒಟ್ಟು 18 ಮಕ್ಕಳಿದ್ದರು. ಸ್ಥಳೀಯ ಪೊಲೀಸರು ಮತ್ತು ಪ್ರತ್ಯಕ್ಷದರ್ಶಿಗಳು ನೀಡಿರುವ ಮಾಹಿತಿಯ ಪ್ರಕಾರ, ಚೆಂಬೂರ್‌ನ ಪ್ರಮುಖ ರಸ್ತೆಯೊಂದರಲ್ಲಿ ಶಾಲಾ ಮಕ್ಕಳನ್ನು ಹೊತ್ತೊಯ್ಯುತ್ತಿದ್ದ ಬಸ್ಸು ಚಲಿಸುತ್ತಿದ್ದಾಗ ರಸ್ತೆ ಬದಿಯಲ್ಲಿದ್ದ ಬೃಹತ್…

Read More

‘ರಾಮಾಯಣ’ ಸಿನಿಮಾದಲ್ಲಿ ರಣಬೀರ್ ಕಪೂರ್ ದ್ವಿಪಾತ್ರ: ಶ್ರೀರಾಮನ ಜೊತೆಗೆ ಪರಶುರಾಮನ ದರ್ಶನ

ನಿತೇಶ್ ತಿವಾರಿ ನಿರ್ದೇಶನದ ಬಹುನಿರೀಕ್ಷಿತ ‘ರಾಮಾಯಣ’ (Ramayana) ಚಿತ್ರದ ಬಗ್ಗೆ ದಿನಕ್ಕೊಂದು ಕುತೂಹಲಕಾರಿ ವಿಚಾರಗಳು ಹೊರಬರುತ್ತಿವೆ. ಇತ್ತೀಚೆಗಷ್ಟೇ ಅಮೆರಿಕದಲ್ಲಿ ಈ ಚಿತ್ರದ ಟೀಸರ್ ಬಿಡುಗಡೆಯಾಗಿದ್ದು, ಭಾರಿ ಸಂಚಲನ ಮೂಡಿಸಿದೆ. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ನಟ ರಣಬೀರ್ ಕಪೂರ್ (Ranbir Kapoor), ಈ ಸಿನಿಮಾದಲ್ಲಿ ತಾವು ಕೇವಲ ಶ್ರೀರಾಮನ ಪಾತ್ರ ಮಾತ್ರವಲ್ಲದೇ ಪರಶುರಾಮನ ಪಾತ್ರವನ್ನೂ ನಿರ್ವಹಿಸುತ್ತಿರುವುದಾಗಿ ಅಧಿಕೃತವಾಗಿ ಖಚಿತಪಡಿಸಿದ್ದಾರೆ. ಅವರು ಮಾತನಾಡಿರುವ ವಿಡಿಯೋ ವೈರಲ್ ಆಗಿದೆ. ಶ್ರೀರಾಮ ಮತ್ತು ಪರಶುರಾಮ ಇಬ್ಬರೂ ಭಗವಾನ್ ವಿಷ್ಣುವಿನ ಅವತಾರಗಳು ಎಂಬುದು…

Read More

Horoscope Today 18 January : ಇಂದು ಈ ರಾಶಿಯವರಿಗೆ ಸಿಕ್ಕಿದ್ದಕ್ಕಿಂತ ಸಿಗದಿದ್ದುದರ ಚಿಂತೆ

ಮೇಷ ರಾಶಿ: ನೋವನ್ನು ಮನಸ್ಸನಲ್ಲಿ ಇಟ್ಟುಕೊಂಡೂ ಸಂತೋಷದಿಂದ ಇರುವುದು ಗೊತ್ತು. ಹೊಸ ವಸ್ತ್ರಗಳನ್ನು ಧರಿಸುವಿರಿ. ಉಡುಗೊರೆಯನ್ನು ಸ್ನೇಹಿತರಿಂದ ಸ್ವೀಕರಿಸುವಿರಿ. ಭೂಮಿಯ ವ್ಯವಹಾರದಲ್ಲಿ ಹಿನ್ನಡೆಯಾಗಲಿದೆ. ಇಂದಿನ ಸಮಯವು ವ್ಯರ್ಥವಾಗುವುದು. ಇಂದು ನಿಮ್ಮ ಜವಾಬ್ದಾರಿಯ ಕಾರ್ಯದಲ್ಲಿ ಮಗ್ನರಾಗುವಿರಿ. ರಹಸ್ಯದಿಂದ ಇಂದಿನ‌ ಕೆಲಸವನ್ನು ಮಾಡುವಿರಿ. ನಿಮ್ಮ ಪ್ರಾಮಾಣಿಕತೆಯ ಪರೀಕ್ಷೆ ಆಗಬಹುದು. ಬದಲಾಣೆಗೆ ನೀವು ತೆರೆದುಕೊಳ್ಳಬೇಕಾದೀತು. ಸಂಗಾತಿಯನ್ನು ಭೇಟಿಯಾಗಲು ನಾನಾ ಕಾರಣವನ್ನು ಹುಡುಕುವಿರಿ. ನಿಮ್ಮ ಮಾತಿನಿಂದ ತಾಯಿಗೆ ನೋವಾಗಬಹುದು. ವೃಷಭ ರಾಶಿ: ಕೆಲಸಕ್ಕೆ ಸಂಬಂಧಿಸಿದಂತೆ ನೀವು ಕುಟುಂಬದಿಂದ ದೂರ ಉಳಿಯಬೇಕಾದ ಸಂದರ್ಭ ಬರಬಹುದು….

Read More

ಷೇರುಬಜಾರಿನಲ್ಲಿ ಭಾರಿ ಗೂಳಿ ಓಟ; ಗರಿಬಿಚ್ಚಿದ ಸೆನ್ಸೆಕ್ಸ್, ನಿಫ್ಟಿ; ಮಾರುಕಟ್ಟೆಯ ಭರ್ಜರಿ ಆಟಕ್ಕೆ ಕಾರಣಗಳೇನು? – Kannada News | Indian Stock Market Surges: Sensex Jumps 1700 Pts, Nifty Crosses 23600 – Why?

ನವದೆಹಲಿ, ಜೂನ್ 12: ಭಾರತೀಯ ಷೇರು ಮಾರುಕಟ್ಟೆ (India Stock Market) ಇಂದು ಶುಕ್ರವಾರ ಭಾರಿ ಏರಿಕೆ ಕಂಡಿದೆ. ಬಿಎಸ್‌ಇ ಸೆನ್ಸೆಕ್ಸ್ (BSE Sensex) ಸುಮಾರು 1,700 ಅಂಕಗಳಷ್ಟು ಜಿಗಿತ ಸಾಧಿಸಿದರೆ, ಎನ್‌ಎಸ್‌ಇ ನಿಫ್ಟಿ (NSE Nifty 50) ಮತ್ತೆ 23,600 ರ ಮಟ್ಟವನ್ನು ದಾಟಿದೆ. ಈ ಭರ್ಜರಿ ಚೇತರಿಕೆಯಿಂದಾಗಿ ಹೂಡಿಕೆದಾರರ ಸಂಪತ್ತು ಒಂದೇ ದಿನದಲ್ಲಿ ಸುಮಾರು 7 ಲಕ್ಷ ಕೋಟಿ ರೂಗಿಂತಲೂ ಹೆಚ್ಚು ಹೆಚ್ಚಾಗಿದೆ. ಮಾರುಕಟ್ಟೆ ಇವತ್ತು ಶೇ. 2ರಷ್ಟು ಜಿಗಿತ ಕಂಡಿರುವುದು ವಿಶೇಷ. ಸೆನ್ಸೆಕ್ಸ್…

Read More