ದೇವೇಗೌಡರ ಪತ್ನಿ ಚೆನ್ನಮ್ಮ ಆರೋಗ್ಯ ಸ್ಥಿತಿ ಈಗ ಹೇಗಿದೆ? ಮಣಿಪಾಲ್ ಆಸ್ಪತ್ರೆಯ ವೈದ್ಯರು ಕೊಟ್ಟ ಮಾಹಿತಿ ಇಲ್ಲಿದೆ – Kannada News | HD Deve Gowda’s Wife Chennamma Health Improves, Breathing Condition Better Says Manipal Hospital Doctor

ಬೆಂಗಳೂರು, ಜುಲೈ 18: ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ ಪತ್ನಿ ಚೆನ್ನಮ್ಮ ಅವರ ಆರೋಗ್ಯದಲ್ಲಿ ಶುಕ್ರವಾರಕ್ಕಿಂತ ಇಂದು ಸುಧಾರಣೆ ಕಂಡುಬಂದಿದೆ ಎಂದು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯ ವೈದ್ಯ ಡಾ. ಸತ್ಯನಾರಾಯಣ ಶನಿವಾರ ಬೆಳಗ್ಗೆ ತಿಳಿಸಿದ್ದಾರೆ. ಉಸಿರಾಟದ ತೊಂದರೆ ಶೇ 20ರಿಂದ 30ರಷ್ಟು ಹತೋಟಿಗೆ ಬಂದಿದ್ದು, ರಕ್ತದೊತ್ತಡ ಸೇರಿದಂತೆ ಇತರ ಆರೋಗ್ಯದ ಮಾನದಂಡಗಳು ಸ್ಥಿರವಾಗಿವೆ ಎಂದು ಅವರು ಹೇಳಿದ್ದಾರೆ. ಸದ್ಯ ವೆಂಟಿಲೇಟರ್ ಅಗತ್ಯವಿಲ್ಲದೆ ಸಹಜ ಉಸಿರಾಟ ನಡೆಯುತ್ತಿದೆ. ಆದರೆ ಸಂಪೂರ್ಣ ಚೇತರಿಕೆಗೆ ಇನ್ನೂ ಸಮಯ ಬೇಕಾಗಲಿದ್ದು, ಮುಂದಿನ ದಿನಗಳಲ್ಲೂ ಚಿಕಿತ್ಸೆ ಮುಂದುವರಿಯಲಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬೆಂಗಳೂರಿಗರ ನಿದ್ದೆ ಕಸಿಯುತ್ತಿದೆ ಈ ತಾಪಮಾನ! ಹೇಗೆ ಗೊತ್ತಾ? – Kannada News | Climate Change Stealing Bangaloreans Sleep as city Hits Highest Footprint in New Study

ಬೆಂಗಳೂರು, ಜುಲೈ 18: ನಗರದ ಜನರಿಗೆ ಟ್ರಾಫಿಕ್ ಕಿರಿಕಿರಿ, ವಾಯು ಮಾಲಿನ್ಯ ಸೇರಿದಂತೆ ಹಲವು ಸಮಸ್ಯೆಗಳು ದಿನಚರಿಯ ಭಾಗವಾಗಿಹೋಗಿವೆ. ಇದರ ನಡುವೆ ಹೊಸ ತಲೆನೋವೊಂದು ಉಲ್ಬಣಿಸಿದ್ದು, ಬೆಂಗಳೂರು ಜನರ ನಿದ್ದೆಗೆ ಕನ್ನ ಹಾಕುತ್ತಿದೆ. ಮುಂಗಾರಿನ ಮುನಿಸಿಂದ ಬೆಂಗಳೂರಿಗರು ತತ್ತರಿಸುತ್ತಿರುವಾಗಲೇ ತಾಪಮಾನ ಏರಿಕೆಯಿಂದಾಗಿ ನಗರದ ಜನರು ನಿದ್ದೆ ಕಳೆದುಕೊಳ್ಳುತ್ತಿದ್ದಾರೆ. ಹೌದು, ಅಮೆರಿಕ ಮೂಲದ ‘ಕ್ಲೈಮೇಟ್ ಸೆಂಟ್ರಲ್’ ಸಂಸ್ಥೆ ನಡೆಸಿರುವ ಜಾಗತಿಕ ಮಟ್ಟದ ಸಂಶೋಧನಾ ವರದಿಯೊಂದರಲ್ಲಿ ಈ ಆತಂಕಕಾರಿ ವಿಷಯ ಬಹಿರಂಗವಾಗಿದೆ.

ನಗರದ ಜನರು ವರ್ಷಕ್ಕೆ ಎಷ್ಟು ತಾಸು ನಿದ್ದೆ ಕಳೆದುಕೊಳ್ಳುತ್ತಾರೆ ಗೊತ್ತಾ?

ರಾತ್ರಿಯ ತಾಪಮಾನದಲ್ಲಿ ಆಗುತ್ತಿರುವ ದಿಢೀರ್ ಏರಿಕೆಯಿಂದಾಗಿ ಭಾರತದ ಮೆಟ್ರೋ ನಗರಗಳ ಜನರು ವರ್ಷಕ್ಕೆ ಸರಾಸರಿ 65 ರಿಂದ 93 ಗಂಟೆಗಳಷ್ಟು ನಿದ್ದೆಯನ್ನು ಕಳೆದುಕೊಳ್ಳುತ್ತಿದ್ದಾರೆ. ಈ ಪೈಕಿ ಬೆಂಗಳೂರು ನಗರದಲ್ಲಿ ವಾತಾವರಣ ಬದಲಾವಣೆಯ ಅತಿ ದೊಡ್ಡ ಪ್ರಭಾವ ಕಾಣಸಿಗುತ್ತದೆ. ಬೆಂಗಳೂರಿಗರು ವರ್ಷಕ್ಕೆ ಸರಾಸರಿ 67 ಗಂಟೆಗಳ ಕಾಲ ನಿದ್ದೆಯಿಂದ ವಂಚಿತರಾಗುತ್ತಿದ್ದು, ಅದರಲ್ಲಿ ಶೇಕಡಾ 12 ರಷ್ಟು, ಅಂದರೆ ಸುಮಾರು 8 ಗಂಟೆಗಳ ನಿದ್ದೆ ಕೇವಲ ಮಾನವ ನಿರ್ಮಿತ ಜಾಗತಿಕ ತಾಪಮಾನ ಏರಿಕೆಯಿಂದಾಗಿಯೇ ನಷ್ಟವಾಗುತ್ತಿದೆ ಎಂದು ವರದಿ ತಿಳಿಸಿದೆ. ಭಾರತದ ಇತರ ನಗರಗಳಿಗೆ ಹೋಲಿಸಿದರೆ ಹವಾಮಾನ ಬದಲಾವಣೆಯ ನೇರ ಪರಿಣಾಮದಿಂದ ಅತಿ ಹೆಚ್ಚು ನಿದ್ದೆ ಕಳೆದುಕೊಳ್ಳುತ್ತಿರುವುದು ಬೆಂಗಳೂರಿಗರೇ ಎಂಬುದು ಈ ವರದಿಯಿಂದ ಸಾಬೀತಾಗಿದೆ.

ನಿದ್ದೆಗೂ ಹವಾಮಾನಕ್ಕೂ ಏನು ಸಂಬಂಧ?

ಮಾನವನ ದೇಹದ ಪ್ರಕೃತಿಯ ಪ್ರಕಾರ, ರಾತ್ರಿಯಾಗುತ್ತಿದ್ದಂತೆ ಆಳವಾದ ನಿದ್ದೆಗೆ ಜಾರಲು ದೇಹದ ಒಳಗಿನ ತಾಪಮಾನ ಕಡಿಮೆಯಾಗಬೇಕು. ಆದರೆ ಕಾಂಕ್ರೀಟ್ ಕಾಡಾಗುತ್ತಿರುವ ಬೆಂಗಳೂರಿನಲ್ಲಿ ರಾತ್ರಿಯ ವೇಳೆಯೂ ಸೆಕೆ ಹೆಚ್ಚಿರುವುದರಿಂದ ದೇಹ ಸುಲಭವಾಗಿ ತಂಪಾಗುವುದಿಲ್ಲ. ಪರಿಣಾಮವಾಗಿ, ಜನರು ಮಧ್ಯರಾತ್ರಿ ಪದೇ ಪದೇ ಎಚ್ಚರಗೊಳ್ಳುವುದು, ಲಘು ನಿದ್ದೆ (Light Sleep) ಅಥವಾ ನಿದ್ದೆಯಿಲ್ಲದೆ ಒದ್ದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಇದು ಕೇವಲ ನಿದ್ದೆಯ ಸಮಸ್ಯೆಯಾಗಿ ಉಳಿಯದೆ, ಜನರ ಮಾನಸಿಕ ನೆಮ್ಮದಿ, ಕೆಲಸದ ಸಾಮರ್ಥ್ಯ ಹಾಗೂ ಹೃದಯದ ಆರೋಗ್ಯದ ಮೇಲೂ ತೀವ್ರ ಪರಿಣಾಮ ಬೀರುತ್ತಿದೆ ಎಂದು ತಜ್ಞರು ಎಚ್ಚರಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Hair Wash During Periods: ಪಿರಿಯಡ್ಸ್ ಸಮಯದಲ್ಲಿ ತಲೆಸ್ನಾನ ಮಾಡಿದರೆ ರಕ್ತಸ್ರಾವ ಹೆಚ್ಚಾಗುತ್ತದೆಯೇ? – Kannada News | Periods hair wash myth does head bath increase menstrual bleeding doctors explain

ಪಿರಿಯಡ್ಸ್ (ಮುಟ್ಟಿನ ದಿನಗಳು) ಸಮಯದಲ್ಲಿ ತಲೆಸ್ನಾನ ಮಾಡಬಾರದು, ಮಾಡಿದರೆ ರಕ್ತಸ್ರಾವ ಹೆಚ್ಚಾಗುತ್ತದೆ ಅಥವಾ ಹೊಟ್ಟೆನೋವು ಜಾಸ್ತಿಯಾಗುತ್ತದೆ ಎಂಬ ನಂಬಿಕೆ ನಮ್ಮ ಸಮಾಜದಲ್ಲಿ ಬಹಳ ವರ್ಷಗಳಿಂದ ಇದೆ. ಆದರೆ ವೈದ್ಯರ ಪ್ರಕಾರ ಇದು ವೈಜ್ಞಾನಿಕ ಆಧಾರವಿಲ್ಲದ ಒಂದು ತಪ್ಪು ಕಲ್ಪನೆ. ಪಿರಿಯಡ್ಸ್ (Periods) ಸಮಯದಲ್ಲಿ ತಲೆಸ್ನಾನ ಮಾಡುವುದರಿಂದ ರಕ್ತಸ್ರಾವ ಹೆಚ್ಚಾಗುವುದಿಲ್ಲ ಮತ್ತು ಮುಟ್ಟಿನ ಚಕ್ರದ ಮೇಲೂ ಯಾವುದೇ ನೇರ ಪರಿಣಾಮ ಬೀರುವುದಿಲ್ಲ.

ವೈದ್ಯರು ಹೇಳುವಂತೆ, ಪಿರಿಯಡ್ಸ್ ಸಮಯದಲ್ಲಿ ದೇಹದಲ್ಲಿನ ಈಸ್ಟ್ರೋಜನ್ ಮತ್ತು ಪ್ರೊಜೆಸ್ಟೆರೋನ್ ಹಾರ್ಮೋನ್‌ಗಳ ಮಟ್ಟದಲ್ಲಿ ಬದಲಾವಣೆ ಆಗುತ್ತದೆ. ಈ ಹಾರ್ಮೋನ್ ಬದಲಾವಣೆಯಿಂದ ಗರ್ಭಾಶಯದ ಒಳಪದರ ಹೊರಬರುವುದೇ ಮುಟ್ಟಿನ ರಕ್ತಸ್ರಾವಕ್ಕೆ ಕಾರಣ. ತಲೆಸ್ನಾನ ಮಾಡುವುದು ಅಥವಾ ನೀರು ತಲೆಯ ಮೇಲೆ ಸುರಿಯುವುದು ಈ ಪ್ರಕ್ರಿಯೆಯನ್ನು ಬದಲಾಯಿಸುವುದಿಲ್ಲ. ಆದ್ದರಿಂದ ತಲೆಸ್ನಾನ ಮಾಡಿದರೆ ರಕ್ತಸ್ರಾವ ಹೆಚ್ಚಾಗುತ್ತದೆ ಎಂಬುದು ಕೇವಲ ಮೂಢನಂಬಿಕೆ.

ಆದರೆ ಪಿರಿಯಡ್ಸ್ ಸಮಯದಲ್ಲಿ ಕೆಲ ಮಹಿಳೆಯರಿಗೆ ದಣಿವು, ಹೊಟ್ಟೆನೋವು, ಬೆನ್ನುನೋವು, ತಲೆನೋವು ಅಥವಾ ದೇಹದಲ್ಲಿ ಸ್ವಲ್ಪ ಅಸ್ವಸ್ಥತೆ ಕಾಣಿಸಬಹುದು. ಈ ಸಮಯದಲ್ಲಿ ತುಂಬಾ ತಣ್ಣನೆಯ ನೀರಿನಿಂದ ತಲೆಸ್ನಾನ ಮಾಡಿದರೆ ಕೆಲವರಿಗೆ ಕ್ಷಣಿಕವಾಗಿ ಚಳಿ, ತಲೆನೋವು ಅಥವಾ ಅಸ್ವಸ್ಥತೆ ಹೆಚ್ಚಾದಂತೆ ಅನಿಸಬಹುದು. ಆದರೆ ಇದರಿಂದ ಮುಟ್ಟಿನ ರಕ್ತಸ್ರಾವ ಅಥವಾ ಹಾರ್ಮೋನ್‌ಗಳಲ್ಲಿ ಯಾವುದೇ ಬದಲಾವಣೆ ಉಂಟಾಗುವುದಿಲ್ಲ. ಉಗುರುಬೆಚ್ಚಗಿನ ನೀರಿನಿಂದ ಸ್ನಾನ ಮಾಡುವುದು ಹೆಚ್ಚು ಆರಾಮ ನೀಡಬಹುದು.

ವಾಟರ್ ಪಾರ್ಕ್​ನಲ್ಲಿ ಎಂಜಾಯ್ ಮಾಡುವ ಮುನ್ನ ಈ ತಪ್ಪು ಮಾಡಬೇಡಿ; ಚರ್ಮ ಮತ್ತು ಕೂದಲಿಗೆ ಹಾನಿ ಆಗಬಹುದು

ಪಿರಿಯಡ್ಸ್ ಸಮಯದಲ್ಲಿ ವೈಯಕ್ತಿಕ ಸ್ವಚ್ಛತೆ ಕಾಪಾಡಿಕೊಳ್ಳುವುದು ಬಹಳ ಮುಖ್ಯ. ತಲೆಸ್ನಾನ ಮಾಡುವುದರಿಂದ ತಲೆಯ ಚರ್ಮದಲ್ಲಿರುವ ಹೆಚ್ಚುವರಿ ಎಣ್ಣೆ ಮತ್ತು ಕೊಳೆ ದೂರವಾಗಿ ತಾಜಾತನದ ಅನುಭವ ಸಿಗುತ್ತದೆ. ಹಾರ್ಮೋನ್ ಬದಲಾವಣೆಯಿಂದ ಈ ದಿನಗಳಲ್ಲಿ ತಲೆಚರ್ಮ ಹೆಚ್ಚು ಎಣ್ಣೆಯುಕ್ತವಾಗುವ ಸಾಧ್ಯತೆಯೂ ಇದೆ. ಆದ್ದರಿಂದ ಅಗತ್ಯವಿದ್ದರೆ ಸಾಮಾನ್ಯ ರೀತಿಯಲ್ಲೇ ತಲೆಸ್ನಾನ ಮಾಡಬಹುದು. ಮೃದುವಾದ ಶ್ಯಾಂಪೂ ಬಳಸುವುದು ಮತ್ತು ಸ್ನಾನದ ನಂತರ ಕೂದಲನ್ನು ಚೆನ್ನಾಗಿ ಒರೆಸಿಕೊಳ್ಳುವುದು ಉತ್ತಮ.

ಆದರೆ ಪಿರಿಯಡ್ಸ್ ವೇಳೆ ಅತಿಯಾದ ರಕ್ತಸ್ರಾವ, ತೀವ್ರ ಹೊಟ್ಟೆನೋವು, ತಲೆಸುತ್ತು, ಅತಿಯಾದ ದೌರ್ಬಲ್ಯ ಅಥವಾ ಪ್ರತೀ ತಿಂಗಳು ಅಸಹಜ ಲಕ್ಷಣಗಳು ಕಂಡುಬಂದರೆ ಅದನ್ನು ತಲೆಸ್ನಾನಕ್ಕೆ ಸಂಬಂಧಿಸಿ ನೋಡುವ ಬದಲು ತಕ್ಷಣ ಸ್ತ್ರೀರೋಗ ತಜ್ಞರನ್ನು ಸಂಪರ್ಕಿಸಬೇಕು ಎಂದು ವೈದ್ಯರು ಸಲಹೆ ನೀಡುತ್ತಾರೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

“ಬಟ್ಟೆ ಗಂಟು ಬಿಚ್ಚಿದರೆ ರಕ್ತ ವಾಂತಿ ಮಾಡಿ ಸಾಯ್ತೀಯಾ” ಎಂದು ಹೆದರಿಸಿ ಬಂಗಾರ, ನಗದು ದೋಚಿದ ಬೆಂಗಳೂರಿನ ನಕಲಿ ಸ್ವಾಮೀಜಿ – Kannada News | Bengaluru Fraud: Woman Robbed of Rs 1.3 Lakh and Gold by Fake Swamiji for Daughter’s Problem

ಬೆಂಗಳೂರು, ಜು.18: ಮಗಳ ವೈವಾಹಿಕ ಜೀವನದಲ್ಲಿನ ಸಮಸ್ಯೆಗಳನ್ನು ವಿಶೇಷ ಪೂಜೆ ಹಾಗೂ ಮಂತ್ರ-ತಂತ್ರಗಳ ಮೂಲಕ ಪರಿಹರಿಸಿಕೊಡುವುದಾಗಿ ನಂಬಿಸಿ 37 ವರ್ಷದ ಮಹಿಳೆಯೊಬ್ಬರಿಂದ 43 ಗ್ರಾಂ ಚಿನ್ನಾಭರಣ ಹಾಗೂ 1.3 ಲಕ್ಷ ರೂ. ನಗದನ್ನು ನಕಲಿ ಸ್ವಾಮೀಜಿಯೊಬ್ಬ ದೋಚಿ ಪರಾರಿಯಾಗಿರುವ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ. ವಂಚನೆಗೊಳಗಾದ ಗೀತಾ ಎಂಬುವರು ನೀಡಿದ ದೂರಿನ ಮೇರೆಗೆ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ (FIR) ದಾಖಲಾಗಿದೆ.

ಪೊಲೀಸರು ನೀಡಿರುವ ಮಾಹಿತಿ ಪ್ರಕಾರ, ಸಂತ್ರಸ್ತೆ ಗೀತಾ ಅವರ ಕಿರಿಯ ಮಗಳು ಕೌಟುಂಬಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಳು. ಈ ವೇಳೆ ನೆರೆಹೊರೆಯವರೊಬ್ಬರು ಗೀತಾ ಅವರಿಗೆ ಶಿವಕಾಲಿ ಅಲಿಯಾಸ್ ನಿತಿನ್ ಎಂಬಾತನ ಪರಿಚಯ ಮಾಡಿಕೊಟ್ಟಿದ್ದರು. ಆತನಿಗೆ ಅಪಾರ ಆಧ್ಯಾತ್ಮಿಕ ಶಕ್ತಿಗಳಿದ್ದು, ಎಂತಹುದೇ ಕೌಟುಂಬಿಕ ಸಮಸ್ಯೆಗಳನ್ನು ಬಗೆಹರಿಸುತ್ತಾನೆ ಎಂದು ನಂಬಿಸಿದ್ದರು. ಇದನ್ನು ನಂಬಿ ಗೀತಾ ಅವರು ಆರೋಪಿಯನ್ನು ಸಂಪರ್ಕಿಸಿದಾಗ, “ನಿಮ್ಮ ಮಗಳ ಮೇಲೆ ಜೀವಕ್ಕೆ ಕಂಟಕ ತರುವಂತಹ ಮಾಟಮಂತ್ರ ಮಾಡಿಸಲಾಗಿದೆ” ಎಂದು ಶಿವಕಾಲಿ ಹೆದರಿಸಿದ್ದನು.

ಮಗಳ ಮೇಲಿರುವ ದೋಷ ನಿವಾರಣೆಗಾಗಿ ಜೂನ್ 26 ರಂದು ಸಂಜೆ 4 ಗಂಟೆಗೆ ಶಿವಕಾಲಿ, ಗೀತಾ ಅವರ ಮನೆಗೆ ಬಂದಿದ್ದನು. ಪೂಜೆ ಮಾಡುವಾಗ ಮನೆಯಲ್ಲಿ ಬೇರೆ ಯಾರೂ ಇರಬಾರದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದ್ದನು. ಮನೆಯಲ್ಲಿ ನಿಂಬೆಹಣ್ಣು, ಬೂದಿ, ಅರಿಶಿನ ಹಾಗೂ ಮೆಂತ್ಯ ಕಾಳುಗಳನ್ನು ಬಳಸಿ ಮಂತ್ರಗಳನ್ನು ಪಠಿಸುತ್ತಾ ಪೂಜೆ ಆರಂಭಿಸಿದ್ದನು.

ಪೂಜೆಯ ಮಧ್ಯದಲ್ಲಿ, “ಮಗಳ ದೋಷ ಸಂಪೂರ್ಣ ನಿವಾರಣೆಯಾಗಬೇಕಾದರೆ ಮನೆಯಲ್ಲಿರುವ ಎಲ್ಲಾ ಚಿನ್ನ ಹಾಗೂ ನಗದು ಹಣವನ್ನು ತಂದು ಪೂಜೆಗೆ ಇಡಬೇಕು” ಎಂದು ಆದೇಶಿಸಿದ್ದನು. ಇದನ್ನು ನಂಬಿದ ಗೀತಾ, ಮನೆ ನವೀಕರಣಕ್ಕಾಗಿ ಇಟ್ಟಿದ್ದ 1.3 ಲಕ್ಷ ರೂ. ನಗದು ಹಾಗೂ 43 ಗ್ರಾಂ ತೂಕದ ಚಿನ್ನದ ಸರ, ಬಳೆ ಮತ್ತು ಉಂಗುರಗಳನ್ನು ತಂದು ಆತ ಹೇಳಿದಂತೆ ಬಟ್ಟೆಯ ಗಂಟಿನಲ್ಲಿ ಇಟ್ಟಿದ್ದರು.

ಪೂಜೆ ಮಾಡುವ ನೆಪದಲ್ಲಿ ಆರೋಪಿ ಶಿವಕಾಲಿ, ತನ್ನ ಬ್ಯಾಗ್‌ನಿಂದ ಬೂದಿ ತೆಗೆದು ಗೀತಾ ಅವರ ಮುಖಕ್ಕೆ ಎರಚಿದ್ದಾನೆ. ಬಳಿಕ ಅವರ ತಲೆಯನ್ನು ಬಗ್ಗಿಸಿ ಬೆನ್ನಿನ ಮೇಲೆ ಜೋರಾಗಿ ಹೊಡೆದಿದ್ದಾನೆ. ಇದರ ತೀವ್ರತೆಗೆ ಗೀತಾ ಅವರು ಸ್ಥಳದಲ್ಲೇ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ. ಸುಮಾರು 30 ನಿಮಿಷಗಳ ನಂತರ ಅವರಿಗೆ ಪ್ರಜ್ಞೆ ಬಂದಾಗ ಸ್ವಾಮೀಜಿ ಹಾಗೂ ಪೂಜೆಯಿಟ್ಟಿದ್ದ ಎಲ್ಲಾ ಒಡವೆ, ನಗದು ನಾಪತ್ತೆಯಾಗಿರುವುದು ಬೆಳಕಿಗೆ ಬಂದಿದೆ.

ಇದನ್ನೂ ಓದಿ: ಮೈಸೂರು ಉದ್ಯಮಿಯಿಂದ 1 ಕೋಟಿ ರೂ. ಲಂಚ ಪಡೆದ ಜಿಎಸ್‌ಟಿ ಗುಪ್ತಚರ ಅಧಿಕಾರಿ!

ಗಂಟು ಬಿಚ್ಚಿದರೆ ರಕ್ತ ವಾಂತಿ ಮಾಡಿ ಸಾಯ್ತೀಯಾ

ಅದೇ ದಿನ ಸಂಜೆ ಗೀತಾ ಅವರು ಅರುಣೋದಯ ಆಸ್ಪತ್ರೆಯ ಬಳಿ ಆರೋಪಿ ಶಿವಕಾಲಿಯನ್ನು ಕಂಡು, ತಮ್ಮ ಒಡವೆ ಹಾಗೂ ಹಣದ ಬಗ್ಗೆ ಕೇಳಿದ್ದಾರೆ ಹಾಗೂ ನಕಲಿ ಸ್ವಾಮೀಜಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ವೇಳೆ ಆತ ಚಾಣಾಕ್ಷತನದಿಂದ, “ನಿಮ್ಮ ಆಭರಣಗಳನ್ನು ನಿಮ್ಮದೇ ಮನೆಯಲ್ಲಿರುವ ಬಟ್ಟೆಯ ಗಂಟಿನಲ್ಲಿ ಕಟ್ಟಿ ಇಡಲಾಗಿದೆ. ಅದನ್ನು ಎರಡು ದಿನಗಳ ಕಾಲ ಯಾರೂ ಮುಟ್ಟಬಾರದು. ಒಂದು ವೇಳೆ ಮುಂಚಿತವಾಗಿ ಬಿಚ್ಚಿದರೆ ನೀನು ರಕ್ತ ವಾಂತಿ ಮಾಡಿಕೊಂಡು ಸತ್ತುಹೋಗುತ್ತೀಯಾ” ಎಂದು ಭಯ ಹುಟ್ಟಿಸಿದ್ದಾನೆ.

ಪ್ರಾಣಭಯದಿಂದ ಗೀತಾ ಮನೆಗೆ ಮರಳಿ ಎರಡು ದಿನಗಳ ಕಾಲ ಆ ಗಂಟನ್ನು ಬಿಚ್ಚದೆ ಹಾಗೇ ಇಟ್ಟಿದ್ದಾರೆ. ಎರಡು ದಿನಗಳ ನಂತರ ಅನುಮಾನ ಬಂದು ಗಂಟನ್ನು ಬಿಚ್ಚಿ ನೋಡಿದಾಗ ಅದರಲ್ಲಿ ಬರೀ ಹುಣಿಸೇಹಣ್ಣು ಇರುವುದು ಕಂಡುಬಂದಿದೆ. ತಕ್ಷಣವೇ ಮಹಿಳೆ ಆತನ ಮೊಬೈಲ್‌ಗೆ ಕರೆ ಮಾಡಿದ್ದಾರೆ. ಆದರೆ ಫೋನ್ ಸ್ವಿಚ್ ಆಫ್ ಆಗಿತ್ತು. ಸದ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತಲೆಮರೆಸಿಕೊಂಡಿರುವ ನಕಲಿ ಸ್ವಾಮೀಜಿ ಶಿವಕಾಲಿ ಪತ್ತೆಗಾಗಿ ತೀವ್ರ ಹುಡುಕಾಟ ನಡೆಸಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 11:29 am, Sat, 18 July 26

Source link

Karavali Controversy: ‘ಕರಾವಳಿ’ ವಿವಾದ, ಬಹಿರಂಗ ಕ್ಷಮೆ ಕೇಳಿದ ರಾಜ್ ಬಿ ಶೆಟ್ಟಿ – Kannada News | Karavali movie controversy Raj B Shetty asks for apology

ಪ್ರಜ್ವಲ್ ದೇವರಾಜ್ (Prajwal Devaraj), ರಾಜ್ ಬಿ ಶೆಟ್ಟಿ (Raj B Shetty) ಸೇರಿದಂತೆ ಹಲವು ಪ್ರತಿಭಾವಂತ ನಟ, ನಟಿಯರು ನಟಿಸಿ ಗುರುದತ್ ಗಾಣಿಗಾ ನಿರ್ದೇಶನ ಮಾಡಿರುವ ‘ಕರಾವಳಿ’ ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ. ಸಿನಿಮಾದ ಶೂಟಿಂಗ್ ಆರಂಭವಾದಾಗಿನಿಂದಲೂ ಈ ಸಿನಿಮಾ ಒಂದಲ್ಲ ಒಂದು ಕಾರಣಕ್ಕೆ ಗಮನ ಸೆಳೆಯುತ್ತಲೇ ಇತ್ತು. ಆದರೆ ಬಿಡುಗಡೆ ಸನಿಹ ಬರುತ್ತಿದ್ದಂತೆ ವಿವಾದದಿಂದ ಸುದ್ದಿ ಆಗಿದೆ. ಸಿನಿಮಾದ ಟ್ರೈಲರ್ ಬಿಡುಗಡೆ ಕಾರ್ಯಕ್ರಮದಲ್ಲಿ ಪ್ರಜ್ವಲ್ ದೇವರಾಜ್ ಅಭಿಮಾನಿಗಳು ಬಂದು ಗಲಾಟೆ ಮಾಡಿದ್ದರು. ನಿರ್ದೇಶಕ ಹಾಗೂ ಗುರುದತ್ ಗಾಣಿಗಾ ನಡುವೆ ಇದ್ದ ಮನಸ್ಥಾಪ ಬಹಿರಂಗವಾಗಿದ್ದು, ಪರಸ್ಪರರು ಆರೋಪ-ಪ್ರತ್ಯಾರೋಪಗಳನ್ನು ಸಹ ಮಾಡಿಕೊಂಡಿದ್ದಾರೆ.

ಸಿನಿಮಾನಲ್ಲಿ ನಟಿಸಿರುವ ರಾಜ್ ಬಿ ಶೆಟ್ಟಿ, ನಿನ್ನೆಯಷ್ಟೆ ವಿಡಿಯೋ ಒಂದನ್ನು ಇನ್​​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದು, ಆಗಿರುವ ವಿವಾದಕ್ಕೆ ಕ್ಷಮೆ ಕೋರಿದ್ದಾರೆ. ವಿಡಿಯೋನಲ್ಲಿ ಮಾತನಾಡಿರುವ ರಾಜ್ ಬಿ ಶೆಟ್ಟಿ, ‘ಕೆಜಿಎಫ್’, ‘ಕಾಂತಾರ’ ಅಂಥಹಾ ಸಿನಿಮಾಗಳು ಯಶಸ್ವಿಯಾದಾಗ ನಮ್ಮ ಕನ್ನಡದ ಸಿನಿಮಾ ಎಂದು ಹೆಮ್ಮೆಯಿಂದ ಹೇಳಿಕೊಳ್ಳುತ್ತೇವೆ. ಹಾಗೆಯೇ ಈ ರೀತಿ ವಿವಾದಗಳು ನಡೆದಾಗಲೂ ಸಹ ಮನಸ್ಸಿಗೆ ಬಹಳ ಬೇಸರ ಆಗುತ್ತದೆ, ನೋವನ್ನು ಅನುಭವಿಸುತ್ತೇವೆ’ ಎಂದಿದ್ದಾರೆ.

ಇದನ್ನೂ ಓದಿ:‘ಕರಾವಳಿ’ ಸಿನಿಮಾ ಹಾಡಿಗೆ ಹಿರಿಯ ಗಾಯಕಿ ಬಿ ಜಯಶ್ರೀ ಧ್ವನಿ

ಮುಂದುವರೆದು ಮಾತನಾಡಿ, ‘ಇಲ್ಲಿ ಯಾರು ಸರಿ, ಯಾರು ತಪ್ಪು ಎಂಬುದು ಮುಖ್ಯವಲ್ಲ, ಕನ್ನಡ ಸಿನಿಮಾ ಪ್ರೇಕ್ಷಕರ ಮುಂದೆ ನಾವು ಹೀಗೆ ನಡೆದುಕೊಳ್ಳುತ್ತಿದ್ದೇವಲ್ಲ ಎಂಬುದು ಬೇಜಾರು ಕೊಡುವ ಸಂಗತಿ. ಚಿತ್ರರಂಗದವನಾಗಿ ನಾನು ಇಡೀ ಪ್ರೇಕ್ಷಕರ ವರ್ಗಕ್ಕೆ ದೊಡ್ಡ ಕ್ಷಮೆ ಕೇಳುತ್ತೇನೆ. ಮುಂದೆ ಹೀಗೆ ನಡೆಯದಂತೆ ನೋಡಿಕೊಳ್ಳುವ, ವರ್ತಿಸುವ ಪ್ರಯತ್ನ ಮಾಡುತ್ತೇನೆ’ ಎಂದು ರಾಜ್ ಬಿ ಶೆಟ್ಟಿ ಹೇಳಿದ್ದಾರೆ.

‘ಕರಾವಳಿ’ ಸಿನಿಮಾನಲ್ಲಿ ಪ್ರಜ್ವಲ್ ದೇವರಾಜ್ ಅವರು ನಾಯಕ, ನನ್ನದು ಅತಿಥಿ ಪಾತ್ರ. ಆದರೆ ಬಹಳ ಮುಖ್ಯವಾದ ಅತಿಥಿ ಪಾತ್ರ. ನಾವು ಮಾತ್ರವೇ ಅಲ್ಲದೆ ಹಲವು ಪ್ರತಿಭಾವಂತ ನಟ-ನಟಿಯರು ಸಿನಿಮಾನಲ್ಲಿ ಇದ್ದಾರೆ. ಸಂಪದಾ, ಮಿತ್ರ, ರಮೇಶ್ ಇಂದಿರಾ ಇನ್ನೂ ಕೆಲವರು ಸಿನಿಮಾನಲ್ಲಿದ್ದಾರೆ. ಒಂದು ಒಳ್ಳೆಯ ಸಿನಿಮಾ ಮಾಡಬೇಕು ಎಂಬ ಪ್ರಾಮಾಣಿಕ ಪ್ರಯತ್ನವನ್ನು ನಿರ್ದೇಶಕ ಗುರುದತ್ ಗಾಣಿಗಾ ಮಾಡಿದ್ದಾರೆ’ ಎಂದು ರಾಜ್ ಬಿ ಶೆಟ್ಟಿ ಹೇಳಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಹಾರ್ಮೋಜ್ಗನ್ ಪ್ರಾಂತ್ಯದಲ್ಲಿ ಒಟ್ಟು 5-6 ಸೇತುವೆಗಳು ಧ್ವಂಸ

ಟೆಹ್ರಾನ್, ಜುಲೈ 18: ಇರಾಕ್‌ನ ಕುರ್ದಿಸ್ತಾನ ಹಾಗೂ ಕುವೈತ್‌ನಲ್ಲಿರುವ ಅಮೆರಿಕದ ಸೇನಾ ನೆಲೆಗಳು ಇರಾನ್‌ನ ತೀವ್ರ ದಾಳಿಗೆ ತುತ್ತಾಗಿವೆ. ಅಮೆರಿಕ-ಇರಾನ್ ಯುದ್ಧ ತೀವ್ರಗೊಂಡಿದ್ದು, ಅಮೆರಿಕದ ದಾಳಿಗೆ ಪ್ರತಿಯಾಗಿ ಇರಾನ್ ಹೈಪರ್ಸಾನಿಕ್ ಕ್ಷಿಪಣಿಗಳು ಮತ್ತು ಡ್ರೋನ್‌ಗಳ ಮೂಲಕ ದಾಳಿಗಳನ್ನು ಮುಂದುವರೆಸಿದೆ. ಇರಾನ್‌ನ ಈ ದಾಳಿಗಳಿಂದ ಅಮೆರಿಕಾದ ಸಂವಹನ ವ್ಯವಸ್ಥೆಗಳು, ಇಂಧನ ಡಿಪೋಗಳು, ಶಸ್ತ್ರಾಸ್ತ್ರಗಳ ಸಂಗ್ರಹಣೆ ಘಟಕಗಳು ಮತ್ತು ಯಂತ್ರೋಪಕರಣಗಳ ಘಟಕಗಳು ಧ್ವಂಸವಾಗಿವೆ ಎಂದು ವರದಿಯಾಗಿದೆ.

ಇರಾಕ್‌ನ ಕುರ್ದಿಸ್ತಾನ ಪ್ರದೇಶದ ಮೇಲೆ ಇರಾನ್ ಭಾರಿ ದಾಳಿ ನಡೆಸಿದೆ. ಇರಾಕ್‌ನಲ್ಲಿರುವ ಅಮೆರಿಕಾದ ಶಸ್ತ್ರಾಸ್ತ್ರಗಳ ಗೋದಾಮುಗಳು ಮತ್ತು ಹಡಗುಗಳ ಮೇಲೆ ಇರಾನ್ ದಾಳಿ ಮಾಡಿದೆ. ಅಮೆರಿಕಾದ ತೀವ್ರ ದಾಳಿಗಳಿಗೆ ಪ್ರತಿಯಾಗಿ ಇರಾನ್ ಈ ಪ್ರತಿದಾಳಿಗಳನ್ನು ನಡೆಸಿದೆ.

ಈ ಭೀಕರ ಯುದ್ಧದಲ್ಲಿ ಇರಾನ್‌ನಲ್ಲೂ ಭಾರಿ ಪ್ರಮಾಣದ ನಷ್ಟ ಸಂಭವಿಸಿದೆ. ಅಮೆರಿಕಾ ಕೆರ್ಮನ್ ಮತ್ತು ಹಾರ್ಮೋಜ್ಗನ್ ಪ್ರಾಂತ್ಯಗಳನ್ನು ಸಂಪರ್ಕಿಸುವ ಸೇತುವೆಗಳನ್ನು ಧ್ವಂಸಗೊಳಿಸಿದೆ. ಇರಾನ್‌ನ ಹಾರ್ಮೋಜ್ಗನ್ ಪ್ರಾಂತ್ಯದ ಮೇಲೆ ಅಮೆರಿಕಾ ಕ್ಷಿಪಣಿಗಳ ಮಳೆಗರೆದಿದ್ದು, ಆ ಪ್ರಾಂತ್ಯ ಒಂದರಲ್ಲೇ ಐದಾರು ಸೇತುವೆಗಳು ಉಡೀಸ್ ಆಗಿವೆ. ಬಂದರ್ ಅಬ್ಬಾಸ್-ಖ್ಮೇರ್-ಲಾರ್ ಮಾರ್ಗದ ಗ್ರೀವೇ ಸೇತುವೆ, ಬಂದರ್ ಅಬ್ಬಾಸ್-ಖ್ಮೇರ್ ಮಾರ್ಗದ ಲ್ಯಾಟಿಡಾನ್ ಸೇತುವೆ, ಕಹೂರ್ಸ್ತಾನ್-ಲಾರ್ ಮಾರ್ಗದ ಎರಡು ಸೇತುವೆಗಳು ಮತ್ತು ಬಂದರ್ ಖ್ಮೇರ್ ಹಾಗೂ ಖ್ರೇಶರ್ ಅನ್ನು ಜೋಡಿಸುವ ಬಂದರ್ ಅಬ್ಬಾಸ್ ಸೇತುವೆ ಸೇರಿ ಪ್ರಮುಖ ಸೇತುವೆಗಳನ್ನು ಅಮೆರಿಕಾ ಸೇನೆಯು ಧ್ವಂಸಗೊಳಿಸಿದೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಮೈಸೂರು ಉದ್ಯಮಿಯಿಂದ 1 ಕೋಟಿ ರೂ. ಲಂಚ ಪಡೆದ ಜಿಎಸ್‌ಟಿ ಗುಪ್ತಚರ ಅಧಿಕಾರಿ! – Kannada News | CBI Registers Case Against Bengaluru GST Officer for Rs 1 Crore Bribe

ಮೈಸೂರು ಉದ್ಯಮಿಯಿಂದ 1 ಕೋಟಿ ರೂ. ಲಂಚ ಪಡೆದ ಜಿಎಸ್‌ಟಿ ಗುಪ್ತಚರ ಅಧಿಕಾರಿ

ಮೈಸೂರು, ಜುಲೈ 18: ಡೈರೆಕ್ಟರೇಟ್ ಜನರಲ್ ಆಫ್ ಜಿಎಸ್‌ಟಿ ಇಂಟೆಲಿಜೆನ್ಸ್ (DGGI) ಹಿರಿಯ ಅಧಿಕಾರಿಯೊಬ್ಬರ ವಿರುದ್ಧ ಕೇಂದ್ರೀಯ ತನಿಖಾ ದಳ (CBI) ಭ್ರಷ್ಟಾಚಾರದ ಪ್ರಕರಣ ದಾಖಲಿಸಿದೆ. ಈ ಅಧಿಕಾರಿ 21 ಕೋಟಿ ರೂಪಾಯಿ ಮೌಲ್ಯದ ಜಿಎಸ್‌ಟಿ ವಂಚನೆ ಪ್ರಕರಣವನ್ನು ಮುಚ್ಚಿಹಾಕಲು ಮೈಸೂರಿನ ಉದ್ಯಮಿಯೊಬ್ಬರಿಂದ ಬರೋಬ್ಬರಿ 1 ಕೋಟಿ ರೂಪಾಯಿ ಲಂಚ ಪಡೆದಿದ್ದಾರೆ ಎಂದು ಆರೋಪಿಸಲಾಗಿದೆ.

ನಡೆದಿದ್ದೇನು?

ಬೆಂಗಳೂರಿನ ಕೇಂದ್ರ ಜಿಎಸ್‌ಟಿ ಘಟಕದ ಸೀನಿಯರ್ ಇಂಟೆಲಿಜೆನ್ಸ್ ಆಫೀಸರ್ ಪ್ರವೀಣ್ ಕುಮಾರ್ ಯಾದವ್ ಈ ಪ್ರಕರಣದ ಮುಖ್ಯ ಆರೋಪಿಯಾಗಿದ್ದು, ಸದ್ಯ ಅವರನ್ನು ಅಮಾನತುಗೊಳಿಸಲಾಗಿದೆ. ಇವರು ಮೈಸೂರಿನ ಗುಜರಿ (Scrap) ಉದ್ಯಮಿ ಮೊಹಮ್ಮದ್ ಕಮ್ರಾನ್ (24) ಎಂಬುವವರಿಂದ 2025ರಲ್ಲಿ 1 ಕೋಟಿ ರೂ. ಲಂಚ ಪಡೆದಿದ್ದರು ಎನ್ನಲಾಗಿದೆ. ಎಫ್‌ಐಆರ್ ಪ್ರಕಾರ, 2025ರ ಸೆಪ್ಟೆಂಬರ್ 10ರಂದು ಉದ್ಯಮಿ ಕಮ್ರಾನ್ ಮನೆಯ ಮೇಲೆ ಜಿಎಸ್‌ಟಿ ಅಧಿಕಾರಿಗಳು ದಾಳಿ ನಡೆಸಿದ್ದರು.

ಈ ವೇಳೆ ಪ್ರವೀಣ್ ಕುಮಾರ್ ಯಾದವ್ ಪ್ರಕರಣದಿಂದ ಪಾರು ಮಾಡಲು 1 ಕೋಟಿ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಅದೇ ದಿನ ರಾತ್ರಿ 9:30 ರ ಸುಮಾರಿಗೆ ವಾಟ್ಸಾಪ್ ಮೂಲಕ ಲೊಕೇಶನ್ ಕಳುಹಿಸಿ, ಮೈಸೂರಿನ ಪಾರ್ಕ್‌ಲೇನ್ ಹೋಟೆಲ್ ಬಳಿ ಹಣ ತರುವಂತೆ ಸೂಚಿಸಿದ್ದರು. ಕಮ್ರಾನ್ ತನ್ನ ಸ್ನೇಹಿತನೊಂದಿಗೆ ಹೋಗಿ 1 ಕೋಟಿ ರೂ. ನಗದು ಇದ್ದ ಬಾಕ್ಸ್ ಅನ್ನು ಅಧಿಕಾರಿಗೆ ಹಸ್ತಾಂತರಿಸಿದ್ದರು. ಆದರೆ, ಮರುದಿನವೇ ಪ್ರವೀಣ್ ಯಾದವ್ ಮತ್ತೊಮ್ಮೆ ವಾಟ್ಸಾಪ್ ಕರೆ ಮಾಡಿ, ಕೇಸ್ ಕ್ಲೋಸ್ ಮಾಡಲು ಹೆಚ್ಚುವರಿಯಾಗಿ 4 ಕೋಟಿ ರೂಪಾಯಿಗೆ ಬೇಡಿಕೆ ಇಟ್ಟಿದ್ದರು ಎಂದು ಕಮ್ರಾನ್ ದೂರಿನಲ್ಲಿ ತಿಳಿಸಿದ್ದಾರೆ.

ಕಳೆದ ವಾರ FIR ದಾಖಲು

ಈ ಲಂಚದ ಪ್ರಕರಣದ ಬಗ್ಗೆ ಡಿಜಿಜಿಐ ನಡೆಸಿದ ಆಂತರಿಕ ಪ್ರಾಥಮಿಕ ತನಿಖೆಯಲ್ಲಿ ಪ್ರವೀಣ್ ಯಾದವ್ ಉದ್ಯಮಿ ಜೊತೆ ಸಂಪರ್ಕದಲ್ಲಿದ್ದು, ಹಿರಿಯ ಅಧಿಕಾರಿಗಳಿಗೆ ಮಾಹಿತಿ ಮುಚ್ಚಿಟ್ಟಿರುವುದು ಸಾಬೀತಾಗಿತ್ತು. ಹೀಗಾಗಿ ಅಕ್ಟೋಬರ್ 2025 ರಲ್ಲೇ ಸಿಬಿಐಗೆ ದೂರು ನೀಡಲಾಗಿತ್ತು. ಆದರೆ, ಭ್ರಷ್ಟಾಚಾರ ತಡೆ ಕಾಯ್ದೆಯಡಿ ತನಿಖೆ ನಡೆಸಲು ಕರ್ನಾಟಕ ಸರ್ಕಾರ 2026ರ ಮಾರ್ಚ್ 6 ರಂದು ಮತ್ತು ಕೇಂದ್ರ ಸರ್ಕಾರ ಜೂನ್ 8 ರಂದು ಅಧಿಕೃತ ಒಪ್ಪಿಗೆ ನೀಡಿದ ನಂತರ ಕಳೆದ ವಾರ ಸಿಬಿಐ ಈ ಎಫ್‌ಐಆರ್ ದಾಖಲಿಸಿದೆ.

ಮತ್ತೊಂದೆಡೆ, ಸುಳ್ಳು ಇನ್‌ವಾಯ್ಸ್‌ಗಳನ್ನು ಸೃಷ್ಟಿಸಿ 21 ಕೋಟಿ ರೂ. ಜಿಎಸ್‌ಟಿ ವಂಚಿಸಿದ ಆರೋಪದ ಮೇಲೆ 2025 ಸೆಪ್ಟೆಂಬರ್ 16 ರಂದು ಉದ್ಯಮಿ ಕಮ್ರಾನ್‌ನನ್ನು ಬಂಧಿಸಲಾಗಿತ್ತು. ತನ್ನ ಬಂಧನ ಕಾನೂನುಬಾಹಿರ ಎಂದು ಕಮ್ರಾನ್ ಹೈಕೋರ್ಟ್ ಮೆಟ್ಟಿಲೇರಿದ್ದರಾದರೂ, ಈ ವರ್ಷದ ಜುಲೈ 7 ರಂದು ಕರ್ನಾಟಕ ಹೈಕೋರ್ಟ್ ಆತನ ಬಂಧನ ಸರಿ ಎಂದು ಆದೇಶಿಸಿದೆ. ಹೈಕೋರ್ಟ್ ತೀರ್ಪು ಬಂದ ಮರುದಿನವೇ (ಜುಲೈ 8) ಸಿಬಿಐ ಭ್ರಷ್ಟ ಅಧಿಕಾರಿಯ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ಚುರುಕುಗೊಳಿಸಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಟೀಮ್ ಇಂಡಿಯಾ ಆಯ್ಕೆಗಾರರ ವರ್ತನೆಗೆ ಬಿಸಿಸಿಐ ತೀವ್ರ ಅಸಮಾಧಾನ! – Kannada News | BCCI unhappy with selectors over Rohit Sharma retirement buzz

ಭಾರತ ತಂಡದ ಅನುಭವಿ ಆಟಗಾರ ರೋಹಿತ್ ಶರ್ಮಾ ಅವರ ಏಕದಿನ ಕ್ರಿಕೆಟ್ ನಿವೃತ್ತಿಯ ಕುರಿತು ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ವರದಿಗಳ ಬೆನ್ನಲ್ಲೇ, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಮತ್ತು ರಾಷ್ಟ್ರೀಯ ಆಯ್ಕೆ ಸಮಿತಿ ನಡುವಿನ ಭಿನ್ನಾಭಿಪ್ರಾಯ ಬಹಿರಂಗಗೊಂಡಿದೆ. ರೋಹಿತ್ ಶರ್ಮಾ ಅವರ ಭವಿಷ್ಯದ ಕುರಿತು ಅನಗತ್ಯ ಗೊಂದಲ ಮೂಡಿಸಿರುವ ಆಯ್ಕೆಗಾರರ ಧೋರಣೆಗೆ ಬಿಸಿಸಿಐ ಹಿರಿಯ ಅಧಿಕಾರಿಗಳು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ವರದಿಯಾಗಿದೆ.

ಆಯ್ಕೆಗಾರರ ವಿರುದ್ಧ ಬಿಸಿಸಿಐ ಗರಂ ಆಗಿದ್ದೇಕೆ?

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ನೇತೃತ್ವದ ಸಮಿತಿಯು, 39 ವರ್ಷದ ರೋಹಿತ್ ಶರ್ಮಾ ಅವರಿಗೆ “ನಿಮ್ಮನ್ನು 2027ರ ಏಕದಿನ ವಿಶ್ವಕಪ್ ಯೋಜನೆಗಳಿಗೆ ಪರಿಗಣಿಸುತ್ತಿಲ್ಲ” ಎಂದು ನೇರವಾಗಿ ತಿಳಿಸಿದೆ ಎಂಬ ವರದಿಗಳು ಇತ್ತೀಚೆಗೆ ಕ್ರಿಕೆಟ್ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದ್ದವು.

ಇದರಿಂದ ಅಸಮಾಧಾನಗೊಂಡ ಬಿಸಿಸಿಐ ಉನ್ನತ ಅಧಿಕಾರಿಗಳು, ಇಂತಹ ಸೂಕ್ಷ್ಮ ವಿಷಯಗಳನ್ನು ಮಾಧ್ಯಮಗಳಿಗೆ ಸೋರಿಕೆ ಮಾಡುವ ಮೂಲಕ ಹಿರಿಯ ಆಟಗಾರನಿಗೆ ಗೌರವಯುತವಾಗಿ ವಿದಾಯ ಹೇಳಲು ಅವಕಾಶ ನೀಡದೆ, ಅನಗತ್ಯ ಒತ್ತಡ ಸೃಷ್ಟಿಸಲಾಗುತ್ತಿದೆ ಎಂದು ಆಯ್ಕೆಗಾರರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ.

ವದಂತಿಗಳಿಗೆ ಬ್ರೇಕ್!

ಇಂಗ್ಲೆಂಡ್ ವಿರುದ್ಧ ಲಾರ್ಡ್ಸ್ ಮೈದಾನದಲ್ಲಿ ನಡೆಯಲಿರುವ ಮೂರನೇ ಏಕದಿನ ಪಂದ್ಯವೇ ರೋಹಿತ್ ಶರ್ಮಾ ಅವರ ಕೊನೆಯ ಪಂದ್ಯ ಎಂಬ ವದಂತಿಗಳನ್ನು ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ಅಧಿಕೃತವಾಗಿ ನಿರಾಕರಿಸಿದ್ದಾರೆ.

ಹಿಟ್​ಮ್ಯಾನ್ ಕಠಿಣ ಶ್ರಮ!

ವೃತ್ತಿಜೀವನವನ್ನು ವಿಸ್ತರಿಸುವ ಸಲುವಾಗಿಯೇ ರೋಹಿತ್ ಶರ್ಮಾ ಇತ್ತೀಚೆಗೆ ಕಠಿಣ ಡಯಟ್ ಮತ್ತು ತರಬೇತಿಯ ಮೂಲಕ 8 ರಿಂದ 10 ಕೆಜಿ ತೂಕ ಇಳಿಸಿಕೊಂಡಿದ್ದಾರೆ. ಇಷ್ಟು ಫಿಟ್ ಆಗಿರುವಾಗ ನಿವೃತ್ತಿಯ ಬಗ್ಗೆ ಒತ್ತಡ ಹೇರುತ್ತಿರುವುದಕ್ಕೆ ಸ್ವತಃ ರೋಹಿತ್ ಕೂಡ ಬೇಸರಗೊಂಡಿದ್ದಾರೆ.

ಕೋಚ್ ಮತ್ತು ಆಯ್ಕೆಗಾರರ ಒಲವು:

ಮುಖ್ಯ ಕೋಚ್ ಗೌತಮ್ ಗಂಭೀರ್ ಮತ್ತು ಆಯ್ಕೆ ಸಮಿತಿಯು ಯುವ ಆಟಗಾರರಾದ ಯಶಸ್ವಿ ಜೈಸ್ವಾಲ್ ಅವರಿಗೆ ಆರಂಭಿಕನಾಗಿ ದೀರ್ಘಾವಧಿಯ ಅವಕಾಶ ನೀಡಲು ಬಯಸುತ್ತಿರುವುದು ಈ ಎಲ್ಲಾ ಗೊಂದಲಗಳಿಗೆ ಮೂಲ ಕಾರಣವಾಗಿದೆ.

ಬಿಸಿಸಿಐ ನಿಲುವು ಸ್ಪಷ್ಟ:

ಬಿಸಿಸಿಐ ಮೂಲಗಳ ಪ್ರಕಾರ, ರೋಹಿತ್ ಶರ್ಮಾ ಅವರಂತಹ ದಿಗ್ಗಜ ಆಟಗಾರರು ತಮ್ಮ ನಿವೃತ್ತಿಯ ನಿರ್ಧಾರವನ್ನು ತಾವೇ ತೆಗೆದುಕೊಳ್ಳುವ ಸ್ವಾತಂತ್ರ್ಯ ಹೊಂದಿರಬೇಕು. ಆಯ್ಕೆಗಾರರು ಬಲವಂತವಾಗಿ ಅವರನ್ನು ಹೊರದೂಡುವ ಪ್ರಯತ್ನ ಮಾಡಬಾರದು ಎಂಬುದು ಮಂಡಳಿಯ ಸ್ಪಷ್ಟ ನಿಲುವಾಗಿದೆ. ಹೀಗಾಗಿಯೇ ಮಂಡಳಿಯು ಮಧ್ಯಪ್ರವೇಶಿಸಿ ಸದ್ಯಕ್ಕೆ ಈ ವಿವಾದಕ್ಕೆ ತಾತ್ಕಾಲಿಕ ಬ್ರೇಕ್ ಹಾಕಿದೆ.

ಒಟ್ಟಾರೆಯಾಗಿ, ರೋಹಿತ್ ಶರ್ಮಾ ಅವರ ನಿವೃತ್ತಿಯ ವಿಷಯವು ಬಿಸಿಸಿಐ ಮತ್ತು ಆಯ್ಕೆ ಸಮಿತಿಯ ನಡುವಿನ ಶೀತಲ ಸಮರಕ್ಕೆ ಸಾಕ್ಷಿಯಾಗಿದೆ. ಆಯ್ಕೆಗಾರರು ಭವಿಷ್ಯದ ದೃಷ್ಟಿಯಿಂದ ಯುವ ಪಡೆಗೆ ಮಣೆ ಹಾಕಲು ಯೋಚಿಸುತ್ತಿದ್ದರೆ, ಮಂಡಳಿಯು ಹಿರಿಯ ಆಟಗಾರನ ಗೌರವಕ್ಕೆ ಧಕ್ಕೆಯಾಗದಂತೆ ಪರಿಸ್ಥಿತಿಯನ್ನು ನಿಭಾಯಿಸಲು ಮುಂದಾಗಿದೆ.

ಇದನ್ನೂ ಓದಿ: EA ಸ್ಪೋರ್ಟ್ಸ್ ಭವಿಷ್ಯವಾಣಿ: ಈ ಬಾರಿ ಕಪ್ ಯಾರಿಗೆ ಗೊತ್ತಾ?

ಸದ್ಯಕ್ಕೆ ಬಿಸಿಸಿಐ ಮಧ್ಯಪ್ರವೇಶದಿಂದ ವಿವಾದ ತಣ್ಣಗಾಗಿದ್ದರೂ, ಇಂಗ್ಲೆಂಡ್ ವಿರುದ್ಧದ ಮುಂದಿನ ಪಂದ್ಯಗಳಲ್ಲಿ ರೋಹಿತ್ ಶರ್ಮಾ ಅವರ ಬ್ಯಾಟಿಂಗ್ ಪ್ರದರ್ಶನ ಮತ್ತು ಮುಂಬರುವ ವೆಸ್ಟ್ ಇಂಡೀಸ್ ಸರಣಿಯ ಆಯ್ಕೆಯು ‘ಹಿಟ್‌ಮ್ಯಾನ್’ ಅವರ ಕ್ರಿಕೆಟ್ ಭವಿಷ್ಯದ ದಾರಿಯನ್ನು ನಿರ್ಧರಿಸಲಿದೆ ಎಂಬುದರಲ್ಲಿ ಯಾವುದೇ ಸಂಶಯವಿಲ್ಲ.

Source link

ವಾಟರ್ ಪಾರ್ಕ್​ನಲ್ಲಿ ಎಂಜಾಯ್ ಮಾಡುವ ಮುನ್ನ ಈ ತಪ್ಪು ಮಾಡಬೇಡಿ; ಚರ್ಮ ಮತ್ತು ಕೂದಲಿಗೆ ಹಾನಿ ಆಗಬಹುದು – Kannada News | Water park skin hair care tips before after swimming pool

ಬೇಸಿಗೆಯಲ್ಲಿ (Summer) ಅಥವಾ ವಿಶ್ರಾಂತಿಗಾಗಿ ಹಲವರು ಸ್ವಿಮ್ಮಿಂಗ್ ಪೂಲ್‌, ವಾಟರ್ ಪಾರ್ಕ್​ನಲ್ಲಿ ಆನಂದಿಸಲು ಮಾಡಲು ಇಷ್ಟಪಡುತ್ತಾರೆ. ಈಜುವುದು ಆರೋಗ್ಯಕ್ಕೆ ಉತ್ತಮ ವ್ಯಾಯಾಮವಾಗಿದ್ದರೂ, ಪೂಲ್‌ನಲ್ಲಿರುವ ಕ್ಲೋರಿನ್ ಮತ್ತು ಇತರ ರಾಸಾಯನಿಕಗಳು ಚರ್ಮ ಹಾಗೂ ಕೂದಲಿನ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಸಾಧ್ಯತೆ ಇದೆ. ಸರಿಯಾದ ಮುನ್ನೆಚ್ಚರಿಕೆ ತೆಗೆದುಕೊಳ್ಳದಿದ್ದರೆ ಚರ್ಮ ಒಣಗುವುದು, ತುರಿಕೆ, ಅಲರ್ಜಿ, ಕೂದಲು ಒಡೆಯುವುದು ಮತ್ತು ಕೂದಲು ಉದುರುವ ಸಮಸ್ಯೆಗಳು ಕಾಣಿಸಬಹುದು ಎಂದು ಚರ್ಮರೋಗ ತಜ್ಞರು ಎಚ್ಚರಿಸುತ್ತಾರೆ.

ತಜ್ಞರ ಪ್ರಕಾರ, ಸ್ವಿಮ್ಮಿಂಗ್ ಪೂಲ್‌ ಅಥವಾ ವಾಟರ್ ಪಾರ್ಕ್​ಗೆ ಇಳಿಯುವ ಮೊದಲು ದೇಹವನ್ನು ಶುದ್ಧ ನೀರಿನಿಂದ ಒದ್ದೆ ಮಾಡಿಕೊಳ್ಳುವುದು ಉತ್ತಮ. ಇದರಿಂದ ಚರ್ಮ ಮತ್ತು ಕೂದಲು ಕ್ಲೋರಿನ್ ಮಿಶ್ರಿತ ನೀರನ್ನು ಕಡಿಮೆ ಪ್ರಮಾಣದಲ್ಲಿ ಹೀರಿಕೊಳ್ಳುತ್ತವೆ. ಉದ್ದ ಕೂದಲು ಹೊಂದಿರುವವರು ಅದನ್ನು ಕಟ್ಟಿಕೊಳ್ಳುವುದು ಅಥವಾ ಸ್ವಿಮ್ಮಿಂಗ್ ಕ್ಯಾಪ್ ಧರಿಸುವುದು ಉತ್ತಮ. ಜೊತೆಗೆ, ನೀರು ತಡೆಯುವ (Water-resistant) ಸನ್‌ಸ್ಕ್ರೀನ್ ಅನ್ನು ಸುಮಾರು 20 ರಿಂದ 30 ನಿಮಿಷಗಳ ಮೊದಲು ಹಚ್ಚಿದರೆ ಸೂರ್ಯನ ಕಿರಣಗಳು ಮತ್ತು ಕ್ಲೋರಿನ್‌ನಿಂದ ಚರ್ಮಕ್ಕೆ ಆಗುವ ಹಾನಿಯನ್ನು ಕಡಿಮೆ ಮಾಡಬಹುದು.

ಅಲ್ಲಿಂದ ಹೊರಬಂದ ತಕ್ಷಣ ದೇಹ ಮತ್ತು ಕೂದಲನ್ನು ಶುದ್ಧ ನೀರಿನಿಂದ ಚೆನ್ನಾಗಿ ತೊಳೆಯಬೇಕು. ಕ್ಲೋರಿನ್ ದೀರ್ಘಕಾಲ ಚರ್ಮದ ಮೇಲೆ ಉಳಿದರೆ ಅದು ಚರ್ಮದ ಸಹಜ ತೇವಾಂಶವನ್ನು ಕಸಿದುಕೊಂಡು ಒಣಗುವಂತೆ ಮಾಡುತ್ತದೆ. ಅದೇ ರೀತಿ ಕೂದಲಿನ ಮೇಲೂ ಕ್ಲೋರಿನ್ ಉಳಿದರೆ ಕೂದಲು ನಿರ್ಜೀವವಾಗಿ, ಒಣಗಿದಂತೆ ಹಾಗೂ ಸುಲಭವಾಗಿ ಮುರಿಯುವ ಸಾಧ್ಯತೆ ಹೆಚ್ಚುತ್ತದೆ. ಆದ್ದರಿಂದ ಮೃದುವಾದ ಶಾಂಪೂ ಬಳಸಿ ಕೂದಲನ್ನು ತೊಳೆದು, ನಂತರ ಕಂಡೀಷನರ್ ಅಥವಾ ಹೇರ್ ಮಾಸ್ಕ್ ಬಳಸುವುದು ಉತ್ತಮ.

ನಿಮ್ಮ ಮನೆಯಲ್ಲಿ ದಾಸವಾಳ ಗಿಡ ಇದೆಯೇ? ವಾಸ್ತು ಪ್ರಕಾರ ಈ ದಿಕ್ಕಿನಲ್ಲಿಟ್ಟರೆ ಸಂಪತ್ತು ನಿಮ್ಮದಾಗುತ್ತದೆ!

ಸ್ನಾನದ ನಂತರ ಚರ್ಮಕ್ಕೆ ಮಾಯಿಶ್ಚರೈಸರ್ ಹಚ್ಚುವುದು ಅತ್ಯಗತ್ಯ. ಇದು ಚರ್ಮದ ಕಳೆದುಹೋದ ತೇವಾಂಶವನ್ನು ಮರಳಿ ನೀಡಲು ಸಹಾಯ ಮಾಡುತ್ತದೆ. ಚರ್ಮದಲ್ಲಿ ಕೆಂಪಾಗುವುದು, ತೀವ್ರ ತುರಿಕೆ ಅಥವಾ ಅಲರ್ಜಿ ಕಂಡುಬಂದರೆ ಅದನ್ನು ನಿರ್ಲಕ್ಷಿಸದೆ ಚರ್ಮರೋಗ ತಜ್ಞರನ್ನು ಸಂಪರ್ಕಿಸಬೇಕು.

ಈಜು ಆರೋಗ್ಯಕ್ಕೆ ಅತ್ಯುತ್ತಮ ವ್ಯಾಯಾಮಗಳಲ್ಲಿ ಒಂದಾಗಿದೆ. ಆದರೆ ಪೂಲ್ ನೀರಿನಲ್ಲಿರುವ ರಾಸಾಯನಿಕಗಳ ಪರಿಣಾಮವನ್ನು ಕಡಿಮೆ ಮಾಡಲು ಈ ಸರಳ ಕ್ರಮಗಳನ್ನು ಪಾಲಿಸಿದರೆ ನಿಮ್ಮ ಚರ್ಮ ಮತ್ತು ಕೂದಲು ಆರೋಗ್ಯಕರವಾಗಿಯೇ ಉಳಿಯುತ್ತವೆ. ಈಜಿನ ಆನಂದದ ಜೊತೆಗೆ ಸೌಂದರ್ಯವನ್ನೂ ಕಾಪಾಡಿಕೊಳ್ಳಬಹುದು.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

‘ವಾರಣಾಸಿ’: ಪ್ರಿಯಾಂಕಾ ಚೋಪ್ರಾ ಲುಕ್ ಪೋಸ್ಟರ್ ಬಿಡುಗಡೆ ಮಾಡಿದ ರಾಜಮೌಳಿ – Kannada News | SS Rajamouli shared new look poster of Priyanka Chopra from Varanasi

ಹಾಲಿವುಡ್ (Hollywood) ಮತ್ತು ಭಾರತೀಯ ಚಿತ್ರರಂಗ ಎರಡರಲ್ಲೂ ಬ್ಯುಸಿಯಾಗಿರುವ ಸ್ಟಾರ್ ನಟಿ ಪ್ರಿಯಾಂಕಾ ಚೋಪ್ರಾ ಅವರ ಹುಟ್ಟುಹಬ್ಬದ ಇಂದು (ಜುಲೈ 18). ಪ್ರಿಯಾಂಕಾ ಚೋಪ್ರಾ, ಭಾರತದ ಬಹು ನಿರೀಕ್ಷಿತ ಸಿನಿಮಾ ‘ವಾರಣಾಸಿ’ಯಲ್ಲಿ ನಾಯಕಿಯಾಗಿ ನಟಿಸುತ್ತಿದ್ದಾರೆ. ಇದೀಗ ಅವರ ಹುಟ್ಟುಹಬ್ಬದ ಪ್ರಯುಕ್ತ ನಿರ್ದೇಶಕ ರಾಜಮೌಳಿ ಅವರು ‘ವಾರಣಾಸಿ’ ಸಿನಿಮಾನಲ್ಲಿ ಪ್ರಿಯಾಂಕಾ ಚೋಪ್ರಾ ನಿರ್ವಹಿಸಿರುವ ಪಾತ್ರದ ಲುಕ್ ಅನ್ನು ರಿಲೀಸ್ ಮಾಡಿದ್ದಾರೆ. ಈ ಹಿಂದೆ ಪ್ರಿಯಾಂಕಾ ಚೋಪ್ರಾ ಹಳದಿ ಬಣ್ಣದ ಸೀರೆಯುಟ್ಟು ಸಖತ್ ಸ್ಟೈಲ್ ಆಗಿ ಗನ್ ಫೈರ್ ಮಾಡುತ್ತಿರುವ ಪೋಸ್ಟರ್ ಅನ್ನು ಬಿಡುಗಡೆ ಮಾಡಲಾಗಿತ್ತು. ಆದರೆ ಈ ಬಿಡುಗಡೆ ಮಾಡಿರುವ ಲುಕ್ ಸಖತ್ ಭಿನ್ನವಾಗಿದೆ.

ಈ ಹಿಂದೆ ಬಿಡುಗಡೆ ಮಾಡಿದ್ದ ಲುಕ್ ನೋಡಿದವರು ಪ್ರಿಯಾಂಕಾ ನಾಯಕಿ ಪಾತ್ರದಲ್ಲಿ ನಟಿಸಿದ್ದಾರೆ ಎಂದುಕೊಂಡಿದ್ದರು. ಆದರೆ ಈಗ ಬಿಡುಗಡೆ ಮಾಡಿರುವ ಲುಕ್ ನೋಡಿದರೆ ಪ್ರಿಯಾಂಕಾ ಚೋಪ್ರಾ ವಿಲನ್ ಗ್ಯಾಂಗಿನ ಸದಸ್ಯೆ ಇರಬಹುದಾ ಎಂಬ ಅನುಮಾನ ಮೂಡುತ್ತಿದೆ. ಏಕೆಂದರೆ ಅವರ ಲುಕ್ ಅಷ್ಟು ಭಿನ್ನವಾಗಿ, ಸಖತ್ ಖಡಕ್ ಆಗಿಯೂ ಇದೆ.

‘ವಾರಣಾಸಿ’ ಸಿನಿಮಾನಲ್ಲಿ ಪ್ರಿಯಾಂಕಾ ಚೋಪ್ರಾ ಅವರು ‘ಮಂದಾಕಿನಿ’ ಹೆಸರಿನ ಪಾತ್ರದಲ್ಲಿ ನಟಿಸಿದ್ದಾರೆ. ಅವರ ಪಾತ್ರವನ್ನು ‘ಬಲಶಾಲಿ, ದುರ್ಬಲ ಮತ್ತು ಮರೆಯಲಾಗದಂತಹ ಗುಣಗಳನ್ನು ಹೊಂದಿರುವ, ಪ್ರಪಂಚದಾದ್ಯಂತ ಸಂಚರಿಸುವ ಉಗ್ರ ಪಾತ್ರ’ ಎಂದು ರಾಜಮೌಳಿ ಬಣ್ಣಿಸಿದ್ದಾರೆ. ಈಗ ಬಿಡುಗಡೆ ಮಾಡಿರುವ ಪೋಸ್ಟರ್​​ನಲ್ಲಿ ಪ್ರಿಯಾಂಕಾ ಕಪ್ಪು ಬಣ್ಣದ ವಾರಿಯರ್ ರೀತಿಯ ಉಡುಗೆ ತೊಟ್ಟು, ಮೊನಚಾದ ಲುಕ್ ನೀಡುತ್ತಿದ್ದಾರೆ. ‘ಆಕೆ ನಕ್ಕರೆ ಬೆಡಗು, ನಗದಿದ್ದರೆ ಬೆಂಕಿ’ ಎಂದು ಬರೆದಿದ್ದಾರೆ ರಾಜಮೌಳಿ.

ಇದನ್ನೂ ಓದಿ:ಹೊಸ ಹಾಲಿವುಡ್ ಸಿನಿಮಾ ಘೋಷಿಸಿದ ನಟಿ ಪ್ರಿಯಾಂಕಾ ಚೋಪ್ರಾ

ಪ್ರಿಯಾಂಕಾ ಚೋಪ್ರಾ ಅವರ ಎರಡು ಚಿತ್ರಗಳನ್ನು ರಾಜಮೌಳಿ ಹಂಚಿಕೊಂಡಿದ್ದಾರೆ. ಒಂದರಲ್ಲಿ ಪ್ರಿಯಾಂಕಾ ಮೊನಚಾದ ಲುಕ್ ನೀಡುತ್ತಾ ಉಗ್ರವಾಗಿ ಕಂಡರೆ ಮತ್ತೊಂದರಲ್ಲಿ ನಗುತ್ತಾ, ಕುಣಿಯುತ್ತಾ ಸುಂದರವಾಗಿ ಕಾಣುತ್ತಿದ್ದಾರೆ. ಒಟ್ಟಾರೆ ರಾಜಮೌಳಿ ಹಂಚಿಕೊಂಡಿರುವ ಚಿತ್ರಗಳನ್ನು ನೋಡಿದರೆ ಪ್ರಿಯಾಂಕಾರ ಪಾತ್ರಕ್ಕೆ ಎರಡು ಶೇಡ್ ಇರುವುದು ಖಾತ್ರಿ ಆಗುತ್ತಿದೆ. ಬಹುಷಃ ವಿಲನ್ ಗುಂಪಿನ ಸದಸ್ಯೆ ಆಗಿದ್ದ ಪ್ರಿಯಾಂಕಾ ಆ ಬಳಿಕ ಹೀರೋ ಕಡೆ ಪಕ್ಷ ಬದಲಿಸುತ್ತಾರೆ ಎಂಬ ಊಹೆಯನ್ನು ಕಮೆಂಟ್ ಸೆಕ್ಷನ್​​ನಲ್ಲಿ ಕೆಲ ಅಭಿಮಾನಿಗಳು ಮಾಡುತ್ತಿದ್ದಾರೆ.

2019ರ ‘ದಿ ಸ್ಕೈ ಈಸ್ ಪಿಂಕ್’ ನಂತರ ಪ್ರಿಯಾಂಕಾ ಚೋಪ್ರಾ ಭಾರತದ ಸಿನಿಮಾಗಳಲ್ಲಿ ನಟಿಸಿರಲಿಲ್ಲ, ಇದೀಗ ಸುಮಾರು ಏಳು ವರ್ಷಗಳ ಬಳಿಕ ‘ವಾರಣಾಸಿ’ ಸಿನಿಮಾನಲ್ಲಿ ನಟಿಸುತ್ತಿದ್ದಾರೆ. ಇತ್ತೀಚೆಗಷ್ಟೆ ಅವರ ನಟನೆಯ ‘ದಿ ಬ್ಲಫ್’ ಹೆಸರಿನ ಹಾಲಿವುಡ್ ಆಕ್ಷನ್ ಸಿನಿಮಾ ಬಿಡುಗಡೆ ಆಗಿತ್ತು. ಇದೀಗ ಅವರು ‘ಆಮ್ರಿ’ ಹೆಸರಿನ ಮತ್ತೊಂದು ಹಾಲಿವುಡ್ ಸಿನಿಮಾನಲ್ಲಿ ನಟಿಸುತ್ತಿದ್ದಾರೆ. ಜೊತೆಗೆ ‘ಸಿಟಾಡೆಲ್’ ವೆಬ್ ಸರಣಿಯ ಹೊಸ ಸೀಸನ್​​ನಲ್ಲೂ ನಟಿಸಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

Exit mobile version