Headlines

ಭಾರತ-ಅಮೆರಿಕ ಬಾಂಧವ್ಯಕ್ಕೆ ಹೊಸ ಮೈಲಿಗಲ್ಲು: ಮೋದಿ ‘ಒಳ್ಳೆಯ ಸ್ನೇಹಿತ’ ಎಂದ ಅಧ್ಯಕ್ಷ ಟ್ರಂಪ್,ಶೀಘ್ರದಲ್ಲೇ ಐತಿಹಾಸಿಕ ವ್ಯಾಪಾರ ಒಪ್ಪಂದ – Kannada News

ವಾಷಿಂಗ್ಟನ್, ಜೂನ್ 05: ಭಾರತ ಮತ್ತು ಅಮೆರಿಕ ನಡುವಿನ ಆರ್ಥಿಕ ಹಾಗೂ ರಾಜತಾಂತ್ರಿಕ ಬಾಂಧವ್ಯವನ್ನು ಜಾಗತಿಕ ಮಟ್ಟದಲ್ಲಿ ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯುವ ಅತ್ಯಂತ ಆಶಾದಾಯಕ ಬೆಳವಣಿಗೆಯೊಂದು ಶ್ವೇತಭವನದಲ್ಲಿ  ನಡೆದಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್(Donald Trump) ಅವರು ಭಾರತದ ಪ್ರಧಾನಿ ನರೇಂದ್ರ ಮೋದಿಯವರನ್ನು ತಮ್ಮ ‘ಅತ್ಯಂತ ಆಪ್ತ ಮತ್ತು ಒಳ್ಳೆಯ ಸ್ನೇಹಿತ’ ಎಂದು ಮುಕ್ತಕಂಠದಿಂದ ಶ್ಲಾಘಿಸಿದ್ದು, ಉಭಯ ದೇಶಗಳು ಶೀಘ್ರದಲ್ಲೇ ಪರಸ್ಪರ ಪ್ರಯೋಜನಕಾರಿ ವ್ಯಾಪಾರ ಒಪ್ಪಂದಕ್ಕೆ ಬರಲಿವೆ ಎಂಬ ಬಲವಾದ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇತ್ತೀಚೆಗೆ ಆಮದು ಸುಂಕಗಳು…

Read More

ಬಾಕ್ಸ್ ಆಫೀಸ್‌ನಲ್ಲಿ ಧೂಳೆಬ್ಬಿಸಿದ ‘ಪೆದ್ದಿ’; ಒಂದೇ ದಿನಕ್ಕೆ 100 ಕೋಟಿ ರೂ. ಕಲೆಕ್ಷನ್

ಟಾಲಿವುಡ್ ನಟ ರಾಮ್ ಚರಣ್ ನಟನೆಯ ‘ಪೆದ್ದಿ’ ಸಿನಿಮಾ (Peddi Movie) ಬಾಕ್ಸ್ ಆಫೀಸ್‌ನಲ್ಲಿ ಸುನಾಮಿ ಸೃಷ್ಟಿಸಿದೆ. ಜಗತ್ತಿನಾದ್ಯಂತ ಭರ್ಜರಿಯಾಗಿ ತೆರೆಕಂಡಿರುವ ಈ ಚಿತ್ರ, ಮೊದಲ ದಿನವೇ ಗಳಿಕೆಯಲ್ಲಿ ನೂರರ ಗಡಿ ದಾಟುವ ಮೂಲಕ ಬಾಕ್ಸ್ ಆಫೀಸ್ ಸುಲ್ತಾನ್ ತಾನೇ ಎಂಬುದನ್ನು ಸಾಬೀತುಪಡಿಸಿದೆ. ರಾಮ್ ಚರಣ್ ಮಾಸ್ ಕ್ರೇಜ್‌ಗೆ ಗಳಿಕೆ ಜೊರಾಗಿಯೇ ಆಗಿದೆ. ಚಿತ್ರಮಂದಿರಗಳಲ್ಲಿ ‘ಪೆದ್ದಿ’ ಮೊದಲ ದಿನ ಅದ್ದೂರಿಯಾಗಿ ತೆರೆಕಂಡಿತು. ಹೈದರಾಬಾದ್, ಬೆಂಗಳೂರು ಸೇರಿದಂತೆ ಎಲ್ಲ ಕಡೆಗಳಲ್ಲಿ ಮುಂಜಾನೆಯ ಶೋಗಳನ್ನು ಆಯೋಜನೆ ಮಾಡಲಾಗಿತ್ತು. ಪರಿಣಾಮ ಸಿನಿಮಾ…

Read More

ನಮ್ಮ ಮೆಟ್ರೋ ಹಳದಿ ಮಾರ್ಗದಿಂದ ಪ್ರಯಾಣಿಕರ ಆರೋಗ್ಯ ಸುಧಾರಣೆ! ಐಐಎಸ್ಸಿ ಅಧ್ಯಯನದಲ್ಲಿ ಬಯಲಾಯ್ತು ಇಂಟರೆಸ್ಟಿಂಗ್ ಮಾಹಿತಿ – Kannada News

ನಮ್ಮ ಮೆಟ್ರೋ ಹಳದಿ ಮಾರ್ಗImage Credit source: tv9 ಬೆಂಗಳೂರು, ಜೂನ್ 5: ನಮ್ಮ ಮೆಟ್ರೋದ ಆರ್​ವಿ ರಸ್ತೆ–ಬೊಮ್ಮಸಂದ್ರ ನಡುವಿನ ‘ಹಳದಿ ಮಾರ್ಗ’ (Yellow Line Metro) ಕೇವಲ ಪ್ರಯಾಣದ ಸಮಯವನ್ನು ಉಳಿಸುತ್ತಿಲ್ಲ, ಬದಲಿಗೆ ಸಾರ್ವಜನಿಕರ ಆರೋಗ್ಯ ವೃದ್ಧಿಸುವಲ್ಲಿ ಸಂಜೀವಿನಿಯಾಗಿ ಕೆಲಸ ಮಾಡುತ್ತಿದೆ! ಇಂಥದ್ದೊಂದು ಅಚ್ಚರಿಯ ವಿಚಾರ ಇದೀಗ ತಿಳಿದುಬಂದಿದೆ. ಹಳದಿ ಮೆಟ್ರೋ ಮಾರ್ಗದ ಕುರಿತು ಭಾರತೀಯ ವಿಜ್ಞಾನ ಸಂಸ್ಥೆಯ (IISc) ಸುಸ್ಥಿರ ಸಾರಿಗೆ ಪ್ರಯೋಗಾಲಯವು ನಡೆಸಿರುವ ಸಮಗ್ರ ಅಧ್ಯಯನದಲ್ಲಿ ಈ ಕುರಿತು ಅತ್ಯಂತ ಆಸಕ್ತಿದಾಯಕ ಮತ್ತು…

Read More

Horoscope Today: ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಬಹಳ ಎಚ್ಚರಿಕೆಯಿಂದ ಇರಬೇಕು!

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಜೂನ್ 5, ಗುರುವಾರದ ದ್ವಾದಶ ರಾಶಿಗಳ ಸಮಗ್ರ ಭವಿಷ್ಯವನ್ನು ಪ್ರಸ್ತುತಪಡಿಸಿದ್ದಾರೆ. ಈ ದಿನ ಪರಾಭವನಾಮ ಸಂವತ್ಸರ, ಉತ್ತರಾಯಣ, ಅಧಿಕ ಜೇಷ್ಠ ಮಾಸ, ಕೃಷ್ಣ ಪಕ್ಷದ ಪಂಚಮಿ ತಿಥಿ, ಶ್ರವಣ ನಕ್ಷತ್ರ, ಬ್ರಹ್ಮಯೋಗ ಮತ್ತು ಕೌಲವಕರಣ ಇವೆ. ದಿನದ ರಾಹುಕಾಲವು ಬೆಳಗ್ಗೆ 10:41 ರಿಂದ 12:17 ರವರೆಗೆ ಇದ್ದರೆ, ಶುಭಕಾಲವು 12:18 ರಿಂದ 01:54 ರವರೆಗೆ ಇರುತ್ತದೆ. ಈ ಶುಕ್ರವಾರ ಮಹಾಲಕ್ಷ್ಮಿಯ…

Read More

Daily Devotional: ಮನೆಯ ಗೆಸ್ಟ್ ರೂಂ ಯಾವ ದಿಕ್ಕಿನಲ್ಲಿದ್ದರೆ ಉತ್ತಮ – Kannada News

ಟಿವಿ9 ಕನ್ನಡ ಡಿಜಿಟಲ್​ನ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಮನೆಯ ಗೆಸ್ಟ್ ರೂಂ ಯಾವ ದಿಕ್ಕಿನಲ್ಲಿದ್ದರೆ ಉತ್ತಮ ಎಂದು ಡಾ.ಬಸವರಾಜ ಗುರೂಜಿ ತಿಳಿಸಿದ್ದಾರೆ.ಮನೆಯಲ್ಲಿ ಅತಿಥಿಗಳು ಬಂದಾಗ ಅವರಿಗೆ ಸೂಕ್ತವಾದ ವಾತಾವರಣವನ್ನು ಒದಗಿಸುವುದು ನಮ್ಮ ಕರ್ತವ್ಯ. ಅತಿಥಿ ದೇವೋಭವ ಎಂಬ ನಾಣ್ಣುಡಿಯಂತೆ, ಅತಿಥಿಗಳನ್ನು ಸತ್ಕರಿಸುವುದು ನಮ್ಮ ಸಂಸ್ಕೃತಿಯ ಭಾಗ. ವಾಸ್ತು ಶಾಸ್ತ್ರದ ಪ್ರಕಾರ, ಅತಿಥಿ ಕೋಣೆಯನ್ನು ಸರಿಯಾದ ದಿಕ್ಕಿನಲ್ಲಿ ನಿರ್ಮಿಸುವುದು ಮನೆಯ ಸುಖಶಾಂತಿಗೆ ಅವಶ್ಯಕ. ಅತಿಥಿ ಕೋಣೆಯು ಆಗ್ನೇಯ, ಈಶಾನ್ಯ ಅಥವಾ ನೈರುತ್ಯ ದಿಕ್ಕುಗಳಲ್ಲಿ ಇರಬಾರದು. ಆಗ್ನೇಯದಲ್ಲಿ ಅತಿಥಿ ಕೋಣೆ ಇದ್ದರೆ…

Read More

ದಿನ ಭವಿಷ್ಯ: ಇಂದು ಈ ರಾಶಿಯವರು ವಿನಾಕಾರಣ ಬೆದರಿಕೆಗೆ ಒಳಗಾಗುವರು.. – Kannada News

ಮೇಷ ರಾಶಿ: ಆದಷ್ಟು ಬೇಗ ಸ್ವಾವಲಂಬಿಯಾಗುವ ನಿರ್ಧಾರ ಮಾಡುವಿರಿ. ಸಂಗಾತಿಯೊಂದಿಗೆ ನೀವು ಮಾತುಗಳನ್ನು ಸರಿಯಾಗಿ ಬಳಸುವುದು ಉತ್ತಮ. ವಿದ್ಯುತ್ ಉಪಕರಣಗಳು ನಿಮ್ಮ ಸಮಯವನ್ನು ಹಾಳು ಮಾಡಬೇಡಿ. ಪ್ರವಾಸ ಮತ್ತು ಸಾರಿಗೆ ಉದ್ಯಮಿಗಳಿಗೆ ಉತ್ತಮ ಲಾಭ ದೊರೆಯುವ ಸಾಧ್ಯತೆ ಇದೆ. ಇಂದು ಹೊಸ ವಸ್ತುಗಳನ್ನು ಖರೀದಿಸುವ ಉತ್ಸಾಹದಲ್ಲಿ ಇರುವಿರಿ. ಧೈರ್ಯದಿಂದ ಹೊಸ ಸವಾಲುಗಳನ್ನು ಎದುರಿಸುವಿರಿ. ಭೂಮಿ ಮತ್ತು ಆಸ್ತಿಗೆ ಸಂಬಂಧಿಸಿದ ಕೆಲಸಗಳು ಇರುತ್ತವೆ. ವೃಷಭ ರಾಶಿ: ಸಾಲದ ವಿಚಾರ ಬಂದರೆ ಮೌನವಹಿಸಿ, ಎದ್ದು ಹೋಗಿ ಪಿತ್ರಾರ್ಜಿತ ಸಂಪತ್ತು ನಿಮಗೆ…

Read More

ಕ್ಯಾಮೆರಾ ಎದುರಲ್ಲೇ ನೋಟಿಸ್ ಹರಿದು ಸಲ್ಮಾನ್ ಖಾನ್ಗೆ ಸವಾಲು ಹಾಕಿದ ನಿರ್ಮಾಪಕ – Kannada News

ಬಾಲಿವುಡ್ ಸೂಪರ್‌ಸ್ಟಾರ್ ಸಲ್ಮಾನ್ ಖಾನ್ ಹಾಗೂ ಅವರ ಕಾನೂನು ತಂಡವು ‘ಕಾಲಾ ಹಿರನ್’ (Kala Hiran) ಚಿತ್ರದ ನಿರ್ಮಾಪಕ ಅಮಿತ್ ಜಾನಿ ಅವರಿಗೆ ಲೀಗಲ್ ನೋಟಿಸ್ ಕಳುಹಿಸಿದ ಬೆನ್ನಲ್ಲೇ ಈ ವಿವಾದ ಈಗ ತೀವ್ರ ಸ್ವರೂಪ ಪಡೆದುಕೊಂಡಿದೆ. ನಿರ್ಮಾಪಕ ಅಮಿತ್ ಜಾನಿ (Amit Jani) ಅವರು ಕ್ಯಾಮೆರಾದ ಮುಂಭಾಗದಲ್ಲೇ ಸಲ್ಮಾನ್ ಖಾನ್ ಕಳುಹಿಸಿದ್ದ ನೋಟಿಸ್ ಹರಿದು ಹಾಕುವ ಮೂಲಕ ಆಕ್ರೋಶ ಹೊರಹಾಕಿದ್ದಾರೆ. ಅಷ್ಟೇ ಅಲ್ಲದೆ, ಸಲ್ಮಾನ್ ಖಾನ್ (Salman Khan) ಅಭಿಮಾನಿಗಳಿಂದ ತಮಗೆ ಕೊಲೆ ಬೆದರಿಕೆಗಳು ಬರುತ್ತಿವೆ…

Read More

ಜಾಗತಿಕ ಬಿಕ್ಕಟ್ಟುಗಳಿಗೆ ಭಾರತ ಒಂದೇ ಪರಿಹಾರ; ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿಕೆ – Kannada News

ನಾಗ್ಪುರ, ಜೂನ್ 4: “ಜಗತ್ತು ಪ್ರಸ್ತುತ ಅನೇಕ ಸವಾಲುಗಳನ್ನು ಎದುರಿಸುತ್ತಿದ್ದು, ಇಂದಿನ ಜಾಗತಿಕ ಪರಿಸರಕ್ಕೆ ಭಾರತದ ಸಾಂಪ್ರದಾಯಿಕ ಮತ್ತು ಸುಸ್ಥಿರ ಅಭಿವೃದ್ಧಿಯ ಮಾದರಿಯ ಅಗತ್ಯವಿದೆ. ಈಗ ಭಾರತದ ಸಮಯ ಬಂದಿದೆ. ಜಾಗತಿಕ ಬಿಕ್ಕಟ್ಟುಗಳಿಗೆ ಭಾರತ ಒಂದೇ ಪರಿಹಾರ” ಎಂದು ಆರ್‌ಎಸ್‌ಎಸ್ (RSS) ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ. ನಾಗ್ಪುರದಲ್ಲಿ ನಡೆದ ಆರ್​ಎಸ್​ಎಸ್ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಜಗತ್ತಿಗೆ ಸರಿಯಾದ ದಿಕ್ಸೂಚಿ ತೋರಿಸುವ ಸಾಮರ್ಥ್ಯ ಭಾರತಕ್ಕಿದೆ ಎಂದು ಹೆಮ್ಮೆಯಿಂದ ಹೇಳಿದ್ದಾರೆ. ಪ್ರಸ್ತುತ ಜಗತ್ತು ಭೌತಿಕವಾಗಿ ಪ್ರಗತಿ ಸಾಧಿಸುತ್ತಿದ್ದರೂ, ಶಾಂತಿ…

Read More

ಮುಂಬರುವ ಎರಡು ಟಿ20 ಸರಣಿಗಳಿಂದ ಹಾರ್ದಿಕ್ ಪಾಂಡ್ಯಗೆ ಕೋಕ್? – Kannada News

ಐರ್ಲೆಂಡ್ ಮತ್ತು ಇಂಗ್ಲೆಂಡ್ ಪ್ರವಾಸಕ್ಕೆ ಟೀಂ ಇಂಡಿಯಾದ (Team India) ಆಯ್ಕೆ ಜೂನ್ 6 ರಂದು ನಡೆಯಲಿದೆ ಎಂದು ವರದಿಯಾಗಿದೆ. ಆದಾಗ್ಯೂ, ಈ ಎರಡು ಪ್ರವಾಸಗಳಿಗೆ ಹಾರ್ದಿಕ್ ಪಾಂಡ್ಯ (Hardik Pandya) ಅವರನ್ನು ಆಯ್ಕೆ ಮಾಡುವ ಸಾಧ್ಯತೆ ಕಡಿಮೆ. ಅಂದರೆ, ಅವರನ್ನು ಭಾರತದ ಟಿ20 ತಂಡದಿಂದ ಕೈಬಿಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಹಾರ್ದಿಕ್ ಅವರನ್ನು ಟಿ20 ತಂಡದಿಂದ ಕೈಬಿಡುವುದರ ಹಿಂದಿನ ಉದ್ದೇಶ ಏಕದಿನ ವಿಶ್ವಕಪ್‌. ಮುಂದಿನ ವರ್ಷ ದಕ್ಷಿಣ ಆಫ್ರಿಕಾದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್‌ನಲ್ಲಿ ಅನುಭವಿ…

Read More

‘ಬಾಸ್’ ಸಿನಿಮಾ ನಿರ್ದೇಶಕನಿಗೆ ವಾಣಿಜ್ಯ ಮಂಡಳಿ ನೋಟಿಸ್ ನೀಡಿದ್ದು ಯಾಕೆ? – Kannada News

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಹೋಲಿಕೆ ಇರುವಂತಹ ಕಥೆ ಇದೆ ಎಂಬ ಕಾರಣಕ್ಕೆ ‘ಬಾಸ್’ (Boss) ಚಿತ್ರವು ವಿವಾದಕ್ಕೆ ಕಾರಣ ಆಗಿದೆ. ನಟ ದರ್ಶನ್ ಅವರು ಈ ಸಿನಿಮಾ ತಂಡಕ್ಕೆ ನೋಟಿಸ್ ನೀಡಿದ್ದರು. ಆದರೆ ಚಿತ್ರದ ಮೇಲಿದ್ದ ತಡೆಯನ್ನು ನ್ಯಾಯಾಲಯ ತೆರವು ಮಾಡಿದೆ. ಹಾಗಾಗಿ ನಿರ್ದೇಶಕ ಲವ ಅವರು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ. ವಾಣಿಜ್ಯ ಮಂಡಳಿಯಿಂದ ತಮಗೆ ಬಂದ ನೋಟಿಸ್ ಬಗ್ಗೆಯೂ ಅವರು ಮಾತನಾಡಿದ್ದಾರೆ. ‘ವಕೀಲರಾದ ನೀವು ಸಿನಿಮಾ ಮಾಡಿದ್ದೀರಿ. ನಿಮ್ಮ ಮೇಲೆ ಯಾಕೆ ಕ್ರಮ ತೆಗೆದುಕೊಳ್ಳಬಾರದು…

Read More