ಹೊಸ ಕಾರು ಖರೀದಿ ಮಾಡಿದ ಮಲ್ಲಮ್ಮ; ಅನೇಕರಿಗೆ ಮಾದರಿಯಾದ ಬಿಬ್ ಬಾಸ್ ಸ್ಪರ್ಧಿ – Kannada News

ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್ ಹಾಗೂ ಬಿಗ್ ಬಾಸ್ ಖ್ಯಾತಿಯ ಮಲ್ಲಮ್ಮ ಅವರು (Mallama) ತಮ್ಮ ಸಾಧನೆಯ ಮುಕುಟಕ್ಕೆ ಮತ್ತೊಂದು ಹೊಸ ಗರಿ ಸೇರಿಸಿಕೊಂಡಿದ್ದಾರೆ. ಸಾಮಾಜಿಕ ಜಾಲತಾಣಗಳ ಮೂಲಕ ಅಪಾರ ಜನಪ್ರಿಯತೆ ಗಳಿಸಿ, ನಂತರ ಬಿಗ್ ಬಾಸ್ ಕನ್ನಡ ರಿಯಾಲಿಟಿ ಶೋ ಅವಕಾಶ ಪಡೆದರು. ಇದರ ಮೂಲಕ ಮನೆಮಾತಾಗಿರೋ ಮಲ್ಲಮ್ಮ ಈಗ ಹೊಸ ಕಾರೊಂದನ್ನು ಖರೀದಿಸುವ ಮೂಲಕ ತಮ್ಮ ಹೊಸ ಯಶಸ್ಸನ್ನು ಸಂಭ್ರಮಿಸಿದ್ದಾರೆ.

ಈ ಸಂತಸದ ಕ್ಷಣವನ್ನು ಮಲ್ಲಮ್ಮ ತಮ್ಮ ಅಧಿಕೃತ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಅವರು ಖರೀದಿ ಮಾಡಿದ್ದು ಮಾರುತಿ ಸುಜುಕಿ ಡಿಸೈರ್ ಟೂರ್ ಕಾರು. ಹೊಸ ಕಾರಿನ ವಿಡಿಯೋ ವೈರಲ್ ಆಗುತ್ತಿದೆ. ವಿಡಿಯೋದಲ್ಲಿ ಮಲ್ಲಮ್ಮ ಅವರು ತಮ್ಮ ಕುಟುಂಬಸ್ಥರು ಹಾಗೂ ಆಪ್ತರೊಂದಿಗೆ ಸೇರಿ ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸಿ, ಕೇಕ್ ಕತ್ತರಿಸುವ ಮೂಲಕ ಕಾರನ್ನು ಖರೀದಿ ಮಾಡಿದ್ದಾರೆ.
ಮಧ್ಯಮ ವರ್ಗದ ಹಿನ್ನೆಲೆಯಿಂದ ಬಂದು, ಇಂದು ಸ್ವಂತ ಪರಿಶ್ರಮದಿಂದ ಹೊಸ ಕಾರು ಖರೀದಿಸಿರುವ ಅವರ ಈ ಸಾಧನೆಗೆ ಅಭಿಮಾನಿಗಳಿಂದ ಹಾಗೂ ಸೋಶಿಯಲ್ ಮೀಡಿಯಾ ಬಳಕೆದಾರರಿಂದ ವ್ಯಾಪಕ ಪ್ರಶಂಸೆ ಮತ್ತು ಹಾರೈಕೆಗಳು ಹರಿದುಬರುತ್ತಿವೆ.

ಮಲ್ಲಮ್ಮ ಅವರ ಲೈಫ್ ಜರ್ನಿ ನಿಜಕ್ಕೂ ಅನೇಕರಿಗೆ ಪ್ರೇರಣೆಯಾಗಿದೆ. ಆರಂಭದಲ್ಲಿ ಇನ್‌ಸ್ಟಾಗ್ರಾಮ್, ಯೂಟ್ಯೂಬ್‌ನಂತಹ ಸೋಶಿಯಲ್ ಮೀಡಿಯಾ ಪ್ಲಾಟ್‌ಫಾರ್ಮ್‌ಗಳಲ್ಲಿ ತಮ್ಮ ವಿಶಿಷ್ಟ ಕಂಟೆಂಟ್, ಹಳ್ಳಿ ಸೊಗಡಿನ ಮಾತುಗಳು ಹಾಗೂ ರೀಲ್ಸ್‌ಗಳ ಮೂಲಕ ನೆಟ್ಟಿಗರ ಗಮನ ಸೆಳೆದಿದ್ದರು. ಇವರ ಜನಪ್ರಿಯತೆಯನ್ನು ಗುರುತಿಸಿ ಬಿಗ್ ಬಾಸ್ ಶೋಗೆ ಸ್ಪರ್ಧಿಯಾಗಿ ಬರುವ ದೊಡ್ಡ ಅವಕಾಶ ಸಿಕ್ಕಿತು. ಬಿಗ್ ಬಾಸ್ ಮನೆಯಲ್ಲಿ ತಮ್ಮ ನೈಜ ವ್ಯಕ್ತಿತ್ವ, ಮುಗ್ಧತೆ ಹಾಗೂ ಚುರುಕಾದ ಆಟದ ಮೂಲಕ ಕನ್ನಡಿಗರ ಮನ ಗೆದ್ದು ದೊಡ್ಡ ಮಟ್ಟದ ಹೆಸರು ಮಾಡಿದರು.

ಇದನ್ನೂ ಓದಿ: ‘ವಿನಾಶ ಕಾಲೆ’ ಸಿನಿಮಾಗೆ ಸಾಥ್ ನೀಡಿದ ಮಲ್ಲಮ್ಮ, ಡಾಗ್ ಸತೀಶ್, ಕರಿಬಸಪ್ಪ

ಬಿಗ್ ಬಾಸ್‌ನಿಂದ ಹೊರಬಂದ ನಂತರವೂ ತಮ್ಮ ಕ್ರಿಯೇಟಿವಿಟಿಯನ್ನು ಮುಂದುವರಿಸಿರುವ ಮಲ್ಲಮ್ಮ, ಇಂದು ಆರ್ಥಿಕವಾಗಿ ಸ್ವಾವಲಂಬಿಯಾಗಿ ಈ ಮಟ್ಟಕ್ಕೆ ಬೆಳೆದು ನಿಂತಿರುವುದು ಅವರ ಕಠಿಣ ಪರಿಶ್ರಮಕ್ಕೆ ಸಿಕ್ಕ ಪ್ರತಿಫಲವಾಗಿದೆ. ‘ಕನಸುಗಳನ್ನು ಬೆನ್ನಟ್ಟಿದರೆ ಯಶಸ್ಸು ಖಂಡಿತ ಸಿಗುತ್ತದೆ’ ಎಂಬುದಕ್ಕೆ ಮಲ್ಲಮ್ಮ ಅವರ ಈ ಹೊಸ ಕಾರು ಖರೀದಿಯ ಕ್ಷಣವೇ ಸಾಕ್ಷಿಯಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Karnataka Weather Forecast: ರಾಜ್ಯದ ಹಲವೆಡೆ ವರುಣನ ಅಬ್ಬರ, ವಿವಿಧ ಜಿಲ್ಲೆಗಳಿಗೆ ಆರೆಂಜ್ ಹಾಗೂ ಯೆಲ್ಲೋ ಅಲರ್ಟ್ ಘೋಷಣೆ! – Kannada News

ರಾಜ್ಯದ ಹಲವೆಡೆ ವರುಣನ ಅಬ್ಬರImage Credit source: telugu.hindustantimes.com

ಬೆಂಗಳೂರು, ಜೂನ್ 05: ರಾಜ್ಯದಲ್ಲಿ ಮುಂಗಾರು (Weather)ಮಳೆ ಚುರುಕುಗೊಂಡಿದ್ದು, ಮುಂದಿನ ಕೆಲವು ದಿನಗಳ ಕಾಲ ಕರ್ನಾಟಕದಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಪ್ರಬಲ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಹವಾಮಾನ ಇಲಾಖೆಯು 7 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಜಾರಿಗೊಳಿಸಿದೆ.

ಮುಖ್ಯಾಂಶಗಳು

  • ಕರ್ನಾಟಕದ ಏಳು ಜಿಲ್ಲೆಗಳಿಗೆ ಹವಾಮಾನ ಇಲಾಖೆಯಿಂದ ಆರೆಂಜ್ ಅಲರ್ಟ್ ಘೋಷಣೆ.
  • ಕರಾವಳಿ ಜಿಲ್ಲೆಗಳಲ್ಲಿ ಅತ್ಯಂತ ಭಾರೀ ಮಳೆ ಮುನ್ಸೂಚನೆ; ಮೀನುಗಾರರಿಗೆ ಎಚ್ಚರಿಕೆ.
  • ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಬಿರುಗಾಳಿ ಸಹಿತ ಸಾಧಾರಣ ಮಳೆ.

ಕರಾವಳಿಯಲ್ಲಿ ವರುಣನ ಅಬ್ಬರ!

ರಾಜ್ಯದ ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಅತ್ಯಂತ ಭಾರೀ ಮಳೆಯಾಗುವ (115.6mm ನಿಂದ 204.4mm ವರೆಗೆ) ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಈ ಮೂರೂ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್’ ಘೋಷಿಸಲಾಗಿದೆ. ಸಮುದ್ರ ತೀರದಲ್ಲಿ ಗಾಳಿಯ ವೇಗ ಹೆಚ್ಚಿರುವುದರಿಂದ ಮೀನುಗಾರರು ಎಚ್ಚರಿಕೆಯಿಂದ ಇರಲು ಸೂಚಿಸಲಾಗಿದೆ.

ಬಿರುಗಾಳಿ ಸಹಿತ ಮಳೆ

ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಕಲಬುರಗಿ ಮತ್ತು ವಿಜಯಾಪುರ ಜಿಲ್ಲೆಗಳಿಗೂ ಆರೆಂಜ್ ಅಲರ್ಟ್ ನೀಡಲಾಗಿದ್ದು, ಇಲ್ಲಿ ಗಂಟೆಗೆ 40-50 ಕಿಲೋಮೀಟರ್ ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆಯಿದೆ. ಇದರೊಂದಿಗೆ ಧಾರವಾಡ, ಗದಗ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದ್ದು, ಯೆಲ್ಲೋ ಅಲರ್ಟ್ ಪ್ರಕಟಿಸಲಾಗಿದೆ. ಇನ್ನುಳಿದಂತೆ ಬಿದರ್, ಹಾವೇರಿ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಬೆಂಗಳೂರಿಗೂ ಮಳೆ ಮುನ್ಸೂಚನೆ

ದಕ್ಷಿಣ ಒಳನಾಡಿನ ಬಳ್ಳಾರಿ, ವಿಜಯನಗರ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಭಾರೀ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದ್ದು, ಯೆಲ್ಲೋ ಅಲರ್ಟ್ ಜಾರಿಯಲ್ಲಿದೆ. ಇನ್ನುಳಿದಂತೆ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಮತ್ತು ತುಮಕೂರು ಜಿಲ್ಲೆಗಳ ಹಲವೆಡೆ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದ್ದು, ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಕರ್ನಾಟಕದ ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಭಾರತ-ಅಮೆರಿಕ ಬಾಂಧವ್ಯಕ್ಕೆ ಹೊಸ ಮೈಲಿಗಲ್ಲು: ಮೋದಿ ‘ಒಳ್ಳೆಯ ಸ್ನೇಹಿತ’ ಎಂದ ಅಧ್ಯಕ್ಷ ಟ್ರಂಪ್,ಶೀಘ್ರದಲ್ಲೇ ಐತಿಹಾಸಿಕ ವ್ಯಾಪಾರ ಒಪ್ಪಂದ – Kannada News

ವಾಷಿಂಗ್ಟನ್, ಜೂನ್ 05: ಭಾರತ ಮತ್ತು ಅಮೆರಿಕ ನಡುವಿನ ಆರ್ಥಿಕ ಹಾಗೂ ರಾಜತಾಂತ್ರಿಕ ಬಾಂಧವ್ಯವನ್ನು ಜಾಗತಿಕ ಮಟ್ಟದಲ್ಲಿ ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯುವ ಅತ್ಯಂತ ಆಶಾದಾಯಕ ಬೆಳವಣಿಗೆಯೊಂದು ಶ್ವೇತಭವನದಲ್ಲಿ  ನಡೆದಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್(Donald Trump) ಅವರು ಭಾರತದ ಪ್ರಧಾನಿ ನರೇಂದ್ರ ಮೋದಿಯವರನ್ನು ತಮ್ಮ ‘ಅತ್ಯಂತ ಆಪ್ತ ಮತ್ತು ಒಳ್ಳೆಯ ಸ್ನೇಹಿತ’ ಎಂದು ಮುಕ್ತಕಂಠದಿಂದ ಶ್ಲಾಘಿಸಿದ್ದು, ಉಭಯ ದೇಶಗಳು ಶೀಘ್ರದಲ್ಲೇ ಪರಸ್ಪರ ಪ್ರಯೋಜನಕಾರಿ ವ್ಯಾಪಾರ ಒಪ್ಪಂದಕ್ಕೆ ಬರಲಿವೆ ಎಂಬ ಬಲವಾದ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇತ್ತೀಚೆಗೆ ಆಮದು ಸುಂಕಗಳು ಮತ್ತು ಜಾಗತಿಕ ಕಾರ್ಮಿಕ ಮಾನದಂಡಗಳ ಕುರಿತು ಉಂಟಾಗಿದ್ದ ಸಣ್ಣಪುಟ್ಟ ತಾಂತ್ರಿಕ ಭಿನ್ನಾಭಿಪ್ರಾಯಗಳ ನಡುವೆಯೂ, ಟ್ರಂಪ್ ಅವರ ಈ ಸೌಹಾರ್ದಯುತ ಹೇಳಿಕೆಯು ಭಾರತ-ಯುಎಸ್ ವ್ಯಾಪಾರ ಮಾತುಕತೆಗೆ ಹೊಸ ಚೈತನ್ಯ ನೀಡಿದೆ.

ಪ್ರಧಾನಿ ಮೋದಿ ಮೇಲಿನ ಗೌರವ ಒಪ್ಪಂದಕ್ಕೆ ದಾರಿ
ಶ್ವೇತಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅಧ್ಯಕ್ಷ ಡೊನಾಲ್ಡ್​ ಟ್ರಂಪ್, ಭಾರತ ಮತ್ತು ಅಮೆರಿಕ ನಡುವಿನ ದ್ವಿಪಕ್ಷೀಯ ಸಂಬಂಧಗಳು ಪ್ರಸ್ತುತ ಉನ್ನತ ಮಟ್ಟದಲ್ಲಿವೆ ಎಂದು ಹೆಮ್ಮೆಯಿಂದ ಹೇಳಿದ್ದಾರೆ.
ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಮಾತನಾಡಿ ಪ್ರಧಾನಿ ಮೋದಿಯೆಂದರೆ ತನಗೆ ತುಂಬಾ ಇಷ್ಟ, ಅವರು ನನ್ನ ಒಳ್ಳೆಯ ಸ್ನೇಹಿತ, ನಮ್ಮಿಬ್ಬರ ನಡುವೆ ಒಳ್ಳೆಯ ಹೊಂದಾಣಿಕೆಯೂ ಇದೆ. ಹಳೆಯ ವ್ಯಾಪಾರ ನೀತಿಗಳಲ್ಲಿ ಅಮೆರಿಕಕ್ಕೆ ಕೆಲವು ಸವಾಲುಗಳಿದ್ದಿದ್ದು ನಿಜ, ಆದರೆ ಪ್ರಧಾನಿ ಮೋದಿ ಮೇಲಿನ ಗೌರವದಿಂದಾಗಿ ನಾವಿಬ್ಬರೂ ಒಟ್ಟಾಗಿ ಕುಳಿತು ಶೀಘ್ರದಲ್ಲೇ ಒಂದು ಐತಿಹಾಸಿಕ ಒಪ್ಪಂದವನ್ನು ಅಂತಿಮಗೊಳಿಸಲಿದ್ದೇವೆ ಎಂದು ಹೇಳಿದ್ದಾರೆ.

ಮತ್ತಷ್ಟು ಓದಿ: ಟ್ರಂಪ್ ಸಂಧಾನ ಯಶಸ್ವಿ: ಇಸ್ರೇಲ್ ಮತ್ತು ಹಿಜ್ಬುಲ್ಲಾ ನಡುವೆ ಶಾಂತಿ ಒಪ್ಪಂದ, ಮಿಲಿಟರಿ ಕಾರ್ಯಾಚರಣೆ ಸ್ಥಗಿತ

ವಾಣಿಜ್ಯ ಮತ್ತು ಆರ್ಥಿಕ ಸಂಬಂಧಗಳನ್ನು ಬಲಪಡಿಸಲು ಅಮೆರಿಕದ ಉನ್ನತ ಮಟ್ಟದ ನಿಯೋಗವೊಂದು ಇತ್ತೀಚೆಗೆ ನವದೆಹಲಿಗೆ ಭೇಟಿ ನೀಡಿ ಭಾರತದ ವಾಣಿಜ್ಯ ಸಚಿವಾಲಯದೊಂದಿಗೆ ಸುದೀರ್ಘ ಚರ್ಚೆ ನಡೆಸಿದೆ. ಈ ಮಾತುಕತೆಗಳು ಅತ್ಯಂತ ವಾಸ್ತವಿಕ ಮತ್ತು ಸಹಕಾರದ ಮನೋಭಾವದಿಂದ ಕೂಡಿದ್ದವು ಎಂದು ಭಾರತ ಸರ್ಕಾರ ತಿಳಿಸಿದೆ.

ಹಾರ್ಲೆ-ಡೇವಿಡ್ಸನ್ ಮತ್ತು ಸುಂಕದ ಸಮತೋಲನ: ಹಿಂದೆ ಹಾರ್ಲೆ-ಡೇವಿಡ್ಸನ್ ಮೋಟಾರ್ ಸೈಕಲ್‌ಗಳ ಆಮದು ಮತ್ತು ಭಾರತೀಯ ಬ್ರಾಂಡ್‌ಗಳ ಮೇಲಿನ ಸುಂಕಗಳ ಕುರಿತು ಇದ್ದ ಅಸಮತೋಲನವನ್ನು ನಿವಾರಿಸಿ, ಎರಡೂ ದೇಶಗಳ ಮಾರುಕಟ್ಟೆಗಳಿಗೆ ಸಮಾನ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಹೊಸ ಒಪ್ಪಂದವು ರೂಪುಗೊಳ್ಳುತ್ತಿದೆ. ಇದು ಉಭಯ ದೇಶಗಳ ಕೈಗಾರಿಕಾ ಕ್ಷೇತ್ರಕ್ಕೆ ಭಾರಿ ಆರ್ಥಿಕ ಲಾಭ ತರಲಿದೆ.

ಕಳೆದ ಫೆಬ್ರವರಿಯಲ್ಲಿ ಉಭಯ ನಾಯಕರು ದೂರವಾಣಿ ಸಂಭಾಷಣೆಯ ಮೂಲಕ ದ್ವಿಪಕ್ಷೀಯ ವ್ಯಾಪಾರ ಒಪ್ಪಂದದ (BTA) ಮೊದಲ ಹಂತದ ಚೌಕಟ್ಟನ್ನು ಯಶಸ್ವಿಯಾಗಿ ಸಿದ್ಧಪಡಿಸಿದ್ದರು. ಅದರಂತೆ ಭಾರತೀಯ ಸರಕುಗಳ ಮೇಲಿನ ಸುಂಕವನ್ನು ಶೇಕಡಾ 50 ರಿಂದ ಶೇಕಡಾ 18 ಕ್ಕೆ ಇಳಿಸಲು ಅಮೆರಿಕ ಒಪ್ಪಿಕೊಂಡಿತ್ತು.

ಯುಎಸ್ ಸುಪ್ರೀಂ ಕೋರ್ಟ್‌ನ ತಾಂತ್ರಿಕ ತೀರ್ಪು ಮತ್ತು ಇತ್ತೀಚಿನ ಸುಂಕ ನೀತಿಗಳ ಬದಲಾವಣೆಯ ನಂತರವೂ, ಭಾರತ ಮತ್ತು ಅಮೆರಿಕದ ರಾಜತಾಂತ್ರಿಕ ಅಧಿಕಾರಿಗಳು ಹೊಸ ಸನ್ನಿವೇಶಕ್ಕೆ ತಕ್ಕಂತೆ ಒಪ್ಪಂದವನ್ನು ಮರುರೂಪಿಸುತ್ತಿದ್ದಾರೆ. ಮುಂಬರುವ ಫ್ರಾನ್ಸ್ ಜಿ7 ಶೃಂಗಸಭೆಯಲ್ಲೂ ಉಭಯ ನಾಯಕರು ಭೇಟಿಯಾಗುತ್ತಿರುವುದರಿಂದ, ಈ ವ್ಯಾಪಾರ ಒಪ್ಪಂದವು ಜಾಗತಿಕ ಆರ್ಥಿಕ ಸ್ಥಿರತೆಗೆ ಹೊಸ ದಿಕ್ಸೂಚಿಯಾಗಲಿದೆ ಎಂದು ಅಂತಾರಾಷ್ಟ್ರೀಯ ಆರ್ಥಿಕ ತಜ್ಞರು ಆಶಾವಾದ ವ್ಯಕ್ತಪಡಿಸಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On – 7:19 am, Fri, 5 June 26

Source link

ಬಾಕ್ಸ್ ಆಫೀಸ್‌ನಲ್ಲಿ ಧೂಳೆಬ್ಬಿಸಿದ ‘ಪೆದ್ದಿ’; ಒಂದೇ ದಿನಕ್ಕೆ 100 ಕೋಟಿ ರೂ. ಕಲೆಕ್ಷನ್

ಟಾಲಿವುಡ್ ನಟ ರಾಮ್ ಚರಣ್ ನಟನೆಯ ‘ಪೆದ್ದಿ’ ಸಿನಿಮಾ (Peddi Movie) ಬಾಕ್ಸ್ ಆಫೀಸ್‌ನಲ್ಲಿ ಸುನಾಮಿ ಸೃಷ್ಟಿಸಿದೆ. ಜಗತ್ತಿನಾದ್ಯಂತ ಭರ್ಜರಿಯಾಗಿ ತೆರೆಕಂಡಿರುವ ಈ ಚಿತ್ರ, ಮೊದಲ ದಿನವೇ ಗಳಿಕೆಯಲ್ಲಿ ನೂರರ ಗಡಿ ದಾಟುವ ಮೂಲಕ ಬಾಕ್ಸ್ ಆಫೀಸ್ ಸುಲ್ತಾನ್ ತಾನೇ ಎಂಬುದನ್ನು ಸಾಬೀತುಪಡಿಸಿದೆ. ರಾಮ್ ಚರಣ್ ಮಾಸ್ ಕ್ರೇಜ್‌ಗೆ ಗಳಿಕೆ ಜೊರಾಗಿಯೇ ಆಗಿದೆ.

ಚಿತ್ರಮಂದಿರಗಳಲ್ಲಿ ‘ಪೆದ್ದಿ’ ಮೊದಲ ದಿನ ಅದ್ದೂರಿಯಾಗಿ ತೆರೆಕಂಡಿತು. ಹೈದರಾಬಾದ್, ಬೆಂಗಳೂರು ಸೇರಿದಂತೆ ಎಲ್ಲ ಕಡೆಗಳಲ್ಲಿ ಮುಂಜಾನೆಯ ಶೋಗಳನ್ನು ಆಯೋಜನೆ ಮಾಡಲಾಗಿತ್ತು. ಪರಿಣಾಮ ಸಿನಿಮಾ ಒಂದೇ ದಿನಕ್ಕೆ ವಿಶ್ವಾದ್ಯಂತ ಬರೋಬ್ಬರಿ 112.49 ಕೋಟಿ ರೂಪಾಯಿ ಗ್ರಾಸ್ ಕಲೆಕ್ಷನ್ ಮಾಡಿದೆ. ರಾಮ್ ಚರಣ್ ಅವರ ಅದ್ಭುತ ನಟನೆ ಮತ್ತು ಸಿನಿಮಾದ ಮಾಸ್ ಎಲಿಮೆಂಟ್‌ಗಳಿಗೆ ಫಿದಾ ಆಗಿರುವ ಪ್ರೇಕ್ಷಕರು ಚಿತ್ರಮಂದಿರಗಳತ್ತ ಮುಗಿಬೀಳುತ್ತಿದ್ದಾರೆ.

ಮೊದಲ ದಿನ ಸಿನಿಮಾಗೆ ಸಿಕ್ಕಿದ್ದು ಬರೋಬ್ಬರಿ 12,412 ಶೋಗಳು. ಭಾರರದಲ್ಲಿ ಈ ಸಿನಿಮಾ ಮೊದಲ ದಿನ ನೆಟ್ ಕಲೆಕ್ಷನ್ 69.50 ಕೋಟಿ ರೂಪಾಯಿ. ಭಾರತದಲ್ಲಿ ಇದುವರೆಗೆ ಒಟ್ಟು 82.49 ಕೋಟಿ ಗ್ರಾಸ್ ಕಲೆಕ್ಷನ್ ಆಗಿದೆ. ವಿಶ್ವಾದ್ಯಂತ ಈ ಸಿನಿಮಾ 30.00 ಕೋಟಿ ರೂಪಾಯಿ ಗ್ರಾಸ್ ಕಲೆಕ್ಷನ್ ಮಾಡಿದೆ.

ರಾಮ್ ಚರಣ್ ಅವರ ವೃತ್ತಿಜೀವನದಲ್ಲೇ ಈ ಸಿನಿಮಾ ಮತ್ತೊಂದು ಮೈಲಿಗಲ್ಲು ಸೃಷ್ಟಿಸುವುದು ಖಚಿತ ಎನ್ನಲಾಗುತ್ತಿದೆ. ಕೇವಲ ಮೊದಲ ದಿನವೇ ಈ ರೇಂಜ್‌ಗೆ ಅಬ್ಬರಿಸಿರುವ ‘ಪೆದ್ದಿ’, ವೀಕೆಂಡ್‌ನಲ್ಲಿ ಇನ್ನೂ ದೊಡ್ಡ ಮಟ್ಟದ ಗಳಿಕೆ ಮಾಡುವುದರಲ್ಲಿ ಯಾವುದೇ ಅನುಮಾನವಿಲ್ಲ ಎನ್ನಲಾಗುತ್ತಿದೆ. ಸದ್ಯಕ್ಕಂತೂ ಚರಣ್ ಫ್ಯಾನ್ಸ್ ಸೋಶಿಯಲ್ ಮೀಡಿಯಾದಲ್ಲಿ ‘ಪೆದ್ದಿ’ ಸಕ್ಸಸ್ ಅನ್ನು ಹಬ್ಬದಂತೆ ಸಂಭ್ರಮಿಸುತ್ತಿದ್ದಾರೆ.

ಇದನ್ನೂ ಓದಿ: ಪೆದ್ದಿ’ ಟ್ವಿಟರ್ ವಿಮರ್ಶೆ: ರಾಮ್ ಚರಣ್ ನಟನೆಗೆ ಪ್ರೇಕ್ಷಕರು ಫಿದಾ; ಶಿವಣ್ಣನಿಗೂ ಜೈಕಾರ

‘ಆರ್​​ಆರ್​​ಆರ್​ ಬಳಿಕ ರಾಮ್ ಚರಣ್ ಅವರ ‘ಆಚಾರ್ಯ’ ಹಾಗೂ ‘ಗೇಮ್ ಚೇಂಜರ್’ ಸಿನಿಮಾಗಳು ಬಂದವು. ಎರಡೂ ಸಿನಿಮಾಗಳು ಬಾಕ್ಸ್ ಆಫೀಸ್​​ನಲ್ಲಿ ಮಕಾಡೆ ಮಲಗಿದವು. ಹೀಗಾಗಿ, ಅವರಿಗೆ ಒಂದು ದೊಡ್ಡ ಗೆಲುವಿನ ಅಗತ್ಯ ಇತ್ತು. ಕೆಲವರು ‘ಪೆದ್ದಿ’ ಚಿತ್ರಕ್ಕೆ ಮಿಶ್ರ ಪ್ರತಿಕ್ರಿಯೆ ಕೊಟ್ಟಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ನಮ್ಮ ಮೆಟ್ರೋ ಹಳದಿ ಮಾರ್ಗದಿಂದ ಪ್ರಯಾಣಿಕರ ಆರೋಗ್ಯ ಸುಧಾರಣೆ! ಐಐಎಸ್ಸಿ ಅಧ್ಯಯನದಲ್ಲಿ ಬಯಲಾಯ್ತು ಇಂಟರೆಸ್ಟಿಂಗ್ ಮಾಹಿತಿ – Kannada News

ನಮ್ಮ ಮೆಟ್ರೋ ಹಳದಿ ಮಾರ್ಗImage Credit source: tv9

ಬೆಂಗಳೂರು, ಜೂನ್ 5: ನಮ್ಮ ಮೆಟ್ರೋದ ಆರ್​ವಿ ರಸ್ತೆ–ಬೊಮ್ಮಸಂದ್ರ ನಡುವಿನ ‘ಹಳದಿ ಮಾರ್ಗ’ (Yellow Line Metro) ಕೇವಲ ಪ್ರಯಾಣದ ಸಮಯವನ್ನು ಉಳಿಸುತ್ತಿಲ್ಲ, ಬದಲಿಗೆ ಸಾರ್ವಜನಿಕರ ಆರೋಗ್ಯ ವೃದ್ಧಿಸುವಲ್ಲಿ ಸಂಜೀವಿನಿಯಾಗಿ ಕೆಲಸ ಮಾಡುತ್ತಿದೆ! ಇಂಥದ್ದೊಂದು ಅಚ್ಚರಿಯ ವಿಚಾರ ಇದೀಗ ತಿಳಿದುಬಂದಿದೆ. ಹಳದಿ ಮೆಟ್ರೋ ಮಾರ್ಗದ ಕುರಿತು ಭಾರತೀಯ ವಿಜ್ಞಾನ ಸಂಸ್ಥೆಯ (IISc) ಸುಸ್ಥಿರ ಸಾರಿಗೆ ಪ್ರಯೋಗಾಲಯವು ನಡೆಸಿರುವ ಸಮಗ್ರ ಅಧ್ಯಯನದಲ್ಲಿ ಈ ಕುರಿತು ಅತ್ಯಂತ ಆಸಕ್ತಿದಾಯಕ ಮತ್ತು ಸಕಾರಾತ್ಮಕ ಮಾಹಿತಿ ಬಹಿರಂಗವಾಗಿದೆ. ಮೆಟ್ರೋ ಸಂಚಾರ ಆರಂಭವಾದ ಬಳಿಕ ಜನಸಾಮಾನ್ಯರ ಜೀವನಮಟ್ಟ, ವರ್ತನೆ ಹಾಗೂ ದೈಹಿಕ-ಮಾನಸಿಕ ಆರೋಗ್ಯದಲ್ಲಿ ಗಣನೀಯ ಸುಧಾರಣೆ ಕಂಡುಬಂದಿದೆ ಎಂದು ವರದಿ ಹೇಳಿದೆ.

ಮುಖ್ಯಾಂಶಗಳು

  • ಐಐಎಸ್ಸಿ (IISc) ಸುಸ್ಥಿರ ಸಾರಿಗೆ ಪ್ರಯೋಗಾಲಯದಿಂದ ಸಮಗ್ರ ಅಧ್ಯಯನ.
  • ಮೆಟ್ರೋ ಬಳಕೆಯಿಂದಾಗಿ ಪ್ರಯಾಣಿಕರಿಗೆ ವಾರಕ್ಕೆ 50 ರಿಂದ 75 ನಿಮಿಷಗಳಷ್ಟು ಹೆಚ್ಚುವರಿ ದೈಹಿಕ ಚಟುವಟಿಕೆ ಲಭ್ಯ.
  • ಮಾನಸಿಕ ಒತ್ತಡ ಹಾಗೂ ಆಯಾಸ ಭಾರಿ ಪ್ರಮಾಣದಲ್ಲಿ ಕಡಿತ.

ಐಐಎಸ್ಸಿಯ ಸಾರಿಗೆ ವ್ಯವಸ್ಥೆಗಳ ಎಂಜಿನಿಯರಿಂಗ್ ವಿಭಾಗದ ಪ್ರಾಧ್ಯಾಪಕರೂ ಆಗಿರುವ ಪ್ರೊ. ಆಶಿಶ್ ವರ್ಮಾ ಅವರ ನೇತೃತ್ವದಲ್ಲಿ ಈ ವಿಶಿಷ್ಟ ಅಧ್ಯಯನವನ್ನು ಕೈಗೊಳ್ಳಲಾಗಿದೆ. ಹಳದಿ ಮಾರ್ಗದ ಕಾರಿಡಾರ್ ಉದ್ದಕ್ಕೂ ವಾಸಿಸುವ ಸುಮಾರು 600 ಪ್ರಯಾಣಿಕರು ಮತ್ತು ಸ್ಥಳೀಯ ನಿವಾಸಿಗಳನ್ನು ಈ ಸಮೀಕ್ಷೆಗೆ ಒಳಪಡಿಸಲಾಗಿತ್ತು. ಮೆಟ್ರೋ ಕಾರ್ಯಾಚರಣೆ ಆರಂಭವಾಗುವ ಮುನ್ನ ಹಾಗೂ ಜಾರಿಯಾದ ಆರು ತಿಂಗಳ ಬಳಿಕ ಸಾರ್ವಜನಿಕರ ಆರೋಗ್ಯ ಮತ್ತು ಜೀವನಶೈಲಿಯನ್ನು ಸೂಕ್ಷ್ಮವಾಗಿ ಗಮನಿಸಿ ಈ ವರದಿಯನ್ನು ಸಿದ್ಧಪಡಿಸಲಾಗಿದೆ.

ಟ್ರಾಫಿಕ್ ಕಿರಿಕಿರಿ ಮುಕ್ತಿ, ಆರೋಗ್ಯ ವೃದ್ಧಿ

ಅಧ್ಯಯನದ ಪ್ರಕಾರ, ಬೆಂಗಳೂರಿನಲ್ಲಿ ಪ್ರಸ್ತುತ ಶೇ 58 ರಷ್ಟು ಜನರು ಯಾವುದೇ ದೈಹಿಕ ಚಟುವಟಿಕೆ ಇಲ್ಲದೆ ಬಳಲುತ್ತಿದ್ದಾರೆ. ಇದು ಅಧಿಕ ರಕ್ತದೊತ್ತಡ (ಬಿಪಿ), ಮಧುಮೇಹ (ಶುಗರ್) ಮತ್ತು ಉಸಿರಾಟದ ಸಮಸ್ಯೆಗಳಿಗೆ ಪ್ರಮುಖ ಕಾರಣವಾಗುತ್ತಿದೆ. ಆದರೆ, ಮೆಟ್ರೋ ನಿಲ್ದಾಣಗಳಿಗೆ ನಡೆದುಕೊಂಡು ಹೋಗುವುದು ಮತ್ತು ಬರುವುದರಿಂದ ಪ್ರಯಾಣಿಕರಿಗೆ ವಾರಕ್ಕೆ 50 ರಿಂದ 75 ನಿಮಿಷಗಳಷ್ಟು ಹೆಚ್ಚುವರಿ ದೈಹಿಕ ಚಟುವಟಿಕೆ ಸಿಗುತ್ತಿದ್ದು, ಆರೋಗ್ಯ ಸುಧಾರಿಸುತ್ತಿದೆ.

ಈ ಕುರಿತು ಸಂತಸ ಹಂಚಿಕೊಂಡಿರುವ ಮೆಟ್ರೋ ಪ್ರಯಾಣಿಕರಾದ ದೇಶಪಾಂಡೆ ಮತ್ತು ವಿನಯ್ ಶ್ರೀನಿವಾಸ್, ‘ಹಿಂದೆ ವಾಹನಗಳಲ್ಲಿ ಆಫೀಸ್‌ಗೆ ಹೋಗುವಾಗ ತೀವ್ರ ಟ್ರಾಫಿಕ್‌ನಿಂದಾಗಿ ಮಾನಸಿಕ ಕಿರಿಕಿರಿ ಉಂಟಾಗುತ್ತಿತ್ತು, ಕೆಲಸ ಮಾಡಲು ಮನಸ್ಸಿರುತ್ತಿರಲಿಲ್ಲ. ಆದರೆ ಈಗ ಒಂದೂವರೆ ಗಂಟೆ ಮುಂಚಿತವಾಗಿಯೇ ಕಚೇರಿ ತಲುಪುತ್ತಿದ್ದು, ಮಾನಸಿಕ ಒತ್ತಡ ಮತ್ತು ಆಯಾಸ ಮುಕ್ತವಾಗಿದ್ದೇವೆ’ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ನ್ಯೂಸ್: ಬೆಂಗಳೂರಿಗೆ ಬಂದೇ ಬಿಡ್ತು ಮೊದಲ ‘ಬ್ಲೂ ಲೈನ್’ ರೈಲು

ಸಮೀಕ್ಷೆಯಲ್ಲಿ ಭಾಗಿಯಾದವರ ಪೈಕಿ ಶೇ 83 ರಷ್ಟು ಮಂದಿ ಮೆಟ್ರೋ ವ್ಯವಸ್ಥೆಗೆ ಜೈ ಎಂದಿದ್ದರೆ, ಇನ್ನುಳಿದ ಶೇ 17 ರಷ್ಟು ಜನರು ಮಾತ್ರ ವೈಯಕ್ತಿಕ ಕಾರಣಗಳಿಂದಾಗಿ ಮೆಟ್ರೋ ಸಂಚಾರಕ್ಕೆ ಒಲವು ತೋರಿಲ್ಲ. ಒಟ್ಟಾರೆಯಾಗಿ, ಮಾಲಿನ್ಯ ನಿಯಂತ್ರಣ, ಮಾನಸಿಕ ನೆಮ್ಮದಿ ಹಾಗೂ ದೈಹಿಕ ಸಾಮರ್ಥ್ಯ ಹೆಚ್ಚಿಸುವಲ್ಲಿ ಹಳದಿ ಮೆಟ್ರೋ ಮಾರ್ಗವು ಬೆಂಗಳೂರಿಗರ ಪಾಲಿಗೆ ವರದಾನವಾಗಿ ಮಾರ್ಪಟ್ಟಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Horoscope Today: ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಬಹಳ ಎಚ್ಚರಿಕೆಯಿಂದ ಇರಬೇಕು!

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಜೂನ್ 5, ಗುರುವಾರದ ದ್ವಾದಶ ರಾಶಿಗಳ ಸಮಗ್ರ ಭವಿಷ್ಯವನ್ನು ಪ್ರಸ್ತುತಪಡಿಸಿದ್ದಾರೆ. ಈ ದಿನ ಪರಾಭವನಾಮ ಸಂವತ್ಸರ, ಉತ್ತರಾಯಣ, ಅಧಿಕ ಜೇಷ್ಠ ಮಾಸ, ಕೃಷ್ಣ ಪಕ್ಷದ ಪಂಚಮಿ ತಿಥಿ, ಶ್ರವಣ ನಕ್ಷತ್ರ, ಬ್ರಹ್ಮಯೋಗ ಮತ್ತು ಕೌಲವಕರಣ ಇವೆ.

ದಿನದ ರಾಹುಕಾಲವು ಬೆಳಗ್ಗೆ 10:41 ರಿಂದ 12:17 ರವರೆಗೆ ಇದ್ದರೆ, ಶುಭಕಾಲವು 12:18 ರಿಂದ 01:54 ರವರೆಗೆ ಇರುತ್ತದೆ. ಈ ಶುಕ್ರವಾರ ಮಹಾಲಕ್ಷ್ಮಿಯ ಕೃಪೆಗೆ ಪಾತ್ರರಾಗಲು ಸೂಕ್ತ ದಿನವಾಗಿದೆ. ವಿಶೇಷವಾಗಿ, ಇಂದು ವಿಶ್ವ ಪರಿಸರ ದಿನವಾಗಿದ್ದು, ಪರಿಸರ ಸಂರಕ್ಷಣೆಗೆ ಒತ್ತು ನೀಡುವಂತೆ ಗುರೂಜಿ ಕರೆ ನೀಡಿದ್ದಾರೆ. ನಾವು ನಮ್ಮ ಪರಿಸರವನ್ನು ಸ್ವಚ್ಛವಾಗಿರಿಸಿದರೆ, ನಮ್ಮ ಕುಟುಂಬ, ಗ್ರಾಮ ಮತ್ತು ದೇಶವು ಸುಭಿಕ್ಷವಾಗಿರುತ್ತದೆ ಎಂದು ಅವರು ತಿಳಿಸಿದ್ದಾರೆ.

 

 

 

Source link

Daily Devotional: ಮನೆಯ ಗೆಸ್ಟ್ ರೂಂ ಯಾವ ದಿಕ್ಕಿನಲ್ಲಿದ್ದರೆ ಉತ್ತಮ – Kannada News

ಟಿವಿ9 ಕನ್ನಡ ಡಿಜಿಟಲ್​ನ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಮನೆಯ ಗೆಸ್ಟ್ ರೂಂ ಯಾವ ದಿಕ್ಕಿನಲ್ಲಿದ್ದರೆ ಉತ್ತಮ ಎಂದು ಡಾ.ಬಸವರಾಜ ಗುರೂಜಿ ತಿಳಿಸಿದ್ದಾರೆ.ಮನೆಯಲ್ಲಿ ಅತಿಥಿಗಳು ಬಂದಾಗ ಅವರಿಗೆ ಸೂಕ್ತವಾದ ವಾತಾವರಣವನ್ನು ಒದಗಿಸುವುದು ನಮ್ಮ ಕರ್ತವ್ಯ. ಅತಿಥಿ ದೇವೋಭವ ಎಂಬ ನಾಣ್ಣುಡಿಯಂತೆ, ಅತಿಥಿಗಳನ್ನು ಸತ್ಕರಿಸುವುದು ನಮ್ಮ ಸಂಸ್ಕೃತಿಯ ಭಾಗ.

ವಾಸ್ತು ಶಾಸ್ತ್ರದ ಪ್ರಕಾರ, ಅತಿಥಿ ಕೋಣೆಯನ್ನು ಸರಿಯಾದ ದಿಕ್ಕಿನಲ್ಲಿ ನಿರ್ಮಿಸುವುದು ಮನೆಯ ಸುಖಶಾಂತಿಗೆ ಅವಶ್ಯಕ. ಅತಿಥಿ ಕೋಣೆಯು ಆಗ್ನೇಯ, ಈಶಾನ್ಯ ಅಥವಾ ನೈರುತ್ಯ ದಿಕ್ಕುಗಳಲ್ಲಿ ಇರಬಾರದು. ಆಗ್ನೇಯದಲ್ಲಿ ಅತಿಥಿ ಕೋಣೆ ಇದ್ದರೆ ಅದು ವೈರತ್ವಕ್ಕೆ ಕಾರಣವಾಗಬಹುದು. ಈಶಾನ್ಯದಲ್ಲಿ ದೈವಾಂಶ ಕಡಿಮೆಯಾಗಿ ಅಶಾಂತಿ ಉಂಟಾಗಬಹುದು. ನೈರುತ್ಯ ದಿಕ್ಕು ಮನೆಯ ಯಜಮಾನನ ಜಾಗವಾಗಿದ್ದು, ಅಲ್ಲಿ ಅತಿಥಿ ಕೋಣೆ ನಿರ್ಮಿಸಿದರೆ ಆರ್ಥಿಕ ನಷ್ಟಗಳು ಮತ್ತು ಮನಸ್ತಾಪಗಳು ಉಂಟಾಗಬಹುದು.

ಅತಿಥಿ ಕೋಣೆಗೆ ವಾಯುವ್ಯ ದಿಕ್ಕು ಅತ್ಯಂತ ಸೂಕ್ತವಾಗಿದೆ. ಈ ದಿಕ್ಕಿನಲ್ಲಿ ಅತಿಥಿಗಳಿಗೆ ಕೋಣೆಯನ್ನು ಕಾಯ್ದಿರಿಸಬಹುದು. ವಾಯುವ್ಯದಲ್ಲಿ ಮಲಗುವ ಹಾಸಿಗೆಯನ್ನು ದಕ್ಷಿಣಕ್ಕೆ ತಲೆ ಮತ್ತು ಉತ್ತರಕ್ಕೆ ಕಾಲುಗಳು ಬರುವಂತೆ ಇಡಬೇಕು. ಅತಿಥಿ ಕೋಣೆಗೆ ತಿಳಿ ನೀಲಿ ಅಥವಾ ಬಿಳಿ ಬಣ್ಣಗಳನ್ನು ಬಳಸುವುದು ಉತ್ತಮ ಎಂದು ಗುರೂಜಿ ತಿಳಿಸಿದ್ದಾರೆ.

Source link

ದಿನ ಭವಿಷ್ಯ: ಇಂದು ಈ ರಾಶಿಯವರು ವಿನಾಕಾರಣ ಬೆದರಿಕೆಗೆ ಒಳಗಾಗುವರು.. – Kannada News

ಮೇಷ ರಾಶಿ:

ಆದಷ್ಟು ಬೇಗ ಸ್ವಾವಲಂಬಿಯಾಗುವ ನಿರ್ಧಾರ ಮಾಡುವಿರಿ. ಸಂಗಾತಿಯೊಂದಿಗೆ ನೀವು ಮಾತುಗಳನ್ನು ಸರಿಯಾಗಿ ಬಳಸುವುದು ಉತ್ತಮ. ವಿದ್ಯುತ್ ಉಪಕರಣಗಳು ನಿಮ್ಮ ಸಮಯವನ್ನು ಹಾಳು ಮಾಡಬೇಡಿ. ಪ್ರವಾಸ ಮತ್ತು ಸಾರಿಗೆ ಉದ್ಯಮಿಗಳಿಗೆ ಉತ್ತಮ ಲಾಭ ದೊರೆಯುವ ಸಾಧ್ಯತೆ ಇದೆ. ಇಂದು ಹೊಸ ವಸ್ತುಗಳನ್ನು ಖರೀದಿಸುವ ಉತ್ಸಾಹದಲ್ಲಿ ಇರುವಿರಿ. ಧೈರ್ಯದಿಂದ ಹೊಸ ಸವಾಲುಗಳನ್ನು ಎದುರಿಸುವಿರಿ. ಭೂಮಿ ಮತ್ತು ಆಸ್ತಿಗೆ ಸಂಬಂಧಿಸಿದ ಕೆಲಸಗಳು ಇರುತ್ತವೆ.

ವೃಷಭ ರಾಶಿ:

ಸಾಲದ ವಿಚಾರ ಬಂದರೆ ಮೌನವಹಿಸಿ, ಎದ್ದು ಹೋಗಿ ಪಿತ್ರಾರ್ಜಿತ ಸಂಪತ್ತು ನಿಮಗೆ ಉಪಯೋಗವಾಗಬಹುದು. ತಂದೆಯ ಸಲಹೆಯಿಂದ ಹಣದ ಲಾಭಸಾಧಿಸಬಹುದು. ಪ್ರೀತಿಯ ಕಥೆಯಲ್ಲಿ ಹೊಸ ತಿರುವು ಹಾಗೂ ಸಂಗಾತಿಯೊಂದಿಗೆ ಮದುವೆಯ ಕುರಿತು ಚರ್ಚೆ ನಡೆಯುತ್ತದೆ, ಆದ್ದರಿಂದ ಯಾವುದೇ ನಿರ್ಧಾರವನ್ನು ತಾಳ್ಮೆಯಿಂದಿರಿ. ಕಚೇರಿಯಲ್ಲಿ ಕೆಲಸದ ಹೊರೆ ನಿಮ್ಮ ಸ್ವಂತ ಕೆಲಸವನ್ನು ಮಾಡಲು ಸ್ವಲ್ಪ ಸಮಯವನ್ನು ನೀಡುತ್ತದೆ. ನಿಮ್ಮ ವ್ಯಾಯಾಮದಲ್ಲಿ ಮಿತಿ ಇರಲಿ. ಇಲ್ಲವಾದರೆ ದೇಹಾರೋಗ್ಯ ಕೆಡಬಹುದು.

ಮಿಥುನ ರಾಶಿ:

ಆರ್ಥಿಕ ಬಿಕ್ಕಟ್ಟಿನಿಂದ ಹೊರಬರುವ ಅವಕಾಶವಿದೆ ಮತ್ತು ಪೋಷಕರ ಸಲಹೆ ನಿಮ್ಮ ನಿರ್ಧಾರಗಳಲ್ಲಿ ಸಹಾಯ ಮಾಡುತ್ತದೆ. ಸಂಬಂಧಗಳಲ್ಲಿ ಅನುಮಾನಗಳನ್ನು ತೊಡೆದುಹಾಕಿ, ಮನಸ್ಸಿನ ವಿಷಯಗಳನ್ನು ಸ್ಪಷ್ಟವಾಗಿ ಚರ್ಚಿಸಿ. ಉದ್ಯಮಿಯು ವ್ಯವಹಾರದ ವಿಷಯಗಳಲ್ಲಿ ಚಿಂತನಶೀಲವಾಗಿ ಮುಂದುವರಿಯಬೇಕು. ಈ ದಿನ ಕೆಲಸದಲ್ಲಿ, ನಿಮ್ಮ ದಕ್ಷತೆಯಿಂದ ಮುಖ್ಯವಾದವರನ್ನು ನೀವು ಮೆಚ್ಚಿಸಲು ಸಾಧ್ಯವಾಗುತ್ತದೆ. ಆಸ್ತಿ ವ್ಯವಹಾರವು ನಿಮಗೆ ಅನುಕೂಲವಾಗುವ ಸಾಧ್ಯತೆಯಿದೆ.

ಕರ್ಕಾಟಕ ರಾಶಿ:

ಎಲ್ಲ ಗೊತ್ತಿದ್ದೂ ಉದ್ವೇಗಕ್ಕೆ ಒಳಗಾಗಬೇಡಿ. ಅಭಿನಂದನೆ ನಿಮ್ಮ ಮನಸ್ಸಿಗೆ ಸಂತೋಷ ತರುತ್ತದೆ. ವಾಹನದ ಬದಲಾವಣೆಯನ್ನು ಒಮ್ಮೆಲೇ ಮಾಡಲಾರಿರಿ. ವ್ಯಾಪಾರಿಗಳಿಗೆ ನಷ್ಟವಾಗುವ ಸಂಭವವಿದ್ದು, ವ್ಯಾಪಾರ ಸುಧಾರಣೆಗೆ ಹೆಚ್ಚುವರಿ ಹಣ ಖರ್ಚಾಗುತ್ತದೆ. ಸಂಗಾತಿಯೊಂದಿಗೆ ಸರಿಯಾದ ಸಂಭಾಷಣೆ ಮತ್ತು ಸಹಕಾರದಿಂದ ಸಂಬಂಧ ಮತ್ತಷ್ಟು ಗಟ್ಟಿಯಾಗಲಿದೆ. ನಿಮ್ಮ ಬೆರೆಯುವಿಕೆಯು ಕಡಿಮೆ ಆಗಬಹುದು. ನಿಮ್ಮ ತಿಳುವಳಿಕೆ ಮತ್ತು ಸಭ್ಯತೆಯಿಂದ ಎಲ್ಲರೂ ಬಹಳ ಪ್ರಭಾವಿತರಾಗಬಹುದು.

ಇದನ್ನೂ ಓದಿ: ಮದುವೆ ಆಮಂತ್ರಣ ಪತ್ರಿಕೆಯಲ್ಲಿ ವಧು-ವರರ ಫೋಟೋ ಹಾಕಬಾರದು ಯಾಕೆ?

ಸಿಂಹ ರಾಶಿ:

ನೀಡಿದ ಸಾಲವನ್ನು ಮರಳಿ ಪಡೆಯುವ ಅವಕಾಶ ಸಿಗಲಿದೆ. ಸಂಗಾತಿಯೊಂದಿಗೆ ಸಂತೋಷದ ಕ್ಷಣಗಳಿರಬಹುದು. ಆದರೆ ಅವರ ಅನಗತ್ಯ ಬೇಡಿಕೆಗಳಿಗೆ ಒಪ್ಪಿಕೊಳ್ಳಬೇಡಿ. ದಿನದ ಯೋಜನೆಗಳು ಒಳ್ಳೆಯದಾಗುವುದು. ಒತ್ತಡಕ್ಕೆ ಮಣಿದು ತಾತ್ಕಾಲಿಕ ಬದಲಾವಣೆ ತರಬಹುದು. ಆಸ್ತಿ ಸಮಸ್ಯೆಗಳು ಬಗೆಹರಿಯುವ ಸಾಧ್ಯತೆ ಇದೆ. ಹೊಸ ಯೋಜನೆಯನ್ನು ಪಡೆದುಕೊಳ್ಳುವಿರಿ. ಧಾವಂತದಲ್ಲಿ ಏನನ್ನಾದರೂ ಮಾಡಿಕೊಳ್ಳುವಿರಿ. ರಾಜಕೀಯದಲ್ಲಿ ಸಂಪರ್ಕ ಪ್ರದೇಶವು ವಿಶಾಲವಾಗಿರುತ್ತದೆ.

ಕನ್ಯಾ ರಾಶಿ:

ಕುಟುಂಬದಲ್ಲಿ ಹಣಕಾಸಿನ ವಿಚಾರಕ್ಕೆ ಸಣ್ಣ ಮಟ್ಟಿನ ಕಲಹವೂ ಆದೀತು. ಆರೋಗ್ಯಕ್ಕಾಗಿ ಮಾಡಿದ ಖರ್ಚು ನಿಮ್ಮ ಹಣಕಾಸು ಸ್ಥಿತಿಯನ್ನು ಹದಗೆಡಿಸಬಹುದು. ಹೇಳದೇ ಮಾಡಿದ ಕೆಲಸದಿಂದ ಸಂಗಾತಿಗೆ ಅಪನಂಬಿಕೆ ಸಾಧದಯತೆ. ವ್ಯಾಸಂಗವನ್ನು ನಿರ್ಲಕ್ಷಿಸುವುದು ಪೋಷಕರ ಅಸಮಾಧಾನಕ್ಕೆ ಕಾರಣವಾಗುತ್ತದೆ, ಆದ್ದರಿಂದ ಸಮತೋಲನ ಅವಶ್ಯಕ. ನೀವು ಹೊಸ ಯೋಜನೆಯ ಬಗ್ಗೆ ಅಧಿಕ ಆಲೋಚನೆ ಇರಲಿದೆ. ಆಚಾತುರ್ಯದಿಂದ ಅನಂತರ ಪಶ್ಚಾತ್ತಾಪ ಪಡುವಿರಿ.

ತುಲಾ ರಾಶಿ:

ಸಾಲಕ್ಕಾಗಿ ವ್ಯರ್ಥ ಓಡಾಟಗಳು ಆಗುತ್ತವೆ. ಆ ಕಾರ್ಯಕ್ಕೊಸ್ಕರ ಖರ್ಚನ್ನೂ ಮಾಡುವಿರಿ. ಹಣ ಮಹತ್ವದ್ದಾದರೂ, ಸಂಬಂಧಗಳಿಗಿಂತ ಹೆಚ್ಚಿನ ಪ್ರಾಮುಖ್ಯವಾಗಬಾರದು. ಪ್ರೀತಿಪಾತ್ರರಿಂದ ವಿಶೇಷ ಆಶ್ಚರ್ಯ ಸಿಗಬಹುದು. ವಿವಾಹಕ್ಕೆ ಅಪೇಕ್ಷಿತ ರೀತಿಯ ಸಂಬಂಧ ಕೂಡಿಬರಲಿದೆ. ಬಂಧುಗಳ ಸಲಹೆಯು ಸಮಸ್ಯೆಯನ್ನು ವಿಭಿನ್ನ ದೃಷ್ಟಿಕೋನದಿಂದ ನೋಡಲು ನಿಮಗೆ ಸಹಾಯ ಮಾಡುತ್ತದೆ. ಅನಿರೀಕ್ಷಿತವಾಗಿ ದೂರದ ಊರಿಗೆ ಪ್ರಯಾಣ ಮಾಡಬೇಕಾಗಬಹುದು.

ವೃಶ್ಚಿಕ ರಾಶಿ:

ಸ್ನೇಹಿತರ ಜೊತೆ ಹೆಚ್ಚು ಕಾಲವನ್ನು ವ್ಯಯಿಸುವಿರಿ. ಸಂಶಯಾಸ್ಪದ ವ್ಯವಹಾರಗಳಿಂದ ದೂರವಿರಿ. ಸಾರ್ವಜನಿಕವಾಗಿ ಹಣಸಂಗ್ರಹ ಮಾಡುವ ಅನಿವಾರ್ಯತೆ ಬರಬಹುದು. ಪ್ರೀತಿಯನ್ನು ಹೊಸ ರೀತಿಯಲ್ಲಿ ಅನುಭವಿಸಲು ಆಪ್ತರ ಭೇಟಿಯ ಅವಕಾಶ ದೊರೆಯುತ್ತದೆ. ಅನಗತ್ಯ ವಿಚಾರಗಳಲ್ಲಿ ಸಮಯ ವ್ಯರ್ಥವಾಗಬಹುದು. ಮನೆಯಲ್ಲಿ ಶಾಂತಿ ಮತ್ತು ಸಾಮರಸ್ಯವನ್ನು ತರಲು ನೀವು ಕೋಪವನ್ನು ನಿಯಂತ್ರಣ ಮಾಡಿಕೊಳ್ಳಬೇಕು. ನೀವು ಕೆಲವು ಒಳ್ಳೆಯ ಸುದ್ದಿಯನ್ನು ಕೇಳುವಿರಿ.

ಧನು ರಾಶಿ:

ನಿರ್ಲಕ್ಷ್ಯದಿಂದ ವ್ಯಾಪಾರದಲ್ಲಿ ವಂಚನೆ ಸಾಧ್ಯವಾದೀತು. ಸಮರಸದ ಸ್ವಭಾವವನ್ನು ಬೆಳೆಸಿ, ದ್ವೇಷವನ್ನು ಮೀರಿ ಶಾಂತಿ ಹೊಂದಿ. ಆರ್ಥಿಕ ಸ್ಥಿತಿ ಸುಧಾರಿಸಿದರೂ ಖರ್ಚುಗಳ ಮೇಲೆ ನಿಯಂತ್ರಣ ಅಗತ್ಯ. ಪ್ರೇಮಜೀವನದಲ್ಲಿ ಹೊಸ ಉತ್ಸಾಹ ದೊರೆಯುತ್ತಿದ್ದು, ಸಂಗಾತಿಯೊಂದಿಗೆ ವಿಶೇಷ ಕ್ಷಣಗಳನ್ನು ಅನುಭವಿಸುವ ಅವಕಾಶ ಸಿಗಲಿದೆ. ಇಂದು ನಿಮಗೆ ಎಲ್ಲ ರೀತಿಯಲ್ಲೂ ಲಾಭವಾಗಲಿದೆ ಎಂದು ಮನಸ್ಸು ಹೇಳುವುದು. ಅಧಿಕಾರಿಗಳ ಜೊತೆ ಮಾತಿನ ಚಕಮಕಿ ನಡೆಯಬಹುದು.

ಮಕರ ರಾಶಿ:

ಮನೆಯ ಸಣ್ಣ ವಿವಾದಗಳು ಉದ್ವೇಗ ತರಬಹುದು, ಆದರೆ ಕುಟುಂಬ ಮತ್ತು ಸ್ನೇಹಿತರೊಂದಿಗೆ ಸಮಯ ಕಳೆಯುವ ಅವಕಾಶ ಸಿಗಲಿದೆ. ಹೂಡಿಕೆ ಮಾಡುವ ಮೊದಲು ಆಳವಾಗಿ ಪರಿಶೀಲಿಸಿ ಮತ್ತು ತಜ್ಞರ ಸಲಹೆ ಪಡೆಯಿರಿ. ಉದ್ಯೋಗದ ಶತ್ರುವನ್ನು ತಂತ್ರದಿಂದ ಗೆಲ್ಲುವಿರಿ. ವ್ಯಾಪಾರಸ್ಥರು ಮುಖ್ಯವಾಗಿ ವ್ಯವಹಾರದಲ್ಲಿ ಜಾಗರೂಕರಾಗಿರಬೇಕು. ದೈಹಿಕವಾಗಿ ಸದೃಢವಾಗಿರಲು ನಿಮ್ಮ ಪ್ರಯತ್ನ ಅತಿ ಮುಖ್ಯ. ನಿಮ್ಮ ಸುತ್ತಮುತ್ತಲಿನವರಿಂದ ಸಾಕಷ್ಟು ಪ್ರಶಂಸೆ ಪಡೆಯಲಿದ್ದೀರಿ.

ಕುಂಭ ರಾಶಿ:

ಮನಸ್ಸು ಹಾಳಾಗುವುದು ಬಿಟ್ಟರೆ ಮತ್ತೇನೂ ಆಗದು. ಸಹಾಯ ಮಾಡುವ ಮೂಲಕ ನಿಮ್ಮ ಚೈತನ್ಯವನ್ನು ಸದ್ವಿನಿಯೋಗಿಸಿ. ಖರ್ಚುಗಳನ್ನು ನಿಯಂತ್ರಿಸಿ ಮತ್ತು ಮನೆಯ ಸುಧಾರಣೆಯ ಬಗ್ಗೆ ಯೋಚಿಸಿ. ವೈವಾಹಿಕ ಜೀವನ ಅಪೂರ್ವ ಕ್ಷಣಗಳಾಗಲಿದ್ದು, ಪ್ರೀತಿಪಾತ್ರರಿಗೆ ಅಗತ್ಯವಾದ ಸಮಯವನ್ನು ನೀಡಿ. ಕಲಾತ್ಮಕತೆಯು ನಿಮಗೆ ಇಷ್ಟವಾಗುವುದು. ವಿದ್ಯಾರ್ಥಿಗಳಿಗೆ ಅಧ್ಯಯನ ಸಂಬಂಧಿತ ಸಮಸ್ಯೆಗಳು ಕಾಡಬಹುದು. ಊಹಾಪೋಹಗಳಿಗೆ ಬೆಲೆಯನ್ನು ಕೊಡುವ ಅಗತ್ಯವಿಲ್ಲ.

ಮೀನ ರಾಶಿ:

ನಿಮ್ಮ ಬುದ್ಧಿ, ಮನಸ್ಸುಗಳಿಗೆ ಕೆಲಸವನ್ನು ಕೊಡಿ. ಸಂಗಾತಿಯ ಜೊತೆ ಸ್ವಲ್ಪ ಕಾಲ ಕಳೆಯಿರಿ. ಗಂಭೀರ ವರ್ತೆನೆಯಿಂದ ಸಹೋದ್ಯೋಗಿಗಳಿಗೆ ಆತಂಕ. ಧಾರ್ಮಿಕ ಕಾರ್ಯಗಳು ಶಾಂತಿ ತರುತ್ತವೆ. ಆದರೆ ಖರ್ಚುಗಳನ್ನು ನಿಯಂತ್ರಿಸುವುದು ಮುಖ್ಯ. ಸ್ನೇಹಿತರ ಭೇಟಿ ಉತ್ಸಾಹಭರಿತವಾಗಿದ್ದು, ಯುವಕರು ಶೈಕ್ಷಣಿಕ ಸಲಹೆ ಪಡೆಯಬಹುದು. ಕುಟುಂಬದೊಂದಿಗೆ ಹೆಚ್ಚಿನ ಸಮಯ ಕಳೆಯುವಾಗ ಗೊಂದಲಗಳು ತಲೆದೋರುವ ಸಾಧ್ಯತೆ ಇದೆ. ಅತಿಯಾದ ಓಡಾಟವನ್ನು ನಿಲ್ಲಿಸಬೇಕಾಗುವುದು.

ಇಂದಿನ ಪಂಚಾಂಗ:

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ಗ್ರೀಷ್ಮ, ಚಾಂದ್ರಮಾಸ : ಅಧಿಕ ಜ್ಯೇಷ್ಠ, ಸೌರ ಮಾಸ : ವೃಷಭ, ಮಹಾನಕ್ಷತ್ರ : ರೋಹಿಣೀ, ವಾರ : ಶುಕ್ರ, ಪಕ್ಷ : ಕೃಷ್ಣ, ತಿಥಿ : ಪಂಚಮೀ, ನಿತ್ಯನಕ್ಷತ್ರ : ಶ್ರವಣಾ, ಯೋಗ : ಶುಕ್ಲ, ಕರಣ : ತೈತಿಲ, ಸೂರ್ಯೋದಯ – 05 – 56 am, ಸೂರ್ಯಾಸ್ತ – 06 – 49 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 10:46 – 12:23, ಯಮಗಂಡ ಕಾಲ 15:36 – 17:13, ಗುಳಿಕ ಕಾಲ 07:33 – 09:10

-ಲೋಹಿತ್ ಹೆಬ್ಬಾರ್-8762924271 (what’s app only)

ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಕ್ಯಾಮೆರಾ ಎದುರಲ್ಲೇ ನೋಟಿಸ್ ಹರಿದು ಸಲ್ಮಾನ್ ಖಾನ್ಗೆ ಸವಾಲು ಹಾಕಿದ ನಿರ್ಮಾಪಕ – Kannada News

ಬಾಲಿವುಡ್ ಸೂಪರ್‌ಸ್ಟಾರ್ ಸಲ್ಮಾನ್ ಖಾನ್ ಹಾಗೂ ಅವರ ಕಾನೂನು ತಂಡವು ‘ಕಾಲಾ ಹಿರನ್’ (Kala Hiran) ಚಿತ್ರದ ನಿರ್ಮಾಪಕ ಅಮಿತ್ ಜಾನಿ ಅವರಿಗೆ ಲೀಗಲ್ ನೋಟಿಸ್ ಕಳುಹಿಸಿದ ಬೆನ್ನಲ್ಲೇ ಈ ವಿವಾದ ಈಗ ತೀವ್ರ ಸ್ವರೂಪ ಪಡೆದುಕೊಂಡಿದೆ. ನಿರ್ಮಾಪಕ ಅಮಿತ್ ಜಾನಿ (Amit Jani) ಅವರು ಕ್ಯಾಮೆರಾದ ಮುಂಭಾಗದಲ್ಲೇ ಸಲ್ಮಾನ್ ಖಾನ್ ಕಳುಹಿಸಿದ್ದ ನೋಟಿಸ್ ಹರಿದು ಹಾಕುವ ಮೂಲಕ ಆಕ್ರೋಶ ಹೊರಹಾಕಿದ್ದಾರೆ. ಅಷ್ಟೇ ಅಲ್ಲದೆ, ಸಲ್ಮಾನ್ ಖಾನ್ (Salman Khan) ಅಭಿಮಾನಿಗಳಿಂದ ತಮಗೆ ಕೊಲೆ ಬೆದರಿಕೆಗಳು ಬರುತ್ತಿವೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಈ ಕುರಿತು ವಿಡಿಯೋ ಹೇಳಿಕೆ ಬಿಡುಗಡೆ ಮಾಡಿರುವ ಅಮಿತ್ ಜಾನಿ ಅವರು ಎಲ್ಲವನ್ನೂ ವಿವರಿಸಿದ್ದಾರೆ. ‘ಸಲ್ಮಾನ್ ಖಾನ್ ನೋಟಿಸ್‌ಗೆ ನಿಮ್ಮ ಉತ್ತರ ಏನು ಎಂದು ಮಾಧ್ಯಮಗಳು ಮತ್ತು ಸ್ನೇಹಿತರು ನನ್ನನ್ನು ಕೇಳುತ್ತಿದ್ದಾರೆ. ಕಳೆದ 36 ಗಂಟೆಗಳಿಂದ ಡೋಂಗ್ರಿ, ಧಾರಾವಿ, ಜೋಗೇಶ್ವರಿಯ ಮುಸ್ಲಿಂ ಯುವಕರು ಹಾಗೂ ಸಲ್ಮಾನ್ ಖಾನ್ ಅವರ ಬೆಂಬಲಿಗರು ನನಗೆ ಸಾವಿರಾರು ಮೆಸೇಜ್‌ಗಳನ್ನು ಕಳುಹಿಸಿ ಕೊಲೆ ಮಾಡುವ, ಶಿರಚ್ಛೇದ ಮಾಡುವ ಬೆದರಿಕೆ ಹಾಕುತ್ತಿದ್ದಾರೆ. ಅಷ್ಟೇ ಅಲ್ಲದೆ, ಅಂಡರ್ ವರ್ಲ್ಡ್ ಡಿ ಕಂಪನಿ ಹೆಸರಿನಲ್ಲೂ ಬೆದರಿಕೆ ಸಂದೇಶ ಬಂದಿದೆ. ಹಾಗಾಗಿ, ನಾನು ಯಾರಿಗೆ ಉತ್ತರ ನೀಡಬೇಕು? ಈ ಬೆದರಿಕೆಗಳಿಗೋ ಅಥವಾ ನಿಮ್ಮ ನೋಟಿಸ್‌ಗೋ? ನಿಮ್ಮ ನೋಟಿಸ್‌ಗೆ ನನ್ನ ಉತ್ತರ ಇದೇ’ ಎಂದು ಹೇಳುತ್ತಾ ಅವರು ನೋಟಿಸ್ ಪತ್ರವನ್ನು ಹರಿದು ಹಾಕಿದ್ದಾರೆ.

ಬೆದರಿಕೆ ಹಾಕುತ್ತಿರುವವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ನಿರ್ಮಾಪಕರು, ‘ಧಾರಾವಿ, ಜೋಗೇಶ್ವರಿ ಮತ್ತು ಡೋಂಗ್ರಿಯಲ್ಲಿರುವ ಸಲ್ಮಾನ್ ಖಾನ್ ಅವರ ಉದ್ಧಟ ಹಾಗೂ ವಿಕೃತ ಅಭಿಮಾನಿಗಳು ನನ್ನ ಕುಟುಂಬವನ್ನು ಮುಗಿಸುವುದಾಗಿ ಹೆದರಿಸುತ್ತಿದ್ದಾರೆ. ಡಿ-ಕಂಪನಿ ಹೆಸರಲ್ಲೂ ಸಂದೇಶ ಬರುತ್ತಿದೆ. ಈಗ ನೋಟಿಸ್‌ಗೆ ಉತ್ತರ ಸಿಕ್ಕಿದೆ ಅಲ್ಲವೇ? ಇನ್ನು ಮುಂದೆ ನಾವು ಡಿ-ಕಂಪನಿಯನ್ನು ನೋಡಿಕೊಳ್ಳುತ್ತೇವೆ. ನಿಮಗೆ ಯಾರು ಬೇಕೋ ಅವರನ್ನು ಕಳುಹಿಸಿ’ ಎಂದು ಬಹಿರಂಗ ಸವಾಲು ಹಾಕಿದ್ದಾರೆ.

ವೈರಲ್ ವಿಡಿಯೋ:

‘ಕಾಲಾ ಹಿರನ್’ ನೋಟಿಸ್ ವಿವಾದ:

ವರದಿಗಳ ಪ್ರಕಾರ, ಅಮಿತ್ ಜಾನಿ ನಿರ್ಮಿಸುತ್ತಿರುವ ‘ಕಾಲಾ ಹಿರನ್’ ಚಿತ್ರದ ಪ್ರಚಾರದ ವೇಳೆ ‘ಇದು ನೈಜ ಘಟನೆಗಳ ಆಧಾರಿತ ಸಿನಿಮಾ’ ಎಂದು ಉಲ್ಲೇಖಿಸಲಾಗಿತ್ತು. ಈ ಚಿತ್ರವು ಸಲ್ಮಾನ್ ಖಾನ್ ಅವರ ವೈಯಕ್ತಿಕ ಜೀವನ ಮತ್ತು ಅವರ ಮೇಲಿದ್ದ ಕೃಷ್ಣಮೃಗ ಬೇಟೆ ಪ್ರಕರಣವನ್ನು ಆಧರಿಸಿ ಸಿನಿಮಾ ಮಾಡಲಾಗುತ್ತಿದೆ ಎಂದು ಪ್ರೇಕ್ಷಕರು ತಪ್ಪಾಗಿ ಭಾವಿಸುವ ಸಾಧ್ಯತೆ ಇದೆ ಎಂದು ಸಲ್ಮಾನ್ ಖಾನ್ ಅವರ ಕಾನೂನು ತಂಡ ಆಕ್ಷೇಪ ವ್ಯಕ್ತಪಡಿಸಿ, ನೋಟಿಸ್ ಕಳುಹಿಸಿತ್ತು.

ಇದನ್ನೂ ಓದಿ: ಕೃಷ್ಣಮೃಗ ಬೇಟೆ ಕುರಿತ ‘ಕಾಲಾ ಹಿರನ್’ ಸಿನಿಮಾ ಸಲ್ಮಾನ್ ಖಾನ್ ಬಯೋಪಿಕ್ ಅಲ್ಲ: ನಿರ್ಮಾಪಕರ ಸ್ಪಷ್ಟನೆ

ಪ್ರಸ್ತುತ ನಿರ್ಮಾಪಕ ಅಮಿತ್ ಜಾನಿ ಅವರ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದ್ದು, ಪರ-ವಿರೋಧದ ಚರ್ಚೆಗಳು ಶುರುವಾಗಿವೆ. ಆದರೆ ಈ ಹೊಸ ವಿವಾದ ಹಾಗೂ ಆರೋಪಗಳ ಬಗ್ಗೆ ನಟ ಸಲ್ಮಾನ್ ಖಾನ್ ಅಥವಾ ಅವರ ಕಾನೂನು ತಂಡದಿಂದ ಇದುವರೆಗೆ ಯಾವುದೇ ಅಧಿಕೃತ ಪ್ರತಿಕ್ರಿಯೆ ಬಂದಿಲ್ಲ. ಆ ಬಗ್ಗೆ ಕೌತುಕ ನಿರ್ಮಾಣ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಜಾಗತಿಕ ಬಿಕ್ಕಟ್ಟುಗಳಿಗೆ ಭಾರತ ಒಂದೇ ಪರಿಹಾರ; ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿಕೆ – Kannada News

ನಾಗ್ಪುರ, ಜೂನ್ 4: “ಜಗತ್ತು ಪ್ರಸ್ತುತ ಅನೇಕ ಸವಾಲುಗಳನ್ನು ಎದುರಿಸುತ್ತಿದ್ದು, ಇಂದಿನ ಜಾಗತಿಕ ಪರಿಸರಕ್ಕೆ ಭಾರತದ ಸಾಂಪ್ರದಾಯಿಕ ಮತ್ತು ಸುಸ್ಥಿರ ಅಭಿವೃದ್ಧಿಯ ಮಾದರಿಯ ಅಗತ್ಯವಿದೆ. ಈಗ ಭಾರತದ ಸಮಯ ಬಂದಿದೆ. ಜಾಗತಿಕ ಬಿಕ್ಕಟ್ಟುಗಳಿಗೆ ಭಾರತ ಒಂದೇ ಪರಿಹಾರ” ಎಂದು ಆರ್‌ಎಸ್‌ಎಸ್ (RSS) ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ. ನಾಗ್ಪುರದಲ್ಲಿ ನಡೆದ ಆರ್​ಎಸ್​ಎಸ್ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಜಗತ್ತಿಗೆ ಸರಿಯಾದ ದಿಕ್ಸೂಚಿ ತೋರಿಸುವ ಸಾಮರ್ಥ್ಯ ಭಾರತಕ್ಕಿದೆ ಎಂದು ಹೆಮ್ಮೆಯಿಂದ ಹೇಳಿದ್ದಾರೆ.

ಪ್ರಸ್ತುತ ಜಗತ್ತು ಭೌತಿಕವಾಗಿ ಪ್ರಗತಿ ಸಾಧಿಸುತ್ತಿದ್ದರೂ, ಶಾಂತಿ ಮತ್ತು ಆಂತರಿಕ ನೆಮ್ಮದಿಯ ಕೊರತೆಯಿದೆ. ಜಗತ್ತಿನ ಇತರೆ ದೇಶಗಳ ಅಭಿವೃದ್ಧಿ ಮಾದರಿಗಳು ಕೇವಲ ಭೌತಿಕ ಸುಖಕ್ಕೆ ಸೀಮಿತವಾಗಿದ್ದರೆ, ಭಾರತದ ಹಾದಿಯು ಪ್ರಕೃತಿ ಮತ್ತು ಮಾನವನ ನಡುವಿನ ಸಮತೋಲನವನ್ನು ಕಲಿಸುತ್ತದೆ. ಹಾಗಾಗಿ ಇಡೀ ಜಗತ್ತು ಈಗ ಭಾರತದತ್ತ ನೋಡುತ್ತಿದೆ. ಭಾರತವು ಕೇವಲ ಆರ್ಥಿಕವಾಗಿ ಅಥವಾ ತಾಂತ್ರಿಕವಾಗಿ ಮಾತ್ರ ಬೆಳೆದರೆ ಸಾಲದು; ತನ್ನದೇ ಆದ ಸಾಂಸ್ಕೃತಿಕ ಮೌಲ್ಯಗಳು ಮತ್ತು ಧರ್ಮದ ಆಧಾರದ ಮೇಲೆ ಜಗತ್ತನ್ನು ಮುನ್ನಡೆಸಬೇಕು. ದೇಶದ ಪ್ರತಿಯೊಬ್ಬ ನಾಗರಿಕನೂ ತನ್ನ ಸಂಸ್ಕೃತಿಯ ಬಗ್ಗೆ ಹೆಮ್ಮೆ ಪಡಬೇಕು ಮತ್ತು ಸ್ವಾವಲಂಬನೆಯತ್ತ ಹೆಜ್ಜೆ ಇಡಬೇಕು ಎಂದು ಅವರು ಕರೆ ನೀಡಿದರು.

ಇದನ್ನೂ ಓದಿ: ಆರ್​ಎಸ್​ಎಸ್​ಗೆ ಮುಸ್ಲಿಮರು ಕೂಡ ಸೇರಬಹುದೇ? ಮೋಹನ್ ಭಾಗವತ್ ಹೇಳಿದ್ದೇನು?

ವೈಯಕ್ತಿಕ ಸ್ವಾತಂತ್ರ್ಯ, ಪರಿಸರ ಸಮತೋಲನ ಮತ್ತು ಆರ್ಥಿಕ ಬೆಳವಣಿಗೆಯನ್ನು ಸಮತೋಲನಗೊಳಿಸಲು ಜಗತ್ತು ಹೆಣಗಾಡುತ್ತಿದೆ. ಎಲ್ಲರನ್ನೂ ಒಳಗೊಳ್ಳುವ ದೃಷ್ಟಿಕೋನವನ್ನು ಹೊಂದಿರುವ ಭಾರತದ ಕಡೆಗೆ ಜಗತ್ತು ನೋಡುತ್ತಿದೆ. ಸಾರ್ವತ್ರಿಕ ಸಹೋದರತ್ವ ಮತ್ತು ‘ವಸುಧೈವ ಕುಟುಂಬ’ದ ಅಡಿಪಾಯದ ಮೇಲೆ ಬಲವಾದ ಭಾರತವನ್ನು ನಿರ್ಮಿಸುವುದು ಸಂಘದ ಗುರಿಯಾಗಿದೆ ಎಂದು ಅವರು ಹೇಳಿದರು.

ಕುಮಾರ್ ಮಂಗಲಂ ಬಿರ್ಲಾ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮುಖ್ಯ ಭಾಷಣ ಮಾಡಿದರು. ದೇಶಾದ್ಯಂತ 83,000 ಶಾಖೆಗಳು, 60 ಲಕ್ಷ ಸ್ವಯಂಸೇವಕರು ಮತ್ತು 1,77,000 ಸೇವಾ ಕಾರ್ಯಕ್ರಮಗಳೊಂದಿಗೆ ಆರ್‌ಎಸ್‌ಎಸ್ ಮಾಡುತ್ತಿರುವ ಕೆಲಸ ಅಭೂತಪೂರ್ವ ಎಂದು ಅವರು ಶ್ಲಾಘಿಸಿದರು. ಸ್ವಾತಂತ್ರ್ಯ ಪೂರ್ವದಿಂದ ಇಂದಿನವರೆಗೆ ಭೂಕಂಪ ಮತ್ತು ಸುನಾಮಿಯಂತಹ ಅನೇಕ ರಾಷ್ಟ್ರೀಯ ವಿಪತ್ತುಗಳ ಸಮಯದಲ್ಲಿ ಸಂಘವು ನಮ್ಮೊಂದಿಗೆ ನಿಂತಿದೆ ಎಂದು ಅವರು ಸ್ಮರಿಸಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Exit mobile version