ಬ್ರಿಟನ್​​ನ ನೂತನ ಪ್ರಧಾನಿಯಾಗಿ ಆ್ಯಂಡಿ ಬರ್ನ್‌ಹ್ಯಾಮ್ ಅಧಿಕಾರ ಸ್ವೀಕಾರ – Kannada News | King of the North fame Andy Burnham becomes new UK Prime Minister

ಲಂಡನ್, ಜುಲೈ 20: ಮ್ಯಾಂಚೆಸ್ಟರ್‌ನ ಮಾಜಿ ಮೇಯರ್ ಮತ್ತು ಲೇಬರ್ ಪಕ್ಷದ ಹಿರಿಯ ನಾಯಕರಾದ ಆ್ಯಂಡಿ ಬರ್ನ್‌ಹ್ಯಾಮ್ (Andy Burnham) ಅಧಿಕೃತವಾಗಿ ಯುನೈಟೆಡ್ ಕಿಂಗ್‌ಡಮ್‌ನ (UK) ನೂತನ ಪ್ರಧಾನಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಲಂಡನ್‌ನ ಬಕಿಂಗ್ಹ್ಯಾಮ್ ಅರಮನೆಯಲ್ಲಿ ರಾಜ ಚಾರ್ಲ್ಸ್ III ಅವರನ್ನು ಭೇಟಿಯಾದ ನಂತರ ಆ್ಯಂಡಿ ಬರ್ನ್​ಹ್ಯಾಮ್ ಅಧಿಕಾರ ವಹಿಸಿಕೊಂಡರು. ಇವರು ಕೀರ್ ಸ್ಟಾರ್ಮರ್ (Keir Starmer) ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನವನ್ನು ತುಂಬಿದ್ದು, ಕಳೆದ 1 ದಶಕದಲ್ಲಿ ಅಂದರೆ 2016ರಿಂದೀಚೆಗೆ ಬ್ರಿಟನ್ ಕಂಡ 7ನೇ ಪ್ರಧಾನ ಮಂತ್ರಿಯಾಗಿದ್ದಾರೆ.

ಅಧಿಕಾರ ಹಸ್ತಾಂತರದ ಸಾಂಪ್ರದಾಯಿಕ ವಿಧಿಯಾದ “ಕಿಸ್ಸಿಂಗ್ ಹ್ಯಾಂಡ್ಸ್” (ಅರಮನೆಯ ನಿಯಮದಂತೆ ಕೈಕುಲುಕುವುದು) ಕಾರ್ಯಕ್ರಮದ ಫೋಟೋವನ್ನು ಬಕಿಂಗ್ಹ್ಯಾಮ್ ಅರಮನೆ ಬಿಡುಗಡೆ ಮಾಡಿದೆ. ಅರಮನೆಯ ಪ್ರಕಟಣೆಯ ಪ್ರಕಾರ, “ಮಹಾರಾಜರು ಆ್ಯಂಡಿ ಬರ್ನ್‌ಹ್ಯಾಮ್ ಅವರನ್ನು ಭೇಟಿ ಮಾಡಿ ಹೊಸ ಸರ್ಕಾರವನ್ನು ರಚಿಸಲು ವಿನಂತಿಸಿದರು. ಬರ್ನ್‌ಹ್ಯಾಮ್ ಅವರು ಈ ಪ್ರಸ್ತಾಪವನ್ನು ಸ್ವೀಕರಿಸಿ ಪ್ರಧಾನ ಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದರು” ಎಂದು ತಿಳಿಸಿದೆ.

ಇದನ್ನೂ ಓದಿ: Video: ಭಾರತಕ್ಕೆ ಬಂದಿಳಿದ ಬ್ರಿಟನ್ ಪ್ರಧಾನಿ ಕೀರ್ ಸ್ಟಾರ್ಮರ್

ಇದಾದ ಬಳಿಕ, ನಿರ್ಗಮಿತ ಪ್ರಧಾನಿ ಕೀರ್ ಸ್ಟಾರ್ಮರ್ ಅವರು ಪ್ರಧಾನಿಯ ಅಧಿಕೃತ ನಿವಾಸವಾದ ’10 ಡೌನಿಂಗ್ ಸ್ಟ್ರೀಟ್’ ಹೊರಗೆ ವಿದಾಯ ಭಾಷಣ ಮಾಡಿ, ನನ್ನ ಕೆಲಸ ಮುಗಿದಿದೆ ಎಂದು ಹೇಳಿದರು. ತಮ್ಮದೇ ಪಕ್ಷದ ಒತ್ತಡದಿಂದಾಗಿ ರಾಜೀನಾಮೆ ನೀಡಿದ ಅವರು, “2 ವರ್ಷಗಳ ಹಿಂದೆ ನಾನು ಅಧಿಕಾರ ವಹಿಸಿಕೊಂಡಾಗ ಇದ್ದದ್ದಕ್ಕಿಂತ ಬ್ರಿಟನ್ ಈಗ ಹೆಚ್ಚು ಬಲಶಾಲಿಯಾಗಿದೆ ಮತ್ತು ನ್ಯಾಯಯುತವಾಗಿದೆ” ಎಂದರು.

ಆ್ಯಂಡಿ ಬರ್ನ್‌ಹ್ಯಾಮ್ ಯಾರು?:

56 ವರ್ಷದ ಆ್ಯಂಡಿ ಬರ್ನ್‌ಹ್ಯಾಮ್ ಲೇಬರ್ ಪಕ್ಷದ ಅನುಭವಿ ರಾಜಕಾರಣಿ. ಇವರು ಈ ಹಿಂದೆ ಸಂಸದರಾಗಿ ಮತ್ತು ಲೇಬರ್ ಪಕ್ಷದ ಸರ್ಕಾರಗಳಲ್ಲಿ ಸಚಿವರಾಗಿ ಸೇವೆ ಸಲ್ಲಿಸಿದ್ದರು. ತದನಂತರ ‘ಗ್ರೇಟರ್ ಮ್ಯಾಂಚೆಸ್ಟರ್’ನ ಮೇಯರ್ ಆಗಿ ಕಾರ್ಯನಿರ್ವಹಿಸಿ ಭಾರಿ ಜನಪ್ರಿಯತೆ ಗಳಿಸಿದ್ದರು. ಬ್ರಿಟನ್‌ನ ಉತ್ತರದ ನಗರಗಳು ಮತ್ತು ಪ್ರಾದೇಶಿಕ ಸಬಲೀಕರಣದ ಪರವಾಗಿ ಸದಾ ಧ್ವನಿ ಎತ್ತುವ ಕಾರಣಕ್ಕಾಗಿ ಇವರನ್ನು ರಾಜಕೀಯ ವಲಯದಲ್ಲಿ ‘ಕಿಂಗ್ ಆಫ್ ದಿ ನಾರ್ತ್’ (ಉತ್ತರದ ರಾಜ) ಎಂದೇ ಕರೆಯಲಾಗುತ್ತದೆ.

ಇದನ್ನೂ ಓದಿ: ಬ್ರಿಟನ್‌ನ ನೂತನ ಪ್ರಧಾನಿ ಕೀರ್ ಸ್ಟಾರ್ಮರ್​​​ಗೆ ಕರೆ ಮಾಡಿ ಭಾರತಕ್ಕೆ ಭೇಟಿ ನೀಡುವಂತೆ ಆಹ್ವಾನಿಸಿದ ಮೋದಿ

ಕಳೆದ ತಿಂಗಳಷ್ಟೇ ಉಪಚುನಾವಣೆಯ ಮೂಲಕ ಮತ್ತೆ ಸಂಸತ್ತಿಗೆ ಮರಳಿದ ಇವರು, ದೇಶದಲ್ಲಿ ಒಗ್ಗಟ್ಟು ಮತ್ತು ಭರವಸೆಯ ರಾಜಕೀಯವನ್ನು ತರುವುದಾಗಿ ಭರವಸೆ ನೀಡಿದ್ದಾರೆ. ಬ್ರಿಟನ್ ಪ್ರಸ್ತುತ ಆರ್ಥಿಕ ಹಿಂಜರಿತ ಮತ್ತು ಸಾರ್ವಜನಿಕ ಹಣಕಾಸಿನ ತೀವ್ರ ಮುಕ್ಕಟ್ಟನ್ನು ಎದುರಿಸುತ್ತಿರುವ ಕಠಿಣ ಸಮಯದಲ್ಲಿ ಬರ್ನ್‌ಹ್ಯಾಮ್ ಅಧಿಕಾರ ವಹಿಸಿಕೊಂಡಿದ್ದಾರೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link

ಟೀಂ ಇಂಡಿಯಾದ ಈ ಮೂವರಿಗೆ ಏಕದಿನ ವಿಶ್ವಕಪ್ ತಂಡದಲ್ಲಿ ಜಾಗವಿಲ್ಲ – Kannada News | India’s UK Tour Disaster: Which Players Face Axing for 2027 ODI World Cup?

ಯುಕೆ ಪ್ರವಾಸದಲ್ಲಿ ಟೀಂ ಇಂಡಿಯಾದ (Team India) ಸತತ ಸೋಲುಗಳು ಅಭಿಮಾನಿಗಳನ್ನು ತೀವ್ರ ನಿರಾಶೆಯಲ್ಲಿ ಮುಳುಗಿಸಿದೆ. ಹತ್ತು ಪಂದ್ಯಗಳಲ್ಲಿ ಕೇವಲ ಒಂದು ಗೆಲುವು ಮಾತ್ರ ಟೀಂ ಇಂಡಿಯಾದ ಪ್ರದರ್ಶನದ ಬಗ್ಗೆ ಹಲವು ಅನುಮಾನಗಳನ್ನು ಹುಟ್ಟುಹಾಕಿದೆ. ವಿಶೇಷವಾಗಿ 2027 ರ ಏಕದಿನ ವಿಶ್ವಕಪ್ (2027 ODI World Cup) ಸಮೀಪಿಸುತ್ತಿರುವಾಗ, ಕೆಲವು ಆಟಗಾರರ ಕಳಪೆ ಪ್ರದರ್ಶನವು ಆಯ್ಕೆ ಮಂಡಳಿಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ಹೀಗಾಗಿ ಭಾರತ ಏಕದಿನ ತಂಡದಿಂದ ಕೆಲವು ಆಟಗಾರರನ್ನು ಕೈಬಿಡುವುದು ಖಚಿತವಾಗಿದೆ.

ಯುವ ಆಟಗಾರರಿಂದ ಸಪ್ಪೆ ಪ್ರದರ್ಶನ

ಐರ್ಲೆಂಡ್ ಮತ್ತು ಇಂಗ್ಲೆಂಡ್ ಪ್ರವಾಸಗಳಲ್ಲಿ ಭಾರತ ಪ್ರಾಬಲ್ಯ ಸಾಧಿಸುತ್ತದೆ ಎಂದು ಎಲ್ಲರೂ ನಿರೀಕ್ಷಿಸಿದ್ದರು. ಆದರೆ ತಂಡದ ಪ್ರದರ್ಶನ ಸಂಪೂರ್ಣವಾಗಿ ಭಿನ್ನವಾಗಿತ್ತು. ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಮತ್ತು ಶ್ರೇಯಸ್ ಅಯ್ಯರ್ ಅವರನ್ನು ಹೊರತುಪಡಿಸಿ, ಇತರ ಪ್ರಮುಖ ಬ್ಯಾಟ್ಸ್‌ಮನ್‌ಗಳಲ್ಲಿ ಯಾರೂ ಪ್ರದರ್ಶನ ನೀಡಲು ಸಾಧ್ಯವಾಗಲಿಲ್ಲ. ಬೌಲಿಂಗ್ ವಿಭಾಗದಲ್ಲಿ ಶಿಸ್ತಿನ ಕೊರತೆಯೂ ಸಹ ಎದುರಾಳಿ ತಂಡಕ್ಕೆ ಸುಲಭವಾಗಿ ಪ್ರಾಬಲ್ಯ ಸಾಧಿಸಲು ಅವಕಾಶ ಮಾಡಿಕೊಟ್ಟಿತು. ಅದರಲ್ಲೂ ಏಕದಿನ ಸ್ವರೂಪದಲ್ಲಿ ಅತ್ಯಂತ ಬಲಿಷ್ಠ ತಂಡಗಳಲ್ಲಿ ಒಂದಾಗಿರುವ ಟೀಂ ಇಂಡಿಯಾ 1-2 ಅಂತರದಿಂದ ಸರಣಿಯನ್ನು ಕಳೆದುಕೊಂಡಿತು ಎಂಬುದು ಕಹಿ ಸತ್ಯ. ಈ ಸೋಲಿನ ನಂತರ, ಬಿಸಿಸಿಐ 2027 ರ ವಿಶ್ವಕಪ್ ರೇಸ್‌ನಿಂದ ಕೆಲವರನ್ನು ಹೊರಗಿಡಲು ಸಿದ್ಧತೆ ನಡೆಸುತ್ತಿದೆ.

ಶಿವಂ ದುಬೆ: ನಿತೀಶ್ ಕುಮಾರ್ ರೆಡ್ಡಿ ಗಾಯಗೊಂಡ ನಂತರ ಆಲ್‌ರೌಂಡರ್ ಬದಲಿಗೆ ಶಿವಂ ದುಬೆಗೆ ಏಕದಿನ ತಂಡದಲ್ಲಿ ಅವಕಾಶ ಸಿಕ್ಕಿತು. ಆದಾಗ್ಯೂ, ಅವರು ತಮಗೆ ಸಿಕ್ಕ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಲ್ಲಿ ವಿಫಲರಾದರು. ತಮಗೆ ನೀಡಲಾದ ಏಕೈಕ ಏಕದಿನ ಪಂದ್ಯದಲ್ಲಿ ದುಬೆ ಶೂನ್ಯಕ್ಕೆ ಔಟಾಗಿದ್ದಲ್ಲದೆ, ಕೇವಲ 6 ಓವರ್‌ಗಳನ್ನು ಮಾತ್ರ ಬೌಲಿಂಗ್ ಮಾಡಿದರು. ನಾಯಕನಿಗೂ ದುಬೆ ಬೌಲಿಂಗ್‌ನಲ್ಲಿ ಹೆಚ್ಚಿನ ನಂಬಿಕೆ ಇರಲಿಲ್ಲ. ಹಾರ್ದಿಕ್ ಪಾಂಡ್ಯ ಮತ್ತು ನಿತೀಶ್ ರೆಡ್ಡಿ ಚೇತರಿಸಿಕೊಂಡು ತಂಡಕ್ಕೆ ಮರಳಿದರೆ, ದುಬೆ ಸ್ಥಾನ ಪಡೆಯುವುದು ಬಹುತೇಕ ಅಸಾಧ್ಯ.

ಇಶಾನ್ ಕಿಶನ್: ಏಕದಿನ ಪಂದ್ಯಗಳಲ್ಲಿ ಇಶಾನ್ ಕಿಶನ್ ಅವರ ಉತ್ತಮ ಸರಾಸರಿಯ ಹೊರತಾಗಿಯೂ, ಇಂಗ್ಲೆಂಡ್ ಸರಣಿಯಲ್ಲಿ ಅವರ ಬ್ಯಾಟಿಂಗ್ ವೈಫಲ್ಯ ಬಹಿರಂಗವಾಯಿತು. ಏಷ್ಯನ್ ಮತ್ತು ವೆಸ್ಟ್ ಇಂಡೀಸ್ ವಿಕೆಟ್‌ಗಳಲ್ಲಿ ಉತ್ತಮ ಪ್ರದರ್ಶನ ನೀಡಿದ ಕಿಶನ್, ಇಂಗ್ಲೆಂಡ್‌ನ ವೇಗದ, ಸ್ವಿಂಗ್ ಬೌಲಿಂಗ್‌ಗೆ ನಿಲ್ಲಲು ಸಾಧ್ಯವಾಗಲಿಲ್ಲ. ಕಿಶನ್ ಎರಡೂ ಇನ್ನಿಂಗ್ಸ್‌ಗಳಲ್ಲಿ ಒಟ್ಟು 15 ರನ್‌ಗಳನ್ನು ಮಾತ್ರ ಗಳಿಸಿದರು. 2027 ರ ವಿಶ್ವಕಪ್ ದಕ್ಷಿಣ ಆಫ್ರಿಕಾದಲ್ಲಿ ಹೈ-ಬೌನ್ಸ್ ಪಿಚ್‌ಗಳಲ್ಲಿ ನಡೆಯಲಿದೆ. ಇಂಗ್ಲೆಂಡ್ ಬೌಲರ್‌ಗಳು ಎಸೆಯುವ ಬೌನ್ಸರ್‌ಗಳನ್ನು ಎದುರಿಸಲು ಕಿಶನ್ ಹೆಣಗಾಡುತ್ತಿರುವುದನ್ನು ನೋಡಿದರೆ, ಅವರ ತಂತ್ರವು ಅಂತಹ ಪಿಚ್‌ಗಳಿಗೆ ಸರಿಹೊಂದುವುದಿಲ್ಲ ಎಂಬುದು ಸ್ಪಷ್ಟವಾಗುತ್ತದೆ.

ರೋಹಿತ್- ಕೊಹ್ಲಿ ಮತ್ತೆ ಕಣಕ್ಕಿಳಿಯುವುದು ಯಾವಾಗ? ಇಲ್ಲಿದೆ ಏಕದಿನ ಸರಣಿಗಳ ವೇಳಾಪಟ್ಟಿ

ಗುರ್ನೂರ್ ಬ್ರಾರ್‌: ಈ ಸರಣಿಯು ಯುವ ಬೌಲರ್ ಗುರ್ನೂರ್ ಬ್ರಾರ್‌ಗೆ ಕಹಿ ಅನುಭವವಾಗಿದೆ. ಮೂರು ಏಕದಿನ ಪಂದ್ಯಗಳಲ್ಲಿ 4 ವಿಕೆಟ್‌ಗಳನ್ನು ಪಡೆದಿದ್ದರೂ, ಅವರು 7.76 ರ ಎಕಾನಮಿ ದರದಲ್ಲಿ ರನ್‌ಗಳನ್ನು ಬಿಟ್ಟುಕೊಟ್ಟಿರುವುದು ಗಂಭೀರ ಕಳವಳಕಾರಿಯಾಗಿದೆ. ಮೂರನೇ ಏಕದಿನ ಪಂದ್ಯದಲ್ಲಿ ಅವರು ಭಾರತ ಪರ ಅತಿ ಹೆಚ್ಚು ರನ್ ನೀಡಿದವರಲ್ಲಿ ಒಬ್ಬರಾಗಿದ್ದರು. ಜಸ್ಪ್ರೀತ್ ಬುಮ್ರಾ, ಹರ್ಷಿತ್ ರಾಣಾ, ಪ್ರಸಿದ್ಧ್ ಕೃಷ್ಣ ಮತ್ತು ಮೊಹಮ್ಮದ್ ಸಿರಾಜ್ ಅವರಂತಹ ಅನುಭವಿ ವೇಗಿಗಳು ಲಭ್ಯವಿರುವುದರಿಂದ, ಗುರ್ನೂರ್ ಬ್ರಾರ್ ವಿಶ್ವಕಪ್ ಯೋಜನೆಗಳಿಂದ ಹೊರಗುಳಿಯುವ ಸಾಧ್ಯತೆಯಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬಿಗ್ ಬಾಸ್ ಮನೆಗೆ ‘ದಾದಾ’ ಎಂಟ್ರಿ: ಬೆಂಗಾಲಿ ಆವೃತ್ತಿಗೆ ಸೌರವ್ ಗಂಗೂಲಿ ನಿರೂಪಕ – Kannada News | Sourav Ganguly to host Bigg Boss Bangla in Star Jalsha Jiohotstar from 2026 September

ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ, ಅಭಿಮಾನಿಗಳ ಹೆಮ್ಮೆಯ ‘ದಾದಾ’ ಸೌರವ್ ಗಂಗೂಲಿ (Sourav Ganguly) ಈಗ ಬಿಗ್ ಬಾಸ್ ಸಾಮ್ರಾಜ್ಯಕ್ಕೆ ಅಧಿಕೃತವಾಗಿ ಕಾಲಿಟ್ಟಿದ್ದಾರೆ. ಮುಂಬರುವ ಸೆಪ್ಟೆಂಬರ್ 2026ರಿಂದ ಆರಂಭವಾಗಲಿರುವ ಜಿಯೋಸ್ಟಾರ್ (JioStar) ಸಂಸ್ಥೆಯ ‘ಬಿಗ್ ಬಾಸ್’ ಮೆಗಾ ಲಾಂಚ್‌ನಲ್ಲಿ ಗಂಗೂಲಿ ಅವರು ಹೊಸ ಇತಿಹಾಸ ಬರೆಯಲು ಸಜ್ಜಾಗಿದ್ದಾರೆ. ದೀರ್ಘಾವಧಿಯ ಬಿಡುವಿನ ನಂತರ ಕಂಬ್ಯಾಕ್ ಮಾಡುತ್ತಿರುವ ‘ಬಿಗ್ ಬಾಸ್ ಬಾಂಗ್ಲಾ’ (Bigg Boss Bangla) ಆವೃತ್ತಿಗೆ ಸೌರವ್ ಗಂಗೂಲಿ ನಿರೂಪಕರಾಗಿ ಆಯ್ಕೆಯಾಗಿದ್ದಾರೆ.

ಕ್ರಿಕೆಟ್ ಮೈದಾನದಲ್ಲಿ ತಮ್ಮ ಆಕ್ರಮಣಕಾರಿ ನಾಯಕತ್ವ ಹಾಗೂ ಟಿವಿ ಶೋಗಳಲ್ಲಿ ತಮ್ಮ ಚಾಣಾಕ್ಷ ನಿರೂಪಣೆಯಿಂದ ಜನಪ್ರಿಯರಾಗಿರುವ ಸೌರವ್ ಗಂಗೂಲಿ, ಈಗ ಬಿಗ್ ಬಾಸ್ ಮನೆಯನ್ನು ಹೇಗೆ ನಿಭಾಯಿಸಲಿದ್ದಾರೆ ಎಂಬ ಕುತೂಹಲ ಮೂಡಿದೆ. ಈಗಾಗಲೇ ‘ಸ್ಟಾರ್ ಜಲ್ಸಾ’ ವಾಹಿನಿಯು ತನ್ನ ಅಧಿಕೃತ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ‘ಬಿಗ್ ಬಾಸ್ ಬಾಂಗ್ಲಾ ಬರುತ್ತಿದೆ’ ಎಂದು ಸಣ್ಣ ಝಲಕ್ ಹಂಚಿಕೊಂಡಿದೆ.

ಪ್ರಸಾರ ಎಲ್ಲಿ ಮತ್ತು ಯಾವಾಗ?

ಸೆಪ್ಟೆಂಬರ್ 2026ರ ಹಬ್ಬದ ಸೀಸನ್‌ನಿಂದ ಏಕಕಾಲದಲ್ಲಿ ಆರಂಭವಾಗಲಿರುವ ಆರು ಭಾಷೆಗಳ ಬಿಗ್ ಬಾಸ್ ಪೈಕಿ ಬಾಂಗ್ಲಾ ಆವೃತ್ತಿಯೂ ಒಂದಾಗಿದೆ. ವೀಕ್ಷಕರು ಈ ಕಾರ್ಯಕ್ರಮವನ್ನು ‘ಸ್ಟಾರ್ ಜಲ್ಸಾ’ ವಾಹಿನಿಯಲ್ಲಿ ವೀಕ್ಷಿಸಬಹುದು. ಮೊಬೈಲ್ ಅಥವಾ ಡಿಜಿಟಲ್ ಪರದೆಯಲ್ಲಿ ವೀಕ್ಷಿಸಲು ಇಚ್ಛಿಸುವವರು ‘ಜಿಯೋಹಾಟ್‌ಸ್ಟಾರ್’ ಆ್ಯಪ್‌ನಲ್ಲಿ ಲೈವ್ ವೀಕ್ಷಿಸಬಹುದಾಗಿದೆ.

ಕ್ರಿಕೆಟ್‌ನಿಂದ ರಿಯಾಲಿಟಿ ಶೋವರೆಗೆ ‘ದಾದಾ’ ಜರ್ನಿ:

ಸೌರವ್ ಗಂಗೂಲಿ ಪ್ರಸ್ತುತ ‘ಕ್ರಿಕೆಟ್ ಅಸೋಸಿಯೇಷನ್ ಆಫ್ ಬೆಂಗಾಲ್’ ಅಧ್ಯಕ್ಷರಾಗಿ ಹಾಗೂ ಐಪಿಎಲ್‌ನ ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿಯ ಮುಖ್ಯ ಕೋಚ್ ಆಗಿ ಸಕ್ರಿಯರಾಗಿದ್ದಾರೆ. ಈ ಹಿಂದೆ ಬಿಸಿಸಿಐ ಅಧ್ಯಕ್ಷರಾಗಿಯೂ ಅವರು ಸೇವೆ ಸಲ್ಲಿಸಿದ್ದರು. ಬಂಗಾಳಿ ಕಿರುತೆರೆಯಲ್ಲಿ ಈಗಾಗಲೇ ಯಶಸ್ವಿ ಕ್ವಿಜ್ ಶೋ ನಡೆಸಿಕೊಟ್ಟಿರುವ ಗಂಗೂಲಿ ಅವರಿಗೆ ಬಿಗ್ ಬಾಸ್ ಸಂಪೂರ್ಣ ವಿಭಿನ್ನ ಹಾಗೂ ಸವಾಲಿನ ವೇದಿಕೆಯಾಗಲಿದೆ.

ಇದನ್ನೂ ಓದಿ: ತೆರೆಗೆ ಬರುತ್ತಿದೆ ‘ದಾದಾ’ನ ದಾದಾಗಿರಿ, ಬಿಡುಗಡೆ ದಿನಾಂಕ ಘೋಷಣೆ

6 ಭಾಷೆಗಳಲ್ಲಿ ಬಿಗ್ ಬಾಸ್ ಅಬ್ಬರ:

ಜಿಯೋಸ್ಟಾರ್ ನೆಟ್‌ವರ್ಕ್‌ನಲ್ಲಿ ಸೆಪ್ಟೆಂಬರ್‌ನಿಂದ ಭಾರತದಾದ್ಯಂತ ಒಟ್ಟು 6 ಭಾಷೆಗಳಲ್ಲಿ ಬಿಗ್ ಬಾಸ್ ಅಬ್ಬರ ಶುರುವಾಗಲಿದ್ದು, ಆಯಾ ಭಾಷೆಯ ಸೂಪರ್‌ಸ್ಟಾರ್‌ಗಳು ಶೋ ಮುನ್ನಡೆಸಲಿದ್ದಾರೆ. ಈ ಬಾರಿಯ ಬಿಗ್ ಬಾಸ್ ಕನ್ನಡ ಆವೃತ್ತಿಯನ್ನು ಎಂದಿನಂತೆ ಕಿಚ್ಚ ಸುದೀಪ್ ಮುನ್ನಡೆಸಿದರೆ, ಬಾಲಿವುಡ್ ನಟ ಸಲ್ಮಾನ್ ಖಾನ್ ಅವರು ಹಿಂದಿ ಆವೃತ್ತಿಯ ಸಾರಥ್ಯ ವಹಿಸಲಿದ್ದಾರೆ. ಇನ್ನು, ತಮಿಳಿನಲ್ಲಿ ವಿಜಯ್ ಸೇತುಪತಿ, ತೆಲುಗಿನಲ್ಲಿ ನಾಗಾರ್ಜುನ ಹಾಗೂ ಮಲಯಾಳಂನಲ್ಲಿ ಮೋಹನ್ ಲಾಲ್ ಅವರು ನಿರೂಪಕರಾಗಿ ವೀಕ್ಷಕರನ್ನು ರಂಜಿಸಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿಯಲ್ಲಿ 18 ಹುದ್ದೆಗಳ ನೇಮಕಾತಿ – Kannada News | Government Jobs in Karnataka: DHFWS Udupi Invites Applications for 18 Vacancies

ಕರ್ನಾಟಕದ ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ಉತ್ತಮ ಅವಕಾಶ ಲಭ್ಯವಾಗಿದೆ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ, ಉಡುಪಿ (DHFWS Udupi) ವತಿಯಿಂದ ಜೂನಿಯರ್ ಲ್ಯಾಬೊರೇಟರಿ ಟೆಕ್ನಿಕಲ್ ಆಫೀಸರ್ ಹಾಗೂ ಫಾರ್ಮಸಿ ಆಫೀಸರ್ ಹುದ್ದೆಗಳ ನೇಮಕಾತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಒಟ್ಟು 18 ಹುದ್ದೆಗಳು ಖಾಲಿ ಇದ್ದು, ಅರ್ಹ ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಹುದ್ದೆ ಮತ್ತು ವಿದ್ಯಾರ್ಹತೆ

ಜೂನಿಯರ್ ಲ್ಯಾಬೊರೇಟರಿ ಟೆಕ್ನಿಕಲ್ ಆಫೀಸರ್- 5 (DMLT)
ಫಾರ್ಮಸಿ ಆಫೀಸರ್- 13 (D.Pharm)

ವಯೋಮಿತಿ:

ಗರಿಷ್ಠ ವಯಸ್ಸು: 45 ವರ್ಷ. ಆದರೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ (DHFWS) ನಿಯಮಾನುಸಾರ ವಯೋಸಡಿಲಿಕೆ ಅನ್ವಯವಾಗುತ್ತದೆ.

ಆಯ್ಕೆ ಪ್ರಕ್ರಿಯೆ:

  • ಅಭ್ಯರ್ಥಿಗಳ ಆಯ್ಕೆ ಇಲಾಖೆ ನಿಗದಿಪಡಿಸಿರುವ ಮಾನದಂಡಗಳ ಪ್ರಕಾರ ನಡೆಯಲಿದೆ.
  • ಅರ್ಜಿಗಳ ಪರಿಶೀಲನೆ
  • ವಿದ್ಯಾರ್ಹತೆ ಹಾಗೂ ಅನುಭವದ ಆಧಾರದ ಮೌಲ್ಯಮಾಪನ
  • ಅಗತ್ಯವಿದ್ದಲ್ಲಿ ಸಂದರ್ಶನ/ದಾಖಲೆ ಪರಿಶೀಲನೆ

ಇದನ್ನೂ ಓದಿ: ಜಿಲ್ಲಾ ಪಂಚಾಯತ್ ರಾಯಚೂರು ನೇಮಕಾತಿ 2026: 5 ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಅರ್ಜಿ ಸಲ್ಲಿಸುವ ವಿಧಾನ (Step by Step)

ಹಂತ 1: DHFWS ಉಡುಪಿ ಪ್ರಕಟಿಸಿರುವ ಅಧಿಕೃತ ನೇಮಕಾತಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ.

ಹಂತ 2: ನೀವು ಅರ್ಜಿ ಸಲ್ಲಿಸುವ ಹುದ್ದೆಗೆ ಅಗತ್ಯ ವಿದ್ಯಾರ್ಹತೆ ಹಾಗೂ ವಯೋಮಿತಿಯನ್ನು ಪರಿಶೀಲಿಸಿ.

ಹಂತ 3: ಅಧಿಕೃತ ವೆಬ್‌ಸೈಟ್ ಅಥವಾ ಅಧಿಸೂಚನೆಯಲ್ಲಿರುವ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿ.

ಹಂತ 4: ಅರ್ಜಿಯನ್ನು ಸ್ಪಷ್ಟವಾಗಿ ಹಾಗೂ ಸರಿಯಾದ ಮಾಹಿತಿಯೊಂದಿಗೆ ಭರ್ತಿ ಮಾಡಿ.

  • ಹಂತ 5: ಕೆಳಗಿನ ದಾಖಲೆಗಳ ಸ್ವಯಂ ದೃಢೀಕರಿಸಿದ (Self Attested) ಪ್ರತಿಗಳನ್ನು ಲಗತ್ತಿಸಿ.
    SSLC ಅಂಕಪಟ್ಟಿ
  • DMLT / D.Pharm ಪ್ರಮಾಣಪತ್ರ
  • ಆಧಾರ್ ಕಾರ್ಡ್ ಅಥವಾ ಗುರುತಿನ ಚೀಟಿ
  • ವಯೋಮಿತಿ ದಾಖಲೆ
  • ಜಾತಿ ಪ್ರಮಾಣಪತ್ರ (ಅನ್ವಯಿಸಿದರೆ)
  • ಅನುಭವ ಪ್ರಮಾಣಪತ್ರ (ಇದ್ದರೆ)
  • ಇತ್ತೀಚಿನ ಪಾಸ್‌ಪೋರ್ಟ್ ಗಾತ್ರದ ಫೋಟೋ

ಹಂತ 6: ಅರ್ಜಿಯನ್ನು ಎಲ್ಲಾ ದಾಖಲೆಗಳೊಂದಿಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ, ಉಡುಪಿ ಜಿಲ್ಲೆಗೆ ಕಳುಹಿಸಬೇಕು. ಅರ್ಜಿಯನ್ನು ರಿಜಿಸ್ಟರ್ ಪೋಸ್ಟ್ / ಸ್ಪೀಡ್ ಪೋಸ್ಟ್ ಅಥವಾ ಅಧಿಸೂಚನೆಯಲ್ಲಿ ಸೂಚಿಸಿರುವ ವಿಧಾನದಲ್ಲಿ ಕಳುಹಿಸಬಹುದು.

ಅಧಿಕೃತ ವೆಬ್‌ಸೈಟ್: udupi.nic.in

ಅಭ್ಯರ್ಥಿಗಳು ಗಮನಿಸಬೇಕಾದ ವಿಷಯಗಳು

  • ಕೊನೆಯ ದಿನಾಂಕದ ನಂತರ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.
  • ಅರ್ಜಿಯಲ್ಲಿನ ಎಲ್ಲಾ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಬೇಕು.
  • ಎಲ್ಲಾ ದಾಖಲೆಗಳನ್ನು ಸ್ವಯಂ ದೃಢೀಕರಿಸಿ ಲಗತ್ತಿಸಬೇಕು.
  • ಅಪೂರ್ಣ ಅರ್ಜಿಗಳನ್ನು ಇಲಾಖೆ ತಿರಸ್ಕರಿಸಬಹುದು.
  • ಅರ್ಜಿ ಕಳುಹಿಸುವ ಮೊದಲು ಮತ್ತೊಮ್ಮೆ ಪರಿಶೀಲನೆ ಮಾಡುವುದು ಉತ್ತಮ.

ಸಾಮಾನ್ಯವಾಗಿ ಕೇಳಲಾಗುವ ಪ್ರಶ್ನೆಗಳು (FAQ)

ಪ್ರಶ್ನೆ:ಯಾವ ಯಾವ ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ?

ಉತ್ತರ: ಜೂನಿಯರ್ ಲ್ಯಾಬೊರೇಟರಿ ಟೆಕ್ನಿಕಲ್ ಆಫೀಸರ್ – 5, ಫಾರ್ಮಸಿ ಆಫೀಸರ್ – 13

ಪ್ರಶ್ನೆ: ಅರ್ಜಿ ಸಲ್ಲಿಸಲು ಅಗತ್ಯ ವಿದ್ಯಾರ್ಹತೆ ಏನು?

ಉತ್ತರ: ಜೂನಿಯರ್ ಲ್ಯಾಬೊರೇಟರಿ ಟೆಕ್ನಿಕಲ್ ಆಫೀಸರ್‌ಗೆ DMLT ಮತ್ತು ಫಾರ್ಮಸಿ ಆಫೀಸರ್‌ಗೆ D.Pharm ವಿದ್ಯಾರ್ಹತೆ ಕಡ್ಡಾಯ.

ಪ್ರಶ್ನೆ: ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ ಯಾವುದು?

ಉತ್ತರ: 21 ಜುಲೈ 2026 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.

Source link

ಭೀಕರ ಬರದ ಛಾಯೆಗೆ ಸಾಕ್ಷಿಯಾದ ಬಾಗಲಕೋಟೆಯ ಅದೊಂದು ಗ್ರಾಮ: ತುತ್ತಿನ ಚೀಲ ತುಂಬಿಸಿಕೊಳ್ಳಲು ಗುಳೆ ಹೋದ ಜನ – Kannada News | Bagalkote’s Lingapura Faces Severe Drought: 80% of Homes Locked as Farmers Migrate

ಗುಳೆ ಹೋದ ಗ್ರಾಮಸ್ಥರುImage Credit source: tv9 kannada

ಬಾಗಲಕೋಟೆ, ಜುಲೈ 20: ಜಿಲ್ಲೆಯ ಗುಳೇದಗುಡ್ಡ ತಾಲೂಕಿನ ಲಿಂಗಾಪುರ ಗ್ರಾಮಕ್ಕೆ ಕಾಲಿಟ್ಟರೆ ತೆರೆದ ಬಾಗಿಲಿನ ಮನೆಗಳನ್ನು ನೋಡುವುದೇ ಅಪರೂಪ. ಗ್ರಾಮದಲ್ಲಿ ಬರೀ ಬೀಗ ಹಾಕಿದ ಮನೆಗಳೇ ಸ್ವಾಗತಿಸುತ್ತವೆ. ಅಲ್ಲಲ್ಲಿ ಅಜ್ಜಿಯರು, ಹಿರಿಯರು ಕಟ್ಟೆ ಮೇಲೆ ಬಾಡಿದ ಮುಖದಲ್ಲಿ ಕೂತಿರುವ ದೃಶ್ಯ ಸಾಮಾನ್ಯ. ಇಡೀ ಊರಿಗೆ ಊರೇ ಬಿಕೋ ಎನ್ನುತ್ತಿದ್ದು, ಬರದ (drought) ಭೀಕರ ಛಾಯೆಗೆ ಸಾಕ್ಷಿಯಾಗಿದೆ. ಮುಂಗಾರು ಮಳೆ ಕೈಕೊಟ್ಟ ಹಿನ್ನೆಲೆಯಲ್ಲಿ ಬಾಗಲಕೋಟೆ (bagalkot) ಜಿಲ್ಲೆಯಲ್ಲಿ ಬರದ ನರಕ ದರ್ಶನವಾಗುತ್ತಿದ್ದು, ರೈತರು ಬದುಕು ಸಾಗಿಸಲು ಊರನ್ನೇ ತೊರೆದು ವಲಸೆ ಹೋಗುತ್ತಿದ್ದಾರೆ.

ಗ್ರಾಮದಲ್ಲಿ ನೀರವಮೌನ

ಬಾಗಲಕೋಟೆ ಜಿಲ್ಲೆಯ ಗುಳೇದಗುಡ್ಡ ತಾಲೂಕಿನ ಲಿಂಗಾಪುರ ಗ್ರಾಮದಲ್ಲಿ ಸದ್ಯ ನೀರವಮೌನ ಆವರಿಸಿದೆ. ಈ ಗ್ರಾಮಕ್ಕೆ ಕಾಲಿಟ್ಟರೆ ಸಾಕು ಬರದ ನರಕದರ್ಶನವಾಗುತ್ತದೆ. ತಮ್ಮ ತುತ್ತಿನ ಚೀಲ ತುಂಬಿಸಿಕೊಳ್ಳುವುದಕ್ಕೆ ಮನೆ, ಆಸ್ತಿ-ಪಾಸ್ತಿ ಬಿಟ್ಟು ಜನರು ಗುಳೆ ಹೋಗಿದ್ದಾರೆ. ಮುಂಗಾರು ಮಳೆ ಕೈಕೊಟ್ಟಿದ್ದರಿಂದ ಬಿತ್ತನೆ ಇಲ್ಲ. ಕೆಲ‌ಕಡೆ ಬಿತ್ತಿದರೂ ಬೆಳೆ ಹಾಳಾಗಿದೆ. ಹೀಗಿರುವಾಗಿ ಕೃಷಿ ಕೆಲಸ ಕೂಡ ಇಲ್ಲ.

ಇದನ್ನೂ ಓದಿ: Karnataka Dam Water Level: ಇನ್ನೂ 100 ಅಡಿ ತಲುಪಿಲ್ಲ ಕೆಆರ್​ಎಸ್, ಕರ್ನಾಟಕದ ಡ್ಯಾಂಗಳ ಇಂದಿನ ನೀರಿನ ಮಟ್ಟದ ವಿವರ

ಕೃಷಿ ಚಟುವಟಿಕೆಗಳು ಇಲ್ಲದಿರುವುದು ಹಾಗೂ ಉದ್ಯೋಗ ಖಾತರಿ (ಜಿ ರಾಮ್ ಜಿ) ಕೆಲಸಗಳು ಸರಿಯಾಗಿ ಸಿಗದ ಕಾರಣ ಜೀವನ ನಡೆಸುವುದು ದುಸ್ತರವಾಗಿದೆ. ಇದರಿಂದ ಅನಿವಾರ್ಯವಾಗಿ ಗ್ರಾಮದ ರೈತರು, ಯುವ ರೈತರು ಎಲ್ಲರೂ‌ ಮನೆಗೆ ಬೀಗ ಹಾಕಿಕೊಂಡು ಮಂಗಳೂರು, ಉಡುಪಿ, ಗೋವಾ ರಾಜ್ಯಕ್ಕೆ ದುಡಿಯುವುದಕ್ಕೆ ಗುಳೆ ಹೋಗಿದ್ದಾರೆ. ‘ಮಳೆಯಿಲ್ಲ, ಬೆಳೆಯಿಲ್ಲದೆ ಬರ ಬಿದ್ದಿದೆ. ಆದ್ದರಿಂದ‌ ನಮ್ಮಂತಹ ಮುದುಕರನ್ನು ಬಿಟ್ಟು ಎಲ್ಲರೂ ಗುಳೆ ಹೋಗಿದ್ದಾರೆ ಏನು ಮಾಡುವುದು ಅಂತ ಹಿರಿಜೀವ ಲಕ್ಷ್ಮಣ ಕೋಟಿ ಅಳಲು ತೋಡಿಕೊಂಡಿದ್ದಾರೆ.

80% ಮನೆಗಳಿಗೆ ಬೀಗ

ಲಿಂಗಾಪುರ ಗ್ರಾಮದಲ್ಲಿ 300ಕ್ಕೂ ಅಧಿಕ‌ ಮನೆಗಳಿವೆ. ಇನ್ನು ಗ್ರಾಮದಲ್ಲಿ 1500 ರಿಂದ 2 ಸಾವಿರ ಜನ ಸಂಖ್ಯೆಯಿದೆ. ಬಹುತೇಕ ಗ್ರಾಮದ ‌ಜನರು ರೈತರು ಕೃಷಿ ಕಾರ್ಮಿಕರಾಗಿದ್ದಾರೆ. ಆದರೆ ಇದೀಗ ಊರಿನಲ್ಲಿ ಪ್ರತಿಶತ 80 ರಷ್ಟು ಜನರು ಊರನ್ನು ಬಿಟ್ಟು ಗುಳೆ ಹೋಗಿದ್ದಾರೆ. ಇದರಿಂದ ಗ್ರಾಮದಲ್ಲಿ ‌ಸಾಲು‌ ಸಾಲು‌ ಬೀಗ ಹಾಕಿರುವ‌ ಮನೆಗಳೇ ಕಾಣುತ್ತವೆ. ಮನೆಗೆ ಬೀಗ ಹಾಕಿ ಪತ್ನಿ, ಮಕ್ಕಳ ಸಮೇತ ರೈತರು ಊರನ್ನು ತೊರೆದಿದ್ದಾರೆ. ಇನ್ನು ಕೆಲವರು ವೃದ್ದರನ್ನು ಮನೆ ನೋಡಿಕೊಳ್ಳಲಿ ಅಂತ‌ ಬಿಟ್ಟು ಹೋಗಿದ್ದಾರೆ. ಇದರಿಂದ ಗ್ರಾಮದಲ್ಲಿ ಯುವಕರು ಕಾಣುವುದು ಅಪರೂಪವೆಂಬಂತಾಗಿದೆ.

ಕೈಗಾರಿಕೆಗಳಿಗೆ ಆದ್ಯತೆ ನೀಡುವಂತೆ ಒತ್ತಾಯ

ಈ ಊರು ಅಷ್ಟೇ ಅಲ್ಲದೇ ಗುಳೇದಗುಡ್ಡ ತಾಲೂಕಿನ ತೆಗ್ಗಿ, ಕೆಲವಡಿ, ಕರಡಿಗುಡ್ಡ, ಹಂಸನೂರು, ಬಾದಾಮಿ ತಾಲೂಕಿನ ಮುತ್ತಲಗೇರಿ, ಮುಷ್ಟಿಗೇರಿ, ಆಡಗಲ್ ಸೇರಿದಂತೆ 15ಕ್ಕೂ ಅಧಿಕ ಗ್ರಾಮಸ್ಥರು ಗುಳೆ ಹೋಗಿದ್ದಾರೆ. ಗ್ರಾಮದಲ್ಲಿ ಕೃಷಿ ಜೊತೆಗೆ ಇತರೆ ಕೆಲಸ ಮಾಡಿಕೊಂಡಿರುವ ಕೆಲ ಜನರಿದ್ದು, ಊರಿಗೆ ಜನಪ್ರನಿಧಿಗಳು, ಅಧಿಕಾರಿಗಳು ಭೇಟಿ ನೀಡಿ ಪರಿಸ್ಥಿತಿ ಅರಿತು ರೈತರಿಗೆ ಪರಿಹಾರ ನೀಡಬೇಕು. ಜೊತೆಗೆ ಈ ಭಾಗದಲ್ಲಿ ಕೈಗಾರಿಕೆಗಳು ಬರಬೇಕು. ಜಿಲ್ಲೆಯಲ್ಲಿ ಪ್ಯಾಕ್ಟರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಇದ್ದರೆ ಇಂತಹ ಸಂದರ್ಭದಲ್ಲಿ ಜನರಿಗೆ ಆಸರೆಯಾಗುತ್ತದೆ. ಸರಕಾರ ಹಾಗೂ ಜನಪ್ರತಿನಿಧಿಗಳು ಕೈಗಾರಿಕೆಗಳಿಗೆ ಹೆಚ್ಚು ಆದ್ಯತೆ ನೀಡಿ ಕೈಗಾರಿಕೆ ತಂದರೆ ಮಾತ್ರ ಗುಳೆ ಹೋಗುವುದು ತಪ್ಪುತ್ತದೆ. ಆ ನಿಟ್ಟಿನಲ್ಲಿ ಸರಕಾರ ಕ್ರಮಕೈಗೊಳ್ಳುವಂತೆ ಆಗ್ರಹಿಸಲಾಗಿದೆ.

ಇದನ್ನೂ ಓದಿ: ರಾಜ್ಯದಲ್ಲಿ ಭೀಕರ ಬರಗಾಲದ ಛಾಯೆ: ಕೆರೆಗಳು ಬರಡು, ಬೆಳೆ ಒಣಗಿ ಅನ್ನದಾತ ಕಂಗಾಲು!

ಒಟ್ಟಿನಲ್ಲಿ ಕೈಕೊಟ್ಟ ಮಳೆ ಬರದ ಸ್ಥಿತಿ ತಂದೊಡ್ಡಿದ್ದು, ಗ್ರಾಮೀಣ ಭಾಗದ ಜನರು ಅದರಲ್ಲೂ ರೈತರು ಬಾರಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಜನಪ್ರತಿನಿಧಿಗಳು, ಅಧಿಕಾರಿಗಳು ಭೇಟಿ ನೀಡಿ ಇವರಿಗೆ ಆಸರೆಯಾಗಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಶಾಸ್ತ್ರದ ಪ್ರಕಾರ ಪತ್ನಿ ಚೆನ್ನಮ್ಮನನ್ನು ಕಳಿಸಿಕೊಟ್ಟ ದೇವೇಗೌಡ್ರು, ಕೊನೆ ಕ್ಷಣ ಹೇಗಿತ್ತು ನೋಡಿ – Kannada News | HD Devegowda Done wife Chennamma’s last rites in Hassan

ಹಾಸನ, (ಜುಲೈ 20): ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ಮಣ್ಣಲ್ಲಿ ಮಣ್ಣಾಗಿದ್ದಾರೆ. ಗೌಡರ ಹುಟ್ಟೂರು ಹರದನಹಳ್ಳಿ ಮಾವಿನಕೆರೆಯ ರಂಗನಾಥಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಇಂದು (ಜುಲೈ 20) ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿತು. ಹಿರಿಯ ಪುತ್ರ ಹೆಚ್​​​​ಡಿ ರಮೇಶ್ ಅವರು ಅಂತಿಮ ವಿಧಿವಿಧಾನ ಪೂರೈಸಿದ್ದು, ಇನ್ನು ದೇವೇಗೌಡ್ರು ಪತ್ನಿಯ ಕೊನೆ ಮುಖ ನೋಡಿ ಮಣ್ಣು ಹಾಕಿ ವಿದಾಯ ಹೇಳಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ತಾಯಿ ಚೆನ್ನಮ್ಮ ಅಂತಿಮ ಸಂಸ್ಕಾರದ ಬಳಿಕ ಕೇಂದ್ರ ಸಚಿವ ಕುಮಾರಸ್ವಾಮಿ ಭಾವುಕ ಮಾತು – Kannada News | H.D. Kumaraswamys Emotional Farewell to Mother Chennamma

ಹಾಸನ, ಜುಲೈ 20: ಸಕಲ ಸರ್ಕಾರಿ ಗೌರವಗಳೊಂದಿಗೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಪತ್ನಿ ಚೆನ್ನಮ್ಮ ಅವರ ಅಂತಿಮ ಸಂಸ್ಕಾರ ನೆರವೇರಿಸಲಾಯಿತು. ಕಿರಿಯ ಮಗ ಹೆಚ್.ಡಿ.ರಮೇಶ್ ಅವರು ಅಂತಿಮ ವಿಧಿವಿಧಾನಗಳನ್ನು ಪೂರೈಸಿದರು. ತಾಯಿಯ ಅಂತಿಮ ಸಂಸ್ಕಾರದ ಬಳಿಕ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಭಾವುಕರಾಗಿ ಮಾತನಾಡಿದ್ದು, ತಮ್ಮ ತಾಯಿ ಶಾಶ್ವತವಾಗಿ ತಮ್ಮ ಹೃದಯದಲ್ಲಿ ನೆಲೆಸಿದ್ದಾರೆ. ಅವರ ಬದುಕು, ಅವರ ಆದರ್ಶಗಳು ಮತ್ತು ಅವರು ಜೀವನವನ್ನು ನಡೆಸಿದ ರೀತಿ ತಮ್ಮ ಕುಟುಂಬಕ್ಕೆ ಸದಾ ಸ್ಫೂರ್ತಿಯಾಗಿದ್ದು, ಅವರ ಭಾವನೆಗಳನ್ನು ಮುಂದುವರಿಸಿಕೊಂಡು ಹೋಗುವುದು ತಮ್ಮ ಕರ್ತವ್ಯ ಎಂದು ಹೇಳಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

ಪುರಿ ಜಗನ್ನಾಥ ರಥಯಾತ್ರೆಯ ಮಹಾಪ್ರಸಾದವನ್ನು ಆನ್‌ಲೈನ್‌ನಲ್ಲಿ ಬುಕ್ ಮಾಡಬಹುದೇ? ಇಲ್ಲಿದೆ ಉತ್ತರ – Kannada News | Puri Jagannath Temple Prasad Booking Can we book Mahaprasad online during Rath Yatra 2026?

ನವದೆಹಲಿ, ಜುಲೈ 20: ರಥಯಾತ್ರೆ (Puri Rath Yatra) ಪ್ರಯುಕ್ತ ಒಡಿಶಾದ ಪುರಿ ಜಗನ್ನಾಥ ದೇವಸ್ಥಾನಕ್ಕೆ (Puri Jagannath Temple) ಲಕ್ಷಾಂತರ ಭಕ್ತರು ಹರಿದುಬರುತ್ತಿದ್ದು, ವಿಶ್ವದಾದ್ಯಂತ ಕೋಟ್ಯಂತರ ಜನರು ಈ ಭವ್ಯ ಆಚರಣೆಯನ್ನು ವೀಕ್ಷಿಸುತ್ತಿದ್ದಾರೆ. ಈ ನಡುವೆ, ಸರ್ಚ್ ಇಂಜಿನ್‌ಗಳಲ್ಲಿ ಅತ್ಯಂತ ಹೆಚ್ಚು ಹುಡುಕಲಾಗುತ್ತಿರುವ ಪ್ರಶ್ನೆಯೆಂದರೆ, “ಪುರಿ ಜಗನ್ನಾಥ ದೇವಾಲಯದ ಮಹಾಪ್ರಸಾದವನ್ನು ಆನ್‌ಲೈನ್‌ನಲ್ಲಿ ಬುಕ್ ಮಾಡುವುದು ಹೇಗೆ?” ಎಂಬುದಾಗಿದೆ. ಪ್ರತಿ ವರ್ಷ ಒಡಿಶಾಗೆ ಪ್ರಯಾಣಿಸದೆಯೇ ಈ ಪವಿತ್ರ ಪ್ರಸಾದವನ್ನು ಪಡೆಯಬೇಕೆಂದು ಹಂಬಲಿಸುವ ಸಾವಿರಾರು ಭಕ್ತರು ಆನ್‌ಲೈನ್ ಬುಕಿಂಗ್ ಮತ್ತು ಹೋಮ್ ಡೆಲಿವರಿ ಆಯ್ಕೆಗಳಿಗಾಗಿ ಹುಡುಕಾಡುತ್ತಿದ್ದಾರೆ.

ಆದರೆ, ಹಲವರಿಗೆ ತಿಳಿಯದ ಅಸಲಿ ಸತ್ಯ ಇಲ್ಲಿದೆ. ಜಗನ್ನಾಥ ದೇವಾಲಯದ ಮಹಾಪ್ರಸಾದಕ್ಕೆ ಯಾವುದೇ ಅಧಿಕೃತ ಆನ್‌ಲೈನ್ ಬುಕಿಂಗ್ ಅಥವಾ ಹೋಮ್ ಡೆಲಿವರಿ ಸೇವೆ ಲಭ್ಯವಿಲ್ಲ. ಇಲ್ಲಿನ ಶ್ರೀ ಜಗನ್ನಾಥ ಟೆಂಪಲ್ ಅಡ್ಮಿನಿಸ್ಟ್ರೇಷನ್ (SJTA) ಇಂತಹ ಪ್ರಯತ್ನಗಳನ್ನು ಸತತವಾಗಿ ವಿರೋಧಿಸುತ್ತಾ ಬಂದಿದ್ದು, ಪವಿತ್ರ ಪ್ರಸಾದವನ್ನು ದೇವಾಲಯದ ಸಾಂಪ್ರದಾಯಿಕ ವ್ಯವಸ್ಥೆಯ ಮೂಲಕವೇ ಪಡೆಯಬೇಕು ಎಂದು ಸ್ಪಷ್ಟಪಡಿಸಿದೆ. ಹಾಗಾಗಿ, ರಥಯಾತ್ರೆ ಸಮಯದಲ್ಲಿ ನೀವು ಯಾವುದೇ “ಮಹಾಪ್ರಸಾದ ಬುಕಿಂಗ್” ಲಿಂಕ್‌ಗಳ ಮೇಲೆ ಕ್ಲಿಕ್ ಮಾಡುವ ಮುನ್ನ ತಿಳಿಯಬೇಕಾದ ಮುಖ್ಯವಾದ ವಿವರಗಳು ಇಲ್ಲಿವೆ.

ಪುರಿಯ ಜಗನ್ನಾಥ ದೇವಾಲಯದಿಂದ ಆನ್‌ಲೈನ್‌ನಲ್ಲಿ ಮಹಾಪ್ರಸಾದವನ್ನು ಬುಕ್ ಮಾಡಲು ಅಥವಾ ಪಡೆಯಲು ಪ್ರಸ್ತುತ ಯಾವುದೇ ಅಧಿಕೃತ ಸೌಲಭ್ಯವಿಲ್ಲ. ಒಡಿಶಾ ಸರ್ಕಾರ ಮತ್ತು ಶ್ರೀ ಜಗನ್ನಾಥ ಟೆಂಪಲ್ ಅಡ್ಮಿನಿಸ್ಟ್ರೇಷನ್ (SJTA) ಯಾವುದೇ ಅಧಿಕೃತ ಆನ್‌ಲೈನ್ ಪ್ಲಾಟ್‌ಫಾರ್ಮ್ ಅಥವಾ ಹೋಮ್ ಡೆಲಿವರಿ ಸೇವೆಗಳ ಮೂಲಕ ಮಹಾಪ್ರಸಾದವನ್ನು ಮಾರಾಟ ಮಾಡುತ್ತಿಲ್ಲ ಎಂದು ಸ್ಪಷ್ಟಪಡಿಸಿದೆ. ಭಾರತ ಮತ್ತು ವಿದೇಶಗಳ ಭಕ್ತರಿಂದ ಭಾರಿ ಬೇಡಿಕೆಯಿದ್ದರೂ, ಈ ಪವಿತ್ರ ಪ್ರಸಾದದ ಧಾರ್ಮಿಕ ಪವಿತ್ರತೆಯನ್ನು ಕಾಪಾಡುವ ದೃಷ್ಟಿಯಿಂದ ಆನ್‌ಲೈನ್ ಮಾರಾಟದ ಪ್ರಸ್ತಾಪಗಳನ್ನು ತಿರಸ್ಕರಿಸಲಾಗಿದೆ.

ಇದನ್ನೂ ಓದಿ: ಪುರಿ ಜಗನ್ನಾಥ ರಥಯಾತ್ರೆಯಲ್ಲಿ ಕಾಲ್ತುಳಿತ; ಉಸಿರುಗಟ್ಟಿ ಓರ್ವ ಭಕ್ತ ಸಾವು, ಹಲವರಿಗೆ ಗಾಯ

ಇದರರ್ಥ, “ಅಧಿಕೃತ ಜಗನ್ನಾಥ ಮಹಾಪ್ರಸಾದ ಬುಕಿಂಗ್” ಅಥವಾ “ಪುರಿ ಮಹಾಪ್ರಸಾದ ಹೋಮ್ ಡೆಲಿವರಿ” ಎಂದು ಹೇಳಿಕೊಳ್ಳುವ ಯಾವುದೇ ವೆಬ್‌ಸೈಟ್‌ಗಳು ಅಥವಾ ಸೋಷಿಯಲ್ ಮೀಡಿಯಾ ಪೋಸ್ಟ್‌ಗಳು ಕಂಡುಬಂದಲ್ಲಿ, ಅವುಗಳಿಗೆ ದೇವಸ್ಥಾನದ ಆಡಳಿತ ಮಂಡಳಿಯ ಯಾವುದೇ ಅನುಮತಿ ಇರುವುದಿಲ್ಲ.

ಆನ್‌ಲೈನ್ ಡೆಲಿವರಿ ಯಾಕಿಲ್ಲ?:

ಸಾಮಾನ್ಯ ದೇವಸ್ಥಾನಗಳ ಪ್ರಸಾದಕ್ಕೆ ಹೋಲಿಸಿದರೆ ಜಗನ್ನಾಥ ದೇವಸ್ಥಾನದ  ಮಹಾಪ್ರಸಾದಕ್ಕೆ ಅತ್ಯುನ್ನತ ಹಾಗೂ ವಿಶಿಷ್ಟ ಸ್ಥಾನವಿದೆ. ಈ ದೇವಸ್ಥಾನದ ಅಡುಗೆಮನೆಯಲ್ಲಿ ಎಲ್​ಪಿಜಿ ಅಥವಾ ಇತರೆ ಇಂಧನ ಬಳಸದೆ ಕಟ್ಟಿಗೆ ಒಲೆಯಲ್ಲಿ ಮಣ್ಣಿ ಪಾತ್ರೆಗಳಲ್ಲಿ ಸಿದ್ಧಪಡಿಸಿದ ಆಹಾರವನ್ನು ಮೊದಲು ಭಗವಾನ್ ಜಗನ್ನಾಥ, ಬಲಭದ್ರ ಮತ್ತು ದೇವಿ ಸುಭದ್ರೆಗೆ ನೈವೇದ್ಯ ಮಾಡಿ, ನಂತರ ವಿಮಲಾ ದೇವಿಗೆ ಸಮರ್ಪಿಸಲಾಗುತ್ತದೆ. ಈ ಎಲ್ಲಾ ಆಚರಣೆಗಳ ನಂತರ ಅದನ್ನು ‘ಮಹಾಪ್ರಸಾದ’ ಎಂದು ಕರೆಯಲಾಗುತ್ತದೆ. ಈ ಕಾರಣದಿಂದಲೇ ಈ  ಮಹಾಪ್ರಸಾದದ ರುಚಿ ಬೇರೆಲ್ಲೂ ಸಿಗಲಾರದು. ಇದನ್ನು ಯಾವುದೇ ಕೃತಕ ಸಂರಕ್ಷಕಗಳಿಲ್ಲದೆ (Preservatives) ತಯಾರಿಸುವುದರಿಂದ, ಇದು ಬಹಳ ಬೇಗನೆ ಹಾಳಾಗುತ್ತದೆ. ಹಾಗಾಗಿ ದೂರದ ಊರುಗಳಿಗೆ ಕೊರಿಯರ್ ಅಥವಾ ಡೆಲಿವರಿ ಮಾಡುವುದು ಅಸಾಧ್ಯ. ಅಲ್ಲದೆ, ಈ ಪ್ರಸಾದ ಪಾವಿತ್ರ್ಯತೆಯ ಸಂಕೇತವೂ ಹೌದು.

ಅಧಿಕಾರಿಗಳ ಪ್ರಕಾರ, ಮಹಾಪ್ರಸಾದವನ್ನು ಆನ್‌ಲೈನ್‌ನಲ್ಲಿ ಮಾರಾಟ ಮಾಡುವುದರಿಂದ ಅಥವಾ ಸಾಗಿಸುವುದರಿಂದ ಅದರ ಪವಿತ್ರತೆಗೆ ಧಕ್ಕೆಯಾಗಬಹುದು. ಪ್ರಸಾದವು ದೇವಸ್ಥಾನದ ಆವರಣದಿಂದ ಹೊರಹೋದ ನಂತರ, ಅದನ್ನು ವಿತರಿಸುವಾಗ ಧಾರ್ಮಿಕ ನಿಯಮಗಳನ್ನು ಪಾಲಿಸಲಾಗುತ್ತಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಸಾಧ್ಯವಿಲ್ಲ. ಇದೇ ಕಾರಣಕ್ಕೆ ಖಾಸಗಿ ಕಂಪನಿಗಳು ಮತ್ತು ಫುಡ್ ಡೆಲಿವರಿ ಆಪ್‌ಗಳು ಸಲ್ಲಿಸಿದ್ದ ಪ್ರಸ್ತಾಪಗಳನ್ನು ಮಂಡಳಿಯು ತಿರಸ್ಕರಿಸಿದೆ.

ಇದನ್ನೂ ಓದಿ: Puri Jagannath Temple: ಪುರಿ ಜಗನ್ನಾಥ ದೇವಾಲಯಕ್ಕೆ ಅವಿವಾಹಿತ ಜೋಡಿ ಒಟ್ಟಿಗೆ ಭೇಟಿ ನೀಡಬಾರದು ಯಾಕೆ? ಇಲ್ಲಿದೆ ನಿಗೂಢ ರಹಸ್ಯ!

ಹಾಗಾದರೆ ಭಕ್ತರಿಗೆ ಮಹಾಪ್ರಸಾದ ಎಲ್ಲಿ ಲಭ್ಯ?:

ಈ ದೇವಸ್ಥಾನದ ಅಧಿಕೃತ ಮಹಾಪ್ರಸಾದವು ಪುರಿಯ ಜಗನ್ನಾಥ ದೇವಾಲಯದ ಸಂಕೀರ್ಣದ ಒಳಗಿರುವ ನಿಗದಿತ ವಿತರಣಾ ಪ್ರದೇಶವಾದ ‘ಆನಂದ ಬಜಾರ್’ನಲ್ಲಿ ಮಾತ್ರ ಲಭ್ಯವಿರುತ್ತದೆ. ರಥಯಾತ್ರೆಯ ಸಮಯದಲ್ಲಿ ಮತ್ತು ಸಾಮಾನ್ಯ ದಿನಗಳಲ್ಲಿ ಜಗನ್ನಾಥನ ಪವಿತ್ರ ‘ಮಹಾಪ್ರಸಾದ’ವನ್ನು ಪಡೆಯಲು ಭಕ್ತರು ಪುರಿಯ ದೇವಸ್ಥಾನದ ಒಳಗೆ ಇರುವ ವಿಶ್ವದ ಅತಿ ದೊಡ್ಡ ಅಡುಗೆಮನೆ ಎನಿಸಿಕೊಂಡಿರುವ ‘ಆನಂದ ಬಜಾರ್’ಗೆ ಖುದ್ದಾಗಿ ಭೇಟಿ ನೀಡಿ ಖರೀದಿಸಬೇಕಾಗುತ್ತದೆ. ದೇವಸ್ಥಾನದ ಎಲ್ಲಾ ಆಚರಣೆಗಳು ಮುಗಿದ ನಂತರ ಪ್ರತಿದಿನ ಭಕ್ತರು ಇಲ್ಲಿ ಹೊಸದಾಗಿ ಸಿದ್ಧಪಡಿಸಿದ ಮಹಾಪ್ರಸಾದವನ್ನು ಖರೀದಿಸುತ್ತಾರೆ. ರಥಯಾತ್ರೆಯ ದಿನಗಳಲ್ಲಿ ಲಕ್ಷಾಂತರ ಯಾತ್ರಿಕರು ಆಗಮಿಸುವುದರಿಂದ ಈ ಪ್ರಸಾದಕ್ಕೆ ಬೇಡಿಕೆ ಭಾರೀ ಹೆಚ್ಚಾಗುತ್ತದೆ.

ನಕಲಿ ಮಹಾಪ್ರಸಾದ ಬುಕಿಂಗ್ ವೆಬ್‌ಸೈಟ್‌ಗಳ ಬಗ್ಗೆ ಎಚ್ಚರ:

ರಥಯಾತ್ರೆಯ ಸಮಯದಲ್ಲಿ ಆನ್‌ಲೈನ್ ಸರ್ಚ್‌ಗಳು ಹೆಚ್ಚಾಗುವುದರಿಂದ, ಭಕ್ತರನ್ನು ಗುರಿಯಾಗಿಸಿಕೊಂಡು ಸೈಬರ್ ವಂಚನೆಗಳು ನಡೆಯುವ ಆತಂಕ ಹೆಚ್ಚಾಗಿದೆ. ಭಗವಾನ್ ಜಗನ್ನಾಥನ ಹೆಸರು ಬಳಸಿ ಅನಧಿಕೃತವಾಗಿ ಆನ್‌ಲೈನ್‌ನಲ್ಲಿ ಪ್ರಸಾದ ಮಾರಾಟ ಮಾಡುವ ಸಂಸ್ಥೆಗಳ ವಿರುದ್ಧ ಎಸ್‌ಜೆಟಿಎ (SJTA) ಹಲವು ಬಾರಿ ಕಾನೂನು ಆಕ್ಷೇಪಣೆಗಳನ್ನು ಎತ್ತಿದೆ.

ಜನರು ಸಾಮಾನ್ಯವಾಗಿ ಕೇಳುವ ಪ್ರಶ್ನೆಗಳು:

ಪ್ರಶ್ನೆ: ಜಗನ್ನಾಥ ದೇವಾಲಯದ ಮಹಾಪ್ರಸಾದವನ್ನು ಆನ್‌ಲೈನ್‌ನಲ್ಲಿ ಬುಕ್ ಮಾಡಬಹುದೇ?

ಉತ್ತರ: ಖಂಡಿತವಾಗಿಯೂ ಇಲ್ಲ.

ಪ್ರಶ್ನೆ: ರಥಯಾತ್ರೆಯ ಪ್ರಸಾದ ಪಡೆಯುವುದು ಹೇಗೆ?

ಉತ್ತರ: ಜಗನ್ನಾಥ ದೇವಸ್ಥಾನದ ಒಳಗಿರುವ ಆನಂದ ಬಜಾರ್​​ನಲ್ಲಿ ಮಾತ್ರ ಪ್ರಸಾದ ಲಭ್ಯ.

ಪ್ರಶ್ನೆ: ಆನ್‌ಲೈನ್ ಮಾರಾಟಕ್ಕೆ ದೇವಸ್ಥಾನ ಮಂಡಳಿ ಅನುಮತಿ ನೀಡದಿರಲು ಕಾರಣವೇನು?

ಉತ್ತರ: ಈ ಪ್ರಸಾದವನ್ನು ಆಯಾ ದಿನಕ್ಕೆ ಬೇಕಾದಷ್ಟೇ ಮಾಡಲಾಗುತ್ತದೆ. ಇದಕ್ಕೆ ಪ್ರಿಸರ್ವೇಟಿವ್ ಹಾಕದ ಕಾರಣದಿಂದ ಕೊರಿಯರ್ ಮಾಡಿದರೆ ಅದು ತಲುವುವಷ್ಟರಲ್ಲಿ ಹಾಳಾಗುತ್ತದೆ.

ಪ್ರಶ್ನೆ: ಮಹಾಪ್ರಸಾದ ಮಾರಾಟ ಮಾಡುವ ವೆಬ್​ಸೈಟ್​ಗಳು ನಕಲಿಯೇ?

ಉತ್ತರ: ಹೌದು. ರಥಯಾತ್ರೆ ಪ್ರಯುಕ್ತ ನಕಲಿ ವೆಬ್​ಸೈಟ್​ಗಳು ಈ ಬಗ್ಗೆ ಭಕ್ತರನ್ನು ವಂಚಿಸುತ್ತಿವೆ.

ಪ್ರಶ್ನೆ: ಜಗನ್ನಾಥನ ಮಹಾಪ್ರಸಾದದ ವಿಶೇಷತೆಯೇನು?

ಉತ್ತರ: ಗ್ಯಾಸ್ ಬಳಸದೆ ಕಟ್ಟಿಗೆ ಒಲೆಯಲ್ಲಿ, ಮಣ್ಣಿನ ಮಡಕೆಗಳಲ್ಲಿ ಈ ಪ್ರಸಾದವನ್ನು ತಯಾರಿಸಲಾಗುತ್ತದೆ.

Published On – 7:16 pm, Mon, 20 July 26

Source link

‘ಅದು ನನಗೆ ಮುಖ್ಯವಲ್ಲ’; ನಿವೃತ್ತಿ ವದಂತಿ ಬಗ್ಗೆ ಮೌನ ಮುರಿದ ರೋಹಿತ್ – Kannada News | “I Will Continue”: Rohit Sharma’s Fiery Reply to Retirement Rumors After Lord’s ODI Ton

ಇಂಗ್ಲೆಂಡ್‌ ವಿರುದ್ಧದ ಕೊನೆಯ ಏಕದಿನ ಪಂದ್ಯದಲ್ಲಿ ಐತಿಹಾಸಿಕ ಶತಕ ಬಾರಿಸುವ ಮೂಲಕ ರೋಹಿತ್ ಶರ್ಮಾ (Rohit Sharma) ತಮ್ಮ ನಿವೃತ್ತಿ ಕೇಳುತ್ತಿದ್ದವರಿಗೆ ಬ್ಯಾಟ್​ನಿಂದಲೇ ಉತ್ತರ ನೀಡಿದ್ದಾರೆ. ಆದಾಗ್ಯೂ ಏಕದಿನ ತಂಡದಲ್ಲಿ ರೋಹಿತ್ ಅವರ ಸ್ಥಾನ ಇನ್ನು ಪ್ರಶ್ನಾರ್ಥಕವಾಗಿಯೇ ಉಳಿದಿದೆ. ಪ್ರತಿ ಸರಣಿಯ ಕೊನೆಯ ಪಂದ್ಯದಲ್ಲಿ ಮಿಂಚುವ ರೋಹಿತ್ ಉಳಿದ ಪಂದ್ಯಗಳಲ್ಲಿ ಸಪ್ಪೆ ಪ್ರದರ್ಶನ ನೀಡುತ್ತಾರೆ. ಹೀಗಾಗಿ ಕೊನೆಯ ಪಂದ್ಯದಲ್ಲಿ ಒಂದೊಳ್ಳೆ ಇನ್ನಿಂಗ್ಸ್ ಆಡಿ ಮುಂದಿನ ಸರಣಿಗೆ ತಂಡದಲ್ಲಿ ಸ್ಥಾನ ಪಡೆಯುತ್ತಿದ್ದಾರೆ ಎಂಬ ಆರೋಪವೂ ರೋಹಿತ್ ಮೇಲೆ ಇದೆ. ಇದೆಲ್ಲದರ ನಡುವೆ ಲಾರ್ಡ್ಸ್‌ನಲ್ಲಿ (Lord’s) ಕೊನೆಯ ಏಕದಿನ ಪಂದ್ಯ ಮುಗಿದ ಬಳಿಕ ತಮ್ಮ ನಿವೃತ್ತಿ ವದಂತಿಯ ಬಗ್ಗೆ ಮಾತನಾಡಿದ ರೋಹಿತ್ ತಮ್ಮನ್ನು ಟೀಕಿಸುವವರಿಗೆ ಸರಿಯಾಗಿಯೇ ಉತ್ತರ ನೀಡಿದ್ದಾರೆ.

ಟೀಕೆಗಳು ಕೇಳಿಬರುತ್ತಲೇ ಇವೆ

ಲಾರ್ಡ್ಸ್‌ನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ 138 ರನ್‌ಗಳ ಅದ್ಭುತ ಇನ್ನಿಂಗ್ಸ್ ಆಡಿದ ರೋಹಿತ್ ಶರ್ಮಾ, ಪಂದ್ಯದ ನಂತರ ಬಿಸಿಸಿಐ ಟಿವಿಯೊಂದಿಗಿನ ಸಂಭಾಷಣೆಯಲ್ಲಿ, ಹೊರಗಿನ ಚರ್ಚೆಗಳು ತಮ್ಮ ಆಟದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದಿದ್ದಾರೆ. ‘ನಾನು ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದಾಗಿನಿಂದಲೂ ಈ ರೀತಿಯ ಟೀಕೆಗಳು ಕೇಳಿಬರುತ್ತಲೇ ಇವೆ. ನಾನು ಆಡುವುದನ್ನು ನಿಲ್ಲಿಸುವವರೆಗೂ ಈ ರೀತಿಯ ಟೀಕೆಗಳು ಹರಿದುಬರುವುದು ಮುಂದುವರಿಯುತ್ತದೆ. ಹೀಗಾಗಿ ನನಗೆ ಈ ರೀತಿಯ ಟೀಕೆಗಳು ಮತ್ತು ವದಂತಿಗಳು ಮುಖ್ಯವಲ್ಲ. ನನಗೆ, ಅತ್ಯಂತ ಮುಖ್ಯವಾದ ವಿಷಯವೆಂದರೆ ನಾನು ಮೈದಾನದಲ್ಲಿ ಏನು ಮಾಡುತ್ತೇನೆ ಮತ್ತು ತಂಡದ ಯಶಸ್ಸಿಗೆ ನಾನು ಎಷ್ಟು ಕೊಡುಗೆ ನೀಡುತ್ತೇನೆ ಎಂಬುದು.

ನನ್ನ ಕೆಲಸ ಬ್ಯಾಟಿಂಗ್‌ನಲ್ಲಿ ಪ್ರದರ್ಶನ ನೀಡುವುದು

ಅಷ್ಟಕ್ಕೂ ಈ ರೀತಿಯ ವದಂತಿಗಳು ಇಲ್ಲದಿದ್ದರೆ ಯಾವುದೇ ಮೋಜು ಇರುವುದಿಲ್ಲ. ದೇಶಕ್ಕಾಗಿ ಆಡುವುದು ಮತ್ತು ರನ್ ಗಳಿಸುವುದು ಯಾವಾಗಲೂ ನನ್ನ ಗುರಿಯಾಗಿದೆ. ನನ್ನ ಕೆಲಸ ಬ್ಯಾಟಿಂಗ್‌ನಲ್ಲಿ ಪ್ರದರ್ಶನ ನೀಡುವುದು ಮತ್ತು ದೇಶವನ್ನು ಪ್ರತಿನಿಧಿಸುವುದು. ನನ್ನ ಚೊಚ್ಚಲ ಪಂದ್ಯದಿಂದಲೂ ನಾನು ಹೊಂದಿರುವ ಜವಾಬ್ದಾರಿ ಅದು, ಮತ್ತು ನಾನು ಅದನ್ನು ಮುಂದುವರಿಸುತ್ತೇನೆ ಎಂದಿದ್ದಾರೆ.

IND vs ENG: ಬಾಲ್ಯದ ಗೆಳೆಯ ನೀಡಿದ ಬ್ಯಾಟ್​ನಿಂದ ಲಾರ್ಡ್ಸ್‌ನಲ್ಲಿ ಶತಕ ಬಾರಿಸಿದ ರೋಹಿತ್

ಇಡೀ ತಂಡಕ್ಕೆ ಬೇಸರವಾಗಿದೆ

ಇನ್ನು ತಂಡದ ಸರಣಿ ಸೋಲಿನ ಬಗ್ಗೆ ಮಾತನಾಡಿದ ರೋಹಿತ್, ‘ಈ ಸೋಲಿನಿಂದಾಗಿ ಇಡೀ ತಂಡಕ್ಕೆ ಬೇಸರವಾಗಿದೆ. ನಾವು ಬರ್ಮಿಂಗ್ಹ್ಯಾಮ್‌ನಲ್ಲಿ ಉತ್ತಮವಾಗಿ ಪ್ರಾರಂಭಿಸಿದೆವು ಮತ್ತು ಉತ್ತಮ ಕ್ರಿಕೆಟ್ ಆಡಿದೆವು. ಆದರೆ ಕಾರ್ಡಿಫ್‌ನಲ್ಲಿ, ನಾವು ಬ್ಯಾಟಿಂಗ್‌ನಲ್ಲಿ ಸಾಕಷ್ಟು ರನ್ ಗಳಿಸಲು ಸಾಧ್ಯವಾಗಲಿಲ್ಲ. ಇತ್ತ ಲಾರ್ಡ್ಸ್‌ನಲ್ಲಿ ಗುರಿ ಸಾಕಷ್ಟು ದೊಡ್ಡದಾಗಿತ್ತು. ನಾವು ನಮ್ಮ ಕೈಲಾದಷ್ಟು ಪ್ರಯತ್ನಿಸಿದೆವು ಆದರೆ 20-25 ರನ್‌ಗಳ ಅಂತರದಲ್ಲಿ ಸೋತಿದ್ದೇವೆ’ ಎಂದಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 7:20 pm, Mon, 20 July 26

Source link

ಅಡುಗೆ ಇಂಧನವಾಗಿ ಎಥನಾಲ್; ಎಲ್​ಪಿಜಿಗೆ ಮತ್ತೊಂದು ಪರ್ಯಾಯಕ್ಕೆ ಸರ್ಕಾರ ಯತ್ನ; ಸಕ್ಕರೆ ಬಗ್ಗೆ ಆವತ್ತು ಮೋದಿ ಹೇಳಿದ್ದರ ಅರ್ಥ ಇದಾ? – Kannada News | Govt thinks of using ethanol as cooking gas as surplus biofuel being produced in the country

ಕೆಲ ತಿಂಗಳ ಹಿಂದೆ ಅಸ್ಸಾಮ್​ನಲ್ಲಿ ಎಥನಾಲ್ ಫ್ಯಾಕ್ಟರಿ ಉದ್ಘಾಟನೆ ವೇಳೆ ನರೇಂದ್ರ ಮೋದಿImage Credit source: PTI

ಬೆಂಗಳೂರು, ಜುಲೈ 20: ಜೈವಿಕ ಇಂಧನವೆನಿಸಿರುವ (Bio-fuel) ಎಥನಾಲ್ ಅನ್ನು ಅಡುಗೆ ಇಂಧನವಾಗಿ ಬಳಸುವ ಕುರಿತು ಸರ್ಕಾರ ಚಿಂತನೆ ನಡೆಸಿದೆ. ಎಥನಾಲ್ ಮಿಶ್ರಿತ ಪೆಟ್ರೋಲ್ (EBP- Ethanol blended Petrol) ಬಗ್ಗೆ ದೇಶಾದ್ಯಂತ ಚರ್ಚೆಗಳು ನಡೆಯುತ್ತಿರುವ ಹೊತ್ತಲ್ಲೇ ಈಗ ಈ ಬೆಳವಣಿಗೆ ನಡೆದಿದೆ. ಎಕನಾಮಿಕ್ ಟೈಮ್ಸ್ ಪತ್ರಿಕೆಯ ವರದಿ ಪ್ರಕಾರ, ಎಥನಾಲ್ ಅನ್ನು ಅಡುಗೆ ಅನಿಲವಾಗಿ ಬಳಸಲು ಸಾಧ್ಯವಾಗುವಂತೆ ಪಾಲಿಸಿ ಫ್ರೇಮ್​ವರ್ಕ್​ವೊಂದನ್ನು ಸರ್ಕಾರ ಸಿದ್ಧಪಡಿಸುತ್ತಿದೆ ಎನ್ನಲಾಗಿದೆ.

ಸರ್ಕಾರ ಎಥನಾಲ್ ಅನ್ನು ಅಡುಗೆ ಇಂಧನವಾಗಿ ಬಳಸಲು ಯೋಚಿಸಲು ಹಲವು ಕಾರಣಗಳಿವೆ. ಭಾರತದಲ್ಲಿ ಎಥನಾಲ್ ಬಹಳ ಹೆಚ್ಚಿನ ಪ್ರಮಾಣದಲ್ಲಿ ಉತ್ಪಾದನೆಯಾಗುತ್ತಿರುವುದು ಒಂದು ಕಾರಣ. ಎಥನಾಲ್ ಶುದ್ಧ ಇಂಧನ ಎನ್ನುವುದು ಎರಡನೇ ಕಾರಣ. ಹಾಗೆಯೇ, ಎಥನಾಲ್ ಬಳಕೆಯಿಂದ ತೈಲ ಆಮದು ತಗ್ಗಿಸಬಹುದು. ಮತ್ತು ರೈತರು ಮತ್ತು ಸಕ್ಕರೆ ಕಾರ್ಖಾನೆಗಳಿಗೂ ಲಾಭ ಆಗುತ್ತದೆ. ಹೀಗಾಗಿ, ಹೆಚ್ಚುವರಿ ಎಥನಾಲ್ ಅನ್ನು ಸಮರ್ಪಕವಾಗಿ ವಿನಿಯೋಗಿಸಲು ಸರ್ಕಾರ ವಾಹನಗಳಾಚೆ ಅಡುಗೆ ಮನೆಗಳತ್ತ ಚಿತ್ತ ಇಟ್ಟಿದೆ.

ಇದನ್ನೂ ಓದಿ: ಗುರಿಗಿಂತ 5 ವರ್ಷ ಮುಂಚೆಯೇ ಇ20 ಅಳವಡಿಕೆ: ಸಚಿವ ಸುರೇಶ್ ಗೋಪಿ

ಸಕ್ಕರೆ ಬಳಕೆ ಮಾಡಿ ಎಂದು ಮೋದಿ ಕರೆ ಕೊಟ್ಟಿದ್ದು ನೆನಪಿದೆಯಾ?

ಪ್ರಧಾನಿ ನರೇಂದ್ರ ಮೋದಿ ಅವರು ಮನ್ ಕೀ ಬಾತ್ ಇತ್ಯಾದಿ ಪ್ರಮುಖ ಕಾರ್ಯಕ್ರಮಗಳಲ್ಲಿ ಆಡುವ ಕೆಲ ನುಡಿಗಳು ಯಾವುದನ್ನೋ ಸೂಚಿಸುತ್ತದೆ ಎಂದು ಹೇಳುವವರಿದ್ದಾರೆ. ಕೆಲ ತಿಂಗಳ ಹಿಂದೆ ಮೋದಿ ಅವರು ರೇಡಿಯೋ ಭಾಷಣದಲ್ಲಿ ಮಾತನಾಡುತ್ತಾ, ಜನರು ತಮ್ಮ ಸಕ್ಕರೆ ಮತ್ತು ಎಣ್ಣೆ ಸೇವನೆ ಕಡಿಮೆ ಮಾಡಿ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಕರೆ ನೀಡಿದ್ದರು. ಅದಕ್ಕೆ ಓಗೊಟ್ಟು ಜನರು ಸಕ್ಕರೆ ಸೇವನೆ ಕಡಿಮೆ ಮಾಡಿದರೆ, ಅವರ ಆರೋಗ್ಯ ಸುಧಾರಿಸುವುದು ಹೌದು. ಹಾಗೆಯೇ, ಸಕ್ಕರೆಗೆ ಬೇಡಿಕೆ ತಗ್ಗುತ್ತದೆ. ಆಗ ಸಕ್ಕರೆ ಕಾರ್ಖಾನೆಗಳು ಎಥನಾಲ್ ಅನ್ನು ಹೆಚ್ಚೆಚ್ಚು ಉತ್ಪತ್ತಿ ಮಾಡಲು ಅವಕಾಶ ಇರುತ್ತದೆ. ಅಂದರೆ, ಜನರು ಸಕ್ಕರೆ ಸೇವನೆ ಕಡಿಮೆ ಮಾಡಿದರೆ ಎಥನಾಲ್ ಉತ್ಪಾದನೆ ಹೆಚ್ಚುತ್ತದೆ. ಇದು ನರೇಂದ್ರ ಮೋದಿ ಅವರ ಸಂದೇಶದ ಹಿಂದಿನ ಆಶಯವಾಗಿತ್ತಾ?

ಎಥನಾಲ್ ಅನ್ನು ಅಡುಗೆ ಇಂಧನವಾಗಿ ಬಳಸಲು ಸಾಧ್ಯವಾ?

ಹೌದು, ಎಥನಾಲ್ ಅನ್ನು ಅಡುಗೆ ಇಂಧನವಾಗಿ ಬಳಸಬಹುದು. ಈಗಾಗಲೇ ಹಲವು ಸಂಶೋಧನೆಗಳು ಇದನ್ನು ಖಚಿತಪಡಿಸಿವೆ. ಆದರೆ, ಎಲ್​ಪಿಜಿಗೆ ಅದರದ್ದೇ ಸ್ಟೋವ್ ಬೇಕಿರುವಂತೆ, ಎಥನಾಲ್ ಇಂಧನಕ್ಕೂ ಅದರದ್ದೇ ಸ್ಟೌವ್ ಬೇಕಾಗುತ್ತದೆ. ಎಲ್​ಪಿಜಿ ಸ್ಟೌವ್ ಅನ್ನು ಎಥನಾಲ್ ಇಂಧನಕ್ಕೆ ಬಳಸಲು ಆಗುವುದಿಲ್ಲ.

ಇದನ್ನೂ ಓದಿ: ಜಾತಿ ಪ್ರಮಾಣ ಪತ್ರದಲ್ಲಿನ ವಿಳಾಸ ಬದಲಾಯಿಸಬೇಕೇ? ಹಾಗಾದ್ರೆ ಹೀಗೆ ಮಾಡಿ

ಈ ಹಿನ್ನೆಲೆಯಲ್ಲಿ ಸರ್ಕಾರವು ಎಥನಾಲ್ ಬಳಕೆಯನ್ನು ಉತ್ತೇಜಿಸಲು ಯಾವ ಕ್ರಮ ತೆಗೆದುಕೊಳ್ಳುತ್ತದೆ ಎಂಬುದು ಗಮನಾರ್ಹ. ಇದಕ್ಕೆ ಸಾಕಷ್ಟು ಸಮಯ ತೆಗೆದುಕೊಳ್ಳುತ್ತದೆ. ಇದನ್ನು ಹಂತ ಹಂತವಾಗಿ ಜಾರಿ ಮಾಡಲು ಮುಂದಾಗಬಹುದು. ಎಥನಾಲ್ ಅನ್ನು ವಿವಿಧ ಮೂಲಗಳಿದ ಉತ್ಪಾದಿಸುವತ್ತಲೂ ಸರ್ಕಾರ ಗಮನ ಹರಿಸಬಹುದು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

Exit mobile version