ಬಂಟ್ವಾಳ ಲಾವಣ್ಯ ಕೊಲೆ ಪ್ರಕರಣ: ಆರೋಪಿಯನ್ನು ಬಜರಂಗದಳ ಕಾರ್ಯಕರ್ತನೆಂದು ಬಿಂಬಿಸಿದವರ ವಿರುದ್ಧ ಕೇಸ್ ದಾಖಲು – Kannada News | Bantwal Lavanya Murder Case: FIR Filed Against Social Media Pages for False Bajrang Dal Claims

ಮಂಗಳೂರು, ಜುಲೈ 18: ಬಂಟ್ವಾಳದ ಬಿಸಿ ರೋಡ್‌ನಲ್ಲಿ ನಡೆದ ಲಾವಣ್ಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಪೋಸ್ಟ್‌ಗಳನ್ನು ಹಾಕಿದ ಕೆಲ ಪೇಜ್‌ಗಳ ವಿರುದ್ಧ ಬಂಟ್ವಾಳ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ವಾಟ್ಸಾಪ್ ಗ್ರೂಪ್‌ಗಳು ಹಾಗೂ ಇನ್‌ಸ್ಟಾಗ್ರಾಮ್ ಖಾತೆಗಳ ವಿರುದ್ಧ ದೂರು ದಾಖಲಾಗಿದ್ದು, ಬಿಎನ್‌ಎಸ್ ಸೆಕ್ಷನ್ 78, 126, 103 ಹಾಗೂ ಆರ್ಮ್ಸ್ ಆ್ಯಕ್ಟ್‌ನಡಿ ಪ್ರಕರಣ ದಾಖಲಿಸಲಾಗಿದೆ. ಕೊಲೆ ಆರೋಪಿಯ ಭಾವಚಿತ್ರವನ್ನು ಎಡಿಟ್ ಮಾಡಿ, ಕೇಸರಿ ಶಾಲು ಹಾಕಿ, ಹಣೆಗೆ ತಿಲಕ ಇಟ್ಟು ಆತನನ್ನು ಬಜರಂಗದಳ ಕಾರ್ಯಕರ್ತನೆಂದು ಸುಳ್ಳಾಗಿ ಬಿಂಬಿಸಿ ಪೋಸ್ಟ್ ಮಾಡಲಾಗಿತ್ತು. ಸಮಾಜದ ಶಾಂತಿ ಕದಡುವ ಉದ್ದೇಶದಿಂದ ಇಂತಹ ಬರಹಗಳನ್ನು ಹರಿಬಿಡಲಾಗಿದೆ ಎಂದು ಆರೋಪಿಸಲಾಗಿದೆ. ಟ್ರೋಲ್ ಮಾಸ್ಟರ್, ಯುವ ಬೆಳ್ತಂಗಡಿ ಮತ್ತು ಫ್ಯಾಕ್ಟ್ ಅಂಡ್ ಜಸ್ಟೀಸ್ ಸೇರಿದಂತೆ ಕೆಲ ಖಾತೆಗಳಲ್ಲಿ ಇಂತಹ ಪೋಸ್ಟ್‌ಗಳನ್ನು ಹಾಕಲಾಗಿತ್ತು.

ಬಂಟ್ವಾಳ ನಗರ ಠಾಣೆಯಲ್ಲಿ ಈ ಸಂಬಂಧ ಮೂರು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಲಾಗಿದೆ. ಲಾವಣ್ಯ ಹತ್ಯೆ ಪ್ರಕರಣವು ಏಕಪಕ್ಷೀಯ ಪ್ರೇಮ ಪ್ರಕರಣವಾಗಿದ್ದು, ಆಕೆ ಪ್ರೀತಿಯನ್ನು ನಿರಾಕರಿಸಿದ ಕಾರಣಕ್ಕೆ ಆರೋಪಿ ಆಕೆಯನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದಾನೆ ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಇಂತಹ ಘಟನೆಯ ಬಗ್ಗೆ ತಪ್ಪು ಮಾಹಿತಿ ಹರಡಿದ್ದವರ ವಿರುದ್ಧ ಇದೀಗ ಕ್ರಮ ಕೈಗೊಳ್ಳಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Bengaluru Air Quality: ಬೆಂಗಳೂರು ಹಾಗೂ ರಾಜ್ಯದ ಇತರ ನಗರಗಳ ಇಂದಿನ AQI ಇಲ್ಲಿದೆ ನೋಡಿ! – Kannada News | Bengaluru Air Quality Today: Check AQI of Karnataka Cities on July 18

ಬೆಂಗಳೂರು ಹಾಗೂ ರಾಜ್ಯದ ಇತರ ನಗರಗಳ ಇಂದಿನ AQI ಇಲ್ಲಿದೆ ನೋಡಿ!
Image Credit source: The New Indian Express

ಬೆಂಗಳೂರು, ಜುಲೈ 18: ಜುಲೈ ತಿಂಗಳ ಮುಂಗಾರು ಮಳೆಯ ಹಿನ್ನೆಲೆಯಲ್ಲಿ ರಾಜಧಾನಿ ಬೆಂಗಳೂರು ಸೇರಿದಂತೆ ಕರ್ನಾಟಕದ ಬಹುತೇಕ ಪ್ರಮುಖ ನಗರಗಳಲ್ಲಿ ವಾಯು ಗುಣಮಟ್ಟ ಸೂಚ್ಯಂಕ (AQI) ಅತ್ಯಂತ ಆಶಾದಾಯಕವಾಗಿದೆ. ಮಾಲಿನ್ಯದ ಪ್ರಮಾಣ ಗಣನೀಯವಾಗಿ ಇಳಿಕೆಯಾಗಿದ್ದು, ಜನರು ನಿರಾಳವಾಗಿ ಉಸಿರಾಡುವಂತ ವಾತಾವರಣ ನಿರ್ಮಾಣವಾಗಿದೆ.

ಬೆಂಗಳೂರಿನಲ್ಲಿ ‘ಉತ್ತಮ’ ವಾಯು ಗುಣಮಟ್ಟ

ರಾಜಧಾನಿ ಬೆಂಗಳೂರಿನಲ್ಲಿ ಇಂದು ವಾಯು ಗುಣಮಟ್ಟವು ‘ಉತ್ತಮ’ (Good) ಹಾಗೂ ಕೆಲವು ಕೈಗಾರಿಕಾ ಪ್ರದೇಶಗಳಲ್ಲಿ ‘ಸಾಧಾರಣ’ (Moderate) ವಲಯದಲ್ಲಿದೆ. ನಗರದ ಸರಾಸರಿ AQI ಪ್ರಮಾಣ 54 ರಿಂದ 62ರ ಆಸುಪಾಸಿನಲ್ಲಿ ದಾಖಲಾಗಿದೆ.

ನಗರದ ಪ್ರಮುಖ ತಾಣಗಳ ಇಂದಿನ ಅಂದಾಜು AQI ವಿವರ:

  • ಸಿಲ್ಕ್ ಬೋರ್ಡ್ ಮತ್ತು ಬಿಟಿಎಂ ಲೇಔಟ್: 56 (ಸಾಧಾರಣ)
  • ಬಸವನಗುಡಿ: 54 (ಸಾಧಾರಣ)
  • ಬನಶಂಕರಿ : 44 (ಅತ್ಯಂತ ಉತ್ತಮ)
  • ಮೆಜೆಸ್ಟಿಕ್/ರೈಲ್ವೆ ನಿಲ್ದಾಣ ಪರಿಸರ: 66 (ಸಾಧಾರಣ)

ಮುಂಗಾರು ಮಾರುತಗಳು ಹಾಗೂ ನಿರಂತರ ಗಾಳಿಯ ಚಲನೆಯಿಂದಾಗಿ ಗಾಳಿಯಲ್ಲಿನ ಹಾನಿಕಾರಕ ಸೂಕ್ಷ್ಮ ಕಣಗಳಾದ PM2.5 ಮತ್ತು PM10 ಪ್ರಮಾಣ ನಿಯಂತ್ರಣದಲ್ಲಿದೆ. ಇದರಿಂದಾಗಿ ವಾಕಿಂಗ್ ಹಾಗೂ ಹೊರಾಂಗಣ ಚಟುವಟಿಕೆಗಳಿಗೆ ನಗರದ ಹವಾಮಾನವು ಅತ್ಯಂತ ಯೋಗ್ಯವಾಗಿದೆ.

ರಾಜ್ಯದ ಇತರೆ ನಗರಗಳ ವಾಯು ಮಾಲಿನ್ಯದ ಸ್ಥಿತಿಗತಿ

ಬೆಂಗಳೂರು ಮಾತ್ರವಲ್ಲದೆ ಕರ್ನಾಟಕದ ಇತರೆ ಜಿಲ್ಲಾ ಕೇಂದ್ರಗಳಲ್ಲೂ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ವರದಿಗಳ ಪ್ರಕಾರ ವಾಯು ಗುಣಮಟ್ಟವು ತೃಪ್ತಿದಾಯಕವಾಗಿದೆ. ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ಇಲ್ಲಿನ AQI ಅತ್ಯಂತ ಕನಿಷ್ಠ ಮಟ್ಟದಲ್ಲಿದ್ದು (30-45), ಗಾಳಿಯು ಸಂಪೂರ್ಣ ಶುದ್ಧವಾಗಿದೆ. ಉತ್ತರ ಕರ್ನಾಟಕದ ಹುಬ್ಬಳ್ಳಿ-ಧಾರವಾಡ ಹಾಗೂ ಬೆಳಗಾವಿ ನಗರಗಳಲ್ಲಿ AQI 52 ರಿಂದ 58ರ ಆಸುಪಾಸಿನಲ್ಲಿದ್ದು, ಸಾಧಾರಣ ಮಟ್ಟದಲ್ಲಿದೆ. ಗಣಿ ಹಾಗೂ ಕೈಗಾರಿಕಾ ಪ್ರದೇಶಗಳನ್ನು ಒಳಗೊಂಡ ಬಳ್ಳಾರಿಯಲ್ಲಿ ಗಾಳಿಯ ಗುಣಮಟ್ಟವು 60ರ ಆಸುಪಾಸಿನಲ್ಲಿದ್ದು ನಿಯಂತ್ರಣದಲ್ಲಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Karnataka Weather Forecast: ಕರಾವಳಿ-ಮಲೆನಾಡಿನಲ್ಲಿ ಭಾರೀ ಮಳೆ ಮುನ್ಸೂಚನೆ, ದಕ್ಷಿಣ ಕನ್ನಡದಲ್ಲಿ ಶಾಲೆ-ಕಾಲೇಜುಗಳಿಗೆ ರಜೆ – Kannada News | Karnataka Weather Forecast on July 18: Heavy Rain, Landslide Warning for Coastal Districts; Dakshina Kannada Schools Closed Today

ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಮಳೆImage Credit source: tv9

ಬೆಂಗಳೂರು, ಜುಲೈ 18: ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆ (Monsoon Rain) ಮತ್ತಷ್ಟು ಚುರುಕುಗೊಳ್ಳುವ ಲಕ್ಷಣಗಳು ಕಂಡುಬಂದಿವೆ. ಭಾರತೀಯ ಹವಾಮಾನ ಇಲಾಖೆ (IMD) ಜುಲೈ 18 ಮತ್ತು 19ರಂದು ಕರಾವಳಿ ಜಿಲ್ಲೆಗಳ ಕೆಲವೆಡೆ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ. ಮಳೆಯೊಂದಿಗೆ ಗಂಟೆಗೆ 30ರಿಂದ 50 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯೂ ಇದೆ. ಕರಾವಳಿ ಹಾಗೂ ಘಟ್ಟ ಪ್ರದೇಶಗಳಲ್ಲಿ ಭೂಕುಸಿತ ಸಂಭವಿಸುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

ಈ ಹಿಂದೆ ರಾಜ್ಯದಲ್ಲಿ ಇನ್ನೂ ಕೆಲವು ವ್ಯಾಪಕ ಮಳೆಯ ಸಾಧ್ಯತೆ ಕಡಿಮೆ ಎಂದು ಹವಾಮಾನ ತಜ್ಞರು ಅಭಿಪ್ರಾಯಪಟ್ಟಿದ್ದರೂ, ಇದೀಗ ಕರಾವಳಿ ಭಾಗದಲ್ಲಿ ಮಳೆ ಚುರುಕಾಗತೊಡಗಿದೆ. ಆದರೆ, ರಾಜ್ಯದ ಬಹುತೇಕ ಒಳನಾಡು ಜಿಲ್ಲೆಗಳಲ್ಲಿ ಇನ್ನೂ ಸಾಧಾರಣ ಮಳೆಯೇ ಮುಂದುವರಿಯುವ ಸಾಧ್ಯತೆ ಇದೆ.

ಕರಾವಳಿಯಲ್ಲಿ ಭಾರೀ ಮಳೆ, ಘಟ್ಟ ಪ್ರದೇಶಗಳಲ್ಲಿ ಭೂಕುಸಿತ ಎಚ್ಚರಿಕೆ

ಜುಲೈ 18 ಮತ್ತು 19ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಕಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಮತ್ತು ಘಟ್ಟ ಪ್ರದೇಶಗಳಲ್ಲಿ ಭೂಕುಸಿತ ಉಂಟಾಗುವ ಸಾಧ್ಯತೆ ಇದೆ ಎಂದು ಐಎಂಡಿ ಎಚ್ಚರಿಕೆ ನೀಡಿದೆ. ಇದರ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪಿಯು ಕಾಲೇಜುಗಳಿಗೆ ಇಂದು ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.

ಮಲೆನಾಡು, ಉತ್ತರ ಒಳನಾಡಿನಲ್ಲೂ ಮಳೆ-ಬಿರು ಗಾಳಿ

ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಒಂದೆರಡು ಕಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬೆಳಗಾವಿ ಜಿಲ್ಲೆಯಲ್ಲೂ ಕೆಲವೆಡೆ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ. ಧಾರವಾಡ, ಗದಗ, ಹಾವೇರಿ, ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಬಾಗಲಕೋಟೆ, ಕೊಪ್ಪಳ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯೊಂದಿಗೆ ಗಂಟೆಗೆ 40ರಿಂದ 50 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ.

ಬೆಂಗಳೂರು ಸೇರಿ ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆ

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ರಾಮನಗರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ, ವಿಜಯನಗರ, ಚಾಮರಾಜನಗರ, ಹಾಸನ ಹಾಗೂ ಕೊಡಗು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಈ ಜಿಲ್ಲೆಗಳಲ್ಲೂ ಕೆಲವೆಡೆ ಬಿರುಗಾಳಿಯ ವೇಗ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಸೂಚಿಸಲಾಗಿದೆ.

ಕರಾವಳಿಯಲ್ಲಿ ಮುಂದಿನ 24-48 ಗಂಟೆ ಎಚ್ಚರಿಕೆ ಅಗತ್ಯ

ಕರಾವಳಿ ಭಾಗಗಳಲ್ಲಿ ಮಳೆಯ ತೀವ್ರತೆ ಮುಂದುವರಿಯುವ ನಿರೀಕ್ಷೆ ಇದ್ದು, ನದಿ-ಹಳ್ಳಗಳ ತೀರ ಪ್ರದೇಶದ ನಿವಾಸಿಗಳು, ಘಟ್ಟ ಪ್ರದೇಶಗಳಲ್ಲಿ ಸಂಚರಿಸುವವರು ಹಾಗೂ ಮೀನುಗಾರರು ಸ್ಥಳೀಯ ಆಡಳಿತ ಮತ್ತು ಹವಾಮಾನ ಇಲಾಖೆಯ ಸೂಚನೆಗಳನ್ನು ಪಾಲಿಸುವಂತೆ ಮನವಿ ಮಾಡಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Horoscope Today: ಇಂದು ನಿಮ್ಮ ಕರ್ಮಫಲವನ್ನು ವಿಮರ್ಶಿಸುವ ಮಹತ್ವದ ದಿನ! – Kannada News | Horoscope Today 18th July​ 2026: Dr. Basavaraj Gurujis Predictions for Zodiac Signs

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 2026ರ ಜುಲೈ 18, ಶನಿವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ಪ್ರಸ್ತುತಪಡಿಸಿದ್ದಾರೆ. ಇಂದು ಪರಾಭವ ನಾಮ ಸಂವತ್ಸರ, ದಕ್ಷಿಣಾಯಣ, ಆಷಾಢ ಮಾಸ, ಗ್ರೀಷ್ಮ ಋತು, ಶುಕ್ಲ ಪಕ್ಷದ ಚೌತಿ ತಿಥಿ, ಪುಬ್ಬಾ ನಕ್ಷತ್ರ, ವರಿಯಾನ್ ಯೋಗ ಮತ್ತು ಭದ್ರಕರಣವಿರುವ ಶುಭ ದಿನವಾಗಿದೆ.

ಈ ದಿನದ ರಾಹುಕಾಲವು ಬೆಳಗ್ಗೆ 9:13 ರಿಂದ 10:42 ನಿಮಿಷದ ತನಕ ಇರಲಿದೆ. ಇದರ ನಂತರ, ಸರ್ವ ಸಿದ್ಧಿ ಕಾಲ, ಸಂಕಲ್ಪ ಕಾಲ ಮತ್ತು ಶುಭ ಕಾಲವು ಮಧ್ಯಾಹ್ನ 2:00 ಗಂಟೆಯಿಂದ 3:37 ನಿಮಿಷದ ತನಕ ಲಭ್ಯವಿರುತ್ತದೆ. ಶನಿವಾರವು ಕರ್ಮ ಫಲಗಳನ್ನು ವಿಮರ್ಶಿಸುವ ಮಹತ್ವದ ದಿನವಾಗಿದೆ. ವಾರಪೂರ್ತಿ ನಾವು ಮಾಡಿದ ಒಳ್ಳೆಯ ಮತ್ತು ಕೆಟ್ಟ ಕಾರ್ಯಗಳ ಪ್ರಭಾವವನ್ನು ಶನಿ ಭಗವಾನ್ರಿಗೆ ಸಮರ್ಪಿಸುವ ಮೂಲಕ, ನಮ್ಮ ತಪ್ಪುಗಳಿಗಾಗಿ ಕ್ಷಮೆಯಾಚಿಸುವ ಅವಕಾಶ ದೊರೆಯುತ್ತದೆ ಎಂದು ಬಸವರಾಜ ಗುರೂಜಿ ತಿಳಿಸಿದ್ದಾರೆ.

ಇನ್ನಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ನಿತ್ಯ ಭವಿಷ್ಯ : ಇಂದು ಈ ರಾಶಿಯವರು ಸ್ಥಾನಮಾನದ ಆಮಿಷಕ್ಕೆ ಒಳಗಾಗುವರು – Kannada News | Daily Horoscope July 18, 2026: Money, Health and Career Predictions for All

ಶಾಲಿವಾಹನ ಶಕವರ್ಷ 1949ರ ಉತ್ತರಾಯಣ, ಗ್ರೀಷ್ಮ ಋತುವಿನ ಆಷಾಢ ಮಾಸದ ಶುಕ್ಲ ಪಕ್ಷದ ಚತುರ್ಥೀ ತಿಥಿಯ ಶನಿವಾರದಂದು ಹೊಟ್ಟೆಪಾಡಿನ ಚಿಂತೆ, ಮಾತಿನ ಮೇಲೆ ಹಿಡಿತ, ವ್ಯವಹಾರದಿಂದ ಬಿಡುಗಡೆ, ವೃತ್ತಿಯಿಂದ ನಿವೃತ್ತಿ, ತಿರಸ್ಕಾರ, ಕೂಡಿಟ್ಟ ಹಣದ ಹಿಂಪಡೆಯುವಿಕೆ, ಆರಾಧನೆಯ ಆಹ್ಲಾದ ಇವೆಲ್ಲ ಇಂದಿನ ಭವಿಷ್ಯ.

ಶಾಲಿವಾಹನ ಶಕೆ 1949ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ಗ್ರೀಷ್ಮ, ಚಾಂದ್ರಮಾಸ : ಆಷಾಢ, ಸೌರ ಮಾಸ : ಮಿಥುನ, ಮಹಾನಕ್ಷತ್ರ : ಪುನರ್ವಸು, ವಾರ : ಶನಿ, ಪಕ್ಷ : ಶುಕ್ಲ, ತಿಥಿ : ಚತುರ್ಥೀ, ನಿತ್ಯನಕ್ಷತ್ರ : ಪೂರ್ವಾಫಲ್ಗುಣೀ, ಯೋಗ : ಶಿವ, ಕರಣ : ಗರಜ, ಸೂರ್ಯೋದಯ – 06 – 03 am, ಸೂರ್ಯಾಸ್ತ – 06 – 48 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 09:14 – 10:50, ಯಮಗಂಡ ಕಾಲ 14:02 – 15:37, ಗುಳಿಕ ಕಾಲ 06:03 – 07:39

ಮೇಷ ರಾಶಿ :

ಹಣದ ಹರಿವು ತಕ್ಕಮಟ್ಟಿಗೆ ವೇಗವನ್ನು ಪಡೆಯಲಿದೆ.ಕೆಟ್ಟ ಆರೋಗ್ಯವನ್ನು ಸರಿ ಮಾಡಿಕೊಳ್ಳಿ. ಯಾರ ಸಹಾಯವನ್ನೂ ಅತಿಯಾಗಿ ನಿರೀಕ್ಷಿಸಲಾರಿರಿ. ಪ್ರೀತಿಪಾತ್ರರ ವರ್ತನೆಯು ನಿಮಗೆ ಹಿಂಸೆಯನ್ನು ಕೊಟ್ಟೀತು. ಕಛೇರಿಯ ಕೆಲಸಗಳು ಸಲೀಸಾಗಿ ಆಗುವುದು. ಯಾರದೋ ಮಾತಿಗೆ ಕುಣಿಯುವುದು ಬೇಡ. ನಿಮ್ಮ ಮನಸ್ಸಿಗೆ ಸರಿ ಎನಿಸಿದ್ದರೆ ಮುಂದುವರಿಯಿರಿ. ವ್ಯವಹಾರದ ವಿಚಾರದಲ್ಲಿ ನಿಮಗೆ ಅಳುಕು ಕಾಣಿಸುವುದು. ಯಾರೊಂದಿಗೂ ನಿರ್ದಯೆಯಿಂದ ವ್ಯವಹರಿಸುವುದು ಬೇಡ.

ವೃಷಭ ರಾಶಿ :

ಇಂದು ನಿಮಗೆ ಪ್ರಾಪ್ತವಾದ ಸ್ಥಾನದಿಂದ ನಿಮ್ಮ ಆಲೋಚನಾ ಕ್ರಮಗಳೂ ವ್ಯತ್ಯಾಸವಾಗುವುದು. ಸಣ್ಣ ಪುಟ್ಟ ನೋವುಗಳೂ ನಗುವಿನ ಜೊತೆ ಕರಗಲಿ. ಸ್ನೇತರ ಜೊತೆ ಸುತ್ತಡಿ ಹಣವನ್ನು ಖರ್ಚು ಮಾಡುವಿರಿ. ಇದು ಸಂತೋಷದಿಂದ ಮಾಡಿದ್ದಾಗಿರುತ್ತದೆ. ವಿಶೇಷವಾದ ಸ್ಥಾನ, ಮಾನಗಳು ಬರುವ ಸಾಧ್ಯತೆ ಇದೆ. ಅಸತ್ಯವನ್ನು ಹೇಳುವುದು ಗೊತ್ತಾದೀತು. ಹಿತವಚನದಿಂದ ಯಾವ ಪರಿವರ್ತನೆಯೂ ಆಗದು. ಒಂಟಿಯಾಗಿ ಕೆಲಸವನ್ನು ಮಾಡದೇ ಒಗ್ಗಟ್ಟಿನ ಕೆಲಸದಲ್ಲಿ ಜಯವಿರಲಿದೆ.

ಮಿಥುನ ರಾಶಿ :

ಇಂದು ನಿಮ್ಮ ಅನುಭವದ ಆಧಾರದ ಯೋಗ್ಯವಾದ ಕೆಲವು ಪ್ರಮುಖ ನಿರ್ಧಾರವನ್ನು ತೆಗೆದುಕೊಳ್ಳುವಿರಿ. ಮಕ್ಕಳ ಯಶಸ್ಸಿನಿಂದಾಗಿ ಕುಟುಂಬದಲ್ಲಿ ಸಂತೋಷದ ವಾತಾವರಣ ಇರುತ್ತದೆ. ಇಂದಿನ ಕೆಲಸವನ್ನು ಪೂರೈಸಲು ಅನಾರೋಗ್ಯವು ಅಡ್ಡವಾಗಬಹುದು. ಒಂದೇ ಆದಾಯವನ್ನು ನಂಬಿದವರಿಗೆ ಕಷ್ಟವಾದೀತು. ನಿಮ್ಮ‌ ಮೇಲೆ ಸಂದೇಹವು ಬರಬಹುದು. ಭವಿಷ್ಯದ ಬಗ್ಗೆ ಕೆಲವು ವಿಚಾರಗಳನ್ನು ಹಂಚಿಕೊಳ್ಳುವಿರಿ. ನಿಮ್ಮ ಮನೆಯ ಸಮಸ್ಯೆಯನ್ನು ಬೇರೆಯವರ ಜೊತೆ ಹಂಚಿಕೊಳ್ಳುವುದು ಬೇಡ.

ಕರ್ಕಾಟಕ ರಾಶಿ :

ಹಳೆಯ ನೋವನ್ನು ಸ್ಮರಿಸಿಕೊಳ್ಳುವುದು ಬೇಡ. ಆದಯಾದ ಮೂಲವನ್ನು ಹುಡುಕಿಕೊಳ್ಳುವಿರಿ. ಮನೆಗೆ ಹಣದ ಸಹಾಯ ಮಾಡಬೇಕಾದ ಸ್ಥಿತಿ ಬರಬಹುದು. ನಿಮ್ಮವರ ಗೌಪ್ಯತೆಯನ್ನು ಕಾಪಾಡಿಕೊಳ್ಳಿ. ಇಲ್ಲವಾದರೆ ಅವಮಾನವಾದೀತು. ಮಾತಿನಿಂದ ಗೆಲ್ಲುವುದು ಸುಲಭವಾಗದು. ನಿಮ್ಮದಲ್ಲದ್ದನ್ನು ಉಳಿಸಿಕೊಳ್ಳುವುದು ಕಷ್ಟವಾಗುವುದು. ವೃತ್ತಿಯ ಬಗ್ಗೆ ನಿಮ್ಮಲ್ಲಿ ಹಲವು ಗೊಂದಲಗಳು ಕಾಣಿಸುವುದು. ಇಂದು ನೀವು ಯಾವುದಾದರೂ ವಿಚಾರವನ್ನು ಮಾತಿನಿಂದ ಗೆಲ್ಲವುದು ಸುಲಭವಲ್ಲ.

ಸಿಂಹ ರಾಶಿ :

ಅವಸರದಲ್ಲಿ ಪ್ರಯಾಣವನ್ನು ಮಾಡಬೇಡಿ. ಸಾವಧಾನತೆವಿರಲಿ. ಕೇಳಿದವರಿಗೆ ಆಗದು ಎಂದು ಹೇಳದೇ ಇರುವುದನ್ನು ಕೊಡಿ. ಸಂತೃಪ್ತಿಯು ನಿಮಗೆ ಸಿಗಬಹುದು. ಸಂಗಾತಿಯ ಆಸೆಗಳನ್ನು ಪೂರ್ಣಗೊಳಿಸಲು ಪ್ರಯತ್ನಿಸುವಿರಿ. ಯಾರದೋ ಕೋಪ ನಿಮ್ಮ ಕಡಗೆ ತಿರುಗುವುದು. ದಿನವನ್ನು ಸುಂದರವಾಗಿ ಮಾಡಿಕೊಳ್ಳಲು ಮೊದಲೇ ಯೋಚಿಸಿ. ನಿಮ್ಮ ಪ್ರತಿಕ್ರಿಯೆ ಅಧಿಕಾರಿವರ್ಗದಿಂದ ನಿಮ್ಮ ಗೌರವಕ್ಕೆ ದಕ್ಕೆ ಆಗಬಹುದು. ಸಂಗಾತಿಯ ಇಂಗಿತವನ್ನೇ ಅರಿತು ಕಾರ್ಯವನ್ನು ಮಾಡುವಿರಿ.

ಕನ್ಯಾ ರಾಶಿ :

ಹಣದ ಸಮಸ್ಯೆಗಳು ತಾನಾಗಿಯೇ ನಿವಾರಣೆಯಾಗುವುದು. ವಿವಾಹಕ್ಕೆ ಕಾಣದವರಿಂದ ಅಡತಡೆ ಬರುವುದು. ನಿಮ್ಮವರ ಬಗ್ಗೆ ದೂರು ಕೊಡಬಹುದು ನಿಮ್ಮ ಬಳಿ.‌ ಅದನ್ನು ಸಮಾಧಾನ ಚಿತ್ತದಿಂದ ಸ್ವೀಕರಿಸಿ. ಸ್ವಚ್ಛಂದತೆಯಿಂದ ತಪ್ಪುಗಳು ನಡೆಯಬಹುದು. ಪಾಲುದಾರಿಕೆಯಲ್ಲಿ ಹೊಸ ಕಾರ್ಯಗಳನ್ನು ಆರಂಭಿಸಲು ಆಲೋಚಿಸುವಿರಿ‌.ದೂರ ಹೋಗುವವರಿದ್ದರೆ ಹಿರಿಯರ ಆಶೀರ್ವಾದವನ್ನು ಪಡೆದುಕೊಳ್ಳಿ. ಸಂಗಾತಿಯು ನಿಮ್ಮ ಜೊತೆ ಜಗಳವಾಡಿ ಹಳೆಯ ವಿಚಾರವನ್ನು ಪುನಃ ಪ್ರಸ್ತಾಪಿಸಬಹುದು.

ತುಲಾ ರಾಶಿ :

ಮಾನಸಿಕವಾದ ಯಾವ ಕ್ಷೋಭೆಯನ್ನೂ ಮನಸ್ಸಿಗೆ ತಂದುಕೊಳ್ಳದೇ ಚಿತ್ತವಿಶ್ರಾಂತಿಯನ್ನೂ ಕೊಡಿ. ಹಳೆಯ ಸ್ನೇಹಿತರು ನಿಮ್ಮನ್ನು ಅಕಸ್ಮಾತ್ ಭೇಟಿಯಾಗಬಹುದು. ಸಂಗಾತಿಯು ನಿಮ್ಮ ಪೂರ್ವವೃತ್ತಾಂತವನ್ನು ಹೇಳಬಹುದು. ನೀವಾಗಿಯೇ ವ್ಯಕ್ತಿಗಳನ್ನು ಬಿಟ್ಟುಕೊಳ್ಳುವಿರಿ. ಕೆಲಸವನ್ನು ಬದಲಿಸುವ ಯೋಚನೆ ಇರಲಿದೆ. ಹೊಸ ಸಂಗತಿಗಳನ್ನು ಕಲಿಯುವಿರಿ. ನಿಮ್ಮ ನಿರ್ಧಾರವನ್ನು ಯಾರು ಏನೇ ಹೇಳಿದರೂ ಬದಲಾಯಿಸುವುದಿಲ್ಲ. ಉದ್ಯೋಗದಲ್ಲಿ ಗಾಂಭೀರ್ಯವಿರಲಿದೆ. ಸರಿಯಾದ ವಿವೇಚನೆಯಿಂದ ಕಾರ್ಯವನ್ನು ನಿರ್ವಹಿಸುವಿರಿ.

ವೃಶ್ಚಿಕ ರಾಶಿ :

ದೂರ ಪ್ರಯಾಣ ಇಂದು ಬದಲಾಗುವುದು. ಇನ್ನೊಬ್ಬರ ಪ್ರಭಾವದ ಮೇಲೆ ನೀವು ಕೆಲಸವನ್ನು ಪಡೆಯುವಿರಿ. ಆಪ್ತರಿಂದ ಅನಿರೀಕ್ಷಿತ ಪಾರಿತೋಷಕಗಳು ಸಿಗಬಹುದು. ಕೃಷಿಯ ಬಗ್ಗೆ ಆಸಕ್ತಿ ಇರುವುದು. ಸಂಗಾತಿಯನ್ನು ಮಾತಿನಿಂದ ನೋಯಿಸುವಿರಿ. ಮನಸ್ಸನ್ನು ಅರ್ಥಮಾಡಿಕೊಂಡು ಬೇರೆಯವರ ಜೊತೆ ವ್ಯವಹಾರ ಮಾಡಿ. ಉದ್ಯಮದಲ್ಲಿ ಸಣ್ಣ ಪ್ರಗತಿ ಇರಬಹುದು. ಭಾವನಾತ್ಮಕ ವಿಚಾರಗಳಿಗೆ ಸ್ಪಂದಿಸುವುದು ಕಷ್ಟವಾಗಲವಾಗಲಿದೆ. ನಿಮ್ಮವರ ಮಾತುಗಳಿಂದ ನೀವು ಬೇಸರಗೊಳ್ಳುವಿರಿ.

ಧನು ರಾಶಿ :

ಸಂತೋಷವಾಗಿರಲು ಎಲ್ಲ ಯೋಜನೆಗಳನ್ನು ಸಿದ್ಧಪಡಿಸಿದರೂ ಅದು ವ್ಯತ್ಯಾಸ ಆಗಬಹುದು. ಅಥವಾ ಇನ್ನೇನೋ ಆಗಬಹುದು. ಇಂದಿನ ಸಿಟ್ಟು ನಿಮ್ಮ ಜೀವನಕ್ಕೆ ಬೇಡವಾಗಿರುವುದು. ಅದು ಬೇರೆ ರೂಪವನ್ನು ಪಡೆಯಬಹುದು. ಕಿರಿಯರ ಭಾವನೆ ಸ್ಪಂದಿಸುವಿರಿ. ನಿರಂತರ ಶ್ರಮದಿಂದ ಆಯಾಸವಾದ ನಿಮಗೆ ಇಂದು ಸ್ವಲ್ಪ ಬಿಡುಗಡೆಯಂತೆ ತೋರುವುದು‌. ದೇವರ ಕಾರ್ಯದಲ್ಲಿ ತೊಡಗುವಿರಿ. ಇಂದಿನ ಕಾರ್ಯವು ಯಾವುದೇ ತೊಂದರೆಗಳಿಲ್ಲದೇ ಮುಗಿಯುವುದು.

ಇದನ್ನೂ ಓದಿ: ಯೋಗಿನಿ ದಶಾ ಎಂದರೇನು? ಯೋಗಿನಿ ಹಂತವನ್ನು ಹೇಗೆ ನಿರ್ಧರಿಸಲಾಗುತ್ತದೆ?

ಮಕರ ರಾಶಿ :

ವಿವಿಧ ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಮನಸ್ಸು ನಿಮ್ಮಲ್ಲಿರಲಿದೆ. ಸಾಮಾಜಿಕ ಕಾರ್ಯಕ್ಕೆ ಹಲವರಿಂದ ಒತ್ತಡ ಸಿಗಬಹುದು. ಹಣವು ವ್ಯಯವಾಗುವ ಸಾಧ್ಯತೆ ಇದೆ‌. ನಿಮ್ಮ ಕನಸುಗಳು ನಿನಗೆ ಉತ್ಸಾಹವನ್ನು ತಂದುಕೊಡುತ್ತವೆ. ಪ್ರೀತಿಯಿಂದ ಎಲ್ಲರನ್ನೂ ಮಾತನಾಡಿಸುವಿರಿ. ನಿಮ್ಮ ಆಲೋಚನೆಗಳು ಇಷ್ಟವಾದೀತು. ಸಾಹಸಕ್ಕೆ ಆದಷ್ಟು ಕೈ ಹಾಕುವುದು ಬೇಡ. ಹೊಸತರ ಕಲಿಕೆಯಲ್ಲಿ ಆಸಕ್ತಿಯು ಅಧಿಕವಾಗುವುದು.

ಕುಂಭ ರಾಶಿ :

ನಿಮ್ಮ ಇಂದಿನ‌ ಯೋಜನೆಗಳು ತಲೆಕೆಳಗಾಗುವುದು. ಮನೆಗೆ ಸಂಬಂಧಿಸಿದಂತೆ ಸರಿಯಾದ ಖರ್ಚುಗಳ ಮಾಹಿತಿ ಇಲ್ಲದೇ ಅಧಿಕ ಖರ್ಚನ್ನು ಮಾಡಬೇಕಾಗಿಬರಬಹುದು. ಎಲ್ಲರ ಮಾತುಗಳು ನಿಮಗೆ ಕರ್ಣಕಠೋರವಾದೀತು. ಎಲ್ಲವೂ ಘಟಿಸಿ ಮೇಲೆ ಪಶ್ಚಾತ್ತಾಪ ಪಡುವುದರಿಂದ ಫಲ ಸಿಗದು. ನಿಮ್ಮನ್ನು ನಂಬಿದವರಿಗೆ ಏನಾದರೂ ಒಂದು ದಾರಿ ಮಾಡಿಕೊಡಬೇಕಾಗುವುದು. ತಂತ್ರಜ್ಞರು ವಹಿಸಿಕೊಂಡ ಕಾರ್ಯದ ಗಡುವುದು ಸಮೀಪಿಸಿದ್ದು, ತುರ್ತು ಕಾರ್ಯವನ್ನು ಮಾಡಬೇಕಿದೆ.

ಮೀನ ರಾಶಿ :

ಇತರರ ಸಲಹೆಗಳನ್ನು ಕೇಳಿ, ನಿಮಗೆ ಸರಿಯಾದೃ ಮಾತ್ರ ಮುಂದುವರಿಯಿರಿ. ನಿಮಗೆ ಉತ್ತಮ ಅವಕಾಶಗಳು ಸಿಗಲಿವೆ. ಆಪ್ತರ ಜೊತೆ ನಿಮ್ಮ ಸುಖ ದುಃಖಗಳನ್ನು ಹಂಚಿಕೊಳ್ಳುವಿರಿ. ಅಪರಿಚತವಾದ ಹುದ್ದೆಗಳನ್ನು ಅನಿವಾರ್ಯವಾಗಿ ಅಲಂಕರಿಸಬೇಕಾದೀತು. ಆಸ್ತಿಯ ಇಬ್ಬಾಗಕ್ಕೆ ಸಹಿ ಹಾಕಲೇಬೇಕಾದೀತು. ಅತಿಯಾದ ನಗುವು ಬೇಡ. ಕಳೆದುಕೊಂಡವರ ಬಗ್ಗೆ ಪಶ್ಚಾತ್ತಾಪ‌ ಇರಲಿದೆ. ಆರ್ಥಿಕ ಒತ್ತಡದಿಂದ ನೀವು ಹೊರಬರುವ ಮಾರ್ಗವನ್ನು ಹುಡುಕುವಿರಿ.

-ಲೋಹಿತ್ ಹೆಬ್ಬಾರ್-8762924271 (what’s app only)

ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಕಾರವಾರ: ಭಾರಿ ಅಲೆಗಳ ಮಧ್ಯೆ ಮುಳುಗುತ್ತಿದ್ದ ಮಾನಸಿಕ ಅಸ್ವಸ್ಥನ ಪ್ರಾಣ ಉಳಿಸಿದ ಖಾಕಿ ಪಡೆ – Kannada News | Coastal Police Heroic Rescue: Youth Saved from Drowning at Karwar Tagore Beach

ಕಾರವಾರ ಜು.17: ಜಿಲ್ಲೆಯಲ್ಲಿ ಮುಂಗಾರು ಮಳೆಯ ಅಬ್ಬರ ಜೋರಾಗಿದ್ದು, ಸಮುದ್ರದಲ್ಲಿ ಅಲೆಗಳ ಆರ್ಭಟ ತೀವ್ರಗೊಂಡಿದೆ. ಇಂತಹ ಪ್ರಾಣಾಪಾಯದ ಸನ್ನಿವೇಶದಲ್ಲಿ ಕಾರವಾರದ ಪ್ರಸಿದ್ಧ ಟಾಗೋರ್ ಕಡಲತೀರದಲ್ಲಿ (Tagore Beach) ಕಡಲಿಗೆ ಇಳಿದು ಅಲೆಗಳ ಮಧ್ಯೆ ಮುಳುಗುತ್ತಿದ್ದ ಮಾನಸಿಕ ಅಸ್ವಸ್ಥ ಯುವಕನನ್ನು ಕರಾವಳಿ ಕಾವಲು ಪಡೆಯ ಪೊಲೀಸರು ಅತ್ಯಂತ ಸಾಹಸಿಕವಾಗಿ ರಕ್ಷಿಸಿದ್ದಾರೆ. ಕಾರವಾರ ಭಾಗದಲ್ಲಿ ಸುರಿಯುತ್ತಿರುವ ಭಾರಿ ಮಳೆಯ ಹಿನ್ನೆಲೆಯಲ್ಲಿ ಸಮುದ್ರ ತೀವ್ರವಾಗಿ ಉಕ್ಕಿ ಹರಿಯುತ್ತಿದ್ದು, ಅಲೆಗಳ ರಭಸ ಹೆಚ್ಚಾಗಿದೆ. ಈ ವೇಳೆ ಟಾಗೋರ್ ಕಡಲತೀರದಲ್ಲಿ ಮಾನಸಿಕ ಅಸ್ವಸ್ಥನೊಬ್ಬ ಯಾರಿಗೂ ತಿಳಿಯದಂತೆ ಸಮುದ್ರದ ಆಳಕ್ಕೆ ಇಳಿದಿದ್ದಾನೆ. ಅಲೆಗಳ ಅಬ್ಬರಕ್ಕೆ ಸಿಲುಕಿ ಆತ ನೀರಿನಲ್ಲಿ ಮುಳುಗುತ್ತಿರುವುದನ್ನು ತೀರದಲ್ಲಿದ್ದ ಕರಾವಳಿ ಕಾವಲು ಪಡೆಯ ಸಿಬ್ಬಂದಿ ತಕ್ಷಣವೇ ಗಮನಿಸಿದ್ದಾರೆ. ಸ್ವಲ್ಪ ತಡಮಾಡಿದ್ದರೂ ಯುವಕ ಸಮುದ್ರದ ಪಾಲಾಗುತ್ತಿದ್ದನು. ಆದರೆ, ಪೊಲೀಸರು ಕ್ಷಣಾರ್ಧದಲ್ಲಿ ಕಾರ್ಯಪ್ರವೃತ್ತರಾಗಿ ತಕ್ಷಣವೇ ಸ್ಪೀಡ್ ಬೋಟ್ ಮೂಲಕ ಸಮುದ್ರದ ಮಧ್ಯಕ್ಕೆ ಧಾವಿಸಿದ್ದಾರೆ. ಅಲೆಗಳ ನಡುವೆಯೂ ಚಾಣಾಕ್ಷತನದಿಂದ ಬೋಟ್ ಮುನ್ನಡೆಸಿದ ಪೊಲೀಸ್ ಸಿಬ್ಬಂದಿ, ಮುಳುಗುತ್ತಿದ್ದ ಯುವಕನನ್ನು ಸುರಕ್ಷಿತವಾಗಿ ನೀರಿನಿಂದ ಮೇಲೆತ್ತಿ ಬೋಟ್ ಒಳಗೆ ಹಾಕಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಬಳಿಕ ಆತನನ್ನು ಸಮುದ್ರದ ಮಧ್ಯದಿಂದ ಸುರಕ್ಷಿತವಾಗಿ ದಡಕ್ಕೆ ತಂದು ಬಿಟ್ಟಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Source link

ಮೆಕ್ಸಿಕೋದಲ್ಲಿ 7.4 ತೀವ್ರತೆಯ ಭೀಕರ ಭೂಕಂಪ; ಸುನಾಮಿಯ ಮುನ್ನೆಚ್ಚರಿಕೆ – Kannada News | 7.4 Magnitude Earthquake strikes Mexico Tsunami Warning Issued

ಮೆಕ್ಸಿಕೋ, ಜುಲೈ 17: ದಕ್ಷಿಣ ಮೆಕ್ಸಿಕೋದಲ್ಲಿ ರಿಕ್ಟರ್ ಮಾಪಕದಲ್ಲಿ 7.4ರಷ್ಟು ಭೀಕರ ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಭೂಕಂಪದ (Earthquake) ಬೆನ್ನಲ್ಲೇ ಸಮುದ್ರ ತೀರದ ಪ್ರದೇಶಗಳಲ್ಲಿ ಭಾರಿ ಎತ್ತರದ ಸುನಾಮಿ ಅಲೆಗಳು ಅಪ್ಪಳಿಸುವ ಭೀತಿ ಎದುರಾಗಿದ್ದು, ಅಧಿಕಾರಿಗಳು ಸುನಾಮಿ ಅಲೆಯ ಮುನ್ನೆಚ್ಚರಿಕೆಯನ್ನು ಘೋಷಿಸಿದ್ದಾರೆ. ದಕ್ಷಿಣ ಮೆಕ್ಸಿಕೋದ ಪೆಸಿಫಿಕ್ ಕರಾವಳಿ ಪ್ರದೇಶದಲ್ಲಿ ಈ ಭೂಕಂಪ ದಾಖಲಾಗಿದೆ. ಭೂಕಂಪದ ತೀವ್ರತೆ ಎಷ್ಟಿತ್ತೆಂದರೆ ಇದರ ಕೇಂದ್ರಬಿಂದುವಿನಿಂದ ನೂರಾರು ಕಿಲೋಮೀಟರ್ ದೂರದಲ್ಲಿರುವ ರಾಜಧಾನಿ ಮೆಕ್ಸಿಕೋ ಸಿಟಿಯಲ್ಲೂ ಕಟ್ಟಡಗಳು ಅಲುಗಾಡಿವೆ. ಇದರಿಂದಾಗಿ ಜನರು ಭಯದಿಂದ ರಸ್ತೆಗಳಿಗೆ ಓಡಿ ಹೋಗಿದ್ದಾರೆ.

ಭೂಕಂಪದ ತೀವ್ರತೆಯು 7ಕ್ಕಿಂತ ಹೆಚ್ಚಿರುವುದರಿಂದ ಪೆಸಿಫಿಕ್ ಸುನಾಮಿ ಎಚ್ಚರಿಕೆ ಕೇಂದ್ರವು ಸಮುದ್ರ ತೀರದ ಪ್ರದೇಶಗಳಿಗೆ ತುರ್ತು ಸೂಚನೆ ನೀಡಿದೆ. ಭೂಕಂಪದ ಕೇಂದ್ರಬಿಂದುವಿನಿಂದ ಸುಮಾರು 1,000 ಕಿಲೋಮೀಟರ್ ವ್ಯಾಪ್ತಿಯಲ್ಲಿರುವ ಕರಾವಳಿ ತೀರಗಳಿಗೆ ಅಪಾಯಕಾರಿ ಸುನಾಮಿ ಅಲೆಗಳು ಅಪ್ಪಳಿಸುವ ಸಾಧ್ಯತೆಯಿದೆ ಎಂದು ಎಚ್ಚರಿಸಲಾಗಿದೆ. ಸಮುದ್ರದ ಅಲೆಗಳು ಸಾಮಾನ್ಯಕ್ಕಿಂತ ಹಲವಾರು ಅಡಿಗಳಷ್ಟು ಎತ್ತರಕ್ಕೆ ಏರಬಲ್ಲವು ಎಂದು ಮುನ್ಸೂಚನೆ ನೀಡಲಾಗಿದೆ. ಭೂಕಂಪ ಪೀಡಿತ ದಕ್ಷಿಣದ ಪ್ರಾಂತ್ಯಗಳಲ್ಲಿ ಹಲವು ಹಳೆಯ ಕಟ್ಟಡಗಳು, ರಸ್ತೆಗಳು ಮತ್ತು ಮೂಲಸೌಕರ್ಯಗಳಿಗೆ ಹಾನಿಯಾಗಿದೆ. ಕೆಲವು ಕಡೆಗಳಲ್ಲಿ ಭೂಕುಸಿತಗಳು ಉಂಟಾಗಿ ಸಂಚಾರ ಕಡಿತಗೊಂಡಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link

ಒಲಿಂಪಿಕ್ಸ್​ 2028: ರಾಜ್ಯದ ಕ್ರೀಡಾಪಟುಗಳ ಬೆನ್ನಿಗೆ ನಿಂತ ಸರ್ಕಾರ; KOA ಶ್ಲಾಘನೆ – Kannada News | Karnataka Govt’s Major Push for Athletes: Reservations, Attendance Relief and ₹5L Rewards

ಒಲಿಂಪಿಕ್ಸ್ (Olympics)​ ಹಾಗೂ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ (Commonwealth Games) ರಾಜ್ಯವನ್ನು ಪ್ರತಿನಿಧಿಸುವ ಕ್ರೀಡಾಪಟುಗಳಿಗೆ ಉತ್ತೇಜನ ನೀಡುವ ಸಲುವಾಗಿ ಕರ್ನಾಟಕ ಸರ್ಕಾರ ಕೆಲವು ಮಹತ್ವದ ನಿರ್ಧಾರಗಳನ್ನು ಕೈಗೊಂಡಿದೆ. ಅದರಲ್ಲಿ ಪ್ರಮುಖವಾಗಿ ರಾಷ್ಟ್ರಮಟ್ಟದಲ್ಲಿ ರಾಜ್ಯವನ್ನು ಪ್ರತಿನಿಧಿಸುವ ಕ್ರೀಡಾಪುಟಗಳಿಗೆ ಹಾಜರಾತಿ ವಿನಾಯಿತಿ ಹಾಗೆಯೇ ಸರ್ಕಾರಿ ಉದ್ಯೋಗಗಳಲ್ಲಿ ಮೀಸಲಾತಿ ಸೇರಿದಂತೆ ಹಲವು ಮಹತ್ವದ ನಿರ್ಧಾರಗಳನ್ನು ರಾಜ್ಯ ಸರ್ಕಾರ ತೆಗೆದುಕೊಂಡಿದೆ. ಹೀಗಾಗಿ ರಾಜ್ಯದಲ್ಲಿ ಕ್ರೀಡಾ ಬೆಳವಣಿಗೆಗೆ ಪೂರಕವಾಗಿ ಕೆಲಸ ಮಾಡತ್ತಿರುವ ಕರ್ನಾಟಕದ ಮುಖ್ಯಮಂತ್ರಿಗಳು ಮತ್ತು ಯುವ ಸಬಲೀಕರಣ ಮತ್ತು ಕ್ರೀಡಾ ಖಾತೆಯನ್ನು ಹೊಂದಿರುವ ಗೌರವಾನ್ವಿತ ಉಪಮುಖ್ಯಮಂತ್ರಿಗಳಿಗೆ ಕರ್ನಾಟಕ ಒಲಿಂಪಿಕ್ ಅಸೋಸಿಯೇಷನ್ ಹೃತ್ಪೂರ್ವಕ ಕೃತಜ್ಞತೆಯನ್ನು ವ್ಯಕ್ತಪಡಿಸಿದೆ.

ಹಾಜರಾತಿಯಲ್ಲಿ ವಿನಾಯಿತಿ

ಪದವಿ ಮತ್ತು ಡಿಪ್ಲೊಮಾ ಕೋರ್ಸ್‌ಗಳನ್ನು ಮಾಡುತ್ತಿರುವ ರಾಷ್ಟ್ರಮಟ್ಟದ ಕ್ರೀಡಾಪಟುಗಳಿಗೆ ಹಾಜರಾತಿಯಲ್ಲಿ ಶೇ.15 ರಷ್ಟು ವಿನಾಯಿತಿ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಕರ್ನಾಟಕವನ್ನು ಪ್ರತಿನಿಧಿಸುತ್ತಿರುವ ಕ್ರೀಡಾಪಟುಗಳಿಗೆ ಶೇ.25 ರಷ್ಟು ವಿನಾಯಿತಿ ನೀಡುವ ರಾಜ್ಯ ಸರ್ಕಾರದ ನಿರ್ಧಾರವು ಕ್ರೀಡಾಪಟುಗಳು ತಮ್ಮ ಶೈಕ್ಷಣಿಕ ಅನ್ವೇಷಣೆಗಳನ್ನು ತಮ್ಮ ಕ್ರೀಡಾ ಬದ್ಧತೆಗಳೊಂದಿಗೆ ಸಮತೋಲನಗೊಳಿಸಲು ಸಹಾಯ ಮಾಡುವ ಮಹತ್ವದ ಹೆಜ್ಜೆಯಾಗಿದೆ. ಈ ನಿರ್ಧಾರವು ಪ್ರತಿಭಾನ್ವಿತ ಕ್ರೀಡಾಪಟುಗಳು ಶಿಕ್ಷಣ ಮತ್ತು ಕ್ರೀಡೆ ಎರಡರಲ್ಲೂ ರಾಜಿ ಮಾಡಿಕೊಳ್ಳದೆ ಉತ್ತಮ ಸಾಧನೆ ಮಾಡಲು ಅನುವು ಮಾಡಿಕೊಡುತ್ತದೆ.

ಮೀಸಲಾತಿ ಜೊತೆಗೆ ಪ್ರೋತ್ಸಾಹ ಧನ

ಹಾಗೆಯೇ ಸರ್ಕಾರಿ ಸೇವೆಗಳಿಗೆ ನೇಮಕಾತಿಯಲ್ಲಿ ಅರ್ಹ ಕ್ರೀಡಾಪಟುಗಳಿಗೆ ಶೇ.2 ರಷ್ಟು ಮೀಸಲಾತಿ ಮತ್ತು ಪೊಲೀಸ್ ಮತ್ತು ಅರಣ್ಯ ಇಲಾಖೆಗಳಿಗೆ ನೇಮಕಾತಿಯಲ್ಲಿ ಶೇ.3 ರಷ್ಟು ಮೀಸಲಾತಿ ನೀಡುವ ಸರ್ಕಾರದ ನಿರ್ಧಾರವನ್ನು ಕರ್ನಾಟಕ ಒಲಿಂಪಿಕ್ ಅಸೋಸಿಯೇಷನ್ ​​ಸ್ವಾಗತಿಸಿದೆ. ಈ ಕ್ರಮಗಳು ಹೆಚ್ಚಿನ ಉದ್ಯೋಗಾವಕಾಶಗಳನ್ನು ಒದಗಿಸುತ್ತವೆ ಮತ್ತು ಹೆಚ್ಚಿನ ಯುವಕರು ಕ್ರೀಡೆಗಳನ್ನು ವೃತ್ತಿಯಾಗಿ ತೆಗೆದುಕೊಳ್ಳಲು ಪ್ರೋತ್ಸಾಹಿಸುತ್ತವೆ. ಇದಲ್ಲದೆ, ಕಾಮನ್‌ವೆಲ್ತ್ ಕ್ರೀಡಾಕೂಟ ಮತ್ತು ಏಷ್ಯನ್ ಕ್ರೀಡಾಕೂಟದಲ್ಲಿ ಭಾಗವಹಿಸುವ ಕರ್ನಾಟಕದ ಪ್ರತಿ ಕ್ರೀಡಾಪಟುವಿಗೆ 5 ಲಕ್ಷ ನಗದು ಪ್ರೋತ್ಸಾಹ ಧನ ಘೋಷಣೆಯು ಪ್ರತಿಷ್ಠಿತ ಅಂತರರಾಷ್ಟ್ರೀಯ ವೇದಿಕೆಗಳಲ್ಲಿ ರಾಷ್ಟ್ರವನ್ನು ಪ್ರತಿನಿಧಿಸುವ ಕ್ರೀಡಾಪಟುಗಳಿಗೆ ಶ್ಲಾಘನೀಯ ಮನ್ನಣೆಯಾಗಿದೆ. ಈ ಪ್ರೋತ್ಸಾಹಧನವು ಶ್ರೇಷ್ಠತೆಗಾಗಿ ಶ್ರಮಿಸುವ ಕ್ರೀಡಾಪಟುಗಳಿಗೆ ಬಲವಾದ ಪ್ರೇರಣೆಯಾಗಿ ಕಾರ್ಯನಿರ್ವಹಿಸುತ್ತದೆ.

ಕರ್ನಾಟಕದ ಇಡೀ ಕ್ರೀಡಾ ಸಮುದಾಯದ ಪರವಾಗಿ, ಕರ್ನಾಟಕ ಒಲಿಂಪಿಕ್ ಅಸೋಸಿಯೇಷನ್ ​​ಮಾನ್ಯ ಮುಖ್ಯಮಂತ್ರಿಗಳು ಮತ್ತು ಮಾನ್ಯ ಉಪಮುಖ್ಯಮಂತ್ರಿಗಳ ದೂರದೃಷ್ಟಿಯ ನಾಯಕತ್ವ ಮತ್ತು ಕ್ರೀಡೆಯ ಅಭಿವೃದ್ಧಿಗೆ ಅಚಲವಾದ ಬದ್ಧತೆಗಾಗಿ ತನ್ನ ಪ್ರಾಮಾಣಿಕ ಕೃತಜ್ಞತೆಯನ್ನು ವ್ಯಕ್ತಪಡಿಸಿದೆ. ಈ ಮಹತ್ವದ ತೀರ್ಮಾನಗಳು ಕರ್ನಾಟಕದಲ್ಲಿ ಕ್ರೀಡಾ ಪರಿಸರ ವ್ಯವಸ್ಥೆಯನ್ನು ಬಲಪಡಿಸುವಲ್ಲಿ ಮತ್ತು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಹೆಚ್ಚಿನ ಯಶಸ್ಸನ್ನು ಸಾಧಿಸಲು ಭವಿಷ್ಯದ ಪೀಳಿಗೆಯ ಕ್ರೀಡಾಪಟುಗಳಿಗೆ ಸ್ಫೂರ್ತಿ ನೀಡುವಲ್ಲಿ ಪ್ರಮುಖ ಪಾತ್ರವಹಿಸಲಿವೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 10:56 pm, Fri, 17 July 26

Source link

ಒಲಿಂಪಿಕ್ಸ್​ 2028: ರಾಜ್ಯದ ಕ್ರೀಡಾಪಟುಗಳ ಬೆನ್ನಿಗೆ ನಿಂತ ಸರ್ಕಾರ; KOA ಶ್ಲಾಘನೆ – Kannada News | Karnataka Govt’s Major Push for Athletes: Reservations, Attendance Relief and ₹5L Rewards

ಒಲಿಂಪಿಕ್ಸ್ (Olympics)​ ಹಾಗೂ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ (Commonwealth Games) ರಾಜ್ಯವನ್ನು ಪ್ರತಿನಿಧಿಸುವ ಕ್ರೀಡಾಪಟುಗಳಿಗೆ ಉತ್ತೇಜನ ನೀಡುವ ಸಲುವಾಗಿ ಕರ್ನಾಟಕ ಸರ್ಕಾರ ಕೆಲವು ಮಹತ್ವದ ನಿರ್ಧಾರಗಳನ್ನು ಕೈಗೊಂಡಿದೆ. ಅದರಲ್ಲಿ ಪ್ರಮುಖವಾಗಿ ರಾಷ್ಟ್ರಮಟ್ಟದಲ್ಲಿ ರಾಜ್ಯವನ್ನು ಪ್ರತಿನಿಧಿಸುವ ಕ್ರೀಡಾಪುಟಗಳಿಗೆ ಹಾಜರಾತಿ ವಿನಾಯಿತಿ ಹಾಗೆಯೇ ಸರ್ಕಾರಿ ಉದ್ಯೋಗಗಳಲ್ಲಿ ಮೀಸಲಾತಿ ಸೇರಿದಂತೆ ಹಲವು ಮಹತ್ವದ ನಿರ್ಧಾರಗಳನ್ನು ರಾಜ್ಯ ಸರ್ಕಾರ ತೆಗೆದುಕೊಂಡಿದೆ. ಹೀಗಾಗಿ ರಾಜ್ಯದಲ್ಲಿ ಕ್ರೀಡಾ ಬೆಳವಣಿಗೆಗೆ ಪೂರಕವಾಗಿ ಕೆಲಸ ಮಾಡತ್ತಿರುವ ಕರ್ನಾಟಕದ ಮುಖ್ಯಮಂತ್ರಿಗಳು ಮತ್ತು ಯುವ ಸಬಲೀಕರಣ ಮತ್ತು ಕ್ರೀಡಾ ಖಾತೆಯನ್ನು ಹೊಂದಿರುವ ಗೌರವಾನ್ವಿತ ಉಪಮುಖ್ಯಮಂತ್ರಿಗಳಿಗೆ ಕರ್ನಾಟಕ ಒಲಿಂಪಿಕ್ ಅಸೋಸಿಯೇಷನ್ ಹೃತ್ಪೂರ್ವಕ ಕೃತಜ್ಞತೆಯನ್ನು ವ್ಯಕ್ತಪಡಿಸಿದೆ.

ಹಾಜರಾತಿಯಲ್ಲಿ ವಿನಾಯಿತಿ

ಪದವಿ ಮತ್ತು ಡಿಪ್ಲೊಮಾ ಕೋರ್ಸ್‌ಗಳನ್ನು ಮಾಡುತ್ತಿರುವ ರಾಷ್ಟ್ರಮಟ್ಟದ ಕ್ರೀಡಾಪಟುಗಳಿಗೆ ಹಾಜರಾತಿಯಲ್ಲಿ ಶೇ.15 ರಷ್ಟು ವಿನಾಯಿತಿ ಮತ್ತು ಕರ್ನಾಟಕದ ಅಂತರರಾಷ್ಟ್ರೀಯ ಕ್ರೀಡಾಪಟುಗಳಿಗೆ ಶೇ.25 ರಷ್ಟು ವಿನಾಯಿತಿ ನೀಡುವ ರಾಜ್ಯ ಸರ್ಕಾರದ ನಿರ್ಧಾರವು ಕ್ರೀಡಾಪಟುಗಳು ತಮ್ಮ ಶೈಕ್ಷಣಿಕ ಅನ್ವೇಷಣೆಗಳನ್ನು ತಮ್ಮ ಕ್ರೀಡಾ ಬದ್ಧತೆಗಳೊಂದಿಗೆ ಸಮತೋಲನಗೊಳಿಸಲು ಸಹಾಯ ಮಾಡುವ ಮಹತ್ವದ ಹೆಜ್ಜೆಯಾಗಿದೆ. ಈ ನಿರ್ಧಾರವು ಪ್ರತಿಭಾನ್ವಿತ ಕ್ರೀಡಾಪಟುಗಳು ಶಿಕ್ಷಣ ಮತ್ತು ಕ್ರೀಡೆ ಎರಡರಲ್ಲೂ ರಾಜಿ ಮಾಡಿಕೊಳ್ಳದೆ ಉತ್ತಮ ಸಾಧನೆ ಮಾಡಲು ಅನುವು ಮಾಡಿಕೊಡುತ್ತದೆ.

ಮೀಸಲಾತಿ ಜೊತೆಗೆ ಪ್ರೋತ್ಸಾಹ ಧನ

ಹಾಗೆಯೇ ಸರ್ಕಾರಿ ಸೇವೆಗಳಿಗೆ ನೇಮಕಾತಿಯಲ್ಲಿ ಅರ್ಹ ಕ್ರೀಡಾಪಟುಗಳಿಗೆ ಶೇ.2 ರಷ್ಟು ಮೀಸಲಾತಿ ಮತ್ತು ಪೊಲೀಸ್ ಮತ್ತು ಅರಣ್ಯ ಇಲಾಖೆಗಳಿಗೆ ನೇಮಕಾತಿಯಲ್ಲಿ ಶೇ.3 ರಷ್ಟು ಮೀಸಲಾತಿ ನೀಡುವ ಸರ್ಕಾರದ ನಿರ್ಧಾರವನ್ನು ಕರ್ನಾಟಕ ಒಲಿಂಪಿಕ್ ಅಸೋಸಿಯೇಷನ್ ​​ಸ್ವಾಗತಿಸಿದೆ. ಈ ಕ್ರಮಗಳು ಹೆಚ್ಚಿನ ಉದ್ಯೋಗಾವಕಾಶಗಳನ್ನು ಒದಗಿಸುತ್ತವೆ ಮತ್ತು ಹೆಚ್ಚಿನ ಯುವಕರು ಕ್ರೀಡೆಗಳನ್ನು ವೃತ್ತಿಯಾಗಿ ತೆಗೆದುಕೊಳ್ಳಲು ಪ್ರೋತ್ಸಾಹಿಸುತ್ತವೆ. ಇದಲ್ಲದೆ, ಕಾಮನ್‌ವೆಲ್ತ್ ಕ್ರೀಡಾಕೂಟ ಮತ್ತು ಏಷ್ಯನ್ ಕ್ರೀಡಾಕೂಟದಲ್ಲಿ ಭಾಗವಹಿಸುವ ಕರ್ನಾಟಕದ ಪ್ರತಿ ಕ್ರೀಡಾಪಟುವಿಗೆ 5 ಲಕ್ಷ ನಗದು ಪ್ರೋತ್ಸಾಹ ಧನ ಘೋಷಣೆಯು ಪ್ರತಿಷ್ಠಿತ ಅಂತರರಾಷ್ಟ್ರೀಯ ವೇದಿಕೆಗಳಲ್ಲಿ ರಾಷ್ಟ್ರವನ್ನು ಪ್ರತಿನಿಧಿಸುವ ಕ್ರೀಡಾಪಟುಗಳಿಗೆ ಶ್ಲಾಘನೀಯ ಮನ್ನಣೆಯಾಗಿದೆ. ಈ ಪ್ರೋತ್ಸಾಹಧನವು ಶ್ರೇಷ್ಠತೆಗಾಗಿ ಶ್ರಮಿಸುವ ಕ್ರೀಡಾಪಟುಗಳಿಗೆ ಬಲವಾದ ಪ್ರೇರಣೆಯಾಗಿ ಕಾರ್ಯನಿರ್ವಹಿಸುತ್ತದೆ.

ಕರ್ನಾಟಕದ ಇಡೀ ಕ್ರೀಡಾ ಸಮುದಾಯದ ಪರವಾಗಿ, ಕರ್ನಾಟಕ ಒಲಿಂಪಿಕ್ ಅಸೋಸಿಯೇಷನ್ ​​ಮಾನ್ಯ ಮುಖ್ಯಮಂತ್ರಿಗಳು ಮತ್ತು ಮಾನ್ಯ ಉಪಮುಖ್ಯಮಂತ್ರಿಗಳ ದೂರದೃಷ್ಟಿಯ ನಾಯಕತ್ವ ಮತ್ತು ಕ್ರೀಡೆಯ ಅಭಿವೃದ್ಧಿಗೆ ಅಚಲವಾದ ಬದ್ಧತೆಗಾಗಿ ತನ್ನ ಪ್ರಾಮಾಣಿಕ ಕೃತಜ್ಞತೆಯನ್ನು ವ್ಯಕ್ತಪಡಿಸಿದೆ. ಈ ಮಹತ್ವದ ತೀರ್ಮಾನಗಳು ಕರ್ನಾಟಕದಲ್ಲಿ ಕ್ರೀಡಾ ಪರಿಸರ ವ್ಯವಸ್ಥೆಯನ್ನು ಬಲಪಡಿಸುವಲ್ಲಿ ಮತ್ತು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಹೆಚ್ಚಿನ ಯಶಸ್ಸನ್ನು ಸಾಧಿಸಲು ಭವಿಷ್ಯದ ಪೀಳಿಗೆಯ ಕ್ರೀಡಾಪಟುಗಳಿಗೆ ಸ್ಫೂರ್ತಿ ನೀಡುವಲ್ಲಿ ಪ್ರಮುಖ ಪಾತ್ರವಹಿಸಲಿವೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಚೆನ್ನಮ್ಮ ಆರೋಗ್ಯ ಸ್ಥಿತಿ ಗಂಭೀರ: ಆಸ್ಪತ್ರೆ ಬಳಿ ಕಣ್ಣೀರು ಹಾಕಿದ ದೇವೇಗೌಡ; ಇನ್ನು ಆ ದೇವರೇ ಕಾಪಾಡಬೇಕು ಎಂದ ಹೆಚ್‌ಡಿಕೆ – Kannada News | Deve Gowda’s Wife Chennamma’s Health Critical; Family Prays at Bengaluru Manipal

ದೇವೇಗೌಡರ ಪತ್ನಿ,ಕುಮಾರಸ್ವಾಮಿ ಕಣ್ಣೀರು

ಬೆಂಗಳೂರು, ಜು.17 : ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ಅವರ ಆರೋಗ್ಯ ಸ್ಥಿತಿ ತೀವ್ರ ಗಂಭೀರವಾಗಿದ್ದು, ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಅವರಿಗೆ ತುರ್ತು ಚಿಕಿತ್ಸೆ ನೀಡಲಾಗುತ್ತಿದೆ. ಆಸ್ಪತ್ರೆಗೆ ಭೇಟಿ ನೀಡಿ ಹೊರಬಂದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಹಾಗೂ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ತೀವ್ರ ಗದ್ಗದಿತರಾಗಿ ಕಣ್ಣೀರು ಹಾಕಿರುವ ಹೃದಯವಿದ್ರಾವಕ ದೃಶ್ಯ ಕಂಡುಬಂದಿದೆ. ಆಸ್ಪತ್ರೆಯಿಂದ ಹೊರಬರುವಾಗ ಮಾಧ್ಯಮಗಳ ಮುಂದೆ ಕಣ್ಣೀರು ಹಾಕುತ್ತಲೇ ಮಾತನಾಡಿದ ಹೆಚ್.ಡಿ. ಕುಮಾರಸ್ವಾಮಿ ಅವರು ತಾಯಿಯ ಆರೋಗ್ಯದ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದರು.

“ಮೊನ್ನೆ ದಿನ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿದ್ದರಿಂದ ತಾಯಿಯವರನ್ನು ಆಸ್ಪತ್ರೆಗೆ ದಾಖಲಿಸಿದ್ದೆವು. ಮಣಿಪಾಲ್ ಆಸ್ಪತ್ರೆಯ ತಜ್ಞ ವೈದ್ಯರ ತಂಡ ಅವರಿಗೆ ಅತ್ಯಂತ ಉತ್ತಮವಾದ ಚಿಕಿತ್ಸೆ ನೀಡುತ್ತಿದ್ದಾರೆ. ಆದರೆ, ವೈದ್ಯರು ತಮ್ಮ ಕೈಮೀರಿ ಪ್ರಯತ್ನ ಮಾಡಿದ್ದಾರೆ. ಈಗ ಆ ದೇವರೇ ಅವರನ್ನು ಕಾಪಾಡಬೇಕು” ಎಂದು ಭಾವುಕರಾಗಿ ಹೇಳಿದರು.

ಇಲ್ಲಿದೆ ನೋಡಿ ವಿಡಿಯೋ:

25 ವರ್ಷಗಳ ಹಿಂದೆ ತಾಯಿಯವರ ಮೇಲೆ ಆ್ಯಸಿಡ್ ದಾಳಿ ಆದಾಗಲೂ ಅವರು ಬದುಕುವುದಿಲ್ಲ ಎಂದಿದ್ದರು. ಆದರೆ ಆಗ ದೇವರ ಪೂಜೆಯಿಂದಾಗಿ ಅವರು ಪಾರಾಗಿದ್ದರು. ಅವರು ಮೊದಲಿನಿಂದಲೂ ಆ ದೇವರ ಮೇಲೆ ಅಪಾರ ನಂಬಿಕೆ ಇಟ್ಟುಕೊಂಡಿದ್ದಾರೆ. ಈಗ ವೈದ್ಯಕೀಯ ಚಿಕಿತ್ಸೆಗಿಂತಲೂ ಆ ರಾಜರಾಜೇಶ್ವರಿ ತಾಯಿಯೇ ಅವರನ್ನು ಕಾಪಾಡಬೇಕು. ಹಿಂದೆಯೂ ಕಾಪಾಡಿದ್ದರು, ಈಗಲೂ ಯಾವುದೇ ಸಮಸ್ಯೆ ಇಲ್ಲದೆ ಗುಣಮುಖರಾಗಿ ಮನೆಗೆ ಬರುತ್ತಾರೆ ಎಂಬ ನಂಬಿಕೆ ನಮಗಿದೆ” ಎಂದು ಗದ್ಗದಿತರಾದರು.

ಇದನ್ನೂ ಓದಿ: ಆಸ್ಪತ್ರೆಗೆ ಭೇಟಿ ನೀಡಿ ದೇವೇಗೌಡರ ಪತ್ನಿ ಚೆನ್ನಮ್ಮ ಅವರ ಆರೋಗ್ಯ ವಿಚಾರಿಸಿದ ಆರ್. ಅಶೋಕ್

ಇದೇ ವೇಳೆ ಮಣಿಪಾಲ್ ಆಸ್ಪತ್ರೆಯ ಆವರಣದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರು ಚೆನ್ನಮ್ಮ ಅವರ ಆರೋಗ್ಯದ ಬಗ್ಗೆ ಮಾಹಿತಿ ನೀಡಿದರು. “ಚೆನ್ನಮ್ಮನಿಗೆ ಬುಧವಾರದಿಂದ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತ್ತು. ಹಾಗಾಗಿ ಅವರನ್ನು ತಕ್ಷಣವೇ ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಸದ್ಯ ತಜ್ಞ ವೈದ್ಯರ ತಂಡ ಅವರಿಗೆ ಚಿಕಿತ್ಸೆ ನೀಡುತ್ತಿದೆ.””ಉಸಿರಾಟದ ಸಮಸ್ಯೆ ಹೊರತುಪಡಿಸಿ ಸದ್ಯಕ್ಕೆ ಬೇರೆ ಯಾವುದೇ ದೊಡ್ಡ ಸಮಸ್ಯೆ ಇಲ್ಲ ಎಂದು ವೈದ್ಯರು ಹೇಳಿದ್ದಾರೆ, ನೋಡೋಣ. ನನಗೆ ಇಂದು ಡಯಾಲಿಸಿಸ್ ಮಾಡಲಾಗಿದೆ, ಹಾಗಾಗಿ ನಾನು ಈಗ ಮನೆಗೆ ಹೋಗಬೇಕು” ಎಂದು ದೇವೇಗೌಡರು ಹೇಳಿದ್ದಾರೆ. ದೊಡ್ಡಗೌಡರ ಇಡೀ ಕುಟುಂಬವೇ ಸದ್ಯ ಆಸ್ಪತ್ರೆಯ ಬಳಿ ಮೊಕ್ಕಾಂ ಹೂಡಿದ್ದು, ಇಡೀ ನಾಡಿನಾದ್ಯಂತ ಚೆನ್ನಮ್ಮ ಅವರು ಬೇಗ ಗುಣಮುಖರಾಗಲಿ ಎಂದು ಜೆಡಿಎಸ್ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ.

ವರದಿ: ಈರಣ್ಣ ಬಸವ

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Exit mobile version