ಭಾರತದ ಉಜ್ವಲ ಭವಿಷ್ಯಕ್ಕೆ ಅಡಿಪಾಯ ಬಲಪಡಿಸುವ ಬಜೆಟ್; ಪ್ರಧಾನಿ ಮೋದಿ ಬಣ್ಣನೆ – Kannada News | Budget 2026 strengthens foundation for Indias bright future says PM Narendra Modi

ನವದೆಹಲಿ, ಫೆಬ್ರವರಿ 1: ಈ ಬಾರಿಯ ಕೇಂದ್ರ ಬಜೆಟ್ (Budget 2026) ಐತಿಹಾಸಿಕ ಬಜೆಟ್ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ (PM Modi) ಬಣ್ಣಿಸಿದ್ದಾರೆ. ಇದು ಮಹಿಳೆಯರ ಸಬಲೀಕರಣವನ್ನು ಪ್ರತಿಬಿಂಬಿಸುತ್ತದೆ, ಭಾರತದ ಸುಧಾರಣಾ ಪ್ರಯಾಣವನ್ನು ವೇಗಗೊಳಿಸುತ್ತದೆ ಮತ್ತು ದೇಶದ ಭವಿಷ್ಯದ ಬೆಳವಣಿಗೆಗೆ ಬಲವಾದ ಅಡಿಪಾಯವನ್ನು ಹಾಕುತ್ತದೆ ಎಂದು ಹೇಳಿದ್ದಾರೆ. ಹಾಗೇ, ಸತತ 9ನೇ ಬಾರಿ ಕೇಂದ್ರ ಬಜೆಟ್ ಮಂಡಿಸಿದ್ದಕ್ಕಾಗಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಅವರನ್ನು ಶ್ಲಾಘಿಸಿದ ಪ್ರಧಾನಿ ಮೋದಿ, ನಿರ್ಮಲಾ ಸೀತಾರಾಮನ್ ಸತತ ಒಂಬತ್ತನೇ ಬಾರಿಗೆ ಬಜೆಟ್ ಮಂಡಿಸಿದ ಮೂಲಕ ಮಹಿಳಾ ಹಣಕಾಸು ಸಚಿವೆಯಾಗಿ ಇತಿಹಾಸ ಸೃಷ್ಟಿಸಿದ್ದಾರೆ ಎಂದು ಹೇಳಿದ್ದಾರೆ.

ಈ ಬಜೆಟ್ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗುವತ್ತ ಭಾರತದ ಹಾದಿಯನ್ನು ಬಲಪಡಿಸುತ್ತದೆ. ಇಂದಿನ ಬಜೆಟ್ ಐತಿಹಾಸಿಕವಾಗಿದೆ. ಇದು ದೇಶದ ಮಹಿಳಾ ಶಕ್ತಿಯ ಬಲವಾದ ಸಬಲೀಕರಣವನ್ನು ಪ್ರತಿಬಿಂಬಿಸುತ್ತದೆ. ಈ ಬಜೆಟ್ ಅಪಾರ ಅವಕಾಶಗಳ ಹೆದ್ದಾರಿಯಂತೆ ಕಾರ್ಯನಿರ್ವಹಿಸುತ್ತದೆ. ಭಾರತದ 140 ಕೋಟಿ ನಾಗರಿಕರು ದೇಶವು ಸಾಧ್ಯವಾದಷ್ಟು ಬೇಗ ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯಾಗಬೇಕೆಂದು ಬಯಸುತ್ತಾರೆ. ಈ ಬಜೆಟ್ 2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗುವ ಭಾರತದ ಪ್ರಯತ್ನಕ್ಕೆ ಬಲವಾದ ಅಡಿಪಾಯವನ್ನು ಒದಗಿಸುತ್ತದೆ ಎಂದಿದ್ದಾರೆ.
ಈ ಬಜೆಟ್ “ಅಪಾರ ಅವಕಾಶಗಳ ಹೆದ್ದಾರಿ”ಯಾಗಿದ್ದು, ಇದು “ವರ್ತಮಾನದ ಕನಸುಗಳನ್ನು ವಾಸ್ತವಕ್ಕೆ ತಿರುಗಿಸುತ್ತದೆ” ಮತ್ತು “ಭಾರತದ ಉಜ್ವಲ ಭವಿಷ್ಯಕ್ಕೆ ಬಲವಾದ ಅಡಿಪಾಯ” ಹಾಕುತ್ತದೆ. 2047ರ ವೇಳೆಗೆ ವಿಕಸಿತ ಭಾರತವನ್ನು ಸಾಧಿಸಲು ಸಹಾಯ ಮಾಡುತ್ತದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: Budget 2026: ಸೆಮಿಕಂಡಕ್ಟರ್ ಮಿಷನ್‌ಗೆ 40,000 ಕೋಟಿ ರೂ.; ಬಜೆಟ್ ಮಂಡನೆ ಬಳಿಕ ನಿರ್ಮಲಾ ಸೀತಾರಾಮನ್ ಸುದ್ದಿಗೋಷ್ಠಿ

ಈ ಬಜೆಟ್ ಅನ್ನು ವಿಶಿಷ್ಟ ಎಂದು ಕರೆದ ಪ್ರಧಾನಿ ಮೋದಿ, “ಇದು ಹಣಕಾಸಿನ ಕೊರತೆಯನ್ನು ಕಡಿಮೆ ಮಾಡುವುದು ಮತ್ತು ಹಣದುಬ್ಬರವನ್ನು ನಿಯಂತ್ರಿಸುವುದರ ಮೇಲೆ ಕೇಂದ್ರೀಕರಿಸುತ್ತದೆ. ಜೊತೆಗೆ ಹೆಚ್ಚಿನ ಕ್ಯಾಪೆಕ್ಸ್ ಮತ್ತು ಹೆಚ್ಚಿನ ಬೆಳವಣಿಗೆಗೆ ಒತ್ತು ನೀಡುತ್ತದೆ. ಈ ಬಜೆಟ್ ಭಾರತದ ಜಾಗತಿಕ ಪಾತ್ರವನ್ನು ಬಲಪಡಿಸುತ್ತದೆ” ಎಂದಿದ್ದಾರೆ.

“ಮಹಿಳಾ ನೇತೃತ್ವದ ಸ್ವ-ಸಹಾಯ ಗುಂಪುಗಳಿಗೆ ಆಧುನಿಕ ಪರಿಸರ ವ್ಯವಸ್ಥೆಯನ್ನು ನಿರ್ಮಿಸಲು ಈ ಬಜೆಟ್ ಆದ್ಯತೆ ನೀಡುತ್ತದೆ. ಪ್ರತಿ ಜಿಲ್ಲೆಯಲ್ಲೂ ಹುಡುಗಿಯರಿಗೆ ಹೊಸ ಹಾಸ್ಟೆಲ್‌ಗಳನ್ನು ನಿರ್ಮಿಸಲು ಪ್ರಯತ್ನಗಳು ನಡೆಯುತ್ತಿವೆ. ಇದು ಹೆಚ್ಚು ಜನರು ಶಿಕ್ಷಣವನ್ನು ಪಡೆಯಲು ಸಹಾಯ ಮಾಡುತ್ತದೆ. ಸರ್ಕಾರ ಯಾವಾಗಲೂ ಕೃಷಿ ಮತ್ತು ಮೀನುಗಾರಿಕೆಗೆ ಆದ್ಯತೆ ನೀಡಿದೆ. ಈ ಬಜೆಟ್ ತೆಂಗಿನಕಾಯಿ, ಗೋಡಂಬಿ, ಕೋಕೋ ಮತ್ತು ಶ್ರೀಗಂಧದ ಉತ್ಪಾದನೆಯಲ್ಲಿ ತೊಡಗಿರುವ ರೈತರನ್ನು ಬೆಂಬಲಿಸಲು ಪ್ರಮುಖ ಕ್ರಮಗಳನ್ನು ಪರಿಚಯಿಸುತ್ತದೆ” ಎಂದು ಅವರು ಹೇಳಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬಜೆಟ್​​ ಬಗ್ಗೆ ನನಗೆ ಅರ್ಥವಾಗ್ತಿಲ್ಲ, ಆದ್ರೂ ಕೇಳೋಕೆ ಚೆನ್ನಾಗಿದೆ: ಸೋಶಿಯಲ್​ ಮೀಡಿಯಾದಲ್ಲಿ ಮೀಮ್ಸ್​​​ಗಳ ಹವಾ – Kannada News | Middle Class Budget 2026 Memes: Viral Humor, Tax Hopes and Economic Term Jokes

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ಮಂಡಿಸುತ್ತಿದ್ದಂತೆ, ಇತ್ತ ಸೋಶಿಯಲ್ ಮೀಡಿಯಾದಲ್ಲಿ ಮೀಮ್‌ಗಳ (Memes) ಮಹಾಪೂರವೇ ಹರಿದುಬಂದಿದೆ. ಪ್ರತಿ ವರ್ಷದಂತೆ ಈ ಬಾರಿಯೂ ನೆಟ್ಟಿಗರು ಹಾಸ್ಯ ಪ್ರಜ್ಞೆಯನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಕ್ತಪಡಿಸಿದ್ದಾರೆ. “ಹೊಸ ತೆರಿಗೆ ಪದ್ಧತಿಯಲ್ಲಿ ವಿನಾಯಿತಿ ಸಿಗುತ್ತೆ ಅಂತ ಕಾಯ್ತಿರೋ ಮಧ್ಯಮ ವರ್ಗದ ಜನ” ಎಂಬ ಶೀರ್ಷಿಕೆಯಡಿ, ಹಳೆಯ ಸಿನಿಮಾದ ಪೋಸ್ಟ್​​ಗಳನ್ನು ಹಂಚಿಕೊಳ್ಳುತ್ತಿದ್ದಾರೆ . ಸರ್ಕಾರ ನಮಗೆ ಏನು ಕೊಡುತ್ತೆ ಅನ್ನೋದಕ್ಕಿಂತ, ನಮ್ಮಿಂದ ಏನು ತಗೊಳ್ಳಲ್ಲ ಅನ್ನೋದೇ ದೊಡ್ಡ ಬಜೆಟ್” ಎಂಬ ಸಾಲುಗಳು ಸಿಕ್ಕಾಪಟ್ಟೆ ಶೇರ್ ಆಗುತ್ತಿವೆ.

ಬಜೆಟ್ ಭಾಷಣದ ವೇಳೆ ಸಚಿವರು ಬಳಸುವ ‘Fiscal Deficit’, ‘Capex’, ‘GDP Growth’ ಅಂತಹ ಪದಗಳನ್ನು ಕೇಳಿ ಸಾಮಾನ್ಯ ಜನರು ಗಾಬರಿಯಿಂದ ನೋಡುತ್ತಿರುವ ‘ರಿಯಾಕ್ಷನ್ ವಿಡಿಯೋ’ಗಳು ನಗು ತರಿಸುತ್ತಿದೆ. “ನನಗೆ ಅರ್ಥವಾಗ್ತಿಲ್ಲ, ಆದ್ರೂ ಕೇಳೋಕೆ ಚೆನ್ನಾಗಿದೆ” ಅನ್ನೋ ರೀತಿಯ ಬಾಲಿವುಡ್ ಮತ್ತು ಸ್ಯಾಂಡಲ್‌ವುಡ್ ಕಾಮಿಡಿ ದೃಶ್ಯಗಳನ್ನು ಜನ ಬಳಸುತ್ತಿದ್ದಾರೆ. ಇದರ ಜತೆಗೆ ಕಳೆದ ಬಜೆಟ್‌ಗಳಲ್ಲಿ ಮೈತ್ರಿ ಪಕ್ಷಗಳ ರಾಜ್ಯಗಳಿಗೆ ಸಿಕ್ಕ ಪ್ರಾಮುಖ್ಯತೆಯನ್ನು ನೆನಪಿಸಿಕೊಂಡು, ಈ ಬಾರಿಯೂ “ನಮಗೆ ಏನು ಸಿಗುತ್ತೆ?” ಅಂತ ಕಾಯುತ್ತಿರುವ ಪ್ರಾದೇಶಿಕ ನಾಯಕರ ಮೀಮ್‌ಗಳು ಸದ್ದು ಮಾಡುತ್ತಿವೆ.

ಜೆಟ್‌ಗೆ ಮುನ್ನ ನಡೆದ ಹಲ್ವಾ ಸೆರೆಮನಿಯನ್ನು ಇಟ್ಟುಕೊಂಡು, “ಹಲ್ವಾ ತಿನ್ನೋರು ಅವರು, ನಮಗೆ ಹಲ್ವಾ ಕೊಡೋರು ಅವರು” (ನಮಗೆ ಮೋಸ ಮಾಡ್ತಾರೆ ಅನ್ನೋ ಅರ್ಥದಲ್ಲಿ) ಎಂಬ ಕಾಲೆಳೆಯುವ ಪೋಸ್ಟ್‌ಗಳು ಹರಿದಾಡುತ್ತಿವೆ.ಜೆಟ್ ಮುಗಿದ ತಕ್ಷಣ ಎಲ್ಲರೂ ಗೂಗಲ್‌ನಲ್ಲಿ “ಯಾವ ವಸ್ತುಗಳು ಅಗ್ಗವಾಗಿವೆ?” (What is cheaper?) ಅಂತ ಹುಡುಕುವ ವಿಡಿಯೋಗಳು ಮತ್ತು “ಸಿಗರೇಟ್ ಬೆಲೆ ಏರಿಕೆ” ಬಗ್ಗೆ ಬರುವ ತಮಾಷೆಯ ಪೋಸ್ಟ್‌ಗಳು ಟ್ರೆಂಡ್ ಆಗುತ್ತಿವೆ. ಬಜೆಟ್‌ನಲ್ಲಿ ಮಧ್ಯಮ ವರ್ಗದವರಿಗೆ ಭಾರಿ ವಿನಾಯಿತಿ ಸಿಗುತ್ತೆ ಎಂದು ಕಾದು ಕುಳಿತವರಿಗೆ ‘ಏನೂ ಸಿಗಲಿಲ್ಲ’ ಎಂಬ ಅರ್ಥದಲ್ಲಿ ಈ ಹಳೆಯ ಚಿತ್ರದ ದೃಶ್ಯ ಬಳಸಲಾಗುತ್ತಿದೆ.”ನನ್ನ ಅಕೌಂಟ್‌ನಲ್ಲಿ 470 ರೂ. ಇದೆ, ಆದ್ರೂ ನಾನು ಬಜೆಟ್ ನೋಡ್ತಿದ್ದೇನೆ” ಎಂಬ ಮೀಮ್ ಮಧ್ಯಮ ವರ್ಗದವರ ಪರಿಸ್ಥಿತಿಯನ್ನು ಹಾಸ್ಯಮಯವಾಗಿ ಬಿಂಬಿಸುತ್ತಿದೆ.

ಇದನ್ನೂ ಓದಿ: ಸೆಮಿಕಂಡಕ್ಟರ್ ಮಿಷನ್‌ಗೆ 40,000 ಕೋಟಿ ರೂ.; ಬಜೆಟ್ ಮಂಡನೆ ಬಳಿಕ ನಿರ್ಮಲಾ ಸೀತಾರಾಮನ್ ಸುದ್ದಿಗೋಷ್ಠಿ

ಸರ್ಕಾರವು ಫ್ಯೂಚರ್ಸ್ ಮತ್ತು ಆಪ್ಷನ್ಸ್ (F&O) ಮೇಲಿನ ಸೆಕ್ಯೂರಿಟೀಸ್ ಟ್ರಾನ್ಸಾಕ್ಷನ್ ಟ್ಯಾಕ್ಸ್ (STT) ಅನ್ನು ಹೆಚ್ಚಿಸಿರುವುದರಿಂದ, ಟ್ರೇಡರ್‌ಗಳು ಎಂಬ ಲಗಾನ್ ಸಿನಿಮಾ ಶೈಲಿಯ ಮೀಮ್‌ಗಳನ್ನು ಹಂಚಿಕೊಳ್ಳುತ್ತಿದ್ದಾರೆ. ರ್ಷಪೂರ್ತಿ ಹಣಕಾಸಿನ ಬಗ್ಗೆ ಅರಿವಿಲ್ಲದವರು ಬಜೆಟ್ ದಿನ ಮಾತ್ರ “ದೇಶದ ಜಿಡಿಪಿ ಹಾಗಿದೆ, ಫಿಸ್ಕಲ್ ಡೆಫಿಸಿಟ್ ಹೀಗಿದೆ” ಎಂದು ವಿಶ್ಲೇಷಣೆ ಮಾಡುವುದನ್ನು ಲೇವಡಿ ಮಾಡುವ ಮೀಮ್‌ಗಳು ವೈರಲ್ ಆಗಿವೆ. “ಬಜೆಟ್ ದಿನದಂದು ಅರ್ಥಶಾಸ್ತ್ರಜ್ಞರ ಸಂಖ್ಯೆಯಲ್ಲಿ ಭಾರಿ ಏರಿಕೆ” ಎಂಬ ಶೀರ್ಷಿಕೆಯಡಿ ಗಣಿತದ ಗ್ರಾಫ್‌ಗಳನ್ನು ಬಳಸಲಾಗುತ್ತಿದೆ.

ಬಜೆಟ್​​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬಜೆಟ್ 2026 ಪ್ರಕಟಣೆ; ಬಾಂಗ್ಲಾದೇಶದಿಂದ ಹಿಡಿದು ಮಾರಿಷಸ್​ವರೆಗೆ ವಿವಿಧ ದೇಶಗಳಿಗೆ ಭಾರತ ಮಾಡುವ ಧನಸಹಾಯವೆಷ್ಟು? – Kannada News | Budget 2026 27 estimation of Rs 8,792 crore of grants and loan to various countries and international bodies

ನವದೆಹಲಿ, ಫೆಬ್ರುವರಿ 1: ಭಾರತ ತನ್ನ ನೆರೆ ರಾಷ್ಟ್ರಗಳು ಸೇರಿದಂತೆ ವಿವಿಧ ದೇಶಗಳಿಗೆ ಬೇರೆ ಬೇರೆ ಕಾರಣಕ್ಕೆ ಸಾಲ ಹಾಗೂ ದೇಣಿಗೆಗಳನ್ನು ನೀಡುತ್ತದೆ. ಈ ಬಾರಿಯ ಬಜೆಟ್​ನಲ್ಲಿ (Union Budget 2026) ಮಾಡಲಾಗಿರುವ ಅಂದಾಜು ಪ್ರಕಾರ ಭಾರತದಿಂದ 2026-27ರ ವರ್ಷದಲ್ಲಿ 8,792.32 ಕೋಟಿ ರೂ ಹಣದ ನೆರವನ್ನು ಕೊಡುವ ಯೋಜನೆ ಇದೆ. ಇದರಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಅಡಿಯಲ್ಲೇ 6,997 ಕೋಟಿ ರೂ ಅನುದಾನಗಳು ವಿವಿಧ ದೇಶಗಳಿಗೆ ಸಂದಾಯವಾಗಲಿವೆ.

ವಿದೇಶಾಂಗ ವ್ಯವಹಾರಗಳ ಸಚಿವಾಲಯದಿಂದ ಮುಂದಿನ ವರ್ಷ ನೀಡಲಾಗುವ 6,997.56 ಕೋಟಿ ರೂ ಹಣದ ನೆರವಿನಲ್ಲಿ 519.92 ಕೋಟಿ ರೂ ಸಾಲ ಇದೆ. ಅಫ್ಘಾನಿಸ್ತಾನದಿಂದ ಹಿಡಿದು ಮಯನ್ಮಾರ್​ವರೆಗೆ ಹಲವು ದೇಶಗಳಿಗೆ ಭಾರತ ದೇಣಿಗೆ ನೀಡುತ್ತಿದೆ. ಭೂತಾನ್ ದೇಶಕ್ಕೆ ಅತಿಹೆಚ್ಚಿನ ಸಹಾಯವನ್ನು ಭಾರತ ಮಾಡುತ್ತಾ ಬಂದಿದೆ. ಈ ಬಾರಿಯೂ ಇದು ಮುಂದುವರಿದಿದೆ.

6,997 ಕೋಟಿ ರೂ ಪೈಕಿ 2,288 ಕೋಟಿ ರೂ ಅನ್ನು ಭೂತಾನ್​ಗೆ ನೀಡಲಾಗುತ್ತಿದೆ. ನೇಪಾಳ ಮತ್ತು ಮಾಲ್ಡೀವ್ಸ್ ದೇಶಗಳಿಗೂ ಅಧಿಕ ನೆರವನ್ನು ಭಾರತ ಬಿಡುಗಡೆ ಮಾಡುತ್ತಿದೆ. ಇದಲ್ಲದೆ, ಅಂತಾರಾಷ್ಟ್ರೀಯ ಸಾಂಸ್ಕೃತಿ ಮತ್ತು ಪಾರಂಪರಿಕ ಯೋಜನೆ, ಅಂತಾರಾಷ್ಟ್ರೀಯ ತರಬೇತಿ ಕಾರ್ಯಕ್ರಮಗಳಿಗೆ ಭಾರತ ಸುಮಾರು 1,300 ಕೋಟಿ ರೂ ನೀಡುತ್ತದೆ.

ಇದನ್ನೂ ಓದಿ: ಷೇರುಪೇಟೆ ಮೇಲೆ ಪರಿಣಾಮ ಬೀರಬಲ್ಲ ಪ್ರಮುಖ ಬಜೆಟ್ ಘೋಷಣೆಗಳು

ಹಣಕಾಸು ಸಚಿವಾಲಯದಿಂದ ನೀಡಲಾಗುವ ಅಂತಾರಾಷ್ಟ್ರೀಯ ನೆರವು ಸುಮಾರು 1,794.76 ಕೋಟಿ ರೂ. ಇದರಲ್ಲಿ ಇಂಡಿಯನ್ ಡೆವಲಪ್ಮೆಂಟ್ ಅಂಡ್ ಎಕನಾಮಿಕ್ ಅಸಿಸ್ಟೆನ್ಸ್ ಸ್ಕೀಮ್ ಅಡಿಯಲ್ಲಿ ನೀಡಲಾಗುವ ಹಣವೇ 1,675.18 ಕೋಟಿ ರೂ ಇದೆ.

2026-27ರಲ್ಲಿ ಹಣಕಾಸು ಸಚಿವಾಲಯದಿಂದ ಬಿಡುಗಡೆಯಾಗಲಿರುವ ಬಾಹ್ಯ ನೆರವು

  • ಅಫ್ಗಾನಿಸ್ತಾನ: 150 ಕೋಟಿ ರೂ
  • ಬಾಂಗ್ಲಾದೇಶ: 60 ಕೋಟಿ ರೂ
  • ಭೂತಾನ್: 2,288.56 ಕೋಟಿ ರೂ
  • ನೇಪಾಳ: 800 ಕೋಟಿ ರೂ
  • ಶ್ರೀಲಂಕಾ: 400 ಕೋಟಿ ರೂ
  • ಮಾಲ್ಡೀವ್ಸ್: 550 ಕೋಟಿ ರೂ
  • ಮಂಗೋಲಿಯಾ: 25 ಕೋಟಿ ರೂ
  • ಮಯನ್ಮಾರ್: 300 ಕೋಟಿ ರೂ
  • ಸೇಶೆಲೆಸ್: 19 ಕೋಟಿ ರೂ
  • ಮಾರಿಷಸ್: 550 ಕೋಟಿ ರೂ
  • ಆಫ್ರಿಕನ್ ದೇಶಗಳು: 225 ಕೋಟಿ ರೂ
  • ಯೂರೇಷನ್ ದೇಶಗಳು: 38 ಕೋಟಿ ರೂ
  • ಲ್ಯಾಟಿನ್ ಅಮೆರಿಕನ್ ದೇಶಗಳು: 120 ಕೋಟಿ ರೂ
  • ಇತರ ಅಭಿವೃದ್ಧಿಶೀಲ ದೇಶಗಳು: 80 ಕೋಟಿ ರೂ
  • ಕಲ್ಚರಲ್ ಅಂಡ್ ಹೆರಿಟೇಜ್ ಪ್ರಾಜೆಕ್ಟ್ ನೆರವು: 20 ಕೋಟಿ ರೂ
  • ವಿಪತ್ತು ಪರಿಹಾರಕ್ಕೆ: 80 ಕೋಟಿ ರೂ
  • ಇಂಟರ್ನ್ಯಾಷನಲ್ ಟ್ರೈನಿಂಗ್​ಗೆ ನೆರವು: 1,292 ಕೋಟಿ ರೂ

ಇದನ್ನೂ ಓದಿ: ರಾಜ್ಯಗಳಿಗೆ ಶೇ. 41 ತೆರಿಗೆ ಹಂಚಿಕೆ ಸೂತ್ರ; 16ನೇ ಹಣಕಾಸು ಆಯೋಗದ ಶಿಫಾರಸು ಒಪ್ಪಿದ ಕೇಂದ್ರ

ಈ ಮೇಲಿನ ಪಟ್ಟಿಯಿಂದ ಛಾಬಹಾರ್ ಬಂದರು ಅಭಿವೃದ್ಧಿಗೆ ನೀಡಬೇಕಿದ್ದ 400 ಕೋಟಿ ರೂ ನೆರವನ್ನು ಸದ್ಯ ಹಿಂಪಡೆಯಲಾಗಿದೆ. ಇರಾನ್ ಯುದ್ಧದ ಪರಿಸ್ಥಿತಿಯಲ್ಲಿ ಇರುವುದರಿಂದ ಈ ನಿರ್ಧಾರ ತೆಗೆದುಕೊಂಡಿರಬಹುದು. ಇನ್ನು, ಹಣಕಾಸು ಸಚಿವಾಲಯದಿಂದ 1,794.76 ಕೋಟಿ ರೂ ನೆರವು ನೀಡುವ ಅಂದಾಜು ಮಾಡಲಾಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ತೆಲುಗು ಚಿತ್ರರಂಗದ ಗಣ್ಯರ ಭೇಟಿಯಾದ ಆರ್​​​ಎಸ್​​ಎಸ್ ಮುಖ್ಯಸ್ಥ ಮೋಹನ್ ಭಾಗವತ್: ಕಾರಣ? – Kannada News | RSS Chief Mohan Bhagavat met Tollywood celebrities in Hyderabad

ಸಿನಿಮಾ (Cinema) ಹಾಗೂ ರಾಜಕಾರಣ ಎರಡಕ್ಕೂ ಬಹಳ ಹತ್ತಿರದ ಸಂಬಂಧ. ಅದರಲ್ಲೂ ರಾಜಕಾರಣಿಗಳು ಪಕ್ಷದ ಅಥವಾ ವೈಯಕ್ತಿಕ ಲಾಭಕ್ಕಾಗಿ ದಶಕಗಳಿಂದಲೂ ಸಿನಿಮಾಗಳನ್ನು ಬಳಸಿಕೊಂಡೇ ಬರುತ್ತಿದ್ದಾರೆ. ಸಾಮಾನ್ಯರ ಮೇಲೆ ಅಪಾರ ಪ್ರಭಾವ ಬೀರಬಲ್ಲ ಸಿನಿಮಾದ ಶಕ್ತಿಯನ್ನು ಅರಿತಿರುವ ರಾಜಕಾರಣಿಗಳು ಸಿನಿಮಾದವರೊಟ್ಟಿಗೆ ಉತ್ತಮ ಬಾಂಧವ್ಯವನ್ನೇ ಇರಿಸಿಕೊಂಡಿದ್ದಾರೆ. ರಾಜಕೀಯ ಪಕ್ಷ ಅಲ್ಲದೇ ಇದ್ದರೂ ಸಹ ಆರ್​​ಎಸ್​​ಎಸ್ ದೇಶದ ರಾಜಕೀಯದ ಮೇಲೆ ಪ್ರತ್ಯಕ್ಷ, ಪರೋಕ್ಷ ಪ್ರಭಾವ ಬೀರುತ್ತಲೇ ಬರುತ್ತಿದೆ. ಇದೀಗ ಸಂಘದ ರಾಷ್ಟ್ರ ಪ್ರಮುಖ್ ಆಗಿರುವ ಮೋಹನ್ ಭಾಗವತ್ ಅವರು ತೆಲುಗು ಚಿತ್ರರಂಗದ ಸ್ಟಾರ್ ನಟರು ಮತ್ತು ಕೆಲ ಪ್ರಮುಖ ನಿರ್ಮಾಪಕರನ್ನು ಭೇಟಿ ಆಗಿರುವುದು ಕುತೂಹಲ ಮೂಡಿಸಿದೆ.

ಮೋಹನ್ ಭಾಗವತ್ ಅವರು ಎರಡು ದಿನಗಳ ಹೈದರಾಬಾದ್ ಪ್ರವಾಸದಲ್ಲಿದ್ದು ಸುಮಾರು 150 ಮಂದಿ ಮಾಜಿ ಮತ್ತು ಹಾಲಿ ಐಎಎಸ್, ಐಪಿಎಸ್ ಅಧಿಕಾರಿಗಳು ಹಾಗೂ ನ್ಯಾಯಾಧೀಶರನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಈ ಕಾರ್ಯಕ್ರಮ ಹೈದರಾಬಾದ್​​ನ ಜಲ ವಿಹಾರ್​​ನಲ್ಲಿ ಆಯೋಜನೆ ಆಗಿತ್ತು. ಕಾರ್ಯಕ್ರಮದ ಬಳಿಕ ಸಂಜೆ ವೇಳೆಗೆ ತೆಲುಗು ಚಿತ್ರರಂಗದ ಸ್ಟಾರ್ ನಟ ವಿಕ್ಟರಿ ವೆಂಕಟೇಶ್ ಅವರ ನಿವಾಸದಲ್ಲಿ ಆಯೋಜಿಸಲಾಗಿದ್ದ ಸಭೆಯಲ್ಲಿ ಭಾಗವತ್ ಅವರು ಹಲವಾರು ಮಂದಿ ತೆಲುಗು ನಟ-ನಟಿಯರು ಮತ್ತು ಸಿನಿಮಾ ನಿರ್ಮಾಪಕರನ್ನು ಭೇಟಿ ಆಗಿ ಮಾತುಕತೆ ನಡೆಸಿದ್ದಾರೆ.

ವೆಂಕಟೇಶ್ ಅವರ ನಿವಾಸದಲ್ಲಿ ನಡೆದ ಸಭೆಯಲ್ಲಿ ತೆಲುಗು ಸಿನಿಮಾ ರಂಗಕ್ಕೆ ಸಂಬಂಧಿಸಿದ ಸುಮಾರು 140 ಮಂದಿ ಭಾಗಿ ಆಗಿದ್ದರು ಎನ್ನಲಾಗುತ್ತಿದೆ. ಈ ಕಾರ್ಯಕ್ರಮದ ಆಯೋಜನೆ ಮಾಡಿದ್ದು ಎಸ್​​ಎಸ್ ರಾಜಮೌಳಿ ಅವರ ತಂದೆ, ರಾಜ್ಯಸಭಾ ಸದಸ್ಯರೂ ಆಗಿರುವ ಕತೆಗಾರ ವಿಜಯೇಂದ್ರ ಪ್ರಸಾದ್ ಎನ್ನಲಾಗಿದೆ.

ಇದನ್ನೂ ಓದಿ:ಒಟಿಟಿಗೆ ಬಂತು ಆಶಿಕಾ, ದುಷ್ಯಂತ್, ಸಿಂಪಲ್ ಸುನಿ ಸಿನಿಮಾ ‘ಗತವೈಭವ’

ಮೋಹನ್ ಭಾಗವತ್ ಅವರ ಕಾರ್ಯಕ್ರಮದಲ್ಲಿ ನಟರಾದ ವೆಂಕಟೇಶ್, ಅಕ್ಕಿನೇನಿ ನಾಗಾರ್ಜು, ತೇಜ್ ಸಜ್ಜಾ, ನಟ ನಾನಿ, ವರುಣ್ ತೇಜ್, ರಾಣಾ ದಗ್ಗುಬಾಟಿ, ರಾಮ್ ಪೋತಿನೇನಿ ಇನ್ನೂ ಹಲವರು ಭಾಗಿ ಆಗಿದ್ದರು. ಮೈತ್ರಿ ಮೂವಿ ಮೇಕರ್ಸ್​​ನ ನಿರ್ಮಾಪಕರಾದ ಮೈತ್ರಿ ರವಿ, ಖ್ಯಾತ ನಿರ್ಮಾಪಕ ಸುರೇಶ್ ಬಾಬು ಇನ್ನೂ ಹಲವರು ಭಾಗಿ ಆಗಿದ್ದರು ಎನ್ನಲಾಗುತ್ತಿದೆ.

ವಿಜಯೇಂದ್ರ ಪ್ರಸಾದ್ ಅವರು ಈ ಹಿಂದೆ ತಾವು ಆರ್​​ಎಸ್​​ಎಸ್ ಬಗ್ಗೆ ಸಿನಿಮಾ ಮಾಡುವ ಆಶಯವನ್ನು ವ್ಯಕ್ತಪಡಿಸಿದ್ದರು. ಅದರ ಬೆನ್ನಲ್ಲೇ ಇದೀಗ ತೆಲುಗು ಚಿತ್ರರಂಗದ ಗಣ್ಯರು ಮೋಹನ್ ಭಾಗವತ್ ಅವರನ್ನು ಭೇಟಿ ಆಗಿರುವುದು ಕುತೂಹಲ ಕೆರಳಿಸಿದೆ. ಆದರೆ ಸಭೆಯಲ್ಲಿ ಚರ್ಚೆ ಆದ ವಿಷಯಗಳ ಮಾಹಿತಿ ಬಹಿರಂಗವಾಗಿಲ್ಲ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ವಿರುದ್ಧ ದಿಕ್ಕಿನಲ್ಲಿ ಸಂಚರಿಸುವ ಕೇತುವಿನಿಂದ ಯಾರಿಗೆ ಯಾವ ಫಲ? – Kannada News | Ketu in Purva Phalguni 2026: Zodiac Predictions, Auspicious and Inauspicious Results

2026ರ ಆರಂಭದಲ್ಲಿ ಕೇತುವು ಕನ್ಯಾ ರಾಶಿಯಲ್ಲಿರುತ್ತಾನೆ. ಆದರೆ ಕೇತುವಿನ ಹಿಮ್ಮುಖ ಚಲನೆಯ ಆಧಾರದ ಮೇಲೆ, ಅವನು ಪೂರ್ವಾಫಲ್ಗುಣಿ ನಕ್ಷತ್ರಕ್ಕೆ ಸಿಂಹ ರಾಶಿ ಪ್ರವೇಶಿಸಿದಾಗ ಉಂಟಾಗುವ ಶುಭಾಶುಭ ಫಲಗಳ ವಿವರ ಇಲ್ಲಿದೆ. ಕೇತುವು ಶುಕ್ರನ ನಕ್ಷತ್ರವಾದ ಪೂರ್ವಾಫಲ್ಗುಣಿಯಲ್ಲಿ ಸಂಚರಿಸುವಾಗ ಭೋಗ ಮತ್ತು ವೈರಾಗ್ಯಗಳ ನಡುವೆ ಸಂಘರ್ಷ ಉಂಟಾಗುತ್ತದೆ.

​ಇದರಿಂದ ವಿವಿಧ ರಾಶಿಗಳ ಮೇಲಾಗುವ ಪ್ರಭಾವ ಹೀಗಿದೆ.

​ಶುಭ ಫಲ ಪಡೆಯುವ ರಾಶಿಗಳು

​ಮೇಷ ರಾಶಿ:

ಪಂಚಮ ಭಾವದಲ್ಲಿ ಕೇತು ಬರುವುದರಿಂದ ಸೃಜನಾತ್ಮಕ ಶಕ್ತಿ ಹೆಚ್ಚಲಿದೆ. ಹಳೆಯ ಹೂಡಿಕೆಗಳಿಂದ ಲಾಭವಾಗಲಿದೆ. ಆಧ್ಯಾತ್ಮಿಕ ಸಾಧಕರಿಗೆ ಇದು ಸುವರ್ಣ ಕಾಲ.

​ತುಲಾ ರಾಶಿ:

ಹನ್ನೊಂದನೇ ಮನೆಯಲ್ಲಿ ಕೇತು ಇರುವುದರಿಂದ ಅನಿರೀಕ್ಷಿತ ಧನಲಾಭವಾಗಲಿದೆ. ಈ ಹಿಂದೆ ನಿಂತುಹೋದ ಕೆಲಸಗಳು ಮರಳಿ ಆರಂಭವಾಗಲಿವೆ. ಪ್ರಭಾವಿ ವ್ಯಕ್ತಿಗಳ ಪರಿಚಯವಾಗಲಿದೆ.

​ಧನು ರಾಶಿ:

ಭಾಗ್ಯ ಸ್ಥಾನದಲ್ಲಿ ಕೇತು ಸಂಚರಿಸುವುದರಿಂದ ಧಾರ್ಮಿಕ ಪ್ರವಾಸಗಳು ಯಶಸ್ವಿಯಾಗಲಿವೆ. ತಂದೆಯ ಆಸ್ತಿಯಲ್ಲಿ ಪಾಲ ಸಿಗುವ ಸಾಧ್ಯತೆ ಇದೆ. ಸಮಾಜದಲ್ಲಿ ಗೌರವ ವೃದ್ಧಿಸುತ್ತದೆ.

​ಮಿಶ್ರ ಫಲ ರಾಶಿಗಳು

​ಸಿಂಹ ರಾಶಿ:

ನಿಮ್ಮದೇ ರಾಶಿಯ ನಕ್ಷತ್ರದಲ್ಲಿ ಕೇತು ಇರುವುದರಿಂದ ಮಾನಸಿಕ ಗೊಂದಲ ಹೆಚ್ಚಲಿದೆ. ವೈಯಕ್ತಿಕ ನಿರ್ಧಾರಗಳಲ್ಲಿ ತಪ್ಪುಗಳಾಗಬಹುದು. ಆರೋಗ್ಯ, ವಿಶೇಷವಾಗಿ ಹೃದಯ ಅಥವಾ ಬೆನ್ನಿನ ಸಮಸ್ಯೆ ಬಗ್ಗೆ ಎಚ್ಚರವಿರಲಿ.

​ಕುಂಭ ರಾಶಿ:

ಸಪ್ತಮ ಭಾವದಲ್ಲಿ ಕೇತು ಸಂಚರಿಸುವುದರಿಂದ ದಾಂಪತ್ಯ ಜೀವನದಲ್ಲಿ ವಿರಸ ಮೂಡಬಹುದು. ಪಾಲುದಾರಿಕೆ ವ್ಯವಹಾರದಲ್ಲಿ ನಂಬಿಕೆ ದ್ರೋಹವಾಗುವ ಸಂಭವವಿದೆ. ಹೊಸ ಒಪ್ಪಂದಗಳಿಗೆ ಇದು ಸಕಾಲವಲ್ಲ.

​ವೃಶ್ಚಿಕ ರಾಶಿ:

ಹತ್ತನೇ ಮನೆಯಲ್ಲಿ ಕೇತು ಇರುವುದರಿಂದ ಉದ್ಯೋಗದಲ್ಲಿ ಅಸ್ಥಿರತೆ ಕಾಡಬಹುದು. ಮೇಲಧಿಕಾರಿಗಳೊಂದಿಗೆ ವಾದ ಮಾಡಬೇಡಿ. ವೃತ್ತಿ ಬದಲಾವಣೆಯ ಆಲೋಚನೆ ಸದ್ಯಕ್ಕೆ ಬೇಡ.

​ಪೂರ್ವಾಫಲ್ಗುಣಿ ನಕ್ಷತ್ರವು ಶುಕ್ರನ ಅಧಿಪತ್ಯಕ್ಕೆ ಒಳಪಟ್ಟಿರುವುದರಿಂದ, ಈ ಅವಧಿಯಲ್ಲಿ ಶುಕ್ರನು ಜಾತಕದಲ್ಲಿ ಪ್ರಬಲನಾಗಿದ್ದರೆ ಅಶುಭ ಫಲಗಳು ಕಡಿಮೆಯಾಗುತ್ತವೆ.

ಶುಕ್ರವಾರ ಲಕ್ಷ್ಮಿ ದೇವಿಗೆ ಕುಂಕುಮಾರ್ಚನೆ, ಗಣಪತಿ ಅಥರ್ವಶೀರ್ಷ ಪಠಣ ಮಾಡುವುದರಿಂದ, ದೂರ್ವಾಪತ್ರ ಸಮರ್ಪಣೆಯಿಂದ ಕೇತುವಿನ ದೋಷ ನಿವಾರಣೆಯಾಗುತ್ತದೆ.

– ಲೋಹಿತ ಹೆಬ್ಬಾರ್

Source link

ಸಿ.ಜೆ.ರಾಯ್​​​ ಆತ್ಮಹತ್ಯೆ: ಮೋದಿ, ನಿರ್ಮಲಾ ಸೀತಾರಾಮನ್​ಗೆ ಮೋಹನ್ ದಾಸ್ ಪೈ ವಿಶೇಷ ಮನವಿ – Kannada News | CJ Roy Suicide Case: mohandas pai Requests PM Modi And nirmala Sitharaman about income Tax Official raid

ಬೆಂಗಳೂರು, (ಫೆಬ್ರವರಿ 01): ಪಿಸ್ತೂಲ್​​​ನಿಂದ ಗುಂಡು ಹಾರಿಸಿಕೊಂಡು ರಿಯಲ್ ಎಸ್ಟೇಟ್ ಉದ್ಯಮಿ ಸಿ.ಜೆ.ರಾಯ್​​​ ಆತ್ಮಹತ್ಯೆ (CJ Roy Suicide Case) ಹಿಂದಿನ ಕಾರಣ ನಿಗೂಢವಾಗಿದೆ. ನಿರಂತರ ಐಡಿ ದಾಳಿಯಿಂದಲೇ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನುವ ಮಾತುಗಳು ಕೇಳಿಬರುತ್ತಿವೆ. ಇನ್ನು ರಾಯ್ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಉದ್ಯಮಿ ಮೋಹನ್ ದಾಸ್ ಪೈ ( mohandas pai )ಪ್ರತಿಕ್ರಿಯಿಸಿದ್ದು, ರಾಯ್​ ಸಾವಿನ ಬಗ್ಗೆ ಮುಕ್ತ ಪಾರದರ್ಶಕವಾಗಿ ತನಿಖೆಗೆ ಮನವಿ ಮಾಡಿದ್ದಾರೆ. ಅಲ್ಲದೇ ತೆರಿಗೆ ಅಧಿಕಾರಿಗಳ ದಾಳಿ ಬಗ್ಗೆಯೂ ಪ್ರಧಾನಿ ನರೇಂದ್ರ ಮೋದಿ ಹಾಗೂ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ಗೆ ಟ್ವೀಟ್ ಮೂಲಕ ವಿಶೇಷ ಮನವಿ ಮಾಡಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಉದ್ಯಮಿ ಮೋಹನ್ ದಾಸ್ ಪೈ, ತೆರಿಗೆ ಭಯೋತ್ಪಾದನೆಯಿಂದ ಕಾಫಿ ಡೇ ಸಂಸ್ಥಾಪಕ ಸಿದ್ಧಾರ್ಥರನ್ನ ಕಳೆದುಕೊಂಡಿದ್ದೇವೆ. ತೆರಿಗೆ ಅಧಿಕಾರಿಗಳಿಂದ ಹಲವಾರು ಜನರು ಭಯಭೀತರಾಗಿದ್ದಾರೆ. ನಾಗರಿಕ ಹಕ್ಕುಗಳ ಮೇಲಿನ ದಾಳಿಯಾಗುತ್ತಿದೆ. ದಯವಿಟ್ಟು ತೆರಿಗೆ ಪಾವತಿದಾರರನ್ನು ಈ ರೀತಿಯ ದಾಳಿಗಳು ಮತ್ತು ನಾಗರಿಕ ಹಕ್ಕುಗಳ ಮೇಲಿನ ದಾಳಿಯಿಂದ ರಕ್ಷಿಸುವಂತೆ ವಿನಂತಿಸಿದ್ದಾರೆ.

ಒಟ್ಟಾರೆಯ ದಾಳಿ ಪ್ರಕ್ರಿಯೆ ತುಂಬಾ ಕ್ರೂರವಾಗಿದೆ. ನಮ್ಮ ವಿತ್ತ ಸಚಿವರು ಇಂತಹ ಅಧಿಕಾರಿಗಳಿಗೆ ಹೆಚ್ಚು ಅಧಿಕಾರ ನೀಡ್ತಿದ್ದಾರೆ. ಆದರೆ ಇದರಿಂದ ನಾಗರಿಕರ ರಕ್ಷಣೆ ಎಲ್ಲಿದೆ? ತಪ್ಪು ದಾಳಿಗೆ ಅಧಿಕಾರಿಗಳಿಗೆ ಶಿಕ್ಷೆಯಾಗಿದೆಯೇ? ಇಲ್ಲ. ಕಳೆದ 3 ವರ್ಷಗಳಲ್ಲಿ ನೇರ ತೆರಿಗೆಗಳ ಮೂಲಕ 72 ಲಕ್ಷ ಕೋಟಿ ರೂ.ಗಳನ್ನು ಸಂಗ್ರಹಿಸಲಾಗಿದೆಯೇ? ಇಂತಹ ದಾಳಿಗಳ ಮೂಲಕ ಎಷ್ಟು ಸಂಗ್ರಹಿಸಲಾಗಿದೆ? ಎಂದು ಪ್ರಶ್ನಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

High Court Recruitment 2026: ಹೈಕೋರ್ಟ್​​ನಲ್ಲಿ 152 ಹುದ್ದೆಗಳಿಗೆ ನೇಮಕಾತಿ; ಕಾನೂನು ಕ್ಷೇತ್ರದಲ್ಲಿ ಸರ್ಕಾರಿ ಉದ್ಯೋಗಕ್ಕೆ ಸುವರ್ಣವಕಾಶ – Kannada News | Delhi High Court JJA Recruitment 2026: 152 Posts! Apply Now for Judicial Assistant Jobs

ದೆಹಲಿ ಹೈಕೋರ್ಟ್ ಜೂನಿಯರ್ ಜ್ಯುಡಿಷಿಯಲ್ ಅಸಿಸ್ಟೆಂಟ್/ರಿಸ್ಟೋರರ್ (JJA) ನೇಮಕಾತಿ ಪರೀಕ್ಷೆ 2026ರ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ನೇಮಕಾತಿ ಪ್ರಕ್ರಿಯೆಯ ಮೂಲಕ ಒಟ್ಟು 152 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಕಾನೂನು ಕ್ಷೇತ್ರದಲ್ಲಿ ಸರ್ಕಾರಿ ಉದ್ಯೋಗದ ಕನಸು ಕಾಣುತ್ತಿರುವ ಅಭ್ಯರ್ಥಿಗಳಿಗೆ ಇದು ಅತ್ಯುತ್ತಮ ಅವಕಾಶವಾಗಿದೆ. ಆನ್‌ಲೈನ್ ನೋಂದಣಿ ಪ್ರಕ್ರಿಯೆ ಫೆಬ್ರವರಿ 4 ರಿಂದ ಪ್ರಾರಂಭವಾಗಲಿದ್ದು, ಫೆಬ್ರವರಿ 23ರ ರಾತ್ರಿ 11 ಗಂಟೆಯವರೆಗೆ ಅರ್ಜಿಗಳನ್ನು ಸಲ್ಲಿಸಬಹುದು. ಈ ನೇಮಕಾತಿ ಗ್ರೂಪ್–ಬಿ ವರ್ಗದಡಿ ನಡೆಯಲಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ 7ನೇ ವೇತನ ಆಯೋಗದ ಪ್ರಕಾರ ಲೆವೆಲ್–6 ಸಂಬಳ ನೀಡಲಾಗುತ್ತದೆ.

ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು. ಜೊತೆಗೆ, ಕಂಪ್ಯೂಟರ್‌ನಲ್ಲಿ ನಿಮಿಷಕ್ಕೆ ಕನಿಷ್ಠ 35 ಪದಗಳ ಇಂಗ್ಲಿಷ್ ಟೈಪಿಂಗ್ ವೇಗ ಹೊಂದಿರುವುದು ಕಡ್ಡಾಯವಾಗಿದೆ. ಜನವರಿ 1, 2026ರ ವೇಳೆಗೆ ಅಭ್ಯರ್ಥಿಗಳ ವಯಸ್ಸು 18 ರಿಂದ 32 ವರ್ಷಗಳೊಳಗಿರಬೇಕು. ನಿಯಮಾನುಸಾರ ಎಸ್‌ಸಿ, ಎಸ್‌ಟಿ, ಒಬಿಸಿ, ಪಿಡಬ್ಲ್ಯೂಬಿಡಿ ಹಾಗೂ ಇತರ ಮೀಸಲು ವರ್ಗಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ. ಕೊನೆಯ ದಿನಾಂಕದೊಳಗೆ ಅಗತ್ಯವಿರುವ ಎಲ್ಲಾ ಶೈಕ್ಷಣಿಕ ಅರ್ಹತೆಗಳನ್ನು ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬೇಕು.

ಆಯ್ಕೆ ಪ್ರಕ್ರಿಯೆ ನಾಲ್ಕು ಹಂತಗಳಲ್ಲಿ ನಡೆಯಲಿದೆ. ಮೊದಲ ಹಂತದಲ್ಲಿ CBT ವಿಧಾನದಲ್ಲಿ ಪ್ರಾಥಮಿಕ ಪರೀಕ್ಷೆ ನಡೆಯುತ್ತದೆ, ಇದರಲ್ಲಿ ಇಂಗ್ಲಿಷ್, ಸಾಮಾನ್ಯ ಅರಿವು ಮತ್ತು ಸಾಮಾನ್ಯ ಬುದ್ಧಿಮತ್ತೆಗೆ ಸಂಬಂಧಿಸಿದ ಪ್ರಶ್ನೆಗಳು ಇರುತ್ತವೆ. ನಂತರ ವಿವರಣಾತ್ಮಕ ಮುಖ್ಯ ಪರೀಕ್ಷೆ ನಡೆಯಲಿದ್ದು, ಇದರಲ್ಲಿ ಪ್ರಬಂಧ ಬರವಣಿಗೆ ಮತ್ತು ವ್ಯಾಕರಣದ ಪ್ರಶ್ನೆಗಳು ಸೇರಿರುತ್ತವೆ. ಮೂರನೇ ಹಂತವಾಗಿ ಇಂಗ್ಲಿಷ್ ಟೈಪಿಂಗ್ ಪರೀಕ್ಷೆ ನಡೆಯುತ್ತದೆ. ಕೊನೆಯ ಹಂತದಲ್ಲಿ ಸಂದರ್ಶನದ ಮೂಲಕ ಅಂತಿಮ ಆಯ್ಕೆ ಮಾಡಲಾಗುತ್ತದೆ. ಪ್ರಾಥಮಿಕ ಪರೀಕ್ಷೆಯಲ್ಲಿ ಋಣಾತ್ಮಕ ಅಂಕಗಳ ವ್ಯವಸ್ಥೆಯೂ ಇರಲಿದೆ. ಮುಖ್ಯ ಪರೀಕ್ಷೆ ಮತ್ತು ಸಂದರ್ಶನದ ಅಂಕಗಳ ಆಧಾರದ ಮೇಲೆ ಅಂತಿಮ ಮೆರಿಟ್ ಪಟ್ಟಿ ಸಿದ್ಧಪಡಿಸಲಾಗುತ್ತದೆ.

ಇದನ್ನೂ ಓದಿ: ಎಕ್ಸಿಮ್ ಬ್ಯಾಂಕ್​ನಲ್ಲಿ 40 ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗೆ ನೇಮಕಾತಿ; ತಿಂಗಳಿಗೆ 65,000ರೂ. ಸ್ಟೈಫಂಡ್

ಅರ್ಜಿ ಶುಲ್ಕದ ಕುರಿತು ಮಾತನಾಡುವುದಾದರೆ, ಸಾಮಾನ್ಯ, ಒಬಿಸಿ ಮತ್ತು ಇಡಬ್ಲ್ಯೂಎಸ್ ವರ್ಗದ ಅಭ್ಯರ್ಥಿಗಳು 1,500 ರೂ. ಪಾವತಿಸಬೇಕಾಗುತ್ತದೆ. ಎಸ್‌ಸಿ, ಎಸ್‌ಟಿ ಮತ್ತು ಪಿಡಬ್ಲ್ಯೂಬಿಡಿ ವರ್ಗದ ಅಭ್ಯರ್ಥಿಗಳಿಗೆ 1,300 ರೂ. ಶುಲ್ಕ ನಿಗದಿಪಡಿಸಲಾಗಿದೆ. ಶುಲ್ಕವನ್ನು ಯುಪಿಐ, ನೆಟ್ ಬ್ಯಾಂಕಿಂಗ್, ಕ್ರೆಡಿಟ್ ಅಥವಾ ಡೆಬಿಟ್ ಕಾರ್ಡ್ ಮೂಲಕ ಆನ್‌ಲೈನ್‌ನಲ್ಲಿ ಪಾವತಿಸಬಹುದು. ಅರ್ಜಿಯಲ್ಲಿನ ದೋಷಗಳನ್ನು ಸರಿಪಡಿಸಲು ಫೆಬ್ರವರಿ 27 ರವರೆಗೆ ತಿದ್ದುಪಡಿ ವಿಂಡೋ ಲಭ್ಯವಿರುತ್ತದೆ, ಇದಕ್ಕೆ ಪ್ರತ್ಯೇಕ ಶುಲ್ಕ ವಿಧಿಸಲಾಗುತ್ತದೆ.

ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ದೆಹಲಿ ಹೈಕೋರ್ಟ್‌ನ ಅಧಿಕೃತ ವೆಬ್‌ಸೈಟ್‌(https://www.delhihighcourt.nic.in)ಗೆ ಭೇಟಿ ನೀಡಿ ನೇಮಕಾತಿ ವಿಭಾಗದಲ್ಲಿ JJA / Restorer Exam 2026 ಲಿಂಕ್ ಅನ್ನು ಆಯ್ಕೆ ಮಾಡಬೇಕು. ಮೊದಲು ನೋಂದಣಿ ಪೂರ್ಣಗೊಳಿಸಿ, ನಂತರ ಅರ್ಜಿ ನಮೂನೆಯನ್ನು ಜಾಗ್ರತೆಯಿಂದ ಭರ್ತಿ ಮಾಡಿ, ಅಗತ್ಯ ದಾಖಲೆಗಳನ್ನು ಅಪ್‌ಲೋಡ್ ಮಾಡಿ ಶುಲ್ಕ ಪಾವತಿಸಿದ ನಂತರ ಫಾರ್ಮ್ ಅನ್ನು ಸಲ್ಲಿಸಬೇಕು.

ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Union Budget 2026-27: ಯಾವ ಇಲಾಖೆಗೆ ಎಷ್ಟು ಅನುದಾನ? ಇಲ್ಲಿದೆ ಡಿಟೇಲ್ಸ್​​ – Kannada News | Union Budget 2026 27: Top Allocations for Transport, Defence Sectors

ನವದೆಹಲಿ, ಫೆ. 01: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​​ 2026-27ನೇ ಸಾಲಿನ ಕೇಂದ್ರ ಬಜೆಟ್​​ ಮಂಡಿಸಿದ್ದಾರೆ. ಅವರು ಮಂಡಿಸಿರುವ 9ನೇ ಆಯವ್ಯಯದ ಗಾತ್ರ 53.47 ಲಕ್ಷ ಕೋಟಿ ರೂಪಾಯಿಗಳಾಗಿದ್ದು, ಸಾರಿಗೆ ಹಾಗೂ ರಕ್ಷಣಾ ಇಲಾಖೆಗೆ ಅತಿಹೆಚ್ಚು ಅನುದಾನ ಹಂಚಿಕೆ ಮಾಡಲಾಗಿದೆ. ಗ್ರಾಮೀಣಾಭಿವೃದ್ಧಿ ಮತ್ತು ಗೃಹ ವ್ಯವಹಾರಗಳ ಇಲಾಖೆಗೂ ಹೆಚ್ಚು ಒತ್ತು ನೀಡಲಾಗಿದೆ. ಚುನಾವಣಾ ರಾಜ್ಯಗಳಿಗೂ ಬಂಪರ್​​ ಗಿಫ್ಟ್​​ ಸಿಕ್ಕಿದ್ದು, ಕೇಂದ್ರ ಬಜೆಟ್​ನಲ್ಲಿ ಪ್ರಮುಖ ಇಲಾಖೆಗಳಿಗೆ ಸಿಕ್ಕಿದ ಅನುದಾನದ ಮಾಹಿತಿ ಇಲ್ಲಿದೆ.

ಪ್ರಮುಖ ಇಲಾಖೆಗಳಿಗೆ ಸಿಕ್ಕಿದ ಅನುದಾನ

  • ಸಾರಿಗೆ ಇಲಾಖೆ- 5,98,520 ಕೋಟಿ ರೂ.
  • ರಕ್ಷಣಾ ಇಲಾಖೆ 5,94,585 ಕೋಟಿ ರೂ.
  • ಗ್ರಾಮೀಣಾಭಿವೃದ್ಧಿ ಇಲಾಖೆ- 2,73,108 ಕೋಟಿ ರೂ.
  • ಗೃಹ ವ್ಯವಹಾರಗಳ ಇಲಾಖೆ- 2,55,234 ಕೋಟಿ ರೂ.
  • ಕೃಷಿ ಇಲಾಖೆ- 1,62,671 ಕೋಟಿ ರೂ.
  • ಶಿಕ್ಷಣ ಇಲಾಖೆ- 1,39,289 ಕೋಟಿ ರೂ.
  • ಆರೋಗ್ಯ ಇಲಾಖೆ- 1,04,599 ಕೋಟಿ ರೂ.
  • ಇಂಧನ ಇಲಾಖೆ- 1,09,029 ಕೋಟಿ ರೂ.
  • ನಗರಾಭಿವೃದ್ಧಿ ಇಲಾಖೆ- 85,522 ಕೋಟಿ ರೂ.
  • ಐಟಿ ಮತ್ತು ಟೆಲಿಕಾಂ- 74,560 ಕೋಟಿ ರೂ.
  • ವಾಣಿಜ್ಯ ಮತ್ತು ಕೈಗಾರಿಕೆ- 70,296 ಕೋಟಿ ರೂ.
  • ಸಮಾಜಕಲ್ಯಾಣ ಇಲಾಖೆ- $62,362 ಕೋಟಿ ರೂ.
  • ವೈಜ್ಞಾನಿಕ ಇಲಾಖೆ- 55,756 ಕೋಟಿ ರೂ.
  • ತೆರಿಗೆ ಆಡಳಿತ- 45,500 ಕೋಟಿ ರೂ.
  • ವಿದೇಶಾಂಗ ವ್ಯವಹಾರ ಇಲಾಖೆ- 22,119 ಕೋಟಿ ರೂ.
  • ಹಣಕಾಸು ಇಲಾಖೆ- 20,649 ಕೋಟಿ ರೂ.
  • ಈಶಾನ್ಯ ರಾಜ್ಯಗಳ ಅಭಿವೃದ್ಧಿ- 6,812 ಕೋಟಿ ರೂ.

ಇದನ್ನೂ ಓದಿ: ಬಜೆಟ್​​ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಸಿಕ್ಕಿದ್ದೇನು? ಇಲ್ಲಿದೆ ಮಾಹಿತಿ

ಹೈಸ್ಪೀಡ್ ರೈಲ್ವೆ ಕಾರಿಡಾರ್‌

ಚೆನ್ನೈ ಬೆಂಗಳೂರು ಸೇರಿದಂತೆ ಪ್ರಮುಖ ನಗರಗಳನ್ನು ಸಂಪರ್ಕಿಸುವ ಏಳು ಹೈಸ್ಪೀಡ್ ರೈಲ್ವೆ ಕಾರಿಡಾರ್‌ಗಳನ್ನು ಕೇಂದ್ರ ಸರ್ಕಾರ ಘೋಷಿಸಿದೆ. ಮುಂಬೈ–ಪುಣೆ, ಪುಣೆ–ಹೈದರಾಬಾದ್, ಹೈದರಾಬಾದ್–ಬೆಂಗಳೂರು, ಹೈದರಾಬಾದ್–ಚೆನ್ನೈ, ಚೆನ್ನೈ–ಬೆಂಗಳೂರು, ದೆಹಲಿ–ವಾರಾಣಸಿ ಹಾಗೂ ವಾರಾಣಸಿ–ಸಿಲಿಗುರಿ ನಡುವೆ ಹೈಸ್ಪೀಡ್ ರೈಲು ಮಾರ್ಗ ನಿರ್ಮಾಣವಾಗಲಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On – 4:35 pm, Sun, 1 February 26

Source link

ಸಂಸಾರ ಹಾಳು ಮಾಡಿದವನ ಸಂಹಾರ: ಕೊಲೆ ಮಾಡಿ ಫೇಸ್ಬುಕ್​​ನಲ್ಲಿ ತಪ್ಪೊಪ್ಪಿಕೊಂಡ ಖದೀಮರು – Kannada News | Kolar Murder: a man Killed in Revenge, Accused Confesses on Facebook, 3 Arrests

ಕೋಲಾರ, ಫೆಬ್ರವರಿ 01: ವ್ಯಕ್ತಿಯೋರ್ವನನ್ನು ಕೊಲೆ (murder) ಮಾಡಿ ಬಳಿಕ ಫೇಸ್‌ಬುಕ್​​ನಲ್ಲಿ ಆರೋಪಿ ತಪ್ಪೊಪ್ಪಿಕೊಂಡ ವಿಚಿತ್ರ ಘಟನೆಯೊಂದು ಕೋಲಾರದಲ್ಲಿ (Kolar) ನಡೆದಿದೆ. ಜನವರಿ 27ರ ರಾತ್ರಿ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಯಲ್ಲೇಶ್​​ ಕೊಲೆಯಾದ ವ್ಯಕ್ತಿ. ಬಿಂದುಕುಮಾರ್ (20) ಕಿರಣ್​ (19) ಮತ್ತು ಅಕ್ಷಯ್​ (20) ಬಂಧಿತರು. ಹಳೆ ಸೇಡು ತೀರಿಸಿಕೊಳ್ಳಲು ಕೊಲೆ ಮಾಡಲಾಗಿದೆ. ಹತ್ಯೆ ಬಳಿಕ ಆರೋಪಿಗಳು ಫೇಸ್‌ಬುಕ್​​ನಲ್ಲಿ ವಿಡಿಯೋ ಮಾಡಿದ್ದರು. ಸದ್ಯ ಕೋಲಾರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಡೆದದ್ದೇನು? 

ಕೋಲಾರ ತಾಲೂಕಿನ ಕೆಂದಟ್ಟಿ ಗ್ರಾಮದ ಬಳಿ ಜನವರಿ 27ರ ರಾತ್ರಿ ನರಸಾಪುರ ಗ್ರಾಮದ ಯಲ್ಲೇಶ್​ ಎಂಬಾತನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ರಾಜಕೀಯ ಮುಖಂಡರ ಜೊತೆಗೆ ಗುರುತಿಸಿಕೊಂಡಿದ್ದ ಯಲ್ಲೇಶ್​, ಕೊಲೆಗೆ ಕಾರಣ ಏನು ಅನ್ನೋದನ್ನು ಹುಡುಕಲು ಹೊರಟ ಪೊಲೀಸರಿಗೆ ಅಲ್ಲೊಂದು ಅಕ್ರಮ ಸಂಬಂಧ ಸೇರಿದಂತೆ ಒಂದು ಕುಟುಂಬದ ಹೆಸರು ಕೇಳಿ ಬಂದಿತ್ತು.

ಇದನ್ನೂ ಓದಿ: ವಿಜಯನಗರ: ತ್ರಿವಳಿ ಕೊಲೆಯ ಕಾರಣ ಬಯಲು, ಲವ್ವಿಡವ್ವಿಯಿಂದ ತಂಗಿ ಗರ್ಭಿಣಿಯಾದ್ದು ತಿಳಿದು ಕುಟುಂಬವನ್ನೇ ಮುಗಿಸಿದ ಅಣ್ಣ!

ಆರಂಭದಲ್ಲಿ ಯಲ್ಲೇಶ್​​ನನ್ನು ನರಸಾಪುರ ಗ್ರಾಮದ ಸಂತೋಷ್ ಎಂಬಾತ ಕೊಲೆ ಮಾಡಿದ್ದಾನೆ ಎನ್ನಲಾಗುತ್ತಿತ್ತು. ಕಾರಣ ಯಲ್ಲೇಶ್, ಸಂತೋಷ್​ನ ಹೆಂಡತಿಯನ್ನು ಕರೆದುಕೊಂಡು ಹೋಗಿ ಆಕೆಯೊಂದಿಗೆ  ಕಳೆದ ಆರೇಳು ವರ್ಷಗಳಿಂದ ಸಂಸಾರ ಮಾಡುತ್ತಿದ್ದ. ಇದರಿಂದ ಕೋಪಗೊಂಡಿದ್ದ ಸಂತೋಷ್, ಯಲ್ಲೇಶ್ ನನ್ನು ಮುಗಿಸುವುದಾಗಿ ಬಹಿರಂಗವಾಗಿಯೇ ಹೇಳಿಕೊಂಡಿದ್ದ, ಹಾಗಾಗಿ ಅವನೇ ಕೊಲೆ ಮಾಡಿದ್ದಾನೆ ಎಂದುಕೊಂಡಿದ್ದರು. ಆದರೆ ಸಂತೋಷ್​ ಕೊಲೆಯಾದ ಮರುದಿನವೇ ಒಡಿಸ್ಸಾದಲ್ಲಿದ್ದುಕೊಂಡು ಫೇಸ್‌ಬುಕ್​ನಲ್ಲಿ ವಿಡಿಯೋ ಮಾಡಿ ನನಗೂ ಕೊಲೆಗೂ ಸಂಬಂಧವಿಲ್ಲ. ಬದಲಾಗಿ ನನ್ನ ಮಗ ಬಿಂದುಕುಮಾರ್​ ಕೊಲೆ ಮಾಡಿರುವ ಅನುಮಾನವಿದೆ ಎಂದಿದ್ದ.

ಯಲ್ಲೇಶ್​​ ನನ್ನ ಸಂಸಾರವನ್ನು ಹಾಳು ಮಾಡಿದ್ದ. ಜೊತೆಗೆ ನನ್ನ ಮಗಳ ಬಗ್ಗೆ ತುಂಬಾ ಕೆಟ್ಟದಾಗಿ ಮಾತನಾಡಿ ಆ ವಿಡಿಯೋವನ್ನ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದ. ಹೀಗಾಗಿ ನನ್ನ ಮಗನೇ ಕೊಲೆ ಮಾಡಿರುವ ಅನುಮಾನವಿದೆ ಎಂದು ಹೇಳಿದ್ದ. ಆದರೆ ಸಂತೋಷ್​ನನ್ನು ಬಿಟ್ಟು ಹೋಗಿದ್ದ ಆತನ ಹೆಂಡತಿ ಮಾತ್ರ ಸಂತೋಷ್​​ನೇ ಕೊಲೆ ಮಾಡಿದ್ದಾನೆ ಎಂದು ಹೇಳಿದ್ದಾರೆ.

ಫೇಸ್‌ಬುಕ್​ ಲೈವ್ ಕೊಲೆ ಮಾಡಿರುವುದಾಗಿ ಒಪ್ಪಿಗೆ

ಇನ್ನು ಇದಾದ ಕೆಲವೇ ನಿಮಿಷಗಳಲ್ಲಿ ಸಂತೋಷ್​​​​ ಮಗ ಬಿಂದುಕುಮಾರ್ ಫೇಸ್‌ಬುಕ್​ ಲೈವ್​​ ಬಂದು ಯಲ್ಲೇಶ್​ನನ್ನು ತಾನೇ ಕೊಲೆ ಮಾಡಿರುವುದಾಗಿ ಹೇಳಿಕೊಂಡಿದ್ದ. ಅಲ್ಲದೆ ಅವನು ತನ್ನ ತಂಗಿಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ. ನನ್ನ ತಾಯಿಯನ್ನು ಪುಸಲಾಯಿಸಿ ತನ್ನ ತಂದೆಯಿಂದ ದೂರ ಮಾಡಿದ್ದ. ಅಲ್ಲದೆ ನನ್ನನ್ನು ಕೊಲೆ ಮಾಡುವ ಪ್ಲ್ಯಾನ್​​ ಮಾಡಿದ್ದ ಅನ್ನೋ ಕಾರಣಕ್ಕೆ ನಾನು ಒಂದು ಪುಟ್ಟ ಗ್ಯಾಂಗ್ ಕಟ್ಟಿಕೊಂಡು ಅವನನ್ನು ಕೊಲೆ ಮಾಡಿರುವುದಾಗಿ ಹೇಳಿದ್ದ. ಅಷ್ಟೇ ಅಲ್ಲದೆ ನಾವು ಶೀಘ್ರದಲ್ಲೇ ನ್ಯಾಯಾಲಯಕ್ಕೆ ಶರಣಾಗುತ್ತೇವೆಂದು ಹೇಳಿ ನಂತರ ಮೊಬೈಲ್ ಸ್ವಿಚ್ ಆಫ್​ ಮಾಡಿಕೊಂಡಿದ್ದರು.

ಇನ್ನು ಕೊಲೆ ಮಾಡಿದ್ದ ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದ ಪೊಲೀಸರಿಗೂ ಕೊಲೆ ಆರೋಪಿಗಳ ಸುಳಿವು ಸಿಕ್ಕಿರಲಿಲ್ಲ. ಕೊಲೆ ಮಾಡಿ ಪೊಲೀಸರ ದಿಕ್ಕು ತಪ್ಪಿಸುತ್ತಿದ್ದವರ ಬಂಧನಕ್ಕಾಗಿ ಬಲೆಬೀಸಿದ್ದರು. ಆರೋಪಿಗಳು ಬೆಂಗಳೂರು ಬಳಿ ತಲೆಮರೆಸಿಕೊಂಡಿರುವುದು ತಿಳಿದು ಇದೀಗ ಆರೋಪಿಗಳನ್ನು ಬಂಧಿಸಿದ್ದಾರೆ. ಸಂತೋಷ್​ನ ಮಗ ಬಿಂದುಕುಮಾರ್​ ಹಾಗೂ ಆತನ ಸ್ನೇಹಿತರಾದ ಕಿರಣ್​, ಅಕ್ಷಯ್ ಎಂಬುವರನ್ನು ಬಂಧಿಸಿರುವ ಕೋಲಾರ ಗ್ರಾಮಾಂತರ ಠಾಣಾ ಪೊಲೀಸರು ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರು ಪಡಿಸಿದ್ದಾರೆ.  ಇನ್ನು ಕೊಲೆಗೆ ಸಹಕಾರ ನೀಡಿದ ತಂದೆ ಸಂತೋಷ್​ ಕೂಡ ಈ ಕೊಲೆ ಪ್ರಕರಣದಲ್ಲಿದ್ದು, ಆತನಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

ಇದನ್ನೂ ಓದಿ: ಬಂಧನಕ್ಕೆ ಬಂದ ಪೊಲೀಸರ ಮೇಲೆಯೇ ‘ಕೈ’ ಮುಖಂಡನ ಪುತ್ರನಿಂದ ನಡೀತಾ ಹಲ್ಲೆ?

ಅತ್ತ ಗಂಡನನ್ನು ಬಿಟ್ಟು ಮತ್ತೊಬ್ಬನ ಜೊತೆಗಿದ್ದ ತಾಯಿ, ಹೆಂಡಿಯಿಂದ ದೂರಾದ ಗಂಡ, ತಂದೆ ತಾಯಿಯಿಂದ ಸಂಸ್ಕಾರ ಕಲಿಯದ ಮಗ, ಎಲ್ಲರ ಬದುಕು ದಿಕ್ಕಾಪಾಲಾಗಿ ಹೋಗಿರೋದಂತು ಸುಳ್ಳಲ್ಲ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಸತತ 2 ಜೀವದಾನ ಸಿಕ್ಕರೂ ಪಾಕ್ ವಿರುದ್ಧ ಮುಗ್ಗರಿಸಿದ ವೈಭವ್ ಸೂರ್ಯವಂಶಿ – Kannada News | U19 World Cup Vaibhav Suryavanshi Fails to Convert Lifelines vs Pakistan

ಅಂಡರ್-19 ವಿಶ್ವಕಪ್​ನಲ್ಲಿ (U19 World Cup) ಭಾರತ ಹಾಗೂ ಪಾಕಿಸ್ತಾನ (India vs Pakistan) ತಂಡಗಳು ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಎಲ್ಲರ ದೃಷ್ಟಿ ವೈಭವ್ ಸೂರ್ಯವಂಶಿ (Vaibhav Suryavanshi) ಮೇಲಿದ್ದವು. ಆದರೆ ಈ ಪಂದ್ಯದಲ್ಲಿ ವೈಭವ್​ಗೆ ನಿರೀಕ್ಷೆಗೆ ತಕ್ಕಂತೆ ಆಡಲು ಸಾಧ್ಯವಾಗಲಿಲ್ಲ. ಪಾಕ್ ವಿರುದ್ಧ ಮೊದಲು ಬ್ಯಾಟಿಂಗ್‌ ಮಾಡುತ್ತಿರುವ ಟೀಂ ಇಂಡಿಯಾ ಪರ ಆರಂಭಿಕನಾಗಿ ಕಣಕ್ಕಿಳಿದ ವೈಭವ್ ಸತತ ಎರಡು ಎಸೆತಗಳಲ್ಲಿ ಮೂರು ಜೀವದಾನ ಸಿಕ್ಕರೂ ಅದನ್ನು ಸದುಪಯೋಗಪಡಿಸಿಕೊಳ್ಳಲಾಗದೆ 30 ರನ್​ಗಳಿಗೆ ವಿಕೆಟ್ ಒಪ್ಪಿಸಿದರು. ವಿಶ್ವದ ಬಲಿಷ್ಠ ತಂಡಗಳೆದುರು ಅಬ್ಬರಿಸಿರುವ ವೈಭವ್​ಗೆ ಪಾಕಿಸ್ತಾನದ ವಿರುದ್ಧ ಮಾತ್ರ ದೊಡ್ಡ ಇನ್ನಿಂಗ್ಸ್ ಆಡಲು ಸಾಧ್ಯವಾಗುತ್ತಿಲ್ಲ. ಈ ಹಿಂದೆ ನಡೆದಿದ್ದ ಅಂಡರ್ 19 ಏಷ್ಯಾಕಪ್ ಫೈನಲ್​ನಲ್ಲೂ ವೈಭವ್​ ಬ್ಯಾಟ್ ಅಬ್ಬರಿಸಿರಲಿಲ್ಲ. ಇದೀಗ ವಿಶ್ವಕಪ್​ನಲ್ಲೂ ಅದೇ ಸಂಭವಿಸಿದೆ.

ಸತತ 2 ಜೀವದಾನ

ಈ ಪಂದ್ಯದಲ್ಲಿ ವೈಭವ್ ಮತ್ತು ಆರನ್ ಜಾರ್ಜ್ ಮೊದಲ ಎರಡು ಅಥವಾ ಮೂರು ಓವರ್‌ಗಳಲ್ಲಿ ಎಚ್ಚರಿಕೆಯಿಂದ ಆಡಿದರಾದರೂ ಬೇಗನೇ ವಿಕೆಟ್ ಕಳೆದುಕೊಂಡರು. ವಿಶೇಷವಾಗಿ ಆಕ್ರಮಣಕಾರಿ ಆಟಕ್ಕೆ ಮುಂದಾದ ವೈಭವ್ ನಾಲ್ಕನೇ ಓವರ್‌ನಲ್ಲಿ ಎರಡು ಬೌಂಡರಿ ನಂತರ ಏಳನೇ ಓವರ್‌ನಲ್ಲಿ ಸತತ ಎಸೆತಗಳಲ್ಲಿ ಒಂದು ಬೌಂಡರಿ ಮತ್ತು ಒಂದು ಸಿಕ್ಸರ್ ಬಾರಿಸಿದರು. ಆದರೆ 8ನೇ ಓವರ್‌ನಲ್ಲಿ ಎಲ್ಲವೂ ಇದ್ದಕ್ಕಿದ್ದಂತೆ ಬದಲಾಯಿತು. ಎಡಗೈ ವೇಗದ ಬೌಲರ್ ಮೊಹಮ್ಮದ್ ಸಯಾಮ್ ಎಸೆದ ಈ ಓವರ್‌ನಲ್ಲಿ, ವೈಭವ್ ಸತತ ಎರಡು ಎಸೆತಗಳಲ್ಲಿ ಮೂರು ಬಾರಿ ಪಾಕಿಸ್ತಾನಕ್ಕೆ ವಿಕೆಟ್ ಪಡೆಯುವ ಅವಕಾಶ ನೀಡಿದರು.

ಹೌದು, ವೈಭವ್ ಎರಡು ಎಸೆತಗಳಲ್ಲಿ ಪಾಕಿಸ್ತಾನಕ್ಕೆ ಮೂರು ಅವಕಾಶಗಳನ್ನು ಸೃಷ್ಟಿಸಿದರು. ಓವರ್‌ನ ಮೂರನೇ ಎಸೆತದಲ್ಲಿ, ವೈಭವ್ ಪುಲ್ ಮಾಡಲು ಪ್ರಯತ್ನಿಸಿದರು, ಆದರೆ ಚೆಂಡು ಮಿಡ್‌ವಿಕೆಟ್‌ನಲ್ಲಿ ಗಾಳಿಯಲ್ಲಿ ಎತ್ತರಕ್ಕೆ ಹಾರಿಹೋಯಿತು. ಫೀಲ್ಡರ್ ಸುಲಭವಾದ ಕ್ಯಾಚ್ ಅನ್ನು ಕೈಬಿಟ್ಟರು. ಆದಾಗ್ಯೂ, ಈ ಸಮಯದಲ್ಲಿ, ಇಬ್ಬರು ಭಾರತೀಯ ಬ್ಯಾಟ್ಸ್‌ಮನ್‌ಗಳ ನಡುವೆ ರನ್ ಓಡುವ ಬಗ್ಗೆ ಗೊಂದಲ ಉಂಟಾದ್ದರಿಂದ ವೈಭವ್ ರನೌಟ್​ಗೆ ಬಲಿಯಾಗಬೇಕಿತ್ತು. ಆದರೆ ಕ್ಯಾಚ್ ಬಿಟ್ಟ ಫೀಲ್ಡರ್ ಚೆಂಡನ್ನು ವಿಕೆಟ್​ನತ್ತ ಎಸೆದರು, ಅಲ್ಲಿ ಕೀಪರ್ ಇರದ ಕಾರಣ ರನೌಟ್​ನಿಂದಲೂ ಪಾರಾದರು.

30 ರನ್ ಗಳಿಸಿ ಔಟಾದ ವೈಭವ್

ಒಂದೇ ಚೆಂಡಿನಲ್ಲಿ ಎರಡು ಬಾರಿ ಔಟ್ ಆಗುವುದನ್ನು ತಪ್ಪಿಸಿಕೊಂಡ ನಂತರ ವೈಭವ್ ಮತ್ತು ಅಭಿಮಾನಿಗಳು ನೆಮ್ಮದಿಯ ನಿಟ್ಟುಸಿರು ಬಿಟ್ಟರು. ಆದರೆ ಮುಂದಿನ ಎಸೆತದಲ್ಲಿಯೇ ವೈಭವ್ ಮತ್ತೆ ಅದೇ ಹೊಡೆತವನ್ನು ಆಡಲು ಯತ್ನಿಸಿ ವಿಕೆಟ್ ಕೀಪರ್​ ಕೈಗೆ ಕ್ಯಾಚಿತ್ತು ನಿರ್ಗಮಿಸಿದರು. ಅಂತಿಮವಾಗಿ ವೈಭವ್ 22 ಎಸೆತಗಳಲ್ಲಿ 30 ರನ್ ಗಳಿಸಿ ಔಟಾದರು. ಪಾಕಿಸ್ತಾನ ವಿರುದ್ಧ ಇದು ಸತತ ಮೂರನೇ ಪಂದ್ಯವಾಗಿದ್ದು, ಇದಕ್ಕೂ ಮೊದಲು ಅವರು ಏಷ್ಯಾಕಪ್‌ನ ಎರಡು ಪಂದ್ಯಗಳಲ್ಲಿ 5 ಮತ್ತು 26 ರನ್ ಬಾರಿಸಿದ್ದರು.

U19 World Cup 2026: ಅತಿ ವೇಗದ, ಅತಿ ಕಿರಿಯ; ವಿಶ್ವದಾಖಲೆ ನಿರ್ಮಿಸಿದ ವೈಭವ್ ಸೂರ್ಯವಂಶಿ

ಕ್ಯಾಪ್ಟನ್ ಮ್ಹಾತ್ರೆ ಮತ್ತೆ ವಿಫಲ

ವೈಭವ್ ಔಟಾದ ನಂತರ ಭಾರತ ಕೇವಲ ನಾಲ್ಕು ಎಸೆತಗಳಲ್ಲಿ ಮೂರು ವಿಕೆಟ್‌ಗಳನ್ನು ಕಳೆದುಕೊಂಡಿತು. ಎಂಟನೇ ಓವರ್‌ನ ನಾಲ್ಕನೇ ಎಸೆತದಲ್ಲಿ ವೈಭವ್ ಔಟಾದರೆ, ಎರಡು ಎಸೆತಗಳ ನಂತರ, ಹೊಸ ಬ್ಯಾಟ್ಸ್‌ಮನ್ ಮತ್ತು ನಾಯಕ ಆಯುಷ್ ಮ್ಹಾತ್ರೆ ರನ್ ಗಳಿಸದೆ ಅದೇ ಬೌಲರ್‌ಗೆ ವಿಕೆಟ್ ಒಪ್ಪಿಸಿದರು. ಹೀಗಾಗಿ, ಮ್ಹಾತ್ರೆ ಅವರ ಕಳಪೆ ಪ್ರದರ್ಶನ ಈ ಪಂದ್ಯದಲ್ಲೂ ಮುಂದುವರೆಯಿತು. ಮುಂದಿನ ಓವರ್‌ನ ಮೊದಲ ಎಸೆತದಲ್ಲಿಯೇ, ಆರಂಭಿಕ ಆಟಗಾರ ಆರನ್ ಜಾರ್ಜ್ (16) ಕ್ಲೀನ್ ಬೌಲ್ಡ್ ಆದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 4:27 pm, Sun, 1 February 26

Source link

Exit mobile version