China Landslide: ಚೀನಾದಲ್ಲಿ ಭೀಕರ ಭೂಕುಸಿತ; 8 ಜನ ಸಾವು, 34 ಮಂದಿ ನಾಪತ್ತೆ – Kannada News | 8 people dead 34 injured in China’s Chongqing landslide

ಬೀಜಿಂಗ್, ಜುಲೈ 17: ಚೀನಾದ ಚಾಂಗ್‌ಕಿಂಗ್ ನಗರದಲ್ಲಿ ಸಂಭವಿಸಿದ ಭೀಕರ ಭೂಕುಸಿತದಲ್ಲಿ (Landslide) 8 ಜನರು ಸಾವನ್ನಪ್ಪಿದ್ದು, 34ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದಾರೆ ಎಂದು ಅಲ್ಲಿನ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಈ ದುರಂತ ಸಂಭವಿಸಿದೆ. ಚೀನಾದ ಗುಡ್ಡಗಾಡು ಪ್ರದೇಶವೊಂದರಲ್ಲಿ ಈ ಭೂಕುಸಿತ ಸಂಭವಿಸಿದೆ. ನಿರಂತರವಾಗಿ ಸುರಿದ ಮಳೆಯಿಂದಾಗಿ ಬೆಟ್ಟದ ಒಂದು ದೊಡ್ಡ ಭಾಗ ಕುಸಿದು ಕೆಳಗಿದ್ದ ವಸತಿ ಪ್ರದೇಶಗಳು ಮತ್ತು ಮನೆಗಳ ಮೇಲೆ ಬಿದ್ದಿದೆ. ಇದರ ಪರಿಣಾಮವಾಗಿ ಹಲವು ಮನೆಗಳು ಮಣ್ಣಿನ ಅಡಿಯಲ್ಲಿ ಸಂಪೂರ್ಣವಾಗಿ ಹೂತುಹೋಗಿವೆ.

ಈ ದುರಂತದ ಸುದ್ದಿ ತಿಳಿಯುತ್ತಿದ್ದಂತೆಯೇ ಚೀನಾ ಸರ್ಕಾರವು ನೂರಾರು ರಕ್ಷಣಾ ಸಿಬ್ಬಂದಿ, ಮಿಲಿಟರಿ ಪಡೆಗಳು ಮತ್ತು ಅಗ್ನಿಶಾಮಕ ದಳವನ್ನು ಸ್ಥಳಕ್ಕೆ ರವಾನಿಸಿದೆ. ಕುಸಿದು ಬಿದ್ದಿರುವ ಭಾರಿ ಪ್ರಮಾಣದ ಮಣ್ಣು ಮತ್ತು ಕಲ್ಲುಗಳನ್ನು ಸರಿಸಲು ಬುಲ್ಡೋಜರ್‌ಗಳು ಹಾಗೂ ಆಧುನಿಕ ಯಂತ್ರಗಳನ್ನು ಬಳಸಲಾಗುತ್ತಿದೆ. ಮಣ್ಣಿನ ಅಡಿಯಲ್ಲಿ ಇನ್ನೂ ಅನೇಕರು ಸಿಲುಕಿರುವ ಅನುಮಾನ ಇರುವುದರಿಂದ ಸಾವಿನ ಸಂಖ್ಯೆ ಹೆಚ್ಚಾಗುವ ಭೀತಿ ಎದುರಾಗಿದೆ.

ಇದನ್ನೂ ಓದಿ: Wayanad Landslide: ವಯನಾಡು ಭೂಕುಸಿತ, ರಕ್ಷಣಾ ಕಾರ್ಯಾಚರಣೆ ತೀವ್ರ, ಮೂವರು ಸಾವು, ಐವರು ನಾಪತ್ತೆ

ರಸ್ತೆ ಸಂಪರ್ಕ ಕಡಿತ:

ಈ ದುರಂತ ಸಂಭವಿಸಿದ 1 ಕಿಲೋಮೀಟರ್ ವ್ಯಾಪ್ತಿಯಲ್ಲಿ ಮತ್ತಷ್ಟು ಅನಾಹುತಗಳು ಸಂಭವಿಸದಂತೆ ತಡೆಯಲು ನೀರು, ವಿದ್ಯುತ್ ಮತ್ತು ಗ್ಯಾಸ್ ಸರಬರಾಜನ್ನು ಸ್ಥಗಿತಗೊಳಿಸಲಾಗಿದೆ. ಹಲವು ವಿದ್ಯುತ್ ಕಂಬಗಳು ಮಣ್ಣಿನಡಿ ಸಿಲುಕಿದ್ದರಿಂದ ವಿದ್ಯುತ್ ಸಂಪರ್ಕ ಸಂಪೂರ್ಣ ಕಡಿತಗೊಂಡಿದೆ. ಮಣ್ಣಿನಡಿ ಸಿಲುಕಿದ್ದ 18 ಜನರನ್ನು ರಕ್ಷಿಸಲಾಗಿದ್ದರೂ, ಅವರಲ್ಲಿ 8 ಜನರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ ಮತ್ತು ಉಳಿದ 10 ಜನರನ್ನು ಸುರಕ್ಷಿತವಾಗಿ ಹೊರತರಲಾಗಿದೆ.

ನಾಪತ್ತೆಯಾದವರ ಹುಡುಕಾಟ:

ನಾಪತ್ತೆಯಾಗಿರುವ 34ಕ್ಕೂ ಹೆಚ್ಚು ಜನರನ್ನು ಹುಡುಕಲು ಶ್ವಾನ ದಳ ಹಾಗೂ ಡ್ರೋನ್‌ಗಳನ್ನು ಬಳಸಲಾಗುತ್ತಿದೆ. ಈ ಪ್ರದೇಶದಲ್ಲಿ ಮುಂದಿನ ಕೆಲವು ದಿನಗಳ ಕಾಲ ಮತ್ತಷ್ಟು ಭಾರಿ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಹವಾಮಾನ ಇಲಾಖೆ ‘ರೆಡ್ ಅಲರ್ಟ್’ ಘೋಷಿಸಿದೆ. ಮಣ್ಣು ಸಡಿಲಗೊಂಡಿರುವುದರಿಂದ ಮತ್ತಷ್ಟು ಭೂಕುಸಿತ ಸಂಭವಿಸುವ ಅಪಾಯವಿದ್ದು, ಸುತ್ತಮುತ್ತಲಿನ ಹಳ್ಳಿಗಳ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗುತ್ತಿದೆ.

ಇದನ್ನೂ ಓದಿ: ಜಾಗತಿಕ ರಾಜಕೀಯ ತಲ್ಲಣ: 220 ಮಿಲಿಯನ್ ಅಮೆರಿಕನ್ನರ ವೋಟರ್ ಡೇಟಾ ಚೀನಾ ಪಾಲು, ಶ್ವೇತಭವನದಿಂದ ಟ್ರಂಪ್ ಬಾಂಬ್

ಉಜಿಹಾಂಗ್ ನದಿಯ ಸಮೀಪವಿರುವ ಪರ್ವತ ಪ್ರದೇಶದಲ್ಲಿ ಈ ದುರಂತ ಸಂಭವಿಸಿದೆ. ಕೇವಲ 2 ವಾರಗಳ ಹಿಂದಷ್ಟೇ ಚೀನಾದ ವಾಯುವ್ಯ ಗನ್ಸು ಪ್ರಾಂತ್ಯದಲ್ಲಿ ನಡೆದ ಭೂಕುಸಿತದಲ್ಲಿ 21 ಜನರು ಸಾವನ್ನಪ್ಪಿದ್ದರು. ಈಗ ಚಾಂಗ್‌ಕಿಂಗ್‌ನಲ್ಲಿ ಮತ್ತೊಂದು ಭೀಕರ ದುರಂತ ಸಂಭವಿಸಿರುವುದು ಅಲ್ಲಿನ ಜನರಲ್ಲಿ ಆತಂಕ ಮೂಡಿಸಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link

ರೋಹಿತ್ ವಿದಾಯ ಖಚಿತ; ಲಂಡನ್​ಗೆ ಆಗಮನಿಸಿದ ಹಿಟ್​ಮ್ಯಾನ್ ಪೋಷಕರು – Kannada News | Team India Ex Captain Rohit Sharma’s ODI Farewell at Lord’s? Parents Arrive!

ಟೀಂ ಇಂಡಿಯಾದ ಅತ್ಯಂತ ಯಶಸ್ವಿ ನಾಯಕರುಗಳಲ್ಲಿ ಒಬ್ಬರಾದ ರೋಹಿತ್ ಶರ್ಮಾ (Rohit Sharma) ಅಂತರರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಲಿದ್ದಾರೆ ಎಂಬ ಸುದ್ದಿ ವಿಶ್ವ ಕ್ರಿಕೆಟ್​ನಲ್ಲಿ ಸಂಚಲನ ಸೃಷ್ಟಿಸಿದೆ. ಜುಲೈ 19 ರಂದು ಐತಿಹಾಸಿಕ ಲಾರ್ಡ್ಸ್ ಮೈದಾನದಲ್ಲಿ ನಡೆಯಲಿರುವ ಇಂಗ್ಲೆಂಡ್ ವಿರುದ್ಧದ ಮೂರನೇ ಮತ್ತು ಅಂತಿಮ ಪಂದ್ಯವು ರೋಹಿತ್ ಶರ್ಮಾ ಅವರ ಏಕದಿನ ವೃತ್ತಿಜೀವನದ ಕೊನೆಯ ಪಂದ್ಯವಾಗಲಿದೆ ಎಂಬ ಸುದ್ದಿ ಹರಿದಾಡುತ್ತಿದೆ. ಇದಕ್ಕೆ ಪೂರಕವಾಗಿ ಮಗನ ಕೊನೆಯ ಪಂದ್ಯವನ್ನು ಕ್ರೀಡಾಂಗಣದಲ್ಲಿ ಕಣ್ತುಂಬಿಕೊಳ್ಳಲು ರೋಹಿತ್ ಅವರ ಪೋಷಕರಾದ ಗುರುನಾಥ್ ಶರ್ಮಾ ಮತ್ತು ಪೂರ್ಣಿಮಾ ಶರ್ಮಾ ಲಂಡನ್‌ಗೆ ಆಗಮಿಸಿದ್ದಾರೆ ಎಂದು ವರದಿಯಾಗಿದೆ.

ರೋಹಿತ್ ಬದಲಿಗೆ ಯಶಸ್ವಿ ಜೈಸ್ವಾಲ್

ಮಾಧ್ಯಮ ವರದಿಗಳ ಪ್ರಕಾರ, ಮುಖ್ಯ ಆಯ್ಕೆದಾರ ಅಜಿತ್ ಅಗರ್ಕರ್ ಮತ್ತು ಮುಖ್ಯ ತರಬೇತುದಾರ ಗೌತಮ್ ಗಂಭೀರ್ ಕಳೆದ ವಾರ ರೋಹಿತ್ ಶರ್ಮಾ ಅವರನ್ನು ಭೇಟಿಯಾಗಿ ಟೀಂ ಇಂಡಿಯಾದ ದೀರ್ಘಕಾಲೀನ ಯೋಜನೆಗಳ ಕುರಿತು ಚರ್ಚಿಸಿದ್ದಾರೆ. ಅದರಂತೆ 2027 ರ ಏಕದಿನ ವಿಶ್ವಕಪ್‌ಗೆ ರೋಹಿತ್ ಅವರನ್ನು ಪರಿಗಣಿಸುತ್ತಿಲ್ಲ ಮತ್ತು ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿ ಕೊನೆಯ ಅಂತರರಾಷ್ಟ್ರೀಯ ಸರಣಿಯಾಗಿರಬಹುದು ಎಂದು ಆಯ್ಕೆದಾರರು ಸ್ಪಷ್ಟಪಡಿಸಿದ್ದಾರೆ. ಅಲ್ಲದೆ ಆಯ್ಕೆ ಸಮಿತಿಯು ರೋಹಿತ್ ಬದಲಿಗೆ ಯಶಸ್ವಿ ಜೈಸ್ವಾಲ್ ಅವರನ್ನು ಭವಿಷ್ಯದ ಆರಂಭಿಕ ಆಟಗಾರನಾಗಿ ಆಡಿಸಲು ಯೋಜನೆ ಹಾಕಿಕೊಂಡಿದೆ ಎಂದು ವರದಿಯಾಗಿದೆ. ಆದಾಗ್ಯೂ, ಇದು ರೋಹಿತ್ ಶರ್ಮಾ ಅವರ ಕೊನೆಯ ಪಂದ್ಯವೇ ಎಂಬುದರ ಕುರಿತು ಇನ್ನೂ ಯಾವುದೇ ಘೋಷಣೆಯಾಗಿಲ್ಲ, ಅಥವಾ ಬಿಸಿಸಿಐ ಕೂಡ ಯಾವುದೇ ಹೇಳಿಕೆಯನ್ನು ನೀಡಿಲ್ಲ.

ಅಫ್ಘನ್ ಸರಣಿಯಲ್ಲೇ ನಿರ್ಧಾರವಾಗಬೇಕಿತ್ತು

ವರದಿಗಳ ಪ್ರಕಾರ, ಅಫ್ಘಾನಿಸ್ತಾನ ವಿರುದ್ಧದ ಏಕದಿನ ಸರಣಿ ರೋಹಿತ್ ಅವರ ಕೊನೆಯ ಪಂದ್ಯವಾಗಬೇಕಿತ್ತು, ಆದರೆ ಆ ಸರಣಿಯಲ್ಲಿ ಅರ್ಧಶತಕ ಬಾರಿಸಿದ್ದರಿಂದ ಆಯ್ಕೆದಾರರು ಈ ನಿರ್ಧಾರವನ್ನು ಮುಂದೂಡಿದರು. ಆದಾಗ್ಯೂ, ಇಂಗ್ಲೆಂಡ್ ವಿರುದ್ಧದ ಪ್ರಸ್ತುತ ಸರಣಿಯಲ್ಲಿ ರೋಹಿತ್ ಅವರ ಬ್ಯಾಟ್ ಸಂಪೂರ್ಣವಾಗಿ ಮೌನವಾಗಿದೆ. ಮೊದಲ ಏಕದಿನ ಪಂದ್ಯದಲ್ಲಿ 11 ರನ್ ಗಳಿಸಿದ್ದ ರೋಹಿತ್ ಕಾರ್ಡಿಫ್‌ನಲ್ಲಿ ನಡೆದ ಎರಡನೇ ಪಂದ್ಯದಲ್ಲಿ 47 ಎಸೆತಗಳಲ್ಲಿ ಕೇವಲ 26 ರನ್ ಗಳಿಸಿದ್ದರು. ರೋಹಿತ್ ಅವರ ಈ ಪ್ರದರ್ಶನ ಆಯ್ಕೆದಾರರನ್ನು ಈ ನಿರ್ಧಾರ ತೆಗೆದುಕೊಳ್ಳುವಂತೆ ಮಾಡಿದೆ.

ರೋಹಿತ್ ಶರ್ಮಾ ವೃತ್ತಿಜೀವನದ ಕೊನೆಯ ಅಂತರರಾಷ್ಟ್ರೀಯ ಪಂದ್ಯ ಯಾವಾಗ ನಡೆಯಲಿದೆ?

ಈಗಾಗಲೇ ಎರಡು ಸ್ವರೂಪಗಳಿಗೆ ವಿದಾಯ

ರೋಹಿತ್ ಶರ್ಮಾ ಈಗಾಗಲೇ ಅಂತರರಾಷ್ಟ್ರೀಯ ಕ್ರಿಕೆಟ್‌ನ ಎರಡು ಸ್ವರೂಪಗಳಿಂದ ನಿವೃತ್ತರಾಗಿದ್ದಾರೆ. ಬಾರ್ಬಡೋಸ್‌ನ ಕೆನ್ಸಿಂಗ್ಟನ್ ಓವಲ್‌ನಲ್ಲಿ ಭಾರತವನ್ನು ಟಿ20 ವಿಶ್ವಕಪ್ ಪ್ರಶಸ್ತಿಗೆ ಮುನ್ನಡೆಸಿದ ಬಳಿಕ ಜೂನ್ 29, 2024 ರಂದು ರೋಹಿತ್ ಅಂತರರಾಷ್ಟ್ರೀಯ ಟಿ20 ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದರು. ತರುವಾಯ, ಮೇ 2025 ರಲ್ಲಿ, ಅವರು ಇನ್‌ಸ್ಟಾಗ್ರಾಮ್ ಪೋಸ್ಟ್ ಮೂಲಕ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದರು. ಈಗ, ಲಾರ್ಡ್ಸ್‌ನಲ್ಲಿ, ಅವರು ತಮ್ಮ 50-ಓವರ್‌ಗಳ ಸ್ವರೂಪದ ವೃತ್ತಿಜೀವನವನ್ನು ಸಹ ಕೊನೆಗೊಳಿಸಬಹುದು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಆಸ್ಪತ್ರೆಗೆ ಭೇಟಿ ನೀಡಿ ದೇವೇಗೌಡರ ಪತ್ನಿ ಚೆನ್ನಮ್ಮ ಅವರ ಆರೋಗ್ಯ ವಿಚಾರಿಸಿದ ಆರ್. ಅಶೋಕ್ – Kannada News | Opposition Leader R. Ashok Visits Channamma, HD Kumaraswamys Mother

ಬೆಂಗಳೂರು. ಜು.17: ಮಾಜಿ ಪ್ರಧಾನಮಂತ್ರಿ ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ಅವರ ಆರೋಗ್ಯ ವಿಚಾರಿಸಲು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಭೇಟಿ ನೀಡಿದ್ದಾರೆ. ಈ ಭೇಟಿಯು ರಾಜಕೀಯ ವಲಯದಲ್ಲಿ ಗಮನ ಸೆಳೆದಿದೆ. ಆರ್. ಅಶೋಕ್ ಅವರು ಜೆಡಿ(ಎಸ್) ವರಿಷ್ಠರ ಕುಟುಂಬದ ಹಿರಿಯ ಸದಸ್ಯೆಯಾದ ಚೆನ್ನಮ್ಮ ಅವರ ಆರೋಗ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿ, ಅವರ ಆರೋಗ್ಯ ವಿಚಾರಿಸಲು ತೆರಳಿದರು. ಈ ಸಂದರ್ಭದಲ್ಲಿ ಅವರು ಕುಟುಂಬದ ಸದಸ್ಯರೊಂದಿಗೆ ಮಾತನಾಡಿ, ಚೆನ್ನಮ್ಮ ಅವರ ಆರೋಗ್ಯ ಸ್ಥಿತಿಗತಿಯ ಬಗ್ಗೆ ಮಾಹಿತಿ ಪಡೆದುಕೊಂಡರು. ರಾಜಕೀಯ ನಾಯಕರ ನಡುವೆ ಸೌಜನ್ಯಯುತ ಭೇಟಿಗಳು ನಡೆಯುವುದು ಸಹಜ.ಭೇಟಿ ಮಾಡಿದ ನಂತರ ಮಾಧ್ಯಮಗಳ ಮುಂದೆ ಆರ್​​​. ಅಶೋಕ್ ಮಾತನಾಡಿದ್ದಾರೆ. ಚೆನ್ನಮ್ಮನವರ ಆರೋಗ್ಯ ನಿನ್ನೆಗಿಂತ ಇಂದು ಸುಧಾರಿಸಿದೆ.ಚೆನ್ನಮ್ಮನವರ ಆರೋಗ್ಯ ವಿಚಾರಿಸಿಕೊಂಡು ಬಂದಿದ್ದೇನೆ. ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಇರಾನ್-ಅಮೆರಿಕ ಯುದ್ಧ: ಬೆಂಗಳೂರಲ್ಲಿ ಚಿನ್ನದ ವ್ಯಾಪಾರ ಕುಸಿತ; ಎಕ್ಸ್‌ಚೇಂಜ್‌ಗೆ ಮುಂದಾದ ಜನರು – Kannada News | Iran US Conflict Hits Bengaluru Gold Trade; More People Opt to Exchange Gold Instead of Buying

ಬೆಂಗಳೂರು, ಜುಲೈ 17: ದೂರದ ಅಮೆರಿಕ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದ ತೀವ್ರ ಪ್ರಭಾವ ಭಾರತದ ಮೇಲೂ ಬೀರಿದೆ. ಮಧ್ಯಪ್ರಾಚ್ಯ ಸಂಘರ್ಷದ ಪರಿಣಾಮವಾಗಿ ದೇಶದಲ್ಲಿ ತೈಲ ಬಿಕ್ಕಟ್ಟು ಹಾಗೂ ಆರ್ಥಿಕ ಹಿನ್ನಡೆ ಉಂಟಾಗುವ ಭೀತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ದೇಶದ ಆರ್ಥಿಕತೆಯನ್ನು ಕಾಪಾಡುವ ಮತ್ತು ಸುಸ್ಥಿರತೆಯನ್ನು ಕಾಯ್ದುಕೊಳ್ಳುವ ಉದ್ದೇಶದಿಂದ ಸಾರ್ವಜನಿಕರು ಮುಂದಿನ ಒಂದು ವರ್ಷಗಳ ಕಾಲ ಹೊಸ ಚಿನ್ನವನ್ನು ಖರೀದಿ (Gold) ಮಾಡದಂತೆ ಪ್ರಧಾನಿ ನರೇಂದ್ರ ಮೋದಿ ಮಹತ್ವದ ಕರೆ ನೀಡಿದ್ದರು. ಈ ಕರೆಗೆ ಬೆಂಗಳೂರಿನ ಜನತೆ ದೊಡ್ಡ ಮಟ್ಟದಲ್ಲಿ ಸ್ಪಂದಿಸಿದ್ದು, ನಗರದಲ್ಲಿ ಬಂಗಾರದ ವ್ಯಾಪಾರವು ಅರ್ಧದಷ್ಟು ಕುಸಿದಿದೆ ಎಂದು ಜ್ಯುವೆಲರ್ಸ್ ಅಸೋಸಿಯೇಷನ್ ಕಳವಳ ವ್ಯಕ್ತಪಡಿಸಿದೆ.

ಬೆಲೆ ಇಳಿಕೆಯಾದರೂ ಖರೀದಿಗೆ ಹಿಂದೇಟು: ಎಕ್ಸ್‌ಚೇಂಜ್‌ಗೆ ಒಲವು

ಯುದ್ಧದ ಮಾರುಕಟ್ಟೆ ಏರುಪೇರುಗಳಿಂದಾಗಿ ಚಿನ್ನದ ಬೆಲೆಯಲ್ಲಿ ನಿರಂತರ ಇಳಿಕೆ ಕಂಡುಬರುತ್ತಿದ್ದರೂ ಸಹ, ಸಿಟಿ ಜನತೆ ಮಾತ್ರ ಹೊಸ ಚಿನ್ನ ಖರೀದಿಗೆ ಮುಂದಾಗುತ್ತಿಲ್ಲ. ಬಂಗಾರದ ಅಂಗಡಿಗಳಿಗೆ ಬರುವ ಗ್ರಾಹಕರ ಸಂಖ್ಯೆ ಶೇಕಡಾ 40 ರಿಂದ 50 ರಷ್ಟು ಕಮ್ಮಿಯಾಗಿದ್ದು, ವ್ಯಾಪಾರಸ್ಥರು ತೀವ್ರ ನಷ್ಟ ಅನುಭವಿಸುವಂತಾಗಿದೆ.

ಇದನ್ನೂ ಓದಿ: ಅಲ್ಲೆಲ್ಲೋ ಯುದ್ಧ ನಡೀತಿದ್ರೆ ಇಲ್ಯಾಕೆ ಚಿನ್ನ ಖರೀದಿ ಮಾಡಬಾರದು? ಬಂಗಾರ ಖರೀದಿ ನಿಲ್ಲಿಸಿದ್ರೆ ದೇಶಕ್ಕಾಗುವ ಲಾಭವೇನು?

ಪ್ರಸ್ತುತ ಸಾರ್ವಜನಿಕರು ಹೊಸ ಚಿನ್ನವನ್ನು ಕೊಳ್ಳುವ ಬದಲು, ತಮ್ಮ ಬಳಿ ಇರುವ ಹಳೆಯ ಆಭರಣಗಳನ್ನು ನೀಡಿ ಹೊಸ ಗೋಲ್ಡ್ ಎಕ್ಸ್‌ಚೇಂಜ್ ಮಾಡಿಕೊಳ್ಳುವತ್ತ ಹೆಚ್ಚಿನ ಒಲವು ತೋರಿಸುತ್ತಿದ್ದಾರೆ ಎಂದು ರಾಜ್ಯ ಜ್ಯುವೆಲರ್ಸ್ ಅಸೋಸಿಯೇಷನ್ ಖಜಾಂಚಿ ರವಿಕುಮಾರ್​ ಮಾಹಿತಿ ನೀಡಿದ್ದಾರೆ.

ಬಂಗಾರದ ಮೇಲೆ ಹೂಡಿಕೆಯೂ ಕುಸಿತ

ಸಾಮಾನ್ಯವಾಗಿ ಚಿನ್ನದ ಬೆಲೆ ಇಳಿಕೆಯಾದಾಗ ಜನಸಾಮಾನ್ಯರು ಆಭರಣಗಳನ್ನು ಹಾಗೂ ಹೂಡಿಕೆದಾರರು ಇನ್ವೆಸ್ಟ್‌ಮೆಂಟ್ ಹೆಸರಿನಲ್ಲಿ ಚಿನ್ನದ ನಾಣ್ಯ ಹಾಗೂ ಬಿಸ್ಕೆಟ್‌ಗಳನ್ನು ಮುಗಿಬಿದ್ದು ಖರೀದಿಸುತ್ತಿದ್ದರು. ಆದರೆ ಪ್ರಸಕ್ತ ಆರ್ಥಿಕ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಬಂಗಾರದ ಮೇಲೆ ಹೂಡಿಕೆ ಮಾಡುವವರ ಪ್ರಮಾಣದಲ್ಲಿ ಶೇಕಡಾ 80 ರಷ್ಟು ಕುಸಿತ ಕಂಡುಬಂದಿದೆ.

ಇದನ್ನೂ ಓದಿ: ಪ್ರಧಾನಿ ಮೋದಿ ಕರೆ ಬೆನ್ನಲ್ಲೇ ಬೆಂಗಳೂರಿನಲ್ಲಿ ಚಿನ್ನ, ಇಂಧನ ಮಾರಾಟ ಶೇ.50ರಷ್ಟು ಕುಸಿತ

ಆರ್ಥಿಕತೆಯನ್ನು ರಕ್ಷಿಸುವ ಕರೆಗೆ ಸಾರ್ವಜನಿಕರು ಕಿವಿಕೊಟ್ಟಿರುವುದು ದೇಶದ ದೃಷ್ಟಿಯಿಂದ ಧನಾತ್ಮಕವಾಗಿದ್ದರೂ, ಇತ್ತ ಚಿನ್ನದ ಆಭರಣ ವ್ಯಾಪಾರಿಗಳಿಗೆ ಮಾತ್ರ ಇದು ದೊಡ್ಡ ಮಟ್ಟದ ಆರ್ಥಿಕ ಹೊಡೆತ ನೀಡುತ್ತಿರುವುದಂತೂ ಸುಳ್ಳಲ್ಲ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ರೋಹಿತ್ ಶರ್ಮಾ ವೃತ್ತಿಜೀವನದ ಕೊನೆಯ ಅಂತರರಾಷ್ಟ್ರೀಯ ಪಂದ್ಯ ಯಾವಾಗ ನಡೆಯಲಿದೆ? – Kannada News | IND vs ENG Final ODI: Lord’s Showdown and Live Streaming Details

ಭಾರತ ಮತ್ತು ಇಂಗ್ಲೆಂಡ್ (India vs England) ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಅಂತಿಮ ಮತ್ತು ನಿರ್ಣಾಯಕ ಪಂದ್ಯ ಜುಲೈ 19 ರಂದು ಐತಿಹಾಸಿಕ ಲಾರ್ಡ್ಸ್ ಮೈದಾನದಲ್ಲಿ ನಡೆಯಲಿದೆ. ಸರಣಿಯ ದೃಷ್ಟಿಯಿಂದ ಈ ಪಂದ್ಯ ಉಭಯ ತಂಡಗಳಿಗೂ ನಿರ್ಣಾಯಕವಾಗಿದೆ. ಏಕೆಂದರೆ ಎರಡೂ ತಂಡಗಳು ಇದುವರೆಗೆ ತಲಾ ಒಂದೊಂದು ಪಂದ್ಯವನ್ನು ಗೆದ್ದಿವೆ. ಹೀಗಾಗಿ ಕೊನೆಯ ಪಂದ್ಯವನ್ನು ಗೆಲ್ಲುವ ತಂಡಕ್ಕೆ ಸರಣಿ ಸಿಗಲಿದೆ. ಇದರ ಜೊತೆಗೆ ಈ ಪಂದ್ಯದ ಗೆಲುವು ಟೀಂ ಇಂಡಿಯಾಕ್ಕೆ ಬಹಳ ಮುಖ್ಯವಾಗಿದೆ. ಏಕೆಂದರೆ ವರ್ಷಗಳ ಕಾಲ ಭಾರತ ತಂಡವನ್ನು ನಾಯಕನಾಗಿ ಮುನ್ನಡೆಸಿ ತಂಡಕ್ಕೆ ಐಸಿಸಿ ಟ್ರೋಫಿಗಳನ್ನು ಗೆದ್ದುಕೊಟ್ಟ ರೋಹಿತ್ ಶರ್ಮಾಗೆ (Rohit Sharma) ಇದು ಕೊನೆಯ ಅಂತರರಾಷ್ಟ್ರೀಯ ಪಂದ್ಯ ಎನ್ನಲಾಗುತ್ತಿದೆ. ಹೀಗಾಗಿ ಈ ಪಂದ್ಯವನ್ನು ಗೆಲ್ಲುವ ಮೂಲಕ ರೋಹಿತ್​ಗೆ ವಿದಾಯ ಹೇಳಲು ಟೀಂ ಇಂಡಿಯಾ ತಯಾರಿ ನಡೆಸಿದೆ. ಹೀಗಾಗಿ ಈ ಪಂದ್ಯದ ಪೂರ್ಣ ವಿವರವನ್ನು ನಾವು ನಿಮಗೆ ನೀಡಲಿದ್ದೇವೆ.

ಭಾರತ ಹಾಗೂ ಇಂಗ್ಲೆಂಡ್‌ ನಡುವಿನ ಮೂರನೇ ಏಕದಿನ ಪಂದ್ಯ ಯಾವಾಗ ನಡೆಯಲಿದೆ?

ಭಾರತ ಹಾಗೂ ಇಂಗ್ಲೆಂಡ್‌ ನಡುವಿನ ಮೂರನೇ ಏಕದಿನ ಪಂದ್ಯ ಜುಲೈ 18 ರಂದು ನಡೆಯಲಿದೆ.

ಭಾರತ ಹಾಗೂ ಇಂಗ್ಲೆಂಡ್‌ ನಡುವಿನ ಮೂರನೇ ಏಕದಿನ ಪಂದ್ಯ ಎಲ್ಲಿ ನಡೆಯಲಿದೆ?

ಭಾರತ ಹಾಗೂ ಇಂಗ್ಲೆಂಡ್‌ ನಡುವಿನ ಮೂರನೇ ಏಕದಿನ ಪಂದ್ಯ ಲಾರ್ಡ್ಸ್‌ನಲ್ಲಿ ನಡೆಯಲಿದೆ.

ಭಾರತ ಹಾಗೂ ಇಂಗ್ಲೆಂಡ್‌ ನಡುವಿನ ಮೂರನೇ ಏಕದಿನ ಪಂದ್ಯ ಎಷ್ಟು ಗಂಟೆಗೆ ಆರಂಭವಾಗಲಿದೆ?

ಭಾರತ ಹಾಗೂ ಇಂಗ್ಲೆಂಡ್‌ ನಡುವಿನ ಮೂರನೇ ಏಕದಿನ ಪಂದ್ಯ ಭಾರತೀಯ ಕಾಲಮಾನ ಮಧ್ಯಾಹ್ನ 3:30 ಕ್ಕೆ ಪ್ರಾರಂಭವಾಗಲಿದೆ.

ಭಾರತ ಹಾಗೂ ಇಂಗ್ಲೆಂಡ್‌ ನಡುವಿನ ಮೂರನೇ ಏಕದಿನ ಪಂದ್ಯವನ್ನು ಉಚಿತವಾಗಿ ವೀಕ್ಷಿಸುವುದು ಹೇಗೆ?

ಭಾರತ ಹಾಗೂ ಇಂಗ್ಲೆಂಡ್‌ ನಡುವಿನ ಮೂರನೇ ಏಕದಿನ ಪಂದ್ಯವನ್ನು ಸೋನಿ ಸ್ಪೋರ್ಟ್ಸ್ ಚಾನೆಲ್‌ಗಳಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ. ಹಾಗೆಯೇ ಡಿಸ್ನಿ+ ಹಾಟ್‌ಸ್ಟಾರ್ ಅಪ್ಲಿಕೇಶನ್ ಡಿಜಿಟಲ್ ಲೈವ್ ಸ್ಟ್ರೀಮಿಂಗ್ ವೀಕ್ಷಿಸುವ ಸೌಲಭ್ಯವನ್ನು ನೀಡುತ್ತದೆ.

ಉಭಯ ತಂಡಗಳು

ಏಕದಿನ ಸರಣಿಗೆ ಭಾರತ ತಂಡ: ಶುಭ್​ಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್ (ಉಪನಾಯಕ), ಕೆಎಲ್ ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಪ್ರಸಿದ್ಧ್ ಕೃಷ್ಣ, ಪ್ರಿನ್ಸ್ ಯಾದವ್, ಅರ್ಶ್ದೀಪ್ ಸಿಂಗ್, ಗುರ್ನೂರ್ ಬ್ರಾರ್, ಶಿವಂ ದುಬೆ.

ಇಂಗ್ಲೆಂಡ್‌ ತಂಡ: ಹ್ಯಾರಿ ಬ್ರೂಕ್, ರೆಹಾನ್ ಅಹ್ಮದ್, ಜೋಫ್ರಾ ಆರ್ಚರ್, ಗಸ್ ಅಟ್ಕಿನ್ಸನ್, ಟಾಮ್ ಬ್ಯಾಂಟನ್, ಜಾಕೋಬ್ ಬೆಥೆಲ್, ಜೋಸ್ ಬಟ್ಲರ್, ಜೇಮ್ಸ್ ಕೋಲ್ಸ್, ಸ್ಯಾಮ್ ಕರನ್, ಲಿಯಾಮ್ ಡಾಸನ್, ಬೆನ್ ಡಕೆಟ್, ವಿಲ್ ಜ್ಯಾಕ್ಸ್, ಸಾಕಿಬ್ ಮಹಮೂದ್, ಆದಿಲ್ ರಶೀದ್, ಜೋ ರೂಟ್, ಜೋಶ್ ಟಂಗ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ನಟಿ ಸಮಂತಾ ರುತ್ ಪ್ರಭು ಸರಳ ಸೀಮಂತ ಶಾಸ್ತ್ರದ ಫೋಟೋಗಳು ವೈರಲ್ – Kannada News | Samantha Ruth Prabhu intimate Baby Shower Photos with Husband Raj Nidimoru goes Viral

ಖ್ಯಾತ ನಟಿ ಸಮಂತಾ ರುತ್ ಪ್ರಭು (Samantha Ruth Prabhu) ಅವರು ತಮ್ಮ ಜೀವನದ ಅತ್ಯಂತ ಸುಂದರ ಹಾಗೂ ಸಂತಸದ ದಿನಗಳನ್ನು ಆನಂದಿಸುತ್ತಿದ್ದಾರೆ. ಶೀಘ್ರದಲ್ಲೇ ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ಅವರು, ಇತ್ತೀಚೆಗೆ ತಮ್ಮ ಪತಿ, ಬಾಲಿವುಡ್‌ನ ಪ್ರಸಿದ್ಧ ನಿರ್ದೇಶಕ ರಾಜ್ ನಿಡಿಮೋರು (Raj Nidimoru) ಅವರೊಂದಿಗೆ ಆಪ್ತರ ಸಮ್ಮುಖದಲ್ಲಿ ಸರಳವಾಗಿ ಸೀಮಂತ ಶಾಸ್ತ್ರವನ್ನು (Baby Shower) ಆಚರಿಸಿಕೊಂಡಿದ್ದಾರೆ ಎನ್ನಲಾಗಿದೆ. ಈ ಖಾಸಗಿ ಸಮಾರಂಭದ ಸುಂದರ ಫೋಟೋಗಳು ಈಗ ಸೋಷಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗುತ್ತಿವೆ.

ಕಳೆದ ಡಿಸೆಂಬರ್‌ನಲ್ಲಿ ಕೊಯಮತ್ತೂರಿನ ಇಶಾ ಯೋಗ ಕೇಂದ್ರದಲ್ಲಿ ಅತ್ಯಂತ ಖಾಸಗಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ ಈ ಜೋಡಿ, ಈಗ ತಮ್ಮ ಮೊದಲ ಮಗುವಿನ ಸ್ವಾಗತಕ್ಕೆ ಸಜ್ಜಾಗಿದೆ. ಇತ್ತೀಚೆಗೆ ಸೂಪರ್ ಹಿಟ್ ಆದ ‘ಮಾ ಇಂಟಿ ಬಂಗಾರಂ’ ಸಿನಿಮಾದ ಸಕ್ಸಸ್ ಮೀಟ್‌ನಲ್ಲಿ ಸಮಂತಾ ಅವರು ತಮ್ಮ ಪ್ರೆಗ್ನೆನ್ಸಿ ಸುದ್ದಿಯನ್ನು ಅಧಿಕೃತವಾಗಿ ಹಂಚಿಕೊಂಡಿದ್ದರು.

ಸಾಂಪ್ರದಾಯಿಕ ಉಡುಪಿನಲ್ಲಿ ಮಿಂಚಿದ ಜೋಡಿ

ವೈರಲ್ ಆಗಿರುವ ಸೀಮಂತದ ಫೋಟೋಗಳಲ್ಲಿ ಸಮಂತಾ ಗೋಲ್ಡ್ ಡೀಟೇಲಿಂಗ್ ಇರುವ ಮರೂನ್ ಬಣ್ಣದ ಕಸೂತಿ ಕಲೆಯ ಸಾಂಪ್ರದಾಯಿಕ ಉಡುಪಿನಲ್ಲಿ ಅತ್ಯಂತ ಸುಂದರವಾಗಿ ಕಾಣಿಸಿಕೊಂಡಿದ್ದಾರೆ. ಇನ್ನು ಪತ್ನಿಯ ಉಡುಪಿಗೆ ಮ್ಯಾಚ್ ಆಗುವಂತೆ ರಾಜ್ ನಿಡಿಮೋರು ಕೂಡ ಮರೂನ್ ಸಿಲ್ಕ್ ಕುರ್ತಾ ಧರಿಸಿದ್ದಾರೆ. ಕೇವಲ ಕುಟುಂಬದ ಸದಸ್ಯರು ಮತ್ತು ಹತ್ತಿರದ ಸಂಬಂಧಿಕರು ಮಾತ್ರ ಈ ಸಮಾರಂಭದಲ್ಲಿ ಭಾಗವಹಿಸಿದ್ದರು. ನೆಚ್ಚಿನ ನಟಿಯ ಮುಖದಲ್ಲಿನ ನಗು ಕಂಡು ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಶುಭಾಶಯಗಳ ಮಳೆ ಹರಿಸುತ್ತಿದ್ದಾರೆ.

100 ಕೋಟಿ ಕ್ಲಬ್ ಸೇರಿದ ‘ಮಾ ಇಂಟಿ ಬಂಗಾರಂ’

ಸಮಂತಾ ಮುಖ್ಯ ಭೂಮಿಕೆಯಲ್ಲಿ ನಟಿಸಿ, ಬಿ.ವಿ. ನಂದಿನಿ ರೆಡ್ಡಿ ನಿರ್ದೇಶನ ಮಾಡಿದ್ದ ‘ಮಾ ಇಂಟಿ ಬಂಗಾರಂ’ ಸಿನಿಮಾ ವಿಶ್ವದಾದ್ಯಂತ ಭರ್ಜರಿ ಪ್ರದರ್ಶನ ಕಂಡು 100 ಕೋಟಿ ರೂಪಾಯಿಗಳಿಗೂ ಅಧಿಕ ಕಲೆಕ್ಷನ್ ಮಾಡಿದೆ. ಈ ಮೂಲಕ ತೆಲುಗು ಚಿತ್ರರಂಗದ ಇತಿಹಾಸದಲ್ಲೇ 100 ಕೋಟಿ ಕ್ಲಬ್ ಸೇರಿದ ಮೊದಲ ನಾಯಕಿ ಪ್ರಧಾನ ಸಿನಿಮಾ ಎಂಬ ದಾಖಲೆಯನ್ನು ಬರೆದಿದೆ. ವಿಶೇಷವೆಂದರೆ ಈ ಚಿತ್ರವನ್ನು ಸಮಂತಾ ಮತ್ತು ರಾಜ್ ನಿಡಿಮೋರು ಜಂಟಿಯಾಗಿ ನಿರ್ಮಿಸಿದ್ದರು. ಗುಲ್ಶನ್ ದೇವಯ್ಯ ಮತ್ತು ದಿಗಂತ್ ಮಂಚಾಲೆ ಪ್ರಮುಖ ಪಾತ್ರದಲ್ಲಿದ್ದ ಈ ಚಿತ್ರ ಜುಲೈ 17ರಿಂದ ‘ಜಿಯೋ ಹಾಟ್‌ಸ್ಟಾರ್’ ಒಟಿಟಿಯಲ್ಲಿ ಸ್ಟ್ರೀಮಿಂಗ್ ಆರಂಭಿಸಿದೆ.

ಇದನ್ನೂ ಓದಿ: ಅಡೆತಡೆ ಮೀರಿ 100 ಕೋಟಿ ಕ್ಲಬ್ ಸೇರಿದ ಸಮಂತಾ ನಟನೆಯ ಮಾ ಇಂಟಿ ಬಂಗಾರಂ

ಹೆರಿಗೆಯ ನಂತರ ಮತ್ತೆ ಬಣ್ಣದ ಲೋಕಕ್ಕೆ ಕಂಬ್ಯಾಕ್:

ಸದ್ಯ ಗರ್ಭಧಾರಣೆಯ ಕಾರಣದಿಂದಾಗಿ ನಟನೆಯಿಂದ ತಾತ್ಕಾಲಿಕ ಬ್ರೇಕ್ ಪಡೆದಿರುವ ಸಮಂತಾ, ಹೆರಿಗೆಯ ನಂತರ ಭರ್ಜರಿಯಾಗಿ ಚಿತ್ರರಂಗಕ್ಕೆ ಕಂಬ್ಯಾಕ್ ಮಾಡಲು ಪ್ಲಾನ್ ಮಾಡಿಕೊಂಡಿದ್ದಾರೆ. ‘ಮಾ ಇಂಟಿ ಬಂಗಾರಂ’ ಚಿತ್ರದ ಸೀಕ್ವೆಲ್ (ಭಾಗ 2) ಮೂಲಕ ಅವರು ಮತ್ತೆ ಬಣ್ಣ ಹಚ್ಚಲಿದ್ದಾರೆ. ಇದರ ಜೊತೆಗೆ ಆದಿತ್ಯ ರಾಯ್ ಕಪೂರ್, ವಾಮಿಕಾ ಗಬ್ಬಿ ಮತ್ತು ಅಲಿ ಫಜಲ್ ನಟನೆಯ ಬಹುನಿರೀಕ್ಷಿತ ವೆಬ್ ಸೀರೀಸ್ ‘ರಕ್ತ ಬ್ರಹ್ಮಾಂಡ: ದಿ ಬ್ಲಡಿ ಕಿಂಗ್ಡಮ್’ನಲ್ಲೂ ಸಮಂತಾ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ವಾರ ಭವಿಷ್ಯ: ಜುಲೈ 19 ರಿಂದ ಈ ರಾಶಿಯವರಿಗೆ ಅದೃಷ್ಟ: ಆದರೆ ಅಂದುಕೊಂಡ ಕಾರ್ಯಕ್ಕೆ ತೊಂದರೆಯಾಗುವ ಸಾಧ್ಯತೆ – Kannada News | Rashi Bhavishya: July 19 28, 2026 Weekly Predictions for All Zodiac Signs

ಜುಲೈ 19ರಿಂದ 28, 2026ರ ವರೆಗೆ ​ಗ್ರಹಗತಿಗಳ ಸಂಚಾರ ಮತ್ತು ಸಂಯೋಗದ ಆಧಾರ ಮೇಲೆ ಅಂದುಕೊಂಡ ಕಾರ್ಯಕ್ಕೆ ಸಣ್ಣ ತೊಂದರೆ, ಬೇಸರಿಸದೇ ಮುಂದೆ ಸಾಗುವುದು, ಬೆನ್ನ ಹಿಂದೆ ಕುಚೋದ್ಯ, ಪ್ರಾಮಾಣಿಕತೆ ಪ್ರಶ್ನೆ, ಲಾಭ ನಷ್ಟದ ಲೆಕ್ಕಾಚಾರ ಮುಂತಾದವು ಇವೆಲ್ಲ ಈ ವಾರದಲ್ಲಿ ಕಾಣಿಸಿಕೊಳ್ಳಲಿದೆ

ಮೇಷ ರಾಶಿ :

​ದ್ವಿತೀಯದಲ್ಲಿ ಮಂಗಳ ಹಾಗೂ ಅಷ್ಟಮದಲ್ಲಿ ಚಂದ್ರನ ಸಂಚಾರವಿರುವುದರಿಂದ ಈ ವಾರ ಮಾತಿನ ಮೇಲೆ ನಿಯಂತ್ರಣವಿರಲಿ. ಹಣಕಾಸಿನ ಹರಿವು ಚೆನ್ನಾಗಿದ್ದರೂ ಆಕಸ್ಮಿಕ ಖರ್ಚುಗಳು ಎದುರಾಗಬಹುದು. ಹಳೆಯ ಹೂಡಿಕೆಗಳು ಕೈ ಹಿಡಿಯಲಿವೆ. ಸವಾಲುಗಳನ್ನು ಬುದ್ಧಿವಂತಿಕೆಯಿಂದ ಎದುರಿಸುವಿರಿ.

ವೃಷಭ ರಾಶಿ :

​ನಿಮ್ಮದೇ ರಾಶಿಯಲ್ಲಿ ಮಂಗಳನಿದ್ದು, ಸಪ್ತಮದಲ್ಲಿ ಚಂದ್ರನಿದ್ದಾನೆ. ನಿಮ್ಮ ಆಲೋಚನೆಗಳಲ್ಲಿ ಸ್ಪಷ್ಟತೆ ಇರಲಿದೆ. ವೃತ್ತಿ ಕ್ಷೇತ್ರದಲ್ಲಿ ನಿಮ್ಮ ನಾಯಕತ್ವಕ್ಕೆ ಮನ್ನಣೆ ಸಿಗಲಿದೆ. ಸಂಗಾತಿಯೊಂದಿಗೆ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳು ಬರಬಹುದು, ತಾಳ್ಮೆ ಅಗತ್ಯ. ಹೊಸ ಉದ್ಯೋಗಾವಕಾಶಗಳು ಹುಡುಕಿಕೊಂಡು ಬರಲಿವೆ.

ಮಿಥುನ ರಾಶಿ :

​ನಿಮ್ಮ ರಾಶ್ಯಾಧಿಪತಿ ಬುಧ ಸ್ವಕ್ಷೇತ್ರದಲ್ಲಿದ್ದಾನೆ. ನಿಮ್ಮ ಬುದ್ಧಿವಂತಿಕೆ ಹಾಗೂ ಸಂವಹನ ಕಲೆ ಈ ವಾರ ಅದ್ಭುತವಾಗಿ ಕೆಲಸ ಮಾಡಲಿದೆ. ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲು ಇದು ಸಕಾಲ. ಕೋರ್ಟ್ ಕಚೇರಿ ಕೆಲಸಗಳಲ್ಲಿ ಯಶಸ್ಸು ಸಿಗಲಿದೆ. ಆರೋಗ್ಯದ ಕಡೆಗೆ ಸ್ವಲ್ಪ ಗಮನ ಹರಿಸಿ.

ಕರ್ಕಾಟಕ ರಾಶಿ :

​ನಿಮ್ಮ ರಾಶಿಯಲ್ಲಿ ಸೂರ್ಯ ಮತ್ತು ಗುರುಗಳ ಯುತಿ ಇದೆ. ಸಮಾಜದಲ್ಲಿ ಗೌರವ, ಕೀರ್ತಿ ಹೆಚ್ಚಾಗಲಿದೆ. ಆದರೆ ಗುರು ಅಸ್ತನಾಗಿರುವುದರಿಂದ ಅತಿಯಾದ ಆತ್ಮವಿಶ್ವಾಸ ಬೇಡ. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ. ವಿದ್ಯಾರ್ಥಿಗಳಿಗೆ ಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯಲಿದೆ.

ಸಿಂಹ ರಾಶಿ :

​ನಿಮ್ಮ ರಾಶಿಯಲ್ಲಿ ಶುಕ್ರ ಮತ್ತು ಕೇತುಗಳಿರುವುದರಿಂದ ಸೃಜನಶೀಲ ಕೆಲಸಗಳಿಗೆ ಉತ್ತಮ ವೇದಿಕೆ ಸಿಗಲಿದೆ. ಹೊಸ ಒಪ್ಪಂದಗಳಿಗೆ ಸಹಿ ಹಾಕುವ ಮುನ್ನ ಯೋಚಿಸಿ. ವಿದೇಶಿ ಮೂಲಗಳಿಂದ ಲಾಭವಾಗುವ ಸಾಧ್ಯತೆ ಇದೆ. ಕುಟುಂಬದ ಹಿರಿಯರ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ.

ಕನ್ಯಾ ರಾಶಿ :

​ದಶಮದಲ್ಲಿ ಬುಧನ ಸ್ಥಾನ ಇರುವುದರಿಂದ ಉದ್ಯೋಗ ರಂಗದಲ್ಲಿ ದೊಡ್ಡ ಮಟ್ಟದ ಬದಲಾವಣೆಗಳನ್ನು ಕಾಣುವಿರಿ. ನಿಮ್ಮ ಕಾರ್ಯಕ್ಷಮತೆಗೆ ಮೇಲಧಿಕಾರಿಗಳಿಂದ ಪ್ರಶಂಸೆ ಸಿಗಲಿದೆ. ಆರ್ಥಿಕವಾಗಿ ಲಾಭದಾಯಕ ವಾರವಿದು. ಸ್ನೇಹಿತರಿಂದ ನಿರೀಕ್ಷಿತ ಸಹಾಯ ದೊರೆಯಲಿದೆ.

ತುಲಾ ರಾಶಿ :

​ಲಾಭ ಸ್ಥಾನದಲ್ಲಿ ಶುಕ್ರನ ಇಡುವಿಕೆಯಿಂದಾಗಿ ಆದಾಯದ ಮೂಲಗಳು ಹೆಚ್ಚಾಗಲಿವೆ. ನಿಮ್ಮ ಆಸೆ ಆಕಾಂಕ್ಷೆಗಳು ಈಡೇರುವ ಸಮಯ ಹತ್ತಿರ ಬಂದಿದೆ. ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ ಮೂಡಲಿದೆ. ಉದ್ಯೋಗದಲ್ಲಿ ವರ್ಗಾವಣೆ ಬಯಸುವವರಿಗೆ ಶುಭ ವಾರ್ತೆ ಸಿಗಲಿದೆ.

ವೃಶ್ಚಿಕ ರಾಶಿ :

​ಚಂದ್ರನ ಸಂಚಾರ ನಿಮ್ಮ ರಾಶಿಯಲ್ಲೇ ಇರುವುದರಿಂದ ವಾರದ ಆರಂಭದಲ್ಲಿ ಮನಸ್ಸು ಸ್ವಲ್ಪ ಚಂಚಲವಾಗಬಹುದು. ಆದರೆ ದಶಮದ ಶುಕ್ರ ನಿಮ್ಮ ಕೈ ಹಿಡಿಯಲಿದ್ದಾನೆ. ವೃತ್ತಿ ಜೀವನದಲ್ಲಿ ಹೊಸ ಜವಾಬ್ದಾರಿಗಳು ಹೆಗಲೇರಲಿವೆ. ಸಂಗಾತಿಯ ಬೆಂಬಲ ಮಾನಸಿಕ ಸ್ಥಿರತೆ ನೀಡಲಿದೆ.

ಧನು ರಾಶಿ :

​ಭಾಗ್ಯ ಸ್ಥಾನದ ಗ್ರಹಬಲ ಚೆನ್ನಾಗಿದೆ. ಆಧ್ಯಾತ್ಮಿಕ ಚಿಂತನೆಗಳು ಹೆಚ್ಚಾಗಲಿವೆ. ದೂರದ ಪ್ರಯಾಣದಿಂದ ಲಾಭವಾಗಲಿದೆ. ತಂದೆಯವರ ಕಡೆಯಿಂದ ಆಸ್ತಿ ಅಥವಾ ಹಣಕಾಸಿನ ನೆರವು ಸಿಗುವ ಸಾಧ್ಯತೆ ಇದೆ. ಹಠಾತ್ ಅದೃಷ್ಟ ನಿಮ್ಮದಾಗಬಹುದು.

ಮಕರ ರಾಶಿ :

​ಪಂಚಮದಲ್ಲಿ ಮಂಗಳ ಹಾಗೂ ಅಷ್ಟಮದಲ್ಲಿ ಶುಕ್ರನ ಸ್ಥಾನ ಇರುವುದರಿಂದ ಆರೋಗ್ಯದಲ್ಲಿ ಏರುಪೇರಾಗದಂತೆ ನೋಡಿಕೊಳ್ಳಿ. ಶತ್ರುಗಳ ತಂತ್ರಗಳು ಧೂಳೀಪಟವಾಗಲಿವೆ. ರಹಸ್ಯ ಮೂಲಗಳಿಂದ ಧನಲಾಭವಾಗುವ ಯೋಗವಿದೆ. ಆತುರದ ಹೂಡಿಕೆಗಳನ್ನು ತಡೆಯಿರಿ.

ಕುಂಭ ರಾಶಿ :

​ನಿಮ್ಮ ರಾಶಿಯಲ್ಲಿ ರಾಹು ಮತ್ತು ಲಗ್ನ ಇರುವುದರಿಂದ ನಿಮ್ಮ ವ್ಯಕ್ತಿತ್ವದಲ್ಲಿ ಹೊಸ ಆಕರ್ಷಣೆ ಮೂಡಲಿದೆ. ಸಪ್ತಮದ ಶುಕ್ರ ವೈವಾಹಿಕ ಜೀವನದಲ್ಲಿ ಮಧುರತೆಯನ್ನು ತರಲಿದ್ದಾನೆ. ಪಾಲುದಾರಿಕೆ ವ್ಯವಹಾರದಲ್ಲಿ ಲಾಭಾಂಶ ಹೆಚ್ಚಾಗಲಿದೆ. ಸಾರ್ವಜನಿಕ ರಂಗದಲ್ಲಿ ಮನ್ನಣೆ ಸಿಗಲಿದೆ.

ಇದನ್ನೂ ಓದಿ: ಜಗನ್ನಾಥ ರಥಯಾತ್ರೆ ಆರಂಭ; ರಥಯಾತ್ರೆಯ ಮಾರ್ಗವನ್ನು ಚಿನ್ನದ ಪೊರಕೆಯಿಂದ ಗುಡಿಸುವ ಸಂಪ್ರದಾಯದ ಬಗ್ಗೆ ನಿಮಗೆ ಗೊತ್ತಾ?

ಮೀನ ರಾಶಿ :

​ನಿಮ್ಮ ರಾಶಿಯಲ್ಲಿ ಶನಿಯ ಸಂಚಾರವಿದ್ದು, ಆರನೇ ಮನೆಯಲ್ಲಿ ಗ್ರಹಬಲವಿದೆ. ಕಠಿಣ ಪರಿಶ್ರಮಕ್ಕೆ ತಕ್ಕ ಪ್ರತಿಫಲ ತಡವಾಗಿ ಸಿಕ್ಕರೂ ಖಂಡಿತ ಸಿಗಲಿದೆ. ಹಳೆಯ ಸಾಲಗಳಿಂದ ಮುಕ್ತಿ ದೊರೆಯುವ ಹಾದಿ ಸುಲಭವಾಗಲಿದೆ. ಉದ್ಯೋಗಿಗಳಿಗೆ ಸಹೋದ್ಯೋಗಿಗಳಿಂದ ಉತ್ತಮ ಸಹಕಾರ ದೊರೆಯಲಿದೆ.

– ಲೋಹಿತ್ ಹೆಬ್ಬಾರ್

ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬಿಜೆಪಿಯಿಂದ ಮಾತ್ರ ಪಂಜಾಬ್​​ನಲ್ಲಿ ಅಭಿವೃದ್ಧಿ ಸಾಧ್ಯ; ಆಪ್ ಸರ್ಕಾರದ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ – Kannada News | Punjab needs BJP double engine government for rapid growth PM Modi says in Jalandhar Rally

ಜಲಂಧರ್, ಜುಲೈ 17: ಪಂಜಾಬ್‌ನಲ್ಲಿ ಆಡಳಿತ ನಡೆಸುತ್ತಿರುವ ಆಮ್ ಆದ್ಮಿ ಪಕ್ಷದ (AAP) ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಪ್ರಧಾನಿ ನರೇಂದ್ರ ಮೋದಿ, ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ ಎಂದು ಹೇಳಿದ್ದಾರೆ. ಪಂಜಾಬ್ ರಾಜ್ಯದ ಯುವಕರ ಭವಿಷ್ಯವನ್ನು ವ್ಯವಸ್ಥಿತವಾಗಿ ನಾಶಪಡಿಸಲಾಗುತ್ತಿದೆ ಎಂದು ಪ್ರಧಾನಿ ಮೋದಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂದು ಜಲಂಧರ್‌ನಲ್ಲಿ ನಡೆದ ಬೃಹತ್ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ (PM Modi), ಪಂಜಾಬ್‌ನಲ್ಲಿ ಪೊಲೀಸ್ ಠಾಣೆಗಳಿಗೂ ಸುರಕ್ಷತೆಯಿಲ್ಲದಂತಾಗಿದೆ ಎಂದು ಟೀಕಿಸಿದ್ದಾರೆ. ಪಂಜಾಬ್ ಅನ್ನು ಅಭಿವೃದ್ಧಿ ಹೊಂದಿದ ಮತ್ತು ಸ್ವಾವಲಂಬಿ ರಾಜ್ಯವನ್ನಾಗಿ ಮಾಡಲು ಬಿಜೆಪಿಯಿಂದ ಮಾತ್ರ ಸಾಧ್ಯ ಎಂದು ಮೋದಿ ಭರವಸೆ ನೀಡಿದ್ದಾರೆ.

ಪಂಜಾಬ್ ರಾಜ್ಯದ ಭದ್ರತಾ ಸ್ಥಿತಿಯ ಕುರಿತು ಕಳವಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ, “ಇಲ್ಲಿ ಪೊಲೀಸ್ ಠಾಣೆಗಳೂ ಸುರಕ್ಷಿತವಾಗಿಲ್ಲ. ಪದೇಪದೆ ಪೊಲೀಸ್ ಠಾಣೆಗಳ ಮೇಲೆಯೇ ದಾಳಿಗಳು ನಡೆಯುತ್ತಿರುತ್ತವೆ. ಎಲ್ಲಕ್ಕಿಂತ ಹೆಚ್ಚಾಗಿ ಪಂಜಾಬ್‌ನ ಭವಿಷ್ಯವೇ ಹಾಳಾಗುತ್ತಿದೆ. ಡ್ರಗ್ಸ್ ದಂಧೆಕೋರರು ಯಾವುದೇ ಭಯವಿಲ್ಲದೆ ಮುಕ್ತವಾಗಿ ತಿರುಗಾಡುತ್ತಿದ್ದಾರೆ. ಪಂಜಾಬ್‌ನ ಯುವ ಪೀಳಿಗೆಯನ್ನು ಮಾದಕ ವ್ಯಸನದ ಕೂಪಕ್ಕೆ ತಳ್ಳಲಾಗುತ್ತಿದೆ” ಎಂದು ಮೋದಿ ಆತಂಕ ವ್ಯಕ್ತಪಡಿಸಿದರು.

ಇದನ್ನೂ ಓದಿ: ಪ್ರಧಾನಿ ಮೋದಿ ಕೊಟ್ಟ ಬಿಹಾರದ ಠೇಕುವಾ ಸ್ವೀಟ್ ಸವಿದ ಸ್ಲೋವಾಕಿಯಾ ನಾಯಕ ಹೇಳಿದ್ದೇನು?

ಪಂಜಾಬ್‌ನಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಯಾವಾಗ, ಎಲ್ಲಿ ಗ್ಯಾಂಗ್ ವಾರ್ ಆರಂಭವಾಗುತ್ತದೆ ಅಥವಾ ಯಾವ ಕಡೆಯಿಂದ ಗುಂಡುಗಳು ಹಾರಿಬರುತ್ತವೆ ಎಂದು ಹೇಳಲು ಸಾಧ್ಯವಿಲ್ಲದ ಪರಿಸ್ಥಿತಿ ಇದೆ. ಇಲ್ಲಿ ವ್ಯಾಪಾರ-ವ್ಯವಹಾರ ಮಾಡುವುದು ಕಷ್ಟಕರವಾಗಿದೆ. ಸಾರ್ವಜನಿಕರಿಂದ ಬಹಿರಂಗವಾಗಿ ಹಫ್ತಾ ವಸೂಲಿ ಮಾಡಲಾಗುತ್ತಿದೆ” ಎಂದು ಮೋದಿ ಆರೋಪಿಸಿದರು.

ಬಿಜೆಪಿಯಿಂದ ಮಾತ್ರ ಬದಲಾವಣೆ ಸಾಧ್ಯ ಎಂದ ಮೋದಿ:

“ಪಂಜಾಬ್‌ನಲ್ಲಿ ನಿಜವಾದ ಬದಲಾವಣೆಯನ್ನು ತರಲು ಬಿಜೆಪಿಯಿಂದ ಮಾತ್ರ ಸಾಧ್ಯ. ಪಂಜಾಬ್ ಅನ್ನು ಅಭಿವೃದ್ಧಿ ಹೊಂದಿದ ಮತ್ತು ಸ್ವಾವಲಂಬಿ ರಾಜ್ಯವನ್ನಾಗಿ ಮಾಡಲು ಬಿಜೆಪಿಯಿಂದ ಮಾತ್ರ ಸಾಧ್ಯ. ರಾಜ್ಯಕ್ಕೆ ಹೊಸ ಹೂಡಿಕೆಗಳು ಹರಿದುಬರಬೇಕು, ಯುವಕರಿಗೆ ಹೊಸ ಉದ್ಯೋಗಾವಕಾಶಗಳು ಸೃಷ್ಟಿಯಾಗಬೇಕು ಮತ್ತು ಪಂಜಾಬ್‌ನಲ್ಲಿ ತಯಾರಾಗುವ ಉತ್ಪನ್ನಗಳು ಪ್ರಪಂಚದ ಮೂಲೆ ಮೂಲೆಗೂ ತಲುಪಬೇಕೆಂದರೆ ಈ ಎಲ್ಲಾ ಕಾರ್ಯಗಳನ್ನು ಬಿಜೆಪಿ ಮಾತ್ರವೇ ಸಾಧಿಸಬಲ್ಲದು” ಎಂದು ಪ್ರಧಾನಿ ಮೋದಿ ಭರವಸೆ ನೀಡಿದರು.

ಇದನ್ನೂ ಓದಿ: ಅಮೃತ್​​ ಯೋಜನೆಯಡಿ ನವೀಕೃತಗೊಂಡ ಕರ್ನಾಟಕದ 4 ರೈಲ್ವೇ ನಿಲ್ದಾಣಗಳನ್ನು ವರ್ಚುವಲ್​​ ಮೂಲಕ ಉದ್ಘಾಟಿಸಿದ ಮೋದಿ

ರಾಜ್ಯದ ಪ್ರಸ್ತುತ ಆಡಳಿತ ವ್ಯವಸ್ಥೆಯ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದ ಪ್ರಧಾನಿ ಮೋದಿ, ವಿರೋಧ ಪಕ್ಷಗಳು ಕೇವಲ ರಾಜಕೀಯ ಹಿತಾಸಕ್ತಿಗಾಗಿ ಕೇಂದ್ರದ ಯೋಜನೆಗಳು ಜನರಿಗೆ ತಲುಪದಂತೆ ತಡೆಯುತ್ತಿವೆ ಎಂದು ಆರೋಪಿಸಿದರು. ಕೇಂದ್ರ ಸರ್ಕಾರದ ಆಯುಷ್ಮಾನ್ ಭಾರತ್‌ನಂತಹ ಆರೋಗ್ಯ ಯೋಜನೆಗಳು ಮತ್ತು ಮೂಲಸೌಕರ್ಯ ಯೋಜನೆಗಳು ಪಂಜಾಬ್‌ನ ಪ್ರತಿಯೊಬ್ಬ ಪ್ರಜೆಗೂ ಸಿಗಬೇಕಾದರೆ ರಾಜಕೀಯ ಅಡೆತಡೆಗಳು ನಿವಾರಣೆಯಾಗಬೇಕು ಎಂದು ಮೋದಿ ಕರೆ ನೀಡಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಕ್ಯಾಲೊರಿ ಬರ್ನ್‌ ಮಾಡಲು ರನ್ನಿಂಗ್ vs ಸೈಕ್ಲಿಂಗ್ ಯಾವುದು ಬೆಸ್ಟ್‌ ತಿಳಿದುಕೊಳ್ಳಿ – Kannada News | Running or Cycling: The Ultimate Cardio Workout Comparison

ಇತ್ತೀಚಿನ ದಿನಗಳಲ್ಲಿ ತೂಕ ಹೆಚ್ಚಾಗುವುದು ಕೇವಲ ಸೌಂದರ್ಯದ ಸಮಸ್ಯೆಯಲ್ಲ, ಆರೋಗ್ಯದ ಮೇಲೂ ಪರಿಣಾಮ ಬೀರುವ ಪ್ರಮುಖ ಕಾರಣವಾಗಿದೆ. ಹೆಚ್ಚಿದ ತೂಕದಿಂದ ಮಧುಮೇಹ, ರಕ್ತದೊತ್ತಡ, ಹೃದಯ ಸಂಬಂಧಿ ಕಾಯಿಲೆಗಳು, ಕೊಬ್ಬಿನ ಯಕೃತ್ (Fatty Liver) ಸೇರಿದಂತೆ ಅನೇಕ ಸಮಸ್ಯೆಗಳ ಅಪಾಯ ಹೆಚ್ಚಾಗುತ್ತದೆ. ಹೀಗಾಗಿ ತೂಕ ಇಳಿಸಿಕೊಳ್ಳಲು ಅನೇಕರು ಜಿಮ್‌, ವಾಕಿಂಗ್‌, ರನ್ನಿಂಗ್‌ ಮತ್ತು ಸೈಕ್ಲಿಂಗ್‌ಗೆ ಮೊರೆ ಹೋಗುತ್ತಾರೆ. ಆದರೆ ಈ ಎರಡರಲ್ಲಿ ಯಾವುದು ಹೆಚ್ಚು ಪರಿಣಾಮಕಾರಿ ಎಂಬ ಪ್ರಶ್ನೆ ಬಹುತೇಕರನ್ನು ಕಾಡುತ್ತದೆ. ಆರೋಗ್ಯ ತಜ್ಞರ ಪ್ರಕಾರ, ರನ್ನಿಂಗ್ ಮತ್ತು ಸೈಕ್ಲಿಂಗ್ ಎರಡೂ ಉತ್ತಮ ಕಾರ್ಡಿಯೊ ವ್ಯಾಯಾಮಗಳಾಗಿವೆ. ಆದರೆ ಯಾವುದು ಉತ್ತಮ ಎಂಬುದು ವ್ಯಕ್ತಿಯ ಆರೋಗ್ಯ ಸ್ಥಿತಿ, ವಯಸ್ಸು, ದೇಹದ ತೂಕ ಹಾಗೂ ಫಿಟ್ನೆಸ್ ಗುರಿಯನ್ನು ಅವಲಂಬಿಸಿರುತ್ತದೆ.

ಯಾವುದು ಹೆಚ್ಚು ಕ್ಯಾಲೊರಿ ಕರಗಿಸುತ್ತದೆ?

ಸಾಮಾನ್ಯವಾಗಿ ಒಂದೇ ಸಮಯದಲ್ಲಿ ಹೋಲಿಕೆ ಮಾಡಿದರೆ ರನ್ನಿಂಗ್ ಮಾಡುವಾಗ ಸೈಕ್ಲಿಂಗ್‌ಗಿಂತ ಹೆಚ್ಚು ಕ್ಯಾಲೊರಿ ಕರಗುತ್ತದೆ. ಓಡುವಾಗ ದೇಹದ ಬಹುತೇಕ ಎಲ್ಲಾ ಪ್ರಮುಖ ಸ್ನಾಯುಗಳು ಸಕ್ರಿಯವಾಗುತ್ತವೆ. ದೇಹವನ್ನು ಗುರುತ್ವಾಕರ್ಷಣೆಗೆ ವಿರುದ್ಧವಾಗಿ ಮುಂದಕ್ಕೆ ತಳ್ಳಲು ಹೆಚ್ಚು ಶಕ್ತಿ ಬೇಕಾಗುವುದರಿಂದ ಕ್ಯಾಲೊರಿ ಬಳಕೆ ಹೆಚ್ಚಾಗುತ್ತದೆ. ಉದಾಹರಣೆಗೆ, ಸುಮಾರು 70 ಕೆ.ಜಿ. ತೂಕವಿರುವ ವ್ಯಕ್ತಿಯು 30 ನಿಮಿಷಗಳ ಕಾಲ ಮಧ್ಯಮ ವೇಗದಲ್ಲಿ ಓಡಿದರೆ ಸುಮಾರು 300–400 ಕ್ಯಾಲೊರಿ ಕರಗಬಹುದು. ಇದೇ ಸಮಯದಲ್ಲಿ ಮಧ್ಯಮ ವೇಗದಲ್ಲಿ ಸೈಕ್ಲಿಂಗ್ ಮಾಡಿದರೆ ಸುಮಾರು 220–350 ಕ್ಯಾಲೊರಿ ಕರಗಬಹುದು. ಆದರೆ ವೇಗ ಮತ್ತು ತೀವ್ರತೆ ಹೆಚ್ಚಾದಂತೆ ಈ ಪ್ರಮಾಣ ಬದಲಾಗುತ್ತದೆ.

ಮೊಣಕಾಲು ನೋವಿದ್ದರೆ ಸೈಕ್ಲಿಂಗ್ ಉತ್ತಮ ಆಯ್ಕೆ

ರನ್ನಿಂಗ್ ವೇಳೆ ಮೊಣಕಾಲು ಹಾಗೂ ಕೀಲುಗಳ ಮೇಲೆ ಹೆಚ್ಚಿನ ಒತ್ತಡ ಬೀಳುತ್ತದೆ. ಆದ್ದರಿಂದ ಅಧಿಕ ತೂಕ ಇರುವವರು, ಮೊಣಕಾಲು ನೋವಿರುವವರು, ಸಂಧಿವಾತ (Arthritis) ಸಮಸ್ಯೆಯಿರುವವರು, ಹಿರಿಯರು ಇವರಿಗೆ ಸೈಕ್ಲಿಂಗ್ ಹೆಚ್ಚು ಸುರಕ್ಷಿತ ಆಯ್ಕೆಯಾಗಿದೆ. ಇದು ಕೀಲುಗಳಿಗೆ ಕಡಿಮೆ ಒತ್ತಡ ನೀಡುತ್ತಾ ಹೃದಯದ ಆರೋಗ್ಯ ಮತ್ತು ಸಹಿಷ್ಣುತೆಯನ್ನು ಹೆಚ್ಚಿಸುತ್ತದೆ.

ತೂಕ ಇಳಿಸಿಕೊಳ್ಳಲು ಯಾವುದು ಉತ್ತಮ?

ತ್ವರಿತವಾಗಿ ಕೊಬ್ಬು ಕರಗಿಸಲು ಬಯಸುವ ಮತ್ತು ಯಾವುದೇ ಆರೋಗ್ಯ ಸಮಸ್ಯೆ ಇಲ್ಲದವರು ರನ್ನಿಂಗ್ ಮಾಡಬಹುದು. ಆದರೆ ದೀರ್ಘಾವಧಿಯಲ್ಲಿ ದೇಹಕ್ಕೆ ಕಡಿಮೆ ಒತ್ತಡದೊಂದಿಗೆ ವ್ಯಾಯಾಮ ಮಾಡಲು ಬಯಸುವವರಿಗೆ ಸೈಕ್ಲಿಂಗ್ ಸಹ ಉತ್ತಮ ಫಲಿತಾಂಶ ನೀಡುತ್ತದೆ.

ಇದನ್ನೂ ಓದಿ: ದೃಷ್ಟಿ ಮಸಕಾಗುವುದನ್ನು ತಡೆಯಲು ಆಹಾರದಲ್ಲಿ ಈ ಬೀಜಗಳನ್ನು ಸೇರಿಸಿಕೊಳ್ಳಿ

ವ್ಯಾಯಾಮದ ಜೊತೆಗೆ ಆಹಾರವೂ ಮುಖ್ಯ

ತೂಕ ಇಳಿಸಿಕೊಳ್ಳುವುದು ಕೇವಲ ವ್ಯಾಯಾಮದಿಂದ ಮಾತ್ರ ಸಾಧ್ಯವಲ್ಲ. ಆಹಾರ ಪದ್ಧತಿಯೂ ಪ್ರಮುಖ ಪಾತ್ರ ವಹಿಸುತ್ತದೆ.

  • ಪ್ರತಿದಿನ ಸಾಕಷ್ಟು ಪ್ರೋಟೀನ್ ಸೇವಿಸಿ.
  • ಹೆಚ್ಚು ಸಕ್ಕರೆ ಮತ್ತು ಜಂಕ್ ಫುಡ್ ಕಡಿಮೆ ಮಾಡಿ.
  • ತರಕಾರಿ, ಹಣ್ಣು, ಸಂಪೂರ್ಣ ಧಾನ್ಯಗಳನ್ನು ಆಹಾರದಲ್ಲಿ ಸೇರಿಸಿ.
  • ದಿನಕ್ಕೆ 2–3 ಲೀಟರ್ ನೀರು ಕುಡಿಯಿರಿ.
  • 7–8 ಗಂಟೆಗಳ ಗುಣಮಟ್ಟದ ನಿದ್ರೆ ಪಡೆಯಿರಿ.

ಇತ್ತೀಚಿನ ಕೆಲವು ಫಿಟ್ನೆಸ್ ಅಧ್ಯಯನಗಳ ಪ್ರಕಾರ, High Intensity Interval Training (HIIT) ಮಾದರಿಯ ರನ್ನಿಂಗ್ ಅಥವಾ Interval Cycling ಮಾಡಿದರೆ ವ್ಯಾಯಾಮ ಮುಗಿದ ನಂತರವೂ ದೇಹದಲ್ಲಿ ಕ್ಯಾಲೊರಿ ಕರಗುವಿಕೆ (Afterburn Effect ಅಥವಾ EPOC) ಕೆಲ ಗಂಟೆಗಳವರೆಗೆ ಮುಂದುವರಿಯಬಹುದು. ಇದರಿಂದ ತೂಕ ಇಳಿಕೆಗೆ ಹೆಚ್ಚುವರಿ ನೆರವು ದೊರೆಯುತ್ತದೆ.

ಯಾರಿಗೆ ಯಾವ ವ್ಯಾಯಾಮ ಸೂಕ್ತ?

ತ್ವರಿತ ಕ್ಯಾಲೊರಿ ಕರಗಿಸಲು: ರನ್ನಿಂಗ್
ಮೊಣಕಾಲು ಅಥವಾ ಕೀಲು ಸಮಸ್ಯೆ ಇದ್ದರೆ: ಸೈಕ್ಲಿಂಗ್
ಹೃದಯ ಆರೋಗ್ಯ ಸುಧಾರಿಸಲು: ಎರಡೂ ಉತ್ತಮ
ಹೊಸಬರಿಗೆ: ನಿಧಾನಗತಿಯ ಸೈಕ್ಲಿಂಗ್ ಅಥವಾ ವೇಗದ ನಡಿಗೆ ಆರಂಭಿಸಿ
ಸಾರಾಂಶ

ರನ್ನಿಂಗ್ ಮತ್ತು ಸೈಕ್ಲಿಂಗ್ ಎರಡೂ ಆರೋಗ್ಯಕ್ಕೆ ಅತ್ಯುತ್ತಮ ವ್ಯಾಯಾಮಗಳು. ರನ್ನಿಂಗ್ ಹೆಚ್ಚು ಕ್ಯಾಲೊರಿ ಕರಗಿಸಿದರೂ, ಸೈಕ್ಲಿಂಗ್ ಕೀಲುಗಳಿಗೆ ಸುರಕ್ಷಿತವಾಗಿದೆ. ನಿಮ್ಮ ವಯಸ್ಸು, ಆರೋಗ್ಯ ಸ್ಥಿತಿ ಮತ್ತು ಫಿಟ್ನೆಸ್ ಗುರಿಗೆ ಅನುಗುಣವಾಗಿ ಸೂಕ್ತ ವ್ಯಾಯಾಮವನ್ನು ಆಯ್ಕೆ ಮಾಡುವುದು ಉತ್ತಮ. ಯಾವುದೇ ಹೊಸ ವ್ಯಾಯಾಮ ಆರಂಭಿಸುವ ಮೊದಲು, ವಿಶೇಷವಾಗಿ ಹೃದಯ ಅಥವಾ ಕೀಲು ಸಮಸ್ಯೆಗಳಿದ್ದರೆ ವೈದ್ಯರು ಅಥವಾ ಫಿಟ್ನೆಸ್ ತಜ್ಞರ ಸಲಹೆ ಪಡೆಯುವುದು ಸೂಕ್ತ.

ಗಮನಿಸಿ: ಈ ಲೇಖನವು ಆರೋಗ್ಯ ಜಾಗೃತಿಗಾಗಿ ಮಾತ್ರ. ವೈಯಕ್ತಿಕ ಆರೋಗ್ಯ ಸಮಸ್ಯೆಗಳು ಅಥವಾ ವ್ಯಾಯಾಮ ಸಂಬಂಧಿತ ಅನುಮಾನಗಳಿದ್ದರೆ ವೈದ್ಯರು ಅಥವಾ ಅರ್ಹ ಫಿಟ್ನೆಸ್ ತಜ್ಞರನ್ನು ಸಂಪರ್ಕಿಸಿ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ನೀರಾವರಿ ಪೈಪ್‌ಲೈನ್ ಒಡೆದು ಆಕಾಶದೆತ್ತರಕ್ಕೆ ಚಿಮ್ಮಿದ ನೀರು: ಓಡೋಡಿ ಬಂದ ಗ್ರಾಮಸ್ಥರು – Kannada News | Water Pipeline Bursts, Massive Jet of Water Shoots Into the Air; Villagers Rush to the Spot

ಬಾಗಲಕೋಟೆ, ಜುಲೈ 17: ಜಿಲ್ಲೆಯ ಜಮಖಂಡಿ ತಾಲೂಕಿನ ಕವಟಗಿ ಗ್ರಾಮದಲ್ಲಿ ಬಬಲೇಶ್ವರ-ತುಬಚಿ ಏತನೀರಾವರಿ ಯೋಜನೆಯ ಮುಖ್ಯ ಪೈಪ್‌ಲೈನ್ ಒಡೆದ ಪರಿಣಾಮ ಗಗನದೆತ್ತರಕ್ಕೆ ನೀರು ಚಿಮ್ಮಿದ ಘಟನೆ ನಡೆದಿದೆ. ಪೈಪ್‌ಲೈನ್ ಸಂಪೂರ್ಣವಾಗಿ ಹಾನಿಗೊಳಗಾದ ಪರಿಣಾಮ ಬೃಹತ್ ಪ್ರಮಾಣದಲ್ಲಿ ನೀರು ಆಕಾಶದತ್ತ ಚಿಮ್ಮಿದೆ. ಸುತ್ತಲಿನ ಹೊಲಗದ್ದೆಗಳು ಹಾಗೂ ರಸ್ತೆಗೆ ನೀರು ಹರಿದಿದೆ. ಇದರಿಂದಾಗಿ ಅಪಾರ ಪ್ರಮಾಣದ ನೀರು ಪೋಲಾಗಿದೆ. ರೈತರ ಬೆಳೆಗಳಿಗೆ ಹಾನಿಯಾಗುವ ಭೀತಿ ಎದುರಾಗಿದೆ. ಇನ್ನು ಆಕಾಶದೆತ್ತರಕ್ಕೆ ಚಿಮ್ಮಿದ ನೀರಿನ ದೃಶ್ಯವು ನೋಡುಗರಲ್ಲಿ ತೀವ್ರ ಅಚ್ಚರಿ ಹಾಗೂ ಕೌತುಕವನ್ನು ಮೂಡಿಸಿದೆ. ಘಟನೆಯಿಂದಾಗಿ ಸ್ಥಳೀಯ ನಿವಾಸಿಗಳು ಹಾಗೂ ರೈತರು ಆತಂಕಗೊಂಡಿದ್ದು, ಸಂಬಂಧಪಟ್ಟ ನೀರಾವರಿ ಇಲಾಖೆಯ ಅಧಿಕಾರಿಗಳು ತಕ್ಷಣವೇ ಸ್ಥಳಕ್ಕೆ ಆಗಮಿಸಿ, ಪೈಪ್‌ಲೈನ್ ದುರಸ್ತಿಗೊಳಿಸಿ ನೀರು ಪೋಲಾಗುವುದನ್ನು ತಡೆಯಬೇಕೆಂದು ಒತ್ತಾಯಿಸಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

Exit mobile version