Headlines

ಮುಂಬೈನಲ್ಲಿರುವ ಮಹಾರಾಷ್ಟ್ರ ವಿಧಾನ ಭವನಕ್ಕೆ ಬಾಂಬ್ ಬೆದರಿಕೆ

ಮುಂಬೈ, ಮಾರ್ಚ್​ 12: ಮುಂಬೈನಲ್ಲಿರುವ ಮಹಾರಾಷ್ಟ್ರ ವಿಧಾನಭವನಕ್ಕೆ ಬಾಂಬ್ ಬೆದರಿಕೆ(Bomb Threat) ಬಂದಿದೆ. ಇ-ಮೇಲ್ ಮೂಲಕ ಬೆದರಿಕೆ ಹಾಕಲಾಗಿದ್ದು, ತಕ್ಷಣದ ಭದ್ರತಾ ಕ್ರಮ ಕೈಗೊಳ್ಳಲಾಗಿದೆ. ಬಾಂಬ್ ನಿಷ್ಕ್ರಿಯ ದಳ (ಬಿಡಿಎಸ್) ಸೇರಿದಂತೆ ಪೊಲೀಸ್ ತಂಡಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸುತ್ತಿವೆ. ಇಂದು(ಮಾರ್ಚ್​​12) ಬೆಳಗ್ಗೆ ಬಿಎಸ್‌ಇ, ವಿಧಾನ ಭವನ ಮತ್ತು ಬಾಂಬೆ ಹೈಕೋರ್ಟ್‌ಗೆ ಬೆದರಿಕೆ ಇ-ಮೇಲ್‌ಗಳು ಬಂದಿವೆ. ಎಲ್ಲಾ ಸ್ಥಳಗಳಲ್ಲಿ ಸಾಕಷ್ಟು ಭದ್ರತಾ ಕ್ರಮಗಳನ್ನು ಅಳವಡಿಸಲಾಗಿದೆ. ಮುಂಬೈ ಪೊಲೀಸರ ಪ್ರಕಾರ, ಆಯಾ ಪೊಲೀಸ್ ಠಾಣೆಗಳಲ್ಲಿ ಸಂಬಂಧಿತ ಕಾನೂನು ಕ್ರಮಗಳನ್ನು…

Read More

ಪೆಟ್ರೋಲ್, ಡೀಸೆಲ್ ಖಾಲಿ ವದಂತಿ: ಚಾಮರಾಜನಗರ, ಕೊಳ್ಳೇಗಾಲದಲ್ಲಿ ಬಂಕ್​ಗಳಿಗೆ ಮುಗಿಬಿದ್ದ ವಾಹನ ಸವಾರರು

ಚಾಮರಾಜನಗರ, ಮಾರ್ಚ್ 21: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮದ ಆತಂಕ ನಡುವೆ ಚಾಮರಾಜನಗರ ಜಿಲ್ಲೆಯಲ್ಲಿ ಪೆಟ್ರೋಲ್ ಕೊರತೆ ವದಂತಿ ಭಾರೀ ಗೊಂದಲಕ್ಕೆ ಕಾರಣವಾಗಿದೆ. ಜಿಲ್ಲೆಯ ಚಾಮರಾಜನಗರ ಹಾಗೂ ಕೊಳ್ಳೇಗಾಲ ಪಟ್ಟಣಗಳಲ್ಲಿ ಪೆಟ್ರೋಲ್ ಸಿಗುವುದಿಲ್ಲ ಎಂಬ ವದಂತಿ ಹಬ್ಬಿದ್ದು, ವಾಹನ ಸವಾರರು ಏಕಾಏಕಿ ಪೆಟ್ರೋಲ್ ಬಂಕ್‌ಗಳತ್ತ ಮುಗಿಬಿದ್ದರು. ಇದರಿಂದ ಹಲವು ಬಂಕ್‌ಗಳಲ್ಲಿ ಉದ್ದ ಸಾಲುಗಳು ಕಂಡುಬಂದವು. ಗ್ಯಾಸ್ ಕೊರತೆಯಂತೆಯೇ ಪೆಟ್ರೋಲ್ ಹಾಗೂ ಡೀಸೆಲ್‌ಗೂ ಸಮಸ್ಯೆ ಉಂಟಾಗಬಹುದು ಎಂಬ ಭಯ ಜನರಲ್ಲಿ ಹೆಚ್ಚಾಗಿದ್ದು, ಮುಂಜಾಗ್ರತೆಯಾಗಿ ಹೆಚ್ಚಿನ ಪ್ರಮಾಣದಲ್ಲಿ ಇಂಧನ ಖರೀದಿಸಲು…

Read More

KITS Recruitment 2026: KITSನಲ್ಲಿ ಸಹಾಯಕ ವ್ಯವಸ್ಥಾಪಕ ಹುದ್ದೆಗೆ ನೇಮಕಾತಿ; ಹೀಗೆ ಅರ್ಜಿ ಸಲ್ಲಿಸಿ – Kannada News | KITS Recruitment 2026: Assistant Manager Jobs in Bangalore, Apply by Jan 22!

ಕರ್ನಾಟಕ ಇನ್ನೋವೇಶನ್ ಆ್ಯಂಡ್​ ಟೆಕ್ನಾಲಜಿ ಸೊಸೈಟಿ (KITS) ಅಧಿಕೃತ ಅಧಿಸೂಚನೆಯ ಮೂಲಕ ಸಹಾಯಕ ವ್ಯವಸ್ಥಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ಸರ್ಕಾರದಲ್ಲಿಡಿಯಲ್ಲಿ ಬೆಂಗಳೂರಿನಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಜನವರಿ 22 ರ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸತಕ್ಕದ್ದು. KITS ಹುದ್ದೆಯ ಅಧಿಸೂಚನೆ: ಸಂಸ್ಥೆಯ ಹೆಸರು : ಕರ್ನಾಟಕ ಇನ್ನೋವೇಶನ್ ಆ್ಯಂಡ್ ಟೆಕ್ನಾಲಜಿ ಸೊಸೈಟಿ ( KITS ) ಹುದ್ದೆಗಳ ಸಂಖ್ಯೆ: 3…

Read More

ಕಥೆಕದ್ದ ಆರೋಪದ ಬೆನ್ನಲ್ಲೇ ‘ಧುರಂಧರ್ 2’ ಚಿತ್ರಕ್ಕೆ ಮತ್ತೊಂದು ಶಾಕ್; ಪ್ರಮುಖ ಹಾಡು ಡಿಲೀಟ್?

‘ಧುರಂಧರ್ 2’ (Dhurandhar 2) ರಿಲೀಸ್ ಆಗಿ ತಿಂಗಳು ಕಳೆಯುತ್ತಾ ಬರುತ್ತಿರುವಾಗ ಚಿತ್ರಕ್ಕೆ ತೊಂದರೆ ಮೇಲೆ ತೊಂದರೆ ಎದುರಾಗುತ್ತಿದೆ. ಇತ್ತೀಚೆಗೆ ಈ ಚಿತ್ರದ ಕಥೆ ಕದ್ದಿದ್ದು ಎಂಬ ಆರೋಪ ಕೇಳಿ ಬಂದಿತ್ತು. ಈ ಬೆನ್ನಲ್ಲೇ ಸಿನಿಮಾದ ಹಾಡೊಂದಕ್ಕೆ ಕತ್ತರಿ ಬೀಳುತ್ತದೆಯೇ ಎನ್ನುವ ಪ್ರಶ್ನೆ ಮೂಡಿದೆ. ಆ ಹಾಡನ್ನು ಉಳಿಸಿಕೊಳ್ಳಬೇಕು ಎಂದಾದರೆ ಇವರು ದೊಡ್ಡ ಮೊತ್ತ ಪಾವತಿಸಬೇಕಾಗಿ ಬರಹುದು ಎಂದು ಹೇಳಲಾಗುತ್ತಾ ಇದೆ. ಆ ಬಗ್ಗೆ ಇಲ್ಲಿದೆ ವಿವರ. ‘ಧುರಂಧರ್ 2’ ಸಿನಿಮಾನ ಆದಿತ್ಯ ಧಾರ್ ಹಾಗೂ ಜಿಯೋ…

Read More

ಫೆಬ್ರುವರಿ 2026ರಲ್ಲಿ ರೀಟೇಲ್ ಹಣದುಬ್ಬರ ಶೇ. 3.21ಕ್ಕೆ ಏರಿಕೆ; ಆರ್​ಬಿಐ ಮಿತಿಯಲ್ಲಿ ಬೆಲೆ ಏರಿಕೆ

ನವದೆಹಲಿ, ಮಾರ್ಚ್ 12: ಭಾರತದ ರೀಟೇಲ್ ಹಣದುಬ್ಬರ (Retail Inflation) ಫೆಬ್ರುವರಿಯಲ್ಲಿ ಶೇ. 3.21ರಷ್ಟಿರುವುದು ದಾಖಲಾಗಿದೆ. ಜನವರಿಯಲ್ಲಿ ಹಣದುಬ್ಬರ ಶೇ. 2.74ರಷ್ಟಿತ್ತು. ಫೆಬ್ರುವರಿಯಲ್ಲಿ ಸ್ವಲ್ಪ ಮಟ್ಟಿಗೆ ಬೆಲೆ ಏರಿಕೆ ಆಗಿದೆ. ಶೇ. 3.2 ದರವು ಆರ್​ಬಿಐನ ಶೇ. 4ರ ಹಣದುಬ್ಬರ ಮಿತಿಯ ಗುರಿಯೊಳಗೆಯೇ ಇದೆ. ಗ್ರಾಮೀಣ ಭಾಗದಲ್ಲಿ ಫೆಬ್ರುವರಿಯಲ್ಲಿ ಹಣದುಬ್ಬರ ಶೇ. 3.37 ಇದ್ದರೆ, ನಗರ ಭಾಗದಲ್ಲಿ ಅದು ಶೇ. 3.02ರಷ್ಟಿದೆ. ಗ್ರಾಹಕ ಆಹಾರ ಬೆಲೆ ಅನುಸೂಚಿ ಆಧಾರಿತವಾದ ಹಣದುಬ್ಬರವು ಜನವರಿಯಲ್ಲಿ ಶೇ. 2.13ರಷ್ಟಿತ್ತು. ಫೆಬ್ರುವರಿಯಲ್ಲಿ ಅದು…

Read More

IND vs NZ: ‘ಭಾರತೀಯರ ಹೃದಯ ಒಡೆದು ಟ್ರೋಫಿ ಗೆಲ್ಲುತ್ತೇವೆ’; ಫೈನಲ್​ಗೂ ಮುನ್ನ ಕಿವೀಸ್ ನಾಯಕನ ಹೇಳಿಕೆ

2026 ರ ಟಿ20 ವಿಶ್ವಕಪ್ ಫೈನಲ್ ಪಂದ್ಯ ಭಾರತ ಮತ್ತು ನ್ಯೂಜಿಲೆಂಡ್ ನಡುವೆ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಮಾರ್ಚ್ 8 ರಂದು ನಡೆಯುವ ಫೈನಲ್ ಪಂದ್ಯಕ್ಕೂ ಮುನ್ನ ನಡೆದ ಪತ್ರಿಕಾಗೋಷ್ಠಿಯಲ್ಲಿ ಪರ್ತಕರ್ತರ ಪ್ರಶ್ನೆಗಳಿಗೆ ಉತ್ತರಿಸಿದ ನ್ಯೂಜಿಲೆಂಡ್ ನಾಯಕ ಮಿಚೆಲ್ ಸ್ಯಾಂಟ್ನರ್, ಟ್ರೋಫಿಗಾಗಿ ಕೆಲವು ಹೃದಯಗಳನ್ನು ಒಡೆಯುವುದಕ್ಕೆ ನನಗೆ ಯಾವುದೇ ಅಭ್ಯಂತರವಿಲ್ಲ ಎಂದಿದ್ದಾರೆ. ಅಂದರೆ ಟಿ20 ವಿಶ್ವಕಪ್ ಗೆದ್ದು ಟೀಂ ಇಂಡಿಯಾ ಅಭಿಮಾನಿಗಳ ಹೃದಯ ಒಡೆಯುವುದಕ್ಕೆ ನಾವು ಸಿದ್ಧ ಎಂಬುದು ಕಿವೀಸ್ ನಾಯಕನ ಹೇಳಿಕೆಯಾಗಿದೆ. ಪತ್ರಿಕಾಗೋಷ್ಠಿಯಲ್ಲಿ…

Read More

ಮಂಗಳೂರಿನಲ್ಲಿ ಘೋರ ದುರಂತ: ಬಾಲ್ ಎಂದು ಬಾಂಬ್​​​​​ನಿಂದ ಬೌಲಿಂಗ್: ಬ್ಯಾಟ್​ನಿಂದ ಹೊಡೆದಾಗ ಬ್ಲಾಸ್ಟ್ – Kannada News | Mangaluru: Ball Shaped Object Explodes After Boy Hits It With Bat, Injured

ಸ್ಫೋಟಗೊಂಡ ವಸ್ತು, ಬಾಲಕನ ಕಾಲಿಗೆ ಗಾಯ ಮಂಗಳೂರು, ಫೆಬ್ರವರಿ 19: ಚೆಂಡಿನ ಆಕಾರದ ವಸ್ತು ಸ್ಫೋಟಗೊಂಡು (explosion) ಓರ್ವ ಬಾಲಕನಿಗೆ ಗಾಯವಾಗಿರುವಂತಹ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ‌ ಬಂದಾರು ಗ್ರಾಮದಲ್ಲಿ ನಡೆದಿದೆ. ಘಟನೆಯಲ್ಲಿ ಅಭೀಶ್​ ಎಂಬ ಬಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ರವಾನಿಸಲಾಗಿದೆ. ಆಟ ಆಡುತ್ತಿದ್ದ ವೇಳೆ ಪತ್ತೆ ಚೆಂಡಿನಾಕಾರದ ವಸ್ತು ಪತ್ತೆಯಾಗಿದೆ. ಬಾಲ್​ ಅಂದುಕೊಂಡು ಬ್ಯಾಟ್​ನಿಂದ ಹೊಡೆದಾಗ ಬ್ಲಾಸ್ಟ್ ಆಗಿದೆ. ಸದ್ಯ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ….

Read More

ಅವನ ಸಹವಾಸ ಬೇಡ ಅಂದ್ರೂ ಕೇಳಿಲ್ಲ: ಪ್ರಿಯಕರನ ಅಸಲಿಮುಖ ಬಿಚ್ಚಿಟ್ಟ ಮಂಗಳಮುಖಿ – Kannada News | Love Turns Tragic in Ballary: Transgender Talks about Partners death

ಬಳ್ಳಾರಿ, (ಫೆಬ್ರವರಿ 18): ಪ್ರೀತಿ ಪ್ರೇಮ ಎಂದು ನಂಬಿಸಿ ಕೊನೆಗೆ ಹಣಕ್ಕಾಗಿ ಕೊಲೆ ಮಾಡಿದ್ದಾನೆ ಎಂಬ ಗಂಭೀರ ಆರೋಪಗಳ ನಡುವೆಯೇ ಬಳ್ಳಾರಿಯಲ್ಲಿ ಪ್ರೇಮಿಗಳಿಬ್ಬರ ಮೃತದೇಹಗಳು ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿವೆ. ನಗರದ ಕೆಎಂಎಫ್ (KMF) ಡೈರಿ ಕ್ರಾಸ್ ಬಳಿಯ ಬಾಡಿಗೆ ಮನೆಯಲ್ಲಿ ಈ ದಾರುಣ ಘಟನೆ ನಡೆದಿದೆ. ಮೃತ ದುರ್ದೈವಿಗಳನ್ನು ವಿಜಯನಗರ ಜಿಲ್ಲೆ ಹೊಸಪೇಟೆ ತಾಲೂಕಿನ ಮಲ್ಪನಗುಡಿ ಗ್ರಾಮದ ಆಟೋ ಚಾಲಕ ಶೇಖರ್ ಅಲಿಯಾಸ್ ಮಣಿ (31) ಹಾಗೂ ಬಳ್ಳಾರಿ ತಾಲೂಕಿನ ಚಾಗನೂರ ಗ್ರಾಮದ ನಿವಾಸಿ, ಮಂಗಳಮುಖಿ ಸುಹಾಸಿನಿ…

Read More

SA vs AFG: ಎರಡೆರಡು ಸೂಪರ್​ ಓವರ್​ಗೆ ಸಾಕ್ಷಿಯಾದ ಈ ಪಂದ್ಯದಲ್ಲಿ ಏನೆಲ್ಲಾ ಆಯ್ತು? – Kannada News | T20 World Cup 2026: SA vs AFG Creates History with Double Super Over Thriller!

2026 ರ ಟಿ20 ವಿಶ್ವಕಪ್​ನ (2026 T20 World Cup ) 13ನೇ ಪಂದ್ಯ ದಕ್ಷಿಣ ಆಫ್ರಿಕಾ ಹಾಗೂ ಅಫ್ಘಾನಿಸ್ತಾನ (South Africa vs Afghanistan) ನಡುವೆ ನಡೆಯಿತು. ಅಹಮದಾಬಾದ್​ನಲ್ಲಿ ನಡೆದ ಈ ಪಂದ್ಯ ಟಿ20 ವಿಶ್ವಕಪ್​ ಇತಿಹಾಸದಲ್ಲೇ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಯಿತು. ಏಕೆಂದರೆ ಟಿ20 ವಿಶ್ವಕಪ್ ಇತಿಹಾಸದಲ್ಲಿ ಪಂದ್ಯವೊಂದರಲ್ಲಿ ಎರಡೆರಡು ಸೂಪರ್ ಓವರ್​ಗಳು ನಡೆದಿದ್ದು ಇದೇ ಮೊದಲ ಬಾರಿಗೆ. ಈ ದಾಖಲೆಗೆ ಕಾರಣವಾಗಿದ್ದು, ಆಫ್ರಿಕಾ ಹಾಗೂ ಅಫ್ಘನ್ ತಂಡದ ರಣರೋಚಕ ಹೋರಾಟ. ಹಾಗಿದ್ದರೆ ಈ ಪಂದ್ಯದಲ್ಲಿ…

Read More

Bengaluru Air Quality: ಬೆಂಗಳೂರು, ಮಂಗಳೂರು ಸೇರಿ ಇನ್ನೂ ನಾಲ್ಕು ಜಿಲ್ಲೆಗಳ ಏರ್ ಕ್ವಾಲಿಟಿ ಕಳಪೆ – Kannada News | Bangalore Air Pollution Crisis: Bengaluru, Manglore, Mysore and Belagavi Air quality has gotten worse

ಬೆಂಗಳೂರು, ಮಂಗಳೂರು ಸೇರಿ ಇನ್ನೂ ನಾಲ್ಕು ಜಿಲ್ಲೆಗಳ ಏರ್ ಕ್ವಾಲಿಟಿ ಕಳಪೆ ಬೆಂಗಳೂರು, ಫೆಬ್ರುವರಿ 08: ನಿನ್ನೆ ತಕ್ಕ ಮಟ್ಟಿಗೆ ಸುಧಾರಿಸಿತೆಂದು ಎಂದುಕೊಂಡ ಬೆಂಗಳೂರಿನ ವಾಯು ಗುಣಮಟ್ಟವೀಗ (Bengaluru Air Quality) ಮತ್ತೊಮ್ಮೆ ಕುಸಿತ ಕಂಡಿದೆ. ಅದರೊಂದಿಗೆ ಮಂಗಳೂರು, ಮೈಸೂರು ಮತ್ತು ಬೆಳಗಾವಿಯಲ್ಲೂ ಸಹ ಗಾಳಿಯ ಗುಣಮಟ್ಟ 170ಕ್ಕಿಂತ ಜಾಸ್ತಿಯಾಗಿದೆ. ದಿನದಿಂದ ದಿನಕ್ಕೆ ಈ ನಗರಗಳ AQI ಕುಸಿಯುತ್ತಿದ್ದು, ಮುನ್ನೆಚ್ಚರಿಕೆ ವಹಿಸುವಂತೆ ತಜ್ಞರು ಸಲಹೆ ನೀಡಿದ್ದಾರೆ. ನೂರರ ಆಸುಪಾಸಿದ್ದ AQI  ತಾರಕಕ್ಕೆ! ಕೆಲ ದಿನಗಳ ಹಿಂದೆಯಷ್ಟೇ ತೀವ್ರ…

Read More