Headlines

‘ಬಾಸ್’ ಸಿನಿಮಾಗೆ ತಡೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ ದರ್ಶನ್, ವಿಜಯಲಕ್ಷ್ಮಿ – Kannada News | Darshan Vijayalakshmi move High Court against Boss movie release ft Tanush Shivnna V Lava

ವಿ. ಲವ ನಿರ್ದೇಶನದ ‘ಬಾಸ್’ ಸಿನಿಮಾ (Boss Movie) ಈಗಾಗಲೇ ಸಾಕಷ್ಟು ಸುದ್ದಿ ಆಗಿದೆ. ತನಿಷ್ ಶಿವಣ್ಣ ನಟನೆಯ ಈ ಚಿತ್ರದ ಟೀಸರ್ ಬಿಡುಗಡೆ ಆದ ದಿನದಿಂದಲೂ ವಿವಾದ ಶುರು ಆಗಿದೆ. ನೈಜ ಘಟನೆಗಳನ್ನು ಆಧರಿಸಿ ಈ ಸಿನಿಮಾ ಸಿದ್ಧವಾಗಿದೆ ಎಂಬುದನ್ನು ಟೀಸರ್​ನಲ್ಲಿ ಉಲ್ಲೇಖಿಸಲಾಗಿತ್ತು. ಟೀಸರ್ ನೋಡಿದರೆ ನಟ ದರ್ಶನ್ (Darshan) ಕೇಸ್ ರೀತಿಯೇ ಈ ಸಿನಿಮಾದ ಕಥೆ ಇದೆ ಎಂಬ ಅನುಮಾನ ಮೂಡುತ್ತದೆ. ಆ ಕಾರಣದಿಂದ ದರ್ಶನ್ ಹಾಗೂ ವಿಜಯಲಕ್ಷ್ಮಿ ದರ್ಶನ್ (Vijayalakshmi Darshan) ಅವರು…

Read More

ಮಗನ ಸಿನಿಮಾಕ್ಕೆ ಕರೆತರಲು ಸಜ್ಜಾದ ಧನುಶ್, ಅವರದ್ದೇ ನಿರ್ದೇಶನ – Kannada News | Dhanush planning to direct movie for his son Yatra

ಧನುಶ್ (Dhanush) ಭಾರತೀಯ ಚಿತ್ರರಂಗದ ಸೂಪರ್‌ಸ್ಟಾರ್‌ಗಳಲ್ಲಿ ಒಬ್ಬರು, ಈಗಲೂ ಹಲವಾರು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ತಮಿಳು ಮಾತ್ರವಲ್ಲದೇ ಹಿಂದಿ, ತೆಲುಗು ಹಾಲಿವುಡ್ ಸಿನಿಮಾಗಳಲ್ಲಿಯೂ ಸಹ ಧನುಶ್ ಅವರು ನಟಿಸಿದ್ದಾರೆ. ಧನುಶ್ ಕೇವಲ ನಟರು ಮಾತ್ರವಲ್ಲ ಅವರು ನಿರ್ದೇಶಕರೂ ಸಹ ಹೌದು. ಈ ವರೆಗೆ ನಾಲ್ಕು ಸಿನಿಮಾಗಳನ್ನು ಅವರು ನಿರ್ದೇಶಿಸಿದ್ದಾರೆ. ಧನುಷ್ ಅವರು 2024 ರಲ್ಲಿ ಪತ್ನಿ ಐಶ್ವರ್ಯ ರಜನೀಕಾಂತ್ ಅವರಿಂದ ವಿಚ್ಛೇದನ ಪಡೆದಿದ್ದಾರೆ. ಅವರಿಗೆ ಇಬ್ಬರು ಗಂಡು ಮಕ್ಕಳಿದ್ದಾರೆ. ಇದೀಗ ಧನುಶ್ ಅವರು ತಮ್ಮ ಮಕ್ಕಳನ್ನು ಚಿತ್ರರಂಗಕ್ಕೆ ಕರೆತರಲು…

Read More

ಧರ್ಮಸ್ಥಳ ಬುರುಡೆ ಪ್ರಕರಣದ SIT ತಂಡ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ – Kannada News | Dharmasthala Mass Burial Case SIT SP’s Car overturns Near Charmadi Ghat at Mangaluru

ಮಂಗಳೂರು,(ಜೂನ್,16): ಧರ್ಮಸ್ಥಳದ ಬುರುಡೆ ಪ್ರಕರಣದ (Dharmasthala Mass Burial Case )ತನಿಖೆ ನಡೆಸುತ್ತಿದ್ದ ಎಸ್ ಐಟಿ ಪೊಲೀಸ್ ವರಿಷ್ಠಾಧಿಕಾರಿ ಸೈಮನ್ ಪ್ರಯಾಣಿಸುತ್ತಿದ್ದ ಕಾರು ಪಲ್ಟಿಯಾಗಿದೆ. ದಕ್ಷಿಣ ಕನ್ನಡ ( ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಘಾಟ್ (Charmadi Ghat) ರಸ್ತೆಯ ತಿರುವಿನಲ್ಲಿ ಈ ಘಟನೆ ನಡೆದಿದೆ. ದೇಶಾದ್ಯಂತ ಭಾರೀ ಸಂಚಲನ ಮೂಡಿಸಿರುವ ಧರ್ಮಸ್ಥಳದ ಬುರುಡೆ ಪ್ರಕರಣದ ತನಿಖೆಯನ್ನು ಎಸ್‌ಐಟಿ ಎಸ್ ಪಿ ಸೈಮನ್ ಅವರು ನಡೆಸುತ್ತಿದ್ದು, ಇದೇ ಪ್ರಕರಣ ಸಂಬಂಧ ಚರ್ಚಿಸಲು ಚಿಕ್ಕಮಗಳೂರು ಎಸ್ಪಿ ಹಾಗೂ ಎಸ್…

Read More

ನಿಯತ್ತಿಲ್ಲದವರು ಪಕ್ಷ ಬಿಟ್ಟು ಹೋಗಬಹುದು; ‘ಆಪರೇಷನ್ ಟೈಗರ್’ ಬೆನ್ನಲ್ಲೇ ಸಂಸದರಿಗೆ ಉದ್ಧವ್ ಠಾಕ್ರೆ ಎಚ್ಚರಿಕೆ – Kannada News | Those Who Want To Leave Can free to Go; Uddhav Thackeray’s big statement To Shiv Sena MPs Amid Operation Tiger row

ಮುಂಬೈ, ಜೂನ್ 16: ಮಹಾರಾಷ್ಟ್ರದಲ್ಲಿ ಶಿವಸೇನೆ (UBT) ಸಂಸದರ ಪಕ್ಷಾಂತರದ ಕುರಿತು ಹರಡುತ್ತಿರುವ ವದಂತಿಗಳಿಗೆ ಸ್ವತಃ ಉದ್ಧವ್ ಠಾಕ್ರೆ (Uddhav Thackeray) ಅವರೇ ಅಂತಿಮ ತೆರೆ ಎಳೆಯಲು ಮುಂದಾಗಿದ್ದಾರೆ. ಶಿಂಧೆ ಬಣವು ತಮ್ಮ ಸಂಸದರನ್ನು ಸೆಳೆಯಲು ನಡೆಸುತ್ತಿದೆ ಎನ್ನಲಾದ ‘ಆಪರೇಷನ್ ಟೈಗರ್’ ಚರ್ಚೆಗಳ ಮಧ್ಯೆ, ಉದ್ಧವ್ ಠಾಕ್ರೆ ತಮ್ಮ ಸಂಸದರು ಮತ್ತು ಹಿರಿಯ ನಾಯಕರ ತುರ್ತು ಸಭೆ ನಡೆಸಿ ಗಟ್ಟಿಯಾದ ನಿಲುವು ಪ್ರಕಟಿಸಿದ್ದಾರೆ. ವಿರೋಧ ಪಕ್ಷಗಳ ಆಮಿಷ ಅಥವಾ ಒತ್ತಡಕ್ಕೆ ಮಣಿಯುವವರಿಗೆ ಶಿವಸೇನೆಯಲ್ಲಿ ಜಾಗವಿಲ್ಲ ಎಂದು ಅವರು…

Read More

ಅಜ್ಜಿಯ ಪಾರ್ಥಿವ ಶರೀರ ಕಂಡು ಕಣ್ಣೀರಿಟ್ಟ ವಿಜಯ್ ರಾಘವೇಂದ್ರ ಮಗ ಶೌರ್ಯ – Kannada News | Vijay Raghavendra son Shourya pays last respect to grandmother Jayamma

ಕನ್ನಡ ಚಿತ್ರರಂಗದ ಜನಪ್ರಿಯ ನಟರಾದ ವಿಜಯ್ ರಾಘವೇಂದ್ರ ಹಾಗೂ ಶ್ರೀಮುರಳಿ ಅವರ ತಾಯಿ, ಹಿರಿಯ ನಿರ್ಮಾಪಕ ಎಸ್.ಎ. ಚಿನ್ನೇಗೌಡ ಅವರ ಪತ್ನಿ ಜಯಮ್ಮ (Jayamma) ಇಂದು (ಜೂನ್ 16) ಬೆಂಗಳೂರಿನಲ್ಲಿ ನಿಧನರಾದರು. ಕುಟುಂಬದ ಸದಸ್ಯರು ಮತ್ತು ಅನೇಕ ಸೆಲೆಬ್ರಿಟಿಗಳು ಬಂದು ಅಂತಿಮ ದರ್ಶನ ಪಡೆದಿದ್ದಾರೆ. ವಿಜಯ್ ರಾಘವೇಂದ್ರ ಪುತ್ರ ಶೌರ್ಯ ಅವರು ಅಜ್ಜಿಯ ಪಾರ್ಥಿವ ಶರೀರದ ಮುಂದೆ ಭಾವುಕವಾಗಿ ನಿಂತರು. ಕಳೆದ ಕೆಲವು ದಿನಗಳಿಂದ ಜಯಮ್ಮ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು. ಅವರ ಅಗಲಿಕೆಗೆ…

Read More

ಕರ್ನಾಟಕದಲ್ಲಿ ಮತ್ತೆ ರೆಸಾರ್ಟ್ ರಾಜಕಾರಣ: ಕಾಂಗ್ರೆಸ್ ಶಾಸಕರು ರೆಸಾರ್ಟ್​​ಗೆ ಶಿಫ್ಟ್ – Kannada News | Resort Politics returns In Karnataka Over Assembly Council Elections, Congress MLAs Shift

ಬೆಂಗಳೂರು, (ಜೂನ್ 16)​​: ಚುನಾವಣೆ ನಡೆದ ಸಂದರ್ಭಗಳಲ್ಲಿ ಯಾವುದೇ ಒಂದು ಪಕ್ಷಕ್ಕೆ ಬಹುಮತ ಬರದೇ ಹೋದಾಗ ಅಥವಾ ದಿಢೀರ್​ ರಾಜಕೀಯ ಅರಾಜಕತೆ ಉಂಟಾದಾಗ ವಿವಿಧ ಪಕ್ಷಗಳು ಸರ್ಕಾರ ರಚನೆ ಮಾಡಲು ಮುಂದಾಗಿ ಶಾಸಕರನ್ನು ಸೆಳೆಯಲು ಮುಂದಾಗುವುದು ಸಾಮಾನ್ಯ​. ಈ ವೇಳೆ ತಮ್ಮ ಪಕ್ಷದ ಸದಸ್ಯರನ್ನ ಸೇಫ್​ ಆಗಿ ಉಳಿಸಿಕೊಳ್ಳುವ ಉದ್ದೇಶದಿಂದ ವಿವಿಧ ಪಕ್ಷಗಳು ರೆಸಾರ್ಟ್​ ರಾಜಕೀಯದ (Resort Politics) ಮೊರೆ ಹೋಗುತ್ತವೆ. ಇದಕ್ಕೆ ಪೂರಕವೆಂಬಂತೆ ಈ ಹಿಂದೆ ಕರ್ನಾಟಕದಲ್ಲಿ (karnataka) ರೆಸಾರ್ಟ್ ರಾಜಕಾರಣ ನಡೆದಿತ್ತು. ಇದೀಗ ಮತ್ತೆ…

Read More

Car Vastu Tips: ಸುರಕ್ಷಿತ ಪ್ರಯಾಣಕ್ಕಾಗಿ ಕಾರಿನಲ್ಲಿ ಯಾವ ದೇವರ ವಿಗ್ರಹ ಇಡಬೇಕು? ಇಲ್ಲಿದೆ ವಾಸ್ತು ಸಲಹೆಗಳು! – Kannada News | Car Vastu Tips: Best God Idols for Safety and Positive Energy in Your Vehicle

ಕಾರಿನಲ್ಲಿ ದೇವರ ಮೂರ್ತಿ ಇಡಬಹುದೇ?Image Credit source: Pinterest ವಾಸ್ತು ಶಾಸ್ತ್ರವು ದೈನಂದಿನ ಜೀವನದೊಂದಿಗೆ ಆಳವಾದ ಸಂಬಂಧವನ್ನು ಹೊಂದಿದೆ. ಮನೆ, ಕಚೇರಿ ಅಥವಾ ವ್ಯಾಪಾರ ಸ್ಥಳ ಮಾತ್ರವಲ್ಲದೆ, ನಾವು ದಿನನಿತ್ಯ ಪ್ರಯಾಣಿಸುವ ಕಾರಿನಲ್ಲಿಯೂ ವಾಸ್ತು ನಿಯಮಗಳು ಅನ್ವಯಿಸುತ್ತವೆ ಎಂಬುದು ನಿಮಗೆ ತಿಳಿದಿದೆಯೇ? ಕಾರು ನಮ್ಮ ಎರಡನೇ ಮನೆಯಂತಿದ್ದಾಗ, ಅಲ್ಲಿ ಸಕಾರಾತ್ಮಕ ಶಕ್ತಿ ನೆಲೆಸುವಂತೆ ಮಾಡುವುದು ಮುಖ್ಯ. ಹಿಂದೂ ಧರ್ಮದ ಪ್ರಕಾರ ದೇವರು ಸರ್ವವ್ಯಾಪಿಯಾಗಿದ್ದಾನೆ, ಆದ್ದರಿಂದ ಕಾರಿನಲ್ಲಿ ದೇವರ ವಿಗ್ರಹವನ್ನು ಇಡುವುದು ತಪ್ಪಲ್ಲ. ಮನಸ್ಸಿನಲ್ಲಿ ಭಕ್ತಿ ಇದ್ದರೆ, ಆ…

Read More

ಕೆಲವೇ ಎಐ ಮಾಡಲ್​ಗಳು ಇಡೀ ಉದ್ಯಮವನ್ನೇ ನುಂಗಿ ನೀರು ಕುಡಿಯಲು ಬಿಡಬಾರದು: ಮೈಕ್ರೋಸಾಫ್ಟ್ ಸಿಇಒ ಸತ್ಯ ನಾಡೆಲ್ಲಾ – Kannada News | Satya Nadella warns AI could leave entire industries struggling if control stays with few companies

ವಾಷಿಂಗ್ಟನ್, ಜೂನ್ 16: ಮೈಕ್ರೋಸಾಫ್ಟ್ (Microsoft) ಕಂಪನಿಯ ಸಿಇಒ ಸತ್ಯ ನಾಡೆಳ್ಳ (Satya Nadella) ಅವರು ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನದ ಭವಿಷ್ಯದ ಕುರಿತು ಜಾಗತಿಕ ಉದ್ಯಮ ರಂಗಕ್ಕೆ ದೊಡ್ಡ ಎಚ್ಚರಿಕೆಯೊಂದನ್ನು ನೀಡಿದ್ದಾರೆ. “ಎಐ ತಂತ್ರಜ್ಞಾನದ ಸಂಪೂರ್ಣ ಲಾಭ ಮತ್ತು ಮೌಲ್ಯವು ಕೇವಲ ಕೆಲವು ದೈತ್ಯ ಕಂಪನಿಗಳ ಕೈಯಲ್ಲೇ ಉಳಿದುಬಿಟ್ಟರೆ, ಇಡೀ ಉದ್ಯಮ ರಂಗವೇ ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಬಹುದು ಮತ್ತು ನಾಶವಾಗಬಹುದು” ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ. ಜಾಗತೀಕರಣದ ಸಂದರ್ಭದಲ್ಲಾಗಿದ್ದ ತಪ್ಪು ಮರುಕಳಿಸದಿರಲಿ ಹಿಂದೆ ಜಾಗತೀಕರಣದ…

Read More

ಮೈದಾನದಲ್ಲೇ ಹೊಡೆದಾಡಿಕೊಂಡ್ರಾ ಭಾರತ- ಪಾಕ್ ಆಟಗಾರ್ತಿಯರು? ವೈರಲ್ ವಿಡಿಯೋದ ಅಸಲಿಯತ್ತೇನು? – Kannada News | Fake AI Video Debunked: India Women Thrash Pakistan in T20 WC 2026 Clash

ಜೂನ್ 14 ರಂದು 2026 ರ ಮಹಿಳಾ ಟಿ20 ವಿಶ್ವಕಪ್‌ನಲ್ಲಿ ( Women’s T20 World Cup) ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಹಾಗೂ ಪಾಕಿಸ್ತಾನ (India vs Pakistan) ಮಹಿಳಾ ತಂಡಗಳ ನಡುವೆ ಪಂದ್ಯ ನಡೆದಿತ್ತು. ಆ ಪಂದ್ಯವನ್ನು ಭಾರತ ಮಹಿಳಾ ತಂಡ ಏಕಪಕ್ಷೀಯವಾಗಿ ಗೆದ್ದುಕೊಂಡಿತ್ತು. ಆದಾಗ್ಯೂ ಪಂದ್ಯ ಆರಂಭಕ್ಕೂ ಮುನ್ನ ಅಂದರೆ ಟಾಸ್ ಸಮಯದಲ್ಲಿ ಹಾಗೂ ಪಂದ್ಯ ಮುಗಿದ ಬಳಿಕ ಉಭಯ ತಂಡಗಳ ಆಟಗಾರ್ತಿಯರು ಶೇಕ್​ಹ್ಯಾಂಡ್ ಮಾಡದಿರುವುದು ವಿವಾದಕ್ಕೆ ಕಾರಣವಾಗಿತ್ತು. ಇದನ್ನು ಹೊರತುಪಡಿಸಿದರೆ ಬೇರೆ ಯಾವ…

Read More

ಐಎಎಫ್ ಅಧಿಕಾರಿಯ ಪತ್ನಿ ಮೇಲೆ ಲೈಂಗಿಕ ದೌರ್ಜನ್ಯ, ಬಲವಂತದ ಮತಾಂತರ – Kannada News | IAF officer;s wife drugged, raped, forced to convert religion in Nagpur

ನಾಗ್ಪುರ, ಜೂನ್ 16: ಮಹಾರಾಷ್ಟ್ರದ ನಾಗ್ಪುರದಲ್ಲಿ ಭಾರತೀಯ ವಾಯುಪಡೆಯ (ಐಎಎಫ್) ಅಧಿಕಾರಿಯ ಪತ್ನಿ ಅತ್ಯಾಚಾರ, ಬ್ಲ್ಯಾಕ್‌ಮೇಲ್ ಮತ್ತು ಬಲವಂತದ ಮತಾಂತರದ ಆರೋಪದ ಮೇಲೆ ಪೊಲೀಸ್ ದೂರು ದಾಖಲಿಸಿದ್ದಾರೆ. ನನ್ನನ್ನು ಬಿಟ್ಟುಬಿಡಿ ಎಂದು 24 ವರ್ಷದ ಯುವತಿಯೊಬ್ಬಳು ಅಳುತ್ತಾ ಕೈಬಿಡಿಸಿಕೊಳ್ಳಲು ಹೆಣಗಾಡುತ್ತಿರುವ ವೀಡಿಯೊವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ (Viral Video) ಆಗಿದೆ. ಈ ಆಘಾತಕಾರಿ ವೀಡಿಯೊ ಭಾರತೀಯ ವಾಯುಪಡೆ (IAF) ಅಧಿಕಾರಿಯೊಬ್ಬರ ಪತ್ನಿಯ ಮೇಲೆ ನಡೆದಿರುವ ಭೀಕರ ದೌರ್ಜನ್ಯದ ಪ್ರಮುಖ ಸಾಕ್ಷಿಯಾಗಿದೆ. ನಾಗ್ಪುರದಲ್ಲಿ ಯುವತಿಗೆ ಡ್ರಗ್ಸ್ ನೀಡಿ ಅತ್ಯಾಚಾರ…

Read More