ಭಾರತದ 161 ಟಿ20 ಪಂದ್ಯಗಳನ್ನಾಡಿರುವ ಸ್ಮೃತಿ ಮಂಧಾನ ಒಟ್ಟು 4,244 ರನ್ ಕಲೆಹಾಕಿದ್ದಾರೆ. ಈ ಮೂಲಕ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಅತೀ ಹೆಚ್ಚು ರನ್ ಕಲೆಹಾಕಿದ ಭಾರತೀಯ ಬ್ಯಾಟರ್ ಎಂಬ ಹೆಗ್ಗಳಿಕೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.
ಭಾರತದ 161 ಟಿ20 ಪಂದ್ಯಗಳನ್ನಾಡಿರುವ ಸ್ಮೃತಿ ಮಂಧಾನ ಒಟ್ಟು 4,244 ರನ್ ಕಲೆಹಾಕಿದ್ದಾರೆ. ಈ ಮೂಲಕ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಅತೀ ಹೆಚ್ಚು ರನ್ ಕಲೆಹಾಕಿದ ಭಾರತೀಯ ಬ್ಯಾಟರ್ ಎಂಬ ಹೆಗ್ಗಳಿಕೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.
ಬೆಂಗಳೂರು, ಏಪ್ರಿಲ್ 18: ದಕ್ಷಿಣ ಆಫ್ರಿಕಾದಿಂದ ತರಲಾಗಿರುವ ನಾಲ್ಕು ಚೀತಾಗಳು ಬನ್ನೇರುಘಟ್ಟ ಜೈವಿಕ ಉದ್ಯಾನವನದ ಪುನರ್ವಸತಿ ಕೇಂದ್ರಕ್ಕೆ ಸುರಕ್ಷಿತವಾಗಿ ಆಗಮಿಸಿವೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ತಡರಾತ್ರಿ ತರಲಾಗಿರುವ ಈ ಎರಡು ಗಂಡು ಹಾಗೂ ಎರಡು ಹೆಣ್ಣು ಚೀತಾಗಳನ್ನು 40 ದಿನಗಳ ಕಾಲ ಕ್ವಾರಂಟೈನ್ನಲ್ಲಿ ಇರಿಸಲಾಗುತ್ತದೆ.
ಉದ್ಯಾನವನದ ವೈದ್ಯರ ನಿಗಾದಲ್ಲಿ ಅವುಗಳ ಆರೋಗ್ಯ ಮತ್ತು ಚಲನವಲನಗಳನ್ನು ನಿಗಾ ವಹಿಸಲಾಗುತ್ತಿದೆ. ಈ ಅವಧಿ ಬಳಿಕ ತಜ್ಞರ ಪರಿಶೀಲನೆ ನಡೆಸಿ, ಚೀತಾಗಳು ಸ್ಥಳೀಯ ಹವಾಮಾನಕ್ಕೆ ಹೊಂದಿಕೊಂಡಿರುವುದನ್ನು ಖಚಿತಪಡಿಸಿಕೊಳ್ಳಲಾಗುತ್ತದೆ. ಬಳಿಕ ಪ್ರವಾಸಿಗರ ವೀಕ್ಷಣೆಗೆ ಅವಕಾಶ ನೀಡಲಾಗುತ್ತದೆ. ಸದ್ಯ ಚೀತಾಗಳು ಪುನರ್ವಸತಿ ಕೇಂದ್ರದ ಕ್ವಾರಂಟೈನ್ ಪಂಜರದಲ್ಲಿ ಸುರಕ್ಷಿತವಾಗಿವೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಹಿಂದೂ ಧರ್ಮದಲ್ಲಿ ಅಕ್ಷಯ ತೃತೀಯ ಶಾಶ್ವತ ಸಮೃದ್ಧಿಯ ಸಂಕೇತ. ವೈಶಾಖ ಮಾಸದ ಶುಕ್ಲ ಪಕ್ಷದ ತೃತೀಯ ತಿಥಿಯಂದು ಬರುವ ಈ ದಿನದಂದು ಯಾವುದೇ ಕೆಲಸ ಮಾಡಿದರೂ ಅದು ‘ಕ್ಷಯ’ವಾಗುವುದಿಲ್ಲ (ನಾಶವಾಗುವುದಿಲ್ಲ) ಎಂಬ ನಂಬಿಕೆಯಿದೆ. ಆದರೆ ಈ ಬಾರಿ ಹಬ್ಬದ ದಿನಾಂಕದ ಬಗ್ಗೆ ಜನರಲ್ಲಿ ಗೊಂದಲವಿದೆ. ಅದಕ್ಕೆ ಪಂಚಾಂಗ ರೀತ್ಯಾ ಉತ್ತರ ಇಲ್ಲಿದೆ.
ಪಂಚಾಂಗದ ಪ್ರಕಾರ, ಈ ಬಾರಿಯ ಸಮಯ ಹೀಗಿದೆ:
ಶಾಸ್ತ್ರದ ಪ್ರಕಾರ, ಸೂರ್ಯೋದಯದ ಸಮಯದಲ್ಲಿ ಯಾವ ತಿಥಿ ಇರುತ್ತದೆಯೋ, ಅಂದೇ ಹಬ್ಬವನ್ನು ಆಚರಿಸುವ ‘ಉದಯ ತಿಥಿ’ ಸಂಪ್ರದಾಯವೂ ಇದೆ. ಏಪ್ರಿಲ್ 20ರ ಸೂರ್ಯೋದಯದ ಸಮಯದಲ್ಲಿ ತೃತೀಯಾ ತಿಥಿ ಇರುವುದರಿಂದ ಕೆಲವರು ಅಂದು ಆಚರಿಸುತ್ತಾರೆ.
ಇದನ್ನೂ ಓದಿ: ದೇವರಿಗೆ ದೀಪ ಹಚ್ಚುವಾಗ ಈ ವಿಷ್ಯ ತಿಳಿದಿರಲಿ; ಇದು ನಿಮ್ಮ ಅದೃಷ್ಟವನ್ನೇ ಬದಲಿಸಲಿದೆ
‘ಅಕ್ಷಯ’ ಎಂದರೆ ಎಂದಿಗೂ ಕಡಿಮೆಯಾಗದ್ದು. ಈ ದಿನದಂದು ಮಾಡಿದ ಪ್ರಾರ್ಥನೆ, ದಾನ ಮತ್ತು ಪೂಜೆಯ ಫಲವು ಭಕ್ತರೊಂದಿಗೆ ಶಾಶ್ವತವಾಗಿ ಉಳಿಯುತ್ತದೆ. ಇದು ಕೇವಲ ಸಂಪತ್ತಿನ ಹಬ್ಬವಲ್ಲ, ಇದು ಸಕಾರಾತ್ಮಕತೆಯ ಸಂಕೇತವೂ ಹೌದು.
ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಬೆಂಗಳೂರು, ಏಪ್ರಿಲ್ 18: ಸಿಎಂ ಸಿದ್ದರಾಮಯ್ಯ ರಾಜ್ಯದ ಪಾಲಿಗೆ ಕುತಂತ್ರಿಯಾಗಿದ್ದು, ಸದ್ದಿಲ್ಲದೆ ವಿದ್ಯುತ್ ದರ ಏರಿಕೆ ಮಾಡಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ್ ಟೀಕಿಸಿದ್ದಾರೆ. ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಜಿಬಿಎ ಚುನಾವಣೆ ಬರುವುದರೊಳಗೆ ಇನ್ನಷ್ಟು ತೆರಿಗೆ ಏರಿಕೆಗೆ ಸಿದ್ಧತೆ ನಡೆದಿದೆ, ಮಾರಿಹಬ್ಬ ಕಾದಿದೆ ಎಂದಿದ್ದಾರೆ. ಅಲ್ಲದೆ, ಕಾಂಗ್ರೆಸ್ ಪಕ್ಷ ಒಳಜಗಳದಿಂದ ಬಡವಾಗಿದೆ. ನಾಯಕತ್ವವೇ ಇಲ್ಲದೆ ಸೊರಗಿದೆ ಎಂದು ಟೀಕಿಸಿದ್ದಾರೆ.
ಕಾಂಗ್ರೆಸ್ ಪಕ್ಷದಲ್ಲಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಬಣಗಳ ನಡುವೆ ಆಂತರಿಕ ಸಂಘರ್ಷ ತೀವ್ರಗೊಂಡಿದೆ. ಸಿದ್ದರಾಮಯ್ಯ ಸಣ್ಣ ಸಣ್ಣ ಇಲಿಗಳನ್ನು ಹೊಡೆಯುತ್ತಿದ್ದರೆ, ಡಿಕೆ ಶಿವಕುಮಾರ್ ದೊಡ್ಡ ದೊಡ್ಡ ಹುಲಿಗಳನ್ನು ಹೊಡೆಯುತ್ತಿದ್ದಾರೆ ಎಂದು ಅವರು ವ್ಯಂಗ್ಯವಾಡಿದ್ದಾರೆ. ಕ್ಯಾಬಿನೆಟ್ನಿಂದ ತೆಗೆದುಹಾಕಲ್ಪಟ್ಟ ರಾಜಣ್ಣ, ನಾಗೇಂದ್ರ, ಮತ್ತು ಜಮೀರ್ರಂತಹ ಸಿದ್ದರಾಮಯ್ಯ ಬೆಂಬಲಿಗರನ್ನು ವ್ಯವಸ್ಥಿತವಾಗಿ ಪಕ್ಷದಿಂದ ದೂರ ಮಾಡಲಾಗುತ್ತಿದೆ. ದಾವಣಗೆರೆಯ ಜಬ್ಬಾರ್ ಮತ್ತು ಸಿಎಂ ಕಾರ್ಯದರ್ಶಿಯಾಗಿದ್ದ ನಜೀರ್ರನ್ನು ಸಹ ಗೇಟ್ ಪಾಸ್ ನೀಡಿ ಹೊರಹಾಕಲಾಗಿದೆ. ಸಿದ್ದರಾಮಯ್ಯ ಬೆಂಬಲಿಗರಿಗೆ ಕಾಂಗ್ರೆಸ್ನಲ್ಲಿ ಉಳಿಗಾಲವಿಲ್ಲ. ಒಟ್ಟಾರೆ ಕಾಂಗ್ರೆಸ್ ಪಕ್ಷವು ನಾಯಕತ್ವವಿಲ್ಲದೆ ಬೀದಿ ಭಿಕಾರಿಯಾಗಿದೆ ಎಂದು ಅವರು ಟೀಕಿಸಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ವಿಘ್ನೇಶ್ ಶಿವನ್ ಹಾಗೂ ನಯನತಾರಾ ಅವರು (Nayanthara) ವಿವಾಹ ಆಗಿ ನಾಲ್ಕು ವರ್ಷ ಕಳೆಯುತ್ತಾ ಬಂದಿದೆ. 2022ರಲ್ಲಿ ಇವರು ಮದುವೆ ಆದರು. ಈಗ ಹಾಯಾಗಿ ಸಂಸಾರ ನಡೆಸಿಕೊಂಡು ಹೋಗುತ್ತಿದ್ದಾರೆ. ನಯನತಾರಾ ಅವರು ವಿವಿಧ ಸಿನಿಮಾಗಳನ್ನು ಒಪ್ಪಿ ನಟಿಸುತ್ತಿದ್ದಾರೆ. ವಿಘ್ನೇಶ್ ಅವರು ಅಲ್ಲೊಂದು, ಇಲ್ಲೊಂದು ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ. ಇತ್ತೀಚೆಗೆ ವಿಘ್ನೇಶ್ ಅವರು ದಾಂಪತ್ಯದ ಬಗ್ಗೆ ಒಂದು ಅಚ್ಚರಿಯ ವಿಷಯ ಬಿಟ್ಟುಕೊಟ್ಟಿದ್ದಾರೆ.
ವಿಘ್ನೇಶ್ ನಿರ್ದೇಶನದ ‘ಲವ್ ಇನ್ಶೂರೆನ್ಸ್ ಕಂಪನಿ’ ಸಿನಿಮಾ ಇತ್ತೀಚೆಗೆ ರಿಲೀಸ್ ಆಗಿದೆ. ಈ ಸಿನಿಮಾಗೆ ಪ್ರದೀಪ್ ರಂಗನಾಥನ್ ನಾಯಕ. ಈ ಚಿತ್ರದ ಪ್ರಚಾರದ ವೇಳೆ ವಿಘ್ನೇಶ್ ಅವರು ಪತ್ನಿ ಜೊತೆ ಹೇಗೆ ಬಾಳುತ್ತಿದ್ದೇನೆ ಎಂಬುದನ್ನು ಹೇಳಿದ್ದಾರೆ. ವಿವಾಹಕ್ಕೂ ಮೊದಲೇ ಆದ ಒಂದು ಒಪ್ಪಂದದ ವಿಷಯ ರಿವೀಲ್ ಮಾಡಿದ್ದಾರೆ.
ಸಿಂಹ ದಿನವೂ ಬೇಟೆ ಆಡುವುದಿಲ್ಲ. ಒಮ್ಮೆ ಬೇಟೆ ಆಡಿ ಆಹಾರ ತಿಂದ ಬಳಿಕ ಅದರ ಎದುರು ಯಾವುದೇ ಪ್ರಾಣಿ ಹೋದರೂ ತಿನ್ನೋದಿಲ್ಲ ಎಂಬುದು ವಿಘ್ನೇಶ್ ಮಾತು. ಇದೇ ಪಾಲಿಸಿ ಜೀವನದಲ್ಲೂ ಅಳವಡಿಸಿಕೊಂಡಿದ್ದಾರೆ. ವರ್ಷದಲ್ಲಿ 265 ದಿನ ಮಾತ್ರ ಕೆಲಸ ಮಾಡುವ ಅವರು ಉಳಿದ 100 ದಿನವನ್ನು ತಮಗಾಗಿ ಮೀಸಲಿಡುತ್ತಾರೆ. ಈ ಸಂದರ್ಭದಲ್ಲಿ ಏನೇ ಆದರೂ ಅವರು ಸಿನಿಮಾ ಬಗ್ಗೆ ಆಗಲೀ ಅಥವಾ ಇನ್ನಾವುದೇ ವಿಷಯದ ಬಗ್ಗೆ ಚಿಂತಿಸೋದಿಲ್ಲ. ಆ ಸಮಯವನ್ನು ಅವರು ಸಂಪೂರ್ಣವಾಗಿ ಕುಟುಂಬಕ್ಕೆ ಮೀಸಲಿಡುತ್ತಾರೆ.
‘ನಾವು ಸಿಂಹ ಬೇಟೆ ಆಡಿದಂತೆ ಬದುಕಬೇಕು ಎಂದು ಪ್ರೀತಿಸುತ್ತಿದ್ದ ಕಾಲದಲ್ಲೇ ಒಪ್ಪಂದ ಮಾಡಿಕೊಂಡಿದ್ದೆವು. ಬೇಟೆ ಬಳಿಕ ವಿಶ್ರಾಂತಿ. ಹಾಗೆಯೇ ನಾವು ವರ್ಷದಲ್ಲಿ 265 ದಿನ ಕೆಲಸ ಮಾಡುತ್ತೇವೆ ಮತ್ತು ಉಳಿದ 100 ದಿನ ವಿಶ್ರಾಂತಿ ಪಡೆಯುತ್ತೇವೆ’ ಎಂದು ವಿಘ್ನೇಶ್ ಹೇಳಿದ್ದಾರೆ.
ಇದನ್ನೂ ಓದಿ: ವಿಘ್ನೇಶ್ ಶಿವನ್ನಿಂದ ವಿಚ್ಛೇದನ ಪಡೆಯೋ ವಿಚಾರ: ನಯನತಾರಾ ಕಡೆಯಿಂದಲೇ ಸಿಕ್ತು ಸ್ಪಷ್ಟನೆ
ಅನೇಕ ಸೆಲೆಬ್ರಿಟಿಗಳು ಈ ನಿಯಮ ಪಾಲನೆ ಮಾಡುತ್ತಾರೆ. ಇದರಿಂದ ಅವರಿಗೆ ಕೆಲಸದ ಜೊತೆಗೆ ವೈಯಕ್ತಿಕ ಜೀವನಕ್ಕೂ ಸಮಯ ಕೊಟ್ಟಂತೆ ಆಗಲಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
ನೆಲಮಂಗಲಕ್ಕೆ ಬಂದ ಮಹಾರಾಷ್ಟ್ರಆರ್ಟಿಓ ಅಧಿಕಾರಿಗೆ ‘ಬಿಷ್ಣೋಯ್’ ಗ್ಯಾಂಗ್ ಬೆದರಿಕೆ!
ನೆಲಮಂಗಲ, ಏಪ್ರಿಲ್ 18: ಮಹಾರಾಷ್ಟ್ರ ನೋಂದಣಿ ಇಲ್ಲದೆ ಸಂಚರಿಸುತ್ತಿದ್ದ ಆಟೋ ಚಾಲಕರ ವಿರುದ್ಧ ಕ್ರಮ ಕೈಗೊಳ್ಳುತ್ತಿದ್ದ ಅಧಿಕಾರಿಗಳಿಗೆ ಅಪರಿಚಿತ ಗ್ಯಾಂಗ್ನಿಂದ ಬೆದರಿಕೆ ಕರೆ ಬಂದಿರುವ ಘಟನೆ ಬೆಳಕಿಗೆ ಬಂದಿದೆ. ಆಲ್ ಇಂಡಿಯಾ ಮೋಟಾರ್ ವೆಹಿಕಲ್ ಫೆಡರೇಷನ್ ವತಿಯಿಂದ ಆಯೋಜಿಸಿದ್ದ ಕ್ರಿಕೆಟ್ ಟೂರ್ನಮೆಂಟ್ಗೆ ಆಗಮಿಸಿದ್ದ ಮಹಾರಾಷ್ಟ್ರದ ಆರ್ಟಿಒ ಅಧಿಕಾರಿಗೆ ಬೆದರಿಕೆ ಕರೆ ಬಂದಿದ್ದು, ಈ ಸಂಬಂಧ ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹಾರಾಷ್ಟ್ರದ ಪ್ರಾದೇಶಿಕ ಸಾರಿಗೆ ಕಚೇರಿ (ಆರ್ಟಿಒ) ಅಧಿಕಾರಿ ಪ್ರಸಾದ್ ಶಿವದಾಸ್ ನಾಲ್ವಡೆ ಕಳೆದ ವಾರ ಬೆಂಗಳೂರುಗೆ ಆಗಮಿಸಿ, ಆಲ್ ಇಂಡಿಯಾ ಮೋಟಾರ್ ವೆಹಿಕಲ್ ಫೆಡರೇಷನ್ ವತಿಯಿಂದ ಆಯೋಜಿಸಿದ್ದ ರಸ್ತೆ ಸುರಕ್ಷತಾ ಅಭಿಯಾನದ ಭಾಗವಾಗಿ ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದರು. ಈ ಕಾರ್ಯಕ್ರಮವು ಸೋಲದೇವನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಅಶೋಕ ರೈಸಿಂಗ್ ಸ್ಟಾರ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದಿತ್ತು.
ಏಪ್ರಿಲ್ 12ರಂದು ಗುಣಿ ಅಗ್ರಹಾರ ಪ್ರದೇಶದಲ್ಲಿದ್ದ ವೇಳೆ ಅವರಿಗೆ ಈ ಬೆದರಿಕೆ ಕರೆ ಬಂದಿದ್ದರಿಂದ ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿಯೇ ಈ ಪ್ರಕರಣ ದಾಖಲಾಗಿದ್ದು, ಕರೆ ಮಾಡಿದವರ ಬಗ್ಗೆ ತನಿಖೆ ಆರಂಭಿಸಲಾಗಿದೆ.
ಇದನ್ನೂ ಓದಿ ಬೆಂಗಳೂರಿನಲ್ಲಿ ನಿಲ್ಲದ ಡ್ರ್ಯಾಗ್ ರೇಸ್ ಹಾಗೂ ಸ್ಟಂಟ್ಗಳ ಹುಚ್ಚಾಟ! ವಿಡಿಯೋ ವೈರಲ್
ಅಧಿಕಾರಿಗೆ ರವಿ ಬಿಷ್ಣೋಯಿ ಗ್ಯಾಂಗ್ ಹೆಸರಿನಲ್ಲಿ ಕರೆ ಮಾಡಿ ಬೆದರಿಕೆ ಹಾಕಲಾಗಿದ್ದು, ಆಟೋ ಚಾಲಕರಿಗೆ ಕಠಿಣ ಕ್ರಮ ಕೈಗೊಳ್ಳುತ್ತಿದ್ದೀರಿ, ಇದರ ಪರಿಣಾಮ ನಿಮ್ಮ ಕುಟುಂಬದ ಮೇಲೆ ಬೀಳುತ್ತದೆ ಎಂದು ಧಮ್ಕಿ ಹಾಕಲಾಗಿದೆ ಎನ್ನಲಾಗಿದೆ. ಮಹಾರಾಷ್ಟ್ರದಲ್ಲಿ ದಾಖಲೆ ಇಲ್ಲದ ವಾಹನಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಈ ರೀತಿಯ ಬೆದರಿಕೆ ಹಾಕಿದ್ದಾರೆ ಎಂದು ಅಧಿಕಾರಿಗಳು ಶಂಕಿಸಿದ್ದಾರೆ. ಪ್ರಕರಣದ ಹಿನ್ನೆಲೆ ಹಾಗೂ ಗ್ಯಾಂಗ್ ಸಂಪರ್ಕಗಳ ಬಗ್ಗೆ ಪೊಲೀಸರು ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದಾರೆ.
ವರದಿ: ಮಂಜುನಾಥ್, ಟಿವಿ9 ನೆಲಮಂಗಲ
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On – 12:08 pm, Sat, 18 April 26
ಕ್ರಿಕೆಟ್ ಜಗತ್ತಿನ ‘ಯೂನಿವರ್ಸ್ ಬಾಸ್’ ಎಂದೇ ಖ್ಯಾತರಾಗಿರುವ ಕ್ರಿಸ್ ಗೇಲ್, ಐಪಿಎಲ್ ಇತಿಹಾಸದ ಅತ್ಯಂತ ಯಶಸ್ವಿ ಆಟಗಾರರಲ್ಲಿ ಒಬ್ಬರು. ಆದರೆ, ಇದೇ ಗೇಲ್ ಐಪಿಎಲ್ 2011ರ ಹರಾಜಿನಲ್ಲಿ ಅನ್ಸೋಲ್ಡ್ ಆಗಿದ್ದರು. ಹೀಗೆ ಅನ್ಸೋಲ್ಡ್ ಆಗಿ ತೆರೆಮರೆಗೆ ಸರಿದಿದ್ದ ಕೆರಿಬಿಯನ್ ದೈತ್ಯನಿಗೆ ಮತ್ತೊಂದು ಅವಕಾಶ ಕಲ್ಪಿಸಿದ್ದು ಮತ್ಯಾರೂ ಅಲ್ಲ, ಇಂಡಿಯನ್ ಪ್ರೀಮಿಯರ್ ಲೀಗ್ನ ಮಾಜಿ ಅಧ್ಯಕ್ಷ ಲಲಿತ್ ಮೋದಿ.
ಐಪಿಎಲ್ 2010 ರಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಪರ ಆಡಿದ್ದ ಗೇಲ್ ಕಲೆಹಾಕಿದ್ದು ಕೇವಲ 292 ರನ್ಗಳು ಮಾತ್ರ. ಹೀಗಾಗಿ ಕೆಕೆಆರ್ ಅವರನ್ನು ತಂಡದಿಂದ ಬಿಡುಗಡೆ ಮಾಡಿತ್ತು. ಇತ್ತ 2011ರ ಐಪಿಎಲ್ ಹರಾಜಿನಲ್ಲಿ ಕಾಣಿಸಿಕೊಂಡ ಗೇಲ್ ಅವರನ್ನು ಯಾವುದೇ ಫ್ರಾಂಚೈಸಿ ಖರೀದಿಸಿರಲಿಲ್ಲ.
ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಅವಕಾಶ ಕೈ ತಪ್ಪುತ್ತಿದ್ದಂತೆ ಕ್ರಿಸ್ ಗೇಲ್ ಅಂದಿನ ಐಪಿಎಲ್ ಅಧ್ಯಕ್ಷ ಲಲಿತ್ ಮೋದಿ ಅವರಿಗೆ ಕರೆ ಮಾಡಿದ್ದಾರೆ. ಅಲ್ಲದೆ ನನ್ನನ್ನೇಕೆ ಯಾರು ಖರೀದಿಸಿಲ್ಲ ಎಂದು ಪ್ರಶ್ನಿಸಿದ್ದಾರೆ. ಈ ವೇಳೆ ಲಲಿತ್ ಮೋದಿ ನೀಡಿದ ಉತ್ತರ ಪರ್ಫಾಮೆನ್ಸ್. ನೀನು ಚೆನ್ನಾಗಿ ಆಡಿಲ್ಲ, ಅದಕ್ಕೆ ಯಾರೂ ಖರೀದಿಸಿಲ್ಲ ಎಂಬ ಉತ್ತರ ನೀಡಿದ್ದಾರೆ.
ಇದರಿಂದ ವಿಚಲಿತರಾದ ಕ್ರಿಸ್ ಗೇಲ್, ನನಗೆ ಅವಕಾಶ ಮಾಡಿಕೊಡಿ. ನನ್ನ ಮೇಲೆ ಸಾಕಷ್ಟು ಸಾಲವಿದೆ. ಆ ಸಾಲಗಳನ್ನು ಪಾವತಿಸಲು ನನಗೆ ಹಣದ ಅಗತ್ಯವಿದೆ. ಏನಾದರು ಮಾಡಿ ಒಂದು ಚಾನ್ಸ್ ಕೊಡಿಸುವಂತೆ ಲಲಿತ್ ಮೋದಿ ಅವರಲ್ಲಿ ಮನವಿ ಮಾಡಿದ್ದಾರೆ.
ಕ್ರಿಸ್ ಗೇಲ್ ಅವರ ಸಂಕಷ್ಟ ಕೇಳಿ ಲಲಿತ್ ಮೋದಿ ಅವರು ಮೂರ್ನಾಲ್ಕ ಫ್ರಾಂಚೈಸಿಗಳನ್ನು ಸಂಪರ್ಕಿಸಿದ್ದಾರೆ. ಅಷ್ಟೇ ಅಲ್ಲದೆ ಅವರಿ ಅವಕಾಶ ನೀಡುವಂತೆ ಮನವಿ ಮಾಡಿದ್ದಾರೆ. ಆದರೆ ಎಲ್ಲಾ ಫ್ರಾಂಚೈಸಿಗಳು ಗೇಲ್ ಅವರನ್ನು ತಂಡಕ್ಕೆ ನಿರಾಕರಿಸಿದ್ದವು. ಅತ್ತ ವಿಂಡೀಸ್ ದಾಂಡಿಗನ ಖರೀದಿಗೆ ನಿರಾಕರಣೆ ವ್ಯಕ್ತವಾಗುತ್ತಲೇ ಲಲಿತ್ ಮೋದಿ, ಆರ್ಸಿಬಿ ಮಾಲೀಕ ವಿಜಯ್ ಮಲ್ಯ ಅವರಿಗೆ ಕರೆ ಮಾಡಿದ್ದಾರೆ.
ಲಲಿತ್ ಮೋದಿ ಅವರು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಅಂದಿನ ಮಾಲೀಕ ವಿಜಯ್ ಮಲ್ಯ ಅವರಿಗೆ ಕರೆ ಮಾಡಿ ಕ್ರಿಸ್ ಗೇಲ್ ಅವರನ್ನು ಆಯ್ಕೆ ಮಾಡುವಂತೆ ಮನವಿ ಮಾಡಿದ್ದಾರೆ.
ಅದೇ ಸಮಯದಲ್ಲಿ ಆರ್ಸಿಬಿ ತಂಡದ ವೇಗಿ ಡಿರ್ಕ್ ನ್ಯಾನಸ್ ಗಾಯಗೊಂಡು ಟೂರ್ನಿಯಿಂದ ಹೊರಬಿದ್ದಿದ್ದರು. ಅವರ ಬದಲಿಗೆ ಗೇಲ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲು ಮಲ್ಯ ಒಪ್ಪಿಕೊಂಡರು. ಆದರೆ ಮಲ್ಯ ಅವರು ಅದಕ್ಕೊಂದು ಷರತ್ತು ಕೂಡ ಹಾಕಿದ್ದರು. ಅದೇನೆಂದರೆ…
“ಕ್ರಿಸ್ ಗೇಲ್ ಚೆನ್ನಾಗಿ ಆಡಿದರೆ ಮಾತ್ರ ನಾನು ಹಣ ನೀಡುತ್ತೇನೆ”. ಇದಕ್ಕೆ ಒಪ್ಪಿದರೆ ನಾನು ತಂಡಕ್ಕೆ ಸೇರಿಸಿಕೊಳ್ಳುತ್ತೇನೆ ಎಂದು ವಿಜಯ ಮಲ್ಯ ಹೇಳಿದ್ದರು. ಇದಕ್ಕೆ ಲಲಿತ್ ಮೋದಿ ಒಪ್ಪಿಗೆ ಸೂಚಿಸಿದ್ದಾರೆ. ಅಲ್ಲದೆ ಕ್ರಿಸ್ ಗೇಲ್ಗೆ ಷರತ್ತಿನ ಬಗ್ಗೆ ತಿಳಿಸಿದ್ದಾರೆ. ಅದರಂತೆ ಕ್ರಿಸ್ ಗೇಲ್ ಆರ್ಸಿಬಿಗೆ ಎಂಟ್ರಿ ಕೊಟ್ಟಿದ್ದರು.
ಆರ್ಸಿಬಿ ತಂಡಕ್ಕೆ ಸೇರಿದ ಮೊದಲ ಪಂದ್ಯದಲ್ಲೇ ಗೇಲ್ ತಮ್ಮ ಹಳೆಯ ತಂಡವಾದ ಕೆಕೆಆರ್ ವಿರುದ್ಧ ಭರ್ಜರಿ ಶತಕ ಸಿಡಿಸಿ ಅಬ್ಬರಿಸಿದರು. ಅಲ್ಲಿಂದ ಮುಂದೆ ಗೇಲ್ ಹಿಂದಿರುಗಿ ನೋಡಲೇ ಇಲ್ಲ. ಆ ಸೀಸನ್ನಲ್ಲಿ ಅತಿ ಹೆಚ್ಚು ರನ್ ಗಳಿಸಿ ‘ಆರೆಂಜ್ ಕ್ಯಾಪ್’ ಗೆದ್ದಿದ್ದಲ್ಲದೆ, ಆರ್ಸಿಬಿ ತಂಡದ ಅವಿಭಾಜ್ಯ ಅಂಗವಾಗಿ ಗುರುತಿಸಿಕೊಂಡರು.
ಅಂದರೆ ಆರ್ಸಿಬಿ ಪರ ಆಡಿದ ಮೊದಲ ಸೀಸನ್ನಲ್ಲೇ ಕ್ರಿಸ್ ಗೇಲ್ ಬರೋಬ್ಬರಿ 608 ರನ್ ಕಲೆಹಾಕಿ ವಿಜಯ ಮಲ್ಯ ಅವರ ಮನ ಗೆದ್ದರು. ಇದಾದ ಬಳಿಕ ಗೇಲ್ ಹಿಂತಿರುಗಿ ನೋಡಿಲ್ಲ.
ಕಾಡಿ ಬೇಡಿ ಪಡೆದ ಅವಕಾಶವನ್ನು ಬಳಸಿಕೊಂಡ ಕ್ರಿಸ್ ಗೇಲ್ 7 ವರ್ಷಗಳ ಕಾಲ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಬ್ಯಾಟ್ ಬೀಸಿದರು. ಈ ವೇಳೆ 85 ಪಂದ್ಯಗಳನ್ನಾಡಿದ ಯೂನಿವರ್ಸ್ ಬಾಸ್ 5 ಶತಕಗಳೊಂದಿಗೆ ಒಟ್ಟು 3,420 ರನ್ ಗಳಿಸಿದರು.
ಇದರ ನಡುವೆ, ಅಂದರೆ ಐಪಿಎಲ್ 2016 ಮತ್ತು 2017ರ ಸೀಸನ್ಗಳಲ್ಲಿ ಗೇಲ್ ಅವರ ಬ್ಯಾಟಿಂಗ್ ಫಾರ್ಮ್ ಕುಸಿಯಿತು. 2017ರ ಸೀಸನ್ನಲ್ಲಿ ಅವರು 9 ಇನ್ನಿಂಗ್ಸ್ಗಳಿಂದ ಕಲೆಹಾಕಿದ್ದು ಕೇವಲ 200 ರನ್ ಮಾತ್ರ.
ಅಲ್ಲದೆ 2018ರ ಹರಾಜಿನ ವೇಳೆಗೆ ಗೇಲ್ ಅವರಿಗೆ 38 ವರ್ಷ ವಯಸ್ಸಾಗಿತ್ತು. ಆರ್ಸಿಬಿ ಫ್ರಾಂಚೈಸಿಯು ದೀರ್ಘಕಾಲದ ಭವಿಷ್ಯದ ದೃಷ್ಟಿಯಿಂದ ಯುವ ಆಟಗಾರರ ಮೇಲೆ ಹೂಡಿಕೆ ಮಾಡಲು ಬಯಸಿತ್ತು. ಹೀಗಾಗಿ ಕ್ರಿಸ್ ಗೇಲ್ ಅವರನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ರಿಲೀಸ್ ಮಾಡಿತು.
ಇದಾದ ಬಳಿಕ ಪಂಜಾಬ್ ಕಿಂಗ್ಸ್ ತಂಡಕ್ಕೆ ಎಂಟ್ರಿ ಕೊಟ್ಟಿದ್ದ ಕ್ರಿಸ್ ಗೇಲ್ ಒಟ್ಟು 4 ವರ್ಷಗಳ ಕಾಲ (2018 ರಿಂದ 2021 ರವರೆಗೆ) ಆಡಿದರು. ಆನಂತರ ಅವರು ಐಪಿಎಲ್ಗೆ ಹೆಸರು ನೀಡಿರಲಿಲ್ಲ. ಇದರೊಂದಿಗೆ ಐಪಿಎಲ್ನಲ್ಲಿ ಕ್ರಿಸ್ ಗೇಲ್ ಯುಗಾಂತ್ಯವಾಯಿತು.
ಇದನ್ನೂ ಓದಿ: ಕ್ರಿಸ್ ಗೇಲ್ ವಿಶ್ವ ದಾಖಲೆ ಮುರಿದ ವಿರಾಟ್ ಕೊಹ್ಲಿ
ಹೀಗೆ, 2011ರಲ್ಲಿ ಸಾಲದ ಸುಳಿಗೆ ಸಿಲುಕಿ ಬಿಲ್ಗಳನ್ನು ಪಾವತಿಸಲು ಕಷ್ಟಪಡುತ್ತಿದ್ದ ಕ್ರಿಸ್ ಗೇಲ್, ಸತತ 13 ವರ್ಷಗಳ ಕಾಲ ಐಪಿಎಲ್ ಅಖಾಡದಲ್ಲಿ ಮಿಂಚಿ ಇಂದು ಕೋಟ್ಯಂತರ ಅಭಿಮಾನಿಗಳ ಹೃದಯ ಗೆದ್ದಿದ್ದಾರೆ. ಅಂದು ಲಲಿತ್ ಮೋದಿಗೆ ಮಾಡಿದ ಆ ಒಂದು ಫೋನ್ ಕರೆ ಮತ್ತು ಆರ್ಸಿಬಿ ನೀಡಿದ ಆ ಒಂದು ಅವಕಾಶ ಕ್ರಿಸ್ ಗೇಲ್ ಅವರ ಬದುಕನ್ನೇ ಬದಲಿಸಿದ್ದು ವಿಶೇಷ.
ಹಿಂದೂ ಧರ್ಮದಲ್ಲಿ ಅಕ್ಷಯ ತೃತೀಯ ಅತ್ಯಂತ ಮಂಗಳಕರವಾದ ದಿನಗಳಲ್ಲಿ ಒಂದು. “ಅಕ್ಷಯ” ಎಂದರೆ ಎಂದಿಗೂ ನಾಶವಾಗದ ಅಥವಾ ಸವೆಯದ ಎಂದರ್ಥ. ಈ ದಿನದಂದು ಮಾಡಿದ ದಾನ, ಧರ್ಮ, ಪೂಜೆ ಮತ್ತು ಹೊಸ ಕಾರ್ಯಗಳು ಅನಂತ ಫಲವನ್ನು ನೀಡುತ್ತವೆ ಎಂಬ ನಂಬಿಕೆಯಿದೆ. ಈ ಬಾರಿ ಏಪ್ರಿಲ್ 19, ಭಾನುವಾರ (ಅಥವಾ ಸೋಮವಾರದ ಶುಭ ಮುಹೂರ್ತದಲ್ಲಿ) ಬರುವ ಈ ಹಬ್ಬದ ವಿಶೇಷತೆ ಮತ್ತು ಪೂಜಾ ವಿಧಿವಿಧಾನಗಳ ಮಾಹಿತಿ ಇಲ್ಲಿದೆ.
ಅಕ್ಷಯ ತೃತೀಯದಂದು ಯಾವುದೇ ಹೊಸ ಕೆಲಸವನ್ನು ಪ್ರಾರಂಭಿಸಿದರೂ ಅದು ಯಾವುದೇ ಅಡೆತಡೆಗಳಿಲ್ಲದೆ ಪೂರ್ಣಗೊಳ್ಳುತ್ತದೆ. ಚಿನ್ನ ಖರೀದಿಸುವುದು, ಭೂಮಿ ಪೂಜೆ ಮಾಡುವುದು ಅಥವಾ ವ್ಯಾಪಾರ ಆರಂಭಿಸಲು ಇದು ಅತ್ಯಂತ ಶ್ರೇಷ್ಠ ದಿನ.
ಮನೆಯಲ್ಲಿ ಅಷ್ಟೈಶ್ವರವೂ ನೆಲೆಸಬೇಕೆಂದರೆ ಈ ದಿನ ಲಕ್ಷ್ಮಿ ದೇವಿಯನ್ನು ಭಕ್ತಿಯಿಂದ ಪೂಜಿಸಬೇಕು. ಅಕ್ಷಯ ತೃತೀಯದಂದು ಬೆಳಿಗ್ಗೆ ಬೇಗನೆ (ಬ್ರಹ್ಮ ಮುಹೂರ್ತದಲ್ಲಿ) ಎದ್ದು ಸ್ನಾನಾದಿ ಕಾರ್ಯಗಳನ್ನು ಮುಗಿಸಬೇಕು. ಬಳಿಕ ಮನೆಯನ್ನು ಸ್ವಚ್ಛಗೊಳಿಸಿ, ಹೊಸ್ತಿಲಿಗೆ ರಂಗೋಲಿ ಹಾಕಿ. ಮಾವಿನ ಎಲೆಗಳ ತೋರಣ ಮತ್ತು ತಾಜಾ ಹೂವುಗಳಿಂದ ಪೂಜಾ ಮಂದಿರವನ್ನು ಅಲಂಕರಿಸಿ. ಒಂದು ಬೆಳ್ಳಿಯ ಅಥವಾ ತಾಮ್ರದ ಬಟ್ಟಲಿನಲ್ಲಿ ನೀರು ತುಂಬಿಸಿ, ಅದರ ಮೇಲೆ ತೆಂಗಿನಕಾಯಿ ಇರಿಸಿ ಕಲಶವನ್ನು ಸ್ಥಾಪಿಸಿ. ಇದು ದೇವಿಯ ಸಾನ್ನಿಧ್ಯದ ಸಂಕೇತ. ಹಸುವಿನ ಶುದ್ಧ ತುಪ್ಪದಿಂದ ದೀಪವನ್ನು ಹಚ್ಚಿ ದೇವಿಗೆ ಆರತಿ ಎತ್ತಬೇಕು.
ಇದನ್ನೂ ಓದಿ: ದೇವರಿಗೆ ದೀಪ ಹಚ್ಚುವಾಗ ಈ ವಿಷ್ಯ ತಿಳಿದಿರಲಿ; ಇದು ನಿಮ್ಮ ಅದೃಷ್ಟವನ್ನೇ ಬದಲಿಸಲಿದೆ
ಲಕ್ಷ್ಮಿ ದೇವಿಗೆ ಪ್ರಿಯವಾದ ವಸ್ತುಗಳನ್ನು ಅರ್ಪಿಸುವುದರಿಂದ ಆಕೆಯ ಆಶೀರ್ವಾದ ಬೇಗನೆ ದೊರೆಯುತ್ತದೆ. ದೇವಿಗೆ ಇಷ್ಟವಾದ ಸಿಹಿ ಪದಾರ್ಥಗಳನ್ನು ಅರ್ಪಿಸಿ. ಈ ದಿನ ಲಕ್ಷ್ಮಿ ಸ್ತೋತ್ರಗಳನ್ನು ಭಕ್ತಿಯಿಂದ ಪಠಿಸಬೇಕು. ಸಾಧ್ಯವಾದರೆ ಎಂಟುನೂರು ಪದಗಳ ಸ್ತೋತ್ರ ಪಠಿಸುವುದು ಶ್ರೇಷ್ಠ. ದೇವಿಗೆ ಹೂವು, ಬಳೆ, ಸೀರೆ ಮತ್ತು ಹಣ್ಣುಗಳನ್ನು ಅರ್ಪಿಸಿ ಪೂಜೆ ಮಾಡುವುದರಿಂದ ಮನೆಯಲ್ಲಿ ಸಂಪತ್ತು ವೃದ್ಧಿಯಾಗುತ್ತದೆ.
ಅಕ್ಷಯ ತೃತೀಯ ಕೇವಲ ಖರೀದಿಗಷ್ಟೇ ಸೀಮಿತವಲ್ಲ, ದಾನಕ್ಕೂ ಅಷ್ಟೇ ಪ್ರಾಮುಖ್ಯತೆ ಇದೆ. ಈ ದಿನ ಬಡವರಿಗೆ ಅಥವಾ ಅರ್ಹರಿಗೆ ಅನ್ನದಾನ, ಬಟ್ಟೆ ಅಥವಾ ಹಣವನ್ನು ದಾನ ಮಾಡುವುದರಿಂದ ಜೀವನದಲ್ಲಿ ಪುಣ್ಯದ ಫಲ ಅಕ್ಷಯವಾಗಿ ಉಳಿಯುತ್ತದೆ ಎಂದು ನಂಬಲಾಗಿದೆ.
ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಬೆಂಗಳೂರು, ಏಪ್ರಿಲ್ 18: ಮಹಿಳಾ ಕಸ್ಟಮ್ಸ್ ಅಧಿಕಾರಿಯ (Customs Officer) ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ಪುಲಿಕೇಶಿನಗರ ಪೊಲೀಸರಿಂದ ಬಂಧಿತನಾಗಿರುವ ಕೃಪಲಾನಿ (Krupalani) ಎಂಬಾತನ ವಿಚಾರಣೆ ವೇಳೆ ಬೆಚ್ಚಿಬೀಳಿಸುವ ಸತ್ಯಗಳು ಹೊರಬಂದಿವೆ. ಈತ ಕೇವಲ ಒಬ್ಬರನ್ನಲ್ಲ, ಸುಮಾರು 50ಕ್ಕೂ ಹೆಚ್ಚು ಮಹಿಳಾ ಅಧಿಕಾರಿಗಳನ್ನು ಇದೇ ರೀತಿ ಪ್ರೀತಿ ಮತ್ತು ಮದುವೆಯ ಹೆಸರಿನಲ್ಲಿ ಬ್ಲ್ಯಾಕ್ಮೇಲ್ ಮಾಡಿರುವುದು ಬೆಳಕಿಗೆ ಬಂದಿದೆ. ಆರೋಪಿಯು ಮಹಿಳಾ ಅಧಿಕಾರಿಗಳ ಜತೆ ಸಲುಗೆ ಬೆಳೆಸಿ ದೈಹಿಕ ಸಂಪರ್ಕ ಮಾಡಿ ನಂತರ ಬ್ಲ್ಯಾಕ್ಮೇಲ್ ಮಾಡುತ್ತಿದ್ದ. ಆ ಮೂಲಕ ತನ್ನ ಕುಕೃತ್ಯಗಳಿಗೆ ಬಳಸಿಕೊಳ್ಳುತ್ತಿದ್ದ ಎಂಬ ಆರೋಪವಿದೆ.
ಆರೋಪಿ ಕೃಪಲಾನಿ ಮುಖ್ಯವಾಗಿ ಜಿಎಸ್ಟಿ (GST) ಮತ್ತು ಕಸ್ಟಮ್ಸ್ ವಿಭಾಗದ ಮಹಿಳಾ ಅಧಿಕಾರಿಗಳನ್ನು ಟಾರ್ಗೆಟ್ ಮಾಡುತ್ತಿದ್ದ. ಆರಂಭದಲ್ಲಿ ಕೆಲಸದ ನಿಮಿತ್ತ ಅಧಿಕಾರಿಗಳೊಂದಿಗೆ ಸಲುಗೆ ಬೆಳೆಸುತ್ತಿದ್ದ ಈತ, ಬಳಿಕ ಡಿನ್ನರ್, ಲಂಚ್ ಎಂದು ಆಪ್ತನಾಗುತ್ತಿದ್ದ. ನಂತರ ಪ್ರೀತಿ ಮತ್ತು ಮದುವೆಯ ನಾಟಕವಾಡಿ ದೈಹಿಕ ಸಂಪರ್ಕ ಬೆಳೆಸುತ್ತಿದ್ದ. ಅಷ್ಟಕ್ಕೇ ಸುಮ್ಮನಾಗದೆ, ಆ ದೈಹಿಕ ಸಂಪರ್ಕವನ್ನೇ ಬಂಡವಾಳವಾಗಿಸಿಕೊಂಡು ಅಧಿಕಾರಿಗಳನ್ನು ಬ್ಲ್ಯಾಕ್ಮೇಲ್ ಮಾಡಲು ಆರಂಭಿಸುತ್ತಿದ್ದ.
ಅಧಿಕಾರಿಗಳ ಕಾರ್ಯವೈಖರಿ ಮತ್ತು ಇಲಾಖೆಯ ಒಳಗಿನ ಲೋಪದೋಷಗಳನ್ನು ತಿಳಿದುಕೊಳ್ಳುತ್ತಿದ್ದ ಈತ, ಅದನ್ನು ಇಟ್ಟುಕೊಂಡು ಅಧಿಕಾರಿಗಳ ಕೆಲಸಕ್ಕೆ ಅಡ್ಡಿಪಡಿಸುತ್ತಿದ್ದ. ಲೈಂಗಿಕ ಸಂಪರ್ಕದ ನಂತರ ವಿಡಿಯೋ ಅಥವಾ ಫೋಟೋಗಳನ್ನು ಬಳಸಿ ಬೆದರಿಕೆ ಹಾಕುತ್ತಿದ್ದ ಈತ, ಅಧಿಕಾರಿಗಳನ್ನು ತನ್ನ ಕೈಗೊಂಬೆಯನ್ನಾಗಿ ಮಾಡಿಕೊಂಡಿದ್ದ ಎಂಬ ಆರೋಪವಿದೆ.
ವಿಚಾರಣೆ ನಡೆಯುತ್ತಿರುವಾಗಲೂ ಈತನ ಉದ್ಧಟತನ ಮುಂದುವರಿದಿದೆ. ಮೆಡಿಕಲ್ ಟೆಸ್ಟ್ ಮಾಡಿಸುವ ವೇಳೆ ಆಸ್ಪತ್ರೆಯಲ್ಲಿ ರಂಪಾಟ ಮಾಡಿರುವ ಆರೋಪಿ, ಪೊಲೀಸರ ಮೊಬೈಲ್ ಕಸಿದುಕೊಂಡು ಅವಾಚ್ಯವಾಗಿ ನಿಂದಿಸಿ ಪ್ರಾಣ ಬೆದರಿಕೆ ಹಾಕಿದ್ದಾನೆ. ಈ ಸಂಬಂಧ ವಿ.ವಿ. ಪುರಂ ಪೊಲೀಸ್ ಠಾಣೆಯಲ್ಲಿ ಆತನ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲಾಗಿದೆ. ಪುಲಿಕೇಶಿನಗರ ಎಸಿಪಿ ಗೀತಾ ನೇತೃತ್ವದಲ್ಲಿ ಈ ಗಂಭೀರ ಪ್ರಕರಣದ ತನಿಖೆ ಚುರುಕಿನಿಂದ ಸಾಗಿದೆ.
ಇದನ್ನೂ ಓದಿ: ಬೆಂಗಳೂರು: ಮಗ ಕಾಣೆಯಾಗಿದ್ದಾನೆಂದು ಸುಳ್ಳು ಕೇಸ್ ಹಾಕಿದ್ದ ತಾಯಿಗೆ 2 ಲಕ್ಷ ರೂ ದಂಡ ವಿಧಿಸಿದ ಹೈಕೋರ್ಟ್
ವರದಿ: ವಿಕಾಸ್, ಟಿವಿ9 ಬೆಂಗಳೂರು
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಕಾವ್ಯಾ ಹಾಗೂ ಗಿಲ್ಲಿ ನಟ ಬಾಂಧವ್ಯದ ಬಗ್ಗೆ ಹೊಸದಾಗಿ ಹೇಳಬೇಕಿಲ್ಲ. ಈಗ ಕಾವ್ಯಾ ಶೈವ ಅವರು ‘ಗಿಚ್ಚಿ ಗಿಲಿಗಿಲಿ ಜೂನಿಯರ್ಸ್’ ಕಾರ್ಯಕ್ರಮಕ್ಕೆ ಅತಿಥಿಯಾಗಿ ಆಗಮಿಸಿದ್ದರು. ಆಗ ಅವರು ಗಿಲ್ಲಿಗೆ ಕರೆ ಮಾಡಿದ್ದಾರೆ. ಈ ವೇಳೆ ರೊಮ್ಯಾಂಟಿಕ್ ಹಾಡನ್ನು ಹಾಡುವಂತೆ ಕೋರಲಾಗಿದೆ. ಆಗ ಗಿಲ್ಲಿ ನಟ ಅವರು ಸ್ವೀಟ್ ಆಗಿ ಹಾಡಿದ್ದಾರೆ. ಆ ವಿಡಿಯೋ ಗಮನ ಸೆಳೆದಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.