ಆಂಧ್ರಪ್ರದೇಶ: ರೈಲಿನಲ್ಲಿ ಮುದ್ದಾದ ಮಗುವಿಗೆ ಜನ್ಮ ನೀಡಿದ ಮಹಿಳೆ, 8 ತಿಂಗಳಿಗೆ ಹೆರಿಗೆ

ಆಂಧ್ರಪ್ರದೇಶ: ರೈಲಿನಲ್ಲಿ ಮುದ್ದಾದ ಮಗುವಿಗೆ ಜನ್ಮ ನೀಡಿದ ಮಹಿಳೆ, 8 ತಿಂಗಳಿಗೆ ಹೆರಿಗೆ

ವಿಜಯವಾಡ, ಏಪ್ರಿಲ್ 08: ಮಹಿಳೆಯೊಬ್ಬರು ಆಂಧ್ರಪ್ರದೇಶದ ರೈಲಿನಲ್ಲಿ ಮಗು(Baby)ವಿಗೆ ಜನ್ಮ ನೀಡಿರುವ ಘಟನೆ ನಡೆದಿದೆ. ರೈಲ್ವೆ ಸಿಬ್ಬಂದಿ ಸಹಾಯಕ್ಕೆ ಬಂದ ಪರಿಣಾಮ ಹೆರಿಗೆ ಸುಸೂತ್ರವಾಗಿ ಆಗಿದ್ದು, ಮುದ್ದಾದ ಹೆಣ್ಣುಮಗುವಿಗೆ ಜನ್ಮ ನೀಡಿದ್ದಾರೆ. ಎಂಟು ತಿಂಗಳ ಗರ್ಭಿಣಿಯೊಬ್ಬರು ರೈಲು ಹತ್ತಿದರು. ಹೆರಿಗೆಗೆ ಇನ್ನೂ ಒಂದು ತಿಂಗಳು ಬಾಕಿ ಇದೆ ಎಂಬ ವಿಶ್ವಾಸ ಮತ್ತು ಅವರ ಕುಟುಂಬ ಸದಸ್ಯರು ತಮ್ಮ ಪಕ್ಕದಲ್ಲಿದ್ದಾರೆ ಎಂಬ ಧೈರ್ಯದೊಂದಿಗೆ, ಅವರು ರೈಲು ಪ್ರಯಾಣಕ್ಕೆ ಒಪ್ಪಿಕೊಂಡಿದ್ದರು. ಆದರೆ ಅಂದುಕೊಂಡಂತೆ ಎಲ್ಲವೂ ನಡೆಯದು ಎಂಬುದಕ್ಕೆ ಇದೂ ಒಂದು ನಿದರ್ಶನ.

ನಿಧಾನವಾಗಿ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಕುಟುಂಬದವರಿಗೂ ಭಯ ಶುರುವಾಗಿತ್ತು. ಬಳಿಕ ರೈಲಿನ ಟಿಟಿಗೆ ಕರೆ ಮಾಡಲಾಯಿತು.ಇಶಾದ್ ಮತ್ತು ತರನ್ನಮ್ ಖಾತುನ್ ಜಾರ್ಖಂಡ್ ಮೂಲದವರು. ಏಪ್ರಿಲ್ 5 ರಂದು, ಧನಬಾದ್ ಮೂಲದ ಗರ್ಭಿಣಿ, ಅವರ ಕುಟುಂಬವು ರೈಲು ಸಂಖ್ಯೆ 13352 (ಆಲಪ್ಪುಳ-ಧನಬಾದ್ ಎಕ್ಸ್‌ಪ್ರೆಸ್) ನ ಬಿ 1 ಕೋಚ್‌ನಲ್ಲಿ ಚೆನ್ನೈನಿಂದ ಧನಬಾದ್‌ಗೆ ಪ್ರಯಾಣಿಸುತ್ತಿದ್ದಾಗ ರೈಲು ಅನ್ನಾವರಂ ನಿಲ್ದಾಣವನ್ನು ದಾಟಿದ ಸ್ವಲ್ಪ ಸಮಯದ ನಂತರ ಹೆರಿಗೆ ನೋವು ಕಾಣಿಸಿಕೊಂಡಿತ್ತು.

ಅವರ ಕುಟುಂಬ ಸದಸ್ಯರು ತಕ್ಷಣ ಕರ್ತವ್ಯದಲ್ಲಿದ್ದ ಟಿಕೆಟ್ ಪರಿಶೀಲನಾ ಸಿಬ್ಬಂದಿಯನ್ನು ಸಹಾಯಕ್ಕಾಗಿ ಸಂಪರ್ಕಿಸಿದರು. ಪರಿಸ್ಥಿತಿಗೆ ತ್ವರಿತವಾಗಿ ಸ್ಪಂದಿಸಿದ ಜಿ. ಜ್ಯೋತಿ ಗರ್ಭಿಣಿಯ ಸಹಾಯಕ್ಕೆ ಬಂದರು. ಪರಿಸ್ಥಿತಿಯ ತುರ್ತುಸ್ಥಿತಿಯನ್ನು ಅರ್ಥಮಾಡಿಕೊಂಡು, ರೈಲಿಗೆ ಎಲಮಂಚಿಲಿ ನಿಲ್ದಾಣದಲ್ಲಿ ವಿಶೇಷ ನಿಲುಗಡೆ ಕಲ್ಪಿಸಲಾಯಿತು. ಆಂಬ್ಯುಲೆನ್ಸ್​ಗೆ ಕೂಡ ಕರೆ ಮಾಡಿದ್ದರು.

ಮತ್ತಷ್ಟು ಓದಿ: ಬಿಸಿಲಲ್ಲಿ ಕುಸಿದುಬಿದ್ದ ತಾಯಿ, ಯಾರ್ಯಾರನ್ನೋ ಬೇಡಿ ನೀರು ತಂದ ಮಗ, ಜನ ವಿಡಿಯೋ ಮಾಡಿದ್ರು ಸಹಾಯಕ್ಕೆ ಬರ್ಲಿಲ್ಲ

ತಾಯಿ ಮತ್ತು ನವಜಾತ ಶಿಶುವನ್ನು 108 ಆಂಬ್ಯುಲೆನ್ಸ್ ಮೂಲಕ ಎಲಮಂಚಿಲಿಯ ಸರ್ಕಾರಿ ಆಸ್ಪತ್ರೆಗೆ ಸುರಕ್ಷಿತವಾಗಿ ಕರೆದುಕೊಂಡು ಹೋಗಲಾಯಿತು. ತಾಯಿ ಮತ್ತು ಮಗು ಇಬ್ಬರೂ ಸುರಕ್ಷಿತವಾಗಿದ್ದಾರೆ ಮತ್ತು ಆರೋಗ್ಯವಾಗಿದ್ದಾರೆ ಎಂದು ವರದಿಯಾಗಿದೆ. ಬೊಕಾರೊ ಎಕ್ಸ್‌ಪ್ರೆಸ್ ಅನ್ನು ಸುಮಾರು 40 ನಿಮಿಷಗಳ ಕಾಲ ರೈಲ್ವೆ ನಿಲ್ದಾಣದಲ್ಲಿ ನಿಲ್ಲಿಸಲಾಗಿತ್ತು.

ಟಿಟಿಇ ಜೊತೆಗೆ, ರೈಲ್ವೆ ಸಿಬ್ಬಂದಿ ಮತ್ತು ರೈಲಿನೊಳಗಿನ ಪುರುಷ ಪ್ರಯಾಣಿಕರನ್ನು ರೈಲು ಕೋಚ್‌ನಿಂದ ಹೊರಗೆ ಕಳುಹಿಸಲಾಯಿತು, ಇದರಿಂದ ಬಿ1 ಕೋಚ್‌ನಲ್ಲಿರುವ ಮಹಿಳೆಗೆ ಸಾಮಾನ್ಯ ಹೆರಿಗೆಯಾಗುವಂತೆ ನೋಡಿಕೊಳ್ಳಲಾಯಿತು. ರೈಲಿನಲ್ಲಿರುವ ಸೌಕರ್ಯ, ಸುರಕ್ಷತೆ ಮತ್ತು ಕಡಿಮೆ ವೆಚ್ಚ ಎನ್ನುವ ಕಾರಣಕ್ಕೆ ಗರ್ಭಿಣಿಯರಿಂದ ಹಿಡಿದು ವೃದ್ಧರವೆಗೂ ಎಲ್ಲರೂ ರೈಲು ಪ್ರಯಾಣವನ್ನೇ ಆಯ್ಕೆ ಮಾಡಿಕೊಳ್ಳುತ್ತಾರೆ.

ಈ ರೈಲು ಪ್ರಯಾಣ ಎಷ್ಟು ಸುರಕ್ಷಿತವೆಂಬುದು ಈ ಘಟನೆಯಿಂದ ಮತ್ತೊಮ್ಮೆ ಸಾಬೀತಾದಂತಾಗಿದೆ. ರೈಲಿನಲ್ಲಿ ಪ್ರಯಾಣಿಸುವಾಗ, ನಾವು ಅನೇಕ ವಿಚಿತ್ರ ಘಟನೆಗಳನ್ನು ನೋಡುತ್ತೇವೆ. ಆದರೆ ಮಾನವೀಯತೆ ತೋರುವ ಘಟನೆಗಳು ಬಹಳ ಅಪರೂಪ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಅಲ್ಲು ಅರ್ಜುನ್ ಬೆಳೆಯಲು ಈ ಎಲ್ಲಾ ವ್ಯಕ್ತಿಗಳು ಕಾರಣ

ನಟ ಅಲ್ಲು ಅರ್ಜುನ್ ಅವರು ಈಗ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಜನಪ್ರಿಯತೆ ಪಡೆದಿದ್ದಾರೆ. ‘ಪುಷ್ಪ 2’ ಬಂದ ಬಳಿಕ ಅವರು ವಿಶ್ವ ಮಟ್ಟದಲ್ಲಿ ಹೆಸರು ಮಾಡಿದ್ದಾರೆ. ಜಪಾನ್ ಅಲ್ಲ ಸಿನಿಮಾ ರಿಲೀಸ್ ಆಗಿ ಹಿಟ್ ಆಗಿದೆ. ಅಲ್ಲು ಅರ್ಜುನ್ ಅವರು ಈ ಹಂತಕ್ಕೆ ಬರಲು ಕಾರಣ ಅನೇಕರಿದ್ದಾರೆ. ಈ ಮೊದಲು ಅವರು ಈ ಬಗ್ಗೆ ಮಾಹಿತಿ ನೀಡಿದ್ದರು. ಆ ಬಗ್ಗೆ ಇಲ್ಲಿದೆ ವಿವರ.

ಅಲ್ಲು ಅರ್ಜುನ್ ಅವರಿಗೆ ಸಿನಿಮಾ ಹಿನ್ನೆಲೆ ಇದೆ. ಅವರ ತಂದೆ ಅಲ್ಲು ಅರವಿಂದ್ ಖ್ಯಾತ ನಿರ್ಮಾಪಕರು. ಅವರ ತಾತ ಅಲ್ಲು ರಾಮಲಿಂಗಯ್ಯ ಸಿನಿಮಾ ರಂಗದಲ್ಲಿ ಹೆಸರು ಮಾಡಿದ್ದರು. ಅವರು 1000ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದರು. ಅತಿ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ ಕಲಾವಿದ ಎಂಬ ಖ್ಯಾತಿ ಅವರಿಗೆ ಇದೆ. ಸಿನಿಮಾ ಬಗ್ಗೆ ಆಸಕ್ತಿ ಮೂಡಲು ಅವರು ಕೂಡ ಕಾರಣ.

ಇಷ್ಟೆಲ್ಲ ಸ್ಟಾರ್​ಗಳು ಇರುವ ಮನೆ ಅವರನ್ನು ವಿನಮ್ರವಾಗಿ ನಡೆದುಕೊಳ್ಳುವಂತೆ ಮಾಡಿತಂತೆ. ‘ನಾನು ಈ ಮಟ್ಟಕ್ಕೆ ಬೆಳೆಯಲು ಕುಟುಂಬಕ್ಕೆ ಇದರ ಕ್ರೆಡಿಟ್ ಕೊಡುತ್ತೇನೆ’ ಎಂದು ಅವರು ಹೇಿದ್ದರು. ‘ನಾನೇ ಬೆಳೆದು ನಿಂತವನಲ್ಲ. ನಾನು ಎಲ್ಲರಿಂದ ಆದವನು. ನನ್ನ ನಿರ್ದೇಶಕರು, ತಂತ್ರಜ್ಞರು, ಕುಟುಂಬದವರು, ಅಭಿಮಾನಿಗಳು ಹಾಗೂ ಎಲ್ಲರೂ ನನ್ನ ಬೆಳವಣಿಗೆಗ ಕಾರಣ. ನಾನು ಬೆಳೆಯಲು ಎಷ್ಟು ಸಹಾಯಬೇಕೋ ಅದನ್ನು ತೆಗೆದುಕೊಳ್ಳುತ್ತೇನೆ’ ಎಂದು ಅವರು ಹೇಳಿದ್ದರು.

ಇದನ್ನೂ ಓದಿ: ತುಂಬಾನೇ ಶ್ರೀಮಂತ ಅಲ್ಲು ಅರ್ಜುನ್; ಅವರ ಬಳಿ ಇರೋ ದುಬಾರಿ ವಸ್ತುಗಳಿವು

ಅಲ್ಲು ಅರ್ಜುನ್ ಹಾಗೂ ಅಟ್ಲಿ ಒಟ್ಟಾಗಿ ಸಿನಿಮಾ ಮಾಡುತ್ತಿದ್ದಾರೆ. ಈ ಚಿತ್ರದ ಟೈಟಲ್ ಇಂದು ಅನೌನ್ಸ್ ಆಗುವ ಸಾಧ್ಯತೆ ಇದೆ. ಈ ಸಿನಿಮಾದ ಟೈಟಲ್ ಏನು ಎಂಬುದು ಇಂದು ಗೊತ್ತಾಗಲಿದೆ. ಈ ಚಿತ್ರಕ್ಕೆ ದೀಪಿಕಾ ಪಡುಕೋಣೆ ನಾಯಕಿ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬ್ಯಾಡ್ ನ್ಯೂಸ್: ಮೇ ತಿಂಗಳಿನಲ್ಲಿ ಓಪನ್ ಆಗಲ್ಲ ಪಿಂಕ್ ಲೈನ್! ವಿಳಂಬಕ್ಕೆ ಅಸಲಿ ಕಾರಣವೇನು?

ಬೆಂಗಳೂರು, ಏಪ್ರಿಲ್ 8: ರಾಜಧಾನಿ ಬೆಂಗಳೂರಿನ ಸಂಚಾರ ದಟ್ಟಣೆಗೆ ಮುಕ್ತಿ ನೀಡಬಲ್ಲ ಬಹುನಿರೀಕ್ಷಿತ ನಮ್ಮ ಮೆಟ್ರೋದ (Namma Metro) ಪಿಂಕ್ ಲೈನ್ (Pink Line) ಲೋಕಾರ್ಪಣೆ ಮತ್ತೆ ಮುಂದಕ್ಕೆ ಹೋಗುವ ಲಕ್ಷಣಗಳು ಕಾಣಿಸುತ್ತಿವೆ. ಕಾಳೇನ ಅಗ್ರಹಾರದಿಂದ ನಾಗವಾರದವರೆಗಿನ ಈ ಮಾರ್ಗದ ಪೈಕಿ, ಮೊದಲ ಹಂತದಲ್ಲಿ 6 ನಿಲ್ದಾಣಗಳನ್ನು ಮೇ ತಿಂಗಳಿನಲ್ಲಿ ಸಾರ್ವಜನಿಕ ಸಂಚಾರಕ್ಕೆ ಮುಕ್ತಗೊಳಿಸಲು ಬಿಎಂಆರ್‌ಸಿಎಲ್ ಮತ್ತು ರಾಜ್ಯ ಸರ್ಕಾರ ಯೋಜಿಸಿದ್ದವು. ಆದರೆ, ತಾಂತ್ರಿಕ ಪರೀಕ್ಷೆಗಳು (Testing) ಬಾಕಿ ಇರುವುದರಿಂದ ಜೂನ್ ಅಥವಾ ಜುಲೈನಲ್ಲಿ ಉದ್ಘಾಟನೆಯಾಗುವ ಸಾಧ್ಯತೆಯಿದೆ.

ರೈಲುಗಳಿದ್ದರೂ ವಿಳಂಬ ಏಕೆ?

ಸಾಮಾನ್ಯವಾಗಿ ಹೊಸ ಮೆಟ್ರೋ ಮಾರ್ಗ ಉದ್ಘಾಟನೆಗೆ ರೈಲುಗಳ ಕೊರತೆ ಅಡ್ಡಿಯಾಗುತ್ತಿತ್ತು. ಆದರೆ ಪಿಂಕ್ ಲೈನ್‌ಗಾಗಿ ಈಗಾಗಲೇ ಬಿಇಎಂಎಲ್ (BEML) ನಿಂದ ಐದು ರೈಲುಗಳು ಬಂದಿವೆ. ಒಟ್ಟು 23 ರೈಲುಗಳಿಗೆ ಆರ್ಡರ್ ನೀಡಲಾಗಿದ್ದು, ಹಂತಹಂತವಾಗಿ ಪೂರೈಕೆಯಾಗುತ್ತಿದೆ. ಆದರೆ ಸುರಕ್ಷತಾ ಪರೀಕ್ಷೆ ಮತ್ತು ಸಿಗ್ನಲಿಂಗ್ ಟೆಸ್ಟಿಂಗ್ ಕೆಲಸಗಳು ಪೂರ್ಣಗೊಳ್ಳದ ಕಾರಣ ಪ್ರಯಾಣಿಕರು ಮತ್ತಷ್ಟು ಕಾಲ ಕಾಯುವುದು ಅನಿವಾರ್ಯವಾಗಿದೆ.

ಪಿಂಕ್ ಲೈನ್ ಮೆಟ್ರೋ ವಿಶೇಷತೆ ಏನು?

  • ಒಟ್ಟು ಉದ್ದ: 21.25 ಕಿ.ಮೀ
  • ನಿಲ್ದಾಣಗಳು: ಒಟ್ಟು 18 (12 ಅಂಡರ್ ಗ್ರೌಂಡ್, 6 ಎಲಿವೇಟೆಡ್)
  • ಮೊದಲ ಹಂತ: ಕಾಳೇನ ಅಗ್ರಹಾರದಿಂದ ತಾವರೆಕೆರೆವರೆಗಿನ 6 ಮೇಲ್ಸೇತುವೆ ನಿಲ್ದಾಣಗಳು.
  • ಅಂಡರ್ ಗ್ರೌಂಡ್ ಕಾಮಗಾರಿ: 13.76 ಕಿ.ಮೀ ವ್ಯಾಪ್ತಿಯ ಸುರಂಗ ಮಾರ್ಗದ ಕೆಲಸ ನಡೆಯುತ್ತಿದ್ದು, ಈ ವರ್ಷದ ಅಂತ್ಯಕ್ಕೆ ಪೂರ್ಣ ಮಾರ್ಗ ಲಭ್ಯವಾಗುವ ನಿರೀಕ್ಷೆಯಿದೆ.

ಇದನ್ನೂ ಓದಿ: ಬೆಂಗಳೂರಿಗರಿಗೆ ಗುಡ್​​ ನ್ಯೂಸ್​​ ಕೊಟ್ಟ BWSSB: ಮೂರು ತಿಂಗಳ ಅವಧಿಗೆ OTS ಯೋಜನೆ ಜಾರಿ

ಬಿಎಂಆರ್‌ಸಿಎಲ್ ಪ್ರತಿಬಾರಿಯೂ ನೀಡಿದ ಸಮಯಕ್ಕೆ ಕಾಮಗಾರಿ ಮುಗಿಸದೆ ವಿಳಂಬ ಮಾಡುತ್ತಿರುವುದು ಪ್ರಯಾಣಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Iran-US Ceasefire: ಯುದ್ಧ ಅಂತ್ಯವಾಗಿಲ್ಲ, ಕದನ ವಿರಾಮವಷ್ಟೇ: ಮೊಜ್ತಬಾ ಖಮೇನಿ

ಟೆಹ್ರಾನ್, ಏಪ್ರಿಲ್ 08: ಅಮೆರಿಕದೊಂದಿಗೆ ಎರಡು ವಾರಗಳ ಕದನ ವಿರಾಮಕ್ಕೆ ಒಪ್ಪಿಕೊಂಡ ನಂತರ ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ(Mojtaba Khamenei) ತನ್ನ ಎಲ್ಲಾ ಮಿಲಿಟರಿ ಘಟಕಗಳಿಗೆ ದಾಳಿ ನಿಲ್ಲಿಸುವಂತೆ ಸೂಚನೆ ನೀಡಿದ್ದಾರೆ. ಅಷ್ಟೇ ಅಲ್ಲದೆ ಯುದ್ಧ ಅಂತ್ಯವಾಗಿಲ್ಲ, ಕದನ ವಿರಾಮವಷ್ಟೇ ಎಂದಿದ್ದಾರೆ. ಕದನ ವಿರಾಮವು ಯುದ್ಧದ ಅಂತ್ಯವನ್ನು ಸೂಚಿಸುವುದಿಲ್ಲ ಮತ್ತು ಶತ್ರುಗಳಾದ ಅಮೆರಿಕ ಅಥವಾ ಇಸ್ರೇಲ್ ಯಾವುದೇ ರೀತಿಯಲ್ಲಿ ತಪ್ಪಾಗಿ ವರ್ತಿಸಿದರೆ ನಾವು ಸುಮ್ಮನಿರುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

ಫೆಬ್ರವರಿ 28 ರಂದು ಅಮೆರಿಕ ಮತ್ತು ಇಸ್ರೇಲ್ ಇರಾನ್ ವಿರುದ್ಧ ಜಂಟಿ ದಾಳಿ ನಡೆಸಿ, ಯುದ್ಧದ ಮೊದಲ ದಿನದಂದು ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರನ್ನು ಕೊಂದಿದ್ದವು. ಕಳೆದ 39 ದಿನಗಳಲ್ಲಿ, ದೇಶಾದ್ಯಂತ ಹಲವಾರು ಜನರು ಸಂಘರ್ಷದಲ್ಲಿ ಸಾವನ್ನಪ್ಪಿದ್ದಾರೆ.

ಅಮೆರಿಕವು ಕದನ ವಿರಾಮ ಕೋರಿ ಇರಾನ್‌ಗೆ 15 ಅಂಶಗಳ ಪ್ರಸ್ತಾವನೆಯನ್ನು ಕಳುಹಿಸಿತ್ತು ಮತ್ತು ಮಾತುಕತೆಗೆ ಆಧಾರವಾಗಿ ಪರಿಷ್ಕೃತ 10 ಅಂಶಗಳ ಪ್ರಸ್ತಾವನೆಯನ್ನು ಸ್ವೀಕರಿಸಿತ್ತು. ಇರಾನ್‌ನ ವಿದ್ಯುತ್ ಸ್ಥಾವರಗಳು ಮತ್ತು ಸೇತುವೆಗಳ ಮೇಲೆ ದಾಳಿ ಮಾಡುವ ಗಡುವು ಪೂರ್ಣಗೊಳ್ಳುವ ಕೆಲವೇ ಗಂಟೆಗಳ ಮೊದಲು, ಟ್ರಂಪ್ ಪಾಕಿಸ್ತಾನದ ಪ್ರಸ್ತಾಪವನ್ನು ಒಪ್ಪಿಕೊಂಡಿರುವುದಾಗಿ ಹೇಳಿ ಕದನ ವಿರಾಮವನ್ನು ಘೋಷಿಸಿದ್ದಾರೆ.

ಟ್ರಂಪ್ ತಮ್ಮ ಟ್ವಿಟರ್ ಸಾಮಾಜಿಕ ಮಾಧ್ಯಮ ವೇದಿಕೆಯಲ್ಲಿ ಎರಡು ವಾರಗಳ ಕದನ ವಿರಾಮ ಒಪ್ಪಂದವನ್ನು ಘೋಷಿಸಿದರು, ಹಾರ್ಮುಜ್ ಜಲಸಂಧಿಯನ್ನು ಸಂಪೂರ್ಣವಾಗಿ ಪುನಃ ತೆರೆಯಲು ಇರಾನ್ ಒಪ್ಪಿಕೊಳ್ಳುವುದರ ಮೇಲೆ ಒಪ್ಪಂದವು ಷರತ್ತುಬದ್ಧವಾಗಿದೆ ಎಂದು ಟ್ರಂಪ್ ಹೇಳಿದ್ದರು.

ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ ಎರಡು ವಾರಗಳ ಕದನ ವಿರಾಮದಲ್ಲಿ ಇಸ್ರೇಲ್ ಕೂಡ ಒಂದು ಭಾಗವಾಗಿದೆ ಎಂದು ಶ್ವೇತಭವನದ ಹಿರಿಯ ಅಧಿಕಾರಿಯೊಬ್ಬರು ಸಿಎನ್‌ಎನ್‌ಗೆ ತಿಳಿಸಿದ್ದಾರೆ. ಮಾತುಕತೆಗಳು ಮುಂದುವರಿಯುತ್ತಿರುವಾಗ ಬಾಂಬ್ ದಾಳಿಯನ್ನು ನಿಲ್ಲಿಸಲು ಇಸ್ರೇಲ್ ಸಹ ಒಪ್ಪಿಕೊಂಡಿದೆ ಎಂದು ಅಧಿಕಾರಿ ಹೇಳಿದರು.

ಮತ್ತಷ್ಟು ಓದಿ: ಸತ್ತಿರಬಹುದು ಅಥವಾ ಕೆಟ್ಟ ಸ್ಥಿತಿಯಲ್ಲಿರಬಹುದು; ಇರಾನ್‌ ಸುಪ್ರೀಂ ನಾಯಕ ಮೊಜ್ತಬಾ ಖಮೇನಿ ಬಗ್ಗೆ ಟ್ರಂಪ್ ಶಾಕಿಂಗ್ ಹೇಳಿಕೆ

ಇಸ್ರೇಲ್ ಕೂಡ ತಾತ್ಕಾಲಿಕ ಕದನ ವಿರಾಮಕ್ಕೆ ಒಪ್ಪಿಕೊಂಡಿದೆ ಎಂದು ವರದಿಗಳು ಸೂಚಿಸುತ್ತವೆ. ಯುದ್ಧವನ್ನು ಕೊನೆಗೊಳಿಸಲು ಇರಾನ್‌ನ ಷರತ್ತುಗಳನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ಪಾಕಿಸ್ತಾನದ ಎರಡು ವಾರಗಳ ಕದನ ವಿರಾಮ ಪ್ರಸ್ತಾವನೆಯನ್ನು ಇರಾನ್ ಒಪ್ಪಿಕೊಂಡಿದೆ, ಇದನ್ನು ಅದರ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ಕೂಡ ಅನುಮೋದಿಸಿದ್ದಾರೆ.

ಇದಲ್ಲದೆ, ಅಮೆರಿಕ ಮತ್ತು ಇರಾನ್ ನಡುವಿನ ಯುದ್ಧವನ್ನು ಕೊನೆಗೊಳಿಸುವ ಒಪ್ಪಂದದ ಕುರಿತು ಮೊದಲ ಮಾತುಕತೆ ಶುಕ್ರವಾರ ಇಸ್ಲಾಮಾಬಾದ್‌ನಲ್ಲಿ ನಡೆಯಲಿದೆ. ಪಾಕಿಸ್ತಾನಿ ಪ್ರಧಾನಿ ಶಹಬಾಜ್ ಷರೀಫ್ ಮತ್ತು ಫೀಲ್ಡ್ ಮಾರ್ಷಲ್ ಅಸಿಮ್ ಮುನೀರ್ ಅವರ ಕೋರಿಕೆಯ ಮೇರೆಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಇರಾನ್ ಮೇಲಿನ ದಾಳಿಯನ್ನು ಎರಡು ವಾರಗಳ ಕಾಲ ಸ್ಥಗಿತಗೊಳಿಸುವುದಾಗಿ ಘೋಷಿಸಿದ್ದಾರೆ.

ಪಾಕಿಸ್ತಾನದ ಒತ್ತಾಯ ಸ್ಪಷ್ಟವಾಗಿತ್ತು. ದೇಶದ ಶೇ. 90 ತೈಲವು ಹಾರ್ಮುಜ್ ಜಲಸಂಧಿಯ ಮೂಲಕ ಹಾದುಹೋಗುತ್ತದೆ. ಮುಚ್ಚುವಿಕೆಯು ಇಂಧನ ಬಿಕ್ಕಟ್ಟನ್ನು ಇನ್ನಷ್ಟು ಹೆಚ್ಚಿಸುತ್ತಿತ್ತು, ಬೆಲೆಗಳನ್ನು ಹೆಚ್ಚಿಸುತ್ತಿತ್ತು ಮತ್ತು ಆರ್ಥಿಕತೆಯ ಮೇಲೆ ಒತ್ತಡ ಹೇರುತ್ತಿತ್ತು. ಸೌದಿ ರಕ್ಷಣಾ ಒಪ್ಪಂದ, ಅಫ್ಘಾನಿಸ್ತಾನದಲ್ಲಿನ ಉದ್ವಿಗ್ನತೆ ಮತ್ತು ಭಾರತದೊಂದಿಗಿನ ವಿವಾದದ ನಡುವೆ, ಪಾಕಿಸ್ತಾನವು ಯುದ್ಧವು ಉಲ್ಬಣಗೊಳ್ಳುವುದು ಇಷ್ಟವಿರಲಿಲ್ಲ.

 

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Source link

ನಮ್ಮ ಸೋಲಿಗೆ ನೀವೇ ಕಾರಣ: ಹಾರ್ದಿಕ್ ಪಾಂಡ್ಯ ಆಕ್ರೋಶ

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 13ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಸೋಲನುಭವಿಸಿದೆ. ಗುವಾಹಟಿಯ ಬರ್ಸಪರಾ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ್ ರಾಯಲ್ಸ್ ತಂಡವು ನಿಗದಿತ 11 ಓವರ್​ಗಳಲ್ಲಿ ಕಲೆಹಾಕಿದ್ದು ಬರೋಬ್ಬರಿ 150 ರನ್​ಗಳು. ಈ ಗುರಿಯನ್ನು ಬೆನ್ನತ್ತಿದ ಮುಂಬೈ ಇಂಡಿಯನ್ಸ್ ತಂಡವು 11 ಓವರ್​ಗಳಲ್ಲಿ 123 ರನ್​ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಮುಂಬೈ ಪಡೆ 27 ರನ್​ಗಳಿಂದ ಸೋಲೊಪ್ಪಿಕೊಂಡಿತು.

ಈ ಸೋಲಿನ ಬಳಿಕ ಮಾತನಾಡಿದ ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ, ತಮ್ಮ ತಂಡದ ಬೌಲಿಂಗ್ ವಿಭಾಗದ ಪ್ರದರ್ಶನದ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ಪವರ್‌ಪ್ಲೇನಲ್ಲಿ ನಾವು ಅಂದುಕೊಂಡಂತೆ ಬೌಲಿಂಗ್ ಮಾಡಲು ಸಾಧ್ಯವಾಗಲಿಲ್ಲ. ನಮ್ಮ ಬೌಲರ್‌ಗಳು ಈ ಸೋಲಿನ ಜವಾಬ್ದಾರಿಯನ್ನು ಹೊರಬೇಕಾಗಿದೆ. ಒಂದು ಬೌಲಿಂಗ್ ಘಟಕವಾಗಿ ನಾವು ನಿರೀಕ್ಷಿತ ಮಟ್ಟಕ್ಕೆ ತಲುಪಲಿಲ್ಲ. ನಮ್ಮ ಬೌಲರ್​ಗಳ ವಿರುದ್ಧ ಎದುರಾಳಿ ತಂಡದವರು ಅತ್ಯುತ್ತಮವಾಗಿ ಬ್ಯಾಟಿಂಗ್ ಮಾಡಿದರು. ಹೀಗಾಗಿ ನಮ್ಮ ಸೋಲಿಗೆ ನಮ್ಮ ಬೌಲರ್​ಗಳೇ ನೇರ ಕಾರಣ ಎಂದರು.

ಅಷ್ಟೇ ಅಲ್ಲದೆ  “ನಾನು ಈ ಸೋಲನ್ನು ಬ್ಯಾಟರ್​ಗಳ ಮೇಲೆ ಹಾಕುವುದಿಲ್ಲ. ಖಂಡಿತವಾಗಿಯೂ ಇದು ಬೌಲಿಂಗ್ ಘಟಕದ ವೈಫಲ್ಯ. ಟಿ20 ಕ್ರಿಕೆಟ್‌ನಲ್ಲಿ ಒಂದೆರಡು ಸರಿಯಾದ ಎಸೆತಗಳನ್ನು ಹಾಕುವುದು ಮುಖ್ಯವಾಗುತ್ತದೆ. ನಾವು ಕೇವಲ 27 ರನ್‌ಗಳಿಂದ ಸೋತಿದ್ದೇವೆ ಎಂದರೆ, ಅದರರ್ಥ ನಾವು ಐದು ಎಸೆತಗಳನ್ನು ಸರಿಯಾಗಿ ಹಾಕಿದ್ದರೆ ಅಥವಾ ಐದು ಸಿಕ್ಸರ್‌ಗಳನ್ನು ತಡೆದಿದ್ದರೆ ಪಂದ್ಯ ನಮ್ಮದಾಗುತ್ತಿತ್ತು. ಆದರೆ ನಮ್ಮ ಬೌಲರ್​ಗಳು ಅಂತಹ ಎಸೆತಗಳನ್ನು ಸಹ ಎಸೆಯಲು ಕೂಡ ವಿಫಲರಾಗಿದ್ದಾರೆ ” ಎಂದು ಹಾರ್ದಿಕ್ ಪಾಂಡ್ಯ ತಮ್ಮ ಆಕ್ರೋಶ ಹೊರಹಾಕಿದ್ದಾರೆ.

ಇದೇ ವೇಳೆ ರಾಜಸ್ಥಾನ್ ರಾಯಲ್ಸ್ ತಂಡದ ಕಿರಿಯ ಬ್ಯಾಟರ್  ವೈಭವ್ ಸೂರ್ಯವಂಶಿ ಅವರ ಆರ್ಭಟವನ್ನು ಮುಕ್ತಕಂಠದಿಂದ ಶ್ಲಾಘಿಸಿದ ಹಾರ್ದಿಕ್ ಪಾಂಡ್ಯ. “15-16 ವರ್ಷದ ಹುಡುಗ ಅಷ್ಟು ಧೈರ್ಯದಿಂದ ಆಡುವುದನ್ನು ನೋಡುವುದು ಆಶ್ಚರ್ಯಕರವಾಗಿದೆ. ಪಂದ್ಯಕ್ಕೂ ಮುನ್ನವೇ ನಾವು ಅವರ ಬಗ್ಗೆ ಸಾಕಷ್ಟು ಚರ್ಚಿಸಿದ್ದೆವು. ಅವರಲ್ಲಿರುವ ಭಯವಿಲ್ಲದ ಆಟ ಮತ್ತು ಶಾಟ್‌ಗಳು ಅದ್ಭುತವಾಗಿವೆ. ಅವರಿಗೆ ಮುಂದಿನ ದಿನಗಳಲ್ಲಿ ಶುಭವಾಗಲಿ,” ಎಂದರು.

ಮುಂದಿನ ಸವಾಲು:

ಮುಂದಿನ ಪಂದ್ಯದಲ್ಲಿ ಮುಂಬೈ ತಂಡವು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವನ್ನು ಎದುರಿಸಲಿದೆ. ಈ ಬಗ್ಗೆ ಮಾತನಾಡಿದ ಪಾಂಡ್ಯ, “ನಡೆದ ತಪ್ಪುಗಳಿಂದ ಪಾಠ ಕಲಿಯುವುದು ಮುಖ್ಯ. ನಾಳೆ ಹೊಸ ಸೂರ್ಯೋದಯವಾಗಲಿದೆ. ನಮ್ಮ ತಪ್ಪುಗಳನ್ನು ಸರಿಪಡಿಸಿಕೊಂಡು ಮುಂದಿನ ಪಂದ್ಯಕ್ಕೆ ಸಿದ್ಧರಾಗುತ್ತೇವೆ,” ಎಂದು ಭರವಸೆ ನೀಡಿದರು.

ಇದನ್ನೂ ಓದಿ: ವೈಭವ್, ಯಶಸ್ವಿ ಸಿಡಿಲಬ್ಬರದ ನಡುವೆ RCB ದಾಖಲೆ ಸೇಫ್

ಏಪ್ರಿಲ್ 12 ರಂದು ನಡೆಯಲಿರುವ 20ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿದೆ. ಅದಕ್ಕೂ ಮುನ್ನ ಆರ್​ಸಿಬಿ ತಂಡವು ಏಪ್ರಿಲ್ 10 ರಂದು ರಾಜಸ್ಥಾನ್ ರಾಯಲ್ಸ್ ತಂಡವನ್ನು ಎದುರಿಸಲಿದೆ.

Source link

ತುಂಬಾನೇ ಶ್ರೀಮಂತ ಅಲ್ಲು ಅರ್ಜುನ್; ಅವರ ಬಳಿ ಇರೋ ದುಬಾರಿ ವಸ್ತುಗಳಿವು

ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ (Allu Arjun) ಅವಗೆ ಇಂದು (ಏಪ್ರಿಲ್ 08) ಜನ್ಮದಿನ. ಭಾರತದ ಶ್ರೀಮಂತ ಹೀರೋಗಳಲ್ಲಿ ಅವರೂ ಒಬ್ಬರು., ಅಲ್ಲು ಅರ್ಜುನ್ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಮಾಸ್ ಛಾಯೆಯುಳ್ಳ ಭಿನ್ನ ಪಾತ್ರಗಳನ್ನು ಪ್ರಯತ್ನಿಸುತ್ತಾರೆ, ಅವರ ಬಳಿ ಸಾಕಷ್ಟು ಹಣ ಇದೆ. ಅವರ ಆಸ್ತಿ ಬಗ್ಗೆ ಇಲ್ಲಿದೆ ವಿವರ.

ಅಲ್ಲು ಅರ್ಜುನ್ ಆಸ್ತಿ 600 ಕೋಟಿ ರೂಪಾಯಿ ಅಷ್ಟಿದೆ ಎನ್ನಲಾಗಿದೆ. ಹೈದರಾಬಾದ್​ನ ಜೂಬ್ಲಿ ಹಿಲ್ಸ್​ನ ಐಶಾರಾಮಿ ಬಂಗಲೆಯನ್ನು ಅಲ್ಲು ಅರ್ಜುನ್ ಹೊಂದಿದ್ದಾರೆ. ಈ ಮನೆಯಲ್ಲಿ ಅಲ್ಲು ಅರ್ಜುನ್, ಪತ್ನಿ ಸ್ನೇಹಾ ರೆಡ್ಡಿ, ಮಕ್ಕಳಾದ ಅಯಾನ್ ಹಾಗೂ ಅರ್ಹಾ ಜೊತೆಗೆ ವಾಸಿಸುತ್ತಾರೆ. ಈ ಬಂಗಲೆ ತುಂಬಾ ದೊಡ್ಡದಿದೆ. ಈ ಮನೆಯ ಮೌಲ್ಯ ಸುಮಾರು 100 ಕೋಟಿ ಎನ್ನಲಾಗುತ್ತದೆ.

ಅಲ್ಲು ಅರ್ಜುನ್ ಅವರು ಸಾಕಷ್ಟು ಕಾರನ್ನು ಹೊಂದಿದ್ದಾರೆ. ಅವರ ಬಳಿ ಇರುವ ಅತ್ಯಂತ ದುಬಾರಿ ಕಾರು ರೇಂಜ್ ರೋವರ್ ವೋಗ್. ಈ ಕಾರಿನ ಬೆಲೆ ಎರಡು ಕೋಟಿಗೂ ಹೆಚ್ಚು. ಇದನ್ನು 2019ರಲ್ಲಿ ಅಲ್ಲು ಅರ್ಜುನ್ ಖರೀದಿಸಿದ್ದರು. ಇದಕ್ಕೆ ಬೀಸ್ಟ್ ಎಂದು ಹೆಸರಿಟ್ಟಿದ್ದಾರೆ. ವೋಲ್ವೊ ಎಕ್ಸ್​ಸಿ 90 ಟಿ8 ಎಕ್ಸಲೆಂಟ್ ಇದ್ದು, ಇದರ ಬೆಲೆ 1.30 ಕೋಟಿ ರುಪಾಯಿ. ಈ ಕಾರನ್ನು ಅಲ್ಲು ಅರ್ಜುನ್ ಹೆಚ್ಚು ಬಳಸುತ್ತಾರೆ. ಇದು ಅವರ ಮೆಚ್ಚಿನ ಕಾರು.

ಅಲ್ಲು ಅರ್ಜುನ್ ಬಳಿ ಶ್ವೇತ ವರ್ಣದ ಜಾಗ್ವಾರ್ ಎಕ್ಸ್​ಜೆ ಎಲ್ ಇದೆ. ಇನ್ನು ಅಲ್ಲು ಅರ್ಜುನ್ ಬಳಿ ಇರುವ ಅತ್ಯಂತ ಹೆಚ್ಚು ಬೆಲೆಯ ವಾಹನವೆಂದರೆ ಅವರ 7 ಕೋಟಿ ಮೌಲ್ಯದ ಕ್ಯಾರಾವ್ಯಾನ್. ಇದನ್ನು ವಿಶೇಷವಾಗಿ ಆರ್ಡರ್ ನೀಡಿ ಅಲ್ಲು ಅರ್ಜುನ್ ನಿರ್ಮಿಸಿಕೊಂಡಿದ್ದಾರೆ.

ಇದನ್ನೂ ಓದಿ: ಅಲ್ಲು ಅರ್ಜುನ್ ಹುಟ್ಟುಹಬ್ಬಕ್ಕೆ ಸಿಗಲಿದೆ ಸರ್ಪ್ರೈಸ್; ಹೊಸ ಸಿನಿಮಾ ಟೈಟಲ್ ಮೇಲೆ ಕಣ್ಣು

ಅಲ್ಲು ಅರ್ಜುನ್ ಉದ್ಯಮಿಯೂ ಹೌದು. ಅನ್ನಪೂರ್ಣ ಸ್ಟುಡಿಯೋಸ್ ನಲ್ಲಿ ಪಾಲುದಾರಿಕೆ ಹೊಂದಿದ್ದಾರೆ. ಆಹಾ ಒಟಿಟಿಯಲ್ಲಿಯೂ ಪಾಲುದಾರರು. ಅವರು ಮಲ್ಟಿಪ್ಲೆಕ್ಸ್ ಆರಂಭಿಸಿದ್ದಾರೆ. ಫಾರ್ಮ್​​ಹೌಸ್​​ಗಳೂ ಅವರ ಬಳಿ ಇವೆ. ಅಲ್ಲು ಅರ್ಜುನ್ ಅವರ ಹೊಸ ಸಿನಿಮಾಗೆ ಇಂದು ಟೈಟಲ್ ಘೋಷಣೆ ಆಗಲಿದೆ. ಇದಕ್ಕೆ ಅಲ್ಲು ಅರ್ಜುನ್ ದೊಡ್ಡ ಮೊತ್ತದ ಸಂಭಾವನೆ ಪಡೆಯಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಕರ್ನಾಟಕ ಹವಾಮಾನ ವರದಿ: ಅಂತೂ ತಣ್ಣಗಾದ ಮಳೆರಾಯ; ರಾಜ್ಯದ ಹಲವೆಡೆ ಇಂದು ಶುಷ್ಕ ವಾತಾವರಣ

ಬೆಂಗಳೂರು, ಏಪ್ರಿಲ್ 08: ಕಳೆದ ಹಲವು ದಿನಗಳಿಂದ ರಾಜ್ಯದ ವಿವಿಧ ಭಾಗಗಳಲ್ಲಿ ಮಳೆರಾಯನ (Weather Forecast) ಆರ್ಭಟ ಕಾಣಿಸಿತ್ತು. ಆದರೆ ಇಂದು ಕೇವಲ ಬೆರಳೆಣಿಕೆಯಷ್ಟು ಪ್ರದೇಶಗಳಲ್ಲಿ ಮಳೆಯಾಗಲಿದ್ದು, ಚಿಕ್ಕಬಳ್ಳಾಪುರ, ಕೋಲಾರ, ಚಾಮರಾಜನಗರ ಮೂರು ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಸೂಚಿಸಲಾಗಿದೆ. ಉಳಿದೆಡೆ ಒಣ ಹವೆಯ ವಾತಾವರಣವಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಎಲ್ಲೆಲ್ಲಿ ಒಣ ಹವೆ?

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ರಾಮನಗರ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಮೈಸೂರು, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಒಣ ಹವೆಯ ವಾತಾವರಣ ಇರಲಿದೆ.

ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಇಲಾಖೆ ತಿಳಿಸಿದೆ. ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿಯೂ ಶುಷ್ಕ ವಾತಾವರಣವಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಯಶ್ ರಾವಣನ ಪಾತ್ರ ಒಪ್ಪಿಕೊಳ್ಳಲು ಕಾರಣ ಆಗಿದ್ದು ಆ ಒಂದು ವಿಷಯ

ರಾಕಿಂಗ್ ಸ್ಟಾರ್ ಯಶ್ (Yash) ನಟನೆಯ ಬಹುನಿರೀಕ್ಷಿತ ಸಿನಿಮಾ ‘ಟಾಕ್ಸಿಕ್’ ಕೆಲಸಗಳು ಭರದಿಂದ ಸಾಗುತ್ತಿವೆ. ಈ ಚಿತ್ರ ಜೂನ್​ 4ರಂದು ತೆರೆಗೆ ಬರಲಿದೆ. ಇತ್ತೀಚೆಗೆ ಸಿನಿಮಾದ ಟೀಸರ್ ಹಾಗೂ ಸಾಂಗ್ ರಿಲೀಸ್​ ಆಗಿ ಸದ್ದು ಮಾಡಿತ್ತು. ಈ ಚಿತ್ರದ ಜೊತೆ ಅವರು ‘ರಾಮಾಯಣ’ ಸಿನಿಮಾದಲ್ಲೂ ನಟಿಸಿದ್ದಾರೆ. ಈ ಚಿತ್ರದಲ್ಲಿ ರಾವಣನ ಪಾತ್ರ ಮಾಡಿದ್ದಾರೆ. ಈ ಚಿತ್ರ ಒಪ್ಪಿಕೊಳ್ಳಲು ಕಾರಣವಾದ ವಿಷಯವೇನು ಎಂಬ ವಿಷಯ ಈಗ ರಿವೀಲ್ ಆಗಿದೆ.

ಇತ್ತೀಚೆಗೆ ರಿಲೀಸ್ ಆದ ‘ರಾಮಾಯಣ’ ಟೀಸರ್​​ನಲ್ಲಿ ಯಶ್ ಅವರು ರಾವಣನ ಪಾತ್ರ ಹೇಗಿರಬಹುದು ಎಂಬುದರ ಸಣ್ಣ ಝಲಕ್ ತೋರಿಸಲಾಗಿದೆ. ಈ ಟೀಸರ್​​ನಲ್ಲಿ ರಾವಣನ ಪಾತ್ರವನ್ನು ಹಿಂಭಾಗದಿಂದ ಮಾತ್ರ ತೋರಿಸಲಾಗಿದೆ. ಈ ಮೂಲಕ ನಿರೀಕ್ಷೆ ಮುಂದುವರಿಯುವಂತೆ ಮಾಡಲಾಗಿದೆ.ಈ ಪಾತ್ರದ ಬಗ್ಗೆ ನಿರ್ದೇಶಕ ನಿತೇಶ್ ತಿವಾರಿ ಇತ್ತೀಚೆಗೆ ಮಾತನಾಡಿದ್ದರು.

‘ರಾವಣ ಎಂದಾಕ್ಷಣ ನೆನಪಿಗೆ ಬರೋದು ಆತನ ಕೆಟ್ಟ ಗುಣಗಳು. ಆದರೆ, ರಾವಣ ಕೇವಲ ಕೆಟ್ಟವನು ಮಾತ್ರ ಆಗಿರಲಿಲ್ಲ. ಆತ, ಶಿವನ ದೊಡ್ಡ ಭಕ್ತನಾಗಿದ್ದ. ಆತನಿಗೆ ಸಾಕಷ್ಟು ಜ್ಞಾನ ಇತ್ತು. ರಾವಣನ ಹಲವು ಶೇಡ್​​ಗಳನ್ನು ತೋರಿಸುವ ಪ್ರಯತ್ನ ಸಿನಿಮಾದಲ್ಲಿ ಆಗಲಿದೆ’ ಎಂದು ನಿತೇಶ್ ಹೇಳಿದ್ದಾರೆ.

‘ಒಬ್ಬ ಮನುಷ್ಯ ಅಹಂಕಾರ ಮತ್ತು ಪ್ರತೀಕಾರವನ್ನು ಬೆಳೆಸಿಕೊಂಡರೆ ಅವನ ಯಾವುದೇ ಉತ್ತಮ ಗುಣಗಳು ಕೆಲಸಕ್ಕೆ ಬರೋದಿಲ್ಲ ಮತ್ತು ಅವನು ರಾವಣನಂತೆ ಕೊನೆಗೊಳ್ಳುತ್ತಾನೆ’ ಎಂಬ ಸಂದೇಶ ಸಿನಿಮಾದಲ್ಲಿ ಇರಲಿದೆಯಂತೆ. ಈ ಚಿತ್ರದಲ್ಲಿ ರಾವಣನ ವ್ಯಾಖ್ಯಾನವು ನಾವು ಈ ಮೊದಲು ನೋಡಿದ ಇತರ ರಾಮಾಯಣ ಚಿತ್ರಗಳಲ್ಲಿ ನೋಡಿದ್ದಕ್ಕಿಂತ ಬಹಳ ಭಿನ್ನವಾಗಿರುತ್ತದೆ ಎಂದು ರಣಬೀರ್ ಕಪೂರ್ ಹೇಳಿದ್ದಾರೆ. ಯಶ್ ಅವರು ಈ ಪಾತ್ರವನ್ನು ನೋಡುವ ರೀತಿ ಕೂಡ ಭಿನ್ನವಾಗಿದೆ ಎಂದು ರಣಬೀರ್ ವಿವರಿಸಿದ್ದರು.

ಇದನ್ನೂ ಓದಿ: ರಾವಣನ ಪಾತ್ರ ಮಾಡಲು ಒಪ್ಪಿದ್ದೇಕೆ ಯಶ್, ನಿರ್ದೇಶಕರು ಕೊಟ್ಟರು ಉತ್ತರ

ಈ ಎಲ್ಲಾ ಕಾರಣದಿಂದ ಯಶ್ ಅವರು ರಾವಣನ ಪಾತ್ರ ಮಾಡಲು ಒಪ್ಪಿರಬಹುದು ಎನ್ನಲಾಗುತ್ತಿದೆ. ಈ ಮೊದಲು ನೀಡಿದ ಸಂದರ್ಶನದಲ್ಲಿ ಮಾತನಾಡಿದ್ದ ಯಶ್, ರಾವಣನ ಪಾತ್ರ ಮಾಡಲು ತುಂಬಾನೇ ಇಷ್ಟ ಎಂದಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

Source link

ವೈಭವ್, ಯಶಸ್ವಿ ಸಿಡಿಲಬ್ಬರದ ನಡುವೆ RCB ದಾಖಲೆ ಸೇಫ್

Source link

Hormuz Strait: ಇರಾನ್​ನಿಂದ ತೈಲ ಸಾಗಾಟ ಸುಗಮ, ಹಾರ್ಮುಜ್ ಜಲಸಂಧಿ ತೆರೆಯಲು ಇರಾನ್ ಒಪ್ಪಿಗೆ

ಟೆಹ್ರಾನ್, ಏಪ್ರಿಲ್ 08: ಎರಡು ವಾರಗಳ ಕದನ ವಿರಾಮಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್(Donald Trump) ಒಪ್ಪಿಗೆ ಕೊಡುತ್ತಿದ್ದಂತೆ ಇತ್ತ ಇರಾನ್ ಹಾರ್ಮುಜ್ ಜಲಸಂಧಿಯನ್ನು ತೆರೆಯಲು ಅನುಮತಿ ನೀಡಿದ್ದು, ಇರಾನ್​ನಿಂದ ತೈಲ ಸಾಗಾಟ ಸುಗಮವಾಗಲಿದೆ. ಭಾರತ ಸೇರಿ ಅನೇಕ ದೇಶಗಳಿಗೆ ಇದರಿಂದ ಅನುಕೂಲವಾಗಲಿದೆ.  ಇರಾನ್ ಮೇಲಿನ ದಾಳಿಯನ್ನು ಎರಡು ವಾರಗಳ ಕಾಲ ಮುಂದೂಡಲು ಅಮೆರಿಕ ಅಧ್ಯಕ್ಷ ಟ್ರಂಪ್ ನಿರ್ಧರಿಸಿದ್ದು, ಜಾಗತಿಕ ಮಾರುಕಟ್ಟೆ ನೆಮ್ಮದಿಯ ನಿಟ್ಟುಸಿರು ಬಿಟ್ಟಿದೆ. ಘೋಷಣೆಯ ನಂತರ, ಕಚ್ಚಾ ತೈಲ ಬೆಲೆಗಳು ತೀವ್ರವಾಗಿ ಕುಸಿದಿವೆ ಮತ್ತು ಅಮೆರಿಕದ ಷೇರುಗಳು ಏರಿಕೆಯಾಗಿವೆ.

ಇರಾನ್ ಹಾರ್ಮುಜ್ ಜಲಸಂಧಿಯ ಮೂಲಕ ಹಡಗುಗಳನ್ನು ಸುರಕ್ಷಿತವಾಗಿ ಹಾದುಹೋಗಲು ಅನುಮತಿಸಿದರೆ ಮಿಲಿಟರಿ ಕ್ರಮವನ್ನು ನಿಲ್ಲಿಸಬಹುದು ಎಂದು ಡೊನಾಲ್ಡ್​ ಟ್ರಂಪ್ ಹೇಳಿದ್ದರು. ಇದೀಗ ಇರಾನ್ ಅದಕ್ಕೆ ಒಪ್ಪಿಕೊಂಡಿದೆ. ಹಾರ್ಮುಜ್ ಜಲಸಂಧಿಯನ್ನು ಎರಡು ವಾರಗಳ ಅವಧಿಗೆ ತೆರೆಯಲಾಗುವುದು ಎಂದು ಅರಾಘ್ಚಿ ಘೋಷಿಸಿದ್ದಾರೆ.

ಯುಎಸ್ ಕಚ್ಚಾ ತೈಲ ಬೆಲೆಗಳು ಸುಮಾರು ಶೇ. 18 ರಷ್ಟು ಇಳಿದು ಪ್ರತಿ ಬ್ಯಾರೆಲ್‌ಗೆ 92.60 ಡಾಲರ್​ಗೆ ಕ್ಕೆ ತಲುಪಿದರೆ, ಬ್ರೆಂಟ್ ಕಚ್ಚಾ ತೈಲ ಬೆಲೆಗಳು ಸುಮಾರು ಶೇ.6 ರಷ್ಟು ಇಳಿದು ಪ್ರತಿ ಬ್ಯಾರೆಲ್‌ಗೆ 103.40 ಡಾಲರ್​ಗೆ ತಲುಪಿವೆ. ಅಮೆರಿಕದ ಷೇರು ಮಾರುಕಟ್ಟೆಗಳು ಏರಿಕೆಯಾಗಿದ್ದು, ಹೂಡಿಕೆದಾರರ ವಿಶ್ವಾಸವನ್ನು ಹೆಚ್ಚಿಸಿವೆ.

ಮತ್ತಷ್ಟು ಓದಿ: ಇರಾನ್ ಮುಗಿಸಲು ಒಂದೇ ಒಂದು ರಾತ್ರಿ ಸಾಕು, ಗಡುವು ಮುಗಿಯುವ ಮುನ್ನವೇ ಇರಾನ್​ಗೆ ಟ್ರಂಪ್ ಬೆದರಿಕೆ

ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪ್ರಮುಖ ಘೋಷಣೆ ಮಾಡಿದ್ದು, ಇರಾನ್ ಮೇಲಿನ ಸಂಭಾವ್ಯ ದಾಳಿಗಳು ಮತ್ತು ಬಾಂಬ್ ದಾಳಿಗಳನ್ನು ಎರಡು ವಾರಗಳ ಕಾಲ ನಿಲ್ಲಿಸಲಾಗಿದೆ ಎಂದು ಹೇಳಿದ್ದಾರೆ. ಇದು ದ್ವಿಪಕ್ಷೀಯ ಕದನ ವಿರಾಮ ಎಂದು ಟ್ರಂಪ್ ಹೇಳಿದ್ದಾರೆ.

ಅಂದರೆ ಈ ಅವಧಿಯಲ್ಲಿ ಅಮೆರಿಕ ಅಥವಾ ಇರಾನ್ ಯಾವುದೇ ಆಕ್ರಮಣಕಾರಿ ಕ್ರಮವನ್ನು ತೆಗೆದುಕೊಳ್ಳುವುದಿಲ್ಲ.ಈ ಒಪ್ಪಂದಕ್ಕೆ ಒಂದು ಮಹತ್ವದ ಷರತ್ತು ವಿಧಿಸಲಾಗಿದೆ: ಇರಾನ್ ತಕ್ಷಣವೇ, ಸಂಪೂರ್ಣವಾಗಿ ಮತ್ತು ಸುರಕ್ಷಿತವಾಗಿ ಹಾರ್ಮುಜ್ ಜಲಸಂಧಿಯನ್ನು ತೆರೆಯಬೇಕು. ಕದನ ವಿರಾಮಕ್ಕೆ ಪಾಕಿಸ್ತಾನದ ಪ್ರಯತ್ನಗಳಿಗೆ ಅಬ್ಬಾಸ್ ಅರಘ್ಚಿ ಕೃತಜ್ಞತೆ ಸಲ್ಲಿಸಿದರು ಮತ್ತು ಪಾಕಿಸ್ತಾನದ ಪ್ರಧಾನಿ ಶಹಬಾಜ್ ಷರೀಫ್ ಅವರನ್ನು ಶ್ಲಾಘಿಸಿದರು.

ಇರಾನ್‌ಗೆ ನೀಡಿದ್ದ 48 ಗಂಟೆಗಳ ಡೆಡ್‌ಲೈನ್‌ ಅಮೆರಿಕ ಕಾಲಮಾನ ರಾತ್ರಿ 8 ಗಂಟೆಗೆ ಅಂತ್ಯವಾಗುವ ಒಂದು ಗಂಟೆಯ ಮೊದಲು ಟ್ರಂಪ್‌ ತಮ್ಮ ಟ್ರೂಥ್‌ ಸಾಮಾಜಿಕ ಜಾಲತಾಣದಲ್ಲಿ ಈ ವಿಚಾರವನ್ನು ಬಹಿರಂಗಪಡಿಸಿದ್ದಾರೆ.

ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಮತ್ತು ಫೀಲ್ಡ್ ಮಾರ್ಷಲ್ ಅಸಿಮ್ ಮುನೀರ್ ಅವರು ಇಂದು ರಾತ್ರಿ ಇರಾನ್‌ಗೆ ಕಳುಹಿಸಲಾಗುತ್ತಿರುವ ವಿನಾಶಕಾರಿ ಪಡೆಗಳನ್ನು ತಡೆಹಿಡಿಯುವಂತೆ ಮನವಿ ಮಾಡಿದರು. ಹಾರ್ಮುಜ್ ಜಲಸಂಧಿಯನ್ನು ಸಂಪೂರ್ಣವಾಗಿ ಈ ಕೂಡಲೇ ತೆರೆಯಲು ಒಪ್ಪಿಕೊಂಡರೆ ಇರಾನ್‌ ಮೇಲೆ ಮಾಡಲು ಉದ್ದೇಶಿಸಿರುವ ಬಾಂಬ್‌ ದಾಳಿಯನ್ನು ಎರಡು ವಾರಗಳ ಕಾಲ ತಡೆ ಹಿಡಿಯಲು ಒಪ್ಪಿಗೆ ನೀಡುತ್ತೇನೆ. ಇದು ದ್ವಿಪಕ್ಷೀಯ ಕದನ ವಿರಾಮ ಆಗಲಿದೆ ಎಂದಿದ್ದಾರೆ.

 

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

Exit mobile version