Headlines

ನಿದ್ರೆಗೆ ಭಂಗ ಉಂಟಾಗಲು ನಿಮ್ಮ ಈ ಅಭ್ಯಾಸಗಳೇ ಕಾರಣ – Kannada News

ಆಹಾರ, ನೀರಿನಂತೆ ಮನುಷ್ಯನಿಗೆ ನಿದ್ರೆಯೂ (sleep) ತುಂಬಾ ಮುಖ್ಯ. 8 ರಿಂದ 9 ಗಂಟೆಗಳ ಕಾಲ ಉತ್ತಮ ನಿದ್ರೆ ಮಾಡುವುದರಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯ ಎರಡೂ ಉತ್ತಮವಾಗಿರುತ್ತದೆ. ಆದರೆ ಇಂದು ಹೆಚ್ಚಿನವರು ನಿದ್ರಾಹೀನತೆಯ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಹೌದು ಅನೇಕರಿಗೆ ಎಷ್ಟೇ ಪ್ರಯತ್ನಪಟ್ಟರೂ ರಾತ್ರಿ ನಿದ್ರೆ ಮಾಡಲು ಸಖತ್‌ ಕಷ್ಟಕರವಾಗುತ್ತದೆ. ನಿದ್ರಾಹೀನತೆಗೆ ಈ ಕೆಲವೊಂದು ಅಭ್ಯಾಸಗಳೇ ಕಾರಣವಂತೆ. ಈ ಅಭ್ಯಾಸಗಳನ್ನು ತ್ಯಜಿಸಿದರೆ ನೀವು ಸಹ ರಾತ್ರಿಯಲ್ಲಿ ಉತ್ತಮವಾಗಿ ನಿದ್ರೆ ಮಾಡಬಹುದು. ನಿದ್ರೆಗೆ ಭಂಗ ತರುವಂತಹ ಆ ಅಭ್ಯಾಸಗಳು…

Read More

ದರ್ಶನ್ ತಂಡದ ನೊಟೀಸ್​​ ಬಗ್ಗೆ ‘ಬಾಸ್’ ಸಿನಿಮಾ ತಂಡ ಮಾತು – Kannada News

ಕನ್ನಡದಲ್ಲಿ ‘ಬಾಸ್’ ಹೆಸರಿನ ಸಿನಿಮಾ ಬಿಡುಗಡೆ ಆಗುತ್ತಿದ್ದು, ಈ ಸಿನಿಮಾದ ಟ್ರೈಲರ್ (Trailer) ಕೆಲ ವಾರಗಳ ಮುಂಚೆ ಬಿಡುಗಡೆ ಆಗಿತ್ತು. ಸಿನಿಮಾದ ಟ್ರೈಲರ್ ನೋಡಿದವರಿಗೆ ಇದು ನಟ ದರ್ಶನ್ ಅವರ ರೇಣುಕಾ ಸ್ವಾಮಿ ಪ್ರಕರಣ ಕುರಿತಾದದ್ದೇ ಕತೆ ಎಂಬುದು ಸ್ಪಷ್ಟವಾಗಿ ತಿಳಿಯುತ್ತಿತ್ತು. ಆದರೆ ಚಿತ್ರತಂಡ ಅದನ್ನು ಉದ್ದೇಶಪೂರ್ವಕವಾಗಿ ಅಲ್ಲಗಳೆಯುತ್ತಲೇ ಬಂದಿತ್ತು. ಕೆಲ ವಾರಗಳ ಹಿಂದೆ ದರ್ಶನ್ ಕಡೆಯಲು ಚಿತ್ರತಂಡಕ್ಕೆ ನೊಟೀಸ್ ಕಳಿಸಿ ಟ್ರೈಲರ್ ತೆಗೆಯುವಂತೆ ಆಗ್ರಹಿಸಿದ್ದರು. ಇದೀಗ ‘ಬಾಸ್’ ಚಿತ್ರತಂಡವು ಈ ಸುದ್ದಿಗೋಷ್ಠಿ ನಡೆಸಿದ್ದು, ದರ್ಶನ್ ಕಡೆಯವರ…

Read More

ಗ್ಯಾಸ್ ಸ್ಟೋವ್ ಮನೆಯೊಳಗಿನ ಗಾಳಿಯನ್ನು ಮಾಲಿನ್ಯಗೊಳಿಸಿ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಾ? – Kannada News

ಇಂದಿನ ಬಹುತೇಕ ಮನೆಗಳಲ್ಲಿ ಅಡುಗೆ ಮಾಡಲು ಗ್ಯಾಸ್ ಸ್ಟೋವ್ (Gas Stove) ಬಳಸಲಾಗುತ್ತದೆ. ಆದರೆ ಮನೆಯ ಒಳಗಿನ ಗಾಳಿಯ ಗುಣಮಟ್ಟವೂ ಆರೋಗ್ಯಕ್ಕೆ ಬಹಳ ಮುಖ್ಯ ಎನ್ನಲಾಗುತ್ತದೆ. ವಿಶೇಷವಾಗಿ ಅಡುಗೆ ಮನೆಯಲ್ಲಿ ಉಂಟಾಗುವ ಹೊಗೆ ಮತ್ತು ಅನಿಲಗಳು ಮನೆಯ ಗಾಳಿಯನ್ನು ದುಷಿತಗೊಳಿಸುವ ಸಾಧ್ಯತೆ ಇದೆ ಎಂದು ತಜ್ಞರು ಹೇಳುತ್ತಾರೆ. ಅಮೆರಿಕದ ಪರಿಸರ ಸಂರಕ್ಷಣಾ ಸಂಸ್ಥೆ (EPA) ಹೇಳಿರುವ ಪ್ರಕಾರ, ಗ್ಯಾಸ್ ಸ್ಟೋವ್ ಬಳಸುವ ವೇಳೆ ಕೆಲವು ಹಾನಿಕಾರಕ ಅನಿಲಗಳು ಮತ್ತು ಸೂಕ್ಷ್ಮ ಕಣಗಳು ಹೊರಬರುತ್ತವೆ. ಇದರಲ್ಲಿ ನೈಟ್ರೋಜನ್ ಡೈಆಕ್ಸೈಡ್…

Read More

ಅಂತರರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ ಆರ್​ಸಿಬಿ ಪರ ಆಡಿದ್ದ ಟೀಂ ಇಂಡಿಯಾ ಕ್ರಿಕೆಟಿಗ – Kannada News

ಭಾರತ ಹಾಗೂ ಅಫ್ಘಾನಿಸ್ತಾನ (India vs Afghanistan) ನಡುವಿನ ಏಕೈಕ ಟೆಸ್ಟ್ ಪಂದ್ಯ ಇದೇ ಜೂನ್ 6 ರಿಂದ ಆರಂಭವಾಗಲಿದೆ. ಇದಕ್ಕಾಗಿ ಉಭಯ ತಂಡಗಳು ಕೂಡ ತಯಾರಿ ನಡೆಸುತ್ತಿವೆ. ಈ ನಡುವೆ ಟೀಂ ಇಂಡಿಯಾ (Team India) ಪರ ಟೆಸ್ಟ್ ಪಂದ್ಯವನ್ನಾಡಿದ ವಿಕೆಟ್ ಕೀಪರ್-ಬ್ಯಾಟ್ಸ್‌ಮನ್ ಶ್ರೀಕರ್ ಭರತ್ (KS Bharat) ಕೇವಲ 32 ನೇ ವಯಸ್ಸಿನಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತರಾಗಿದ್ದಾರೆ. ಆಂಧ್ರಪ್ರದೇಶ ಪರ ದೇಶಿ ಕ್ರಿಕೆಟ್ ಆಡುತ್ತಿದ್ದ ಭರತ್ ಅವರ ಅಂತರರಾಷ್ಟ್ರೀಯ ವೃತ್ತಿಜೀವನ ಹೆಚ್ಚು ಕಾಲ ಇರದಿದ್ದರೂ,…

Read More

ಅವರಿಗೆ ಹೇಳಿ ಪಿಚ್ಚರ್ ಅಭಿ ಬಾಕಿ ಹೈ, ಇದು ಕೇವಲ ಟ್ರೈಲರ್ ಅಷ್ಟೇ: ಹರಿಪ್ರಸಾದ್ ಎಚ್ಚರಿಕೆ ಕೊಟ್ಟಿದ್ಯಾರಿಗೆ? – Kannada News

ಬೆಂಗಳೂರು, (ಜೂನ್ 04): ಹಳೇ ಸಿನಿಮಾಗೆ ಹೊಸ ಪೋಸ್ಟರ್ ಹಾಕಿದ್ದಾರೆ ಎಂಬ ವಿಪಕ್ಷ ನಾಯಕ ಆರ್ ಅಶೋಕ್ (R Ashoka) ಹೇಳಿಕೆಗೆ ಕೆಪಿಸಿಸಿಯ ನೂತನ ಅಧ್ಯಕ್ಷ ಬಿಕೆ ಹರಿಪ್ರಸಾದ್ (BK Hariprasad)  ಖಡಕ್ ಎಚ್ಚರಿಕೆ ಮೂಲಕ ನೀಡಿದ್ದಾರೆ. ಬೆಂಗಳೂರಿನಲ್ಲಿಂದು ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯನವರ ಭೇಟಿ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು,  ವಾಟ್ಸಾಪ್ ಯೂನಿವರ್ಸಿಟಿಯಲ್ಲಿ ಹರಿದಾಡುವ ಪ್ರತಿಯೊಂದು ಸುದ್ದಿಗೂ ಉತ್ತರ ನೀಡಲು ಸಾಧ್ಯವಿಲ್ಲ.  “ಅಶೋಕ್​​​ಗೆ ಹೇಳಿ, ಪಿಕ್ಚರ್ ಅಭಿ ಬಾಕಿ ಹೈ. ಇದು ಕೇವಲ ಟ್ರೇಲರ್ ಮಾತ್ರ”…

Read More

‘ರಾಮಾಯಣ’, ‘ವಾರಣಾಸಿ’ ಚಿತ್ರಗಳ ಬಜೆಟ್ ಒಂದು ಗಿಮಿಕ್ ಎಂದ ಮನೋಜ್ ಬಾಜಪೇಯಿ – Kannada News

ಸದ್ಯ ಭಾರತೀಯ ಚಿತ್ರರಂಗದಲ್ಲಿ ಭಾರಿ ನಿರೀಕ್ಷೆ ಮೂಡಿಸಿರುವ ರಣಬೀರ್ ಕಪೂರ್ ನಟನೆಯ ‘ರಾಮಾಯಣ’ ಮತ್ತು ಮಹೇಶ್ ಬಾಬು ಅಭಿನಯದ ‘ವಾರಣಾಸಿ’ (Varanasi) ಚಿತ್ರಗಳ ಬಜೆಟ್ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ದೊಡ್ಡ ಚರ್ಚೆ ನಡೆಯುತ್ತಿದೆ. ಸಾವಿರಾರು ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಈ ಚಿತ್ರಗಳ ಬಜೆಟ್ ಹೈಪ್ ಕುರಿತು ರಾಷ್ಟ್ರ ಪ್ರಶಸ್ತಿ ವಿಜೇತ ನಟ ಮನೋಜ್ ಬಾಜಪೇಯಿ (Manoj Bajpayee) ತೀವ್ರ ಅಸಮಾಧಾನ ಹೊರಹಾಕಿದ್ದಾರೆ. ಸಿನಿಮಾ ಕಥೆಗಿಂತ ಬಜೆಟ್‌ಗೆ ಹೆಚ್ಚು ಪ್ರಾಮುಖ್ಯತೆ ನೀಡುತ್ತಿರುವ ಪ್ರೇಕ್ಷಕರ ಬಗ್ಗೆ ಅವರು ಮಾತನಾಡಿದ್ದಾರೆ….

Read More

ನಕಲಿ ಉದ್ಯೋಗದ ಜಾಹೀರಾತು ಮೂಲಕ ಬೇರೆ ದೇಶಗಳ ರಹಸ್ಯ ಮಾಹಿತಿ ಕದಿಯಲು ಚೀನಾ ಯತ್ನ! – Kannada News

ಲಂಡನ್, ಜೂನ್ 4: ವಿಶ್ವದ ಅತ್ಯಂತ ಶಕ್ತಿಶಾಲಿ ಗುಪ್ತಚರ ಮಾಹಿತಿ ಹಂಚಿಕೆ ಒಕ್ಕೂಟವಾದ ‘ಫೈವ್ ಐಸ್’ (ಆಸ್ಟ್ರೇಲಿಯಾ, ಕೆನಡಾ, ನ್ಯೂಜಿಲೆಂಡ್, ಬ್ರಿಟನ್ ಮತ್ತು ಅಮೆರಿಕ) ದೇಶಗಳ ಸರ್ಕಾರಿ ಮತ್ತು ಮಿಲಿಟರಿ ಸಿಬ್ಬಂದಿಗಳನ್ನು ಗುರಿಯಾಗಿಸಿಕೊಂಡು ಚೀನಾ (China) ಆನ್‌ಲೈನ್‌ನಲ್ಲಿ ನಕಲಿ ಉದ್ಯೋಗದ ಜಾಲ ಬೀಸಿದೆ ಎಂದು ಒಕ್ಕೂಟವು ಗಂಭೀರ ಎಚ್ಚರಿಕೆ ನೀಡಿದೆ. ಲಿಂಕ್ಡ್‌ಇನ್ (LinkedIn), ಇಂಡೀಡ್​ನಂತಹ ವೃತ್ತಿಪರ ಜಾಲತಾಣಗಳ ಮೂಲಕ ರಹಸ್ಯ ಮತ್ತು ಸೂಕ್ಷ್ಮ ಮಾಹಿತಿಗಳನ್ನು ಪಡೆಯಲು ಚೀನಾ ಈ ಕುತಂತ್ರ ನಡೆಸುತ್ತಿದೆ ಎನ್ನಲಾಗಿದೆ. ಚೀನಾದ ಮಿಲಿಟರಿ ಗುಪ್ತಚರ…

Read More

ರಿಸರ್ವ್ ಬ್ಯಾಂಕ್ ಎಂಪಿಸಿ ಸಭೆ; ರೆಪೋ ದರ ಇಳಿಕೆಯಾಗುತ್ತಾ? ಶುಕ್ರವಾರ ನಿರ್ಧಾರ ಪ್ರಕಟಿಸಲಿದ್ದಾರೆ ಆರ್​ಬಿಐ ಗವರ್ನರ್ – Kannada News

ನವದೆಹಲಿ, ಜೂನ್ 4: ತೈಲ ಬಿಕ್ಕಟ್ಟು ಮುಂದುವರಿದಿರುವುದು, ಹಾಗು ಹಣದುಬ್ಬರ ಒತ್ತಡ ಎದುರಿಸುತ್ತಿರುವುದು, ಈ ಪರಿಸ್ಥಿತಿಯಲ್ಲಿ ಎಲ್ಲರ ಚಿತ್ತ ಆರ್​ಬಿಐನ ಎಂಪಿಸಿ ಸಭೆ ಮೇಲೆ ನೆಟ್ಟಿದೆ. ನಿನ್ನೆ (ಜೂನ್ 3) ಆರಂಭವಾಗಿರುವ ಭಾರತೀಯ ರಿಸರ್ವ್ ಬ್ಯಾಂಕ್​ನ (RBI) ಹಣಕಾಸು ನೀತಿ ಸಮಿತಿ (MPC) ಸಭೆಯ ನಿರ್ಧಾರಗಳು ಜೂನ್ 5ರಂದು ಹೊರಬರಲಿವೆ. ಆರ್‌ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ ಅವರು ಶುಕ್ರವಾರ ಬೆಳಿಗ್ಗೆ 10 ಗಂಟೆಗೆ ರೆಪೋ ದರ (Repo Rate) ಮತ್ತು ಇತರ ಪ್ರಮುಖ ಆರ್ಥಿಕ ನಿರ್ಧಾರಗಳನ್ನು ಪ್ರಕಟಿಸಲಿದ್ದಾರೆ….

Read More

ಬೆಂಗಳೂರಿನ ಎಸ್​​ಬಿಐ ಬ್ಯಾಂಕ್ ಒಕ್ಕೂಟಕ್ಕೆ ಕೋಟ್ಯಂತರ ರೂ ವಂಚನೆ: ದೀಪಕ್ ಕೇಬಲ್ಸ್ ಲಿಮಿಟೆಡ್ ನಿರ್ದೇಶಕ ಅರೆಸ್ಟ್​ – Kannada News

ಪ್ರಾತಿನಿಧಿಕ ಚಿತ್ರImage Credit source: Getty images ಬೆಂಗಳೂರು, ಜೂನ್​ 04: ಎಸ್​ಬಿಐ ಬ್ಯಾಂಕ್ ಒಕ್ಕೂಟಕ್ಕೆ 899.35 ಕೋಟಿ ರೂ. ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೀಪಕ್ ಕೇಬಲ್ಸ್(ಇಂಡಿಯಾ) ಲಿಮಿಟೆಡ್ (Deepak Cables (India) Limited) ನಿರ್ದೇಶಕ ಕರುಟೂರಿ ವೆಂಕಟೇಶ್ವರ್ ರಾವ್​​ರನ್ನು ಬೆಂಗಳೂರು ವಲಯದ ಇಡಿ (ED) ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ. ಇತ್ತೀಚೆಗೆ ಇಡಿ ಅಧಿಕಾರಿಗಳು ದೀಪಕ್ ಕೇಬಲ್ಸ್ ಮೇಲೆ ದಾಳಿ ಮಾಡಿ ಕೋಟ್ಯಂತರ ನಗದು, ಆಸ್ತಿ ಜಪ್ತಿ ಮಾಡಿದ್ದರು. ಮುಖ್ಯಾಂಶಗಳು SBI ಬ್ಯಾಂಕ್ ಒಕ್ಕೂಟಕ್ಕೆ 899.35 ಕೋಟಿ…

Read More

IND vs AFG: ಏಕದಿನ ಸರಣಿಯಿಂದ ಕೊಹ್ಲಿ ಜೊತೆಗೆ ರೋಹಿತ್ ಕೂಡ ಔಟ್? – Kannada News

ಭಾರತ ಮತ್ತು ಅಫ್ಘಾನಿಸ್ತಾನ (India vs Afghanistan) ನಡುವಿನ ಏಕೈಕ ಟೆಸ್ಟ್ ಪಂದ್ಯ ಜೂನ್ 6 ರಿಂದ ಆರಂಭವಾಗಲಿದೆ. ಅದಾದ ನಂತರ, ಜೂನ್ 14 ರಿಂದ ಉಭಯ ತಂಡಗಳ ನಡುವೆ ಮೂರು ಪಂದ್ಯಗಳ ಏಕದಿನ ಸರಣಿ ನಡೆಯಲಿದೆ. ವಿರಾಟ್ ಕೊಹ್ಲಿ (Virat Kohli) ಹಾಗೂ ರೋಹಿತ್ ಶರ್ಮಾ (Rohit Sharma) ಪ್ರಸ್ತುತ ಏಕದಿನ ಮಾದರಿಯಲ್ಲಿ ಮಾತ್ರ ಆಡುತ್ತಿರುವುದರಿಂದ, ಅಭಿಮಾನಿಗಳು ಅವರನ್ನು ಟೀಂ ಇಂಡಿಯಾ ಜೆರ್ಸಿಯಲ್ಲಿ ನೋಡಲು ಕಾತುರದಿಂದ ಕಾಯುತ್ತಿದ್ದಾರೆ. ಆದಾಗ್ಯೂ, ಈ ಸರಣಿ ಪ್ರಾರಂಭವಾಗುವ ಮೊದಲು, ತಂಡಕ್ಕೆ…

Read More