ಪ್ರೀ ರಿಲೀಸ್​​ನಲ್ಲಿ ಕಾರ್ಯಕ್ರಮದಲ್ಲಿ ಎಐ ಬಳಕೆ: ನಟನ ಬುದ್ಧಿವಂತಿಕೆ ಮೆಚ್ಚಿದ ಅಭಿಮಾನಿಗಳು

ಪ್ರೀ ರಿಲೀಸ್​​ನಲ್ಲಿ ಕಾರ್ಯಕ್ರಮದಲ್ಲಿ ಎಐ ಬಳಕೆ: ನಟನ ಬುದ್ಧಿವಂತಿಕೆ ಮೆಚ್ಚಿದ ಅಭಿಮಾನಿಗಳು

ಪ್ಯಾನ್ ಇಂಡಿಯಾ (Pan India) ಸಿನಿಮಾಗಳ ಹವಾ ಜೋರಾದ ಮೇಲೆ ಸ್ಟಾರ್ ನಟರು ಬೇರೆ ಬೇರೆ ರಾಜ್ಯಗಳಲ್ಲಿ ಸಿನಿಮಾ ಪ್ರಚಾರ ಮಾಡುವುದು ಕಡ್ಡಾಯ ಆಗಿಬಿಟ್ಟಿದೆ. ಆದರೆ 22 ಅಧಿಕೃತ ಭಾಷೆಗಳಿರುವ ಭಾರತದಲ್ಲಿ ಎಲ್ಲ ಪ್ರೇಕ್ಷಕರನ್ನು ಅವರ ಸ್ವಂತ ಭಾಷೆಗಳ ಮೂಲಕ ತಲುಪುವುದು ಬಹಳ ಕಷ್ಟ. ಎಷ್ಟೋ ಮಂದಿ ಸ್ಟಾರ್ ನಟರು, ತಮ್ಮ ಭಾಷೆಯ ಮಿತಿಯಿಂದಾಗಿಯೇ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗುವುದಿಲ್ಲ. ಆದರೆ ಇದೀಗ ಯುವ ನಟನೊಬ್ಬ ಬುದ್ಧಿವಂತಿಕೆ ತೋರಿಸಿದ್ದು, ಎಐ ಬಳಸಿ ಬೇರೆ ರಾಜ್ಯದಲ್ಲಿ ಪ್ರಚಾರ ಮಾಡಿರುವುದು ಮಾತ್ರವಲ್ಲ, ಸಖತ್ ಜನ ಸ್ಪಂದನೆಯನ್ನೂ ಸಹ ಪಡೆದಿದ್ದಾರೆ.

ತಮಿಳಿನ ಸ್ಟಾರ್ ಯುವನಟ ಪ್ರದೀಪ್ ರಂಗನಾಥನ್ ನಟನೆಯ ‘ಎಲ್​​ಐಕೆ’ ಸಿನಿಮಾ ಇದೇ ವಾರ ಬಿಡುಗಡೆ ಆಗುತ್ತಿದ್ದು, ಸಿನಿಮಾದ ಪ್ರೀ ರಿಲೀಸ್ ಕಾರ್ಯಕ್ರಮವನ್ನು ಹೈದರಾಬಾದ್​​ನಲ್ಲಿ ಆಯೋಜಿಸಲಾಗಿತ್ತು. ಪ್ರದೀಪ್, ಪ್ರತಿಬಾರಿಯೂ ತಮ್ಮ ಸಿನಿಮಾ ಬಿಡುಗಡೆ ಆಗುವಾಗ ತೆಲುಗು ರಾಜ್ಯಗಳಿಗೆ ಬಂದು ಪ್ರಚಾರ ಮಾಡುತ್ತಾರೆ. ಆದರೆ ತೆಲುಗು ಸರಿಯಾಗಿ ಬರದ ಕಾರಣ ಈಹಿಂದೆ ಕೆಲವು ಸಮಸ್ಯೆಗಳನ್ನು ಅವರು ಎದುರಿಸಿದ್ದರು.

ಇದೇ ಕಾರಣಕ್ಕೆ ಈ ಬಾರಿ ಪ್ರೀ ರಿಲೀಸ್ ಕಾರ್ಯಕ್ರಮದಲ್ಲಿ ಅವರು ಪ್ರೀ ರಿಲೀಸ್ ಭಾಷಣದ ವೇಳೆ ಎಐ ಮೊರೆ ಹೋಗಿದ್ದಾರೆ. ‘ಕಳೆದ ಬಾರಿ ನಾನು ತೆಲುಗಿನಲ್ಲಿ ಮಾತನಾಡಿದಾಗ ಸಾಕಷ್ಟು ಸಮಸ್ಯೆ ಆಗಿತ್ತು. ನನಗೆ ತೆಲುಗು ಸರಿಯಾಗಿ ಬರದು, ಹಾಗಾಗಿ ನಾನು ತಮಿಳಿನಲ್ಲಿ ಹೇಳಿದ್ದನ್ನು ಎಐ ತೆಲುಗಿನಲ್ಲಿ ಹೇಳಲಿದೆ ಎಂದು ಹೇಳಿ. ತಮ್ಮ ಮೊಬೈಲ್ ನ ಎಐ ಆಪ್ ಬಳಸಿ ಪ್ರದೀಪ್ ರಂಗನಾಥ್ ಭಾಷಣ ಮಾಡಿದರು.

ಇದನ್ನೂ ಓದಿ:ಎಐನಿಂದ ಮಾಡಲ್ಪಟ್ಟ ರಾಮಾಯಣದ ಬಿಟಿಎಸ್

ಪ್ರದೀಪ್ ರಂಗನಾಥನ್ ಅವರು ‘ಎಲ್​​ಐಕೆ’ ಹೆಸರಿನ ತಮಿಳು ಸಿನಿಮಾನಲ್ಲಿ ನಟಿಸಿದ್ದಾರೆ. ಇದು 2040ರ ಕತೆಯನ್ನು ಒಳಗೊಂಡಿದೆ. ಪ್ರಪಂಚ ಬಹಳ ಅಡ್ವಾನ್ಸ್ ಆಗಿಬಿಟ್ಟಿದೆ, ಮಾನವ ಸಂಬಂಧಗಳು ಬಹಳ ತೆಳುವಾಗಿವೆ. ಅಂಥಹಾ ಸಂದರ್ಭದಲ್ಲಿ ಯುವಕನೊಬ್ಬ ಪ್ರೀತಿಯನ್ನು ಅರಸಿ ಹೋಗುವ ಕತೆಯನ್ನು ಈ ಸಿನಿಮಾ ಒಳಗೊಂಡಿದೆ. ಸಿನಿಮಾನಲ್ಲಿ ಕೃತಿ ಶೆಟ್ಟಿ ನಾಯಕಿ, ಎಸ್​​ಜೆ ಸೂರ್ಯ ವಿಲನ್.

ಪ್ರದೀಪ್ ರಂಗನಾಥನ್ ಭಿನ್ನ ರೀತಿಯ ನಟ. ಈ ವರೆಗೆ ಮೂರು ಸಿನಿಮಾಗಳಲ್ಲಿ ಪ್ರದೀಪ್ ನಟಿಸಿದ್ದು, ಮೂರೂ ಸಿನಿಮಾಗಳು ಭಾರಿ ದೊಡ್ಡ ಹಿಟ್ ಆಗಿವೆ. ಪ್ರದೀಪ್ ನಟಿಸಿರುವ ಮೂರೂ ಸಿನಿಮಾಗಳು ಬಾಕ್ಸ್ ಆಫೀಸ್​​ನಲ್ಲಿ ನೂರು ಕೋಟಿಗೂ ಹೆಚ್ಚು ಗಳಿಕೆ ಮಾಡಿವೆ. ಇದೀಗ ನಾಲ್ಕನೇ ಸಿನಿಮಾ ‘ಎಲ್​​ಐಕೆ’ (ಲವ್ ಇನ್​ಶ್ಯುರೆನ್ಸ್ ಕಂಪೆನಿ)ಯಲ್ಲಿ ನಟಿಸುತ್ತಿದ್ದಾರೆ. ಸಿನಿಮಾ ಇದೇ ಶುಕ್ರವಾರ ಬಿಡುಗಡೆ ಆಗಲಿದೆ. ಸಿನಿಮಾ ನಿರ್ದೇಶನ ಮಾಡಿರುವುದು ನಯನತಾರಾ ಪತಿ ವಿಘ್ನೇಶ್ ಶಿವನ್.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಕೋಟ್ಯಾಂತರ ರೂ. ಮೌಲ್ಯದ ಕಾಮಗಾರಿಗಳನ್ನು ನಿರ್ವಹಿಸುತ್ತಿದ್ದ ಕಂಟ್ರಾಕ್ಟರ್ ಅನುಮಾನಾಸ್ಪದ ಸಾವು!

ಮಂಡ್ಯ, ಏಪ್ರಿಲ್ 07: ಜಿಲ್ಲೆಯಲ್ಲಿ ಪ್ರಥಮ ದರ್ಜೆ ಕಂಟ್ರಾಕ್ಟರ್ ಒಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಆತಂಕ ಮೂಡಿಸಿದೆ. ಶ್ರೀರಂಗಪಟ್ಟಣ ತಾಲೂಕಿನ ಹುಣಸನ ಹಳ್ಳಿಯ ನಿವಾಸಿ ಪವನ್ (27) ಎಂಬ ಯುವಕನ ಶವ ಕಾವೇರಿ ನದಿಯಲ್ಲಿ (Cauvery River) ಪತ್ತೆಯಾಗಿದ್ದು, ಈ ಪ್ರಕರಣ ಹಲವು ಪ್ರಶ್ನೆಗಳನ್ನು ಹುಟ್ಟಿಸಿದೆ.

ಮನೆಗೆ ಬರುವುದಿಲ್ಲ ಎಂದು ಹೇಳಿ ಹೋದವನು ಶವವಾಗಿ ಪತ್ತೆ!

ಪವನ್ ಕೋಟ್ಯಾಂತರ ರೂಪಾಯಿ ಮೌಲ್ಯದ ಕಾಮಗಾರಿಗಳನ್ನು ನಿರ್ವಹಿಸುತ್ತಿದ್ದ ಕಂಟ್ರಾಕ್ಟರ್ ಆಗಿದ್ದು, ನಾಲ್ಕು ದಿನಗಳ ಹಿಂದೆ ಕೆಲಸ ಇದೆ, ಇಂದು ಮನೆಗೆ ಬರುವುದಿಲ್ಲ ಎಂದು ಕುಟುಂಬಕ್ಕೆ ತಿಳಿಸಿ ಹೊರಟಿದ್ದ. ಆದರೆ ನಂತರ ಆತ ಮನೆಗೆ ವಾಪಸ್ ಆಗಿಲ್ಲ. ಅವನ ಮೊಬೈಲ್ ಸ್ವಿಚ್ ಆಫ್ ಆಗಿರುವುದರ ಜೊತೆಗೆ ಸಾಮಾಜಿಕ ಜಾಲತಾಣ ಖಾತೆಗಳೂ ಡಿ-ಆಕ್ಟಿವ್ ಆಗಿದ್ದವು. ಇದರಿಂದ ಆತಂಕಗೊಂಡ ಕುಟುಂಬಸ್ಥರು ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಕೊಲೆಯ ಶಂಕೆ ವ್ಯಕ್ತಪಡಿಸಿದ ಕುಟುಂಬಸ್ಥರು

ಇದೀಗ ನಿನ್ನೆ ಶ್ರೀರಂಗಪಟ್ಟಣ ತಾಲೂಕಿನ ಕಾವೇರಿ ನದಿಯಲ್ಲಿ ಪವನ್ ಅವರ ಮೃತದೇಹ ಪತ್ತೆಯಾಗಿದ್ದು, ದೇಹದ ಮೇಲೆ ಗಾಯಗಳಿರುವುದು ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಕುಟುಂಬಸ್ಥರು ಮತ್ತು ಆಪ್ತರು ಇದು ಕೊಲೆ ಆಗಿರಬಹುದೆಂದು ಶಂಕೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ ಪಾಕಿಸ್ತಾನದ ಕೋರ್ಟ್, ಕಚೇರಿಗಳಿಗೇ ಬಾಂಬ್ ಬೆದರಿಕೆ ಸಂದೇಶ ಕಳುಹಿಸಿದ್ದ ಮೈಸೂರಿನ ‘ಹುಸಿ ಬಾಂಬ್’ ಕಿಂಗ್‌ಪಿನ್!

ಈ ಘಟನೆ ಸ್ಥಳೀಯರಲ್ಲಿ ಭೀತಿ ಹುಟ್ಟಿಸಿದ್ದು, ಪವನ್ ಸಾವಿನ ಸತ್ಯಾಸತ್ಯತೆ ಕುರಿತು ಸಮಗ್ರ ತನಿಖೆ ನಡೆಸುವಂತೆ ಕುಟುಂಬಸ್ಥರು ಆಗ್ರಹಿಸಿದ್ದಾರೆ. ಪ್ರಕರಣ ಸಂಬಂಧ ಶ್ರೀರಂಗಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Hanuman Puja: ಮಂಗಳವಾರ ಹನುಮಂತನ ಪೂಜೆ ಏಕೆ ಶ್ರೇಷ್ಠ? ಉಪವಾಸದ ವೇಳೆ ಈ ತಪ್ಪು ಮಾಡಲೇಬೇಡಿ!

ಹಿಂದೂ ಧರ್ಮದ ಸಂಪ್ರದಾಯದಲ್ಲಿ ವಾರದ ಏಳೂ ದಿನಗಳು ಒಂದೊಂದು ದೇವತೆಗೆ ಮೀಸಲಾಗಿವೆ. ಅದರಂತೆ, ಮಂಗಳವಾರವನ್ನು ಶ್ರೀರಾಮನ ಪರಮ ಭಕ್ತನಾದ ಹನುಮಂತನಿಗೆ ಅಥವಾ ಬಜರಂಗಬಲಿಗೆ ಸಮರ್ಪಿಸಲಾಗಿದೆ. ಈ ದಿನದಂದು ಆಂಜನೇಯನನ್ನು ವಿಶೇಷ ವಿಧಿವಿಧಾನಗಳೊಂದಿಗೆ ಪೂಜಿಸುವುದು ಮತ್ತು ಉಪವಾಸ ಮಾಡುವುದು ಬಹಳ ಹಿಂದಿನಿಂದಲೂ ನಡೆದುಬಂದಿರುವ ಪದ್ಧತಿಯಾಗಿದೆ. ಹೀಗೆ ಮಾಡುವುದರಿಂದ ಹನುಮಂತನು ಪ್ರಸನ್ನನಾಗಿ ಭಕ್ತರ ಜೀವನದಲ್ಲಿರುವ ಎಲ್ಲಾ ಅಡೆತಡೆಗಳನ್ನು ನಿವಾರಿಸುತ್ತಾನೆ ಮತ್ತು ಸಕಲ ಭಯಗಳನ್ನು ದೂರಮಾಡಿ ಆಶೀರ್ವದಿಸುತ್ತಾನೆ ಎಂಬ ಬಲವಾದ ನಂಬಿಕೆಯಿದೆ.

ಪೌರಾಣಿಕ ಹಿನ್ನೆಲೆಯನ್ನು ಗಮನಿಸಿದರೆ, ಹನುಮಂತನು ಜನಿಸಿದ್ದು ಮಂಗಳವಾರದಂದು ಎಂದು ಹೇಳಲಾಗುತ್ತದೆ. ಇದೇ ಕಾರಣಕ್ಕಾಗಿ ಈ ದಿನವನ್ನು ಅವನ ಪೂಜೆಗೆ ಅತ್ಯಂತ ಶ್ರೇಷ್ಠವೆಂದು ಪರಿಗಣಿಸಲಾಗಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಮಂಗಳ ಗ್ರಹವು ಹನುಮಂತನಿಗೆ ಸಂಬಂಧಿಸಿದೆ, ಆದ್ದರಿಂದ ಈ ದಿನ ಉಪವಾಸ ಆಚರಿಸುವುದರಿಂದ ಜಾತಕದಲ್ಲಿರುವ ಮಂಗಳ ದೋಷಗಳು ನಿವಾರಣೆಯಾಗಿ ಜೀವನದಲ್ಲಿ ಸುಖ ಮತ್ತು ಸಮೃದ್ಧಿ ನೆಲೆಸುತ್ತದೆ. ಭಕ್ತಿಯಿಂದ ಹನುಮಂತನನ್ನು ಸ್ಮರಿಸುವವರ ಸಕಲ ದುಃಖಗಳನ್ನು ಆತನು ನಾಶಪಡಿಸುತ್ತಾನೆ ಎಂದು ಭಕ್ತರು ನಂಬುತ್ತಾರೆ.

ಮಂಗಳವಾರದ ಉಪವಾಸವನ್ನು ಆಚರಿಸುವಾಗ ಕೆಲವು ಕಟ್ಟುನಿಟ್ಟಾದ ನಿಯಮಗಳನ್ನು ಪಾಲಿಸುವುದು ಅತ್ಯಗತ್ಯ. ಮೊದಲನೆಯದಾಗಿ, ಈ ದಿನದ ಪೂಜೆಯಲ್ಲಿ ಶುದ್ಧತೆಗೆ ಹೆಚ್ಚಿನ ಆದ್ಯತೆ ನೀಡಬೇಕು ಮತ್ತು ಪ್ರಾರ್ಥನೆಯ ಸಮಯದಲ್ಲಿ ಮನಸ್ಸು ಇತ್ತ ಇತ್ತ ಅಲೆಯದಂತೆ ಏಕಾಗ್ರತೆಯನ್ನು ಕಾಯ್ದುಕೊಳ್ಳಬೇಕು. ಉಪವಾಸದ ಅವಧಿಯಲ್ಲಿ ಉಪ್ಪನ್ನು ಸೇವಿಸುವುದನ್ನು ಸಂಪೂರ್ಣವಾಗಿ ವರ್ಜಿಸಬೇಕು. ಅಲ್ಲದೆ, ನೀವು ಬೇರೆಯವರಿಗೆ ಸಿಹಿತಿಂಡಿಗಳನ್ನು ದಾನ ಮಾಡುತ್ತಿದ್ದರೆ, ಅದನ್ನು ಯಾವುದೇ ಕಾರಣಕ್ಕೂ ನೀವು ತಿನ್ನಬಾರದು. ಇದು ಉಪವಾಸದ ಪಾವಿತ್ರ್ಯತೆಯನ್ನು ಕಾಪಾಡುತ್ತದೆ.

ಇದನ್ನೂ ಓದಿ: ಮುಯ್ಯಿ ರೂಪದಲ್ಲಿ ಕೊಡುವ ಹಣಕ್ಕೆ 1ರೂ. ಸೇರಿಸಿ ಕೊಡಬೇಕು ಯಾಕೆ ಗೊತ್ತಾ?

ಕೊನೆಯದಾಗಿ, ಪೂಜೆಯ ಸಮಯದಲ್ಲಿ ಧರಿಸುವ ಬಟ್ಟೆಗಳ ಬಗ್ಗೆಯೂ ಜಾಗ್ರತೆ ಇರಲಿ. ಮಂಗಳವಾರದಂದು ಹನುಮಂತನ ಆರಾಧನೆ ಮಾಡುವಾಗ ಕಪ್ಪು ಅಥವಾ ಬಿಳಿ ಬಟ್ಟೆಗಳನ್ನು ಧರಿಸುವುದು ಸೂಕ್ತವಲ್ಲ; ಬದಲಾಗಿ ಹನುಮಂತನಿಗೆ ಪ್ರಿಯವಾದ ಕೆಂಪು ಬಣ್ಣದ ಬಟ್ಟೆಗಳನ್ನು ಧರಿಸುವುದು ಹೆಚ್ಚು ಫಲಪ್ರದ. ಉಪವಾಸದ ಅವಧಿಯಲ್ಲಿ ದಿನಕ್ಕೆ ಒಮ್ಮೆ ಮಾತ್ರ ಸಾತ್ತ್ವಿಕ ಆಹಾರವನ್ನು ಸೇವಿಸಬೇಕು. ಈ ಎಲ್ಲಾ ನಿಯಮಗಳನ್ನು ಶ್ರದ್ಧೆಯಿಂದ ಪಾಲಿಸುವುದರಿಂದ ಬಜರಂಗಬಲಿಯ ಪೂರ್ಣ ಅನುಗ್ರಹವನ್ನು ಪಡೆಯಲು ಸಾಧ್ಯವಾಗುತ್ತದೆ ಎಂದು ನಂಬಲಾಗಿದೆ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಇರಾನ್​ನ ಸರ್ವೋಚ್ಚ ನಾಯಕ ಮೊಜ್ತಬಾಗೆ ಪ್ರಜ್ಞೆ ಇಲ್ಲ, ಯಾವ ನಿರ್ಧಾರಗಳನ್ನು ತೆಗೆದುಕೊಳ್ಳುವ ಸ್ಥಿತಿಯಲ್ಲಿಲ್ಲ

ಟೆಹ್ರಾನ್, ಏಪ್ರಿಲ್ 07: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಉದ್ವಿಗ್ನತೆಯ ನಡುವೆ, ಇರಾನ್‌(Iran)ನ ಹೊಸ ಸರ್ವೋಚ್ಚ ನಾಯಕನ ಬಗ್ಗೆ ಮಾಹಿತಿಯೊಂದು ಹೊರಬಿದ್ದಿದೆ. ಮೊಜ್ತಬಾ ಖಮೇನಿಗೆ ಪ್ರಜ್ಞೆ ಇಲ್ಲ, ಯಾವ ನಿರ್ಧಾರಗಳನ್ನೂ ತೆಗೆದುಕೊಳ್ಳುವ ಸ್ಥಿತಿಯಲ್ಲಿಲ್ಲ ಎನ್ನುವ ಮಾಹಿತಿ ಲಭ್ಯವಾಗಿದೆ. ಅಮೆರಿಕ ಮತ್ತು ಇಸ್ರೇಲಿ ಗುಪ್ತಚರ ಮೂಲಗಳನ್ನು ಆಧರಿಸಿದ ವರದಿಗಳ ಪ್ರಕಾರ, ಮೊಜ್ತಬಾ ಖಮೇನಿ ಅವರು ಕೋಮ್ ನಗರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪ್ರಜ್ಞಾಹೀನರಾಗಿದ್ದಾರೆ. ಆದಾಗ್ಯೂ, ಅವರ ಸ್ಥಿತಿಯ ಬಗ್ಗೆ ಯಾವುದೇ ಅಧಿಕೃತ ಹೇಳಿಕೆ ಬಂದಿಲ್ಲ. ಯುದ್ಧದ ಮೊದಲ ದಿನದಂದು ಅವರ ತಂದೆ, ಅಲಿ ಖಮೇನಿ, ತಾಯಿ, ಹೆಂಡತಿ ಮತ್ತು ಮಗನನ್ನು ಕೊಂದ ಅದೇ ವೈಮಾನಿಕ ದಾಳಿಯಲ್ಲಿ ಮೊಜ್ತಬಾ ಗಾಯಗೊಂಡಿದ್ದಾರೆ ಎಂದು ವರದಿ ಹೇಳುತ್ತದೆ.

ಗುಪ್ತಚರ ಸಂಸ್ಥೆಗಳು ಕೋಮ್ ನಗರದಲ್ಲಿ ಕೆಲವು ಅನುಮಾನಾಸ್ಪದ ಚಟುವಟಿಕೆಗಳನ್ನು ಗಮನಿಸಿವೆ.ಕೋಮ್‌ನಲ್ಲಿ ಬೃಹತ್ ಸಮಾಧಿಯ ನಿರ್ಮಾಣ ಕಾರ್ಯ ನಡೆಯುತ್ತಿದೆ.ಮಾಜಿ ಸುಪ್ರೀಂ ನಾಯಕ ಅಲಿ ಖಮೇನಿ ಮತ್ತು ಇತರ ಕುಟುಂಬ ಸದಸ್ಯರನ್ನು ಅಲ್ಲಿ ಸಮಾಧಿ ಮಾಡಲು ಸಿದ್ಧತೆಗಳು ನಡೆಯುತ್ತಿರಬಹುದು ಎಂದು ಶಂಕಿಸಲಾಗಿದೆ.

ಸಾರ್ವಜನಿಕ ಅಂತ್ಯಕ್ರಿಯೆಯ ಸಮಯದಲ್ಲಿ ನಾಗರಿಕರು ಪ್ರತಿಭಟಿಸಬಹುದು ಅಥವಾ ಸಮಾಧಿಗಳಿಗೆ ಹಾನಿ ಮಾಡಬಹುದು ಎಂದು ಇರಾನಿನ ಅಧಿಕಾರಿಗಳು ಭಯಪಡುತ್ತಾರೆ, ಆದ್ದರಿಂದ ಇದನ್ನು ಅತ್ಯಂತ ಗೌಪ್ಯವಾಗಿಡಲಾಗುತ್ತಿದೆ.ಮಾರ್ಚ್ ಆರಂಭದಲ್ಲಿ ಇರಾನ್‌ನ ಸರ್ವೋಚ್ಚ ನಾಯಕನಾಗಿ ಆಯ್ಕೆಯಾದಾಗಿನಿಂದ ಮೊಜ್ತಾಬಾ ಖಮೇನಿ ಸಾರ್ವಜನಿಕವಾಗಿ ಕಾಣಿಸಿಕೊಂಡಿಲ್ಲ , ಇದು ಅವರ ಆರೋಗ್ಯದ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಮತ್ತಷ್ಟು ಓದಿ: ಅಮೆರಿಕದ ಕದನವಿರಾಮದ ಪ್ರಸ್ತಾಪಕ್ಕೆ ಒಪ್ಪದ ಇರಾನ್ ಹಾಕಿದ ಷರತ್ತುಗಳಿವು

ಇತ್ತೀಚೆಗೆ ಅವರು ಯುದ್ಧ ಕೋಣೆಯಲ್ಲಿ ಇಸ್ರೇಲ್‌ನ ನಕ್ಷೆಯನ್ನು ನೋಡುತ್ತಿರುವುದನ್ನು ತೋರಿಸುವ ವೀಡಿಯೊ ಬಿಡುಗಡೆಯಾಯಿತು. ಆದರೆ ತಜ್ಞರು ಇದನ್ನು ಎಐ ವಿಡಿಯೋ ಎಂದು ಕರೆದಿದ್ದಾರೆ. ಇರಾನ್‌ನಲ್ಲೂ ಉದ್ವಿಗ್ನತೆ ಹೆಚ್ಚುತ್ತಿರುವಂತೆ ಕಾಣುತ್ತಿದೆ.

ಕೆಲವು ವಿರೋಧ ಗುಂಪುಗಳು ಮತ್ತು ಭದ್ರತಾ ಪಡೆಗಳ ನಡುವೆ ಘರ್ಷಣೆಗಳು ಭುಗಿಲೆದ್ದಿವೆ.ಇದು ದೇಶದೊಳಗೆ ಅಸ್ಥಿರತೆಯನ್ನು ಇನ್ನಷ್ಟು ಹೆಚ್ಚಿಸುವ ಸಾಧ್ಯತೆಯಿದೆ. ನಡೆಯುತ್ತಿರುವ ಸಂಘರ್ಷದ ಮಧ್ಯೆ ಇರಾನ್‌ನ ಉನ್ನತ ನಾಯಕತ್ವದ ಸುತ್ತಲಿನ ಪ್ರಶ್ನೆಗಳು ದೇಶದ ಆಂತರಿಕ ರಾಜಕೀಯದ ಮೇಲೆ ಮಾತ್ರವಲ್ಲದೆ ಇಡೀ ಮಧ್ಯಪ್ರಾಚ್ಯದ ಸ್ಥಿರತೆಯ ಮೇಲೂ ಪರಿಣಾಮ ಬೀರಬಹುದು.

 

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

Anthills Pooja: ಹುತ್ತಗಳಿಗೆ ಪೂಜೆ ಮಾಡುವ ಮುನ್ನ ಈ ವಿಷ್ಯ ತಿಳಿದುಕೊಳ್ಳಿ

ಹಿಂದೂ ಸನಾತನ ಸಂಸ್ಕೃತಿಯ ಒಂದು ವಿಶಿಷ್ಟ ಆಚರಣೆಯಾದ ಹುತ್ತದ ಪೂಜೆಯ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ. ಹಿಂದೂ ಪರಂಪರೆಯಲ್ಲಿ ಕಲ್ಲು, ಮಣ್ಣು, ವಿಗ್ರಹ, ಮರ, ಗಿಡ, ನೀರು ಎಲ್ಲವನ್ನೂ ಪವಿತ್ರ ಭಾವನೆಯಿಂದ ಭಗವಂತನ ಸ್ವರೂಪವೆಂದು ಆರಾಧಿಸಲಾಗುತ್ತದೆ. ಈ ಆಚರಣೆಗಳಲ್ಲಿ ಹುತ್ತಕ್ಕೆ ಪೂಜೆ ಮಾಡುವುದು, ನಮಸ್ಕಾರ ಮಾಡುವುದು, ಹಾಲು ಎರೆದು ನೈವೇದ್ಯ ಅರ್ಪಿಸುವುದು ಅನಾದಿ ಕಾಲದಿಂದಲೂ ನಡೆದುಕೊಂಡು ಬಂದಿರುವ ಪದ್ಧತಿಯಾಗಿದೆ. ನಮ್ಮ ಶೋಡಶೋಪ ಸಂಸ್ಕಾರಗಳಲ್ಲಿ ಹುತ್ತಕ್ಕೆ ಹೆಚ್ಚಿನ ಪ್ರಾಶಸ್ತ್ಯ ನೀಡಲಾಗುತ್ತದೆ.

ಯಾವ ಹುತ್ತ ಶ್ರೇಷ್ಠ ಮತ್ತು ಯಾವ ಹುತ್ತಕ್ಕೆ ಪೂಜೆ ಮಾಡುವುದರಿಂದ ಹೆಚ್ಚು ಫಲ ದೊರೆಯುತ್ತದೆ ಎಂಬ ಪ್ರಶ್ನೆಗೆ, ಶಾಸ್ತ್ರಗಳಲ್ಲಿ ವಿವರಣೆ ನೀಡಲಾಗಿದೆ. ಹುತ್ತಗಳಲ್ಲಿ ಎರಡು ವಿಧಗಳಿವೆ: ದೊಡ್ಡ ಕಿಂಡಿಗಳನ್ನು, ಅಂದರೆ ಅಗಲವಾದ ತೂತುಗಳನ್ನು ಹೊಂದಿರುವ ಹುತ್ತಗಳನ್ನು ಹೆಣ್ಣು ಹುತ್ತವೆಂದು ಕರೆಯಲಾಗುತ್ತದೆ. ಗೋಪುರದ ಆಕಾರದಲ್ಲಿ ನಿರಂತರವಾಗಿ ಬೆಳೆಯುವ ಹುತ್ತಗಳನ್ನು ಗಂಡು ಹುತ್ತವೆಂದು ಪರಿಗಣಿಸಲಾಗುತ್ತದೆ. ವಾಲ್ಮೀಕಿ ಮಹರ್ಷಿಗಳು ಹುತ್ತದಲ್ಲಿ ಅನೇಕ ವರ್ಷಗಳ ಕಾಲ ತಪಸ್ಸು ಮಾಡಿದ್ದರಿಂದಲೇ ಅವರಿಗೆ ವಾಲ್ಮೀಕಿ ಎಂಬ ಹೆಸರು ಬಂತು ಎಂಬ ನಂಬಿಕೆಯಿದೆ.

ಹುತ್ತದ ಪೂಜೆಯು ಅನೇಕ ಸಂಕಲ್ಪಗಳು ಮತ್ತು ದೋಷಗಳ ನಿವಾರಣೆಗಾಗಿ ಆಚರಿಸಲಾಗುತ್ತದೆ. ನಾಗದೋಷ, ಸಂತಾನ ಪ್ರಾಪ್ತಿ, ಕಣ್ಣಿನ ತೊಂದರೆಗಳು, ಚರ್ಮದ ಸಮಸ್ಯೆಗಳು, ಕುಜದೋಷ ನಿವಾರಣೆ, ಹಾಗೂ ಸುಖ, ಶಾಂತಿ, ನೆಮ್ಮದಿಗಾಗಿ ಹುತ್ತಗಳಿಗೆ ಪೂಜೆ ಸಲ್ಲಿಸಲಾಗುತ್ತದೆ. ನಮ್ಮ ಪೂರ್ವಿಕರು ಹುತ್ತಗಳನ್ನು ಶಕ್ತಿ ಕೇಂದ್ರಗಳು ಎಂದು ಗುರುತಿಸಿದ್ದಾರೆ. ಕಲಶದಲ್ಲಿ ಸರ್ವದೇವತೆಗಳನ್ನು ಆವಾಹನೆ ಮಾಡುವಂತೆ, ಹುತ್ತಗಳಲ್ಲಿ ಶಕ್ತಿ, ದೇವಿಯ ಕೃಪೆ, ಅಮ್ಮನ ಆವಾಹನೆ ಮತ್ತು ತ್ರಿಶಕ್ತಿಗಳ ಸಂಗಮವಿರುತ್ತದೆ ಎಂಬ ದೃಢ ನಂಬಿಕೆಯಿದೆ. ನಾಗದೋಷ ಅಥವಾ ರಾಹು ಗ್ರಹಗಳ ದೋಷವಿದ್ದರೆ, ಈ ಹುತ್ತ ಪೂಜೆಯನ್ನು ಶ್ರದ್ಧೆ, ಭಕ್ತಿ ಮತ್ತು ಭಯದಿಂದ ಆಚರಿಸಬೇಕು.

ಇದನ್ನೂ ಓದಿ: ಮುಯ್ಯಿ ರೂಪದಲ್ಲಿ ಕೊಡುವ ಹಣಕ್ಕೆ 1ರೂ. ಸೇರಿಸಿ ಕೊಡಬೇಕು ಯಾಕೆ ಗೊತ್ತಾ?

ಸಾಮಾನ್ಯವಾಗಿ ಹುತ್ತ ಪೂಜೆಯನ್ನು ನಾಗರ ಪಂಚಮಿ, ಷಷ್ಠಿ, ಸುಬ್ರಹ್ಮಣ್ಯ ಷಷ್ಠಿ, ಮಂಗಳವಾರ, ಶುಕ್ರವಾರ ಮತ್ತು ಸಂಕಷ್ಟಹರ ಚತುರ್ಥಿಗಳಂದು ಮಾಡಲಾಗುತ್ತದೆ. ಇರುವೆಗಳು ನಿರ್ಮಿಸುವ ಸಣ್ಣ ಹುತ್ತಗಳ ಜೊತೆಗೆ, ಗೆದ್ದಲು ಹುತ್ತಗಳೂ ಇರುತ್ತವೆ. ಆದರೆ, ಕೆಲವು ನಿರ್ದಿಷ್ಟ ಸ್ಥಳಗಳಲ್ಲಿನ ಹುತ್ತಗಳು ಅತಿ ಹೆಚ್ಚು ಪವಿತ್ರ ಮತ್ತು ಫಲಪ್ರದ ಎಂದು ಪರಿಗಣಿಸಲಾಗುತ್ತದೆ. ಅರಳಿ ಮರದ ಹತ್ತಿರ ಇರುವ ಹುತ್ತಗಳು ಅತ್ಯಂತ ಪವಿತ್ರವಾದವು. ದೇವಾಲಯಗಳ ಸಮೀಪ, ನವಗ್ರಹಗಳ ಪಕ್ಕ, ಮತ್ತು ನಾಗರ ಕಲ್ಲುಗಳ ಪಕ್ಕದಲ್ಲಿರುವ ಹುತ್ತಗಳು ಶ್ರೇಷ್ಠವೆಂದು ಭಾವಿಸಲಾಗುತ್ತದೆ. ಈ ಸ್ಥಳಗಳಲ್ಲಿ ಸುಬ್ರಹ್ಮಣ್ಯ ಮತ್ತು ಆದಿಶಕ್ತಿಯ ಆವಾಸವಿರುತ್ತದೆ ಎಂಬ ನಂಬಿಕೆಯಿದೆ.

ಕೃಷಿಕರ ನಂಬಿಕೆಯ ಪ್ರಕಾರ, ಹುತ್ತಗಳಿರುವ ಹೊಲಗಳಲ್ಲಿ ನೀರಿನ ಮೂಲ ಇರುತ್ತದೆ. ಹುತ್ತಗಳ ಬಳಿ ಮಹರ್ಷಿಗಳು, ಸಪ್ತ ಚಿರಂಜೀವಿಗಳಾದ ಹನುಮಂತ, ಸಪ್ತ ಋಷಿಗಳು ಸೂಕ್ಷ್ಮ ರೂಪದಲ್ಲಿ ನೆಲೆಸಿರುತ್ತಾರೆ ಎಂಬ ಮಾತಿದೆ. ಹಾಗಾಗಿ, ಭೂಮಿಯ ಮಟ್ಟದಲ್ಲಿರುವ ಮತ್ತು ದೇವಾಲಯಗಳಂತಹ ಪವಿತ್ರ ಕ್ಷೇತ್ರಗಳಲ್ಲಿರುವ ಹುತ್ತಗಳಿಗೆ ಪೂಜೆ ಸಲ್ಲಿಸುವುದರಿಂದ ಹೆಚ್ಚಿನ ಫಲ ದೊರೆಯುತ್ತದೆ. ಬೇರೆಡೆ ಹುತ್ತ ಪೂಜೆ ಮಾಡುವುದರಿಂದ ಫಲ ದೊರೆಯುವುದಿಲ್ಲ ಎಂದಲ್ಲ, ಆದರೆ ಸಮಯ ತೆಗೆದುಕೊಳ್ಳಬಹುದು. ಈ ನಿರ್ದಿಷ್ಟ ಸ್ಥಳಗಳು ಹೆಚ್ಚಿನ ಶಕ್ತಿ ಹೊಂದಿದ ಸ್ಥಳಗಳಾಗಿವೆ ಎಂದು ಗುರೂಜಿ ಸಲಹೆ ನೀಡಿದ್ದಾರೆ.

 

ಡಾ.ಬಸವರಾಜ್ ಗುರೂಜಿ, ವೈದಿಕ ಜ್ಯೋತಿಷಿ (9972848937)

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಪರಮಾಣು ಕ್ಷೇತ್ರದಲ್ಲಿ ಭಾರತದ ನಿರ್ಣಾಯಕ ಹೆಜ್ಜೆ, ದೇಶಕ್ಕೆ ಇದು ಹೆಮ್ಮೆಯ ಕ್ಷಣ: ಪ್ರಧಾನಿ ಮೋದಿ

ನವದೆಹಲಿ, ಏಪ್ರಿಲ್ 07: ಇಂದು ಭಾರತವು ಪರಮಾಣು ಕ್ಷೇತ್ರದಲ್ಲಿ ನಿರ್ಣಾಯಕ ಹೆಜ್ಜೆಯನ್ನು ಇಟ್ಟಿದೆ. ತನ್ನ ಪರಮಾಣು ಕಾರ್ಯಕ್ರಮದ ಎರಡನೇ ಹಂತವನ್ನು ಪೂರೈಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ(Narendra Modi) ಹೇಳಿದ್ದಾರೆ. ಕಲ್ಪಾಕಂನಲ್ಲಿರುವ ಭಾರತದ 500 ಮೆಗಾವ್ಯಾಟ್ ಮಾದರಿ ಫಾಸ್ಟ್ ಬ್ರೀಡರ್ ರಿಯಾಕ್ಟರ್ (ಪಿಎಫ್‌ಬಿಆರ್) ಕಾರ್ಯಾರಂಭ ಮಾಡಿದೆ. ಇದು ದೇಶದ ನಾಗರಿಕ ಪರಮಾಣು ಕಾರ್ಯಕ್ರಮದ ಎರಡನೇ ಹಂತವನ್ನು ಮುನ್ನಡೆಸುವಲ್ಲಿ ನಿರ್ಣಾಯಕ ಹೆಜ್ಜೆ ಎಂದು ಕರೆದಿದ್ದಾರೆ.

ಇಂದು ಎಕ್ಸ್​​ನಲ್ಲಿ ಪೋಸ್ಟ್ ಮಾಡಿರುವ ಅವರು, ಕಲ್ಪಾಕಂನಲ್ಲಿರುವ ಸ್ಥಳೀಯವಾಗಿ ವಿನ್ಯಾಸಗೊಳಿಸಲಾದ ಮತ್ತು ನಿರ್ಮಿಸಲಾದ ಮೂಲಮಾದರಿ ಫಾಸ್ಟ್ ಬ್ರೀಡರ್ ರಿಯಾಕ್ಟರ್ ನಿರ್ಣಾಯಕ ಹಂತವನ್ನು ತಲುಪಿದೆ ಎಂದು ಬರೆದಿದ್ದಾರೆ. ಈ ಮುಂದುವರಿದ ರಿಯಾಕ್ಟರ್, ತಾನು ಬಳಸುವುದಕ್ಕಿಂತ ಹೆಚ್ಚಿನ ಇಂಧನವನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ, ಇದು ನಮ್ಮ ವೈಜ್ಞಾನಿಕ ಸಾಮರ್ಥ್ಯದ ಆಳ ಮತ್ತು ನಮ್ಮ ಎಂಜಿನಿಯರಿಂಗ್ ಉದ್ಯಮದ ಬಲವನ್ನು ಪ್ರತಿಬಿಂಬಿಸುತ್ತದೆ ಎಂದರು.

ಪ್ರೋಗ್ರಾಂನ   ಮೂರನೇ ಹಂತದಲ್ಲಿ ನಮ್ಮ ವಿಶಾಲವಾದ ಥೋರಿಯಂ ನಿಕ್ಷೇಪಗಳನ್ನು ಬಳಸಿಕೊಳ್ಳುವ ಕಡೆಗೆ ಇದು ನಿರ್ಣಾಯಕ ಹೆಜ್ಜೆಯಾಗಿದೆ. ಭಾರತಕ್ಕೆ ಹೆಮ್ಮೆಯ ಕ್ಷಣ. ನಮ್ಮ ಅಭಿನಂದನೆಗಳು ಎಂದು ಪ್ರಧಾನಿ ಮೋದಿ ಬರೆದಿದ್ದಾರೆ.
ಕಲ್ಪಾಕಂನಲ್ಲಿರುವ ಮೂಲಮಾದರಿ ಫಾಸ್ಟ್ ಬ್ರೀಡರ್ ರಿಯಾಕ್ಟರ್ ಕೇವಲ ಒಂದು ವೈಜ್ಞಾನಿಕ ಮೈಲಿಗಲ್ಲು ಅಲ್ಲ. ಇದು ಕೇವಲ 2 ನೇ ಹಂತ. ಹಂತ 3ರಲ್ಲಿ ನಮ್ಮ ಥೋರಿಯಂ ನಿಕ್ಷೇಪಗಳನ್ನು ಅನ್ಲಾಕ್ ಮಾಡುತ್ತದೆ, ಇದು ವಿಶ್ವದಲ್ಲೇ ಅತಿ ದೊಡ್ಡದು.

ಮತ್ತಷ್ಟು ಓದಿ: ಕಾಂಗ್ರೆಸ್​​ಗೆ ಕುಟುಂಬ ಮೊದಲು, ನಮಗೆ ದೇಶ ಮೊದಲು; ಅಸ್ಸಾಂನಲ್ಲಿ ಪ್ರಧಾನಿ ಮೋದಿ ವಾಗ್ದಾಳಿ

ಈ ರಿಯಾಕ್ಟರ್ ಯುರೇನಿಯಂ ಬಳಸಿ ವಿದ್ಯುತ್ ಉತ್ಪಾದಿಸುತ್ತದೆ ಮತ್ತು ಪ್ಲುಟೋನಿಯಂ ಅನ್ನು ಸಹ ಉತ್ಪಾದಿಸುತ್ತದೆ. ಈ ಪ್ಲುಟೋನಿಯಂ ಅನ್ನು ಭವಿಷ್ಯದಲ್ಲಿ ಥೋರಿಯಂ ಅನ್ನು ಇಂಧನವಾಗಿ ಪರಿವರ್ತಿಸಲು ಬಳಸಲಾಗುತ್ತದೆ. ನಾವು ಮೂರನೇ ಹಂತವನ್ನು (ಥೋರಿಯಂ ಆಧಾರಿತ ರಿಯಾಕ್ಟರ್) ತಲುಪಿದ ನಂತರ, ಭಾರತವು ಮುಂದಿನ 250-300 ವರ್ಷಗಳವರೆಗೆ ಬೇರೆ ಯಾವುದೇ ದೇಶದಿಂದ ವಿದ್ಯುತ್‌ಗಾಗಿ ಯಾರನ್ನೂ ಕೇಳುವ ಅಗತ್ಯವಿರುವುದಿಲ್ಲ.

PFBR ನಿರ್ಮಾಣ ಕಾರ್ಯವು 2004 ರಲ್ಲಿ ಪ್ರಾರಂಭವಾಯಿತು. ಯೋಜನೆಯು ಹಲವು ವಿಳಂಬಗಳನ್ನು ಕಂಡಿದೆ, ಆರಂಭಿಕ ವೆಚ್ಚದ ಅಂದಾಜು 5,677 ಕೋಟಿ ರೂ.ಗಳು, ಇದು ಸುಮಾರು 7,600 ಕೋಟಿ ರೂ.ಗಳಿಗೆ ಏರಿದೆ. ಪರಮಾಣು ಶಕ್ತಿ ನಿಯಂತ್ರಣ ಮಂಡಳಿ (AERB) ಜುಲೈ 2024 ರಲ್ಲಿ ಮೊದಲ ಇಂಧನ ಲೋಡಿಂಗ್‌ಗೆ ಅನುಮೋದನೆ ನೀಡಿತು. ಅಧಿಕೃತ ಹೇಳಿಕೆಗಳ ಪ್ರಕಾರ, ಕೋರ್ ಲೋಡಿಂಗ್ ಚಟುವಟಿಕೆಗಳು ಮಾರ್ಚ್ 2024 ರಲ್ಲಿ ಪ್ರಾರಂಭವಾದವು.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

Source link

ಹೆಲ್ಮೆಟ್ ಧರಿಸಿ ಬಂದು ಗ್ಯಾಸ್ ಸಿಲಿಂಡರ್ ಎಗರಿಸಿದ ಚಾಲಾಕಿ ಕಳ್ಳ; ಸಿಸಿಟಿವಿ ವಿಡಿಯೋ ಇಲ್ಲಿದೆ ನೋಡಿ

ಬೆಂಗಳೂರು, ಏಪ್ರಿಲ್ 7: ಬೆಂಗಳೂರಿನ ಕಾಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ ಬೆಳಗಿನ ಜಾವ ವಿಚಿತ್ರ ಕಳವು ಪ್ರಕರಣ ನಡೆದಿದೆ. ಹೆಲ್ಮೆಟ್ ಧರಿಸಿ ಬೈಕ್‌ನಲ್ಲಿ ಬಂದ ಕಳ್ಳನೊಬ್ಬ, ರಸ್ತೆಯಲ್ಲಿನ ಮನೆಗಳ ಗೇಟ್ ಪರಿಶೀಲಿಸಿ, ಲಾಕ್ ಇಲ್ಲದ ಮನೆಯೊಳಗೆ ನುಗ್ಗಿ ಅಡುಗೆ ಅನಿಲ ಸಿಲಿಂಡರ್ ಕದ್ದು ಪರಾರಿಯಾಗಿದ್ದಾನೆ. ಮುಂಜಾನೆ 3 ಗಂಟೆ ಸುಮಾರಿಗೆ ನಡೆದ ಈ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಕಾಡುಗೋಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಸ್ಟಾರ್​ ನಾಯಕಿಯನ್ನು ತಬ್ಬಿ ಮುತ್ತಿಟ್ಟ ಅಭಿಮಾನಿ; ವಿಡಿಯೋ ವೈರಲ್

ಸೆಲೆಬ್ರಿಟಿಗಳು ಸಾರ್ವಜನಿಕವಾಗಿ ಕಾಣಿಸಿಕೊಂಡಾಗ ಅಭಿಮಾನಿಗಳು ಹೇಗೆ ನಡೆದುಕೊಳ್ಳುತ್ತಾರೆ ಎಂದು ಹೇಳಲು ಸಾಧ್ಯವಿಲ್ಲ. ಕೆಲವರು ಸೆಲ್ಫಿ ತೆಗೆದುಕೊಳ್ಳುತ್ತಾರೆ, ಇನ್ನೂ ಕೆಲವರು ತಬ್ಬಿ ಮುತ್ತು ಕೊಡಲು ಬರುತ್ತಾರೆ. ಈಗ ನಟಿಯೊಬ್ಬರಿಗೆ ಹಾಗೆಯೇ ಆಗಿದೆ. ಈ ಸಂದರ್ಭದ ವಿಡಿಯೋ ವೈರಲ್ ಆಗಿದ್ದು, ಇದಕ್ಕೆ ಅಭಿಮಾನಿಗಳು ನಾನಾ ರೀತಿಯಲ್ಲಿ ಕಮೆಂಟ್ ಮಾಡುವುದನ್ನು ನೀವು ಕಾಣಬಹುದು.

ಮಲಯಾಳಂನ ಪಾಲಕ್ಕಾಡ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಮಲಯಾಳಂನ ಸ್ಟಾರ್ ನಾಯಕಿ ಮಂಜು ವಾರಿಯರ್ ಅವರಿಗೆ ಮಹಿಳಾ ಅಭಿಮಾನಿಯೊಬ್ಬರು ಬಲವಂತವಾಗಿ ಮುತ್ತಿಟ್ಟರು. ಇದು ನಡೆದಾಗ ನಾಯಕಿ ಮತ್ತು ಅಲ್ಲಿದ್ದ ಎಲ್ಲರೂ ಆಘಾತಕ್ಕೊಳಗಾದರು. ಈ ಕಾರ್ಯಕ್ರಮದ ನಿರೂಪಕಿಯೂ ಅಭಿಮಾನಿಯನ್ನು ತಡೆಯಲು ಪ್ರಯತ್ನಿಸಿದರು. ನಮ್ಮ ಬಳಿಗೆ ಬಂದಿರುವ ಚಲನಚಿತ್ರ ಸೆಲೆಬ್ರಿಟಿಗಳೊಂದಿಗೆ ಈ ರೀತಿ ವರ್ತಿಸುವುದು ಸರಿಯಲ್ಲ ಎಂದು ಅವರು ಎಚ್ಚರಿಸಿದರು.

ಇದನ್ನೂ ಓದಿ: ‘ಅಡ್ಡಾದಿಡ್ಡಿ ಓಡಿಸಿದರೆ ಸಹಿಸಿಕೊಳ್ಳಿ’; ದುಬಾರಿ BMW ಬೈಕ್ ಖರೀದಿಸಿ ವಿಶೇಷ ಮನವಿ ಮಾಡಿದ ನಟಿ ಮಂಜು ವಾರಿಯರ್

ನನಗೆ ಮಂಜು ಅಕ್ಕ ತುಂಬಾ ಇಷ್ಟ.. ಅದಕ್ಕಾಗಿಯೇ ನಾನು ಅವಳಿಗೆ ಮುತ್ತಿಟ್ಟೆ’ ಎಂದು ಅಭಿಮಾನಿ ಉತ್ತರಿಸಿದರು. ಇಷ್ಟೆಲ್ಲಾ ನಡೆದರೂ, ಮಂಜು ವಾರಿಯರ್ ಕೋಪಗೊಳ್ಳಲಿಲ್ಲ. ಇದು ಸಂಭವಿಸಿದ ನಂತರವೂ, ಅವರು ತುಂಬಾ ತಾಳ್ಮೆ ಮತ್ತು ಸಹಿಷ್ಣುತೆಯಿಂದ ನಡೆದುಕೊಂಡರು. ಇತರ ಅಭಿಮಾನಿಗಳೊಂದಿಗೆ ಚಾಟ್ ಮಾಡುತ್ತಿದ್ದರು ಮತ್ತು ಫೋಟೋಗಳು ಮತ್ತು ಸೆಲ್ಫಿಗಳನ್ನು ತೆಗೆದುಕೊಳ್ಳುತ್ತಿದ್ದರು. ಪ್ರಸ್ತುತ, ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

ಮಂಜು ವಾರಿಯರ್ ವಿಷಯಕ್ಕೆ ಬಂದರೆ ಅವರು ದಕ್ಷಿಣದ ಬಹುಮುಖ ಪ್ರತಿಭೆಗಳಲ್ಲಿ ಒಬ್ಬರು. ಮಂಜು ಕೇವಲ ನಟಿ ಮಾತ್ರವಲ್ಲ. ಅವರು ಡ್ಯಾನ್ಸರ್, ಬರಹಗಾರ್ತಿ, ನಿರ್ಮಾಪಕಿ ಮತ್ತು ಸಾಮಾಜಿಕ ಕಾರ್ಯಕರ್ತೆ ಕೂಡ! ಅವರು ಮಲಯಾಳಂ ಚಿತ್ರರಂಗದಲ್ಲಿ ಸ್ಟಾರ್ ನಟಿ. ರಾಷ್ಟ್ರೀಯ ಪ್ರಶಸ್ತಿಯನ್ನು ಗೆದ್ದ ಮಂಜು, ಮಂಜು ಸಲ್ಲಪಂ ಎಂಬ ಪುಸ್ತಕವನ್ನು ಬರೆಯುವ ಮೂಲಕ ತಾನು ಬರಹಗಾರ್ತಿಯೂ ಹೌದು ಎಂದು ಸಾಬೀತುಪಡಿಸಿದ್ದಾರೆ. ಪ್ರಸ್ತುತ, ಅವರ ಕೈಯಲ್ಲಿ ಹಲವಾರು ಚಿತ್ರಗಳು ಇವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

 

Source link

ಎಚ್ಚರ! ಸಿರಿಗೆರೆ ಸ್ವಾಮೀಜಿ ಹೆಸರಿನಲ್ಲಿ ವೈರಲ್ ಆಗುತ್ತಿದೆ ನಕಲಿ ಸಂದೇಶ!

ದಾವಣಗೆರೆ, ಏಪ್ರಿಲ್ 07: ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ (Byelection) ಏಪ್ರಿಲ್ 9ರಂದು ನಡೆಯಲಿರುವ ಹಿನ್ನೆಲೆಯಲ್ಲಿ ರಾಜಕೀಯ ಚಟುವಟಿಕೆಗಳು ಚುರುಕುಗೊಂಡಿವೆ. ಪ್ರಮುಖ ಪಕ್ಷಗಳು ಮತದಾರರನ್ನು ಸೆಳೆಯಲು ವಿವಿಧ ರೀತಿಯ ಪ್ರಚಾರ ಕೈಗೊಂಡಿರುವ ನಡುವೆ, ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಸಂದೇಶಗಳ ಹಾವಳಿ ಕೂಡ ಹೆಚ್ಚಾಗಿದೆ. ಚುನಾವಣೆ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬರಿಗೆ ಓಟ್​ ಹಾಕಿ ಎಂದು ಸಿರಿಗೆರೆ ಸ್ವಾಮೀಜಿ ಹೆಸರಲ್ಲಿನ ಸಂದೇಶ ವೈರಲ್ ಆಗಿದ್ದು, ಸಾಕಷ್ಟು ಚರ್ಚೆ ಹುಟ್ಟಿಹಾಕಿತ್ತು. ಇದಕ್ಕೀಗ ಸ್ಪಷ್ಟನೆ ಸಿಕ್ಕಿದೆ.

ಸ್ಪಷ್ಟನೆ ನೀಡಿದ ಆಡಳಿತ ಮಂಡಳಿ

ಸಿರಿಗೆರೆ ತರಳುಬಾಳು ಗುರುಪೀಠದ ಡಾ. ಶಿವಮೂರ್ತಿ ಶಿವಾಚಾರ್ಯ ಶ್ರೀ ಅವರ ಹೆಸರಿನಲ್ಲಿ ನಕಲಿ ಸಂದೇಶವೊಂದು ವೈರಲ್ ಆಗಿದ್ದು, ನಿರ್ದಿಷ್ಟ ಅಭ್ಯರ್ಥಿಗೆ ಮತ ನೀಡುವಂತೆ ಕರೆ ನೀಡಲಾಗಿದೆ ಎಂಬುದು ಬೆಳಕಿಗೆ ಬಂದಿದೆ. ಸ್ವಾಮೀಜಿಯಿಂದಲೇ ಸಾಮಾಜಿಕ ಜಾಲತಾಣದಲ್ಲಿ ಈ ರೀತಿಯ ಪ್ರಚಾರ ನಡೆಯುತ್ತಿದೆಯೇನೋ ಎಂದು ಹಲವರು ಭಾವಿಸಿದ್ದರು. ಆದರೆ ಇದಕ್ಕೆ ಮಠದ ಆಡಳಿತ ಮಂಡಳಿ ಸ್ಪಷ್ಟನೆ ನೀಡಿದ್ದು, ಶ್ರೀಗಳ ಹೆಸರಿನಲ್ಲಿ ನಕಲಿ ಸಂದೇಶ ರವಾನಿಸಲಾಗುತ್ತಿದೆ ಎಂದಿದೆ. ಈ ಸಂದೇಶವು ಸ್ವಾಮೀಜಿಯವರ ನಿಲುವನ್ನು ತಪ್ಪಾಗಿ ಪ್ರತಿಬಿಂಬಿಸುವುದಾಗಿ ಮಠದ ಆಡಳಿತ ಮಂಡಳಿ ಹೇಳಿದೆ.

ಇದನ್ನೂ ಓದಿ ಬೈ ಎಲೆಕ್ಷನ್ ಅಖಾಡದಲ್ಲಿಂದು ಸಿಎಂ ಮತಬೇಟೆ! ದಾವಣಗೆರೆ, ಬಾಗಲಕೋಟೆಯಲ್ಲಿ ಪ್ರಚಾರ

ಜಿಲ್ಲಾಧಿಕಾರಿಗೆ ದೂರು

ಈ ಕುರಿತು ಮಠದ ಕಾರ್ಯದರ್ಶಿ ಜಿಲ್ಲಾಧಿಕಾರಿಗಳಿಗೆ ಲಿಖಿತ ದೂರು ಸಲ್ಲಿಸಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಮಾಹಿತಿಯನ್ನು ಹರಡುವವರ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ. ಇಂತಹ ನಕಲಿ ಸಂದೇಶಗಳು ಮತದಾರರನ್ನು ತಪ್ಪು ದಾರಿಗೆಳೆಯುವ ಸಾಧ್ಯತೆ ಇರುವುದರಿಂದ ಅಧಿಕಾರಿಗಳು ಕಟ್ಟುನಿಟ್ಟಿನ ನಿಗಾ ವಹಿಸುವ ಅಗತ್ಯವಿದೆ ಎಂದು ತಿಳಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

120 ಅಡಿ ಎತ್ತರದ ಹಾಲುಗಂಬ ಏರಿ ಸಾಹಸ ಮೆರೆದ 62ರ ವ್ಯಕ್ತಿ! ವಿಡಿಯೋ ನೋಡಿ

ಕೊಪ್ಪಳ, ಏಪ್ರಿಲ್ 7: ಕುಷ್ಟಗಿ ತಾಲೂಕಿನ ಕಬ್ಬರಗಿಯಲ್ಲಿ ನಡೆದ ಶ್ರೀ ಮಾಸ್ತೆಮ್ಮ ದೇವಿ ಜಾತ್ರೆಯಲ್ಲಿ 62 ವರ್ಷದ ವ್ಯಕ್ತಿಯೊಬ್ಬರು ಅಸಾಮಾನ್ಯ ಸಾಹಸ ಮೆರೆದಿದ್ದಾರೆ. ಮನ್ನೇರಾಳ ಗ್ರಾಮದ ಶರಣಪ್ಪ ಗೊಲ್ಲರ ಎಂಬುವವರು ಎಣ್ಣೆ ಸವರಿ ಜಾರುತ್ತಿದ್ದ 120 ಅಡಿ ಎತ್ತರದ ಹಾಲುಗಂಭವನ್ನು ಲೀಲಾಜಾಲವಾಗಿ ಏರಿ ನೆರೆದಿದ್ದ ಸಾವಿರಾರು ಭಕ್ತರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಮೂರು ವರ್ಷಕ್ಕೊಮ್ಮೆ ನಡೆಯುವ ಈ ಜಾತ್ರೆಯಲ್ಲಿ ಯಾದವ ಸಮಾಜದವರು ತಂಡೋಪತಂಡವಾಗಿ ಭಾಗವಹಿಸುತ್ತಾರೆ. ಕಂಬದ ಮೇಲೆ ಕೊಬ್ಬರಿ ಉತ್ತತ್ತಿ ಕಟ್ಟಿರಲಾಗುತ್ತದೆ. ಕಂಬದ ಮೇಲಿಂದ ಎಣ್ಣೆ ಬಿಡುತ್ತಿದ್ದರೂ ಲೆಕ್ಕಿಸದೆ, ಶರಣಪ್ಪ ಅವರು ತೋರಿದ ದೈಹಿಕ ಕ್ಷಮತೆ ಮತ್ತು ಭಕ್ತಿಗೆ ಜನ ಶಹಬ್ಬಾಸ್ ಎಂದಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Exit mobile version