Headlines

ಶಿವಮೊಗ್ಗದಲ್ಲಿ ವಿಶಿಷ್ಟ ಮಾವಿನ ಖಾದ್ಯಗಳ ಸ್ಪರ್ಧೆ: ಕೈಚಳಕ ತೋರಿಸಿದ ಮಹಿಳೆಯರು; ಇಲ್ಲಿವೆ ಫೋಟೋಸ್​ – Kannada News

ಮನೆಯಿಂದಲೇ ಸಿದ್ಧಪಡಿಸಿಕೊಂಡು ತಂದಿದ್ದ ಮಾವಿನ ಲಡ್ಡು, ಮ್ಯಾಂಗೋ ಮೂಸ್, ಚೀಸ್ ಕೇಕ್ ಹಾಗೂ ಶಾಯಿ ಟುಕ್ರಾ ಅಂತಹ ಹೊಸ ಬಗೆಯ ಖಾದ್ಯಗಳು ಕಂಡುಬಂದವು. ಮ್ಯಾಂಗೋ ಹೋಳಿಗೆ ಮತ್ತು ಗೋಲ್ಡೆನ್ ಪುಡ್ಡಿಂಗ್‌ಗಳಂತಹ ತರಹೇವಾರಿ ಸಿಹಿ ಪದಾರ್ಥಗಳು ಆಹಾರ ಪ್ರಿಯರ ಬಾಯಿರುಚಿಯನ್ನು ಹೆಚ್ಚಿಸಿದವು. Source link

Read More

Video: ನಿನಗೆ ಬಿಸ್ಕೆಟ್ ಬೇಕಾ, ಇರು ತಂದು ಕೊಡ್ತೇನೆ: ಶ್ವಾನದ ಜತೆಗೆ ಪುಟಾಣಿಯ ಕ್ಯೂಟ್‌ ಸಂಭಾಷಣೆ – Kannada News

ಶ್ವಾನಗಳ (Dogs) ನಿಷ್ಕಲ್ಮಶ ಪ್ರೀತಿ, ನಿಷ್ಠೆಗೆ ಸರಿಸಾಟಿಯೇ ಇಲ್ಲ. ಮನೆಯ ಸದಸ್ಯರಂತೆ ಇರುವ ಈ ಶ್ವಾನಗಳು ಮಕ್ಕಳ ಜತೆಗೆ ಮಕ್ಕಳಾಗುತ್ತವೆ. ಪುಟಾಣಿಗಳ ಪಾಲಿಗೆ ಈ ಶ್ವಾನಗಳು ಬಾಡಿ ಗಾರ್ಡ್ ನಂತೆ ಇರುತ್ತವೆ. ಇದೀಗ ಪುಟಾಣಿಯೊಂದು ಶ್ವಾನದ ಜತೆಗೆ ಸಂಭಾಷಣೆಗೆ ಇಳಿದಿದ್ದಾಳೆ. ಶ್ವಾನದ ಬಳಿ ನೀನು ಏನನ್ನೂ ತಿನ್ನಲು ಬಯಸುತ್ತೀಯಾ ಎಂದು ಪ್ರಶ್ನಿಸಿದ್ದಾಳೆ. ಈ ಕ್ಯೂಟ್ ವಿಡಿಯೋ ಆನ್ಲೈನ್ ನಲ್ಲಿ ನೆಟ್ಟಿಗರ ಹೃದಯ ಗೆದ್ದಿದೆ. @kuhu_coo_bird ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದೆ. ಈ ಕ್ಲಿಪ್ ಗೆ…

Read More

ಪೋಷಕರೇ… ನಿಮ್ಮ ಮಕ್ಕಳಿಗೆ ಹೋಮ್‌ವರ್ಕ್‌ ಮಾಡಿಸಲು ಈ ಟ್ರಿಕ್ಸ್‌ ಯೂಸ್‌ ಮಾಡಿ – Kannada News

ಸ್ಕೂಲ್‌ ಹೋಮ್‌ವರ್ಕ್‌ (homework) ಮಕ್ಕಳ  ಶಿಕ್ಷಣದ ಒಂದು ಪ್ರಮುಖ ಅಂಶವಾಗಿದೆ. ಇದು ಮಕ್ಕಳು ತರಗತಿಯಲ್ಲಿ ಕಲಿತದ್ದನ್ನು ನೆನಪಿಟ್ಟುಕೊಳ್ಳಲು, ಪ್ರಮುಖ ಶೈಕ್ಷಣಿಕ ಕೌಶಲ್ಯಗಳನ್ನು ಅಭಿವೃದ್ಧಿಪಡಿಸಲು ಮತ್ತು ಜವಾಬ್ದಾರಿ ಮತ್ತು ಸಮಯ ನಿರ್ವಹಣೆಯನ್ನು ಕಲಿಯಲು ಸಹಾಯ ಮಾಡುತ್ತದೆ. ಆದರೆ ಪೋಷಕರಿಗೆ ಮಾತ್ರ ತಮ್ಮ ಮಕ್ಕಳ ಕೈಯಲ್ಲಿ ಹೋಮ್‌ ವರ್ಕ್‌ ಮಾಡಿಸುವುದು ಸವಾಲಿನ ಸಂಗತಿ. ಹೌದು ಮಕ್ಕಳಂತೂ ಹೋಮ್‌ವರ್ಕ್‌ ಮಾಡಲು ನನ್ನಿಂದ ಸಾಧ್ಯವೇ ಇಲ್ಲ ಅಂತ ಹಠ ಹಿಡಿಯುತ್ತಾರೆ. ಇಂತಹ ಪರಿಸ್ಥಿತಿಯಲ್ಲಿ ಮಕ್ಕಳಿಗೆ ಹೊಡೆಯುವ ಅಥವಾ ಗದರಿಸುವ ಬದಲು ಈ ಕೆಲವು…

Read More

ಕೊನೆಗೂ ಕೇರಳ ಪ್ರವೇಶಿಸಿದ ಮುಂಗಾರು: ಇನ್ನೆರಡು ದಿನಗಳಲ್ಲಿ ಕರಾವಳಿಗೆ ಮಾನ್ಸೂನ್ ಆಗಮನ, ದಕ್ಷಿಣ ಕನ್ನಡ ಜಿಲ್ಲಾಡಳಿತ ಹೈ ಅಲರ್ಟ್ – Kannada News

ಮಂಗಳೂರು, ಜೂನ್ 4: ಕೊನೆಗೂ ಮುಂಗಾರು (Monsoon) ಮಾರುತಗಳು ಕೇರಳ ಪ್ರವೇಶಿಸಿರುವುದಾಗಿ ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ. ಇದರ ಬೆನ್ನಲ್ಲೇ ಇನ್ನೆರಡು ದಿನಗಳಲ್ಲಿ ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಗೂ ಮುಂಗಾರು ಮಳೆ ಆಗಮನವಾಗುವ ನಿರೀಕ್ಷೆ ಇದೆ. ಮಳೆಗಾಲದ ಆರಂಭದ ಬೆನ್ನಲ್ಲೇ ಕರಾವಳಿಯಲ್ಲಿ ಸಂಭವಿಸಬಹುದಾದ ನೆರೆ, ಪ್ರವಾಹ ಹಾಗೂ ಭೂಕುಸಿತದಂತಹ ಪ್ರಾಕೃತಿಕ ವಿಕೋಪಗಳನ್ನು ಸಮರ್ಥವಾಗಿ ಎದುರಿಸಲು ದಕ್ಷಿಣ ಕನ್ನಡ ಜಿಲ್ಲಾಡಳಿತ ಸಂಪೂರ್ಣವಾಗಿ ಸಜ್ಜಾಗಿದೆ. ಮುಖ್ಯಾಂಶಗಳು ತುರ್ತು ಸಂದರ್ಭಗಳಿಗಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 24*7 ಕಾರ್ಯನಿರ್ವಹಿಸುವ ಕಂಟ್ರೋಲ್…

Read More

ಕಲಿಯುಗದ ‘ಶ್ರವಣ ಕುಮಾರ’; 90 ವರ್ಷದ ಅತ್ತೆಯನ್ನು ತಲೆ ಮೇಲೆ ಹೊತ್ತು 260 ಕಿ.ಮೀ ಪಾದಯಾತ್ರೆ ಮಾಡಿದ ಗಾಯಕಿ! – Kannada News

ಮಥುರಾ, ಜೂನ್ 4: ಇಂದಿನ ಆಧುನಿಕ ಯುಗದಲ್ಲಿ ಅತ್ತೆ-ಸೊಸೆಯರ ಸಂಬಂಧದ ಬಗ್ಗೆ ನೆಗೆಟಿವ್ ಸುದ್ದಿಗಳೇ ಹೆಚ್ಚಾಗಿ ಕೇಳಿಬರುವಾಗ ಹರಿಯಾಣದ ಪ್ರಸಿದ್ಧ ಜಾನಪದ ಗಾಯಕಿ ಕಾಜಲ್ ಚೌಧರಿ (Kajal Chaudhary) ಅವರು ಇಡೀ ಸಮಾಜಕ್ಕೇ ಮಾದರಿಯಾಗುವಂತಹ ಕೆಲಸ ಮಾಡಿ ಎಲ್ಲರ ಮನ ಗೆದ್ದಿದ್ದಾರೆ. ನಡೆಯಲು ಸಾಧ್ಯವಾಗದ ತಮ್ಮ 90 ವರ್ಷದ ಅತ್ತೆಯನ್ನು ವಿಶೇಷವಾಗಿ ಸಿದ್ಧಪಡಿಸಿದ ಪ್ಲಾಸ್ಟಿಕ್ ಬುಟ್ಟಿಯಲ್ಲಿ ಕೂರಿಸಿಕೊಂಡು, ಆ ಬುಟ್ಟಿಯನ್ನು ತಮ್ಮ ತಲೆಯ ಮೇಲೆ ಹೊತ್ತುಕೊಂಡು ಬರೋಬ್ಬರಿ 260 ಕಿಲೋಮೀಟರ್ ದೂರದ ಪವಿತ್ರ ‘ಬ್ರಜ್ ಪರಿಕ್ರಮ’ (Brij…

Read More

ಖ್ಯಾತ ನಿರ್ಮಾಪಕ, ಸಿಬಿಎಫ್‌ಸಿ ಮಾಜಿ ಅಧ್ಯಕ್ಷ ಪಹ್ಲಾಜ್ ನಿಹಲಾನಿ ನಿಧನ – Kannada News

ಬಾಲಿವುಡ್‌ನ ಪ್ರಸಿದ್ಧ ಚಲನಚಿತ್ರ ನಿರ್ಮಾಪಕ ಮತ್ತು ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯ (CBFC) ಮಾಜಿ ಅಧ್ಯಕ್ಷ ಪಹ್ಲಾಜ್ ನಿಹಲಾನಿ (76) ಅವರು ನಿಧನರಾಗಿದ್ದಾರೆ. ಕಳೆದ ಕೆಲವು ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಯಕೃತ್ತಿಗೆ ಸಂಬಂಧಿಸಿದ ಸಮಸ್ಯೆಯಿಂದಾಗಿ ಕೊನೆಯುಸಿರೆಳೆದಿದ್ದಾರೆ ಎಂದು ವರದಿಯಾಗಿದೆ. ಹಿಂದಿ ಚಿತ್ರರಂಗದಲ್ಲಿ ದಶಕಗಳ ಕಾಲ ಸಕ್ರಿಯರಾಗಿದ್ದ ಪಹ್ಲಾಜ್ ನಿಹಲಾನಿ (Pahlaj Nihalani) ಅವರು ಪತ್ನಿ ನೀತಾ ಹಾಗೂ ವಿಶಾಲ್, ದೀಪೇಶ್, ಚಿರಾಗ್ ಎಂಬ ಮೂವರು ಪುತ್ರರನ್ನು ಅಗಲಿದ್ದಾರೆ. ಹಿಂದಿ ಚಿತ್ರರಂಗದ ಪ್ರಮುಖ ನಿರ್ಮಾಪಕರಲ್ಲಿ ಒಬ್ಬರಾಗಿದ್ದ ನಿಹಲಾನಿ…

Read More

Peddi Movie review: ‘ಪೆದ್ದಿ’: ರಾಮ್ ಚರಣ್ ಸಿಕ್ಸರ್, ನಿರ್ದೇಶಕ ರನೌಟ್ – Kannada News

ಬೆಟ್ಟಗುಡ್ಡಗಳ ಬುಡದಲ್ಲಿರುವ ಒಂದು ಹೆಸರೇ ಇಲ್ಲದ ಊರು, ಆ ಊರಿನ ಜನರಿಗೆ ‘ಕೂಲಿ’ ಎಂದು ಬಿಟ್ಟರೆ ಬೇರೆ ಗುರುತು ಇಲ್ಲ. ಆ ಊರಿಗೆ ಆ ಊರಿನ ಜನ ಬಿಟ್ಟರೆ ಬೇರೆ ಯಾರೂ ಬರುವುದೂ ಇಲ್ಲ, ಬರಲು ಸೌಕರ್ಯವೂ ಇಲ್ಲ. ಊರಿನ ಬದಿಯಲ್ಲೇ ಒಂದು ರೈಲು ಹಳಿ ಹಾದಿ ಹೋಗಿದೆ, ಆದರೆ ಒಮ್ಮೆಯೂ ಆ ರೈಲು ನಿಲ್ಲುವುದಿಲ್ಲ. ಯಾವ ಸೌಕರ್ಯವೂ ಇಲ್ಲದ ಊರಿನ ಜನರಿಗೆ ಶಿಕ್ಷಣ, ಆರೋಗ್ಯ ಎಂಬುದು ಕನಸಷ್ಟೆ. ಆ ಊರಿನ ಯುವಕ ‘ಪೆದ್ದಿ’ ಬೆಟ್ಟ, ಗುಡ್ಡ…

Read More

‘ಪೆದ್ದಿ’ ರಿಲೀಸ್, ಮಗನ ಸಿನಿಮಾ ಬಗ್ಗೆ ಚಿರಂಜೀವಿಗೆ ಅದೆಷ್ಟು ಕಾಳಜಿ – Kannada News

ರಾಮ್ ಚರಣ್ (Ram Charan) ನಟನೆಯ ‘ಪೆದ್ದಿ’ ಸಿನಿಮಾ ಇಂದು (ಜೂನ್ 4) ಬಿಡುಗಡೆ ಆಗಿದೆ. ಸಿನಿಮಾದ ಬಗ್ಗೆ ಸ್ವತಃ ರಾಮ್ ಚರಣ್ ಅವರಿಗೆ ಭಾರಿ ನಿರೀಕ್ಷೆಗಳಿವೆ. ‘ಆರ್​​ಆರ್​​ಆರ್’ ಬಳಿಕ ರಾಮ್ ಚರಣ್ ನಟಿಸಿರುವ ಎರಡು ಸಿನಿಮಾಗಳು ಒಂದರ ಹಿಂದೊಂದರಂತೆ ಸೋತಿವೆ. ಹಾಗಾಗಿ ‘ಪೆದ್ದಿ’ ಮೂಲಕ ಗೆಲ್ಲಲೇ ಬೇಕಾದ ಅನಿವಾರ್ಯತೆ ರಾಮ್ ಚರಣ್​​ಗೆ ಇದೆ. ಇದೇ ಕಾರಣಕ್ಕೆ ರಾಮ್ ಚರಣ್ ತಂದೆ ಮೆಗಾಸ್ಟಾರ್ ಚಿರಂಜೀವಿ ಸಹ ‘ಪೆದ್ದಿ’ ಸಿನಿಮಾ ಬಗ್ಗೆ ಸಾಕಷ್ಟು ನಿರೀಕ್ಷೆ, ಕುತೂಹಲಗಳನ್ನು ಇರಿಸಿಕೊಂಡಿದ್ದಾರೆ. ಸಿನಿಮಾದ…

Read More

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ನ್ಯೂಸ್: ಬೆಂಗಳೂರಿಗೆ ಬಂದೇ ಬಿಡ್ತು ಮೊದಲ ‘ಬ್ಲೂ ಲೈನ್’ ರೈಲು – Kannada News

ಬೆಂಗಳೂರು, ಜೂನ್​ 04: ಬ್ಲೂ ಲೈನ್ (Blue Line Metro) ಬೆಂಗಳೂರಿಗರ ಬಹುನಿರೀಕ್ಷಿತ ನಮ್ಮ ಮೆಟ್ರೋ ಮಾರ್ಗ. ಈ ವರ್ಷ ಡಿಸೆಂಬರ್​ನಲ್ಲಿ ಓಪನ್ ಮಾಡಲು ಬಿಎಂಆರ್​ಸಿಎಲ್​ ಸಿದ್ಧತೆ ಮಾಡಿಕೊಳ್ಳುತ್ತಿದೆ. ಈ ಬೆನ್ನಲ್ಲೇ ಕೆಂಪೇಗೌಡ ಏರ್​ಪೋರ್ಟ್ (Kempegowda International Airport)​​ ಮಾರ್ಗಕ್ಕೆ ಮೊದಲ ರೈಲು ಬಂದಿದೆ. ಇಂದು ಬೆಳಿಗ್ಗೆ ಬೈಯಪ್ಪನಹಳ್ಳಿ ಡಿಪೋಗೆ ಟ್ರೈನ್ ಸೆಟ್​ ತಲುಪಿದೆ. ಆ ಮೂಲಕ ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್ ನೀಡಿದೆ. ಮುಖ್ಯಾಂಶಗಳು ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ನ್ಯೂಸ್​ ಬ್ಲೂ ಲೈನ್ ಮೆಟ್ರೋ…

Read More

ಕಾರುಗಳ ಮಧ್ಯೆ ಮುಖಾಮುಖಿ ಡಿಕ್ಕಿ: ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವು – Kannada News

ತುಮಕೂರು, ಜೂನ್​ 04: ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಗ್ರಾಮದ ಬಳಿ ನಡೆದಿದೆ. ಮೃತಪಟ್ಟವರು ಆಂಧ್ರಪ್ರದೇಶ ಮೂಲದವರು ಎನ್ನಲಾಗುತ್ತಿದೆ. ಇನ್ನು ಮೂವರಿಗೆ ಗಂಭೀರ ಗಾಯಗಳಾಗಿದ್ದು, ತುಮಕೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಹುಳಿಯಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮತ್ತಷ್ಟು ಮಾಹಿತಿ ಅಪ್​ಡೇಟ್​ ಆಗಲಿದೆ. Source link

Read More